Tag: cbi

  • ನನ್ನ ಹೆಸ್ರು ಹೇಳಿದ್ರೆ ಬಿಜೆಪಿಗೆ ಮಾರ್ಕೆಟ್ – ಶತಾಬ್ಧಿಯಲ್ಲಿ ಜೈಲಿನ ಅನುಭವ ಹಂಚಿಕೊಂಡ ಡಿಕೆಶಿ

    ನನ್ನ ಹೆಸ್ರು ಹೇಳಿದ್ರೆ ಬಿಜೆಪಿಗೆ ಮಾರ್ಕೆಟ್ – ಶತಾಬ್ಧಿಯಲ್ಲಿ ಜೈಲಿನ ಅನುಭವ ಹಂಚಿಕೊಂಡ ಡಿಕೆಶಿ

    – ನೆಲದ ಮೇಲೆಯೇ ಕುಳಿತುಕೊಳ್ಳಬೇಕಿತ್ತು
    – ಐಎಎಸ್, ಕೆಎಎಸ್ ಅಧಿಕಾರಿಗಳ ಪತ್ನಿಯರಿಂದ ಪ್ರತಿಭಟನೆ

    ಬೆಂಗಳೂರು: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಶತಾಬ್ಧಿಯಲ್ಲಿ ಜೈಲಿನಲ್ಲಿದ್ದ ದಿನಗಳನ್ನು ಪಬ್ಲಿಕ್ ಟಿವಿ ಜೊತೆ ಹಂಚಿಕೊಂಡಿದ್ದಾರೆ. ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಮಾರ್ಗ ಮಧ್ಯೆ ಡಿಕೆ ಶಿವಕುಮಾರ್ ಪಬ್ಲಿಕ್ ಟಿವಿಗೆ ಸಂದರ್ಶನ ನೀಡಿ, ಹಲವು ವಿಚಾರಗಳನ್ನು ಹಂಚಿಕೊಂಡರು.

    ನನ್ನ ಆರೋಗ್ಯ ಇನ್ನು ಸುಧಾರಿಸಿಲ್ಲ. ಬೆನ್ನು, ಕಾಲು ನೋವು, ಬಿಪಿ ಎಲ್ಲ ಇದೆ. ನಾನು ಫಿಟ್ ಆಗಿದ್ದೆ, ಆದರೆ ಜೈಲಿನ ಕೆಲವು ದಿನಚರಿ ನನ್ನ ಆರೋಗ್ಯ ಹಾಳುಮಾಡಿದೆ. ಜೈಲಲ್ಲಿ ನನಗೆ ಕುಳಿತುಕೊಳ್ಳಲು ಒಂದು ಕುರ್ಚಿ ಸಹ ಕೊಡಲಿಲ್ಲ. ಒಂದು ಟಿವಿಯು ಕೊಡಲಿಲ್ಲ ಅಷ್ಟರ ಮಟ್ಟಿಗೆ ನನ್ನನ್ನು ನಡೆಸಿಕೊಂಡರು. ಆ ವಿಚಾರವಾಗಿ ನೋವಿದ್ದು, ಸಮಯ ಬಂದಾಗ ಎಲ್ಲಾ ಮಾತನಾಡುತ್ತೇನೆ.

    ಜೈಲು ಮಂತ್ರಿ ಆಗಿದ್ದಾಗ ನಾನೇ ಜೈಲುಗಳಿಗೆ ಮೊದಲು ಟಿವಿ ಕೊಟ್ಟಿದ್ದೆ ಎಂಬ ವಿಷಯ ನ್ಯಾಯಾಧೀಶರಿಗೆ ಹೇಳಿದೆ. ವಿಷಯ ತಿಳಿದ ಕೂಡಲೇ ನ್ಯಾಯಾಧೀಶರು ಕುರ್ಚಿ ಮತ್ತು ಟಿವಿ ಕೊಡಲು ಹೇಳಿದರು. ಜಡ್ಜ್ ಹೇಳಿದರೂ ಟಿವಿ ಕೊಡಲಿಲ್ಲ. ಕೊನೆಯ ದಿನ ಒಂದು ಕುರ್ಚಿ ನೀಡಿದರು. ನಾನು ನೆಲದ ಮೇಲೆಯೇ ಕುಳಿತುಕೊಳ್ಳಬೇಕಿತ್ತು. ಕುರ್ಚಿ ನೀಡದೇ ಇದ್ದಿದ್ದರಿಂದ ನೆಲದ ಮೇಲೆಯೇ ಕುಳಿತುಕೊಳ್ಳಬೇಕಿತ್ತು.

    ನನ್ನ ವಿರುದ್ಧ ಯಾರು ದೂರು ನೀಡಿದ್ರು, ಯಾರು ಪತ್ರ ಬರೆದರು ಎಲ್ಲವೂ ಗೊತ್ತು. ಅಧಿಕಾರಿಗಳು ಎಲ್ಲಾ ಪತ್ರ ತೋರಿಸಿದ್ದಾರೆ. ಸಮಯ ಬಂದಾಗ ಎಲ್ಲವನ್ನು ಹೇಳುತ್ತೇನೆ. ನನ್ನೊಂದಿಗೆ ಏನು ನಡೆಯಿತು ಎಂಬುವುದು ಸಮಾಜಕ್ಕೆ ಗೊತ್ತಾಗಬೇಕಿದೆ. ಬೆನ್ನಿಗಾನಹಳ್ಳಿ ಡಿನೋಟಿಫಿಕೇಶನ್ ನಲ್ಲೂ ನಾನೇನು ಒತ್ತಾಯ ಮಾಡಿರಲಿಲ್ಲ ಯಾವಾಗಲೋ ಅದರ ಮಾಲೀಕ ಕೊಟ್ಟಿದ್ದ ಅರ್ಜಿ ಅದು ವಿಚಾರಣೆಗೆ ಬಂದಿದೆ.

    ಈ ಪ್ರಕರಣವನ್ನು ಸಿಬಿಐಗೆ ಕೊಟ್ಟಿದ್ದಾರೆ. ಆದರೆ ಸಿಬಿಐ ನವರು ದಡ್ಡರಲ್ಲ, ಎಲ್ಲವನ್ನು ನೋಡಿಕೊಂಡು ಬರ್ತಾರೆ. ಅಲ್ಲಿ ಏನಿದೆ, ಏನಿಲ್ಲ ನೋಡಿ ಮುಂದವರಿಯುತ್ತಾರೆ ಜಾರಿ ನಿರ್ದೇಶನಾಲಯ ರೀತಿಯಲ್ಲಿ ಸಿಬಿಐ ಕೆಲಸ ಮಾಡಲ್ಲ. ನನ್ನ ಬಗ್ಗೆ ಜನ ತೋರಿಸಿದ ಅಭಿಮಾನಕ್ಕೆ ನಾನು ಋಣಿ. ಐಎಎಸ್ ಆಫಿಸರ್ಸ್ ಪತ್ನಿಯರು, ಐಪಿಎಸ್ ಅಧಿಕಾರಿಗಳ ಹೆಂಡತಿಯರು, ಕೆಎಎಸ್ ಆಫಿಸರ್ ಗಳ ಹೆಂಡತಿಯರು ನನ್ನ ಪರವಾಗಿ ರಸ್ತೆಗಿಳಿದು ಪ್ರತಿಭಟನೆ ಮಾಡಿರುವ ವಿಡಿಯೋ ನೋಡಿದ್ದೇನೆ.

    ಸಾಕಷ್ಟು ವಿಷಯಗಳು ಮಾತನಾಡುವುದಿದೆ. ಈ ಎಲ್ಲಾ ಸಮಸ್ಯೆ ಮುಗಿದ ಮೇಲೆ ಮಾತನಾಡುತ್ತೇನೆ. ನನ್ನ ಬಗ್ಗೆ ಯಾರು ಏನು ಮಾತನಾಡಿದ್ದಾರೆ ಎಲ್ಲಾ ಗೊತ್ತಿದೆ. ಅದರ ಬಗ್ಗೆ ನಾನು ರಿಯಾಕ್ಟ್ ಮಾಡಿಲ್ಲ. ನನ್ನ ವಿರುದ್ಧ ಕುಮಾರಸ್ವಾಮಿಯವರು ಮಾತನಾಡಿದ್ದಾರೆ ಅನ್ನೋದಕ್ಕೆ ನಾನು ಪ್ರತಿಕ್ರಿಯಿಸಲ್ಲ. ನಾನು ಅವರ ಕೈ ಕೆಳಗೆ ಕೆಲಸ ಮಾಡಿದ್ದೇನೆ. ಬದಲಾದ ಸನ್ನಿವೇಶದಲ್ಲಿ ರಾಜಕೀಯವಾಗಿ ವಿರೋಧಿಯಾಗಿದ್ದ ಕುಮಾರಸ್ವಾಮಿ ಅವರ ಕೈ ಕೆಳಗೆ ಕೆಲಸ ಮಾಡಿದ್ದೇನೆ. ಎಸ್.ಎಂ.ಕೃಷ್ಣ, ಬಂಗಾರಪ್ಪ, ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ನಮ್ಮ ನಾಯಕರೆಂದು ಒಪ್ಪಿಕೊಂಡು ಅವರ ಕೈ ಕೆಳಗೆ ಕೆಲಸ ಮಾಡಿದ್ದೇನೆ. ಹಾಗಾಗಿ ಅವರ ಯಾರ ವಿರುದ್ಧವೂ ಕಮೆಂಟ್ ಮಾಡಲ್ಲ ಎಂದು ಸ್ಪಷ್ಟಪಡಿಸಿದರು.

    ನಾನು ತಪ್ಪು ಮಾಡಿದ್ದೇನೋ ಇಲ್ಲವೋ, ಎಲ್ಲವೂ ಕಾನೂನು ಮೂಲಕ ಗೊತ್ತಾಗಲಿದೆ. ಕೆಲವರಿಗೆ ನಾನು ಅನಾವಶ್ಯಕ ಟಾರ್ಗೆಟ್ ಆಗಿದ್ದೇನೆ. ನನ್ನ ಮನಸ್ಸು ಒಪ್ಪಿದ ಕೆಲಸವನ್ನ ಮಾಡುತ್ತೇನೆ. ಯಾರು ಏನು ಅಂದುಕೊಳ್ಳುತ್ತಾರೆ ಅನ್ನೋದು ನನಗೆ ಮುಖ್ಯವಲ್ಲ. ಉಪ ಚುನಾವಣೆ ಟಿಕೆಟ್ ಹಂಚಿಕೆ ಹಾಗೂ ಇತ್ತೀಚಿನ ಬೆಳವಣಿಗೆ ಬಗ್ಗೆ ಸಾಕಷ್ಡು ನಾಯಕರು ನನ್ನ ಜೊತೆ ಮಾತನಾಡಿದ್ದಾರೆ. ಅದನ್ನ ನಾನು ಬಹಿರಂಗ ಪಡಿಸಲ್ಲ.

  •  Exclusive: ಎಲ್ಲಾ ತನಿಖೆಗಳಿಂದ ಡಿಕೆಶಿಗೆ ಸಿಗುತ್ತಾ ರಿಲೀಫ್?

     Exclusive: ಎಲ್ಲಾ ತನಿಖೆಗಳಿಂದ ಡಿಕೆಶಿಗೆ ಸಿಗುತ್ತಾ ರಿಲೀಫ್?

    -ಡಿಕೆಶಿ ಸಿಬಿ’ಐ’ನಿಂದ ಬಚಾವ್?
    -ರಿಲೀಫ್ ಖಾತ್ರಿಯಾದ್ರೆ ಡಿಕೆ ಹೊಸ ಆಟ

    ಬೆಂಗಳೂರು: ಜಾರಿ ನಿರ್ದೇಶನಾಲಯ ಮತ್ತು ಸಿಬಿಐ ಸುಳಿಯಲ್ಲಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಎಲ್ಲ ತನಿಖೆಗಳಿಂದ ರಿಲೀಫ್ ಸಿಗುತ್ತಾ ಎಂಬ ಪ್ರಶ್ನೆಗೆ ಕೆಲವೊಂದು ಉತ್ತರಗಳು ರಾಜ್ಯ ರಾಜಕೀಯ ಅಂಗಳದಲ್ಲಿ ಹರಿದಾಡುತ್ತಿವೆ.

    ಜಾಮೀನು ಪಡೆದು ಹೊರಬಂದ ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ ಸಾಕ್ಷ್ಯ ಸಂಗ್ರಹಣೆಗೆ ಮುಂದಾಗಿತ್ತು. ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಡಿಕೆ ಶಿವಕುಮಾರ್ ನಡುವೆ 50 ಕೋಟಿ ರೂ.ಯ ವ್ಯವಹಾರ ನಡೆದಿದೆ ಎಂದು ಹೇಳಲಾಗಿತ್ತು. ಈ ಸಂಬಂಧ ಬೆಂಗಳೂರು ಮತ್ತು ದೆಹಲಿ ಸಿಬಿಐ ತಂಡ ಸಾಕ್ಷ್ಯ ಸಂಗ್ರಹಣೆಗೆ ಮುಂದಾಗಿತ್ತು. ಈ ವ್ಯವಹಾರ ಸಂಬಂಧ ಸಣ್ಣ ಸಾಕ್ಷ್ಯ ಸಿಕ್ಕಿದ್ದರೂ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಲು ಸಿಬಿಐ ಪ್ಲಾನ್ ಮಾಡಿಕೊಂಡಿತ್ತು. ಸಾಕ್ಷ್ಯ ಸಿಗದ ಹಿನ್ನೆಲೆಯಲ್ಲಿ ತನಿಖಾಧಿಕಾರಿಗಳು ಹಿಂದೆ ಸರಿದಿದ್ದಾರೆ ಎಂಬ ಮಾಹಿತಿಗಳು ಪಬ್ಲಿಕ್ ಟಿವಿಗೆ ಲಭ್ಯವಾಗಿವೆ.

    ಲಕ್ಷ್ಮಿ ಹೆಬ್ಬಾಳ್ಕರ್ ಅವರಿಂದ 50 ಕೋಟಿ ರೂ. ನಗದು ಪಡೆದಿದ್ದಾರೆ ಎಂಬುವುದು ಕೇವಲ ಹೇಳಿಕೆಯಾಗಿದ್ದು ಹಣ ಹೇಗೆ ಯಾರಿಂದ? ಯಾರಿಗೆ? ಯಾವ ಮಾರ್ಗದಲ್ಲಿ ವರ್ಗಾವಣೆ ಆಗಿದೆ ಎಂಬುದರ ಬಗ್ಗೆ ಸೂಕ್ತ ಮಾಹಿತಿ ಲಭ್ಯವಾಗಿಲ್ಲ. ಇತ್ತ ಸೋಲಾರ್ ಪ್ಲಾಂಟ್‌ನಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಮಾತಿಗೆ ಸೂಕ್ತ ಸಾಕ್ಷ್ಯ ಲಭ್ಯವಾಗಿಲ್ಲ. 1,500 ಎಕ್ರೆ ಪವರ್ ಪ್ಲಾಂಟ್ ನಲ್ಲಿ ಕಾನೂನು ಉಲ್ಲಂಘನೆ ಆಗಿಲ್ಲ ಮತ್ತು ಮೇಲ್ನೋಟಕ್ಕೆ ಯಾವುದೇ ಅವ್ಯವಹಾರ ನಡೆದಂತೆ ಕಂಡು ಬಂದಿಲ್ಲ. ಓಪನ್ ಟೆಂಡರ್ ಮಾಡಿದರ ಬಗ್ಗೆ ಸರ್ಕಾರದಲ್ಲಿ ದಾಖಲೆಗಳಿವೆ. ಕಲ್ಲಿದ್ದಲು ಖರೀದಿಯಲ್ಲಿಯೂ ಯಾವುದೇ ಅವ್ಯವಹಾರದ ಬಗ್ಗೆ ಸಾಕ್ಷ್ಯವಿಲ್ಲ ಎಂದು ತಿಳಿದು ಬಂದಿದೆ.

    ರಿಲೀಫ್ ಸಿಕ್ಕರೆ ಡಿಕೆಶಿ ಮುಂದಿನ ನಡೆ ಏನು?
    ಜಾಮೀನು ಪಡೆದು ಹೊರಬಂದ ಡಿಕೆಶಿವಕುಮಾರ್ ಅವರಿಗೆ ಬೆಂಬಲಿಗರು ಅದ್ಧೂರಿ ಸ್ವಾಗತ ನೀಡಿದ್ದರು. ಡಿಕೆ ಶಿವಕುಮಾರ್ ಈ ಮೂಲಕ ಪರೋಕ್ಷವಾಗಿ ತಮ್ಮ ಶಕ್ತಿಯನ್ನು ಪ್ರದರ್ಶಿಸಿದ್ದರು. ಇತ್ತ ಡಿಕೆ ಶಿವಕುಮಾರ್ ಅವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಲಾಗುತ್ತಿದೆ ಎಂಬ ಮಾತುಗಳು ಕೇಳಿ ಬಂದಿವೆ. ಎಲ್ಲ ತನಿಖೆಗಳಿಂದ ಡಿಕೆ ಶಿವಕುಮಾರ್ ರಿಲೀಫ್ ಪಡೆದುಕೊಂಡರೆ ಕಾಂಗ್ರೆಸ್ ಪಟ್ಟಾಭಿಷೇಕ ಮಾಡಲು ಪ್ಲಾನ್ ಮಾಡಿಕೊಂಡಿದೆ. ಒಂದು ವೇಳೆ ಸಿಬಿಐ ಪ್ರಕರಣವನ್ನು ಕೈಬಿಟ್ಟರೆ ಡಿಕೆ ಶಿವಕುಮಾರ್ ಮತ್ತಷ್ಟು ಪ್ರಬಲ ನಾಯಕರಾಗುತ್ತಾರೆ ಎಂಬ ಮಾತು ಕಾಂಗ್ರೆಸ್ ಅಂಗಳದಲ್ಲಿ ಕೇಳಿ ಬರುತ್ತಿದೆ.

    ಇದನ್ನೇ ಬಂಡವಾಳನ್ನಾಗಿ ಮಾಡಿಕೊಂಡು ಡಿಕೆ ಶಿವಕುಮಾರ್ ತಮ್ಮ ಹಳೇ ಖದರ್ ಮೂಲಕ ಉಪಚುನಾವಣೆಯ ಪ್ರಚಾರದಲ್ಲಿ ಭಾಗಿಯಾಗುವ ಸಾಧ್ಯತೆಗಳಿವೆ. ತಾವು ಜೈಲಿಗೆ ಹೋಗಿಬಂದಿದ್ದನ್ನೇ ಲಾಭವನ್ನಾಗಿ ಮಾಡಿಕೊಂಡು ಮತಯಾಚಿಸುವ ಸಾಧ್ಯತೆಗಳಿವೆ. ಅನರ್ಹ ಶಾಸಕರ ಕ್ಷೇತ್ರಗಳಿಗೆ ಭೇಟಿ, ಕಾಂಗ್ರೆಸ್ ಪಾದಯಾತ್ರೆಯಲ್ಲಿ ಭಾಗಿಯಾಗೋದು ಮತ್ತು ಪ್ರವಾಹ ಪೀಡಿತ ಪ್ರದೇಶಗಳಿಗೆ ತೆರಳಿ ಜನತೆಗೆ ಹತ್ತಿರವಾಗುವ ಮೂಲಕ ರಾಜ್ಯ ಕಾಂಗ್ರೆಸ್ ನಲ್ಲಿ ಪ್ರಬಲ ನಾಯಕನಾಗಿ ಬೆಳೆಯಲು ಡಿಕೆ ಶಿವಕುಮಾರ್ ಪ್ಲಾನ್ ಮಾಡಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

  • ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆ ಡಿಕೆಶಿಗೆ ಮಹತ್ವದ ಹುದ್ದೆ- ಹೈಕಮಾಂಡ್ ನೀಡುತ್ತಾ ಗಿಫ್ಟ್?

    ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆ ಡಿಕೆಶಿಗೆ ಮಹತ್ವದ ಹುದ್ದೆ- ಹೈಕಮಾಂಡ್ ನೀಡುತ್ತಾ ಗಿಫ್ಟ್?

    ಬೆಂಗಳೂರು: ದೆಹಲಿ ಹೈಕೋರ್ಟ್ ಜಾಮೀನು ಮಂಜೂರು ಮಾಡುತ್ತಿದ್ದಂತೆ ಡಿಕೆ ಶಿವಕುಮಾರ್ ಅವರಿಗೆ ಹೈಕಮಾಂಡ್ ಕೆಪಿಸಿಸಿ ಪಟ್ಟ ನೀಡುತ್ತಾ ಎನ್ನುವ ಪ್ರಶ್ನೆ ಎದ್ದಿದೆ.

    ಹೌದು. ಈ ಹಿಂದೆ ಸಿಬಿಐ ಬಂಧನಕ್ಕೆ ಒಳಗಾಗಿ ಬಿಡುಗಡೆಯಾದ ಅಮಿತ್ ಶಾ ನಂತರ ಪವರ್ ಫುಲ್ ಲೀಡರ್ ಆಗಿ ಬೆಳೆದಿದ್ದಾರೆ. ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ, ಬಿಜೆಪಿ ರಾಷ್ಟ್ರ ಅಧ್ಯಕ್ಷರಾಗಿ ಈಗ ಕೇಂದ್ರ ಗೃಹ ಸಚಿವರಾಗಿದ್ದಾರೆ. ನಕಲಿ ಎನ್ ಕೌಂಟರ್ ಪ್ರಕರಣದಲ್ಲಿ ಜೈಲಿಗೆ ಹೋಗಿ ಬಿಡುಗಡೆಯಾದ ನಂತರ ಅಮಿತ್ ಶಾಗೆ ಹೇಗೆ ಹೈಕಮಾಂಡ್ ಭರ್ಜರಿ ಗಿಫ್ಟ್ ನೀಡಿತ್ತೋ ಅದೇ ರೀತಿ ಡಿಕೆ ಶಿವಕುಮಾರ್ ಅವರಿಗೂ ಹೈಕಮಾಂಡ್ ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ನೀಡಲಿದೆ ಎನ್ನುವ ವಿಚಾರ ಈಗಾಗಲೇ ಕಾಂಗ್ರೆಸ್ ವಲಯದಲ್ಲಿ ಚರ್ಚೆಯಾಗುತ್ತಿದೆ.

    ಈಗ ದೇಶಾದ್ಯಂತ ಕಾಂಗ್ರೆಸ್ ಪ್ರಭಾವ ಕಡಿಮೆಯಾಗಿದೆ. ರಾಜ್ಯ ರಾಜಕಾರಣದಲ್ಲಿ ಪವರ್ ಫುಲ್ ಆಗಿರುವ ಡಿಕೆಶಿ ರಾಷ್ಟ್ರ ಮಟ್ಟದಲ್ಲೂ ತಮ್ಮದೇ ಆದ ಸಂಪರ್ಕ ಹೊಂದಿದ್ದಾರೆ. ಈಗಾಗಲೇ ಟ್ರಬಲ್ ಶೂಟರ್ ಎಂಬ ಖ್ಯಾತಿ ಪಡೆದಿರುವ ಡಿಕೆಶಿ ಬಂಧನದ ವಿಚಾರವೂ ರಾಷ್ಟ್ರ ಮಟ್ಟದಲ್ಲಿ ಸುದ್ದಿ ಮಾಡಿದ್ದರಿಂದ ಕಾಂಗ್ರೆಸ್ ಶಿವಕುಮಾರ್ ವಿಷಯದಲ್ಲಿ ಗಂಭೀರವಾಗಿ ಯೋಚಿಸತೊಡಗಿದೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    ಗುಜರಾತ್ ಶಾಸಕರನ್ನು ರೆಸಾರ್ಟಿನಲ್ಲಿ ರಕ್ಷಣೆ ಮಾಡಿದ್ದಕ್ಕೆ ಸೇಡಿನ ರಾಜಕಾರಣ ಮಾಡಿ ಬಂಧನ ಮಾಡಲಾಯಿತು. ಈ ವಿಚಾರವನ್ನು ಮುನ್ನಲೆಗೆ ತಂದು ರಾಜ್ಯಾಧ್ಯಕ್ಷ ಪಟ್ಟವನ್ನು ನೀಡಲು ಚರ್ಚೆ ನಡೆದಿದೆ ಎನ್ನಲಾಗುತ್ತಿದೆ.

    ಇಂದು ಬೆಳಗ್ಗೆ ಡಿಕೆ ಶಿವಕುಕಮಾರ್ ಅವರನ್ನು ತಿಹಾರ್ ಜೈಲಿನಲ್ಲಿ ಸೋನಿಯಾ ಗಾಂಧಿ ಭೇಟಿಯಾಗಿ ಮಾತುಕತೆ ನಡೆಸಿದ್ದರು. ಭೇಟಿ ವೇಳೆ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆಸಿ ವೇಣುಗೋಪಾಲ್ ಸೋನಿಯಾ ಜೊತೆ ಆಗಮಿಸಿದ್ದರು.

    ಸೋನಿಯಾ ಭೇಟಿಯ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಂಸದ ಡಿಕೆ ಸುರೇಶ್, ಪಕ್ಷ ಹಾಗೂ ಪಕ್ಷದ ಪ್ರತಿಯೊಬ್ಬ ಸದಸ್ಯ ನಿಮ್ಮ ಜೊತೆ ಇದ್ದಾರೆ ಎಂದು ಅಣ್ಣನಲ್ಲಿ ಹೇಳಿ ಸೋನಿಯಾ ಗಾಂಧಿ ಧೈರ್ಯ ತುಂಬಿದ್ದಾರೆ. ಸೋನಿಯಾಗಾಂಧಿ ಭೇಟಿ ಹಾಗೂ ಸಾಂತ್ವನದಿಂದ ಶಿವಕುಮಾರ್ ಅವರಲ್ಲಿಯೂ ಧೈರ್ಯ ಬಂದಿದೆ ಎಂದು ತಿಳಿಸಿದ್ದರು.

    ಸಿಬಿಐ ಅರೆಸ್ಟ್ ಮಾಡುತ್ತಾ?
    ಡಿ. ಕೆ. ಶಿವಕುಮಾರ್ ವಿರುದ್ಧ ಐಟಿ ದಾಳಿ ನಡೆದ ಬಳಿಕ ದೆಹಲಿಯಲ್ಲಿ ಸಿಕ್ಕಿದ ದಾಖಲೆ ರಹಿತ ಹಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಪ್ರಕರಣ ದಾಖಲಿಸಿತ್ತು. ಅಕ್ರಮ ಹಣ ವರ್ಗಾವಣೆ ಕೇಸ್ ಅಡಿ ಬಂಧನಕ್ಕೆ ಒಳಗಾದ ಡಿಕೆಶಿ ತಿಹಾರ್ ಜೈಲು ಸೇರಿದ್ದರು. ಇದೇ ಐಟಿ ದಾಳಿಯ ಬಳಿಕ, ಡಿಕೆಶಿ ಅಕ್ರಮ ಆಸ್ತಿ ಹೊಂದಿದ್ದಾರೆ ಅನ್ನೋ ಆರೋಪದ ಮೇಲೆ ಸಿಬಿಐ ಭ್ರಷ್ಟಾಚಾರ ತಡೆ ಕಾಯ್ದೆ ಸಿಬಿಐ ಪ್ರಕರಣ ದಾಖಲಿಸಿದೆ. ಡಿಕೆಶಿ ವಿರುದ್ಧ ಪ್ರಕರಣ ದಾಖಲಿಸುವುದಕ್ಕೂ ಮುನ್ನ ರಾಜ್ಯ ಸರ್ಕಾರದಿಂದಲೂ ಸಿಬಿಐ ಅನುಮತಿ ಪಡೆದಿತ್ತು. ಡಿಕೆಶಿ ತಿಹಾರ್ ಜೈಲಿನಲ್ಲಿ ಇರುವಾಗಲೇ ಪ್ರಾಥಮಿಕ ತನಿಖೆಯನ್ನೂ ಆರಂಭಿಸಿದ್ದ ಸಿಬಿಐ, ಇದೀಗ ತಾನೇ ತನಿಖೆ ಪೂರ್ಣಗೊಳಿಸಿದೆ. ಹೀಗಾಗಿ ಎಫ್‍ಐಆರ್ ದಾಖಲಾದರೆ ಬಂಧನಕ್ಕೆ ಒಳಗಾಗುವ ಸಾಧ್ಯತೆಯಿದೆ.

    ಸಿಬಿಐ ತನಿಖೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಕೆಪಿಸಿಸಿ ಪಟ್ಟ ನೀಡುತ್ತಾ ಇಲ್ಲವೋ ಎನ್ನುವುದು ಮುಂದಿನ ದಿನಗಳಲ್ಲಿ ಗೊತ್ತಾಗಲಿದೆ.

  • ಡಿಕೆಶಿ ನಿವಾಸದ ಮೇಲೆ ಸಿಬಿಐ ದಾಳಿ

    ಡಿಕೆಶಿ ನಿವಾಸದ ಮೇಲೆ ಸಿಬಿಐ ದಾಳಿ

    ನವದೆಹಲಿ: ತಿಹಾರ್ ಜೈಲಿನಲ್ಲಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಮತ್ತೊಂದು ಕಂಟಕ ಶುರುವಾಗಿದೆ. ಇಂದು ಡಿಕೆ ಶಿವಕುಮಾರ್ ಮಾಲೀಕತ್ವದ ದೆಹಲಿಯ ಸಫ್ದರ್ ಜಂಗ್ ಎನ್‍ಕ್ಲೇವ್ ಬಿ-4/17 ನಿವಾಸದ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

    ದೆಹಲಿಯ ಹೈಕೋರ್ಟ್ ನಲ್ಲಿ ಡಿ.ಕೆ.ಶಿವಕುಮಾರ್ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ನ್ಯಾಯಾಲಯದಲ್ಲಿ ವಾದ-ಪ್ರತಿವಾದ ಮುಗಿದಿದ್ದು, ನ್ಯಾಯಾಧೀಶರು ತೀರ್ಪನ್ನು ಕಾಯ್ದಿರಿಸಿದ್ದಾರೆ. ಒಂದು ವೇಳೆ ಡಿ.ಕೆ.ಶಿವಕುಮಾರ್ ಜಾಮೀನು ದೊರೆತು ಹೊರ ಬಂದ್ರೆ ಸಿಬಿಐ ಅವರನ್ನು ವಶಕ್ಕೆ ಪಡೆದುಕೊಳ್ಳುವ ಸಾಧ್ಯತೆಗಳಿವೆ. ಜಾಮೀನು ಅರ್ಜಿ ತಿರಸ್ಕೃತಗೊಂಡು ಡಿಕೆ ಶಿವಕುಮಾರ್ ತಿಹಾರ್ ಜೈಲಿನಲ್ಲಿಯೇ ಉಳಿದ್ರೆ, ಸಿಬಿಐ ಬಾಡಿ ವಾರೆಂಟ್ ಮೂಲಕ ಡಿಕೆಶಿಯವರನ್ನು ವಶಕ್ಕೆ ಪಡೆಯಬಹುದಾಗಿದೆ.

    ಇಡಿ ಕೇಸ್ ನಿಂದ ಪಾರಾದ್ರೆ ಡಿಕೆ ಶಿವಕುಮಾರ್, ಸಿಬಿಐ ಚಕ್ರವ್ಯೂಹದಲ್ಲಿ ಸಿಲುಕುವ ಸಾಧ್ಯತೆಗಳಿವೆ. ಅಕ್ರಮ ಹಣ ವರ್ಗಾವಣೆ ಆರೋಪದಡಿ ದಾಳಿ ನಡೆಸಿ ಕೆಲವು ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿವೆ.

  • ಐಎಂಎ ಕೇಸ್ – ಮೌಲ್ವಿ ಸೇರಿ ಇಬ್ಬರ ಮೇಲೆ ದೋಷಾರೋಪ ಪಟ್ಟಿ ಸಲ್ಲಿಕೆ

    ಐಎಂಎ ಕೇಸ್ – ಮೌಲ್ವಿ ಸೇರಿ ಇಬ್ಬರ ಮೇಲೆ ದೋಷಾರೋಪ ಪಟ್ಟಿ ಸಲ್ಲಿಕೆ

    ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐನಿಂದ ಎರಡನೇ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿದ್ದು, ಮೌಲ್ವಿ ಅಫ್ಸರ್ ಹನೀಜ್ ಸೇರಿ ಇಬ್ಬರ ಮೇಲೆ ದೋಷಾರೋಪಣೆ ಪಟ್ಟಿ ಸಲ್ಲಿಸಲಾಗಿದೆ.

    ಆರ್.ಟಿ.ನಗರ ಮೂಲದ ಮೌಲ್ವಿ ಅಫ್ಸರ್ ಹನೀಜ್ ಮನ್ಸೂರ್ ಖಾನ್‍ನಿಂದ ಮೂರು ಕೋಟಿ ರೂ. ಮೌಲ್ಯದ ಬಂಗಲೆ ಪಡೆದುಕೊಂಡಿದ್ದ. ಬಂಗಲೆ ಪಡೆದಿದ್ದರಿಂದ ತನ್ನ ಸಮುದಾಯದವರಿಗೆ ಐಎಂಎನಲ್ಲಿ ಹೂಡಿಕೆ ಮಾಡುವಂತೆ ಪ್ರೇರಣೆ ನೀಡುತ್ತಿದ್ದ. ಮಸೀದಿಯಲ್ಲಿ ಪ್ರಾರ್ಥನೆಗೆ ಬಂದ ವೇಳೆ ಪ್ರೇರೇಪಣೆ ನೀಡಿ ಹೂಡಿಕೆ ಮಾಡುವಂತೆ ಸೂಚನೆ ನೀಡುತ್ತಿದ್ದ. ಈ ಹಿನ್ನೆಲೆ ಸೆಪ್ಟೆಂಬರ್‍ನಲ್ಲಿ ಎಸ್‍ಐಟಿ ಅಧಿಕಾರಿಗಳು ಮೌಲ್ವಿಯನ್ನು ಬಂಧಿಸಿದ್ದರು.

    ಹನೀಫ್ ಅಫ್ಸರ್ ಅಜೀಜ್ ಶಿವಾಜಿನಗರ ಒಪಿಎಚ್ ರಸ್ತೆಯ ಬೇಪಾರಿಯನ್ ಮಸೀದಿಯ ಧರ್ಮ ಗುರುವಾಗಿದ್ದು, 2017ರಲ್ಲಿ ಹೆಚ್‍ಬಿಆರ್ ಲೇಔಟ್ ನಲ್ಲಿ ಮೂರು ಕೋಟಿ ರೂ. ಮೌಲ್ಯದ ಮನೆ ಉಡುಗೊರೆ ಪಡೆದಿದ್ದ.

    ಮಸೀದಿಗೆ ಬರುವ ಸಾವಿರಾರು ಭಕ್ತರ ಭಾವನೆಗಳ ಜೊತೆ ಆಟವಾಡಿದ್ದ ಹನೀಫ್ ಅಫ್ಸರ್ ಜನಸಾಮಾನ್ಯರ ಧಾರ್ಮಿಕ ಭಾವನೆಗಳನ್ನು ದುರ್ಬಳಕೆ ಮಾಡಿಕೊಂಡು ಐಎಂಎ ನಲ್ಲಿ ಹಣ ಹೂಡಿಕೆ ಮಾಡುವಂತೆ ಪ್ರೇರೇಪಿಸುತ್ತಿದ್ದ. ನಮಾಜ್‍ಗೆ ಬಂದ ಜನರಿಗೆ ಐಎಂಎನಲ್ಲಿ ಹಣ ಹೂಡುವಂತೆ ಪ್ರಚೋದನೆ ಮಾಡುತ್ತಿದ್ದ. ಈ ಧರ್ಮಗುರು ಮಾತನ್ನು ನಂಬಿ ಸಾವಿರಾರು ಜನ ಮುಸ್ಲಿಂ ಸಮುದಾಯದವರು ಐಎಂಎನಲ್ಲಿ ಹೂಡಿಕೆ ಮಾಡಿದ್ದರು. ಹೂಡಿಕೆ ಮಾಡಿಸಿದ್ದರಿಂದ ಧರ್ಮಗುರುವಿನ ಋಣ ತೀರಿಸಲು ಮೂರು ಕೋಟಿ ರೂ. ಮೌಲ್ಯದ ಮನೆಯನ್ನು ಮನ್ಸೂರ್ ಖಾನ್ ನೀಡಿದ್ದ.

  • ಉನ್ನಾವೋ ಕೇಸ್ – ಶಾಸಕ ರೇಪ್‍ಗೈದ 1 ವಾರದ ನಂತ್ರ ಅಪ್ರಾಪ್ತೆಯ ಮೇಲೆ ಮೂವರಿಂದ ಗ್ಯಾಂಗ್‍ರೇಪ್

    ಉನ್ನಾವೋ ಕೇಸ್ – ಶಾಸಕ ರೇಪ್‍ಗೈದ 1 ವಾರದ ನಂತ್ರ ಅಪ್ರಾಪ್ತೆಯ ಮೇಲೆ ಮೂವರಿಂದ ಗ್ಯಾಂಗ್‍ರೇಪ್

    – ಸಿಬಿಐನಿಂದ ದೆಹಲಿ ಕೋರ್ಟಿಗೆ ಚಾರ್ಜ್ ಶೀಟ್ ಸಲ್ಲಿಕೆ
    – ಅ.10 ರಿಂದ ವಿಚಾರಣೆ ಆರಂಭ

    ಲಕ್ನೋ: ಉನ್ನಾವೋ ಪ್ರಕರಣದ ತನಿಖೆ ನಡೆಸುತ್ತಿರುವ ಕೇಂದ್ರಿಯ ತನಿಖಾ ದಳ (ಸಿಬಿಐ) ಗುರುವಾರ ದೆಹಲಿ ಜಿಲ್ಲಾ ನ್ಯಾಯಾಲಯಕ್ಕೆ ಚಾರ್ಜ್‍ಶೀಟ್ ಸಲ್ಲಿಕೆ ಮಾಡಿದ್ದು, ಮೂವರು ಸಂತ್ರಸ್ತೆಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿದೆ.

    ಈ ಚಾರ್ಜ್‍ಶೀಟ್‍ನಲ್ಲಿ ಬಿಜೆಪಿ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅವರು ಅತ್ಯಾಚಾರ ಮಾಡಿದ ಒಂದು ವಾರದ ನಂತರ ಅದೇ ಸಂತ್ರಸ್ತೆಯನ್ನು ಇನ್ನೂ ಮೂವರು ಉನ್ನವೋದಿಂದ ಅಪಹರಿಸಿ ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ ಎಂದು ಉಲ್ಲೇಖಿಸಿದೆ.

    ಸಂತ್ರಸ್ತೆಯನ್ನು ಅಪಹರಿಸಿ ಅತ್ಯಾಚಾರ ಮಾಡಿದ ಮೂವರನ್ನು ನರೇಶ್ ತಿವಾರಿ, ಬ್ರಿಜೇಶ್ ಯಾದವ್ ಸಿಂಗ್ ಮತ್ತು ಶುಭಮ್ ಸಿಂಗ್ ಎಂದು ಗುರುತಿಸಲಾಗಿದೆ. ಈ ಪ್ರಕರಣದಲ್ಲಿ ಪ್ರಮುಖ ಆರೋಪಿಯಾದ ಶುಭಂ ಸಿಂಗ್ ಬಿಜೆಪಿ ಮಾಜಿ ಶಾಸಕ ಕುಲದೀಪ್ ಸಿಂಗ್ ಅವರ ಸಹವರ್ತಿ ಶಶಿ ಸಿಂಗ್ ಅವರ ಪುತ್ರನಾಗಿದ್ದು, ಕುಲದೀಪ್ ಯಾದವ್ ಅವರೇ ಇದನ್ನು ಮಾಡಿಸಿದ್ದಾರೆ ಎಂದು ಆರೋಪಿಸಿದೆ.

    ಸಧ್ಯ ಈ ಮೂವರು ಆರೋಪಿಗಳು ಜಾಮೀನಿನ ಮೇಲೆ ಹೊರ ಬಂದಿದ್ದು, ಈ ಮೂವರು ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಜೂನ್ 11 2017 ರಂದು ಉನ್ನಾವೊದಿಂದ ಅಪಹರಿಸಿ ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ. ಈ ಪ್ರಕರಣದಲ್ಲಿ ಶಶಿ ಸಿಂಗ್ ಕೂಡ ಸಹ ಆರೋಪಿಯಾಗಿದ್ದಾನೆ. ಶಶಿ ಸಿಂಗ್ ಆಮಿಷವೊಡ್ಡಿ ಕುಲದೀಪ್ ಸಿಂಗ್ ನಿವಾಸಕ್ಕೆ ಸಂತ್ರಸ್ತೆಯನ್ನು ಕರೆ ತಂದ ಬಳಿಕ ಜೂನ್ 4 2017 ರಂದು ಸಂತ್ರಸ್ತೆಯನ್ನು ಕುಲದೀಪ್ ಸಿಂಗ್ ಅತ್ಯಾಚಾರ ಮಾಡಿದ್ದಾರೆ ಎಂದು ಉಲ್ಲೇಖಿಸಿದೆ.

    ಕೋರ್ಟ್ ಈ ಪ್ರಕರಣದ ವಿಚಾರಣೆ ನಡೆಸಲು ಅ.10ರಂದು ದಿನ ನಿಗದಿ ಮಾಡಿದೆ. ಇನ್ನು 6 ದಿನ ಸಿಕ್ಕಿದ ಹಿನ್ನೆಲೆಯಲ್ಲಿ ಸಿಬಿಐ ನ್ಯಾಯಾಲಯಕ್ಕೆ ಮತ್ತಷ್ಟು ಸಾಕ್ಷ್ಯಗಳನ್ನು ಸಲ್ಲಿಸುವ ಸಾಧ್ಯತೆಯಿದೆ. ರೇಪ್ ಕೇಸ್ ದೇಶಾದ್ಯಂತ ಸುದ್ದಿಯಾದ ಬಳಿಕ ಬಿಜೆಪಿ ಕುಲ್‍ದೀಪ್ ಸಿಂಗ್ ಸೆಂಗಾರ್ ಅವರನ್ನು ಪಕ್ಷದಿಂದ ಉಚ್ಚಾಟಿಸಿದೆ.

  • ನನ್ನ ಹೆಸರಲ್ಲಿ ಸೋಲಾರ್ ಪ್ಲ್ಯಾಂಟ್ ಇದ್ದರೆ ಸರ್ಕಾರಕ್ಕೆ ಬರೆದು ಕೊಡ್ತೀನಿ: ಲಕ್ಷ್ಮಿ ಹೆಬ್ಬಾಳ್ಕರ್

    ನನ್ನ ಹೆಸರಲ್ಲಿ ಸೋಲಾರ್ ಪ್ಲ್ಯಾಂಟ್ ಇದ್ದರೆ ಸರ್ಕಾರಕ್ಕೆ ಬರೆದು ಕೊಡ್ತೀನಿ: ಲಕ್ಷ್ಮಿ ಹೆಬ್ಬಾಳ್ಕರ್

    ಬೆಳಗಾವಿ: ನನ್ನ ಹೆಸರಿನಲ್ಲಿ ಸೋಲಾರ್ ಪ್ಲ್ಯಾಂಟ್ ಇದೆ ಎಂದು ದಾಖಲೆ ತೋರಿಸಿದ್ರೆ ಅದನ್ನು ಚಾಮುಂಡಿ ತಾಯಿಯ ಆಣೆಯಾಗಿ ಸರ್ಕಾರದ ಬೊಕ್ಕಸಕ್ಕೆ ಬರೆದು ಕೊಡುತ್ತೇನೆ. ಎಲ್ಲ ಆರೋಪಗಳಿಗೂ ಉತ್ತರ ಕೊಡುವ ಅಗತ್ಯವಿಲ್ಲ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

    ನನ್ನ ವಿರುದ್ಧ ಕೇಳಿ ಬಂದಿರುವ ಆರೋಪಗಳೆಲ್ಲ ಸತ್ಯಕ್ಕೆ ದೂರವಾದದ್ದು, ಕೆಲ ಸುದ್ದಿಗಳನ್ನು ವೈಭವೀಕರಿಸಿ ತೋರಿಸಲಾಗುತ್ತಿದೆ. ಅಪೆಕ್ಸ್ ಬ್ಯಾಂಕ್ ಕೇವಲ ನನ್ನ ತಮ್ಮನಿಗೆ ಮಾತ್ರ ಸಾಲ ನೀಡಿಲ್ಲ. ದೊಡ್ಡ ಮಟ್ಟದಲ್ಲಿ ವ್ಯವಹಾರ ಮಾಡುವ ಅಪೆಕ್ಸ್ ಬ್ಯಾಂಕ್ ಎಲ್ಲ ದಾಖಲಾತಿಗಳನ್ನು ಪಡೆದುಕೊಂಡು ಕಾನೂನುಬದ್ಧವಾಗಿ ಸಾಲ ನೀಡಿರುತ್ತದೆ. ನಮ್ಮ ಎಲ್ಲ ವ್ಯವಹಾರಗಳು ಕಾನೂನಿನ ಚೌಕಟ್ಟಿನಲ್ಲಿ ನಡೆದಿವೆ ಎಂದು ಸ್ಪಷ್ಟಪಡಿಸಿದರು.

    ಎಲ್ಲವೂ ವಿಚಾರಣೆ ಹಂತದಲ್ಲಿರುವಾಗ ಕಲ್ಪಿತ ಸುದ್ದಿಗಳು ಬಿತ್ತರವಾಗುತ್ತಿವೆ. ಸತ್ಯಕ್ಕೆ ಹತ್ತಿರ ಸುದ್ದಿಗಳು ಬಿತ್ತರವಾದ್ರೆ ಏನು ಆಗಲ್ಲ. ಆದ್ರೆ ನಾನು ಕಲ್ಪನೆಯೂ ಮಾಡಿಕೊಳ್ಳದ ರೀತಿಯಲ್ಲಿ ಸುದ್ದಿಗಳು ಬಿತ್ತರವಾಗೋದು ನೋಡಿ ವಿಚಿತ್ರ ಅನ್ನಿಸುತ್ತಿದೆ. ನನ್ನ ಕ್ಷೇತ್ರದ ಜನರಿಗೆ ನಾನು ಹೇಗೆ ಎಂಬುವುದು ಗೊತ್ತಿದೆ ಎಂದರು.

    ಜಾರಿ ನಿರ್ದೇಶನಾಲಯ ನನ್ನನ್ನು ವಿಚಾರಣೆಗೆ ಮತ್ತೊಮ್ಮೆ ಕರೆದಿಲ್ಲ. ಮಾಜಿ ಶಾಸಕ ಕೆ.ಎನ್.ರಾಜಣ್ಣ ಅವರ ಅಪೆಕ್ಸ್ ಬ್ಯಾಂಕ್ ನಿಂದ ತಮ್ಮ ಚನ್ನರಾಜು ಸಾಲ ಪಡೆದುಕೊಂಡಿದ್ದಾರೆ. ಈ ವಿಚಾರವಾಗಿ ಕೆ.ಎನ್.ರಾಜಣ್ಣ ವಿಚಾರಣೆ ಹೋಗುತ್ತಾರೆ. ಇಡಿ ಮತ್ತು ಸಿಬಿಐ ಬಗ್ಗೆ ಕಲ್ಪನೆ ಇಲ್ಲ. ಹಾಗಾಗಿ ಗೊತ್ತಿಲ್ಲದ ವಿಚಾರ ಬಗ್ಗೆ ಮಾತನಾಡುವುದಿಲ್ಲ. ಇಡಿ ಅಧಿಕಾರಿಗಳು ತುಂಬಾನೇ ಸಮಾಧಾನವಾಗಿ ಪ್ರಶ್ನೆಗಳನ್ನು ಕೇಳಿ ನನ್ನಿಂದ ಉತ್ತರ ಪಡೆದುಕೊಂಡರು. ನನ್ನ ಉತ್ತರಗಳು ಇಡಿ ಅಧಿಕಾರಿಗಳಿಗೆ ಸಮಾಧಾನ ಆದಂತೆ ಕಾಣುತ್ತಿದೆ. ಹಾಗಾಗಿ ಮತ್ತೊಮ್ಮೆ ವಿಚಾರಣೆಗೆ ಕರೆದಿಲ್ಲ ಎಂದು ತಿಳಿಸಿದರು.

    ಇದೆಲ್ಲ ರಾಜಕೀಯ, ದೇವಾನುದೇವತೆಗಳಿಗೆ ಅಮೃತ ಮತ್ತು ವಿಷನೂ ಬಂದಿದೆ. ಅಮೃತ ಬಂದಾಗ ಖುಷಿ ಪಡೋದರ ಜೊತೆಗೆ ವಿಷ ಬಂದಾಗಲೂ ಎದುರಿಸುವ ಧೈರ್ಯ ಇರಬೇಕು. ಇಂತಹ ಕಷ್ಟಗಳನನು ಸಹಿಸಿಕೊಳ್ಳುವ ಶಕ್ತಿ ದೇವರು ನನಗೆ ಕೊಡಲಿ ಮತ್ತು ವಿರೋಧಿಗಳಿಗೆ ದೇವರು ಒಳ್ಳೆಯ ಬುದ್ಧಿ ಕೊಡಲಿ ಎಂದು ಕೇಳಿಕೊಳ್ಳುತ್ತೇನೆ ಎಂದರು.

  • ಇಡಿ, ಐಟಿ ಬೆನ್ನಲ್ಲೇ ‘ಕನಕಪುರ ಬಂಡೆಗೆ’ ಮತ್ತೊಂದು ಸಂಕಷ್ಟ

    ಇಡಿ, ಐಟಿ ಬೆನ್ನಲ್ಲೇ ‘ಕನಕಪುರ ಬಂಡೆಗೆ’ ಮತ್ತೊಂದು ಸಂಕಷ್ಟ

    ಬೆಂಗಳೂರು: ಅಕ್ರಮ ಹಣಕಾಸು ವ್ಯವಹಾರ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

    ಆದಾಯ ತೆರಿಗೆ ಇಲಾಖೆ ದಾಳಿ ವೇಳೆ ಮಾಜಿ ಸಚಿವರ ನಿವಾಸದಲ್ಲಿ ಅಪಾರ ಪ್ರಮಾಣದ ನಗದು ಪತ್ತೆಯಾಗಿತ್ತು. ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದೆ.

    ಡಿ.ಕೆ.ಶಿವಕುಮಾರ್ ಅವರ ಮನೆಯಲ್ಲಿ ಸಿಕ್ಕ ಹಣವು ಭ್ರಷ್ಟಾಚಾರದಿಂದ ಬಂದಿದ್ದಾ ಎನ್ನುವ ಅನುಮಾನ ಶುರುವಾಗಿದೆ. ಹೀಗಾಗಿ ಇದನ್ನು ಪತ್ತೆಹಚ್ಚಲು ಜಾರಿ ನಿರ್ದೇಶನಾಲಯ ಸಿಬಿಐ ನೆರವನ್ನು ಕೋರಿತ್ತು. ಇಡಿ ಮನವಿಯನ್ನು ಪರಿಗಣಿಸಿದ ಸಿಬಿಐ, ತನಿಖೆ ನಡೆಸಲು ಅನುಮತಿ ಕೋರಿ ರಾಜ್ಯ ಸರ್ಕಾರಕ್ಕೆ ಪತ್ರಕ್ಕೆ ಬರೆದಿತ್ತು. ಸಿಬಿಐ ಮನವಿಗೆ ಸ್ಪಂದಿಸಿರುವ ರಾಜ್ಯ ಸರ್ಕಾರದ ಗೃಹ ಇಲಾಖೆಯು ಮಾಜಿ ಸಚಿವರ ಮೇಲೆ ತನಿಖೆಗೆ ಅನುಮತಿಯನ್ನು ನೀಡಿದೆ. ಈ ಮೂಲಕ ಸಿಬಿಐ ಮೊದಲಿಗೆ ಪ್ರಾಥಮಿಕ ತನಿಖೆ ನಡೆಸಲಿದೆ ಎಂದು ತಿಳಿದು ಬಂದಿದೆ.

    ಇಡಿ ಬಂಧನಕ್ಕೆ ಒಳಗಾಗಿರುವ ಡಿ.ಕೆ.ಶಿವಕುಮಾರ್ ಅವರು ಸದ್ಯ ತಿಹಾರ್ ಜೈಲಿನಲ್ಲಿದ್ದಾರೆ. ಮಾಜಿ ಸಚಿವರ ನ್ಯಾಯಾಂಗ ಬಂಧನದ ಅಕ್ಟೋಬರ್ 1ರಂದು ಮುಕ್ತಾಯವಾಗಿತ್ತು. ಹೀಗಾಗಿ ಅಂದು ಅವರನ್ನು ಕೋರ್ಟಿಗೆ ಕರೆತರಲಾಗಿತ್ತು. ಕೋರ್ಟಿನಲ್ಲಿ ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಮೂರ್ತಿಗಳು ಅಕ್ಟೋಬರ್ 15 ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿ ಆದೇಶ ನೀಡಿದ್ದಾರೆ. ಅಕ್ಟೋಬರ್ 14ಕ್ಕೆ ದೆಹಲಿಯ ಹೈಕೊರ್ಟಿನಲ್ಲಿ ಡಿಕೆಶಿ ಜಾಮೀನು ಅರ್ಜಿ ವಿಚಾರಣೆಗೆ ನಡೆಯಲಿದೆ.

  • ಕಳ್ಳಗಿವಿ ಕೇಸ್ ತನಿಖೆ ಚುರುಕು- ಸಿಬಿಐ ಬಳಿ ಸ್ಫೋಟಕ ಸತ್ಯ ಬಿಚ್ಚಿಟ್ಟ ಅಲೋಕ್ ಕುಮಾರ್?

    ಕಳ್ಳಗಿವಿ ಕೇಸ್ ತನಿಖೆ ಚುರುಕು- ಸಿಬಿಐ ಬಳಿ ಸ್ಫೋಟಕ ಸತ್ಯ ಬಿಚ್ಚಿಟ್ಟ ಅಲೋಕ್ ಕುಮಾರ್?

    ಬೆಂಗಳೂರು: ಫೋನ್ ಟ್ಯಾಪಿಂಗ್ ಪ್ರಕರಣದ ತನಿಖೆಯನ್ನು ಸಿಬಿಐ ಮತ್ತಷ್ಟು ಚುರುಕುಗೊಳಿಸಿದ್ದು, ಪ್ರಕರಣದಲ್ಲಿ ಹೊಸ ಹೊಸ ಟ್ವಿಸ್ಟ್ ಲಭಿಸುತ್ತಿದೆ. ಗುರುವಾರ ಇಡೀ ದಿನ ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ನಿವಾಸದಲ್ಲಿ ಪರಿಶೀಲನೆ ನಡೆಸಿದ್ದ ಸಿಬಿಐ ಅಧಿಕಾರಿಗಳಿಗೆ ಸ್ಫೋಟಕ ಅಂಶಗಳು ಲಭ್ಯವಾಗಿದೆ ಎಂಬ ಮಾಹಿತಿ ಲಭಿಸಿದೆ.

    ಇಡೀ ದಿನ ಸಿಬಿಐ ಅಧಿಕಾರಿಗಳು ಅಲೋಕ್ ಕುಮಾರ್ ಅವರನ್ನು ಪ್ರಶ್ನಿಸಿದ್ದು, ಈ ಸಂದರ್ಭದಲ್ಲಿ ಪ್ರಕರಣದ ಹಲವಾರು ವಿಚಾರಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಅಲ್ಲದೇ ಪ್ರಕರಣ ಕೆಲ ಸತ್ಯಾಂಶಗಳನ್ನು ಅಲೋಕ್ ಕುಮಾರ್ ತಿಳಿಸಿದ್ದಾರೆ. ವಿಚಾರಣೆಯ ಸಂದರ್ಭದಲ್ಲಿ ಅವರಿಗೆ ಸಿಬಿಐ ಅಧಿಕಾರಿಗಳು, ಕೆಳಗಿನ ಅಧಿಕಾರಿಗಳಿಗೆ ಟ್ಯಾಪಿಂಗ್‍ಗೆ ಸೂಚಿಸಿದ್ದೀರಿ, ಯಾವ ಉದ್ದೇಶದಿಂದ ನೀವು ಫೋನ್ ಮಾಡಿದ್ದು ಎಂದು ಪ್ರಶ್ನಿಸಿದ್ದು, ಈ ಪ್ರಶ್ನೆಗಳಿಗೆ ಉತ್ತರಿಸಿರುವ ಅಲೋಕ್ ಕುಮಾರ್ ಅಚ್ಚರಿ ಮೂಡಿಸುವಂತಹ ಸತ್ಯಾಂಶಗಳನ್ನು ಬಿಚ್ಚಿಟ್ಟಿದ್ದಾರೆ.

    ಅಲೋಕ್‍ಕುಮಾರ್ ಹೇಳಿದ್ದೇನು?
    ಫೋನ್ ಟ್ಯಾಪಿಂಗ್ ಬಗ್ಗೆ ಅಲೋಕ್ ಕುಮಾರ್ ಅವರೊಂದಿಗೆ ಕೆಲಸ ಮಾಡುತ್ತಿದ್ದ ಕೆಲ ಅಧಿಕಾರಿಗಳಿಗೆ ಗುಟ್ಟುಬಿಟ್ಟು ಕೊಟ್ಟಿದ್ದು, ಇದರ ಹಿಂದಿನ ಉದ್ದೇಶವನ್ನು ಸಿಬಿಐ ಅಧಿಕಾರಿಗಳು ಪ್ರಶ್ನಿಸಿದ್ದರು. ಸಿಬಿಐ ಕೇಳಿದ ಪ್ರಶ್ನೆಗೆ ಸತ್ಯ ಬಿಚ್ಚಿಟ್ಟ ಅಲೋಕ್‍ಕುಮಾರ್ ಅವರು, ‘ದೊಡ್ಡವರ’ ಸೂಚನೆಯಂತೆ ಕೆಲವರ ಫೋನ್ ಟ್ಯಾಪಿಂಗ್ ನಡೆದಿದೆ. ಅವರು ಕೊಟ್ಟ ನಂಬರ್ ಗಳು ಟ್ಯಾಪಿಂಗ್ ಆಗಿದೆ ಎಂದು ತಿಳಿಸಿದ್ದಾರೆ.

    ಸಿಬಿಐ ಅಧಿಕಾರಿಗಳ ಪ್ರಶ್ನೆಗಳಿಗೆ ನೇರವಾಗಿ ಉತ್ತರಿಸಿರುವ ಅಲೋಕ್ ಕುಮಾರ್ ಅವರು, ಫೋನ್ ಟ್ಯಾಪಿಂಗ್‍ಗೆ ಸೂಚನೆ ಕೊಟ್ಟಿದ್ದು ‘ದೊಡ್ಡವರೇ’, ಅವರ ಸೂಚನೆಯಂತೆ ಕೊಟ್ಟ ಫೋನ್ ನಂಬರ್ ಗಳನ್ನು ಫೋನ್ ಟ್ಯಾಪ್ ಮಾಡಿ ಕೆಳ ಅಧಿಕಾರಿಗಳಿಗೆ ತಲುಪಿಸಲಾಗಿದೆ. ನನಗೆ ವಾಟ್ಸಾಪ್‍ನಲ್ಲಿ ಸಂದೇಶ ನೀಡುತ್ತಿದ್ದರು. ಅದರಂತೆ ನಾನು ಮಾಡಿದ್ದೇನೆ. ಈ ಕುರಿತ ಎಲ್ಲಾ ಮಾಹಿತಿಯನ್ನು ನಾನು ಸ್ಟೇಟ್‍ಮೆಂಟ್ ನೀಡುವಾಗ ಹೇಳುತ್ತೇನೆ ಎಂದಿದ್ದಾರೆ ಎಂಬ ಬಗ್ಗೆ ಮಾಹಿತಿ ಲಭಿಸಿದೆ.

    ಸದ್ಯ ಅಲೋಕ್ ಕುಮಾರ್ ಬಿಚ್ಚಿಟ್ಟಿರುವ ಈ ಮಾಹಿತಿಯ ಅನ್ವಯ ಅವರು ಹೇಳಿರುವ ‘ದೊಡ್ಡವರು’ ಯಾರು ಎಂಬ ಪ್ರಶ್ನೆ ಉದ್ಭವಿಸಿದ್ದು, ಫೋನ್ ಟ್ಯಾಪ್ ಮಾಡಲು ಸೂಚನೆ ನೀಡಿದ್ದು, ಡಿಜಿಪಿ ಅವರ ಅಥವಾ ಮಾಜಿ ಗೃಹ ಸಚಿವರಾ, ಮಾಜಿ ಉಪ ಮುಖ್ಯಮಂತ್ರಿಗಳಾ ಅಥವಾ ಮಾಜಿ ಮುಖ್ಯಮಂತ್ರಿಗಳಾ ಎಂಬ ಹಲವು ಅನುಮಾನಗಳು ಹುಟ್ಟಿಕೊಂಡಿದೆ. ಪ್ರಕರಣದ ತನಿಖೆ ಚುರುಕುಗೊಂಡಿರುವುದರಿಂದ ಕಳ್ಳಗಿವಿ ಪ್ರಕರಣ ‘ದೊಡ್ಡವರಿಗೂ’ ಉರುಳಾಗುತ್ತಾ? ವಾಟ್ಸಾಪ್ ಮೂಲಕ ಸಂದೇಶ ರವಾನೆಯಾಗಿರುವುದರಿಂದ ಸಿಬಿಐ ವಾಟ್ಸಾಪ್ ಕೂಡ ಪರಿಶೀಲನೆ ನಡೆಸುತ್ತಾ? ಮುಂದಿನ ವಿಚಾರಣೆಯಲ್ಲಿ ದೊಡ್ಡವರಿಗೂ ಸಂಕಷ್ಟ ಎದುರಾಗಲಿದೆಯಾ ಎಂಬ ಹಲವು ಪ್ರಶ್ನೆಗಳು ಮೂಡಿದೆ.

    ಪ್ರಮುಖವಾಗಿ ‘ದೊಡ್ಡವರು’ ನೀಡಿರುವ ಸೂಚನೆ ಮೇರೆಗೆ ರಾಜಕಾರಣಿಗಳು, ಪೊಲೀಸರು ಹಾಗೂ ಮಠಾಧೀಶರ ಫೋನ್ ಕೂಡ ಟ್ಯಾಪಿಂಗ್ ಮಾಡಲಾಗಿದ್ದು, ಆದಿಚುಂಚನಗಿರಿ ಸ್ವಾಮೀಜಿ ಅವರ ಫೋನ್ ಕೂಡ ಟ್ಯಾಪ್ ಆಗಿರುವ ಮಾಹಿತಿ ವಿಚಾರಣೆ ವೇಳೆ ಲಭಿಸಿದೆ. ಈ ಮಾಹಿತಿಯನ್ನು ಪೊಲೀಸರು ಕೇಂದ್ರ ಗೃಹ ಸಚಿವಾಲಯಕ್ಕೂ ನೀಡಿದ್ದಾರೆ ಎನ್ನಲಾಗಿದ್ದು, ಸ್ಯಾಂಡಲ್ ಸ್ಮಗ್ಲಿಂಗ್ ಸೇರಿದಂತೆ 20ಕ್ಕೂ ಹೆಚ್ಚು ಕೇಸಲ್ಲಿ ಭಾಗಿಯಾಗಿರುವ ವ್ಯಕ್ತಿಯ ಸಹಾಯ ಪಡೆಯಲಾಗಿತ್ತು. ಸ್ಯಾಂಡಲ್ ಸ್ಮಗ್ಲಿಂಗ್ ಕಳ್ಳನ ಗ್ಯಾಂಗ್ ಪತ್ತೆ ಹಚ್ಚುವ ನೆಪದಲ್ಲೇ ಟ್ಯಾಪಿಂಗ್ ನಡೆಸಲಾಗಿದೆ. ಶ್ರೀಗಳ ಫೋನ್ ಜೊತೆಗೆ ಮತ್ತಿಬ್ಬರ ಮೇಲೂ ಪೊಲೀಸರು ನಿಗಾ ವಹಿಸಿದ್ದರು. ನಿರ್ಮಲಾನಂದ ಶ್ರೀ ಜೊತೆ ಆಪ್ತರಾದ ಲಿಂಗೇಶ್, ರಮೇಶ್ ಅವರ ನಂಬರ್ ಗಳನ್ನು ಸರಿ ಸುಮಾರು 3 ತಿಂಗಳ ಕಾಲ ಟ್ಯಾಪ್ ಮಾಡಲಾಗಿತ್ತು ಎನ್ನಲಾಗಿದೆ.

  • ಅಲೋಕ್‍ ಕುಮಾರ್ ಈಗ್ಲೂ ದಕ್ಷ ಅಧಿಕಾರಿ – ಸಿಬಿಐ ದಾಳಿಗೂ ನನಗೂ ಸಂಬಂಧವಿಲ್ಲ: ಎಚ್‍ಡಿಕೆ

    ಅಲೋಕ್‍ ಕುಮಾರ್ ಈಗ್ಲೂ ದಕ್ಷ ಅಧಿಕಾರಿ – ಸಿಬಿಐ ದಾಳಿಗೂ ನನಗೂ ಸಂಬಂಧವಿಲ್ಲ: ಎಚ್‍ಡಿಕೆ

    ಬೆಂಗಳೂರು: ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅವರ ನಿವಾಸದಲ್ಲಿ ಸಿಬಿಐ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿರುವ ಕುರಿತ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಎಚ್‍ಡಿ ಕುಮಾರಸ್ವಾಮಿ, ಸಿಬಿಐ ದಾಳಿಗೂ ನನಗೂ ಸಂಬಂಧವಿಲ್ಲ ಎಂದು ಹೇಳಿದ್ದಾರೆ.

    ಜೆಡಿಎಸ್ ಕಚೇರಿ ಜೆಪಿ ಭವನದಲ್ಲಿ ಫೋನ್ ಕದ್ದಾಲಿಕೆ ಕುರಿತ ವಿಚಾರಣೆ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ ಮಾತನಾಡಿದ ಎಚ್‍ಡಿಕೆ, ಯಾರ ಮನೆ ಮೇಲಾದರೂ ದಾಳಿ ನಡೆಯಲಿ. ನನ್ನನ್ನು ಯಾಕೆ ಕೇಳುತ್ತೀರಿ. ಅದಕ್ಕೂ ನನಗೂ ಏನು ಸಂಬಂಧ? ಎಲ್ಲರ ಅವಧಿಯಲ್ಲೂ ಫೋನ್ ಟ್ಯಾಪಿಂಗ್ ನಡೆದಿದೆ. ಯಾರ ಯಾರ ಅವಧಿಯಲ್ಲಿ ಹೇಗೆ ನಡೆಸಿದ್ದಾರೆ ಎಂದು ತನಿಖೆ ನಡೆಸುತ್ತಿದ್ದಾರೆ. ಅದಕ್ಕೆ ನಾನು ಏಕೆ ತಲೆ ಕೆಡಿಸಿಕೊಳ್ಳಲಿ ಎಂದರು.

    ಈಗಲೂ ನಾನು ಹೇಳುತ್ತಿದ್ದೇನೆ. ಹಿರಿಯ ಪೊಲೀಸ್ ಅಧಿಕಾರಿ ಅಲೋಕ್ ಕುಮಾರ್ ಅವರು ದಕ್ಷ ಅಧಿಕಾರಿಯಾಗಿದ್ದಾರೆ. ಪ್ರಕರಣದಲ್ಲಿ ನನ್ನ ಮನೆಗೂ ವಿಚಾರಣೆಗೆ ಬಂದರೆ ಬರಲಿ. ದೇಶದ ಕಾನೂನು ವ್ಯವಸ್ಥೆಯ ಅಡಿ ಯಾರನ್ನು ಬೇಕಾದರು ತನಿಖೆ ಮಾಡಬಹುದು. ಇದಕ್ಕೆ ಗಾಬರಿ ಪಡುವ ಅಗತ್ಯವಿಲ್ಲ ಎಂದರು.

    ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಹಿನ್ನೆಲೆಯಲ್ಲಿ ಜೆಡಿಎಸ್ ಅಭ್ಯರ್ಥಿ ಆಯ್ಕೆ ಕುರಿತು ಇಂದು ಜೆಡಿಎಸ್ ಕಚೇರಿಯಲ್ಲಿ ಸಭೆ ನಡೆಸಿದರು. ಜೆಡಿಎಸ್ ವರಿಷ್ಠರಾದ ದೇವೇಗೌಡ ನೇತೃತ್ವದಲ್ಲಿ ನಡೆದ ಸಭೆಯಲ್ಲಿ 15 ಕ್ಷೇತ್ರಗಳ ಅಭ್ಯರ್ಥಿ ಬಗ್ಗೆ ನಿರ್ಧಾರವಾಗಲಿದೆ. ಈಗಾಗಲೇ ಎಲ್ಲಾ ಕ್ಷೇತ್ರಗಳ ಮುಖಂಡರ ಸಭೆ ಮಾಡಿ ಅಭ್ಯರ್ಥಿಗಳನ್ನ ಕುಮಾರಸ್ವಾಮಿ ಫೈನಲ್ ಮಾಡಿದ್ದು, ಇಂದಿನ ಸಭೆಯಲ್ಲಿ ಅಭ್ಯರ್ಥಿಗಳ ಪಟ್ಟಿ ಮಂಡಿಸಿ ಚರ್ಚೆ ಮಾಡಿ ಅಂತಿಮವಾಗಿ ಅಭ್ಯರ್ಥಿ ಗಳನ್ನ ಘೋಷಣೆ ಮಾಡಲಾಗುತ್ತೆ ಎಂಬ ಮಾಹಿತಿ ಲಭಿಸಿದೆ.