Tag: candidate

  • ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ

    ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ

    ಬೆಂಗಳೂರು: ರಾಜ್ಯದ 5 ವಿಧಾನ ಪರಿಷತ್ ಸ್ಥಾನಕ್ಕೆ ನಡೆಯುವ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳ ಚುನಾವಣೆಗೆ (Parishad Election) ಕಾಂಗ್ರೆಸ್ (Congress) ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ.

    ಒಟ್ಟು 5 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿ ಘೋಷಿಸಿದೆ. ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯಲ್ಲಿ ಹಿರಿಯೂರಿನ ಬಿಜೆಪಿಯ ಮಾಜಿ ಶಾಸಕಿ ಪೂರ್ಣಿಮ ತಮ್ಮ ಪತಿ ಶ್ರೀನಿವಾಸ್ ಅವರಿಗೆ ಟಿಕೆಟ್ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪೂರ್ಣಿಮ ವಾರದ ಹಿಂದಷ್ಟೇ ಕಾಂಗ್ರೆಸ್ ಸೇರ್ಪಡೆ ಆಗಿದ್ದರು. ಪೂರ್ಣಿಮ ಕಾಂಗ್ರೆಸ್ ಸೇರ್ಪಡೆ ಆದ ಒಂದೇ ವಾರದಲ್ಲಿ ಪೂರ್ಣಿಮ ಪತಿ ಶ್ರೀನಿವಾಸ್‌ಗೆ ಆಗ್ನೇಯ ಶಿಕ್ಷಕರ ಕ್ಷೇತ್ರದ ಟಿಕೆಟ್ ಘೋಷಿಸಲಾಗಿದೆ. ಇದನ್ನೂ ಓದಿ: ಬಿಜೆಪಿಯವರಿಗೆ ಬೇರೆಯವರ ಕೆರೆಯಲ್ಲಿ ಮೀನು ಹಿಡಿಯುವುದೇ ಕೆಲಸ: ವೀರಪ್ಪ ಮೊಯ್ಲಿ

    ಬೆಂಗಳೂರು ಪದವೀಧರರ ಕ್ಷೇತ್ರ – ರಾಮೋಜಿ ಗೌಡ
    ಬೆಂಗಳೂರು ಶಿಕ್ಷಕರ ಕ್ಷೇತ್ರ – ಪುಟ್ಟಣ್ಣ
    ನೈಋತ್ಯ ಶಿಕ್ಷಕರ ಕ್ಷೇತ್ರ – ಕೆಕೆ ಮಂಜುನಾಥ್
    ಆಗ್ನೇಯ ಶಿಕ್ಷಕರ ಕ್ಷೇತ್ರ – ಡಿಟಿ ಶ್ರೀನಿವಾಸ್
    ಈಶಾನ್ಯ ಪದವೀಧರರು ಕ್ಷೇತ್ರ – ಡಾ. ಚಂದ್ರಶೇಖರ ಬಿ. ಪಾಟೀಲ್ ಹೆಸರನ್ನು ಘೋಷಿಸಲಾಗಿದೆ. ಇದನ್ನೂ ಓದಿ: ಜನವರಿಯಲ್ಲಿ ಜಾತಿಗಣತಿ ವರದಿ ಸ್ವೀಕಾರ: ಸಿದ್ದರಾಮಯ್ಯ

    Web Stories 
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸಿಇಟಿ: 30,000 ಮಂದಿಯ ಆರ್‌ಡಿ ಸಂಖ್ಯೆ ಹೊಂದಾಣಿಕೆ ಆಗುತ್ತಿಲ್ಲ, ಇಂದೇ ಸರಿ ಮಾಡಿಕೊಳ್ಳಿ

    ಸಿಇಟಿ: 30,000 ಮಂದಿಯ ಆರ್‌ಡಿ ಸಂಖ್ಯೆ ಹೊಂದಾಣಿಕೆ ಆಗುತ್ತಿಲ್ಲ, ಇಂದೇ ಸರಿ ಮಾಡಿಕೊಳ್ಳಿ

    ಆರ್ ಡಿ ಸಂಖ್ಯೆ ಸರಿಪಡಿಸದಿದ್ದರೆ ಸಾಮಾನ್ಯ ಕೋಟಾದಲ್ಲಿ ಸೀಟು ಹಂಚಿಕೆ

    ಬೆಂಗಳೂರು: ವೃತ್ತಿಪರ ಕೋರ್ಸುಗಳಿಗೆ (Professional Courses) ಪ್ರವೇಶಾತಿ ಬಯಸಿ ಸಿಇಟಿ (CET) ಬರೆದಿರುವ ಅಭ್ಯರ್ಥಿಗಳು (Candidate) ಜಾತಿ/ಆದಾಯ/ಕಲ್ಯಾಣ ಕರ್ನಾಟಕ ಪ್ರಮಾಣ ಪತ್ರಗಳ ಆರ್.ಡಿ ಸಂಖ್ಯೆಯನ್ನು (RD Number) ಸರಿಪಡಿಸಿಕೊಳ್ಳದಿದ್ದರೆ ಮೀಸಲಾತಿ ಸೌಲಭ್ಯಗಳು ರದ್ದಾಗಿ, ಜನರಲ್ ಮೆರಿಟ್ ಕೋಟಾದಡಿ ಬರಲಿದ್ದಾರೆ. ಆದ್ದರಿಂದ ಕೂಡಲೇ ಕಂದಾಯ ಇಲಾಖೆಯ ಆರ್.ಡಿ ಸಂಖ್ಯೆ ಜತೆ ತಾಳೆಯಾಗುವಂತೆ ಜೂನ್ 12ರ ಬೆಳಿಗ್ಗೆ 11 ಗಂಟೆಯ ವೇಳೆಗೆ ಸೂಕ್ತ ತಿದ್ದುಪಡಿ ಮಾಡಿಕೊಳ್ಳಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮತ್ತೊಮ್ಮೆ ಹೇಳಿದೆ. ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಶುಕ್ರವಾರ ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿದ್ದಾರೆ.

    ಸಿಇಟಿ ಬರೆದಿರುವ 2.6 ಲಕ್ಷ ಅಭ್ಯರ್ಥಿಗಳ ಪೈಕಿ 80 ಸಾವಿರಕ್ಕೂ ಹೆಚ್ಚು ಮಂದಿ ಆರ್.ಡಿ ಸಂಖ್ಯೆಯನ್ನು ತಪ್ಪಾಗಿ ಅರ್ಜಿಯಲ್ಲಿ ನಮೂದಿಸಿರುವ ಹಿನ್ನೆಲೆಯಲ್ಲಿ ಪ್ರಾಧಿಕಾರವು ಅದರ ತಿದ್ದುಪಡಿಗೆ ಜೂನ್ 7ರಿಂದ 12ರವರೆಗೆ ಕೊನೆಯ ಅವಕಾಶ ನೀಡಿದೆ. ಆದರೂ ಇನ್ನೂ 30 ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳ ಅರ್ಜಿಗಳಲ್ಲಿನ ದೋಷಗಳು ಹಾಗೆಯೇ ಉಳಿದುಕೊಂಡಿವೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಒಡಿಶಾ ರೈಲು ದುರಂತದಲ್ಲಿ ಮೃತಪಟ್ಟವರ ಶವ ಇಟ್ಟಿದ್ದಕ್ಕೆ ಶಾಲೆಗೆ ಬರಲು ಮಕ್ಕಳು ಹಿಂದೇಟು – ಶಾಲೆ ನೆಲಸಮ

    ಇದರ ಜತೆಗೆ ಕೆಲವರು ಆದಾಯ ಪ್ರಮಾಣ ಪತ್ರದ (Income Certificate) ಬದಲು ಇಡಬ್ಲ್ಯುಎಸ್ ಪ್ರಮಾಣಪತ್ರವನ್ನು ಸಲ್ಲಿಸಿದ್ದಾರೆ. ಸಿಇಟಿ ನಿಯಮಗಳ ಪ್ರಕಾರ ಇದಕ್ಕೆ ಮನ್ನಣೆ ಇಲ್ಲ. ಆದ್ದರಿಂದ ಅಭ್ಯರ್ಥಿಗಳು ಪ್ರಾಧಿಕಾರದ ಪೋರ್ಟಲ್‍ನಲ್ಲಿ ಜೂನ್ 12ರ ನಿಗದಿತ ಕಾಲಮಿತಿಯೊಳಗೆ ತಿದ್ದುಪಡಿ ಮಾಡಿಕೊಳ್ಳಬೇಕು. ಇಲ್ಲದಿದ್ದರೆ ಮುಂದಿನ ಪರಿಣಾಮಗಳಿಗೆ ವಿದ್ಯಾರ್ಥಿಗಳೇ ಹೊಣೆಗಾರರಾಗಲಿದ್ದಾರೆ ಎಂದು ಅವರು ವಿವರಿಸಿದ್ದಾರೆ.

    ಆರ್‌ಡಿ ಸಂಖ್ಯೆಗಳು ತಾಳೆಯಾಗದ ಅಭ್ಯರ್ಥಿಗಳ ಹೆಸರುಗಳನ್ನು ಪ್ರಾಧಿಕಾರದ ವೆಬ್‍ಸೈಟ್‍ನಲ್ಲಿ ಪ್ರಕಟಿಸಲಾಗಿದೆ. ಈಗಾಗಲೇ ಈ ಸಂಖ್ಯೆಗಳನ್ನು ಕಂದಾಯ ಇಲಾಖೆಯ ಆರ್‌ಡಿ ಸಂಖ್ಯೆ ಜತೆ ನಮೂದಿಸುವ ಪ್ರಕ್ರಿಯೆ ನಡೆಯುತ್ತಿದೆ. ಆದ್ದರಿಂದ ಸಂಬಂಧಿಸಿದ ಅಭ್ಯರ್ಥಿಗಳು ತಿದ್ದುಪಡಿಗೆ ನೀಡಿರುವ ಕೊನೆಯ ಅವಕಾಶವನ್ನು ಬಳಸಿಕೊಳ್ಳಬೇಕು ಎಂದು ಅವರು ಕೋರಿದ್ದಾರೆ. ಇದನ್ನೂ ಓದಿ: ವಿಮಾನದಲ್ಲಿ ಕುಳಿತು ಫೋನ್‌ನಲ್ಲಿ ‘ಬಾಂಬ್’ ಕುರಿತು ಸಂಭಾಷಣೆ – ದೆಹಲಿ ಏರ್‌ಪೋರ್ಟ್‌ನಲ್ಲಿ ವ್ಯಕ್ತಿ ಅರೆಸ್ಟ್

  • Congress List: ಕಾಂಗ್ರೆಸ್‌ನಿಂದ ಅಭ್ಯರ್ಥಿಗಳ 2ನೇ ಪಟ್ಟಿ ರಿಲೀಸ್ – ಯಾರಿಗೆ ಎಲ್ಲಿ ಟಿಕೆಟ್?

    Congress List: ಕಾಂಗ್ರೆಸ್‌ನಿಂದ ಅಭ್ಯರ್ಥಿಗಳ 2ನೇ ಪಟ್ಟಿ ರಿಲೀಸ್ – ಯಾರಿಗೆ ಎಲ್ಲಿ ಟಿಕೆಟ್?

    – 42 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ
    – ವೈಎಸ್ ವಿ ದತ್ತಗೆ ಇಲ್ಲ ಟಿಕೆಟ್

    ನವದೆಹಲಿ: 2023 ರ ಕರ್ನಾಟಕ ವಿದಾನಸಭಾ ಚುನಾವಣೆ (Karnataka Vidhanasabha Election 2023) ಗೆ ಕಾಂಗ್ರೆಸ್‍ನಿಂದ ಅಭ್ಯರ್ಥಿಗಳ 2 ನೇ ಪಟ್ಟಿ ರಿಲೀಸ್ ಆಗಿದೆ. 42 ಮಂದಿ ಅಭ್ಯರ್ಥಿಗಳ ಪಟ್ಟಿಯನ್ನು ಇದೀಗ ಕೈ ನಾಯಕರು ರಿಲೀಸ್ ಮಾಡಿದ್ದಾರೆ.

    ತಮ್ಮ ಆಪ್ತರ ಪರವಾಗಿ ಪಟ್ಟು ಹಿಡಿದಿದ್ದ ಎರಡು ಕ್ಷೇತ್ರದಲ್ಲಿ ಡಿಕೆ ಶಿವಕುಮಾರ್‌ (DK Shivakumar) ಗೆ ತೀವ್ರ ಹಿನ್ನಡೆಯಾಗಿದೆ. ತೀರ್ಥಹಳ್ಳಿಯಲ್ಲಿ ಮಂಜುನಾಥ ಗೌಡ ಪರ ಡಿಕೆಶಿ ಪಟ್ಟು ಹಿಡಿದಿದ್ದರು. ಇತ್ತ ಕಿಮ್ಮನೆ ರತ್ನಾಕರ್ ಗೆ ಟಿಕೆಟ್ ಕೊಡಿಸುವಲ್ಲಿ ಸಿದ್ದರಾಮಯ್ಯ (Siddaramaiah) ಯಶಸ್ವಿಯಾಗಿದ್ದಾರೆ.

    ಕಲಘಟಗಿಯಲ್ಲಿ ನಾಗರಾಜ್ ಚಬ್ಬಿಗೆ ಟಿಕೆಟ್ ಕೊಡಲು ಡಿಕೆಶಿ ಪಟ್ಟು ಹಿಡಿದಿದ್ದರು. ಆದರೆ ಸಂತೋಷ್‌ ಲಾಡ್ ಗೆ ಟಿಕೆಟ್ ಕೊಡಿಸುವಲ್ಲಿ ಸಿದ್ದರಾಮಯ್ಯ ಯಶಸ್ವಿಯಾಗಿದ್ದಾರೆ. ಬೇಲೂರಿನಲ್ಲಿ ಡಿಕೆಶಿ ಕೈ ಮೇಲಾಗಿದೆ. ರುದ್ರೇಶ್ ಗೌಡ ಕುಟುಂಬ ಹಾಗೂ ಸಿದ್ದರಾಮಯ್ಯ ಬಣ ಎರಡಕ್ಕೂ ಸಡ್ಡು ಹೊಡೆದು ತಮ್ಮ ಆಪ್ತ ಮಾಜಿ ಸಚಿವ ಗಂಡಸಿ ಶಿವರಾಂ ಗೆ ಟಿಕೆಟ್ ಕೊಡಿಸುವಲ್ಲಿ ಡಿಕೆಶಿ ಯಶಸ್ವಿಯಾಗಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಒಟ್ಟು 22.79 ಕೋಟಿ ನಗದು, 1,52 ಕೋಟಿ ಮೌಲ್ಯದ ಲಿಕ್ಕರ್ ವಶ

    ಕಾಂಗ್ರೆಸ್ ಹೈಕಮಾಂಡ್ (Congress HighCommand) ಕೋಲಾರಕ್ಕೆ ಟಿಕೆಟ್ ಪ್ರಕಟಿಸಿಲ್ಲ. ಇತ್ತ ಹಾಲಿ ಶಾಸಕ ವಿ ಮುನಿಯಪ್ಪ ಕ್ಷೇತ್ರ ಶಿಡ್ಲಘಟ್ಟ ಕೂಡ ಘೋಷಣೆ ಆಗಿಲ್ಲ. ವಲಸಿಗರ ಆಸೆ ಬಿಟ್ಟ ಕಾಂಗ್ರೆಸ್, ಚಿತ್ರದುರ್ಗದಲ್ಲಿ ಮಾಜಿ ಪರಿಷತ್ ಸದಸ್ಯ ರಘು ಆಚಾರ್ ಗೆ ಟಿಕೆಟ್ ಕೈ ತಪ್ಪಿದ್ದು, ದೊಡ್ಡಣ್ಣ ಅಳಿಯ ವೀರೇಂದ್ರ ಪಪ್ಪಿಗೆ ಮಣೆ ಹಾಕಿದೆ. ಹಾಲಿ ಶಾಸಕರ ಆಯ್ಕೆಯಲ್ಲಿ ಗೊಂದಲ ಮುಂದುವರಿದಿದೆ. ಒಟ್ಟಿನಲ್ಲಿ ದತ್ತ ಹೊರತುಪಡಿಸಿ ಎಲ್ಲ ವಲಸಿಗರಿಗೆ ಟಿಕೆಟ್ ನೀಡಲಾಗಿದ್ದು, ಲಿಂಗಸುಗೂರು ಪುಲಕೇಶಿಯ ನಗರ, ಕುಂದಗೋಳ, ಹರಿಹರ, ಶಿಡ್ಲಘಟ್ಟಕ್ಕೆ ಅಭ್ಯರ್ಥಿಗಳು ಅಂತಿಮವಾಗಿಲ್ಲ.

    ಯಾವ ಕ್ಷೇತ್ರಕ್ಕೆ ಯಾರು?: ನಿಪ್ಪಾಣಿ- ಕಾಕಾಸಾಹೇಬ್ ಪಾಟೀಲ್, ಗೋಕಾಕ್- ಮಹಾಂತೇಶ್ ಕಡಾಡಿ, ಕಿತ್ತೂರು- ಬಾಬಾ ಸಾಹೇಬ್ ಡಿ ಪಾಟೀಲ್, ಸವದತ್ತಿ ಯಲ್ಲಮ್ಮ- ವಿಶ್ವಾಸ್ ವಸಂತ್ ವಿದ್ಯಾ, ಮುಧೋಳ್ ಎಸ್‍ಸಿ- ರಾಮಪ್ಪ ಬಾಳಪ್ಪ ತಿಮ್ಮಾಪೂರ್, ಬಿಳಗಿ- ಜಿ.ಟಿ ಪಾಟೀಲ್, ಬಾದಾಮಿ- ಭೀಮಸೇನಾ ಬಿ ಚಿಮ್ನಕಟ್ಟಿ, ಬಾಗಲಕೋಟೆ – ಹುಲ್ಲಪ್ಪ ವೈ ಮೇಟಿ, ಬಿಜಾಪುರ ನಗರ – ಅಬ್ದುಲ್ ಅಹ್ಮದ್ ಖಾಜಸಾಹೇಬ್ ಮುಷರಫಿ, ನಾಗಠಾಣ ಎಸ್‍ಸಿ- ವಿಠಲ್ ಕಟಕದೋಂಧ್, ಅಫ್ಜಲಪುರ್- ಎಂವೈ ಪಾಟೀಲ್, ಯಾದಗಿರಿ- ಚನ್ನ ರೆಡ್ಡಿ ಪಾಟೀಲ್, ಗುರುಮಿಠ್ಕಲ್- ಚಿಂಚನಸೂರ್, ಕಲಬುರಗಿ ದಕ್ಷಿಣ- ಅಲ್ಲಮಪ್ರಭು ಪಾಟೀಲ್, ಬಸವಕಲ್ಯಾಣ – ವಿಜಯ್ ಧರ್ಮಸಿಂಗ್, ಗಂಗಾವತಿ – ಇಕ್ಬಾಲ್ ಅನ್ಸಾರಿ, ನರಗುಂದ- ಬಿ.ಆರ್ ಯಾವಗಲ್, ಧಾರವಾಡ- ವಿನಯ್ ಕುಲಕರ್ಣಿ, ಕಲಘಟಗಿ- ಸಂತೋಷ್ ಎಸ್ ಲಾಡ್, ಸಿರಸಿ- ಭಿಮಣ್ಣ ನಾಯಕ್, ಯಲ್ಲಾಪುರ- ವಿಎಸ್ ಪಾಟೀಲ್,‌ ಕೂಡ್ಲಿಗಿ- ಶ್ರೀನಿವಾಸ್‌ ಎನ್‌.ಟಿ, ಮೊಳಕಾಲ್ಮೂರು- ಎನ್‌ ವೈ ಗೋಪಾಲಕೃಷ್ಣ, ಚಿತ್ರದುರ್ಗ- ಕೆ.ಸಿ ವೀರೇಂದ್ರ, ಹೊಳಲ್ಕೆರೆ- ಹೆಚ್.‌ ಆಂಜನೇಯ, ಚನ್ನಗಿರಿ- ಬಿ.ವಿ ಶಿವಗಂಗಾ, ತೀರ್ಥಹಳ್ಳಿ- ಕಿಮ್ಮನೆ ರತ್ನಾಕರ್‌, ಉಡುಪಿ- ಪ್ರಸಾದ್‌ ರಾಜ್‌ ಕಾಂಚಾನ, ಕಡೂರು- ಕೆ.ಎಸ್‌ ಆನಂದ್‌, ತುಮಕೂರು ನಗರ, ಇಕ್ಬಾಲ್‌ ಅಹ್ಮದ್‌, ಗುಬ್ಬಿ- ಎಸ್‌.ಆರ್‌ ಶ್ರೀನಿವಾಸ್‌, ಯಲಹಂಕ- ಕೇಶವ ರಾಜಣ್ಣ ಬಿ, ಯಶವಂತಪುರ- ಎಸ್‌ ಬಾಲರಾಜ್‌ ಗೌಡ, ಮಹಾಲಕ್ಷ್ಮಿ ಲೇ ಔಟ್-‌ ಕೇಶವಮೂರ್ತಿ,  ಪದ್ಮನಾಭನಗರ- ರಘುನಾಥ ನಾಯ್ಡು, ಮೇಲುಕೋಟೆ- ದರ್ಶನ್‌ ಪುಟ್ಟಣ್ಣಯ್ಯ, ಮಂಡ್ಯ- ಪಿ. ರವಿಕುಮಾರ್‌, ಕೆ ಆರ್ ಪೇಟೆ- ಬಿ.ಎಲ್‌ ದೇವರಾಜ್‌, ಬೇಲೂರು- ಬಿ. ಶಿವರಾಂ, ಮಡಿಕೇರಿ- ಮಂಥರ್‌ ಗೌಡ, ಚಾಮುಂಡೇಶ್ವರಿ- ಸಿದ್ದೇಗೌಡ, ಕೊಳ್ಳೇಗಾಲ- ಎ. ಆರ್‌ ಕೃಷ್ಣಮೂರ್ತಿ.

    ಟಿಕೆಟ್ ವಂಚಿತರು: ಕಡೂರು- ವೈ. ಎಸ್. ವಿ ದತ್ತ, ಚನ್ನಗಿರಿ- ವಡ್ನಾಳ್ ರಾಜಣ್ಣ, ಚಿತ್ರದುರ್ಗ- ರಘು ಆಚಾರ್, ತೀರ್ಥಹಳ್ಳಿ- ಮಂಜುನಾಥಗೌಡ, ಮೊಳಕಾಲ್ಮೂರು- ಯೋಗೀಶ್ ಬಾಬು, ಕಲಘಟಗಿ- ನಾಗರಾಜ್ ಛಬ್ಬಿ.

  • ಚುನಾವಣೆಯಲ್ಲಿ ಸೋತ ಬಳಿಕ ಕಾಂಗ್ರೆಸ್ ಅಭ್ಯರ್ಥಿ ಹೃದಯಾಘಾತದಿಂದ ಸಾವು

    ಚುನಾವಣೆಯಲ್ಲಿ ಸೋತ ಬಳಿಕ ಕಾಂಗ್ರೆಸ್ ಅಭ್ಯರ್ಥಿ ಹೃದಯಾಘಾತದಿಂದ ಸಾವು

    ಭೋಪಾಲ್: ಚುನಾವಣೆಯಲ್ಲಿ ಸ್ಪರ್ಧಿಸಿ ಸೋತ ಬಳಿಕ ಅಭ್ಯರ್ಥಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

    ಮಧ್ಯಪ್ರದೇಶದ ರೇವಾದಲ್ಲಿ ಮುನ್ಸಿಪಲ್ ಕೌನ್ಸಿಲ್‌ಗೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಹರಿನಾರಾಯಣ್ ಗುಪ್ತಾ ಅವರು ಚುನಾವಣೆಯಲ್ಲಿ ಸೋತ ಸುದ್ದಿ ತಿಳಿದ ಬಳಿಕ ಭಾನುವಾರ ನಿಧನರಾಗಿದ್ದಾರೆ. ಇದನ್ನೂ ಓದಿ: ಮುನಿರತ್ನ, ಭೈರತಿ, ಗೋಪಾಲಯ್ಯ, ನಾಗೇಶ್ ಜನ ಉಪಯೋಗಿ ಮಂತ್ರಿಗಳು: ಬೊಮ್ಮಾಯಿ

    ರೇವಾದ ಹನುಮಾನ ಪ್ರದೇಶದ ಪುರಸಭೆಯ ವಾರ್ಡ್ ನಂ.9 ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಹರಿನಾರಾಯಣ್ ಗುಪ್ತಾ ಸ್ಪರ್ಧಿಸಿದ್ದರು. ಆದರೆ ಸ್ವತಂತ್ರ ಅಭ್ಯರ್ಥಿಯಾಗಿದ್ದ ಅಖಿಲೇಶ್ ಗುಪ್ತಾ ಅವರು ಹರಿನಾರಾಯಣ್ ಅವರನ್ನು 14 ಮತಗಳ ಅಂತರದಿಂದ ಸೋಲಿಸಿದ್ದಾರೆ. ಇದನ್ನೂ ಓದಿ: ಮಹಾಲಕ್ಷ್ಮಿ ಲೇಔಟ್ 55ನೇ ವಾರ್ಡ್‍ಗೆ ಅಪ್ಪು ಹೆಸರಿಟ್ಟಿರೋದು ಸಂತೋಷ ತಂದಿದೆ: ಸಿಎಂ

    ಭಾನುವಾರ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ತಮ್ಮ ಸೋಲಿನ ಸುದ್ದಿ ಕೇಳುತ್ತಲೇ ಹರಿನಾರಾಯಣ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಹರಿನಾರಾಯಣ್ ಹನುಮಾನ ಕಾಂಗ್ರೆಸ್ ಘಟಕದ ಮಂಡಲ ಅಧ್ಯಕ್ಷರೂ ಆಗಿದ್ದರು.

    Live Tv
    [brid partner=56869869 player=32851 video=960834 autoplay=true]

  • ದ್ರೌಪದಿ ಮುರ್ಮು ಗೌರವಿಸುತ್ತೇವೆ, ಸಿನ್ಹಾರನ್ನು ಬೆಂಬಲಿಸುತ್ತೇವೆ: ಎಎಪಿ

    ದ್ರೌಪದಿ ಮುರ್ಮು ಗೌರವಿಸುತ್ತೇವೆ, ಸಿನ್ಹಾರನ್ನು ಬೆಂಬಲಿಸುತ್ತೇವೆ: ಎಎಪಿ

    ನವದೆಹಲಿ: ರಾಷ್ಟ್ರಪತಿ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕೀಯ ಪಕ್ಷಗಳು ತಮ್ಮ ಬೆಂಬಲವನ್ನು ಬಹಿರಂಗಪಡಿಸುತ್ತಿವೆ. ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಹಾಗೂ ಪ್ರತಿಪಕ್ಷಗಳ ಆಯ್ಕೆ ಯಶವಂತ್ ಸಿನ್ಹಾ ಆಗಿದ್ದು, ಈ ಪೈಕಿ ದೇಶಾದ್ಯಂತ ಪಕ್ಷಗಳು ತಮ್ಮ ಬೆಂಬಲ ಯಾರಿಗೆ ಎಂಬುದನ್ನು ಘೋಷಿಸುತ್ತಿವೆ.

    ಇದೀಗ ಅರವಿಂದ್ ಕೇಜ್ರಿವಾಲ್ ಅವರ ಆಮ್‌ಆದ್ಮಿ ಪಕ್ಷ ತಮ್ಮ ಬೆಂಬಲ ಯಾರಿಗೆ ಎಂಬುದನ್ನು ತಿಳಿಸಿದೆ. ನಾವು ದ್ರೌಪದಿ ಮುರ್ಮು ಅವರನ್ನು ಗೌರವಿಸುತ್ತೇವೆ. ಆದರೆ ನಮ್ಮ ಬೆಂಬಲ ಯಶವಂತ್ ಸಿನ್ಹಾ ಅವರ ಪರವಾಗಿದೆ ಎಂದು ಆಪ್ ಸಂಸದ ಸಂಜಯ್ ಸಿಂಗ್ ಹೇಳಿದ್ದಾರೆ.

    ಬುಡಕಟ್ಟು ನಾಯಕಿ, ಗವರ್ನರ್ ಆಗಿರುವ ದ್ರೌಪದಿ ಮುರ್ಮು ಅವರನ್ನು ಎನ್‌ಡಿಎ ಪಕ್ಷ ರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿಯಾಗಿ ನಾಮನಿರ್ದೇಶನಗೊಳಿಸಿತು. ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಆಶ್ಚರ್ಯ ಹಾಗೂ ಸಂತೋಷವನ್ನು ವ್ಯಕ್ತಪಡಿಸಿದ್ದರು. ಬಡತನ ಹಾಗೂ ಕಷ್ಟಗಳನ್ನು ಎದುರಿಸಿರುವ ದ್ರೌಪದಿ ಮುರ್ಮು ರಾಷ್ಟ್ರಪತಿ ಹುದ್ದೆಗೆ ಸಮರ್ಥರಾದವರು. ಅವರು ದೇಶದ ಮಹಾನ್ ರಾಷ್ಟ್ರಪತಿಯಾಗುತ್ತಾರೆ ಎಂದು ಮೋದಿ ತಿಳಿಸಿದ್ದರು. ಇದನ್ನೂ ಓದಿ: ಪಂಜಾಬ್ ವಿಧಾನಸಭೆಯ ಮಾಜಿ ಸ್ಪೀಕರ್ ನಿರ್ಮಲ್ ಸಿಂಗ್ ಕಹ್ಲೋನ್ ನಿಧನ

    ವಿರೋಧಪಕ್ಷದ ಅಭ್ಯರ್ಥಿಯಾಗಿ ಟಿಎಂಸಿಯ ಹಿರಿಯ ನಾಯಕ ಯಶವಂತ್ ಸಿನ್ಹಾ ಅವರ ನಾಮನಿರ್ದೇಶನ ಮಾಡಲಾಗಿದೆ. ವಿರೋಧಪಕ್ಷದ ಅಭ್ಯರ್ಥಿಯಾಗಲು ಶರದ್ ಪವಾರ್, ಗೋಪಾಲಕೃಷ್ಣ ಗಾಂಧಿ ಹಾಗೂ ಫಾರೂಕ್ ಅಬ್ದುಲ್ಲಾ ನಿರಾಕರಿಸಿದ ಬಳಿಕ ಯಶವಂತ್ ಸಿನ್ಹಾ ಕೊನೆಯದಾಗಿ ರಾಷ್ಟ್ರಪತಿ ಹುದ್ದೆಗೆ ಅಭ್ಯರ್ಥಿಯಾದರು.

    ಈ ನಡುವೆ ದ್ರೌಪದಿ ಮುರ್ಮು ಅವರಿಗೆ ಶಿವಸೇನೆಯೂ ಬೆಂಬಲ ವ್ಯಕ್ತಪಡಿಸಿದ್ದು, ಸಿನ್ಹಾ ಅವರು ಶನಿವಾರ ಮಾಹಾರಾಷ್ಟ್ರದ ಭೇಟಿಯನ್ನು ರದ್ದುಗೊಳಿಸಿದ್ದಾರೆ. ಸಿನ್ಹಾ ಅವರು ಎಂವಿಎ ಶಾಸಕರನ್ನು ಭೇಟಿಯಾಗಲು ಇಂದು ಮಹಾರಾಷ್ಟ್ರಕ್ಕೆ ತೆರಳಬೇಕಿತ್ತು. ಆದರೆ ಈ ಭೇಟಿ ಇದೀಗ ರದ್ದಾಗಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಪ.ಬಂಗಾಳದ 11 ಜಿಲ್ಲೆಗಳಲ್ಲಿ ಕಾಡುತ್ತಿದೆ ಕಪ್ಪು ಜ್ವರ ಅಥವಾ ‘ಕಾಲಾ-ಅಜರ್’ – ಲಕ್ಷಣವೇನು?

    Live Tv
    [brid partner=56869869 player=32851 video=960834 autoplay=true]

  • ರಾಷ್ಟ್ರಪತಿ ಹುದ್ದೆಗೆ ಪ್ರತಿಪಕ್ಷದ ಅಭ್ಯರ್ಥಿಯಾಗಿ ಯಶವಂತ್ ಸಿನ್ಹಾ ಹೆಸರು ಪ್ರಸ್ತಾಪ

    ರಾಷ್ಟ್ರಪತಿ ಹುದ್ದೆಗೆ ಪ್ರತಿಪಕ್ಷದ ಅಭ್ಯರ್ಥಿಯಾಗಿ ಯಶವಂತ್ ಸಿನ್ಹಾ ಹೆಸರು ಪ್ರಸ್ತಾಪ

    ನವದೆಹಲಿ: ವಿರೋಧ ಪಕ್ಷಗಳ ಜಂಟಿ ಅಭ್ಯರ್ಥಿಯಾಗಿ ಮಾಜಿ ಕೇಂದ್ರ ಸಚಿವ ಯಶವಂತ್ ಸಿನ್ಹಾ ಹೆಸರನ್ನು ಪ್ರಸ್ತಾಪಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

    ಹಿರಿಯ ಬಿಜೆಪಿ ನಾಯಕ ಮಾಜಿ ಐಎಎಸ್ ಅಧಿಕಾರಿ ಯಶವಂತ್ ಸಿನ್ಹಾ ಈ ವರ್ಷದ ಆರಂಭದಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ತೃಣಮೂಲ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದರು. ಸಿನ್ಹಾ ಮಂಗಳವಾರ ಮಾಡಿರುವ ಟ್ವೀಟ್ ರಾಷ್ಟ್ರಪತಿ ಹುದ್ದೆಗೆ ಸ್ಪರ್ಧಿಸುವ ಸುಳಿವು ನೀಡಿದೆ. ಇದನ್ನೂ ಓದಿ: MVA ಸರ್ಕಾರವನ್ನು ಅಲುಗಾಡಿಸುತ್ತಿರುವ ಏಕನಾಥ್ ಶಿಂಧೆ ಯಾರು?

    ಟ್ವೀಟ್‌ನಲ್ಲೇನಿದೆ?
    ಟಿಎಂಸಿಯಲ್ಲಿ ಮಮತಾ ಬ್ಯಾನರ್ಜಿ ಅವರು ನನಗೆ ನೀಡಿದ ಗೌರವ ಮತ್ತು ಪ್ರತಿಷ್ಠೆಗೆ ನಾನು ಆಭಾರಿಯಾಗಿದ್ದೇನೆ. ಈಗ ಒಂದು ದೊಡ್ಡ ರಾಷ್ಟ್ರೀಯ ಉದ್ದೇಶಕ್ಕಾಗಿ, ವಿರೋಧದ ಏಕತೆಗಾಗಿ ಕೆಲಸ ಮಾಡಲು ನಾನು ಪಕ್ಷದಿಂದ ದೂರ ಸರಿಯಬೇಕಾದ ಸಮಯ ಬಂದಿದೆ. ನನ್ನ ಈ ಹೆಜ್ಜೆಗೆ ಅವರು ಅನುಮೋದನೆ ನೀಡುತ್ತಾರೆ ಎಂದು ನನಗೆ ಖಾತ್ರಿಯಿದೆ ಎಂದು ಸಿನ್ಹಾ ಬರೆದಿದ್ದಾರೆ.

    ಪ್ರತಿಪಕ್ಷಗಳು ಈ ಹಿಂದೆ ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ(ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್, ನ್ಯಾಶನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಹಾಗೂ ಮಹಾತ್ಮ ಗಾಂಧಿಯವರ ಮೊಮ್ಮಗ ಗೋಪಾಲಕೃಷ್ಣ ಗಾಂಧಿ ಅವರ ಹೆಸರನ್ನು ಪ್ರಸ್ತಾಪಿಸಿತ್ತು. ಆದರೆ ಅವರೆಲ್ಲರೂ ರಾಷ್ಟ್ರಪತಿ ಹುದ್ದೆಗೆ ಸ್ಪರ್ಧಿಸಲು ನಿರಾಕರಿಸಿದ್ದರಿಂದ ಪ್ರತಿಪಕ್ಷಗಳು ಅಭ್ಯರ್ಥಿಯನ್ನು ಅಂತಿಮಗೊಳಿಸಲು ಹೆಣಗಾಡುತ್ತಿವೆ. ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ MVA ಸರ್ಕಾರ ಪತನ? – ಶೀಘ್ರವೇ ಬಿಜೆಪಿ ಅಧಿಕಾರಕ್ಕೆ

    ಜಂಟಿ ಅಭ್ಯರ್ಥಿಯನ್ನು ಅಂತಿಮಗೊಳಿಸಲು ವಿರೋಧ ಪಕ್ಷಗಳ ನಾಯಕರು ಮಂಗಳವಾರ ದೆಹಲಿಯಲ್ಲಿ ಸಭೆ ಸೇರಿದ್ದರು. ಮಹಾರಾಷ್ಟ್ರದಲ್ಲಿ ರಾಜಕೀಯ ಅಸ್ಥಿರತೆ ಇರುವುದರಿಂದ ಆ ಸಭೆ ಅನಿಶ್ಚಿತವಾಗಿದ್ದರೂ ಸಿನ್ಹಾ ಅವರು ಇದೀಗ ರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿಯಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

    Live Tv

  • ನಮ್ಮ ಜೊತೆ ಹೊಂದಾಣಿಕೆ ಮಾಡಿಕೊಳ್ಳೋದಾದ್ರೆ ನಿಮ್ಮ ಅಭ್ಯರ್ಥಿಯನ್ನ ಕಣದಿಂದ ಹಿಂದೆ ಸರಿಸಿ: JDSಗೆ ಸಿದ್ದು ಸವಾಲ್

    ನಮ್ಮ ಜೊತೆ ಹೊಂದಾಣಿಕೆ ಮಾಡಿಕೊಳ್ಳೋದಾದ್ರೆ ನಿಮ್ಮ ಅಭ್ಯರ್ಥಿಯನ್ನ ಕಣದಿಂದ ಹಿಂದೆ ಸರಿಸಿ: JDSಗೆ ಸಿದ್ದು ಸವಾಲ್

    ಧಾರವಾಡ: ರಾಜ್ಯಸಭೆ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಜೊತೆ ಜೆಡಿಎಸ್ ಒಪ್ಪಂದ ಅಥವಾ ಹೊಂದಾಣಿಕೆ ಮಾಡಿಕೊಳ್ಳುವುದಾದರೆ ಜೆಡಿಎಸ್ ತನ್ನ ಅಭ್ಯರ್ಥಿಯನ್ನು ಕಣದಿಂದ ಹಿಂದೆ ಸರಿಸಿ ನಮ್ಮ ಅಭ್ಯರ್ಥಿಗೆ ಮತ ಹಾಕಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ಪ್ರತ್ಯುತ್ತರ ನೀಡಿದರು.

    ಧಾರವಾಡದಲ್ಲಿ ಮಾತನಾಡಿದ ಅವರು, ಸಂಧಾನ ಮಾಡಿಕೊಳ್ಳುವಂತೆ ಹೆಚ್‍ಡಿಕೆ ಆಹ್ವಾನ ಮಾಡಿದ್ದಾರೆ ಎಂಬ ಸುದ್ದಿ ಇದೆ. ಜೆಡಿಎಸ್ ಅಭ್ಯರ್ಥಿಯನ್ನು ಕಣದಿಂದ ನಿವೃತ್ತಿ ಮಾಡುವುದೇ ಈಗ ಸಂಧಾನ. ಅವರು ನಮಗೆ ಮತ ಹಾಕಬೇಕು ಅದೇ ಸಂಧಾನ. ಈ ಹಿಂದೆ ದೇವೇಗೌಡರ ವಿರುದ್ಧ ನಾವು ಅಭ್ಯರ್ಥಿಯನ್ನು ಹಾಕಿರಲಿಲ್ಲ, ಅವರು ಈಗ ಯಾಕೆ ಅಭ್ಯರ್ಥಿಯನ್ನು ಹಾಕಿದ್ದಾರೆ. ಬಿಜೆಪಿಯನ್ನು ಸೋಲಿಸುವುದೇ ಗುರಿಯಾದ್ರೆ ಜೆಡಿಎಸ್‍ನವರು ನಮಗೆ ಬೆಂಬಲಕೊಡಲಿ. ನಮ್ಮ ಪಕ್ಷಕ್ಕೆ ಹೈಕಮಾಂಡ್ ಇದೆ, ಅವರ ಪಕ್ಷಕ್ಕೆ ಇಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಧೀಮಂತ ಜನ ನಾಯಕ: ಪ್ರಚಾರ ಸಮಯದಲ್ಲಿ ತಂದೆ ಸಾಧನೆಯನ್ನು ಗುಣಗಾನ ಮಾಡಿದ ವಿಜಯೇಂದ್ರ 

    ನಮ್ಮ ಹೈಕಮಾಂಡ್ ಇರೋದು ದೆಹಲಿಯಲ್ಲಿ, ಅವರ ಹೈಕಮಾಂಡ್ ಇರೋದು ಪದ್ಮನಾಭನಗರದಲ್ಲಿ. ರಾಜ್ಯದ ಉಸ್ತುವಾರಿ ಹೇಳಿದಂತೆ ಎರಡನೇ ಅಭ್ಯರ್ಥಿ ಹಾಕಿದ್ದೇವೆ. ಈಗ ಏನೂ ಆಗೋದಿಲ್ಲ, ಏನೇ ಆಗೋದಿದ್ರೂ ಮತದಾನದ ದಿನವೇ ತೀರ್ಮಾನ ಆಗುತ್ತದೆ ಎಂದರು.

    ಈ ಹಿಂದೆ ಕಾಂಗ್ರೆಸ್ ಸರ್ಕಾರ ಇದ್ದಾಗ ಸಾಹಿತಿಗಳು ಅವರ ಫಲಾನುಭವಿಗಳಾಗಿದ್ದರು ಎಂಬ ಅಡ್ಡಂಡ ಸಿ. ಕಾರ್ಯಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಪಂಡಿತಾರಾಧ್ಯ ಶ್ರೀ ನಮ್ಮ ಫಲಾನುಭವಿನಾ ಎಂದು ಪ್ರಶ್ನಿಸಿದರು. ಪಠ್ಯಕ್ರಮದಲ್ಲಿ ಬಸವಣ್ಣನ ವಿಚಾರವನ್ನು ತಿರುಚಲಾಗಿದೆ. ಅಂಬೇಡ್ಕರ್ ಸೇರಿದಂತೆ ಭಗತ್ ಸಿಂಗ್ ಹಾಗೂ ಕುವೆಂಪು ಅವರ ವಿಚಾರವನ್ನು ತಿರುಚಲಾಗಿದೆ. ಚರಿತ್ರೆಯಲ್ಲಿ ಏನಿದೆಯೋ ಅದನ್ನು ಮುಚ್ಚಿಟ್ಟು ತಿರುಚಲಾಗಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ:  ಮಂತ್ರಿ, ಮುಖ್ಯಮಂತ್ರಿ ಯಾವುದನ್ನೂ ತಲೆಯಲ್ಲಿ ಇಟ್ಟುಕೊಂಡು ಕೆಲಸ ಮಾಡ್ತಿಲ್ಲ: ವಿಜಯೇಂದ್ರ

    ಮಕ್ಕಳಿಗೆ ವೈಚಾರಿಕತೆ ತಿಳಿಸಬೇಕು, ಅಂಬೇಡ್ಕರ್ ಸಂವಿಧಾನ ಶಿಲ್ಪಿ ಅನ್ನೋದನ್ನೇ ತೆಗೆದುಹಾಕಲಾಗಿದೆ. ಬಸವಣ್ಣ ವೈದಿಕ ಧರ್ಮದ ವಿರುದ್ಧ ಹೋರಾಡಿದ್ದರು. ಅದನ್ನೂ ತಿರುಚಲಾಗಿದೆ. 10 ದಿನದಲ್ಲಿ ಪಠ್ಯ ಪರಿಷ್ಕರಣೆ ಆಗಬೇಕು ಎಂಬುದಕ್ಕೆ ನನ್ನ ಬೆಂಬಲವೂ ಇದೆ. ರೋಹಿತ್ ಚಕ್ರತೀರ್ಥ ಮಾಡಿರೋದನ್ನು ಸಂಪೂರ್ಣ ಹಿಂಪಡೆಯಬೇಕು ಎಂದು ಆಗ್ರಹಿಸಿದರು.

  • ವಿಧಾನ ಪರಿಷತ್ 7 ಸ್ಥಾನಗಳಿಗೆ ಅವಿರೋಧ ಆಯ್ಕೆ – ಅಧಿಕೃತ ಘೋಷಣೆ

    ವಿಧಾನ ಪರಿಷತ್ 7 ಸ್ಥಾನಗಳಿಗೆ ಅವಿರೋಧ ಆಯ್ಕೆ – ಅಧಿಕೃತ ಘೋಷಣೆ

    ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್‌ನ 7 ಸ್ಥಾನಗಳಿಗೆ ನಿಗಧಿಯಾಗಿದ್ದ ಚುನಾವಣೆಗೆ ಸ್ಪರ್ಧಿಸಿದ್ದ 7 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಹಾಗೂ ರಾಜ್ಯ ವಿಧಾನಸಭೆಯ ಕಾರ್ಯದರ್ಶಿ ವಿಶಾಲಾಕ್ಷಿ ಶುಕ್ರವಾರ ಘೋಷಿಸಿದರು.

    ಮೇ 24 ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿತ್ತು. ಮೇ 25 ರಂದು ಪರಿಶೀಲನೆ ಹಾಗೂ ಮೇ 27 ನಾಮಪತ್ರ ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿತ್ತು. 7 ಸ್ಥಾನಗಳಿಗೆ 7 ಅಭ್ಯರ್ಥಿಗಳು ಮಾತ್ರ ಅಂತಿಮ ಕಣದಲ್ಲಿ ಉಳಿದಿದ್ದ ಕಾರಣಕ್ಕೆ 7 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇದನ್ನೂ ಓದಿ: ಯುದ್ಧ ನೌಕೆಗಳು ತಯಾರಾಗೋ ಮೂಲಕ ಮೋದಿ ಆತ್ಮನಿರ್ಭರ್ ಅಭಿಯಾನಕ್ಕೆ ಬಲ ಬಂದಿದೆ: ರಾಜನಾಥ್ ಸಿಂಗ್

    ಭಾರತೀಯ ಜನತಾ ಪಕ್ಷದಿಂದ ಸ್ಪರ್ಧಿಸಿದ್ದ ಸವದಿ ಲಕ್ಷ್ಮಣ, ಟಿ ನಾರಾಯಣ ಸ್ವಾಮಿ, ಹೇಮಾಲತಾ ನಾಯಕ್ ಹಾಗೂ ಕೇಶವ್ ಪ್ರಸಾದ್ ಎಸ್, ಭಾರತೀಯ ಕಾಂಗ್ರೆಸ್ ಪಕ್ಷದಿಂದ ಕೆ ಅಬ್ದುಲ್ ಜಬ್ಬಾರ್ ಹಾಗೂ ಎಂ ನಾಗರಾಜು, ಜೆಡಿಎಸ್ ಪಕ್ಷದಿಂದ ಶರವಣನ್ ಟಿ ಅವಿರೋಧವಾಗಿ ಆಯ್ಕೆಯಾದ ಅಭ್ಯರ್ಥಿಗಳಾಗಿದ್ದಾರೆ. ಇದನ್ನೂ ಓದಿ: ಐತಿಹಾಸಿಕ ಮುರುಘಾ ಮಠಕ್ಕೆ ನೂತನ ಉತ್ತರಾಧಿಕಾರಿಯಾಗಿ ಬಸವಾದಿತ್ಯ ಸ್ವಾಮೀಜಿ ಆಯ್ಕೆ

    ಇಂದು ನಾಮಪತ್ರ ಹಿಂಪಡೆಯುವ ಸಮಯ ಮೀರಿದ ನಂತರ ನಾಮಪತ್ರ ಸಲ್ಲಿಸಿದ್ದ 7 ಅಭ್ಯರ್ಥಿಗಳಿಗೆ ಚುನಾವಣಾಧಿಕಾರಿ ಹಾಗೂ ರಾಜ್ಯ ವಿಧಾನಸಭೆಯ ಕಾರ್ಯದರ್ಶಿ ವಿಶಾಲಾಕ್ಷಿ ಅವರು ಅವಿರೋಧ ಆಯ್ಕೆಯ ಪ್ರಮಾಣ ಪತ್ರಗಳನ್ನು ವಿತರಿಸಿದರು.

  • 75 ಲಕ್ಷ ಲಂಚ ಕೊಟ್ಟಿದ್ದೇನೆ, ಬ್ಲೂಟೂತ್‍ನಲ್ಲಿ ಪರೀಕ್ಷೆ ಬರೆದಿದ್ದೇನೆ – ತನಿಖೆಗೆ ಡಿಜಿಗೆ ಪತ್ರ ಬರೆದ ಅಭ್ಯರ್ಥಿ

    75 ಲಕ್ಷ ಲಂಚ ಕೊಟ್ಟಿದ್ದೇನೆ, ಬ್ಲೂಟೂತ್‍ನಲ್ಲಿ ಪರೀಕ್ಷೆ ಬರೆದಿದ್ದೇನೆ – ತನಿಖೆಗೆ ಡಿಜಿಗೆ ಪತ್ರ ಬರೆದ ಅಭ್ಯರ್ಥಿ

    ಬೆಂಗಳೂರು: ನಾನು ಪಿಎಸ್‍ಐಗೆ ಆಯ್ಕೆಯಾಗಲು 75 ಲಕ್ಷ ಕೊಟ್ಟಿದ್ದೀನಿ ಅಂತ ಅಭ್ಯರ್ಥಿಯೊಬ್ಬ ಡಿಜಿ ಕಚೇರಿಗೆ ಪತ್ರ ಬರೆದಿದ್ದಾನೆ. ಅಲ್ಲದೆ ಲಂಚ ನೀಡಿದ ಅಭ್ಯರ್ಥಿಯೇ ತನಿಖೆ ನಡೆಸುವಂತೆ ಮನವಿ ಮಾಡಿಕೊಂಡಿದ್ದಾನೆ.

    ಹೌದು. ದಿನಾ ಬೆಳಗಾದ್ರೆ ಪಿಎಸ್‍ಐ ಅಕ್ರಮ ಕೇಸ್‍ನಲ್ಲಿ ಒಂದಿಲ್ಲೊಂದು ಬೆಳವಣಿಗೆ ನಡೀತಾನೇ ಇದೆ. ದಿನಕ್ಕೊಬ್ಬ ಅಧಿಕಾರಿ ಅರೆಸ್ಟ್ ಆಗ್ತಾನೇ ಇದ್ದಾರೆ. ಆದರೆ ಇಲ್ಲೊಂದು ಅಚ್ಚರಿ ಬೆಳವಣಿಗೆ ನಡೆದಿದೆ. ಪಿಎಸ್‍ಐ ಆಗಿ ಆಯ್ಕೆಯಾದ ಅಭ್ಯರ್ಥಿಯೊಬ್ಬ ಡಿಜಿ & ಐಜಿಪಿ ಪ್ರವೀಣ್ ಸೂಧ್‍ಗೆ ಒಂದು ಪತ್ರ ಬರೆದಿದ್ದಾರೆ. ನಾನೂ ಅಕ್ರಮದಲ್ಲಿ ಭಾಗಿಯಾಗಿದ್ದೀನಿ. ತನಿಖೆಗೆ ಸಿದ್ಧ ಅಂತ ತಿಳಿಸಿದ್ದಾರೆ.

    ಪತ್ರದಲ್ಲಿ ಅಕ್ರಮದ ಬಗ್ಗೆ ಸಾಕ್ಷಿ ಸಮೇತ ಕಂಪ್ಲೀಟ್ ಮಾಹಿತಿ ನೀಡಿದ್ದಾರೆ. ನಾನು ವಿಜಯನಗರದ ಪ್ರಿನ್ಸಿಪಾಲ್ ಒಬ್ಬರಿಗೆ 75 ಲಕ್ಷ ಹಣ ನೀಡಿದ್ದೀನಿ. ಬ್ಲೂಟೂತ್ ಬಳಸಿ ಎಕ್ಸಾಂನಲ್ಲಿ ಪಾಸ್ ಆಗಿದ್ದೇನೆ. ಈಗ ನನಗೆ ಮಾಡಿದ್ದು ತಪ್ಪು ಅನಿಸಿದೆ. ಹಾಗಾಗಿ ನಾನು ತನಿಖೆಗೆ ಒಳಗಾಗುತ್ತೇನೆ. ಅಲ್ಲದೇ ಪ್ರಿನ್ಸಿಪಾಲ್ ಒಬ್ಬರ ಜೊತೆ ವಾಟ್ಸಾಪ್ ಚಾಟ್ ಮಾಡಿದ್ದು ಕೂಡ ನಿಮಗೆ ಕಳುಹಿಸಿ ಕೊಟ್ಟಿದ್ದೀನಿ. ಅಕ್ರಮ ಮಾಡಿದ ಆರೋಪಿ ಬಂಧಿಸಿ ಎಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಶ್ರೀಲಂಕಾದಲ್ಲಿ ಲೀಟರ್‌ ಪೆಟ್ರೋಲ್‌ಗೆ 420 ರೂ., ಡೀಸೆಲ್‌ಗೆ 400 ರೂ.

    ವಾಟ್ಸಾಪ್ ಚಾಟ್‍ನಲ್ಲಿ ಪಿಎಸ್‍ಐ ಡೀಲ್ ಖುಲ್ಲಂ ಖುಲ್ಲಾ: ಡಿಜಿಪಿಗೆ ಪತ್ರ ಬರೆದಿರುವ ಅನಾಮಧೇಯ ತನ್ನ ವಾಟ್ಸಾಪ್ ಚಾಟಿಂಗ್ ಸ್ಕ್ರೀನ್ ಶಾಟ್‍ಗಳನ್ನು ಟ್ಯಾಗ್ ಮಾಡಿದ್ದಾರೆ. ಯಾವಾಗ ಯಾರನ್ನ ಭೇಟಿ ಮಾಡಿದ್ದೆ..? ಎಲ್ಲಿ ಹಣ ನೀಡಬೇಕು..? ಯಾರು ಹಣ ತೆಗೆದುಕೊಂಡು ಹೋಗ್ತಾರೆ…? ಬ್ಲೂಟೂತ್ ಹೇಗೆ ಬಳಸಬೇಕು…? ಎಂಬುದನ್ನೆಲ್ಲಾ ಚಾಟ್ ಮಾಡಿದ್ದಾನೆ. ಚಾಟಿಂಗ್‍ನಲ್ಲಿ ಒಂದಿಷ್ಟು ಸತ್ಯಾಂಶಗಳು ಕೂಡ ಇದ್ದು ಪತ್ರದ ಬಗ್ಗೆ ಕುತೂಹಲ ಮೂಡಿದೆ.

    ಪತ್ರ ಬರೆದವರ ಬೆನ್ನು ಬಿದ್ದ ಸಿಐಡಿ: ಈಗಾಗಲೇ ಸಿಐಡಿ ಅಧಿಕಾರಿಗಳು ಪತ್ರದ ತನಿಖೆ ಆರಂಭಿಸಿದ್ದಾರೆ. ಆದರೆ ಯುವಕ ತನ್ನ ಫೋನ್ ನಂಬರ್, ವಿಳಾಸ ಸುಳ್ಳು ಹೇಳಿರೋದು ತನಿಖೆಯಲ್ಲಿ ಗೊತ್ತಾಗಿದೆ. ಆದರೂ ಪೊಲೀಸರು ಸತ್ಯಾಸತ್ಯತೆ ತಿಳಿಯಲು ಮುಂದಾಗಿದ್ದಾರೆ. ಒಟ್ಟಿನಲ್ಲಿ ಒಂದು ದಿಕ್ಕಿನಲ್ಲಿ ಸಾಗುತ್ತಾ ಇದ್ದ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಾ ಇದ್ದು ಅಭ್ಯರ್ಥಿ ಒಬ್ಬ ಬರೆದ ಪತ್ರಕ್ಕೆ ಸಿಐಡಿ ಬಳಿ ಸಾಕ್ಷ್ಯ ಸಿಗುತ್ತಾ..? ಹಾಗೆಯೇ ಪ್ರಿನ್ಸಿಪಾಲ್ ವಿಚಾರಣೆ ನಡೆಸ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

     

  • ಮೌಸ್ ಟ್ರ್ಯಾಪ್ ಹಿಡಿದು ಜನಜಾಗೃತಿಗೆ ಮಂದಾದ ಅಭ್ಯರ್ಥಿ

    ಮೌಸ್ ಟ್ರ್ಯಾಪ್ ಹಿಡಿದು ಜನಜಾಗೃತಿಗೆ ಮಂದಾದ ಅಭ್ಯರ್ಥಿ

    ಚೆನ್ನೈ: 2000 ರೂ. ಹಣ ಪಡೆದು ನೀವು ಮತ ಹಾಕಲು ಹೋಗುತ್ತೀರಾ? ಹಾಗಿದ್ದರೆ ನೀವು ಹಣದ ಆಸೆಗೆ ಮತ ಹಾಕಿ 5 ವರ್ಷಗಳ ಕಾಲ ಮೌಸ್  ಟ್ರ್ಯಾಪ್‌ಲ್ಲಿ ಸಿಲುಕಿದಂತೆ ಎಂದು ವಿಶೇಷವಾಗಿ ಕರೆ ನೀಡಿ ಅಭ್ಯರ್ಥಿಯೊಬ್ಬರು ಜನ ಜಾಗೃತಿ ಮೂಡಿಸಿದ್ದಾರೆ.

    ಮಧುರೈನ ಅಭ್ಯರ್ಥಿ ಜಾಫರ್ ಶೆರೀಫ್ ತಮಿಳುನಾಡು ನಗರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ನಾಮಪತ್ರ ಸಲ್ಲಿಸಲು ತೆರಳಿದ್ದಾಗ ಕೈಯಲ್ಲಿ ಮೌಸ್ ಟ್ರ್ಯಾಪ್ ಹಾಗೂ ಅದರ ಮೇಲೆ 2000 ರೂ. ನೋಟು ಹಿಡಿದುಕೊಂಡು ಯಾವುದೇ ಆಮಿಷಗಳಿಗೆ ಒಳಗಾಗದೇ ಮತ ಹಾಕಿ ಎಂದು ವಿಶೇಷ ಕರೆ ನೀಡಿದ್ದಾರೆ. ಇದನ್ನೂ ಓದಿ: ಹೆಚ್‌ಐವಿ ಪೀಡಿತ ಮಹಿಳೆಯ ಕಿಡ್ನಿಯಿಂದ 10 ಕೆಜಿ ಗೆಡ್ಡೆ ತೆಗೆದ ದೆಹಲಿ ವೈದ್ಯರು

    BRIBE

    ಮಧುರೈನ ವಾರ್ಡ್ ನಂ.3 ರಿಂದ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿರುವ ಜಾಫರ್ ತಮಿಳುನಾಡಿನಲ್ಲಿ ಹಣ ಪಡೆದು ಮತ ಹಾಕುವ ವಿಚಾರದಲ್ಲಿ ಜಾಗೃತಿ ಮೂಡಿಸಲು ಮೌಸ್ ಟ್ರ್ಯಾಪ್ ತಂದಿರುವುದಾಗಿ ತಿಳಿಸಿದ್ದಾರೆ. ರಾಜ್ಯದಲ್ಲಿ ಮತಕ್ಕಾಗಿ ಹಣದ ದಂಧೆ ವ್ಯಾಪಕವಾಗಿ ನಡೆಯುತ್ತಿದೆ. ಹಣ ಪಡೆದು ಮತ ನೀಡುವುದು 5 ವರ್ಷಗಳ ಕಾಲ ಬಲೆಯಲ್ಲಿ ಸಿಲುಕಿಕೊಂಡಂತೆ ಎಂದು ಜನರಿಗೆ ಮನವರಿಕೆ ಮಾಡಲು ಪ್ರಯತ್ನಿಸಿದ್ದಾರೆ.

    ನಾನು ನನ್ನು ವಾರ್ಡ್ ಅನ್ನು ಸ್ವಚ್ಛತೆಯ ಮಾದರಿಯಾಗಿ ಪರಿವರ್ತಿಸಲು ಬಯಸುತ್ತೇನೆ. ಹಣದ ಆಸೆಗೆ ಜನರು ಮತ ಹಾಕಿ ಹೇಗೆ ಸಿಕ್ಕಿಕೊಳ್ಳುತ್ತಾರೆ ಎಂದು ತಿಳಿಸಲು ನಾನು ಮೌಸ್ ಟ್ರ್ಯಾಪ್ ಬಳಸುತ್ತಿದ್ದೇನೆ. ನಾನು ಉತ್ತಮ ಉದ್ಯೋಗ ಹೊಂದಿದ್ದೇನೆ ಹಾಗೂ ಒಳ್ಳೆಯ ಗಳಿಕೆಯೂ ಇದೆ. ಆದರೆ ಇದೀಗ ನಾನು ಒಬ್ಬ ವಿದ್ಯಾವಂತ ನಾಗರಿಕನಾಗಿ ದೇಶಕ್ಕೆ ಹಿಂದಿರುಗಿಸುವ ಸಮಯ ಬಂದಿದೆ. ಅದಕ್ಕಾಗಿ ನಾನು ಸ್ಪರ್ಧಿಸುತ್ತಿದ್ದೇನೆ ಎಂದು ಜಾಫರ್ ಹೇಳಿದ್ದಾರೆ. ಇದನ್ನೂ ಓದಿ: ಕಾರಿನ ಹೆಡ್‍ಲೈಟ್ ಬೆಳಕಿನಲ್ಲಿ ಪರೀಕ್ಷೆ ಬರೆದ 400 ವಿದ್ಯಾರ್ಥಿಗಳು

    ತಮಿಳುನಾಡು ನಗರ ಸ್ಥಳೀಯ ಸಂಸ್ಥೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಫೆಬ್ರವರಿ 4ರ ವರೆಗೆ ಸಮಯವಿದೆ. ಫೆಬ್ರವರಿ 19ರಂದು ಚುನಾವಣೆ ನಡೆಯಲಿದ್ದು, 22ರಂದು ಮತ ಎಣಿಕೆ ನಡೆಯಲಿದೆ.