Tag: cbi

  • ಕುಂಬಳಕಾಯಿ ಕಳ್ಳ ಅಂದರೆ ಯಾಕೆ ಹೆಗಲು ಮುಟ್ಟಿ ನೋಡಿಕೊಳ್ಳಬೇಕು – ಎಚ್‍ಡಿಕೆಗೆ ವಿಶ್ವನಾಥ್ ಟಾಂಗ್

    ಕುಂಬಳಕಾಯಿ ಕಳ್ಳ ಅಂದರೆ ಯಾಕೆ ಹೆಗಲು ಮುಟ್ಟಿ ನೋಡಿಕೊಳ್ಳಬೇಕು – ಎಚ್‍ಡಿಕೆಗೆ ವಿಶ್ವನಾಥ್ ಟಾಂಗ್

    ಮೈಸೂರು: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅಣತಿಯಂತೆ ಈ ಫೋನ್ ಕದ್ದಾಲಿಕೆ ನಡೆದಿದೆ ಎಂದು ಅನರ್ಹ ಶಾಸಕ ಎಚ್.ವಿಶ್ವನಾಥ್ ಕಿಡಿ ಕಾರಿದ್ದಾರೆ.

    ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಫೋನ್ ಕದ್ದಾಲಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿರುವ ಸರ್ಕಾರದ ನಿರ್ಧಾರ ಸ್ವಾಗತಾರ್ಹ. ಸಿಬಿಐ ಒಂದು ಸಾಂವಿಧಾನಿಕ ಸಂಸ್ಥೆಯಾಗಿದ್ದು, ಇಂತಹ ದೊಡ್ಡ ಪ್ರಕರಣಗಳನ್ನು ಸಿಬಿಐನಂತಹ ಸಂಸ್ಥೆಗಳಿಗೆ ವಹಿಸಬೇಕು. ಹೀಗಾಗಿ ಸರ್ಕಾರದ ಕ್ರಮ ಸ್ವಾಗತಾರ್ಹ ಎಂದು ತಿಳಿಸಿದರು.

    ಬೇಹುಗಾರಿಕೆ ಸಂಸ್ಥೆ ಮುಖ್ಯಮಂತ್ರಿಗಳ ಅಧೀನದಲ್ಲಿಯೇ ಇರುತ್ತದೆ. ಅವರ ಅಣತಿಯಂತೆ ಈ ಫೋನ್ ಕದ್ದಾಲಿಕೆ ಕೆಲಸ ನಡೆದಿದೆ. ಈ ಕುರಿತು ಸೂಕ್ತ ತನಿಖೆ ನಡೆಯಲಿದ್ದು, ತನಿಖೆಯಿಂದ ಎಲ್ಲಾ ಸತ್ಯ ಹೊರಬರಲಿದೆ. ಪ್ರವಾಹ ಇದೆ ಇಂತಹ ಸಂದರ್ಭದಲ್ಲಿ ಈ ನಿರ್ಧಾರ ಅಗತ್ಯವಿತ್ತೆ ಎಂದು ಕೆಲವರು ಟೀಕಿಸುತ್ತಿದ್ದಾರೆ ಎಂಬುದರ ಕುರಿತು ಉತ್ತರಿಸಿದ ಅವರು, ಪ್ರವಾಹ ಇದೆ ಎಂದು ಎಲ್ಲರೂ ಹಸಿದುಕೊಂಡೆ ಇದ್ದಾರಾ? ಕುಂಬಳಕಾಯಿ ಕಳ್ಳ ಅಂದರೆ ಯಾಕೆ ಹೆಗಲು ಮುಟ್ಟಿ ನೋಡಿಕೊಳ್ಳಬೇಕು ಎಂದು ಟಾಂಗ್ ನೀಡಿದರು.

    ಯಾವುದೇ ವಿಚಾರವನ್ನು ನಾನು ಡೈವರ್ಟ್ ಮಾಡಿಲ್ಲ. ಸಿದ್ದರಾಮಯ್ಯ ಸೇರಿ ಸಾಕಷ್ಟು ಕಾಂಗ್ರೆಸ್ ನಾಯಕರು ಸಿಬಿಐ ತನಿಖೆಯಾಗಲಿ ಎಂದು ಒಕ್ಕೂರಲಿನಿಂದ ಒತ್ತಾಯ ಮಾಡಿದ್ದಾರೆ. ಫೋನ್ ಕದ್ದಾಲಿಕೆ ವಿಚಾರವನ್ನು ಮೊದಲು ಪ್ರಸ್ತಾಪ ಮಾಡಿದ್ದೇ ನಾನು. ಇದೀಗ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಸಿಬಿಐ ತನಿಖೆಗೆ ವಹಿಸಿದೆ. ಇದರಿಂದ ನನಗೂ ಸಂತೋಷವಾಗಿದೆ ಎಂದರು.

    ಫೋನ್ ಕದ್ದಾಲಿಕೆ ಪ್ರಕರಣವನ್ನು ಸಿಬಿಐಗೆ ವಹಿಸಿರುವ ಕುರಿತು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಪ್ರತಿಕ್ರಿಯಿಸಿದ್ದು, ಸಿಬಿಐ ಅಲ್ಲ ಅಮೆರಿಕ ಅಧ್ಯಕ್ಷ ಟ್ರಂಪ್ ಅವರ ಅಧಿಕಾರಿಗಳಿಂದಲೂ ತನಿಖೆ ನಡೆಸಲಿ. ದುರುದ್ದೇಶಪೂರ್ವಕವಾಗಿ ನನ್ನನ್ನು ಸಿಕ್ಕಿಹಾಕಿಸುವ ಪ್ರಯತ್ನ ನಡೆದಿದೆ, ಇದಕ್ಕೆ ನಾನು ಹೆದರುವುದಿಲ್ಲ ಎಂದು ತಿಳಿಸಿದರು.

  • ರಾಜ್ಯದ ಜನರನ್ನು ದಾರಿ ತಪ್ಪಿಸಲು ಕದ್ದಾಲಿಕೆ ಕೇಸ್ ಸಿಬಿಐಗೆ: ಕಾಶೆಂಪೂರ್

    ರಾಜ್ಯದ ಜನರನ್ನು ದಾರಿ ತಪ್ಪಿಸಲು ಕದ್ದಾಲಿಕೆ ಕೇಸ್ ಸಿಬಿಐಗೆ: ಕಾಶೆಂಪೂರ್

    ಬೀದರ್: ರಾಜ್ಯದ ಜನರನ್ನು ದಾರಿ ತಪ್ಪಿಸಲು ಫೋನ್ ಕದ್ದಾಲಿಕೆ ಪ್ರಕರಣವನ್ನು ಸಿಬಿಐಗೆ ವಹಿಸಿದ್ದಾರೆ ಎಂದು ಮಾಜಿ ಸಚಿವ ಬಂಡೆಪ್ಪ ಕಾಶೆಂಪೂರ್ ಸಿಎಂ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಒಂದು ಕಡೆ ಅತಿವೃಷ್ಟಿ ಮೊತ್ತೊಂದು ಕಡೆ ಬರಗಾಲ ತಾಂಡವಾಡುತ್ತಿದ್ದು ಕೇಂದ್ರದಿಂದ ಎಷ್ಟು ಅನುದಾನ ಬರುತ್ತೆ ಎಂದು ಜನ ಕಾಯುತ್ತಿದ್ದಾರೆ. ಅದ್ದರಿಂದ ಜನರನ್ನು ದಾರಿ ತಪ್ಪಿಸಲು ಸಿಎಂ ಫೋನ್ ಕದ್ದಾಲಿಕೆ ಪ್ರಕರಣವನ್ನು ಸಿಬಿಐಗೆ ವಹಿಸಿದ್ದಾರೆ ಎಂದು ಹೇಳಿದರು.

    ಸಿಬಿಐ ತನಿಖೆಗೆ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೆದರುವುದಿಲ್ಲ. ಅವರಿಗೆ ಎಲ್ಲಾ ರೀತಿಯ ಶಕ್ತಿಯಿದ್ದು, ಯಾವ ತನಿಖೆಗೂ ಎಲ್ಲರೂ ಸಿದ್ಧರಿದ್ದಾರೆ. ಹೆಚ್‍ಡಿಕೆ ಕುಟುಂಬ ಮೊದಲಿನಿಂದಲೂ ಹೋರಾಟ ಮಾಡಿಕೊಂಡು ಬಂದಿದೆ. ಈ ಪ್ರಕರಣವನ್ನು ಅವರು ಸಮರ್ಥವಾಗಿ ಎದುರಿಸುತ್ತಾರೆ ಎಂದು ಬಂಡೆಪ್ಪ ಕಾಶೆಂಪೂರ್ ತಿಳಿಸಿದ್ದಾರೆ.

  • ಇದು ನಿಜವಾಗ್ಲೂ ಶಾಕಿಂಗ್ ಸುದ್ದಿ -ಫೋನ್ ಕದ್ದಾಲಿಕೆಯ ಬಗ್ಗೆ ಸುಮಲತಾ ಪ್ರತಿಕ್ರಿಯೆ

    ಇದು ನಿಜವಾಗ್ಲೂ ಶಾಕಿಂಗ್ ಸುದ್ದಿ -ಫೋನ್ ಕದ್ದಾಲಿಕೆಯ ಬಗ್ಗೆ ಸುಮಲತಾ ಪ್ರತಿಕ್ರಿಯೆ

    ಮಂಡ್ಯ: ಫೋನ್ ಕದ್ದಾಲಿಕೆ ಮಾಡುವುದು ಕ್ರಿಮಿನಲ್ ಎಂದು ಗೊತ್ತಿದ್ದರೂ ಮಾಡಿದ್ದಾರೆ. ಇದು ನಿಜವಾಗಲೂ ಶಾಕಿಂಗ್ ಸುದ್ದಿ ಎಂದು ಸಂಸದೆ ಸುಮಲತಾ ಅಂಬರೀಶ್ ಅವರು ಫೋನ್ ಕದ್ದಾಲಿಕೆ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

    ಮಂಡ್ಯದ ಪಣಕನಹಳ್ಳಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸುಮಲತಾ ಅವರು, ಚುನಾವಣೆ ವೇಳೆ ನಾನು ಏನೇನು ದೂರು ಕೊಟ್ಟಿದ್ದೆನೋ ಅದರಲ್ಲಿ ಒಂದೊಂದೆ ಸತ್ಯ ಬೆಳಕಿಗೆ ಬರುತ್ತಿದೆ. ನಮಗೆ ಫೋನ್ ಟ್ಯಾಪ್ ಮಾಡುತ್ತಿದ್ದಾರೆ ಎಂದು ಅನುಮಾನ ಇತ್ತು. ಆದರೆ ಯಾರು ಮಾಡಿದ್ದಾರೆ, ಏನು ಎಂದು ಗೊತ್ತಿಲ್ಲ. ಈಗ ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲಾಗಿದೆ ಎಂದು ತಿಳಿದಿದೆ. ಸಿಬಿಐಗೆ ನೀಡಿರುವುದು ಒಳ್ಳೆಯ ಕೆಲಸ. ತನಿಖೆಯಿಂದ ಏನೇನು ವಿಚಾರ ಹೊರ ಬರುತ್ತದೆ ಎಂದು ನೋಡಬೇಕಿದೆ ಎಂದರು.

    ಅವರು ಫೋನ್ ಕದ್ದಾಲಿಕೆ ಮಾಡಿದ್ದರೆ ಅದು ಅಪರಾಧವಾಗುತ್ತದೆ. ತಪ್ಪು ನಡೆದಿದೆ ಎಂದರೆ ನ್ಯಾಯ ಸಿಗಲೇಬೇಕು. ಇದು ನಿಜವಾಗಲೂ ಶಾಕಿಂಗ್ ಸುದ್ದಿ. ಈ ರೀತಿ ಫೋನ್ ಕದ್ದಾಲಿಕೆ ಮಾಡುವುದು ಕ್ರಿಮಿನಲ್ ಎಂದು ಗೊತ್ತಿದ್ದರೂ ಮಾಡಿದ್ದಾರೆ, ಇದು ನಿಜಕ್ಕೂ ತಪ್ಪು. ಈ ಸರ್ಕಾರ ಫೋನ್ ಕದ್ದಾಲಿಕೆ ಪ್ರಕರಣದ ಬಗ್ಗೆ ಯಾವ ರೀತಿ ಕ್ರಮ ತೆಗೆದುಕೊಳ್ಳುತ್ತದೆ ಎಂದು ನಾನು ನೋಡಬೇಕು ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದರು.

  • ಕಾಂಗ್ರೆಸ್ಸಿನಲ್ಲೇ ಇಬ್ಭಾಗ – ಸಿದ್ದರಾಮಯ್ಯ ಸ್ವಾಗತಿಸಿದ ಕೂಡಲೇ ಟ್ವೀಟ್ ಡಿಲೀಟ್

    ಕಾಂಗ್ರೆಸ್ಸಿನಲ್ಲೇ ಇಬ್ಭಾಗ – ಸಿದ್ದರಾಮಯ್ಯ ಸ್ವಾಗತಿಸಿದ ಕೂಡಲೇ ಟ್ವೀಟ್ ಡಿಲೀಟ್

    ಬೆಂಗಳೂರು: ಫೋನ್ ಕದ್ದಾಲಿಕೆ ಪ್ರಕರಣವನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಿಬಿಐ ತನಿಖೆಗೆ ವಹಿಸಿದ ವಿಚಾರ ಈಗ ಕಾಂಗ್ರೆಸ್ಸಿನಲ್ಲೇ ಭಿನ್ನಾಭಿಪ್ರಾಯಕ್ಕೆ ಕಾರಣವಾಗಿದೆ. ಯಡಿಯೂರಪ್ಪನವರ ನಿರ್ಧಾರವನ್ನು ಕಾಂಗ್ರೆಸ್ ಟೀಕಿಸಿದ್ದರೆ ಮಾಜಿ ಸಿಎಂ ಸಿದ್ದರಾಮಯ್ಯನವರು ಸ್ವಾಗತಿಸಿದ್ದಾರೆ.

    “ಫೋನ್ ಕದ್ದಾಲಿಕೆ ಹಗರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಿರ್ಧಾರ ಸ್ವಾಗತಾರ್ಹ. ಆದರೆ ಬಿಜೆಪಿ ಸಿಬಿಐಯನ್ನು ಕೈಗೊಂಬೆ ಮಾಡಿಕೊಂಡು ರಾಜಕೀಯ ಸೇಡಿಗಾಗಿ ದುರ್ಬಳಕೆ ಮಾಡಿಕೊಳ್ಳುತ್ತಾ ಬಂದಿರುವುದನ್ನು ದೇಶ ಕಂಡಿದೆ. ಇಂತಹ ದುಷ್ಟ ಆಲೋಚನೆ ಬಿಜೆಪಿ ನಾಯಕರಿಗಿಲ್ಲ ಎಂದು ನಂಬಿದ್ದೇನೆ” ಎಂದು ಸಿದ್ದರಾಮಯ್ಯ ಟ್ವೀಟ್‍ನಲ್ಲಿ ತಿಳಿಸಿದ್ದಾರೆ.

    ಇದೇ ವಿಚಾರದ ಬಗ್ಗೆ ಕಾಂಗ್ರೆಸ್, “ಬಿ.ಎಸ್.ಯಡಿಯೂರಪ್ಪ ಅವರೇ, ತಾನು ಕಳ್ಳ ಪರರ ನಂಬ ಎಂಬಂತೆ ನಿಮ್ಮ ವರ್ತನೆ. ಆಪರೇಷನ್ ಕಮಲ ಮುಖೇನ ಸರ್ಕಾರ ಬೀಳಿಸಿ, ಹಿಂಬಾಗಿಲ ಅನೈತಿಕ ಸಿಎಂ ಆಗಿರುವ ತಾವು ಭೂಗತ ಪಾತಕಿಗಳ ರೀತಿ ವರ್ತಿಸುತ್ತಿದ್ದೀರಿ. ಮೋದಿ ಆಳ್ವಿಕೆಯಲ್ಲಿ ಸಿಬಿಐ ಬಿಜೆಪಿಯ ಮುಂಚೂಣಿ ಘಟಕವಾಗಿ ಕೆಲಸ ಮಾಡುತ್ತಿದೆ. ಫೋನ್ ಕದ್ದಾಲಿಕೆ ಎಂಬುದೊಂದು ಸುಳ್ಳು, ದ್ವೇಷ ರಾಜಕಾರಣದ ಸಂಚು” ಎಂದು ಹೇಳಿ ಟ್ವೀಟ್ ಮಾಡಿತ್ತು.

    ಯಾವಾಗ ಸಿದ್ದರಾಮಯ್ಯನವರ ಖಾತೆಯಿಂದ ಯಡಿಯೂರಪ್ಪನವರ ನಿರ್ಧಾರ ಸ್ವಾಗತಾರ್ಹ ಎಂದು ಪ್ರಕಟವಾಯ್ತೋ ಕೂಡಲೇ ಕಾಂಗ್ರೆಸ್ ಈ ಹಿಂದೆ ಮಾಡಿದ್ದ ಟ್ವೀಟ್ ಡಿಲೀಟ್ ಮಾಡಿದೆ.

    ಮತ್ತೊಂದು ಟ್ವೀಟ್‍ನಲ್ಲಿ “ತುಘಲಕ್ ನರೇಂದ್ರಮೋದಿ, ನಾಲಾಯಕ್ ಯಡಿಯೂರಪ್ಪ ರಾಜ್ಯಕ್ಕೆ ದ್ರೋಹವೆಸಗಿದ್ದಾರೆ. ಮಧ್ಯಂತರ 5000 ಕೋಟಿ ನೀಡದೆ, ರಾಷ್ಟ್ರೀಯ ವಿಪತ್ತೆಂದು ಘೋಷಿಸದೆ, 1 ಲಕ್ಷ ಕೋಟಿ ನಷ್ಟವಾದರೂ ಹಣ ಒದಗಿಸದೆ, ಜಬಾಬ್ದಾರಿ ಮತ್ತು ಕರ್ತವ್ಯ ನಿರ್ವಹಿಸದೆ ಕೇಂದ್ರ ಕಣ್ಣುಚ್ಚಿದೆ. ನೆರೆ ಪರಿಹಾರವು ರಾಜ್ಯದ ಹಕ್ಕು, ರಾಜ್ಯದ ಹಕ್ಕನ್ನು ಪಡೆಯಲಾಗದ ಹೇಡಿಯೇ ಸಿಎಂ? ಎಂದು ಪ್ರಶ್ನೆ ಮಾಡಿದೆ.

    ಕ್ಯಾಬಿನೆಟ್ ರಚಿಸಲು ತೆರಳಿದ್ದ ಯಡಿಯೂರಪ್ಪನವರ ಜೊತೆ ಅಮಿತ್ ಶಾ ಫೋನ್ ಕದ್ದಾಲಿಕೆಯ ವಿಚಾರದ ಬಗ್ಗೆ ಬಹಳ ಗಂಭೀರವಾಗಿ ಚರ್ಚೆ ನಡೆಸಿದ್ದರು. ರಾಜ್ಯ ಸರ್ಕಾರ ಈ ಪ್ರಕರಣವನ್ನು ಸಿಐಡಿ ಅಥವಾ ವಿಶೇಷ ತನಿಖಾ ತಂಡಕ್ಕೆ ನೀಡಲು ಮುಂದಾಗಿತ್ತು. ಆದರೆ ಅಮಿತ್ ಶಾ ಸೂಚನೆಯಂತೆ ಯಡಿಯೂರಪ್ಪ ಈಗ ಈ ಪ್ರಕರಣವನ್ನು ಸಿಬಿಐ ವಹಿಸಲು ಆದೇಶಿಸಿದ್ದಾರೆ ಎನ್ನಲಾಗುತ್ತಿದೆ.

     

    ಫೋನ್ ಟ್ಯಾಪಿಂಗ್ ವಿಚಾರ ಬಂದಾಗ ಸಿದ್ದರಾಮಯ್ಯನವರೇ ಈ ಬಗ್ಗೆ ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದರು. ಆದರೆ ಡಿಕೆ ಶಿವಕುಮಾರ್ ಅವರು ಫೋನ್ ಕದ್ದಾಲಿಕೆ ನಡೆದಿಲ್ಲ ಎಂದು ಹೇಳಿ ಕುಮಾರಸ್ವಾಮಿ ಅವರ ಹೇಳಿಕೆಯನ್ನು ಬೆಂಬಲಿಸಿದ್ದರು.

  • ತಪ್ಪು ಎಂದು ಗೊತ್ತಿದ್ರೂ ಕುರ್ಚಿ ಉಳಿಸಿಕೊಳ್ಳಲು ಹೆಚ್‍ಡಿಕೆಯಿಂದ ಕದ್ದಾಲಿಕೆ: ಶ್ರೀರಾಮುಲು

    ತಪ್ಪು ಎಂದು ಗೊತ್ತಿದ್ರೂ ಕುರ್ಚಿ ಉಳಿಸಿಕೊಳ್ಳಲು ಹೆಚ್‍ಡಿಕೆಯಿಂದ ಕದ್ದಾಲಿಕೆ: ಶ್ರೀರಾಮುಲು

    ಬಳ್ಳಾರಿ: ಕುರ್ಚಿ ಉಳಿಸಿಕೊಳ್ಳಲು ಹೆಚ್‍ಡಿಕೆ ಫೋನ್ ಕದ್ದಾಲಿಕೆ ಮಾಡಿದ್ದಾರೆ. ಈ ರೀತಿಯ ಫೋನ್ ಕದ್ದಾಲಿಕೆ ಯಾರೂ ಮಾಡಬಾರದು. ಇದು ತಪ್ಪು ಎಂದು ಗೊತ್ತಿದ್ದರೂ ಮಾಡಿದ್ದಾರೆ. ಇದರಲ್ಲಿ ಕೆಲ ಅಧಿಕಾರಿಗಳು ಸಹ ಭಾಗಿಯಾಗಿದ್ದಾರೆ ಎಂದು ಶಾಸಕ ಶ್ರೀರಾಮುಲು ಆರೋಪ ಮಾಡಿದ್ದಾರೆ.

    ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಫೋನ್ ಕದ್ದಾಲಿಕೆ ಪ್ರಕರಣವನ್ನು ಸಿಎಂ ಯಡಿಯೂರಪ್ಪ ಅವರು ಸಿಬಿಐಗೆ ವಹಿಸಿದ್ದಾರೆ ಅದನ್ನು ನಾನು ಸ್ವಾಗತ ಮಾಡುತ್ತೇನೆ. ಸರ್ಕಾರ ಉಳಿಸಲು ಫೋನ್ ಕದ್ದಾಲಿಕೆ ಮಾಡಿದ್ದಾರೆ. ಕುರ್ಚಿ ಉಳಿಸಿಕೊಳ್ಳಲು ಕುಮಾರಸ್ವಾಮಿ ಹೀಗೆ ಮಾಡಿದ್ದಾರೆ. ಸಿಬಿಐ ವಹಿಸಿದ ಬಳಿಕ ಉಲ್ಟಾ ಹೊಡೆಯುತ್ತಿದ್ದಾರೆ. ರಾಷ್ಟ್ರ ಮಟ್ಟದ ನಾಯಕರ ಫೋನ್ ಕದ್ದಾಲಿಕೆ ಮಾಡಲಾಗಿದೆ. ಹೀಗಾಗಿ ಸಿಬಿಐ ತನಿಖೆಯಾಗಲಿ ಸಿಬಿಐ ಬಗ್ಗೆ ಯಾಕೆ ನಿಮ್ಮ ಅಪಸ್ವರ. ತನಿಖೆಯಲ್ಲಿ ಯಾವುದೇ ರಾಜಕೀಯ ಉದ್ದೇಶವಿಲ್ಲ ಎಂದು ಸ್ಪಷ್ಟಪಡಿಸಿದರು.

    ನೆರೆಯಿಂದ ಲಕ್ಷ ಕೋಟಿ ಹಾನಿಯಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಸಿದ್ದರಾಮಯ್ಯ ಅವರಿಗೆ ನನ್ನದೊಂದು ಪ್ರಶ್ನೆ. ಮೋದಿಯವರು ವೈಮಾನಿಕ ಸಮೀಕ್ಷೆ ಮಾಡಿಲ್ಲ ಎಂದು ಹೇಳುತ್ತಿರಲ್ಲ. ಆದರೆ ಸ್ವಕ್ಷೇತ್ರ ಬಾದಾಮಿಗೆ ನೀವು ಯಾಕೆ ಹೋಗಿಲ್ಲ ಎಂದು ಪ್ರಶ್ನಿಸಿದರು.

    ಸಿದ್ದರಾಮಯ್ಯ ಅವರಿಗೆ ರಾಜಕೀಯ ಪುನರ್ಜನ್ಮ ನೀಡಿದ ಕ್ಷೇತ್ರ ಬಾದಾಮಿ ಅದನ್ನು ನಿರ್ಲಕ್ಷ್ಯ ಮಾಡಿ ದೆಹಲಿಗೆ ಹೋಗುತ್ತಾರೆ. ಬಿರಿಯಾನಿ ತಿನ್ನುತ್ತಾರೆ ಆಗ ಕಣ್ಣಿಗೇನಾಗೋಲ್ವಾ ಎಂದು ಸಿದ್ದರಾಮಯ್ಯ ಅವರನ್ನು ತರಾಟೆಗೆ ತೆಗೆದುಕೊಂಡರು. ಸಚಿವ ಸಂಪುಟ ವಿಸ್ತರಣೆ ಆಗುತ್ತದೆ ಎಂದು ನಾನು ಮಾಧ್ಯಮದ ಮೂಲಕ ನೋಡಿದ್ದೇನೆ. ಪಕ್ಷದ ತೀರ್ಮಾನಕ್ಕೆ ನಾನು ಬದ್ಧ. ನಾನು ಪಕ್ಷಕ್ಕಾಗಿ ದುಡಿಯಲು ಬಂದಿದ್ದೇನೆ. ಹೈಕಮಾಂಡ್ ನಿಲುವು ಸ್ಪಷ್ಟವಾಗಿದೆ ಅದನ್ನು ನಾನು ಒಪ್ಪುತ್ತೇವೆ. ನನಗೆ ಸಚಿವ ಸ್ಥಾನ ನೀಡೋ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಹೇಳಿದರು.

  • ಫೋನ್ ಕದ್ದಾಲಿಕೆ ಪ್ರಕರಣದ ತನಿಖೆ ಸಿಬಿಐ ಹೆಗಲಿಗೆ

    ಫೋನ್ ಕದ್ದಾಲಿಕೆ ಪ್ರಕರಣದ ತನಿಖೆ ಸಿಬಿಐ ಹೆಗಲಿಗೆ

    ಬೆಂಗಳೂರು: ಫೋನ್ ಕದ್ದಾಲಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಲು ಸರ್ಕಾರ ಮುಂದಾಗಿದೆ. ಬಹಳ ಗಂಭೀರವಾಗಿ ಈ ಪ್ರಕರಣವನ್ನು ಸರ್ಕಾರ ತೆಗೆದುಕೊಂಡಿದ್ದು ಸಿಬಿಐಗೆ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪನವರು ತಿಳಿಸಿದ್ದಾರೆ.

    ಕ್ಯಾಬಿನೆಟ್ ರಚಿಸಲು ತೆರಳಿದ್ದ ಯಡಿಯೂರಪ್ಪನವರ ಜೊತೆ ಅಮಿತ್ ಶಾ ಈ ವಿಚಾರದ ಬಗ್ಗೆ ಬಹಳ ಗಂಭೀರ ಚರ್ಚೆ ನಡೆಸಿದ್ದಾರೆ. ಹೀಗಾಗಿ ಸಿಬಿಐ ತನಿಖೆ ನಡೆಸಲು ಸರ್ಕಾರ ಮುಂದಾಗಿದೆ.

    ಫೋನ್ ಟ್ಯಾಪಿಂಗ್ ವಿಚಾರ ಬಂದಾಗ ಸಿದ್ದರಾಮಯ್ಯನವರೇ ಈ ಬಗ್ಗೆ ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದರು. ಆದರೆ ಡಿಕೆ ಶಿವಕುಮಾರ್ ಅವರು ಫೋನ್ ಕದ್ದಾಲಿಕೆ ನಡೆದಿಲ್ಲ ಎಂದು ತಿಳಿಸಿದ್ದರು. ಇದನ್ನೂ ಓದಿ: ಫೋನ್ ಕದ್ದಾಲಿಕೆ ಯಾಕೆ? ಹೇಗೆ? ಯಾರು ಮಾಡಬಹುದು?

    ಕುಮಾರಸ್ವಾಮಿ ಅವರು ಸರ್ಕಾರ ಉಳಿಸಲು ಪೊಲೀಸ್ ಅಧಿಕಾರಿಗಳ ಮೂಲಕ ಫೋನ್ ಟ್ಯಾಪಿಂಗ್ ಮಾಡುತ್ತಿದ್ದಾರೆ. ಸಿದ್ದರಾಮಯ್ಯನವರ ಕರೆಯನ್ನು ಟ್ಯಾಪ್ ಮಾಡಲಾಗಿದೆ. ಕುಮಾರಸ್ವಾಮಿ ಅವರಿಗೆ ಅವರ ಸಂಪುಟದ ಸಹೋದ್ಯೋಗಿಗಳ ಜೊತೆ ಸಂದೇಹವಿತ್ತು. ಹೀಗಾಗಿ ಹಿಂದಿನ ಸರ್ಕಾರ ಫೋನ್ ಟ್ಯಾಪಿಂಗ್ ಮಾಡಿತ್ತು ಎಂದು ಆರ್. ಅಶೋಕ್ ಆರೋಪಿಸಿದ್ದರು.

    ಮುಖ್ಯಮಂತ್ರಿ ಅಧಿಕಾರ ಶಾಶ್ವತವಲ್ಲ ಎಂದು ಪದೇ ಪದೇ ಹೇಳುತ್ತಿದ್ದವನು ನಾನು. ಈ ಕುರ್ಚಿಗಾಗಿ ಟೆಲಿಫೋನ್  ಕದ್ದಾಲಿಕೆ ಮಾಡಿ ಅಧಿಕಾರ ಉಳಿಸಿಕೊಳ್ಳುವ ಅವಶ್ಯಕತೆ ನನಗಿರಲಿಲ್ಲ. ಈ ವಿಚಾರದಲ್ಲಿ ಕೆಲವರು ನನ್ನ ವಿರುದ್ಧ ಮಾಡಿರುವ ಆರೋಪ ಸತ್ಯಕ್ಕೆ ದೂರವಾದದ್ದು ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿ ತಿಳಿಸಿದ್ದರು.

  • ಐಎಂಎ ಪ್ರಕರಣ ಮುಚ್ಚಲು ಎಸ್‍ಐಟಿ ಬಳಕೆ: ಸೊಗಡು ಶಿವಣ್ಣ

    ಐಎಂಎ ಪ್ರಕರಣ ಮುಚ್ಚಲು ಎಸ್‍ಐಟಿ ಬಳಕೆ: ಸೊಗಡು ಶಿವಣ್ಣ

    ತುಮಕೂರು: 40 ಸಾವಿರಕ್ಕೂ ಹೆಚ್ಚು ಜನರಿಗೆ ವಂಚನೆ ಮಾಡಿರುವ ಐಎಂಎ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಮಾಜಿ ಸಚಿವ ಸೊಗಡು ಶಿವಣ್ಣ ಒತ್ತಾಯಿಸಿದ್ದಾರೆ.

    ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸರ್ಕಾರವೇ ಇಲ್ಲಾ, ಮಳೆ ಬೆಳೆ ಇಲ್ಲಾ, ಶವ ಸಂಸ್ಕಾರಕ್ಕೂ ನೀರಿಲ್ಲದ್ದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇಂಥ ಸ್ಥಿತಿಯಲ್ಲಿ 40 ಸಾವಿರ ಜನರ ಹಣವನ್ನು ಮನ್ಸೂರ್ ಅಲಿಖಾನ್ ತಿಂದು ಬಿಟ್ಟಿದ್ದಾನೆ ಎಂದು ಕಿಡಿಕಾರಿದರು.

    ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು. ಈ ಪ್ರಕರಣದಲ್ಲಿ ರಾಜಕಾರಣಿಗಳಿಗೆ, ಅಧಿಕಾರಿಗಳಿಗೆ ಕೋಟ್ಯಾಂತರ ರೂಪಾಯಿ ಹೋಗಿರುವ ಅನುಮಾನ ಇದೆ. ಪ್ರಕರಣವನ್ನು ಮುಚ್ಚಿಹಾಕುವ ದೃಷ್ಠಿಯಲ್ಲಿ ಎಸ್‍ಐಟಿಯನ್ನು ಬಳಸಿಕೊಳ್ಳಲಾಗುತ್ತಿದೆ. ಹೀಗಾಗಿ ಐಎಂಎ ಕೇಸನ್ನು ಕೂಡಲೇ ಸಿಬಿಐಗೆ ವಹಿಸಲೇಬೇಕು ಎಂದು ಆಗ್ರಹಿಸಿದರು.

  • ನನ್ನ ಕೊಲೆಗೆ ಸುಪಾರಿ ಕೊಡಲಾಗಿತ್ತು: ಅಣ್ಣಾ ಹಜಾರೆ

    ನನ್ನ ಕೊಲೆಗೆ ಸುಪಾರಿ ಕೊಡಲಾಗಿತ್ತು: ಅಣ್ಣಾ ಹಜಾರೆ

    ಬೆಂಗಳೂರು: ನನ್ನ ಕೊಲೆಗೆ ಸುಪಾರಿ ಕೊಡಲಾಗಿತ್ತು ಎಂದು ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಕೋರ್ಟಿಗೆ ಹೇಳಿದ್ದಾರೆ.

    ಒಸ್ಮಾನಾಬಾದ್ ಸಕ್ಕರೆ ಕೈಗಾರಿಕೆಯ ಭ್ರಷ್ಟಾಚಾರದ ಬಗ್ಗೆ ದನಿ ಎತ್ತಿದಕ್ಕೆ ನನ್ನ ಕೊಲೆಗೆ ಸುಪಾರಿ ಕೊಡಲಾಗಿದೆ ಎಂದು ಮುಂಬೈ ಸಿಬಿಐ ಕೋರ್ಟ್‍ಗೆ ಹಜಾರೆ ಹೇಳಿದ್ದಾರೆ.

    ಇಂದು ಅಣ್ಣಾ ಹಾಜರೆ ಅವರು ಮುಂಬೈನ ಸಿಬಿಐ ಕೋರ್ಟಿಗೆ ಹಾಜರಾಗಿದ್ದರು. 2006 ರಲ್ಲಿ ಮಹಾರಾಷ್ಟ್ರದಲ್ಲಿ ನಡೆದಿದ್ದ ಕಾಂಗ್ರೆಸ್ ನಾಯಕ ಪವನ್ ರಾಜೇ ನಿಂಬಾಳ್ಕರ್ ಕೊಲೆ ಪ್ರಕರಣದಲ್ಲಿ ಸಾಕ್ಷಿ ಹೇಳಲು ನ್ಯಾಯಾಲಯಕ್ಕೆ ಆಗಮಿಸಿದ್ದರು. ನಿಂಬಾಳ್ಕರ್ ಹತ್ಯೆ ಪ್ರಕರಣದಲ್ಲಿ ಪದ್ಮ ಸಿನ್ಹಾ ಪಾಟೀಲ್ ಪ್ರಮುಖ ಆರೋಪಿಯಾಗಿದ್ದು, ಇವರು ಒಸ್ಮಾನಾಬಾದ್ ಸಕ್ಕರೆ ಕಾರ್ಖಾನೆಯೊಂದಿಗೆ ನೇರ ಸಂಪರ್ಕ ಹೊಂದಿದ್ದರು. ಈ ಕಾರ್ಖಾನೆ ಮಹಾರಾಷ್ಟ್ರದ ಎನ್‍ಸಿಪಿ ನಾಯಕ ಒಸ್ಮಾನಾಬಾದ್‍ಗೆ ಸೇರಿತ್ತು.

    ಅಂದಹಾಗೇ ಪ್ರಕರಣದಲ್ಲಿ ಮೃತ ನಿಂಬಾಳ್ಕರ್ ಅವರ ಪತ್ನಿ ಆನಂದಿದೇವಿ ಅವರು ಅಣ್ಣಾ ಹಜಾರೆ ಅವರ ಸಾಕ್ಷಿಯನ್ನು ಪರಿಗಣಿಸಲು ಮನವಿ ಮಾಡಿದ್ದರು. ಹಜಾರೆ ಅವರಿಗೆ ಕೊಲೆ ಬಗ್ಗೆ ಮಾಹಿತಿ ಇತ್ತು ಎಂದು ಹೇಳಿದ್ದಾರೆ. ಆದರೆ ಹೈ ಕೋರ್ಟ್ ಈ ಮನವಿಯನ್ನು ತಿರಸ್ಕರಿತ್ತು. ಸದ್ಯ ಸುಪ್ರೀಂ ಕೋರ್ಟ್ ನಿಂಬಾಳ್ಕರ್ ಪತ್ನಿರ ಮನವಿಯನ್ನು ಪರಿಗಣಿಸಿ ಸಿಬಿಐಗೆ ನಿರ್ದೇಶನ ನೀಡಿತ್ತು. ಈ ಬಗ್ಗೆ ಸಿಬಿಐ ಮುಂದೇ ಹಾಜರಾಗಿದ್ದ ಸಂದರ್ಭದಲ್ಲಿ ಭ್ರಷ್ಟಾಚಾರದ ಬಗ್ಗೆ ಧ್ವನಿ ಎತ್ತಿದಕ್ಕೆ ತಮ್ಮ ಕೊಲೆ ಮಾಡಲು ಸುಪಾರಿ ನೀಡಿದ್ದ ಬಗ್ಗೆ ಮಾಹಿತಿ ನೀಡಿದ್ದಾರೆ. ಅಲ್ಲದೇ ಪೊಲೀಸರಿಗೆ ದೂರು ನೀಡಿದ್ದಾಗಿ, ಮಹಾರಾಷ್ಟ್ರ ಸಿಎಂ, ಪ್ರಧಾನಿಗಳಿಗೂ ದೂರು ನೀಡಿದ್ದಾಗಿ ತಿಳಿಸಿದ್ದಾರೆ.

  • ಐಎಂಎ ಮಹಾ ವಂಚನೆ ಕೇಸ್‍ಗೆ ಸಿಬಿಐ ಎಂಟ್ರಿ?

    ಐಎಂಎ ಮಹಾ ವಂಚನೆ ಕೇಸ್‍ಗೆ ಸಿಬಿಐ ಎಂಟ್ರಿ?

    ಬೆಂಗಳೂರು: ಐಎಂಎ ಮಾಲೀಕ ಮನ್ಸೂರ್ ಖಾನ್ ದೋಖಾ ಪ್ರಕರಣ ಟ್ವಿಸ್ಟ್ ಮೇಲೆ ಟ್ವಿಸ್ಟ್ ಪಡೆದುಕೊಳ್ಳುತ್ತಿದೆ. ಜಾರಿ ನಿರ್ದೇಶನಾಲಯ (ಇಡಿ) ಕಣ್ಣು ಸಚಿವ ಜಮೀರ್ ಅಹ್ಮದ್ ಖಾನ್ ಮೇಲೆ ಬಿದ್ದಾಯ್ತು, ಮುಂದೆ ಯಾರು ಅನ್ನೋ ಕುತೂಹಲ ಹೆಚ್ಚಾಗಿದೆ.

    ಸಾವಿರಾರು ಮಂದಿಗೆ ಸಾವಿರಾರು ಕೋಟಿ ರೂಪಾಯಿ ವಂಚಿಸಿ ಓಡಿ ಹೋಗಿರೋ ಮನ್ಸೂರ್ ಖಾನ್ ಕಂಬಿ ಎಣಿಸೋ ಕಾಲ ಹತ್ತಿರವಾಗುತ್ತಿದೆ. ಯಾಕೆಂದರೆ ಐಎಂಎ ಕೇಸಲ್ಲಿ ಸೋಮವಾರ ಸಿಬಿಐ ಎಂಟ್ರಿಯಾಗುತ್ತಿದೆ. ಶುಕ್ರವಾರವಷ್ಟೇ ಇಡಿ ಅಧಿಕಾರಿಗಳಿಂದ ಸಿಬಿಐ ಎಲ್ಲ ಮಾಹಿತಿ ಪಡೆದುಕೊಂಡಿದ್ದು, ಪ್ರಕರಣವನ್ನು ಸ್ವಯಂಪ್ರೇರಿತವಾಗಿ ಕೈಗೆತ್ತಿಕೊಳ್ಳುವ ಸಾಧ್ಯತೆ ಹೆಚ್ಚಾಗಿದೆ. ಆಸ್ತಿ ಮಾರಾಟಕ್ಕೆ ಸಂಬಂಧಿಸಿದಂತೆ ಜಮೀರ್‍ಗೆ ಇಡಿ ಈಗಾಗಲೇ ನೋಟಿಸ್ ನೀಡಿದ್ದು, ಸಿಬಿಐ ಉರುಳಿಗೆ ಸಿಲುಕಿದರೂ ಅಚ್ಚರಿ ಇಲ್ಲ ಎನ್ನಲಾಗುತ್ತಿದೆ. ಇದನ್ನೂ ಓದಿ: ಐಎಂಎ ಹಗರಣ – ವಿಚಾರಣೆಗೆ ಹಾಜರಾಗುವಂತೆ ಜಮೀರ್‌ಗೆ ಇಡಿ ನೋಟಿಸ್

    ಸಿಬಿಐಗೆ ಕೇಸ್ ಕೈಗೆತ್ತಿಕೊಂಡರೆ ಸಚಿವ ಜಮೀರ್, ಮಾಜಿ ಕೇಂದ್ರ ಸಚಿವ ರೆಹಮಾನ್ ಖಾನ್, ಜೆಡಿಎಸ್‍ನ ಎಂಎಲ್‍ಸಿ ಶರವಣ ಸೇರಿದಂತೆ ಸಾಕಷ್ಟು ಜನನಾಯಕರು ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆಗಳಿವೆ. ಕಾಂಗ್ರೆಸ್‍ನ ಉಚ್ಛಾಟಿತ ಮುಖಂಡರಿಗೂ ಸಂಕಷ್ಟ ತಪ್ಪಿದ್ದಲ್ಲ. ಮನ್ಸೂರ್ ವಿಡಿಯೋದಲ್ಲಿ ಯಾರ್ಯಾರ ಹೆಸರು ಹೇಳಿದ್ದಾನೋ ಅವರೆಲ್ಲರನ್ನು ಸಿಬಿಐ ಡ್ರಿಲ್ ಮಾಡಲಿದೆ. ಇದೇ ಅಸ್ತ್ರ ಮುಂದಿಟ್ಟುಕೊಂಡು ದೋಸ್ತಿ ಸರ್ಕಾರ ಉರುಳಿಸಲು ಮೋದಿ ಸರ್ಕಾರ ಪ್ಲಾನ್ ಮಾಡಿಕೊಂಡಿರುವುದಾಗಿ ಮೂಲಗಳು ತಿಳಿಸಿವೆ.

  • ನಾನೇ ತಲೆಗೆ ಎರಡು ಸುತ್ತು ಗುಂಡು ಹಾರಿಸಿದೆ: ದಾಬೋಲ್ಕರ್ ಹತ್ಯೆ ಕುರಿತು ಆರೋಪಿ ತಪ್ಪೊಪ್ಪಿಗೆ

    ನಾನೇ ತಲೆಗೆ ಎರಡು ಸುತ್ತು ಗುಂಡು ಹಾರಿಸಿದೆ: ದಾಬೋಲ್ಕರ್ ಹತ್ಯೆ ಕುರಿತು ಆರೋಪಿ ತಪ್ಪೊಪ್ಪಿಗೆ

    ನವದೆಹಲಿ: ವಿಚಾರವಾದಿ ದಾಬೋಲ್ಕರ್ ಹತ್ಯೆ ಕುರಿತು ಆರೋಪಿ ಶರದ್ ಕಲಾಸ್ಕರ್ ತಪ್ಪೊಪ್ಪಿಕೊಂಡಿದ್ದು, ದಾಬೋಲ್ಕರ್ ಅವರ ತಲೆಗೆ ನಾನೇ ಎರಡು ಸುತ್ತು ಗುಂಡು ಹಾರಿಸಿದೆ ಎಂದು ಹೇಳಿದ್ದಾನೆ.

    ವಿಚಾರವಾದಿ ನರೇಂದ್ರ ದಾಬೋಲ್ಕರ್ ಹತ್ಯೆ ನಡೆದು 6 ವರ್ಷಗಳ ನಂತರ ಇದೀಗ ಆರೋಪಿ ಶರದ್ ಕಲಸ್ಕರ್ ಕರ್ನಾಟಕ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾನೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.

    ಎರಡು ಸುತ್ತು ತಲೆಗೆ ಗುಂಡು ಹಾರಿಸಿ ಕೊಲೆ ಮಾಡಿದ್ದೇನೆ. ಒಂದು ಬಾರಿ ಹಿಂದಿನಿಂದ, ಇನ್ನೊಂದು ಬಾರಿ ಬಲ ಭಾಗದಿಂದ ಗುಂಡು ಹಾರಿಸಿದ್ದೇನೆ ಎಂದು ಕಲಸ್ಕರ್ ಹೇಳಿಕೊಂಡಿದ್ದಾನೆ.

    ತಪ್ಪೊಪ್ಪಿಗೆ ಸಂದರ್ಭದಲ್ಲಿ ಆರೋಪಿಯೂ ಇನ್ನೂ ಭಯಾನಕವಾದ ಮಾಹಿತಿ ಬಹಿರಂಗ ಪಡಿಸಿದ್ದು, ನರೇಂದ್ರ ದಾಬೋಲ್ಕರ್ ಮಾತ್ರವಲ್ಲದೆ, ವಿಚಾರವಾದಿ ಗೋವಿಂದ್ ಪನ್ಸಾರೆ, ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯಲ್ಲಿಯೂ ಭಾಗಿಯಾಗಿರುವುದಾಗಿ ಶರದ್ ಕಲಾಸ್ಕರ್ ಬಾಯ್ಬಿಟ್ಟಿದ್ದಾನೆ.

    ಶರದ್ ಕಲಾಸ್ಕರ್‍ನನ್ನು ಕಳೆದ ವರ್ಷ ಕೊಲೆ ಹಾಗೂ ಪಿತೂರಿಗೆ ಸಂಬಂಧಿಸಿದಂತೆ ಬಂಧಿಸಲಾಗಿತ್ತು. ವಿಚಾರವಾದಿ ಹತ್ಯೆಯಲ್ಲಿ ಇನ್ನೂ ಹಲವು ಆರೋಪಿಗಳು ಭಾಗಿಯಾಗಿದ್ದು, ಮೊದಲ ಮೂವರು ವಿಚಾರವಾದಿಗಳು 2013 ಮತ್ತು 2015ರಲ್ಲಿ ಕೊಲೆಯಾಗಿದ್ದಾರೆ. ದಾಬೋಲ್ಕರ್ ಅವರನ್ನು ಆಗಸ್ಟ್ 2013ರಲ್ಲಿ ಪುಣೆಯಲ್ಲಿ, ಗೋವಿಂದ್ ಪನ್ಸಾರೆ ಅವರನ್ನು 2015ರ ಫೆಬ್ರವರಿಯಲ್ಲಿ ಮತ್ತು ಎಂ.ಎಂ.ಕಲಬುರ್ಗಿ ಅವರನ್ನು ಅದೇ ವರ್ಷ ಆಗಸ್ಟ್‍ನಲ್ಲಿ ಕೊಲೆ ಮಾಡಲಾಗಿತ್ತು.

    ಮಹಾರಾಷ್ಟ್ರ ಭದ್ರತಾ ನಿಗ್ರಹ ದಳ ಪಾಲ್ಘರ್ ಜಿಲ್ಲೆಯ ನಲ್ಲಸೋಪುರದ ಪಿಸ್ತೂಲು ಉತ್ಪಾದನಾ ಘಟಕದ ಮೇಲೆ ದಾಳಿ ನಡೆಸಿದ ವೇಳೆ ಶರದ್ ಕಲಸ್ಕರ್ ನನ್ನು ಬಂಧಿಸಿತ್ತು. ವಿಚಾರಣೆ ವೇಳೆ ಎಲ್ಲ ವಿಚಾರವಾದಿಗಳ ಹತ್ಯೆ ಕುರಿತು ವಿವಿಧ ರಾಜ್ಯಗಳ ಪೊಲೀಸರೊಂದಿಗೆ ಮಾಹಿತಿ ಹಂಚಿಕೊಂಡು ತನಿಖೆ ನಡೆಸಬೇಕಿತ್ತು. ಆದರೆ, ಅಧಿಕಾರಿಗಳು ಎಡವಿದ್ದರು. ನಂತರ ಕರ್ನಾಟಕ ಪೊಲೀಸರ ಜೊತೆ ಮಾಹಿತಿ ಹಂಚಿಕೊಂಡರು.

    ಕೆಲ ಬಲಪಂಥೀಯ ಸದಸ್ಯರನ್ನು ಸಂಪರ್ಕಿಸಿ, ಕ್ರ್ಯಾಶ್ ಕೋರ್ಸ್, ಬಂದೂಕುಗಳ ಬಳಕೆ ಹಾಗೂ ಬಾಂಬ್ ತಯಾರಿಸುವ ಪ್ರಕ್ರಿಯೆ ಕುರಿತು ಕಲಿತುಕೊಂಡೆ ಎಂದು ತಪ್ಪೊಪ್ಪಿಗೆ ಪತ್ರದಲ್ಲಿ ಕೊಲೆಗೆ ಕಾರಣಗಳನ್ನು ವಿವರಿಸುವಾಗ ಶರದ್ ಕಲಾಸ್ಕರ್ ತಿಳಿಸಿದ್ದಾನೆ ಎಂದು ವರದಿಯಾಗಿದೆ.

    ಏನು ಹೇಳಿದ್ದಾನೆ?
    ಎಲ್ಲ ವಿಚಾರವಾದಿಗಳ ಕೊಲೆಗೆ ವಿರೇಂದ್ರ ತಾವ್ಡೆ ಸೂತ್ರಧಾರಿ. ತಾವ್ಡೆ ಕೊಲೆ ಮಾಡುವಂತೆ ಯುವಕರನ್ನು ಪ್ರೇರೆಪಿಸುತ್ತಿದ್ದರು. ನಾವು ಕೆಲವು ದುಷ್ಟರನ್ನು ಮುಗಿಸಬೇಕಿದೆ ಎಂದು ವಿರೇಂದ್ರ ತಾವ್ಡೆ ಹೇಳಿದ್ದಾರು. ಅವರೇ ಎಲ್ಲ ರೀತಿಯ ಪಿತೂರಿ ಹೆಣೆದಿದ್ದು, ಯುವಕರನ್ನು ಕೊಲೆಗೆ ಪ್ರೇರೆಪಿಸಿದ್ದಾರೆ.

    ದಾಬೋಲ್ಕರ್ ತಲೆಗೆ ಗುಂಡು ಹಾರಿಸುವಂತೆ ತಾವ್ಡೆ ಅವರೇ ಹೇಳಿದ್ದರು. ಅದರಂತೆ ತಲೆಗೆ ಗುಂಡು ಹಾರಿಸಿದೆವು. ಹೀಗಾಗಿ ಅವರು ಸ್ಥಳದಲ್ಲೇ ಸಾವನ್ನಪ್ಪಿದರು. ದಾಬೋಲ್ಕರ್ ಬೆಳಗ್ಗೆ ವಾಕಿಂಗ್ ಹೋದಾಗ ತಡೆದು ತಲೆಗೆ ಗುಂಡು ಹಾರಿಸಿದೆವು

    ದಾಬೋಲ್ಕರ್ ಹತ್ಯೆಗೆ ದೇಸಿ ಬಂದೂಕು ಬಳಸಿದ್ದು, ತಲೆಗೆ ಹಿಂದಿನಿಂದ ಒಂದು ಬಾರಿ ಗುಂಡು ಹಾರಿಸಿದ ತಕ್ಷಣ ದಾಬೋಲ್ಕರ್ ಸೇತುವೆ ಮೇಲೆ ಬಿದ್ದರು. ಇನ್ನೊಂದು ಗುಂಡನ್ನು ಬಲದಿಂದ ಹೊಡೆಯಲೆತ್ನಿಸಿದೆ ಆದರೆ, ಅದು ಸಿಲುಕಿಕೊಂಡಿತು. ನಂತರ ಗುಂಡು ತೆಗೆದು ರಕ್ತದ ಮಡುವಿನಲ್ಲಿದ್ದ ದಾಬೋಲ್ಕರ್ ಮುಖದ ಬಲಗಣ್ಣಿನ ಭಾಗಕ್ಕೆ ಹೊಡೆದೆನು. ನಂತರ ಬಂದ ಎರಡನೇ ಶೂಟರ್ ಸಚಿನ್ ಅಂಡುರೆ ಕೂಡ ಗುಂಡು ಹಾರಿಸಿದ.

    ತಪ್ಪೊಪ್ಪಿಗೆ ಪ್ರಕಾರ ವೀರೇಂದ್ರ ತಾವ್ಡೆ ಅವರು ಕಲಾಸ್ಕರ್‍ನನ್ನು ಅಮೋಲ್ ಕಾಳೆಗೆ ಪರಿಚಯಿಸಿದ್ದಾನೆ. ಅಮೋಲ್ ಕಾಳೆಯನ್ನು ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಬಂಧಿಸಲಾಗಿದೆ. ಅಲ್ಲದೆ, ಗೌರಿ ಲಂಕೇಶ್ ಹತ್ಯೆ ಯೋಜನೆ ರೂಪಿಸಲು ನಡೆದ ಸಭೆಯಲ್ಲಿ ಭಾಗವಹಿಸಿದ್ದೆ.

    2016ರ ಆಗಸ್ಟ್‍ನಲ್ಲಿ ಬೆಳಗಾವಿಯಲ್ಲಿ ಹಿಂದೂ ಧರ್ಮದ ವಿರುದ್ಧ ಕೆಲಸ ಮಾಡುವ ಜನರನ್ನು ಹೆಸರಿಸಲಾಗಿತ್ತು. ಈ ಸಭೆಯಲ್ಲಿ ಗೌರಿ ಲಂಕೇಶ್ ಹೆಸರೂ ಸಹ ಕೇಳಿಬಂದಿತ್ತು. ಅಲ್ಲಿಯೇ ಗೌರಿ ಲಂಕೇಶ್ ಅವರನ್ನು ಕೊಲೆ ಮಾಡುವ ನಿರ್ಧಾರ ಕೈಗೊಳ್ಳಲಾಯಿತು. ನಂತರ 2017ರ ಆಗಸ್ಟ್‍ನಲ್ಲಿ ನಡೆದ ಸಭೆಯಲ್ಲಿ ಯೋಜನೆಗಳನ್ನು ಅಂತಿಮಗೊಳಿಸಿ, ಜವಾಬ್ದಾರಿಗಳನ್ನು ಹಸ್ತಾಂತರಿಸಲಾಯಿತು. ಸಭೆ ನಡೆದು ಒಂದು ತಿಂಗಳ ನಂತರ ಗೌರಿ ಲಂಕೇಶ್ ಅವರನ್ನು ಗುಂಡಿಕ್ಕಿ ಕೊಲ್ಲಲಾಯಿತು ಎಂದು ಹೇಳಿಕೆ ನೀಡಿದ್ದಾನೆ ಎಂದು ವರದಿಯಾಗಿದೆ.

    ವಿಚಾರಣೆ ವೇಳೆ ಇನ್ನೊಂದು ಭಯಾನಕ ಅಂಶವನ್ನು ಕಲಾಸ್ಕರ್ ಬಹಿರಂಗಪಡಿಸಿದ್ದು, ಬಾಂಬೆ ಹೈ ಕೋರ್ಟ್‍ನ ನಿವೃತ್ತ ನ್ಯಾಯಾಧೀಶ ನ್ಯಾ.ಬಿ.ಜಿ.ಭೋಸ್ಲೆ ಪಾಟೀಲ್ ಅವರನ್ನು ಗುರಿಯಾಗಿಸುವ ಯೋಜನೆ ಇದೆ ಎಂದು ತಿಳಿಸಿದ್ದಾನೆ.