Tag: Caste Certificate

  • ಹಿಂದೂ ವ್ಯಕ್ತಿಯನ್ನು ಮುಸ್ಲಿಂ ಜಾತಿಗೆ ಸೇರಿಸಿದ ಸರ್ಕಾರ; ಅಧಿಕಾರಿಗಳ ಯಡವಟ್ಟಿಗೆ ಕುಟುಂಬ ಕಂಗಾಲು

    ಹಿಂದೂ ವ್ಯಕ್ತಿಯನ್ನು ಮುಸ್ಲಿಂ ಜಾತಿಗೆ ಸೇರಿಸಿದ ಸರ್ಕಾರ; ಅಧಿಕಾರಿಗಳ ಯಡವಟ್ಟಿಗೆ ಕುಟುಂಬ ಕಂಗಾಲು

    – ವೀರಶೈವ ಲಿಂಗಾಯತ ಬದಲಾಗಿ ಮುಸ್ಲಿಂ ಜಾತಿ ಅಂತ ಉಲ್ಲೇಖ

    ಕಲಬುರಗಿ: ಸರ್ಕಾರದ ಯಡವಟ್ಟಿಗೆ ಕುಟುಂಬವೊಂದು ಕಂಗಾಲಾಗಿರುವ ಘಟನೆ ಕಲಬುರಗಿಯಲ್ಲಿ (Kalaburagi) ನಡೆದಿದೆ. ಹಿಂದೂ ವ್ಯಕ್ತಿಯನ್ನು ಮುಸ್ಲಿಂ ಜಾತಿಗೆ ಸೇರಿಸಿ ಅಧಿಕಾರಿಗಳು ಯಡವಟ್ಟು ಮಾಡಿದ್ದಾರೆ.

    ಕಲಬುರಗಿಯ ರಾಮತೀರ್ಥ ನಗರದ ಮಹಾಂತಪ್ಪಾ ಕುಟುಂಬ ಕಂಗಾಲಾಗಿದೆ. ಮಹಾಂತಪ್ಪ ಕೊತ್ಲೆ ಕುಟುಂಬ ವೀರಶೈವ ಲಿಂಗಾಯತ ಸಮುದಾಯದವರು. ಮಹಾಂತಪ್ಪ ತನ್ನ ಮಗನ ಜಾತಿ ಮತ್ತು ಆದಾಯ ಪ್ರಮಾಣ ಪಾತ್ರಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಇದನ್ನೂ ಓದಿ: ಬೆಂಗಳೂರಲ್ಲಿ ಚಿನ್ನದಂಗಡಿ ದರೋಡೆ ಕೇಸ್‌ – ಟಾಯ್‌ ಗನ್ ತೋರಿಸಿ ಚಿನ್ನ ರಾಬರಿ

    ಅರ್ಜಿಯ ಜಾತಿ ಕಾಲಂನಲ್ಲಿ ವೀರಶೈವ ಲಿಂಗಾಯತ ಎಂದು ಭರ್ತಿ ಮಾಡಿ ಸಲ್ಲಿಕೆ ಮಾಡಿದ್ದರು. ಆದರೆ, ತಹಸಿಲ್ದಾರ್ ಕಚೇರಿಯಿಂದ ಜಾತಿ ಪ್ರಮಾಣ ಪತ್ರ ಪಡೆದಾಗ ಮುಸ್ಲಿಂ ಜಾತಿ ಎಂದು ಉಲ್ಲೇಖ ಆಗಿದೆ.

    ಕಲಬುರಗಿ ತಹಸಿಲ್ದಾರ್ ಕಚೇರಿಯಿಂದ ಮುಸ್ಲಿಂ ಜಾತಿ ಅಂತಾ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ವಿತರಣೆ ಮಾಡಲಾಗಿದೆ. ಮುಸ್ಲಿಂ ಜಾತಿ ಆದಾಯ ಪ್ರಮಾಣ ವಿತರಿಸಿದ್ದಕ್ಕೆ ಮಹಾಂತಪ್ಪ ಪುತ್ರನ ಶಿಕ್ಷಣಕ್ಕೆ ತೊಂದರೆಯಾಗಿದೆ. ಇದನ್ನೂ ಓದಿ: ಮೆಜೆಸ್ಟಿಕ್ ರೈಲ್ವೆ ಸ್ಟೇಷನ್‌ನಲ್ಲಿ ಟಿಕೆಟ್ ದಂಧೆ – ಹಣ ಕೊಟ್ರೆ ವೇಟಿಂಗ್ ಲಿಸ್ಟ್ ಇದ್ರೂ ಕನ್ಫರ್ಮ್ ಆಗುತ್ತೆ!

    ಯಡವಟ್ಟನ್ನು ಸರಿಪಡಿಸಿಕೊಳ್ಳುವಂತೆ ಸರ್ಕಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರೂ ಕೂಡ ಯಾರೂ ತಲೆಕೆಡಿಸಿಕೊಂಡಿಲ್ಲ ಎಂಬ ಆರೋಪ ಕೇಳಿಬಂದಿದೆ.

  • ಪರಿಶಿಷ್ಟ ಪಂಗಡಗಳ ಜಾತಿ ಪ್ರಮಾಣಪತ್ರ ಗೊಂದಲ ನಿವಾರಣೆಗೆ ಕ್ರಮ: ಸಿದ್ದರಾಮಯ್ಯ

    ಪರಿಶಿಷ್ಟ ಪಂಗಡಗಳ ಜಾತಿ ಪ್ರಮಾಣಪತ್ರ ಗೊಂದಲ ನಿವಾರಣೆಗೆ ಕ್ರಮ: ಸಿದ್ದರಾಮಯ್ಯ

    ಬೆಂಗಳೂರು: ಪರಿಶಿಷ್ಟ ಪಂಗಡಗಳ ಜಾತಿ ಪ್ರಮಾಣಪತ್ರದಲ್ಲಿರುವ ಗೊಂದಲ ನಿವಾರಣೆಗೆ ಆದೇಶ ಹೊರಡಿಸುವಂತೆ ಸಿಎಂ ಸಿದ್ದರಾಮಯ್ಯ (CM Siddaramaiah) ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

    ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಪರಿಶಿಷ್ಟ ಪಂಗಡ ಸಮುದಾಯಗಳ ಸಮಸ್ಯೆ ಕುರಿತು ಸಿಎಂ ಸಭೆ ನಡೆಸಿದರು. ಸಭೆ ಬಳಿಕ ಪ್ರತಿಕ್ರಿಯೆ ನೀಡಿದ ಸಿಎಂ, ಎಸ್‌ಟಿ ಸಮುದಾಯದ ಎಮ್‌ಎಲ್‌ಎಗಳು, ಸ್ವಾಮೀಜಿಗಳು ಸಮಸ್ಯೆ ಬಗ್ಗೆ ಮನವಿ ಮಾಡಿದ್ದರು. ವಾಲ್ಮೀಕಿ ನಿಗಮದ ಅನುದಾನವನ್ನು ಕಡಿತ ಮಾಡಬಾರದು ಎಂದು ಮನವಿ ಮಾಡಿದ್ದರು. ಎಸ್‌ಟಿ ಸಮುದಾಯದಲ್ಲಿ ಜಾತಿ ಪ್ರಮಾಣಪತ್ರವನ್ನು (Caste Certificate) ಕೆಲವರು ಸುಳ್ಳು ಹೇಳಿ ಪಡೆಯುತ್ತಿದ್ದಾರೆ. ಈ ಬಗ್ಗೆ ಕ್ರಮಕ್ಕೆ ಮನವಿ ಮಾಡಿದ್ದರು. ಹಾಗಾಗಿ, ಕ್ರಮಕ್ಕೆ ಸೂಚನೆ ನೀಡಿದ್ದೇನೆ ಎಂದರು. ಇದನ್ನೂ ಓದಿ: ಕಾಡುಗೊಲ್ಲ ಸಮುದಾಯ ಎಸ್ಟಿಗೆ ಸೇರ್ಪಡೆ ವಿಚಾರ – ವಿ.ಸೋಮಣ್ಣ ಭೇಟಿಯಾದ ಟಿಬಿ ಜಯಚಂದ್ರ

    ವಾಲ್ಮೀಕಿ ನಿಗಮಕ್ಕೆ ಎಷ್ಟು ಅನುದಾನ ನಿಗದಿಯಾಗಿತ್ತೋ ಅಷ್ಟು ಕೊಡುತ್ತೇವೆ. ವಾಲ್ಮೀಕಿ ನಿಗಮದಲ್ಲಿ 89.63 ಕೋಟಿ ರೂ. ಅಕ್ರಮ ಆಗಿತ್ತು. ಈಗ 5 ಕೋಟಿ ರೂ. ವಾಪಸ್ ಬಂದಿದೆ. 71.54 ಕೋಟಿ ರೂ. ಎಸ್‌ಐಟಿ ಅವರು ರಿಕವರಿ ಮಾಡಿದ್ದಾರೆ. ಉಳಿದ 13 ಕೋಟಿ ರೂ. ರಿಕವರಿ ಆಗಬೇಕು. ಅದನ್ನು ಮಾಡೋದಾಗಿ ಎಸ್‌ಐಟಿ ಅವರು ಹೇಳಿದ್ದಾರೆ. 13 ಕೋಟಿ ರೂ. ರಿಕವರಿ ಆದ್ರೆ ಎಷ್ಟು ಅಕ್ರಮ ಅಗಿದೆ ಅಂತ ನಮಗೆ ಮಾಹಿತಿ ಸ್ಪಷ್ಟವಾಗಿ ತಿಳಿಯಲಿದೆ. ಸದ್ಯ ಕೋರ್ಟ್ ಮುಂದೆ ಕೇಸ್ ನಡೆಯುತ್ತಿದೆ. ಕೋರ್ಟ್ನಲ್ಲಿ ಏನು ತೀರ್ಮಾನ ಆಗುತ್ತೆ ಅದರಂತೆ ನಾವು ನಡೆದುಕೊಳ್ಳುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: 3 ಕ್ಷೇತ್ರಗಳ ಉಪಚುನಾವಣೆಯನ್ನು ನಾವು ಸಮರ್ಥವಾಗಿ ಎದುರಿಸುತ್ತೇವೆ: ಸಿಎಂ

    ಜಾತಿ ಪ್ರಮಾಣಪತ್ರ ಗೊಂದಲ ನಿವಾರಣೆ ಮಾಡಿ ಇಲಾಖೆ ಕಾರ್ಯದರ್ಶಿ ಮತ್ತು ಕಾನೂನು ಇಲಾಖೆ ಅವರಿಗೆ ಸೂಚನೆ ನೀಡಿದ್ದೇನೆ ಪ್ರಮಾಣಪತ್ರ ಗೊಂದಲ ನಿವಾರಣೆ ಮಾಡಿ ಆದೇಶ ಮಾಡಲು ಸೂಚನೆ ನೀಡಿದ್ದೇನೆ. ಆ ಸಮಸ್ಯೆಯೂ ಪರಿಹಾರ ಆಗುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ಹುಬ್ಬಳ್ಳಿ ಗಲಭೆ ಕೇಸ್ ವಾಪಸ್ ಪಡೆದಿದ್ದು ಸರಿಯಾಗಿದೆ: ಮಧು ಬಂಗಾರಪ್ಪ

  • ಸುಳ್ಳು ಜಾತಿ ಪ್ರಮಾಣಪತ್ರ ಪಡೆದು ಗ್ರಾ.ಪಂ. ಅಧಿಕಾರ ಅನುಭವಿಸಿದ ಮಹಿಳೆಗೆ 7 ವರ್ಷ ಜೈಲು

    ಹಾವೇರಿ: ಪರಿಶಿಷ್ಟ ಜಾತಿ ಪ್ರಮಾಣಪತ್ರ (Caste Certificate) ಪಡೆಯಲು ಸುಳ್ಳು ದಾಖಲಾತಿಗಳನ್ನು ಸೃಷ್ಟಿಸಿದ ಶಿಗ್ಗಾಂವಿ (Shiggavi) ತಾಲೂಕು ವನಹಳ್ಳಿ ಗ್ರಾಮದ ಲಕ್ಷ್ಮಿ ಕೋಂ.ಮಾರುತಿ ಕಬ್ಬೇರ ಎಂಬಾಕೆಗೆ 7 ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ 19,000 ರೂ. ದಂಡ (Penalty) ವಿಧಿಸಿ ಹಾವೇರಿಯ (Haveri) ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಜಿ.ಎಲ್.ಲಕ್ಷ್ಮೀ ನಾರಾಯಣ ತೀರ್ಪು ನೀಡಿದ್ದಾರೆ.

    ಶಿಗ್ಗಾಂವಿ ತಾಲೂಕು ವನಹಳ್ಳಿ ಗ್ರಾಮದ ಲಕ್ಷ್ಮಿ ಹಿಂದೂ ಗಂಗಾಮತಕ್ಕೆ (ಪ. ವರ್ಗ-01) ಸೇರಿದ್ದರೂ ಸಹ, ಸುಳ್ಳು ವ್ಯಾಸಂಗ ಪ್ರಮಾಣಪತ್ರ ಹಾಗೂ ಸುಳ್ಳು ಅಫಿಡವಿಟ್ ಘೋಷಣಾ ಪತ್ರ ಮತ್ತು ಇತರೆ ದಾಖಲಾತಿಗಳನ್ನು ಸೃಷ್ಟಿಸಿ ಜೂನ್ 04, 2015ರಂದು ಶಿಗ್ಗಾಂವಿ ತಹಶೀಲ್ದಾರ್ ಕಚೇರಿಯಲ್ಲಿ ಸಲ್ಲಿಸಿದ್ದಾರೆ. ಹಿಂದೂ ಗಂಟಿಚೋರ್ಸ್ ಪರಿಶಿಷ್ಠ ಜಾತಿಯ ಪ್ರಮಾಣಪತ್ರ ಪಡೆದು ಹನುಮರಹಳ್ಳಿ ಗ್ರಾಮ ಪಂಚಾಯತಿ ಸದಸ್ಯ ಸ್ಥಾನಕ್ಕೆ ಪರಿಶಿಷ್ಠ ಜಾತಿ ಮಹಿಳೆಗೆ ಮೀಸಲಿದ್ದ ಸ್ಥಾನಕ್ಕೆ ಸ್ಪರ್ಧಿಸಿ ಆಯ್ಕೆಯಾಗಿದ್ದಾರೆ. ನಂತರ ಎಸ್‌ಸಿ ಸ್ಥಾನಕ್ಕೆ ಮೀಸಲಾಗಿದ್ದ ಗ್ರಾ.ಪಂ (Grama Panchayat) ಅಧ್ಯಕ್ಷೆಯಾಗಿಯೂ ಆಯ್ಕೆಯಾಗಿದ್ದರು. ಇದನ್ನೂ ಓದಿ: ಇನ್ಮುಂದೆ ನೂತನ ಇಂದಿರಾ ಕ್ಯಾಂಟೀನ್ ಊಟದ ದರ 60 ರೂ.!

    ಸುಳ್ಳು ಜಾತಿಪ್ರಮಾಣಪತ್ರ ಪಡೆದು ಸರ್ಕಾರಕ್ಕೆ ಮತ್ತು ನೈಜ ಪರಿಶಿಷ್ಠ ಜಾತಿಯ ಅಭ್ಯರ್ಥಿಗೆ ಮೋಸಮಾಡಿದ ಕುರಿತಂತೆ ಶಿಗ್ಗಾಂವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ತನಿಖಾಧಿಕಾರಿ ದಾವಣಗೆರೆ ಡಿಸಿಆರ್‌ಒ ಪೊಲೀಸ್ ಇನ್ಸ್ಪೆಕ್ಟರ್ ಟಿಜಿ ಶ್ರೀಧರ ಶಾಸ್ತ್ರಿ ಅವರು ಪ್ರಕರಣದ ತನಿಖೆ ನಡೆಸಿ ದೋಷಾರೋಪಣಾ ಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಇದನ್ನೂ ಓದಿ: ಸ್ನೇಹಿತನ ಮಗನನ್ನು ಅಪಹರಿಸಿ ಕೊಲೆ- ಅಪರಾಧಿಗೆ ಜೀವಾವಧಿ ಶಿಕ್ಷೆ, 3.25 ಲಕ್ಷ ರೂ. ದಂಡ

    ಲಕ್ಷ್ಮಿ ಮೇಲೆ ಕಲಂ:198, 420, 465, 468, 471 ಭಾ.ದಂ.ಸಂ. ಮತ್ತು 3(1)ಕ್ಯೂ ಎಸ್‌ಸಿ/ಎಸ್‌ಟಿ (ಪಿಎ) ತಿದ್ದುಪಡಿ ಕಾಯ್ದೆ 2015ರ ಅಡಿಯಲ್ಲಿ ಆಪಾದನೆಗಳು ರುಜುವಾತದ ಹಿನ್ನೆಲೆಯಲ್ಲಿ ಶಿಕ್ಷೆ ಹಾಗೂ ದಂಡ ವಿಧಿಸಿ ನ್ಯಾಯಾಧೀಶರು ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಸರ್ಕಾರಿ ಅಭಿಯೋಜಕರಾದ ಸರೋಜಾ ಜಿ.ಕೂಲಗಿಮಠ ಅವರು ವಾದ ಮಂಡಿಸಿದ್ದಾರೆ. ಇದನ್ನೂ ಓದಿ: ಅಕ್ರಮ ಹಣ ವರ್ಗಾವಣೆ – ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿಗೆ ನ್ಯಾಯಾಂಗ ಬಂಧನ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಕಲಿ ಜಾತಿ ಪ್ರಮಾಣ ಪತ್ರ ಕೊಟ್ಟು ಉದ್ಯೋಗ – ಶಿಕ್ಷೆ ಪ್ರಮಾಣ ಹೆಚ್ಚಳ ಮಾಡುತ್ತೇವೆ: ಮಹದೇವಪ್ಪ

    ನಕಲಿ ಜಾತಿ ಪ್ರಮಾಣ ಪತ್ರ ಕೊಟ್ಟು ಉದ್ಯೋಗ – ಶಿಕ್ಷೆ ಪ್ರಮಾಣ ಹೆಚ್ಚಳ ಮಾಡುತ್ತೇವೆ: ಮಹದೇವಪ್ಪ

    ಬೆಂಗಳೂರು : ನಕಲಿ ಜಾತಿ ಪ್ರಮಾಣ ಪತ್ರ (Fake Caste Certificate) ಕೊಟ್ಟು ಉದ್ಯೋಗ ಪಡೆಯುವವರಿಗೆ ನೀಡುವ‌ ಶಿಕ್ಷೆ ಪ್ರಮಾಣ ಹೆಚ್ಚಳ ಮಾಡುವ ಚಿಂತನೆ ಇದೆ ಎಂದು ಸಮಾಜ ಕಲ್ಯಾಣ ‌ಇಲಾಖೆ ಸಚಿವ ಎಚ್.ಸಿ. ಮಹದೇವಪ್ಪ (HC Mahadevappa) ತಿಳಿಸಿದ್ದಾರೆ.

    ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಜೆಡಿಎಸ್‌ನ ಗೋವಿಂದ ರಾಜು (Govind Raju) ನಕಲಿ ಜಾತಿ ಪತ್ರ ಕೊಟ್ಟು ಹುದ್ದೆ ಪಡೆದಿರುವ ವಿಷಯ ಪ್ರಸ್ತಾಪ ಮಾಡಿದರು.

    ಇದಕ್ಕೆ ಪ್ರತಿಕ್ರಿಯೆ ನೀಡಿದ ಸಮಾಜ ಕಲ್ಯಾಣ ಇಲಾಖೆ ಸಚಿವ ಮಹದೇವಪ್ಪ, ರಾಜ್ಯದಲ್ಲಿ 836 ಮಂದಿ ನಕಲಿ ಜಾತಿ ಪ್ರಮಾಣ ಪತ್ರ ಕೊಟ್ಟು ಉದ್ಯೋಗ ಪಡೆದಿದ್ದಾರೆ. ಈ ಬಗ್ಗೆ ತನಿಖೆ ನಡೆಯುತ್ತಿದೆ. 836 ಪ್ರಕರಣಗಳಲ್ಲಿ 598 ಪ್ರಕರಣ ದಾಖಲಿಸಲಾಗಿದೆ. 238 ಕೇಸ್ ಜಿಲ್ಲಾ ಜಾತಿ ಪರಿಶೀಲನಾ ಸಮಿತಿಗಳಲ್ಲಿ ಬಾಕಿ ಇದೆ. 598 ಪ್ರಕರಣದಲ್ಲಿ 93 ನೌಕರರನ್ನ ಸೇವೆಯಿಂದ ವಜಾ ಮಾಡಲಾಗಿದೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಆಗಸ್ಟ್‌ನಲ್ಲಿ ಫಲಾನುಭವಿಗಳ ಖಾತೆಗೆ ʻಗೃಹಲಕ್ಷ್ಮಿʼ – ಲಕ್ಷ್ಮಿ ಹೆಬ್ಬಾಳ್ಕರ್

     

    ನಕಲಿ ಜಾತಿ ಪತ್ರ ಕೊಟ್ಟು ಉದ್ಯೋಗ ಪಡೆಯೋದು ಸಂವಿಧಾನ ವಿರೋಧ. ಈಗ ಇರೋ‌ ಶಿಕ್ಷೆ ಪ್ರಮಾಣ ಸಾಕಾಗುವುದಿಲ್ಲ. ಹೀಗಾಗಿ ಇಂತಹ ಪ್ರಕರಣಕ್ಕೆ ಇರುವ ಶಿಕ್ಷೆ ಪ್ರಮಾಣ ಹೆಚ್ಚಳ ಮಾಡುವ ಚಿಂತನೆ ಮಾಡುತ್ತಿದ್ದೇವೆ. ಮುಂದಿನ ವಾರ ಗೃಹ ಇಲಾಖೆ ಜೊತೆ ಸಭೆ ಮಾಡಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 2018ರ ಚುನಾವಣೆಯಲ್ಲಿ ಪ್ರಬಲ ಪೈಪೋಟಿ ಒಡ್ಡಿದ್ದ ಅಭ್ಯರ್ಥಿಯ ಜಾತಿ ಪ್ರಮಾಣಪತ್ರ ರದ್ದು

    2018ರ ಚುನಾವಣೆಯಲ್ಲಿ ಪ್ರಬಲ ಪೈಪೋಟಿ ಒಡ್ಡಿದ್ದ ಅಭ್ಯರ್ಥಿಯ ಜಾತಿ ಪ್ರಮಾಣಪತ್ರ ರದ್ದು

    ರಾಯಚೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪರಿಶಿಷ್ಟ ಪಂಗಡ ಮೀಸಲು ಕ್ಷೇತ್ರ ಮಾನ್ವಿಯಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಭರ್ಜರಿ ಪೈಪೋಟಿ ನೀಡಿ ಎರಡನೇ ಸ್ಥಾನ ಪಡೆದಿದ್ದ ಡಾ.ತನುಶ್ರಿ ಜಾತಿ ಪ್ರಮಾಣಪತ್ರ ರದ್ದಾಗಿದೆ.

    ಸುಳ್ಳು ಜಾತಿ ಪ್ರಮಾಣ ಪತ್ರ ನೀಡಿ ಚುನಾವಣೆ ಎದುರಿಸಿದ್ದಾರೆ ಎಂದು ಹೈದರಾಬಾದ್ ಕರ್ನಾಟಕ ಪ್ರದೇಶ ವಾಲ್ಮೀಕಿ ನಾಯಕ ಸಂಘದ ವಿಭಾಗೀಯ ಕಾರ್ಯದರ್ಶಿ ಎನ್.ರಘುವೀರ ನಾಯಕ ಹಾಗೂ ರಂಗಾರೆಡ್ಡಿ ಎಂಬುವವರು ದೂರು ದಾಖಲಿಸಿದ್ದರು‌. ಇದನ್ನೂ ಓದಿ: ಚುನಾವಣಾ ರಾಜಕಾರಣಕ್ಕೆ ಈಶ್ವರಪ್ಪ ಗುಡ್‍ಬೈ

    ಬೀದರ್ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅವರು ಜಾತಿ ಪ್ರಮಾಣಪತ್ರ ರದ್ದುಗೊಳಿಸಿ ಆದೇಶ ಹೊರಡಿಸಿದ್ದಾರೆ. ನಮ್ಮ ಹೋರಾಟಕ್ಕೆ ಐದು ವರ್ಷದ‌ ಬಳಿಕ ಜಯ ಸಿಕ್ಕಿದೆ ಎಂದು ರಘುವೀರ್ ನಾಯಕ್ ಹೇಳಿದ್ದಾರೆ.

    ಹಿಂದುಳಿದ ವರ್ಗದ ಧನಗಾರ ಜಾತಿಯಲ್ಲಿದ್ದರೂ ಗೊಂಡ ಎಂದು ನಮೂದಿಸಿ ಪರಿಶಿಷ್ಟ ಪಂಗಡದ ಜಾತಿ ಪ್ರಮಾಣ ಪತ್ರ ಪಡೆದಿದ್ದರು ಎಂದು ಆರೋಪಿಸಿ ರಾಯಚೂರು ಹಾಗೂ ಬೀದರ್ ಜಿಲ್ಲಾಧಿಕಾರಿಗಳಿಗೆ ದೂರು ನೀಡಲಾಗಿತ್ತು. ತನುಶ್ರೀ ಕಳೆದ ಚುನಾವಣೆಯಲ್ಲಿ 37,733 ಮತಗಳನ್ನು ಪಡೆದು ರಾಜಾ ವೆಂಕಟಪ್ಪ ನಾಯಕ್ ವಿರುದ್ಧ ಪರಾಭವಗೊಂಡಿದ್ದರು. ಇದನ್ನೂ ಓದಿ: ಪಕ್ಷೇತರನಿಗೆ ಬಿದ್ದ ಅನಿರೀಕ್ಷಿತ ಮತ ಸಿದ್ದು ಪಾಲಿಗೆ ವರವಾಯ್ತು!

  • ಸಮೀರ್ ಮುಸ್ಲಿಂ ಅಲ್ಲ – ಜಾತಿ ಪರಿಶೀಲನಾ ಸಮಿತಿ ಕ್ಲೀನ್‌ ಚಿಟ್

    ಸಮೀರ್ ಮುಸ್ಲಿಂ ಅಲ್ಲ – ಜಾತಿ ಪರಿಶೀಲನಾ ಸಮಿತಿ ಕ್ಲೀನ್‌ ಚಿಟ್

    ಮುಂಬೈ: ನಕಲಿ ಜಾತಿ ಪ್ರಮಾಣ ಪತ್ರ ಬಳಸಿ ಸರ್ಕಾರಿ ನೌಕರಿ ಪಡೆದಿರುವುದಾಗಿ ಆರೋಪ ಹೊತ್ತಿದ್ದ ಮಾಜಿ ಎನ್‌ಸಿಬಿ ಅಧಿಕಾರಿ ಸಮೀರ್ ವಾಂಖೆಡೆಗೆ ಜಾತಿ ಪರಿಶೀಲನಾ ಸಮಿತಿ ಕ್ಲೀನ್‌ ಚಿಟ್ ನೀಡಿದೆ.

    ಸಮೀರ್ ವಾಂಖೆಡೆ ಹುಟ್ಟಿನಿಂದ ಮುಸ್ಲಿಂ ಅಲ್ಲ. ಅವರು ಮಹಾರ್-37 ಪರಿಶಿಷ್ಟ ಜಾತಿಗೆ ಸೇರಿದವರು. ಸಮೀರ್ ವಾಂಖೆಡೆ ಹಾಗೂ ಅವರ ತಂದೆ ದ್ಯಾನೇಶ್ ವಾಂಖೆಡೆ ಹಿಂದೂ ಧರ್ಮವನ್ನು ತ್ಯಜಿಸಿ ಮುಸ್ಲಿಂ ಧರ್ಮವನ್ನು ಸ್ವೀಕರಿಸಿಲ್ಲ ಎಂದು ಸಮಿತಿ ತೀರ್ಮಾನಿಸಿದೆ. ಇದನ್ನೂ ಓದಿ: ಸ್ವಾವಲಂಬಿ ಭಾರತ ಕಟ್ಟಲು ಕೈಜೋಡಿಸಿ: ರಾಜ್ಯಪಾಲರ ಮನವಿ

    ಮಹಾರಾಷ್ಟ್ರದ ಮಾಜಿ ಕ್ಯಾಬಿನೆಟ್ ಸಚಿವ ಮತ್ತು ಎನ್‌ಸಿಪಿ ನಾಯಕ ನವಾಬ್ ಮಲಿಕ್ ಸಮೀರ್ ಅವರು ನಕಲಿ ಜಾತಿ ಪ್ರಮಾಣ ಪತ್ರ ಬಳಸಿರುವುದಾಗಿ ಆರೋಪಿಸಿದ್ದರು. ಬಳಿಕ ರಾಜಕೀಯ ಮುಖಂಡರಾದ ಮನೋಜ್ ಸಂಸಾರೆ, ಅಶೋಕ್ ಕಾಂಬ್ಳೆ ಹಾಗೂ ಸಂಜಯ್ ಕಾಂಬ್ಳೆ ಅವರು ಸಮೀರ್ ವಾಂಖೆಡೆ ವಿರುದ್ಧ ದೂರು ನೀಡಿದ್ದರು. ಇದೀಗ ಈ ಆರೋಪ ಆಧಾರ ರಹಿತ ಎಂದು ಜಾತಿ ಪರಿಶೀಲನಾ ಸಮಿತಿ ಹೇಳಿದೆ. ಇದನ್ನೂ ಓದಿ: ಲಂಚ-ಮಂಚ ಹೇಳಿಕೆಗೆ ಕೌಂಟರ್ ಕೊಟ್ಟ ಬಿಜೆಪಿಗೆ ಪ್ರಿಯಾಂಕ್ ಖರ್ಗೆ ಫೇಸ್‌ಬುಕ್ ಪೋಸ್ಟ್‌ನಲ್ಲಿ ಸುದೀರ್ಘ ಉತ್ತರ

    ಸಮೀರ್ ವಾಂಖೆಡೆಗೆ ಕ್ಲೀನ್‌ ಚಿಟ್ ಲಭಿಸುತ್ತಿದ್ದಂತೆಯೇ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಸತ್ಯಮೇವ ಜಯತೆ ಎಂದು ಬರೆದುಕೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಶಾಲೆ ದಾಖಲೆಯಲ್ಲಿ ಬದಲಾದ ಜಾತಿ- ಯಾರದ್ದೋ ತಪ್ಪಿಗೆ ಮಕ್ಕಳಿಗೆ ಶಿಕ್ಷೆ

    ಶಾಲೆ ದಾಖಲೆಯಲ್ಲಿ ಬದಲಾದ ಜಾತಿ- ಯಾರದ್ದೋ ತಪ್ಪಿಗೆ ಮಕ್ಕಳಿಗೆ ಶಿಕ್ಷೆ

    ಧಾರವಾಡ: ಶಾಲೆಯಲ್ಲಿ ಅನೇಕ ಮಕ್ಕಳ ಜಾತಿಗಳನ್ನು ಅದಲು ಬದಲು ಮಾಡಲಾಗಿದ್ದು, ಒಂದೇ ಮನೆಯ ಸ್ವಂತ ಅಣ್ಣ, ತಮ್ಮಂದಿರ ಜಾತಿಯನ್ನು ಬದಲಾಯಿಸಲಾಗಿದೆ.

    ಧಾರವಾಡ ತಾಲೂಕಿನ ನಿಗದಿ ಸರ್ಕಾರಿ ಶಾಲೆಯಲ್ಲಿ ಅನೇಕ ಮಕ್ಕಳ ಮೂಲ ಜಾತಿಗಳೇ ಅದಲು ಬದಲಾಗಿದ್ದು, ಒಂದೇ ಮನೆಯ ಸ್ವಂತ ಅಣ್ಣ, ತಮ್ಮಂದಿರ ಜಾತಿ ಬದಲಾಗಿದೆ. ಅಣ್ಣನಿಗೆ ಒಂದು ಜಾತಿ, ತಮ್ಮನಿಗೆ ಇನ್ನೊಂದು, ತಂಗಿಗೆ ಮಗದೊಂದು ಜಾತಿ ಎಂದು ಶಿಕ್ಷಕರು ನಮೂದಿಸಿದ್ದಾರೆ. ಸದ್ಯ ಅದೆಲ್ಲವೂ ಈಗ ಎಸ್‍ಎಸ್‍ಎಲ್‍ಸಿ ಪರೀಕ್ಷೆಯ ಫಾರ್ಮ್ ತುಂಬುವ ವೇಳೆ ಬಯಲಿಗೆ ಬಂದಿದೆ. ಇದರಿಂದಾಗಿ ಐದಾರು ಮಕ್ಕಳಿಗೆ ಆತಂಕ ಎದುರಾಗಿದೆ.

    ಶಾಲೆಯ ಶಿವಾನಂದ ಶೇಖಪ್ಪ ಮುಮ್ಮಿಗಟ್ಟಿಯ ಮೂಲ ಜಾತಿ ಕ್ಷತ್ರಿಯ. ಅವರ ಮನೆಯವರೆಲ್ಲರ ದಾಖಲೆಯಲ್ಲಿಯೂ ಅದೇ ಇದೆ. ಆದರೆ ಶಾಲೆಯ ರಿಜಿಸ್ಟರ್‍ನಲ್ಲಿ ಈತನ ಹೆಸರಿನ ಜೊತೆಗೆ ಹಿಂದೂ ಲಿಂಗಾಯತ ಎಂದು ನಮೂದಿಸಿದ್ದಾರೆ. ಶಾಲೆಯಲ್ಲಿ ಎಸ್‍ಎಸ್‍ಎಲ್‍ಸಿ ವ್ಯಾಸಂಗ ಮಾಡುತ್ತಿರುವ ಮಕ್ಕಳ ಒಎಂಆರ್ ಶೀಟ್‍ನ್ನು ಭರ್ತಿ ಮಾಡುವಾಗಲೇ ಈ ವಿಷಯ ಬೆಳಕಿಗೆ ಬಂದಿದೆ.

    ಕೇವಲ ಇದೊಂದು ಪ್ರಕರಣವಲ್ಲ, ಲಿಂಗಾಯತ ಸಮುದಾಯದ ಮತ್ತೊಬ್ಬ ಹುಡುಗನ ಜಾತಿಯನ್ನು ಕುರುಬ ಎಂದು ನಮೂದಿಸಿದ್ದಾರೆ. ಸದ್ಯ ಇರುವ ಪ್ರಧಾನ ಶಿಕ್ಷಕರಿಗೆ ಪಾಲಕರಿಂದ ದೂರು ಬಂದಾಗ, ಪರಿಶೀಲಿಸಿ, ಬದಲಿಸುವ ಮಾರ್ಗಗಳನ್ನು ತಿಳಿಸಿಕೊಡುತ್ತಿದ್ದಾರೆ. ಎರಡು, ಮೂರು ಮಕ್ಕಳಿರುವ ಕುಟುಂಬದಲ್ಲಿ ಹಿರಿಯ ಮಕ್ಕಳ ಜಾತಿ ಒಂದಿದ್ದರೆ ಕಿರಿಯ ಮಕ್ಕಳ ಜಾತಿ ಇನ್ನೊಂದಾಗಿದೆ. ಜಾತಿ ಬದಲಾಗಿರುವುದನ್ನು ಗಮನಿಸಿ ಸರಿಪಡಿಸಿಕೊಡುವಂತೆ ಪಾಲಕರು ಶಿಕ್ಷಣ ಇಲಾಖೆಯ ಮೊರೆ ಹೋಗಿದ್ದು, ಈ ಸಂಬಂಧ ದೂರು ಬರುತ್ತಿದ್ದಂತೆ ಸಮಸ್ಯೆ ಬಗೆಹರಿಸಲು ಗ್ರಾಮೀಣ ಬಿಇಒ ಉಮೇಶ ಬಮ್ಮಕ್ಕನವರ ತಮ್ಮ ಅಧೀನದ ಮೂವರು ಅಧಿಕಾರಿಗಳ ನೇತೃತ್ವದಲ್ಲಿ ತಂಡ ರಚಿಸಿದ್ದು, ತಪ್ಪಿತಸ್ಥ ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳೋದಾಗಿ ಭರವಸೆ ನೀಡಿದ್ದಾರೆ.

  • ಜಾತಿ ಸಿಂಧುತ್ವ ಪ್ರಮಾಣ ಪತ್ರ – ಸರ್ಕಾರದ ನಿರ್ಧಾರ ವಾಪಸ್‌ ಪಡೆಯುವಂತೆ ಸಿದ್ದರಾಮಯ್ಯ ಪತ್ರ

    ಜಾತಿ ಸಿಂಧುತ್ವ ಪ್ರಮಾಣ ಪತ್ರ – ಸರ್ಕಾರದ ನಿರ್ಧಾರ ವಾಪಸ್‌ ಪಡೆಯುವಂತೆ ಸಿದ್ದರಾಮಯ್ಯ ಪತ್ರ

    – ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯಕ್ಕೆ ಪತ್ರ ನೀಡಲು ಅಧಿಕಾರ
    – ಸರ್ಕಾರದ ನಿರ್ಧಾರದಿಂದ ಅಮಾಯಕರಿಗೆ ಕಿರುಕುಳ

    ಬೆಂಗಳೂರು: ಜಾತಿ ಸಿಂಧುತ್ವ ಪ್ರಮಾಣ ಪತ್ರ ನೀಡುವ ಅಧಿಕಾರ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯಕ್ಕೆ ವಹಿಸಿರುವ ಸರ್ಕಾರದ ನಿರ್ಧಾರ ವಾಪಸ್‌ ಪಡೆಯುವಂತೆ ಆಗ್ರಹಿಸಿ ಮಾಜಿ ಸಿಎಂ ಸಿದ್ದರಾಮಯ್ಯ ಸಿಎಂ ಯಡಿಯೂರಪ್ಪನವರಿಗೆ ಪತ್ರ ಬರೆದಿದ್ದಾರೆ.

    ಪತ್ರದಲ್ಲಿ ಏನಿದೆ?
    ಮಾನ್ಯ ಶ್ರೀ ಯಡಿಯೂರಪ್ಪ ರವರೆ,
    ರಾಜ್ಯದಲ್ಲಿ ಬಿ.ಜೆ.ಪಿ. ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ಜಾತಿಗಳ ಹಿತಾಸಕ್ತಿಯನ್ನು ರಕ್ಷಿಸುವವರು ಇಲ್ಲದಂತಾಗಿದೆ ಎಂಬ ಅಭಿಪ್ರಾಯ ಸಾರ್ವಜನಿಕರಲ್ಲಿ ಆಳವಾಗಿ ಬೇರೂರುತ್ತಿದೆ. ಇದಕ್ಕೆ ಪೂರಕವೆಂಬಂತೆ ಜನವರಿ 16 ರಂದು ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯಿಂದ ಹೊರಡಿಸಿರುವ ಆದೇಶವೇ ಸಾಕ್ಷಿಯಾಗಿದೆ. ಸದರಿ ಆದೇಶದಲ್ಲಿ ಕರ್ನಾಟಕ ಅನುಸೂಚಿತ ಜಾತಿಗಳು, ಅನುಸೂಚಿತ ಬುಡಕಟ್ಟುಗಳು ಮತ್ತು ಇತರೆ ಹಿಂದುಳಿದ ವರ್ಗಗಳ (ನೇಮಕಾತಿ ಮುಂತಾದವುಗಳ ಮೀಸಲಾತಿ) ನಿಯಮಗಳು 1992 ರ ಪ್ರಕಾರ ಸರ್ಕಾರದ ಇಲಾಖೆಗಳಿಗೆ/ ಸಂಸ್ಥೆಗಳಿಗೆ ನೌಕರರಾಗಿ ಆಯ್ಕೆಯಾದ ಸಂದರ್ಭಗಳಲ್ಲಿ ಜಾತಿ ಸಿಂಧುತ್ವ ಪ್ರಮಾಣ ಪತ್ರವನ್ನು ನೀಡಲು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿರುವ ಜಿಲ್ಲಾ ಜಾತಿ ಪರಿಶೀಲನಾ ಸಮಿತಿಗೆ ಅಧಿಕಾರ ನೀಡಲಾಗಿತ್ತು.

     

    ಆದರೆ ಈಗ ಕೆಲವು ನಿರ್ದಿಷ್ಟ ಜಾತಿಗಳಿಗೆ ಸಂಬಂಧಿಸಿದಂತೆ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ (ಜಾಗೃತ ಕೋಶ) ದಿಂದ ವರದಿ ಪಡೆದು ಜಾತಿ ಸಿಂಧುತ್ವ ಪ್ರಮಾಣ ಪತ್ರಗಳನ್ನು ನೀಡತಕ್ಕದ್ದು ಎಂದು ಜಿಲ್ಲಾ ಸಮಿತಿಗೆ ಆದೇಶ ಹೊರಡಿಸಲಾಗಿದೆ. ಈ ಆದೇಶದಲ್ಲಿ ಕೆಳಕಂಡ ಜಾತಿಗಳನ್ನು ನಮೂದಿಸಲಾಗಿದೆ.

    ಕರ್ನಾಟಕ ಪರಿಶಿಷ್ಟ ಪಂಗಡದಲ್ಲಿರುವ ಜಾತಿ ಮತ್ತು ಅವುಗಳ ಕ್ರಮ ಸಂಖ್ಯೆ
    1) ಗೊಂಡ, ರಾಜಗೊಂಡ, ನಾಯಕ್‍ಪೋಡ್
    15) ಜೇನು ಕುರುಬ
    16) ಕಾಡು ಕುರುಬ
    17) ಕಮ್ಮಾರ (ದಕ್ಷಿಣ ಕನ್ನಡ, ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ)
    18) ಕಣಿಯನ್, ಕಣ್ಯನ್ (ಕೊಳ್ಳೇಗಾಲ)
    21) ಕೊಂಕಣ, ಕೊಂಕಣಿ, ಕುಕನ
    22) ಕೋಲಿಧೋರ್, ಟೋಕ್ರೆ ಕೇಳಿ, ಕೊಲ್ಚ, ಕೊಲಘ
    28) ಕುರುಬ (ಕೊಡಗು ಜಿಲ್ಲೆ)
    34) ಮಾಲೇರು
    35) ಮರಾಠ (ಕೊಡಗು ಜಿಲ್ಲೆ)
    36) ಮರಾಠಿ (ದಕ್ಷಿಣ ಕನ್ನಡ ಜಿಲ್ಲೆ)
    37) ಪರಿವಾರ, ತಳವಾರ

    ಕರ್ನಾಟಕ ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವ ಜಾತಿ ಮತ್ತು ಅವುಗಳ ಕ್ರಮ ಸಂಖ್ಯೆ
    19) ಬೇಡ ಜಂಗಮ, ಬುಡ್ಗ ಜಂಗಮ
    20) ಬೋವಿ
    21) ಚನ್ನ ದಾಸರ್
    41) ಹಂದಿ ಜೋಗಿ
    55) ಕೋಟೆಗಾರ್, ಮೇತ್ರಿ
    78) ಮೊಗೇರ್

    ಪರಿಶಿಷ್ಟ ವರ್ಗದ ಜಾತಿಗಳಲ್ಲಿ 21 ಜಾತಿಗಳನ್ನು, ಪರಿಶಿಷ್ಟ ಜಾತಿಯಲ್ಲಿ 8 ಜಾತಿಗಳನ್ನು ಗುರಿಯಾಗಿಸಿಕೊಂಡು ಈ ಆದೇಶವನ್ನು ಹೊರಡಿಸಲಾಗಿದೆ. ಆದರೆ ಈ ಆದೇಶ ಹೊರಡಿಸಲು ಸರ್ವೋಚ್ಛ ನ್ಯಾಯಾಲಯದ ಆದೇಶವನ್ನು ಉಲ್ಲೇಖಿಸಲಾಗಿದೆ. ಸರ್ವೋಚ್ಛ ನ್ಯಾಯಾಲಯ ತನ್ನ ಆದೇಶದಲ್ಲಿ ಈ 29 ಜಾತಿಗಳನ್ನು ಮಾತ್ರ ಗುರಿಯಾಗಿಸಿಕೊಂಡು ಜಾಗೃತ ಕೋಶದವರು ಪರಿಶೀಲನೆ ಮಾಡಬೇಕೆಂದು ಖಂಡಿತ ಹೇಳಿಲ್ಲ. ಆದರೆ ಸರ್ವೋಚ್ಛ ನ್ಯಾಯಾಲಯದ ಆದೇಶವನ್ನು ತಪ್ಪು ವ್ಯಾಖ್ಯಾನ ಮಾಡಿ ಕೆಲವೇ ಜಾತಿಗಳನ್ನು ಗುರಿಯಾಗಿಸಿಕೊಂಡು ಈ ಸರ್ಕಾರ ಆದೇಶವನ್ನು ಹೊರಡಿಸಿದೆ.

    ನಾಗರೀಕ ಹಕ್ಕು ಜಾತಿ ನಿರ್ದೇಶನಾಲಯ (ಜಾಗೃತ ಕೋಶ) ಮುಂದೆ ಹಲವು ವರ್ಷಗಳಿಂದ ಅಸಂಖ್ಯಾತ ಪ್ರಕರಣಗಳು ತನಿಖೆಗಾಗಿ/ ವಿಚಾರಣೆಗಾಗಿ ಬಾಕಿ ಇವೆ. ಅವುಗಳನ್ನು ಇತ್ಯರ್ಥ ಪಡಿಸದೆ ಕೊಳೆ ಹಾಕಿಕೊಂಡು ಜನರನ್ನು ಅಯ್ಯೊ ಎನ್ನಿಸುತ್ತಾ ಇಲ್ಲಿನ ಅಧಿಕಾರಿಗಳು ಕೂತಿದ್ದಾರೆ. ಇಂತಹ ಇಲಾಖೆಗೆ ಸರ್ಕಾರದ ನೌಕರಿಗೆ ಆಯ್ಕೆಯಾದ ಅಭ್ಯರ್ಥಿಗಳ ಜಾತಿಯ ಕುರಿತಾದ ವಿವರಗಳನ್ನು ನಿರ್ಧಿಷ್ಟ ಅವಧಿಯಲ್ಲಿ ತನಿಖೆ ಮಾಡಿ ಸಲ್ಲಿಸಲು ಸಾಧ್ಯವಿದೆಯೆ? ಮೇಲಿನ ಸಮುದಾಯಗಳ ಅಭ್ಯರ್ಥಿಗಳಿಗೆ ಕಿರುಕುಳ ನೀಡಲು, ತೀವ್ರ ರೀತಿಯ ಭ್ರಷ್ಟಾಚಾರಕ್ಕೆ ಅವಕಾಶ ಮಾಡಿಕೊಡಲು ಮಾಡಿದ ಆದೇಶ ಇದಾಗಿದೆ. ಇಂತಹ ಸಂದರ್ಭದಲ್ಲಿ ಈ ವರ್ಗಗಳ, ಜಾತಿಗಳ ಹಿತಾಸಕ್ತಿಯನ್ನು ಕಾಪಾಡಬೇಕಾದ ಸಚಿವರುಗಳು ಮೌನವಾಗಿರುವುದು ವಿಷಾದನೀಯ ಸಂಗತಿ. ಇದೇ ವರ್ಗವನ್ನು ಪ್ರತಿನಿಧಿಸುವ ಸಮಾಜ ಕಲ್ಯಾಣ ಸಚಿವರು ಈ ಆದೇಶವನ್ನು ಹೊರಡಿಸಲು ಅನುಮೋದನೆ ನೀಡಿರುವುದನ್ನು ನೋಡಿದರೆ ಈ ವರ್ಗಗಳ ಕುರಿತಂತೆ ಅವರ ಕಾಳಜಿ ಎಂಥದ್ದು ಎಂದು ಅರ್ಥವಾಗುತ್ತದೆ.

    ಆದುದರಿಂದ, ಈ ಕೂಡಲೇ ಈ ಜಾತಿ, ವರ್ಗಗಳ ಹಿತಾಸಕ್ತಿಯನ್ನು ಕಾಪಾಡಬೇಕಾದ ಸರ್ಕಾರ ಮತ್ತು ಸರ್ಕಾರದಲ್ಲಿನ ಸಚಿವರುಗಳು ಕೂಡಲೇ ಸೂಕ್ತ ಕ್ರಮ ಕೈಗೊಂಡು ಅವೈಜ್ಞಾನಿಕವಾದ ಮತ್ತು ಅಮಾಯಕರಿಗೆ ಕಿರುಕುಳ ನೀಡುವ ಈ ಸರ್ಕಾರಿ ಆದೇಶವನ್ನು ತಕ್ಷಣದಿಂದಲೇ ಹಿಂತೆಗೆದುಕೊಳ್ಳಬೇಕೆಂದು ಒತ್ತಾಯಿಸುತ್ತೇನೆ.

  • ಎಸ್‍ಟಿ ಪ್ರಮಾಣಪತ್ರ ಸಿಗದ್ದಕ್ಕೆ ತಹಶೀಲ್ದಾರ್ ಕಛೇರಿ ಮುಂದೆ ಆತ್ಮಹತ್ಯೆಗೆ ಯತ್ನ

    ಎಸ್‍ಟಿ ಪ್ರಮಾಣಪತ್ರ ಸಿಗದ್ದಕ್ಕೆ ತಹಶೀಲ್ದಾರ್ ಕಛೇರಿ ಮುಂದೆ ಆತ್ಮಹತ್ಯೆಗೆ ಯತ್ನ

    ಕಲಬುರಗಿ : ಎಸ್ಟಿ ಪ್ರಮಾಣ ಪತ್ರ ಸಿಗದೆ ಇದ್ದಕ್ಕಾಗಿ ಮನನೊಂದ ವ್ಯಕ್ತಿಯೊಬ್ಬ ಅಫಜಲಪೂರ ತಹಶೀಲ್ದಾರ್ ಕಛೇರಿ ಮುಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ.

    ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಶರಣಪ್ಪ ದಿವಾಣಜಿ ಎಂದು ಗುರುತಿಸಲಾಗಿದೆ. ಈತ ಅಫಜಲಪೂರ ತಾಲೂಕಿನ ಗೌರ ಬಿ ಗ್ರಾಮದವನಾಗಿದ್ದಾರೆ. ಎಸ್ಟಿ ಪ್ರಮಾಣ ಪತ್ರಕ್ಕಾಗಿ ಕೋಲಿ ಸಮಾಜದ ಶರಣಪ್ಪ ದಿವಾಣಜಿ ಅರ್ಜಿ ಸಲ್ಲಿಸಿದ್ದರು. ಪ್ರಮಾಣ ಪತ್ರ ನೀಡದ್ದಕ್ಕೆ ತಹಶೀಲ್ದಾರ್ ಕಛೇರಿ ಎದುರು ಪ್ರತಿಭಟನೆ ಮಾಡಿದ್ದಾರೆ.

    ಶರಣಪ್ಪ ಪತ್ನಿಗೆ ಗ್ರಾಮ ಪಂಚಾಯತಿ ಚುನಾವಣೆಗೆ ನಿಲ್ಲಿಸಲು ಸಿದ್ಧತೆ ಮಾಡಿಕೊಂಡಿದ್ದನು. ಎಸ್ಟಿ ಮೀಸಲು ವಾರ್ಡ್‍ನಿಂದ ಸ್ಪರ್ಧೆ ಬಯಸಿದ್ದ ಶರಣಪ್ಪ ಎಸ್ಟಿ ಪ್ರಮಾಣ ಪತ್ರ ಸಿಗದಿದ್ದಾಗ ತಹಶೀಲ್ದಾರ್ ಕಛೇರಿ ಮುಂದೆ ಕೋಲಿ ಸಮಾಜದವರ ಪ್ರತಿಭಟನೆ ಮಾಡಿದ್ದಾರೆ. ಈ ವೇಳೆ ಶರಣಪ್ಪ ಇದ್ದಕ್ಕಿದ್ದಂತೆಯೇ ವಿಷ ಸೇವಿಸಿದ್ದಾರೆ. ಪೊಲೀಸರು ಕೂಡಲೇ ಶರಣಪ್ಪರನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

  • ಪೌರತ್ವ ಪ್ರಮಾಣ ಪತ್ರ ಸಿಕ್ಕರೂ ಜಾತಿ ಪ್ರಮಾಣ ಪತ್ರ ಸಿಗುತ್ತಿಲ್ಲ: ಬಾಂಗ್ಲಾ ವಲಸಿಗರ ಪರದಾಟ

    ಪೌರತ್ವ ಪ್ರಮಾಣ ಪತ್ರ ಸಿಕ್ಕರೂ ಜಾತಿ ಪ್ರಮಾಣ ಪತ್ರ ಸಿಗುತ್ತಿಲ್ಲ: ಬಾಂಗ್ಲಾ ವಲಸಿಗರ ಪರದಾಟ

    ರಾಯಚೂರು: ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಯಾಗಿರುವುದರಿಂದ ಬಾಂಗ್ಲಾದೇಶದ ನಿರಾಶ್ರಿತರಿಗೆ ಇಂದಲ್ಲಾ ನಾಳೆ ದೇಶದ ಪೌರತ್ವ ಸಮಸ್ಯೆ ಬಗೆಹರಿಯಲಿದೆ. ಆದರೆ ರಾಯಚೂರು ಜಿಲ್ಲೆಯಲ್ಲಿ ಸುಮಾರು 50 ವರ್ಷದಿಂದ ವಾಸವಿರುವ ಬಾಂಗ್ಲಾ ವಲಸಿಗರಿಗೆ ಇದುವರೆಗೂ ಜಾತಿ ಪ್ರಮಾಣ ಪತ್ರವೇ ಸಿಕ್ಕಿಲ್ಲ. ಇನ್ನೊಂದೆಡೆ ಜಮೀನುಗಳ ನಕ್ಷೆ ಇಲ್ಲದೆ ಇಲ್ಲಿನ ಜನ ನಿರಂತರ ಹೋರಾಟ ನಡೆಸಿದ್ದಾರೆ.

    ಜಿಲ್ಲೆಯ ಸಿಂಧನೂರು ತಾಲೂಕಿನ ಐದು ನಿರಾಶ್ರಿತರ ಪುನರ್ವಸತಿ ಕ್ಯಾಂಪ್‍ಗಳ ನಿವಾಸಿಗಳು ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಯಿಂದ ತುಂಬಾನೇ ಖುಷಿಯಾಗಿದ್ದಾರೆ. ಇಲ್ಲಿನ ಐದು ಆರ್‌ಎಚ್ ಕ್ಯಾಂಪ್‍ಗಳಲ್ಲಿನ ಸುಮಾರು 7 ಸಾವಿರ ಜನ ಅಕ್ರಮ ವಲಸಿಗರು ಈಗ ಹೊಸದಾಗಿ ಪೌರತ್ವ ಪಡೆಯುತ್ತಿದ್ದಾರೆ. ಆದರೆ ಈ ಹಿಂದೆ ಪೌರತ್ವ ಪಡೆದು 1971ರಿಂದ ಇಲ್ಲೇ ವಾಸಿಸುತ್ತಿರುವ ಸುಮಾರು 25 ಸಾವಿರ ಜನರಿಗೆ ಇದುವರೆಗೂ ಜಾತಿ ಪ್ರಮಾಣ ಪತ್ರ ಸಿಕ್ಕಿಲ್ಲ.

    ಆದಾಯ ಮತ್ತು ಜಾತಿ ಪ್ರಮಾಣ ಪತ್ರದಲ್ಲಿ ಕೇವಲ ಆದಾಯ ತೋರಿಸಿ ಜಾರಿ ಜಾತಿ ಕಾಲಂ ಅನ್ನು ಖಾಲಿ ಬಿಡಲಾಗುತ್ತಿದೆ. ಜಾತಿ ಪ್ರಮಾಣ ಪತ್ರ ಇಲ್ಲದಿರುವುದಕ್ಕೆ ಸಾಕಷ್ಟು ಸೌಲಭ್ಯ, ಅವಕಾಶಗಳಿಂದ ವಂಚಿತರಾಗುತ್ತಿದ್ದಾರೆ. ವಿದ್ಯಾರ್ಥಿಗಳು, ರೈತರು ಜಾತಿ ಪ್ರಮಾಣ ಪತ್ರಕ್ಕಾಗಿ ಹೋರಾಟ ನಡೆಸುತ್ತಲೇ ಬಂದಿದ್ದಾರೆ. ಇಲ್ಲಿ ವಾಸವಿರುವ ಶೇಕಡಾ 60ರಿಂದ 70 ರಷ್ಟು ಜನ ನಮಶೂದ್ರ ಜನಾಂಗಕ್ಕೆ ಸೇರಿದವರಾಗಿದ್ದಾರೆ.

    ಓಡಿಸ್ಸಾ, ಮೇಘಾಲಯ, ಪಶ್ಚಿಮ ಬಂಗಾಳ ಸೇರಿ ಎಂಟು ರಾಜ್ಯಗಳಲ್ಲಿ ನಮಶೂದ್ರ ಜನಾಂಗಕ್ಕೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡಿದ್ದಾರೆ. ನಮಗೂ ಪರಿಶಿಷ್ಟ ಜಾತಿ ಪ್ರಮಾಣಪತ್ರ ನೀಡಬೇಕು ಅಂತ ಹೋರಾಟ ನಡೆಸಿದ್ದಾರೆ. ಇಲ್ಲಿ ವಾಸವಿರುವ ಸುಮಾರು 6 ಸಾವಿರ ಕ್ಷತ್ರಿಯಾ ಜನಾಂಗದವರಿದೆ ಮಾತ್ರ 2ಎ ಪ್ರಮಾಣ ಪತ್ರ ನೀಡಲಾಗಿದೆ.

    ಒಂದೆಡೆ ಜಾತಿ ಪ್ರಮಾಣ ಪತ್ರದ ಸಮಸ್ಯೆಯಾದರೆ, ಇನ್ನೊಂದೆಡೆ ಜಮೀನಿನ ಭಾಗದ ಸಮಸ್ಯೆ ಎದುರಿಸುತ್ತಿದ್ದಾರೆ. ಭಾರತ ಬಾಂಗ್ಲಾ ದೇಶ ವಿಭಜನೆ ಬಳಿಕ ಭಾರತಕ್ಕೆ ಬಂದ ವಲಸಿಗರಿಗೆ ಅಂದಿನ ಸರ್ಕಾರ ಭಾರತ ಪೌರತ್ವವನ್ನು ನೀಡಿ ಸಿಂಧನೂರು ತಾಲೂಕಿನಲ್ಲಿ ಸೌಲಭ್ಯಗಳನ್ನು ಒದಗಿಸಿತು. ತಲಾ 3 ಎಕರೆ ಜಮೀನು, ನಿವೇಶನ ಸಹ ನೀಡಿತ್ತು. ಆದರೆ ಜಮೀನಿನ ನಕ್ಷೆಯಿಲ್ಲದ್ದರಿಂದ ಹೊಲಗಳ ಪೋಡಿಯಾಗುತ್ತಿಲ್ಲ. ತಂದೆಯಿಂದ ಬಂದ ಜಮೀನನ್ನು ಮಕ್ಕಳು ಹಂಚಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಜಮೀನಿನ ಮೇಲೆ ಕೃಷಿ ಸಾಲ ಪಡೆಯಲು ಸಹ ಸಾಧ್ಯವಿಲ್ಲದ ಪರಸ್ಥಿತಿಯಿದೆ.

    ಪೌರತ್ವ ತಿದ್ದುಪಡಿ ಕಾಯಿದೆ ಜಾರಿಯಿಂದ ನಿರಾಶ್ರಿತ ಯೋಜನೆ ಬಳಿಕ ಬಂದ ಬಾಂಗ್ಲಾ ವಲಸಿಗರು ಪಾರಾಗಿದ್ದಾರೆ. ಆದರೆ ಈಗಾಗಲೇ ಪೌರತ್ವ ಪಡೆದು ವಾಸಿಸುತ್ತಿರುವ ವಲಸಿಗ ನಮಶೂದ್ರ ಜನಾಂಗದವರು ಜಾತಿ ಪ್ರಮಾಣ ಪತ್ರವಿಲ್ಲದೆ ಪರಿತಪಿಸುತ್ತಿದ್ದಾರೆ. ನಮಗೇ ಎಸ್‍ಸಿ ಪ್ರಮಾಣ ಪತ್ರ ನೀಡಿ ಅಂತ ಸರ್ಕಾರಕ್ಕೆ ಮನವಿ ಸಲ್ಲಿಸುತ್ತಲೇ ಇದ್ದಾರೆ.