Tag: cbi

  • ಫೋನ್ ಟ್ಯಾಪಿಂಗ್ ಪ್ರಕರಣ- ಅಲೋಕ್ ಕುಮಾರ್‌ಗೆ ಸಿಬಿಐ ಡ್ರಿಲ್

    ಫೋನ್ ಟ್ಯಾಪಿಂಗ್ ಪ್ರಕರಣ- ಅಲೋಕ್ ಕುಮಾರ್‌ಗೆ ಸಿಬಿಐ ಡ್ರಿಲ್

    ಬೆಂಗಳೂರು: ಫೋನ್ ಕದ್ದಾಲಿಕೆ ಪ್ರಕರಣ ಸಂಬಂಧ ಎಡಿಜಿಪಿ ಕೆಎಸ್‌ಆರ್‌ಪಿ ಅಲೋಕ್ ಕುಮಾರ್ ಅವರನ್ನು ಸಿಬಿಐ ಅಧಿಕಾರಿಗಳು ಸತತ 1 ಗಂಟೆಯಿಂದ ವಿಚಾರಣೆ ನಡೆಸುತ್ತಿದ್ದಾರೆ.

    ಅಲೋಕ್ ಕುಮಾರ್ ನಿವಾಸದಲ್ಲೇ ಸತತ 1 ಗಂಟೆಯಿಂದ ಸಿಬಿಐ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಬೆಳ್ಳಂಬೆಳಗ್ಗೆ ಮನೆಗೆ ಭೇಟಿ ಕೊಟ್ಟು ಅಲೋಕ್ ಕುಮಾರ್ ಅವರಿಗೆ ಸಿಬಿಐ ಶಾಕ್ ಕೊಟ್ಟಿದ್ದಾರೆ. ಅಲೋಕ್ ಅವರು ಬೆಂಗಳೂರು ಕಮೀಷನರ್ ಆಗಿದ್ದಾಗ ಫೋನ್ ಕದ್ದಾಲಿಕೆ ಪ್ರಕರಣ ನಡೆದಿದ್ದು, ಅಲೋಕ್ ಅವರ ಮನೆಯಲ್ಲೇ ಕದ್ದಾಲಿಕೆ ನಡೆದಿದೆ. ಎಲ್ಲಾ ಮಾಹಿತಿಯನ್ನು ಅವರು ಪೆನ್‍ಡ್ರೈವ್‍ನಲ್ಲಿ ಸಂಗ್ರಹಿಸಿ ಇಟ್ಟಿದ್ದರು. ಅವರಿಗೆ ಈ ಬಗ್ಗೆ ಮೊದಲೇ ಗೊತ್ತಿತ್ತು ಎಂಬ ಆರೋಪವಿದೆ. ಆದ್ದರಿಂದ ಈ ಬಗ್ಗೆ ತನಿಖೆ ಕೈಗೊಂಡಿರುವ ಸಿಬಿಐ ಅಧಿಕಾರಿಗಳು ಅಲೋಕ್ ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

    ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಇದ್ದ ಸಂದರ್ಭದಲ್ಲಿ ಕುಮಾರಸ್ವಾಮಿ ಅವರು ಸಿಎಂ ಆಗಿದ್ದಾಗ ಈ ರೀತಿ ಫೋನ್ ಕದ್ದಾಲಿಕೆ ನಡೆದಿದೆ. ಇದರಲ್ಲಿ ಅನೇಕ ಐಎಎಸ್, ಐಪಿಎಸ್ ಹಾಗೂ ಇತರೆ ಹಿರಿಯ ಅಧಿಕಾರಿಗಳ ಹೆಸರು ಕೂಡ ಕೇಳಿಬಂದಿತ್ತು. ಅಲ್ಲದೆ ಅಲೋಕ್ ಕುಮಾರ್ ಅವರು ಕಮೀಷನರ್ ಹುದ್ದೆಯಿಂದ ಕೆಳಗಿಳಿದ ಬಳಿಕ ಕಚೇರಿಯಿಂದ ಸುಮಾರು 30 ಜಿಬಿಯಷ್ಟು ಆಡಿಯೋ ಕ್ಲಿಪ್ಪಿಂಗ್ಸ್ ಇದ್ದ ಆಡಿಯೋವನ್ನು ಅವರು ತೆಗೆದುಕೊಂಡು ಹೋಗಿದ್ದರು ಎಂಬ ಆರೋಪ ಕೂಡ ಇದೆ.

    ಈ ಸಂಬಂಧ ಸ್ವಯಂ ಪೇರಿತವಾಗಿ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 72 ಐಟಿ ಆ್ಯಕ್ಟ್, ಸೆಕ್ಷನ್ 26 ಇಂಡಿಯನ್ ಟೆಲಿಗ್ರಾಂ ಆ್ಯಕ್ಟ್ ಅಡಿ ಪ್ರಕರಣ ದಾಖಲಿಸಿಕೊಂಡಿತ್ತು. ಈ ಪ್ರರಕಣವನ್ನು ರಾಜ್ಯ ಸರ್ಕಾರವು ಸಿಬಿಐಗೆ ಹಸ್ತಾಂತರಿಸಿತ್ತು. ಈ ಬಗ್ಗೆ ಸಿಬಿಐ ಈಗ ತನಿಖೆ ಕೈಗೊಂಡಿದೆ.

  • ಯೋಗೇಶ್ ಗೌಡ ಕೊಲೆ ಕೇಸ್: ಸಿಬಿಐನಿಂದ 6 ಆರೋಪಿಗಳ ವಿರುದ್ಧ ಎಫ್‍ಐಆರ್ ದಾಖಲು

    ಯೋಗೇಶ್ ಗೌಡ ಕೊಲೆ ಕೇಸ್: ಸಿಬಿಐನಿಂದ 6 ಆರೋಪಿಗಳ ವಿರುದ್ಧ ಎಫ್‍ಐಆರ್ ದಾಖಲು

    ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣ ಸಂಬಂಧ ತನಿಖೆ ಆರಂಭಿಸಿರುವ ಸಿಬಿಐ ಆರು ಆರೋಪಿಗಳ ವಿರುದ್ಧ ಎಫ್‍ಐಆರ್ ದಾಖಲಿಸಿದೆ.

    ರಾಜ್ಯ ಸರ್ಕಾರ ಸೆಪ್ಟೆಂಬರ್ 9ರಂದು ಯೋಗೇಶ್ ಗೌಡ ಹತ್ಯೆ ಪ್ರಕರಣದ ತನಿಖೆಯನ್ನು ಅಧಿಕೃತವಾಗಿ ಸಿಬಿಐಗೆ ಹಸ್ತಾಂತರಿಸಿತ್ತು. ತನಿಖೆ ಆರಂಭಿಸಿರುವ ಸಿಬಿಐ ಪ್ರಕರಣದ ಆರೋಪಿಗಳಾದ ಬಸವರಾಜ ಶಿವಪ್ಪ, ವಿಕ್ರಮ್ ಬಳ್ಳಾರಿ, ಕೀರ್ತಿ ಕುಮಾರ್ ಕುರಹಟ್ಟಿ, ಸಂದೀಪ್ ಸೌದತ್ತಿ, ವಿನಾಯಕ ಕಾಟಗಿ ಹಾಗೂ ಮಹಾಬಲೇಶ್ವರ ಹೊನಗಲ್ ವಿರುದ್ಧ ಪ್ರಕರಣ ದಾಖಸಿಕೊಂಡಿದೆ.

    2017 ಜೂನ್ 15ರಂದು ಯೋಗೇಶ್ ಗೌಡನ ಕೊಲೆಯಾಗಿತ್ತು. ಅಂದು ಬೆಳಗ್ಗೆ ಧಾರವಾಡ ನಗರದ ಸಪ್ತಾಪುರ ಜಿಮ್‍ಗೆ ಎಂಟ್ರಿ ಕೊಟ್ಟಿದ್ದ ದುಷ್ಕರ್ಮಿಗಳು ಯೋಗೇಶ್ ಗೌಡನನ್ನು ಮಚ್ಚಿನಿಂದ ಬರ್ಬರವಾಗಿ ಕೊಲೆಗೈದಿದ್ದರು. ಈ ದೃಶ್ಯವು ಜಿಮ್ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಈ ದೃಶ್ಯಗಳನ್ನಾಧರಿಸಿ ಪೊಲೀಸರು ಮಾಜಿ ಸಚಿವ, ಸ್ಥಳೀಯ ಕಾಂಗ್ರೆಸ್ ಮುಖಂಡ ವಿನಯ್ ಕುಲಕರ್ಣಿ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಐವರನ್ನು ಬಂಧಿಸಿದ್ದರು. ಹೀಗಾಗಿ ಕೊಲೆಯ ಹಿಂದೆ ವಿನಯ್ ಕುಲಕರ್ಣಿ ಅವರ ಕೈವಾಡವಿದೆ ಎಂಬ ಆರೋಪ ಕೇಳಿ ಬಂದಿತ್ತು.

    ಪ್ರಕರಣದಲ್ಲಿ ವಿನಯ್ ಕುಲಕರ್ಣಿಯವರ ಹೆಸರು ಕೇಳಿ ಬಂದ ಹಿನ್ನೆಲೆಯಲ್ಲಿ ಆರೋಪಿಗಳು ಯೋಗಿಶ್ ಗೌಡನ ಸಹೋದರನ ಜೊತೆ ರಾಜಿ ಮಾಡಿಕೊಳ್ಳಲು ಮುಂದಾಗಿದ್ದರು. ಇತ್ತ ವಿನಯ್ ಕುಲಕರ್ಣಿಯವರ ಹೆಸರನ್ನು ಕೈ ಬಿಡಲು ಅಧಿಕಾರಿಗಳು ಪ್ಲಾನ್ ಮಾಡಿಕೊಳ್ಳುತ್ತಿದ್ದಾರೆ ಎಂದು ಯೋಗೇಶ್ ಗೌಡ ತಾಯಿ ಆರೋಪಿಸಿದ್ದರು.

    ಈ ಎಲ್ಲ ಬೆಳವಣಿಗೆ ನಡುವೆ 2017ರಲ್ಲಿ ಯೋಗೇಶ್ ಗೌಡ ಪತ್ನಿ ಮಲ್ಲಮ್ಮ ಕಾಂಗ್ರೆಸ್ ಸೇರುವ ಮೂಲಕ ಹಲವು ಅಚ್ಚರಿಗೆ ಕಾರಣವಾಗಿದ್ದರು. ಆದರೆ ಬಿಜೆಪಿ ನಾಯಕರು ಮಲ್ಲಮ್ಮ ಅವರನ್ನು ಕಾಂಗ್ರೆಸ್ ನಾಯಕರು ಹೈಜಾಕ್ ಮಾಡಿದ್ದಾರೆ. ಬೆದರಿಸಿ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದರು. ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ್ದ ಮಲ್ಲಮ್ಮ, ನಾನು ಸ್ವಇಚ್ಛೆಯಿಂದ ಕಾಂಗ್ರೆಸ್ ಸೇರಿದ್ದೇನೆ ಎಂದಿದ್ದರು.

    ನನ್ನ ಗಂಡನ ಹತ್ಯೆಯಲ್ಲಿ ವಿನಯ್ ಕುಲಕರ್ಣಿ ಪಾತ್ರ ಇದೆ ಅಂತ ನಾನು ಸುಮ್ಮನೆ ಆರೋಪ ಮಾಡಲ್ಲ. ಗಂಡನನ್ನು ಕೊಂದವರಿಗೆ ಶಿಕ್ಷೆ ಆಗಬೇಕು. ನನಗೂ, ನನ್ನ ನಾಲ್ಕು ಮಕ್ಕಳಿಗೂ ನ್ಯಾಯ ಸಿಗಬೇಕು. ಸಿದ್ದರಾಮಯ್ಯ ನಮ್ಮ ಜಾತಿಯವರು. ಅವರ ಬಳಿ ಹೋದರೆ ನನಗೆ ನ್ಯಾಯ ಸಿಗುತ್ತೆ. ಅವರು ಸೇರಿಸಿಕೊಂಡ್ರೆ ನಾನು ಕಾಂಗ್ರೆಸ್ ಸೇರುತ್ತೇನೆ. ವಿನಯ್ ಕುಲಕರ್ಣಿ ಇದುವರೆಗೆ ನನ್ನೊಂದಿಗೆ ಯಾವತ್ತೂ ಮಾತನಾಡಿಲ್ಲ. ನನ್ನ ಭಾವ ಗುರುನಾಥ್ ಗೌಡ ಪ್ರತಿಯೊಂದಕ್ಕೂ ನನಗೆ ಅಡ್ಡಿಪಡಿಸುತ್ತಿದ್ದಾರೆ. ನಾನು ಯಾರನ್ನು ನಂಬುವ ಸ್ಥಿತಿಯಲ್ಲಿ ಇಲ್ಲ. ಗಂಡನ ಸಾವನ್ನು ನನ್ನ ಭಾವ ಹಾಗೂ ಸ್ಥಳೀಯ ನಾಯಕರು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ ಅಂತ ಮಲ್ಲಮ್ಮ ತನ್ನ ಅಳಲು ತೋಡಿಕೊಂಡಿದ್ದರು.

    ಆರೋಪಿಗಳ ಕೊಲೆಗೆ ಸ್ಕೆಚ್:
    ಯೋಗೇಶ್ ಗೌಡ ಪ್ರಕರಣದಲ್ಲಿ ಧಾರವಾಡದ ಕೇಂದ್ರ ಕಾರಾಗೃಹದಲ್ಲಿದ್ದ ಬಸವರಾಜ್ ಮುತ್ತಗಿ, ಕೀರ್ತಿ, ವಿನಾಯಕ್, ಮುದಕಪ್ಪ ಮತ್ತು ಸಂದೀಪ್ ಕೊಲೆಗೆ ಸಂಚು ರೂಪಿಸಲಾಗಿತ್ತು. ಯೋಗೇಶ್ ಗೌಡ ಸಹೋದರ ಗುರುನಾಥ್ ಗೌಡ ತನ್ನ ಸಹಚರರಾದ ಲಕ್ಷ್ಮಣ್, ಹನುಮಂತ್ ಮತ್ತು ಸಂಜಯ್ ಮೂಲಕ ಕೊಲೆಗೆ ಸಂಚು ರೂಪಿಸಿದ್ದನು. ಈ ನಾಲ್ವರ ಮಾತನಾಡಿರುವ ಆಡಿಯೋ ಟೇಪ್ ಪೊಲೀಸರಿಗೆ ಲಭ್ಯವಾಗಿದ್ದರಿಂದ ದೊಡ್ಡ ಅನಾಹುತವನ್ನು ತಡೆದಿದ್ದರು. ಸದ್ಯ ಪ್ರಕರಣದ ಎಲ್ಲ ಆರೋಪಿಗಳು ಜಾಮೀನಿನ ಮೇಲೆ ಹೊರಗೆ ಬಂದಿದ್ದಾರೆ.

    ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಪ್ರಶ್ನೆಗಳಿಗೆ ಉತ್ತರವೇ ಸಿಕ್ಕಿಲ್ಲ. ವಿನಯ್ ಕುಲಕರ್ಣಿ ಮಾತ್ರ ಬಿಜೆಪಿ ನಾಯಕರು ರಾಜಕೀಯ ದ್ವೇಷದಿಂದ ನನ್ನ ಹೆಸರನ್ನು ಈ ಪ್ರಕರಣದಲ್ಲಿ ಎಳೆದು ತರುತ್ತಿದ್ದಾರೆ. ನನಗೂ ಈ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಆರೋಪಗಳನ್ನು ತಳ್ಳಿ ಹಾಕಿದ್ದಾರೆ. ಪ್ರಕರಣ ಸಿಬಿಐಗೆ ವರ್ಗಾವಣೆ ಆಗಿದ್ದರಿಂದ ವಿನಯ್ ಕುಲಕರ್ಣಿ ಅವರನ್ನು ವಿಚಾರಣೆಗೆ ಒಳಪಡಿಸುವ ಸಾಧ್ಯತೆಗಳು ಹೆಚ್ಚಿವೆ.

  • ಐಎಂಎ ವಂಚನೆ ಪ್ರಕರಣ-ಜಮೀರ್ ಅಹ್ಮದ್‍ಗೆ ಮುಂದುವರಿದ ವಿಚಾರಣೆ

    ಐಎಂಎ ವಂಚನೆ ಪ್ರಕರಣ-ಜಮೀರ್ ಅಹ್ಮದ್‍ಗೆ ಮುಂದುವರಿದ ವಿಚಾರಣೆ

    ಬೆಂಗಳೂರು: ಐಎಂಎ ವಂಚನೆ ಪ್ರಕರಣವನ್ನು ಸಿಬಿಐ ಕೈಗೆತ್ತಿಕೊಂಡಿದ್ದು, ಮಾಜಿ ಸಚಿವ ಜಮೀರ್ ಅಹ್ಮದ್ ಅವರನ್ನು ಇಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.

    ಆರ್.ಟಿ.ನಗರದ ಸಿಬಿಐ ಕಚೇರಿಯಲ್ಲಿ ಜಮೀರ್ ಅಹ್ಮದ್ ವಿಚಾರಣೆ ನಡೆಯಲಿದೆ. ಜಮೀರ್ ಅಹ್ಮದ್ ಸರ್ಫೆಂಟೈನ್ ರಸ್ತೆಯಲ್ಲಿರುವ ನಿವೇಶನವನ್ನು ಕಡಿಮೆ ಬೆಲೆಯಲ್ಲಿ ಮನ್ಸೂರ್ ಖಾನ್‍ಗೆ ಮಾರಿದ್ದರು. ಹೀಗಾಗಿ ಐಎಂಎ ಪ್ರಕರಣದಲ್ಲಿ ಜಮೀರ್ ಅಹ್ಮದ್ ಹೆಸರು ಕೇಳಿ ಬಂದಿತ್ತು.

    ಮಾರುಕಟ್ಟೆ ದರಕ್ಕಿಂತ ಕಡಿಮೆ ಬೆಲೆ ತೋರಿಸಿ ಮನ್ಸೂರ್ ನಿಂದ ಹಣ ಪಡೆದಿರುವ ಆರೋಪವನ್ನು ಜಮೀರ್ ಅಹ್ಮದ್ ಎದುರಿಸುತ್ತಿದ್ದಾರೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಜಮೀರ್ ಅಹ್ಮದ್ ಸಿಬಿಐ ಮುಂದೆ ದಾಖಲಾತಿಗಳೊಂದಿಗೆ ವಿಚಾರಣೆಗೆ ಹಾಜರಾಗಲಿದ್ದಾರೆ.

    ಜಮೀರ್ ವಿರುದ್ಧದ ಆರೋಪವೇನು?:
    ಮಾಜಿ ಸಚಿವ ಜಮೀರ್ ಅಹ್ಮದ್ ವಿರುದ್ಧ ಜೂನ್‍ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದ ಬಿಜೆಪಿ ಮುಖಂಡ ಎನ್. ರಮೇಶ್ ಅವರು, 90 ಕೋಟಿ ರೂ. ಮೌಲ್ಯದ ನಿವೇಶನವನ್ನು ಕೇವಲ 9.38 ಕೋಟಿ ರೂ.ಗೆ ಮಾರಾಟ ಮಾಡಿದ್ದು, ಉಳಿದ 80 ಕೋಟಿ ರೂ.ಗಳನ್ನು ಕಪ್ಪು ಹಣ ಹವಾಲಾ ರೂಪದಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಪಡೆದಿದ್ದಾರೆ. ವಿವಾದಿತ ನಿವೇಶನವನ್ನು ಅಕ್ರಮ ಮಾರಾಟ ಮಾಡಿ ಉಳಿದ ಹಣವನ್ನು ತಮ್ಮ ಖಾತೆಗೆ ವರ್ಗಾವಣೆ ಮಾಡಿಸಿಕೊಂಡಿದ್ದಾರೆ. 2001ರಲ್ಲಿ ಕೇವಲ ಎರಡೂವರೆ ಕೋಟಿ ರೂ.ಗೆ ನಿವೇಶನವನ್ನು ಖರೀದಿಸಿ ಅಕ್ರಮವಾಗಿ ಐಎಂಎಗೆ ಮಾರಾಟ ಮಾಡಿದ್ದಾರೆ ಎಂದು ದೂರಿದ್ದರು.

    ಭೂ ಮಾಲೀಕನಿಗೆ ಕೇವಲ ಎರಡೂವರೆ ಕೋಟಿ ರೂ.ಗಳನ್ನು ನೀಡಿ ಜಮೀನು ಖರೀದಿಸಿದ್ದು, ಅದೇ ಜಮೀನನ್ನು 9 ಕೋಟಿ ರೂ.ಗೆ ಐಎಂಎ ಮಾಲೀಕನಿಗೆ ಮಾರಾಟ ಮಾಡಿದ್ದಾರೆ. ಆದರೆ ಆ ಜಮೀನಿನ ಸದ್ಯದ ಮಾರುಕಟ್ಟೆ ಬೆಲೆ ಕನಿಷ್ಟ 90 ಕೋಟಿ ರೂ.ಗಳಾಗಿದ್ದು, 2018ರಲ್ಲಿ ಮನ್ಸೂರ್ ಖಾನ್‍ಗೆ ಕೇವಲ 9.38 ಕೋಟಿ ರೂ.ಗೆ ಜಮೀರ್ ಅಹ್ಮದ್ ಖಾನ್ ಮಾರಾಟ ಮಾಡಿದ್ದಾರೆ. ಉಳಿದ 80 ಕೋಟಿ ರೂ. ಕಪ್ಪು ಹಣವನ್ನು ತನ್ನ ಖಾತೆಗೆ ವರ್ಗಾವಣೆ ಮಾಡಿಸಿಕೊಂಡಿದ್ದಾರೆ ಎಂದು ಆರೋಪಿಸಿದ್ದರು.

    9 ವರ್ಷಗಳಿಂದ ರಿಚ್ಮಂಡ್ ಟೌನ್‍ನ ಸರ್ಪಟೈನ್ ಸ್ಟ್ರೀಟ್‍ನಲ್ಲಿರುವ ವಿವಾದಿತ ನಿವೇಶನ ಕೋರ್ಟ್ ಅಂಗಳದಲ್ಲಿದ್ದು, 2014ರಲ್ಲಿ ಆಸ್ತಿ ಪ್ರಕರಣ ಕೋರ್ಟಿನಲ್ಲಿರುವಾಗಲೇ ಜಮೀರ್ ಪಾಲಿಕೆಗೆ ಪತ್ರ ಬರೆದು ಆಸ್ತಿಯನ್ನು ನಾನು ಖರೀದಿಸಿದ್ದೇನೆ ಖಾತೆ ಮಾಡಿಕೊಡಿ ಎಂದು ಕೇಳಿಕೊಂಡಿದ್ದಾರೆ. ಆಗಲೇ ಪಾಲಿಕೆ ನೌಕರರು ಈ ಆಸ್ತಿ ವ್ಯಾಜ್ಯ ಕೋರ್ಟ್ ನಲ್ಲಿದೆ. ಹೀಗಾಗಿ ಖಾತೆ ಮಾಡಿಕೊಡಲು ಸಾಧ್ಯವಿಲ್ಲ ಎಂದು ತಿಳಿಸಿದ್ದರು. ಹೀಗಿದ್ದರೂ ಸಹ ಹತ್ತು ಹಲವು ಬಾರಿ ಪತ್ರ ವ್ಯವಹಾರ ನಡೆಸಿ ಖಾತೆ ಮಾಡಿಸಿಕೊಂಡಿದ್ದಾರೆ ಎಂದು ರಮೇಶ್ ಹೇಳಿದ್ದರು.

    ತಾವು ಖಾತೆ ಮಾಡಿಸಿದ ನಂತರ ಮನ್ಸೂರ್ ಖಾನ್‍ಗೆ ಮಾರಾಟ ಮಾಡಿರುವ ಜಮೀನಿಗೆ ಖಾತೆ ಮಾಡಿಸಲು ಜಮೀರ್ ಕಸರತ್ತು ಮಾಡಿದ್ದಾರೆ. ಸಚಿವ ಜಮೀರ್ ಸುಳ್ಳು ಲೆಕ್ಕ ಕೊಡುವುದರಲ್ಲಿ ಎಕ್ಸ್ ಪರ್ಟ್. ಚುನಾವಣಾ ಪ್ರಮಾಣಪತ್ರದಲ್ಲೇ ತಪ್ಪು ಮಾಹಿತಿ ನೀಡಿದ್ದು, 2018ರ ವಿಧಾನಸಭೆ ಚುನಾವಣೆಯಲ್ಲಿ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿಯೂ ಮಾಜಿ ಶಾಸಕ ಚೆಲುವರಾಯ ಸ್ವಾಮಿಯಿಂದ 42 ಲಕ್ಷ ಸಾಲ ಪಡೆದಿರುವುದಾಗಿ ಸುಳ್ಳು ಮಾಹಿತಿ ನೀಡಿದ್ದಾರೆ. ಆದರೆ, ಚೆಲುವರಾಯ ಸ್ವಾಮಿ ಅದೇ 2018ರ ವಿಧಾನಸಭಾ ಚುನಾವಣೆಯಲ್ಲಿ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ಜಮೀರ್ ಅಹ್ಮದ್ ಖಾನ್ ಸಾಲ ನೀಡಿರುವ ಮಾಹಿತಿಯನ್ನೇ ನೀಡಿಲ್ಲ ಎಂದು ಎನ್.ಆರ್.ರಮೇಶ್ ಆರೋಪಿಸಿದ್ದರು.

  • ಚಂದ್ರನ ಮೇಲೆ ನನ್ನದು ಸೇಫ್ ಲ್ಯಾಂಡಿಂಗ್- ಚಿದಂಬರಂ

    ಚಂದ್ರನ ಮೇಲೆ ನನ್ನದು ಸೇಫ್ ಲ್ಯಾಂಡಿಂಗ್- ಚಿದಂಬರಂ

    ನವದೆಹಲಿ: ಚಂದ್ರನ ಮೇಲೆ ನನ್ನದು ಸೇಫ್ ಲ್ಯಾಂಡಿಂಗ್ ಅಗಲಿದೆ ಎಂಬ ವಿಚಾರ ಕೇಳಿ ರೋಮಾಂಚಿತನಾಗಿದ್ದೇನೆ ಎಂದು ಚಿದಂಬರಂ ವ್ಯಂಗ್ಯವಾಗಿ ಟ್ವೀಟ್ ಮಾಡುವ ಮೂಲಕ ಸಿಬಿಐ ವಿರುದ್ಧ ಗುಡುಗಿದ್ದಾರೆ.

    ಐಎನ್‍ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಬಂಧಿತರಾಗಿರುವ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಅವರಿಗೆ ಆಕ್ಟೋಬರ್ 3ರವರೆಗೆ ನ್ಯಾಯಾಂಗ ಬಂಧನದಲ್ಲಿ ರಿಸಲಾಗಿದೆ. ಸೆಪ್ಟೆಂಬರ್ 23ರಂದು ಚಿದಂಬರಂ ಅವರ ಜಾಮೀನು ಅರ್ಜಿ ವಿಚಾರಣೆಗೆ ಬರಲಿದೆ. ಸಿಬಿಐ ಜಾಮೀನು ನೀಡದಂತೆ ನ್ಯಾಯಾಲಯದಲ್ಲಿ ಮನವಿ ಮಾಡಿಕೊಂಡಿದೆ. ಸದ್ಯ ತಿಹಾರ್ ಜೈಲಿನಲ್ಲಿ ಬಂಧಿಯಾಗಿರುವ ಚಿದಂಬರಂ ಅವರ ಟ್ವಿಟ್ಟರ್ ಖಾತೆಯನ್ನು ಕುಟುಂಬಸ್ಥರು ನಿರ್ವಹಣೆ ಮಾಡುತ್ತಿದ್ದಾರೆ. ಚಿದಂಬರ ಪರವಾಗಿ ಟ್ವೀಟ್ ಮಾಡುವ ಮೂಲಕ ಸಿಬಿಐ ಆಡಳಿತ ವೈಖರಿಯ ಬಗ್ಗೆ ಅಸಮಧಾನ ವ್ಯಕ್ತಪಡಿಸಿದ್ದಾರೆ.

    ಚಿದಂಬರಂ ಟ್ವೀಟ್:
    ನನ್ನ ಬದಲಾಗಿ ಕುಟುಂಬಸ್ಥರಿಗೆ ಕೆಲವು ಸಾಲುಗಳನ್ನು ಬರೆಯುವಂತೆ ಹೇಳಿದೆ. ಕೆಲವರ ಪ್ರಕಾರ ನನಗೆ ಚಿನ್ನದ ರೆಕ್ಕೆಗಳು ಬರಲಿವೆ. ಈ ರೆಕ್ಕೆಗಳಿಂದ ನಾನು ಚಂದ್ರನ ಮೇಲೆ ಹೋಗಲಿದ್ದೇನೆ. ಅಲ್ಲಿ ನಾನು ಸುರಕ್ಷಿತವಾಗಿ ಲ್ಯಾಂಡ್ ಆಗಲಿದ್ದೇನೆ. ಈ ವಿಷಯ ಕೇಳಿ ನಾನು ರೋಮಾಂಚಿತನಾಗಿದ್ದೇನೆ ಎಂದು ಬರೆಯಲಾಗಿದೆ.

    ಬಂಧನಕ್ಕೊಳಗಾಗಿರುವ ಚಿದಂಬರಂ ಜಾಮೀನು ನೀಡಬೇಕೆಂದು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಸಿಬಿಐ ಪರ ವಕೀಲರು, ಚಿದಂಬರಂ ಓರ್ವ ಪ್ರಭಾವಿ ವ್ಯಕ್ತಿಯಾಗಿದ್ದು, ಜಾಮೀನು ನೀಡಿದರೆ ವಿದೇಶಕ್ಕೆ ಹೋಗುವ ಸಾಧ್ಯತೆಗಳಿವೆ. ಹಾಗಾಗಿ ಜಾಮೀನು ನೀಡಬಾರದು ಎಂದು ವಾದ ಮಂಡಿಸಿದ್ದಾರೆ. ಸಿಬಿಐ ವಾದದ ಹಿನ್ನೆಲೆಯಲ್ಲಿ ಚಿದಂಬರಂ ವ್ಯಂಗ್ಯವಾಗಿ ಟ್ವೀಟ್ ಮಾಡಿದ್ದಾರೆ.

  • ಅತ್ತ ಡಿಕೆಶಿಗೆ ಜೈಲು, ಇತ್ತ ಜಮೀರ್ ಅಹ್ಮದ್‍ಗೆ ಸಿಬಿಐ ನೋಟಿಸ್

    ಅತ್ತ ಡಿಕೆಶಿಗೆ ಜೈಲು, ಇತ್ತ ಜಮೀರ್ ಅಹ್ಮದ್‍ಗೆ ಸಿಬಿಐ ನೋಟಿಸ್

    ಬೆಂಗಳೂರು: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರು ತಿಹಾರ್ ಜೈಲಿಗೆ ಶಿಫ್ಟ್ ಆಗಿದ್ದಾರೆ. ಈ ಬೆನ್ನಲ್ಲೇ ಐಎಂಎ ಬಹುಕೋಟಿ ವಂಚನೆ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಕಾಂಗ್ರೆಸ್‍ನ ಶಾಸಕ, ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ಸಿಬಿಐ ನೋಟಿಸ್ ಜಾರಿ ಮಾಡಿದೆ.

    ಜಮೀರ್ ಅಹ್ಮದ್ 90 ಕೋಟಿ ರೂ. ಬೆಲೆಬಾಳುವ ನಿವೇಶನವನ್ನು ಐಎಂಎಗೆ 9.38 ಕೋಟಿ ರೂ.ಗಳಿಗೆ ಮಾರಾಟ ಮಾಡಿ, ಬಾಕಿ 80 ಕೋಟಿ ರೂ.ಗಳನ್ನು ಹವಾಲಾ ರೂಪದಲ್ಲಿ ಪಡೆದಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ಶುಕ್ರವಾರ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ಜಮೀರ್ ಅಹ್ಮದ್ ಅವರಿಗೆ ನೋಟಿಸ್ ನೀಡಿದೆ. ಇದನ್ನೂ ಓದಿ: ಡಿಕೆಶಿಗೆ ತಿಹಾರ್ ಜೈಲೇ ಗತಿ – ಶನಿವಾರಕ್ಕೆ ವಿಚಾರಣೆ ಮುಂದೂಡಿಕೆ

    ಐಎಂಎ ಬಹುಕೋಟಿ ವಂಚನೆ ಪ್ರಕರಣ ಸಂಬಂಧ ಮೊನ್ನೆಯಷ್ಟೇ ಹೈಕೋರ್ಟ್ ಸಿಬಿಐ ವಿರುದ್ಧ ಚಾಟಿ ಬೀಸಿತ್ತು. ಈ ಪ್ರಕರಣವು ತನಿಖೆ ಕುಂಠಿತವಾಗುತ್ತಿದೆ. ತನಿಖೆ ಪ್ರಗತಿಯಲ್ಲಿ ಇಲ್ಲವೆಂದು ಬೇಸರ ವ್ಯಕ್ತಪಡಿಸಿತ್ತು. ಹೀಗಾಗಿ ತನಿಖೆ ಚುರುಕುಗೊಳಿಸಿರುವ ಸಿಬಿಐ, ಪ್ರಮುಖ ಆರೋಪಿಗಳಿಗೆ ನೋಟಿಸ್ ನೀಡಿ ವಿಚಾರಣೆ ನಡೆಸುತ್ತಿದೆ. ಇದನ್ನೂ ಓದಿ: ಮಾಜಿ ಸಚಿವರಿಗೆ ಟ್ರಾಫಿಕ್ ನಿಯಮ ಅನ್ವಯ ಆಗಲ್ವಾ? ರಸ್ತೆಯಲ್ಲಿಯೇ ಬಸ್ ಪಾರ್ಕ್

    ನೋಟಿಸ್ ಹಿನ್ನೆಲೆಯಲ್ಲಿ ಮಾಜಿ ಸಚಿವರು ಗುರುವಾರ ಬೆಳಗ್ಗೆ 11:30 ಗಂಟೆಗೆ ಸಿಬಿಐ ಕಚೇರಿಗೆ ಹೋಗಿದ್ದಾರೆ. ಈ ವೇಳೆ ಅಧಿಕಾರಿಗಳಿಗೆ ಮನವಿ ಮಾಡಿಕೊಂಡಿರುವ ಅವರು, ಶುಕ್ರವಾರ ವಿಚಾರಣೆಗೆ ಬರುವುದಕ್ಕೆ ಆಗುವುದಿಲ್ಲ. ಪೂರ್ವ ನಿಯೋಜಿತ ಕಾರ್ಯಕ್ರಮವಿದೆ. ದೇವರ ಕಾರ್ಯದ ನಿಮಿತ್ತ ರಾಜಸ್ಥಾನದ ಜೈಪುರಕ್ಕೆ ತೆರಳಬೇಕಿದೆ. ವಿಚಾರಣೆಗೆ ಕಾಲಾವಕಾಶ ನೀಡಿ ಎಂದು ಕೇಳಿದ್ದಾರೆ ಎನ್ನಲಾಗಿದೆ.

    ಜಮೀರ್ ವಿರುದ್ಧದ ಆರೋಪವೇನು?:
    ಮಾಜಿ ಸಚಿವ ಜಮೀರ್ ಅಹ್ಮದ್ ವಿರುದ್ಧ ಜೂನ್‍ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದ ಬಿಜೆಪಿ ಮುಖಂಡ ಎನ್. ರಮೇಶ್ ಅವರು, 90 ಕೋಟಿ ರೂ. ಮೌಲ್ಯದ ನಿವೇಶನವನ್ನು ಕೇವಲ 9.38 ಕೋಟಿ ರೂ.ಗೆ ಮಾರಾಟ ಮಾಡಿದ್ದು, ಉಳಿದ 80 ಕೋಟಿ ರೂ.ಗಳನ್ನು ಕಪ್ಪು ಹಣ ಹವಾಲಾ ರೂಪದಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಪಡೆದಿದ್ದಾರೆ. ವಿವಾದಿತ ನಿವೇಶನವನ್ನು ಅಕ್ರಮ ಮಾರಾಟ ಮಾಡಿ ಉಳಿದ ಹಣವನ್ನು ತಮ್ಮ ಖಾತೆಗೆ ವರ್ಗಾವಣೆ ಮಾಡಿಸಿಕೊಂಡಿದ್ದಾರೆ. 2001ರಲ್ಲಿ ಕೇವಲ ಎರಡೂವರೆ ಕೋಟಿ ರೂ.ಗೆ ನಿವೇಶನವನ್ನು ಖರೀದಿಸಿ ಅಕ್ರಮವಾಗಿ ಐಎಂಎಗೆ ಮಾರಾಟ ಮಾಡಿದ್ದಾರೆ ಎಂದು ದೂರಿದ್ದರು.

    ಭೂ ಮಾಲೀಕನಿಗೆ ಕೇವಲ ಎರಡೂವರೆ ಕೋಟಿ ರೂ.ಗಳನ್ನು ನೀಡಿ ಜಮೀನು ಖರೀದಿಸಿದ್ದು, ಅದೇ ಜಮೀನನ್ನು 9 ಕೋಟಿ ರೂ.ಗೆ ಐಎಂಎ ಮಾಲೀಕನಿಗೆ ಮಾರಾಟ ಮಾಡಿದ್ದಾರೆ. ಆದರೆ ಆ ಜಮೀನಿನ ಸದ್ಯದ ಮಾರುಕಟ್ಟೆ ಬೆಲೆ ಕನಿಷ್ಟ 90 ಕೋಟಿ ರೂ.ಗಳಾಗಿದ್ದು, 2018ರಲ್ಲಿ ಮನ್ಸೂರ್ ಖಾನ್‍ಗೆ ಕೇವಲ 9.38 ಕೋಟಿ ರೂ.ಗೆ ಜಮೀರ್ ಅಹ್ಮದ್ ಖಾನ್ ಮಾರಾಟ ಮಾಡಿದ್ದಾರೆ. ಉಳಿದ 80 ಕೋಟಿ ರೂ. ಕಪ್ಪು ಹಣವನ್ನು ತನ್ನ ಖಾತೆಗೆ ವರ್ಗಾವಣೆ ಮಾಡಿಸಿಕೊಂಡಿದ್ದಾರೆ ಎಂದು ಆರೋಪಿಸಿದ್ದರು.

    9 ವರ್ಷಗಳಿಂದ ರಿಚ್ಮಂಡ್ ಟೌನ್‍ನ ಸರ್ಪಟೈನ್ ಸ್ಟ್ರೀಟ್‍ನಲ್ಲಿರುವ ವಿವಾದಿತ ನಿವೇಶನ ಕೋರ್ಟ್ ಅಂಗಳದಲ್ಲಿದ್ದು, 2014ರಲ್ಲಿ ಆಸ್ತಿ ಪ್ರಕರಣ ಕೋರ್ಟಿನಲ್ಲಿರುವಾಗಲೇ ಜಮೀರ್ ಪಾಲಿಕೆಗೆ ಪತ್ರ ಬರೆದು ಆಸ್ತಿಯನ್ನು ನಾನು ಖರೀದಿಸಿದ್ದೇನೆ ಖಾತೆ ಮಾಡಿಕೊಡಿ ಎಂದು ಕೇಳಿಕೊಂಡಿದ್ದಾರೆ. ಆಗಲೇ ಪಾಲಿಕೆ ನೌಕರರು ಈ ಆಸ್ತಿ ವ್ಯಾಜ್ಯ ಕೋರ್ಟ್ ನಲ್ಲಿದೆ. ಹೀಗಾಗಿ ಖಾತೆ ಮಾಡಿಕೊಡಲು ಸಾಧ್ಯವಿಲ್ಲ ಎಂದು ತಿಳಿಸಿದ್ದರು. ಹೀಗಿದ್ದರೂ ಸಹ ಹತ್ತು ಹಲವು ಬಾರಿ ಪತ್ರ ವ್ಯವಹಾರ ನಡೆಸಿ ಖಾತೆ ಮಾಡಿಸಿಕೊಂಡಿದ್ದಾರೆ ಎಂದು ರಮೇಶ್ ಹೇಳಿದ್ದರು.

    ತಾವು ಖಾತೆ ಮಾಡಿಸಿದ ನಂತರ ಮನ್ಸೂರ್ ಖಾನ್‍ಗೆ ಮಾರಾಟ ಮಾಡಿರುವ ಜಮೀನಿಗೆ ಖಾತೆ ಮಾಡಿಸಲು ಜಮೀರ್ ಕಸರತ್ತು ಮಾಡಿದ್ದಾರೆ. ಸಚಿವ ಜಮೀರ್ ಸುಳ್ಳು ಲೆಕ್ಕ ಕೊಡುವುದರಲ್ಲಿ ಎಕ್ಸ್‍ಪರ್ಟ್. ಚುನಾವಣಾ ಪ್ರಮಾಣಪತ್ರದಲ್ಲೇ ತಪ್ಪು ಮಾಹಿತಿ ನೀಡಿದ್ದು, 2018ರ ವಿಧಾನಸಭೆ ಚುನಾವಣೆಯಲ್ಲಿ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿಯೂ ಮಾಜಿ ಶಾಸಕ ಚೆಲುವರಾಯ ಸ್ವಾಮಿಯಿಂದ 42 ಲಕ್ಷ ಸಾಲ ಪಡೆದಿರುವುದಾಗಿ ಸುಳ್ಳು ಮಾಹಿತಿ ನೀಡಿದ್ದಾರೆ. ಆದರೆ, ಚೆಲುವರಾಯ ಸ್ವಾಮಿ ಅದೇ 2018ರ ವಿಧಾನಸಭಾ ಚುನಾವಣೆಯಲ್ಲಿ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ಜಮೀರ್ ಅಹ್ಮದ್ ಖಾನ್ ಸಾಲ ನೀಡಿರುವ ಮಾಹಿತಿಯನ್ನೇ ನೀಡಿಲ್ಲ ಎಂದು ಎನ್.ಆರ್.ರಮೇಶ್ ಆರೋಪಿಸಿದ್ದರು.

  • ಐಎಂಎ ಪ್ರಕರಣ ಸಿಬಿಐಗೆ ನೀಡುವಂತೆ ಮೊದಲು ಆಗ್ರಹಿಸಿದ್ದು ನಾನು: ಜಮೀರ್ ಅಹಮದ್

    ಐಎಂಎ ಪ್ರಕರಣ ಸಿಬಿಐಗೆ ನೀಡುವಂತೆ ಮೊದಲು ಆಗ್ರಹಿಸಿದ್ದು ನಾನು: ಜಮೀರ್ ಅಹಮದ್

    ಬೆಂಗಳೂರು: ಬಹುಕೋಟಿ ವಂಚನೆ ಐಎಂಎ ಪ್ರಕರಣವನ್ನು ಸಿಬಿಐಗೆ ನೀಡುವಂತೆ ಮೊದಲು ಆಗ್ರಹಿಸಿದ್ದು ನಾನೇ ಎಂದು ಮಾಜಿ ಸಚಿವ ಜಮೀರ್ ಅಹಮದ್ ಹೇಳಿದ್ದಾರೆ.

    ನಗರ ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಜಮೀರ್ ಅವರು, ನನ್ನ ಕ್ಷೇತ್ರದ ಕೆಲಸ ಸಂಬಂಧ ಆಯುಕ್ತರನ್ನು ಭೇಟಿ ಮಾಡಿದ್ದೇನೆ. ಕುಮಾರಸ್ವಾಮಿ ಅವರು ಸಿಎಂ ಆಗಿದ್ದ ಸಂದರ್ಭದಲ್ಲೇ ನಾನು ಐಎಂಎ ಪ್ರಕರಣವನ್ನು ಸಿಬಿಐಗೆ ನೀಡಲು ಒತ್ತಾಯ ಮಾಡಿದ್ದೆ. ಬಿಜೆಪಿಯವರು ಅಧಿಕಾರಕ್ಕೆ ಬಂದ ಮೇಲೆ ಸಿಬಿಐಗೆ ನೀಡಿದ್ದಾರೆ, ಇದಕ್ಕೆ ನನ್ನ ಸ್ವಾಗತವಿದೆ ಎಂದರು.

    ಇದೇ ವೇಳೆ ಐಎಂಎ ಪ್ರಕರಣ ಸಂಬಂಧ ತಮಗೆ ಏನಾದರೂ ಬೆದರಿಕೆ ಬರುತ್ತಿದೆಯಾ ಎಂಬ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ನನಗೆ ಯಾವುದೇ ಬೆದರಿಕೆ ಬಂದಿಲ್ಲ. ಯಾರು ಭಯ ಪಡುತ್ತಾರೆ ಅವರಿಗೆ ಮಾತ್ರ ಬೆದರಿಕೆಗಳು ಬರುತ್ತದೆ. ನಾನು ಯಾರಿಗೂ ಭಯ ಪಡುವುದಿಲ್ಲ ಎಂದರು. ಅಲ್ಲದೇ ನನಗೆ ಐಎಂಎ ವಂಚನೆ ಪ್ರಕರಣಲ್ಲಿ ಇದುವರೆಗೂ ಸಿಬಿಐನಿಂದ ಯಾವುದೇ ಸಮನ್ಸ್ ಬಂದಿಲ್ಲ ಎಂದು ಸ್ಪಷ್ಟಪಡಿಸಿದರು.

    ಸಚಿವ ಕೆಎಸ್ ಈಶ್ವರಪ್ಪ ಮುಸ್ಲಿಮರ ಬಗ್ಗೆ ನೀಡಿರುವ ಹೇಳಿಕೆಗೆ ತಿರುಗೇಟು ನೀಡಿದ ಜಮೀರ್, ಈಶ್ವರಪ್ಪ ಅವರ ಹೇಳಿಕೆಗೆ ಅಷ್ಟು ಮಹತ್ವ ನೀಡುವ ಅಗತ್ಯವಿಲ್ಲ. ಈಶ್ವರಪ್ಪ ಅವರದ್ದು ಎಲುಬಿಲ್ಲದ ನಾಲಿಗೆ, ಬಾಯಿಗೆ ಬಂದಂತೆ ಮಾತನಾಡುತ್ತಾರೆ ಎಂದು ಈಗಾಗಲೇ ಸಿದ್ದರಾಮಯ್ಯ ಅವರು ಹಲವರು ಬಾರಿ ಹೇಳಿದ್ದಾರೆ. ಚುನಾವಣೆ ಸಮಯದಲ್ಲಿ ಕಳ್ಳರ ರೀತಿ ನಡುರಾತ್ರಿ ಹೋಗಿ ಮುಸ್ಲಿಮರ ಮನೆಯಲ್ಲಿ ಮತಯಾಚನೆ ಮಾಡಿದ್ದಾರೆ. ಈ ಸಂಬಂಧ ನನ್ನ ಬಳಿ ವಿಡಿಯೋಗಳು ಕೂಡ ಇದ್ದು, ಸಾಕಷ್ಟು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಬಿಜೆಪಿಯವರಿಗೆ ಹಿಂದೂ, ಮುಸ್ಲಿಂ ಜನರು ಬೇಕಿಲ್ಲ. ಅವರಿಗೆ ಬೇಕಿರುವುದು ಕೇವಲ ಅಧಿಕಾರ ಅಷ್ಟೇ ಎಂದು ಆರೋಪಿಸಿದರು.

  • ಎಚ್‍ಡಿಕೆಗೆ ಡಿಕೆಶಿ ಮೇಲೆ ಪ್ರೀತಿ ಇಲ್ಲ, ಫೋನ್ ಕದ್ದಾಲಿಕೆ ನಿಜ – ದಳ ಶಾಸಕ ಶ್ರೀನಿವಾಸ್

    ಎಚ್‍ಡಿಕೆಗೆ ಡಿಕೆಶಿ ಮೇಲೆ ಪ್ರೀತಿ ಇಲ್ಲ, ಫೋನ್ ಕದ್ದಾಲಿಕೆ ನಿಜ – ದಳ ಶಾಸಕ ಶ್ರೀನಿವಾಸ್

    ತುಮಕೂರು: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ಡಿಕೆ ಶಿವಕುಮಾರ್ ಮೇಲೆ ಪ್ರೀತಿ ಇಲ್ಲ. ಪ್ರೀತಿ ಇದ್ದಿದ್ದರೆ ಅವರು ನನ್ನ ಹೋರಾಟಕ್ಕೆ ಬರುತ್ತಿದ್ದರು ಎಂದು ಮಾಜಿ ಸಚಿವ ಎಸ್.ಆರ್.ಶ್ರೀನಿವಾಸ್ ಕುಮಾರಸ್ವಾಮಿಯವರ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿಯವರು ಪ್ರತಿಭಟನೆಗೆ ಬರಬೇಕು ಎಂದೇನಿಲ್ಲ. ನಮಗೆಲ್ಲ ಡಿ.ಕೆ.ಶಿವಕುಮಾರ್ ಮೇಲೆ ಪ್ರೀತಿ ಇದ್ದಿದ್ದರಿಂದ ನಾವು ಹೋಗಿದ್ದೆವು. ನಮ್ಮ ಸಮುದಾಯದ ಮುಖಂಡನಿಗೆ ಅನ್ಯಾಯವಾದಾಗ ಪ್ರತಿಭಟಿಸುವುದು ನಮ್ಮ ಭಾವನೆ. ಆದರೆ ಕುಮಾರಸ್ವಾಮಿಯವರಿಗೆ ಆ ಭಾವನೆ ಇರಲಿಲ್ಲ. ಇದ್ದಿದ್ದರೆ ಖಂಡಿತ ನಮ್ಮ ಹೋರಾಟಕ್ಕೆ ಬರುತ್ತಿದ್ದರು. ಆಮಂತ್ರಣ ಕೊಟ್ಟು ಕರೆಯುವ ಕಾರ್ಯಕ್ರಮ ಇದಲ್ಲ. ಸಮುದಾಯದ ಕಾರ್ಯಕ್ರಮ ನಡೆಯುವಾಗ ಆಮಂತ್ರಣ ಕೊಡುವಂಥದ್ದು ಎಲ್ಲೂ ಇಲ್ಲ. ಹೋರಾಟಕ್ಕೆ ಬಂದಿದ್ದ 25 ಸಾವಿರ ಜನಕ್ಕೂ ಆಮಂತ್ರಣ ಕೊಟ್ಟಿದ್ದಾರಾ? ಒಕ್ಕಲಿಗರಲ್ಲಿ ಸ್ವಪ್ರತಿಷ್ಠೆ ಹೆಚ್ಚಾಗಿದೆ. ಕೇವಲ ಕುಮಾರಸ್ವಾಮಿಯವರ ವಿಚಾರ ಅಷ್ಟೇ ಅಲ್ಲ. ಗ್ರಾಮೀಣ ಪ್ರದೇಶದಲ್ಲೂ ಒಕ್ಕಲಿಗರಲ್ಲಿ ಪ್ರತಿಷ್ಠೆ ಹೆಚ್ಚಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

    ತಿಮ್ಮೇಗೌಡ 5 ಮರಿ ಕಡಿದರೆ, ರಾಮೇಗೌಡ 15 ಮರಿ ಕಡಿಯುತ್ತಾನೆ. ಹೀಗೆ ವೈಯಕ್ತಿಕ ಪ್ರತಿಷ್ಠೆಗಳನ್ನು ಇಟ್ಟುಕೊಂಡು ಸಮಾಜ ಕೆಡುತ್ತಿದೆ. ಸಮಾಜದ ವಿಚಾರ ಬಂದಾಗ ಸ್ವಪ್ರತಿಷ್ಠೆ ಬಿಟ್ಟು ಒಂದಾಗಬೇಕು ಎಂದು ಹೇಳುವ ಮೂಲಕ ಪರೋಕ್ಷವಾಗಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಹರಿಹಾಯ್ದರು.

    ಕದ್ದಾಲಿಕೆ ನಿಜ: ಮಾಜಿ ಸಿಎಂ ಕುಮಾರಸ್ವಾಮಿ ಫೋನ್ ಕದ್ದಾಲಿಕೆ ಮಾಡಿದ್ದರೆ ಅವರನ್ನು ಬಂಧಿಸಲಿ ಬಿಡಿ, ಬೇಡ ಎಂದು ಹೇಳಿದವರು ಯಾರು? ಮಾಡಬಾರದನ್ನು ಮಾಡಿ ದುಡ್ಡು ಹೊಡೆದಿದ್ದರೆ ಅವರನ್ನು ಬಂಧಿಸುತ್ತಾರೆ. ಅವರನ್ನು ಬಂಧಿಸಬಾರದು ಎಂಬ ಕಾನೂನು ಇದೆಯೇ? ನನಗಿರುವ ಮಾಹಿತಿ ಪ್ರಕಾರ ಫೋನ್ ಕದ್ದಾಲಿಕೆ ಆಗುತ್ತಿದ್ದು ನಿಜ ಎಂದು ಸ್ಪಷ್ಟಪಡಿಸಿದರು.

    ಫೋನ್ ಕದ್ದಾಲಿಕೆ ಪ್ರಕರಣದಲ್ಲಿ ಯಾರು ಹೊಣೆಗಾರರು ಅವರಿಗೆ ಶಿಕ್ಷೆ ಆಗಬೇಕು. ನನ್ನ ಫೋನ್ ಕೂಡ ಕದ್ದಾಲಿಕೆ ಆಗುತಿತ್ತು, ವಿಷಯ ಗೊತ್ತಾಗುತ್ತಿದ್ದಂತೆ ಫೋನ್ ನಂಬರ್ ಬದಲಿಸಿದೆ. ನಾನು ಸರ್ಕಾರದ ಅಂಗವಾಗಿದ್ದರೂ ನನ್ನ ಫೋನ್ ಕದ್ದಾಲಿಕೆ ಆಗುತಿತ್ತು. ಕುಮಾರಸ್ವಾಮಿಯವರು ನನ್ನ ಮೇಲೆ ಅನುಮಾನ ಪಟ್ಟಿದ್ದರೇನೋ ಗೊತ್ತಿಲ್ಲ ಎಂದು ಫೋನ್ ಕದ್ದಾಲಿಕೆ ಕುರಿತು ಶ್ರೀನಿವಾಸ್ ಹೊಸ ಬಾಂಬ್ ಸಿಡಿಸಿದ್ದಾರೆ. ನಿನ್ನೆ ನಡೆದ ಪ್ರತಿಭಟನೆ ಕೇವಲ ಒಕ್ಕಲಿಗ ಸಮುದಾಯದ್ದಾಗಿರಲಿಲ್ಲ. ಎಲ್ಲ ಸಮುದಾಯದ ಜನ ಸೇರಿದ್ದರು. ಡಿಕೆಶಿ ಅಭಿಮಾನಿಗಳು, ವಿವಿಧ ಸಂಘ ಸಂಸ್ಥೆಗಳು ಎಲ್ಲರೂ ಸೇರಿದ್ದರು ಎಂದು ತಿಳಿಸಿದರು.

  • ಐಎಂಎ ಸಾಕ್ಷ್ಯ ನಾಶ – ಮುಂದಿನ ವಾರ ರಾಜಕಾರಣಿಗಳಿಗೆ ಸಿಬಿಐನಿಂದ ಸಮನ್ಸ್?

    ಐಎಂಎ ಸಾಕ್ಷ್ಯ ನಾಶ – ಮುಂದಿನ ವಾರ ರಾಜಕಾರಣಿಗಳಿಗೆ ಸಿಬಿಐನಿಂದ ಸಮನ್ಸ್?

    ಬೆಂಗಳೂರು: ಐ ಮಾನಿಟರಿ ಅಡ್ವೈಸರಿ (ಐಎಂಎ) ಬಹುಕೋಟಿ ಹಗರಣ ಸಂಬಂಧ ವಿಚಾರಣೆ ನಡೆಸುತ್ತಿರುವ ಸಿಬಿಐ ಮುಂದಿನ ವಾರ ರಾಜ್ಯದ ಪ್ರಮುಖ ರಾಜಕಾರಣಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡುವ ಸಾಧ್ಯತೆಯಿದೆ.

    ಬಂಧನಕ್ಕೆ ಒಳಗಾಗಿರುವ ಐಎಂಎ ಮುಖ್ಯಸ್ಥ ಮನ್ಸೂರ್ ಖಾನ್ ವಿಚಾರಣೆಯ ಸಮಯದಲ್ಲಿ ನಾನು ಹಲವು ರಾಜಕಾರಣಿಗಳಿಗೆ ಹಣವನ್ನು ನೀಡಿದ್ದೆ. ಹಣ ಸಂದಾಯ ಮಾಡಿದ್ದ ದಾಖಲೆಗಳನ್ನು ಅಧಿಕಾರಿಗಳ ಸಹಾಯದಿಂದ ಈಗ ವ್ಯವಸ್ಥಿತವಾಗಿ ನಾಶ ಮಾಡಿದ್ದಾರೆ. ಅದರಲ್ಲೂ ಓರ್ವ ರಾಜಕಾರಣಿಗೆ 11 ಕೋಟಿ ರೂ. ಹಣವನ್ನು ನೀಡಿದ್ದೇನೆ ಎಂದು ಬಾಯಿಬಿಟ್ಟಿದ್ದಾನೆ. ಈ ಹಿನ್ನೆಲೆಯಲ್ಲಿ ರಾಜ್ಯದ ಪ್ರಮುಖ ರಾಜಕಾರಣಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ಸಮನ್ಸ್ ಜಾರಿ ಮಾಡುವ ಸಾಧ್ಯತೆಯಿದೆ.

    ವಿಶೇಷ ತಂಡ ರೆಡಿ:
    ಕಂಪ್ಯೂಟರಿನಲ್ಲಿದ್ದ ಹಲವು ದಾಖಲೆಗಳನ್ನು ಐಪಿಎಸ್ ಅಧಿಕಾರಿಗಳು ನಾಶ ಮಾಡಿದ್ದಾರೆ ಎಂದು ಮನ್ಸೂರ್ ಅಲಿಖಾನ್ ಹೇಳಿದ ಹಿನ್ನೆಲೆಯಲ್ಲಿ ಸಿಬಿಐ 12 ಮಂದಿ ಸದಸ್ಯರ ತಂಡವನ್ನು ರಚಿಸಿದೆ. ಈ ತಂಡದಲ್ಲಿ ಚಾರ್ಟೆಡ್ ಅಕೌಂಟೆಂಟ್ ಮತ್ತು ಕಂಪ್ಯೂಟರ್ ಫಾರೆನ್ಸಿಕ್ ತಜ್ಞರು ಇದ್ದು ನಾಶವಾಗಿರುವ ದಾಖಲೆಗಳನ್ನು ಬಯಲು ಮಾಡಲಿವೆ.

    ಐಎಂಎ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಬೆಂಗಳೂರಿನ ವಿಶೇಷ ಸಿಬಿಐ ನ್ಯಾಯಾಲಯಕ್ಕೆ ಮೊದಲ ಚಾರ್ಜ್‍ಶೀಟ್ ಸಲ್ಲಿಸಿದೆ. ಐಎಂಎ ಹಗರಣದ ಮಾಸ್ಟರ್‍ ಮೈಂಡ್ ಮನ್ಸೂರ್ ಖಾನ್ ಮತ್ತು ಇತರ 24 ಜನರನ್ನು ಆರೋಪಿಗಳನ್ನಾಗಿ ಸಿಬಿಎ ಹೆಸರಿಸಿದೆ. ಕರ್ನಾಟಕ ಸರ್ಕಾರ ಮನವಿ ಮೇರೆಗೆ ಸಿಬಿಐ ಆಗಸ್ಟ್ 30ರಂದು ರಾತ್ರಿ ಈ ತನಿಖೆಯನ್ನು ಕೈಗೆತ್ತಿಕೊಂಡಿತ್ತು.

    ಆರೋಪ ಪಟ್ಟಿಯಲ್ಲಿ ಮುಸ್ಲಿಂ ಸಮುದಾಯವರಿಗೆ ಧರ್ಮದ ಹೆಸರಿನಲ್ಲಿ, ಹೆಚ್ಚಿನ ಬಡ್ಡಿಯ ಆಸೆ ತೋರಿಸಿ ವಂಚಿಸಲಾಗಿದೆ. ಈ ಪ್ರಕರಣದಲ್ಲಿ ಹಲವು ಮುಸ್ಲಿಂ ಮೌಲ್ವಿಗಳ ಪಾತ್ರವೂ ಇದೆ ಎಂದು ಉಲ್ಲೇಖಿಸಲಾಗಿದೆ.

    ಮನ್ಸೂರ್ ಖಾನ್ ದುಬೈಗೆ ಓಡಿ ಹೋಗುವುದರೊಂದಿಗೆ ವಂಚನೆ ಪ್ರಕರಣ ಬೆಳಕಿಗೆ ಬಂದಿತ್ತು. ಈ ಸಂದರ್ಭದಲ್ಲಿ ಮನ್ಸೂರ್ ಖಾನ್ ವಿಡಿಯೋ ಬಿಡುಗಡೆ ಮಾಡಿ ರಾಜ್ಯ ಮತ್ತು ಕೇಂದ್ರ ಸರಕಾರದ ಭ್ರಷ್ಟಾಚಾರದಿಂದ ಬೇಸತ್ತು ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ನಾಟಕವಾಡಿದ್ದ. ನಂತರ ಭಾರತಕ್ಕೆ ಮರಳಿದ್ದ ಖಾನ್‍ರನ್ನು ನವದೆಹಲಿಯಲ್ಲಿ ಜುಲೈ 21ರಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದರು. ಸದ್ಯ ಖಾನ್ ನ್ಯಾಯಾಂಗ ಬಂಧನದಲ್ಲಿದ್ದಾನೆ.

  • ಯೋಗಿಶ್ ಗೌಡ ಹತ್ಯೆ ಪ್ರಕರಣ-ಸಿಬಿಐಗೆ ಹಸ್ತಾಂತರ

    ಯೋಗಿಶ್ ಗೌಡ ಹತ್ಯೆ ಪ್ರಕರಣ-ಸಿಬಿಐಗೆ ಹಸ್ತಾಂತರ

    ಬೆಂಗಳೂರು: ಧಾರವಾಡ ಜಿ.ಪಂ. ಸದಸ್ಯ ಯೋಗಿಶ್ ಗೌಡ ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ಅಧಿಕೃತವಾಗಿ ಸಿಬಿಐಗೆ ಹಸ್ತಾಂತರಿಸಿದೆ.

    2017 ಜೂನ್ 15ರಂದು ಯೋಗಿಶ್ ಗೌಡನ ಕೊಲೆಯಾಗಿತ್ತು. ಅಂದು ಬೆಳಗ್ಗೆ ಧಾರವಾಡ ನಗರದ ಸಪ್ತಾಪುರ ಜಿಮ್‍ಗೆ ಎಂಟ್ರಿ ಕೊಟ್ಟಿದ್ದ ದುಷ್ಕರ್ಮಿಗಳು ಯೋಗಿಶ್ ಗೌಡನನ್ನು ಹತ್ಯೆಗೈದಿದ್ದರು. ಜಿಮ್ ಸಿಸಿಟಿವಿ ದೃಶ್ಯಗಳನ್ನಾಧರಿಸಿ ಪೊಲೀಸ್ ಮಾಜಿ ಸಚಿವ, ಸ್ಥಳೀಯ ಕಾಂಗ್ರೆಸ್ ಮುಖಂಡ ವಿನಯ್ ಕುಲಕರ್ಣಿ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಐವರನ್ನು ಬಂಧಿಸಿದ್ದರು. ಹೀಗಾಗಿ ಕೊಲೆಯ ಹಿಂದೆ ವಿನಯ್ ಕುಲಕರ್ಣಿಯವರ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದವು.

    ಪ್ರಕರಣದಲ್ಲಿ ವಿನಯ್ ಕುಲಕರ್ಣಿಯವರ ಹೆಸರು ಕೇಳಿ ಬಂದ ಹಿನ್ನೆಲೆಯಲ್ಲಿ ಆರೋಪಿಗಳು ಯೋಗಿಶ್ ಗೌಡನ ಸೋದರನ ಜೊತೆ ರಾಜಿ ಮಾಡಿಕೊಳ್ಳಲು ಮುಂದಾಗಿದ್ದರು. ಇತ್ತ ವಿನಯ್ ಕುಲಕರ್ಣಿಯವರ ಹೆಸರನ್ನು ಕೈ ಬಿಡಲು ಅಧಿಕಾರಿಗಳು ಪ್ಲಾನ್ ಮಾಡಿಕೊಳ್ಳುತ್ತಿದ್ದಾರೆ ಎಂದು ಯೋಗಿಶ್ ಗೌಡ ತಾಯಿ ಆರೋಪಿಸಿದ್ದರು.

    ಈ ಎಲ್ಲ ಬೆಳವಣಿಗೆ ನಡುವೆ 2017ರಲ್ಲಿ ಯೋಗಿಶ್ ಗೌಡ ಪತ್ನಿ ಮಲ್ಲಮ್ಮ ಕಾಂಗ್ರೆಸ್ ಸೇರುವ ಮೂಲಕ ಹಲವು ಅಚ್ಚರಿಗೆ ಕಾರಣವಾಗಿದ್ದರು. ಆದರೆ ಬಿಜೆಪಿ ನಾಯಕರು ಮಲ್ಲಮ್ಮ ಅವರನ್ನು ಕಾಂಗ್ರೆಸ್ ನಾಯಕರು ಹೈಜಾಕ್ ಮಾಡಿದ್ದಾರೆ. ಬೆದರಿಸಿ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದರು. ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ್ದ ಮಲ್ಲಮ್ಮ, ನಾನು ಸ್ವಇಚ್ಛೆಯಿಂದ ಕಾಂಗ್ರೆಸ್ ಸೇರಿದ್ದೇನೆ ಎಂದಿದ್ದರು.

    ಬಸವರಾಜ್ ಮುತ್ತಗಿ ಮತ್ತು ಅವನ ಸಹಚರರು

    ನನ್ನ ಗಂಡನ ಹತ್ಯೆಯಲ್ಲಿ ವಿನಯ್ ಕುಲಕರ್ಣಿ ಪಾತ್ರ ಇದೆ ಅಂತ ನಾನು ಸುಮ್ಮನೆ ಆರೋಪ ಮಾಡಲ್ಲ. ಗಂಡನನ್ನು ಕೊಂದವರಿಗೆ ಶಿಕ್ಷೆ ಆಗಬೇಕು. ನನಗೂ, ನನ್ನ ನಾಲ್ಕು ಮಕ್ಕಳಿಗೂ ನ್ಯಾಯ ಸಿಗಬೇಕು. ಸಿದ್ದರಾಮಯ್ಯ ನಮ್ಮ ಜಾತಿಯವರು. ಅವರ ಬಳಿ ಹೋದರೆ ನನಗೆ ನ್ಯಾಯ ಸಿಗುತ್ತೆ. ಅವರು ಸೇರಿಸಿಕೊಂಡ್ರೆ ನಾನು ಕಾಂಗ್ರೆಸ್ ಸೇರುತ್ತೇನೆ. ವಿನಯ್ ಕುಲಕರ್ಣಿ ಇದುವರೆಗೆ ನನ್ನೊಂದಿಗೆ ಯಾವತ್ತೂ ಮಾತಾಡಿಲ್ಲ. ನನ್ನ ಭಾವ ಗುರುನಾಥ್ ಗೌಡ ಪ್ರತಿಯೊಂದಕ್ಕೂ ನನಗೆ ಅಡ್ಡಿಪಡಿಸುತ್ತಿದ್ದಾರೆ. ನಾನು ಯಾರನ್ನು ನಂಬುವ ಸ್ಥಿತಿಯಲ್ಲಿ ಇಲ್ಲ. ಗಂಡನ ಸಾವನ್ನು ನನ್ನ ಭಾವ ಹಾಗೂ ಸ್ಥಳೀಯ ನಾಯಕರು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ ಅಂತ ಮಲ್ಲಮ್ಮ ತನ್ನ ಅಳಲು ತೋಡಿಕೊಂಡಿದ್ದರು.

    ಗುರುನಾಥ್ ಗೌಡ

    ಆರೋಪಿಗಳ ಕೊಲೆಗೆ ಸ್ಕೆಚ್: ಯೋಗಿಶ್ ಗೌಡ ಪ್ರಕರಣದಲ್ಲಿ ಧಾರವಾಡದ ಕೇಂದ್ರ ಕಾರಾಗೃಹದಲ್ಲಿದ್ದ ಬಸವರಾಜ್ ಮುತ್ತಗಿ, ಕೀರ್ತಿ, ವಿನಾಯಕ್, ಮುದಕಪ್ಪ ಮತ್ತು ಸಂದೀಪ್ ಕೊಲೆಗೆ ಸಂಚು ರೂಪಿಸಲಾಗಿತ್ತು. ಯೋಗಿಶ್ ಗೌಡ ಸೋದರ ಗುರುನಾಥ್ ಗೌಡ ತನ್ನ ಸಹಚರರಾದ ಲಕ್ಷ್ಮಣ್, ಹನುಮಂತ್ ಮತ್ತು ಸಂಜಯ್ ಮೂಲಕ ಕೊಲೆಗೆ ಸಂಚು ರೂಪಿಸಿದ್ದನು. ಈ ನಾಲ್ವರ ಮಾತನಾಡಿರುವ ಆಡಿಯೋ ಟೇಪ್ ಪೊಲೀಸರಿಗೆ ಲಭ್ಯವಾಗಿದ್ದರಿಂದ ದೊಡ್ಡ ಅನಾಹುತವನ್ನು ತಡೆದಿದ್ದರು. ಸದ್ಯ ಪ್ರಕರಣದ ಎಲ್ಲ ಆರೋಪಿಗಳು ಜಾಮೀನಿನ ಮೇಲೆ ಹೊರಗೆ ಬಂದಿದ್ದಾರೆ.

    ಯೋಗಿಶ್ ಗೌಡನ ತಾಯಿ ಮತ್ತು ಪತ್ನಿ

    ಯೋಗಿಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಪ್ರಶ್ನೆಗಳಿಗೆ ಉತ್ತರವೇ ಸಿಕ್ಕಿಲ್ಲ. ವಿನಯ್ ಕುಲಕರ್ಣಿ ಮಾತ್ರ ಬಿಜೆಪಿ ನಾಯಕರು ರಾಜಕೀಯ ದ್ವೇಷದಿಂದ ನನ್ನ ಹೆಸರನ್ನು ಈ ಪ್ರಕರಣದಲ್ಲಿ ಎಳೆದು ತರುತ್ತಿದ್ದಾರೆ. ನನಗೂ ಈ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಆರೋಪಗಳನ್ನು ತಳ್ಳಿ ಹಾಕಿದ್ದಾರೆ. ಪ್ರಕರಣ ಸಿಬಿಐಗೆ ವರ್ಗಾವಣೆ ಆಗಿದ್ದರಿಂದ ವಿನಯ್ ಕುಲಕರ್ಣಿಯವರನ್ನು ವಿಚಾರಣೆಗೆ ಒಳಪಡಿಸುವ ಸಾಧ್ಯತೆಗಳು ಹೆಚ್ಚಿವೆ. ರಾಜ್ಯ ಸರ್ಕಾರದ ನಿರ್ಧಾರವನ್ನು ಯೋಗಿಶ್ ಗೌಡ ಕುಟುಂಬಸ್ಥರು ಸ್ವಾಗತಿಸಿದ್ದಾರೆ.

  • ನೋ ರಿಲೀಫ್ – ಚಿದಂಬರಂಗೆ ಸುಪ್ರೀಂನಲ್ಲೂ ಸಿಗಲಿಲ್ಲ ಜಾಮೀನು

    ನೋ ರಿಲೀಫ್ – ಚಿದಂಬರಂಗೆ ಸುಪ್ರೀಂನಲ್ಲೂ ಸಿಗಲಿಲ್ಲ ಜಾಮೀನು

    ನವದೆಹಲಿ: ಕಾಂಗ್ರೆಸ್ ಹಿರಿಯ ನಾಯಕ ಪಿ.ಚಿದಂಬರಂ ಅವರಿಗೆ ಭಾರೀ ಹಿನ್ನಡೆಯಾಗಿದ್ದು, ಐಎನ್‍ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

    ಚಿದಂಬರಂ ಅವರನ್ನು ಸಿಬಿಐ ಈಗಾಗಲೇ ಬಂಧಿಸಿದ್ದು, ಈಗ ಜಾರಿ ನಿರ್ದೇಶನಾಲಯ(ಇಡಿ) ಸಹ ಚಿದಂಬರಂ ಅವರನ್ನು ಕಸ್ಟಡಿಗೆ ತೆಗೆದುಕೊಳ್ಳಲು ಮುಂದಾಗುತ್ತಿದೆ. ಈ ಸಂಬಂಧ ಚಿದಂಬರಂ ಅವರು ಸುಪ್ರೀಂನಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ಜಾಮೀನು ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾ. ಭಾನುಮತಿ ಮತ್ತು ನ್ಯಾ. ಎ.ಎಸ್.ಬೋಪಣ್ಣ ಅವರಿದ್ದ ದ್ವಿಸದಸ್ಯ ಪೀಠ ಆಗಸ್ಟ್ 29 ರಂದು ವಿಚಾರಣೆ ನಡೆಸಿ ಇಂದಿಗೆ ತೀರ್ಪು ಕಾಯ್ದಿರಿಸಿದ್ದರು.

    ಜಾಮೀನು ಅರ್ಜಿಯನ್ನು ವಜಾಗೊಳಿಸಿದ ಕೋರ್ಟ್, ಪ್ರಾಥಮಿಕ ವಿಚಾರಣೆ ನಡೆಯುತ್ತಿರುವ ಸಂದರ್ಭದಲ್ಲಿ ಜಾಮೀನು ಮಂಜೂರು ಮಾಡುವುದು ಸರಿಯಲ್ಲ. ತನಿಖೆ ನಡೆಸುತ್ತಿರುವ ಇಡಿ ನ್ಯಾಯಾಲಯದಲ್ಲಿ ತನಿಖಾ ಮಾಹಿತಿಯನ್ನು ಹಂಚಿಕೊಳ್ಳುವ ಅಗತ್ಯವಿಲ್ಲ. ಆರ್ಥಿಕ ಅಪರಾಧಗಳು ವಿವಿಧ ಆಯಾಮಗಳಲ್ಲಿ ತನಿಖೆಯಾಗಬೇಕು ಎಂದು ಪೀಠ ಅಭಿಪ್ರಾಯಪಟ್ಟಿತು.

    ಕೋರ್ಟ್ ಮುಚ್ಚಿದ ಲಕೋಟೆಯಲ್ಲಿ ಈ ಪ್ರಕರಣಕ್ಕೆ ಸಂಬಂಧ ದಾಖಲೆಗಳನ್ನು ಸಲ್ಲಿಸಬೇಕೆಂದು ಜಾರಿ ನಿರ್ದೇಶನಾಲಯಕ್ಕೆ ಸೂಚಿಸಿತು. ಸುಪ್ರೀಂ ಕೋರ್ಟ್ ಜಾಮೀನು ಅರ್ಜಿಯನ್ನು ವಜಾಗೊಳಿಸುತ್ತಿದ್ದಂತೆ ಚಿದಂಬಂರಂ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ಐಎನ್‍ಎಕ್ಸ್ ಪ್ರಕರಣ ಸಂಬಂಧ ಸುಪ್ರೀಂ ಕೋರ್ಟಿನಲ್ಲಿ ಹೂಡಲಾಗಿರುವ ಎಲ್ಲ ಅರ್ಜಿಗಳನ್ನು ಹಿಂದಕ್ಕೆ ಪಡೆಯುತ್ತಿರುವುದಾಗಿ ತಿಳಿಸಿದರು.

    ಏರ್‍ಸೆಲ್-ಮ್ಯಾಕ್ಸಿಸ್ ಸಂಸ್ಥೆಗಳಿಗೆ ಲಾಭ ಮಾಡಿಕೊಟ್ಟಿದ್ದಾರೆ ಎನ್ನುವ ಆರೋಪದ ಅಡಿಯಲ್ಲಿ ಜಾರಿ ನಿರ್ದೇಶನಾಲಯ ಕೇಸ್ ದಾಖಲಿಸಿದ್ದು, ಈ ಪ್ರಕರಣದಲ್ಲೂ ಚಿದಂಬಂರಂ ಬಂಧನ ಭೀತಿಗೆ ಒಳಗಾಗಿದ್ದಾರೆ. ಈ ಸಂಬಂಧ ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆ ಪೂರ್ಣಗೊಂಡಿದ್ದು ಇಂದು ಮಧ್ಯಾಹ್ನ ದೆಹಲಿ ವಿಶೇಷ ನ್ಯಾಯಾಲಯದ ನ್ಯಾ. ಓಪಿ ಸೈನಿ ಆದೇಶ ಪ್ರಕಟಿಸಲಿದ್ದಾರೆ.

    ಏನಿದು ಆರೋಪ?
    ಇಂದ್ರಾಣಿ ಮುಖರ್ಜಿ ಮತ್ತು ಪೀಟರ್ ಮುಖರ್ಜಿ ಒಡೆತನದ ಐಎನ್‍ಎಕ್ಸ್ ಮೀಡಿಯಾಗೆ 2007ರ ಮಾರ್ಚ್ ತಿಂಗಳಿನಲ್ಲಿ ಮೂರು ಮಾರಿಷಸ್ ಕಂಪೆನಿಗಳಿಂದ ಸುಮಾರು 4.62 ಕೋಟಿ ರೂಪಾಯಿ ವಿದೇಶಿ ನೇರ ಬಂಡವಾಳ ಹರಿದುಬರಲು ಅಂದಿನ ಸರ್ಕಾರ ಅನುಮತಿ ನೀಡಿತ್ತು. ಸರ್ಕಾರ 4.62 ಕೋಟಿ ರೂ.ಗೆ ಅನುಮತಿ ನೀಡಿದ್ದರೆ 305 ಕೋಟಿ ರೂಪಾಯಿಗಳನ್ನು ಹೂಡಿಕೆಯಾಗಿ ವಿದೇಶದಿಂದ ತರಲಾಯಿತು. ಈ ಸಂದರ್ಭದಲ್ಲಿ ಡೌನ್ ಸ್ಟ್ರೀಮ್ ಇನ್ವೆಸ್ಟ್ ಮೆಂಟ್(ಭಾರತೀಯ ಕಂಪೆನಿ ಮತ್ತೊಂದು ಕಂಪೆನಿಯ ಮೇಲೆ ವಿದೇಶಿ ಹೂಡಿಕೆಯನ್ನು ಮಾಡುವುದು) ಪ್ರಸ್ತಾಪವನ್ನು ಸರ್ಕಾರ ತಿರಸ್ಕರಿಸಿತ್ತು.

    ಇಂದ್ರಾಣಿ ಮುಖರ್ಜಿಯ ಕಂಪನಿಗೆ ಈ ಸಂದರ್ಭದಲ್ಲಿ ಕಾರ್ತಿ ಮಾಲೀಕತ್ವದ ಅಡ್ವಾನ್ಸ್ಡ್ ಸ್ಟ್ರಟಜಿಕ್ ಕನಸ್ಟಲಿಂಗ್ ಪ್ರೈವೆಟ್ ಲಿಮಿಟೆಡ್(ಎಎಸ್‍ಸಿಪಿಎಲ್) ಕಂಪನಿಯಿಂದ ಹೂಡಿಕೆಯಾಗಿತ್ತು. ಕಾರ್ತಿ ಮತ್ತು ಇಂದ್ರಾಣಿ ಮಾತುಕತೆಯ ಫಲವಾಗಿ ಎಎಸ್‍ಸಿಪಿಎಲ್ ಮತ್ತು ಇದರ ಸಹಭಾಗಿತ್ವದಲ್ಲಿರುವ ಕಂಪನಿಗಳು ಸುಮಾರು 7 ಲಕ್ಷ ಡಾಲರ್(ಆಗಿನ ಮೌಲ್ಯ 3.10 ಕೋಟಿ ರೂ.) ಹೂಡಿಕೆಯಾಗಿತ್ತು. ನಂತರ ಈ ಹಣ ಮರುಪಾವತಿಯಾಗಿತ್ತು. ಇದಾದ ನಂತರ ವಿದೇಶಿ ಬಂಡವಾಳ ಉತ್ತೇಜನ ಮಂಡಳಿ(ಎಫ್‍ಐಪಿಬಿ) ಕೆಲ ಬದಲಾವಣೆ ಮಾಡಿ ಇಂದ್ರಾಣಿ ಕಂಪನಿಗೆ ಅನುಮತಿ ನೀಡಿತ್ತು ಎನ್ನುವುದು ಇಡಿ ಆರೋಪ.

    ಸಿಬಿಐ ಅಧಿಕಾರಿಯೊಬ್ಬರು ಮಾಧ್ಯಮಕ್ಕೆ ನೀಡಿದ ಮಾಹಿತಿ ಪ್ರಕಾರ, ಎಫ್‍ಐಪಿಬಿ 4.62 ಕೋಟಿ ರೂ. ವಿದೇಶಿ ಹೂಡಿಕೆಗೆ ಅನುಮತಿ ನೀಡಿತ್ತು. ಆದರೆ ಚಿದಂಬರಂ ಮೂಲಕ ಕಾರ್ತಿಗೆ ಲಂಚ ನೀಡಿದ ಪರಿಣಾಮ 305 ಕೋಟಿ ರೂ. ವಿದೇಶಿ ಹಣ ಬಂದಿತ್ತು. ಅಷ್ಟೇ ಅಲ್ಲದೇ ಐಎನ್‍ಎಕ್ಸ್ ನ್ಯೂಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯಲ್ಲಿ ಶೇ.26 ರಷ್ಟು ಡೌನ್‍ಸ್ಟ್ರೀಮ್ ಇನ್ವೆಸ್ಟ್ ಮೆಂಟ್ ಮಾಡಲಾಯಿತು ಎಂದು ತಿಳಿಸಿದ್ದರು.

    ಐಎನ್ ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಲಂಚವಾಗಿ ಪಡೆದ ಹಣದಲ್ಲಿ ಕಾರ್ತಿ ಚಿದಂಬರಂ ಸ್ಪೇನ್ ದೇಶದಲ್ಲಿ ಟೆನ್ನಿಸ್ ಕ್ಲಬ್, ಇಂಗ್ಲೆಂಡಿನಲ್ಲಿ ಕಾಟೇಜ್, ಭಾರತ ಮತ್ತು ವಿದೇಶಗಳಲ್ಲಿ ಸುಮಾರು 54 ಕೋಟಿ ರೂಪಾಯಿ ವೆಚ್ಚದಲ್ಲಿ ಹಲವು ಆಸ್ತಿಗಳನ್ನು ಖರೀದಿಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.