Tag: Capture

  • 2 ದಿನಗಳಿಂದ ಬಿಲದಲ್ಲಿ ಅಡಗಿ ಕುಳ್ತಿದ್ದ ಕಾಳಿಂಗ ಸರ್ಪ ಸೆರೆ

    2 ದಿನಗಳಿಂದ ಬಿಲದಲ್ಲಿ ಅಡಗಿ ಕುಳ್ತಿದ್ದ ಕಾಳಿಂಗ ಸರ್ಪ ಸೆರೆ

    ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ 12 ಅಡಿ ಉದ್ದದ ಕಾಳಿಂಗ ಸರ್ಪವನ್ನು ಸೆರೆ ಹಿಡಿಯಲಾಗಿದೆ.

    ಮೂಡಿಗೆರೆ ತಾಲೂಕಿನ ನೇರಂಕಿ ಗ್ರಾಮದ ರಾಮದಾಸ್ ಗೌಡರವರ ತೋಟದಲ್ಲಿ ಕಾಳಿಂಗವೊಂದು ಎರಡು ದಿನಗಳಿಂದ ಬೀಡು ಬಿಟ್ಟಿತ್ತು. ತೋಟದ ಕೂಲಿ ಕಾರ್ಮಿಕರು ನೋಡಿ ಸುಮ್ಮನಾಗಿದ್ದರು. ಆದರೆ ತೋಟದಲ್ಲೆಲ್ಲಾ ಓಡಾಡುತ್ತಿದ್ದ ಕಾಳಿಂಗ ಕೂಲಿ ಕಾರ್ಮಿಕರಲ್ಲಿ ಭಯ ಮೂಡಿಸಿತ್ತು.

    ಕೂಲಿಯಾಳುಗಳು ಕಾಳಿಂಗ ಸರ್ಪ ದೊಡ್ಡದಾದ ಬಿಲ ಸೇರಿಕೊಂಡಿದ್ದನ್ನ ಗಮನಿಸಿದ್ದಾರೆ. ಬಳಿಕ ಅವರು ತೋಟದ ಮಾಲೀಕರಿಗೆ ವಿಷಯ ಮುಟ್ಟಿಸಿದ್ದಾರೆ. ಸ್ಥಳಕ್ಕೆ ಬಂದ ತೋಟದ ಮಾಲೀಕ ಉರಗ ತಜ್ಞ ಆರೀಫ್ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗೆ ಕರೆ ಮಾಡಿ ಮಾಹಿತಿ ತಿಳಿಸಿದ್ದಾರೆ.

    ಮಾಹಿತಿ ತಿಳಿದು ಸ್ಥಳಕ್ಕೆ ಉರಗ ತಜ್ಞ ಆರೀಫ್ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಬಂದು ಹರಸಾಹಸಪಟ್ಟು ಬಿಲದೊಳಗಿದ್ದ ಕಾಳಿಂಗ ಸರ್ಪವನ್ನು ಸೆರೆ ಹಿಡಿದಿದ್ದಾರೆ. ಬೂದು ಬಣ್ಣದಿಂದ ಕೂಡಿರುವ ಈ ಸರ್ಪ ಹೆಣ್ಣು ಕಾಳಿಂಗವಾಗಿದೆ. ಗಂಡು ಜಾತಿಗೆ ಸೇರಿದ ಕಾಳಿಂಗಗಳು ಕಪ್ಪನೆ ಬಣ್ಣದಿಂದ ಕೂಡಿರುತ್ತದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • 2 ದಿನದಿಂದ ಮನೆಯಲ್ಲಿ ಅವಿತು ಕುಳ್ತಿದ್ದ 12 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

    2 ದಿನದಿಂದ ಮನೆಯಲ್ಲಿ ಅವಿತು ಕುಳ್ತಿದ್ದ 12 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

    ಚಿಕ್ಕಮಗಳೂರು: ಎರಡು ದಿನಗಳಿಂದ ಮನೆಯೊಳಗೆ ಅವಿತು ಕುಳಿತಿದ್ದ 12 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪವನ್ನ ಸೆರೆ ಹಿಡಿದಿರುವ ಘಟನೆ ಜಿಲ್ಲೆಯ ಕೊಪ್ಪ ಪಟ್ಟಣದಲ್ಲಿ ನಡೆದಿದೆ.

    ಪಟ್ಟಣದ ಪ್ರಶಾಂತ್ ಎಂಬವರ ಮನೆಯ ಆವರಣದಲ್ಲಿ ಎರಡು ದಿನಗಳಿಂದ ಕಾಳಿಂಗ ಬೀಡುಬಿಟ್ಟಿತ್ತು. ಸರ್ಪಗಳು ಒಂದೇ ಜಾಗದಲ್ಲಿ ಇರೋದಿಲ್ಲ ಹೋಗುತ್ತದೆ ಎಂದು ಪ್ರಶಾಂತ್ ಮನೆಯವರು ಕೂಡ ಸುಮ್ಮನಾಗಿದ್ದರು. ಆದರೆ ಎರಡು ದಿನವಾದರೂ ಕಾಳಿಂಗ ಸರ್ಪ ಜಾಗ ಖಾಲಿ ಮಾಡಿರಲಿಲ್ಲ.

    ಈ ಹಿನ್ನೆಲೆಯಲ್ಲಿ ಪ್ರಶಾಂತ್ ಉರಗ ತಜ್ಞ ಹರೀಂದ್ರಾಗಿ ಕರೆ ಮಾಡಿ ಮಾಹಿತಿ ತಿಳಿಸಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಹರೀಂದ್ರ ಅರಣ್ಯ ಅಧಿಕಾರಿಗಳ ನೇತೃತ್ವದಲ್ಲಿ, ಗಿಡಗಂಟೆ ಹಾಗೂ ಪೈಪ್ ಒಳಗೆ ಹೋಗಲು ಯತ್ನಿಸುತ್ತಿದ್ದ ಕಾಳಿಂಗನನ್ನ ಒಂದು ಗಂಟೆಗಳ ನಿರಂತರ ಕಾರ್ಯಾಚರಣೆಯ ಮೂಲಕ ಸೆರೆ ಹಿಡಿದಿದ್ದಾರೆ.

    ಸೆರೆ ಹಿಡಿದಿದ್ದ ಕಾಳಿಂಗ ಸರ್ಪವನ್ನು ಸ್ಥಳೀಯ ಅರಣ್ಯಕ್ಕೆ ಬಿಟ್ಟಿದ್ದಾರೆ. ಇತ್ತ ಎರಡು ದಿನಗಳಿಂದ ಮನೆಯೊಳಗೆ ಅವಿತು ಕುಳಿತಿದ್ದ ಬೃಹತ್ ಕಾಳಿಂಗನನ್ನ ಕಂಡು ಸ್ಥಳೀಯರು ಬೆಚ್ಚಿ ಬಿದ್ದಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ನಿಷೇಧವಾಗಿದ್ದರೂ ಬರೋಬ್ಬರಿ 500, 1 ಸಾವಿರ ಮುಖಬೆಲೆಯ 3 ಕೋಟಿ ರೂ. ಪತ್ತೆ!

    ನಿಷೇಧವಾಗಿದ್ದರೂ ಬರೋಬ್ಬರಿ 500, 1 ಸಾವಿರ ಮುಖಬೆಲೆಯ 3 ಕೋಟಿ ರೂ. ಪತ್ತೆ!

    ಪುಣೆ: ನೋಟು ನಿಷೇಧವಾಗಿ ಸುಮಾರು ಒಂದೂವರೆ ವರ್ಷವಾದ್ರೂ 500 ಮತ್ತು 1,000 ರೂ. ಮುಖಬೆಲೆಯ ಬರೋಬ್ಬರಿ 3 ಕೋಟಿ ರೂ.ವನ್ನು ಶುಕ್ರವಾರ ಪೊಲೀಸರು ವಶ ಪಡಿಸಿಕೊಂಡಿದ್ದಾರೆ.

    ಖಾದಕ್ ಪೊಲೀಸರು ಈ ಕಾರ್ಯಚರಣೆ ನಡೆಸಿದ್ದು, ಶುಕ್ರವಾರ ರಾತ್ರಿ ಕಾಂಗ್ರೆಸ್ ಶಾಸಕ ಸೇರಿದಂತೆ ಐದು ಜನರನ್ನು ಬಂಧಿಸಿದ್ದಾರೆ. ಶಾಸಕ ಗಜೇಂದ್ರ ಅಹ್ಹಂಗ್, ಸಂಗನ್ಮರ್ ಮುನಿಸಿಪಲ್ ಕೌನ್ಸಿಲ್ ನ ಕಾರ್ಪೊರೇಟರ್ ಎಂದು ತಿಳಿದುಬಂದಿದೆ. ಇತರರನ್ನು ವಿಜಯ್ ಶಿಂಧೆ (38), ಆದಿತ್ಯ ಘಾನ್ (25) ಮತ್ತು ನವನಾಥ್ ಭಂಡಾಗೆಲ್ (28) ಇವರು ಮೂಲತಃ ಪುಣೆಯವರಾಗಿದ್ದು, ಮತ್ತೊಬ್ಬ ಸತಾರಾ ಜಿಲ್ಲೆಯ ಸುರಾಜ್ ಜಗ್ತಾಪ್ (40) ಎಂದು ಗುರುತಿಸಲಾಗಿದೆ.

    ಈ ಐದು ಬಂಧಿತ ಆರೋಪಿಗಳು ಶುಕ್ರವಾರ ರಾತ್ರಿ ರವಿವರ್ ಪೆಥ್ ಪ್ರದೇಶದಲ್ಲಿ ಹಳೆಯ ನೋಟುಗಳನ್ನು ವಿನಿಮಯ ಮಾಡಲು ಯತ್ನಿಸುತ್ತಿದ್ದರು. ಈ ಬಗ್ಗೆ ನಿಖರ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಕೇವಲ 48 ಸಾವಿರ ರೂ.ವನ್ನು ಮಾತ್ರ ಹಳೆಯ ನೋಟಿನಿಂದ ನವೀಕರಣ ಮಾಡಲಾಗಿತ್ತು. ಇನ್ನುಳಿದ 2.99 ಕೋಟಿ ರೂ.ಗಳು ಹಳೆಯ 500 ಮತ್ತು 1,000 ರೂ. ನೋಟುಗಳಿದ್ದವು. ಸದ್ಯಕ್ಕೆ ಈ ಬಗ್ಗೆ ಆದಾಯ ತೆರಿಗೆ ಇಲಾಖೆಗೆ ಮಾಹಿತಿ ತಿಳಿದಿದ್ದು, ಅವರು ಸ್ಥಳಕ್ಕೆ ಬಂದು ಹಣವನ್ನು ವಶಪಡಿಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ವಶಪಡಿಸಿಕೊಂಡಿರುವ ಹಣವು ಯಾರದು ಎಂದು ತಿಳಿದುಕೊಳ್ಳಲು ತನಿಖೆಯನ್ನು ಮುಂದುವರೆಸಿದ್ದೇವೆ.

  • ಗ್ರಾಹಕರಂತೆ ವೇಷಹಾಕಿ ವನ್ಯಜೀವಿಗಳ ಬೇಟೆಗಾರರ ಬಂಧನ: 16.5 ಕೆ.ಜಿ. ಜಿಂಕೆಗಳ ಕೊಂಬು ವಶ

    ಗ್ರಾಹಕರಂತೆ ವೇಷಹಾಕಿ ವನ್ಯಜೀವಿಗಳ ಬೇಟೆಗಾರರ ಬಂಧನ: 16.5 ಕೆ.ಜಿ. ಜಿಂಕೆಗಳ ಕೊಂಬು ವಶ

    ಚಿಕ್ಕಮಗಳೂರು: ಸಿನಿಮೀಯ ರೀತಿಯಲ್ಲಿ ಗ್ರಾಹಕರಂತೆ ಹೋಗಿ, ಕಾಡು ಪ್ರಾಣಿಗಳನ್ನು ಬೇಟಿ ಆಡುತ್ತಿದ್ದ ಆರು ಜನರ ತಂಡವನ್ನು ತರೀಕೆರೆ ತಾಲೂಕಿನ ಲಕ್ಕವಳ್ಳಿ ಅರಣ್ಯ ಅಧಿಕಾರಿಗಳು ಬಂಧಿಸಿದ್ದಾರೆ.

    ಭಾನುವಾರ ಮಾಹಿತಿ ದೊರೆತಿದ್ದು, ಶಿವಮೊಗ್ಗದ ಸತೀಶ್, ಗಾಜನೂರಿನ, ತರೀಕೆರೆ ತಾಲೂಕಿನ ಉಪ್ಪಾರ ಬಸವಣ ಹಳ್ಳಿಯ ಸಹೋದರರಾದ ರವಿ ಹಾಗೂ ಲಕ್ಷ್ಮಣ ಬಂಧಿತ ಆರೋಪಿಗಳಾಗಿದ್ದು, ಉಳಿದ ಇಬ್ಬರ ಬಗ್ಗೆ ಇನ್ನು ಮಾಹಿತಿ ದೊರೆತಿಲ್ಲ ಎಂದು ವಲಯ ಅರಣ್ಯಾಧಿಕಾರಿ ಕಾಂತರಾಜು ತಿಳಿಸಿದ್ದಾರೆ.

    ಸುಮಾರು ದಿನಗಳಿಂದ ಆರೋಪಿಗಳು ಜಾಲದ ಬಗ್ಗೆ ಮಾಹಿತಿ ದೊರೆತಿತ್ತು. ಆದರೆ ಬಂಧಿಸಲು ಸಾಧ್ಯವಾಗಿರಲಿಲ್ಲ. ಭಾನುವಾರ ಖಚಿತ ಮಾಹಿತಿ ದೊರೆಯಿತು. ಹೀಗಾಗಿ ಗ್ರಾಹಕರಂತೆ ಮಾರುವೇಷ ಹಾಕಿಕೊಂಡು ಅರಣ್ಯ ಇಲಾಖೆ ಪೊಲೀಸ್ ಸಿಬ್ಬಂದಿ ತಂಡ ದಾಳಿ ಮಾಡಿದ ಪರಿಣಾಮ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ ಎಂದು ಹೇಳಿದರು.

    ಬಂಧಿತ ಆರೋಪಿಗಳಿಂದ 4 ಕೆ.ಜಿ. ಆನೆದಂತ, 11 ಕೆ.ಜಿ. ಚಿಪ್ಪು ಹಂದಿಯ ಚಿಪ್ಪು, 16.5 ಕೆ.ಜಿ. ಜಿಂಕೆಗಳ ಕೊಂಬು ಹಾಗೂ 4.5 ಕೆ.ಜಿ. ಕಾಡು ಕೋಣಗಳ ಕೊಂಬುಗಳನ್ನು ಅರಣ್ಯಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಆರೋಪಿಗಳ ಹಿಂದೆ ದೊಡ್ಡ ಜಾಲವಿದೆ ಎನ್ನುವ ಶಂಕೆ ವ್ಯಕ್ತವಾಗಿದೆ.

    ಬಂಧಿತರು ಕಾಡು ಪ್ರಾಣಿಗಳ ದೇಹದ ಬೆಲೆಬಾಳುವ ವಸ್ತುಗಳನ್ನು ವಿದೇಶಕ್ಕೆ ಮಾರಾಟ ಮಾಡುತ್ತಿದ್ದರು. ಹೀಗಾಗಿ ಭದ್ರಾ ಹುಲಿ ಅಭಯಾರಣ್ಯ ಸೇರಿದಂತೆ ಮಲೆನಾಡು ಭಾಗದ ಕಾಡುಗಳಲ್ಲಿ ವನ್ಯಜೀವಿಗಳನ್ನ ಭೇಟಿಯಾಡುತ್ತಿದ್ದರು. ಅಲ್ಲದೇ ಅವರ ಬಳಿ ಇನ್ನು ಹೆಚ್ಚಿನ ಪ್ರಾಣಿಗಳ ಚರ್ಮ, ಕೊಂಬು, ಮೂಳೆ, ದಂತಗಳಿವೆ ಎನ್ನುವ ಸಂದೇಹ ವ್ಯಕ್ತವಾಗಿದ್ದು, ತನಿಖೆ ಪ್ರಾರಂಭಿಸಿದ್ದಾರೆ.

    ಆನೆ ದಂತಗಳನ್ನು ಏನು ಮಾಡುತ್ತಾರೆ?
    ಆನೆ ದಂತಗಳನ್ನು ಹಣ ಪಡೆದು ಮಾರಾಟ ಮಾಡುವುದುನ್ನು ಕಾನೂನಿನಲ್ಲಿ ನಿಷೇಧಿಸಲಾಗಿದೆ. ಹೀಗಾಗಿ ಅರಣ್ಯ ಇಲಾಖೆ ದಾಳಿ ವೇಳೆ ಸಿಕ್ಕಿದ ಆನೆ ದಂತಗಳನ್ನು ರಕ್ಷಣಾ ಇಲಾಖೆಗೆ ನೀಡುತ್ತದೆ. ಕೆಲವು ದಂತಗಳನ್ನು ಸಂಶೋಧನೆ ಮಾಡಲು ಶಿಕ್ಷಣ ಸಂಸ್ಥೆಗಳಿಗೆ ನೀಡುತ್ತದೆ. ಯಾರಿಗೂ ಮಾರಾಟ ಮಾಡಲು ಅನುಮತಿ ಇಲ್ಲದ ಕಾರಣ ದಂತಗಳನ್ನು ಸುಡಲಾಗುತ್ತದೆ.

  • ಪೊಲೀಸ್ ಹಾಗೂ ಮಾಧ್ಯಮ ವರದಿಗಾರರ ವೇಷದಲ್ಲಿ ದರೋಡೆ ಮಾಡುತ್ತಿದ್ದ ಖದೀಮರು ಅಂದರ್

    ಪೊಲೀಸ್ ಹಾಗೂ ಮಾಧ್ಯಮ ವರದಿಗಾರರ ವೇಷದಲ್ಲಿ ದರೋಡೆ ಮಾಡುತ್ತಿದ್ದ ಖದೀಮರು ಅಂದರ್

    ಬೆಂಗಳೂರು: ಪೊಲೀಸ್ ಹಾಗೂ ಮಾಧ್ಯಮ ವರದಿಗಾರರ ವೇಷದಲ್ಲಿ ಹಗಲು ದರೋಡೆ ಮಾಡುತ್ತಿದ್ದ ಖದೀಮರನ್ನ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    ನಗರದ ಹೇಮಂತ್ ಕುಮಾರ್, ಮನೋಜ್, ಚೇತನ್, ಲೋಕೇಶ್ ಬಂಧಿತ ಆರೋಪಿಗಳಾಗಿದ್ದು, ಬೆಂಗಳೂರು ಹೊರವಲಯ ನೆಲಮಂಗಲ ಸಮೀಪದ ಮಾದನಾಯಕನಹಳ್ಳಿ ಪೊಲೀಸರು, ಈ ಯಶಸ್ವಿ ಕಾರ್ಯಚರಣೆ ನಡೆಸಿ ನಾಲ್ಕು ಜನ ದರೋಡೆಕೋರರನ್ನ ಬಂಧಿಸಿದ್ದಾರೆ.

    ಬಂಧಿತರಿಂದ ಸುಮಾರು 9.50 ಲಕ್ಷ ರೂಪಾಯಿ ಮೌಲ್ಯದ 250 ಗ್ರಾಂ ಚಿನ್ನ, ಒಂದು ಸ್ಯಾಮಸಂಗ್ ಮೊಬೈಲ್, ಇಂಟಿಯೋಸ್ ಕಾರು, ಒಂದು ಟಿ.ವಿ.ಎಸ್ ಬೈಕ್ ಹಾಗೂ ಒಂದು ಬುಲೆಟ್ ದ್ವಿಚಕ್ರ ವಾಹನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇನ್ನೂ ಈ ಆರೋಪಿಗಳು ಪೊಲೀಸ್ ವೇಶದಲ್ಲಿ ಭಾವ ಚಿತ್ರಗಳನ್ನ ತೆಗೆಸಿಕೊಂಡು, ಜನರನ್ನ ಬೆದರಿಸಿ ಹಗಲು ದರೋಡೆ ನಡೆಸುತಿದ್ದರು ಎನ್ನಲಾಗಿದೆ.

    ನಕಲಿ ನಂಬರ್ ಪ್ಲೇಟ್: ಕದ್ದ ವಾಹನಗಳಿಗೆ ನಕಲಿ ನಂಬರ್ ಪ್ಲೇಟ್ ಗಳನ್ನು ಬಳಸಿ, ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿ ಹಲವಾರು ಕಾನೂನು ಬಾಹಿರ ಕೃತ್ಯಗಳಲ್ಲಿ ಭಾಗಿಯಾಗಿದ್ದಾರೆ. ಈ ಕುರಿತು ಖಚಿತ ಮಾಹಿತಿ ಮೇರೆಗೆ ಮಾದನಾಯಕನಹಳ್ಳಿ ಪೊಲೀಸರು ಆರೋಪಿಗಳನ್ನ ಬಂಧಿಸಿದ್ದು, ಆರೋಪಿಗಳ ಬಂಧನದಿಂದ ಇನ್ನು ಹಲವು ಪ್ರಕರಣಗಳು ಬೆಳಕಿಗೆ ಬಂದಿದೆ ಎಂದು ಬೆಂಗಳೂರು ಗ್ರಾಮಾಂತರ ಎಸ್‍ಪಿ ಭೀಮಾಶಂಕರ್ ಗುಳೇದ್ ತಿಳಿಸಿದ್ದಾರೆ.

  • ಕದ್ದು ಸಾಗಿಸುತ್ತಿದ್ದ ಗೋವುಗಳನ್ನು ಸಿನಿಮೀಯ ರೀತಿಯಲ್ಲಿ ರಕ್ಷಿಸಿದ ಕುಮಟಾ ಪೊಲೀಸರು!

    ಕದ್ದು ಸಾಗಿಸುತ್ತಿದ್ದ ಗೋವುಗಳನ್ನು ಸಿನಿಮೀಯ ರೀತಿಯಲ್ಲಿ ರಕ್ಷಿಸಿದ ಕುಮಟಾ ಪೊಲೀಸರು!

    ಕಾರವಾರ: ಗೋವುಗಳನ್ನು ಕದ್ದು ಕಸಾಯಿಖಾನೆಗೆ ಸಾಗಿಸುತ್ತಿದ್ದ ವಾಹನವನ್ನು ಸಿನಿಮೀಯ ರೀತಿಯಲ್ಲಿ ವಶಪಡಿಸಿಕೊಂಡ ಘಟನೆ ಕುಮಟಾದ ಹಳಕಾರ್ ಹರಿಕಾಂತ್ರ ಕೇರಿ ಕ್ರಾಸ್‍ನಲ್ಲಿ ನಡೆದಿದೆ.

    ಆರೋಪಿಗಳು ತಪ್ಪಿಸಿಕೊಂಡಿದ್ದು, ಮಾರುತಿ ಇಗ್ನೀಸ್ ಕಾರನ್ನು ವಶಕ್ಕೆ ಪಡೆದು, ಅದರಲ್ಲಿದ್ದ ಎರಡು ಆಕಳು ಹಾಗೂ ಒಂದು ಹೋರಿಯನ್ನು ಕುಮಟಾ ಠಾಣೆ ಪಿಎಸ್‍ಐ ಸಂಪತ್ ಕುಮಾರ್ ತಂಡ ರಕ್ಷಿಸಿದೆ.

    ಶುಕ್ರವಾರ ಮುಂಜಾನೆ ರಿಜಿಸ್ಟರ್ ಆಗದ ಹೊಸ ಮಾರುತಿ ಇಗ್ನೀಸ್ ಕಾರಿನಲ್ಲಿ ಕಳ್ಳರು ಬಂದಿದ್ದರು. ಕುಮಟಾದ ಹರಕಾರ್ ನ ಹರಿಕಾಂತ್ರ ಕೇರಿಯಲ್ಲಿ ಹಸುಗಳನ್ನು ಕದ್ದು, ಕಾರಿನಲ್ಲಿ ಹಾಕಿಕೊಂಡು ಹೋಗುತ್ತಿದ್ದರು. ರಾತ್ರಿ ಪಾಳೆಯ ಗಸ್ತಿನಲ್ಲಿದ್ದ ಕುಮಟಾ ಠಾಣೆ ಪಿಎಸ್‍ಐ ಸಂಪತ್ ಕುಮಾರ್ ತಂಡವು ಇದನ್ನು ಗಮನಿಸಿ ಕಾರನ್ನು ಬೆನ್ನು ಹತ್ತಿದ್ದರು. ಆದರೆ ದಾರಿ ಮಧ್ಯದಲ್ಲಿ ಕಾರು ನಿಯಂತ್ರಣ ತಪ್ಪಿ ಅಪಘಾತವಾಗಿದ್ದು, ಅದರಲ್ಲಿದ್ದ ಎರಡು ಆಕಳು ಹಾಗೂ ಒಂದು ಹೋರಿಯನ್ನು ಅಲ್ಲಿಯೇ ಬಿಟ್ಟು ಕಳ್ಳರು ತಪ್ಪಿಸಿಕೊಂಡಿದ್ದಾರೆ.

    ಸದ್ಯ ಪೊಲೀಸರು ಕಾರನ್ನು ತಮ್ಮ ವಶಕ್ಕೆ ಪಡೆದಿದ್ದು, ಹಸುಗಳನ್ನು ರಕ್ಷಿಸಿದ್ದಾರೆ. ಈ ಕುರಿತು ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಮೀನುಗಾರರ ಬಲೆಗೆ ಸಿಕ್ತು ದೈತ್ಯ ಮೊಸಳೆ

    ಮೀನುಗಾರರ ಬಲೆಗೆ ಸಿಕ್ತು ದೈತ್ಯ ಮೊಸಳೆ

    ರಾಯಚೂರು: ಮೀನುಗಾರರ ಬಲೆಗೆ ಆಕಸ್ಮಿಕವಾಗಿ ಮೊಸಳೆಯೊಂದು ಸೆರೆ ಸಿಕ್ಕ ಘಟನೆ ರಾಯಚೂರು ತಾಲೂಕಿನ ಮರ್ಚೆಡ್ ಕೆರೆಯಲ್ಲಿ ನಡೆದಿದೆ.

    ಮನ್ಸಲಾಪುರ ಗ್ರಾಮದ ಮೀನುಗಾರರ ಬಲೆಗೆ ಸುಮಾರು 8 ಅಡಿ ಉದ್ದದ ಮೊಸಳೆ ಸೆರೆ ಸಿಕ್ಕಿದೆ. ಇದೇ ಮೊಸಳೆ ನಾಲ್ಕು ದಿನಗಳ ಹಿಂದಷ್ಟೆ ಕೆಲವರ ಕಣ್ಣಿಗೆ ಕಾಣಿಸಿಕೊಂಡು ಆತಂಕ ಸೃಷ್ಟಿಸಿತ್ತು. ಆದರೆ ಕೆರೆಯಲ್ಲಿ ಮೊಸಳೆ ಇರುವ ಮಾಹಿತಿ ತಿಳಿಯದೇ ಬೆಳಗ್ಗೆ ಮನ್ಸಲಾಪುರ ಗ್ರಾಮದ ಮೀನುಗಾರರು ಮೀನುಗಾರಿಕೆ ನಡೆಸಿದ್ದ ವೇಳೆ ಮೊಸಳೆ ಬಲೆಗೆ ಬಿದ್ದಿದೆ. ಇದನ್ನು ಓದಿ: ಬಲೆಗೆ ಬಿದ್ದ ದೈತ್ಯ ರೇವ್ ಫಿಶ್ – ಮೀನುಗಾರರು ಫುಲ್ ಖುಷ್

    ಮೊಸಳೆ ಕೆಲವು ದಿನಗಳ ಹಿಂದಷ್ಟೇ ಪ್ರತ್ಯಕ್ಷವಾಗಿದ್ದು, ಯಾರೋ ಕಿಡಿಗೆಡಿಗಳು ಮೊಸಳೆಯನ್ನು ಮರ್ಚೆಡ್ ಕೆರೆಯೊಳಗೆ ಬಿಟ್ಟಿರುವ ಶಂಕೆ ವ್ಯಕ್ತವಾಗಿದೆ. ಮೀನುಗಾರರು ಮೊಸಳೆಯನ್ನು ಅರಣ್ಯ ಇಲಾಖೆ ಸಿಬ್ಬಂದಿಗೆ ಒಪ್ಪಿಸಿದ್ದಾರೆ.

  • ಎಸ್ಟೇಟ್‍ ನಲ್ಲಿ ತಿರುಗಾಡಿ ಆತಂಕ ಸೃಷ್ಟಿಸಿದ್ದ ಒಂಟಿ ಸಲಗ ಸೆರೆ!

    ಎಸ್ಟೇಟ್‍ ನಲ್ಲಿ ತಿರುಗಾಡಿ ಆತಂಕ ಸೃಷ್ಟಿಸಿದ್ದ ಒಂಟಿ ಸಲಗ ಸೆರೆ!

    ಮಡಿಕೇರಿ: ಹಲವರ ಮೇಲೆ ದಾಳಿ ನಡೆಸಿ ಭಯದ ವಾತಾವರಣ ಸೃಷ್ಟಿಸಿದ ಒಂಟಿ ಸಲಗವನ್ನು ಸಾಕಾನೆಗಳ ನೆರವಿನಿಂದ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.

    ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಮೋದೂರು ಎಸ್ಟೇಟ್‍ ನಲ್ಲಿ ತಿರುಗಾಡುತ್ತಿದ್ದ ಒಂಟಿ ಸಲಗನನ್ನು ಸೆರೆ ಹಿಡಿಯುವ ಕಾರ್ಯಾಚರಣೆ ಸೋಮವಾರ ಆರಂಭವಾಗಿತ್ತು. ಆದರೆ ಮೊದಲ ದಿನ ಕಾರ್ಯಾಚರಣೆ ಪಡೆಯ ಕಣ್ಣಿಗೆ ಕಾಣಿಸಿಕೊಳ್ಳದೆ ಈ ಸಲಗ ಅಡಗಿಕೊಂಡಿತ್ತು.

    ಕಾರ್ಯಾಚರಣೆಗೆ ದುಬಾರೆ ಆನೆ ಶಿಬಿರದಿಂದ ಸಾಕಾನೆಗಳಾದ ಹರ್ಷ, ವಿಕ್ರಂ ಮತ್ತು ಜ್ಯೋತಿ. ಜೊತೆಗೆ ಮತ್ತಿಗೋಡು ಶಿಬಿರದಿಂದ ಅಭಿಮನ್ಯು ಹಾಗು ಕೃಷ್ಣರನ್ನು ಸೋಮವಾರ ಬೆಳಗ್ಗೆಯೇ ಮೋದೂರು ಎಸ್ಟೇಟ್‍ ಗೆ ತರಲಾಗಿತ್ತು. ಇದಕ್ಕಾಗಿ ಅರಣ್ಯ ಇಲಾಖೆಯ ನುರಿತ ಸಿಬ್ಬಂದಿಯನ್ನು ಸಜ್ಜುಗೊಳಿಸಲಾಗಿತ್ತು. ಆದರೆ ಆನೆಯನ್ನು ಸೋಮವಾರ ಪತ್ತೆ ಹಚ್ಚಲು ಸಾಧ್ಯವಾಗಿರಲಿಲ್ಲ. ನಾಲ್ಕು ದಿನಗಳ ನಂತರ ಕಾಫಿ ತೋಟದ ಒಳಗೆ ಒಂಟಿ ಸಲಗನನ್ನು ಪತ್ತೆ ಹಚ್ಚಲಾಯಿತು.

    ಹುಣಸೂರು ವನ್ಯಜೀವಿ ವಿಭಾಗದ ಪಶುವೈದ್ಯ ಡಾ.ಮುಜೀಬ್ ಅರವಳಿಕೆ ಮದ್ದು ನೀಡಿದರು. ಬಳಿಕ ಸಾಕಾನೆಗಳು ಸುತ್ತುವರಿದಾಗ ಅವುಗಳ ನೆರವಿನಿಂದ ಸಿಬ್ಬಂದಿ ಸಲಗನನ್ನು ಕಟ್ಟಿ ಹಾಕುವಲ್ಲಿ ಯಶಸ್ವಿಯಾದರು. ನಂತರ ಅದನ್ನು ದುಬಾರೆ ಶಿಬಿರಕ್ಕೆ ಸಾಗಿಸಲಾಯಿತು. ಕಾರ್ಯಾಚರಣೆಯಲ್ಲಿ ಮಡಿಕೇರಿ ಉಪ ವಿಭಾಗದ ಉಪ ಅರಣ್ಯಸಂರಕ್ಷಣಾಧಿಕಾರಿ ಮಂಜುನಾಥ್ ಮತ್ತು ಸೋಮವಾರಪೇಟೆ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎಂ.ಎಸ್.ಚಿಣ್ಣಪ್ಪ ಪಾಲ್ಗೊಂಡಿದ್ದರು.

    ಸಲಗನ ಸೆರೆಯಿಂದಾಗಿ ಮೋದೂರು ವಿಭಾಗದ ನಿವಾಸಿಗಳು ಕೊಂಚ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಹಲವರ ಮೇಲೆ ದಾಳಿ ನಡೆಸಿ ಸಲಗ ಗಾಯಗೊಳಿಸಿತ್ತು. ಈ ಭಾಗದಲ್ಲಿ ವಾಹನಗಳ ಮೇಲೂ ದಾಳಿ ನಡೆಸಿತ್ತು. ಇದರಿಂದ ಜನರು ಆತಂಕದಿಂದ ಹೊರಗೆ ಹೋಗುತ್ತಿರಲಿಲ್ಲ. ಕಾಫಿ ತೋಟಗಳಿಗೆ ಬರಲು ಕಾರ್ಮಿಕರು ಹಿಂಜರಿಯುತ್ತಿದ್ದರು. ಇದೀಗ ಒಂಟಿ ಸಲಾಗವನ್ನು ದುಬಾರೆ ಸಾಕಾನೆ ಶಿಬಿರಕ್ಕೆ ರವಾನೆ ಮಾಡಲಾಗಿದೆ.

  • ನಾಯಿ ತಿನ್ನುವ ಆಸೆಯಿಂದ ಚನ್ನರಾಯಪಟ್ಟಣದಲ್ಲಿ ಬೋನಿಗೆ ಬಿತ್ತು ಭಾರೀ ಗಾತ್ರದ ಚಿರತೆ

    ನಾಯಿ ತಿನ್ನುವ ಆಸೆಯಿಂದ ಚನ್ನರಾಯಪಟ್ಟಣದಲ್ಲಿ ಬೋನಿಗೆ ಬಿತ್ತು ಭಾರೀ ಗಾತ್ರದ ಚಿರತೆ

    ಹಾಸನ: ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಭಾರೀ ಗಾತ್ರದ ಚಿರತೆಯೊಂದು ಸೆರೆಯಾಗಿರುವ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಅಗ್ರಹಾರ ಗ್ರಾಮದಲ್ಲಿ ನಡೆದಿದೆ.

    ಕೆಲ ದಿನಗಳಿಂದ ತಾಲೂಕಿನ ದಂಡಿಗನಹಳ್ಳಿ ಹೋಬಳಿ ಸುತ್ತಮುತ್ತ ಚಿರತೆ ಹಾವಳಿ ಹೆಚ್ಚಾಗಿತ್ತು. ಗ್ರಾಮದ ಎರಡು ಕುರಿಗಳನ್ನು ಚಿರತೆ ತಿಂದು ಹಾಕಿ ಹಸುವಿನ ಮೇಲೆ ದಾಳಿ ಮಾಡಿತ್ತು. ಚಿರತೆ ಹಾವಳಿಯಿಂದ ಗ್ರಾಮಸ್ಥರು ಆತಂಕದಲ್ಲಿ ಇದ್ದರು. ನಂತರ ಗ್ರಾಮಸ್ಥರು ಚಿರತೆಯನ್ನು ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಯ ಬಳಿ ಮನವಿ ಮಾಡಿಕೊಂಡಿದ್ದರು.

    ಗ್ರಾಮಸ್ಥರ ಮನವಿ ಮೇರೆಗೆ ಅರಣ್ಯ ಇಲಾಖೆ ಚಿರತೆ ಹಿಡಿಯಲು ಬೋನನ್ನು ಇಟ್ಟಿದ್ದರು. ಆದರೆ 2-3 ದಿನಗಳಾದರೂ ಚಿರತೆ ಬೋನಿಗೆ ಬಿದ್ದಿರಲಿಲ್ಲ. ನಂತರ ಅರಣ್ಯ ಇಲಾಖೆ ಉಪಾಯದಿಂದ ಸೆರೆ ಹಿಡಿಯಬೇಕೆಂದು ಒಂದು ನಾಯಿಯನ್ನು 2 ದಿನಗಳ ಹಿಂದೆ ಬೋನಿನಲ್ಲಿ ಹಾಕಿದ್ದಾರೆ. ಬಳಿಕ ಇಂದು ಬೆಳಿಗ್ಗೆ ನಾಯಿ ತಿನ್ನುವ ಆಸೆಯಿಂದ ಭಾರಿ ಗಾತ್ರದ ಗಂಡು ಚಿರತೆಯೊಂದು ಬೋನಿಗೆ ಬಂದು ಸೆರೆಯಾಗಿದೆ.

    ಸದ್ಯಕ್ಕೆ ಅರಣ್ಯ ಇಲಾಖೆ ಚಿರತೆಯನ್ನು ಅಲ್ಲಿಂದ ಸ್ಥಳಾಂತರಿಸಿ ದಟ್ಟ ಕಾಡು ಪ್ರದೇಶಕ್ಕೆ ತಲುಪಿಸಲು ಮುಂದಾಗಿದ್ದು, ಚಿರತೆ ಸೆರೆಯಿಂದಾಗಿ ಸ್ಥಳೀಯರು ಕೊಂಚ ನಿಟ್ಟುಸಿರು ಬಿಟ್ಟಿದ್ದಾರೆ.