Tag: Caution

  • ದೇಶ ವಿರೋಧಿ ಚಟುವಟಿಕೆ – ಕೆನಡಾದಲ್ಲಿರುವ ವಿದ್ಯಾರ್ಥಿಗಳಿಗೆ ಎಚ್ಚರವಾಗಿರಿ ಎಂದ ಭಾರತ

    ದೇಶ ವಿರೋಧಿ ಚಟುವಟಿಕೆ – ಕೆನಡಾದಲ್ಲಿರುವ ವಿದ್ಯಾರ್ಥಿಗಳಿಗೆ ಎಚ್ಚರವಾಗಿರಿ ಎಂದ ಭಾರತ

    ನವದೆಹಲಿ: ಕೆನಡಾದಲ್ಲಿ (Canada) ದ್ವೇಷ ಅಪರಾಧಗಳು, ಮತೀಯ ಹಿಂಸಾಚಾರಗಳು ಹಾಗೂ ಭಾರತ ವಿರೋಧಿ ಚಟುವಟಿಕೆಗಳು (Anti-Indian Activity) ಹೆಚ್ಚುತ್ತಿದ್ದು, ಇದರಿಂದ ಜಾಗರೂಕರಾಗಿರಿ ಎಂದು ಭಾರತ ಸರ್ಕಾರ ಶುಕ್ರವಾರ ಕೆನಡಾದಲ್ಲಿರುವ ಭಾರತೀಯ ಪ್ರಜೆಗಳು (Indian citizens) ಹಾಗೂ ವಿದ್ಯಾರ್ಥಿಗಳಿಗೆ (Students) ಎಚ್ಚರಿಕೆಯ ಸಂದೇಶವನ್ನು (Caution) ರವಾನಿಸಿದೆ.

    ಕೆನಡಾದಲ್ಲಿ ದ್ವೇಷದ ಅಪರಾಧಗಳು, ಹಿಂಸಾಚಾರ ಹಾಗೂ ಭಾರತ ವಿರೋಧಿ ಚಟುವಟಿಕೆಗಳ ಘಟನೆಗಳು ನಡೆಯುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ಈ ಅಪರಾಧಗಳ ವಿರುದ್ಧ ತನಿಖೆ ಹಾಗೂ ಕ್ರಮ ಕೈಗೊಳ್ಳುವಂತೆ ನಾವು ಅಲ್ಲಿನ ಅಧಿಕಾರಿಗಳನ್ನು ಕೇಳಿಕೊಂಡಿದ್ದೇವೆ. ಆದರೆ ಇಲ್ಲಿಯವರೆಗೆ ಯಾವುದೇ ಅಪರಾಧಿಗಳ ಮೇಲೂ ಕ್ರಮ ಕೈಗೊಳ್ಳಲಾಗಿಲ್ಲ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.

    ಕೆನಡಾದಲ್ಲಿ ಹೆಚ್ಚುತ್ತಿರುವ ಇಂತಹ ಘಟನೆಗಳಿಂದಾಗಿ ಅಲ್ಲಿರುವ ಭಾರತೀಯ ಪ್ರಜೆಗಳು ಹಾಗೂ ಶಿಕ್ಷಣಕ್ಕಾಗಿ ತೆರಳಿರುವ ಭಾರತೀಯ ವಿದ್ಯಾರ್ಥಿಗಳು ಜಾಗರೂಕರಾಗಿರಿ ಎಂದು ಸಚಿವಾಲಯ ಎಚ್ಚರಿಕೆಯನ್ನು ನೀಡಿದೆ. ಇದನ್ನೂ ಓದಿ: ಬಲವಂತದ ಮತಾಂತರ ತಡೆಗೆ ನಿರ್ದೇಶನ ಕೋರಿ ಅರ್ಜಿ – ಪ್ರತಿಕ್ರಿಯಿಸುವಂತೆ ಕೇಂದ್ರಕ್ಕೆ ಸುಪ್ರೀಂ ಸೂಚನೆ

    ಒಟ್ಟಾವಾದಲ್ಲಿರುವ ಭಾರತೀಯ ಮಿಷನ್ ಅಥವಾ ಟೊರೊಂಟೊ ಮತ್ತು ವ್ಯಾಂಕೋವರ್‌ನಲ್ಲಿರುವ ಕಾನ್ಸುಲೇಟ್‌ಗಳಲ್ಲಿ ಹೆಸರು ನೋಂದಾಯಿಸಿಕೊಳ್ಳುವಂತೆ ಭಾರತ ಸರ್ಕಾರ ಕೆನಡಾದಲ್ಲಿರುವ ಭಾರತೀಯ ಪ್ರಜೆಗಳು ಹಾಗೂ ವಿದ್ಯಾರ್ಥಿಗಳನ್ನು ಕೇಳಿಕೊಂಡಿದೆ. ಇದರಿಂದ ಯಾವುದೇ ತುರ್ತು ಸಂದರ್ಭದಲ್ಲಿ ಅಥವಾ ಅವಶ್ಯಕತೆ ಬಂದಾಗ ಕೆನಡಾದಲ್ಲಿರುವ ಭಾರತೀಯ ನಾಗರಿಕರೊಂದಿಗೆ ಸಂಪರ್ಕ ಸಾಧಿಸಲು ಸಹಾಯವಾಗುತ್ತದೆ ಎಂದು ತಿಳಿಸಲಾಗಿದೆ.

    ಕೆನಡಾದಲ್ಲಿ ಸುಮಾರು 16 ಲಕ್ಷ ಭಾರತೀಯರು ನೆಲೆಸಿದ್ದಾರೆ. ಅಲ್ಲಿನ ಜನಸಂಖ್ಯೆಯ ಶೇ.3 ಕ್ಕಿಂತಲೂ ಹೆಚ್ಚು ಜನರು ಭಾರತೀಯರೇ ಇದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: ರಷ್ಯಾ-ಉಕ್ರೇನ್ ನಡುವೆ ಶಾಂತಿ ಸ್ಥಾಪನೆಗೆ ಮೋದಿಯನ್ನೊಳಗೊಂಡ ಸಮಿತಿ ರಚಿಸಿ: ಮೆಕ್ಸಿಕೋ

    Live Tv
    [brid partner=56869869 player=32851 video=960834 autoplay=true]

  • ಕೆಆರ್‌ಎಸ್‌ನಿಂದ ಮತ್ತಷ್ಟು ನೀರು ಹೊರಕ್ಕೆ: ಸುರಕ್ಷಿತ ಸ್ಥಳಕ್ಕೆ ತೆರಳಲು ಅಧಿಕಾರಿಗಳ ಸೂಚನೆ!

    ಕೆಆರ್‌ಎಸ್‌ನಿಂದ ಮತ್ತಷ್ಟು ನೀರು ಹೊರಕ್ಕೆ: ಸುರಕ್ಷಿತ ಸ್ಥಳಕ್ಕೆ ತೆರಳಲು ಅಧಿಕಾರಿಗಳ ಸೂಚನೆ!

    ಮಂಡ್ಯ: ಯಾವುದೇ ಸಂದರ್ಭದಲ್ಲಾದರೂ ಕೆಆರ್‌ಎಸ್‌ನಿಂದ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ನೀರನ್ನು ಹೊರಗೆ ಬಿಡುಗಡೆ ಮಾಡುವುದರಿಂದ ನದಿ ಪಾತ್ರದ ಜನರು ಆದಷ್ಟು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

    ಕೆಆರ್‌ಎಸ್‌ ಅಣೆಕಟ್ಟಿನಿಂದ ಈಗಾಗಲೇ 1.27 ಲಕ್ಷ ಕ್ಯೂಸೆಕ್‍ಗೂ ಅಧಿಕ ಪ್ರಮಾಣದ ನೀರನ್ನು ಹೊರಗೆ ಬಿಡಲಾಗುತ್ತಿದೆ. ಆದರೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಅಣೆಕಟ್ಟಿಗೆ ಹರಿದು ಬರುವ ನೀರಿನ ಪ್ರಮಾಣ ಹೆಚ್ಚಾಗುತ್ತಿದೆ. ಹೀಗಾಗಿ ಯಾವುದೇ ಸಮಯದಲ್ಲಿ ಬೇಕಾದರೂ ಅಣೆಕಟ್ಟಿನಿಂದ ಸುಮಾರು 1 ಲಕ್ಷದ 50 ಸಾವಿರ ಕ್ಯೂಸೆಕ್ ನೀರನ್ನು ಬಿಡುಗಡೆಗೊಳಿಸಲು ತೀರ್ಮಾನಿಸಲಾಗಿದೆ. ಹೀಗಾಗಿ ನದಿ ಪಾತ್ರದ ಜನರು ಎಚ್ಚರಿಕೆ ವಹಿಸಿ, ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಕಾವೇರಿ ನೀರಾವರಿ ನಿಮಗದ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

    ಈಗಾಗಲೇ ಕಾವೇರಿ ನದಿ ದಂಡೆಯಲ್ಲಿರುವ ಕೆಲವೊಂದು ದೇವಾಲಯಗಳು ನೀರಿನಿಂದ ಆವೃತ್ತವಾಗಿದೆ. ನದಿಪಾತ್ರದ ಜಮೀನಿಗೆ ನೀರು ನುಗ್ಗಿ ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ. ಮತ್ತೆ ಹೊರಹರಿವು ಹೆಚ್ಚಾದರೆ, ಹೆಚ್ಚಿನ ನಷ್ಟ ಸಂಭವಿಸುವ ಭಯ ಶುರುವಾಗಿದೆ. ಇದರ ನಡುವೆ ಅಣೆಕಟ್ಟಿನಿಂದ ನೀರು ಹರಿದು ಹೋಗುವ ರುದ್ರ ರಮಣೀಯ ದೃಶ್ಯ ನೋಡಲು ಕೆಆರ್‍ಎಸ್‍ಗೆ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv