Tag: cancer

  • ಸಾವಿನ ದವಡೆಯಿಂದ ಕ್ಯಾನ್ಸರ್ ರೋಗಿ ಪಾರು – 3 ಕೆ.ಜಿ ಗಡ್ಡೆಯನ್ನ ಹೊರ ತೆಗೆದ ವೈದ್ಯರು

    ಸಾವಿನ ದವಡೆಯಿಂದ ಕ್ಯಾನ್ಸರ್ ರೋಗಿ ಪಾರು – 3 ಕೆ.ಜಿ ಗಡ್ಡೆಯನ್ನ ಹೊರ ತೆಗೆದ ವೈದ್ಯರು

    ರಾಯಚೂರು: ಸುಮಾರು ತಿಂಗಳುಗಳಿಂದ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ವೃದ್ಧೆಯ ಹೊಟ್ಟೆಯಿಂದ ಮೂರು ಕೆ.ಜಿ. ತೂಕದ ಕ್ಯಾನ್ಸರ್ ಗಡ್ಡೆಯನ್ನ ರಾಯಚೂರಿನ ವೈದ್ಯರು ಯಶಸ್ವಿಯಾಗಿ ಹೊರತೆಗೆದು ಶಸ್ತ್ರಚಿಕಿತ್ಸೆ ಮಾಡಿದ್ದಾರೆ. ಅಪರೂಪದ ಶಸ್ತ್ರಚಿಕಿತ್ಸೆ ಇದಾಗಿದ್ದು ರಾಯಚೂರಿನಲ್ಲಿ ಮೊದಲ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ.

    ಜಿಲ್ಲೆಯ ಸಿಂಧನೂರು ತಾಲೂಕಿನ ಬಳಗಾನೂರು ಗ್ರಾಮದ 60 ವರ್ಷದ ವೃದ್ಧೆ ಬೇಗಂ ಬೀ ಸುಮಾರು 8 ತಿಂಗಳುಗಳಿಂದ ಹೊಟ್ಟೆ ನೋವಿನಿಂದ ನರಳುತ್ತಿದ್ದರು. ಹೊಟ್ಟೆಯಲ್ಲಿದ್ದ ಗಡ್ಡೆಯ ಗಾತ್ರ ನೋಡಿ ಸುಮಾರು ಆಸ್ಪತ್ರೆಯ ವೈದ್ಯರು ಶಸ್ತ್ರಚಿಕಿತ್ಸೆ ಮಾಡಿರಲಿಲ್ಲ. ಹುಬ್ಬಳ್ಳಿ, ಬಾಗಲಕೋಟೆ ಸೇರಿ ವಿವಿಧೆಡೆ ತೋರಿಸಿದರು ಪ್ರಯೋಜನವಾಗಿರಲಿಲ್ಲ. ಕುಟುಂಬದವರಿಗೆ ಬೇಗಂ ಬೀಯನ್ನು ಉಳಿಸಿಕೊಳ್ಳುವ ಭರವಸೆಯೇ ಹೊರಟುಹೋಗಿತ್ತು. ವೈದ್ಯರು ಸಹ ಕೈ ಚೆಲ್ಲಿದ್ದರು. ಆದರೆ ಈಗ ರಾಯಚೂರಿನ ಭಂಡಾರಿ ಆಸ್ಪತ್ರೆ ವೈದ್ಯರು ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಮಾಡಿ ಹೊಟ್ಟೆಯಲ್ಲಿದ್ದ ಮೂರು ಕೆ.ಜಿ ತೂಕದ ಕ್ಯಾನ್ಸರ್ ಗಡ್ಡೆಯನ್ನು ಹೊರಗೆ ತೆಗೆದಿದ್ದಾರೆ.

    ಇದಕ್ಕಿಂತಲೂ ದೊಡ್ಡ ಗಾತ್ರದ ಗಡ್ಡೆಗಳನ್ನು ಗರ್ಭಕೋಶ ಸೇರಿ ದೇಹದ ಇತರ ಭಾಗದಿಂದ ಯಶಸ್ವಿಯಾಗಿ ಹೊರ ತೆಗೆದ ಉದಾಹರಣೆಗಳಿವೆ. ಆದರೆ ಜಠರ, ಸಣ್ಣಕರಳು ಸೇರಿದಂತೆ ದೇಹದ ಬಹು ಅಂಗಗಳ ರಕ್ತನಾಳಗಳಿಗೆ ತೊಂದರೆಯಾಗದಂತೆ ದೊಡ್ಡದಾಗಿ ಬೆಳೆದ ಗಡ್ಡೆಯನ್ನು ಶಸ್ತ್ರಚಿಕಿತ್ಸೆ ಮೂಲಕ ಹೊರತೆಗೆಯುವುದೇ ವೈದ್ಯರಿಗೆ ದೊಡ್ಡ ಸವಾಲಾಗಿತ್ತು. ತಜ್ಞ ವೈದ್ಯ ಡಾ.ರಮೇಶ್ ಸಿ ಸಾಗರ್ ನೇತೃತ್ವದ ತಂಡ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಮಾಡಿದೆ.

    ಶಸ್ತ್ರಚಿಕಿತ್ಸೆ ಮಾಡದಿದ್ದರೆ ಕೆಲವೇ ದಿನಗಳಲ್ಲಿ ಪ್ರಾಣಾಪಾಯ ಎದುರಿಸಬೇಕಿದ್ದ ವೃದ್ಧೆ ಈಗ ಗುಣಮುಖಳಾಗುತ್ತಿದ್ದಾರೆ. ರಾಯಚೂರಿನಲ್ಲಿ ಈ ಮೊದಲು ಕ್ಯಾನ್ಸರ್ ಶಸ್ತ್ರಚಿಕಿತ್ಸೆ ಸೌಲಭ್ಯ ಇರಲಿಲ್ಲ. ಬೆಂಗಳೂರು, ಹೈದ್ರಾಬಾದ್‍ಗೆ ಹೋಗಬೇಕಿದ್ದ ರೋಗಿಗಳಿಗೆ ಈಗ ಜಿಲ್ಲೆಯಲ್ಲೇ ಚಿಕಿತ್ಸೆ ಸಿಗುವಂತಾಗಿದೆ.

  • ಪೌರ ಕಾರ್ಮಿಕರಿಗಾಗಿ ಕ್ಯಾನ್ಸರ್ ಜಾಗೃತಿ ವಾಕಥಾನ್

    ಪೌರ ಕಾರ್ಮಿಕರಿಗಾಗಿ ಕ್ಯಾನ್ಸರ್ ಜಾಗೃತಿ ವಾಕಥಾನ್

    ಬೆಂಗಳೂರು: ಸ್ವಚ್ಛ, ಸ್ವಾಸ್ತ್ಯ, ಸುಂದರ ಬೆಂಗಳೂರು ನಿರ್ಮಾಣಕ್ಕಾಗಿ ಟೊಂಕಕಟ್ಟಿ ಶ್ರಮಿಸುತ್ತಿರುವ ನಮ್ಮ ಪೌರಕಾರ್ಮಿಕರಿಗಾಗಿ ಬಿಬಿಎಂಪಿ ಆವರಣದಿಂದ ವಾಕಥಾನ್ ಮೂಲಕ ಜಾಗೃತಿಯನ್ನು ಮೂಡಿಸಲಾಯಿತು. ಪೌರ ಕಾರ್ಮಿಕರು ಹಾಗೂ ಸಾರ್ವಜನಿಕರಲ್ಲಿ ಕ್ಯಾನ್ಸರ್ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲೇ ಈ ವಾಕಥಾನ್ ಆಯೋಜಿಸಲಾಗಿತ್ತು. ವಿಶೇಷವಾಗಿ ಪೌರ ಕಾರ್ಮಿಕರಿಗಾಗಿಯೇ ಕ್ಯಾನ್ಸರ್ ತಪಾಸಣಾ ಶಿಬಿರವನ್ನು ಸಹ ಆಯೋಜನೆ ಮಾಡಲಾಗಿತ್ತು.

    “ಸಂಕಲ್ಪ” ಚೇಸ್ ಕ್ಯಾನ್ಸರ್ ಫೌಂಡೇಶನ್ ಆ್ಯಂಡ್ ರೀಸರ್ಚ್ ಟ್ರಸ್ಟ್, ನವೋದಯನ್ಸ್ ನವೋದಯ ಹಳೆಯ ವಿದ್ಯಾರ್ಥಿಗಳ ಸಂಘದಿಂದ ಈ ಜಾಗೃತಿ ವಾಕಥಾನ್ ಅನ್ನು ಆಯೋಜನೆ ಮಾಡಲಾಗಿತ್ತು. ಕ್ಯಾನ್ಸರ್ ಬಗ್ಗೆ ಅರಿವು ಮೂಡಿಸಲು “ಕ್ಯಾನ್ ವಾಕ್” 2020ಕ್ಕೆ ಚಾಲನೆ ನೀಡಲು ಸಚಿವ ಡಾ. ಸುಧಾಕರ್ ಬಂದಿದ್ದರು. ಸಚಿವ ಡಾ. ಸುಧಾಕರ್ ಕೆ, ಬಿಗ್ ಬಾಸ್ 7 ನೇ ಆವೃತ್ತಿಯ ವಿನ್ನರ್ ಶೈನ್ ಶೆಟ್ಟಿ ಸೇರಿ ಹಲವರು ವಾಕಥಾನ್ ಅಲ್ಲಿ ಭಾಗವಹಿಸಿದ್ದು ವಿಷೇಶವಾಗಿತ್ತು.

    ನಂತರ ಮಾತನಾಡಿದ ಸಚಿವ ಡಾ. ಕೆ ಸುಧಾಕರ್ ಕ್ಯಾನ್ಸರ್ ಜೊತೆ ಹೋರಾಡಬೇಕು ಎಂದರೆ ಮೊದಲಿಗೆ ಅದರ ಬಗ್ಗೆ ಅರಿವಿರಬೇಕು. ಈ ರೀತಿಯ ಕಾರ್ಯಕ್ರಮಗಳು ಹೆಚ್ಚಾಗಬೇಕು. ಜನರಲ್ಲಿ ಕ್ಯಾನ್ಸರ್ ಬಗ್ಗೆ ಅರಿವು ಮೂಡಿಸಲು ಈ ರೀತಿಯ ಕಾರ್ಯಕ್ರಮದ ಅಗತ್ಯವಿದೆ. ಯುವ ಜನತೆ ಈ ರೀತಿಯ ಕಾರ್ಯಕ್ರಮ ಆಯೋಜನೆ ಮಾಡಿದ್ದು ಶ್ಲಾಘನೀಯ. ವೈದ್ಯಕೀಯ ಸಚಿವನಾಗಿ, ಸ್ವತಃ ವೈದ್ಯನಾಗಿ ನಾನು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು ಖುಷಿಯಾಗಿದೆ ಎಂದರು.

  • ಗ್ರಾಮೀಣ ಭಾಗದ ಕ್ಯಾನ್ಸರ್ ರೋಗಿಗಳಿಗೆ ಪಿಂಕ್ ವೆಹಿಕಲ್ ಬಿಡುಗಡೆಗೆ ಚಿಂತನೆ

    ಗ್ರಾಮೀಣ ಭಾಗದ ಕ್ಯಾನ್ಸರ್ ರೋಗಿಗಳಿಗೆ ಪಿಂಕ್ ವೆಹಿಕಲ್ ಬಿಡುಗಡೆಗೆ ಚಿಂತನೆ

    – ಬಜೆಟ್‍ನಲ್ಲಿ ಆರೋಗ್ಯ ಇಲಾಖೆಯಡಿ ಘೋಷಿಸುವ ಸಾಧ್ಯತೆ

    ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವರಾಗಿದ್ದ ಶ್ರೀರಾಮುಲು ಅವರ ಕನಸಿನ ಕೂಸು 108 ಆರೋಗ್ಯ ಕವಚ ವಾಹನ ಸೌಲಭ್ಯ ಜಾರಿಗೆ ತಂದಿದ್ದು ಈಗ ಇತಿಹಾಸ. 108 ವಾಹನ ಶ್ರೀರಾಮುಲುಗೆ ಜನಪ್ರಿಯತೆಯ ಜೊತೆಗೆ ಒಳ್ಳೆಯ ಹೆಸರನ್ನು ತಂದುಕೊಟ್ಟಿತ್ತು.

    ಈಗ ಅಂತಹದ್ದೇ ಜನಪ್ರಿಯತೆಯನ್ನು ನೀಡಬಲ್ಲ ಮತ್ತೊಂದು ವಾಹನವನ್ನು ಆರೋಗ್ಯ ಸಚಿವ ಶ್ರೀರಾಮುಲು ಈ ಸರ್ಕಾರದಲ್ಲಿ ಬಿಡಲು ಹೊರಟಿದ್ದಾರೆ. ‘ಪಿಂಕ್ ಬಸ್’ ಹೆಸರಿನ ಮೊಬೈಲ್ ವಾಹನವನ್ನು ಗ್ರಾಮೀಣ ಭಾಗದ ಜನರಿಗಾಗಿ ಆರೋಗ್ಯ ಇಲಾಖೆಯಡಿ ಈ ಬಾರಿಯ ಬಜೆಟ್‍ನಲ್ಲಿ ಘೋಷಿಸಲಾಗುತ್ತಿದೆ ಎನ್ನಲಾಗುತ್ತಿದೆ.

    2008 ರ ನವಂಬರ್ 01 ರಂದು ಜಾರಿಯಾದ ‘108 ಆರೋಗ್ಯ ಕವಚ’ ಸೇವೆಯು ರಾಜ್ಯದ ಗ್ರಾಮೀಣ ಮತ್ತು ನಗರ ಪ್ರದೇಶದ ಜನರಿಗೆ ಸಮಗ್ರ ತುರ್ತು ಚಿಕಿತ್ಸೆ ಸೇವೆಯನ್ನು ನೀಡುವ ಸಲುವಾಗಿ ಕಾರ್ಯನಿರ್ವಹಿಸುತ್ತಿದೆ. ಆದರೆ ಪಿಂಕ್ ಬಸ್ ವಿಶೇಷವಾಗಿ ಗ್ರಾಮೀಣ ಭಾಗದ ಕ್ಯಾನ್ಸರ್ ರೋಗಿಗಳಿಗಾಗಿ ಜಾರಿಗೊಳಿಸಲಾಗುತ್ತಿದೆ. ಈ ಪಿಂಕ್ ಸಂಚಾರಿ ಬಸ್ ಕ್ಯಾನ್ಸರ್ ತಪಾಸಣೆಯ ಪ್ರಯೋಗಾಲಯ ಹೊಂದಿರುತ್ತದೆ. ಸುಮಾರು 4-5 ಸಿಬ್ಬಂದಿ ಕೆಲಸ ನಿರ್ವಹಿಸಲಿದ್ದಾರೆ.

    ಮಹಿಳೆಯರಲ್ಲಿ ಇತ್ತೀಚೆಗೆ ಸಾಮಾನ್ಯವಾಗಿ ಕಾಣಸಿಗುತ್ತಿರುವ ಸ್ತನ ಮತ್ತು ಗರ್ಭಕೋಶ ಕ್ಯಾನ್ಸರ್ ಸೇರಿದಂತೆ ಎಲ್ಲಾ ರೀತಿಯ ಕ್ಯಾನ್ಸರ್ ಪರೀಕ್ಷೆ ಪಿಂಕ್ ಪ್ರಯೋಗಾಲಯದಲ್ಲಿ ನಡೆಯಲಿದೆ. ಮೆಮೋಗ್ರಫಿ ಪರೀಕ್ಷೆಗಳನ್ನು ಮಾಡಿಸಲು ದೂರದ ಗ್ರಾಮೀಣ ರೋಗಿಗಳು ಜಿಲ್ಲಾ ಕೇಂದ್ರ ಆಸ್ಪತ್ರೆಗಳಿಗೆ ಹೋಗುವುದು ಪಿಂಕ್ ವಾಹನದಿಂದ ತಪ್ಪಲಿದೆ. ಪಿಂಕ್ ವಾಹನದ ರೂಪುರೇಷೆ ಹೇಗಿರಲಿದೆ ಯೋಜನೆಗೆ ತಗಲುವ ವೆಚ್ಚ ಸೇರಿದಂತೆ ಇನ್ನಷ್ಟು ವಿವರಗಳು ಬಜೆಟ್‍ನಲ್ಲಿ ಹೊರಬೀಳಲಿದೆ.

  • ಕ್ಯಾನ್ಸರ್‌ಗೆ ಹೆದರಬೇಕಿಲ್ಲ, ಸೂಕ್ತ ಚಿಕಿತ್ಸೆಯಿದೆ: ಡಾ. ರಾಮಚಂದ್ರ

    ಕ್ಯಾನ್ಸರ್‌ಗೆ ಹೆದರಬೇಕಿಲ್ಲ, ಸೂಕ್ತ ಚಿಕಿತ್ಸೆಯಿದೆ: ಡಾ. ರಾಮಚಂದ್ರ

    – 40 ವರ್ಷ ಮೇಲ್ಪಟ್ಟ ಹೆಣ್ಮಕ್ಕಳು ವಾರ್ಷಿಕ ಚೆಕಪ್ ಮಾಡಿಸಬೇಕು

    ಬೆಂಗಳೂರು: ಕ್ಯಾನ್ಸರ್ ಎಂಬ ಮಹಾಮಾರಿ ಕಾಯಿಲೆಗೆ ಯಾರು ಹೆದರಬೇಕಿಲ್ಲ. ಅದಕ್ಕೆ ಸೂಕ್ತ ಚಿಕಿತ್ಸೆಯಿದೆ. ಕ್ಯಾನ್ಸರ್ ಅನ್ನೋದು ಒಂದು ಕಾಯಿಲೆ. ಅದರಿಂದ ಭಯಪಡುವ ಅಗತ್ಯವಿಲ್ಲ. ಕ್ಯಾನ್ಸರ್ ಖಾಯಿಲೆಯ ಸೊಂಕು ಬಗ್ಗೆ ತಿಳಿದ ಕೂಡಲೇ ತುರ್ತಾಗಿ ಚಿಕಿತ್ಸೆಗೆ ಬರಬೇಕು. ಆಗ ಮಾತ್ರ  ಕ್ಯಾನ್ಸರ್‌ಗೆ ಕಡಿವಾಣ ಹಾಕಬಹುದು ಎಂದು ಬೆಂಗಳೂರಿನ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆಯ ನಿರ್ದೇಶಕ ರಾಮಚಂದ್ರ ಹೇಳಿದ್ದಾರೆ.

    ವಿಶ್ವ ಕ್ಯಾನ್ಸರ್ ದಿನಾಚರಣೆ ಅಂಗವಾಗಿ ಮಾತನಾಡಿದ ಅವರು, ಪ್ರಸ್ತುತ ಕ್ಯಾನ್ಸರ್ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಗರ್ಭಕೋಶದ ಕಂಟಕದ ಕ್ಯಾನ್ಸರ್ ಕಡಿಮೆಯಾಗುತ್ತಿದೆ. ತಂಬಾಕು, ಪಾನ್ ಪರಾಗ್ ತಿನ್ನುವುದರಿಂದ ಕ್ಯಾನ್ಸರ್ ಹೆಚ್ಚಾಗುತ್ತಿದೆ. ಸರ್ಕಾರ ಇವುಗಳನ್ನ ನಿಷೇಧಿಸಿದ್ದರೂ ಜನ ಇವುಗಳ ಮೇಲೆಯೇ ಅವಲಂಬನೆಯಾಗಿದ್ದಾರೆ. ಕ್ಯಾನ್ಸರ್ ಸೊಂಕು ತಗುಲಿದಾಗ ಶೇ. 60ರಷ್ಟು ತಡೆಗಟ್ಟಬಹುದು ಎಂದು ತಿಳಿಸಿದರು.

    ನಮ್ಮ ಜನ ಕ್ಯಾನ್ಸರ್ ಬಗ್ಗೆ ಗೊತ್ತಿದ್ದರೂ ಬೇಗ ಚಿಕಿತ್ಸೆಗೆ ಬರುವುದಿಲ್ಲ. ಕೊನೆಯ ಹಂತದಲ್ಲಿದ್ದಾಗ ಮಾತ್ರ ಆಸ್ಪತ್ರೆಗಳಿಗೆ ಬರುತ್ತಾರೆ. ಆ ಸಮಯದಲ್ಲಿ ಪರಸ್ಥಿತಿ ಕೈ ಮೀರಿ ಹೋಗಿರುತ್ತೆ. ಹೀಗಾಗಿ ಕ್ಯಾನ್ಸರ್ ಬಗ್ಗೆ ಸಾಕಷ್ಟು ಜನರಲ್ಲಿ ಆತಂಕವಿದೆ ಎಂದರು.

    ಇಂದು ವಿಶ್ವ ಕ್ಯಾನ್ಸರ್ ದಿನಾಚರಣೆ ಹಿನ್ನೆಲೆಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಿಸಿಎಂ ಅಶ್ವತ್ ನಾರಾಯಣ್ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆಗೆ ಭೇಟಿ ನೀಡಿ ಸ್ವಚ್ಛತೆ ಹಾಗೂ ಕ್ಯಾನ್ಸರ್ ರೋಗಿಗಳ ಆರೋಗ್ಯವನ್ನು ವಿಚಾರಿಸಿದರು. ಆ ಬಳಿಕ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆಯ ನಿರ್ದೇಶಕ ರಾಮಚಂದ್ರ, 40 ವರ್ಷ ಮೇಲ್ಪಟ್ಟ ಹೆಣ್ಣು ಮಕ್ಕಳು, ವರ್ಷಕ್ಕೊಮ್ಮೆ ಮ್ಯಾಮೋಗ್ರಾಮ್, ಅನ್ಯೂವಲ್ ಚೆಕಪ್ ಮಾಡಿಸಬೇಕು. ಕ್ಯಾನ್ಸರ್ ಖಾಯಿಲೆಯ ಬಗ್ಗೆ ಹೆದರುವಂತ ಅವಶ್ಯಕತೆಯಿಲ್ಲ ಎಂದು ಕ್ಯಾನ್ಸರ್ ರೋಗಿಗಳಿಗೆ ಆತ್ಮಸ್ಥೈರ್ಯ ತುಂಬಿದರು.

  • ಕ್ಯಾನ್ಸರ್ ಪೀಡಿತ ಮಗುವಿನ ಚಿಕಿತ್ಸೆಗೆ ನೆರವು ಸಂಗ್ರಹಿಸಿದ ವಿಚಿತ್ರ ಜೀವಿ

    ಕ್ಯಾನ್ಸರ್ ಪೀಡಿತ ಮಗುವಿನ ಚಿಕಿತ್ಸೆಗೆ ನೆರವು ಸಂಗ್ರಹಿಸಿದ ವಿಚಿತ್ರ ಜೀವಿ

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನಡೆಯುತ್ತಿರುವ ಬ್ರಹ್ಮಕಲಶೋತ್ಸವದಲ್ಲಿ ಯುವಕನೊಬ್ಬ ವಿಶೇಷ ವೇಷ ಧರಿಸಿ ಅನಾರೋಗ್ಯ ಪೀಡಿತ 5 ವರ್ಷದ ಪುಟ್ಟ ಮಗುವಿನ ಚಿಕಿತ್ಸೆಗೆ ನೆರವಾಗುತ್ತಿದ್ದಾನೆ.

    5 ವರ್ಷದ ನಿಹಾರಿಕಾ ರಕ್ತ ಕ್ಯಾನ್ಸರ್ ನಿಂದ ಬಳಲುತ್ತಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಚಿಕಿತ್ಸೆ ವೆಚ್ಚಕ್ಕೆ 10 ಲಕ್ಷ ರೂಪಾಯಿ ಬೇಕಾಗುತ್ತದೆ. ಆದರೆ ನಿಹಾರಿಕಾಳ ತಂದೆ ತಾಯಿ ಬಡ ಕುಟುಂಬವರಾಗಿದ್ದು, ದಾನಿಗಳ ಸಹಾಯಕ್ಕೆ ಕೈ ಚಾಚಿದ್ದಾರೆ.

    ಹೀಗಾಗಿ ಕಟೀಲು ಬ್ರಹ್ಮಕಲಶದ ಪುಣ್ಯ ಸಂದರ್ಭದಲ್ಲಿ ನೇತಾಜಿ ಬ್ರಿಗೇಡ್ ಮೂಡಬಿದಿರೆ ಇಲ್ಲಿನ ತಂಡದ ಸದಸ್ಯರು ಸೇರಿ ಚಿಕಿತ್ಸೆಗೆ ಆರ್ಥಿಕ ಸಹಾಯ ಮಾಡಬೇಕು ಎನ್ನುವ ಉದ್ದೇಶದಿಂದ ತಂಡದ ಸದಸ್ಯ ವಿಕ್ಕಿ ಶೆಟ್ಟಿ ವಿಶೇಷ ವೇಷ ಹಾಕಿಸಿ ಹಣ ಸಂಗ್ರಹ ಮಾಡುತ್ತಿದ್ದಾರೆ. ಬ್ರಹ್ಮಕಲಶೋತ್ಸವಕ್ಕೆ ಬಂದ ಲಕ್ಷಾಂತರ ಭಕ್ತರಲ್ಲಿ ಹೆಚ್ಚಿನವರು ಹಣ ನೀಡಿ ಚಿಕಿತ್ಸೆಗೆ ನೆರವಾಗುತ್ತಿದ್ದಾರೆ.

  • ಪ್ರಿಯತಮೆಗೆ ಕ್ಯಾನ್ಸರ್- MA ಕನಸು ಬಿಟ್ಟು ದಿನ ಕೂಲಿ ಕೆಲಸಗಾರನಾದ

    ಪ್ರಿಯತಮೆಗೆ ಕ್ಯಾನ್ಸರ್- MA ಕನಸು ಬಿಟ್ಟು ದಿನ ಕೂಲಿ ಕೆಲಸಗಾರನಾದ

    – ನೀನು ಹೇಗೆ ಇದ್ರೂ ನಾನ್ ಪ್ರೀತಿಸ್ತೀನಿ
    – ಕಣ್ಣೀರು ತರಿಸೋ ನಿಜವಾದ ಪ್ರೇಮ ಕಥೆ

    ತಿರುವನಂತಪುರಂ: ಯುವಕನೊಬ್ಬ ತನ್ನ ಶಿಕ್ಷಣದ ಕನಸನ್ನೇ ಬಿಟ್ಟು ಕೂಲಿ ಕೆಲಸ ಮಾಡಿ, ಕ್ಯಾನ್ಸರ್ ನಿಂದ ಬಳಲುತ್ತಿದ್ದ  ಪ್ರಿಯತಮೆಯನ್ನು ಗುಣಪಡಿಸಿದ್ದಾನೆ.  ಇಂದು ಈ ಪ್ರೇಮಿಗಳು ಮದುವೆಯಾಗಿ ಸಂತಸದಿಂದ ಜೀವನ ನಡೆಸುತ್ತಿದ್ದಾರೆ.

    ಕೇರಳದ ಮಲಪ್ಪೂರಂನ ಸಚಿನ್ ಮತ್ತು ಭವ್ಯಾ ಪ್ರೇಮಿಗಳು ಕ್ಯಾನ್ಸರ್ ಗೆದ್ದು ಮದುವೆಯಾಗಿದ್ದಾರೆ. ಸಚಿನ್ ಮತ್ತು ಭವ್ಯಾ ಇಬ್ಬರಿಗೂ ಡಿಪ್ಲೋಮಾ ವ್ಯಾಸಂಗ ಮಾಡುತ್ತಿದ್ದಾಗ ಪರಿಚಯವಾಗಿತ್ತು. ಪರಿಚಯ ಸ್ನೇಹವಾಗಿ ಇಬ್ಬರು ಒಳ್ಳೆಯ ಫ್ರೆಂಡ್ಸ್ ಆಗಿದ್ದು, 8 ತಿಂಗಳವರೆಗೂ ಇವರ ಸ್ನೇಹ ಮುಂದುವರಿಯಿತು. ಆದರೆ ಇವರಿಬ್ಬರ ಸ್ನೇಹವನ್ನು ಭವ್ಯಾ ಪೋಷಕರು ಅಪಾರ್ಥ ಮಾಡಿಕೊಂಡಿದ್ದರು. ಅಲ್ಲದೆ ಇನ್ಮುಂದೆ ಸಚಿನ್ ಜೊತೆ ಮಾತಾಡಬಾರದೆಂದು ಎಚ್ಚರಿಕೆ ಕೂಡ ಕೊಟ್ಟಿದ್ದರು.

    ಪೋಷಕರ ಮಾತಿಗೆ ಬೆಲೆ ಕೊಟ್ಟ ಭವ್ಯಾ, ಸಚಿನ್ ಜೊತೆ ಮಾತಾಡುವುದನ್ನು ನಿಲ್ಲಿಸಿದ್ದಳು. ಈ ವೇಳೆ ಸಚಿನ್ ಮತ್ತು ಭವ್ಯಾ ಒಬ್ಬರಿಗೊಬ್ಬರು ಬಿಟ್ಟಿರಲಾರದೆ ಮತ್ತೆ ಮಾತನಾಡಲು ಶುರು ಮಾಡಿದರು. ಆಗ ಅವರಿಬ್ಬರಿಗೆ ತಾವಿಬ್ಬರೂ ಪರಸ್ಪರ ಪ್ರೀತಿಸುತ್ತಿರುವುದು ಅರಿವಾಗಿದೆ. ನಂತರ ಮನೆಯವರಿಗೆ ತಿಳಿಯದಂತೆ ಭೇಟಿಯಾಗುತ್ತಿದ್ದರು. ಶಿಕ್ಷಣ ಮುಗಿದ ಬಳಿಕ ಭವ್ಯಾ ಒಂದು ಸಂಸ್ಥೆಯಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದಳು. ಕೆಲವು ದಿನಗಳ ನಂತರ ಭವ್ಯಾಗೆ ಬೆನ್ನು ನೋವು ಕಾಣಿಸಿಕೊಂಡಿದೆ. ಮೊದಲು ಭವ್ಯಾ ಅದನ್ನು ಗಂಭೀರವಾಗಿ ಪರಿಗಣಿಸಿಲ್ಲ. ಆದರೆ ನೋವು ಹೆಚ್ಚಾದ ಕಾರಣ ಮಾರ್ಚ್ ತಿಂಗಳಲ್ಲಿ ಆಸ್ಪತ್ರೆಗೆ ಹೋಗಿ ಪರೀಕ್ಷೆ ಮಾಡಿಸಿದ್ದಾಳೆ. ಆಗ ಭವ್ಯಾಗೆ ಬೆನ್ನುಮೂಳೆಯಲ್ಲಿ ಕ್ಯಾನ್ಸರ್ ಇರುವುದು ಪತ್ತೆಯಾಗಿದೆ.

    ಈ ವಿಚಾರವನ್ನು ತಿಳಿದು ಭವ್ಯಾ ದುಃಖಿತಳಾಗಿದ್ದಳು. ಆಗ ಸಚಿನ್, ಭವ್ಯಾಳಿಗೆ ಧೈರ್ಯ ತುಂಬಿದ್ದಾನೆ. ನಿನ್ನ ಜೊತೆ ನಾನಿದ್ದೇನೆ. ಹಣ ಎಷ್ಟಾದರೂ ಖರ್ಚು ಆಗಲಿ. ನಿನ್ನನ್ನು ನಾನು ಉಳಿಸಿಕೊಳ್ಳುತ್ತೇನೆ, ಭಯಪಡಬೇಡ ಎಂದು ಭರವಸೆ ನೀಡಿದ್ದಾನೆ. ಕೊನೆಗೆ ಸಚಿನ್ ಭವ್ಯಾ ಮನೆಯವರಿಗೂ ತಿಳಿಯದಂತೆ ಆಕೆಯನ್ನು ಆಸ್ಪತ್ರೆಗೆ ಪ್ರತಿವಾರ ಕರೆದುಕೊಂಡು ಹೋಗಿ ಪರೀಕ್ಷೆ ಮಾಡಿ, ಪ್ರಾಥಮಿಕ ಚಿಕಿತ್ಸೆ ಕೊಡಿಸುತ್ತಿದ್ದನು. ಒಂದು ದಿನ ಈ ವಿಚಾರ ಮನೆಯವರಿಗೆ ತಿಳಿದಿದೆ. ಮಗಳಿ ಕ್ಯಾನ್ಸರ್ ಇರುವ ಬಗ್ಗೆ ತಿಳಿದು ಆಘಾತಗೊಂಡಿದ್ದರು. ಕೊನೆಗೆ ಸಚಿನ್ ಒಳ್ಳೆಯ ಗುಣವನ್ನು ನೋಡಿ ಭವ್ಯಾ ಪೋಷಕರು ಮೆಚ್ಚಿಕೊಂಡಿದ್ದರು.

    ಸಚಿನ್, ಭವ್ಯಾಳನ್ನು ಬಿಟ್ಟು ಒಂದು ಕ್ಷಣವೂ ಎಲ್ಲೂ ಹೋಗುತ್ತಿರಲಿಲ್ಲ. ಸದಾ ಆಕೆಯ ಜೊತೆ ಇದ್ದುಕೊಂಡು ಧೈರ್ಯ ಹೇಳುತ್ತಿದ್ದನು. ಕೊನೆಗೆ ಕ್ಯಾನ್ಸರ್ ಇದ್ದರೂ ಕಳೆದು ವರ್ಷ ಮಾರ್ಚ್ ತಿಂಗಳಲ್ಲಿ ಇಬ್ಬರೂ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಭವ್ಯಾಗೆ ದಿನ ಕಳೆದಂತೆ ತಲೆ ಕೂದಲು ಉದುರಲು ಆರಂಭಿಸಿತು. ಆಗ ಭವ್ಯಾ ಅದನ್ನು ನೋಡಿ ನೋವು ಪಡುತ್ತಿದ್ದಳು. ಈ ವೇಳೆ ಸಚಿನ್, ಪ್ರೀತಿ ಎಂಬುದು ಮನಸ್ಸಿಗೆ ಸಂಬಂಧಿಸಿರುತ್ತದೆ. ದೈಹಿಕವಾಗಿ ಅಲ್ಲ. ನೀನು ಹೇಗೆ ಇದ್ದರೂ ಯಾವಾಗಲೂ ನಾನು ನಿನ್ನನ್ನು ಪ್ರೀತಿಸುತ್ತೇನೆ ಎಂದು ಧೈರ್ಯ ತುಂಬಿದ್ದನು.

    ಭವ್ಯಾ ತಿಂಗಳಲ್ಲಿ ಸುಮಾರು 10 ದಿನ ಆಸ್ಪತ್ರೆಯಲ್ಲಿಯೇ ಇರಬೇಕಾಗಿತ್ತು. ಕೊನೆಗೆ ಸಚಿನ್ ಮತ್ತು ಭವ್ಯಾ ಸೆಪ್ಟೆಂಬರ್ ತಿಂಗಳಲ್ಲಿ ದೇವಸ್ಥಾನದಲ್ಲಿ ವಿವಾಹವಾದರು. ಪೋಷಕರ ಅನುಮತಿ ಪಡೆದ ನಂತರ ಪ್ರೇಮಿಗಳು ಮದುವೆಯಾದರು. ನಾನು ಯಾವಾಗಲೂ ಅವಳೊಂದಿಗೆ ಇದ್ದರೆ ಸಂತೋಷವಾಗಿರುತ್ತಾಳೆ. ಹೀಗಾಗಿ ನಾನು ಮದುವೆಯಾದೆ ಎಂದು ಸಚಿನ್ ಹೇಳಿದ್ದನು.

    ಸಚಿನ್ ಸ್ನಾತಕೋತ್ತರ ಪದವಿಯನ್ನು ಮಾಡಬೇಕೆಂಬ ಕಸನು ಕಂಡಿದ್ದನು. ಆದರೆ ತನ್ನ ಪ್ರಿಯತಮೆಗಾಗಿ ಆ ಕನಸ್ಸನ್ನು ಬಿಟ್ಟು ಆಕೆಯ ಚಿಕಿತ್ಸೆಯ ವೆಚ್ಚವನ್ನು ಭರಿಸಲು ದೈನಂದಿನ ಕೂಲಿ ಕೆಲಸ ಮಾಡುತ್ತಿದ್ದನು. ಆದರೆ ಭವ್ಯಾ ಚಿಕಿತ್ಸೆ ಅಧಿಕ ಹಣ ಬೇಕಾಗಿತ್ತು. ಇತ್ತ ಆಕೆಯ ಮನೆಯವರು ಆರ್ಥಿಕವಾಗಿ ದುರ್ಬಲರಾಗಿದ್ದರು. ಕೊನೆಗೆ ಅವರ ಮದುವೆಗೆ ಬಂದವರು ಹಣದ ಸಹಾಯ ಮಾಡಿದರು. ನಂತರ ಸ್ನೇಹಿತರು, ಪರಿಚಯಸ್ಥರು ಮತ್ತು ಕುಟುಂಬದವರು ಸಹಾಯ ಮಾಡಿದರು. ಕೊನೆಗೆ ಸಚಿನ್, ಭವ್ಯಾಗೆ ಉತ್ತಮ ಚಿಕಿತ್ಸೆ ಕೊಡಿಸಿದ್ದಾನೆ.

    ಇತ್ತೀಚೆಗೆ ಭವ್ಯಾ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಕ್ಯಾನ್ಸರ್ ಕಾಯಿಲೆಯಿಂದ ಸುಧಾರಿಸಿಕೊಳ್ಳುತ್ತಿದ್ದಾಳೆ. “ನಮ್ಮ ಸ್ನೇಹಿತರು ನಮಗೆ ಸಾಕಷ್ಟು ಆರ್ಥಿಕವಾಗಿ ಸಹಾಯ ಮಾಡಿದ್ದಾರೆ. ಅದನ್ನು ನಾವು ಎಂದಿಗೂ ಮರೆಯಲು ಸಾಧ್ಯವಿಲ್ಲ” ಎಂದು ಸಚಿನ್ ಮತ್ತು ಭವ್ಯಾ ತಮ್ಮ ಲವ್ ಸ್ಟೋರಿಯನ್ನು ಹಂಚಿಕೊಂಡಿದ್ದಾರೆ.

  • ಕ್ಯಾನ್ಸರ್ ರೋಗಿಗಳಿಗೆ ನೆರವಾಗಿ – ಬೈಕ್ ರೈಡರ್ಸ್ ತಂಡದಿಂದ ಅಭಿಯಾನ

    ಕ್ಯಾನ್ಸರ್ ರೋಗಿಗಳಿಗೆ ನೆರವಾಗಿ – ಬೈಕ್ ರೈಡರ್ಸ್ ತಂಡದಿಂದ ಅಭಿಯಾನ

    ಬೆಂಗಳೂರು: ನವೆಂಬರ್ ತಿಂಗಳಿನಲ್ಲಿ ಶೇವ್ ಗೆ ಬಳಸುವ ದುಡ್ಡನ್ನು ಕ್ಯಾನ್ಸರ್ ರೋಗಿಗಳಿಗೆ ತಲುಪಿಸಲು ಬೆಂಗಳೂರಿನ ಬೈಕ್ ರೈಡರ್ಸ್ ತಂಡ ಮುಂದಾಗಿದೆ.

    ‘ಬ್ರೋಸ್ ಅನ್ ವೀಲ್ಸ್’ ಹೆಸರಿನ ರೈಡರ್ಸ್ ತಂಡ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸುತ್ತಾ,  ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆಗೆ ನೆರವಾಗುವುದು ಮತ್ತು ಅವರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸವನ್ನು ಮಾಡುತ್ತಿದೆ.

    ಈ ತಿಂಗಳು ಯಾರೂ ಶೇವ್ ಮಾಡ್ಬೇಡಿ. ನಿಮ್ಮ ಶೇವ್ ಗೆ ಬಳಸುವ ಹಣವನ್ನು ಮಿಲ್ಯಾಪ್ ಮೂಲಕ ಬೆಂಗಳೂರಿನ ಕುಂದನಳ್ಳಿಯಲ್ಲಿರುವ ಕರುಣಾಶ್ರಯದಲ್ಲಿರುವ ಕ್ಯಾನ್ಸರ್ ಪೀಡಿತರಿಗೆ ತಲುಪಿಸಲಾಗುತ್ತದೆ. ಕ್ಯಾನ್ಸರ್ ಕೊನೆಯ ಸ್ಟೇಜ್ ನಲ್ಲಿರುವವರಿಗೆ ನೀಡಲಾಗುತ್ತದೆ ಎಂದು ತಂಡ ಹೇಳಿದೆ.

    ತಂಡ ೨ ಲಕ್ಷ ರೂ. ಹಣವನ್ನು ಸಂಗ್ರಹಿಸುವ ಗುರಿಯನ್ನು ಹಾಕಿಕೊಂಡಿದ್ದು, 4  ದಿನದಲ್ಲಿ 14 ಸಾವಿರ ರೂ. ಸಂಗ್ರಹಗೊಂಡಿದೆ. ನವೆಂಬರ್ 30 ರವರೆಗೆ ಜನರು ಹಣವನ್ನು ಹಾಕಬಹುದಾಗಿದೆ.

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಬಹುದಾಗಿದೆ – www.milaap.org/fundraisers/support-no-shave-november

  • ತಲೆಕೂದಲನ್ನು ಕ್ಯಾನ್ಸರ್ ರೋಗಿಗಳಿಗೆ ದಾನ ಮಾಡಿದ ಮಹಿಳಾ ಪೊಲೀಸ್

    ತಲೆಕೂದಲನ್ನು ಕ್ಯಾನ್ಸರ್ ರೋಗಿಗಳಿಗೆ ದಾನ ಮಾಡಿದ ಮಹಿಳಾ ಪೊಲೀಸ್

    ತಿರುವನಂತಪುರಂ: ಕ್ಯಾನ್ಸರ್ ರೋಗಿಗಳಿಗೆ ನೆರವಾಗಲು ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ತಮ್ಮ ತಲೆಕೂದಲನ್ನು ದಾನ ಮಾಡಿ ಮಾದರಿಯಾಗಿದ್ದಾರೆ.

    44 ವರ್ಷದ ಪೊಲೀಸ್ ಅಧಿಕಾರಿ ಅಪರ್ಣಾ ಲವಕುಮಾರ್ ಅವರು ತಮ್ಮ ಉದ್ದನೆಯ ಕೂದಲನ್ನು ದಾನ ಮಾಡಿದ್ದು, ತ್ರಿಶೂರ್ ಜಿಲ್ಲೆಯ ಇರಿಂಜಲಕುಡ ಪೊಲೀಸ್ ಠಾಣೆಯಲ್ಲಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಾರೆ.

    ಪೊಲೀಸ್ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು ಅವರು ತಮ್ಮ ಉದ್ದನೆಯ ಕೂದಲಿಗೆ ಹೆಚ್ಚು ಖ್ಯಾತರಾಗಿದ್ದರು. ಆದರೆ ದಿಢೀರ್ ಎಂದು ಅವರು ಕೂದಲು ಕತ್ತರಿಸಿ ಎಲ್ಲರಿಗೂ ಅಚ್ಚರಿ ಮೂಡಿಸಿದ್ದರು. ಈ ಬಗ್ಗೆ ಮಾತನಾಡಿರುವ ಅವರು, ಇತ್ತೀಚಿನ ದಿನಗಳಲ್ಲಿ ಸಾರ್ವಜನಿಕರ ಹಾಗೂ ಪೊಲೀಸರ ನಡುವಿನ ಅಂತರ ಕಡಿಮೆಯಾಗುತ್ತಿದ್ದು, ಇದನ್ನು ಮತ್ತಷ್ಟು ಸುಧಾರಣೆ ಮಾಡುವ ಅಗತ್ಯವಿದೆ. ನನಗೆ ಸೌಂದರ್ಯ ಮುಖ್ಯವಲ್ಲ. ಈ ಹಿಂದೆ ಕ್ಯಾನ್ಸರ್ ರೋಗಿಗಳಿಗೆ ಅರ್ಧ ಕೂದಲನ್ನು ದಾನ ಮಾಡಿದ್ದೆ. ಆದರೆ ಈ ಬಾರಿ ಪೂರ್ತಿ ಕೂದಲನ್ನು ದಾನ ಮಾಡಿದ್ದೇನೆ ಎಂದರು.

    ಅಪರ್ಣಾ ಅವರ ಈ ಕಾರ್ಯಕ್ಕೆ ಇಲಾಖೆ ಕೂಡ ಸಾಥ್ ನೀಡಿದ್ದು, ಮೇಲಾಧಿಕಾರಿಗಳು ಇದಕ್ಕೆ ಅನುಮತಿಯನ್ನು ನೀಡಿದ್ದಾರೆ. ಕೇವಲ ಕೂದಲಷ್ಟೇ ಅಲ್ಲದೇ 2008 ರಲ್ಲಿ ಆಸ್ಪತ್ರೆಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ರೋಗಿಯೊಬ್ಬರು ಆಸ್ಪತ್ರೆಯ ಬಿಲ್ ನೀಡಲು ವಿಫಲವಾದ ಸಂದರ್ಭದಲ್ಲಿ ಅಪರ್ಣಾ ಅವರು ತಮ್ಮ ಕೈಲಿದ್ದ ಬಂಗಾರದ ಬಳೆಯನ್ನು ನೀಡಿ ಆರ್ಥಿಕ ಸಹಾಯವನ್ನು ಮಾಡಿದ್ದರು. ಇತ್ತೀಚೆಗಷ್ಟೇ ಆಸ್ಪತ್ರೆಗೆ ಭೇಟಿ ನೀಡಿದ್ದ ವೇಳೆ 5ನೇ ತರಗತಿಯ ಬಾಲಕಿ ಕ್ಯಾನ್ಸರ್ ವಿರುದ್ಧ ಹೋರಾಟ ನಡೆಸುತ್ತಿದ್ದನ್ನು ಕಂಡು ಕೂಡಲು ದಾನ ಮಾಡುವ ನಿರ್ಧಾರ ಮಾಡಿದ್ದರು.

  • ಕ್ಯಾನ್ಸರ್ ಚಿಕಿತ್ಸೆ ನೆಪದಲ್ಲಿ ಅಕ್ರಮ ದಂಧೆ ನಡೆಸ್ತಿದ್ದ ವೈದ್ಯನಿಗೆ ಗೂಸ

    ಕ್ಯಾನ್ಸರ್ ಚಿಕಿತ್ಸೆ ನೆಪದಲ್ಲಿ ಅಕ್ರಮ ದಂಧೆ ನಡೆಸ್ತಿದ್ದ ವೈದ್ಯನಿಗೆ ಗೂಸ

    -ಆರೋಗ್ಯ ಸಚಿವರ ಜಿಲ್ಲೆಯಲ್ಲಿ ಅಕ್ರಮ ದಂಧೆ

    ಚಿತ್ರದುರ್ಗ: ವೈದ್ಯೋ ನಾರಾಯಣೋ ಹರಿ ಅಂತಾರೆ. ಆದರೆ ಆರೋಗ್ಯ ಸಚಿವ ಶ್ರೀರಾಮುಲು ತವರು ಜಿಲ್ಲೆಯಲ್ಲೇ ಕ್ಯಾನ್ಸರ್ ಚಿಕಿತ್ಸೆ ನೆಪದಲ್ಲಿ ದೊಡ್ಡ ಅಕ್ರಮ ದಂಧೆ ನಡೆಯುತ್ತಿದೆ.

    ಚಿತ್ರದುರ್ಗದ ಸರ್ಕಾರಿ ಆಸ್ಪತ್ರೆಯ ಆಯುಷ್ ಡಾಕ್ಟರ್ ಎ.ಎನ್ ಸುರೇಶ್ ಎಂಬ ಆಸಾಮಿ, ಹಣಕ್ಕಾಗಿ ತಾನೊಬ್ಬ ವೈದ್ಯ ಅನ್ನೋದನ್ನೇ ಮರೆತು ಕ್ಯಾನ್ಸರ್ ರೋಗಿಗಳಿಗೆ ಪಾರಂಪರಿಕಚಿಕಿತ್ಸೆ ಕೊಡುತ್ತೇವೆ ಎಂದು ಅವರ ಜೀವದ ಜೊತೆ ಚೆಲ್ಲಾಟವಾಡ್ತಿದ್ದಾನೆ. ಕುಣಿಗಲ್‍ನ ಶ್ರೀ ಸಿದ್ಧಲಿಂಗೇಶ್ವರ ಸ್ವಾಮೀಜಿ ಹೆಸರಲ್ಲಿ ಖಾಸಗಿ ವಾಹಿನಿಗಳಲ್ಲಿ ಹಾಗೂ ಯೂಟ್ಯೂಬ್ ನಲ್ಲಿ ಭರ್ಜರಿ ಪ್ರಚಾರ ಗಿಟ್ಟಿಸಿಕೊಳ್ತಾ, ಕ್ಯಾನ್ಸರ್ ರೋಗಿಗಳನ್ನು ಚಿತ್ರದುರ್ಗದ ಯೋಗಾವನ ಬೆಟ್ಟಕ್ಕೆ ಸೆಳೆಯುತ್ತಾನೆ. ಅಲ್ಲದೇ ಇವರ ಅಕ್ರಮ ಬಯಲಾಗದಿರಲಿ ಎಂದು ನಕಲಿ ಖಾವಿಧಾರಿಗಳ ಬೆಂಗಾವಲಿನಲ್ಲಿ ಕ್ಯಾನ್ಸರ್ ರೋಗಿಗಳಿಗೆ ಇಲ್ಲಸಲ್ಲದ ಚಿಕಿತ್ಸೆ ನೀಡುತ್ತಿದ್ದಾನೆ ಆರೋಪಗಳು ಕೇಳಿ ಬಂದಿವೆ.

    ಯೋಗದಿಂದ ಕ್ಯಾನ್ಸರ್ ಗುಣಮಾಡುತ್ತೇನೆ ಎಂದು ಬಡಾಯಿ ಕೊಚ್ಚಿಕೊಳ್ಳೋ ಈ ದಂಧೆಕೋರರ ಮಾತಿಗೆ ಮರುಳಾದ ಹುಬ್ಬಳ್ಳಿ ಮೂಲದ ಬಾಲರಾಜ್ ಕುಮಾರ್ ಎಂಬ ರೋಗಿಯಿಂದ 30 ಸಾವಿರ ರೂಪಾಯಿ ಹಣ ಪಡೆದು, ಆರು ತಿಂಗಳಿಂದ ಅಲ್ಲೇ ಉಳಿದರೂ ರೋಗ ಗುಣವಾಗದೇ ಆತ ಸಾವಿನಂಚಿಗೆ ತಲುಪಿದ್ದಾನೆ. ಈ ಬಗ್ಗೆ ಕೇಳಲು ಬಂದಿದ್ದ ಬಾಲರಾಜ್ ಕುಟುಂಬದ ಮೇಲೆ ಡಾಕ್ಟರ್ ಸುರೇಶನ ಚೇಲಗಳು ದೌರ್ಜನ್ಯವೆಸಗಲು ಮುಂದಾಗಿದ್ದರು. ಆಗ ಆಕ್ರೋಶಗೊಂಡ ಕ್ಯಾನ್ಸರ್ ರೋಗಿ ಅಲ್ಲಿನ ನಕಲಿ ಖಾವಿಧಾರಿಗಳಿಗೆ ಭರ್ಜರಿ ಗೂಸಕೊಟ್ಟು ತನ್ನ ಕೋಪವನ್ನು ಈಡೇರಿಸಿಕೊಂಡಿದ್ದಾನೆ.

    ಈ ಅಕ್ರಮ ಸುಮಾರು ನಾಲ್ಕು ವರ್ಷಗಳಿಂದ ನಡೆಯುತಿದ್ದರೂ ಸಹ ಆರೋಗ್ಯ ಇಲಾಖೆ ಮಾತ್ರ ಜಾಣ ಕುರುಡು ಪ್ರದರ್ಶಿಸುತ್ತಿದೆ ಎಂದು ಸಾರ್ವಜನಿಕರು ಕಿಡಿಕಾರುತ್ತಿದ್ದಾರೆ. ಇನ್ನಾದರೂ ಆರೋಗ್ಯ ಸಚಿವರು ಈ ಅಕ್ರಮಕ್ಕೆ ಹಾಕುತ್ತಾರ ಬ್ರೇಕ್ ಕಾದು ನೋಡಬೇಕಿದೆ.

  • ಥ್ಯಾಂಕ್ಯೂ ಸಿಎಂ ಅಂಕಲ್, ನನ್ನ ಪ್ರಾಣ ಉಳಿಸಿದ್ರಿ – ಮುಖ್ಯಮಂತ್ರಿಗಳಿಗೆ ಧನ್ಯವಾದ ಹೇಳಿದ ಪುಟ್ಟ ಪೋರ

    ಥ್ಯಾಂಕ್ಯೂ ಸಿಎಂ ಅಂಕಲ್, ನನ್ನ ಪ್ರಾಣ ಉಳಿಸಿದ್ರಿ – ಮುಖ್ಯಮಂತ್ರಿಗಳಿಗೆ ಧನ್ಯವಾದ ಹೇಳಿದ ಪುಟ್ಟ ಪೋರ

    ಬೆಂಗಳೂರು: ಇಂದು ಇನ್ಫೋಸಿಸ್ ಫೌಂಡೇಶನ್ ವತಿಯಿಂದ ನಿರ್ಮಾಣಗೊಂಡಿರುವ 5 ಶಸ್ತ್ರಚಿಕಿತ್ಸೆ ಕೊಠಡಿಗಳ ಉದ್ಘಾಟನಾ ಕಾರ್ಯಕ್ರಮಕ್ಕೆ ಸಿಎಂ ಆಗಮಿಸಿದ್ದರು. ಈ ವೇಳೆ 6 ವರ್ಷದ ಸೃಜನ್ ಎಂಬ ಪುಟ್ಟ ಬಾಲಕ ಸಿಎಂ ಅವರಿಗೆ ಧನ್ಯವಾದ ಹೇಳಿದ್ದಾನೆ.

    16 ತಿಂಗಳ ಮಗುವಾಗಿದ್ದಾಗ ಸೃಜನ್ ಬ್ಲಡ್ ಕ್ಯಾನ್ಸರ್‍ಯಿಂದ ಬಳಲುತ್ತಿದ್ದ. ಚಿಕಿತ್ಸೆಗೆ 30 ಲಕ್ಷ ಖರ್ಚಾಗುತ್ತೆ ಎಂದು ಖಾಸಗಿ ಆಸ್ಪತ್ರೆಗಳು ಹೇಳಿದ್ದವು. ಹಾಗಾಗಿ ಸೃಜನ್ ತಂದೆ ಮೈಸೂರಿನ ಸೋಮಶೇಖರ್ ಸಿಎಂ ಬಳಿ ಸಹಾಯ ಕೇಳಿದ್ದರು. ಇದಕ್ಕೆ ಸ್ಪಂದಿಸಿದ್ದ ಮುಖ್ಯಮಂತ್ರಿಗಳು, ಸೃಜನ್ ಪೋಷಕರನ್ನು ಕಿದ್ವಾಯಿ ಆಸ್ಪತ್ರೆಗೆ ಕಳುಹಿಸಿಕೊಟ್ಟು, ಚಿಕಿತ್ಸೆ ಕೊಡಿಸುವುದಾಗಿ ಭರವಸೆ ನೀಡಿದ್ದರು.

    ಸಿಎಂ ಅವರ ಕೊಟ್ಟ ಮಾತಿನಂತೆ ಆ ಮಗುವಿಗೆ ಐದು ವರ್ಷ ಉಚಿತವಾಗಿ ಚಿಕಿತ್ಸೆ ಕೊಡಿಸಿದ್ದಾರೆ. ಇದರಿಂದ ಈಗ ಸೃಜನ್ ಗುಣಮುಖನಾಗಿದ್ದಾನೆ. ಅದ್ದರಿಂದ ಇಂದು ಕಿದ್ವಾಯಿ ಆಸ್ಪತ್ರೆಗೆ ಬಂದಿದ್ದ ಸಿಎಂ ಅವರನ್ನು ವೇದಿಕೆ ಮೇಲೆ ಅವರ ತಂದೆಯ ಜೊತೆ ಭೇಟಿ ಮಾಡಿದ ಸೃಜನ್ ಥ್ಯಾಂಕ್ಯೂ ಸಿಎಂ ಅಂಕಲ್, ನನ್ನ ಪ್ರಾಣ ಉಳಿಸಿದ್ರಿ. ನಮಗೆ ಎಷ್ಟು ಥ್ಯಾಂಕ್ಸ್ ಹೇಳಿದರೂ ಕಮ್ಮಿನೇ ಎಂದು ಸಿಎಂ ಕಾಲಿಗೆ ಬಿದ್ದು ನಮಸ್ಕರಿಸಿದ್ದಾನೆ.

    ಮಗುವನ್ನು ಕಂಡು ಖುಷಿ ಪಟ್ಟ ಸಿಎಂ, ಈ ರೀತಿಯ ಸೇವೆಗೆ ನಮ್ಮ ಸರ್ಕಾರವೂ ಸಹಕಾರ ನೀಡಲಿದೆ. ವೇದಿಕೆ ಮೇಲೆ ಒಂದು ಮಗು ನನ್ನ ಮಾತನಾಡಿಸಲು ಬಂದಿತ್ತು. ಈಗಷ್ಟೇ ವೇದಿಕೆ ಮೇಲೆ ಮಾತನಾಡಿಸಿದೆ. ಆ ಮಗು ಚಿಕ್ಕವನಿದ್ದಾಗ ನನ್ನ ಬಳಿ ಚಿಕಿತ್ಸೆಗೆ ಸಹಾಯ ಕೇಳಿಕೊಂಡು ಬಂದಿದ್ದರು. ನಾನು ಅವರಿಗೆ ಕಿದ್ವಾಯಿ ಆಸ್ಪತ್ರೆಗೆ ಹೋಗಲು ಹೇಳಿದ್ದೆ. ಈಗ ಆ ಮಗು ಗುಣಮುಖವಾಗಿದೆ ಎಂದು ಹೇಳಿದರು.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]