Tag: candidates

  • ಪಕ್ಷದ ಅಭ್ಯರ್ಥಿಗಳನ್ನು ಪರಿಚಯಿಸಿದ ಉಪೇಂದ್ರ

    ಪಕ್ಷದ ಅಭ್ಯರ್ಥಿಗಳನ್ನು ಪರಿಚಯಿಸಿದ ಉಪೇಂದ್ರ

    ಬೆಂಗಳೂರು: ನಟ, ರಾಜಕಾರಣಿ ಉಪೇಂದ್ರ ಅವರ ಉತ್ತಮ ಪ್ರಜಾಕೀಯ ಪಕ್ಷದಿಂದ (ಯುಪಿಪಿ) ಅಭ್ಯರ್ಥಿಗಳನ್ನು ಲೋಕಸಭಾ ಚುನಾವಣೆಯ ಕಣಕ್ಕೆ ಇಳಿಸಿದ್ದಾರೆ.

    ಬೆಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ಉಪೇಂದ್ರ ಅವರು ಸುದ್ದಿಗೋಷ್ಠಿ ನಡೆಸಿದ್ದರು. ಇದಕ್ಕೂ ಯುಪಿಪಿ ಅಭ್ಯರ್ಥಿಗಳನ್ನು ವಿಭಿನ್ನವಾಗಿ ಪರಿಚಯ ಮಾಡಿದರು. ಪ್ರಜಾಪ್ರಭುತ್ವದಲ್ಲಿ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಜವಾಬ್ದಾರಿ ತಿಳಿಸುವ ಸಣ್ಣ ಗೀತನಾಟಕದ ಮೂಲಕ ಉಪೇಂದ್ರ ತಮ್ಮ ಪಾರ್ಟಿಯ ಅಭ್ಯರ್ಥಿಗಳನ್ನು ಪರಿಚಯಿಸಿದರು.

    ಲೋಕಸಭಾ ಚುನಾವಣೆಯ ಮೊದಲ ಹಂತದಲ್ಲಿ ಯುಪಿಪಿಯಿಂದ 14 ಜನ ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದಾರೆ. ಉಪೇಂದ್ರ ಅವರು ಬಿಡುಗಡೆ ಮಾಡಿದ ಪಟ್ಟಿಯ ಪ್ರಕಾರ, ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಸುರೇಶ್ ಕುಂದರ್, ಹಾಸನದಿಂದ ಚಂದ್ರೇಗೌಡ ಎಚ್.ಎಂ, ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ವಿಜಯ್ ಶ್ರೀನಿವಾಸ್, ಚಿತ್ರದುರ್ಗದಿಂದ ದೇವೇಂದ್ರಪ್ಪ ಕಣಕ್ಕೆ ಇಳಿದಿದ್ದಾರೆ.

    ತುಮಕೂರು ಕ್ಷೇತ್ರದಿಂದ ಛಾಯಾ ರಾಜಾಶಂಕರ್ ಸ್ಪರ್ಧಿಸಿದರೆ, ಮಂಡ್ಯದಿಂದ ದಿವಾಕರ್ ಸಿ.ಪಿ.ಗೌಡ, ಮೈಸೂರು ಕ್ಷೇತ್ರದಿಂದ ಆಶಾರಾಣಿ ವಿ, ಚಾಮರಾಜನಗರದಿಂದ ನಾಗರಾಜು.ಎಂ ಚುನಾವಣಾ ಕಣಕ್ಕೆ ಇಳಿದಿದ್ದಾರೆ. ಇತ್ತ ಬೆಂಗಳೂರು ಗ್ರಾಮಾಂತರದಿಂದ ಮಂಜುನಾಥ.ಎಂ, ಬೆಂಗಳೂರು ಉತ್ತರದಿಂದ ಸಂತೋಷ್.ಎಂ, ಬೆಂಗಳೂರು ಕೇಂದ್ರದಿಂದ ಶ್ರೀದೇವಿ ಮೆಳ್ಳೇಗಟ್ಟಿ, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಅಹೊರಾತ್ರ, ಚಿಕ್ಕಬಳ್ಳಾಪುರನಿಂದ ಮುನಿರಾಜು.ಜಿ, ಕೋಲಾರದಿಂದ ರಾಮಾಂಜಿನಪ್ಪ.ಆರ್ ಸ್ಪರ್ಧಿಸುತ್ತಿದ್ದಾರೆ.

    ಲೋಕಸಭಾ ಚುನಾವಣೆಯ ಕಣಕ್ಕೆ ಇಳಿಯುವ ವಿಚಾರವಾಗಿ ಮಾತನಾಡಿದ ಉಪೇಂದ್ರ ಅವರು, ಈ ಚುನಾವಣೆಗೆ ಅಭ್ಯರ್ಥಿಗಳನ್ನು ತಯಾರು ಮಾಡುವ ಕೆಲಸಗಳಿದ್ದವು. ಹೀಗಾಗಿ ನಾನು ಸ್ಪರ್ಧೆ ಮಾಡುತ್ತಿಲ್ಲ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಬಗ್ಗೆ ಯೋಚಿಸುತ್ತಿರುವೆ ಎಂದು ತಿಳಿಸಿದರು.

    ಚುನಾವಣಾ ಪ್ರಣಾಳಿಕೆಯನ್ನು ನಾನು ನಂಬುತ್ತೇನೆ. ಪ್ರಣಾಳಿಕೆಯು ಚುನಾವಣಾ ಆಯೋಗದಿಂದ ರಿಜಿಸ್ಟರ್ ಆಗಬೇಕು. ಅದಕ್ಕೆ ಸುಪ್ರೀಂಕೋರ್ಟ್ ಒಪ್ಪಿಕೊಳ್ಳಬೇಕು. ಪ್ರಣಾಳಿಕೆಯನ್ನು ಎಲ್ಲರೂ ಕೊಡುತ್ತಾರೆ. ಆದರೆ ಎಷ್ಟು ಭರವಸೆ ಈಡೇರಿಸಿದ್ದಾರೆ ಅಂತ ಯಾರಾದ್ರೂ ಪರಿಶೀಲನೆ ಮಾಡುತ್ತಾರಾ? ನನ್ನ ಥಿಯರಿಗಳು ಖಂಡಿತಾ ಜನರಿಗೆ ಅರ್ಥ ಆಗುತ್ತವೆ ಎಂದು ಹೇಳಿದರು.

  • ಸುಮಲತಾಗೆ ಬಿಗ್ ಶಾಕ್ ಕೊಟ್ಟ ದಳಪತಿಗಳು- ಮಂಡ್ಯದಲ್ಲಿ ಒಂದೇ ಹೆಸರಿನ 4 ಮಂದಿ ಸ್ಪರ್ಧೆ

    ಸುಮಲತಾಗೆ ಬಿಗ್ ಶಾಕ್ ಕೊಟ್ಟ ದಳಪತಿಗಳು- ಮಂಡ್ಯದಲ್ಲಿ ಒಂದೇ ಹೆಸರಿನ 4 ಮಂದಿ ಸ್ಪರ್ಧೆ

    ಮಂಡ್ಯ: ದಿನ ದಿನಕ್ಕೆ ಮಂಡ್ಯ ಲೋಕಸಭಾ ಕ್ಷೇತ್ರ ರಂಗೇರುತ್ತಲೇ ಇದೆ. ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹಾಗೂ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ನಡುವೆ ಭಾರೀ ಸ್ಪರ್ಧೆ ನಡೆಯುತ್ತಿದೆ. ಈ ನಡುವೆ ಇದೀಗ ಸುಮಲತಾ ಎಂಬ ಹೆಸರಿನ ನಾಲ್ಕು ಅಭ್ಯರ್ಥಿಗಳು ಮಂಡ್ಯ ಚುನಾವಣೆ ಕಣದಲ್ಲಿದ್ದಾರೆ.

    ಲೋಕಸಭೆ ಚುನಾವಣೆ ದಿನಾಂಕ ನಿಗದಿಯಾದ ದಿನದಿಂದಲೂ ಮಂಡ್ಯ ಕ್ಷೇತ್ರ ಪ್ರತಿ ದಿನ ಸದ್ದು ಮಾಡುತ್ತಿದೆ. ಹಾಗೆಯೇ ಚುನಾವಣಾ ಅಭ್ಯರ್ಥಿಗಳ ಹೆಸರಿನಿಂದ ಮಂಡ್ಯ ಸುದ್ದಿಯಾಗಿದೆ. ಹೌದು, ಮಂಡ್ಯ ಕ್ಷೇತ್ರದಲ್ಲಿ ಈ ಬಾರಿ ಒಂದೇ ಹೆಸರಿನ 4 ಮಂದಿ ಸ್ಪರ್ಧೆ ಮಾಡುತ್ತಿದ್ದಾರೆ. ಅದರಲ್ಲೂ ವಿಶೇಷವೇನೆಂದರೆ ಸುಮಲತಾ ಎನ್ನುವ ಹೆಸರಿನವರೇ ಸ್ಪರ್ಧೆ ಮಾಡುತ್ತಿದ್ದಾರೆ.

    ಸುಮಲತಾ ಹೆಸರಿನ ಅಭ್ಯರ್ಥಿಗಳು:
    1. ಸುಮಲತಾ ಅಂಬರೀಶ್
    2. ಕೆಆರ್ ಪೇಟೆ ತಾಲೂಕಿನ ಗೊರವಿ ಗ್ರಾಮದ ಎಂ.ಸುಮಲತಾ
    3. ರಾಮನಗರ ಜಿಲ್ಲೆಯ ಕನಕಪುರದ ಪಿ.ಸುಮಲತಾ
    4. ಶ್ರೀರಂಗಪಟ್ಟಣ ತಾಲೂಕಿನ, ಟಿಎಂ ಹೊಸೂರು ಗ್ರಾಮದ ಸುಮಲತಾ

    ಮತದಾರರಲ್ಲಿ ಗೊಂದಲ ಸೃಷ್ಟಿ ಮಾಡೋಕೆ ಸುಮಲತಾ ಎಂಬ ಹೆಸರಿನ ಮೂರು ಮಂದಿಯನ್ನು ಕಣಕ್ಕಿಳಿಸಲಾಗಿದೆ ಎಂಬ ಮಾತುಗಳು ಮಂಡ್ಯದಲ್ಲಿ ಕೇಳಬರತೊಡಗಿವೆ. ಇದರಿಂದ ಸುಮಲತಾ ಅಂಬರೀಶ್ ಅವರಿಗೆ ಬೀಳುವ ಮತಗಳು ವಿಭಜನೆಯಾಗಿ, ಅವರನ್ನು ಚುನಾವಣೆಯಲ್ಲಿ ಸೋಲಿಸಲು ಈ ತಂತ್ರ ಮಾಡಲಾಗಿದೆ ಎನ್ನಲಾಗುತ್ತಿದೆ.

    ಈ ಬಾರಿ ಮಂಡ್ಯ ಕ್ಷೇತ್ರದತ್ತ ಇಡೀ ರಾಜ್ಯವೇ ನೋಡುತ್ತಿದೆ. ಮಂಡ್ಯದಲ್ಲಿ ಸಿಎಂ ಪುತ್ರ ನಿಖಿಲ್ ಕುಮಾರಸ್ವಾಮಿ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಸ್ಪರ್ಧೆ ಮಾಡಿದ್ದಾರೆ.

  • ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಔಟ್ – ಯಾವ ಕ್ಷೇತ್ರದಿಂದ ಯಾರು ಸ್ಪರ್ಧೆ?

    ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಔಟ್ – ಯಾವ ಕ್ಷೇತ್ರದಿಂದ ಯಾರು ಸ್ಪರ್ಧೆ?

    ನವದೆಹಲಿ: ಮೂರು ಬಾರಿ ಮುಂದೂಡಿಕೆಯಾಗಿದ್ದ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆ ಇಂದು ನಡೆಯಿತು. ನವದೆಹಲಿಯ ಸೋನಿಯಾ ಗಾಂಧಿ ನಿವಾಸದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ಸಭೆ ನಡೆಸಲಾಯಿತು.

    ರಾಜ್ಯದಿಂದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮಾಜಿ ಸಿಎಂ ಸಿದ್ದರಾಮಯ್ಯ ಉಸ್ತುವಾರಿ ಕೆ.ಸಿ ವೇಣುಗೋಪಾಲ್ ಸಭೆಯಲ್ಲಿ ಭಾಗವಹಿಸಿದರು. ಸಭೆಯಲ್ಲಿ ರಾಜ್ಯದ ಇಪ್ಪತ್ತು ಕ್ಷೇತ್ರಗಳಿಗೆ ಟಿಕೆಟ್ ನೀಡುವ ಬಗ್ಗೆ ಚರ್ಚೆ ನಡೆಸಲಾಯಿತು.

    ಗುರುವಾರ ತಡ ರಾತ್ರಿಯವರೆಗೂ ಸಭೆ ನಡೆಸಿ ರಾಜ್ಯ ನಾಯಕರು ಅಂತಿಮ ಮಾಡಿದ ಪಟ್ಟಿಯನ್ನು ಸಿಇಸಿ ಸಭೆಯಲ್ಲಿ ಇಡಲಾಗಿತ್ತು. ಈ ವೇಳೆ ತುಮಕೂರು ಹೊರತುಪಡಿಸಿ ಹಾಲಿ ಎಲ್ಲ ಸಂಸದರಿಗೂ ಟಿಕೆಟ್ ನೀಡುವ ಸಂಬಂಧ ಒಮ್ಮತದ ನಿರ್ಧಾರ ತೆಗೆದುಕೊಳ್ಳಲಾಯಿತು.

    ಮುಸ್ಲಿಂ ಸಮುದಾಯಕ್ಕೆ ಎರಡು ಕ್ಷೇತ್ರಗಳನ್ನು ಬಿಟ್ಟು ಕೊಡಬೇಕೆಂಬ ಮಾತು ಕೇಳಿ ಬಂತು. ಬೆಂಗಳೂರು ಸೆಂಟ್ರಲ್, ಧಾರವಾಡ ಅಥವಾ ಬೀದರ್ ನಿಂದ ಟಿಕೆಟ್ ನೀಡಬೇಕು ಎನ್ನುವ ವಿಚಾರದ ಬಗ್ಗೆ ಚರ್ಚೆ ನಡೆಯಿತು.

    ಬೀದರ್ ನಲ್ಲಿ ಈಶ್ವರ್ ಖಂಡ್ರೆಗೆ ಟಿಕೆಟ್ ಸಿಗುವುದು ಬಹುತೇಕ ಖಚಿತ ಎನ್ನಲಾಗಿದ್ದು ಹುಬ್ಬಳ್ಳಿ- ಧಾರವಾಡ ಹಾಗೂ ಬೆಂಗಳೂರು ಸೆಂಟ್ರಲ್ ನ ನಿರ್ಧಾರ ನಿರ್ಧಾರ ತೆಗೆದುಕೊಳ್ಳುವಂತೆ ರಾಹುಲ್ ಗಾಂಧಿಗೆ ರಾಜ್ಯ ನಾಯಕರು ಮನವಿ ಮಾಡಿದರು. ಧಾರವಾಡ ಕಟ್ಟಡ ದುರಂತ ಹಿನ್ನೆಲೆಯಲ್ಲಿ ಟಿಕೆಟ್ ಆಕಾಂಕ್ಷಿ ವಿನಯ್ ಕುಲಕರ್ಣಿಗೆ ಟಿಕೆಟ್ ನೀಡದಿರಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದೆ.

    ಫೈನಲ್ ಆಗಿರುವ ಕಾಂಗ್ರೆಸ್ ಅಭ್ಯರ್ಥಿಗಳು
    ಬಾಗಲಕೋಟೆ – ವೀಣಾ ಕಾಶಪ್ಪನವರ್
    ಬೀದರ್ – ಈಶ್ವರ್ ಖಂಡ್ರೆ
    ಹಾವೇರಿ – ಡಿಆರ್ ಪಾಟೀಲ್

    ಬೆಂಗಳೂರು ಗ್ರಾಮಾಂತರ – ಡಿ.ಕೆ.ಸುರೇಶ್
    ಕಲ್ಬುರ್ಗಿ – ಮಲ್ಲಿಕಾರ್ಜುನ್ ಖರ್ಗೆ
    ಕೋಲಾರ – ಕೆ.ಹೆಚ್.ಮುನಿಯಪ್ಪ
    ಚಿಕ್ಕಬಳ್ಳಾಪುರ – ವೀರಪ್ಪ ಮೊಯ್ಲಿ

    ಚಾಮರಾಜನಗರ – ಧ್ರುವನಾರಾಯಣ್
    ಚಿತ್ರದುರ್ಗ – ಬಿ.ಎನ್.ಚಂದ್ರಪ್ಪ
    ರಾಯಚೂರು- ಬಿ.ವಿ.ನಾಯಕ್
    ಬಳ್ಳಾರಿ – ಉಗ್ರಪ್ಪ
    ಚಿಕ್ಕೋಡಿ – ಪ್ರಕಾಶ್ ಹುಕ್ಕೇರಿ

    ಕಾಂಗ್ರೆಸ್ ಸಂಭಾವ್ಯ ಪಟ್ಟಿ
    ದಕ್ಷಿಣ ಕನ್ನಡ – ವಿನಯ್ ಕುಮಾರ್ ಸೊರಕೆ
    ಹುಬ್ಬಳ್ಳಿ – ಧಾರವಾಡ – ಶಾಕಿರ್ ಸನದಿ / ಸದಾನಂದ ಡಂಗನವರ್
    ಬೆಂಗಳೂರು ಸೆಂಟ್ರಲ್ – ರಿಜ್ವಾನ್ ಅರ್ಷದ್
    ಮೈಸೂರು – ವಿಜಯಶಂಕರ್
    ಕೊಪ್ಪಳ – ರಾಜಶೇಖರ್ ಹಿಟ್ನಾಳ್
    ದಾವಣಗೆರೆ – ಎಸ್ ಎಸ್ ಮಲ್ಲಿಕಾರ್ಜುನ್
    ಬೆಂಗಳೂರು ದಕ್ಷಿಣ – ಪ್ರಿಯಾಕೃಷ್ಣಾ

  • ರಾಜ್ಯದ 7 ಲೋಕಸಭೆ ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಹೆಸರು ಘೋಷಣೆ ಆಗಿಲ್ಲ ಯಾಕೆ?

    ರಾಜ್ಯದ 7 ಲೋಕಸಭೆ ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಹೆಸರು ಘೋಷಣೆ ಆಗಿಲ್ಲ ಯಾಕೆ?

    ಬೆಂಗಳೂರು: ಬಿಜೆಪಿ ಇಂದು 7 ಕ್ಷೇತ್ರಗಳನ್ನು ಹೊರತುಪಡಿಸಿ ಕರ್ನಾಟಕದ 21 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಹೆಸರನ್ನು ಫೈನಲ್ ಮಾಡಿದೆ.

    ರಾಜ್ಯ ನಾಯಕರು ಈ ಹಿಂದೆ ಸಭೆ ನಡೆಸಿ 28 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಹೈಕಮಾಂಡಿಗೆ ಕಳುಹಿಸಿಕೊಟ್ಟಿತ್ತು. ಗೋವಾ ಸಿಎಂ ಮನೋಹರ್ ಪರಿಕ್ಕರ್ ನಿಧನ ಹಿನ್ನೆಲೆ ಮುಂದೂಡಿಕೆ ಆಗಿದ್ದ ಬಿಜೆಪಿ ಕೇಂದ್ರ ಚುನಾವಣಾ ಸಮತಿ ಸಭೆ ಮಂಗಳವಾರ ರಾತ್ರಿ ನಡೆದಿತ್ತು.

    ಈ ಸಭೆಯ ನೇತೃತ್ವವಹಿಸಿದ್ದ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ಒಳಗೊಂಡ ಹೈಕಮಾಂಡ್ ರಾಜ್ಯ ನಾಯಕರ ಅಭಿಪ್ರಾಯ ಕಲೆ ಹಾಕಿತ್ತು. ಬಳಿಕ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಪಡಿಸಿ ಹೈಕಮಾಂಡ್ ಇಂದು ಅಧಿಕೃತವಾಗಿ ಪ್ರಕಟಿಸಿದೆ.

    ಹೆಸರು ಯಾಕೆ ಪ್ರಕಟವಾಗಿಲ್ಲ?
    ಬೆಂಗಳೂರು ದಕ್ಷಿಣ: ರಾಜ್ಯದ ಘಟಕದಿಂದ ಕೇಂದ್ರ ಸಚಿವ ಅನಂತ್ ಕುಮಾರ್ ಪತ್ನಿ ತೇಜಸ್ವಿನಿ ಅವರ ಹೆಸರನ್ನು ಒಮ್ಮತದ ಶಿಫಾರಸ್ಸು ಮಾಡಲಾಗಿತ್ತು. ಆದರೆ ಅಭ್ಯರ್ಥಿ ಘೋಷಣೆ ಆಗದೇ ಇರುವುದಕ್ಕೆ ಕಾರಣ ತಿಳಿದು ಬಂದಿಲ್ಲ.

    ಕೋಲಾರ: ಇನ್ನೂ ಅಂತಿಮವಾಗದ ಅಭ್ಯರ್ಥಿ, ಎರಡಕ್ಕಿಂತ ಅಧಿಕ ಅಭ್ಯರ್ಥಿಗಳ ಹೆಸರು ಪೈಪೋಟಿ ಹಿನ್ನಲೆ ಘೋಷಣೆ ಆಗಿಲ್ಲ. ಡಿ.ಎಸ್ ವೀರಯ್ಯ/ ಛಲವಾದಿ ನಾರಾಯಣಸ್ವಾಮಿ ಹೆಸರು ಚರ್ಚೆಯಲ್ಲಿತ್ತು.

    ಮಂಡ್ಯ: ಅಭ್ಯರ್ಥಿ ಕಣಕ್ಕಿಳಿಸುತ್ತೇವೆ ಎಂದು ರಾಜ್ಯ ಬಿಜೆಪಿ ನಾಯಕರು ಹೇಳಿದ್ದರು. ಆದರೆ ಈ ವಿಚಾರದ ಬಗ್ಗೆ ಹೈಕಮಾಂಡ್ ಯಾವುದೇ ತೀರ್ಮಾನ ಕೈಗೊಂಡಿಲ್ಲ.

    ರಾಯಚೂರು: ಅಮರೇಶ್ ನಾಯ್ಕ್, ತಿಪ್ಪರಾಜು ನಡುವೆ ಪೈಪೋಟಿ ಇರುವ ಹಿನ್ನೆಲೆಯಲ್ಲಿ ಪಟ್ಟಿಯಲ್ಲಿ ಪ್ರಕಟವಾಗಿಲ್ಲ.

    ಬೆಂಗಳೂರು ಗ್ರಾಮಾಂತರ: ಸಿ.ಪಿ.ಯೋಗೀಶ್ವರ್ ಸ್ಪರ್ಧಿಸುತ್ತಾರಾ ಅಥವಾ ಅವರ ಮಗಳನ್ನು ನಿಲ್ಲಿಸುತ್ತಾರಾ ಎನ್ನುವ ಬಗ್ಗೆ ಗೊಂದಲವಿದೆ. ಹೀಗಾಗಿ ಅಭ್ಯರ್ಥಿ ಆಯ್ಕೆ ಬಗ್ಗೆ ಅಂತಿಮವಾಗಿಲ್ಲ.

    ಚಿಕ್ಕೋಡಿ: ಅಣ್ಣಾಸಾಹೇಬ್ ಜೊಲ್ಲೆ ಮತ್ತು ರಮೇಶ್ ಕತ್ತಿ ನಡುವಿನ ಪೈಪೋಟಿ ಇರುವ ಕಾರಣ ಈ ಕ್ಷೇತ್ರದ ಅಭ್ಯರ್ಥಿಯ ಹೆಸರು ಪ್ರಕಟವಾಗಿಲ್ಲ.

    ಕೊಪ್ಪಳ: ಹಾಲಿ ಸಂಸದ ಕರಡಿ ಸಂಗಣ್ಣ ವಿರೋಧಿ ಅಲೆ ಇದೆ ಎನ್ನುವುದು ಸಮೀಕ್ಷೆಯಲ್ಲಿ ತಿಳಿದು ಬಂದಿತ್ತು. ಇದರ ಜೊತೆಯಲ್ಲೇ ಎರಡಕ್ಕಿಂತ ಹೆಚ್ಚು ಅಭ್ಯರ್ಥಿಗಳ ಪೈಪೋಟಿ ನಡೆಸುತ್ತಿರುವ ಹಿನ್ನೆಲೆಯಲ್ಲಿ ಹೆಸರು ಪ್ರಕಟವಾಗಿಲ್ಲ.

    ಕೇಸರಿ ಕದನ ಕಲಿಗಳು
    1. ಸುರೇಶ್ ಅಂಗಡಿ, ಬೆಳಗಾವಿ
    2. ಪಿ.ಸಿ. ಗದ್ದಿಗೌಡರ್, ಬಾಗಲಕೋಟೆ
    3. ರಮೇಶ್ ಜಿಗಜಿಣಗಿ, ವಿಜಯಪುರ
    4. ಉಮೇಶ್ ಜಾಧವ್, ಕಲಬುರಗಿ (ಹೊಸಮುಖ)
    5. ಭಗವಂತ ಖೂಬ, ಬೀದರ್

    6. ದೇವೇಂದ್ರಪ್ಪ, ಬಳ್ಳಾರಿ (ಹೊಸಮುಖ)
    7. ಶಿವಕುಮಾರ್ ಉದಾಸಿ, ಹಾವೇರಿ
    8. ಪ್ರಲ್ಹಾದ್ ಜೋಷಿ, ಧಾರವಾಡ
    9. ಅನಂತಕುಮಾರ್ ಹೆಗಡೆ, ಉತ್ತರ ಕನ್ನಡ
    10. ಜಿ.ಎಂ. ಸಿದ್ದೇಶ್ವರ, ದಾವಣಗೆರೆ

    11. ಬಿ.ವೈ, ರಾಘವೇಂದ್ರ, ಶಿವಮೊಗ್ಗ
    12. ಶೋಭಾ ಕರಂದ್ಲಾಜೆ, ಉಡುಪಿ ಚಿಕ್ಕಮಗಳೂರು
    13. ಎ. ಮಂಜು, ಹಾಸನ (ಹೊಸಮುಖ)
    14. ನಳೀನ್ ಕುಮಾರ್, ದಕ್ಷಿಣ ಕನ್ನಡ
    15. ಆನೇಕಲ್ ನಾರಾಯಣಸ್ವಾಮಿ, ಚಿತ್ರದುರ್ಗ (ಹೊಸ ಮುಖ)

    16. ಜಿ.ಎ. ಬಸವರಾಜು, ತುಮಕೂರು (ಮತ್ತೊಮ್ಮೆ ಅವಕಾಶ)
    17. ಪ್ರತಾಪ್ ಸಿಂಹ, ಮೈಸೂರು
    18. ಸದಾನಂದಗೌಡ, ಬೆಂಗಳೂರು ಉತ್ತರ
    19. ಪಿ.ಸಿ. ಮೋಹನ್, ಬೆಂಗಳೂರು ಕೇಂದ್ರ
    20. ಬಿ.ಎನ್. ಬಚ್ಚೇಗೌಡ, ಚಿಕ್ಕಬಳ್ಳಾಪುರ (ಮತ್ತೊಮ್ಮೆ ಅವಕಾಶ)
    21. ಶ್ರೀನಿವಾಸ ಪ್ರಸಾದ್, ಚಾಮರಾಜನಗರ ( ಹೊಸ ಮುಖ )

  • ಕಾಂಗ್ರೆಸ್‍ಗೆ ಕೈಕೊಟ್ಟ ಆಪ್: ಲೋಕಸಭಾ ಚುನಾವಣೆಯಲ್ಲಿ ಎಎಪಿ ಏಕಾಂಗಿ ಸ್ಪರ್ಧೆ

    ಕಾಂಗ್ರೆಸ್‍ಗೆ ಕೈಕೊಟ್ಟ ಆಪ್: ಲೋಕಸಭಾ ಚುನಾವಣೆಯಲ್ಲಿ ಎಎಪಿ ಏಕಾಂಗಿ ಸ್ಪರ್ಧೆ

    ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಆಮ್ ಆದ್ಮಿ ಪಾರ್ಟಿ (ಎಎಪಿ) ದೆಹಲಿಯಲ್ಲಿ ಮೈತ್ರಿ ತಂತ್ರ ಅನುಸರಿಸುತ್ತಾರೆ ಎನ್ನುವುದು ಭಾರೀ ಚರ್ಚೆಯಾಗುತ್ತಿತ್ತು. ಆದರೆ ಈಗ ಏಕಾಂಗಿಯಾಗಿ ಸ್ಪರ್ಧಿಸುವ ನಿರ್ಧಾರವನ್ನು ಎಎಪಿ ಸ್ಪಷ್ಟಪಡಿಸಿದೆ.

    ದೆಹಲಿಯ ಒಟ್ಟು 7 ಲೋಕಸಭಾ ಕ್ಷೇತ್ರಗಳಿಂದಲೂ ಎಎಪಿ ಅಭ್ಯರ್ಥಿ ಸ್ಪರ್ಧಿಸಲಿದೆ. ಈ ನಿಟ್ಟಿನಲ್ಲಿ ಆರು ಜನರ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ಎಎಪಿ ದೆಹಲಿ ಸಂಚಾಲಕ ಗೋಪಾಲ್ ರೈ ತಿಳಿಸಿದ್ದಾರೆ.

    ಯಾರು ಯಾವ ಕ್ಷೇತ್ರ?:
    ಪೂರ್ವ ದೆಹಲಿಯಿಂದ ಸ್ಪರ್ಧಿಸಲು ಅತಿಶಿ ಮಾರ್ಲೆನಾ ಅವರನ್ನು ನಾಮನಿರ್ದೇಶನ ಮಾಡಲಾಗಿದ್ದು, ಗುಗ್ಗಾನ್ ಸಿಂಗ್ ವಾಯುವ್ಯ ದೆಹಲಿಯಿಂದ ಸ್ಪರ್ಧಿಸಲಿದ್ದಾರೆ. ಎಎಪಿ ರಾಜಕೀಯ ವ್ಯವಹಾರಗಳ ಸಮಿತಿಯ ಸದಸ್ಯ ರಾಘವ್ ಚಧಾ ಅವರು ದಕ್ಷಿಣ ದೆಹಲಿಯಿಂದ ಸ್ಪರ್ಧಿಸಲಿದ್ದು, ಪಂಕಜ್ ಗುಪ್ತಾ ಚಾಂದನಿ ಚೌಕ್ ಕ್ಷೇತ್ರದಿಂದ ಸ್ಪರ್ಧಿಸಲು ನಾಮನಿರ್ದೇಶನಗೊಂಡಿದ್ದಾರೆ. ದಿಲೀಪ್ ಪಾಂಡೆ ಮತ್ತು ಬ್ರಿಜೆಶ್ ಗೋಯಲ್ ಕ್ರಮವಾಗಿ ಈಶಾನ್ಯ ದೆಹಲಿ ಮತ್ತು ನವದೆಹಲಿಯಿಂದ ಸ್ಪರ್ಧಿಸಲಿದ್ದಾರೆ ಎಂದು ಗೋಪಾಲ್ ರೈ ಮಾಹಿತಿ ನೀಡಿದ್ದಾರೆ.

    ಈ ಮೂಲಕ 6 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಎಎಪಿ ಬಿಡುಗಡೆ ಮಾಡಿದ್ದು, ಪಶ್ಚಿಮ ದೆಹಲಿಯ ಸ್ಥಾನವನ್ನು ಕಾಯ್ದಿರಿಸಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಅಭಿವೃದ್ಧಿ ಮಾಡದಿದ್ರೆ ಚಪ್ಪಲಿ ಸೇವೆ ಮಾಡಿ – ವಿಭಿನ್ನ ಪ್ರಚಾರ ಕೈಗೊಂಡ ಅಭ್ಯರ್ಥಿ

    ಅಭಿವೃದ್ಧಿ ಮಾಡದಿದ್ರೆ ಚಪ್ಪಲಿ ಸೇವೆ ಮಾಡಿ – ವಿಭಿನ್ನ ಪ್ರಚಾರ ಕೈಗೊಂಡ ಅಭ್ಯರ್ಥಿ

    ಹೈದರಾಬಾದ್: ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಅಭ್ಯರ್ಥಿಗಳ ಪ್ರಚಾರದ ಅಬ್ಬರ ಹೆಚ್ಚಾಗಿದ್ದು, ಈ ನಡುವೆ ಪಕ್ಷೇತರ ಅಭ್ಯರ್ಥಿಯೊಬ್ಬರು ಮತದಾರರಿಗೆ ಚಪ್ಪಲಿ ಹಂಚಿಕೆ ಮಾಡುವ ಮೂಲಕ ವಿಭಿನ್ನ ಪ್ರಚಾರ ಕೈಗೊಂಡಿದ್ದಾರೆ.

    ಅಕುಲ ಹನುಮಂತ್ ಎಂಬವರು ಜಗ್ಟಿಯಲ್ ಜಿಲ್ಲೆಯ ಕೊರುಟ್ಲಾ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಿದ್ದು, ಕ್ಷೇತ್ರದ ಮತದಾರರ ಪ್ರಚಾರ ನಡೆಸುವ ವೇಳೆ ಚಪ್ಪಲಿ ಹಂಚಿಕೆ ಮಾಡಿ ನನಗೆ ಮತ ನೀಡಿ ಎಂದು ಕೇಳುತ್ತಿದ್ದಾರೆ. ಗೆದ್ದ ಬಳಿಕ ಕ್ಷೇತ್ರದ ಅಭಿವೃದ್ಧಿ ಮಾಡದಿದ್ದರೆ ನನಗೆ ಚಪ್ಪಲಿ ಸೇವೆ ಮಾಡಿ ಎಂದು ಹೇಳಿ ಪ್ರಚಾರ ಮಾಡುತ್ತಿದ್ದಾರೆ.

    ಸದ್ಯ ಹನುಮನ್ ಅವರ ಈ ವಿಭಿನ್ನ ಪ್ರಚಾರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ವಿಡಿಯೋ ನೋಡಿದ ನೆಟ್ಟಿಗರು ಎಲ್ಲಾ ರಾಜಕೀಯ ವ್ಯಕ್ತಿಗಳು ಈ ವಿಧಾನವನ್ನು ಬಳಸಿ ಎಂದು ಸಲಹೆ ನೀಡಿದ್ದಾರೆ.

    ಮನೆ ಮನೆ ಪ್ರಚಾರಕ್ಕೆ ತೆರಳುವ ಹನುಮಂತ್, ಕ್ಷೇತ್ರದ ಜನರ ಅಗತ್ಯಗಳನ್ನು ಪೂರೈಸಲು ಶ್ರಮವಹಿಸುವುದಾಗಿ ಆಶ್ವಾಸನೆ ನೀಡುತ್ತಿದ್ದು, ಇದರಲ್ಲಿ ವಿಫಲವಾದಲ್ಲಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ. ಅಲ್ಲದೇ ಕೇವಲ ಪ್ರಚಾರ ಪಡೆಯಲು ಮಾತ್ರ ನಾನು ಈ ರೀತಿ ಮತ ಕೇಳುತ್ತಿಲ್ಲ ಎಂದು ತಿಳಿಸಿದ್ದಾರೆ.

    ಸದ್ಯ ಹನುಮಂತ್ ಅವರು ಸ್ಪರ್ಧೆ ಮಾಡುತ್ತಿರುವ ಕೊರುಟ್ಲಾ ಕ್ಷೇತ್ರದಲ್ಲಿ ತೆಲಂಗಾಣ ರಾಷ್ಟ್ರ ಸಮಿತಿಯ ಪ್ರಮುಖ ನಾಯಕರಾದ ಶಾಸಕ ಕೆ ವಿದ್ಯಾ ಸಾಗರ್ ರಾವ್ ಸ್ಪರ್ಧೆ ಮಾಡುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಚುನಾವಣಾ ಅಭ್ಯರ್ಥಿಗಳು ಕಡ್ಡಾಯವಾಗಿ ಪತ್ನಿ, ಮಕ್ಕಳ ಆದಾಯದ ಮೂಲ ಬಹಿರಂಗಪಡಿಸಬೇಕು- ಸುಪ್ರೀಂ

    ಚುನಾವಣಾ ಅಭ್ಯರ್ಥಿಗಳು ಕಡ್ಡಾಯವಾಗಿ ಪತ್ನಿ, ಮಕ್ಕಳ ಆದಾಯದ ಮೂಲ ಬಹಿರಂಗಪಡಿಸಬೇಕು- ಸುಪ್ರೀಂ

    ನವದೆಹಲಿ: ಚುನಾವಣೆಗೆ ಸ್ಪರ್ಧಿಸುವ ಎಲ್ಲಾ ಅಭ್ಯರ್ಥಿಗಳು ಕಡ್ಡಾಯವಾಗಿ ತಮ್ಮ ಆದಾಯದ ಮೂಲವನ್ನು ಬಹಿರಂಗಪಡಿಸಬೇಕು. ಅಷ್ಟೇ ಅಲ್ಲದೇ ಅಭ್ಯರ್ಥಿಗಳ ಹೆಂಡತಿ ಹಾಗೂ ಮಕ್ಕಳ ಆದಾಯ ಮೂಲವನ್ನೂ ಬಹಿರಂಗಪಡಿಸುಬೇಕೆಂದು ಎಂದು ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ.

    ನ್ಯಾ. ಜೆ ಚಲಮೇಶ್ವರ್ ನೇತೃತ್ವದ ಪೀಠ ಈ ಐತಿಹಾಸಿಕ ತೀರ್ಪು ನೀಡಿದ್ದು, ಅಭ್ಯರ್ಥಿಯು ಚುನಾವಣೆಗೆ ನಾಮಪತ್ರ ಸಲ್ಲಿಸುವಾಗ ತನ್ನ, ತನ್ನ ಹೆಂಡತಿಯ ಹಾಗೂ ಅವಲಂಬಿತರಾದ ಮಕ್ಕಳ ಆದಾಯ ಮೂಲವನ್ನ ಬಹಿರಂಗಪಡಿಸಬೇಕು ಎಂದಿದೆ.

    ಅಭ್ಯರ್ಥಿಗಳ ಆದಾಯ ಮೂಲದ ಮಾಹಿತಿಗಾಗಿ ನಾಮಪತ್ರ ಅರ್ಜಿಯಲ್ಲಿ ಕಾಲಮ್ ಸೇರಿಸಬೇಕು ಎಂದು ಮನವಿ ಮಾಡಿ ಸರ್ಕಾರೇತರ ಸಂಸ್ಥೆ ಲೋಕ್ ಪ್ರಹಾರಿ ಅರ್ಜಿ ಸಲ್ಲಿಸಿತ್ತು. ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವಾಗ ತನ್ನ ಹಾಗೂ ಹೆಂಡತಿ, ಮಕ್ಕಳ ಆಸ್ತಿಯನ್ನ ಬಹಿರಂಗಪಡಿಸಿರುತ್ತಾರೆ. ಆದ್ರೆ ಅವರು ಆದಾಯದ ಮೂಲವನ್ನ ಬಹಿರಂಗಪಡಿಸುತ್ತಿಲ್ಲ. ಆದಾಯ ಮೂಲ ಬಹಿರಂಗಪಡಿಸಿದ್ರೆ ಅದು ಕಾನೂನು ಬದ್ಧವಾದ ಗಳಿಕೆಯೂ ಇಲ್ಲವೋ ಎಂಬುದು ಜನರಿಗೆ ತಿಳಿಯುತ್ತದೆ ಎಂದು ಅರ್ಜಿದಾರರು ಹೇಳಿದ್ದರು.

    ಆಸ್ತಿಯಲ್ಲಿ ಗಣನೀಯ ಏರಿಕೆ ಕಂಡುಬಂದ ಹಿನ್ನೆಲೆಯಲ್ಲಿ 7 ಲೋಕಸಭಾ ಸಂಸದರು ಹಾಗೂ 98 ರಾಜ್ಯ ಶಾಸಕರನ್ನ ತನಿಖೆ ಮಾಡುತ್ತಿರುವುದಾಗಿ ಕೇಂದ್ರಿಯ ನೇರ ತೆರಿಗೆ ಮಂಡಳಿ(ಸಿಬಿಡಿಟಿ) ಸುಪ್ರೀಂ ಕೋರ್ಟ್‍ಗೆ ಈ ಹಿಂದೆ ಹೇಳಿತ್ತು. ಆಸ್ತಿಯ ಬಗ್ಗೆ ಪ್ರಾಥಮಿಕ ತನಿಖೆ ನಡೆಸಿದ ಬಳಿಕ, ಲೋಕಸಭಾ ಸಂಸದರ ಆಸ್ತಿಯಲ್ಲಿ ಭಾರೀ ಏರಿಕೆ ಹಾಗೂ ಶಾಸಕರ ಆಸ್ತಿಯಲ್ಲಿ ಗಣನೀಯ ಏರಿಕೆಯಾಗಿರುವುದು ಕಂಡುಬಂದಿದೆ ಎಂದು ತಿಳಿಸಿತ್ತು.

    26 ಲೋಕಸಭಾ ಸಂಸದರು, 11 ರಾಜ್ಯಸಭಾ ಸದಸ್ಯರು ಹಾಗೂ 257 ಶಾಸಕರ ಆಸ್ತಿಯಲ್ಲಿ ಚುನಾವಣಾ ಅಫಿಡವಿಡ್‍ನಲ್ಲಿ ಇರುವುದಕ್ಕಿಂತ ಗಣನೀಯ ಏರಿಕೆಯಾಗಿದೆ ಎಂದು ಲಕ್ನೋ ಮೂಲದ ಎನ್‍ಜಿಓ ಲೋಕ್ ಪ್ರಹಾರಿ ಆರೋಪ ಮಾಡಿದ ಬಳಿಕ ಪ್ರಾಥಮಿಕ ತನಿಖೆ ನಡೆಸಲಾಗಿತ್ತು. ಪ್ರಾಥಮಿಕ ತನಿಖೆ ನಡೆಯುತ್ತಿದ್ದು, ಇನ್ನೂ 9 ಲೋಕಸಭಾ ಸಂಸದರು, 11 ರಾಜ್ಯಸಭಾ ಸಂಸದರು ಹಾಗೂ 42 ಶಾಸಕರ ಆಸ್ತಿ ಪರಿಶೀಲನೆ ನಡೆಯುತ್ತಿದೆ ಎಂದು ಸಿಬಿಡಿಟಿ ಹೇಳಿತ್ತು.

    ಈಗಿರುವ ಕಾನೂನಿನ ಪ್ರಕಾರ ಅಭ್ಯರ್ಥಿ ನಾಮಪತ್ರ ಸಲ್ಲಿಸುವಾಗ ತನ್ನ, ತನ್ನ ಹೆಂಡತಿಯ ಹಾಗೂ ಮೂವರು ಅವಲಂಬಿತರ ಸ್ವತ್ತು, ಬಾಧ್ಯತೆಗಳನ್ನ ಬಹಿರಂಗಪಡಿಸಬೇಕು. ಆದ್ರೆ ಆದಾಯದ ಮೂಲವನ್ನು ಬಹಿರಂಗ ಪಡಿಸಬೇಕೆಂಬ ನಿಯಮ ಇರಲಿಲ್ಲ.

    ರಾಜಕಾರಣಿಗಳು ನಾಮಪತ್ರ ಸಲ್ಲಿಕೆ ವೇಳೆ ತೋರಿಸುವ ಆಸ್ತಿಗಿಂತ ನಂತರದಲ್ಲಿ ಸುಮಾರು 500% ನಷ್ಟು ಏರಿಕೆಯ ಬಗ್ಗೆ ಸರ್ಕಾರ ಯಾಕೆ ತನಿಖೆ ನಡೆಸಿಲ್ಲವೆಂದು ಅರ್ಜಿ ವಿಚಾರಣೆ ನಡೆಸುವ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಸರ್ಕಾರವನ್ನ ಪ್ರಶ್ನಿಸಿತ್ತು.

    ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ತರುವ ಹಿನ್ನೆಲೆಯಲ್ಲಿ ಅಭ್ರ್ಯಥಿಗಳು ಹೆಂಡತಿ ಹಾಗೂ ಅವಲಂಬಿತರದ್ದು ಸೇರಿದಂತೆ ತನ್ನ ಆದಾಯದ ಮೂಲವನ್ನ ಬಹಿರಂಗಪಡಿಸುವುದನ್ನ ಕಡ್ಡಾಯಗೊಳಿಸಬೇಕು ಎಂದು ಜನವರಿಯಲ್ಲಿ ಚುನಾವಣಾ ಆಯೋಗ ಸುಪ್ರೀಂ ಕೋರ್ಟ್‍ಗೆ ಹೇಳಿತ್ತು.

  • ಕರ್ನಾಟಕದ ಗದ್ದುಗೆಗಾಗಿ `ಕೈ’ ಮಾಸ್ಟರ್ ಪ್ಲ್ಯಾನ್- ರಾಜ್ಯಕ್ಕೆ `ರಾಗಾ’ ಭೇಟಿ ಬೆನ್ನಲ್ಲೆ ಮಹತ್ವದ ನಿರ್ಧಾರ

    ಕರ್ನಾಟಕದ ಗದ್ದುಗೆಗಾಗಿ `ಕೈ’ ಮಾಸ್ಟರ್ ಪ್ಲ್ಯಾನ್- ರಾಜ್ಯಕ್ಕೆ `ರಾಗಾ’ ಭೇಟಿ ಬೆನ್ನಲ್ಲೆ ಮಹತ್ವದ ನಿರ್ಧಾರ

    ಬೆಂಗಳೂರು: ಫೆಬ್ರವರಿ 10, 11 ಹಾಗೂ 12 ರಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ರಾಜ್ಯಕ್ಕೆ ಬರುತ್ತಿರುವ ಬೆನ್ನಲ್ಲೆ ಕಾಂಗ್ರೆಸ್ ನಲ್ಲಿ ಹೊಸ ಸಂಪ್ರದಾಯ ಹುಟ್ಟುಹಾಕಲು ಕೈ ನಾಯಕರು ಮುಂದಾಗಿದ್ದಾರೆ. ಇದೇ ಮೊದಲ ಬಾರಿಗೆ ಚುನಾವಣೆ ಘೋಷಣೆಗೆ ಮೊದಲೇ ಅಭ್ಯರ್ಥಿಗಳನ್ನ ಘೋಷಿಸಿ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

    ರಾಹುಲ್ ಗಾಂಧಿ ರಾಜ್ಯಕ್ಕೆ ಭೇಟಿ ನೀಡಿ ತೆರಳಿದ 15 ದಿನದ ಒಳಗಾಗಿ 150 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಗೆ ಎಐಸಿಸಿ ನಿರ್ಧರಿಸಿದೆ. ಈ ಮೂಲಕ ಕಾಂಗ್ರೆಸ್ ಪಕ್ಷದ ಇತಿಹಾಸದಲ್ಲೇ ಮೊದಲ ಬಾರಿಗೆ ಇಂತಹ ಸಂಪ್ರದಾಯಕ್ಕೆ ನಾಂದಿ ಹಾಡಲು ಸ್ವತಃ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮುಂದಾಗಿದ್ದಾರೆ ಎಂದು ಹೇಳಲಾಗ್ತಿದೆ. ಶತಾಯಗತಾಯ ಕರ್ನಾಟಕದಲ್ಲಿ ಗೆಲ್ಲಲೇಬೇಕು ಎಂದು ರಾಹುಲ್ ಗಾಂಧಿ ಪಣ ತೊಟ್ಟಿದ್ದು, ಇದರ ಭಾಗವಾಗಿಯೇ ಅಂತಿಮ ಕ್ಷಣದ ಗೊಂದಲಗಳು ಪಕ್ಷಕ್ಕೆ ಮುಳುವಾಗದಂತೆ ನೋಡಿಕೊಳ್ಳಲು ತೀರ್ಮಾನಿಸಿದ್ದಾರೆ ಎನ್ನಲಾಗಿದೆ.

    74 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ತಡವಾಗಿ ಬಿಡುಗಡೆ ಮಾಡಲು ತೀರ್ಮಾನಿಸಲಾಗಿದೆ. ಆದರೆ 150 ಅಭ್ಯರ್ಥಿಗಳ ಮೊದಲ ಪಟ್ಟಿ ಮಾತ್ರ ಫೆಬ್ರವರಿ ಅಂತ್ಯದೊಳಗೆ ಬಿಡುಗಡೆ ಮಾಡಿ ಕಾಂಗ್ರೆಸ್ ಹೊಸ ಸಂಪ್ರದಾಯ ಹುಟ್ಟುಹಾಕಲು ಮುಂದಾಗಿದೆ. ಈ ಮೂಲಕ ತನ್ನ ಪಕ್ಷದ ಸಂಪ್ರದಾಯ ಮುರಿದರೂ ಪರವಾಗಿಲ್ಲ ಕರ್ನಾಟಕದಲ್ಲಿ ಗೆಲ್ಲಲೇಬೇಕು ಎಂಬ ಹಟಕ್ಕೆ ರಾಹುಲ್ ಗಾಂಧಿ ಬಿದ್ದಂತೆ ಕಾಣುತ್ತಿದೆ.

  • ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಬೇಕಾದ್ರೆ ಹೀಗೆ ಮಾಡ್ಬೇಕಂತೆ

    ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಬೇಕಾದ್ರೆ ಹೀಗೆ ಮಾಡ್ಬೇಕಂತೆ

    ಬೆಂಗಳೂರು: `ಪ್ರಮಾಣ ಮಾಡಿ….ಟಿಕೆಟ್ ಪಡೆದುಕೊಳ್ಳಿ’ ಇಂಥದೊಂದು ಹೊಸ ಐಡಿಯಾ ಪರಿಚಯಿಸಲು ಜೆಡಿಎಸ್ ಮುಂದಾಗಿದೆ.

    ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಶತಾಯ ಗತಾಯ ಅಧಿಕಾರ ಪಡೆಯಲು ಪ್ಲಾನ್ ಮಾಡಿರೋ ಜೆಡಿಎಸ್, ತನ್ನ ಪಕ್ಷದ ಅಭ್ಯರ್ಥಿಗಳನ್ನು ಮತದಾರರ ಮುಂದೆ ನಿಲ್ಲಿಸಿ ಪ್ರಮಾಣ ಮಾಡಿಸಲು ಪ್ಲಾನ್ ಮಾಡಿಕೊಂಡಿದೆ. ಭ್ರಷ್ಟಾಚಾರ ಮಾಡಲ್ಲ, ಮತದಾರರ ಕೆಲಸ ಮಾಡ್ತಿವಿ ಅಂತ ಪ್ರಮಾಣ ಮಾಡಿಸಲಿದೆ.

    ಇಂಥದೊಂದು ಮಹತ್ವದ ತೀರ್ಮಾನ ಕೈಗೊಳ್ಳಲು ಬುಧವಾರ ಶಾಸಕರ ಸಭೆ ಕರೆದಿರುವ ಎಚ್‍ಡಿ ಕುಮಾರಸ್ವಾಮಿ, ಮೊದಲ ಪಟ್ಟಿ ಬಿಡುಗಡೆಯ ಮುನ್ನ ಇಂತ ತೀರ್ಮಾನಕ್ಕೆ ಮುಂದಾಗಿದ್ದಾರೆ. ಡಿ.25ರೊಳಗೆ 125 ಮಂದಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲು ಎಚ್‍ಡಿಕೆ ನಿರ್ಧಾರ ಮಾಡಿದ್ದಾರೆ.