Tag: Capital

  • ರಾಜಧಾನಿಗೆ ಅಮರಾವತಿಯನ್ನೇ ಚಂದ್ರಬಾಬು ನಾಯ್ಡು ಆಯ್ದುಕೊಂಡಿದ್ದು ಏಕೆ..?

    ರಾಜಧಾನಿಗೆ ಅಮರಾವತಿಯನ್ನೇ ಚಂದ್ರಬಾಬು ನಾಯ್ಡು ಆಯ್ದುಕೊಂಡಿದ್ದು ಏಕೆ..?

    – ಭವಿಷ್ಯದ ಅಮರಾವತಿ ಹೇಗಿರಲಿದೆ?, ಈಗ ಹೇಗಿದೆ..?

    ಬ್ಬರು ರಾಜಕೀಯ ದೈತ್ಯರು ರೆಡ್ಡಿ ಮತ್ತು ನಾಯ್ಡು ನಡುವಿನ ಯುದ್ಧದಲ್ಲಿ ಸಿಲುಕಿದ ನಗರವು ಅಂತಿಮವಾಗಿ ಬೂದಿಯಿಂದ ಮೇಲೇರಬಹುದು. ನಾಯ್ಡು ಅವರು ಈಗ ಕೇಂದ್ರದಲ್ಲಿ ಪ್ರಮುಖ ಮಿತ್ರರಾಗಿದ್ದಾರೆ ಮತ್ತು ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿದ್ದಾರೆ. ಈ ಮೂಲಕ ಅಮರಾವತಿಯ ಭವಿಷ್ಯದ ಕೀಲಿಯನ್ನು ಅವರು ಹೊಂದಿದ್ದಾರೆ.

    ಹೌದು. ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು (N Chandrababu Naidu)  ಅವರು ತಮ್ಮ ಅಮರಾವತಿಯ ದೃಷ್ಟಿಯನ್ನು ಕಾರ್ಯರೂಪಕ್ಕೆ ತರಲು ನಿರ್ಧರಿಸಿದ್ದಾರೆ. ಈ ಮೂಲಕ ನಗರದ ನಿವಾಸಿಗಳು ಮತ್ತು ಹೂಡಿಕೆದಾರರಲ್ಲಿ ಭರವಸೆಯನ್ನು ಪುನರುಜ್ಜೀವನಗೊಳಿಸಿದ್ದಾರೆ. ಇದಕ್ಕೆ ಕಾರಣ ಕೆಲ ದಿನಗಳ ಹಿಂದೆಯಷ್ಟೇ ಚಂದ್ರಬಾಬು ನಾಯ್ಡು ಅವರು ಆಂಧ್ರಪ್ರದೇಶದ ರಾಜಧಾನಿ ಅಮರಾವತಿ ಎಂದು ಘೋಷಿಸಿದ್ದಾರೆ.

    ಈ ಹಿಂದೆ ಜಗನ್ ಮೋಹನ್ ರೆಡ್ಡಿ (Jagan Mohan Reddy) ಆಂಧ್ರಪ್ರದೇಶಕ್ಕೆ ಮೂರು ರಾಜಧಾನಿಗಳನ್ನು ಹಂಚಿಕೆ ಮಾಡುವುದಾಗಿ ಹೇಳಿದ್ದರು. ಈಗ ಆಂಧ್ರಪ್ರದೇಶದಲ್ಲಿ ಎನ್ ಡಿ ಎ ಒಕ್ಕೂಟದ ಸರ್ಕಾರ ಅಧಿಕಾರ ಬಂದಿರುವ ಹಿನ್ನೆಲೆಯಲ್ಲಿ ಈ ಹಿಂದಿನ ಸರ್ಕಾರದ ಮೂರು ರಾಜಧಾನಿಗಳ ನಿರ್ಧಾರವನ್ನು ರದ್ದುಗೊಳಿಸಿ ಅಮರಾವತಿಯೊಂದೇ ರಾಜಧಾನಿಯಾಗಲಿದೆ ಎಂದು ನಾಯ್ಡು ತಿಳಿಸಿದ್ದಾರೆ. ಇನ್ಮುಂದೆ ಮೂರು ರಾಜಧಾನಿ ಎಂಬುದು ಇರಲ್ಲ. ಅಮರಾವತಿ ರಾಜಧಾನಿಯಾಗಲಿದೆ. ವಿಶಾಖಪಟ್ಟಣವನ್ನು ಆರ್ಥಿಕ ಮತ್ತು ಆಧುನಿಕ ರಾಜಧಾನಿಯನ್ನಾಗಿ ಮಾಡೋಣ ಎಂದು ಹೇಳಿದ್ದಾರೆ. ಅಮರಾವತಿಯನ್ನು ಶಾಸಕಾಂಗ ರಾಜಧಾನಿ, ವಿಶಾಖಪಟ್ಟಣಂ ಕಾರ್ಯಕಾರಿ ರಾಜಧಾನಿ ಮತ್ತು ಕರ್ನೂಲ್ ನ್ಯಾಯಾಂಗ ರಾಜಧಾನಿ ಎಂದು ಹಿಂದಿನ ವೈಎಸ್​​ಆರ್​​ಸಿಪಿ (YSRCP) ಸರ್ಕಾರ ಪರಿಕಲ್ಪನೆ ಹೊಂದಿತ್ತು.

    ನಾಯ್ಡು ಅವರು ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಆಂಧ್ರಪ್ರದೇಶದ 175 ವಿಧಾನಸಭಾ ಸ್ಥಾನಗಳ ಪೈಕಿ ಎನ್‌ಡಿಎ 164 ಸ್ಥಾನಗಳನ್ನು ಗೆದ್ದಿದೆ. ಜಗನ್ ಮೋಹನ್ ರೆಡ್ಡಿ ಅವರ ವೈಎಸ್‌ಆರ್ ಕಾಂಗ್ರೆಸ್ 11 ಸ್ಥಾನಗಳಿಗೆ ಕುಸಿದಿದೆ. ಹೀಗಾಗಿ ಟಿಡಿಪಿ ಮತ್ತೊಮ್ಮೆ ಅಧಿಕಾರಕ್ಕೆ ಬಂದ ನಂತರ ಅಮರಾವತಿಯನ್ನು ಹೊಸ ರಾಜಧಾನಿ ಮಾಡುವ ಪ್ರಯತ್ನಗಳು ತೀವ್ರಗೊಂಡಿವೆ.

    ನಾಯ್ಡು ಅವರು ತಮ್ಮ ಹಿಂದಿನ ಸರ್ಕಾರದಲ್ಲಿ ಅಮರಾವತಿಯನ್ನು ರಾಜಧಾನಿಯನ್ನಾಗಿ ಮಾಡಲು ಪ್ರಸ್ತಾಪಿಸಿದ್ದರು. ಇದರ ಕೆಲಸವೂ ನಡೆಯುತ್ತಿತ್ತು. ಆದರೆ 2019 ರ ವಿಧಾನಸಭಾ ಚುನಾವಣೆಯಲ್ಲಿ ಟಿಡಿಪಿ ಸೋತ ಬಳಿಕ ಈ ಯೋಜನೆಯನ್ನು ಸ್ಥಗಿತಗೊಳಿಸಲಾಯಿತು. 2019ರಲ್ಲಿ ಜಗನ್ ಮೋಹನ್ ರೆಡ್ಡಿ ಮುಖ್ಯಮಂತ್ರಿಯಾದಾಗ ಮೂರು ರಾಜಧಾನಿಗಳನ್ನು ರಚಿಸಲು ಮುಂದಾಗಿದ್ದರು. ರೆಡ್ಡಿ ಆಂಧ್ರದ ವಿಶಾಖಪಟ್ಟಣಂ, ಅಮರಾವತಿ ಮತ್ತು ಕರ್ನೂಲ್ ಈ ಮೂರು ರಾಜಧಾನಿಗಳನ್ನು ಮಾಡಲು ಪ್ರಸ್ತಾಪಿಸಿದ್ದರು.

    ಎಲ್ಲಿದೆ ಅಮರಾವತಿ?: ಆಂಧ್ರ ಪ್ರದೇಶದ (Andhrapradesh) ಗುಂಟೂರು ಜಿಲ್ಲೆಯ ಕೃಷ್ಣಾ ನದಿಯ ದಡದಲ್ಲಿ ಅಮಾರವತಿ ನಗರವಿದೆ. ಆದರೆ ರಾಜಧಾನಿ ಪ್ರದೇಶ ವ್ಯಾಪ್ತಿಯು ಗುಂಟೂರು ಮತ್ತು ವಿಜಯವಾಡ ಜಿಲ್ಲೆಯ 29 ಹಳ್ಳಿಗಳನ್ನು ಒಳಗೊಂಡಿದೆ.

    ಶಿವನ ದೇವಾಲಯವಾಗಿರುವ ಅಮರೇಶ್ವರ ದೇವಾಲಯದ ನಂತರ ಅಮರಾವತಿ ಎಂದು ಹೆಸರಿಸಲಾಗಿದೆ. ಇದನ್ನು ಎರಡನೇ ಶತಮಾನದಲ್ಲಿ ನಿರ್ಮಿಸಲಾಗಿದೆ ಎಂದು ನಂಬಲಾಗಿದೆ.ಇದು ಒಂದು ಕಾಲದಲ್ಲಿ ಶಾತವಾಹನ ಮತ್ತು ಪಲ್ಲವ ರಾಜರ ರಾಜಧಾನಿಯಾಗಿತ್ತು. ಮೌರ್ಯ ಸಾಮ್ರಾಜ್ಯದ ಚಕ್ರವರ್ತಿ ಅಶೋಕನ ಆಳ್ವಿಕೆಯಲ್ಲಿ ಇಲ್ಲಿ ಸ್ತೂಪ ಮತ್ತು ಮಠವನ್ನು ನಿರ್ಮಿಸಲಾಯಿತು.

    ಅಮರಾವತಿ ಮಾತ್ರ ಏಕೆ?: 2014ರಲ್ಲಿ ಆಂಧ್ರಪ್ರದೇಶ ವಿಭಜನೆಗೊಂಡು ತೆಲಂಗಾಣ (Telangana) ಹೊಸ ರಾಜ್ಯವಾಯಿತು. 10 ವರ್ಷಗಳ ಕಾಲ ತೆಲಂಗಾಣ ಮತ್ತು ಆಂಧ್ರದ ರಾಜಧಾನಿ ಹೈದರಾಬಾದ್ ಆಗಿತ್ತು. 2024 ಜೂನ್ 2 ರಂದು 10 ವರ್ಷಗಳನ್ನು ಪೂರ್ಣಗೊಳಿಸಿದ ನಂತರ ಹೈದರಾಬಾದ್ ಈಗ ತೆಲಂಗಾಣದ ರಾಜಧಾನಿಯಾಗಿದೆ.

    ಹತ್ತು ವರ್ಷಗಳ ಹಿಂದೆ ವಿಭಜನೆಯಾದಾಗ, ಹೈದರಾಬಾದ್ ಶಾಶ್ವತವಾಗಿ ತೆಲಂಗಾಣ ರಾಜಧಾನಿಯಾಗಿ ಉಳಿಯುತ್ತದೆ ಮತ್ತು ಆಂಧ್ರಕ್ಕೆ ಹೊಸ ರಾಜಧಾನಿಯನ್ನು ಮಾಡಬೇಕೆಂದು ನಿರ್ಧರಿಸಲಾಯಿತು. ಅಂತೆಯೇ 2014ರಲ್ಲಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಚಂದ್ರಬಾಬು ನಾಯ್ಡು ಅವರು ಅಮರಾವತಿಯನ್ನು ರಾಜಧಾನಿಯನ್ನಾಗಿ ಮಾಡಿದರು. 2015 ರ ಅಕ್ಟೋಬರ್ 22 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಅಮರಾವತಿಯಲ್ಲಿ ಹೊಸ ರಾಜಧಾನಿಗೆ ಅಡಿಪಾಯ ಹಾಕಿದರು. ಇಷ್ಟೇ ಅಲ್ಲ ನಾಯ್ಡು ಸರ್ಕಾರ ಹೊಸ ರಾಜಧಾನಿ ನಿರ್ಮಿಸಲು ರೈತರಿಂದ 33 ಸಾವಿರ ಎಕರೆ ಭೂಮಿಯನ್ನು ಕೂಡ ಸ್ವಾಧೀನಪಡಿಸಿಕೊಂಡಿತ್ತು.

    ಮಾಸ್ಟರ್ ಪ್ಲಾನ್ ಪ್ರಕಾರ, ಅಮರಾವತಿಯನ್ನು ಆಂಧ್ರದ ಹೊಸ ರಾಜಧಾನಿಯಾಗಿ ಆಯ್ಕೆ ಮಾಡಲಾಗಿದೆ. ಏಕೆಂದರೆ ಇದು ರಾಜ್ಯದ ಎರಡು ಪ್ರಮುಖ ನಗರ ಕೇಂದ್ರಗಳಾದ ವಿಜಯವಾಡ ಮತ್ತು ಗುಂಟೂರಿನ ನಡುವೆ ಇದೆ. ಆಂಧ್ರ ಸರ್ಕಾರವು ಅಮರಾವತಿ ಸುತ್ತಲಿನ ಎಂಟೂವರೆ ಸಾವಿರ ಚದರ ಕಿಲೋಮೀಟರ್ ಪ್ರದೇಶವನ್ನು ರಾಜಧಾನಿ ಪ್ರದೇಶವನ್ನಾಗಿ ಮಾಡಲಿದೆ. ವಿಜಯವಾಡ ಮತ್ತು ಗುಂಟೂರು ಕೂಡ ಈ ವ್ಯಾಪ್ತಿಗೆ ಬರಲಿವೆ.

    ರಾಜಧಾನಿ ಅಮರಾವತಿ ಹೇಗಿರಲಿದೆ?: ಆಂಧ್ರಪ್ರದೇಶ ರಾಜಧಾನಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ (CRDA) ಮಾಸ್ಟರ್ ಪ್ಲಾನ್ ಪ್ರಕಾರ, ರಾಜಧಾನಿಯನ್ನು 217 ಚದರ ಕಿಲೋಮೀಟರ್ ಪ್ರದೇಶದಲ್ಲಿ ಅಭಿವೃದ್ಧಿಪಡಿಸಲಾಗುವುದು. ಅಮರಾವತಿಯನ್ನು ವಿಶ್ವದರ್ಜೆಯ ನಗರವನ್ನಾಗಿ ರೂಪಿಸಿ ಪ್ರತಿಯೊಬ್ಬ ವ್ಯಕ್ತಿಯ ಅಗತ್ಯಗಳನ್ನು ಪೂರೈಸಲಾಗುವುದು. ಕೋರ್ ಕ್ಯಾಪಿಟಲ್ ಪ್ರದೇಶವು ಸರ್ಕಾರಿ ಕಚೇರಿಗಳು, ಸಾಂಸ್ಕೃತಿಕ ಸಂಸ್ಥೆಗಳು ಮತ್ತು ಸಾರ್ವಜನಿಕ ಸ್ಥಳಗಳನ್ನು ಹೊಂದಿರುತ್ತದೆ.

    ರಾಜಧಾನಿಯ ಎಲ್ಲಾ ವಸತಿ ಪ್ರದೇಶಗಳು, ವಾಣಿಜ್ಯ ಪ್ರದೇಶಗಳು, ಶಿಕ್ಷಣ ಸಂಸ್ಥೆಗಳು ಮತ್ತು ವ್ಯಾಪಾರ ಕೇಂದ್ರಗಳು ರಸ್ತೆಗಳು ಮತ್ತು ಸಾರ್ವಜನಿಕ ಸಾರಿಗೆಯಿಂದ ಸಂಪರ್ಕಗೊಳ್ಳುವ ರೀತಿಯಲ್ಲಿ ಇದನ್ನು ವಿನ್ಯಾಸಗೊಳಿಸಲಾಗುವುದು. 2050ರ ವೇಳೆಗೆ ಅಮರಾವತಿಯ ಜನಸಂಖ್ಯೆ 35 ಲಕ್ಷಕ್ಕೂ ಹೆಚ್ಚು ಎಂದು ಅಂದಾಜಿಸಲಾಗಿದೆ. ಅಮರಾವತಿಯನ್ನು ರಾಜಧಾನಿಯನ್ನಾಗಿ ಮಾಡುವುದರಿಂದ 15 ಲಕ್ಷ ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆಯಿದೆ.

    ರಾಜಧಾನಿ ನಿರ್ಮಾಣಕ್ಕೆ ಎಷ್ಟು ವೆಚ್ಚವಾಗುತ್ತದೆ?: 2015ರಲ್ಲಿ ನಾಯ್ಡು ಅವರು ಕೃಷ್ಣಾ ನದಿಯ ದಡದಲ್ಲಿರುವ ಅಮರಾವತಿಯನ್ನು ರಾಜಧಾನಿಯನ್ನಾಗಿ ಮಾಡುವುದಾಗಿ ಘೋಷಿಸಿದ್ದರು. 2016 ರಲ್ಲಿ ನಾಯ್ಡು ಅವರು ಅಮರಾವತಿಯಲ್ಲಿ 9 ಥೀಮ್ ಸಿಟಿಗಳು ಮತ್ತು 27 ಟೌನ್‌ಶಿಪ್‌ಗಳನ್ನು ನಿರ್ಮಿಸುವುದಾಗಿ ಘೋಷಿಸಿದ್ದರು. 2019 ರ ಸ್ಥಿತಿ ವರದಿಯ ಪ್ರಕಾರ ಅಮರಾವತಿಯನ್ನು ರಾಜಧಾನಿಯನ್ನಾಗಿ ಮಾಡಲು ಮುಂದಿನ 20 ವರ್ಷಗಳಲ್ಲಿ 1.09 ಲಕ್ಷ ಕೋಟಿ ರೂ. ಬೇಕಾಗಬಹುದು.

    ಹೊಸ ಅಂದಾಜು ಪ್ರಕಾರ, 40ರಿಂದ 50 ಸಾವಿರ ಕೋಟಿ ರೂ.ಬೇಕಾಗುತ್ತದೆ. ನಗರದ ನಾನಾ ಮೂಲ ಸೌಕರ್ಯ ಹಾಗೂ ಹಲವು ಸರಕಾರಿ ಕಟ್ಟಡಗಳ ನಿರ್ಮಾಣ ಅಗತ್ಯವಿದೆ. ಆರಂಭದಲ್ಲಿ ನಗರ ನಿರ್ಮಾಣಕ್ಕೆ 21 ಸಾವಿರ ಕೋಟಿ ರೂ. ಬೇಕಾಗಬಹುದು ಆಂಧ್ರ ಪ್ರದೇಶದ ರಾಜಧಾನಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ (ಎಪಿಸಿಆರ್‌ಡಿಎ) ಅಂದಾಜಿಸಿತ್ತು.

    ಈಗ ಹೇಗಿದೆ ಅಮರಾವತಿ..?: ಭವಿಷ್ಯದ ನಗರ ಎಂಬ ಹಣೆಪಟ್ಟಿ ಕಟ್ಟಿಕೊಂಡಿದ್ದ ಅಮರಾವತಿಯ ಭವಿಷ್ಯ ಕಳೆದ 5 ವರ್ಷದಿಂದ ಕತ್ತಲೆಯಲ್ಲಿತ್ತು. ಅರ್ಧಂಬರ್ಧ ನಿರ್ಮಾಣಗೊಂಡ ಬಿಲ್ಡಿಂಗ್‌ಗಳು, ಖಾಲಿ ಸೈಟ್‌ಗಳು, ಖಾಲಿ ಜಮೀನುಗಳು.. ಇದು ಅಮರಾವತಿಯ ಸದ್ಯದ ಪರಿಸ್ಥಿತಿ. ಬೃಹತ್‌ ನಗರ ನಿರ್ಮಾಣಕ್ಕೆ ಮೂಲಸೌಕರ್ಯವನ್ನು ಪೂರೈಸುವುದು ಪ್ರಮುಖವಾಗುತ್ತದೆ. ಆದರೆ ಇಲ್ಲಿ ಅದೇ ಕೊರತೆಯಾಗಿದೆ. ಈಗಲೂ ಸರ್ಕಾರಿ ಕಚೇರಿಗಳು ತಾತ್ಕಾಲಿಕ ಕಟ್ಟಡಗಳಲ್ಲಿ ಕಾರ್ಯ ನಿರ್ವಹಿಸುತ್ತಿವೆ.

    ಈ ಹಿಂದೆ ಭರವಸೆ ನೀಡಿದ ಹೈ-ಸ್ಪೀಡ್‌ ರೈಲು ಸಂಪರ್ಕ, ನವೀನ ನಗರದ ವೈಶಿಷ್ಟ್ಯಗಳು ಹೀಗೆ ಯಾವುದರ ಕುರುಹಗಳು ಕೂಡ ಇಲ್ಲ. ಈ ನಡುವೆ ಕೆಲವು ಶಿಕ್ಷಣ ಸಂಸ್ಥೆಗಳು, ಕಂಪನಿಗಳು ಕಾರ್ಯಾರಂಭ ಮಾಡಿವೆ. ಒಟ್ಟಿನಲ್ಲಿ ಅಮರಾವತಿಯಲ್ಲಿ ಅರ್ಧಕ್ಕೆ ನಿಂತ ಕಟ್ಟಡಗಳು, ಖಾಲಿ ರಸ್ತೆಗಳನ್ನು ನೋಡದರೆ ನಚ್ಚುನೂರಾದ ಕನಸುಗಳು ಭರವಸೆಯ ಸಂಕೇತಗಳಂತೆ ಕಾಣುತ್ತವೆ.

    ಬೆಲೆಗಳು ಗಗನಕ್ಕೆ: ಆಂಧ್ರ ಪ್ರದೇಶದ ಏಕೈಕ ರಾಜಧಾನಿ ಅಮರಾವತಿ ಎಂದು ಚಂದ್ರಬಾಬು ನಾಯ್ಡು ಅವರು ಘೋಷಣೆ ಮಾಡುತ್ತಿದ್ದಂತೆಯೇ ರಿಯಲ್‌ ಎಸ್ಟೇಟ್‌ ದಂಧೆ ಮತ್ತೆ ಗರಿಗೆದರಿದೆ. ಏಕಾಏಕಿ ಸೈಟುಗಳ ಬೆಲೆಯಲ್ಲಿ 20% ರಿಂದ 30 % ರಷ್ಟು ಹೆಚ್ಚಳವಾಗಿದೆ. ಸ್ಥಳೀಯ ಉದ್ಯಮಿಗಳು, ವ್ಯಾಪಾರಸ್ಥರು ನಗರದ ಆರ್ಥಿಕ ಮತ್ತು ನಿರ್ಮಾಣ ಚಟುವಟಿಕೆಗಳ ಮತ್ತೆ ಹೆಚ್ಚುವ ನಿರೀಕ್ಷೆಯನ್ನು ಹೊಂದಿದ್ದಾರೆ.

    ಅಮರಾವತಿಯಲ್ಲಿ 9 ನಗರಗಳಿರುತ್ತವೆ:
    1. ಸರ್ಕಾರಿ ನಗರ: ಇದು ಉತ್ತರ-ದಕ್ಷಿಣದಲ್ಲಿ ನೆಲೆಸಿರುತ್ತದೆ. ಇಲ್ಲಿ ಸರ್ಕಾರಿ ಕಚೇರಿಗಳ ಜತೆಗೆ ವಸತಿ ಪ್ರದೇಶಗಳನ್ನೂ ಅಭಿವೃದ್ಧಿಪಡಿಸಲಾಗುವುದು. ಈ ಇಡೀ ನಗರವು 1,093 ಹೆಕ್ಟೇರ್‌ಗಳಲ್ಲಿ ಹರಡುತ್ತದೆ.
    2. ಜಸ್ಟಿಸ್ ಸಿಟಿ: ಸರ್ಕಾರಿ ನಗರದ ಪಕ್ಕದಲ್ಲಿ ಜಸ್ಟಿಸ್ ಸಿಟಿ ಸ್ಥಾಪಿಸಲಾಗುವುದು. ಇಲ್ಲಿ ನ್ಯಾಯಾಂಗಕ್ಕೆ ಸಂಬಂಧಿಸಿದ ಸಂಸ್ಥೆಗಳು ಇರುತ್ತವೆ. 1,339 ಹೆಕ್ಟೇರ್‌ನಲ್ಲಿ ನ್ಯಾಯ ನಗರ ನಿರ್ಮಾಣವಾಗಲಿದೆ.
    3. ಹಣಕಾಸು ನಗರ: ಆಂಧ್ರದ ಆರ್ಥಿಕತೆಗೆ ಉತ್ತೇಜನ ನೀಡುವ ಉದ್ದೇಶದಿಂದ ಈ ನಗರವನ್ನು ನಿರ್ಮಿಸಲಾಗುವುದು. ಇಲ್ಲಿ ವಾಣಿಜ್ಯ ಮತ್ತು ವಸತಿ ಪ್ರದೇಶಗಳೆರಡೂ ಇರಲಿವೆ. 2,091 ಹೆಕ್ಟೇರ್‌ ಪ್ರದೇಶದಲ್ಲಿ ಫೈನಾನ್ಸ್ ಸಿಟಿ ನಿರ್ಮಾಣವಾಗಲಿದೆ.
    4. ನಾಲೆಡ್ಜ್ ಸಿಟಿ: ಇದು ಜಸ್ಟೀಸ್ ಮತ್ತು ಫೈನಾನ್ಸ್ ಸಿಟಿಯ ದಕ್ಷಿಣಕ್ಕೆ ಸ್ಥಾಪನೆಯಾಗುತ್ತದೆ. ಇಲ್ಲಿ ವಿಶ್ವವಿದ್ಯಾನಿಲಯ ಕ್ಯಾಂಪಸ್, ಕಾಲೇಜು ಮತ್ತು ಜ್ಞಾನ ಪಾರ್ಕ್ ನಿರ್ಮಿಸಲಾಗುವುದು. 3,459 ಹೆಕ್ಟೇರ್‌ನಲ್ಲಿ ನಾಲೆಡ್ಜ್ ಸಿಟಿ ನಿರ್ಮಾಣವಾಗಲಿದೆ.
    5. ಎಲೆಕ್ಟ್ರಾನಿಕ್ ಸಿಟಿ: ದಕ್ಷಿಣ ಭಾರತದಲ್ಲಿ ಬರುವ ಐಟಿ ಮತ್ತು ಎಲೆಕ್ಟ್ರಾನಿಕ್ ಉದ್ಯಮಗಳಿಗೆ ಎಲೆಕ್ಟ್ರಾನಿಕ್ ಸಿಟಿ ನಿರ್ಮಿಸಲಾಗುವುದು. 2,663 ಹೆಕ್ಟೇರ್‌ನಲ್ಲಿ ಎಲೆಕ್ಟ್ರಾನಿಕ್ ಸಿಟಿ ನಿರ್ಮಾಣವಾಗಲಿದೆ.
    6. ಹೆಲ್ತ್ ಸಿಟಿ: ರಾಜಧಾನಿಯ ಜನತೆಗೆ ಉತ್ತಮ ಆರೋಗ್ಯ ಸೌಲಭ್ಯ ಸಿಗುವಂತಾಗಲು ಪ್ರತ್ಯೇಕ ಆರೋಗ್ಯ ನಗರಿ ಸ್ಥಾಪಿಸಲಾಗುವುದು. ಈ ಇಡೀ ನಗರವು 2,647 ಹೆಕ್ಟೇರ್‌ಗಳಲ್ಲಿ ಇರುತ್ತದೆ.
    7. ಸ್ಪೋರ್ಟ್ಸ್ ಸಿಟಿ: ರಿವರ್‌ಫ್ರಂಟ್‌ನ ವಾಯುವ್ಯದಲ್ಲಿ ಕ್ರೀಡಾ ನಗರವನ್ನು ನಿರ್ಮಿಸಲಾಗುವುದು. ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಿಗೆ ದೊಡ್ಡ ಕ್ರೀಡಾಂಗಣಗಳು ಮತ್ತು ಈವೆಂಟ್ ಸ್ಥಳಗಳು ಇಲ್ಲಿ ಸಿದ್ಧವಾಗುತ್ತವೆ. 1,679 ಹೆಕ್ಟೇರ್‌ನಲ್ಲಿ ಸ್ಪೋರ್ಟ್ಸ್ ಸಿಟಿ ನಿರ್ಮಾಣವಾಗಲಿದೆ.
    8. ಸಾಂಸ್ಕೃತಿಕ ನಗರ: ಅನಂತವರಂ ಬಳಿ ಮಾಧ್ಯಮ ಮತ್ತು ಸಾಂಸ್ಕೃತಿಕ ನಗರವನ್ನು ಅಭಿವೃದ್ಧಿಪಡಿಸಲಾಗುವುದು. ಅನಂತವರಂನಲ್ಲಿ ಐತಿಹಾಸಿಕ ಅನಂತವರಂ ವೆಂಕಟೇಶ್ವರ ಸ್ವಾಮಿ ದೇವಾಲಯವಿದೆ. ಈ ನಗರವನ್ನು 2,067 ಹೆಕ್ಟೇರ್‌ನಲ್ಲಿ ನಿರ್ಮಿಸಲಾಗುವುದು.
    9. ಪ್ರವಾಸೋದ್ಯಮ ನಗರ: ಕೃಷ್ಣಾ ನದಿಯ ದಡದಲ್ಲಿರುವ ಉಂಡವಳ್ಳಿ ಗುಹೆಗಳ ಬಳಿ ಪ್ರವಾಸೋದ್ಯಮ ನಗರವನ್ನು ನಿರ್ಮಿಸಲಾಗುವುದು. ಈ ಇಡೀ ನಗರವು 4,716 ಹೆಕ್ಟೇರ್‌ಗಳಲ್ಲಿ ಇರುತ್ತದೆ.

  • ಆಂಧ್ರಪ್ರದೇಶಕ್ಕೆ ಅಮರಾವತಿ ರಾಜಧಾನಿ:  ಜಗನ್ ಮೋಹನ್ ರೆಡ್ಡಿ

    ಆಂಧ್ರಪ್ರದೇಶಕ್ಕೆ ಅಮರಾವತಿ ರಾಜಧಾನಿ: ಜಗನ್ ಮೋಹನ್ ರೆಡ್ಡಿ

    ಅಮರಾವತಿ: ರಾಜಧಾನಿಗಳ ಬಗ್ಗೆ ವಿವಾದದ ನಡೆಯುತ್ತಿರುವ ಬೆನ್ನಲ್ಲೇ ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ರಾಜ್ಯಕ್ಕೆ ಒಂದೇ ರಾಜಧಾನಿ ಅದು ಅಮರಾವತಿ ಎಂದು ಘೋಷಿಸಿದ್ದಾರೆ.

    ಎಪಿ ಮರುಸಂಘಟನೆ ಕಾಯಿದೆ, 2014 ಸೆಕ್ಷನ್ 6ರ ಅಡಿಯಲ್ಲಿ ಕೇಂದ್ರ ಸರ್ಕಾರವು 2014 ಮಾರ್ಚ್28 ರಂದು ಆಂಧ್ರಪ್ರದೇಶ ರಾಜ್ಯಕ್ಕೆ ಹೊಸ ರಾಜಧಾನಿಗಾಗಿ ಪರ್ಯಾಯಗಳನ್ನು ಅಧ್ಯಯನ ಮಾಡಲು ಕೆ.ಸಿ ಶಿವರಾಮಕೃಷ್ಣನ್ ಅವರ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿಯನ್ನು ರಚಿಸಿದೆ ಎಂದು ಪ್ರತಿ-ಅಫಿಡವಿಟ್ ಉಲ್ಲೇಖಿಸಿದೆ. ಸಮಿತಿಯು ಅದೇ ವರ್ಷದ ಆಗಸ್ಟ್ 30 ರಂದು ತನ್ನ ವರದಿಯನ್ನು ಸಲ್ಲಿಸಿತು. ಎರಡು ದಿನಗಳ ನಂತರ ಸೆಪ್ಟೆಂಬರ್ 1 ರಂದು ಆಂಧ್ರ ಪ್ರದೇಶ ಸರ್ಕಾರಕ್ಕೆ ಕಳುಹಿಸಲಾಯಿತು. ಅಫಿಡವಿಟ್‍ನಲ್ಲಿ ರಾಜ್ಯ ಸರ್ಕಾರವು  2015 ಏಪ್ರಿಲ್ 23ರಂದು ರಾಜಧಾನಿಯನ್ನು ಅಮರಾವತಿ ಎಂದು ಸೂಚಿಸಿ ಆದೇಶವನ್ನು ಹೊರಡಿಸಿದೆ ಎಂದು ಉಲ್ಲೇಖಿಸಿದೆ. ಅದೇ ವೇಳೆ ರಾಜ್ಯದ ರಾಜಧಾನಿಯನ್ನು ಆಯಾ ರಾಜ್ಯ ಸರ್ಕಾರ ನಿರ್ಧರಿಸುತ್ತದೆ. ಇದರಲ್ಲಿ ಕೇಂದ್ರ ಸರ್ಕಾರದ ಪಾತ್ರವಿಲ್ಲ ಎಂದು ತಿಳಿಸಿದೆ. ಇದನ್ನೂ ಓದಿ:  ಲಿಂಗ ತಾರತಮ್ಯವಿಲ್ಲದೇ ಒಂದೇ ರೀತಿ ಸಮವಸ್ತ್ರ ನೀಡಿದ ಕೇರಳ ಶಾಲೆ

    2020 ಜುಲೈ 31 ರಂದು ರಾಜ್ಯ ಗೆಜೆಟ್ ಅಧಿಸೂಚನೆಯಲ್ಲಿ ಪ್ರಕಟಿಸಲಾದ ಆಂಧ್ರ ಪ್ರದೇಶ ವಿಕೇಂದ್ರೀಕರಣ ಮತ್ತು ಎಲ್ಲಾ ಪ್ರದೇಶಗಳ ಅಂತರ್ಗತ ಅಭಿವೃದ್ಧಿ ಕಾಯಿದೆ 2020ರ ಮೂಲಕ ಆಂಧ್ರ ಪ್ರದೇಶ ಸರ್ಕಾರವು ರಾಜ್ಯದಲ್ಲಿ ಮೂರು ಆಡಳಿತ ಸ್ಥಾನಗಳನ್ನು ಹೊಂದಿರಬೇಕು ಎಂದು ಎಂದು ಅಫಿಡವಿಟ್ ಉಲ್ಲೇಖಿಸಿದೆ. ಅವುಗಳನ್ನು ರಾಜಧಾನಿಗಳೆಂದು ಕರೆಯಬೇಕು. ಅಮರಾವತಿ ಮಹಾನಗರ ಪ್ರದೇಶ ಅಭಿವೃದ್ಧಿ ಪ್ರದೇಶವನ್ನು ಶಾಸಕ ರಾಜಧಾನಿ ಎಂದು ಕರೆಯಲಾಗುವುದು, ವಿಶಾಖಪಟ್ಟಣ ಮಹಾನಗರ ಪ್ರದೇಶ ಅಭಿವೃದ್ಧಿ ಪ್ರದೇಶವನ್ನು ಕಾರ್ಯನಿರ್ವಾಹಕ ರಾಜಧಾನಿ ಮತ್ತು ಕರ್ನೂಲ್ ನಗರಾಭಿವೃದ್ಧಿ ಪ್ರದೇಶವನ್ನು ನ್ಯಾಯಾಂಗ ರಾಜಧಾನಿ ಎಂದು ಕರೆಯಲಾಗುವುದು. ಆಂಧ್ರಪ್ರದೇಶದ ಬಿಜೆಪಿ ನಾಯಕ ವೈಎಸ್ ಚೌಧರಿ ಕಳೆದ ವಾರ ಅಮರಾವತಿಯನ್ನು ಆಂಧ್ರಪ್ರದೇಶದ ರಾಜಧಾನಿಯಾಗಿ ಘೋಷಿಸುವ ಬೇಡಿಕೆಯನ್ನು ತಮ್ಮ ಪಕ್ಷ ಬೆಂಬಲಿಸುತ್ತದೆ ಎಂದು ಹೇಳಿದ್ದಾರೆ. ಇದನ್ನೂ ಓದಿ:  ಪತ್ನಿಯನ್ನು ಕೊಂದು ವಿಷ ಸೇವಿಸಿ ಆಸ್ಪತ್ರೆ ಸೇರಿದ್ದ ಪತಿರಾಯ ಈಗ ಪೊಲೀಸರ ಅತಿಥಿ

    ಆಂಧ್ರಪ್ರದೇಶದ ರಾಜಧಾನಿಯಾಗಿ ಅಮರಾವತಿಯನ್ನು ಬೆಂಬಲಿಸಲು ಬಿಜೆಪಿ ಪರವಾಗಿ ನಾವು ನಿರ್ಣಯವನ್ನು ಅಂಗೀಕರಿಸಿದ್ದೇವೆ. ಯಾವುದೇ ಅಧಿಕಾರವಿಲ್ಲದೇ ರಾಜ್ಯದಲ್ಲಿ ಮೂರು ರಾಜಧಾನಿಗಳು ಎಂದು ವೈಎಸ್‌ಆರ್‌ಸಿಪಿ ಸರ್ಕಾರ ಘೋಷಿಸಿತು. ರಾಜಧಾನಿ ಅಭಿವೃದ್ಧಿಗೆ ಭೂಮಿ ನೀಡಿದ ಸ್ಥಳೀಯ ರೈತರನ್ನು ಬೆಂಬಲಿಸುವ ಸಲುವಾಗಿ ಬಿಜೆಪಿ ಅವರನ್ನು ಬೆಂಬಲಿಸುತ್ತದೆ ಮತ್ತು ಅಮರಾವತಿಯೇ ರಾಜಧಾನಿಯಾಗಿ ಉಳಿಯುವಂತೆ ಮಾಡುತ್ತದೆ ಎಂದು ಚೌಧರಿ ಹೇಳಿದ್ದರು.

  • ಆಂಧ್ರಪ್ರದೇಶಕ್ಕೆ ಮೂರು ರಾಜಧಾನಿ – ಮಸೂದೆಗೆ ಬಿತ್ತು ರಾಜ್ಯಪಾಲರ ಅಂಕಿತ

    ಆಂಧ್ರಪ್ರದೇಶಕ್ಕೆ ಮೂರು ರಾಜಧಾನಿ – ಮಸೂದೆಗೆ ಬಿತ್ತು ರಾಜ್ಯಪಾಲರ ಅಂಕಿತ

    ಅಮರಾವತಿ: ಆಂಧ್ರಪ್ರದೇಶದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಜಗನ್‌ ಮೋಹನ್‌ ರೆಡ್ಡಿ ಸರ್ಕಾರ ಮೂರು ರಾಜಧಾನಿಗಳ ಪ್ರಸ್ತಾಪಕ್ಕೆ ಆಂಧ್ರ ಪ್ರದೇಶ ರಾಜ್ಯಪಾಲ ಬಿಸ್ವಾಭೂಸನ್ ಹರಿಚಂದನ್ ಸಹಿ ಹಾಕಿದ್ದಾರೆ.

    ಆಂಧ್ರ ಪ್ರದೇಶ ವಿಕೇಂದ್ರೀಕರಣ ಮತ್ತು ಎಲ್ಲ ವಲಯಗಳ ಸರ್ವಾಂಗೀಣ ಅಭಿವೃದ್ಧಿ ವಿಧೇಯಕ 2020 ಮಸೂದೆ ಶಾಸನ ಸಭೆಯಲ್ಲಿ ಪಾಸ್‌ ಆಗಿತ್ತು. ಈಗ ರಾಜ್ಯಪಾಲರು ಸಹಿ ಹಾಕುವ ಮೂಲಕ ಅಧಿಕೃತವಾಗಿ ಜಾರಿಯಾಗಲಿದೆ.

    ಸಿಎಂ ಜಗನ್ ಸರ್ಕಾರ ಮೂರು ವಾರಗಳ ಹಿಂದೆ ವಿಧಾನಸಣೆಯಲ್ಲಿ ಮಸೂದೆಯನ್ನು ಮಂಡಿಸಿತ್ತು. ಹಣಕಾಸು ಸಚಿವ ಬುಗ್ಗನ್​​ ರಾಜೇಂದ್ರನಾಥ್​​ ರೆಡ್ಡಿ, ರಾಜ್ಯಾಡಳಿತ ವಿಕೇಂದ್ರಿಕರಣ ಮಸೂದೆ ಮಂಡಿಸಿ ಅನುಮೋದನೆ ಪಡೆದುಕೊಂಡಿದ್ದರು. ವೈಎಸ್ಆರ್ ಕಾಂಗ್ರೆಸ್ ಮತ್ತು ಟಿಡಿಪಿ ನಡುವಿನ ತೀವ್ರ ತಿಕ್ಕಾಟಕ್ಕೆ ಈ ಮಸೂದೆ ಕಾರಣವಾಗಿತ್ತು.

    ಟಿಡಿಪಿ ಮುಖ್ಯಸ್ಥ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅವರು ಅಮರಾವತಿ ರಾಜಧಾನಿ ಮಾಡಲು ಮುಂದಾಗಿದ್ದರು. ಅಷ್ಟೇ ಅಲ್ಲದೇ ವಿಶ್ವದ ನಗರಗಳ ಪೈಕಿ ಅಮರಾವತಿಯೂ ಸೇರಲು ಜಗತ್ತಿನ ನಾನಾ ಕಂಪನಿಗಳಿಂದ ನಗರ ವಿನ್ಯಾಸದ ಕಲ್ಪನೆಯನ್ನು ಕೇಳಿದ್ದರು. ಈಗ ಈ ಎಲ್ಲ ಯೋಜನೆಗಳಿಗೆ ಜಗನ್‌ ಪೂರ್ಣ ವಿರಾಮ ಹಾಕಿದ್ದಾರೆ.

    ಈ ಕಾಯ್ದೆಯಿಂದ ಇನ್ನು ಮುಂದೆ ಆಂಧ್ರ ಪ್ರದೇಶದ ವಾಣಿಜ್ಯ ರಾಜಧಾನಿಯಾಗಿರುವ ವಿಶಾಖಪಟ್ಟಣ ಆಡಳಿತಾತ್ಮಕ ರಾಜಧಾನಿಯಾಗಲಿದೆ. ಅಮರಾವತಿ ಶಾಸನ ರಾಜಧಾನಿಯಾಗಿಯೇ ಮುಂದುವರಿಯಲಿದ್ದು, ನ್ಯಾಯ ರಾಜಧಾನಿಯಾಗಿ ಕರ್ನೂಲಿನಲ್ಲಿ ಹೈಕೋರ್ಟ್ ನಿರ್ಮಾಣವಾಗಲಿದೆ.

  • ಆಂಧ್ರ ಪ್ರದೇಶದಲ್ಲಿ ಮೂರು ರಾಜಧಾನಿ – ಮಂತ್ರಾಲಯ ಕರ್ನಾಟಕಕ್ಕೆ?

    ಆಂಧ್ರ ಪ್ರದೇಶದಲ್ಲಿ ಮೂರು ರಾಜಧಾನಿ – ಮಂತ್ರಾಲಯ ಕರ್ನಾಟಕಕ್ಕೆ?

    – ನಾವು ಕನ್ನಡ ಮಾತನಾಡುತ್ತೇವೆ ನಮ್ಮನ್ನು ಕರ್ನಾಟಕಕ್ಕೆ ಸೇರಿಸಿ
    – ಆಂಧ್ರ ಸಿಎಂ ಕ್ರಮ ವಿರೋಧಿಸಿ ಟಿಡಿಪಿಯಿಂದ ಹೋರಾಟ

    ರಾಯಚೂರು: ಆಂಧ್ರಪ್ರದೇಶದ ಮಂತ್ರಾಲಯ ಸೇರಿದಂತೆ ಕರ್ನೂಲ್ ಲೋಕಸಭಾ ಕ್ಷೇತ್ರವನ್ನು ಕರ್ನಾಟಕಕ್ಕೆ ಸೇರಿಸಬೇಕು ಎಂದು ತೆಲುಗುದೇಶಂ ಪಕ್ಷ ಹೊಸ ಹೋರಾಟವನ್ನು ಶುರು ಮಾಡಿದೆ.

    ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್ ಜಗನ್ ಮೋಹನರೆಡ್ಡಿ ನೂತನ ಮೂರು ರಾಜಧಾನಿಗಳನ್ನು ಘೋಷಿಸಿದ್ದರಿಂದ ಜನ ಆಕ್ರೋಶಗೊಂಡಿದ್ದಾರೆ. ನಮಗೆ ಆಂಧ್ರಪ್ರದೇಶದ ಸಹವಾಸವೇ ಬೇಡ ನಮ್ಮನ್ನು ಕರ್ನಾಟಕದ ಬಳ್ಳಾರಿ ಜಿಲ್ಲೆಗೆ ಸೇರಿ ಬೆಂಗಳೂರೇ ನಮಗೆ ರಾಜಧಾನಿಯಾಗಿರಲಿ ಎಂದು ಟಿಡಿಪಿ ಪಕ್ಷದ(ತೆಲುಗುದೇಶಂ) ಮಂತ್ರಾಲಯ ಉಸ್ತುವಾರಿ ಪಿ. ತಿಕ್ಕಾರೆಡ್ಡಿ ಹೇಳಿದ್ದಾರೆ. ಸಿಎಂ ಕ್ರಮ ಖಂಡಿಸಿ ಆಂಧ್ರದ ಮಂತ್ರಾಲಯ, ಕೌತಾಳಂನಲ್ಲಿ ಪ್ರತಿಭಟನೆ ಮಾಡಿದ್ದಾರೆ.

    ಆಡಳಿತಾತ್ಮಕ ರಾಜಧಾನಿಯಾಗಿ ವಿಶಾಖಪಟಣಂ, ಹೈಕೋರ್ಟ್ ಗಾಗಿ ಕರ್ನೂಲ್, ಭೂಮಿ ಕಳೆದುಕೊಂಡ ರೈತರಿಗಾಗಿ ಅಮರಾವತಿಯನ್ನು ರಾಜಧಾನಿಗಳಾಗಿ ಸಿಎಂ ನಿರ್ಧರಿಸಿದ್ದಾರೆ. ಕರ್ನೂಲ್ ನಲ್ಲಿ ಹೈಕೋರ್ಟ್ ಮಾಡಿದರೆ ನಮಗೇನು ಪ್ರಯೋಜನವಿಲ್ಲ. ವಿಶಾಖಪಟ್ಟಣಂಗೆ ಹೋಗಿ ಬರಲು ಎರಡು ದಿನ ಬೇಕು, ಅಷ್ಟು ದೂರದ ರಾಜಧಾನಿ ನಮಗೆ ಬೇಡ. ಒಮ್ಮೊಮ್ಮೆ ಒಂದೊಂದು ರಾಜಧಾನಿಯನ್ನು ಬದಲಿಸುತ್ತಾ ಹೋದರೆ ನಾವು ನೆಮ್ಮದಿಯಿಂದ ಬದುಕುವುದು ಹೇಗೆ ಎಂದು ಪ್ರಶ್ನಿಸಿದ್ದಾರೆ.

    1956ರವರೆಗೆ ನಾವು ಬಳ್ಳಾರಿ ಜಿಲ್ಲೆಗೆ ಒಳಪಟ್ಟಿದ್ದೆವು. ನಾವೆಲ್ಲಾ ಕನ್ನಡ ಭಾಷೆಯನ್ನೇ ಮಾತನಾಡುತ್ತೇವೆ. ಬಳ್ಳಾರಿಯಲ್ಲಿ ಹೊಸಪೇಟೆ ತುಂಗಭದ್ರಾ ಡ್ಯಾಂ ಇದೆ. ನಮಗೆ ಕೃಷಿಗೆ ಅನುಕೂಲವಾಗುತ್ತದೆ. ನೀರು, ಮಕ್ಕಳಿಗೆ ಓದು ಎಲ್ಲಾ ಸಿಗುತ್ತದೆ. ನೀವು ಎಷ್ಟು ರಾಜಧಾನಿಗಳನ್ನಾದರೂ ಮಾಡಿಕೊಳ್ಳಿ. ನಮ್ಮನ್ನು ಕರ್ನಾಟಕಕ್ಕೆ ಸೇರಿಸಿ ಎಂದು ಟಿಡಿಪಿ ಮುಖಂಡ ತಿಕ್ಕಾರೆಡ್ಡಿ ಹೇಳಿದ್ದಾರೆ.

    ಮಂತ್ರಾಲಯ ರಾಘವೇಂದ್ರ ಸ್ವಾಮಿ ಮಠಕ್ಕೆ ಕರ್ನಾಟಕದ ಭಕ್ತರೇ ಹೆಚ್ಚಾಗಿ ಇರುವುದರಿಂದ ಹಾಗೂ ಮಂತ್ರಾಲಯದಲ್ಲಿ ಕನ್ನಡ ಭಾಷಿಕರು ಅಧಿಕ ಪ್ರಮಾಣದಲ್ಲಿ ಇರುವುದರಿಂದ ಮಂತ್ರಾಲಯವನ್ನು ಕರ್ನಾಟಕಕ್ಕೆ ಸೇರಿಸಲು ಕೂಡ ಒತ್ತಾಯಗಳು ಕೇಳಿ ಬಂದಿವೆ. ರಾಯಚೂರಿನಿಂದ ಮಂತ್ರಾಲಯ ಕೇವಲ 45 ಕಿ.ಮೀ ದೂರದಲ್ಲಿರುವುದರಿಂದ ರಾಯಚೂರು ಜಿಲ್ಲೆಗೆ ಸೇರಿಸಬೇಕು ಎಂದು ಕೂಗು ಕೇಳಿ ಬರುತ್ತಿದೆ.

  • ಎಚ್‍ಡಿಕೆ ಸಿಎಂ ಆಗಿದ್ದಾಗ ಒಂದು ತಪ್ಪು ಮಾಡಿಬಿಟ್ರು: ಡಿಕೆಶಿ

    ಎಚ್‍ಡಿಕೆ ಸಿಎಂ ಆಗಿದ್ದಾಗ ಒಂದು ತಪ್ಪು ಮಾಡಿಬಿಟ್ರು: ಡಿಕೆಶಿ

    ರಾಮನಗರ: ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ಒಂದು ತಪ್ಪು ಮಾಡಿಬಿಟ್ಟರು. ಅದು ರಾಮನಗರ ಜಿಲ್ಲೆ ಮಾಡಿದ್ದು ತಪ್ಪಲ್ಲ, ಜಿಲ್ಲೆಗೆ ರಾಮನಗರ ಎಂದು ಹೆಸರಿಟ್ಟಿದ್ದು ತಪ್ಪು ಎಂದು ಮಾಜಿ ಸಚಿವ ಡಿಕೆ ಶಿವಕುಮಾರ್ ಹೇಳಿದ್ದಾರೆ.

    ಜಿಲ್ಲೆಯ ದ್ಯಾವರಸೇಗೌಡನದೊಡ್ಡಿ ರಸ್ತೆಯಲ್ಲಿ ನಡೆದ ಒಕ್ಕಲಿಗ ಸಂಘದ ಕಟ್ಟಡದ ಉದ್ಘಾಟನಾ ಕಾರ್ಯಕ್ರಮದಲ್ಲಿ ಡಿಕೆಶಿ ಭಾಗಿಯಾಗಿ ಮಾತನಾಡಿದರು. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಗಳಾಗಿದ್ದ ವೇಳೆ ರಾಮನಗರ ಜಿಲ್ಲೆಗೆ ಬೇಕಾದ ಸವಲತ್ತುಗಳನ್ನೇಲ್ಲಾ ನೀಡಿದ್ದರು. ಡಿಸಿ ಕಚೇರಿ, ಎಸ್‍ಪಿ ಕಚೇರಿ, ರಾಜೀವ್ ಗಾಂಧಿ ವಿವಿ ಸೇರಿದಂತೆ ಬೇಕಾದ ಎಲ್ಲಾ ಸೌಲಭ್ಯಗಳನ್ನು ನೀಡಿದ್ದರು. ಆದರೆ ಹೆಸರು ಬೇಕಲ್ವಾ, ನಾವು ಬೆಂಗಳೂರಿನವರು ರಾಮನಗರ ಜಿಲ್ಲೆ ಅಂತಾ ಹೆಸರಿಡುವ ಬದಲು ಬೆಂಗಳೂರು ದಕ್ಷಿಣ ಎಂದು ಹೆಸರಿಡಬೇಕಿತ್ತು. ಈ ವಿಚಾರವಾಗಿ ಎಚ್‍ಡಿಕೆಯವರ ಬಳಿ ಪ್ರಸ್ತಾಪಿಸಿದ್ದೆ ಅವರು ಏನೋ ಆಗಿ ಬಿಡ್ತು ಬಿಡಣ್ಣಾ ಎಂದರು. ಆದರೆ ಬೆಂಗಳೂರು ದಕ್ಷಿಣ ಎಂದರೆ ನಮ್ಮ ಆಸ್ತಿಯ ಮೌಲ್ಯಗಳೆಲ್ಲಾ ಹೆಚ್ಚುತ್ತಿದ್ದವು ಎಂದು ಡಿಕೆಶಿ ತಿಳಿಸಿದರು.

    ಕರ್ನಾಟಕ ಎಂದಾಕ್ಷಣ 5 “ಕೆ” ಗಳನ್ನು ನೆನೆಯಲೇ ಬೇಕು ಎಂದು ಈ ಹಿಂದೆಯೇ ಹೇಳಿದ್ದೇನೆ. ಅದು ಬೆಂಗಳೂರು ಕಟ್ಟಿದ್ದ ಕೆಂಪೇಗೌಡ್ರು, ವಿಧಾನಸೌಧ ಕಟ್ಟಿದ ಕೆಂಗಲ್ ಹನುಮಂತಯ್ಯ, ವಿಶ್ವಮಾನವತೆ ಸಾರಿದ ಕುವೆಂಪು, ವಿಕಾಸಸೌಧ ಕಟ್ಟಿದ ಎಸ್.ಎಂ.ಕೃಷ್ಣ ಹಾಗೂ ಸುವರ್ಣಸೌಧ ಕಟ್ಟಿದ ಕುಮಾರಸ್ವಾಮಿ ಎಂದು ತಿಳಿಸಿದರು. ಕೆಂಗಲ್ ಹನುಮಂತಯ್ಯನವರು ಬೆಂಗಳೂರನ್ನು ರಾಜ್ಯಧಾನಿ ಮಾಡದಿದ್ದರೇ ಒಕ್ಕಲಿಗರ ಪರಿಸ್ಥಿತಿ ಏನು ಆಗುತ್ತಿತ್ತು, ದಾವಣಗೆರೆ, ಹುಬ್ಬಳಿ ರಾಜ್ಯಧಾನಿ ಆಗಿದ್ದರೆ ಏನಾಗುತ್ತಿತ್ತು ಎಂದು ಪ್ರಶ್ನಿಸಿಕೊಳ್ಳುವಂತೆ ಡಿಕೆಶಿ ಹೇಳಿದರು.

    ನಾನು ಕಷ್ಟ ಕಾಲದಲ್ಲಿದ್ದಾಗ, ನನ್ನ ವಿರುದ್ಧ ರಾಜಕೀಯ ಷಡ್ಯಂತ್ರ ನಡೆದಾಗ ನಮಗೆ ಬೆಂಬಲ ನೀಡಿದ್ದೀರಿ. ಚಾರ್ಜ್ ಶೀಟ್ ಆಗದೇ ಹೊರಗೆ ಬಂದಿದ್ದೇನೆ ಎಂದರೆ ನಿಮ್ಮೆಲ್ಲರ ಪ್ರಾರ್ಥನೆಯೇ ಕಾರಣ. ಆ ಕಾಯ್ದೆ ಎಷ್ಟು ಕಠಿಣವಾಗಿದೆ ಎಂಬುದು ನನಗೆ ಗೊತ್ತಿದೆ. ಜೈಲಿಗೆ ಹೋಗಿ ಬಂದಿದ್ದಕ್ಕೆ ಬೇಸರವಿಲ್ಲ, ತಪ್ಪು ಮಾಡಿದರೆ ದೇವರು ನನಗೆ ಶಿಕ್ಷೆ ನೀಡಲಿ. ನಾನು ವ್ಯವಹಾರ ಮಾಡಿದ್ದೇನೆ ಹೊರತು ಬೇರೇನನ್ನೂ ಮಾಡಿಲ್ಲ. ನಾನು ಏನೇ ಮಾಡಿದರು ಒಕ್ಕಲಿಗ ಅಂತಾರೇ, ಒಕ್ಕಲಿಗ ಎಂದೇ ಮಂತ್ರಿಸ್ಥಾನ ಮತ್ತೊಂದು ನೀಡುತ್ತಾರೆ ಎಂದರು. ಕಾರ್ಯಕ್ರಮದಲ್ಲಿ ವಿವಿಧ ಮಠಾಧೀಶರು ಸೇರಿದಂತೆ ಹಲವಾರು ಗಣ್ಯರು ಭಾಗವಹಿಸಿದ್ರು.

  • ಪರಿಶಿಷ್ಟ ಪಂಗಡಕ್ಕೆ ಶೇ.7.5ರಷ್ಟು ಮೀಸಲಾತಿಗೆ ಒತ್ತಾಯ – ರಾಜಧಾನಿ ತಲುಪಿದ ಬೃಹತ್ ಪಾದಯಾತ್ರೆ

    ಪರಿಶಿಷ್ಟ ಪಂಗಡಕ್ಕೆ ಶೇ.7.5ರಷ್ಟು ಮೀಸಲಾತಿಗೆ ಒತ್ತಾಯ – ರಾಜಧಾನಿ ತಲುಪಿದ ಬೃಹತ್ ಪಾದಯಾತ್ರೆ

    ಬೆಂಗಳೂರು: ಪರಿಶಿಷ್ಟ ಪಂಗಡದವರಿಗೆ ಶೇಕಡಾ 7.5ರಷ್ಟು ಮೀಸಲಾತಿಗೆ ಆಗ್ರಹಿಸಿ ವಾಲ್ಮೀಕಿ ಸಮುದಾಯ ದಾವಣಗೆರೆ ಜಿಲ್ಲೆಯ ರಾಜನಹಳ್ಳಿಯಿಂದ ಕೈಗೊಂಡಿದ್ದ ಪಾದಯಾತ್ರೆ ಬೆಂಗಳೂರು ತಲುಪಿದ್ದು, ಫ್ರೀಡಂ ಪಾರ್ಕ್ ನಲ್ಲಿ ಧರಣಿ ನಡೆಸುತ್ತಿದ್ದಾರೆ.

    ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಪುರಿ ಸ್ವಾಮಿಜಿಯಿಂದ ಪಾದಯಾತ್ರೆ ನೇತೃತ್ವ ವಹಿಸಿದ್ದು, ಧರಣಿಯಲ್ಲಿ ಲಕ್ಷಾಂತರ ಮಂದಿ ಭಾಗಿಯಾಗಿದ್ದಾರೆ. ಮೀಸಲಾತಿಗೆ ಒತ್ತಾಯಿಸಿ ಇಂದು ಬೃಹತ್ ಶಕ್ತಿ ಪ್ರದರ್ಶನಕ್ಕೆ ಫ್ರೀಡಂ ಪಾರ್ಕ್‍ನಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ.

    ಜೂನ್ 9 ರಂದು ಆರಂಭವಾಗಿದ್ದ ಪಾದಯಾತ್ರೆ ಮೂಲಕ ಸಮುದಾಯದ ಸಾವಿರಾರು ಜನರು ಬೆಂಗಳೂರಿಗೆ ಆಗಮಿಸಿದ್ದಾರೆ. ದಾವಣಗೆರೆಯ ರಾಜನಹಳ್ಳಿಯಿಂದ ಆರಂಭಗೊಂಡಿದ್ದ ಪಾದಯಾತ್ರೆಗೆ ರಾಜನಹಳ್ಳಿ, ಜಗಳೂರು, ಚಿತ್ರದುರ್ಗ, ಚಳ್ಳಕೆರೆ, ಹಿರಿಯೂರು, ಶಿರಾ, ತುಮಕೂರು, ನೆಲಮಂಗಲ, ದೊಡ್ಡಬಳ್ಳಾಪುರ, ದೇವನಹಳ್ಳಿ, ಶಿಡ್ಲಘಟ್ಟ, ಹೊಸಕೋಟೆ ಹಾಗೂ ಕೆಆರ್ ಪುರಂ ಮೂಲಕ ಪಾದಯಾತ್ರೆ ನಡೆದಿತ್ತು. ರಾಜ್ಯದ ವಿವಿಧ ಜಿಲ್ಲೆಗಳಿಂದ ವಾಲ್ಮೀಕಿ ಸಮಾಜದ ಜನರು ಧರಣಿಯಲ್ಲಿ ಭಾಗವಹಿಸುತ್ತಿದ್ದಾರೆ. ರಾಜ್ಯ ಸರ್ಕಾರಕ್ಕೆ ತಮ್ಮ ಬೇಡಿಕೆಯ ಮನವರಿಕೆ ಮಾಡುವ ನಿಟ್ಟಿನಲ್ಲಿ ಧರಣಿ ನಡೆಸಲಾಗುತ್ತಿದೆ.

    ಅನಿರ್ದಿಷ್ಟಾ ಅವಧಿಯವರಿಗೆ ಪ್ರತಿಭಟನೆ ಮುಂದುವರಿಯಲಿದೆ. ಇದೇ ಸಂದರ್ಭದಲ್ಲಿ ಮೀಸಲಾತಿ ಹೆಚ್ಚಳ ಮಾಡಬೇಕು ಎಂದು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಹೊರಟ ಪ್ರಯತ್ನಿಸಿದ್ದು, ಪೊಲೀಸರು ಬಿಗಿ ಬಂದೋಬಸ್ತ್ ವ್ಯವಸ್ಥೆಯನ್ನು ಕಲ್ಪಿಸಿದ್ದಾರೆ. ಇತ್ತ ಹೋರಾಟಗಾರರ ಪ್ರತಿಭಟನೆಯಿಂದ ನಗರದ ಪ್ರಮುಖ ರಸ್ತೆಗಳಲ್ಲಿ ಟ್ರಾಫಿಕ್ ಸಮಸ್ಯೆ ಹೆಚ್ಚಾಗಿದೆ.

  • ಗಜ ಚಂಡಮಾರುತ ಎಫೆಕ್ಟ್: ರಾಜ್ಯದಲ್ಲಿ ಮೂರು ದಿನ ಧಾರಾಕಾರ ಮಳೆ

    ಗಜ ಚಂಡಮಾರುತ ಎಫೆಕ್ಟ್: ರಾಜ್ಯದಲ್ಲಿ ಮೂರು ದಿನ ಧಾರಾಕಾರ ಮಳೆ

    ಬೆಂಗಳೂರು: ಗಜ ಚಂಡಮಾರುತದ ಪರಿಣಾಮ ರಾಜ್ಯದಲ್ಲಿ ಮೂರು ದಿನಗಳ ಕಾಲ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

    ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರದ ಕುಸಿತದಿಂದಾಗಿ ‘ಗಜ’ ಚಂಡಮಾರುತ ಸೃಷ್ಟಿಯಾಗಿದೆ. ಇದರ ಪರಿಣಾಮವಾಗಿ ಗುರುವಾರ ಮತ್ತು ಶುಕ್ರವಾರ ಚೆನ್ನೈ ಮತ್ತು ಕೇರಳದಲ್ಲಿ ಮಹಾಮಳೆಯಾಗಲಿದೆ. ಹವಾಮಾನ ಇಲಾಖೆಯ ಮಾಹಿತಿಗಳ ಪ್ರಕಾರ 110 ಮಿ.ಮೀ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

    ಇದೇ ಚಂಡಮಾರುತವು ರಾಜ್ಯಕ್ಕೂ ಅಪ್ಪಳಿಸುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಇದೇ ನವೆಂಬರ್ 17ರಿಂದ ರಾಜ್ಯದ ಕರಾವಳಿ ಭಾಗಗಳಿಗೆ ಗಜ ಚಂಡಮಾರುತ ಅಪ್ಪಳಿಸಲಿದೆ. ಮಾಹಿತಿಗಳ ಪ್ರಕಾರ ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಭಾಗಗಳಲ್ಲಿ ಸಾಧಾರಣ ಮಳೆಯಾಗಲಿದೆ. ಆದರೆ ನವೆಂಬರ್ 18 ರಿಂದ 21 ವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗುತ್ತದೆ. ಇದರಿಂದಾಗಿ ಮೂರು ದಿನಗಳ ಕಾಲ ರಾಜ್ಯದಲ್ಲಿ ಎಡೆಬಿಡದೇ ಮಳೆಯಾಗುತ್ತದೆ ಎನ್ನುವ ಮಾಹಿತಿ ಲಭ್ಯವಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಕೇವಲ 1 ನಿಮಿಷದಲ್ಲಿ ದೇಶದ ಎಲ್ಲಾ ರಾಜ್ಯಗಳ ರಾಜಧಾನಿ ಹೆಸರು ಹೇಳ್ತಾಳೆ 2ರ ಕಂದಮ್ಮ!- ವಿಡಿಯೋ

    ಕೇವಲ 1 ನಿಮಿಷದಲ್ಲಿ ದೇಶದ ಎಲ್ಲಾ ರಾಜ್ಯಗಳ ರಾಜಧಾನಿ ಹೆಸರು ಹೇಳ್ತಾಳೆ 2ರ ಕಂದಮ್ಮ!- ವಿಡಿಯೋ

    ಚಂಡೀಗಢ: 2 ವರ್ಷದ ಪುಟ್ಟ ಬಾಲಕಿಯೊಬ್ಬಳು ಭಾರತದ ದೇಶದ ಎಲ್ಲಾ ರಾಜ್ಯದ ರಾಜಧಾನಿಗಳನ್ನು ಪಟಾ ಪಟಾಂತ ಹೇಳೋ ಮೂಲಕ ಸುದ್ದಿಯಾಗಿದ್ದಾಳೆ.

    ಹೌದು, ಹರ್ಯಾಣ ಪಂಚಕುಲಾದ ಅಮಾರ್ಯಾ ಗುಲಾಟಿ ಎಂಬ ಬಾಲಕಿ ಕೇವಲ 1 ನಿಮಿಷದಲ್ಲಿ ಎಲ್ಲಾ ರಾಜ್ಯದ ರಾಜಧಾನಿಗಳ ಹೆಸರನ್ನು ಹೇಳುವಲ್ಲಿ ಯಶಸ್ವಿಯಾಗುತ್ತಾಳೆ. ಸದ್ಯ ಈಕೆ ರಾಜಧಾನಿಗಳ ಹೆಸರನ್ನು ಹೇಳುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈಕೆಯ ತೊದಲು ಮಾತುಗಳಿಂದ ಎಲ್ಲರೂ ಪ್ರಭಾವಿತರಾಗಿದ್ದಾರೆ.

    ತೊದಲು ಮಾತಾಡುತ್ತಿರುವ ಈ ಪುಟ್ಟ ಬಾಲಕಿ ರಾಜ್ಯದ ರಾಜಧಾನಿಗಳ ಹೆಸರನ್ನು ಅಸ್ಪಷ್ಟವಾಗಿಯೇ ಹೇಳುತ್ತಾಳೆ. ಈಕೆಯ ಈ ಮಾತುಗಳಿಂದಲೇ ಸಾಮಾಜಿಕ ಜಾಲತಾಣದಲ್ಲಿ ವೀಕ್ಷಕರನ್ನು ಆಕರ್ಷಿಸಿದ್ದಾಳೆ. ಅಮಾರ್ಯಾ 7 ತಿಂಗಳ ಮಗುವಿದ್ದಾಗಲೇ ಆಕೆಯ ತಾಯಿ ರಾಜಧಾನಿಗಳು ಹಾಗೂ ಕೆಲವೊಂದು ಸ್ಥಳಗಳ ಹೆಸರನ್ನು ಹೇಳಿಕೊಡಲು ಆರಂಭಿಸಿದ್ದರು. ಹೀಗಾಗಿ ಈಕೆ ಇಂದು ಇಷ್ಟೊಂದು ಸುಲಲಿತವಾಗಿ ರಾಜಧಾನಿಗಳ ಹೆಸರನ್ನು ಹೇಳಬಲ್ಲವಳಾಗಿದ್ದಾಳೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.

    ಇಷ್ಟು ಮಾತ್ರವಲ್ಲದೇ ಈಕೆ ಈಗಾಗಲೇ ದೇಶದ ವಿವಿಧ ನಗರಗಳ ಹೆಸರನ್ನು ಹೇಳುವ ಸ್ಥರ್ಧೆಯಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆದುಕೊಂಡಿದ್ದಾಳೆ. ಒಟ್ಟಿನಲ್ಲಿ ಸದ್ಯ ಅಮಾರ್ಯ ತನ್ನ ತೊದಲು ಮಾತುಗಳಿಂದ ಸಾಮಾಜಿಕ ಜಾಲತಾಣಿಗರ ಮನಸ್ಸನ್ನು ಗೆದ್ದಿದ್ದಾಳೆ.

  • ಬೆಂಗಳೂರನ್ನು ದೇಶದ 2ನೇ ರಾಜಧಾನಿ ಮಾಡಿ- ಮೋದಿ ಸರ್ಕಾರಕ್ಕೆ ಕರ್ನಾಟಕದ ಪತ್ರ

    ಬೆಂಗಳೂರನ್ನು ದೇಶದ 2ನೇ ರಾಜಧಾನಿ ಮಾಡಿ- ಮೋದಿ ಸರ್ಕಾರಕ್ಕೆ ಕರ್ನಾಟಕದ ಪತ್ರ

    ಬೆಂಗಳೂರು: ನಮ್ಮ ಹೆಮ್ಮೆಯ ಬೆಂಗಳೂರನ್ನು ದೇಶದ ಎರಡನೇ ರಾಜಧಾನಿಯನ್ನಾಗಿ ಘೋಷಿಸುವಂತೆ ಕರ್ನಾಟಕ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದೆ.

    ಭಾರತದಲ್ಲಿ ಎಲ್ಲಾ ಭಾಷೆಗಳನ್ನೂ ಆಡುವ ಜನರು ಸಿಲಿಕಾನ್ ಸಿಟಿಯಲ್ಲಿ ನೆಲೆಸಿದ್ದಾರೆ. ತಾಂತ್ರಿಕ, ವೈದ್ಯಕೀಯ, ಏರೋಸ್ಪೇಸ್, ಮಾಹಿತಿ-ತಂತ್ರಜ್ಞಾನ, ಸಂಗೀತ, ಸಾಹಿತ್ಯ ಹೀಗೆ ಎಲ್ಲಾ ಕ್ಷೇತ್ರಗಳ ಸಾಧಕರು ಇಲ್ಲಿದ್ದಾರೆ. ದೇಶದ 2ನೇ ರಾಜಧಾನಿಗೆ ಬೆಂಗಳೂರಿಗಿಂತ ಒಳ್ಳೆಯ ನಗರ ಮತ್ತೊಂದಿಲ್ಲ ಅಂತ ಬೃಹತ್ ಕೈಗಾರಿಕಾ ಸಚಿವ ಆರ್.ವಿ. ದೇಶಪಾಂಡೆ ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.

    ಬೆಂಗಳೂರು 2ನೇ ರಾಜಧಾನಿಯಾದರೆ ದಕ್ಷಿಣದ ರಾಜ್ಯಗಳಿಗೆ ನೆರವಾಗುತ್ತದೆ. ಅಷ್ಟೇ ಅಲ್ಲದೇ ಇಲ್ಲೇ ಚಳಿಗಾಲದ ಸಂಸತ್ ಅಧಿವೇಶನ ನಡೆಸಬಹುದು. ಸುಪ್ರೀಂಕೋರ್ಟ್ ಪೀಠ, ಯುಪಿಎಸ್‍ಸಿ ಕಚೇರಿ, ವಿದೇಶಗಳ ವೀಸಾ ಕಚೇರಿಗಳನ್ನು ತೆರೆಯಬಹುದು ಎಂದು ದೇಶಪಾಂಡೆ ಪತ್ರದಲ್ಲಿ ಹೇಳಿದ್ದಾರೆ.