Tag: cantor

  • ಬೈಕ್‌ಗೆ ಡಿಕ್ಕಿ- ಸವಾರ ಸ್ಥಳದಲ್ಲಿಯೇ ಸಾವು, ಕ್ಯಾಂಟರ್ ಚಾಲಕ ಪರಾರಿ

    ಬೈಕ್‌ಗೆ ಡಿಕ್ಕಿ- ಸವಾರ ಸ್ಥಳದಲ್ಲಿಯೇ ಸಾವು, ಕ್ಯಾಂಟರ್ ಚಾಲಕ ಪರಾರಿ

    ಚಿಕ್ಕಬಳ್ಳಾಪುರ: ದ್ವಿಚಕ್ರ ವಾಹನ ಹಾಗೂ ಕ್ಯಾಂಟರ್ ನಡುವೆ ಡಿಕ್ಕಿ ಸಂಭವಿಸಿ, ದ್ವಿಚಕ್ರ ವಾಹನ ಸವಾರ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ಮೇಷ್ಟ್ರು ಮನೆ ಕ್ರಾಸ್ ಬಳಿ ಸೋಮವಾರ ಬೆಳಗ್ಗೆ ಸಂಭವಿಸಿದೆ.

    ಮರಳೇನಹಳ್ಳಿ ಗ್ರಾಮದ ಹನುಮಂತರಾಯಪ್ಪ(48) ಮೃತ ವ್ಯಕ್ತಿ. ಸೋಮವಾರ ಬೆಳಗ್ಗೆ ಮರಳೇನಹಳ್ಳಿಯಿಂದ ದೊಡ್ಡಬೆಳವಂಗಲ ಕಡೆಗೆ ತೆರಳುತ್ತಿದ್ದ ವೇಳೆ ಮೇಷ್ಟ್ರ ಮನೆ ಕ್ರಾಸ್ ಬಳಿ ಕ್ಯಾಂಟರ್ ಹಾಗೂ ಬೈಕ್ ಡಿಕ್ಕಿಯಾಗಿದೆ. ಈ ವೇಳೆ ಹನುಮಂತರಾಯಪ್ಪ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ತುಂಬು ಗರ್ಭಿಣಿ ಮೇಲೆ ಗ್ಯಾಂಗ್ ರೇಪ್ – ಬೆಚ್ಚಿ ಬಿದ್ದ ಪಾಕ್

    ಅಪಘಾತ ಮಾಡಿದ ಕ್ಯಾಂಟರ್ ವಾಹನ ಸ್ಥಳದಿಂದ ಪರಾರಿಯಾಗಿದೆ. ಸ್ಥಳಕ್ಕೆ ಡಿವೈಎಸ್ಪಿ ನಾಗರಾಜ್, ಇನ್ಸ್‌ಪೆಕ್ಟರ್ ಸತೀಶ್ ತೆರಳಿ ಪರಿಶೀಲನೆ ನಡೆಸಿದ್ದಾರೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಇದನ್ನೂ ಓದಿ: ಅನುಭವ ಮಂಟಪ ದಾಖಲೆಗಳನ್ನು ಪುರಾತತ್ವ ಇಲಾಖೆ ಪರಿಶೀಲಿಸಲಿದೆ: ಬೊಮ್ಮಾಯಿ

  • ಅಪಘಾತ- ಕ್ಯಾಂಟರ್ ಬಳಿ ನಿಂತಿದ್ದ ನಾಲ್ವರು ಸ್ಥಳದಲ್ಲೇ ಸಾವು

    ಅಪಘಾತ- ಕ್ಯಾಂಟರ್ ಬಳಿ ನಿಂತಿದ್ದ ನಾಲ್ವರು ಸ್ಥಳದಲ್ಲೇ ಸಾವು

    ಬಾಗಲಕೊಟೆ: ಪಂಚರ್ ಆಗಿ ನಿಂತಿದ್ದ ಕ್ಯಾಂಟರ್‌ಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಕ್ಯಾಂಟರ್ ಬಳಿ ನಿಂತಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಬಾಡಗಂಡಿಯಲ್ಲಿ ನಡೆದಿದೆ.

    ರಜಾಕ್ ತಾಂಬೊಳೆ(54), ನಾಶಿರ್ ಮುಲ್ಲಾ(42), ಮಲ್ಲಪ್ಪ ಮಳಲಿ(42), ರಾಮಸ್ವಾಮಿ(36) ಮೃತರು. ವಿಜಯಪುರ ಜಿಲ್ಲೆ ಕಾರಜೋಳ ಗ್ರಾಮದಿಂದ ಕ್ಯಾಂಟರ್‌ನಲ್ಲಿ ಈರುಳ್ಳಿ ತುಂಬಿಕೊಂಡು ಬೆಂಗಳೂರಿಗೆ ಮಾರಾಟ ಮಾಡಲು ಹೊರಟಿದ್ದರು. ಆದರೆ ಬೀಳಗಿ ತಾಲೂಕಿನ ಬಾಡಗಂಡಿ ಬಳಿ ವಾಹನ ಪಂಚರ್ ಆಗಿದೆ. ಇದರಿಂದಾಗಿ ಚಾಲಕ ನಾಶೀರ್ ಮುಲ್ಲಾ ವಾಹನ ಮಾಲೀಕ ಮಲ್ಲಪ್ಪ ಅವರಿಗೆ ಫೋನ್ ಮಾಡಿ ಹೇಳಿದ್ದಾರೆ.

    crime

    ಇದರಿಂದಾಗಿ ಬೀಳಗಿ ಪಟ್ಟಣದಿಂದ ರಾಮಸ್ವಾಮಿ ಟಂಟಂನಲ್ಲಿ ಟೈರ್ ಹಾಕಿಕೊಂಡು ಒಟ್ಟು ಐವರು ತೆರಳಿದ್ದಾರೆ. ಒಬ್ಬ ಸ್ಟೇಪ್ನಿ ಟೈರ್ ಜೋಡಿಸುತ್ತಿದ್ದು, ಉಳಿದ ನಾಲ್ವರು ವಾಹನ ಪಕ್ಕ ನಿಂತಿದ್ದರು. ಈ ವೇಳೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಪರಾರಿಯಾಗಿದೆ. ಇದರ ಪರಿಣಾಮ ನಾಲ್ವರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಇದನ್ನೂ ಓದಿ: ಉಪಚುನಾವಣೆ: ಉತ್ತರಾಖಂಡ್ ಸಿಎಂಗೆ ಧಾಮಿಗೆ ಭರ್ಜರಿ ಗೆಲುವು

    POLICE JEEP

    ಬೀಳಗಿ ಆಸ್ಪತ್ರೆಯಲ್ಲಿ ನಾಲ್ವರ ಶವ ಪರೀಕ್ಷೆಗೆ ತೆಗೆದುಕೊಂಡು ಹೋಗಲಾಗಿದೆ. ಆಸ್ಪತ್ರೆ ಆವರಣದಲ್ಲಿ ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಎಂಎಲ್‌ಸಿ ಹನಮಂತ ನಿರಾಣಿ ಬೀಳಗಿ ಆಸ್ಪತ್ರೆಗೆ ಭೇಟಿ ನೀಡಿದ್ದು, ಮೃತ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಇದೇ ವೇಳೆ ಪೊಲೀಸರಿಂದ ಘಟನೆಯ ಮಾಹಿತಿ ಪಡೆದುಕೊಂಡಿದ್ದಾರೆ. ಜೊತೆಗೆ ಡಿಕ್ಕಿ ಹೊಡೆದು ಪರಾರಿಯಾದ ವಾಹನ ಪತ್ತೆ ಹಚ್ಚಲು ಪೊಲೀಸರಿಗೆ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಸೋನಿಯಾ ಗಾಂಧಿ ಬಳಿಕ ಪ್ರಿಯಾಂಕಾ ಗಾಂಧಿಗೂ ಕೊರೊನಾ

  • ಬಸ್, ಕ್ಯಾಂಟರ್ ನಡುವೆ ಡಿಕ್ಕಿ – ಹಲವರಿಗೆ ಗಾಯ

    ಬಸ್, ಕ್ಯಾಂಟರ್ ನಡುವೆ ಡಿಕ್ಕಿ – ಹಲವರಿಗೆ ಗಾಯ

    ಚಿಕ್ಕಬಳ್ಳಾಪುರ: ಕೆಎಸ್‍ಆರ್‌ಟಿಸಿ ಬಸ್ ಹಾಗೂ ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹಲವರು ಗಾಯಗೊಂಡಿರುವ ಘಟನೆ ಚಿಕ್ಕಬಳ್ಳಾಪುರದ ಗೌರಿಬಿದನೂರು ಮಾರ್ಗದ ಕಣಿವೆ ಪ್ರದೇಶದಲ್ಲಿ ನಡೆದಿದೆ.

    ಚಿಕ್ಕಬಳ್ಳಾಪುರ ಕಡೆಯಿಂದ ಗೌರಿಬಿದನೂರಿಗೆ ತೆರಳುತ್ತಿದ್ದ ಪುತ್ತೂರು ಘಟಕದ ಬಸ್‍ಗೆ ಗೌರಿಬಿದನೂರು ಕಡೆಯಿಂದ ಚಿಕ್ಕಬಳ್ಳಾಪುರದ ಕಡೆಗೆ ಕಬ್ಬಿಣದ ರಾಡ್‍ಗಳನ್ನು ಹೊತ್ತು ಬರುತ್ತಿದ್ದ ಕ್ಯಾಂಟರ್ ನಡುವೆ ಡಿಕ್ಕಿ ಸಂಭವಿಸಿದೆ.

    ಕಣಿವೆ ಪ್ರದೇಶದಲ್ಲಿ ಸೇತುವೆ ಬಳಿ ಕವಲು ದಾರಿಯಿದ್ದು, ಎಡ ಬದಿಯಲ್ಲಿ ಬರಬೇಕಿದ್ದ ಕ್ಯಾಂಟರ್ ಚಾಲಕ ಬಲಬದಿಯಲ್ಲಿ ಬಂದಿದ್ದು, ಎದರುಗಡೆ ಬರುತ್ತಿದ್ದ ಬಸ್‍ಗೆ ಡಿಕ್ಕಿ ಹೊಡೆದಿದ್ದಾನೆ. ಇದನ್ನೂ ಓದಿ:  ಪತಿ ಬಿಟ್ಟು ಪ್ರಿಯಕರನ ಜೊತೆ ಹೋಗಿದ್ದ ಮಹಿಳೆ ಅಸಹಜ ಸಾವು!

    ಪರಿಣಾಮ ಎರಡು ವಾಹನಗಳ ಮುಂಭಾಗ ಜಖಂಗೊಂಡಿದ್ದು, ಕ್ಯಾಂಟರ್‌ನಲ್ಲಿದ್ದವರು ಹಾಗೂ ಬಸ್ ಚಾಲಕ, ನಿರ್ವಾಹಕ ಸೇರಿ 7-8 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ. ಇದನ್ನೂ ಓದಿ: ಸೋದರಮಾವನ ಜೊತೆ ಸೇರಿ ಪತಿಯನ್ನೇ ಕೊಂದಳು!

    ಈ ಸಂಬಂಧ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ಕೊಡಲಾಗುತ್ತಿದೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

  • ನಿಯಂತ್ರಣ ತಪ್ಪಿ ಹಾಲಿನ ಟ್ಯಾಂಕರ್‌ ಪಲ್ಟಿ – ಹಾಲಿಗಾಗಿ ಮುಗಿಬಿದ್ದ ಜನ

    ನಿಯಂತ್ರಣ ತಪ್ಪಿ ಹಾಲಿನ ಟ್ಯಾಂಕರ್‌ ಪಲ್ಟಿ – ಹಾಲಿಗಾಗಿ ಮುಗಿಬಿದ್ದ ಜನ

    ಮಂಡ್ಯ: ನಿಯಂತ್ರಣ ತಪ್ಪಿ ಹಾಲಿನ ಕ್ಯಾಂಟರ್ ಬಿದ್ದಿದ್ದೆ ತಡ ಅಕ್ಕ-ಪಕ್ಕದಲ್ಲಿ ಇದ್ದ ಜನರು ಬಿಂದಿಗೆ, ಕ್ಯಾನ್, ಪಾತ್ರೆಗಳನ್ನು ತಂದು ಹಾಲು ತುಂಬಿಕೊಳ್ಳಲು ಮುಗಿ ಬಿದ್ದ ಘಟನೆ ಮಂಡ್ಯದ ಇಂಡುವಾಳು ಗ್ರಾಮದ ಬಳಿ ಜರುಗಿದೆ.

    ಮಂಡ್ಯ ಹಾಲು ಒಕ್ಕೂಟಕ್ಕೆ ಸೇರಿದ ಹಾಲಿನ ಕ್ಯಾಂಟರ್ ರಾಗಿಮುದ್ದನಹಳ್ಳಿ ಗ್ರಾಮದಿಂದ, ಹಾಲನ್ನು ತುಂಬಿಕೊಂಡು ಮಂಡ್ಯದ ಗೆಜ್ಜಲುಗೆರೆಯಲ್ಲಿರುವ ಮನ್‍ಮುಲ್‍ಗೆ ಬರ್ತಾ ಇತ್ತು. ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಬರುವ ವೇಳೆ ಇಂಡುವಾಳು ಗ್ರಾಮದ ಬಳಿ ನಿಯಂತ್ರಣ ತಪ್ಪಿ ಹಾಲು ತುಂಬಿದ್ದ ಟ್ಯಾಂಕರ್ ಪಟ್ಟಿ ಹೊಡೆದಿದೆ. ಇದನ್ನೂ ಓದಿ: ಬೊಮ್ಮಾಯಿ ಸರ್ಕಾರಕ್ಕೆ 6 ತಿಂಗಳು – ರಿಪೋರ್ಟ್ ಕಾರ್ಡ್ ತರಿಸಿಕೊಂಡ ಹೈಕಮಾಂಡ್!

    ಟ್ಯಾಂಕರ್ ಪಟ್ಟಿಯಾಗಿದ ತಕ್ಷಣ ಟ್ಯಾಂಕರ್‌ನಲ್ಲಿದ್ದ ನೂರಾರು ಲೀಟರ್ ಹಾಲು ರಸ್ತೆಗೆ ಚೆಲ್ಲುತ್ತಿರುವುದನ್ನು ಕಂಡ ಸ್ಥಳೀಯರು ಬಿಂದಿಗೆ, ಕ್ಯಾನ್, ಪಾತ್ರೆಯನ್ನು ತಂದು ಹಾಲನ್ನು ತುಂಬಿಕೊಳ್ಳಲು ನಾ ಮುಂದು ತಾ ಮುಂದು ಎಂದು ಮುಗಿ ಬಿಳುತ್ತಾರೆ. ಟ್ಯಾಂಕರ್ ಪಲ್ಟಿಯಿಂದ ಇದೀಗ ಮನ್‍ಮುಲ್‍ಗೆ ಸಾವಿರಾರು ರೂಪಾಯಿ ನಷ್ಟವಾಗಿದೆ.

  • ಕ್ಯಾಂಟರ್ ಪಲ್ಟಿ- ಸ್ಥಳದಲ್ಲೇ ಇಬ್ಬರು ಸಾವು

    ಕ್ಯಾಂಟರ್ ಪಲ್ಟಿ- ಸ್ಥಳದಲ್ಲೇ ಇಬ್ಬರು ಸಾವು

    ಧಾರವಾಡ: ಕ್ಯಾಂಟರ್ ವಾಹನ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತಿಬ್ಬರಿಗೆ ಗಾಯಗಳಾಗಿರುವ ಘಟನೆ ಧಾರವಾಡ ತಾಲೂಕಿನ ಮನಸೂರ ಗ್ರಾಮದ ಬಳಿಯ ಬೈಪಾಸ್ ಹೆದ್ದಾರಿಯಲ್ಲಿ ನಡೆದಿದೆ.

    ನಿದ್ದೆ ಮಂಪರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿಯಾಗಿದೆ. ವೇಗವಾಗಿ ಚಲಿಸುತ್ತಿದ್ದರಿಂದ ವಾಹನದಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದಾರೆ. ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿವೆ. ಬೆಳಗಿನಜಾವ ಘಟನೆ ನಡೆದಿದೆ. ಇದನ್ನೂ ಓದಿ: ಕಲ್ಯಾಣ ಕರ್ನಾಟಕದಲ್ಲಿ ಮತ್ತೆ ರಣ ಮಳೆ- ಪ್ರವಾಹ ಪರಿಸ್ಥಿತಿ

    ಸ್ಥಳಕ್ಕೆ ಧಾರವಾಡ ಗ್ರಾಮೀಣ ಪೋಲಿಸರು ಭೇಟಿ ನೀಡಿ ಪರಿಶಿಲನೆ ನಡೆಸಿದ್ದಾರೆ. ಗಾಯಗೊಂಡವರನ್ನು ಅಂಬುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಧಾರವಾಡ ಗ್ರಾಮೀಣ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

  • ಕಣ್ಣೆದುರೇ ಮೃತಪಟ್ಟ 5 ವರ್ಷದ ಮಗಳನ್ನು ನೋಡಲು ಸ್ಟ್ರೆಚರ್ ನಲ್ಲಿ ಬಂದ ತಾಯಿ!

    ಕಣ್ಣೆದುರೇ ಮೃತಪಟ್ಟ 5 ವರ್ಷದ ಮಗಳನ್ನು ನೋಡಲು ಸ್ಟ್ರೆಚರ್ ನಲ್ಲಿ ಬಂದ ತಾಯಿ!

    ಮಂಡ್ಯ: ಕ್ಯಾಂಟರ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮದುವೆಗೆಂದು ಹೊರಟಿದ್ದ 13 ಜನ ಮೃತಪಟ್ಟ ಘಟನೆಯ ಮಧ್ಯೆಯೊಂದು ಮನಕಲಕುವ ಘಟನೆ ನಡೆದಿದೆ.

    ಅಪಘಾತದ ಬಳಿಕ ತನ್ನ 5 ವರ್ಷದ ಮಗಳ ಶವವನ್ನು ನೋಡಲು ಗಂಭೀರ ಸ್ಥಿತಿಯಲ್ಲಿರೋ ತಾಯಿ ಸ್ಟ್ರೆಚರ್ ನಲ್ಲೇ ಬಂದಿದ್ದು, ನೆರೆದವರಲ್ಲಿ ಕಣ್ಣೀರು ತರಿಸಿತ್ತು. ಘಟನೆಯಲ್ಲಿ ಮಂಜುಳಮ್ಮ ಎಂಬವರ ಕೈ ಕಾಲು ಮುರಿದಿತ್ತು. ಇವರ ಮಗಳಾದ 5 ವರ್ಷದ ಸೋನು ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಳು. ಮೃತಳ ಶವ ಪರೀಕ್ಷೆ ಶವಾಗಾರದಲ್ಲಿ ನಡೆಯುತ್ತಿತ್ತು. ಈ ವೇಳೆ ತಾಯಿ ತನ್ನ ಮಗಳ ಶವವನ್ನು ನೋಡಲು ಶವಾಗಾರಕ್ಕೆ ಬಂದಿದ್ದರು.

    ಶವಾಗಾರದ ಮುಂದೆ ಮಗಳ ಶವವನ್ನು ನೋಡಲು ಕಾಯುತ್ತಾ ತಾಯಿ ಮೂಕ ರೋಧನೆ ವ್ಯಕ್ತಪಡಿಸುತ್ತಿದ್ದರು. ಕೊನೆಗೆ ಶವ ಪರೀಕ್ಷೆ ಮುಗಿಸಿ ಬ್ಯಾಂಡೇಜ್ ಸುತ್ತಿದ್ದ ಮಗಳನ್ನು ನೋಡಿದ ತಾಯಿಯ ಆಕ್ರಂದನ ಮುಗಿಲುಮುಟ್ಟಿತ್ತು. ಹೆತ್ತ ತಾಯಿಯ ರೋಧನೆ ನೋಡಿ ಸ್ಥಳದಲ್ಲಿದ್ದವರು ಕ್ರೂರ ವಿಧಿಗೆ ಹಿಡಿಶಾಪ ಹಾಕುತ್ತಾ ಕಣ್ಣೀರು ಹಾಕಿದ್ರು.

    ಅವಸರದಹಳ್ಳಿ ಗ್ರಾಮದಿಂದ ಮದ್ದೂರಿಗೆ ಕ್ಯಾಂಟರ್ ನಲ್ಲಿ ಮದುವೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಮಾಚಹಳ್ಳಿ ಸಮೀಪ ಚಾಲಕನ ನಿಯಂತ್ರಣ ತಪ್ಪಿದ ಕ್ಯಾಂಟರ್ ಮರಕ್ಕೆ ಡಿಕ್ಕಿ ಹೊಡೆದಿದೆ. ಈ ಘಟನೆಯಲ್ಲಿ ಶಿವಣ್ಣ(45), ಸೋನ(5), ರೇಣುಕಮ್ಮ(40), ಮೀನಾಕ್ಷಿ(37), ಜಯಮ್ಮ(46), ಪಾರ್ವತಮ್ಮ(48), ಬೀರಮ್ಮ(51), ಸಣ್ಣಮ್ಮ(60), ಮಾದಮ್ಮ(63), ಕಾಳಮ್ಮ(56), ಕಮಲಮ್ಮ(75), ಕರಿಯಪ್ಪ(56), ಪೂಜಾ(18) ಮೃತಪಟ್ಟಿದ್ದಾರೆ. ಸದ್ಯ ಮೃತರ ಶವಪರೀಕ್ಷೆ ಮಂಡ್ಯ ಜಿಲ್ಲಾಸ್ಪತ್ರೆ, ಮದ್ದೂರು ತಾಲೂಕು ಆಸ್ಪತ್ರೆಯಲ್ಲಿ ನಡೆದಿದೆ.

    ಘಟನೆಯಲ್ಲಿ ಸುಮಾರು 50 ಮಂದಿ ಗಾಯಗೊಂಡಿದ್ದಾರೆ ಎನ್ನಲಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಶಾಸಕ ಯೋಗೇಶ್ವರ್ ಅವರು ಮದ್ದೂರು ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಬಳಿಕ ಮೃತರ ಕುಟುಂಬಕ್ಕೆ ಪರಿಹಾರ ನೀಡುವಂತೆ ಒತ್ತಾಯಿಸಿದ್ರು.

    https://www.youtube.com/watch?v=DkTaCz1LovU