Tag: Cauvery River

  • KRS ಡ್ಯಾಂ ಬರೋಬ್ಬರಿ 100 ಅಡಿ ಭರ್ತಿ – 48 ಗಂಟೆಯಲ್ಲಿ 5 ಟಿಎಂಸಿ ನೀರು ಒಳಹರಿವು

    KRS ಡ್ಯಾಂ ಬರೋಬ್ಬರಿ 100 ಅಡಿ ಭರ್ತಿ – 48 ಗಂಟೆಯಲ್ಲಿ 5 ಟಿಎಂಸಿ ನೀರು ಒಳಹರಿವು

    ಮಂಡ್ಯ: ರಾಜ್ಯಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ಹಳೆ ಮೈಸೂರು ಭಾಗದ ಜೀವನಾಡಿಯಾಗಿರುವ ಮಂಡ್ಯ (Mandya) ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಡ್ಯಾಂಗೆ (KRS Dam) ಹೆಚ್ಚಿನ ಪ್ರಮಾಣದ ನೀರು ಹರಿದುಬರುತ್ತಿದೆ. ಇದರಿಂದ ಕಳೆದ 48 ಗಂಟೆಯಲ್ಲಿ 5 ಟಿಎಂಸಿಯಷ್ಟು ನೀರು ಹರಿದುಬಂದಿದ್ದು, ಬರೋಬ್ಬರಿ 100 ಅಡಿ ನೀರು ಭರ್ತಿಯಾಗಿದೆ.

    ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮವಾಗಿ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಡ್ಯಾಂ ಒಳಹರಿವಿನ ಪ್ರಮಾಣದಲ್ಲಿ ಏರಿಕೆ ಕಂಡಿದೆ. ಹೀಗಾಗಿ 48 ಗಂಟೆಯ ಅವಧಿಯಲ್ಲಿ ಕೆಆರ್‌ಎಸ್ ಡ್ಯಾಂಗೆ 5 TMC ನೀರು ಹರಿದುಬಂದಿದೆ. ಕೇವಲ 2 ದಿನಗಳ ಅವಧಿಯಲ್ಲಿ 8 ಅಡಿ ಡ್ಯಾಂ ನೀರು ಭರ್ತಿಯಾಗಿದೆ.

    124.80 ಅಡಿ ಗರಿಷ್ಠ ಮಟ್ಟ ಹೊಂದಿರುವ ಕೆಆರ್‌ಎಸ್ ಜಲಾಶಯ 100 ಅಡಿ ನೀರು ತುಂಬಿದ್ದು, ಡ್ಯಾಂ ಭರ್ತಿಯತ್ತ ಸಾಗಿದೆ. ಇದರಿಂದ ರೈತರು ಹರ್ಷಗೊಂಡಿದ್ದಾರೆ. ಕಳೆದ ಒಂದೂವರೆ ತಿಂಗಳಿನಿಂದ ಮಳೆಯಿಲ್ಲದೇ ಕಂಗಾಲಾಗಿದ್ದ ಸಕ್ಕರೆ ನಾಡಿನ ರೈತರು, ಇದೀಗ ಕೃಷಿ ಚಟುವಟಿಕೆಗಳತ್ತ ಮುಖ ಮಾಡಿದ್ದಾರೆ. ಇದನ್ನೂ ಓದಿ: ಭಾರೀ ಮಳೆಗೆ ಮನೆಗಳ ಗೋಡೆ ಕುಸಿತ – ಪ್ರತ್ಯೇಕ ಘಟನೆಯಲ್ಲಿ 2 ಕಂದಮ್ಮಗಳ ದಾರುಣ ಸಾವು

    ಸದ್ಯ ಡ್ಯಾಂಗೆ 48,025 ಕ್ಯೂಸೆಕ್ ಒಳ ಹರಿವಿದ್ದು, ಇಂದು ಇನ್ನಷ್ಟು ನೀರಿನ ಪ್ರಮಾಣ ಏರಿಕೆಯಾಗುವ ಸಾಧ್ಯತೆಯಿದೆ. 49.452 ಟಿಎಂಸಿ ಗರಿಷ್ಠ ಸಂಗ್ರಹ ಸಾಮರ್ಥ್ಯ ಹೊಂದಿರುವ ಕೆಆರ್‌ಎಸ್ ಕಳೆದ 48 ಗಂಟೆಗಳಲ್ಲಿ 5 ಟಿಎಂಸಿ ನೀರು ಹರಿದುಬಂದಿದ್ದು, ಒಟ್ಟು 22.809 ಟಿಎಂಸಿ ನೀರು ಡ್ಯಾಂನಲ್ಲಿ ಶೇಖರಣೆಯಾಗಿದೆ. ನೀರಿನ ಒಳಹರಿವು ಇದೇ ರೀತಿ ಮುಂದುವರಿದಲ್ಲಿ ಇನ್ನೂ 10 ದಿನಗಳಲ್ಲಿ ಡ್ಯಾಂ ಪೂರ್ಣ ಭರ್ತಿಯಾಗುವ ಸಾಧ್ಯತೆಯಿದೆ.

    ಹಾರಂಗಿಯಿಂದ 30,000 ಕ್ಯೂಸೆಕ್ ನೀರು ಬಿಡುಗಡೆ:
    ಕೊಡಗೂ ಜಿಲ್ಲೆಯಲ್ಲೂ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿಯಲ್ಲಿ (Cauvery River) ನೀರಿನ ಪ್ರಮಾಣ ಗಣನೀಯ ಏರಿಕೆ ಕಂಡಿದೆ. ಹಾರಂಗಿ ಜಲಾಶಯದಿಂದ 30,000 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಇದರಿಂದ ಕುಶಾಲನಗರ ಸುತ್ತಮುತ್ತಲಿನ ಬಡಾವಣೆಗಳತ್ತ ಹರಿದ ನೀರು ಹರಿದು ಬಂದಿದ್ದು, ಪ್ರವಾಹ ಪರಿಸ್ಥಿತಿ ಎದುರಾಗಿದೆ. ಇದನ್ನೂ ಓದಿ: ವ್ಯಕ್ತಿಯ ತಲೆ ಮೇಲೆ ಒದ್ದು, ಮೂತ್ರ ವಿಸರ್ಜನೆ ಮಾಡಿ ದರ್ಪ – ಉತ್ತರ ಪ್ರದೇಶದಲ್ಲಿ ಮತ್ತೊಂದು ಅಮಾನವೀಯ ಘಟನೆ

     

    ಗರಿಷ್ಠ ಮಟ್ಟ – 124.80 ಅಡಿಗಳು
    ಇಂದಿನ ಮಟ್ಟ – 100 ಅಡಿಗಳು
    ಗರಿಷ್ಠ ಸಾಂದ್ರತೆ – 49.452 ಟಿಎಂಸಿ
    ಇಂದಿನ ಸಾಂದ್ರತೆ – 22.809 ಟಿಎಂಸಿ
    ಒಳ ಹರಿವು – 48,025 ಕ್ಯೂಸೆಕ್
    ಹೊರ ಹರಿವು – 5,449 ಕ್ಯೂಸೆಕ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೊಡಗು ಜಿಲ್ಲೆಯಲ್ಲಿ ವರುಣಾರ್ಭಟ – ಉಕ್ಕಿ ಹರಿದ ಕಾವೇರಿ ನದಿ; ಬಡಾವಣೆ ಜಲಾವೃತ

    ಕೊಡಗು ಜಿಲ್ಲೆಯಲ್ಲಿ ವರುಣಾರ್ಭಟ – ಉಕ್ಕಿ ಹರಿದ ಕಾವೇರಿ ನದಿ; ಬಡಾವಣೆ ಜಲಾವೃತ

    ಕೊಡಗು: ಮಡಿಕೇರಿ (Madikeri) ಜಿಲ್ಲೆಯಲ್ಲಿ ಮುಂಗಾರಿನ ವರುಣಾರ್ಭಟ ಜೋರಾಗಿದೆ. ಭಾರೀ ಮಳೆಯಿಂದಾಗಿ ಕಾವೇರಿ ನದಿ (Cauvery River) ಉಕ್ಕಿ ಹರಿಯುತ್ತಿದೆ. ನದಿ ನೀರಿನ ಪ್ರಮಾಣ ಹೆಚ್ಚಾಗಿದ್ದರಿಂದ ಹಲವೆಡೆ ಮನೆಗಳಿಗೆ ನೀರು ನುಗ್ಗಿದೆ.

    ಕುಶಾಲನಗರದ ಸಾಯಿ ಬಡಾವಣೆಗೆ ಕಾವೇರಿ ನದಿ ನೀರು ನುಗ್ಗಿದೆ. ಸಾಯಿ ಬಡಾವಣೆ ಜಲಾವೃತಗೊಳ್ಳುವ ಆತಂಕ ಎದುರಾಗಿದೆ. ಬಡಾವಣೆ ನಿವಾಸಿಗಳು ರಾತ್ರೋರಾತ್ರಿ ಮನೆಗಳನ್ನು ಖಾಲಿ ಮಾಡುತ್ತಿದ್ದಾರೆ. ಮನೆಯ ಎಲ್ಲಾ ವಸ್ತುಗಳನ್ನ ತುಂಬಿಕೊಂಡು ಬೇರೆಡೆಗೆ ಸ್ಥಳಾಂತರವಾಗುತ್ತಿದ್ದಾರೆ. ಇದನ್ನೂ ಓದಿ: ಮಡಿಕೇರಿ-ಮಂಗಳೂರು ಹೈವೇಯಲ್ಲಿ ಗುಡ್ಡ ಕುಸಿತ

    ಸ್ಥಳೀಯರು ಮನೆಗಳ ಖಾಲಿ ಮಾಡಲು ಸೇವಾ ಭಾರತಿ ಸ್ವಯಂ ಸೇವಕರು ಸಹಾಯಹಸ್ತ ಚಾಚಿದ್ದಾರೆ. ಕ್ಷಣ ಕ್ಷಣಕ್ಕೂ ನೀರಿನ ಮಟ್ಟ ಏರಿಕೆ ಆಗುತ್ತಿದ್ದು, ಜನರು ಆತಂಕಗೊಂಡು ಮನೆಗಳನ್ನ ಖಾಲಿ ಮಾಡುತ್ತಿದ್ದಾರೆ.

    ಇನ್ನೂ ಜಿಲ್ಲೆಯ ಬಹುತೇಕ ಗ್ರಾಮೀಣ ಪ್ರದೇಶದಲ್ಲಿ ಕಾವೇರಿ ನೀರಿನ ಮಟ್ಟ ಏರಿಕೆಗೊಂಡ ಪರಿಣಾಮ ಹಲವು ಗ್ರಾಮಗಳ ಸಂಪರ್ಕ ಕಡಿತಗೊಂಡು ಜನಜೀವನ ಅಸ್ತವ್ಯಸ್ತವಾಗಿದೆ. ಇಂದು ಕೊಡಗು ಜಿಲ್ಲೆಗೆ ಕಂದಾಯ ಸಚಿವ ಕೃಷ್ಣ ಭೈರೇಗೌಡ ಹಾಗೂ ಉಸ್ತುವಾರಿ ಸಚಿವ ಬೋಸರಾಜು ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ. ಮಳೆಹಾನಿಗೆ ಸಂಬಂಧಿಸಿದಂತೆ ವಿವಿಧ ಇಲಾಖೆಯ ಆದಿಕಾರಿಗಳ ಜೊತೆ ಚರ್ಚೆ ನಡೆಸಲಿದ್ದಾರೆ. ಇದನ್ನೂ ಓದಿ: ಮಂಗಳವಾರ ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶಾಲಾ, ಕಾಲೇಜುಗಳಿಗೆ ರಜೆ

    ಗರಿಷ್ಠ ಮಟ್ಟ – 124.80 ಅಡಿಗಳು
    ಇಂದಿನ ಮಟ್ಟ – 100 ಅಡಿಗಳು
    ಗರಿಷ್ಠ ಸಾಂದ್ರತೆ – 49.452 ಟಿಎಂಸಿ
    ಇಂದಿನ ಸಾಂದ್ರತೆ – 22.809 ಟಿಎಂಸಿ
    ಒಳ ಹರಿವು – 48,025 ಕ್ಯೂಸೆಕ್
    ಹೊರ ಹರಿವು – 5,449 ಕ್ಯೂಸೆಕ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಾವೇರಿ, ಕಬಿನಿ, ಕಾಳಿ ಸೇರಿ ರಾಜ್ಯದ 17 ನದಿಗಳ ನೀರು ನೇರವಾಗಿ ಕುಡಿಯೋಕೆ ಯೋಗ್ಯವಲ್ಲ- ವರದಿ ಸ್ಫೋಟ

    ಕಾವೇರಿ, ಕಬಿನಿ, ಕಾಳಿ ಸೇರಿ ರಾಜ್ಯದ 17 ನದಿಗಳ ನೀರು ನೇರವಾಗಿ ಕುಡಿಯೋಕೆ ಯೋಗ್ಯವಲ್ಲ- ವರದಿ ಸ್ಫೋಟ

    – ನದಿ ಹರಿವಿನ ನೀರಿನ ಪರೀಕ್ಷೇಯಲ್ಲಿ ಕಲುಷಿತ
    – ಮಾಲಿನ್ಯ ನಿಯಂತ್ರಣ ಮಂಡಳಿ ವರದಿ ಬಹಿರಂಗ

    ಬೆಂಗಳೂರು: ಆಧುನಿಕತೆ ಬೆಳೆದಂತೆ ಪರಿಸರದಲ್ಲಿ ಮಾಲಿನ್ಯ (Pollution) ಪ್ರಮಾಣ ಕೂಡ ಹೆಚ್ಚಾಗ್ತಾ ಇದೆ. ಅದರಲ್ಲೂ ಕುಡಿಯುವ ನೀರು ಹಾಗೂ ಗಾಳಿಯಲ್ಲಿ ಕಲುಷಿತ ಪ್ರಮಾಣ ಹೆಚ್ಚುತ್ತಲೇ ಇದೆ. ಇದಕ್ಕೆ ನಿದರ್ಶನ ಎನ್ನುವಂತೆ ಮಾಲಿನ್ಯ ನಿಯಂತ್ರಣ ಮಂಡಳಿ (Pollution Control Board) ವರದಿಯೊಂದನ್ನ ಬಿಡುಗಡೆ ಮಾಡಿದೆ.

    ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಬಿಡುಗಡೆ ಮಾಡಿರುವ ವರದಿಯಲ್ಲಿ ರಾಜ್ಯದ ಪ್ರಮುಖ 17 ನದಿಗಳು ಕಲುಷಿತ ಆಗಿರೋದು ಬಯಲಾಗಿದೆ. ಈ ವರ್ಷ ಮಾಲಿನ್ಯ ನಿಯಂತ್ರಣ ಮಂಡಳಿ ನದಿಗಳ (Rivers) ಹರಿವಿನಲ್ಲಿ ನೀರನ್ನ ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಿದೆ. ಅದರಲ್ಲಿ 15 ನದಿಗಳ ನೀರು ನೇರವಾಗಿ ಕುಡಿಯೋಕೆ ಯೋಗ್ಯವಲ್ಲ ಅಂತಾ ವರದಿಯಾಗಿದೆ. ಇದನ್ನೂ ಓದಿ: ಕಾಂಗ್ರೆಸ್‌ನಿಂದ ಎಂಪಿ ಟಿಕೆಟ್ ಏಕೆ ನಿರೀಕ್ಷಿಸಬಾರದು- ಕಮಲ್ ಹಾಸನ್ ಪ್ರಶ್ನೆ

    ಯಾವೆಲ್ಲಾ ನದಿ ನೀರು ಯೋಗ್ಯವಲ್ಲ?: ಅರ್ಕಾವತಿ ನದಿ, ಲಕ್ಷ್ಮಣ ತೀರ್ಥ ನದಿ, ಮಲಪ್ರಭಾ ನದಿ, ತುಂಗಭದ್ರಾ ನದಿ, ಭದ್ರಾ ನದಿ, ಕಾವೇರಿ ನದಿ (Cauvery), ಕಬಿನಿ ನದಿ (Kabini), ಕಗಿನಿ ನದಿ, ಕಾಳಿ ನದಿ, ಕೃಷ್ಣ ನದಿ, ಅಸಂಗಿ ಕೃಷ್ಣ ನದಿ, ಶಿಂಷಾ ನದಿ, ಭೀಮಾ ನದಿ, ನೇತಾವತಿ ನದಿ, ಕುಮಾರಧಾರ ನದಿ, ತುಂಗಾ ನದಿ, ಯಗಚಿ ನದಿಗಳ ನೀರು ನೇರವಾಗಿ ಕುಡಿಯಲು ಯೋಗ್ಯವಲ್ಲ ಎಂದು ವರದಿಯಲ್ಲಿ ಬಹಿರಂಗವಾಗಿದೆ.

    ಮಹಾನಗರಗಳು ಹಾಗೂ ನಗರಗಳಲ್ಲಿನ ಕಂಪನಿಗಳು, ಕಾರ್ಖಾನೆಗಳು (Chemical Factory) ಹೊರಸೂಸುವ ಕೆಮಿಕಲ್ ಹಾಗೂ ತ್ಯಾಜ್ಯದಿಂದಳೇ ನೀರು ಕಲುಷಿತ ಆಗ್ತಿದೆ ಎಂದು ಹೇಳಲಾಗ್ತಿದೆ. ಮಾಲಿನ್ಯ ನಿಯಂತ್ರಣ ಮಂಡಳಿಯವರು ಮಾಲಿನ್ಯ ಉಂಟಾಗುವ ಜಾಗದಲ್ಲಿ ಪ್ಲಾಂಟ್‌ಗಳನ್ನ ರಚನೆ ಮಾಡಿ ನಿಯಂತ್ರಣ ಮಾಡದೇ ಇರೋದು ಮಾಲಿನ್ಯಕ್ಕೆ ಕಾರಣವಾಗಿದೆ. ಸರ್ಕಾರ ಕೂಡಲೇ ಎಚ್ಚೆತ್ತು ನಿಯಂತ್ರಣ ಮಾಡಬೇಕು. ಮಾನಿಟರ್‌ಗೆ ಹೆಚ್ಚು ಸಿಬ್ಬಂದಿ ನೇಮಕ ಮಾಡಿ ಮಾನಿಟರ್ ಮೂಲಕ ಮಾಲಿನ್ಯ ತಡೆಗಟ್ಟಬೇಕು ಎಂದು ತಜ್ಞರು ಒತ್ತಾಯಿಸಿದ್ದಾರೆ.

    ಒಟ್ಟಾರೆ 17 ನದಿಗಳು ಕಲುಷಿತ ಆಗಿರೋದು ಮಾಲಿನ್ಯ ನಿಯಂತ್ರಣ ಮಂಡಳಿ ಪರೀಕ್ಷೆಯಲ್ಲಿ ಬಯಲಾಗಿದೆ. ಮಾಲಿನ್ಯ ನಿಯಂತ್ರಣಕ್ಕೆ ಸರ್ಕಾರ ಏನು ಕ್ರಮ ಕೈಗೊಳ್ಳುತ್ತದೆ ಎಂಬುದನ್ನ ಕಾದು ನೋಡಬೇಕಿದೆ. ಇದನ್ನೂ ಓದಿ: ಡಾರ್ಕ್‌ನೆಟ್‌ ಬಳಸಿ ಮೋದಿ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಯತ್ನ- ರಣಾಂಗಣವಾದ ವಿವಿ ಕ್ಯಾಂಪಸ್

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಪತ್ನಿ ಸಂಬಂಧಿ ಜೊತೆ ಲವ್ವಿ-ಡವ್ವಿ, ವೇಶ್ಯೆ ಪ್ರೀತಿಗೆ ಬಿದ್ದು ಆದ ಸೈಕೋ ಕಿಲ್ಲರ್ – ಮಂಡ್ಯದಲ್ಲೊಂದು ಮರ್ಡರ್ ಮಿಸ್ಟ್ರಿ

    ಪತ್ನಿ ಸಂಬಂಧಿ ಜೊತೆ ಲವ್ವಿ-ಡವ್ವಿ, ವೇಶ್ಯೆ ಪ್ರೀತಿಗೆ ಬಿದ್ದು ಆದ ಸೈಕೋ ಕಿಲ್ಲರ್ – ಮಂಡ್ಯದಲ್ಲೊಂದು ಮರ್ಡರ್ ಮಿಸ್ಟ್ರಿ

    ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲೀಗ ರಕ್ತಪಾತದ ಕಥೆಗಳೇ ಹೆಚ್ಚಾಗಿ ಸದ್ದು ಮಾಡುತ್ತಿದೆ. ಕಳೆದ 2 ತಿಂಗಳ ಹಿಂದೆ ನಾಲೆಯಲ್ಲಿ ತೇಲಿಬಂದ ರುಂಡವಿಲ್ಲದ 2 ಮಹಿಳೆಯರ ಮೃತದೇಹ ಪ್ರಕರಣ ಮಂಡ್ಯ ಜನತೆಯನ್ನೇ ಬೆಚ್ಚಿ ಬೀಳುವಂತೆ ಮಾಡಿತ್ತು.

    ಪ್ರಕರಣ ಬೇಧಿಸಲು ಮುಂದಾಗಿದ್ದ ಪೊಲೀಸರಿಗೆ ಹಲವು ಸವಾಲುಗಳು ಎದುರಾಗಿದ್ದವು. ಕೊನೆಗೂ ರಹಸ್ಯ ಹೊರಬಿದ್ದಿದ್ದು, ಆರೋಪಿಯನ್ನ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಇದನ್ನೂ ಓದಿ: ಐಷಾರಾಮಿ ಮದ್ವೆ, 3 ತಿಂಗಳಲ್ಲಿ ಸಂಸಾರ ಬೀದಿಗೆ – ಪತ್ನಿಯನ್ನು ಮನೆಯಿಂದ ಹೊರಹಾಕಿದ ಕುಡುಕ ಪತಿ!

    ಹೌದು.. ಮದುವೆಯಾಗಿದ್ದರೂ ಪರ ಸ್ತ್ರೀ ಮೋಹದ ಬಲೆಗೆ ಬಿದ್ದಿದ್ದ ವ್ಯಕ್ತಿಯೊಬ್ಬ ಬರೋಬ್ಬರಿ ಮೂರು ಕೊಲೆ ಮಾಡಿದ್ದ. ಮಂಡ್ಯದಲ್ಲಿ 2 ತಿಂಗಳ ಹಿಂದೆ ನಾಲೆಯಲ್ಲಿ ಎರಡು ರುಂಡವಿಲ್ಲದ ಮೃತದೇಹ ತೇಲಿಬಂದಿತ್ತು. ಈ ಪ್ರಕರಣದ ಬೆನ್ನುಬಿದ್ದ ಶ್ರೀರಂಗಪಟ್ಟಣ ಪೊಲೀಸರಿಗೆ ಲಿಂಕ್ ಸಿಕ್ಕಿದ್ದು ಚಾಮರಾಜನಗರದಲ್ಲಿನ ಒಂದು ಮಿಸ್ಸಿಂಗ್ ಕೇಸ್. ಆ ಮಿಸ್ಸಿಂಗ್ ಕೇಸ್ ಬೆನ್ನತ್ತಿದ್ದ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದನ್ನೂ ಓದಿ: ಸ್ವಾತಂತ್ರ್ಯ ದಿನಾಚರಣೆಗೂ ಮುನ್ನವೇ ಭಾರತದ ಮೇಲೆ ಉಗ್ರರ ದಾಳಿ ಭೀತಿ: ಗುಪ್ತಚರ ಇಲಾಖೆ ಎಚ್ಚರಿಕೆ

    ಪತ್ನಿ ಸಂಬಂಧಿಯೊಂದಿಗೆ ಲವ್ವಿ-ಡವ್ವಿ:
    ಬೆಂಗಳೂರು ಮೂಲದ ಸಿದ್ದಲಿಂಗಪ್ಪ(35) ಎಂಬಾತನೇ ಕೊಲೆ ಆರೋಪಿ. ಈತನಿಗೆ ಮದುವೆಯಾಗಿದ್ದರೂ ಪತ್ನಿ ಸಂಬಂಧಿಯ ಜೊತೆ ಲವ್‌ನಲ್ಲಿ ಬಿದ್ದಿದ್ದ. ಆದರೆ ಆಕೆಗೆ ವೇಶ್ಯಾವಟಿಕೆ ಲಿಂಕ್ ಇತ್ತು. ಇದನ್ನು ಸಿದ್ದಲಿಂಗಪ್ಪ ಸಹಿಲಾಗದೇ ಪ್ರೇಯಸಿಯ ಲಿಂಕ್‌ನಲ್ಲಿದ್ದ ಮಹಿಳೆಯರನ್ನೇ ಟಾರ್ಗೆಟ್ ಮಾಡಿಕೊಂಡು ಕೊಲೆಗೈಯ್ಯುತ್ತಿದ್ದ. ಪ್ರೇಯಸಿಯ ಗುಂಗಲ್ಲಿ ಸಿದ್ದಲಿಂಗಪ್ಪ ಸೈಕೋ ಆಗಿದ್ದ. ಅದಕ್ಕಾಗಿ ಪ್ರೇಯಸಿಗೆ ಹಣ, ಚಿನ್ನಾಭರಣದ ಆಸೆ ಹುಟ್ಟಿಸಿ ಮೂವರು ಮಹಿಳೆಯರ ಕೊಲೆಗೈದಿದ್ದಾನೆ. ಜೂನ್ 7ರಂದು ಇಬ್ಬರು ಮಹಿಳೆಯರ ಕೊಲೆಗೈದು ರುಂಡ-ಮುಂಡ ಬೇರೆ ಮಾಡಿ ಮಂಡ್ಯದ ಬೇಬಿ ಗ್ರಾಮದ ಕೆರೆ ಹಾಗೂ ಅರಕೆರೆ ಸಮೀಪದ ಕಿರುನಾಲೆಯಲ್ಲಿ ಮೃತದೇಹ ಎಸೆದಿದ್ದ.

    ಸಾವಿರಾರು ನಾಪತ್ತೆ ಪ್ರಕರಣಗಳನ್ನ ಜಾಲಾಡಿದ್ರೂ ಪೊಲೀಸರಿಗೆ ಸುಳಿವು ಸಿಕ್ಕಿರಲಿಲ್ಲ. ಇತ್ತ ದೇಹದ ಮೇಲ್ಭಾಗ ಸಿಗದೆ, ಮೃತರ ನಾಪತ್ತೆ ಪ್ರಕರಣವೂ ದಾಖಲಾಗದೆ ಪೊಲೀಸರಿಗೆ ತಲೆನೋವಾಗಿತ್ತು. ಹೀಗಿರೋವಾಗ ಜು.25ರಂದು ಚಾಮರಾಜನಗರದಲ್ಲಿ ಮಿಸ್ಸಿಂಗ್ ಕೇಸ್ ದಾಖಲಾಗಿತ್ತು. ಕಾಲ್ ಲಿಸ್ಟ್ ಆಧರಿಸಿ ತನಿಖೆ ನಡೆಸಿದಾಗ 3 ಕೊಲೆ ಪ್ರಕರಣ ಬಯಲಾಗಿದೆ. ಇದನ್ನೂ ಓದಿ: ಸಾಲು-ಸಾಲು ಸರಗಳ್ಳತನ- 5 ರಾಜ್ಯಗಳಲ್ಲಿ ಸದ್ದು ಮಾಡ್ತಿದ್ದ ಖತರ್ನಾಕ್ ಕಳ್ಳ ಬೆಂಗ್ಳೂರಿನಲ್ಲಿ ಅರೆಸ್ಟ್

    ಮೇ 30ರಂದು ಚಿತ್ರದುರ್ಗ ಮೂಲದ ಮಹಿಳೆಯೊಬ್ಬರ ಕೊಲೆಯಾಗಿತ್ತು. ಜು.3ರಂದು ಚಾಮರಾಜನಗರ ಮೂಲದ ಮತ್ತೊಂದು ಮಹಿಳೆಯ ಕೊಲೆಯಾಗಿತ್ತು. ಇಬ್ಬರನ್ನೂ ಮನೆಗೆ ಕರೆಸಿ ಕುತ್ತಿಗೆ ಬಿಗಿದು ಹತ್ಯೆಗೈದು, ನಂತರ ಇಬ್ಬರ ರುಂಡ ಮುಂಡ ಬೇರ್ಪಡಿಸಿ ನಾಲೆಗೆ ಎಸೆಯಲಾಗಿತ್ತು.

    ಅದರಲ್ಲೂ ಚಾಮರಾಜನಗರ ಮೂಲದ ಮಹಿಳೆ ನಾಪತ್ತೆ ಪ್ರಕರಣ ಬಳಿಕ ಈ ಎಲ್ಲಾ ಕೊಲೆ ರಹಸ್ಯ ಬಯಲಾಗಿದೆ. ಸಿದ್ದಲಿಂಗಪ್ಪ ಮತ್ತು ಉಳಿದ ಹಂತಕರು ತಗ್ಲಾಕೊಂಡಿದ್ದಾರೆ. ವಿಚಾರಣೆಯಲ್ಲಿ ಎರಡರ ಜೊತೆ ಮತ್ತೊಂದು ಕೊಲೆ ಹಾಗೂ 5 ಹತ್ಯೆ ಸ್ಕೆಚ್‌ಗಳ ಬಗ್ಗೆಯೂ ಪಾಪಿಗಳು ಬಾಯ್ಬಿಟ್ಟಿದ್ದಾರೆ. ಮಂಡ್ಯದ ನಾಲೆಯಲ್ಲಿ ಮಾತ್ರವಲ್ಲದೇ ಅದಕ್ಕೂ ಮೊದಲು ಬೆಂಗಳೂರಿನಲ್ಲೂ ಒಂದು ಕೊಲೆ ಮಾಡಿರೋದು ಗೊತ್ತಾಗಿದೆ. ಪ್ರಕರಣ ಭೇದಿಸಿದ ಮಂಡ್ಯ ಪೊಲೀಸರಿಗೆ 1 ಲಕ್ಷ ಬಹುಮಾನ ಘೋಷಣೆ ಮಾಡಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • KRS, ಕಬಿನಿ ಜಲಾಶಯಕ್ಕೆ ಬಾಗಿನ – ದಾಖಲೆ ಬರೆದ ಸಿಎಂ ಬೊಮ್ಮಾಯಿ

    KRS, ಕಬಿನಿ ಜಲಾಶಯಕ್ಕೆ ಬಾಗಿನ – ದಾಖಲೆ ಬರೆದ ಸಿಎಂ ಬೊಮ್ಮಾಯಿ

    ಮಂಡ್ಯ: ಹಳೆ ಮೈಸೂರು ಭಾಗದ ಜೀವನಾಡಿಯಾಗಿರುವ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಜಲಾಶಯಕ್ಕಿಂದು ವೃಶ್ಚಿಕ ಲಗ್ನದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಬಾಗಿನ ಅರ್ಪಿಸಿದ್ದಾರೆ. ಇದಕ್ಕೂ ಮುನ್ನ ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲ್ಲೂಕಿನ ಬಿದಿರಳ್ಳಿಯಲ್ಲಿರುವ ಕಬಿನಿ ಜಲಾಶಕ್ಕೂ ಬಾಗಿನ ಕೊಟ್ಟಿದ್ದಾರೆ.

    8 ತಿಂಗಳ ಅವಧಿಯಲ್ಲೇ ಬೊಮ್ಮಾಯಿ ಅವರು 2ನೇ ಬಾರಿಗೆ ಬಾಗಿನ ಅರ್ಪಿಸಿದ್ದಾರೆ. ಕೆಆರ್‌ಎಸ್ ಜಲಾಶಯ ಸಾಮಾನ್ಯವಾಗಿ ಆಗಸ್ಟ್ ನಲ್ಲಿ ಭರ್ತಿಯಾಗುತ್ತಿದ್ದರಿಂದ ಒಂದು ವರ್ಷ ಕಾಯಬೇಕಿತ್ತು. ಆದರೆ ಈ ಬಾರಿ ಮೂರು ತಿಂಗಳ ಮುಂಚೆಯೇ ಭರ್ತಿಯಾಗಿದ್ದು, 8 ತಿಂಗಳಲ್ಲೇ 2 ಬಾರಿ ಬಾಗಿನ ಅರ್ಪಿಸುವ ಅವಕಾಶ ಒದಗಿಬಂದಿದೆ. ಇದನ್ನೂ ಓದಿ: ದಕ್ಷಿಣ ಆಫ್ರಿಕಾ ಟಿ 20 ಲೀಗ್‌ – ಎಲ್ಲಾ 6 ತಂಡಗಳು ಐಪಿಎಲ್‌ ಫ್ರಾಂಚೈಸಿ ಪಾಲು

    ಸಿಎಂ ಆಗಮನದ ಹಿನ್ನೆಲೆಯಲ್ಲಿ ಹೂವು, ತಳಿರು ತೋರಣಗಳಿಂದ ಅಲಂಕರಿಸಿ ಕೆಆರ್‌ಎಸ್ ಹಾಗೂ ಕಬಿನಿ ಜಲಾಶಯದ ಹೊರಾಂಗಣವನ್ನು ಮದುವಣಗಿತ್ತಿಯಂತೆ ಸಿಂಗರಿಸಲಾಗಿತ್ತು. ವೃಶ್ಚಿಕ ಶುಭಲಗ್ನದಲ್ಲಿ ಸೀರೆ, ಬೆಲ್ಲ, ಅಕ್ಕಿ, ನವ ಧಾನ್ಯಗಳನ್ನು ಸಮರ್ಪಿಸುವ ಮೂಲಕ ಸಿಎಂ ಬಾಗಿನಕೊಟ್ಟರು. ಇದನ್ನೂ ಓದಿ: DSP‌ ಮಾದರಿಯಲ್ಲೇ ಮಹಿಳಾ PSI ಹತ್ಯೆ?- ತಪಾಸಣೆಗೆ ಮುಂದಾದ ಅಧಿಕಾರಿಗೆ ವಾಹನ ಡಿಕ್ಕಿ ಹೊಡೆದು ಸಾವು

    ಕಾರ್ಯಕ್ರಮದಲ್ಲಿ ಸಚಿವರಾದ ಗೋವಿಂದ ಕಾರಜೋಳ, ಕೆ.ಗೋಪಾಲಯ್ಯ, ಕೆ.ಸಿ.ನಾರಾಯಣ ಗೌಡ, ಎಸ್.ಟಿ.ಸೋಮಶೇಖರ್ ಸೇರಿದಂತೆ ಹಲವರು ಭಾಗಿಯಾಗಿದ್ದರು.

    ಈ ಹಿಂದೆ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು 6 ಬಾರಿ ಬಾಗಿನ ಬಿಟ್ಟು ಅತಿ ಹೆಚ್ಚು ಬಾರಿ ಬಾಗಿನ ಅರ್ಪಿಸಿದ ಸಿಎಂ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಇದೀಗ ಅತ್ಯಂತ ಕಡಿಮೆ ಅವಧಿಯಲ್ಲೇ 2 ಬಾರಿ ಬಾಗಿನ ಅರ್ಪಿಸಿದ ಹೆಗ್ಗಳಿಕೆಗೆ ಸಿಎಂ ಬೊಮ್ಮಾಯಿ ಪಾತ್ರರಾಗಿದ್ದಾರೆ.

    124.80 ಅಡಿ ಗರಿಷ್ಠ ಮಟ್ಟ ಹೊಂದಿರುವ ಕೆಆರ್‌ಎಸ್ ಜಲಾಶಯ ತುಂಬಿರುವುದರಿಂದ ಹಳೆ ಮೈಸೂರು ಭಾಗದ ಜನರಲ್ಲಿ ಸಂತಸ ಮನೆ ಮಾಡಿದೆ. ಹಾಗೆಯೇ 2,284 ಗರಿಷ್ಠಮಟ್ಟ ಹೊಂದಿರುವ ಕಬಿನಿ ಜಲಾಶಯ ತುಂಬಿರುವುದೂ ಜನರಲ್ಲಿ ಸಂತಹ ಹೆಚ್ಚಿಸಿದೆ. ಅದರೆ ಜಲಾನಯನ ಪ್ರದೇಶದಲ್ಲಿರುವ ಜನರಿಗೆ ಪ್ರವಾಹದ ಭೀತಿ ಉಂಟುಮಾಡಿದೆ. ಇದನ್ನೂ ಓದಿ: ‘ಪುಟ್ಟಪರ್ತಿ ಸಾಯಿಬಾಬಾ’ ಸಿನಿಮಾ ಮಾಡುವುದಾಗಿ ಘೋಷಿಸಿದ ಸಾಯಿ ಪ್ರಕಾಶ್ : ನಿರ್ದೇಶಕರ 100ನೇ ಸಿನಿಮಾವಿದು

    ಕೆಆರ್‌ಎಸ್ ಜಲಾಶಯ ಕಳೆದ ವರ್ಷ ಅಕ್ಟೋಬರ್ ತಿಂಗಳ ಕೊನೆಯ ವಾರದಲ್ಲಿ ಭರ್ತಿಯಾಗಿತ್ತು. ಆದರೆ ಈ ಬಾರಿ ಜುಲೈ ತಿಂಗಳ 2ನೇ ವಾರದಲ್ಲೇ ಭರ್ತಿಯಾಗಿದೆ. ಕೆಆರ್‌ಎಸ್‌ನ ಇತಿಹಾಸದಲ್ಲೇ ಜುಲೈ ತಿಂಗಳಲ್ಲಿ 6ನೇ ಬಾರಿಗೆ ಭರ್ತಿಯಾಗಿದೆ. ಈ ಹಿಂದೆ 1980, 2006, 2007, 2009, 2018ರಲ್ಲಿ ಭರ್ತಿಯಾಗಿದೆ.

    Live Tv
    [brid partner=56869869 player=32851 video=960834 autoplay=true]

  • KRS ನಿಂದ ನದಿಗೆ ನೀರು- ಕಾವೇರಿ ನದಿ ತೀರದ ಜನರಿಗೆ ಎಚ್ಚರಿಕೆ

    KRS ನಿಂದ ನದಿಗೆ ನೀರು- ಕಾವೇರಿ ನದಿ ತೀರದ ಜನರಿಗೆ ಎಚ್ಚರಿಕೆ

    ಮೈಸೂರು: ಕೃಷ್ಣರಾಜಸಾಗರ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ, ಜಲಾಶಯಕ್ಕೆ ಹೆಚ್ಚಿನ ನೀರು ಹರಿದು ಬರುತ್ತಿದೆ. ಕೃಷ್ಣರಾಜಸಾಗರ ಜಲಾಶಯದಿಂದ ಹೆಚ್ಚುವರಿ ನೀರನ್ನು ಕಾವೇರಿ ನದಿಗೆ ಬಿಡಲಾಗುವುದು ಎಂದು ನದಿ ತೀರದ ಜನರಿಗೆ ನೀರಾವರಿ ನಿಗಮ ಎಚ್ಚರಿಕೆ ನೀಡಿದೆ. ಇದನ್ನೂ ಓದಿ: ಬೆಂಗಳೂರು ನಗರ ಸೇರಿ 15 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

    KRS NOTICE

    ಕೃಷ್ಣರಾಜಸಾಗರ ಜಲಾಶಯದಿಂದ ಸುಮಾರು 10,000ದಿಂದ 20,000 ಕ್ಯೂಸೆಕ್ ನೀರನ್ನು ಕಾವೇರಿ ನದಿಗೆ ಬಿಡಲಾಗುವುದು. ಈ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇರುತ್ತದೆ ಎಂದು ತಿಳಿಸಿದೆ. ಇದನ್ನೂ ಓದಿ: ಚಿಕ್ಕಬಳ್ಳಾಪುರದಲ್ಲಿ ಮಳೆ ಅವಾಂತರ- ಹೂ ತೋಟಗಳು ಜಲಾವೃತ

    KRS

    ಕಾವೇರಿ ನದಿಯ ತಗ್ಗು ಪ್ರದೇಶದಲ್ಲಿ ಇರುವ ಮತ್ತು ನದಿಯ ಎರಡೂ ದಂಡೆಗಳಲ್ಲಿ ಇರುವ ಸಾರ್ವಜನಿಕರು ತಮ್ಮ ಆಸ್ತಿ ಪಾಸ್ತಿ ಹಾಗೂ ಜಾನುವಾರುಗಳ ರಕ್ಷಣೆಗೆ ಎಚ್ಚರಿಕೆ ವಹಿಸಿ ಸೂಕ್ತ ಮುಂಜಾಗ್ರತೆ ಕೈಗೊಂಡು ಸುರಕ್ಷಿತ ಸ್ಥಳಗಳಿಗೆ ಹೋಗಲು ಸೂಚನೆ ನೀಡಿದೆ.

  • ಭರ್ತಿಯಾಗಿಲ್ಲ KRS – ಈ ಬಾರಿ ಎದುರಾಗಲಿದೆ ನೀರಿಗೆ ಸಮಸ್ಯೆ

    ಭರ್ತಿಯಾಗಿಲ್ಲ KRS – ಈ ಬಾರಿ ಎದುರಾಗಲಿದೆ ನೀರಿಗೆ ಸಮಸ್ಯೆ

    -ಬಸವರಾಜ ಬೊಮ್ಮಯಿ ಅವರಿಗಿಲ್ಲ ಬಾಗಿನ ಬಿಡುವ ಭಾಗ್ಯ

    ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಹಿಂಗಾರು ಹಾಗೂ ಮುಂಗಾರು ಮಳೆ ಬೀಳದ ಕಾರಣ ಹಳೇ ಮೈಸೂರು ಭಾಗದ ಜೀವನಾಡಿಯಾಗಿರುವ ಕೆಆರ್​ಎಸ್ ಜಲಾಶಯ ಈ ಬಾರಿ ಭರ್ತಿಯಾಗಿಲ್ಲ. ಹೀಗಾಗಿ ಬೇಸಿಗೆಗಾಲದಲ್ಲಿ ಬೆಂಗಳೂರು, ಮೈಸೂರು, ಮಂಡ್ಯ ಭಾಗದಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಸೃಷ್ಟಿಯಾಗುವ ಸಾಧ್ಯತೆ ಇದೆ. ಹೀಗಾಗಿ ಜನರು ನೀರನ್ನು ಹಿತ-ಮಿತವಾಗಿ ಬಳಕೆ ಮಾಡಬೇಕಾಗಿದೆ.

    KRS Dam

    ಪ್ರತಿ ವರ್ಷ ಹಳೆ ಮೈಸೂರು ಭಾಗದ ಜೀವನಾಡಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕೆಆರ್​ಎಸ್ ಜಲಾಶಯ ಭರ್ತಿಯಾಗಿ, ರೈತರಲ್ಲಿ ಹಾಗೂ ಜನರಲ್ಲಿ ನೆಮ್ಮದಿಯನ್ನುಂಟು ಮಾಡುತ್ತಿತ್ತು. ಆದರೆ ಈ ಬಾರಿ ನಿರೀಕ್ಷಿತ ಪ್ರಮಾಣದಲ್ಲಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಹಿಂಗಾರು ಹಾಗೂ ಮುಂಗಾರು ಮಳೆಯಾಗದ ಕಾರಣ ಸದ್ಯ ಕೆಆರ್​ಎಸ್ ಜಲಾಶಯ ಭರ್ತಿಯಾಗಿಲ್ಲ. ಅಲ್ಲದೇ ಪ್ರತಿವರ್ಷ ತಮಿಳುನಾಡಿಗೆ 177 ಟಿಎಂಸಿ ಅಷ್ಟು ನೀರನ್ನು ಹರಿಸಬೇಕು, ಸದ್ಯ ಇಲ್ಲಿಯವರೆಗೆ ತಮಿಳುನಾಡಿಗೆ 80 ಟಿಎಂಸಿ ನೀರನ್ನು ಮಾತ್ರ ಬಿಡಲಾಗಿದೆ. ಸದ್ಯ 124.80 ಅಡಿ ಇರುವ ಕೆಆರ್​ಎಸ್ ಜಲಾಶಯದಲ್ಲಿ 115.92 ಅಡಿ ಮಾತ್ರ ನೀರಿದೆ. ಟಿಎಂಸಿ ಲೆಕ್ಕಾಚಾರದಲ್ಲಿ ಹೇಳುವುದಾದರೆ ಕೆಆರ್​ಎಸ್ ಜಲಾಶಯ ಸಾಮರ್ಥ್ಯ 49.452 ಟಿಎಂಸಿಯಷ್ಟು ಇದ್ದರೆ, ಈಗ 38.107 ಟಿಎಂಸಿಯಷ್ಟು ಮಾತ್ರ ನೀರು ಸಂಗ್ರಹವಾಗಿದೆ. ಈಗ ಇರುವ 38.107 ಟಿಎಂಸಿ ನೀರಿನಲ್ಲಿ ಬೆಳೆಗಳಿಗೆ ನೀರು, ಕುಡಿಯುವ ನೀರು ಹಾಗೂ ತಮಿಳುನಾಡಿಗೆ ಬಿಡಬೇಕಾದ ಕೋಟಾವನ್ನು ಮ್ಯಾನೇಜ್ ಮಾಡಬೇಕಿದೆ. ಸದ್ಯ ಕೆಆರ್‌ಎಸ್‌ಗೆ ಒಳನೀರಿನ ಪ್ರಮಾಣ 5,097 ಕ್ಯೂಸೆಕ್ ಇದ್ದು, ನಿತ್ಯ 10 ಸಾವಿರಕ್ಕೂ ಹೆಚ್ಚು ಕ್ಯೂಸೆಕ್ ನೀರನ್ನು ಹರಿ ಬಿಡಲಾಗುತ್ತಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಛತ್ತೀಸ್‍ಗಢದ ಬಿಜೆಪಿ ಮಾಜಿ MLA ನಿಧನ

    KRS Dam

    ಪ್ರತಿ ವರ್ಷ ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದ್ದ ಕಾರಣ, ಮುಂಗಾರು ಮಳೆ ಮುಗಿಯುವ ಹೊತ್ತಿಗೆ ತಮಿಳುನಾಡಿನ ಮುಕ್ಕಾಲು ಭಾಗದ ಕೋಟಾವನ್ನು ಮುಗಿಸಲಾಗುತ್ತಿತ್ತು. ಆದರೆ ಈ ಬಾರಿ ಡ್ಯಾಂ ತುಂಬದ ಕಾರಣ ಇನ್ನೂ ಅರ್ಧದಷ್ಟು ಕೋಟಾವನ್ನು ಮುಗಿಸಲು ಸಾಧ್ಯವಾಗಿಲ್ಲ. ಒಂದು ವೇಳೆ ಮುಂದಿನ ದಿನಗಳಲ್ಲಿ ಮಳೆಯಾಗದೇ ಇದ್ದರೆ, ಡ್ಯಾಂನಲ್ಲಿ ತಮಿಳುನಾಡಿಗೆ ನೀರು ಬಿಡಲು ಸಂಕಷ್ಟ ಸೂತ್ರವನ್ನು ಅನುಸರಿಸಬೇಕಾಗುತ್ತದೆ. ಅಷ್ಟೋತ್ತಿಗೆ ಬೇಸಿಗೆ ಕಾಲ ಆರಂಭವಾಗಲಿದ್ದು, ಆ ವೇಳೆಗೆ ಬೆಂಗಳೂರು, ಮೈಸೂರು, ಮಂಡ್ಯ ಭಾಗಗಳಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ ಜನರು ಹೀಗಿನಿಂದಲೇ ಎಚ್ಚೆತ್ತುಕೊಂಡು ನೀರನ್ನು ಹಿತ-ಮಿತವಾಗಿ ಬಳಸುವುದು ಸೂಕ್ತವಾಗಿದೆ. ಇದನ್ನೂ ಓದಿ: ವಿಸರ್ಜನೆ ಸಂಬಂಧ ಜಿಲ್ಲಾಡಳಿತ, ಗಣಪತಿ ಮಂಡಳಿ ನಡುವೆ ಜಟಾಪಟಿ

    KRS Dam

    ಈ ಬಾರಿ ಕೆಆರ್​ಎಸ್ ಜಲಾಶಯ ಭರ್ತಿಯಾಗದ ಕಾರಣ ಕಾವೇರಿ ಮಾತೇಗೆ ಪ್ರತಿವರ್ಷ ಸಿಎಂ ಬಾಗಿನ ನೀಡುವ ಸಂಪ್ರದಾಯ ಏನು ಇತ್ತು ಅದು ಕೂಡ ನೇರವೇರಿಲ್ಲ. ಹೀಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕಾವೇರಿಗೆ ಬಾಗಿನ ಬಿಡುವ ಭಾಗ್ಯವು ಸಹ ಇಲ್ಲದಂತೆ ಆಗಿದೆ. ಈ ಹಿಂದೆ ಸಿದ್ದರಾಮಯ್ಯ ಅವರು ಸಿಎಂ ಆಗಿದ್ದ ವೇಳೆ 2015 – 2017 ರವರೆಗೆ ಸತತ ಮೂರು ವರ್ಷಗಳ ಕಾಲ ಕೆಆರ್​ಎಸ್ ಜಲಾಶಯ ಭರ್ತಿಯಾಗಿರಲಿಲ್ಲ, ಹೀಗಾಗಿ ಅವರು ಸಹ ಮೂರು ಬಾರಿ ಬಾಗಿನ ನೀಡುವ ಭಾಗ್ಯವನ್ನು ಕಳೆದುಕೊಂಡಿದ್ದರು. ಯಡಿಯೂರಪ್ಪ ಅವರು ಸಿಎಂ ಆಗಿದ್ದ ಅವಧಿಗಳಲ್ಲಿ ಕೆಆರ್​ಎಸ್ ಭರ್ತಿಯಾಗಿದ್ದ ಕಾರಣ ಐದು ಬಾರಿ ಕಾವೇರಿ ಮಾತೆಗೆ ಬಾಗಿನ ನೀಡಿ ಅತೀ ಹೆಚ್ಚು ಬಾರಿ ಕೆಆರ್‌ಎಸ್‌ಗೆ ಬಾಗಿನ ಸಲ್ಲಿಸದ ಅದೃಷ್ಟ ಅವರದ್ದಾಗಿದೆ. ಇದನ್ನೂ ಓದಿ: ಮೊದಲ ಅವಾರ್ಡ್ ಅಪ್ಪನ ಫೋಟೋ ಮುಂದೆ ಇರಿಸಿದ ಅಭಿಷೇಕ್ ಅಂಬರೀಷ್

    ಈ ಬಾರಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಹಿಂಗಾರು ಮತ್ತು ಮುಂಗಾರು ನಿರೀಕ್ಷಿತ ಮಟ್ಟದಲ್ಲಿ ಬೀಳದ ಕಾರಣ ಕೆಆರ್​ಎಸ್ ಭರ್ತಿಯಾಗಿಲ್ಲ. ಇದರಿಂದ ತಮಿಳುನಾಡಿನ ಕೋಟಾ ಮುಗಿಯದೇ ಇರುವುದರಿಂದ ಬೇಸಿಗೆಯಲ್ಲಿ ನೀರಿಗಾಗಿ ಹಾಹಾಕಾರ ಪಡಬೇಕಾದಂತಹ ಸ್ಥಿತಿ ನಿರ್ಮಾಣವಾಗುವ ಸಾಧ್ಯತೆ ಇದೆ. ಹೀಗಾಗಿ ಜನರು ಈ ಬಗ್ಗೆ ಎಚ್ಚೆತ್ತುಕೊಂಡು ಜನರು ನೀರನ್ನು ಹಿತ-ಮಿತವಾಗಿ ಬಳಕೆ ಮಾಡಬೇಕಾಗಿದೆ.

  • ಭರ್ತಿಯಾಗುತ್ತಿರುವ ಕನ್ನಂಬಾಡಿ- ಸೋಮವಾರದಿಂದ ವಿಸಿ ನಾಲೆಗೆ ನೀರು ಹರಿಸಲು ಸಚಿವ ನಾರಾಯಣಗೌಡ ಸೂಚನೆ

    ಭರ್ತಿಯಾಗುತ್ತಿರುವ ಕನ್ನಂಬಾಡಿ- ಸೋಮವಾರದಿಂದ ವಿಸಿ ನಾಲೆಗೆ ನೀರು ಹರಿಸಲು ಸಚಿವ ನಾರಾಯಣಗೌಡ ಸೂಚನೆ

    ಮಂಡ್ಯ: ಕಾವೇರಿ ಕಣಿವೆ ಸುತ್ತ ಸಾಕಷ್ಟು ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣರಾಜ ಜಲಾಶಯ ಭರ್ತಿಯಾಗುತ್ತಿದೆ. ಈಗಾಗಲೇ 106 ಅಡಿಗೂ ಹೆಚ್ಚು ನೀರು ಜಲಾಶಯಕ್ಕೆ ಹರಿದು ಬಂದಿದೆ. ಹೀಗಾಗಿ ಕೃಷಿ ಚಟುವಟಿಕೆಗೆ ಅನುಕೂಲವಾಗುವಂತೆ ನಾಲೆಗಳಿಗೆ ನೀರು ಹರಿಸುವಂತೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಡಾ. ನಾರಾಯಣಗೌಡ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

    ಕಾವೇರಿ ನೀರನ್ನು ಅವಲಂಬಿಸಿ ಕೃಷಿ ಚಟುವಟಿಕೆ ನಡೆಸುವ ರೈತರಿಗೆ ಸಂತಸದ ಸುದ್ದಿ ಇದು. ಕೆಆರ್ ಸ್ ಅಣೆಕಟ್ಟಿನ 124 ಅಡಿಗಳ ಪೈಕಿ 106 ಅಡಿ ನೀರು ತುಂಬಿದೆ. 35 ಸಾವಿರ ಕ್ಯೂಸೆಕ್ಸ್ ಒಳ ಹರಿವಿನ ಪ್ರಮಾಣ ಇದೆ. ಕೇವಲ 24 ಗಂಟೆಯಲ್ಲಿ ಎರಡು ಅಡಿಯಷ್ಟು ನೀರು ಭರ್ತಿಯಾಗಿದೆ. 6 ಸಾವಿರ ಕ್ಯೂಸೆಕ್ಸ್ ನೀರನ್ನು ಹೊರಗಡೆ ಬಿಡಲಾಗುತ್ತಿದೆ. ಈಗಾಗಲೇ ಹೇಮಾವತಿ ನಾಲೆಗೆ ನೀರು ಬಿಡಲಾಗಿದ್ದು, ಸೋಮವಾರಿಂದ ವಿಸಿ ನಾಲೆಗೆ ನೀರು ಹರಿಸುವ ಮೂಲಕ ಮುಂಗಾರು ಕೃಷಿಗೆ ಅನುಕೂಲ ಮಾಡಿಕೊಡಲಾಗುತ್ತಿದೆ.

    ಸಬ್ಸಿಡಿಯಲ್ಲಿ ಭತ್ತದ ಬೀಜ ವಿತರಣೆ ಪ್ರಾರಂಭ:
    ಸಕ್ಕರೆ ನಾಡು ಎಂದು ಕರೆಸಿಕೊಳ್ಳುವ ಮಂಡ್ಯ ಜಿಲ್ಲೆಯಲ್ಲಿ ಕಬ್ಬಿಗಿಂತಲೂ ಹೆಚ್ಚಿನ ಪ್ರದೇಶದಲ್ಲಿ ಭತ್ತ ಬೆಳೆಯಲಾಗುತ್ತದೆ. 40 ಸಾವಿರ ಹೆಕ್ಟೇರ್ ನಲ್ಲಿ ಕಬ್ಬು ಬೆಳೆದರೆ 65 ಸಾವಿರ ಹೆಕ್ಟೇರ್ ನಲ್ಲಿ ಭತ್ತ ಬೆಳೆಯಲಾಗುತ್ತದೆ. ಮುಂಗಾರು ಕೃಷಿ ಆರಂಭಿಸಲು ನಾಲೆಗಳಿಗೆ ನೀರು ಬಿಡುವ ಸಮಯವನ್ನೇ ಎದುರು ನೋಡಲಾಗುತ್ತಿತ್ತು. ಕೆಆರ್ ಎಸ್ ಭರ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ಈಗ ನೀರು ಹರಿಸಲಾಗುತ್ತಿದೆ. ಹೀಗಾಗಿ ಕೃಷಿ ಇಲಾಖೆ ಸಹ ಸಬ್ಸಿಡಿಯಲ್ಲಿ ಭತ್ತದ ಬೀಜವನ್ನು ವಿತರಿಸುವ ಕಾರ್ಯ ಆರಂಭಿಸಲಿದೆ. ಮುಂದಿನ ಬುಧವಾರದಿಂದ ರೈತರಿಗೆ ಭತ್ತದ ಬೀಜ ವಿತರಣೆ ಶುರುವಾಗಲಿದೆ. ಸುಮಾರು 4 ಸಾವಿರ ಹೆಕ್ಟೇರ್ನಲ್ಲಿ ನೀರಾವರಿ ರಾಗಿ ಹಾಗೂ 500 ಹೆಕ್ಟೇರ್ ನಲ್ಲಿ ಅಲಸಂದೆ ಕೂಡ ಬೆಳೆಯಲಾಗುತ್ತದೆ. ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗೆ ಅಗತ್ಯವಿರುವ ಗೊಬ್ಬರ ಸಹ ದಾಸ್ತಾನು ಇದ್ದು, ಪ್ರತಿ ತಿಂಗಳು ನಿಗದಿತ ಪ್ರಮಾಣದಲ್ಲಿ ಸರಬರಾಜು ಆಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ರಾಜ್ಯ ಉಳಿಸಬೇಕಾದರೆ ಕಾಂಗ್ರೆಸ್ ಕಿತ್ತೊಗೆಯಬೇಕೆಂದ ಸಿದ್ದರಾಮಯ್ಯ- ಮತ್ತೆ ಎಡವಟ್ಟು

    ವರುಣನ ಕೃಪೆಯಿಂದ ರೈತರ ಬದುಕು ಹಸನಾಗಲಿ:
    ಮಂಡ್ಯ ಜಿಲ್ಲೆಯಲ್ಲಿ ವ್ಯವಸಾಯವೇ ಪ್ರಧಾನ ಕಸುಬು. ಸಂಪೂರ್ಣ ಜಿಲ್ಲೆ ಕೃಷಿಯಿಂದ ಆವೃತವಾಗಿದೆ. ರೈತನ ಬದುಕಿಗೆ ನೀರೇ ಪ್ರಧಾನ. ಕಳೆದ ಮೂರು ವರ್ಷಗಳಿಂದ ಸತತವಾಗಿ ಕೆ.ಆರ್.ಎಸ್. ಜಲಾಶಯ ಭರ್ತಿಯಾಗುತ್ತಿರುವುದು ನನಗೆ ಅತೀವ ಸಂತಸ ತಂದಿದೆ. ಕಾವೇರಿ ನದಿ ತುಂಬಿ ಹರಿದರೆ ರೈತರ ಜೀವನ ಕೂಡ ಸಂತಸದಿಂದ ತುಂಬಿರುತ್ತದೆ. ಸಾಕಷ್ಟು ಮಳೆಯಾಗಿ, ಜಲಾಶಯ ತುಂಬುತ್ತಿರುವ ಕಾರಣ ನಾಲೆಗಳಿಗೆ ನೀರು ಹರಿಸಲಾಗುತ್ತಿದೆ. ರೈತರು ನೀರನ್ನು ಪೋಲು ಮಾಡದೆ ಸದುಪಯೋಗಪಡಿಸಿಕೊಳ್ಳಬೇಕು. ರೈತರು ಅಂದುಕೊಂಡಂತೆ ಉತ್ತಮ ಬೆಳೆಯಾಗಲಿ. ವರುಣ ಕೃಪೆಯಿಂದ ನೀರಿನ ಕೊರತೆಯಾಗದೆ ಯಥೇಚ್ಚ ಫಸಲು ಬರಲಿ. ಆ ಮೂಲಕ ರೈತರ ಬದುಕು ಹಸನಾಗಲಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ನಾರಾಯಣಗೌಡ ಹಾರೈಸಿದ್ದಾರೆ. ಇದನ್ನೂ ಓದಿ: ಸೆಪ್ಟೆಂಬರ್ ವೇಳೆಗೆ ಮಕ್ಕಳಿಗೆ ಕೋವಿಡ್ ಲಸಿಕೆ – ಏಮ್ಸ್ ನಿರ್ದೇಶಕ ರಣದೀಪ್ ಗುಲೇರಿಯಾ

  • ಕಾವೇರಿ ನದಿಯಲ್ಲಿ ಅಕ್ರಮ ಮೀನುಗಾರಿಕೆಗೆ ಪ್ರಯತ್ನ – 8 ಜನರ ಬಂಧನ

    ಕಾವೇರಿ ನದಿಯಲ್ಲಿ ಅಕ್ರಮ ಮೀನುಗಾರಿಕೆಗೆ ಪ್ರಯತ್ನ – 8 ಜನರ ಬಂಧನ

    ಚಾಮರಾಜನಗರ: ಕಾವೇರಿ ನದಿಯಲ್ಲಿ ಅಕ್ರಮವಾಗಿ ಮೀನುಗಾರಿಕೆಗೆ ತೆರಳುತ್ತಿದ್ದ 8 ಮಂದಿ ಆರೋಪಿಗಳನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ.

    ಕೊಳ್ಳೇಗಾಲ ತಾಲೂಕಿನ ಸತ್ತೇಗಾಲದ ಜಾಗೇರಿ ಚಿನ್ನಪ್ಪ(42), ಅಮಲ್ ಅರ್ಪುದ್ ಜಯರಾಜ್(32), ಪೀಟರ್ ಪೇರಿಯನಾಯಗಂ (35), ಸ್ಟ್ಯಾನ್ಯಿ ಜಾನ್ ಬೋಸ್ಕೊ(35), ಅರುಳ್ ರಾಜ್ (35), ಪೆರಿಯನಾಯಗಮ್ಮ(34), ಜ್ಯೋತಿಪ್ರಿಯಾ(28) ಹಾಗೂ ಸುನೀತಾ(28) ಬಂಧಿತ ಆರೋಪಿಗಳು. ಕಾವೇರಿ ವನ್ಯಜೀವಿ ವ್ಯಾಪ್ತಿಯ ಅರಣ್ಯದ ಚಿಕ್ಕಲ್ಲೂರು ಬೀಟ್ ಗೆ ಸೇರಿದ ಅರಣ್ಯದ ಎಣ್ಣೆಹೊಳೆಯ ಬಳಿ ಅಕ್ರಮವಾಗಿ ಮೀನು ಹಿಡಿಯಲು ಪರಿಕರಗಳೊಂದಿಗೆ ಆರೋಪಿಗಳು ಹೊರಟಿದ್ದರು.

    ಈ ಬಗ್ಗೆ ಖಚಿತ ಮಾಹಿತಿ ಆಧರಿಸಿ ಕಾವೇರಿ ವನ್ಯಜೀವಿ ಡಿಸಿಎಫ್ ಎಸ್.ರಮೇಶ್ ಹಾಗೂ ಎಸಿಎಫ್ ಅಂಕರಾಜು ಮಾರ್ಗದರ್ಶನದಲ್ಲಿ ಇಲ್ಲಿನ ಅರಣ್ಯಾಧಿಕಾರಿಗಳು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಐದು ಬೋಟ್, ಐದು ಬಲೆ, ಐದು ಹುಟ್ಟು, ಮೀನು ಬೇಟೆಯ ಪರಿಕರಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಾಗಿದೆ.

  • ತಲಕಾಡಿನಲ್ಲಿ ಪ್ರಿ ವೆಡ್ಡಿಂಗ್ ಫೋಟೋಶೂಟ್ – ತೆಪ್ಪ ಮುಳುಗಿ ನವಜೋಡಿ ಸಾವು

    ತಲಕಾಡಿನಲ್ಲಿ ಪ್ರಿ ವೆಡ್ಡಿಂಗ್ ಫೋಟೋಶೂಟ್ – ತೆಪ್ಪ ಮುಳುಗಿ ನವಜೋಡಿ ಸಾವು

    ಮೈಸೂರು: ಪ್ರಿ ವೆಡ್ಡಿಂಗ್ ಫೋಟೋಶೂಟ್ ಮಾಡಿಸಲು ಹೋದ ನವಜೋಡಿ ತೆಪ್ಪ ಮುಳಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ತಲಕಾಡಿನಲ್ಲಿ ನಡೆದಿದೆ.

    ಇತ್ತೀಚೆಗೆ ಮದುವೆಗೂ ಮುಂಚೆ ವಧು ಮತ್ತು ವರ ಸ್ಟೈಲಿಶ್ ಆಗಿ ಪ್ರಿ ವೆಡ್ಡಿಂಗ್ ಫೋಟೋ ಶೂಟ್ ಮಾಡಿಸುವ ಹೊಸ ಟ್ರೆಂಡ್ ಹುಟ್ಟಿಕೊಂಡಿದೆ. ಫೋಟೋ ವಿಭಿನ್ನವಾಗಿ ಮತ್ತು ಚೆನ್ನಾಗಿ ಬರಬೇಕು ಎಂದು ಹುಚ್ಚು ಸಾಹಸಕ್ಕೆ ಕೈಹಾಕಿ ಜೋಡಿಗಳು ಫೋಟೋ ಶೂಟ್ ಮಾಡಿಸುತ್ತಾರೆ. ಹೀಗೆ ಫೋಟೋ ಶೂಟ್ ಮಾಡಿಸಲು ಹೋಗಿ ನವಜೋಡಿಗಳು ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ.

    ಮೈಸೂರಿನ ಕ್ಯಾತಮಾರನಹಳ್ಳಿ ನಿವಾಸಿಗಳಾಗಿದ್ದ ಚಂದ್ರು ಮತ್ತು ಶಶಿಕಲಾ ಮದುವೆ ನಿಶ್ಚಯವಾಗಿತ್ತು. ಅಂತೆಯೇ ನವೆಂಬರ್ 22ರಂದು ಮದುವೆ ಮಾಡಲು ಕುಟುಂಬಸ್ಥರು ತಯಾರಿ ಕೂಡ ನಡೆಸಿದ್ದರು. ಆದರೆ ಚಂದ್ರು ಮತ್ತು ಶಶಿಕಲಾ ಪ್ರಿ ವೆಡ್ಡಿಂಗ್ ಫೋಟೋಶೂಟ್ ಮಾಡಿಸಲು ಮನೆಯವರಿಗೆ ಹೇಳದೇ ಮೈಸೂರಿನ ತಲಕಾಡಿನ ಮುಡುಕುತೊರೆ ಗ್ರಾಮದಲ್ಲಿ ಹರಿಯುವ ಕಾವೇರಿ ನದಿಗೆ ಹೋಗಿದ್ದಾರೆ.

    ಮುಡುಕುತೊರೆಯ ಕಾವೇರಿ ನದಿಯಲ್ಲಿ ತೆಪ್ಪವನ್ನು ತೆಗೆದುಕೊಂಡು ಮಧ್ಯಭಾಗದಲ್ಲಿ ಫೋಟೋಶೂಟ್ ಮಾಡಿಸಲು ತೆರೆಳಿದ್ದಾರೆ. ಈ ವೇಳೆ ತೆಪ್ಪ ಮುಳುಗಿ ನವಜೋಡಿಗಳಿಬ್ಬರು ನೀರುಪಾಲಾಗಿದ್ದಾರೆ. ನಂತರ ಸ್ಥಳಕ್ಕೆ ಬಂದ ಪೊಲೀಸರು ಕಾರ್ಯಾಚರಣೆ ಮಾಡಿ ಇಬ್ಬರ ಶವಗಳನ್ನು ಹೊರಕ್ಕೆ ತೆಗೆದಿದ್ದಾರೆ. ಈ ಸಂಬಂಧ ತಲಕಾಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.