Tag: catering

  • ಕೇಟರಿಂಗ್‍ಗೆ ಪ್ರತ್ಯೇಕ ಮಾರ್ಗಸೂಚಿ ಪ್ರಕಟ

    ಕೇಟರಿಂಗ್‍ಗೆ ಪ್ರತ್ಯೇಕ ಮಾರ್ಗಸೂಚಿ ಪ್ರಕಟ

    ಬೆಂಗಳೂರು: ಕೇಟರಿಂಗ್ ಮತ್ತು ಊಟ ಬಡಿಸುವವರಿಗಾಗಿ ಆರೋಗ್ಯ ಇಲಾಖೆ ಮಾರ್ಗಸೂಚಿ ಪ್ರಕಟಿಸಿದೆ. ಕೇಟರಿಂಗ್ ನೀಡುವ ಸಿಬ್ಬಂದಿ ಕಡ್ಡಾಯವಾಗಿ 15 ದಿನಕ್ಕೊಮ್ಮೆ ಕೊರೊನಾ ಪರೀಕ್ಷೆಗೆ ಒಳಗಾಗಬೇಕೆಂದು ಸೂಚಿಸಿದೆ. ಇನ್ನುಳಿದಂತೆ ಕ್ಯಾಟರಿಂಗ್, ಅಡುಗೆ ಸ್ಥಳದಲ್ಲಿ ಮಾಸ್ಕ್, ಗ್ಲೌಸ್, ಸಾಮಾಜಿಕ ಅಂತರ ಕಾಪಾಡಿಕೊಳ್ಳುವಂತೆ ಮಾರ್ಗಸೂಚಿಯಲ್ಲಿ ಹೇಳಿದೆ.

    ಮಾರ್ಗಸೂಚಿಗಳು:
    * ಅಡುಗೆ ತಯಾರಿಕಾ ಸ್ಥಳದಲ್ಲಿ ಉಗುಳುವುದು ನಿಷೇಧ.
    * ಕ್ಯಾಟರಿಂಗ್‍ನಲ್ಲಿ ಕೆಲಸ ಮಾಡುವ ಎಲ್ಲರೂ ಆರ್ ಟಿಪಿಸಿಆರ್ ಟೆಸ್ಟ್ ಕಡ್ಡಾಯ ಮಾಡಿಸಿಕೊಳ್ಳಬೇಕು.
    * ಹೈ ರಿಸ್ಕ್ ಇರುವ ವ್ಯಕ್ತಿಗಳು, ನಾನಾ ಖಾಯಿಲೆ ಬಳಲುವವರು, ಗರ್ಭಿಣಿ ಮಹಿಳೆಯರು ಇದ್ದರೆ ಹೆಚ್ಚು ನಿಗಾ ಇಡಬೇಕು
    * ಮಾಸ್ಕ್, ಸಾಮಾಜಿಕ ಅಂತರ ಕಡ್ಡಾಯ
    * ಪ್ರವೇಶದ್ವಾರ, ನಿರ್ಗಮನ ದ್ವಾರದಲ್ಲಿ ಸ್ಯಾನಿಟೈಸ್ ವ್ಯವಸ್ಥೆ ಮಾಡಬೇಕು
    * ಪಾರ್ಕಿಂಗ್ ಜಾಗ, ಹಾಲ್ ನಲ್ಲಿ ಸಾಮಾಜಿಕ ಅಂತರ ಕಾಪಾಡುವಂತೆ ನಿಗಾವಹಿಸಬೇಕು
    * ಸಾಮಾಜಿಕ ಅಂತರಕ್ಕೆ ಸರ್ಕಲ್ ರಚನೆ ಮಾಡಬೇಕು

  • ವಾಹನದಲ್ಲಿ ಕೂರೋ ವಿಷ್ಯಕ್ಕೆ ವಾಗ್ವಾದ- ತಲೆಗೆ ಪಂಚ್ ಕೊಟ್ಟು ಯುವಕನ ಕೊಲೆ

    ವಾಹನದಲ್ಲಿ ಕೂರೋ ವಿಷ್ಯಕ್ಕೆ ವಾಗ್ವಾದ- ತಲೆಗೆ ಪಂಚ್ ಕೊಟ್ಟು ಯುವಕನ ಕೊಲೆ

    – ಕ್ಲುಲ್ಲಕ ವಿಚಾರಕ್ಕೆ ಕಾಶ್ಮೀರಿ ಯುವಕನ ಹತ್ಯೆ

    ಜೈಪುರ: ತಲೆಗೆ ಪಂಚ್ ಮಾಡುವ ಮೂಲಕ ಕಾಶ್ಮೀರಿ ಯುವಕನನ್ನು ಕೊಲೆ ಮಾಡಿದ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದೆ.

    ಬಾಸಿತ್ ಅಲಿಯಾಸ್ ಮೊಯ್ದಿನ್ ಖಾನ್ ಕೊಲೆಯಾದ ಯುವಕ. ಕ್ಷುಲ್ಲಕ ಕಾರಣಕ್ಕೆ ಬಾಸಿತ್ ಹಾಗೂ ಆತನ ಸಹದ್ಯೋಗಿ ಆದಿತ್ಯ ನಡುವೆ ವಾಗ್ವಾದ ನಡೆದು ಪರಸ್ಪರ ಹಲ್ಲೆ ಮಾಡಿದ್ದರು. ಹಲ್ಲೆ ಮಾಡುವ ವೇಳೆ ಬಾಸಿತ್ ತಲೆಗೆ ಆದಿತ್ಯ ಪಂಚ್ ಮಾಡಿದ್ದಾನೆ. ಪರಿಣಾಮ ಬಾಸಿತ್ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದನು. ತಕ್ಷಣ ಆತನನ್ನು ಸವಾಯು ಮಾನಸಿಂಗ್ ಆಸ್ಪತ್ರೆಯಲ್ಲಿ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬಾಸಿತ್ ಮೃತಪಟ್ಟಿದ್ದಾನೆ.

    ಈ ಬಗ್ಗೆ ಪ್ರತಿಕ್ರಿಯಿಸಿದ ಪೊಲೀಸ್ ಕಮೀಶನರ್ ಅಶೋಕ್ ಕುಮಾರ್ ಗುಪ್ತಾ, ಬಾಸಿತ್ ಕಾಶ್ಮೀರದ ಕುಪ್ವಾಡಾ ಜಿಲ್ಲೆಯವನಾಗಿದ್ದು, ಜೈಪುರದಲ್ಲಿ ಬೇರೆ ಯುವಕರ ಜೊತೆ ಕ್ಯಾಟರಿಂಗ್ ಸ್ಟಾಫ್ ಕೆಲಸ ಮಾಡುತ್ತಿದ್ದನು. ಫೆ. 4ರಂದು ಹರ್‍ಮಾಡದ ಮೈರಿಜ್ ಗಾರ್ಡನ್‍ನಲ್ಲಿ ಕೆಲಸ ಮಾಡಲು ಬಾಸಿತ್ ಹಾಗೂ ಆದಿತ್ಯ ಹೋಗಿದ್ದರು. ಕೆಲಸ ಮುಗಿಸಿ ಹಿಂದಿರುಗುವಾಗ ವಾಹನದಲ್ಲಿ ಕೂರುವ ವಿಷಯಕ್ಕೆ ಸಂಬಂಧಿಸಿದಂತೆ ಬಾಸಿತ್ ಹಾಗೂ ಆದಿತ್ಯ ನಡುವೆ ವಾಗ್ವಾದ ನಡೆಯಿತು. ಬಳಿಕ ನೋಡನೋಡುತ್ತಿದ್ದಂತೆ ಇಬ್ಬರು ಹೊಡೆದಾಡಿಕೊಂಡಿದ್ದಾರೆ ಎಂದರು.

    ಈ ಘಟನೆಯಲ್ಲಿ ಬಾಸಿತ್‍ಗೆ ಗಂಭೀರವಾಗಿ ಗಾಯಗೊಂಡ ಬಾಸಿತ್‍ನನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆ ಫಲಕಾರಿಯಾಗದೇ ಬಾಸಿತ್ ಮೃತಪಟ್ಟಿದ್ದಾನೆ. ಹಲ್ಲೆ ನಡೆದ ನಂತರ ಬಾಸಿತ್ ಸ್ನೇಹಿತೆ ಪೊಲೀಸ್ ಠಾಣೆಗೆ ಬಂದು ದೂರು ದಾಖಲಿಸಿದ್ದು, ಪೊಲೀಸರು ಆರೋಪಿ ಆದಿತ್ಯನನ್ನು ಬಂಧಿಸಿದ್ದಾರೆ. ಮರಣೋತ್ತರ ಪರೀಕ್ಷೆ ನಡೆದ ನಂತರ ಬಾಸಿತ್ ಮೃತದೇಹವನ್ನು ಕಾಶ್ಮೀರಕ್ಕೆ ರವಾನಿಸಲಾಯಿತು ಎಂದು ಪೊಲೀಸ್ ಕಮೀಶನರ್ ಅಶೋಕ್ ಕುಮಾರ್ ಗುಪ್ತಾ ತಿಳಿಸಿದ್ದಾರೆ.

    ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಸ್ಥಳದಲ್ಲಿದ್ದ ಜನರ ವಿಚಾರಣೆ ನಡೆಸಿದ್ದಾರೆ.

  • ರೈಲಿನಲ್ಲಿ ಕೊಟ್ಟ ವೆಜ್ ಬಿರಿಯಾನಿಯಲ್ಲಿ ಸತ್ತ ಹಲ್ಲಿ!

    ರೈಲಿನಲ್ಲಿ ಕೊಟ್ಟ ವೆಜ್ ಬಿರಿಯಾನಿಯಲ್ಲಿ ಸತ್ತ ಹಲ್ಲಿ!

    ಲಕ್ನೋ: ರೈಲಿನಲ್ಲಿ ನೀಡಲಾಗುವ ಆಹಾರ ಮನುಷ್ಯರು ತಿನ್ನಲು ಯೋಗ್ಯವಾಗಿಲ್ಲ ಎಂದು ಭಾರತದ ಸಿಎಜಿ ವರದಿ ನೀಡಿದ ಒಂದು ವಾರದಲ್ಲೇ ರೈಲ್ವೆ ಅಧಿಕಾರಿಗಳು ನಿರ್ಲಕ್ಷ್ಯತನದ ಬಗ್ಗೆ ಘಟನೆಯೊಂದು ಬೆಳಕಿಗೆ ಬಂದಿದೆ.

    ಇಂದು ಬೆಳಿಗ್ಗೆ ಪೂರ್ವ ಎಕ್ಸ್ ಪ್ರೆಸ್‍ನಲ್ಲಿ ಪ್ರಯಾಣಿಕರೊಬ್ಬರಿಗೆ ನೀಡಲಾದ ಆಹಾರದಲ್ಲಿ ಸತ್ತ ಹಲ್ಲಿ ಪತ್ತೆಯಾಗಿದೆ. ಈ ಬಗ್ಗೆ ಪ್ರಯಾಣಿಕ ರೈಲ್ವೇ ಸಚಿವ ಸುರೇಶ್ ಪ್ರಭುಗೆ ಟ್ವಿಟ್ಟರ್‍ನಲ್ಲಿ ದೂರು ನೀಡಿದ್ದಾರೆ.

    ಮೊಕಾಮಾ ದಲ್ಲಿ ನಾನು ಊಟಕ್ಕೆ ಆರ್ಡರ್ ಮಾಡಿದೆ. ಅದರಲ್ಲಿ ಹಲ್ಲಿ ಪತ್ತೆಯಾಗಿದೆ. ಈ ಬಗ್ಗೆ ಟಿಟಿಇ ಹಾಗೂ ಕ್ಯಾಂಟೀನ್ ಮ್ಯಾನೇಜರ್‍ಗೆ ದೂರು ನೀಡಿ ನಂತರ ರೈಲ್ವೆ ಸಚಿವರಿಗೆ ಟ್ವೀಟ್ ಮಾಡಿದೆ ಎಂದು ಪ್ರಯಾಣಿಕ ಹೇಳಿದ್ದಾರೆ. ಉತ್ತರಪ್ರದೇಶದ ಚಾಂದೌಲಿ ಬಳಿ ಈ ಘಟನೆ ನಡೆದಿದ್ದು, ತಡವಾಗಿ ಔಷಧಿ ನೀಡಲಾಯ್ತು ಎಂದಿದ್ದಾರೆ.

    ಟ್ವೀಟ್ ಮಾಡಿದ ಬಳಿಕ ಕಾನ್‍ಪುರ್‍ನ ವಿಭಾಗೀಯ ರೈಲ್ವೆ ಮ್ಯಾನೇಜರ್ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ದಾನಾಪುರ್ ಡಿವಿಷನ್‍ನಲ್ಲಿ ಚೆಕ್ ಅಪ್ ಮಾಡಿ ಔಷಧಿ ನೀಡಲಾಗಿದೆ. ಈ ಬಗ್ಗೆ ತನಿಖೆ ನಡೆಸಿದ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ವಿಭಾಗೀಯ ರೈಲ್ವೆ ಮ್ಯಾನೇಜರ್ ಕಿಶೋರ್ ಕುಮಾರ್ ಹೇಳಿದ್ದಾರೆ.

    ಘಟನೆ ಬಗ್ಗೆ ವರದಿಯಾದ ಬಳಿಕ ಪೂರ್ವ ಎಕ್ಸ್ ಪ್ರೆಸ್‍ನ ಕೇಟರಿಂಗ್ ಒಪ್ಪಂದವನ್ನು ರೈಲ್ವೆ ಇಲಾಖೆ ರದ್ದು ಮಾಡಿದ್ದು, 48 ಗಂಟೆಗಳ ನೋಟಿಸ್ ನೀಡಿದೆ. ಪೂರ್ವ ಎಕ್ಸ್‍ಪ್ರೆಸ್‍ನ ಕೇಟರಿಂಗ್ ಒಪ್ಪಂದವನ್ನು 2014ರ ಮೇ 15ರಂದು ಆರ್‍ಕೆ ಅಸೋಸಿಯೇಟ್ಸ್‍ಗೆ 5 ವರ್ಷಗಳವರೆಗೆ ನೀಡಲಾಗಿತ್ತು. ಆದ್ರೆ ಈಗ ಒಪ್ಪಂದವನ್ನು ಅಂತ್ಯಗೊಳಿಸುತ್ತಿರುವ ಬಗ್ಗೆ ಸರಣಿ ಟ್ವೀಟ್‍ಗಳ ಮೂಲಕ ರೈಲ್ವೆ ಇಲಾಖೆ ತಿಳಿಸಿದೆ. ಈ ಕೇಟರಿಂಗ್‍ನವರಿಗೆ ಕಳೆದ ವರ್ಷ 10 ಲಕ್ಷ ರೂ. ದಂಡ ವಿಧಿಸಲಾಗಿದ್ದು, ಈ ವರ್ಷ 7.5 ಲಕ್ಷ ರೂ. ದಂಡ ವಿಧಿಸಲಾಗಿತ್ತು ಎಂದು ರೈಲ್ವೆ ಇಲಾಖೆ ಟ್ವೀಟ್‍ವೊಂದರಲ್ಲಿ ತಿಳಿಸಿದೆ.

  • ರೈಲು ಪ್ರಯಾಣಿಕರೇ ಗಮನಿಸಿ: ಟೀ-ಕಾಫಿಗೆ 7 ರೂ. ಮಾತ್ರ ನೀಡಿ, ಜಾಸ್ತಿ ಹಣ ಕೇಳಿದ್ರೆ ದೂರು ಕೊಡಿ

    ರೈಲು ಪ್ರಯಾಣಿಕರೇ ಗಮನಿಸಿ: ಟೀ-ಕಾಫಿಗೆ 7 ರೂ. ಮಾತ್ರ ನೀಡಿ, ಜಾಸ್ತಿ ಹಣ ಕೇಳಿದ್ರೆ ದೂರು ಕೊಡಿ

    ಎಕ್ಸ್ ಪ್ರೆಸ್ ರೈಲಿನಲ್ಲಿ ವೇಯ್ಟಿಂಗ್ ಟಿಕೆಟ್ ಇದ್ದರೆ ರಾಜಧಾನಿ, ಶತಾಬ್ದಿಯಲ್ಲಿ ಪ್ರಯಾಣಿಸಬಹುದು

    ನವದೆಹಲಿ: ರೈಲಿನಲ್ಲಿ ಪ್ರಯಾಣಿಸುವಾಗ ಕಾಫಿ, ತಿಂಡಿ ಹಾಗೂ ನೀರಿನ ಬಾಟಲಿಗೆ ನಿಗದಿತ ಬೆಲೆಗಿಂತ ಹೆಚ್ಚು ಹಣ ಕೇಳಿದ್ರೆ ದೂರು ನೀಡಿ ಎಂದು ರೈಲ್ವೆ ಇಲಾಖೆ ಹೇಳಿದೆ.

    ರೈಲಿನಲ್ಲಿ ಊಟ ಹಾಗೂ ನೀರಿನ ಬಾಟಲಿಗೆ ನಿಗದಿತ ಬೆಲೆಗಿಂತ ಹೆಚ್ಚಿನ ಹಣ ಪಡೆಯುತ್ತಿರುವ ಬಗ್ಗೆ ಸಾಕಷ್ಟು ದೂರುಗಳು ಬಂದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಈ ಮಾಹಿತಿ ನೀಡಿದೆ. ಕಾಫಿ, ಟೀ, ತಿಂಡಿ, ಊಟ ಹಾಗೂ ನೀರಿನ ಬಾಟಲಿಯ ಬೆಲೆ ಎಷ್ಟು ಎಂಬ ಪಟ್ಟಿಯನ್ನು ರೈಲ್ವೆ ಇಲಾಖೆ ಟ್ವಿಟ್ಟರ್‍ನಲ್ಲಿ ಹಾಕಿದ್ದು, ಕ್ಯಾಟರಿಂಗ್ ಸೇವೆ ಪಡೆದಾಗ ಬಿಲ್ ಕೇಳಿ ಎಂದು ಸೂಚಿಸಿದೆ.

    ಒಂದು ವೇಳೆ ನಿಗದಿತ ಬೆಲೆಗಿಂತ ಹೆಚ್ಚಿನ ಹಣ ಕೇಳಿದ್ರೆ ರೈಲ್ವೆ ಇಲಾಖೆಯ ಟ್ವಿಟ್ಟರ್ ಖಾತೆಗೆ ದೂರು ನೀಡಬಹುದು. ನಾವು ನಿಮಗಾಗಿ 24*7 ಕಾರ್ಯ ನಿರ್ವಹಿಸುತ್ತೇವೆ ಎಂದು ಹೇಳಿದೆ.

    ಇದರ ಜೊತೆಗೆ ಏಪ್ರಿಲ್ 1ರಿಂದ ಅನ್ವಯವಾಗುವಂತೆ ಪ್ರಯಾಣಿಕರು ಬೇರೆ ಯಾವುದೇ ಎಕ್ಸ್ ಪ್ರೆಸ್ ರೈಲಿನಲ್ಲಿ ಟಿಕೆಟ್ ಕಾಯ್ದಿರಿಸಿದ್ದರೂ ರಾಜಧಾನಿ ಹಾಗೂ ಶತಾಬ್ದಿ ಪ್ರಯಾಣಿಸುವ ಅವಕಾಶ ಸಿಗಲಿದೆ. ಈ ಹೊಸ ಯೋಜನೆಯನ್ನು ಏಪ್ರಿಲ್‍ನಿಂದ ರೈಲ್ವೆ ಇಲಾಖೆ ಜಾರಿಗೆ ತರಲಿದ್ದು, ವೇಯ್ಟಿಂಗ್ ಲಿಸ್ಟ್ ನಲ್ಲಿರುವ ಪ್ರಯಾಣಿಕರು ಅದೇ ಹಾದಿಯಲ್ಲಿ ಹೋಗುವ ಮುಂದಿನ ಬದಲಿ ರೈಲಿನಲ್ಲಿ ಕನ್ಫರ್ಮ್ ಟಿಕೆಟ್ ಪಡೆಯಬಹುದಾಗಿದೆ. ಇದಕ್ಕಾಗಿ ಟಿಕೆಟ್ ಬುಕ್ಕಿಂಗ್ ಮಾಡುವಾಗಲೇ ಪ್ರಯಾಣಿಕರು ಈ ಆಯ್ಕೆಯನ್ನು ಮಾಡಿಕೊಂಡಿರಬೇಕಾಗುತ್ತದೆ.

    ಈ ಯೋಜನೆಗೆ ವಿಕಲ್ಪ್ ಎಂದು ಹೆಸರಿಡಲಾಗಿದ್ದು, ರಾಜಧಾನಿ, ಶತಾಬ್ದಿ, ದುರಂತೊ ಹಾಗೂ ಇನ್ನಿತರೆ ರೈಲುಗಳಲ್ಲಿ ಖಾಲಿ ಬರ್ತ್‍ಗಳನ್ನು ಬಳಸಿಕೊಳ್ಳುವ ಉದ್ದೇಶದಿಂದ ಈ ಯೋಜನೆಯನ್ನು ಪರಿಚಯಿಸಲಾಗುತ್ತಿದೆ.

    ಈ ಸೌಲಭ್ಯ ಪಡೆಯೋದು ಹೇಗೆ?: ಪ್ರಯಾಣಿಕರು ಟಿಕೆಟ್ ಬುಕಿಂಗ್ ಮಾಡುವಾಗ ವಿಕಲ್ಪ್ ಸ್ಕೀಮ್ ಆಯ್ಕೆ ಮಾಡಿಕೊಂಡರೆ, ಮುಂದಿನ ಬದಲಿ ರೈಲಿನಲ್ಲಿ ಕನ್ಫರ್ಮ್ ಟಿಕೆಟ್ ಪಡೆಯುವ ಬಗ್ಗೆ ಅವರ ಮೊಬೈಲ್‍ಗೆ ಒಂದು ಸಂದೇಶ ಬರುತ್ತದೆ. ಬದಲಿ ರೈಲಿನಲ್ಲಿ ಸೀಟ್ ಸಿಕ್ಕರೆ ಅವರ ಹೆಸರು ಟಿಕೆಟ್ ಬುಕ್ ಮಾಡಿದ ರೈಲಿನ ವೇಯ್ಟಿಂಗ್ ಲಿಸ್ಟ್ ಪಟ್ಟಿಯಲ್ಲಿ ತೋರಿಸುವುದಿಲ್ಲ. ಬದಲಿ ರೈಲಿಗೆ ವರ್ಗಾಯಿಸಲಾದ ಪ್ರಯಾಣಿಕರ ಹೆಸರುಗಳ ಪಟ್ಟಿಯನ್ನು ಕನ್ಫರ್ಮ್ ಲಿಸ್ಟ್ ಹಾಗೂ ವೇಯ್ಟಿಂಗ್ ಲಿಸ್ಟ್ ಪಟ್ಟಿಯ ಜೊತೆ ಅಂಟಿಸಲಾಗುತ್ತದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ. ಈ ಸ್ಕೀಮ್‍ನಲ್ಲಿ ಪ್ರಯಾಣಿಕರಿಂದ ಹೆಚ್ಚಿನ ಹಣ ಪಡೆಯುವುದಿಲ್ಲ. ಹಾಗೂ ಟಿಕೆಟ್ ದರದಲ್ಲಿ ವ್ಯತ್ಯಾಸವಿದ್ದರೆ ಅದನ್ನು ಹಿಂದಿರುಗಿಸುವುದಿಲ್ಲ. ಈ ಸೌಲಭ್ಯ ಸದ್ಯಕ್ಕೆ ಆನ್‍ಲೈನ್‍ನಲ್ಲಿ ಟಿಕೆಟ್ ಬುಕ್ ಮಾಡುವವರಿಗೆ ಮಾತ್ರ ಲಭ್ಯವಿದ್ದು, ಸಾಫ್ಟ್ ವೇರ್ ಸಿದ್ಧವಾದ ನಂತರ ಕೌಂಟರ್‍ನಲ್ಲಿ ಟಿಕೆಟ್ ಪಡೆಯುವವರೂ ಈ ಸೌಲಭ್ಯ ಪಡೆಯಬಹುದಾಗಿದೆ.

    ಅನೇಕ ಕಾರಣಗಳಿಗಾಗಿ ಪ್ರಯಾಣಿಕರು ಟಿಕೆಟ್ ರದ್ದು ಮಾಡಿದಾಗ ಹಣ ಹಿಂದಿರುಗಿಸಲು ರೈಲ್ವೆ ಇಲಾಖೆ ವರ್ಷಕ್ಕೆ ಸುಮಾರು 75 ಸಾವಿರ ರೂ. ವ್ಯಯಿಸುತ್ತಿದೆ ಎಂದು ವರದಿಯಾಗಿದೆ.