Tag: Casino

  • ವೀರೇಂದ್ರ ಪಪ್ಪಿಯಿಂದ ಅಕ್ರಮ ಆನ್‌ಲೈನ್‌ ಬೆಟ್ಟಿಂಗ್‌ ಸೈಟ್‌ – 30 ಕಡೆ ಇಡಿ ರೇಡ್‌

    ವೀರೇಂದ್ರ ಪಪ್ಪಿಯಿಂದ ಅಕ್ರಮ ಆನ್‌ಲೈನ್‌ ಬೆಟ್ಟಿಂಗ್‌ ಸೈಟ್‌ – 30 ಕಡೆ ಇಡಿ ರೇಡ್‌

    ಬೆಂಗಳೂರು: ಅಕ್ರಮ ಆನ್‌ಲೈನ್ (Illegal Online) ಮತ್ತು ಆಫ್‌ಲೈನ್ ಬೆಟ್ಟಿಂಗ್‌ಗೆ (Offline Betting) ಸಂಬಂಧಿಸಿದಂತೆ ಚಿತ್ರದುರ್ಗದ ಕಾಂಗ್ರೆಸ್‌ ಶಾಸನ ವೀರೇಂದ್ರ ಪಪ್ಪಿ (K C Veerendra Puppy) ಮತ್ತು ಇತರರ ಮೇಲೆ ಒಟ್ಟು 30 ಸ್ಥಳಗಳಲ್ಲಿ ದಾಳಿ ನಡೆಸಿ ದಾಖಲೆ ಪರಿಶೀಲನೆ ಮಾಡಲಾಗಿದೆ ಎಂದು ಜಾರಿ ನಿರ್ದೇಶನಾಲಯ (ED) ತನ್ನ ಹೇಳಿಕೆಯಲ್ಲಿ ತಿಳಿಸಿದೆ.

    ಚಿತ್ರದುರ್ಗ ಜಿಲ್ಲೆಯಾದ್ಯಂತ 6, ಬೆಂಗಳೂರು ನಗರ 10, ಜೋಧ್‌ಪುರ 3, ಹುಬ್ಬಳ್ಳಿ 1, ಮುಂಬೈ 2 ಮತ್ತು ಗೋವಾದಲ್ಲಿರುವ ಪಪ್ಪೀಸ್ ಕ್ಯಾಸಿನೊ (Casino) ಗೋಲ್ಡ್, ಓಷನ್ ರಿವರ್ಸ್ ಕ್ಯಾಸಿನೊ, ಪಪ್ಪೀಸ್ ಕ್ಯಾಸಿನೊ ಪ್ರೈಡ್, ಓಷನ್ 7 ಕ್ಯಾಸಿನೊ, ಬಿಗ್ ಡ್ಯಾಡಿ ಕ್ಯಾಸಿನೊಗಳ ಮೇಲೆ ದಾಳಿ ನಡೆಸಲಾಗಿದೆ.  ಇದನ್ನೂ ಓದಿ: ಗೇಮಿಂಗ್ ಆ್ಯಪ್‌ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ; `ಕೈʼ ಶಾಸಕ ವೀರೇಂದ್ರ ಪಪ್ಪಿ ಸಿಕ್ಕಿಂನಲ್ಲಿ ED ವಶಕ್ಕೆ

     

    ವೀರೇಂದ್ರ ಪಪ್ಪಿ ಕಿಂಗ್ 567, ರಾಜ 567, ಪಪ್ಪೀಸ್ 003, ರತ್ನ ಗೇಮಿಂಗ್ ಇತ್ಯಾದಿಗಳ ಹೆಸರಿನಲ್ಲಿ ಹಲವಾರು ಆನ್‌ಲೈನ್ ಬೆಟ್ಟಿಂಗ್ ಸೈಟ್‌ಗಳನ್ನು ನಡೆಸುತ್ತಿದ್ದಾರೆ.

    ಆರೋಪಿಯ ಸಹೋದರ ಕೆ ಸಿ ತಿಪ್ಪೇಸ್ವಾಮಿ ದುಬೈನಿಂದ ಡೈಮಂಡ್ ಸಾಫ್ಟ್‌ಟೆಕ್, ಟಿಆರ್‌ಎಸ್ ಟೆಕ್ನಾಲಜೀಸ್, ಪ್ರೈಮ್ 9 ಟೆಕ್ನಾಲಜೀಸ್ ಎಂಬ 3 ವ್ಯವಹಾರ ಸಂಸ್ಥೆಗಳನ್ನು ನಿರ್ವಹಿಸುತ್ತಿದ್ದಾರೆ ಈ ಘಟಕಗಳು ಕೆ ಸಿ ವೀರೇಂದ್ರ ಅವರ ಕಾಲ್ ಸೆಂಟರ್ ಸೇವೆಗಳು ಮತ್ತು ಗೇಮಿಂಗ್ ವ್ಯವಹಾರಕ್ಕೆ ಸಂಬಂಧಿಸಿವೆ.

    ಬೆಂಗಳೂರಿನ ರಾಜರಾಜೇಶ್ವರಿನಗರದಲ್ಲಿರುವ ಕಾಂಗ್ರೆಸ್‌ ನಾಯಕಿ ಕುಸುಮಾ ಎಚ್ ಅವರ ಸಹೋದರ ಅನಿಲ್ ಗೌಡ ವೀರೇಂದ್ರ ಪಪ್ಪಿ ಜೊತೆ ವ್ಯವಹಾರ ನಡೆಸಿದ ಹಿನ್ನೆಲೆಯಲ್ಲಿ ಅವರ ಮನೆಯ ಮೇಲೂ ದಾಳಿ ನಡೆಸಿ ದಾಖಲೆ ಪರಿಶೀಲಿಸಲಾಗಿದೆ.

  • ಕೊಳಚೆ ಪ್ರದೇಶದಲ್ಲಿ ಮುಕ್ಕಾಲು ಕೆಜಿ ಚಿನ್ನ ಬಚ್ಚಿಟ್ಟಿದ್ದ ಖದೀಮ – 18 ಅರೆಸ್ಟ್ ವಾರೆಂಟ್ ಇದ್ದ ಸೆಲೆಬ್ರಿಟಿ ಮನೆಗಳ್ಳನ ಬಂಧನ

    ಕೊಳಚೆ ಪ್ರದೇಶದಲ್ಲಿ ಮುಕ್ಕಾಲು ಕೆಜಿ ಚಿನ್ನ ಬಚ್ಚಿಟ್ಟಿದ್ದ ಖದೀಮ – 18 ಅರೆಸ್ಟ್ ವಾರೆಂಟ್ ಇದ್ದ ಸೆಲೆಬ್ರಿಟಿ ಮನೆಗಳ್ಳನ ಬಂಧನ

    – ಗರ್ಲ್‌ಫ್ರೆಂಡ್ ಜೊತೆ ಕ್ಯಸಿನೋದಲ್ಲಿ ಹೆಡೆಮುರಿಕಟ್ಟಿದ ಪೊಲೀಸರು

    ಬೆಂಗಳೂರು: ದೊಡ್ಡ ದೊಡ್ಡ ಬಂಗಲೆಗಳನ್ನೇ ಟಾರ್ಗೆಟ್ ಮಾಡಿ ಕೆಜಿ ಕೆಜಿ ಚಿನ್ನ (Gold) ದೋಚುತ್ತಿದ್ದ (Theft) ಖತರ್ನಾಕ್ ಕಳ್ಳನನ್ನು ಗೋವಿಂದರಾಜನಗರ ಪೊಲೀಸರು ಹೆಡೆಮುರಿಕಟ್ಟಿದ್ದಾರೆ.

    ಬೆಂಗಳೂರಿನ (Bengaluru) ಸೆಲೆಬ್ರಿಟಿ ಮನೆಗಳ್ಳ ಕಾರ್ತಿಕ್ ಅಲಿಯಾಸ್ ಎಸ್ಕೇಪ್ ಕಾರ್ತಿಕ್ (Escape Karthik) ಅರೆಸ್ಟ್ ಆಗಿದ್ದಾನೆ. ಆರೋಪಿ ಬಳಿಯಿಂದ ಬರೋಬ್ಬರಿ 1 ಕೆಜಿ 200 ಗ್ರಾಂ ಕದ್ದ ಚಿನ್ನವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈತನ ವಿರುದ್ಧ ಬೆಂಗಳೂರಿನಲ್ಲಿ 83 ಕ್ಕೂ ಹೆಚ್ಚು ಮನೆಗಳ್ಳತನ ಕೇಸ್‌ಗಳಿವೆ. ನಗರ ಮಾತ್ರವಲ್ಲದೆ ಕರ್ನಾಟಕದ ಬೇರೆ ಭಾಗಗಳಲ್ಲಿಯೂ ಕಳ್ಳತನದ ಆರೋಪವಿದೆ.

    ಕೊಳಚೆ ಪ್ರದೇಶದಲ್ಲಿ ಬಚ್ಚಿಟ್ಟಿದ್ದ ಚಿನ್ನ:
    ಎಸ್ಕೇಪ್ ಕಾರ್ತಿಕ್ ಮನೆಯೊಂದರಲ್ಲಿ ಮುಕ್ಕಾಲು ಕೆಜಿ ಚಿನ್ನವನ್ನು ಕದ್ದು ತನ್ನ ಗರ್ಲ್‌ಫ್ರೆಂಡ್ ಜೊತೆ ಗೋವಾದ ಕ್ಯಸಿನೋಗೆ ಹೊರಟಿದ್ದ. ಆದರೆ ರೈಲು ತಡವಾಗಿದ್ದರಿಂದ ಕದ್ದಿದ್ದ ಚಿನ್ನವನ್ನು ಅಡವಿಡಲಾಗದೇ ಖತರ್ನಾಕ್ ಪ್ಲ್ಯಾನ್ ಮಾಡಿ ಕೊಳಚೆ ಪ್ರದೇಶದಲ್ಲಿ ಹೂತಿಟ್ಟು ಎಸ್ಕೇಪ್ ಆಗಿದ್ದ.

    ಓಕಳಿಪುರಂನಲ್ಲಿ ರೈಲ್ವೆ ಕಾಲೋನಿಯಲ್ಲಿ ಮೂತ್ರ ವಿಸರ್ಜನೆಗೆಂದು ಹೋಗಿದ್ದ ಕಾರ್ತಿಕ್ ಯಾರೂ ಓಡಾಡದ ಕೊಳಚೆ ಜಾಗದಲ್ಲಿ 2 ಅಡಿ ಗುಂಡಿ ತೆಗೆದು ಕದ್ದ ಚಿನ್ನವನ್ನು ಹೂತಿಟ್ಟಿದ್ದ. ಗುಂಡಿ ತೆಗೆದ ಜಾಗದಲ್ಲಿ ಗುರುತಿಗೆ ಮೇಲೆ ಕಲ್ಲೊಂದನ್ನು ಇಟ್ಟಿದ್ದ. ಬಳಿಕ ಗರ್ಲ್‌ಫ್ರೆಂಡ್ ಜೊತೆ ಗೋವಾಕ್ಕೆ ಹೋಗಿದ್ದ.

    ಕೆಲ ದಿನಗಳ ಹಿಂದೆ ಗೋವಾದ ಕ್ಯಸಿನೋದಲ್ಲಿ ಗೆಳತಿಯ ಜೊತೆ ಸಿಕ್ಕಿಬಿದ್ದಿದ್ದ ಆರೋಪಿ ಕದ್ದ ಚಿನ್ನ ಎಲ್ಲಿಟ್ಟಿದ್ದ ಎಂಬುದನ್ನು ಪೊಲೀಸರ ಮುಂದೆ ಬಾಯಿಬಿಟ್ಟಿದ್ದಾನೆ. ಚಿನ್ನವನ್ನು ಹೂತಿಟ್ಟಿದ್ದ ಜಾಗ ಕಂಡು ಪೊಲೀಸರೇ ದಂಗಾಗಿದ್ದಾರೆ. ಮುಕ್ಕಾಲು ಕೆಜಿ ಚಿನ್ನವನ್ನು ಮಣ್ಣಿನಿಂದ ಕಾರ್ತಿಕ್ ಹೊರಗೆ ತೆಗೆದು ಗೋವಿಂದರಾಜನಗರ ಪೊಲೀಸರ ಕೈಗೆ ಕೊಟ್ಟಿದ್ದಾನೆ. ಇದನ್ನೂ ಓದಿ: ಸೌದಿಯಲ್ಲಿ 11 ತಿಂಗಳ ಜೈಲುವಾಸದ ಬಳಿಕ ಯುವಕ ತಾಯ್ನಾಡಿಗೆ ವಾಪಸ್

    ಚನ್ನೈ, ತಿರುಪತಿ ಸೇರಿದಂತೆ ಬೇರೆ ಬೇರೆ ರಾಜ್ಯದಲ್ಲಿಯೂ ಕಳ್ಳತನ ಮಾಡುತ್ತಿದ್ದ ಕಾರ್ತಿಕ್ ವಿರುದ್ಧ ನ್ಯಾಯಾಲಯದಿಂದ 18 ಅರೆಸ್ಟ್ ವಾರೆಂಟ್ ಬಾಕಿ ಇತ್ತು. ಆರೋಪಿ ಕಾರ್ತಿಕ್ ಒಂಟಿ ಮನೆಗಳನ್ನು ಮತ್ತು ಬೀಗ ಹಾಕಿದ್ದ ಮನೆಗಳನ್ನು ಟಾರ್ಗೆಟ್ ಮಾಡುತ್ತಿದ್ದ. ಯಾವಾಗಲೂ ಒಂಟಿಯಾಗಿ ಕಳ್ಳತನ ಮಾಡುತ್ತಿದ್ದ ಕಾರ್ತಿಕ್ ಈ ಬಾರಿ ಇಬ್ಬರು ಸಹಚಚರ ಜೊತೆಗೆ ಕಳ್ಳತನ ಮಾಡಿದ್ದಾನೆ.

    ಈ ಹಿಂದೆ ಕೊಲೆ ಕೇಸ್‌ಗಳಲ್ಲಿ ಭಾಗಿಯಾಗಿದ್ದ ಇಬ್ಬರನ್ನು ಜೊತೆಗೆ ಸೇರಿಸಿಕೊಂಡು ಕಾರ್ತಿಕ್ ಕಳ್ಳತನ ಮಾಡುತ್ತಿದ್ದ. ಕದ್ದ ಚಿನ್ನವನ್ನು ಒಂದೇ ಕಡೆ ಅಡವಿಡುತ್ತಿದ್ದ. ನಂತರ ಗರ್ಲ್‌ಫ್ರೆಂಡ್ ಜೊತೆ ಗೋವಾದ ಕ್ಯಸಿನೋಗೆ ಹೋಗಿ ಆ ಹಣ ಖರ್ಚು ಮಾಡುತ್ತಿದ್ದ. ಸದ್ಯ ಆರೋಪಿ ಬಳಿಯಿಂದ 70 ಲಕ್ಷ ರೂ. ಮೌಲ್ಯದ ಚಿನ್ನವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಇದನ್ನೂ ಓದಿ: ಸಾಮಾಜಿಕ ಜಾಲತಾಣದಲ್ಲಿ ಶಿವಾಜಿಗೆ ಅಪಮಾನ – ಧಾರವಾಡದ ಇಬ್ಬರು ಅರೆಸ್ಟ್‌

  • ಕುದುರೆ ರೇಸ್, ಆನ್‌ಲೈನ್‌ ಆಟ, ಕ್ಯಾಸಿನೋಗಳ ಮೇಲೆ ಶೇ.28 ಜಿಎಸ್‌ಟಿ

    ಕುದುರೆ ರೇಸ್, ಆನ್‌ಲೈನ್‌ ಆಟ, ಕ್ಯಾಸಿನೋಗಳ ಮೇಲೆ ಶೇ.28 ಜಿಎಸ್‌ಟಿ

    ನವದೆಹಲಿ: ಕುದುರೆ ರೇಸ್, ಆನ್‌ಲೈನ್‌ ಆಟ, ಕ್ಯಾಸಿನೋಗಳ ಮೇಲೆ ಸರಕು ಮತ್ತು ಸೇವಾ ತೆರಿಗೆ ವ್ಯವಸ್ಥೆಯ (ಜಿಎಸ್‌ಟಿ) ಅಡಿಯಲ್ಲಿ ಶೇ. 28ರಷ್ಟು ತೆರಿಗೆ ವಿಧಿಸಲು ಸಚಿವರ ಸಮಿತಿಯು ಶಿಫಾರಸು ಮಾಡಿದೆ.

    ಕುದುರೆ ರೇಸ್, ಆನ್‌ಲೈನ್‌ ಆಟ, ಕ್ಯಾಸಿನೋಗಳ ಮೇಲೆ ಎಷ್ಟು ತೆರಿಗೆ ವಿಧಿಸಬೇಕು ಎಂಬುದನ್ನು ಪರಿಶೀಲಿಸಲು ಮೇಘಾಲಯದ ಮುಖ್ಯಮಂತ್ರಿ ಕೊನ್ರಾಡ್ ಸಂಗ್ಮಾ ನೇತೃತ್ವದಲ್ಲಿ ಸಮಿತಿ ರಚಿಸಲಾಗಿತ್ತು.

    ಮೇ 2 ರಂದು ಸಮಿತಿ ಸಭೆ ನಡೆಸಿತ್ತು. ಈಗ ಸಮಿತಿ ಶಿಫಾರಸು ಮಾಡಿದ್ದು ಈ ವರದಿಯನ್ನು ಜಿಎಸ್‌ಟಿ ಮಂಡಳಿಯ ಮುಂಬರುವ ಸಭೆಯಲ್ಲಿ ಚರ್ಚೆಗೆ ತೆಗೆದುಕೊಳ್ಳಲಿದೆ. ಇದನ್ನೂ ಓದಿ: ಮಧ್ಯಪ್ರದೇಶ ಸ್ಥಳೀಯ ಸಂಸ್ಥೆ ಎಲೆಕ್ಷನ್- ಒಬಿಸಿ ಕೋಟಾಕ್ಕೆ ಸುಪ್ರೀಂ ಸಮ್ಮತಿ

    ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಒಂದೆರಡು ದಿನಗಳಲ್ಲಿ ಸಮಿತಿಯ ವರದಿಯನ್ನು ಸಲ್ಲಿಸಲಾಗುತ್ತದೆ ಎಂದು ಸಂಗ್ಮಾ ಅವರು ಟ್ವೀಟ್ ಮಾಡಿದ್ದಾರೆ.

    ಪ್ರಸ್ತುತ ಈಗ ಬೆಟ್ಟಿಂಗ್‌ ಅಥವಾ ಗ್ಯಾಬ್ಲಿಂಗ್‌ ಇರುವ ಆನ್‌ಲೈನ್‌ ಆಟಗಳಿಗೆ ಶೇ.28 ರಷ್ಟು ತೆರಿಗೆ, ಬೆಟ್ಟಿಂಗ್‌ ಅಥವಾ ಗ್ಯಾಬ್ಲಿಂಗ್‌ ಇಲ್ಲದ ಆನ್‌ಲೈನ್‌ ಆಟಗಳಿಗೆ ಶೇ.18 ರಷ್ಟು ತೆರಿಗೆ ವಿಧಿಸಲಾಗುತ್ತಿದೆ. ಕುದುರೆ ರೇಸ್‌ಗಳ ಒಟ್ಟು ಬೆಟ್‌ ಮೌಲ್ಯದ ಮೇಲೆ ಶೇ.28 ರಷ್ಟು ತೆರಿಗೆ ವಿಧಿಸಲಾಗುತ್ತಿದೆ.

  • ಗೆಳೆಯನ ನಂಬಿ ಕ್ಯಾಸಿನೋದಲ್ಲಿ 40 ಲಕ್ಷ ಬಂಡವಾಳ- ಸಂಜನಾಗೆ ಎದುರಾಗುತ್ತಾ ಸಂಕಷ್ಟ..?

    ಗೆಳೆಯನ ನಂಬಿ ಕ್ಯಾಸಿನೋದಲ್ಲಿ 40 ಲಕ್ಷ ಬಂಡವಾಳ- ಸಂಜನಾಗೆ ಎದುರಾಗುತ್ತಾ ಸಂಕಷ್ಟ..?

    ಬೆಂಗಳೂರು: ಗೆಳೆಯ ರಾಹುಲ್ ತೋನ್ಸೆಯನ್ನ ನಂಬಿ ನಟಿ ಸಂಜನಾ ಗಲ್ರಾನಿ ಕೈ ಸುಟ್ಟುಕೊಂಡಿದ್ದಾರೆ. ಆದರೆ ಸಂಜನಾಗೆ ದೋಖ ಆಗಿರೋದು ಒಂದಲ್ಲ, ಎರಡಲ್ಲ. ಬರೋಬ್ಬರಿ 40-45 ಲಕ್ಷ ಹಣ.

    ಕ್ಯಾಸಿನೋದಲ್ಲಿ ಹಣ ಹೂಡಿದ್ರೆ ಹೆಚ್ಚು ಲಾಭ ಬರುತ್ತೆ ಅಂತ ನಂಬಿದ್ದ ನಟಿ ಸಂಜನಾ ತನ್ನ ಆತ್ಯಾಪ್ತ ಗೆಳೆಯ ರಾಹುಲ್ ತೋನ್ಸೆ ಕೈಯಲ್ಲಿ 40-45 ಲಕ್ಷ ಹಣ ನೀಡಿದ್ರಂತೆ. 2018ರಲ್ಲಿ ಶೇ.15 ಬಡ್ಡಿ ನೀಡುವುದಾಗಿ 40 ಲಕ್ಷ ಪಡೆದಿದ್ದ ರಾಹುಲ್, ಮೂರೇ ತಿಂಗಳಲ್ಲಿ 40 ಲಕ್ಷಕ್ಕೆ 70 ಲಕ್ಷ ಕೊಡ್ತೀನಿ ಅಂತ ಹೇಳಿದ್ನಂತೆ. ಆದರೆ ಇದೀಗ ಲಾಭ ಹೋಗ್ಲಿ ಅಸಲು ಹಣವನ್ನೂ ನೀಡದೆ ಉಂಡೇನಾಮ ಹಾಕಿದ್ದಾನೆ. ಇದೀಗ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು ಇದೇ ಕೇಸ್ ಸಂಜನಾಗೂ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ.

    ಆಪ್ತ ಗೆಳೆಯನಿಂದ ವಂಚನೆ ಬಗ್ಗೆ ದೂರು ಕೊಟ್ಟಿದ್ದ ಸಂಜನಾಗೂ ಕಂಟಕ ಫಿಕ್ಸ್ ಆಂತ ಹೇಳಲಾಗ್ತಿದೆ. ಎಫ್‍ಐಆರ್ ಬೆನ್ನಲ್ಲೇ ಇಂದಿರಾನಗರ ಪೊಲೀಸರು 3 ದಿನಗಳಲ್ಲಿ ತನಿಖಾಧಿಕಾರಿ ಮುಂದೆ ಹಾಜರಾಗುವಂತೆ ರಾಹುಲ್‍ಗೆ ಸಮನ್ಸ್ ಜಾರಿ ಮಾಡಿದ್ದಾರೆ. ಈ ಬೆನ್ನಲ್ಲೇ ನಟಿ ಸಂಜನಾ ಗಲ್ರಾನಿ ವಿಚಾರಣೆ ನಡೆಸಲಿರುವ ಪೊಲೀಸರು, ಕ್ಯಾಸಿನೋಗೆ ಹಣ ಹೂಡಿಕೆ ಮಾಡಿದ್ದರ ಮೂಲ ಕೆದಕಿದ್ದಾರೆ. ಈ ಸಂಬಂಧ ಐಟಿ ಇಲಾಖೆಗೂ ಪೊಲೀಸರು ಪತ್ರ ಬರೆಯುವ ಸಾಧ್ಯತೆ ಇದೆ. ಇದನ್ನೂ ಓದಿ: ನಟಿ ಸಂಜನಾ ಗಲ್ರಾನಿಗೆ ಕ್ಯಾಸಿನೋ ದೋಖಾ – ಸ್ನೇಹಿತನಿಂದಲೇ ಹಣ ದುಪ್ಪಟ್ಟು ಆಮಿಷ

    ಒಟ್ಟಿನಲ್ಲಿ ಸಂಜನಾಗೆ ತಾನೇ ನೀಡಿದ ದೂರು ಕಂಟಕವಾಗಿ ಕಾಡುವ ಸಾಧ್ಯತೆ ಇದೆ. ಒಮದು ವೇಳೆ 40 ಲಕ್ಷ ಹಣದ ಮೂಲ ಸರಿಯಾಗಿ ನೀಡಿದ್ದೇ ಆದಲ್ಲಿ ಮಾತ್ರ ಸಂಜನಾ ಪಾರಾಗಲಿದ್ದಾರೆ.

  • ಬೆಂಗಳೂರಿನಲ್ಲಿ ತಲೆ ಎತ್ತಿರುವ ಅಕ್ರಮ ಕ್ಯಾಸಿನೋ ಅಡ್ಡೆಗಳನ್ನು ಕೂಡಲೇ ನಿಲ್ಲಿಸಿ – ಕೆಜೆ ಜಾರ್ಜ್ ಪತ್ರ

    ಬೆಂಗಳೂರಿನಲ್ಲಿ ತಲೆ ಎತ್ತಿರುವ ಅಕ್ರಮ ಕ್ಯಾಸಿನೋ ಅಡ್ಡೆಗಳನ್ನು ಕೂಡಲೇ ನಿಲ್ಲಿಸಿ – ಕೆಜೆ ಜಾರ್ಜ್ ಪತ್ರ

    ಬೆಂಗಳೂರು: ಡ್ರಗ್ಸ್ ಕೇಸ್ ನಲ್ಲಿ ಗೋವಾ/ ಶ್ರೀಲಂಕಾ ಕ್ಯಾಸಿನೋ ಜೂಜು ಅಡ್ಡೆ ಬಿಸಿನೆಸ್ ಪಾಯಿಂಟ್ ಆಗಿ ಸ್ಯಾಂಡಲ್‍ವುಡ್ ನಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಈಗ ಬೆಂಗಳೂರಿನ ಅಕ್ರಮ ಕ್ಯಾಸಿನೋ ಅಡ್ಡೆ ಬಾರಿ ಕೋಲಾಹಾಲ ಸೃಷ್ಟಿಸುವ ಸಂಕೇತಗಳು ಕಾಣುತ್ತಿದೆ.

    ಸರ್ವಜ್ಞ ನಗರ ವಿಧಾನಸಭಾ ಕ್ಷೇತ್ರದಲ್ಲಿ ಅಕ್ರಮ ಕ್ಯಾಸಿನೋ ಅಡ್ಡ ತಲೆಯೆತ್ತಿದೆ. ಬಾಣಸವಾಡಿ ಪೊಲೀಸ್ ಠಾಣೆ ವ್ಯಾಪ್ತಿಯ ಸರ್ವೀಸ್ ರಸ್ತೆ ಹೆಚ್ ಆರ್ ಬಿ ಆರ್ ಬಡಾವಣೆ ಹಾಗೂ ಕಮ್ಮನಹಳ್ಳಿ ಮುಖ್ಯ ರಸ್ತೆಗಳಲ್ಲಿ ಕ್ಯಾಸಿನೋ ಜೂಜು ಅಡ್ಡೆ ಈಗ ಆರಂಭವಾಗಿದೆ. ಇದನ್ನೂ ಓದಿ: ರಾಜ್ಯದಲ್ಲಿ ಮತ್ತೆ ಪ್ರತ್ಯೇಕ ಲಿಂಗಾಯತ ಧರ್ಮಯುದ್ಧ- ಎಂ.ಬಿ.ಪಾಟೀಲ್ ಧರ್ಮ ದಾಳಕ್ಕೆ ಕಾಂಗ್ರೆಸ್ ಮೌನ 

     

    ಕೋವಿಡ್ ಆರ್ಥಿಕ ದುಸ್ಥಿತಿಯಲ್ಲಿ ಬಡವರು ಜೂಜು ಆಟವಾಡಿ ಮತ್ತಷ್ಟು ಗಂಭೀರ ಸನ್ನಿವೇಶಕ್ಕೆ ಕಾರಣವಾಗಬಹುದು ಎಂದು ಖುದ್ದು ಶಾಸಕ ಜಾರ್ಜ್ ಪೊಲೀಸ್ ಮಹಾ ನಿರ್ದೇಶಕರು, ಬಿಬಿಎಂಪಿ ಆಯುಕ್ತರಿಗೆ ಪತ್ರ ಬರೆದು ಮಾಹಿತಿ ನೀಡಿದ್ದಾರೆ. ಅಕ್ರಮ ಕ್ಯಾಸಿನೋ ನಿಲ್ಲಿಸಲು ಪತ್ರ ಮೂಲಕ ಮಾಹಿತಿ ಕೊಡಲಾಗಿದೆ.

    ಅಕ್ರಮ ಜೂಜು ಅಡ್ಡೆಗಳಿಂದ ಕಾನೂನು ಅಪರಾಧಗಳು ಹೆಚ್ಚಾಗಿವೆ. ಹೀಗಾಗಿ ತುರ್ತಾಗೆ ಈ ಜೂಜು ಅಡ್ಡೆಗಳನ್ನು ನಿಲ್ಲಿಸಬೇಕೆಂದು ಜಾರ್ಜ್ ಪತ್ರದಲ್ಲಿ ಮನವಿ ಮಾಡಿದ್ದಾರೆ. ಇದನ್ನೂ ಓದಿ: ನೀನು ಹುಟ್ಟಿದ್ಮೇಲೆ ಸೌಂದರ್ಯ ಹಾಳಾಯ್ತು – ಚಪ್ಪಲಿಯಿಂದ ಮಗುವಿನ ಮೇಲೆ ತಾಯಿ ಹಲ್ಲೆ

  • ಕರ್ನಾಟಕದಲ್ಲೇ ಕ್ಯಾಸಿನೋ ಓಪನ್ ಮಾಡಿ: ಜೆಡಿಎಸ್ ಶಾಸಕ ಸುರೇಶ್ ಗೌಡ

    ಕರ್ನಾಟಕದಲ್ಲೇ ಕ್ಯಾಸಿನೋ ಓಪನ್ ಮಾಡಿ: ಜೆಡಿಎಸ್ ಶಾಸಕ ಸುರೇಶ್ ಗೌಡ

    – ಕರ್ನಾಟಕದ ದುಡ್ಡೆಲ್ಲ ಶ್ರೀಲಂಕಾ ಕ್ಯಾಸಿನೋಗೆ ಹೋಗ್ತಿದೆ

    ಮಂಡ್ಯ: ಕರ್ನಾಟಕದಲ್ಲೇ ಕ್ಯಾಸಿನೋ ಓಪನ್ ಮಾಡಿ ಎಂದು ಸರ್ಕಾರ ಸಲಹೆ ಕೊಡಬೇಕೆಂದಿದ್ದೇನೆ ಎಂದು ಜೆಡಿಎಸ್ ಶಾಸಕ ಸುರೇಶ್‍ಗೌಡ ಹೇಳಿದ್ದಾರೆ.

    ಇಂದು ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಇಲ್ಲಿ ಯಾರ್ಯಾರು ಹೆಚ್ಚಿಗೆ ದುಡ್ಡು ಮಾಡಿದ್ದರೋ ಅವರೆಲ್ಲ ಅಲ್ಲಿ ದುಡ್ಡು ಕಳೆಯುತ್ತಿದ್ದಾರೆ. ಕರ್ನಾಟಕದ ದುಡ್ಡೆಲ್ಲ ಶ್ರೀಲಂಕಾ ಕ್ಯಾಸಿನೋಗೆ ಹೋಗುತ್ತಿದೆ. ಕ್ಯಾಸಿನೋವನ್ನು ಕರ್ನಾಟಕದಲ್ಲೇ ಓಪನ್ ಮಾಡಿ ನಮ್ಮ ದುಡ್ಡು ನಮ್ಮಲ್ಲೆ ಉಳಿಸಿ ಎಂದು ಸರ್ಕಾರ ಸಲಹೆ ಕೊಡಬೇಕೆಂದಿದ್ದೇನೆ ಎಂದರು.

    ಜಮೀರಣ್ಣ ಒಬ್ಬರೇ ಅಲ್ಲ ಕ್ಯಾಸಿನೋಗೆ ಒಂದು ಟೀಂ ಹೋಗುತ್ತೆ. ಎಲ್ಲರ ಪಾಸ್‍ಪೋರ್ಟ್ ತೆಗೆದುನೋಡಿದರೆ ಎಲ್ಲ ಮಾಹಿತಿ ಸಿಕ್ಕಿಬಿಡುತ್ತೆ. ದುಡ್ಡು ಇದ್ದರೆ ಪ್ರಪಂಚದಲ್ಲಿ ಸಿಗುವ ಎಲ್ಲ ವಸ್ತುಗಳು ಕ್ಯಾಸಿನೋದಲ್ಲಿ ಸಿಗುತ್ತೆ. ರಾಜಕಾರಣಿಗಳು ಡ್ರಗ್ ತೆಗೆದುಕೊಳ್ಳುವ ಬಗ್ಗೆ ನನಗೆ ಗೊತ್ತಿಲ್ಲ. ನಾವು ಜಮೀರ್ ಅವರನ್ನು ಟಾರ್ಗೆಟ್ ಮಾಡುತ್ತಿಲ್ಲ. ನಾವು ಕಾಂಗ್ರೆಸ್ ಪರ ಇದ್ದು ಸರ್ಕಾರ ಮಾಡಿದ್ದವರು. ನಾವು ಯಾಕೆ ಅವರನ್ನು ಟಾರ್ಗೆಟ್ ಮಾಡ್ತೀವಿ ಇದೆಲ್ಲವೂ ಊಹಾಪೋಹಗಳು ಎಂದು ತಿಳಿಸಿದ್ದಾರೆ.

    ಸರ್ಕಾರ ತನ್ನ ತಪ್ಪುಗಳನ್ನು ಮುಚ್ಚಿಕೊಳ್ಳಲು ಕೆಜಿ ಹಳ್ಳಿ, ಡಿಜೆ ಹಳ್ಳಿ ಅಂತ ಶುರು ಮಾಡಿತ್ತು. ಈಗ ಅದು ಮುಗಿದ ಬಳಿಕ ಡ್ರಗ್ ವಿಚಾರ ಶುರು ಮಾಡಿದ್ದಾರೆ. ಇವೆಲ್ಲವೂ ಸರ್ಕಾರದ ಪ್ರಾಯೋಜಿತ ಕಾರ್ಯಕ್ರಮಗಳು. ರಾಜ್ಯದಲ್ಲಿ ಕಷ್ಟಕರ ಸಮಸ್ಯೆಗಳಿವೆ ಆದರೆ ಜನರ ಗಮನ ಬೇರೆಡೆ ಸೆಳೆಯಲು ಈ ರೀತಿ ಮಾಡಲಾಗುತ್ತಿದೆ. ಈ ಹಿಂದೆ ಡ್ರಗ್ ದಂಧೆ ಇರುವುದು ಪೋಲಿಸರಿಗೆ ಗೊತ್ತಿರಲಿಲ್ವಾ? ಆಗ ಏಕೆ ಸುಮ್ಮನಿದ್ದರು ಎಂದು ಸುರೇಶ್ ಗೌಡ ಪ್ರಶ್ನೆ ಮಾಡಿದ್ದಾರೆ.

  • ಫಾಝಿಲ್ ಕ್ಯಾಸಿನೋ ಪಾರ್ಟಿಯಲ್ಲಿ ಗುಳಿ ಕೆನ್ನೆ ಬೆಡಗಿ ಐಂದ್ರಿತಾ

    ಫಾಝಿಲ್ ಕ್ಯಾಸಿನೋ ಪಾರ್ಟಿಯಲ್ಲಿ ಗುಳಿ ಕೆನ್ನೆ ಬೆಡಗಿ ಐಂದ್ರಿತಾ

    ಬೆಂಗಳೂರು: ಡ್ರಗ್ಸ್ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಫೈಝಿಲ್ ಒಡೆತನದ ಕ್ಯಾಸಿನೋ ಪಾರ್ಟಿಯಲ್ಲಿ ಚಂದನವನದ ಗುಳಿಕೆನ್ನೆ ಚೆಲುವೆ ಐಂದಿತಾ ರೇ ಭಾಗಿಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಕ್ಯಾಸಿನೋಗೆ ಆಹ್ವಾನ ನೀಡಿದ್ದಕ್ಕೆ ಐಂದ್ರಿತಾ ಧನ್ಯವಾದ ಹೇಳಿರುವ ವಿಡಿಯೋ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    ಶ್ರೀಲಂಕಾದ ಕೊಲಂಬೋದಲ್ಲಿರುವ ಶೇಖ್ ಫಾಝಿಲ್ ಒಡೆತನದ ಕ್ಯಾಸಿನೋಗಳಲ್ಲಿ ಸ್ಟಾರ್ ನಟ ನಟಿಯರು ಭಾಗಿಯಾಗುತ್ತಿದ್ದರು ಎನ್ನಲಾಗಿದೆ. ಬಂಧಿತ ನಟಿ ಸಂಜನಾ ಗಲ್ರಾನಿ ಕ್ಯಾಸಿನೋದಲ್ಲಿ ಕಾರ್ಯಕ್ರಮಗಳನ್ನ ನೀಡಿದ್ದು, ಫಾಝಿಲ್ ಜೊತೆ ನಿಕಟ ಸಂಪರ್ಕದಲ್ಲಿದ್ದರು ಎನ್ನಲಾಗಿದೆ. ಇತ್ತ ಫಾಝಿಲ್ ನಾಪತ್ತೆಯಾಗಿದ್ದು, ಆತನ ಬಗ್ಗೆ ಹೆಚ್ಚು ಮಾಹಿತಿಗಳು ಲಭ್ಯವಾಗಿಲ್ಲ. ಇದೇ ಫಾಝಿಲ್ ನೀಡಿದ್ದ ಆಹ್ವಾನ ಸ್ವೀಕರಿಸಿದ್ದ ಐಂದ್ರಿತಾ ಕ್ಯಾಸಿನೋದಲ್ಲಿ ಭಾಗಿಯಾಗಿದ್ದರು ಎಂದು ತಿಳಿದು ಬಂದಿದೆ.

    ಐಂದಿತ್ರಾ ವಿಡಿಯೋ: ಎಲ್ಲರಿಗೂ ನಮಸ್ಕಾರ. ಶ್ರೀಲಂಕಾದಲ್ಲಿರುವ ಅತಿದೊಡ್ಡ, ಕೊಲೆಸ್ಟ್ ಕ್ಯಾಸಿನೋಗೆ ನಾನು ಬರುತ್ತಿದ್ದೇನೆ. ಸೆಪ್ಟೆಂಬರ್ 8ರ ಈದ್ (ಹಬ್ಬ)ನ್ನು ನಿಮ್ಮೊಂದಿಗೆ ಆಚರಿಸಲು ಕೊಲಂಬೋಗೆ ಬರುತ್ತಿದ್ದೇನೆ. ನನ್ನನ್ನ ಆಹ್ವಾನಿಸಿದಕ್ಕೆ ಶೇಖ್ ಫಾಝಿಲ್ ಅವರಿಗೆ ಧನ್ಯವಾದಗಳು. ಸೆಪ್ಟೆಂಬರ 8ರಂದ ನಿಮ್ಮನ್ನು ಭೇಟಿಯಾಗುತ್ತೇನೆ.

    ಶೇಖ್ ಫಾಝಿಲ್ ಕ್ಲಿಕ್ಕಿಸಿಕೊಂಡಿರುವ ಕೆಲ ಫೋಟೋಗಳು ವೈರಲ್ ಆಗಿವೆ. ಇವರ ಜೊತೆ ಬಾಲಿವುಡ್ ನಟ ಸೋಹೈಲ್ ಖಾನ್ ಫೋಟೋದಲ್ಲಿರೋದನ್ನ ಗಮನಿಸಬಹುದು.

    ಡ್ರಗ್ ಕೇಸ್‍ನಲ್ಲಿ ತಗ್ಲಾಕೊಂಡಿರುವ ನಟಿ ಸಂಜನಾ ಸ್ಯಾಂಡಲ್‍ವುಡ್ ಸ್ಟಾರ್ ಮಾತ್ರವಲ್ಲ ಕೊಲಂಬೋ ಸ್ಟಾರಾ ಅನ್ನೋ ಅನುಮಾನ ಮೂಡಿದೆ. ಸಂಜನಾ ಕೊಲಂಬೋ ಕ್ಯಾಸಿನೋದಲ್ಲಿರೋ ಮತ್ತಷ್ಟು ವಿಡಿಯೋಗಳು ವೈರಲ್ ಆಗಿದೆ. ಅಲ್ಲದೇ ಸಂಜನಾರ ಕೊಲಂಬೋ ಪಾರ್ಟಿಗಳ ಬಗ್ಗೆ ಪ್ರಶಾಂತ್ ಸಂಬರಗಿ ಸಿಸಿಬಿಗೆ ಸಾಕ್ಷ್ಯ ನೀಡಿದ್ದಾರೆ. ಶಾಸಕ ಜಮೀರ್ ಆಪ್ತ ಶೇಖ್ ಫಾಝಿಲ್ ಜೊತೆ ಸಂಜನಾ ಶಾಂಪೇನ್ ಚಿಮ್ಮಿಸಿ ಕ್ಯಾಸಿನೋದಲ್ಲೇ ಹುಟ್ಟುಹಬ್ಬದ ಪಾರ್ಟಿ ಮಾಡಿದ್ದಾರೆ. ಅಲ್ಲದೇ ಆತನೊಂದಿಗೆ ಟಿಕ್‍ಟಾಕ್ ವಿಡಿಯೋ ಮಾಡಿದ್ದಾರೆ.

    ಶೇಖ್ ಫಾಝಿಲ್ ಜೊತೆಗಿನ ನಂಟೇ ಸಂಜನಾಗೆ ಮತ್ತಷ್ಟು ಸಂಕಷ್ಟ ತಂದೊಡ್ಡುವ ಸಂಭವ ಇದೆ. ಆದರೆ ಶೇಖ್ ಫಾಜೀಲ್ ಮಾತ್ರ ಇನ್ನೂ ಸಇಸಿಬಿ ಬಲೆಗೆ ಬೀಳದೇ ತಪ್ಪಿಸಿಕೊಂಡು ಓಡಾಡ್ತಾ ಇದ್ದಾನೆ. ಭೂಗತನಾಗಿದ್ದುಕೊಂಡು ಶೇಖ್ ಫಾಝೀಲ್ ಸಾಕ್ಷ್ಯ ನಾಶ ಮಾಡ್ತಿರಬಹುದು ಎಂಬ ಶಂಕೆಯನ್ನು ಸಿಸಿಬಿ ಅಧಿಕಾರಿಗಳು ವ್ಯಕ್ತಪಡಿಸ್ತಿದ್ದಾರೆ. 10 ವರ್ಷದ ಹಿಂದೆ ಚಾಮರಾಜಪೇಟೆಯಲ್ಲಿ ಬೈಕ್ ಮೆಕಾನಿಕ್ ಆಗಿದ್ದ ಫಾಝಿಲ್, ಹೆಲಿಕಾಪ್ಟರ್ ನಲ್ಲಿ ಓಡಾಡುವ ಮಟ್ಟಕ್ಕೆ ಬೆಳೆದಿದ್ದು ಹೇಗೆ ಎಂಬ ಬಗ್ಗೆ ಸಿಸಿಬಿ ತನಿಖೆ ನಡೆಸಲು ಮುಂದಾಗಿದೆ ಎಂದು ತಿಳಿದುಬಂದಿದೆ.

  • ಡ್ರಗ್ಸ್ ವಿಚಾರಣೆಯ ದಾರಿ ತಪ್ಪಿಸಲು ನನ್ನ ಹೆಸರು ಬಳಕೆ: ಹೆಚ್‍ಡಿಕೆ

    ಡ್ರಗ್ಸ್ ವಿಚಾರಣೆಯ ದಾರಿ ತಪ್ಪಿಸಲು ನನ್ನ ಹೆಸರು ಬಳಕೆ: ಹೆಚ್‍ಡಿಕೆ

    – ನಾನು 1982ರಲ್ಲೇ ಕ್ಯಾಸಿನೋ ನೋಡಿದ್ದೇನೆ

    ಬೆಂಗಳೂರು: ಡ್ರಗ್ಸ್ ವಿಚಾರಣೆಯ ದಾರಿ ತಪ್ಪಿಸಲು ನನ್ನ ಹೆಸರನ್ನು ಬಳಕೆ ಮಾಡಲಾಗುತ್ತಿದೆ ಎಂದು ಮಾಜಿ ಮುಖ್ಯ ಮಂತ್ರಿ ಕುಮಾರಸ್ವಾಮಿಯವರು ಆರೋಪ ಮಾಡಿದ್ದಾರೆ.

    ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕುಮಾರಸ್ವಾಮಿ, 2014ರಲ್ಲಿ ಪಕ್ಷದ ಸಭೆ ಮಾಡಲು ಶ್ರೀಲಂಕಾಕ್ಕೆ ಹೋಗಿದ್ದೆವು. ಗೋವಾ ಬೇರೆ ಕಡೆಗಿಂತ ಅಲ್ಲಿ ಕಡಿಮೆ ಬೆಲೆಯಾಗುತ್ತೆ ಎಂದು ಅಲ್ಲಿ ಸಭೆ ಮಾಡಿದ್ದೆವು. ಆ ವಿಚಾರವನ್ನು ಈಗ ಯಾಕೆ ಪ್ರಸ್ತಾಪ ಮಾಡುತ್ತಿದ್ದಾರೆ ಎಂಬುದನ್ನು ಅವರನ್ನೇ ಕೇಳಬೇಕು ಎಂದರು.

    ಇದೇ ವೇಳೆ ಜಮೀರ್ ಅವರು ನಿಮ್ಮನ್ನು ಕರೆದುಕೊಂಡು ಹೋಗಿದ್ರಾ ಎಂಬ ಪ್ರಶ್ನೆಗೆ ಉತ್ತರಿಸಿದ ಹೆಚ್‍ಡಿಕೆ, ಅವರು ನನ್ನ ಯಾಕೆ ಕರೆದುಕೊಂಡು ಹೋಗುತ್ತಾರೆ. ನಮಗೆ ಹೋಗೊದಕ್ಕೆ ಬರೋಲ್ವಾ ಎಂದು ಟಾಂಗ್ ನೀಡಿದರು. ಡ್ರಗ್ಸ್ ದಂಧೆ ಕೇವಲ ಸ್ಯಾಂಡಲ್‍ವುಡ್ ಮಾತ್ರವಲ್ಲ ಎಲ್ಲ ಕಡೆ ಇದೆ. ನಾನು ಕೂಡ ಸಿನಿಮಾ ಕ್ಷೇತ್ರದಲ್ಲಿ ಇದ್ದವನು. ಆಗ ನನ್ನ ಗಮನಕ್ಕೆ ಡ್ರಗ್ಸ್ ವಿಚಾರ ಬಂದಿಲ್ಲ. ಕ್ಯಾಸಿನೋದಲ್ಲೇ ಡ್ರಗ್ಸ್ ಇರುತ್ತೆ ಅಂತ ಹೇಳುವುಕ್ಕೆ ಆಗಲ್ಲ ಎಂದು ತಿಳಿಸಿದರು.

    ಡ್ರಗ್ಸ್ ಅನ್ನೋದು ನಮ್ಮ ಬೆಂಗಳೂರಿನಲ್ಲಿ ನೈಟ್ ಬಾರ್ ಗಳಲ್ಲೂ ಇದೆ. ಸಂಜೆ ನಂತರ ಮಲ್ಯ ರೋಡ್ ಮತ್ತು ಎಂಜಿ ರೋಡ್‍ಗೆ ಹೋದರೆ ನಿಮಗೆ ಗೋತಾಗುತ್ತೆ. ಈಗಲೂ ಅದೇ ರೀತಿ ಇದ್ಯಾ ನನಗೆ ಗೊತ್ತಿಲ್ಲ. ಬೆಂಗಳೂರಿನಲ್ಲಿ ಸಂಜೆ ಮೇಲೆ ನೈಟ್ ಪಾರ್ಟಿಗಳು ನಡೆಯುತ್ತೆ. ಡ್ರಗ್ಸ್ ಮಾಫಿಯಾದ ತನಿಖೆ ನಿಷ್ಪಕ್ಷಪಾತವಾಗಿ ನಡೆಯಬೇಕು. ಅದನ್ನು ದಿಕ್ಕು ತಪ್ಪಿಸೋ ಕೆಲಸ ನೆಡೆಯುತ್ತಿದೆ ಎಂದು ಆರೋಪ ಮಾಡಿದರು.

    ನಾನು ನಿನ್ನೆಯೆ ಟ್ವೀಟ್ ಮಾಡಿ ಸ್ಪಷ್ಟನೆ ನೀಡಿದ್ದೇನೆ. ನಾನು 1982ರಲ್ಲೇ ಕ್ಯಾಸಿನೋ ನೋಡಿದ್ದೇನೆ. ನಾನು ನನ್ನ ಧರ್ಮಪತ್ನಿ ಮಲೇಶಿಯಾಗೆ ಟೂರ್ ಹೋಗಿದ್ದೆವು. ಈ ವೇಳೆ ಅಲ್ಲಿನ ಗೈಡ್ ಕರೆದುಕೊಂಡು ಹೋಗಿದ್ದರು. ಅಲ್ಲಿ ಡ್ರಗ್ಸ್ ಇರಲಿಲ್ಲ. ಆದರೆ ಡ್ರಗ್ಸ್ ಅನ್ನೋದು ಕ್ಯಾಸಿನೋದಲ್ಲಿ ಮಾತ್ರ ನಡೆಯುತ್ತೆ ಅನ್ನೋದಲ್ಲ, ಬೆಂಗಳೂರಿನಲ್ಲಿ ನೈಟ್ ಬಾರ್ ಗಳು ಮತ್ತು ಪಾರ್ಟಿಗಳಲ್ಲೂ ಕಾಣಿಸುತ್ತಿದೆ. 5 ಸ್ಟಾರ್ ಹೋಟಲ್‍ಗಳಲ್ಲಿ ಬೆಳಗ್ಗೆ 5 ಗಂಟೆವರೆಗೂ ಮ್ಯಾಸಿಕ್ ಹಾಕಿಕೊಂಡು ನಡೆಸೋ ಪಾರ್ಟಿಗಳಲ್ಲಿ ಡ್ರಗ್ಸ್ ಇರುತ್ತೆ ಎಂದಿದ್ದಾರೆ.

    ಐಪಿಎಲ್, ಕೆಪಿಎಲ್ ಮತ್ತು ಕೆಲವರು ಅವಾರ್ಡ್ ಕಾರ್ಯಕ್ರಮಗಳಿಗೆ ಸೆಲೆಬ್ರಿಟಿ ನಟರನ್ನು ಕರೆದುಕೊಂಡು ಹೋಗುತ್ತಾರೆ. ಅಲ್ಲಿ ಕಾರ್ಯಕ್ರಮ ಮಾಡಿ ಅವಾರ್ಡ್ ಕೊಡುತ್ತಾರೆ. ಈ ರೀತಿಯ ಕಾರ್ಯಕ್ರಮಗಳು ಪ್ರಾರಂಭವಾದ ನಂತರ ಡ್ರಗ್ಸ್ ದಂಧೆ ಪ್ರಾರಂಭವಾಗಿದೆ. ಜಮೀರ್ 2014ರ ವಿಚಾರವನ್ನು ಈಗ ಯಾಕೆ ತಗೆದ್ದಿದ್ದಾರೆ ಗೊತ್ತಿಲ್ಲ, ನೀವು ಅದನ್ನು ಅವರನ್ನೆ ಕೇಳಬೇಕು ಎಂದು ಹೇಳಿದರು.

  • ರಾಜಕೀಯ ಚರ್ಚಿಸಲು ಕ್ಯಾಸಿನೋಗೆ ಯಾಕೆ ಹೋಗಬಾರದು: ಹೊರಟ್ಟಿ ಪ್ರಶ್ನೆ

    ರಾಜಕೀಯ ಚರ್ಚಿಸಲು ಕ್ಯಾಸಿನೋಗೆ ಯಾಕೆ ಹೋಗಬಾರದು: ಹೊರಟ್ಟಿ ಪ್ರಶ್ನೆ

    ಹುಬ್ಬಳ್ಳಿ: ಕೊಲಂಬೋದ ಕ್ಯಾಸಿನೋಗೆ ಯಾರು ಹೋಗಿದ್ದಾರೋ ಅವರಿಗೇ ಗೊತ್ತು. ನಾನು ಹೋಗಿರಲಿಲ್ಲ. ಅಲ್ಲದೆ ಈ ಕುರಿತು ಸ್ವತಃ ಕುಮಾರಸ್ವಾಮಿಯವರೇ ಟ್ವೀಟ್ ಮೂಲಕ ಸ್ಪಷ್ಟನೆ ನೀಡಿದ್ದಾರೆ. ಎಲ್ಲ ವಿಚಾರವನ್ನು ಅವರು ತಿಳಿಸುತ್ತಾರೆ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ ಹೇಳಿದ್ದಾರೆ.

    ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಜೆಡಿಎಸ್ ಶಾಸಕರು, ಮಾಜಿ ಶಾಸಕರು ಕೊಲಂಬೋದ ಪ್ರವಾಸಕ್ಕೆ ಹೋಗಿದ್ದು ನಿಜ. ಈ ವೇಳೆ ಕ್ಯಾಸಿನೋಗೂ ಹೋಗಿರಬಹುದು. ಆದರೆ ಯಾರು ಹೋಗಿದ್ದಾರೆ ಅವರಿಗೇ ಗೊತ್ತು. ನಾನು ಹೋಗಿರಲಿಲ್ಲ. ಆ ಸಂದರ್ಭದಲ್ಲಿ ನನ್ನ ಚುನಾವಣೆ ಇತ್ತು. ಹೀಗಾಗಿ ನಾನು ಹೋಗಿರಲಿಲ್ಲ. ಈಗ ಕೊಲಂಬೋ ಪ್ರವಾಸದ ವಿಚಾರ ಹೊರಗೆ ಬಂದಿದೆ. ಬಹಳ ಜನರು ಹೋಗಿ ಬಂದಿದ್ದಾರೆ. ಕುಮಾರಸ್ವಾಮಿ ತಪ್ಪು ಸರಿನೋ ನೇರವಾಗಿ ಹೇಳುತ್ತಾರೆ ಎಂದು ತಿಳಿಸಿದರು. ಇದನ್ನೂ ಓದಿ: ಎತ್ತಣ ಮಾಮರ, ಎತ್ತಣ ಕೋಗಿಲೆ- ಜಮೀರ್ ಹೇಳಿಕೆಗೆ ಹೆಚ್‍ಡಿಕೆ ತಿರುಗೇಟು

    ಕುಮಾರಸ್ವಾಮಿ ಅವರು ಹೇಳುವ ಧೈರ್ಯ ಮಾಡಿದ್ದಾರೆ, ಅದನ್ನ ಮೆಚ್ಚಲೇಬೇಕು. ಗಾಂಜಾ ಡ್ರಗ್ಸ್ ವಿಚಾರದಲ್ಲಿ ಒಮ್ಮೆ ಎಲ್ಲರ ಹೆಸರು ಬಯಲಿಗೆ ಬಂದು ಬಿಡಲಿ. ಆಗ ಎಲ್ಲವೂ ಸರಿ ಆಗುತ್ತದೆ. ನಮ್ಮನ್ನು ಸಹ ಕೊಲಂಬೋ ಪ್ರವಾಸಕ್ಕೆ ಕರೆದಿದ್ದರು. ಆದರೆ ನಾನು ಹೋಗಿರಲಿಲ್ಲ. ರಾಜಕೀಯ ಚರ್ಚೆ ಮಾಡಲು ಹೋಗಿದ್ದರು. ಕ್ಯಾಸಿನೊದಲ್ಲಿ ರಾಜಕೀಯ ಚರ್ಚೆ ಮಾಡಬಾರದು ಅಂತಾ ರೂಲ್ಸ್ ಇದೆಯೇ? ರಾಜಕೀಯ ಉದ್ದೇಶವಾಗಿ ಹೋಗಿದ್ದಾರೆ. ಅದಕ್ಕೆ ಬೇರೆ ಅರ್ಥ ಕಲ್ಪಿಸಬೇಕಾಗಿಲ್ಲ ಎಂದು ಸ್ಪಷ್ಟಪಡಿಸಿದರು.

    ಈ ಕುರಿತು ಜೆಡಿಎಸ್ ಮಾಜಿ ಶಾಸಕ ಎನ್.ಎಚ್.ಕೊನರೆಡ್ಡಿ ಪ್ರತಿಕ್ರಿಯಿಸಿ, ನಾನು ಶಾಸಕನಾದ ವೇಳೆ ಜೆಡಿಎಸ್ ಶಾಸಕರು ಕ್ಯಾಸಿನೊಗೆ ಪ್ರವಾಸ ಹೋಗಿದ್ದು ನಿಜ. ಆಗ ನನಗೂ ಕರೆದರು ನಾನು ಹೋಗಿರಲಿಲ್ಲ. ನನ್ನ ಕ್ಷೇತ್ರದಲ್ಲೆ ಉಳಿದಿದ್ದೆ. ನಮ್ಮ ಶಾಸಕಾಂಗ ಪಕ್ಷದ ನಾಯಕರು ಟ್ವೀಟ್ ಮೂಲಕ ಹೇಳಿದ್ದಾರೆ. ಕ್ಯಾಸಿನೋಗೆ ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಶಾಸಕರು ಹೋಗಿದ್ದರು. ರಾಜಕೀಯ ಚರ್ಚೆ ಮಾಡಲು ಕೊಲಂಬೋ ಗೆ ಹೋಗಿದ್ದು ಸತ್ಯ. ಒಂದು ಬಾರಿ ಪ್ರವಾಸ ರದ್ದಾಗಿತ್ತು. ಇನ್ನೊಮ್ಮೆ ಎಲ್ಲರೂ ಹೋಗಿದ್ದು ಸತ್ಯ. ಒಂದು ರಾಜಕೀಯ ಪಕ್ಷ ಕ್ಯಾಸಿನೊದಲ್ಲಿ ರಾಜಕೀಯ ಚರ್ಚೆ ಮಾಡಬಾರದೆಂದು ನಿಯಮವಿದೆಯೇ ಎಂದು ಪ್ರಶ್ನಿಸಿದರು.

  • ಕೊಲಂಬೋದಲ್ಲಿ ‘ಆಕ್ಸಿಜನ್’ ಡ್ಯಾನ್ಸ್ ಮಾಡಿದ್ದ ಸಂಜನಾ

    ಕೊಲಂಬೋದಲ್ಲಿ ‘ಆಕ್ಸಿಜನ್’ ಡ್ಯಾನ್ಸ್ ಮಾಡಿದ್ದ ಸಂಜನಾ

    – ಕ್ಯಾಸಿನೋ ಪಾರ್ಟಿಯಲ್ಲಿ ಸಂಜನಾ ನೃತ್ಯ
    – ಸಂಜನಾ ನೃತ್ಯಕ್ಕೆ ವಿಶೇಷ ಪ್ರಚಾರ

    ಬೆಂಗಳೂರು: ನಾನು ಸಿನಿಮಾ ಈವೆಂಟ್‍ಗಾಗಿ ಶ್ರೀಲಂಕಾಕ್ಕೆ ಹೋಗಿದ್ದೆ ಅಷ್ಟೇ. ಅದು ಬಿಟ್ಟರೆ ನನಗೂ ಶ್ರೀಲಂಕಾಕ್ಕೂ ಯಾವುದೇ ನಂಟಿಲ್ಲ ಎಂದು ನಟಿ ಸಂಜನಾ ಸಿಸಿಬಿ ಪೊಲೀಸರು ಮುಂದೆ ಹೇಳುತ್ತಿದ್ದಾರೆ. ಆದರೆ ಇದೀಗ ನಟಿ ಸಂಜನಾ ಕ್ಯಾಸಿನೋದಲ್ಲಿ ಡ್ಯಾನ್ಸ್ ಮಾಡಿರುವ ವಿಡಿಯೋ ಸಿಸಿಬಿ ಪೊಲೀಸರಿಗೆ ಲಭ್ಯವಾಗಿದೆ. ಇದನ್ನೂ ಓದಿ: ಸಂಬರಗಿಗೆ ಸಿಸಿಬಿ ನೋಟಿಸ್ – ಟೆನ್ಶನ್ ಜಾಸ್ತಿಯಾಗಿ ರಾತ್ರಿ ನಿದ್ದೆ ಮಾಡದ ಸಂಜನಾ

    ನಟಿ ಸಂಜನಾ ಕೊಲಂಬೋದಲ್ಲಿ ‘ಆಕ್ಸಿಜನ್’ ಡ್ಯಾನ್ಸ್ ಕೂಡ ಮಾಡಿದ್ದಾರೆ. ಕೊಲಂಬೋದ ಅನೇಕ ಕ್ಯಾಸಿನೋಗಳಲ್ಲಿ ನಟಿ ಸಂಜನಾ ಡ್ಯಾನ್ಸ್ ಮಾಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಡಿಸೆಂಬರ್, ಜನವರಿಯಲ್ಲಿ ಡ್ಯಾನ್ಸ್ ಮಾಡಿರುವ ವಿಡಿಯೋ ಲಭ್ಯವಾಗಿದೆ. ಆದರೆ ಸಂಜನಾ, ನಾನು ಸಿನಿಮಾ ಈವೆಂಟ್‍ಗಾಗಿ ಶ್ರೀಲಂಕಾಕ್ಕೆ ಹೋಗಿದ್ದೆ ಅಷ್ಟೇ. ಅದು ಬಿಟ್ಟರೆ ನನಗೂ ಶ್ರೀಲಂಕಾಕ್ಕೂ ಯಾವುದೇ ನಂಟಿಲ್ಲ ಎಂದು ಹೇಳುತ್ತಿದ್ದಾರೆ. ಇದನ್ನೂ ಓದಿ:   ‘ಗಂಡ-ಹೆಂಡತಿ’ ನಟಿ ಮದುವೆ ಸೀಕ್ರೆಟ್- ಮ್ಯಾರೇಜ್ ಆಗಿಲ್ಲ ಅಂತ ಸುಳ್ಳು ಹೇಳಿದ್ರಾ ಸಂಜನಾ?

    ಸತತ ಐದು ವರ್ಷಗಳಿಂದ ನಟಿ ಸಂಜನಾ ಕ್ಯಾಸಿನೋಗಳಲ್ಲಿ ಡ್ಯಾನ್ಸ್ ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ. ಕೇವಲ ಶೇಕ್ ಫಾಜಿಲ್ ಕ್ಯಾಸಿನೋಗೆ ಮಾತ್ರವಲ್ಲದೇ ಶ್ರೀಲಂಕಾದ ಅನೇಕ ಕ್ಯಾಸಿನೋಗಳಲ್ಲಿ ಸಂಜನಾ ಡ್ಯಾನ್ಸ್ ಮಾಡಿದ್ದಾರೆ. ಕ್ಯಾಸಿನೋದಲ್ಲಿ ನಡೆದ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಸಂಜನಾ ಫೋಟೋ ಹಾಕಿ ‘ಆಕ್ಸಿಜನ್ ನೃತ್ಯ’ ಮಾಡಲಿದ್ದಾರೆ ಎಂದು ವಿವರ ಮುದ್ರಣವಾಗಿತ್ತು.

    ಕೊಲಂಬೋ ಕ್ಯಾಸಿನೋ ಪಾರ್ಟಿಯಲ್ಲಿ ನಟಿ ಸಂಜನಾ ಡ್ಯಾನ್ಸ್ ಮಾಡಿರುವ ವಿಡಿಯೋ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ವಿಡಿಯೋದಲ್ಲಿ ಸಂಜನಾ ಶಾಂಪೇನ್ ಬಾಟಲ್ ಚಿಯರ್ಸ್ ಮಾಡಿ ಡ್ಯಾನ್ಸ್ ಮಾಡಿರುವುದನ್ನು ಕಾಣಬಹುದಾಗಿದೆ. ಜೊತೆಗೆ ಶೇಕ್ ಫಾಝಿಲ್ ಜೊತೆಗೆ ಟಿಕ್‍ಟಾಕ್ ವಿಡಿಯೋ ಕೂಡ ಮಾಡಿದ್ದಾರೆ. ಅಲ್ಲದೇ ಸಂಜನಾ ಕ್ಯಾಸಿಯೋ ಪಾರ್ಟಿಗೆ ಪದೇ ಪದೇ ಹೋಗಿ ಬರುತ್ತಿದ್ದರು ಎಂಬುದು ಎಂದು ತಿಳಿದುಬಂದಿದೆ. ಹೀಗಾಗಿ ಈ ಕ್ಯಾಸಿನೋ ಪಾರ್ಟಿಯೇ ಸಂಜನಾಗೆ ಮುಳುವಾಗುತ್ತಾ ಎಂಬ ಅನುಮಾನ ಮೂಡಿದೆ. ಶ್ರೀಲಂಕಾ ಅಲ್ಲದೇ ಬಾಲಿಯಲ್ಲೂ ಶೇಕ್ ಫಾಝಿಲ್ ಜೊತೆ ಗುರುತಿಸಿಕೊಂಡಿರುವ ಫೋಟೋ ಲಭ್ಯವಾಗಿದೆ.

    ಸದ್ಯಕ್ಕೆ ಶೇಕ್ ಫಾಝಿಲ್ ತಲೆಮರೆಸಿಕೊಂಡಿದ್ದು, ಸಿಸಿಬಿ ಪೊಲೀಸರು ಆತನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಇನ್ನೂ ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ಸಿಸಿಬಿ ಪೊಲೀಸರಿಂದ ಬಂಧನವಾಗಿರುವ ನಟಿ ಸಂಜನಾ ಅವರನ್ನು ಮತ್ತೆ ಮೂರು ದಿನಗಳ ಕಾಲ ಸಿಸಿಬಿ ಪೊಲೀಸರ ಕಸ್ಟಡಿಗೆ ನ್ಯಾಯಾಲಯ ನೀಡಿದೆ. ಸೋಮವಾರದವರೆಗೂ ನಟಿ ರಾಗಿಣಿ, ಸಂಜನಾ ಸೇರಿದಂತೆ 6 ಮಂದಿ ಆರೋಪಿಗಳು ಪೊಲೀಸ್ ಕಸ್ಟಡಿಯಲ್ಲೇ ಉಳಿಯಲಿದ್ದಾರೆ.