Tag: Casteism

  • ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ಜಾತೀಯತೆ ನಿರ್ಮೂಲನೆಯಾಗಿಲ್ಲ: ಸುಪ್ರೀಂ ಬೇಸರ

    ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ಜಾತೀಯತೆ ನಿರ್ಮೂಲನೆಯಾಗಿಲ್ಲ: ಸುಪ್ರೀಂ ಬೇಸರ

    ನವದೆಹಲಿ: ಜಾತಿ ಪ್ರೇರಿತ ಹಿಂಸಾಚಾರದ ಘಟನೆಗಳು ಭಾರತಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳಾದರೂ ಜಾತೀಯತೆ ನಿರ್ಮೂಲನೆಯಾಗಿಲ್ಲ ಎಂಬುದನ್ನು ತೋರಿಸುತ್ತಿವೆ. ನಾಗರಿಕ ಸಮಾಜವು, ಜಾತಿಯ ಹೆಸರಿನಲ್ಲಿ ನಡೆಯುವ ಘೋರ ಅಪರಾಧಗಳ ಬಗ್ಗೆ ಪ್ರತಿಕ್ರಿಯಿಸುವ ಹಾಗೂ ತೀವ್ರ ಖಂಡನೆ ವ್ಯಕ್ತಪಡಿಸುವ ಕಾಲ ಬಂದಿದೆ ಎಂದು ಸುಪ್ರೀಂ ಕೋರ್ಟ್‌ ಅಭಿಪ್ರಾಯಪಟ್ಟಿದೆ.

    1991ರಲ್ಲಿ ಉತ್ತರ ಪ್ರದೇಶದಲ್ಲಿ ನಡೆದ ಮರ್ಯಾದೆಗೇಡು ಹತ್ಯೆ (ಮಹಿಳೆ ಸೇರಿದಂತೆ ಮೂವರ ಹತ್ಯೆ) ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ನಡೆಸಿತು. ಮಾರ್ಯಾದೆಗೇಡು ಹತ್ಯೆಗಳನ್ನು ತಡೆಯಲು ಕಠಿಣ ಕಾನೂನು ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸುಪ್ರೀಂ ಕೆಲವು ನಿರ್ದೇಶಗಳನ್ನು ನೀಡಿದೆ. ಈ ನಿರ್ದೇಶನಗಳನ್ನು ಯಾವುದೇ ವಿಳಂಬವಿಲ್ಲದೇ ಕೈಗೊಳ್ಳಬೇಕು ಎಂದು ಖಡಕ್‌ ಸೂಚನೆ ನೀಡಿದೆ. ಇದನ್ನೂ ಓದಿ: ತ್ರಿಪುರ ಸ್ಥಳೀಯ ಸಂಸ್ಥೆಗಳ ಚುನಾವಣೆ: 334ಕ್ಕೆ 329 ಸ್ಥಾನಗಳಲ್ಲಿ ಬಿಜೆಪಿ ಗೆಲುವು, ಎಎಂಸಿಯಲ್ಲಿ ʼಕಮಲʼ ಕ್ಲೀನ್‌ಸ್ವೀಪ್‌

    ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಲ್.ನಾಗೇಶ್ವರ ರಾವ್‌ ನೇತೃತ್ವದ ಪೀಠವು, ವಿಚಾರಣೆಗಳು ಕಳಂಕಿತವಾಗುವುದನ್ನು ತಪ್ಪಿಸಲು ಹಾಗೂ ಸತ್ಯವು ಬಲಿಪಶು ಆಗದಂತೆ ನೋಡಿಕೊಂಡು ಸಾಕ್ಷಿಗಳನ್ನು ರಕ್ಷಿಸುವಲ್ಲಿ ರಾಜ್ಯವು ನಿರ್ದಿಷ್ಟ ಪಾತ್ರವನ್ನು ವಹಿಸುತ್ತದೆ. ಕೆಲವು ಸೂಕ್ಷ್ಮ ಪ್ರಕರಣಗಳಲ್ಲಿ ರಾಜಕೀಯ ಹಸ್ತಕ್ಷೇಪ ಮತ್ತು ಹಣದ ಅಧಿಕಾರವು ನಡೆಯುವ ಸಂದರ್ಭಗಳಿರುತ್ತವೆ. ಅದಕ್ಕೆ ಅವಕಾಶ ನೀಡಬಾರದು ಎಂದು ಪ್ರತಿಪಾದಿಸಿದೆ.

    ಇಂದಿಗೂ ಪ್ರಚಲಿತದಲ್ಲಿರುವ ಜಾತಿ ಆಧಾರಿತ ಆಚರಣೆಗಳಿಂದ ಮತಾಂಧತೆ ನಿರಂತರವಾಗಿದೆ. ಇಂತಹ ಪ್ರಕರಣಗಳು, ಎಲ್ಲಾ ನಾಗರಿಕರಿಗೂ ಸಮಾನತೆ ಕಲ್ಪಿಸುವ ಸಂವಿಧಾನದ ಉದ್ದೇಶಕ್ಕೆ ಅಡ್ಡಿಯಾಗುತ್ತವೆ ಎಂದು ಕೋರ್ಟ್‌ ಬೇಸರ ವ್ಯಕ್ತಪಡಿಸಿದೆ. ಇದನ್ನೂ ಓದಿ: ಹಣದಾಸೆಗೆ ಅಂಧ ಸ್ನೇಹಿತನನ್ನ ಕೊಂದ ವ್ಯಕ್ತಿಗೆ ಜೀವಾವಧಿ ಶಿಕ್ಷೆ!

    ಇಬ್ಬರು ಯುವಕರು ಮತ್ತು ಮಹಿಳೆ ಮೇಲೆ ಸುಮಾರು 12 ಗಂಟೆಗಳ ಕಾಲ ದೈಹಿಕವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಲಾಗಿದೆ. ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳಾದರೂ ಜಾತೀಯತೆ ನಿರ್ಮೂಲನೆಯಾಗಿಲ್ಲ ಎಂಬುದನ್ನು ಈ ದೇಶದಲ್ಲಿ ನಡೆಯುತ್ತಿರುವ ಜಾತಿ ಪ್ರೇರಿತ ಹಿಂಸಾಚಾರದಂತಹ ಪ್ರಸಂಗಗಳು ನಿರೂಪಿಸುತ್ತಿವೆ ಎಂದು ನ್ಯಾಯಾಲಯ ವಿಷಾದಿಸಿದೆ.

  • ದಲಿತ ಪಂಚಾಯ್ತಿ ಅಧ್ಯಕ್ಷೆಯನ್ನು ನೆಲೆದ ಮೇಲೆ ಕೂರಿಸಿ ಸಭೆ – ಫೋಟೋ ವೈರಲ್

    ದಲಿತ ಪಂಚಾಯ್ತಿ ಅಧ್ಯಕ್ಷೆಯನ್ನು ನೆಲೆದ ಮೇಲೆ ಕೂರಿಸಿ ಸಭೆ – ಫೋಟೋ ವೈರಲ್

    – ಧ್ವಜರೋಹಣ ಮಾಡಲು ಅವಕಾಶ ನೀಡದ ಉಪಾಧ್ಯಕ್ಷ

    ಚೆನ್ನೈ: ಗ್ರಾಮ ಪಂಚಾಯಿತಿ ದಲಿತ ಮಹಿಳೆಯನ್ನು ನೆಲೆದ ಮೇಲೆ ಕೂರಿಸಿ ಸಭೆ ನಡೆಸಿರುವ ಅಮಾನವೀಯ ಘಟನೆ ಚೆನ್ನೈನ ಕಡಲೂರು ಜಿಲ್ಲೆಯ ತೆರ್ಕುಟ್ಟಿಟ್ಟೈ ಗ್ರಾಮದಲ್ಲಿ ನಡೆದಿದೆ.

    ತೆರ್ಕುಟ್ಟಿಟ್ಟೈ ಗ್ರಾಮ ಪಂಚಾಯಿತಿಯ ಅಧ್ಯಕ್ಷೆ ಎಸ್ ರಾಜೇಶ್ವರಿಯವರನ್ನು ಮೇಲ್ಜಾತಿಯ ಉಪಾಧ್ಯಕ್ಷ ಮೋಹನ್ ರಾಜನ್ ಸಭೆಯಲ್ಲಿ ಕೆಳಗೆ ಕೂರಿಸಿದ್ದಾನೆ. 2020ರ ಜುಲೈನಲ್ಲಿ ಈ ಘಟನೆ ನಡೆದಿದ್ದು, ಈಗ ಈ ಫೋಟೋಗಳು ವೈರಲ್ ಆಗಿವೆ. ಈ ಕೃತ್ಯದ ವಿರುದ್ಧ ರಾಜೇಶ್ವರಿಯವರು ಕಡಲೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

    ಜುಲೈನಲ್ಲಿ ನಡೆದ ಸಭೆಯಲ್ಲಿ ರಾಜೇಶ್ವರಿಯವರನ್ನು ಕೆಳಜಾತಿಯವರು ಎಂಬ ಕಾರಣಕ್ಕೆ ನೆಲದ ಮೇಲೆ ಕೂರಿಸಲಾಗಿದೆ. ಜೊತೆಗೆ ಉಳಿದ ಎಲ್ಲ ಪಂಚಾಯತ್ ಸದಸ್ಯರುಗಳು ಕುರ್ಚಿ ಮೇಲೆ ಕುಳಿತುಕೊಂಡಿದ್ದಾರೆ. ಇದರ ವಿರುದ್ಧ ಕ್ರಮ ತೆಗೆದುಕೊಂಡಿರುವ ಕಡಲೂರು ಜಿಲ್ಲಾಧಿಕಾರಿ, ಉಪಾಧ್ಯಕ್ಷ ಮೋಹನ್ ರಾಜನ್ ಮತ್ತು ಗ್ರಾಮ ಪಂಚಾಯಿತಿ ಕಾರ್ಯದರ್ಶಿ ವಿರುದ್ಧ ದೂರು ದಾಖಲಿಸಿಕೊಂಡಿದ್ದಾರೆ. ಜೊತೆಗೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಅಮಾನತು ಮಾಡಿ, ತನಿಖೆಗೆ ಆದೇಶ ನೀಡಿದ್ದಾರೆ.

    ಈ ಘಟನೆಯ ಬಗ್ಗೆ ಮಾತನಾಡಿರುವ ರಾಜೇಶ್ವರಿಯವರು, ಸಭೆಯ ವೇಳೆ ನಾನು ಮಾತನಾಡಬಾರದು ಎಂದು ಮೋಹನ್ ರಾಜನ್ ಅವರು ಹೇಳಿದ್ದರು. ಜೊತೆಗೆ ನೀನು ನಮ್ಮ ಜೊತೆ ಕುಳಿತುಕೊಳ್ಳಬೇಡ ನೆಲದ ಮೇಲೆ ಕುಳಿತುಕೊಳ್ಳಲು ಸೂಚಿದರು. ಗ್ರಾಮಗಳ ಸಮಸ್ಯೆ ಬಗ್ಗೆ ನಾವು ಮಾತನಾಡಿ ಪರಿಹಾರ ಕಂಡುಕೊಳ್ಳುತ್ತೇವೆ. ನೀನು ಏನೂ ಮಾತನಾಡುವುದು ಬೇಡ ಎಂದು ಹೇಳಿದ್ದರು. ನನ್ನ ಅಧ್ಯಕ್ಷೆ ಸ್ಥಾನಕ್ಕೂ ಗೌರವ ನೀಡದೆ ನನಗೆ ಅವಮಾನ ಮಾಡಿದರು ಎಂದು ಹೇಳಿದ್ದಾರೆ.

    ನಾನು ಈ ವರ್ಷದ ಜನವರಿಯಲ್ಲಿ ಅಧ್ಯಕ್ಷೆ ಸ್ಥಾನಕ್ಕೆ ಆಯ್ಕೆ ಆಗಿದ್ದೇನೆ. ಜನವರಿಯಿಂದಲೂ ನನಗೆ ಈ ರೀತಿಯ ಹಲವರು ಅವಮಾನ ಮಾಡಿದ್ದಾರೆ. ಕಳೆದ ಆಗಸ್ಟ್ 15ರಂದು ನನಗೆ ಧ್ವಜರೋಹಣ ಮಾಡಲು ಅವಕಾಶ ನೀಡಿಲ್ಲ. ನಾನು ಮಾಡಬೇಕಾದ ಧ್ವಜರೋಹಣವನ್ನು ಉಪಾಧ್ಯಕ್ಷ ಮೋಹನ್ ರಾಜನ್, ಅವರ ತಂದೆಯ ಕೈಯಲ್ಲಿ ಮಾಡಿಸಿದರು ಎಂದು ರಾಜೇಶ್ವರಿಯವರು ತಿಳಿಸಿದ್ದಾರೆ.

    ತೆರ್ಕುಟ್ಟಿಟ್ಟೈ ಪಂಚಾಯತಿ ವ್ಯಾಪ್ತಿಯಲ್ಲಿ ಆರು ವಾರ್ಡಿನ ಸದಸ್ಯರು ಇದ್ದಾರೆ. ಅವರಲ್ಲಿ ನಾಲ್ವರು ಹಿಂದೂ ಜಾತಿಗೆ ಸೇರಿದ್ದವರಾಗಿದ್ದಾರೆ ಮತ್ತು ಇಬ್ಬರು ಹಿಂದೂಳಿದ ಆದಿ-ದ್ರಾವಿಡ ಸಮುದಾಯಕ್ಕೆ ಸೇರಿದ್ದಾರೆ. ರಾಜೇಶ್ವರಿ ಅವರ ಪ್ರಕಾರ, ಇನ್ನೊಬ್ಬ ದಲಿತ ವಾರ್ಡಿನ ಸದಸ್ಯೆ ಸುಗಂತಿ ಅವರನ್ನು ಕೂಡ ಸಭೆಗಳಲ್ಲಿ ನೆಲದ ಮೇಲೆ ಕುಳಿತುಕೊಳ್ಳುವಂತೆ ಮಾಡಿದರು ಎಂದು ಹೇಳಿದ್ದಾರೆ.