Tag: Cauveri water

  • ನಾಳಿನ ಬಂದ್‌ಗೆ ಸಂಘಟನೆಗಳ ಜೊತೆಗೆ ವಿಪಕ್ಷದ ಬೆಂಬಲವೂ ಇದೆ: ಬೊಮ್ಮಾಯಿ

    ನಾಳಿನ ಬಂದ್‌ಗೆ ಸಂಘಟನೆಗಳ ಜೊತೆಗೆ ವಿಪಕ್ಷದ ಬೆಂಬಲವೂ ಇದೆ: ಬೊಮ್ಮಾಯಿ

    ಹುಬ್ಬಳ್ಳಿ: ಕಾವೇರಿ ಅಷ್ಟೇ ಅಲ್ಲ, ಕೃಷ್ಣೆಯ ಹಿತರಕ್ಷಣೆಗೂ ಸರ್ಕಾರ ಮುಂದಾಗಬೇಕು. ಈ ವಿಚಾರದಲ್ಲಿ ನಾವೆಲ್ಲ ಒಂದಾಗಿದ್ದೇವೆ. ಒಂದು ವೇಳೆ ಸರ್ಕಾರ ಎಡವಿದರೆ ಸರ್ಕಾರದ ವಿರುದ್ಧ ಹೋರಾಟ ಮಾಡಬೇಕಾಗುತ್ತದೆ. ಶುಕ್ರವಾರದ ಬಂದ್‌ಗೆ (Karnataka Bandh) ಸಂಘಟನೆಗಳ ಜೊತೆಗೆ ವಿಪಕ್ಷದ ಬೆಂಬಲವೂ ಇದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ.

    ಹುಬ್ಬಳ್ಳಿಯಲ್ಲಿ (Hubballi) ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈಗ 3,000 ಕ್ಯೂಸೆಕ್ ಆದೇಶ ಬಂದಿದೆ. 10,000 ಕ್ಯೂಸೆಕ್ ಆದೇಶ ಬಂದಾಗ ಸುಪ್ರೀಂ ಕೋರ್ಟ್‌ನಲ್ಲಿ (Supreme Court) ವಾದ ಮಂಡನೆ ಮಾಡಿದ್ದರೆ ಅಷ್ಟು ದೊಡ್ಡ ಪ್ರಮಾಣದ ನೀರು ಬಿಡುವ ಪ್ರಮೇಯ ಬರುತ್ತಿರಲಿಲ್ಲ. ತಡವಾಗಿಯಾದರೂ ಸರ್ಕಾರಕ್ಕೆ ಬುದ್ದಿ ಬಂದಿದೆ. ಜನ ಬೀದಿಗಿಳಿದು ಹೋರಾಟ ಮಾಡುವ ಸಂದರ್ಭ ಬಂದಿದೆ. ಸರ್ಕಾರ ಈಗ ಎಚ್ಚೆತ್ತುಕೊಂಡಿದೆ. ಈಗಾಗಲೇ ಸಾಕಷ್ಟು ನೀರು ಹರಿದು ಹೋಗಿದೆ. ತಮಿಳುನಾಡು (Tamil Nadu) ಟ್ರಿಬ್ಯುನಲ್ ಆದೇಶವನ್ನು ಉಲ್ಲಂಘನೆ ಮಾಡಿದೆ. ಇದನ್ನೂ ಓದಿ: ಟಿಕೆಟ್ ಸಿಗದೆ ಪಕ್ಷ ಬಿಟ್ಟು ಕಾಂಗ್ರೆಸ್‌ಗೆ ಹೋಗೋರ ಬಗ್ಗೆ ನಾವು ತಲೆಕೆಡಿಸಿಕೊಳ್ಳಲ್ಲ: ಬೊಮ್ಮಾಯಿ

    ಕುಡಿಯುವ ನೀರಿಗೆ ಬಹುದೊಡ್ಡ ಹಾಹಾಕಾರ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಬಗ್ಗೆ ಸರ್ಕಾರ ಕಾಳಜಿ ವಹಿಸಬೇಕು. ಕಾವೇರಿಗಾಗಿ (Cauveri Water) ಎಲ್ಲಿಯವರೆಗೂ ಹೋರಾಟ ಇರುತ್ತೋ ಅಲ್ಲಿಯವರೆಗೂ ನಮ್ಮ ಹೋರಾಟ ಇದ್ದೇ ಇರುತ್ತದೆ ಎಂದರು. ಇದನ್ನೂ ಓದಿ: ಡ್ರಗ್ಸ್ ಕೇಸ್- ಕಾಂಗ್ರೆಸ್ ಶಾಸಕ ಸುಖಪಾಲ್ ಸಿಂಗ್ ಖಯರಾ ಬಂಧನ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರಾಮನಗರಕ್ಕೆ 3 ದಿನ, ಚನ್ನಪಟ್ಟಣಕ್ಕೆ 2 ದಿನ ಕಾವೇರಿ ನೀರು ಬಂದ್

    ರಾಮನಗರಕ್ಕೆ 3 ದಿನ, ಚನ್ನಪಟ್ಟಣಕ್ಕೆ 2 ದಿನ ಕಾವೇರಿ ನೀರು ಬಂದ್

    ರಾಮನಗರ: ಜಿಲ್ಲೆಯ ರಾಮನಗರ ನಗರ ಪ್ರದೇಶ ಹಾಗೂ ಚನ್ನಪಟ್ಟಣ ನಗರ ಪ್ರದೇಶಕ್ಕೆ ಕ್ರಮವಾಗಿ ಮೂರು ಹಾಗೂ ಎರಡು ದಿನಗಳ ಕಾಲ ಕಾವೇರಿ ನೀರು ಸರಬರಾಜು ಮಾಡುವುದನ್ನು ಬಂದ್ ಮಾಡಿ ಎಂದು ಕರ್ನಾಟಕ ನಗರ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ ಆದೇಶ ಹೊರಡಿಸಿದೆ.

    ರಾಮನಗರ ಹಾಗೂ ಚನ್ನಪಟ್ಟಣ ನಗರಗಳಿಗೆ ಹಲಗೂರು ಸಮೀಪದ ತೊರೆಕಾಡನಹಳ್ಳಿಯಿಂದ ಕಾವೇರಿ ನೀರನ್ನು ಕುಡಿಯುವುದಕ್ಕಾಗಿ ಪ್ರತಿನಿತ್ಯ ಸರಬರಾಜು ಮಾಡಲಾಗುತ್ತಿದೆ. ಆದರೆ ಇದೀಗ ನೀರು ಸರಬರಾಜು ಮಾಡುವ ಮಾರ್ಗದ ಪೈಪ್ ಲೈನ್‍ನಲ್ಲಿ ದೋಷ ಕಾಣಿಸಿಕೊಂಡಿರುವ ಪರಿಣಾಮ ಕಾವೇರಿ ನೀರು ಸರಬರಾಜು ಮಾಡದಂತೆ ತಡೆಯಲಾಗಿದೆ.

    ತೊರೆಕಾಡನಹಳ್ಳಿಯ ಬಿಡಬ್ಲ್ಯೂಎಸ್‍ಎಸ್‍ಬಿ ಆವರಣದ ಹತ್ತಿರ ಕುಡಿಯುವ ನೀರು ಸರಬರಾಜು ಮಾಡುವ 600 ಮಿಮಿ ವ್ಯಾಸದ ಪಿಎಸ್ಪಿ ಏರು ಕೊಳವೆಯ ಮಾರ್ಗದಲ್ಲಿ ಅಧಿಕವಾಗಿ ನೀರು ಸೋರಿಕೆಯಾಗುತ್ತಿದೆ. ಇದನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ದುರಸ್ಥಿ ಕಾರ್ಯ ಮಾಡಬೇಕಾಗಿದೆ

    ಹಾಗಾಗಿ ಇದೇ ಡಿಸೆಂಬರ್ 11 ಹಾಗೂ 12ರಂದು ಎರಡು ದಿನಗಳ ಕಾಲ ಚನ್ನಪಟ್ಟಣ ನಗರ ಪ್ರದೇಶಕ್ಕೆ ಹಾಗೂ ಡಿಸೆಂಬರ್ 11, 12, 13ರಂದು ಮೂರು ದಿನಗಳ ಕಾಲ ರಾಮನಗರ ನಗರ ಪ್ರದೇಶಗಳಿಗೆ ನೀರು ಸರಬರಾಜು ಮಾಡದಿರಲು ನಿರ್ಧರಿಸಲಾಗಿದೆ.

    ಈಗಾಗಲೇ 5 ದಿನಗಳಿಗೊಮ್ಮೆ ಇಲ್ಲವೇ ವಾರಕ್ಕೊಮ್ಮೆ, 10 ಕಾವೇರಿ ನೀರನ್ನು ರಾಮನಗರದಲ್ಲಿ ಸರಬರಾಜು ಮಾಡುತ್ತಿದ್ದರೆ, ಚನ್ನಪಟ್ಟಣದಲ್ಲಿ ಎರಡು- ಮೂರು ದಿನಗಳಿಗೊಮ್ಮೆ ಸರಬರಾಜು ಮಾಡಲಾಗುತ್ತಿದೆ. ಇದೀಗ ಪೈಪ್ ಲೈನ್ ದುರಸ್ಥಿಯಿಂದ ಸಾರ್ವಜನಿಕರು ಕುಡಿಯುವ ನೀರಿಗೆ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಲಿದೆ.