ಕೊಪ್ಪಳ: ಗಂಗಾವತಿ ತಾಲೂಕಿನ ಆನೆಗೊಂದಿ(Anegundi) ಗ್ರಾಮದ ಕೊಸಗಿರಿ ಓಣಿಯ ಅಕ್ರಮವಾಗಿ ಗೋವಿನ ಮಾಂಸವನ್ನು(Illegal Slughter House) ಮಾರಾಟ ಮಾಡುತ್ತಿದ್ದ ಅಂಗಡಿ ಮೇಲೆ ಪೊಲೀಸರು(Police) ದಾಳಿ ನಡೆಸಿದ್ದಾರೆ.
ಗೋವಿನ ಮಾಂಸ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಗಂಗಾವತಿಯ ಗುಂಡಮ್ಮ ಕ್ಯಾಂಪ್ ನಿವಾಸಿಯಾದ ಮೊಕ್ತಿಯಾರ್ ಅಹ್ಮದ್ ಎಂದು ಗುರುತಿಸಲಾಗಿದೆ.
ಕಳೆದ ಸುಮಾರು 6 ತಿಂಗಳಿಂದ ಗ್ರಾಮದಲ್ಲಿ ಶೆಡ್ ಹಾಕಿಕೊಂಡು ಗೋವಿನ ಮಾಂಸವನ್ನು ಮಾರಾಟ ಮಾಡುತ್ತಿದ್ದನು. ಸ್ಥಳೀಯರು ನೀಡಿದ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿ ಪರಿಶೀಲನೆಯನ್ನು ನಡೆಸಿದ್ದಾರೆ.
ಪಶು ವೈದ್ಯರು ಸ್ಥಳಕ್ಕೆ ಆಗಮಿಸಿ ಮಾಂಸವನ್ನು ಪರೀಕ್ಷೆಗೆ ಪಡೆದುಕೊಂಡಿದ್ದಾರೆ. ಈ ಕುರಿತು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Live Tv
[brid partner=56869869 player=32851 video=960834 autoplay=true]
ಹಾಸನ: ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದ ವಿಚಾರಕ್ಕೆ ನಡೆದಿರುವ ಗಲಾಟೆ ಹಿನ್ನೆಲೆಯಲ್ಲಿ ನಾಲ್ವರು ಭಜರಂಗದಳದ (Bajrang Dal) ಕಾರ್ಯಕರ್ತರು ಸೇರಿ ಒಟ್ಟು ಆರು ಮಂದಿಯನ್ನು ಬಂಧಿಸಿದ್ದಾರೆ. ಹಾಸನ (Hassana) ಗ್ರಾಮಾಂತರ ಠಾಣೆಯಲ್ಲಿ ದೂರು ಮತ್ತು ಪ್ರತಿದೂರು ದಾಖಲಾಗಿವೆ.
ಅ.26 ರಂದು ಬೆಳಗ್ಗೆ ಕಣಗಲು ಮನೆ ಸಮೀಪ ಹೇಮಾವತಿ ನದಿ ದಡದ ಅರಣ್ಯ ಜಾಗದಲ್ಲಿ ಗೋಮಾಂಸ ಮಾರಾಟ ವಿಚಾರಕ್ಕೆ ಜಗಳ ನಡೆಯುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಗ್ರಾಮಾಂತರ ಠಾಣೆ ಪಿಎಸ್ಐ ಬಸವರಾಜು ಮತ್ತವರ ತಂಡ ಸ್ಥಳಕ್ಕೆ ದೌಡಾಯಿಸಿತು. ಈ ವೇಳೆ ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದ ಹಾಲೇ ಬೇಲೂರು ಗ್ರಾಮದ ಚಂದ್ರ ಅಲಿಯಾಸ್ ಕುಳ್ಳ, ಲೋಕೇಶ್ ಎಂಬುವವರನ್ನು ಬಂಧಿಸಿದ್ದರು. ಜಗಳದಲ್ಲಿ ಲೋಕೇಶ್ನ ತಲೆಗೆ ಪೆಟ್ಟಾಗಿದ್ದು, ನಂತರ ಇಬ್ಬರ ವಿರುದ್ಧ ಗೋಹತ್ಯೆ ನಿಷೇಧ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿತ್ತು. ಇದನ್ನೂ ಓದಿ: ಜುಟ್ಟು ಹಿಡಿದು ರೋಗಿಯನ್ನು ಬೆಡ್ ಮೇಲೆ ಎಳೆದೊಯ್ದ ನರ್ಸ್ – ನಡೆದಿದ್ದೇನು ಗೊತ್ತಾ?
ಲೋಕೇಶ್ ನೀಡಿದ ಹೇಳಿಕೆಯಲ್ಲಿ ದೀಪಾವಳಿ ದಿನದಂದು ಹಾಲೇ ಬೇಲೂರಿನ ಚಂದ್ರಶೆಟ್ಟಿ ಎಂಬುವರಿಂದ 11 ಸಾವಿರಕ್ಕೆ ಹಸುವೊಂದನ್ನು ಖರೀದಿಸಿ, ಅದನ್ನು ಕೊಯ್ದು ಮಾರಾಟ ಮಾಡುವ ಉದ್ದೇಶದಿಂದ ಅ.26 ರಂದು ಅರಣ್ಯದ ಹತ್ತಿರ ಕಡಿಯುತ್ತಿದ್ದರು. ಮಳಲಿ ಗ್ರಾಮದ ಭಜರಂಗದಳದ ರವಿ ಅಲಿಯಾಸ್ ಚಾರ್ಲಿ, ಶಿವು ಅಲಿಯಾಸ್ ಜಿಪ್ಪಿ ಶಿವು, ಶ್ರೀಜಿತ್, ರವಿ ಮತ್ತು ಇತರರು ಬಂದು, ನಿಮಗೆ ದನ ಕಡಿಯಲು ಪರವಾನಗಿ ಇದೆಯೇ ಎಂದು ಕೇಳಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಜಾತಿ ನಿಂದನೆ ಮಾಡಿ ಅಲ್ಲೇ ಇದ್ದ ದೊಣ್ಣೆಯಿಂದ ಇಬ್ಬರ ಮೇಲೆ ಹಲ್ಲೆ ಮಾಡಿದ್ದಾರೆ. ಅಲ್ಲದೆ ಚಂದ್ರ ಅವರ ಬೈಕ್ನ್ನು ಕಲ್ಲಿನಿಂದ ಜಖಂಗೊಳಿಸಿದರು ಎಂದು ಪೊಲೀಸ್ ಠಾಣೆಗೆ ದೂರು ನೀಡಿದ್ದ. ಈ ದೂರು ಆಧರಿಸಿ ಮಳಲಿ ಗ್ರಾಮದ ರವಿ ಅಲಿಯಾಸ್ ಚಾರ್ಲಿ, ಬಾಸರವಳ್ಳಿ ಗ್ರಾಮದ ಶಿವು ಅಲಿಯಾಸ್ ಜಿಪ್ಪಿ ಶಿವು, ಹೆಬ್ಬಸಾಲೆ ಗ್ರಾಮದ ಶ್ರೀಜಿತ್ಗೌಡ ಮತ್ತು ರವಿ ಎಂಬುವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ ಎಂದು ಎಸ್ಪಿ ಹರಿರಾಂ ಶಂಕರ್ ತಿಳಿಸಿದ್ದಾರೆ. ಇದನ್ನೂ ಓದಿ: ಬೈಕ್ ಸವಾರನೊಂದಿಗೆ ಜಗಳ – ಸಿಟ್ಟಿನಿಂದ ಜನರ ಮೇಲೆ ಕಾರು ಹರಿಸಿದ
Live Tv
[brid partner=56869869 player=32851 video=960834 autoplay=true]
ಭೋಪಾಲ್: ಗೋಹತ್ಯೆ ಮಾಡಿದ್ದಾರೆಂದು ಆರೋಪಿಸಿ ಆದಿವಾಸಿಗಳ ಮನೆಗೆ ನುಗ್ಗಿ ಗುಂಪೊಂದು ಇಬ್ಬರು ಆದಿವಾಸಿಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಹತ್ಯೆ ಮಾಡಿರುವ ಘಟನೆ ಮಧ್ಯಪ್ರದೇಶದ ಸಿಯೋನಿ ಜಿಲ್ಲೆಯಲ್ಲಿ ನಡೆದಿದೆ.
20 ಮಂದಿಯಿರುವ ಗುಂಪೊಂದು ಆದಿವಾಸಿಗಳ ಮನೆಗೆ ನುಗ್ಗಿದೆ. ನೀವು ಗೋಹತ್ಯೆ ಮಾಡಿದ್ದೀರಿ ಎಂದು ಆರೋಪಿಸಿ ಏಕಾಏಕಿ ಆದಿವಾಸಿಗಳ ಮೇಲೆ ದಾಳಿ ನಡೆಸಿದೆ. ಮಾರಣಾಂತಿಕ ಹಲ್ಲೆಗೆ ಒಳಗಾದ ಇಬ್ಬರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವಿಗೀಡಾಗಿದ್ದಾರೆ. ಮತ್ತೊಬ್ಬ ಗಂಭೀರ ಗಾಯಗೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಪೊಲೀಸ್ ಠಾಣೆಯಲ್ಲೇ ಅರೆನಗ್ನವಾಗಿ ಓಡಾಡಿದ ಹೆಡ್ಕಾನ್ಸ್ಟೇಬಲ್
ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಕಾಂಗ್ರೆಸ್ ಶಾಸಕ ಅರ್ಜುನ್ ಸಿಂಗ್ ಕಕೋಡಿಯಾ ಅವರು ಜಬಲ್ಪುರ-ನಾಗ್ಪುರ ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸಿದರು. ಈ ವೇಳೆ ಸಿಯೋನಿ ಪೊಲೀಸರು ಆದಿವಾಸಿಗಳ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕೊಲೆ ಪ್ರಕರಣ ದಾಖಲಾಗಿದೆ. ಪೊಲೀಸ್ ತಂಡಗಳು ಆರೋಪಿಗಳಿಗಾಗಿ ಶೋಧ ನಡೆಸುತ್ತಿವೆ. ಆರೋಪಿಗಳಲ್ಲಿ ಕೆಲವರ ಹೆಸರು (ದೂರಿನಲ್ಲಿ) ಮತ್ತು ಇನ್ನೂ ಕೆಲವರು ಗುರುತು ಪತ್ತೆಯಾಗಿಲ್ಲ. ಎರಡು-ಮೂರು ಶಂಕಿತರನ್ನು ವಶಕ್ಕೆ ತೆಗೆದುಕೊಂಡಿದ್ದೇವೆ. ಸುಮಾರು 12 ಕೆಜಿ ಮಾಂಸ ಸಂತ್ರಸ್ತರ ಮನೆಯಲ್ಲಿ ಪತ್ತೆಯಾಗಿದೆ ಎಂದು ಎಸ್ಪಿ ಮಾರವಿ ತಿಳಿಸಿದ್ದಾರೆ. ಇದನ್ನೂ ಓದಿ: ರಾಹುಲ್ ಮದುವೆಯಲ್ಲಿ ಭಾಗವಹಿಸಿದ್ರೆ ಸಂಘಿಗಳಿಗೆ ಭಯ ಯಾಕೆ: ಕಾಂಗ್ರೆಸ್ ಪ್ರಶ್ನೆ
ಈ ಘಟನೆಯ ಕುರಿತು ಉನ್ನತ ಮಟ್ಟದ ತನಿಖೆಗೆ ಸೂಚಿಸುವ ಮೂಲಕ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ನಾನು ಸರ್ಕಾರವನ್ನು ಒತ್ತಾಯಿಸುತ್ತೇನೆ. ಸಂತ್ರಸ್ತರ ಕುಟುಂಬಗಳಿಗೆ ನೆರವು ನೀಡಬೇಕು. ಗಾಯಗೊಂಡಿರುವ ವ್ಯಕ್ತಿಗೆ ಸರ್ಕಾರ ಚಿಕಿತ್ಸೆ ವೆಚ್ಚ ಭರಿಸಬೇಕು ಎಂದು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಒತ್ತಾಯಿಸಿದ್ದಾರೆ.
ಮಂಗಳೂರು: ರಾಜ್ಯದಲ್ಲಿ ಗೋ ಕಳ್ಳತನ ಮತ್ತು ಗೋ ಸಾಗಾಟದ ವಿರುದ್ಧ ಪೊಲೀಸ್ ಇಲಾಖೆ ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಸಂಸದರಾದ ನಳಿನ್ ಕುಮಾರ್ ಕಟೀಲ್ ಹೇಳಿದರು.
ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಇಂಧನ ಮತ್ತು ಕನ್ನಡ ಹಾಗೂ ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸುನಿಲ್ ಕುಮಾರ್ ಅವರ ನೂತನ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಕ್ರೀಯಾತ್ಮಕ ಯುವ ಸಚಿವರಾದ ಸುನಿಲ್ ಕುಮಾರ್ ಅವರು ದ.ಕ. ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದು, ಅವರ ಉಸ್ತುವಾರಿಯಲ್ಲಿ ಈಗಾಗಲೇ ಇಲಾಖೆಯಲ್ಲಿ ಹಲವಾರು ಪರಿವರ್ತನೆ ಹಾಗೂ ಸುಧಾರಣೆಯನ್ನು ತಂದಿದ್ದಾರೆ ಎಂದರು. ಇದನ್ನೂ ಓದಿ: ‘ಚುನವಿ ಹಿಂದೂ’ – ‘ಗಂಗಾ ಆರತಿ’ ಪೂಜೆಗೈದ ರಾಗಾ ವಿರುದ್ಧ ಬಿಜೆಪಿ ವ್ಯಂಗ್ಯ
ಇಂಧನ ಹಾಗೂ ಸಂಸ್ಕೃತಿ ಸಚಿವಾಲಯದಲ್ಲಿಯೂ ಕೂಡ ಅವರು ಕಾರ್ಯತತ್ಪರತೆಯನ್ನು ಜನತೆಗೆ ತೋರಿಸಿದ್ದಾರೆ. ಹಿರಿಯರ ಕನಸನ್ನು ನನಸು ಮಾಡಿದ್ದಾರೆ ಈ ಕ್ಷೇತ್ರವನ್ನು ಅಭಿವೃದ್ಧಿಯಲ್ಲಿ ಮುನ್ನಡೆಸುವಂತಹ ಸಾಮರಸ್ಯದ ಮುಖಾಂತರ ಈ ಕ್ಷೇತ್ರವನ್ನು ಒಂದು ಮಾದರಿ ಕ್ಷೇತ್ರವನ್ನಾಗಿ ಪರಿವರ್ತನೆ ಮಾಡುವ ಶಕ್ತಿ ಅವರಿಗೆ ಇದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಸುನಿಲ್ ಕುಮಾರ್ ಮಾತನಾಡಿ, ಜಿಲ್ಲೆಯ ಸಂಪೂರ್ಣ ಅಭಿವೃದ್ಧಿಯ ಹೊಣೆ ನನ್ನ ಮೇಲಿದೆ ಈ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸಲು ಪ್ರಯತ್ನವನ್ನು ಮಾಡುತ್ತೇನೆ. ಜಿಲ್ಲೆಗೆ ಬೇಕಾದ ಎಲ್ಲಾ ರೀತಿಯ ಸವಲತ್ತುಗಳನ್ನು ಒದಗಿಸುವ ಕರ್ತವ್ಯ ನನ್ನದು. ಇದರೊಂದಿಗೆ ಜಿಲ್ಲೆಯನ್ನು ಒಂದು ಉತ್ತಮ ಜಿಲ್ಲೆಯನ್ನಾಗಿಸುವಲ್ಲಿ ಶ್ರಮಿಸುತ್ತೇನೆ ಎಂದು ತಿಳಿಸಿದರು. ಇದನ್ನೂ ಓದಿ: ಫೆ.19 ರಿಂದ 28ವರೆಗೆ ದ.ಕ ಜಿಲ್ಲೆಯಲ್ಲಿ ಕಡತ ವಿಲೇವಾರಿ, ಕಂದಾಯ ಮೇಳ
ಶಾಸಕರುಗಳಾದ ವೇದವ್ಯಾಸ ಕಾಮತ್, ವೈ. ಭರತ್ ಶೆಟ್ಟಿ, ಹರೀಶ್ ಪೂಂಜಾ, ರಾಜೇಶ್ ನಾಯ್ಕ್, ಮೇಯರ್ ಪ್ರೇಮಾನಂದ ಶೆಟ್ಟಿ, ದ.ಕ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಕುಮಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಉಡುಪಿ: ರಾಜ್ಯದಲ್ಲಿ ಗೋಹತ್ಯಾ ನಿಷೇಧ ಕಾಯ್ದೆ ವಿಫಲವಾಗಲು ಪೊಲೀಸರು ಬಿಡಬಾರದು, ಈಗಿರುವ ಕಾನೂನು ಕಠಿಣವಾಗಿದೆ. ಅದನ್ನು ಕಟ್ಟುನಿಟ್ಟಾಗಿ ಜಾರಿಗೆ ತನ್ನಿ ಎಂದು ಗೃಹಸಚಿವ ಆರಗ ಜ್ಞಾನೇಂದ್ರ ಎಚ್ಚರಿಕೆ ನೀಡಿದ್ದಾರೆ.
ಉಡುಪಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕರಾವಳಿಯಲ್ಲಿ ಹೆಚ್ಚುತ್ತಿರುವ ಕಳ್ಳತನ ಪ್ರಕರಣಗಳ ಕುರಿತು ಕಳವಳ ವ್ಯಕ್ತಪಡಿಸಿದರು. ಗೋಹತ್ಯಾ ನಿಷೇಧ ಕಾಯ್ದೆ ಜಾರಿಯಲ್ಲಿ ಇದೆ. ಈ ಕಾಯ್ದೆ ವಿಫಲ ಆಗಿಲ್ಲ, ವಿಫಲ ಆಗಲೂ ಬಾರದು. ಗೋಹತ್ಯೆ ಹೆಚ್ಚುತ್ತಿರುವುದರಿಂದ ಸಾಮಾಜಿಕ ಅಶಾಂತಿಗೂ ಕಾರಣವಾಗಿದೆ. ಅಕ್ರಮ ಗೋ ಸಾಗಾಟ, ಗೋಹತ್ಯೆ ಶೇಕಡ 100ರಷ್ಟು ನಿಲ್ಲಿಸಬೇಕು. ಈ ಬಗ್ಗೆ ಪೊಲೀಸ್ ಅಧಿಕಾರಿಗಳ ಜೊತೆ ಮಾತನಾಡುತ್ತೇನೆ. ಗೋವು ಕಳ್ಳರಿಗೆ ಸೂಕ್ತ ಶಿಕ್ಷೆ ಆಗಲಿದೆ ಎಂದರು. ಇದನ್ನೂ ಓದಿ: ಸಿದ್ದರಾಮಯ್ಯ, ಕುಮಾರಸ್ವಾಮಿ ವೋಟಿಗಾಗಿ ಜೊಲ್ಲು ಸುರಿಸ್ತಿದ್ದಾರೆ: ಆರಗ ಜ್ಞಾನೇಂದ್ರ
ಕಾಡಿನಿಂದ ಸ್ಯಾಟಲೈಟ್ ಕರೆ- ಶೀಘ್ರ ಪತ್ತೆ:
ಕರಾವಳಿ ಮತ್ತು ಮಲೆನಾಡಿನ ಕಾಡುಗಳಿಂದ ಸ್ಯಾಟಲೈಟ್ ಕರೆಗಳು ಹೋಗುತ್ತಿರುವ ಬಗ್ಗೆ ಮಾತನಾಡಿದ ಸಚಿವರು, ಅಜ್ಞಾತ ಸ್ಥಳಗಳಿಂದ ಸ್ಯಾಟಲೈಟ್ ಕರೆ ಹೋಗಿರುವ ಬಗ್ಗೆ ವರದಿಯಾಗಿದ್ದು, ಕರಾವಳಿ ಮಲೆನಾಡು ಕಾಡಿನಿಂದ ಎಷ್ಟು ಕರೆಗಳು ಹೋಗಿದೆ ಎಂಬ ಬಗ್ಗೆ ನನಗೆ ಮಾಹಿತಿಯಿಲ್ಲ. ಕೇಂದ್ರ ಸರ್ಕಾರದ ತಂಡ ನಮ್ಮ ಪೊಲೀಸ ಜೊತೆ ಸಂಪರ್ಕದಲ್ಲಿದೆ. ಇದು ರಾಷ್ಟ್ರೀಯ ಭದ್ರತೆಯ ಪ್ರಶ್ನೆ ಹಾಗಾಗಿ ಈ ಬಗ್ಗೆ ಹೆಚ್ಚೇನೂ ಮಾತನಾಡಲು ಸಾಧ್ಯವಿಲ್ಲ. ಯಾವುದೇ ಅರಣ್ಯ ಪ್ರದೇಶದಿಂದ ಕರೆ ಹೋಗಿರಲಿ. ಕರೆ ಮಾಡಿದವರನ್ನು ಪತ್ತೆಮಾಡಿ ಸೂಕ್ತಕ್ರಮ ಕೈಗೊಳ್ಳುತ್ತೇವೆ ಎಂದು ಎಚ್ಚರಿಕೆ ಕೊಟ್ಟಿದ್ದಾರೆ. ಇದನ್ನೂ ಓದಿ: ಚಲಿಸುವ ರೈಲಿನಲ್ಲಿ ಸಾಮೂಹಿಕ ಅತ್ಯಾಚಾರ- ನಾಲ್ವರ ಬಂಧನ