Tag: CBI Speical Court

  • ವಿಜಯ ಮಲ್ಯ ಬಳಿ ಸಾಲ ತೀರಿಸುವಷ್ಟು ಹಣವಿದೆ – CBIನಿಂದ 3ನೇ ಚಾರ್ಜ್‌ಶೀಟ್‌ ಸಲ್ಲಿಕೆ

    ವಿಜಯ ಮಲ್ಯ ಬಳಿ ಸಾಲ ತೀರಿಸುವಷ್ಟು ಹಣವಿದೆ – CBIನಿಂದ 3ನೇ ಚಾರ್ಜ್‌ಶೀಟ್‌ ಸಲ್ಲಿಕೆ

    ನವದೆಹಲಿ: 2015-16ರ ಅವಧಿಯಲ್ಲಿ ತಮ್ಮ ಕಿಂಗ್‌ಫಿಷರ್ ಏರ್‌ಲೈನ್ಸ್ ನಗದು ಕೊರತೆ ಎದುರಿಸುತ್ತಿದ್ದ ಸಮಯದಲ್ಲೇ ಉದ್ಯಮಿ ವಿಜಯ ಮಲ್ಯ (Vijaya Mallya) ಇಂಗ್ಲೆಂಡ್ ಮತ್ತು ಫ್ರಾನ್ಸ್ ದೇಶಗಳಲ್ಲಿ 330 ಕೋಟಿ ರೂ. (ಬ್ರಿಟನ್ ನಲ್ಲಿ 80 ಕೋಟಿ ರೂ., ಫ್ರಾನ್ಸ್‌ನಲ್ಲಿ 250 ಕೋಟಿ ರೂ. ಮೌಲ್ಯದ ಆಸ್ತಿ) ಮೌಲ್ಯದ ಆಸ್ತಿ ಖರೀದಿಸಿದ್ದಾರೆ ಎಂದು ಕೇಂದ್ರೀಯ ತನಿಖಾ ದಳ (CBI) ಮುಂಬೈ ಸಿಬಿಐ ವಿಶೇಷ ನ್ಯಾಯಾಲಯಕ್ಕೆ (CBI Speical Court) ಸಲ್ಲಿಸಿರುವ 3ನೇ ಪೂರಕ ಆರೋಪಪಟ್ಟಿಯಲ್ಲಿ ಉಲ್ಲೇಖಿಸಿದೆ.

    ಅಷ್ಟೇ ಅಲ್ಲದೇ 2017ರಲ್ಲಿ ವಿಜಯ ಮಲ್ಯ ಅವರ ಆಸ್ತಿ ಮೌಲ್ಯ 7,500 ಕೋಟಿ ರೂ. ಎಂದು ಸ್ವಿಸ್ ಬ್ಯಾಂಕ್ (Swiss Bank) ಅಂದಾಜಿಸಿದ್ದು, ಬ್ಯಾಂಕ್‌ಗಳ ಸಾಲ ತೀರಿಸಲು ಬೇಕಾದಷ್ಟು ಹಣ ಅವರ ಬಳಿ ಇದೆ. ಯುಕೆನಲ್ಲಿ ಸುಮಾರು 44 ಮದ್ಯ ಘಟಕಗಳನ್ನ ಅವರು ಸ್ಥಾಪಿಸಿದ್ದರು. ಆ ಮೂಲಕ ಅವರು ಯುರೋಪಿನಾದ್ಯಂತ ಹಲವಾರು ಕಡೆ ಹೂಡಿಕೆ ಮತ್ತು ಆಸ್ತಿ ಖರೀದಿಸಿದ್ದಾರೆ ಎಂದು ಹೇಳಿದೆ.

    900 ಕೋಟಿ ರೂ.ಗಿಂತಲೂ ಹೆಚ್ಚು ಮೊತ್ತದ ಐಡಿಬಿಐ ಬ್ಯಾಂಕ್ (ADBI Bank) -ಕಿಂಗ್‌ಫಿಷರ್ ಏರ್‌ಲೈನ್ಸ್ (Kingfisher Airlines) ಸಾಲ ವಂಚನೆ ಪ್ರಕರಣದಲ್ಲಿ ವಿಜಯ ಮಲ್ಯ ಆರೋಪಿಯಾಗಿದ್ದು, ಈ ಸಂಬಂಧ ಸಿಬಿಐ ಇತ್ತೀಚೆಗೆ ಇಲ್ಲಿನ ವಿಶೇಷ ಸಿಬಿಐ ನ್ಯಾಯಾಲಯಕ್ಕೆ ಪೂರಕ ಚಾರ್ಜ್‌ಶೀಟ್‌ ಸಲ್ಲಿಸಿದೆ. ಇದನ್ನೂ ಓದಿ: ಬೆಡ್‌ರೂಂನಲ್ಲಿ ಮಲಗಿದ್ದ 6 ಅಡಿ ಬುಸ್ ಬುಸ್ ಹಾವು – ಎದ್ನೋ ಬಿದ್ನೋ ಅಂತಾ ಓಡಿದ ಮಹಿಳೆ!

    ಸಿಬಿಐ ಹಿಂದಿನ ಚಾರ್ಜ್‌ಶೀಟ್‌ಗಳಲ್ಲಿ ಹೆಸರಿಸಲಾದ ಎಲ್ಲಾ 11 ಆರೋಪಿಗಳ ಜೊತೆಗೆ, ತನಿಖಾ ಸಂಸ್ಥೆ ತನ್ನ ಇತ್ತೀಚಿನ ಪೂರಕ ಆರೋಪ ಪಟ್ಟಿಯಲ್ಲಿ ಐಡಿಬಿಐ ಬ್ಯಾಂಕ್‌ನ ಮಾಜಿ ಜನರಲ್ ಮ್ಯಾನೇಜರ್ ಬುದ್ಧದೇವ್ ದಾಸ್‌ಗುಪ್ತಾ ಅವರ ಹೆಸರನ್ನು ಸೇರಿಸಿದೆ. ಇದನ್ನೂ ಓದಿ: ಪೊಲೀಸರ ಭರ್ಜರಿ ಕಾರ್ಯಾಚರಣೆ – ದಾಖಲೆ ಇಲ್ಲದ 9 ಕೆಜಿ ಚಿನ್ನ ಜಪ್ತಿ

    2009ರ ಅಕ್ಟೋಬರ್‌ನಲ್ಲಿ 150 ಕೋಟಿ ರೂ. ಅಲ್ಪಾವಧಿ ಸಾಲ ಮಂಜೂರಾತಿ ಮತ್ತು ವಿತರಣೆಗಾಗಿ ದಾಸ್‌ಗುಪ್ತಾ ಅವರು ತಮ್ಮ ಹುದ್ದೆ ದುರುಪಯೋಗಪಡಿಸಿಕೊಂಡಿದ್ದಾರೆ. ವಿಜಯ ಮಲ್ಯ ಜೊತೆ ಸೇರಿ ಪಿತೂರಿ ನಡೆಸಿದ್ದಾರೆ. ಏರ್‌ಲೈನ್ಸ್‌ಗೆ ಸಾಲ ನೀಡುವ ವಿಚಾರದಲ್ಲಿ ಅವರು ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ಸಿಬಿಐ ತಿಳಿಸಿದೆ.

  • ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್‌ಗಿಲ್ಲ ರಿಲೀಫ್ – ಜಾಮೀನು ಅರ್ಜಿ ವಜಾ

    ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್‌ಗಿಲ್ಲ ರಿಲೀಫ್ – ಜಾಮೀನು ಅರ್ಜಿ ವಜಾ

    ನವದೆಹಲಿ: ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಇಡಿಯಿಂದ ಬಂಧನಕ್ಕೆ ಒಳಗಾಗಿರುವ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್‌ಗೆ ಜಾಮೀನು ನೀಡಲು ಸಿಬಿಐ ವಿಶೇಷ ನ್ಯಾಯಾಲಯ ನಿರಾಕರಿಸಿದೆ.

    ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಗೀತಾಂಜಲಿ ಗೋಯೆಲ್ ಜಾಮೀನು ಅರ್ಜಿ ವಜಾಗೊಳಿಸಿದ್ದಾರೆ. ಇದನ್ನೂ ಓದಿ: ದಾವೂದ್ ಇಬ್ರಾಹಿಂ ಸಹೋದರನ ಕಡೆಯಿಂದ ಸಾಧ್ವಿ ಪ್ರಜ್ಞಾ ಠಾಕೂರ್‌ಗೆ ಕೊಲೆ ಬೆದರಿಕೆ 

    ಮೇ 30 ರಂದು ಇಡಿಯಿಂದ ಬಂಧನಕ್ಕೊಳಗಾಗಿದ್ದ ಸತ್ಯೇಂದ್ರ ಜೈನ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಗೀತಾಂಜಲಿ ಗೋಯೆಲ್ ಆದೇಶ ಕಾಯ್ದಿರಿಸಿದ್ದರು.

    ಭ್ರಷ್ಟಾಚಾರ ತಡೆ ಕಾಯ್ದೆಯಡಿ 2017ರ ಆಗಸ್ಟ್‌ನಲ್ಲಿ ಸಿಬಿಐ ದಾಖಲಿಸಿದ್ದ ಪ್ರಕರಣದ ಆಧಾರದ ಮೇಲೆ ಜಾರಿ ನಿರ್ದೇಶನಾಲಯವು (ED) ಇಸಿಐಆರ್ ದಾಖಲಿಸಿಕೊಂಡು, ವಿಚಾರಣೆಗೆ ಸಮನ್ಸ್ ನೀಡಿತ್ತು. ಮೇ 30 ರಂದು ಜೈನ್ ಅವರನ್ನು ವಶಕ್ಕೆ ಪಡೆದುಕೊಂಡಿತ್ತು. ಜೂನ್ 13ರ ಬಳಿಕ ಅವರು ನ್ಯಾಯಂಗ ಬಂಧನದಲ್ಲಿದ್ದಾರೆ. ಇದನ್ನೂ ಓದಿ: ಗುರುದ್ವಾರದ ಮೇಲೆ ಭಯೋತ್ಪಾದಕರಿಂದ ಗುಂಡಿನ ದಾಳಿ – ಭದ್ರತಾ ಸಿಬ್ಬಂದಿ ಸಾವು 

    ವಿಚಾರಣೆ ವೇಳೆ ಸತ್ಯೇಂದ್ರ ಜೈನ್, ಕನಿಷ್ಠ ನಾಲ್ಕು ಕಂಪನಿಗಳ ಮೂಲಕ ಹಣ ಲಪಟಾಯಿಸಿದ್ದಾರೆ. ಅಕ್ರಮ ಹಣ ವರ್ಗಾವಣೆಯಲ್ಲಿ ಸಚಿವರು ಭಾಗಿಯಾಗಿದ್ದಾರೆ. ಅವರ ಬಂಧನ ಬಳಿಕವೂ ಹಲವು ದಾಳಿ ನಡೆಸಿದ್ದು ಆಪ್ತರ ಮನೆಯಲ್ಲಿ ಹಲವು ಮಹತ್ವದ ದಾಖಲೆಗಳು ಲಭ್ಯವಾಗಿದ್ದು ಇವುಗಳ ತನಿಖೆ ಮಾಡಬೇಕಿದೆ. ಆದರೆ ಆರೋಪಿ ತನಿಖೆಗೆ ಸಹಕಾರ ನೀಡುತ್ತಿಲ್ಲ, ಪ್ರಭಾವಿಯಾಗಿರುವ ಹಿನ್ನಲೆ ಸಾಕ್ಷ್ಯ ನಾಶ ಸಾಧ್ಯತೆಗಳಿವೆ ಎಂದು ಇಡಿ ವಾದಿಸಿತ್ತು.

    ನಿದ್ರೆಯಲ್ಲಿ ಉಸಿರುಗಟ್ಟುವ ಕಾಯಿಲೆಯಿದೆ: ಸತ್ಯೇಂದ್ರ ಜೈನ್ ಪರ ವಾದ ಮಂಡಿಸಿದ್ದ ವಕೀಲ ಹರಿಹರನ್, ಈವರೆಗೂ ಜೈನ್ ತನಿಖೆಗೆ ಸಹಕರಿಸಿದ್ದಾರೆ, ಮುಂದೆಯೂ ಸಹಕಾರ ನೀಡಲಿದ್ದಾರೆ. ಈಗಾಗಲೇ ಎಲ್ಲ ಹೇಳಿಕೆಯನ್ನು ನೀಡಿರುವ ಹಿನ್ನೆಲೆ ಸಾಕ್ಷ್ಯದ ಮೇಲೆ ಪ್ರಭಾವ ಬೀರಲು ಸಾಧ್ಯವಿಲ್ಲ. ಜೈನ್‌ಗೆ ನಿದ್ದೆಯಲ್ಲಿ ಉಸಿರುಗಟ್ಟುವ ಸಮಸ್ಯೆ ಇದ್ದು ಆರೋಗ್ಯ ಕಾರಣಗಳಿಂದ ಜಾಮೀನು ನೀಡಬೇಕು ಒಂದು ಮನವಿ ಮಾಡಿದ್ದರು.

    Live Tv