Tag: Candle

  • ಬಾಲಕಿಯ ಗುಪ್ತಾಂಗದ ಮೇಲೆ ಮೇಣದ ಬತ್ತಿ ಇಟ್ಟು ಅತ್ಯಾಚಾರ- ಬಂಧನ ಭೀತಿಗೆ ವಿಷ ಸೇವಿಸಿದ ವೃದ್ಧ

    ಬಾಲಕಿಯ ಗುಪ್ತಾಂಗದ ಮೇಲೆ ಮೇಣದ ಬತ್ತಿ ಇಟ್ಟು ಅತ್ಯಾಚಾರ- ಬಂಧನ ಭೀತಿಗೆ ವಿಷ ಸೇವಿಸಿದ ವೃದ್ಧ

    ಲಕ್ನೋ: ಬಾಲಕಿಯ (Girl) ಮೇಲೆ ಅತ್ಯಾಚಾರ ಎಸಗಿದ್ದ ವೃದ್ಧನೊಬ್ಬ(Old Man) ಬಂಧನದ ಭೀತಿಯ ಹಿನ್ನೆಲೆಯಲ್ಲಿ ವಿಷ ಸೇವಿಸಿದ ಘಟನೆ ಉತ್ತರಪ್ರದೇಶದ (Uttar Pradesh) ಮಥುರಾ ಜಿಲ್ಲೆಯಲ್ಲಿ ನಡೆದಿದೆ.

    ಮಥುರಾ ಜಿಲ್ಲೆಯಲ್ಲಿ ಪ್ಯಾರೇಲಾಲ್(60) ಎಂಬಾತ 8 ವರ್ಷದ ಬಾಲಕಿಗೆ ಆಮಿಷವೊಡ್ಡಿ ತನ್ನ ಮನೆಗೆ ಕರೆದುಕೊಂಡು ಬಂದಿದ್ದಾನೆ. ನಂತರ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಷ್ಟೇ ಅಲ್ಲದೇ ಆಕೆಯ ಖಾಸಗಿ ಭಾಗಗಳಲ್ಲಿ ಮೇಣದ ಬತ್ತಿ (Candle) ಇಟ್ಟು ವಿಕೃತಿ ಮೆರೆದಿದ್ದ.

    ಆದರೆ ಬಾಲಕಿ ಆಳುತ್ತಾ ತನ್ನ ಮನೆಗೆ ಓಡಿ ಬಂದು ಘಟನೆಯನ್ನು ಕುಟುಂಬಸ್ಥರಿಗೆ ತಿಳಿಸಿದ್ದಳು. ಈ ಹಿನ್ನೆಲೆಯಲ್ಲಿ ಆಕೆಯ ಕುಟುಂಬಸ್ಥರು ಘಟನೆಯ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿದ್ದಾರೆ. ಇದನ್ನೂ ಓದಿ: ಕೋಲಾರದ JDS ಮುಖಂಡ ಸುಹೆಲ್ ದಿಲ್ ನವಾಜ್ AAP ಸೇರ್ಪಡೆ

    POLICE JEEP

    ಪ್ರಕರಣ ದಾಖಲಾಗಿರುವ ವಿಷಯ ತಿಳಿದ ಬಳಿಕ ಪ್ಯಾರೇಲಾಲ್ ವಿಷ ಸೇವಿಸಿದ್ದಾನೆ. ಪೊಲೀಸರು ಆತನನ್ನು ಬಂಧಿಸಲು ಹೋದಾಗ ವಿಷಯ ತಿಳಿದಿದ್ದು, ಆತನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪ್ಯಾರೇಲಾಲ್ ಸದ್ಯ ಅಪಾಯದಿಂದ ಪಾರಾಗಿದ್ದಾನೆ. ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಮೆಡಿಕಲ್ ಶಿಕ್ಷಣ ಲಾಭಗಳಿಸುವ ವ್ಯವಹಾರವಲ್ಲ – ಬೋಧನಾ ಶುಲ್ಕ ಕೈಗೆಟುಕುವಂತಿರಬೇಕು ಎಂದ ಸುಪ್ರೀಂ

    Live Tv
    [brid partner=56869869 player=32851 video=960834 autoplay=true]

  • ಬರ್ತ್‍ಡೇ ಕ್ಯಾಂಡಲ್ ಊದುವಾಗ ಕೂದಲಿಗೆ ಬೆಂಕಿ – ಕಿರುಚಾಡಿದ ಟಿವಿ ಸ್ಟಾರ್

    ಬರ್ತ್‍ಡೇ ಕ್ಯಾಂಡಲ್ ಊದುವಾಗ ಕೂದಲಿಗೆ ಬೆಂಕಿ – ಕಿರುಚಾಡಿದ ಟಿವಿ ಸ್ಟಾರ್

    ವಾಷಿಂಗ್ಟನ್: ಹುಟ್ಟುಹಬ್ಬದ ಸಮಾರಂಭದಲ್ಲಿ ಬರ್ತ್‍ಡೇ ಕ್ಯಾಂಡಲ್ ಊದುವಾಗ ಅಮೇರಿಕ ಸ್ಟಾರ್ ನಟಿ ನಿಕೋಲ್ ರಿಚಿ ಕೂದಲಿಗೆ ಬೆಂಕಿ ಹೊತ್ತಿ ಕಿರುಚಾಡಿದ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

    birthday candle

    ಸಾಮಾನ್ಯವಾಗಿ ಬರ್ತ್‍ಡೇ ದಿನ ಪ್ರತಿಯಬ್ಬರು ತಮ್ಮ ಪ್ರೀತಿ ಪಾತ್ರರೊಂದಿಗೆ ಇರಲು ಇಚ್ಛಿಸುತ್ತಾರೆ. ಅದರಲ್ಲಿಯೂ ಕೇಕ್, ಮೇಣದ ಬತ್ತಿ, ಬರ್ತ್‍ಡೇ ಕ್ಯಾಪ್ ಇವೆಲ್ಲವೂ ಸದಾ ನೆನಪಿನಲ್ಲಿ ಉಳಿಯುತ್ತದೆ. ಆದರೆ ಅಮೇರಿಕದ ಟಿವಿ ಸ್ಟಾರ್ ನಿಕೋಲ್ ರಿಚಿಯವರ 40ನೇ ವರ್ಷದ ಹುಟ್ಟುಹಬ್ಬದ ದಿನದಂದು ನಡೆದಿದ್ದೇ ಬೇರೆಯಾಗಿದೆ. ಸದ್ಯ ಈ ವೀಡಿಯೋವನ್ನು ತಮ್ಮ ಇನ್‍ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದು, ಬರ್ತ್‍ಡೇ ಸಮಾರಂಭದಲ್ಲಿ ನಿಕೋಲ್ ರಿಚಿ ಮಾತ್ರವಲ್ಲ ಪಾರ್ಟಿಗೆ ಆಗಮಿಸಿದ್ದವರು ಕೂಡ ಈ ಘಟನೆಯನ್ನು ಸದಾ ನೆನಪಿನಲ್ಲಿಟ್ಟುಕೊಂಡಿರುತ್ತಾರೆ. ಇದನ್ನೂ ಓದಿ: ಮೂಲೆಗುಂಪಾಗಿರೋ ಕಾಂಗ್ರೆಸ್ ಟಾಂಗಾ, ಸೈಕಲ್ ಓಡಿಸೋದಕ್ಕೆ ಮಾತ್ರ ಸೀಮಿತ: ಆರ್. ಅಶೋಕ್

    ಸೆಪ್ಟೆಂಬರ್ 21ರಂದು 40ನೇ ವಸಂತಕ್ಕೆ ಕಾಲಿಟ್ಟ ರಿಚಿ, ಕುಟುಂಬ ಮತ್ತು ಸ್ನೇಹಿತರೊಂದಿಗೆ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಈ ವೇಳೆ ಕಪ್ಪು ಬಣ್ಣದ ಆಫ್ ಶೋಲ್ಡರ್ ಟಾಪ್ ಧರಿಸಿ, ಕೇಕ್ ಮೇಲೆ ನಿಲ್ಲಿಸಿದ್ದ ಕ್ಯಾಂಡಲ್‍ನನ್ನು ಊದಲು ಮುಂದಕ್ಕೆ ವಾಲಿದಾಗ ರಿಚಿ ಗುಂಗುರು ಕೂದಲು ಕ್ಯಾಂಡಲ್‍ಗೆ ತಾಗಿ ಬೆಂಕಿ ಹೊತ್ತಿಕೊಳ್ಳುತ್ತದೆ. ಈ ವೇಳೆ ಗಾಬರಿಗೊಂಡ ರಿಚಿ ಕಿರುಚಾಡುತ್ತಾ ಕೂದಲನ್ನು ಹೊಡೆದುಕೊಳ್ಳುತ್ತಾರೆ. ಆಗ ಇತರರು ಕೂಡ ಆಕೆಗೆ ಸಹಾಯ ಮಾಡುವುದನ್ನು ವೀಡಿಯೋದಲ್ಲಿ ಕಾಣಬಹುದಾಗಿದೆ.

    ಸದ್ಯ ಹುಟ್ಟುಹಬ್ಬದ ದಿನದಂದು ತಮ್ಮ ಅನುಯಾಯಿಗಳೊಂದಿಗೆ ನಡೆದ ಈ ಅಹಿತಕರವಾದ ಘಟನೆಯನ್ನು ರಿಚಿಯವರು ಹಂಚಿಕೊಂಡಿದ್ದಾರೆ. ವೈರಲ್ ಆಗುತ್ತಿರುವ ಈ ವೀಡಿಯೋ, ಇಲ್ಲಿಯವರೆಗೂ 2.8 ಮಿಲಿಯನ್‌ಗೂ  ಅಧಿಕ ಮಂದಿ ವೀಕ್ಷಿಸಿದ್ದು, ಕೆಲವರು  ಅದೃಷ್ಟವಶಾತ್ ಒಳ್ಳೆಯದಾಯಿತು ಎಂದರೆ, ಮತ್ತಷ್ಟು ಮಂದಿ ಹುಟ್ಟುಹಬ್ಬಕ್ಕೆ ಶುಭ ಕೋರಿದ್ದಾರೆ. ಇದನ್ನೂ ಓದಿ: ನಾನು ಸಾಮಾನ್ಯ ಮುನುಷ್ಯ, ನನಗೆ ಸೆಕ್ಯೂರಿಟಿ ಬೇಡವೆಂದ: ಪಂಜಾಬ್ ಸಿಎಂ

  • ಮೇಣದ ಬತ್ತಿ ಹಿಡಿದು ಕೋವಿಡ್ ವಾರಿಯರ್ಸ್ ಪ್ರತಿಭಟನೆ

    ಮೇಣದ ಬತ್ತಿ ಹಿಡಿದು ಕೋವಿಡ್ ವಾರಿಯರ್ಸ್ ಪ್ರತಿಭಟನೆ

    ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ವಾರಿಯರ್ಸ್ ಸರ್ಕಾರದ ವಿರುದ್ಧ ಸಿಡಿದೆದ್ದು, ಮೌನ ಪ್ರತಿಭಟನೆಗೆ ಇಳಿದಿದ್ದಾರೆ.

    ಕಳೆದ ಹದಿನೈದು ದಿನದಿಂದ ಕೋವಿಡ್ ವಾರಿಯರ್ಸ್ ಪ್ರತಿಭಟನೆ ಮಾಡುತ್ತಿದ್ದಾರೆ. ಸೋಮವಾರ ರಾತ್ರಿ ನಗರದ ಬೆಂಗಳೂರು ಮೆಡಿಕಲ್ ಕಾಲೇಜ್ ವಿಕ್ಟೋರಿಯಾ ಆವರಣದಲ್ಲಿ ವೈದ್ಯಕೀಯ ಸಿಬ್ಬಂದಿ ಮೇಣದ ಬತ್ತಿ ಹಿಡಿದು ಆಸ್ಪತ್ರೆಯ ಹೊರಭಾಗದಲ್ಲಿ ಪ್ರತಿಭಟನೆ ನಡೆಸಿದರು. ಜೊತೆಗೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ಮಾಡಿದ್ದಾರೆ.

    ಖಾಯಂ ನೌಕರರಿಗೆ ವೇತನ ಹೆಚ್ಚಳ, ಮೂಲಭೂತ ಸೌಕರ್ಯ, ಪಿಂಚಣಿ ವ್ಯವಸ್ಥೆ ಸೇರಿದಂತೆ ಅನೇಕ ಬೇಡಿಕೆಯನ್ನು ಮುಂದಿಟ್ಟು ರಾತ್ರಿ ಆಸ್ಪತ್ರೆಯ ಹೊರಭಾಗದಲ್ಲಿ ಪ್ರತಿಭಟನೆ ನಡೆಸಿದರು.

    ಕಿಮ್ಸ್ ವೈದ್ಯಕೀಯ ಸಿಬ್ಬಂದಿ ಪ್ರತಿಭಟನೆ
    ಇತ್ತ ಹುಬ್ಬಳ್ಳಿಯಲ್ಲಿ ಎನ್‍ಪಿಎಸ್ ಸೌಲಭ್ಯ ಸೇರಿದಂತೆ ಜ್ಯೋತಿ ಸಂಜೀವಿನಿ ಒದಗಿಸುವಂತೆ ಆಗ್ರಹಿಸಿ ಕಿಮ್ಸ್ ಶುಶ್ರೂಷಾ ಸಿಬ್ಬಂದಿ ನಡೆಸುತ್ತಿರುವ ಪ್ರತಿಭಟನೆ ಎಂಟನೇ ದಿನಕ್ಕೆ ಕಾಲಿಟ್ಟಿದ್ದು, ಸಿಬ್ಬಂದಿ ಸೋಮವಾರ ಸಂಜೆ ಕೂಡ ಕಪ್ಪು ಪಟ್ಟಿ ಧರಿಸಿ, ಮೇಣದ ಬತ್ತಿ ಹಿಡಿದು ಪ್ರತಿಭಟನೆ ನಡೆಸಿದರು.

    ಸುಮಾರು 50ಕ್ಕೂ ಹೆಚ್ಚು ಸಿಬ್ಬಂದಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದು, ಹುಬ್ಬಳ್ಳಿಯ ಕಿಮ್ಸ್ ಆವರಣದ ಎದುರು ಕಪ್ಪು ಪಟ್ಟಿ ಧರಿಸಿ ಕೋವಿಡ್ ಸಂದರ್ಭದಲ್ಲಿ ಯಾವುದೇ ತೊಂದರೆಯಾಗದೆ ಕಾರ್ಯ ಮಾಡಿದ್ದೇವೆ. ಪಿಂಚಣಿ ಸೌಲಭ್ಯವನ್ನು ನಮಗೂ ನೀಡಿ ಎಂದು ಒತ್ತಾಯಿಸಿದರು. ಅಲ್ಲದೇ ವೈದ್ಯಕೀಯ ವಿದ್ಯಾಲಯದಲ್ಲಿ ಹಾಗೂ ಸಂಶೋಧನಾ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ತಾರತಮ್ಯವನ್ನು ನಿಭಾಯಿಸುವಂತೆ ಸರ್ಕಾರಕ್ಕೆ ಒತ್ತಾಯಿಸಿದರು.

  • ರೊಮ್ಯಾಂಟಿಕ್ ಪ್ರಪೋಸ್‍ಗಾಗಿ 100 ಮೊಂಬತ್ತಿ ಹಚ್ಚಿದ- ಗೆಳತಿ ಬರೋಷ್ಟರಲ್ಲಿ ಸುಟ್ಟು ಕರಕಲಾಯ್ತು ಮನೆ

    ರೊಮ್ಯಾಂಟಿಕ್ ಪ್ರಪೋಸ್‍ಗಾಗಿ 100 ಮೊಂಬತ್ತಿ ಹಚ್ಚಿದ- ಗೆಳತಿ ಬರೋಷ್ಟರಲ್ಲಿ ಸುಟ್ಟು ಕರಕಲಾಯ್ತು ಮನೆ

    – ಭಯಾನಕ ಪ್ರಪೋಸ್ ಎಂದ ನೆಟ್ಟಿಗರು

    ಲಂಡನ್: ಪ್ರೇಮಿಯೊಬ್ಬ ಪ್ರಪೋಸ್ ಮಾಡಲು ನೂರಕ್ಕೂ ಅಧಿಕ ಮೊಂಬತ್ತಿ ಬೆಳಗಿದ್ದರಿಂದ ಮನೆಯೇ ಸುಟ್ಟು ಕರಕಲಾಗಿರುವ ಘಟನೆ ಸೌಥ್ ಯಾರ್ಕಶೈರ್ ನಲ್ಲಿ ನಡೆದಿದೆ. ಮನೆಯಲ್ಲಿರುವ ವಸ್ತುಗಳು ಸುಟ್ಟು ಕರಕಲಾಗಿರುವ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿದ್ದು, ನೆಟ್ಟಿಗರು ಭಯಾನಕ ಮದುವೆ ಪ್ರಪೋಸ್ ಎಂದು ಕಮೆಂಟ್ ಮಾಡುತ್ತಿದ್ದಾರೆ.

    ಯಾರ್ಕಶೈರ್ ನ ಯುವಕನೋರ್ವ ಗೆಳತಿಗೆ ಪ್ರಪೋಸ್ ಮಾಡಲು ಮನೆಯನ್ನ ನೂರಕ್ಕೂ ಅಧಿಕ ಟೀ ಲೈಟ್ಸ್ ಮತ್ತು ಕ್ಯಾಂಡಲ್ ಗಳಿಂದ ಅಲಂಕರಿಸಿದ್ದಾನೆ. ಕ್ಯಾಂಡಲ್ ಜೊತೆ ಬಣ್ಣ ಬಣ್ಣದ ಬಲೂನ್ ಸಹ ಜೋಡಿಸಿದ್ದಾನೆ. ಮನೆಯ ಕೋಣೆ ಸಿದ್ಧಗೊಳ್ಳುತ್ತಿದ್ದಂತೆ ಗೆಳತಿಯನ್ನು ಕರೆತರಲು ತೆರಳಿದ್ದಾನೆ.

    ಇತ್ತ ಯುವಕ ಹೋಗ್ತಿದ್ದಂತೆ ರೊಮ್ಯಾಂಟಿಕ್ ಪ್ರಪೋಸ್ ಗಾಗಿ ತಯಾರಾಗಿದ್ದ ಕೋಣೆ ಬೆಂಕಿಗಾಹುತಿಯಾಗಿದೆ. ಕೋಣೆಯಲ್ಲಿ ಟೀ ಲೈಟ್ಸ್ ಮತ್ತು ಮೇಣದ ಬತ್ತಿ ಪಕ್ಕದಲ್ಲಿರಿಸಿದ್ದರಿಂದ ಬೆಂಕಿ ಹತ್ತಿಕೊಂಡಿದೆ ಎಂದು ವರದಿಯಾಗಿದೆ.

    ಇನ್ನು ಗೆಳತಿಯನ್ನ ಕರೆದುಕೊಂಡು ಬರುವಷ್ಟರಲ್ಲಿ ಮನೆಯ ಬೆಂಕಿಗಾಹುತಿಯಾಗಿದ್ದನು ಕಂಡು ಯುವಕ ಶಾಕ್ ಆಗಿದ್ದಾನೆ. ಗೆಳೆಯನ ಪ್ರಪೋಸಲ್ ಯುವತಿ ಒಪ್ಪಿಕೊಂಡಿದ್ದು, ಜೋಡಿ ಮದುವೆಯ ಸಿದ್ಧತೆಯಲ್ಲಿದ್ದಾರೆ. ಮನೆಯನ್ನು ಕ್ಯಾಂಡಲ್ ಬಳಸಿ ಅಲಂಕರಿಸುವಾಗ ಎಚ್ಚರದಿಂದ ಇರಬೇಕೆಂದು ಯಾರ್ಕಶೈರ್ ಅಗ್ನಿಶಾಮಕದ ದಳ ತನ್ನ ಫೇಸ್ ಬುಕ್ ಪೇಜ್ ನಲ್ಲಿ ಬರೆದುಕೊಂಡಿದೆ.

  • ದೀಪದ ಬದಲು ಸಿಗರೇಟ್ ಹಚ್ಚಿ ಟೀಕೆಗೆ ಗುರಿಯಾದ ರಾಮ್ ಗೋಪಾಲ್ ವರ್ಮಾ

    ದೀಪದ ಬದಲು ಸಿಗರೇಟ್ ಹಚ್ಚಿ ಟೀಕೆಗೆ ಗುರಿಯಾದ ರಾಮ್ ಗೋಪಾಲ್ ವರ್ಮಾ

    ಬೆಂಗಳೂರು: ಕೊರೊನಾ ಮಹಾಮಾರಿ ಪ್ರಪಂಚವನ್ನೇ ವ್ಯಾಪಿಸಿದ್ದು, ಭಾರತದಲ್ಲೂ ದಿನೇ ದಿನೇ ಆತಂಕ ಹೆಚ್ಚು ಮಾಡುತ್ತಿದೆ. ಸರ್ಕಾರ ಕೊರೊನಾ ನಿಯಂತ್ರಿಸಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದು, ಕೊರೊನಾ ವಿರುದ್ಧದ ಹೋರಾಟಕ್ಕೆ ಒಗ್ಗಟ್ಟು ಪ್ರದರ್ಶಿಸಲು ದೀಪ ಬೆಳಗುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದರು. ಇದಕ್ಕೆ ಹಲವು ನಟ, ನಟಿಯರು ಸಾಥ್ ನೀಡಿ, ದೀಪ ಬೆಳಗಿ ಎಲ್ಲರೂ ಒಗ್ಗಟ್ಟಾಗಿ ಕೊರೊನಾ ವಿರುದ್ಧ ಹೋರಾಡೋಣ ಎಂಬ ಸಂದೇಶ ನೀಡಿದ್ದಾರೆ. ಆದರೆ ಟಾಲಿವುಡ್ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ದೀಪ ಬೆಳಗದೇ ಒಂದು ಫೋಟೋ ಪ್ರಕಟಿಸಿದ್ದು ಮೋದಿ ಅಭಿಮಾನಿಗಳ ಕಣ್ಣು ಕೆಂಪು ಮಾಡಿದೆ.

    ಯಾವಾಗಲೂ ವಿವಾದಾತ್ಮಕ ಪೋಸ್ಟ್‍ಗಳ ಮೂಲಕವೇ ಸುದ್ದಿಯಾಗುವ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಇದೀಗ ಗಂಭೀರ ವಿಚಾರದಲ್ಲಿ ಉದ್ಧಟತನ ತೋರಿದ್ದಾರೆ. ಹಲವು ನಟ, ನಟಿಯರು, ನಿರ್ದೇಶಕರು, ಸಂಗೀತಗಾರರು, ಧನಿಕರು, ಬಡವರ ಕಷ್ಟ ನೋಡಲಾಗದೇ ತಮ್ಮ ಕೈಲಾದಷ್ಟು ಸಹಾಯವನ್ನು ಮಾಡುತ್ತಿದ್ದಾರೆ. ಹಲವರು ಹಣದ ಸಹಾಯ ಮಾಡಿದರೆ, ಇನ್ನೂ ಕೆಲವರು ಆಹಾರ, ಅಗತ್ಯ ವಸ್ತುಗಳ ಸಹಾಯ ಮಾಡುತ್ತಿದ್ದಾರೆ. ಈ ಮೂಲಕ ನಿಮ್ಮೊಂದಿಗೆ ನಾವಿದ್ದೇವೆ ಎಂದು ಆತ್ಮಸ್ಥೈರ್ಯ ತುಂಬುತ್ತಿದ್ದಾರೆ.

    ಆರೋಗ್ಯ ತುರ್ತುಪರಿಸ್ಥಿತಿಯ ಈ ಸಂದರ್ಭದಲ್ಲಿ ಎಲ್ಲರೂ ಒಟ್ಟಾಗಿರುವುದು ತುಂಬಾ ಮುಖ್ಯವಾಗಿದೆ. ಸರ್ಕಾರದ ಆದೇಶ ಪಾಲಿಸುವುದು, ಬೇಕಾಬಿಟ್ಟಿಯಾಗಿ ನಡೆದುಕೊಳ್ಳದಿರುವುದು. ಸಾಧ್ಯವಾದರೆ ನೆರೆ ಹೊರೆಯವರಿಗೆ ಸಹಾಯ ಮಾಡುವುದು ಅಗತ್ಯವಾಗಿದೆ. ಬಹುತೇಕರು ಇದನ್ನು ಮಾಡುತ್ತಿದ್ದಾರೆ ಸಹ. ಆದರೆ ಬೆರಳೆಣಿಕೆಯಷ್ಟು ಜನ ಇಂತಹ ಕಷ್ಟದ ಸಂದರ್ಭದಲ್ಲಿಯೂ ಉಡಾಫೆಯಾಗಿ ನಡೆದುಕೊಳ್ಳುತ್ತಿದ್ದಾರೆ.

    ಇದಕ್ಕೆ ಸಾಕ್ಷಿ ಎಂಬಂತೆ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ನಡೆದುಕೊಂಡಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಕರೆ ನೀಡಿದ್ದ ದೀಪದ ಅಭಿಯಾನಕ್ಕೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ. ದೀಪ ಹಚ್ಚುವ ಬದಲು ಸಿಗರೇಟ್ ಹಚ್ಚಿದ್ದಾರೆ. ಸಿಗರೇಟ್ ಸೇದುತ್ತಿರುವ ಫೋಟೋ ಟ್ವೀಟ್ ಮಾಡಿರುವ ಅವರು, 9 ಪಿಎಂ ಡಿಸ್‍ಕ್ಲೇಮರ್ ಎಂದು ಹಾಕಿ, ಸಿಗರೇಟ್ ಸೇದುವ ಕುರಿತು ಸರ್ಕಾರದ ಎಚ್ಚರಿಕೆ ಪಾಲಿಸದಿರುವುದು, ಕೊರೊನಾ ಎಚ್ಚರಿಕೆಯನ್ನು ಪಾಲಿಸದಿರುವುದಕ್ಕಿಂತ ಅಪಾಯಕಾರಿ ಎಂದು ಬರೆದುಕೊಂಡಿದ್ದಾರೆ.

    ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹಲವರು ತರಾಟೆಗೆ ತೆಗೆದುಕೊಂಡಿದ್ದು, ದೀಪ ಹಚ್ಚದಿದ್ದರೂ ಪರವಾಗಿಲ್ಲ ಸುಮ್ಮನಾದರೂ ಇರಿ. ದೊಡ್ಡ ನಿರ್ದೇಶಕನಾಗಿ ಈ ರೀತಿ ಕೀಳು ಮಟ್ಟದ ಪೋಸ್ಟ್ ಪ್ರಕಟಿಸಬೇಡಿ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮತ್ತೊಬ್ಬರು, ನಿಮ್ಮಂಥವರಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ ಎಂದು ಪ್ರಶ್ನಿಸಿದ್ದಾರೆ. ಹೀಗೆ ಹಲವರು ಆರ್ ಜಿವಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

    ಈ ಹಿಂದೆ ಏಪ್ರಿಲ್ ಫೂಲ್ ಮಾಡುವ ಧಾವಂತದಲ್ಲಿ ನನಗೆ ಕೊರೊನಾ ಬಂದಿದೆ, ವೈದ್ಯರು ದೃಢಪಡಿಸಿದ್ದಾರೆ ಎಂದು ಟ್ವೀಟ್ ಮಾಡಿ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದ್ದರು. ಆಗಲೂ ಜನ ನಿಮಗೆ ನಿಜವಾಗಿಯೂ ಕೊರೊನಾ ಬರುತ್ತದೆ ಎಂದೆಲ್ಲ ಕಮೆಂಟ್ ಮಾಡಿ ತರಾಟೆಗೆ ತೆಗೆದುಕೊಂಡಿದ್ದರು.

  • ಬಿಜೆಪಿ ಯುವ ಮೋರ್ಚಾದಿಂದ ರೇವಣ್ಣಗೆ ಕ್ಯಾಂಡಲ್ ರವಾನೆ

    ಬಿಜೆಪಿ ಯುವ ಮೋರ್ಚಾದಿಂದ ರೇವಣ್ಣಗೆ ಕ್ಯಾಂಡಲ್ ರವಾನೆ

    – ಹೊಳೆನರಸೀಪುರ ವಿಳಾಸಕ್ಕೆ ಸ್ಪೀಡ್ ಪೋಸ್ಟ್

    ದಾವಣಗೆರೆ: ಜಿಲ್ಲೆಯ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ನಗರದ ಗಡಿಯಾರ ಕಂಬದ ಬಳಿಯಿರುವ ಪ್ರಧಾನ ಅಂಚೆ ಕಚೇರಿಯಿಂದ ಶಾಸಕರಾದ ಹೆಚ್.ಡಿ ರೇವಣ್ಣ ಅವರ ವಿಳಾಸಕ್ಕೆ ಕ್ಯಾಂಡಲ್ ಬಾಕ್ಸನ್ನು ಸ್ಪೀಡ್ ಪೋಸ್ಟ್ ಮಾಡಿದ್ದಾರೆ.

    ಈ ವೇಳೆ ಮಾತನಾಡಿದ ಯುವಮೋರ್ಚಾ ಅಧ್ಯಕ್ಷ ಶಿವನಗೌಡ ಪಾಟೀಲ್, ಪ್ರಧಾನಿ ಮೋದಿ ಅವರ ದೀಪದ ಕರೆಗೆ ಪರೋಕ್ಷವಾಗಿ ಓಗೊಟ್ಟಿರುವ ರೇವಣ್ಣ ಅವರಿಗೆ ನಮ್ಮ ಧನ್ಯವಾದಗಳು. ದೇಶ ವ್ಯಾಪ್ತಿ ಲಾಕ್‍ಡೌನ್ ಇರುವುದರಿಂದ ಮೇಣದ ಬತ್ತಿ ತರಲು ಹೊರಗೆ ಹೋದರೆ ಲಾಠಿ ಚಾರ್ಜ್ ಮಾಡುತ್ತಾರೆ ಎಂದು ಅಸಹಾಯಕತೆ ತೋರಿರುವುದು ನಮಗೆ ಗೊತ್ತಾಯಿತು ಎಂದು ಹೇಳಿದರು.

    ಇಲ್ಲಿಯ ಮಣ್ಣಿನ ಕಣಕಣದಲ್ಲೂ ದೈವ ಸಾಕ್ಷಾತ್ಕಾರದ ಶಕ್ತಿ ಇದೆ. ಇಂತಹ ಪಾವನ ಮಣ್ಣಿನಲ್ಲಿ ಮನಃಪೂರ್ವಕವಾಗಿ ದೀಪ ಬೆಳಗುವ ಪ್ರಕ್ರಿಯೇ ನಿಜಕ್ಕೂ ದೈವ ಸಾಕ್ಷಾತ್ಕಾರದ ಸಮಾನ. ಸ್ವಾತಂತ್ರ್ಯ ಭಾರತದ ನಂತರ ಭಾರತೀಯರೆಲ್ಲರೂ ದೇಶದ ಒಳತಿಗಾಗಿ, ದೇಶದ ಜನರ ಪ್ರಾಣ ರಕ್ಷಣೆಗಾಗಿ ಪ್ರಧಾನಿಯವರ ಕರೆ ಯಶಸ್ವಿಯಾಗಬೇಕಾದರೆ ರೇವಣ್ಣರ ದೈವ ಭಕ್ತರ ಸಹಕಾರವೂ ಅತ್ಯವಶ್ಯಕ. ಆದ್ದರಿಂದ ಅವರ ಅಸಾಹಯಕತೆಯನ್ನು ಮನಗಂಡು ಹೊಳೆನರಸೀಪುರ ಮನೆಯ ವಿಳಾಸಕ್ಕೆ ಮೇಣದ ಬತ್ತಿ ಪ್ಯಾಕೆಟ್‍ಗಳನ್ನು ಸ್ಪೀಡ್ ಪೋಸ್ಟ್ ಮೂಲಕ ಕಳುಹಿಸಿಕೊಡುತ್ತಿದ್ದೇವೆ ಎಂದಿದ್ದಾರೆ.

    ತಾವು ಕುಟುಂಬ ಪರಿವಾರ ಸಮೇತರಾಗಿ ನಿರ್ಮಲ ಮನಸ್ಸಿನಿಂದ ದೇಶಕ್ಕೆ ಬಂದ ಕೊರೊನಾ ಕಂಟಕ ಹೊಡೆದೊಡಿಸಲು ನಮ್ಮ ಪ್ರಧಾನಿ ಅವರ ದೀಪ ಪ್ರಜ್ವಲನ ಕಾರ್ಯಕ್ರಮದಲ್ಲಿ ಭಾಗಿಯಾಗುವಂತೆ ಮನವಿ ಮಾಡಿಕೊಳ್ಳುತ್ತಿದ್ದೇವೆ. ಅಲ್ಲದೇ ತಮ್ಮ ಪಕ್ಷದ ಯಾವುದಾದರೂ ಶಾಸಕರುಗಳು ಈ ಅಸಹಾಯಕತೆಯ ಅಳಲನ್ನು ತಮ್ಮ ಮುಂದೆ ತೋಡಿಕೊಂಡಿದ್ದರೆ ನಮಗೆ ತಿಳಿಸಿ. ನಾವು ಅವರಿಗೂ ಕಳುಹಿಸಿ ಕೊಡಲು ಸಿದ್ಧರಿದ್ದೇವೆ ಎಂದು ಯುವಮೋರ್ಚಾ ಕಾರ್ಯಕರ್ತರು ತಿಳಿಸಿದ್ದಾರೆ.

  • ಮೇಣದ ಬತ್ತಿಯಿಂದ ಹಾಸಿಗೆಗೆ ಬೆಂಕಿ- ತಾಯಿ ಸಹಿತ ಹಸುಗೂಸು ಸಾವು

    ಮೇಣದ ಬತ್ತಿಯಿಂದ ಹಾಸಿಗೆಗೆ ಬೆಂಕಿ- ತಾಯಿ ಸಹಿತ ಹಸುಗೂಸು ಸಾವು

    ಚಿತ್ರದುರ್ಗ: ಮನೆಯೊಳಗಡೆ ಕತ್ತಲು ಅಂತ ಬೆಳಕಿಗಾಗಿ ಹಚ್ಚಿಟ್ಟಿದ್ದ ಮೇಣದ ಬತ್ತಿಯು ಹಾಸಿಗೆ ಮೇಲೆ ಬಿದ್ದು ಬೆಂಕಿ ಹೊತ್ತಿ ಉರಿದು 11 ದಿನದ ಮಗು ಸಹಿತ ಬಾಣಂತಿ ಸಾವನ್ನಪ್ಪಿದ್ದಾರೆ. ಈ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ತೊಡ್ಲಾರಹಟ್ಟಿ ಗ್ರಾಮದಲ್ಲಿ ನಡೆದಿದೆ.

    ಗೌರಮ್ಮ(20) ಹಾಗೂ 15 ದಿನದ ಗಂಡು ಮಗು ಬೆಂಕಿಗೆ ಆಹುತಿಯಾದ ದುರ್ದೈವಿಗಳು. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ತೊಡ್ಲಾರಹಟ್ಟಿ ಗ್ರಾಮದಲ್ಲಿ ಗೌರಮ್ಮ ಕಳೆದ ಮೂರು ವರ್ಷಗಳ ಹಿಂದೆ ಇದೇ ಗ್ರಾಮದ ಸೋದರ ಮಾವನ ಮಗನಾದ ಲೋಕೇಶ್ ಎಂಬವರ ಜೊತೆ ವಿವಾಹವಾಗಿದ್ದರು. ಈ ದಂಪತಿಗೆ 11 ದಿನಗಳ ಹಿಂದೆ ಗಂಡು ಮಗು ಜನನವಾಗಿತ್ತು.

    ಗುರುವಾರ ಸಂಜೆ ಮನೆಯಲ್ಲಿ ಕರೆಂಟ್ ಹೋದ ಕಾರಣ ಮೇಣದ ಬತ್ತಿ ಹಚ್ಚಿದ್ದಾರೆ. ಮಗು ಹಾಗೂ ತಾಯಿ ಮಲಗಿದ್ದ ಹಾಸಿಗೆ ಮೇಲ್ಭಾಗದಲ್ಲೇ ಮೇಣದ ಬತ್ತಿ ಹಚ್ಚಿದ್ದರಿಂದ ಆಕಸ್ಮಿಕವಾಗಿ ಮೇಣದಬತ್ತಿ ಹಾಸಿಗೆ ಮೇಲೆ ಬಿದ್ದಿದೆ. ಆ ಸಮಯದಲ್ಲಿ ತಾಯಿ ಮತ್ತು ಮಗು ಗಾಢ ನಿದ್ರೆಯಲ್ಲಿದ್ದರು ಎಂದು ಹೇಳಲಾಗುತ್ತಿದ್ದು, ಮೇಣದ ಬತ್ತಿಯಲ್ಲಿದ್ದ ಬೆಂಕಿ ಹಾಸಿಗೆಯ ಪೂರ್ಣಭಾಗಕ್ಕೆ ಹೊತ್ತಿಕೊಂಡಿದೆ. ಹೀಗಾಗಿ ಬೆಂಕಿ ನೊಡುವಷ್ಟರಲ್ಲಿ ತಾಯಿ ಹಾಗೂ ಮಗುವಿಗೆ ಬೆಂಕಿ ಹೊತ್ತಿಕೊಂಡಿದ್ದು, ಹಸುಗೂಸು ಸ್ಥಳದಲ್ಲೇ ಸಾವನ್ನಪ್ಪಿದೆ.

    ಈ ವಿಚಾರ ತಿಳಿದ ಕೂಡಲೇ ಗೌರಮ್ಮಳ ತಾಯಿ ಹಾಗೂ ಗಂಡ ಲೋಕೇಶ್ ಸ್ಥಳಕ್ಕೆ ಧಾವಿಸಿ, ಬೆಂಕಿಯಲ್ಲಿ ಬೆಂದಿದ್ದ ಗೌರಮ್ಮನನ್ನು ತಕ್ಷಣ ಚಳ್ಳಕೆರೆ ಆಸ್ಪತ್ರೆಗೆ ದಾಖಲಿಸಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಗೌರಮ್ಮ ಸಾವನ್ನಪ್ಪಿದ್ದಾರೆ.

    ಈ ಬಗ್ಗೆ ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ತಹಶೀಲ್ದಾರ್ ವೆಂಕಟೇಶಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದರು.

  • ಆನೆಗೊಂದಿ ಉತ್ಸವ – ಪ್ರಚಾರಕ್ಕಾಗಿ ಮೇಣದಬತ್ತಿ ಮೊರೆಹೋದ ಅಧಿಕಾರಿಗಳು

    ಆನೆಗೊಂದಿ ಉತ್ಸವ – ಪ್ರಚಾರಕ್ಕಾಗಿ ಮೇಣದಬತ್ತಿ ಮೊರೆಹೋದ ಅಧಿಕಾರಿಗಳು

    ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗೊಂದಿ ಉತ್ಸವ 2020ರ ಪ್ರಚಾರಕ್ಕಾಗಿ ಹಾಗೂ ಸ್ಥಳೀಯರನ್ನು ಉತ್ಸವದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಪ್ರೇರೇಪಿಸಲು ಅಧಿಕಾರಿಗಳು ಮೇಣದಬತ್ತಿ ಮೊರೆ ಹೋಗಿದ್ದಾರೆ.

    ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪಿಡಿಒಗಳು, ಗಂಗಾವತಿ ಇಒ, ಡಾ. ಡಿ. ಮೋಹನ್ ನೇತೃತ್ವದಲ್ಲಿ ಆನೆಗೊಂದಿ ಗ್ರಾಮದಲ್ಲಿ ಮೇಣದಬತ್ತಿ ಉರಿಸಿ ಉತ್ಸವ-2020 ಎಂದು ಸಂದೇಶ ಸಾರುವ ಮೂಲಕ ಪ್ರಚಾರಕ್ಕೆ ಮುನ್ನುಡಿ ಬರೆದರು.

    ಅಲ್ಲದೇ ಇದೇ ಸಂದರ್ಭದಲ್ಲಿ ಮನೆಗಳನ್ನು ಸಿಂಗರಿಸಿ ಉತ್ಸವದ ದಿನಗಳಲ್ಲಿ ಮನೆಯ ಮುಂದೆ ತಳೀರು ತೋರಣ ಕಟ್ಟಿ, ರಂಗೋಲಿ ಹಾಕಿ ಸಿಂಗರಿಸುವಂತೆ ಮನವಿ ಮಾಡಲಾಯಿತು.

  • ಸ್ಟೈಫಂಡ್‍ಗಾಗಿ ಕ್ಯಾಂಡಲ್ ಹಿಡಿದು ಪ್ರತಿಭಟಿಸಿದ ವೈದ್ಯಕೀಯ ವಿದ್ಯಾರ್ಥಿಗಳು

    ಸ್ಟೈಫಂಡ್‍ಗಾಗಿ ಕ್ಯಾಂಡಲ್ ಹಿಡಿದು ಪ್ರತಿಭಟಿಸಿದ ವೈದ್ಯಕೀಯ ವಿದ್ಯಾರ್ಥಿಗಳು

    ದಾವಣಗೆರೆ: ಜಿಲ್ಲಾಸ್ಪತ್ರೆಯ ವೈದ್ಯ ವಿದ್ಯಾರ್ಥಿಗಳು ಶಿಷ್ಯ ವೇತನಕ್ಕಾಗಿ ನಡೆಸುತ್ತಿರುವ ಪ್ರತಿಭಟನೆ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ವಿದ್ಯಾರ್ಥಿಗಳು ಕ್ಯಾಂಡಲ್ ಹಿಡಿದು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.

    ರಾಜ್ಯ ಸರ್ಕಾರ 8 ತಿಂಗಳ ಶಿಷ್ಯ ವೇತನವನ್ನು ನೀಡದ್ದರಿಂದ ಕಳೆದ ಎರಡು ದಿನಗಳಿಂದ 235 ವೈದ್ಯ ವಿದ್ಯಾರ್ಥಿಗಳು ನಗರದ ಚಿಗಟೇರಿ ಜಿಲ್ಲಾಸ್ಪತ್ರೆ ಮುಂಭಾಗ ಪೆಂಡಲ್ ಹಾಕಿ ಪ್ರತಿಭಟನೆ ನಡೆಸುತ್ತಿದ್ದರು. ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದರೂ, ರಾಜ್ಯ ಸರ್ಕಾರ ಇದಕ್ಕೂ ನಮಗೂ, ಸಂಬಂಧವಿಲ್ಲದಂತೆ ಕಣ್ಣು ಮುಚ್ಚಿ ಕುಳಿತುಕೊಂಡಿದೆ.

    ಅಸಮಾಧಾನಗೊಂಡಿದ್ದ ವಿದ್ಯಾರ್ಥಿಗಳು ಇಂದು ಕ್ಯಾಂಡಲ್ ಹಿಡಿದು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗುತ್ತಾ, ನಗರದ ಪ್ರಮುಖ ಬೀದಿಗಳಲ್ಲಿ ಕ್ಯಾಂಡಲ್ ಹಿಡಿದು ಪ್ರತಿಭಟನೆಯನ್ನು ನಡೆಸಿದವು. ಕೂಡಲೇ ಸರ್ಕಾರ ಸಮಸ್ಯೆಯನ್ನು ಬಗೆಹರಿಸಿ, ವಿದ್ಯಾರ್ಥಿ ವೇತನವನ್ನು ಬಿಡುಗಡೆ ಮಾಡುವಂತೆ ಕೇಳಿಕೊಂಡಿದ್ದಾರೆ. ಅಲ್ಲದೇ ರಾಜ್ಯ ಸರ್ಕಾರ ವಿದ್ಯಾರ್ಥಿ ವೇತನ ನೀಡುವವರೆಗೂ, ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳುವುದಿಲ್ಲವೆಂದು ಇದೇ ವೇಳೆ ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಸರ್ಕಾರಕ್ಕೆ ಎಚ್ಚರಿಕೆಯನ್ನು ನೀಡಿವೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • 1 ನಿಮಿಷದಲ್ಲಿ 20 ಉರಿಯುವ ಕ್ಯಾಂಡಲ್ ಬಾಯಲ್ಲಿ ಇಟ್ಟುಕೊಂಡ್ರು!

    1 ನಿಮಿಷದಲ್ಲಿ 20 ಉರಿಯುವ ಕ್ಯಾಂಡಲ್ ಬಾಯಲ್ಲಿ ಇಟ್ಟುಕೊಂಡ್ರು!

    ಮೈಸೂರು: ಒಂದು ನಿಮಿಷದಲ್ಲಿ 20 ಉರಿಯುವ ಕ್ಯಾಂಡಲ್ ಬಾಯಲ್ಲಿ ಇಟ್ಟುಕೊಂಡು ಲಿಮ್ಕಾ ಹಾಗೂ ಗಿನ್ನಿಸ್ ದಾಖಲೆಗೆ ಸೇರುವ ಯತ್ನ ನಗರದಲ್ಲಿ ನಡೆದಿದೆ.

    ಜಿಲ್ಲೆಯ ವಿದ್ಯಾರಣ್ಯಪುರಂ ನಿವಾಸಿ ಶಿವಕುಮಾರ್ ಅವರು ಲಿಮ್ಕಾ ಮತ್ತು ಗಿನ್ನಿಸ್ ದಾಖಲೆ ಸೇರುವ ಪ್ರಯತ್ನ ಮಾಡಿದ್ದಾರೆ. ಈ ಮೂಲಕ ಗೋರೆಗಾಂವ್ ನ ದಿನೇಶ್ ಶಿವನಾಥ್ ಉಪಾಧ್ಯಾಯರವರ ದಾಖಲೆ ಮುರಿಯಲು ಮುಂದಾಗಿದ್ದಾರೆ.

    ಮೈಸೂರಿನ ಪತ್ರಕರ್ತರ ಭವನದಲ್ಲಿ ಶಿವಕುಮಾರ್ ಈ ಸಾಹಸವನ್ನು ಪ್ರದರ್ಶಿಸಿದ್ದಾರೆ. 2008 ರಲ್ಲಿ ಅಂಗೈಯಲ್ಲಿ 24 ಕೋಳಿ ಮೊಟ್ಟೆಗಳನ್ನು ಇಟ್ಟುಕೊಂಡು ಲಿಮ್ಕಾ ದಾಖಲೆಗೆ ಸೇರಿದ್ದ ಶಿವಕುಮಾರ್, 2009 ರಲ್ಲಿ ಬಾಯಲ್ಲಿ 280 ಸ್ಟ್ರಾಗಳನ್ನು ಹಾಗೂ 2011 ರಲ್ಲಿ ಬಾಯಲ್ಲಿ 145 ಸಿಗರೇಟ್ ಗಳನ್ನು ಇಟ್ಟುಕೊಂಡು ಲಿಮ್ಕಾ ದಾಖಲೆ ಮಾಡಲು ಯತ್ನಿಸಿದ್ದರು.

    ಇದೀಗ 20 ಕ್ಯಾಂಡಲ್ ಗಳನ್ನು ಬಾಯಲ್ಲಿ ಇಟ್ಟುಕೊಂಡು ದಾಖಲೆ ಬರೆಯಲು ಮುಂದಾಗಿದ್ದಾರೆ. 15 ಕ್ಯಾಂಡಲ್ ಗಳನ್ನು 30 ಸೆಕೆಂಡ್ ಗಳ ಕಾಲ ಇಟ್ಟುಕೊಂಡು ಗಿನ್ನೆಸ್ ದಾಖಲೆ ನಿರ್ಮಿಸಿರುವ ಮುಂಬಯಿಯ ದಿನೇಶ್ ಶಿವನಾಥ್ ಉಪಾಧ್ಯಾಯ ಅವರ ದಾಖಲೆ ಮುರಿಯಲು ಶಿವಕುಮಾರ್ ಸಿದ್ಧರಾಗಿದ್ದಾರೆ.