Tag: Caste Politics

  • ರಾಜ್ಯ ಕಾಂಗ್ರೆಸ್‍ನಲ್ಲಿ ಶುರುವಾಯ್ತಾ ಜಾತಿ ರಾಜಕಾರಣದ ಮತ್ತೊಂದು ಸಮರ..?

    ರಾಜ್ಯ ಕಾಂಗ್ರೆಸ್‍ನಲ್ಲಿ ಶುರುವಾಯ್ತಾ ಜಾತಿ ರಾಜಕಾರಣದ ಮತ್ತೊಂದು ಸಮರ..?

    – ಕೂಡು ಒಕ್ಕಲಿಗ, ಲಿಂಗಾಯತ ಹೊಸ ಗೊಂದಲ

    ಬೆಂಗಳೂರು: ಉತ್ತರ ಕರ್ನಾಟಕ ಭಾಗದ ಕೂಡು ಒಕ್ಕಲಿಗ ಸಮುದಾಯ ಒಕ್ಕಲಿಗರೋ? ಲಿಂಗಾಯತರೋ? ಎಂಬ ಹೊಸ ಗೊಂದಲ ರಾಜ್ಯ ಕಾಂಗ್ರೆಸ್‍ನಲ್ಲಿ ಹೊಸ ಜಾತಿ ರಾಜಕಾರಣದ ಜಟಾಪಟಿಗೆ ಕಾರಣವಾಗಿದೆ.

    ಶನಿವಾರ ಡಿ.ಕೆ.ಶಿವಕುಮಾರ್ ಉತ್ತರ ಕರ್ನಾಟಕ ಭಾಗದ ಕೂಡು ಒಕ್ಕಲಿಗ ಮುಖಂಡರನ್ನು ಭೇಟಿ ಮಾಡಿದ್ದರು. ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಕೂಡು ಒಕ್ಕಲಿಗ ಮುಖಂಡರನ್ನು ಡಿಕೆಶಿ ಬಳಿ ಕರೆದುಕೊಂಡು ಹೋಗಿದ್ದರು. ಚಿನ್ನಪ್ಪರೆಡ್ಡಿ ಆಯೋಗದ ವರದಿಯಂತೆ ನಮ್ಮನ್ನು ಒಕ್ಕಲಿಗ 3ಂ ಸೇರಲು ಸಹಕಾರ ನೀಡುವಂತೆ ಡಿಕೆಶಿಗೆ ನಿಯೋಗ ಮನವಿ ಮಾಡಿತ್ತು. ಇದರ ಮಾಹಿತಿ ತಿಳಿಯುತ್ತಿದ್ದಂತೆ ಪ್ರಿಯಾಂಕ್ ಖರ್ಗೆಗೆ ಕರೆ ಮಾಡಿದ ಮಾಜಿ ಸಚಿವ ಎಂ.ಬಿ.ಪಾಟೀಲ್, ಡಿಕೆಶಿ ಬಳಿ ಕೂಡು ಒಕ್ಕಲಿಗರ ನಿಯೋಗ ಕರೆದೊಯ್ದಿದ್ದೇಕೆ? ಉತ್ತರ ಕರ್ನಾಟಕ ಭಾಗದಲ್ಲಿ 15 ಲಕ್ಷಕ್ಕೂ ಹೆಚ್ಚು ಸಂಖ್ಯೆಯಲ್ಲಿರುವ ಕೂಡು ಒಕ್ಕಲಿಗರು ಲಿಂಗಾಯತರ ಉಪ ಪಂಗಡ ಎಂದು ಎಂಬಿಪಿ ಪ್ರಿಯಾಂಕ ಖರ್ಗೆ ವಿರುದ್ಧ ಅಸಮಧಾನ ಹೊರ ಹಾಕಿದ್ದಾರೆ. ಇದನ್ನೂ ಓದಿ: ವ್ಯಾಕ್ಸಿನೇಟ್ ಕರ್ನಾಟಕ ಸ್ಪರ್ಧೆಯ ವಿಜೇತರಿಗೆ ಕೆಪಿಸಿಸಿಯಿಂದ ಬಹುಮಾನ ವಿತರಣೆ

    ಈ ಹಿನ್ನೆಲೆಯಲ್ಲಿ ಇಂದು ಕೂಡು ಒಕ್ಕಲಿಗ ಮುಖಂಡರ ನಿಯೋಗವನ್ನು ಪ್ರಿಯಾಂಕ್ ಖರ್ಗೆ ಎಂ.ಬಿ.ಪಾಟೀಲ್ ನಿವಾಸಕ್ಕೆ ಕರೆತಂದಿದ್ದಾರೆ. ಕೂಡು ಒಕ್ಕಲಿಗರು ಲಿಂಗಾಯತ ಸಮುದಾಯದ ಜೊತೆ ಗುರುತಿಸಿಕೊಂಡರೆ ಮುಂದೆ 2ಂ ಮೀಸಲಾತಿ ಸಿಕ್ಕಾಗ ಸಹಾಯವಾಗಲಿದೆ ಎಂದು ಮುಖಂಡರ ಮನವೊಲಿಸುವ ಪ್ರಯತ್ನವನ್ನು ಎಂಬಿಪಿ ಮಾಡಿದ್ದಾರೆ. ಕೂಡು ಒಕ್ಕಲಿಗ ಸಮುದಾಯದ ಐಡೆಂಟಿಟಿ ಗೊಂದಲದ ನಡುವೆ ಡಿಕೆಶಿ ವರ್ಸಸ್ ಎಂ.ಬಿ.ಪಾಟೀಲ್ ನಡುವೆ ಶೀತಲ ಸಮರ ಆರಂಭವಾದಂತಿದೆ.

    ಕೂಡು ಒಕ್ಕಲಿಗರನ್ನು ಒಕ್ಕಲಿಗರ ಪಟ್ಟಿಗೆ ಸೇರಿಸಲು ಡಿಕೆಶಿ ಕಸರತ್ತು ನಡೆಸಿದ್ದಾರೆ. ಉತ್ತರ ಕರ್ನಾಟಕ ಭಾಗದ ಕೂಡು ಒಕ್ಕಲಿಗರು ಲಿಂಗಾಯತರ ಉಪ ಪಂಗಡ ಎಂದು ಎಂ.ಬಿ.ಪಾಟೀಲ್ ಪಟ್ಟು ಹಿಡಿದಿದ್ದಾರೆ. ಕಾಂಗ್ರೆಸ್ ಆಂತರಿಕ ವಲಯದಲ್ಲಿ ಇದೀಗ ಒಕ್ಕಲಿಗ, ಲಿಂಗಾಯತ ಹೊಸ ರಾಜಕೀಯ ಜಟಾಪಟಿ ಆರಂಭವಾಗಿದೆ.

  • ಸಿದ್ದರಾಮಯ್ಯ ಜಾತಿ ಸಮಾವೇಶಕ್ಕೆ ಮುಹೂರ್ತ ಫಿಕ್ಸ್‌

    ಸಿದ್ದರಾಮಯ್ಯ ಜಾತಿ ಸಮಾವೇಶಕ್ಕೆ ಮುಹೂರ್ತ ಫಿಕ್ಸ್‌

    ಬೆಂಗಳೂರು: ಮಾಜಿ ಸಿಎಂ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ ಜಾತಿ ಸಮಾವೇಶಕ್ಕೆ ಮುಹೂರ್ತ ನಿಗದಿಯಾಗಿದ್ದು, ಮಾರ್ಚ್ 21 ರಂದು ಕಲಬುರಗಿಯಲ್ಲಿ ಕುರುಬ ಸಮಾವೇಶ ನಡೆಯಲಿದೆ.

    ರಾಜ್ಯದಲ್ಲಿ ಒಟ್ಟು ನಾಲ್ಕು ಸಮಾವೇಶ ನಡೆಸಲು ತೀರ್ಮಾನ ಮಾಡಲಾಗಿದ್ದು, ಈ ಹಿನ್ನೆಲೆಯಲ್ಲಿ ಮೊದಲ ಸಮಾವೇಶ ಕಲಬುರಗಿಯಲ್ಲಿ ನಡೆಯಲಿದೆ. ಈ  ಸಮಾವೇಶದಲ್ಲಿ ಗ್ರಾಮ ಪಂಚಾಯತ್‌ ಚುನಾವಣೆಯಲ್ಲಿ ಗೆದ್ದ ಕುರುಬ ಸಮುದಾಯದವರಿಗೆ ಸನ್ಮಾನ ನಡೆಯಲಿದೆ.

    ಈ ಮೊದಲು ಮಾರ್ಚ್‌ 13 ರಂದು ಸಮಾವೇಶದ ದಿನಾಂಕ ನಿಗದಿಯಾಗಿತ್ತು. ಆದರೆ ಮಾರ್ಚ್‌ 13 ಅಮಾವಾಸ್ಯೆ ಇರುವ ಮಾರ್ಚ್‌ 21ಕ್ಕೆ ಸಮಾವೇಶ ನಡೆಸಲು ತೀರ್ಮಾನಿಸಲಾಗಿದೆ.

    ಕಲಬುರಗಿಯಿಂದ ಬಂದಿದ್ದ ಕುರುಬ ಸಮುದಾಯದವರು ಮಾರ್ಚ್‌ 13 ರಂದು ಅಮಾವಾಸ್ಯೆ ಇರುವ ಕಾರಣ ಆ ದಿನ ಸಮಾವೇಶ ನಡೆಸುವುದು ಬೇಡ ಎಂದು ಸಿದ್ದರಾಮಯ್ಯ ಅವರನ್ನು ಮನವೊಲಿಕೆ ಮಾಡಿದ ಬಳಿಕ ದಿನಾಂಕ ಮುಂದೂಡಿಕೆಯಾಗಿದೆ.

    ರಾಜ್ಯದಲ್ಲಿ ಮೀಸಲಾತಿ ಹೋರಾಟ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ ಸಿದ್ದರಾಮಯ್ಯ ಮಂಗಳವಾರ ದೆಹಲಿಗೆ ತೆರಳಿ ರಾಹುಲ್‌ ಗಾಂಧಿಯ ಜೊತೆ ಮಾತುಕತೆ ನಡೆಸಿದ್ದರು. ಈ ವೇಳೆ ಮಾರ್ಚ್‍ನಿಂದಲೇ ಪಕ್ಷದ ನೇತೃತ್ವದಲ್ಲಿ ಬೃಹತ್ ಜಾತಿ ಸಮಾವೇಶಕ್ಕೆ ಸಿದ್ಧತೆ ಮಾಡುವ ಬಗ್ಗೆ ಚರ್ಚೆ ನಡೆಸಿ 1 ತಿಂಗಳ ಸಮಯ ಕೇಳಿದ್ದರು.

    ಜಾತಿ ಸಮಾವೇಶಕ್ಕೂ ಮುನ್ನ ತಮ್ಮದೇ ಸರ್ಕಾರದಲ್ಲಿ ಸಿದ್ಧವಾಗಿದ್ದ ಜಾತಿಗಣತಿ ವರದಿ ಬಿಡುಗಡೆ ಮಾಡುವಂತೆ ಸರ್ಕಾರದ ವಿರುದ್ಧ ಹೋರಾಟ ತೀವ್ರಗೊಳಿಸಲು ಸಿದ್ದರಾಮಯ್ಯ ಮುಂದಾಗಿದ್ದಾರೆ ಎನ್ನಲಾಗುತ್ತಿದೆ.

    ಜಾತಿಗಣತಿ ವರದಿ ಬಹಿರಂಗವಾದರೆ ರಾಜ್ಯದಲ್ಲಿ ಹೊಸ ಜಾತಿ ಸಮೀಕರಣ ಲೆಕ್ಕಾಚಾರವಾಗುತ್ತದೆ. ಜಾತಿಗಣತಿ ವರದಿ ಪ್ರಕಾರ ರಾಜ್ಯದಲ್ಲಿ ಅಹಿಂದ ವರ್ಗಗಳ ಜನಸಂಖ್ಯೆಯೇ ಹೆಚ್ಚು ಎಂಬ ವಿಚಾರ ಈಗಾಗಲೇ ಸೋರಿಕೆಯಾಗಿದೆ. ಹೀಗಾಗಿ ಜಾತಿಗಣತಿ ಆಧರಿಸಿಯೇ ಜಾತಿ ಸಮಾವೇಶದ ರೂಪುರೇಷೆ ನಿರ್ಧಾರವನ್ನು ಸಿದ್ದರಾಮಯ್ಯ ಮಾಡಿದ್ದಾರೆ.

    ಇಲ್ಲಿಯವರೆಗೂ ಸಿದ್ದರಾಮಯ್ಯ ಕುರುಬ ಸಮುದಾಯದ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಆದರೆ ಮೀಸಲಾತಿ ಹೋರಾಟದಲ್ಲಿ ಸಿದ್ದರಾಮಯ್ಯ ಅನುಪಸ್ಥಿತಿ ಎದ್ದು ಕಾಣುತ್ತಿದೆ. ಬೆಂಗಳೂರಿನಲ್ಲಿ ನಡೆದ ಸಮಾವೇಶದಲ್ಲೂ ಈಶ್ವರಪ್ಪ ಮತ್ತು ವಿಶ್ವನಾಥ್‌ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದರು.

  • ಸೋತ ಕಾಂಗ್ರೆಸ್ಸಿಗೆ ಜಿಎಲ್‍ಡಿ ಸೂತ್ರ ಆಸರೆ

    ಸೋತ ಕಾಂಗ್ರೆಸ್ಸಿಗೆ ಜಿಎಲ್‍ಡಿ ಸೂತ್ರ ಆಸರೆ

    ಬೆಂಗಳೂರು: ಸದ್ಯಕ್ಕೆ ದಿಕ್ಕು ಕಾಣದಂತಾದ ರಾಜ್ಯ ಕಾಂಗ್ರೆಸನ್ನು ಮತ್ತೆ ಹಳಿಗೆ ತರಲು ಜಿಎಲ್‍ಡಿ ಸೂತ್ರಕ್ಕೆ ಮೊರೆ ಹೋಗುವ ಬಗ್ಗೆ ರಾಜ್ಯ ಕಾಂಗ್ರೆಸ್ ವಲಯದಲ್ಲಿ ಗಂಭೀರ ಚರ್ಚೆ ನಡೆಯತೊಡಗಿದೆ.

    ಜಿಎಲ್‍ಡಿ ಸೂತ್ರ ಬೇರೇನು ಅಲ್ಲ. ಗೌಡ, ಲಿಂಗಾಯತ ಹಾಗೂ ದಲಿತ ಸೂತ್ರ. ವಿಪಕ್ಷ ನಾಯಕನ ಸ್ಥಾನ, ಸಿಎಲ್‍ಪಿ ನಾಯಕನ ಸ್ಥಾನ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನ ಹೀಗೆ ಮೂರು ಪ್ರಮುಖ ಹುದ್ದೆಗಳು ಖಾಲಿ ಇವೆ.

    ಒಕ್ಕಲಿಗ, ಲಿಂಗಾಯತ ಹಾಗೂ ದಲಿತ ಕಾಂಬಿನೇಷನಲ್ಲಿ ಈ ಸ್ಥಾನಗಳನ್ನು ತುಂಬಿದರೆ ರಾಜ್ಯದಲ್ಲಿ ನೆಲೆ ಕಳೆದುಕೊಳ್ಳುವ ಭೀತಿಯಲ್ಲಿರುವ ಕಾಂಗ್ರೆಸ್ಸಿಗೆ ಸ್ವಲ್ಪಮಟ್ಟಿಗಾದರೂ ಚೈತನ್ಯ ಕೊಡಬಹುದು ಎನ್ನುವುದು ಕೈ ನಾಯಕರ ಲೆಕ್ಕಾಚಾರ.

    ಹಿಂದುಳಿದ ವರ್ಗದ ನಾಯಕ ಸಿದ್ದರಾಮಯ್ಯ ಅಹಿಂದ ಮತ ಬ್ಯಾಂಕ್ ಮೇಲೆ ಹಿಡಿತ ಹೊಂದಿದರೂ ತಮ್ಮ ಪಕ್ಷದ ಅಭ್ಯರ್ಥಿಗಳನ್ನ ಗೆಲ್ಲಿಸಿಕೊಳ್ಳಲು ಸಫಲರಾಗಿಲ್ಲ. ಆದ್ದರಿಂದ ರಾಜ್ಯ ಕೈ ನಾಯಕರು ಅನಿವಾರ್ಯವಾಗಿ ಸಾಮೂಹಿಕ ನಾಯಕತ್ವದ ಅಡಿಯಲ್ಲಿ ಜಿಎಲ್‍ಡಿ ಅಸ್ತ್ರದ ಮೊರೆ ಹೋಗುವ ಸಾಧ್ಯತೆಯೇ ಹೆಚ್ಚಿದೆ. ಇದನ್ನೂ ಓದಿ: ಸಚಿವ ಸ್ಥಾನ ಸಿಗುವುದು ಪಕ್ಕಾ, ಆದ್ರೆ ಲೆಕ್ಕನೇ ಬೇರೆ – ಯಾರಿಗೆ ಯಾವ ಖಾತೆ ಮೇಲೆ ಕಣ್ಣು

    ಜಿಎಲ್‍ಡಿ ಪ್ರಸ್ತಾಪ ರಾಜ್ಯ ಕಾಂಗ್ರೆಸ್ ನಾಯಕರಿಂದ ಹೈಕಮಾಂಡ್ ಅಂಗಳಕ್ಕೆ ತಲುಪಿದೆ. ಸಾಮೂಹಿಕ ನಾಯಕತ್ವದ ಮೊರೆ ಹೋಗುವ ಬಗ್ಗೆ ಆಸಕ್ತಿ ಹೊಂದಿರುವ ಕಾಂಗ್ರೆಸ್ ಹೈಕಮಾಂಡ್ ಇದೆ ಸೂತ್ರವನ್ನು ಒಪ್ಪಿಕೊಳ್ಳುವ ಸಾಧ್ಯತೆಯೆ ಹೆಚ್ಚಿದೆ ಎನ್ನಲಾಗುತ್ತಿದೆ.

    ಸೋಮವಾರ ಮಾಧ್ಯಮಗಳ ಜೊತೆ ಮಾತನಾಡಿದ ಸಿದ್ದರಾಮಯ್ಯ, ಮತದಾರರು ನೀಡಿರುವ ತೀರ್ಪನ್ನು ನಾನು ಒಪ್ಪಿಕೊಂಡಿದ್ದೇನೆ. ಕುದುರೆ ವ್ಯಾಪಾರಕ್ಕೆ ಒಳಗಾಗಿದ್ದವರಿಗೆ ಜನರು ಶಿಕ್ಷೆ ನೀಡುತ್ತಾರೆಂಬ ನಿರೀಕ್ಷೆ ಇತ್ತು. ಇಂದು ನನ್ನ ನಿರೀಕ್ಷೆ ಹುಸಿಯಾಗಿದ್ದು, ಜನಾದೇಶವನ್ನು ಒಪ್ಪಿಕೊಂಡಿದ್ದೇನೆ. ಕಾಂಗ್ರೆಸ್ ಶಾಸಕಾಂಗ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ. ರಾಜೀನಾಮೆ ಪತ್ರವನ್ನು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯವರಿಗೆ ಸಲ್ಲಿಸಿದ್ದೇನೆ ಎಂದು ಹೇಳಿದರು.

  • ಉಪಚುನಾವಣೆ ಸೋಲು – ಜಾತಿ ಸಮೀಕರಣ ಸೂತ್ರದ ಮೊರೆಹೋದ ಕಾಂಗ್ರೆಸ್

    ಉಪಚುನಾವಣೆ ಸೋಲು – ಜಾತಿ ಸಮೀಕರಣ ಸೂತ್ರದ ಮೊರೆಹೋದ ಕಾಂಗ್ರೆಸ್

    ಬೆಂಗಳೂರು: ಉಪಚುನಾವಣೆ ಸೋಲಿನ ಬಳಿಕ ಕಾಂಗ್ರೆಸ್‍ನಲ್ಲಿ ಹೊಸ ಲೆಕ್ಕಾಚಾರ ಆರಂಭಗೊಂಡಿದೆ. ಆಗಿರುವ ನಷ್ಟ ಭರ್ತಿಗೆ ಹೊಸ ಸೂತ್ರ ಹುಡುಕುತ್ತಿದೆ.

    ಮುಂದೆ ನಡೆಯಲಿರುವ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಜಾತಿ ಸಮೀಕರಣ ಸೂತ್ರದ ಮೊರೆ ಹೋಗಿದೆ. ಹೊಸ ಜಾತಿ ಸಮೀಕರಣಕ್ಕೆ ಕಾಂಗ್ರೆಸ್ ಹೈಕಮಾಂಡ್ ಮುಂದಾಗುತ್ತಿದೆ ಎನ್ನುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ.

    ಕಾಂಗ್ರೆಸ್ ಮೂರು ಪ್ರಮುಖ ಸ್ಥಾನಗಳು ಖಾಲಿ ಉಳಿದಿವೆ. ಶಾಸಕಾಂಗ ಪಕ್ಷದ ನಾಯಕ ಸ್ಥಾನ, ವಿರೋಧ ಪಕ್ಷದ ನಾಯಕ ಸ್ಥಾನ, ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ದೊಡ್ಡ ಸಮುದಾಯದ ನಾಯಕರಿಗೆ ಮಣೆ ಹಾಕಲು ಮುಂದಾಗುತ್ತಿದೆ.

    ಒಕ್ಕಲಿಗ, ಲಿಂಗಾಯತ, ದಲಿತ ಸಮುದಾಯ ನಾಯಕರಿಗೆ ಹುದ್ದೆ ಸಿಗುವ ಸಾಧ್ಯತೆಯಿದೆ. ಈ ಜಾತಿ ಸಮೀಕರಣ ಮೂಲಕ ಹೊಸ ಚೈತನ್ಯ ಕಂಡುಕೊಳ್ಳಲು ಕಾಂಗ್ರೆಸ್ ಈ ಮೂಲಕ ತಂತ್ರ ಹೆಣೆದಿದೆ. ಇದನ್ನೂ ಓದಿ: ಸಚಿವ ಸ್ಥಾನ ಸಿಗುವುದು ಪಕ್ಕಾ, ಆದ್ರೆ ಲೆಕ್ಕನೇ ಬೇರೆ – ಯಾರಿಗೆ ಯಾವ ಖಾತೆ ಮೇಲೆ ಕಣ್ಣು

    ಸೋಮವಾರ ಮಾಧ್ಯಮಗಳ ಜೊತೆ ಮಾತನಾಡಿದ ಸಿದ್ದರಾಮಯ್ಯ, ಮತದಾರರು ನೀಡಿರುವ ತೀರ್ಪನ್ನು ನಾನು ಒಪ್ಪಿಕೊಂಡಿದ್ದೇನೆ. ಕುದುರೆ ವ್ಯಾಪಾರಕ್ಕೆ ಒಳಗಾಗಿದ್ದವರಿಗೆ ಜನರು ಶಿಕ್ಷೆ ನೀಡುತ್ತಾರೆಂಬ ನಿರೀಕ್ಷೆ ಇತ್ತು. ಇಂದು ನನ್ನ ನಿರೀಕ್ಷೆ ಹುಸಿಯಾಗಿದ್ದು, ಜನಾದೇಶವನ್ನು ಒಪ್ಪಿಕೊಂಡಿದ್ದೇನೆ. ಕಾಂಗ್ರೆಸ್ ಶಾಸಕಾಂಗ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ. ರಾಜೀನಾಮೆ ಪತ್ರವನ್ನು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯವರಿಗೆ ರಾಜೀನಾಮೆ ನೀಡಿದ್ದೇನೆ ಎಂದು ಹೇಳಿದರು.

  • ಹೆಚ್‍ಡಿಕೆ ರಾಜಕೀಯ ನಿವೃತ್ತಿಯ ಮಾತು

    ಹೆಚ್‍ಡಿಕೆ ರಾಜಕೀಯ ನಿವೃತ್ತಿಯ ಮಾತು

    ಹಾಸನ: ಮಾಜಿ ಸಿಎಂ ಹೆಚ್.ಡಿ.ಕು`ಮಾರಸ್ವಾಮಿ ರಾಜಕೀಯ ನಿವೃತ್ತಿಯ ಬಗ್ಗೆ ಮಾತನಾಡಿದ್ದಾರೆ.

    ಇಂದು ಕೆ.ಆರ್.ಪೇಟೆಗೆ ತೆರಳೋ ಮಾರ್ಗ ಮಧ್ಯೆ ಹಾಸನಕ್ಕೆ ಆಗಮಿಸಿದ್ದ ಮಾಜಿ ಸಿಎಂ ಕುಮಾರಸ್ವಾಮಿ ಸುದ್ದಿಗಾರರೊಂದಿಗೆ ಮಾತನಾಡಿ, ದೇವರು ಕೊಟ್ಟ ಅವಕಾಶದಿಂದ ಎರಡು ಬಾರಿ ಸಿಎಂ ಆಗಿದ್ದೇನೆ. ನಾನು ಆಕಸ್ಮಿಕವಾಗಿ ಈ ರಾಜ್ಯದ ಸಿಎಂ ಆಗಿ ಬಂದವನು. ಇವತ್ತು ಒಳ್ಳೆಯವರಿಗೆ ರಾಜಕಾರಣ ಇಲ್ಲ. ಜಾತಿ ಪ್ರಭಾವದಿಂದ ರಾಜಕೀಯ ನಡೆಯುತ್ತಿದೆ. ಅಧಿಕಾರದ ಅಪೇಕ್ಷೆಯಿಂದ ಕುತಂತ್ರದ ರಾಜಕೀಯ ನಡೆಯುತ್ತಿದೆ. ಈ ರಾಜಕೀಯ ವ್ಯವಸ್ಥೆಯಿಂದ ನಾನೇ ಹಿಂದೆ ಸರಿಯಬೇಕು ಎಂದು ಅಂದುಕೊಂಡಿದ್ದೆ. ನನಗೆ ರಾಜಕೀಯದಲ್ಲಿ ಮುಂದುವರಿಯಲೇ ಬೇಕೆಂಬ ಹುಚ್ಚಿಲ್ಲ ಎಂದು ರಾಜಕೀಯ ನಿವೃತ್ತಿಯ ಬಗ್ಗೆ ಮಾತನಾಡಿದರು.

    ರಾಜ್ಯದಲ್ಲಿ ಏನೇನು ನಡೆಯುತ್ತಿದೆ ಎಂದು ಜನರು ನೋಡಿದ್ದು, ಅವರೇ ತೀರ್ಮಾನ ಮಾಡುತ್ತಾರೆ. ನಮ್ಮದು ಪಾಪದ ಸರ್ಕಾರ ಇತ್ತು ಈಗ ಪವಿತ್ರದ ಸರ್ಕಾರ ನಡೆಸುತ್ತಿದ್ದಾರೆ. ನಡೆಸಲಿ ಕಾದು ನೋಡೋಣ, ಯಾರು ಯಾರನ್ನು ಪವಿತ್ರ ಮಾಡುತ್ತಾರೆ. ನಾನು ಮಾತನಾಡೋಕೆ ಏನಿದೆ, ಏನೂ ಮಾತನಾಡಲ್ಲ ಎನ್ನುತ್ತಲೇ ಕುಮಾರಸ್ವಾಮಿ ಅವರು ಸರ್ಕಾರವನ್ನು ಕುಟುಕಿದರು.