Tag: cbi

  • 2,200 ಕೋಟಿ ರೂ. ಭ್ರಷ್ಟಾಚಾರ ಕೇಸ್‌ – ಮಾಜಿ ರಾಜ್ಯಪಾಲ ಸತ್ಯಪಾಲ್‌ ಮಲಿಕ್‌ ವಿರುದ್ಧ ಸಿಬಿಐ ಚಾರ್ಜ್‌ಶೀಟ್‌ ಸಲ್ಲಿಕೆ

    2,200 ಕೋಟಿ ರೂ. ಭ್ರಷ್ಟಾಚಾರ ಕೇಸ್‌ – ಮಾಜಿ ರಾಜ್ಯಪಾಲ ಸತ್ಯಪಾಲ್‌ ಮಲಿಕ್‌ ವಿರುದ್ಧ ಸಿಬಿಐ ಚಾರ್ಜ್‌ಶೀಟ್‌ ಸಲ್ಲಿಕೆ

    ನವದೆಹಲಿ: ಬರೋಬ್ಬರಿ 2,200 ಕೋಟಿ ರೂ. ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್‌ ಮಲಿಕ್‌ (Satyapal Malik) ವಿರುದ್ಧ ಸಿಬಿಐ ಚಾರ್ಜ್‌ಶೀಟ್‌ ಸಲ್ಲಿಸಿದೆ.

    ಕಿರು ಜಲವಿದ್ಯುತ್ ಯೋಜನೆಗೆ 2,200 ಕೋಟಿ ರೂ.ಗಳ ನಾಗರಿಕ ಕಾಮಗಾರಿಗಳ ಮಂಜೂರಾತಿಯಲ್ಲಿ ಭ್ರಷ್ಟಾಚಾರ ನಡೆದಿದೆ. ಪ್ರಕರಣದಲ್ಲಿ ಸತ್ಯಪಾಲ್ ಮಲಿಕ್ ಮತ್ತು ಇತರ ಏಳು ಜನರ ವಿರುದ್ಧ ಸಿಬಿಐ (CBI) ಆರೋಪಪಟ್ಟಿ ಸಲ್ಲಿಸಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. ಇದನ್ನೂ ಓದಿ: ಸೂಕ್ಷ್ಮ ಮಾಹಿತಿ ಸೋರಿಕೆ – 600 ಪಾಕಿಸ್ತಾನಿಯರ ಸಂಪರ್ಕದಲ್ಲಿದ್ದ ಬೇಹುಗಾರ ವಾರಣಾಸಿಯಲ್ಲಿ ಅರೆಸ್ಟ್‌

    ಮೂರು ವರ್ಷಗಳ ತನಿಖೆಯ ನಂತರ ವಿಶೇಷ ನ್ಯಾಯಾಲಯದ ಮುಂದೆ ಸಿಬಿಐ ತನ್ನ ಆರೋಪಪಟ್ಟಿಯನ್ನು ಸಲ್ಲಿಸಿದ್ದು, ಮಲಿಕ್ ಮತ್ತು ಅವರ ಇಬ್ಬರು ಸಹಾಯಕರಾದ ವೀರೇಂದ್ರ ರಾಣಾ ಮತ್ತು ಕನ್ವರ್ ಸಿಂಗ್ ರಾಣಾ ಅವರನ್ನು ಹೆಸರಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

    ಆರೋಪಪಟ್ಟಿಯಲ್ಲಿ ಹೆಸರಿಸಲಾದ ಇತರ ವ್ಯಕ್ತಿಗಳಲ್ಲಿ ಆಗಿನ ಚೆನಾಬ್ ವ್ಯಾಲಿ ಪವರ್ ಪ್ರಾಜೆಕ್ಟ್ಸ್ ಪ್ರೈವೇಟ್ ಲಿಮಿಟೆಡ್ (ಸಿವಿಪಿಪಿಪಿಎಲ್) ವ್ಯವಸ್ಥಾಪಕ ನಿರ್ದೇಶಕ ಎಂ.ಎಸ್. ಬಾಬು, ಅದರ ನಿರ್ದೇಶಕರಾದ ಅರುಣ್ ಕುಮಾರ್ ಮಿಶ್ರಾ ಮತ್ತು ಎಂ.ಕೆ.ಮಿತ್ತಲ್, ನಿರ್ಮಾಣ ಸಂಸ್ಥೆ ಪಟೇಲ್ ಎಂಜಿನಿಯರಿಂಗ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ರೂಪೇನ್ ಪಟೇಲ್ ಮತ್ತು ಖಾಸಗಿ ವ್ಯಕ್ತಿ ಕನ್ವಲ್ಜೀತ್ ಸಿಂಗ್ ದುಗ್ಗಲ್ ಸೇರಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಕಳೆದ ವರ್ಷ ಫೆಬ್ರವರಿಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಿಕ್ ಮತ್ತು ಇತರರ ನಿವಾಸಗಳಲ್ಲಿ ಸಿಬಿಐ ಶೋಧ ನಡೆಸಿತ್ತು. 2019 ರಲ್ಲಿ ಕಿರು ಹೈಡ್ರೊ ಎಲೆಕ್ಟ್ರಿಕ್ ಪವರ್ (ಎಚ್‌ಇಪಿ) ಯೋಜನೆಯ ಸುಮಾರು 2,200 ಕೋಟಿ ರೂ. ಮೌಲ್ಯದ ಸಿವಿಲ್ ಕಾಮಗಾರಿಗಳ ಒಪ್ಪಂದವನ್ನು ಖಾಸಗಿ ಕಂಪನಿಗೆ ನೀಡುವಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳಿಗೆ ಈ ಪ್ರಕರಣ ಸಂಬಂಧಿಸಿದೆ ಎಂದು 2022 ರಲ್ಲಿ ಎಫ್‌ಐಆರ್ ದಾಖಲಾದ ನಂತರ ಸಿಬಿಐ ಹೇಳಿತ್ತು.

    ಈ ಹಿಂದೆ ಪ್ರಧಾನಿ ಮೋದಿ ಅವರ ವಿರುದ್ಧ ಸತ್ಯಪಾಲ್‌ ಮಲಿಕ್‌ ಭ್ರಷ್ಟಾಚಾರದ ಆರೋಪಗಳನ್ನು ಮಾಡಿದ್ದರು. ಆದರೆ, ಈಗ ಸ್ವತಃ ಮಲಿಕ್‌ ಅವರೇ ಬಹುಕೋಟಿ ಹಗರಣದಲ್ಲಿ ಪ್ರಮುಖ ಆರೋಪಿಯಾಗಿದ್ದಾರೆ. ಇದನ್ನೂ ಓದಿ: ನಾನು ಶಾಂತವಾಗಿದ್ದರೂ ನನ್ನ ರಕ್ತ ನಾಳಗಳಲ್ಲಿ ʻಸಿಂಧೂರʼ ಕುದಿಯುತ್ತಲೇ ಇರುತ್ತೆ – ಪಾಕ್‌ಗೆ ಮೋದಿ ಖಡಕ್‌ ಸಂದೇಶ

    ಸಿಬಿಐ ಚಾರ್ಜ್‌ಶೀಟ್‌ ಸಲ್ಲಿಕೆ ಬೆನ್ನಲ್ಲೇ ಮಲಿಕ್‌ ಅವರ ಎಕ್ಸ್‌ ಖಾತೆಯಿಂದ ಪೋಸ್ಟ್‌ವೊಂದು ಬಂದಿದೆ. ‘ನನ್ನ ಅನೇಕ ಹಿತೈಷಿಗಳಿಂದ ನನಗೆ ಕರೆಗಳು ಬರುತ್ತಿವೆ. ಆದರೆ ನಾನು ಸ್ವೀಕರಿಸಲು ಸಾಧ್ಯವಾಗುತ್ತಿಲ್ಲ. ನನ್ನ ಸ್ಥಿತಿ ಈಗ ತುಂಬಾ ಕೆಟ್ಟದಾಗಿದೆ. ನಾನು ಯಾರೊಂದಿಗೂ ಮಾತನಾಡುವ ಸ್ಥಿತಿಯಲ್ಲಿಲ್ಲ. ನಾನು ಮೇ 11 ರಿಂದ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಗೆ ದಾಖಲಾಗಿದ್ದೇನೆ. ಸೋಂಕಿನ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ. ಈಗ ಸ್ಥಿತಿ ತುಂಬಾ ಗಂಭೀರವಾಗಿದ್ದು, ಕಳೆದ ಮೂರು ದಿನಗಳಿಂದ ಮೂತ್ರಪಿಂಡದ ಡಯಾಲಿಸಿಸ್‌ಗೆ ಒಳಗಾಗುತ್ತಿದ್ದೇನೆಂದು’ ಮಾಡಲಾಗಿದೆ.

    ಸತ್ಯಪಾಲ್‌ ಮಲಿಕ್‌ ಅವರ ಎಕ್ಸ್‌ ಖಾತೆ ಪೋಸ್ಟ್‌ಗೆ ನೆಟ್ಟಿಗರು ಕಾಮೆಂಟ್‌ ಮಾಡುತ್ತಿದ್ದಾರೆ. ಸಿಬಿಐ ಚಾರ್ಜ್‌ಶೀಟ್‌ ಸಲ್ಲಿಕೆ ಬೆನ್ನಲ್ಲೇ ನಿಮಗೆ ಅನಾರೋಗ್ಯ ಸಮಸ್ಯೆ ಕಾಣಿಸಿಕೊಂಡಿದೆಯೇ ಎಂದು ಪ್ರಶ್ನಿಸುತ್ತಿದ್ದಾರೆ. ಇದನ್ನೂ ಓದಿ: ಜ್ಯೋತಿ ಮಲ್ಹೊತ್ರಾಗೆ ನಾಲ್ಕು ದಿನ ಪೊಲೀಸ್ ಕಸ್ಟಡಿ ವಿಸ್ತರಣೆ

  • ಎಡಿಜಿಪಿ ಅಲೋಕ್‌ ಕುಮಾರ್‌ಗೆ ಮುಂಬಡ್ತಿ ನೀಡದೇ 6 ವರ್ಷದ ಹಳೆ ಕೇಸ್‌ ಕೆದಕಿದ ಸರ್ಕಾರ

    ಎಡಿಜಿಪಿ ಅಲೋಕ್‌ ಕುಮಾರ್‌ಗೆ ಮುಂಬಡ್ತಿ ನೀಡದೇ 6 ವರ್ಷದ ಹಳೆ ಕೇಸ್‌ ಕೆದಕಿದ ಸರ್ಕಾರ

    ಬೆಂಗಳೂರು: ರಾಜ್ಯ ಪೊಲೀಸ್‌ ಇಲಾಖೆಯ ತರಬೇತಿ ವಿಭಾಗದ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ ಅಲೋಕ್‌ ಕುಮಾರ್‌ (Alok Kumar) ಅವರಿಗೆ ಮುಂಬಡ್ತಿ ನೀಡದ ಸರ್ಕಾರ 6 ವರ್ಷದ ಹಿಂದಿನ ಪ್ರಕರಣವನ್ನು ಕೆದಕಿರುವ ವಿಚಾರ ಈಗ ಬೆಳಕಿಗೆ ಬಂದಿದೆ.

    ಹೌದು.ಈ ಹಿಂದೆ ಕೇಳಿ ಬಂದಿದ್ದ ಫೋನ್‌ ಟ್ಯಾಪಿಂಗ್‌ (Phone Tapping) ಹಾಗೂ ಅಕ್ರಮವಾಗಿ ಮೊಬೈಲ್‌ ಕರೆ ವಿವರ(ಸಿಡಿಆರ್‌) ಪಡೆದ ಪ್ರಕರಣದಲ್ಲಿ ಅಲೋಕ್‌ ಕುಮಾರ್‌ ವಿರುದ್ಧ ಸರ್ಕಾರ ಇಲಾಖಾ ವಿಚಾರಣೆಗೆ ಆದೇಶ ನೀಡಿದೆ ಎನ್ನಲಾಗುತ್ತಿದೆ.

    ಇಲಾಖಾ ವಿಚಾರಣೆಗೆ ಆದೇಶ ನೀಡುವುದಾದರೆ ಈ ಹಿಂದೆಯೇ ನೀಡಬಹುದಿತ್ತು. ಆದರೆ ಡಿಜಿಪಿ ಸ್ಥಾನಕ್ಕೆ ಪದೋನ್ನತಿ ಸಿಗುವ ಸಮಯದಲ್ಲೇ  ಹಳೆಯ ಪ್ರಕರಣವನ್ನು ಕೆದಕ್ಕಿದ್ದು ಎಷ್ಟು ಸರಿ ಎಂಬ ಪ್ರಶ್ನೆ ಎದ್ದಿದೆ. ಸರ್ಕಾರದ ಈ ನಡೆಗೆ ಹಿರಿಯ ಐಪಿಎಸ್ ಅಧಿಕಾರಿಗಳು ಅಸಮಾಧಾನ ವ್ಯಕ್ತಪಡಿಸಿದ ವಿಚಾರ ಮೂಲಗಳಿಂದ ತಿಳಿದು ಬಂದಿದೆ.

    ಒಂದು ಡಿಜಿಪಿ ಸ್ಥಾನ ತೆರವಾದ ಹಿನ್ನೆಲೆ 1994ನೇ ಬ್ಯಾಚ್‌ನ ಐಪಿಎಸ್‌ ಅಧಿಕಾರಿಯಾಗಿರುವ ಅಲೋಕ್‌ ಕುಮಾರ್‌ ಅವರಿಗೆ ಈ ತಿಂಗಳಲ್ಲಿ ಡಿಜಿಪಿ ಆಗಿ ಮುಂಬಡ್ತಿ ಸಿಗಬೇಕಿತ್ತು. ಆದರೆ ಈಗ ಇಲಾಖಾ ವಿಚಾರಣೆಗೆ ಆದೇಶ ನೀಡಿರುವುದರಿಂದ ಮುಂಬಡ್ತಿ ನೀಡಲು ಸಾಧ್ಯವಿಲ್ಲ. ಇದರಿಂದಾಗಿ ಅದೇ ಬ್ಯಾಚ್‌ನ ಹಿರಿಯ ಅಧಿಕಾರಿಯಾದ ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ್‌ ಅವರಿಗೆ ಡಿಜಿಪಿಯಾಗಿ ಮುಂಬಡ್ತಿ ಸಿಗುವ ಸಾಧ್ಯತೆಯಿದೆ. ಇದನ್ನೂ ಓದಿ: ಜೈಶಂಕರ್‌ ಕರೆ ಬೆನ್ನಲ್ಲೇ ತಾಲಿಬಾನ್‌ ವಿದೇಶಾಂಗ ಸಚಿವರನ್ನೇ ಬೀಜಿಂಗ್‌ಗೆ ಕರೆಸಿ ಪಾಕ್‌ ಜೊತೆ ಕೈ ಕುಲುಕಿಸಿದ ಚೀನಾ!

    ಫೋನ್‌ಟ್ಯಾಪಿಂಗ್‌, 50ಕ್ಕೂ ಹೆಚ್ಚು ಮಂದಿಯ ಸಿಡಿಆರ್‌ ಪಡೆದ ಆರೋಪದಡಿ ಸರ್ಕಾರ ಇಲಾಖಾ ವಿಚಾರಣೆಗೆ ಆದೇಶ ನೀಡಲಾಗಿದ್ದು, ಈ ಕುರಿತು ಅಲೋಕ್‌ ಕುಮಾರ್‌ ಅವರಿಗೂ ಮಾಹಿತಿ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

    ಏನಿದು ಪ್ರಕರಣ?
    ಕಾಂಗ್ರೆಸ್‌- ಜೆಡಿಎಸ್‌ ಸಮ್ಮಿಶ್ರ ಸರ್ಕಾರ ಅಧಿಕಾರದ ಅವಧಿಯಲ್ಲಿ ಅಲೋಕ್‌ ಕುಮಾರ್‌ ಸಿಸಿಬಿ ಮುಖ್ಯಸ್ಥರಾಗಿದ್ದರು. 2019 ರಲ್ಲಿ ಬಿಜೆಪಿ ಆಪರೇಷನ್ ಕಮಲ ನಡೆಸಲು ಕಾಂಗ್ರೆಸ್​-ಜೆಡಿಎಸ್​ ಶಾಸಕರನ್ನು ಸೆಳೆಯಲು ಪ್ರಯತ್ನಿಸುತ್ತಿದೆ ಎಂಬ ಸುದ್ದಿಗಳು ಹರಿದಾಡಲು ಆರಂಭವಾಗಿತ್ತು. ಈ ವೇಳೆ ಕುಮಾರಸ್ವಾಮಿ ಸರ್ಕಾರ ಕೆಲ ಅಧಿಕಾರಿಗಳು, ಸ್ವಾಮೀಜಿಗಳು ಮತ್ತು ರಾಜಕೀಯ ಮುಖಂಡರ ಫೋನ್‌ ಟ್ಯಾಪಿಂಗ್‌ ಮತ್ತು ಸಿಡಿಆರ್‌ ಸಂಗ್ರಹಿಸಿದೆ ಎಂಬ ಗಂಭೀರ ಆರೋಪ ಕೇಳಿ ಬಂದಿತ್ತು. ಇದು ಭಾರೀ ಚರ್ಚೆಗೆ ಗ್ರಾಸವಾಗಿತ್ತು.

    ಚರ್ಚೆ ಜೋರಾಗುತ್ತಿದ್ದ ಸಮಯದಲ್ಲೇ ಕುಮಾರಸ್ವಾಮಿ ಅವರು ಅಲೋಕ್‌ ಕುಮಾರ್‌ ಅವರನ್ನು ಎಡಿಜಿಪಿಯಾಗಿ ಮುಂಬಡ್ತಿ ನೀಡಿ, ನಗರ ಪೊಲೀಸ್‌ ಆಯುಕ್ತರನ್ನಾಗಿ ನೇಮಕ ಮಾಡಿದ್ದರು. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಫೋನ್‌ ಟ್ಯಾಪಿಂಗ್‌ ಪ್ರಕರಣವನ್ನು ಸಿಬಿಐಗೆ ವಹಿಸಿತ್ತು. ಸಿಬಿಐ ಅಲೋಕ್‌ ಕುಮಾರ್‌ ಮನೆ ಮೇಲೆ ದಾಳಿ ಸಹ ನಡೆಸಿತ್ತು. ಈ ವೇಳೆ ಭಾಸ್ಕರ್‌ರಾವ್‌ ಯಾರೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಫೋನ್‌ ಟ್ಯಾಪಿಂಗ್‌ ಮಾಡಿದ್ದ ಆಡಿಯೋ ಒಂದು ವೈರಲ್‌ ಮಾಡಲಾಗಿತ್ತು. ಇದನ್ನೂ ಓದಿ:  ಪರಂಗೆ ಇಡಿ ಈಟಿ – 140 ಕೋಟಿ ವ್ಯವಹಾರ ನಡೆದ್ರೂ 95 ಕೋಟಿಗೆ ಖರೀದಿ?

    ಅಲೋಕ್‌ ಕುಮಾರ್‌ ಸಿಎಟಿ ಮೂಲಕ ತಡೆಯಾಜ್ಞೆ ತಂದಿದ್ದರೆ ಸಿಬಿಐ ಅಧಿಕಾರಿಗಳು ಸಲ್ಲಿಸಿದ್ದ ಬಿ-ರಿಪೋರ್ಟ್‌ ಅನ್ನು ಭಾಸ್ಕರ್‌ರಾವ್‌ ಪ್ರಶ್ನಿಸಿದ್ದರು.

  • ಬೆಲ್ಜಿಯಂನಲ್ಲಿ ಮೆಹುಲ್ ಚೋಕ್ಸಿ ಅರೆಸ್ಟ್ – ಭಾರತಕ್ಕೆ ಹಸ್ತಾಂತರಿಸಲು ಸಿಬಿಐ ಮನವಿ

    ಬೆಲ್ಜಿಯಂನಲ್ಲಿ ಮೆಹುಲ್ ಚೋಕ್ಸಿ ಅರೆಸ್ಟ್ – ಭಾರತಕ್ಕೆ ಹಸ್ತಾಂತರಿಸಲು ಸಿಬಿಐ ಮನವಿ

    ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕ್ (Punjab National Bank) ಕೋಟ್ಯಂತರ ರೂಪಾಯಿ ವಂಚನೆ ಪ್ರಕರಣದಲ್ಲಿ ಭಾರತದಿಂದ ಪರಾರಿಯಾಗಿದ್ದ ವಜ್ರೋದ್ಯಮಿ ಮೆಹುಲ್ ಚೋಕ್ಸಿಯನ್ನು (Mehul Choksi) ಬೆಲ್ಜಿಯಂನ (Belgium) ಅಧಿಕಾರಿಗಳು ಬಂಧಿಸಿದ್ದಾರೆ. ಭಾರತದ ಕೇಂದ್ರೀಯ ತನಿಖಾ ಸಂಸ್ಥೆ (CBI) ಮತ್ತು ಜಾರಿ ನಿರ್ದೇಶನಾಲಯ (ED) ಮಾಡಿದ ಕೋರಿಕೆಯ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

    65 ವರ್ಷದ ಮೆಹುಲ್ ಚೋಕ್ಸಿ, 2018ರಿಂದ ಭಾರತದಿಂದ ಪರಾರಿಯಾಗಿದ್ದರು. ಈ ವರ್ಷದ ಏ.12 ರಿಂದ ಬೆಲ್ಜಿಯಂನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಅವರನ್ನು ಬಂಧಿಸಲಾಗಿದೆ. ಚೋಕ್ಸಿ ಆರೋಗ್ಯ ಕಾರಣಗಳಿಗಾಗಿ ಆಂಟಿಗುವಾದಿಂದ ಬೆಲ್ಜಿಯಂಗೆ ತೆರಳಿದ್ದರು ಎನ್ನಲಾಗಿದೆ.ಇದನ್ನೂ ಓದಿ: ಜಾತಿ ಸಮೀಕ್ಷೆ | 1 ಕೋಟಿ ಜನರನ್ನು ಸಮುದ್ರಕ್ಕೆ ಬಿಡಬೇಕಾ? – ಅಶೋಕ್ ಕಿಡಿ

    ಭಾರತೀಯ ತನಿಖಾ ಸಂಸ್ಥೆಗಳು ಅವರ ವಿರುದ್ಧ ಜಾರಿಯಲ್ಲಿರುವ ಎರಡು ಬೇಲ್ ರಹಿತ ವಾರಂಟ್‌ಗಳನ್ನು ಆಧರಿಸಿ 2024ರ ಸೆಪ್ಟೆಂಬರ್‌ನಲ್ಲಿ ಬೆಲ್ಜಿಯಂ ಸರ್ಕಾರಕ್ಕೆ ಹಸ್ತಾಂತರ ಕೋರಿ ಅರ್ಜಿ ಸಲ್ಲಿಸಿದ್ದವು. ಈ ಮನವಿಯ ಆಧಾರದ ಮೇಲೆ ಮೆಹುಲ್ ಚೋಕ್ಸಿಯನ್ನು ಬಂಧಿಸಲಾಗಿದೆ.

    ಪ್ರಸ್ತುತ ಚೋಕ್ಸಿಯನ್ನು ಬೆಲ್ಜಿಯಂನ ಬಂಧನ ಕೇಂದ್ರದಲ್ಲಿ ಇರಿಸಲ್ಪಟ್ಟಿದ್ದು, ಕಳೆದ ಆರು ತಿಂಗಳಿನಿಂದ ಬೆಲ್ಜಿಯಂನಲ್ಲಿ ವಾಸಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅವರ ಆರೋಗ್ಯ ಸ್ಥಿತಿ ಹದಗೆಡುತ್ತಿದೆ ಎಂದು ಹೇಳಲಾಗುತ್ತಿದ್ದು, ಅವರು ರಕ್ತದ ಕ್ಯಾನ್ಸರ್‌ಗೆ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಗಳು ಸೂಚಿಸಿವೆ.

    ಚೋಕ್ಸಿಗೆ ಪೌರತ್ವ ಸಿಕ್ಕಿದ್ದು ಹೇಗೆ?
    65 ವರ್ಷದ ಚೋಕ್ಸಿ 2023ರ ನವೆಂಬರ್ 15ರಿಂದ ಎಫ್-ರೆಸಿಡೆನ್ಸಿ ಪೌರತ್ವ ಕಾರ್ಡ್ ಪಡೆದು ಬೆಲ್ಜಿಯಂನಲ್ಲಿ ಕಾನೂನುಬದ್ಧವಾಗಿ ವಾಸಿಸುತ್ತಿದ್ದರು. ಅವನ ಪತ್ನಿ ಬೆಲ್ಜಿಯಂನವರೇ ಆದ್ದರಿಂದ ಪೌರತ್ವ ಕಾರ್ಡ್ ಪಡೆಯಲು ಚೋಕ್ಸಿಗೆ ಸಹಕಾರ ನೀಡಿದ್ದಾರೆ. ಈ ನಡುವೆ ಭಾರತಕ್ಕೆ ಹಸ್ತಾಂತರಿಸುವ ಪ್ರಕ್ರಿಯೆಯಿಂದ ತಪ್ಪಿಸಿಕೊಳ್ಳೋದಕ್ಕೆ ಚೋಕ್ಸಿ ನಕಲಿ ದಾಖಲೆಗಳನ್ನ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.

    2024ರ ಸೆಪ್ಟೆಂಬರ್‌ನಲ್ಲಿ ಚೋಕ್ಸಿಯನ್ನು ಭಾರತಕ್ಕೆ ಹಸ್ತಾಂತರಿಸುವಂತೆ ತನಿಖಾ ಸಂಸ್ಥೆಗಳು ಬೆಲ್ಜಿಯಂಗೆ ಮನವಿ ಮಾಡಿದ್ದವು. ಆದ್ರೆ ಅಂದು ಚೋಕ್ಸಿ ಪರ ವಕೀಲರು, ನನ್ನ ಕಕ್ಷಿಗಾರನ ಆರೋಗ್ಯ ಸರಿಯಿಲ್ಲ, ಬ್ಲಡ್ ಕ್ಯಾನ್ಸರ್‌ನಿಂದ ಬಳಲುತ್ತಿದ್ದಾರೆ. ಆದ್ದರಿಂದ ಅವರನ್ನು ಹಸ್ತಾಂತರಿಸಲು ಸಾಧ್ಯವಿಲ್ಲ ಎಂದು ಹೇಳಿದ್ದರು. ಇದಕ್ಕೆ ಪ್ರತ್ಯುತ್ತರ ನೀಡಿದ್ದ ಭಾರತೀಯ ಅಧಿಕಾರಿಗಳು, ಚೋಕ್ಸಿ ಭಾರತದಲ್ಲೂ ಚಿಕಿತ್ಸೆ ಪಡೆಯಬಹುದು ಎಂದು ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಟ್ಟಿದ್ದರು. ಇಡಿ ಮತ್ತು ಸಿಬಿಐನಿಂದ ಹಸ್ತಾಂತರ ಕೋರಿಕೆಯ ಮೇರೆಗೆ ಬೆಲ್ಜಿಯಂ ಪೊಲೀಸರು ಅವರನ್ನು ಬಂಧಿಸಿದ್ದಾರೆ.

    ಮೆಹುಲ್ ಚೋಕ್ಸಿ ಮತ್ತು ಅವರ ಸೋದರಳಿಯ ನೀರವ್ ಮೋದಿ, ಪಿಎನ್‌ಬಿ ಬ್ಯಾಂಕ್‌ನ 13,500 ಕೋಟಿ ರೂ.ಗೂ ಅಧಿಕ ಮೊತ್ತದ ವಂಚನೆಯ ಆರೋಪದಲ್ಲಿದ್ದಾರೆ. ಚೋಕ್ಸಿಯ ಕಂಪನಿಯಾದ ಗೀತಾಂಜಲಿ ಜೆಮ್ಸ್, ಬ್ಯಾಂಕ್‌ನ ಕೆಲವು ಅಧಿಕಾರಿಗಳ ಸಹಕಾರದೊಂದಿಗೆ ಲೆಟರ್ ಆಫ್ ಅಂಡರ್‌ಟೇಕಿಂಗ್ (ಎಲ್‌ಒಯು) ಮತ್ತು ಫಾರಿನ್ ಲೆಟರ್ ಆಫ್ ಕ್ರೆಡಿಟ್ (ಎಫ್‌ಎಲ್‌ಸಿ)ಗಳನ್ನು ಕಾನೂನುಬಾಹಿರವಾಗಿ ಬಳಸಿಕೊಂಡು ಈ ವಂಚನೆ ನಡೆಸಿರುವುದಾಗಿ ಆರೋಪಿಸಲಾಗಿದೆ. ಈ ಪ್ರಕರಣದಲ್ಲಿ ಸಿಬಿಐ ಮತ್ತು ಇಡಿ ಈಗಾಗಲೇ ಹಲವು ಚಾರ್ಜ್ಶೀಟ್‌ಗಳನ್ನು ಸಲ್ಲಿಸಿವೆ.ಇದನ್ನೂ ಓದಿ: ಇಂದು ಮಧ್ಯರಾತ್ರಿಯಿಂದಲೇ ಅನಿರ್ದಿಷ್ಟಾವಧಿ ಲಾರಿ ಮುಷ್ಕರ – ರಸ್ತೆಗಿಳಿಯಲ್ಲ 6 ಲಕ್ಷ ಲಾರಿಗಳು

  • ಕೋಲ್ಕತ್ತಾ ಆರ್‌ಜಿ ಕರ್ ವೈದ್ಯ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿಲ್ಲ: ಸಿಬಿಐ ವರದಿ

    ಕೋಲ್ಕತ್ತಾ ಆರ್‌ಜಿ ಕರ್ ವೈದ್ಯ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿಲ್ಲ: ಸಿಬಿಐ ವರದಿ

    ಕೋಲ್ಕತ್ತಾ: ಇಲ್ಲಿನ ಆರ್‌ಜಿ ಕಾರ್ ವೈದ್ಯಕೀಯ ಕಾಲೇಜು (RG Kar Medical College) ಮತ್ತು ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿಲ್ಲ ಎಂದು ಕೇಂದ್ರ ತನಿಖಾ ದಳವು (CBI) ಕೋಲ್ಕತ್ತಾ ಹೈಕೋರ್ಟ್‌ಗೆ (Calcutta High Court) ವರದಿ ಸಲ್ಲಿಸಿದೆ.

    ಕೋಲ್ಕತ್ತಾದ ಹೈಕೋರ್ಟ್‌ನ ಏಕಸದಸ್ಯ ಪೀಠವು ಹಿಂದಿನ ವಿಚಾರಣೆಯ ಸಮಯದಲ್ಲಿ ಟ್ರೈನಿ ವೈದ್ಯೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆಯೇ ಎಂದು ಸ್ಪಷ್ಟಪಡಿಸಲು ಸಿಬಿಐಗೆ ತಿಳಿಸಿತ್ತು. ಈ ಪ್ರಕರಣದ ಆರೋಪಿ ಸಂಜಯ್ ರಾಯ್‌ಗೆ ಕೋರ್ಟ್ ಈ ಹಿಂದೆಯೇ ಜೀವಾವಧಿ ಶಿಕ್ಷೆ ವಿಧಿಸಿದೆ. ಇದನ್ನೂ ಓದಿ: Myanmar Earthquake: ಮ್ಯಾನ್ಮಾರ್‌ನಲ್ಲಿ ಪ್ರಬಲ ಭೂಕಂಪಕ್ಕೆ 60 ಸಾವು, 250 ಮಂದಿಗೆ ಗಾಯ

    ನ್ಯಾ. ತೀರ್ಥಂಕರ ಘೋಷ್ ಅವರು, ಅತ್ಯಾಚಾರ ಪ್ರಕರಣದಲ್ಲಿ ಒಬ್ಬರು ಅಥವಾ ಹೆಚ್ಚಿನವರು ಭಾಗಿಯಾಗಿದ್ದಾರೆಯೇ ಎಂದು ತನಿಖೆ ಮಾಡಲು ಸಿಬಿಐಗೆ ಸೂಚಿಸಿದ್ದರು. ಇದೀಗ ಹೈಕೋರ್ಟ್‌ಗೆ ವರದಿ ಸಲ್ಲಿಸಿದ ಸಿಬಿಐಯು, ಟ್ರೈನಿ ವೈದ್ಯೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿಲ್ಲ ಎಂದು ತಿಳಿಸಿದೆ. ಇದನ್ನೂ ಓದಿ: Photo Gallary: ಮ್ಯಾನ್ಮಾರ್‌, ಥೈಲ್ಯಾಂಡ್‌ನಲ್ಲಿ ಡೆಡ್ಲಿ ಭೂಕಂಪ – ಭೀಕರ ದೃಶ್ಯಗಳನ್ನು ಫೋಟೊಗಳಲ್ಲಿ ನೋಡಿ..

    ಮೃತ ವೈದ್ಯೆಯ ಪೋಷಕರು, ಸಿಬಿಐಯು ಪ್ರಕರಣವನ್ನು ಸರಿಯಾಗಿ ತನಿಖೆ ಮಾಡಿಲ್ಲ. ಸರಿಯಾಗಿ ತನಿಖೆ ಮಾಡಿದ್ದರೆ, ಇನ್ನೂ ಹಲವರ ಬಂಧನವಾಗಿ ಶಿಕ್ಷೆಯಾಗುತ್ತಿತ್ತು ಎಂದು ಆರೋಪಿಸಿದ್ದರು. ಇದನ್ನೂ ಓದಿ: ವಿಜಯಲಕ್ಷ್ಮಿ ಅಕ್ಕ ಹೋರಾಟ ನೋಡಿ ಅವರೊಂದಿಗೆ ನಿಲ್ಲಬೇಕು ಅನ್ನಿಸಿತು: ದರ್ಶನ್‌ ಕೇಸ್‌ ಬಗ್ಗೆ ಧನ್ವೀರ್ ಮಾತು

    2024 ಆಗಸ್ಟ್ 9ರಂದು ಕೋಲ್ಕತ್ತಾದ ಆರ್‌ಜಿ ಕರ್ ಆಸ್ಪತ್ರೆಯ ಸೆಮಿನಾರ್ ಹಾಲ್‌ನ ನಾಲ್ಕನೇ ಮಹಡಿಯಲ್ಲಿ 31 ವರ್ಷದ ಸ್ನಾತಕೋತ್ತರ ತರಬೇತಿ ವೈದ್ಯೆ ಅರೆಬೆತ್ತಲೆ ಸ್ಥಿತಿಯಲ್ಲಿ ಮೃತಪಟ್ಟಿರುವುದು ಕಂಡುಬಂದಿತ್ತು. ವೈದ್ಯಕೀಯ ಪರೀಕ್ಷೆಯಲ್ಲಿ ಸಂತ್ರಸ್ತೆ ಲೈಂಗಿಕ ದೌರ್ಜನ್ಯದಿಂದಾಗಿ ಬಾಹ್ಯ ಮತ್ತು ಆಂತರಿಕ ಗಾಯ ಮಾಡಿ ಕೊಲೆ ಮಾಡಲಾಗಿದೆ ಎಂದು ತಿಳಿದಿತ್ತು.

  • ದೇಶ ಭ್ರಷ್ಟ ವಜ್ರೋದ್ಯಮಿ ಮೆಹುಲ್ ಚೋಕ್ಸಿ ಬೆಲ್ಜಿಯಂನಲ್ಲಿರುವುದು ದೃಢ

    ದೇಶ ಭ್ರಷ್ಟ ವಜ್ರೋದ್ಯಮಿ ಮೆಹುಲ್ ಚೋಕ್ಸಿ ಬೆಲ್ಜಿಯಂನಲ್ಲಿರುವುದು ದೃಢ

    ಮುಂಬೈ: ಪಂಜಾಬ್ ನ್ಯಾಷನಲ್ ಬ್ಯಾಂಕ್ ಸಾಲ ಹಗರಣದಲ್ಲಿ ಪ್ರಮುಖ ಆರೋಪಿಯಾದ ದೇಶ ಭ್ರಷ್ಟ ವಜ್ರೋದ್ಯಮಿ ಮೆಹುಲ್ ಚೋಕ್ಸಿ (Mehul Choksi) ತನ್ನ ದೇಶದಲ್ಲಿರುವುದಾಗಿ ಯೂರೋಪಿಯನ್‌ ದೇಶವಾದ ಬೆಲ್ಜಿಯಂ (Belgium) ಖಚಿತಪಡಿಸಿದೆ ಎಂದು ವರದಿಯಾಗಿದೆ.

    ಸಂದರ್ಶನವೊಂದರಲ್ಲಿ ಮಾತನಾಡುವಾಗ ಬೆಲ್ಜಿಯಂ ವಿದೇಶಾಂಗ ಸಚಿವಾಲಯವು ಅವರ ಉಪಸ್ಥಿತಿಯನ್ನು ಖಚಿತಪಡಿಸಿದೆ. ಆದಾಗ್ಯೂ ಅವರ ವೈಯಕ್ತಿಕ ಪ್ರಕರಣಗಳ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದೆ. ಆದ್ರೆ ಚೋಕ್ಸಿಯನ್ನು ಭಾರತಕ್ಕೆ ಹಸ್ತಾಂತರಿಸುವ ಪ್ರಕ್ರಿಯೆ ಪ್ರಾರಂಭಿಸಲು ಭಾರತೀಯ ಅಧಿಕಾರಿಗಳು ತಮ್ಮ ಸಹವರ್ತಿಗಳನ್ನು ಸಂಪರ್ಕಿಸಿದ್ದಾರೆ ಎಂದು ಹೇಳಿಕೊಂಡಿದೆ.

    ಪಂಜಾಬ್ ನ್ಯಾಷನಲ್ ಬ್ಯಾಂಕ್‌ಗೆ (ಪಿಎನ್‌ಬಿ) 13,850 ಕೋಟಿ ರೂಪಾಯಿ ವಂಚಿಸಿದ ಆರೋಪದ ಮೇಲೆ ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ) ಮತ್ತು ಜಾರಿ ನಿರ್ದೇಶನಾಲಯ (ಇಡಿ)ಕ್ಕೆ ಪ್ರಮುಖವಾಗಿ ಬೇಕಾಗಿರುವ ಚೋಕ್ಸಿ ಸದ್ಯ ಕೆರಿಬಿಯನ್ ದ್ವೀಪ ರಾಷ್ಟ್ರವಾದ ಆಂಟಿಗುವಾ ಮತ್ತು ಬಾರ್ಬುಡಾದಲ್ಲಿ ವಾಸಿಸುತ್ತಿದ್ದಾರೆ.

    ವೈದ್ಯಕೀಯ ಚಿಕಿಯತ್ಸೆಗಾಗಿ ತೆರಳಿದ್ದ ಚೋಕ್ಸಿ ದ್ವೀಪರಾಷ್ಟ್ರದ ಪ್ರಜೆಯಾಗಿ ಉಳಿದಿದ್ದಾರೆ ಎಂದು ಅಲ್ಲಿನ ಸಚಿವ ಇಪಿ ಚೆಟ್ ಗ್ರೀನ್ ಇತ್ತೀಚೆಗೆ ತಿಳಿಸಿದ್ದಾರೆ ಎಂದು ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ. ಇದನ್ನೂ ಓದಿ: ದೇಶ ಭ್ರಷ್ಟ ವಜ್ರೋದ್ಯಮಿ ಮೆಹುಲ್ ಚೋಕ್ಸಿ ಬೆಲ್ಜಿಯಂನಲ್ಲಿ ವಾಸ್ತವ್ಯ – ಶೀಘ್ರದಲ್ಲೇ ಭಾರತಕ್ಕೆ ಕರೆತರಲು ಪ್ಲ್ಯಾನ್‌

    65 ವರ್ಷದ ಚೋಕ್ಸಿ 2023ರ ನವೆಂಬರ್ 15ರಿಂದ ʻಎಫ್- ರೆಸಿಡೆನ್ಸಿʼ ಪೌರತ್ವ ಕಾರ್ಡ್ ಪಡೆದು ಬೆಲ್ಜಿಯಂನಲ್ಲಿ ಕಾನೂನುಬದ್ಧವಾಗಿ ವಾಸಿಸುತ್ತಿದ್ದಾರೆ. ಅವರ ಪತ್ನಿ ಬೆಲ್ಜಿಯಂ ನವರೇ ಆದ್ದರಿಂದ ಪೌರತ್ವ ಕಾರ್ಡ್ ಪಡೆಯಲು ಚೋಕ್ಸಿಗೆ ಸಹಕಾರ ನೀಡಿದ್ದಾರೆ. ಈ ನಡುವೆ ಭಾರತಕ್ಕೆ ಹಸ್ತಾಂತರಿಸುವ ಪ್ರಕ್ರಿಯೆಯಿಂದ ತಪ್ಪಿಸಿಕೊಳ್ಳೋದಕ್ಕೆ ಚೋಕ್ಸಿ ನಕಲಿ ದಾಖಲೆಗಳನ್ನ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.

    ಸದ್ಯ ಚೋಕ್ಸಿ ಭಾರತದ ಪೌರತ್ವವನ್ನೂ ತ್ಯಜಿಸಿಲ್ಲ. ಒಂದು ವೇಳೆ ತಾತ್ಕಾಲಿಕವಾಗಿ ಪಡೆದಿರುವ ಬೆಲ್ಜಿಯಂ ಪೌರತ್ವವನ್ನು ಶಾಶ್ವತವಾಗಿ ಪರಿವರ್ತಿಸಿದ್ರೆ, ಮುಂದೆ ಆತ ಯುರೋಪಿಯನ್ ರಾಷ್ಟ್ರಗಳಲ್ಲಿ ಸ್ವತಂತ್ರವಾಗಿ ಪ್ರಯಾಣಿಸಲು ಅವಕಾಶ ಮಾಡಿಕೊಟ್ಟಂತಾಗುತ್ತದೆ. ಬಳಿಕ ಆತನನ್ನು ಕರೆತರಲು ಭಾರತಕ್ಕೆ ಕಷ್ಟವಾಗಬಹುದು ಎನ್ನಲಾಗಿದೆ. ಈ ನಡುವೆ ಚೋಕ್ಸಿ ಕ್ಯಾನ್ಸರ್ ಚಿಕಿತ್ಸೆಗಾಗಿ ಸ್ವಿಟ್ಜರ್ಲೆಂಡ್‌ಗೆ ತೆರಳುವ ಪ್ಲ್ಯಾನ್‌ನಲ್ಲಿದ್ದಾರೆ ಎಂದು ಕೆಲ ವರದಿಗಳು ತಿಳಿಸಿವೆ.

    ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣದ ಪ್ರಮುಖ ಆರೋಪಿಯಾದ ಚೋಕ್ಸಿ 2018ರಲ್ಲಿ ಭಾರತದಿಂದ ಫಲಾಯನ ಮಾಡಿದರು. ಇದನ್ನೂ ಓದಿ: ಗಗನಯಾತ್ರಿಗಳ ಆರೋಗ್ಯದ ಮೇಲೆ ಬಾಹ್ಯಾಕಾಶ ಪ್ರಯಾಣದ ಪರಿಣಾಮಗಳೇನು? – ಪರಿಹಾರವೇನು?

  • ದೇಶ ಭ್ರಷ್ಟ ವಜ್ರೋದ್ಯಮಿ ಮೆಹುಲ್ ಚೋಕ್ಸಿ ಬೆಲ್ಜಿಯಂನಲ್ಲಿ ವಾಸ್ತವ್ಯ – ಶೀಘ್ರದಲ್ಲೇ ಭಾರತಕ್ಕೆ ಕರೆತರಲು ಪ್ಲ್ಯಾನ್‌

    ದೇಶ ಭ್ರಷ್ಟ ವಜ್ರೋದ್ಯಮಿ ಮೆಹುಲ್ ಚೋಕ್ಸಿ ಬೆಲ್ಜಿಯಂನಲ್ಲಿ ವಾಸ್ತವ್ಯ – ಶೀಘ್ರದಲ್ಲೇ ಭಾರತಕ್ಕೆ ಕರೆತರಲು ಪ್ಲ್ಯಾನ್‌

    ಮುಂಬೈ: ಪಂಜಾಬ್ ನ್ಯಾಷನಲ್ ಬ್ಯಾಂಕ್ ಸಾಲ ಹಗರಣದಲ್ಲಿ (PNB Scam) ಪ್ರಮುಖ ಆರೋಪಿಯಾದ ದೇಶ ಭ್ರಷ್ಟ ವಜ್ರೋದ್ಯಮಿ ಮೆಹುಲ್ ಚೋಕ್ಸಿ (Mehul Choksi) ಬೆಲ್ಜಿಯಂನ್‌ ಆಂಟ್ವೆರ್ಪ್‌ನಲ್ಲಿ ಪತ್ನಿ ಪ್ರೀತಿ ಚೋಕ್ಸಿಯೊಂದಿಗೆ ವಾಸಿಸುತ್ತಿದ್ದಾರೆ. ಅವರನ್ನು ಭಾರತಕ್ಕೆ ಹಸ್ತಾಂತರಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಲು ಭಾರತೀಯ ಅಧಿಕಾರಿಗಳು ಬೆಲ್ಜಿಯಂ ಅಧಿಕಾರಿಗಳನ್ನ ಸಂಪರ್ಕಿಸಿದ್ದಾರೆ ಎಂದು ವರದಿಯಾಗಿದೆ.

    ಪಂಜಾಬ್ ನ್ಯಾಷನಲ್ ಬ್ಯಾಂಕ್‌ಗೆ (PNB) 13,850 ಕೋಟಿ ರೂಪಾಯಿ ವಂಚಿಸಿದ ಆರೋಪದ ಮೇಲೆ ಕೇಂದ್ರೀಯ ತನಿಖಾ ಸಂಸ್ಥೆ (CBI) ಮತ್ತು ಜಾರಿ ನಿರ್ದೇಶನಾಲಯ (ED)ಕ್ಕೆ ಪ್ರಮುಖವಾಗಿ ಬೇಕಾಗಿರುವ ಚೋಕ್ಸಿ ಸದ್ಯ ಕೆರಿಬಿಯನ್ ದ್ವೀಪ ರಾಷ್ಟ್ರವಾದ ಆಂಟಿಗುವಾ ಮತ್ತು ಬಾರ್ಬುಡಾದಲ್ಲಿ ವಾಸಿಸುತ್ತಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಮರಗಳ ಮಾರಣ ಹೋಮ – 100 ವರ್ಷಗಳ ಹಳೆಯ ಮರಗಳಿಗೆ ಕೊಡಲಿ ಏಟು!

    ವೈದ್ಯಕೀಯ ಚಿಕಿಯತ್ಸೆಗಾಗಿ ತೆರಳಿದ್ದ ಚೋಕ್ಸಿ ದ್ವೀಪರಾಷ್ಟ್ರದ ಪ್ರಜೆಯಾಗಿ ಉಳಿದಿದ್ದಾರೆ ಎಂದು ಅಲ್ಲಿನ ಸಚಿವ ಇಪಿ ಚೆಟ್ ಗ್ರೀನ್ ಇತ್ತೀಚೆಗೆ ತಿಳಿಸಿದ್ದಾರೆ ಎಂದು ಸುದ್ದಿಷಂಸ್ಥೆಯೊಂದು ವರದಿ ಮಾಡಿದೆ.

    65 ವರ್ಷದ ಚೋಕ್ಸಿ 2023ರ ನವೆಂಬರ್‌ 15ರಿಂದ ʻಎಫ್‌- ರೆಸಿಡೆನ್ಸಿʼ ಪೌರತ್ವ ಕಾರ್ಡ್‌ ಪಡೆದು ಬೆಲ್ಜಿಯಂನಲ್ಲಿ ಕಾನೂನುಬದ್ಧವಾಗಿ ವಾಸಿಸುತ್ತಿದ್ದಾರೆ. ಅವರ ಪತ್ನಿ ಬೆಲ್ಜಿಯಂ ನವರೇ ಆದ್ದರಿಂದ ಪೌರತ್ವ ಕಾರ್ಡ್‌ ಪಡೆಯಲು ಚೋಕ್ಸಿಗೆ ಸಹಕಾರ ನೀಡಿದ್ದಾರೆ. ಈ ನಡುವೆ ಭಾರತಕ್ಕೆ ಹಸ್ತಾಂತರಿಸುವ ಪ್ರಕ್ರಿಯೆಯಿಂದ ತಪ್ಪಿಸಿಕೊಳ್ಳೋದಕ್ಕೆ ಚೋಕ್ಸಿ ನಕಲಿ ದಾಖಲೆಗಳನ್ನ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ಬಿಸಿಲಿನಿಂದ ಬರಿದಾದ ವೇದಾವತಿ ನದಿ ಒಡಲು – ತೀರದಲ್ಲೇ ಬೋರ್ ಕೊರೆಸಲು ರೈತರ ಸಾಹಸ

    ಸದ್ಯ ಚೋಕ್ಸಿ ಭಾರತದ ಪೌರತ್ವವನ್ನೂ ತ್ಯಜಿಸಿಲ್ಲ. ಒಂದು ವೇಳೆ ತಾತ್ಕಾಲಿಕವಾಗಿ ಪಡೆದಿರುವ ಬೆಲ್ಜಿಯಂ ಪೌರತ್ವವನ್ನು ಶಾಶ್ವತವಾಗಿ ಪರಿವರ್ತಿಸಿದ್ರೆ, ಮುಂದೆ ಆತ ಯುರೋಪಿಯನ್‌ ರಾಷ್ಟ್ರಗಳಲ್ಲಿ ಸ್ವತಂತ್ರವಾಗಿ ಪ್ರಯಾಣಿಸಲು ಅವಕಾಶ ಮಾಡಿಕೊಟ್ಟಂತಾಗುತ್ತದೆ. ಬಳಿಕ ಆತನನ್ನು ಕರೆತರಲು ಭಾರತಕ್ಕೆ ಕಷ್ಟವಾಗಬಹುದು ಎನ್ನಲಾಗಿದೆ. ಈ ನಡುವೆ ಚೋಕ್ಸಿ ಕ್ಯಾನ್ಸರ್‌ ಚಿಕಿತ್ಸೆಗಾಗಿ ಸ್ವಿಟ್ಜರ್ಲೆಂಡ್‌ಗೆ ತೆರಳುವ ಪ್ಲ್ಯಾನ್‌ನಲ್ಲಿದ್ದಾರೆ ಎಂದು ಕೆಲ ವರದಿಗಳು ತಿಳಿಸಿವೆ.

    ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ ಹಗರಣದ ಪ್ರಮುಖ ಆರೋಪಿಯಾದ ಚೋಕ್ಸಿ 2018ರಲ್ಲಿ ಭಾರತದಿಂದ ಫಲಾಯನ ಮಾಡಿದರು. ಇದನ್ನೂ ಓದಿ: Photo Gallery | IPL ಉದ್ಘಾಟನಾ ವೇದಿಕೆಯಲ್ಲಿ ಬೆಡಗು ಬಿನ್ನಾಣ; ಬಳ್ಳಿಯಂತೆ ಬಳುಕಿದ ದಿಶಾ!

  • ಸುಶಾಂತ್‌ ಸಿಂಗ್‌ ರಜಪೂತ್‌ ಆತ್ಮಹತ್ಯೆಗೆ ಯಾರೂ ಪ್ರಚೋದನೆ ಮಾಡಿಲ್ಲ: ಅಂತಿಮ ವರದಿ ಸಲ್ಲಿಸಿದ ಸಿಬಿಐ

    ಸುಶಾಂತ್‌ ಸಿಂಗ್‌ ರಜಪೂತ್‌ ಆತ್ಮಹತ್ಯೆಗೆ ಯಾರೂ ಪ್ರಚೋದನೆ ಮಾಡಿಲ್ಲ: ಅಂತಿಮ ವರದಿ ಸಲ್ಲಿಸಿದ ಸಿಬಿಐ

    ಬಾಲಿವುಡ್‌ ನಟ ಸುಶಾಂತ್‌ ಸಿಂಗ್‌ ರಜಪೂತ್‌ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಂತಿಮ ವರದಿ ಸಲ್ಲಿಕೆ ಮಾಡಿದೆ.

    34 ವರ್ಷದ ಸುಶಾಂತ್ ಸಿಂಗ್ ರಜಪೂತ್, 2020ರ ಜೂನ್ 14ರಂದು ಮುಂಬೈನ ಬಾಂದ್ರಾದಲ್ಲಿರುವ ತಮ್ಮ ಫ್ಲಾಟ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಅವರ ಸಾವು ಅಭಿಮಾನಿಗಳನ್ನು ಆಘಾತಗೊಳಿಸಿತ್ತು. ಸಾವಿನ ಬಗ್ಗೆ ನಾನಾ ರೀತಿಯಲ್ಲಿ ಅಭಿಪ್ರಾಯಗಳು ವ್ಯಕ್ತವಾಗಿದ್ದವು.

    ಸುಶಾಂತ್ ರಜಪೂತ್ ಅವರ ತಂದೆ, ತಮ್ಮ ಪುತ್ರನ ಗೆಳತಿ ಮತ್ತು ನಟಿ ರಿಯಾ ಚಕ್ರವರ್ತಿ ವಿರುದ್ಧ ಮಾಡಿದ ಆರೋಪಗಳು, ಸುಶಾಂತ್ ಕುಟುಂಬದ ವಿರುದ್ಧ ಚಕ್ರವರ್ತಿ ಅವರ ಆರೋಪಗಳು, ಎರಡು ಪ್ರಕರಣಗಳಲ್ಲಿ ಅಂತಿಮ ವರದಿಯನ್ನು ಸಲ್ಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಸಿಬಿಐ ಈ ಪ್ರಕರಣವನ್ನು 2020ರ ಆಗಸ್ಟ್‌ನಲ್ಲಿ ಬಿಹಾರ ಪೊಲೀಸರಿಂದ ವಹಿಸಿಕೊಂಡಿತ್ತು. ನಾಲ್ಕು ವರ್ಷಗಳಿಗೂ ಹೆಚ್ಚು ಕಾಲ ತನಿಖೆ ನಡೆಸಿದ ನಂತರ, ಸುಶಾಂತ್ ರಜಪೂತ್ ಆತ್ಮಹತ್ಯೆಗೆ ಯಾರೂ ಪ್ರಚೋದನೆ ನೀಡಿಲ್ಲ. ಪ್ರಚೋದಿಸಿದ್ದಾರೆ ಎಂಬುದಕ್ಕೆ ಯಾವುದೇ ಪುರಾವೆಗಳು ಸಂಸ್ಥೆಗೆ ಸಿಗಲಿಲ್ಲ ಎಂದು ವರದಿಯಲ್ಲಿ ತಿಳಿಸಿದೆ. ರಿಯಾ ಚಕ್ರವರ್ತಿ ಮತ್ತು ಅವರ ಕುಟುಂಬಕ್ಕೆ ಕ್ಲೀನ್ ಚಿಟ್ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

    ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯ (ಏಮ್ಸ್) ವಿಧಿವಿಜ್ಞಾನ ತಂಡವು ಸುಶಾಂತ್ ರಜಪೂತ್ ಅವರನ್ನು ಕೊಲೆ ಮಾಡಿಲ್ಲ. ಇದು ಆತ್ಮಹತ್ಯೆ ಎಂದು ಹೇಳಿತ್ತು.

  • ಕಂತೆ ಕಂತೆ ನೋಟು ಪತ್ತೆಯಾದ ಜಡ್ಜ್‌ ಮೇಲೆ ದಾಖಲಾಗಿತ್ತು ಸಿಬಿಐ ಎಫ್‌ಐಆರ್‌

    ಕಂತೆ ಕಂತೆ ನೋಟು ಪತ್ತೆಯಾದ ಜಡ್ಜ್‌ ಮೇಲೆ ದಾಖಲಾಗಿತ್ತು ಸಿಬಿಐ ಎಫ್‌ಐಆರ್‌

    ನವದೆಹಲಿ: ನಿವಾಸದಲ್ಲಿ ಕಂತೆ ಕಂತೆ ನೋಟು ಪತ್ತೆಯಾಗಿ ಸುದ್ದಿಯಲ್ಲಿರುವ ದೆಹಲಿ ಹೈಕೋರ್ಟ್‌ (Delhi High Court) ನ್ಯಾ. ಯಶವಂತ ವರ್ಮಾ (Justice Yaswant Varma) ಅವರ ಹೆಸರನ್ನು ಪ್ರಕರಣ ಒಂದರಲ್ಲಿ ಸಿಬಿಐ (CBI) ಆರೋಪಿಯನ್ನಾಗಿಸಿ ಎಫ್‌ಐಆರ್‌ ದಾಖಲು ಮಾಡಿದ್ದ ವಿಚಾರ ಈಗ ಬೆಳಕಿಗೆ ಬಂದಿದೆ.

    ಬ್ಯಾಂಕ್‌ನಿಂದ ಪಡೆದ ಸಾಲವನ್ನು ದುರುಪಯೋಗ ಮಾಡಿಕೊಂಡ ಆರೋಪದ ಅಡಿ ಸಿಂಭಾವೋಲಿ ಶುಗರ್ಸ್ ಕಂಪನಿ ವಿರುದ್ಧ 2018 ರಲ್ಲಿ ಸಿಬಿಐ ಮತ್ತು ಇಡಿ ಎಫ್‌ಐಆರ್‌ ದಾಖಲಿಸಿತ್ತು. ಅಲಹಾಬಾದ್‌ ಹೈಕೋರ್ಟ್‌ ಆದೇಶದ ಮೇರೆಗೆ ಸಿಬಿಐ ಎಫ್‌ಐಆರ್‌ ದಾಖಲಿಸಿಕೊಂಡಿತ್ತು. ಈ ಕಂಪನಿಯಲ್ಲಿ ಯಶವಂತ ವರ್ಮಾ ಕಾರ್ಯನಿರ್ವಾಹಕೇತರ ನಿರ್ದೇಶಕರಾಗಿದ್ದರು. ಸಿಬಿಐ ವರ್ಮಾ ಅವರನ್ನು 10ನೇ ಆರೋಪಿಯನ್ನಾಗಿ ಉಲ್ಲೇಖಿಸಿತ್ತು. ಕ್ರಿಮಿನಲ್ ದುರ್ನಡತೆ, ವಂಚನೆ ಮತ್ತು ಕ್ರಿಮಿನಲ್ ಪಿತೂರಿ ಅಡಿ ಎಫ್‌ಐಆರ್‌ ದಾಖಲಾಗಿತ್ತು.

    ಯಶವಂತ ವರ್ಮಾ ಅವರು 2014 ರಲ್ಲಿ ಅಲಹಾಬಾದ್ ಹೈಕೋರ್ಟ್‌ನ ನ್ಯಾಯಾಧೀಶರಾಗಿ ಬಡ್ತಿ ಪಡೆಯುವ ಮೊದಲು ಕಂಪನಿಯ ಕಾರ್ಯನಿರ್ವಾಹಕೇತರ ನಿರ್ದೇಶಕರಾಗಿದ್ದರು. ಸಿಬಿಐ ತನಿಖೆಗೆ ಆದೇಶಿಸಿದ್ದ ಅಲಹಾಬಾದ್‌ ಹೈಕೋರ್ಟ್‌ ಆದೇಶವನ್ನು ಸುಪ್ರೀಂ ಕೋರ್ಟ್‌ ಕಳೆದ ವರ್ಷ ರದ್ದುಗೊಳಿಸಿತ್ತು.  ಇದನ್ನೂ ಓದಿ: ದೆಹಲಿ ಹೈಕೋರ್ಟ್ ಜಡ್ಜ್‌ ಮನೆಯಲ್ಲಿ ಕಂತೆ ಕಂತೆ ಹಣ ಪತ್ತೆ – ವರ್ಗಾವಣೆ ಕ್ರಮದ ಭಾಗವಲ್ಲ ಎಂದ ಸುಪ್ರೀಂ

    ಎಫ್‌ಐಆರ್ ದಾಖಲಾದ ಸ್ವಲ್ಪ ಸಮಯದ ನಂತರ ಸಿಬಿಐ ವರ್ಮಾ ಅವರ ಹೆಸರನ್ನು ಎಫ್‌ಐಆರ್‌ನಿಂದ ತೆಗೆದುಹಾಕಿತ್ತು. ಈ ವಿಚಾರವನ್ನು ಕೋರ್ಟ್‌ ಗಮನಕ್ಕೆ ತಂದಿತ್ತು. ಇದನ್ನೂ ಓದಿ: ದೆಹಲಿ ಹೈಕೋರ್ಟ್ ಜಡ್ಜ್ ಮನೆಗೆ ಬೆಂಕಿ – ನಂದಿಸಲು ಹೋದಾಗ ಸಿಕ್ಕಿದ್ದು ಕಂತೆ ಕಂತೆ ನೋಟು

    ಎಫ್‌ಐಆರ್‌ ದಾಖಲಾಗಿದ್ದು ಯಾಕೆ?
    ಓರಿಯಂಟಲ್ ಬ್ಯಾಂಕ್ ಆಫ್ ಕಾಮರ್ಸ್‌ನಿಂದ ಸಿಂಭಾವೋಲಿ ಶುಗರ್ಸ್ ರೈತರ ಕೃಷಿ ಉಪಕರಣಗಳು ಮತ್ತು ಇತರ ಅಗತ್ಯಗಳಿಗಾಗಿ ಸಾಲವನ್ನು ಪಡೆದುಕೊಂಡಿತ್ತು. ಈ ಸಾಲವನ್ನು ಕಂಪನಿ ಬೇರೆ ಉದ್ದೇಶಗಳಿಗೆ ಬಳಕೆ ಮಾಡಿದ ಆರೋಪ ಕೇಳಿ ಬಂದಿತ್ತು. ಕ್ರಿಮಿನಲ್ ನಂಬಿಕೆ ಉಲ್ಲಂಘನೆಯ ಕಾರಣಕ್ಕಾಗಿ 97.85 ಕೋಟಿ ರೂ.ಹಣವನ್ನು ವಂಚನೆ ಮಾಡಲಾಗಿದೆ ಎಂದು ಬ್ಯಾಂಕ್‌ ಘೋಷಿಸಿ 2015 ರಲ್ಲಿ ಆರ್‌ಬಿಐಗೆ ವರದಿ ನೀಡಿತ್ತು.

    ಯಾವುದೇ ತನಿಖೆ ಅಗತ್ಯವಿಲ್ಲದ ಕಾರಣ ಈ ವಿಷಯದಲ್ಲಿ ಸಿಬಿಐ ತನಿಖೆಗೆ ಆದೇಶಿಸುವಲ್ಲಿ ಹೈಕೋರ್ಟ್ ತಪ್ಪು ಮಾಡಿದೆ ಎಂದು ಸುಪ್ರೀಂ ಕೋರ್ಟ್ ಕಳೆದ ವರ್ಷ ಹೇಳಿತ್ತು.

  • ರನ್ಯಾ ಕೇಸ್‌ನಲ್ಲಿ ನಂಟಿರೋ ಸಚಿವರು ಯಾರು ಅನ್ನೋದು ಗೊತ್ತಿದೆ, ಅಧಿವೇಶನದಲ್ಲಿ ಬಿಚ್ಚಿಡ್ತೀನಿ: ಯತ್ನಾಳ್‌ ಬಾಂಬ್‌

    ರನ್ಯಾ ಕೇಸ್‌ನಲ್ಲಿ ನಂಟಿರೋ ಸಚಿವರು ಯಾರು ಅನ್ನೋದು ಗೊತ್ತಿದೆ, ಅಧಿವೇಶನದಲ್ಲಿ ಬಿಚ್ಚಿಡ್ತೀನಿ: ಯತ್ನಾಳ್‌ ಬಾಂಬ್‌

    ವಿಜಯಪುರ: ರನ್ಯಾ ರಾವ್‌ ಚಿನ್ನ ಕಳ್ಳಸಾಗಣೆ ಪ್ರಕರಣದ (Ranya Rao Gold Smuggling Case) ನಂಟು ಹೊಂದಿರುವ ಸಚಿವರು ಯಾರು ಅನ್ನೋದು ಗೊತ್ತಿದೆ. ಅಧಿವೇಶನಲ್ಲಿ ಸಚಿವರ ಹೆಸರು ಬಹಿರಂಗಪಡಿಸುತ್ತೇನೆ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ (Basanagouda Patil Yatnal) ಹೊಸ ಬಾಂಬ್‌ ಸಿಡಿಸಿದ್ದಾರೆ.

    ರನ್ಯಾ ಗೋಲ್ಡ್‌ ಸ್ಮಗ್ಲಿಂಗ್‌ ವಿಚಾರಕ್ಕೆ ಸಂಬಂಧಿಸಿದಂತೆ ವಿಜಯಪುರದಲ್ಲಿಂದು (Vijayapura) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರನ್ಯಾ ರಾವ್‌ ಪ್ರಕರಣದಲ್ಲಿ ಭಾಗಿಯಾಗಿರುವ ಸಚಿವರ ಹೆಸರು ನನಗೆ ಗೊತ್ತಿದೆ ಎಂದು ಸ್ಫೋಟಕ ಹೇಳಿಕೆ ನೀಡಿದರು. ಇದನ್ನೂ ಓದಿ: Ramanagara| 20 ವರ್ಷಗಳ ಬಳಿಕ ಮಂಚನಬೆಲೆ ಎಡದಂಡೆ ನಾಲೆಗೆ ಹರಿದ ನೀರು

    ರನ್ಯಾ ಪ್ರಕರಣದ ನಂಟು ಹೊಂದಿರೋ ಸಚಿವರು ಯಾರು ಅನ್ನೋದು ಗೊತ್ತಿದೆ. ಅಧಿವೇಶನಲ್ಲಿ ಸಚಿವರ ಹೆಸರು ಬಹಿರಂಗಪಡಿಸುತ್ತೇನೆ. ರನ್ಯಾ ಜೊತೆಗೆ ಸಂಬಂಧ ಹೊಂದಿದವರು, ಆಕೆಗೆ ಪ್ರೋಟೊಕಾಲ್ (ಶಿಷ್ಟಾಚಾರ) ಕೊಟ್ಟವರ ಮಾಹಿತಿ ಸಂಗ್ರಹ ಮಾಡಿದ್ದೇವೆ. ಗೋಲ್ಡ್ ಎಲ್ಲಿಂದ ತಂದ್ರು? ಗೋಲ್ಡ್ ಎಲ್ಲಿಟ್ಟುಕೊಂಡು ತಂದ್ರು? ಎಲ್ಲವೂ ಗೊತ್ತಿದೆ ಎಂದು ಹೇಳಿದರು. ಇದನ್ನೂ ಓದಿ: ಸಿನಿಮಾ ಮೂಲಕ ಪುನೀತ್ ಜೀವಂತವಾಗಿದ್ದಾರೆ: ‘ಅಪ್ಪು’ ಸಿನಿಮಾ ಬಗ್ಗೆ ರಮ್ಯಾ ಮಾತು

    ರನ್ಯಾ ಪ್ರಕರಣದಲ್ಲಿ ಕೇಂದ್ರದವರ ತಪ್ಪಿದೆ ಎಂಬ ಸಚಿವ ಲಾಡ್ ಆರೋಪ ಕುರಿತು ಪ್ರತಿಕ್ರಿಯಿಸಿದ ಯತ್ನಾಳ್‌, ಯಾರು ತಪ್ಪು ಮಾಡಿದ್ರೆ ಅದು ತಪ್ಪೆ. ನಾವು ಬಿಜೆಪಿಯವರು ಸಮರ್ಥನೆ ಮಾಡಿಕೊಳ್ತಿಲ್ಲ. ಕೇಂದ್ರದ ಅಧಿಕಾರಿಗಳ ತಪ್ಪಿದ್ರೆ ತಪ್ಪೆ, ನಮ್ಮ ಕೇಂದ್ರದ ಸಚಿವರು ಇದ್ರಲ್ಲಿ ಭಾಗಿ ಆಗಿಲ್ಲ ಎಂದು ಸ್ಪಷ್ಟಪಡಿಸಿದರು.

    ಇನ್ನೂ ರನ್ಯಾಳಿಗೆ ಕೆಐಎಡಿಬಿಯಿಂದ ಜಮೀನು ಕೊಟ್ಟ ವಿಚಾರ ಕುರಿತು ಮಾತನಾಡಿ, ಜಮೀನು ಕೊಟ್ಟಿದ್ದನ್ನ ಸ್ವತಃ ನಿರಾಣಿ ಒಪ್ಪಿಕೊಂಡಿದ್ದಾರೆ. 12 ಏಕರೆ ಜಮೀನು ಕೊಟ್ಟಿದ್ದು, ಹಣ ಕಟ್ಟದೇ ಇರೋದಕ್ಕೆ ಅದು ರದ್ದಾಗಿದೆ. 12 ಎಕರೆಯದ್ದು ಯಾರೋ ಒಬ್ಬರು ಹಣ ಕೊಡ್ತೀನಿ ಎಂದಿದ್ದರು ಅವ್ರು ಕೊಟ್ಟಿಲ್ಲ ಎಂದರು. ಈ ವೇಳೆ ಹಣ ಕೊಡ್ತೀನಿ ಎಂದವರು ಸಚಿವರಾ? ಎನ್ನುವ ಪ್ರಶ್ನೆಗೆ ಮುಗುಳ್ನಕ್ಕರು. ಇದನ್ನೂ ಓದಿ:  ‘ಜಗದೋದ್ಧಾರನಾ ಆಡಿಸಿದಳು ಯಶೋಧೆ’ ಹಾಡು ಹಾಡಿದ ಸಂಸದ ತೇಜಸ್ವಿ ಸೂರ್ಯ ಪತ್ನಿ

  • 83,00,00,00,00,000 ಕ್ರಿಪ್ಟೋ ವಂಚನೆ – ಕೇರಳದಲ್ಲಿ ಸಿಬಿಐನಿಂದ ಲಿಥುವೇನಿಯಾದ ಪ್ರಜೆ ಅರೆಸ್ಟ್‌

    83,00,00,00,00,000 ಕ್ರಿಪ್ಟೋ ವಂಚನೆ – ಕೇರಳದಲ್ಲಿ ಸಿಬಿಐನಿಂದ ಲಿಥುವೇನಿಯಾದ ಪ್ರಜೆ ಅರೆಸ್ಟ್‌

    ನವದೆಹಲಿ: ಕ್ರಿಪ್ಟೋ ವಂಚನೆ (Crypto Fraud) ಪ್ರಕರಣಕ್ಕೆ ಸಂಬಂಧಿಸಿದಂತೆ ಅಮೆರಿಕಕ್ಕೆ (USA) ಬೇಕಾಗಿದ್ದ ಲಿಥುವೇನಿಯಾದ ಪ್ರಜೆಯನ್ನು ಕೇರಳದಲ್ಲಿ ಕೇಂದ್ರೀಯ ತನಿಖಾ ದಳ (CBI) ಬಂಧಿಸಿದೆ.

    ಅಮೆರಿಕದ ಸೀಕ್ರೆಟ್ ಸರ್ವೀಸ್‌ನ ಮೋಸ್ಟ್ ವಾಂಟೆಡ್ ಪಟ್ಟಿಯಲ್ಲಿರುವ 46 ವರ್ಷದ ಲಿಥುವೇನಿಯಾದ ಅಲೆಕ್ಸೆಜ್ ಬೆಸಿಯೊಕೊವ್ (Aleksej Besciokov) ತನ್ನ ಕುಟುಂಬದೊಂದಿಗೆ ಕೇರಳಕ್ಕೆ ಬಂದಿದ್ದ. ಮಂಗಳವಾರ ಸಂಜೆ ವರ್ಕಲಾ ಪೊಲೀಸರ ಸಹಾಯದಿಂದ ಆತನನ್ನು ಬಂಧನ ಮಾಡಲಾಗಿದೆ.

    ಈ ವಾರದ ಆರಂಭದಲ್ಲಿ ಅಮೆರಿಕದ ಅಧಿಕಾರಿಗಳ ಕೋರಿಕೆಯ ಮೇರೆಗೆ ವಿದೇಶಾಂಗ ಸಚಿವಾಲಯವು ತಾತ್ಕಾಲಿಕ ಬಂಧನ ವಾರಂಟ್ ಪಡೆದಿತ್ತು. ನಂತರ ಸಿಬಿಐ ಮತ್ತು ಕೇರಳ ಪೊಲೀಸರ ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಬಂಧಿಸಿದೆ.

    ಅಲೆಕ್ಸೆಜ್ ಬೆಸಿಯೊಕೊವ್, ರಾನ್ಸಮ್‌ವೇರ್, ಕಂಪ್ಯೂಟರ್ ಹ್ಯಾಕಿಂಗ್ ಮತ್ತು ಮಾದಕವಸ್ತು ವಹಿವಾಟುಗಳಂತಹ ಅಪರಾಧ ಚಟುವಟಿಕೆಗಳ ಆದಾಯವನ್ನು ಅಕ್ರಮವಾಗಿ ವರ್ಗಾಯಿಸಲು ಗ್ಯಾರಂಟೆಕ್ಸ್ (Garantex) ಹೆಸರಿನಲ್ಲಿ ಕ್ರಿಪ್ಟೋಕರೆನ್ಸಿ ವಿನಿಮಯ ಕೇಂದ್ರವನ್ನು ಸ್ಥಾಪಿಸಿದ್ದ.

    ಬೆಸಿಯೊಕೊವ್ ದೇಶದಿಂದ ಪಲಾಯನ ಮಾಡಲು ಯೋಜಿಸುತ್ತಿದ್ದಾಗ ಬಂಧಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಯುಎಸ್ ಸೀಕ್ರೆಟ್ ಸರ್ವಿಸ್ ದಾಖಲೆಗಳ ಪ್ರಕಾರ, ಬೆಸಿಯೊಕೊವ್ ಸುಮಾರು ಆರು ವರ್ಷಗಳ ಅವಧಿಯಲ್ಲಿ ಗ್ಯಾರಂಟೆಕ್ಸ್ ಅನ್ನು ನಿಯಂತ್ರಿಸಿದ್ದಾನೆ. ಭಯೋತ್ಪಾದನೆ ಸೇರಿದಂತೆ ಅಂತರರಾಷ್ಟ್ರೀಯ ಕ್ರಿಮಿನಲ್ ಸಂಘಟನೆಗಳಿಂದ ಕನಿಷ್ಠ 96 ಬಿಲಿಯನ್ ಡಾಲರ್‌ (8 ಲಕ್ಷ ಕೋಟಿ ರೂ.ಗೂ ಹೆಚ್ಚು) ಕ್ರಿಪ್ಟೋಕರೆನ್ಸಿ ವಹಿವಾಟು ಮೂಲಕ ವರ್ಗಾವಣೆಗೆ ಮಾಡಿರುವ ಆರೋಪ ಬೆಸಿಯೊಕೊವ್ ಮೇಲಿದೆ.