Tag: cbi

  • ದಾಬೋಲ್ಕರ್ ಹತ್ಯೆ ಪ್ರಕರಣ: ಸನಾತನ ಸಂಸ್ಥೆ ವಕೀಲ ನ್ಯಾಯಾಂಗ ಬಂಧನಕ್ಕೆ

    ದಾಬೋಲ್ಕರ್ ಹತ್ಯೆ ಪ್ರಕರಣ: ಸನಾತನ ಸಂಸ್ಥೆ ವಕೀಲ ನ್ಯಾಯಾಂಗ ಬಂಧನಕ್ಕೆ

    ಪುಣೆ: ವಿಚಾರವಾದಿ ನರೇಂದ್ರ ದಾಬೋಲ್ಕರ್ ಹತ್ಯೆ ಪ್ರಕರಣದ ಆರೋಪಿ ಹಾಗೂ ಸನಾತನ ಸಂಸ್ಥಾದ ವಕೀಲ ಸಂಜೀವ್ ಪುನಲೇಕರ್ ಅವರನ್ನು ಪುಣೆ ನ್ಯಾಯಾಲಯ ಜುಲೈ 6ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

    ವಕೀಲ ಪುನಲೇಕರ್ ಅವರ ಲ್ಯಾಪ್‍ಟಾಪ್‍ನಲ್ಲಿ ಮಹತ್ವದ ದಾಖಲೆಗಳು ಸಿಕ್ಕಿದೆ. ಹೀಗಾಗಿ ಆರೋಪಿಯನ್ನು ವಿಚಾರಣೆ ನಡೆಸಲು ಕಸ್ಟಡಿಗೆ ನೀಡಬೇಕೆಂದು ಸಿಬಿಐ ಮನವಿ ಮಾಡಿತ್ತು. ಮನವಿಯ ಹಿನ್ನೆಲೆಯಲ್ಲಿ ವಿಶೇಷ ನ್ಯಾಯಾಧೀಶರಾದ ಆರ್.ಎಂ.ಪಾಂಡೆ ಅವರು ಜೂನ್ 23ರ ವರೆಗೆ ಸಿಬಿಐ ಕಸ್ಟಡಿಗೆ ನೀಡಿದ್ದರು.

    ವಿಚಾರಣೆ ಪೂರ್ಣಗೊಳಿಸಿದ ಬಳಿಕ ಸಿಬಿಐ ಜೂನ್ 23 ರಂದು ಮತ್ತೆ ಪುನಲೇಕರ್ ಅವರನ್ನು ವಿಚಾರಣೆ ನಡೆಸುವ ಅಗತ್ಯವಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿತ್ತು. ಈ ಹಿನ್ನೆಲೆಯಲ್ಲಿ ನ್ಯಾಯಾಧೀಶರು ಜುಲೈ 6ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದ್ದಾರೆ.

    ವಕೀಲ ಪುನಲೇಕರ್ ಹಾಗೂ ಈತನ ಸಹಚರ ವಿಕ್ರಮ್ ಭಾವೆಯನ್ನು ಮೇ 25ರಂದು ಸಿಬಿಐ ಬಂಧಿಸಿತ್ತು. ವಿಚಾರವಾದಿ ನರೇಂದ್ರ ದಾಬೋಲ್ಕರ್ ಅವರನ್ನು 2013ರ ಆ.20ರಂದು ಗುಂಡು ಹಾರಿಸಿ ಕೊಲೆ ಮಾಡಲಾಗಿತ್ತು.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

  • ಕೈಮುಗಿಯುತ್ತೇನೆ ಜನರ ಸಾಲ ತೀರಿಸಪ್ಪ – ಮನ್ಸೂರ್‌ಗೆ ಜಮೀರ್ ಮನವಿ

    ಕೈಮುಗಿಯುತ್ತೇನೆ ಜನರ ಸಾಲ ತೀರಿಸಪ್ಪ – ಮನ್ಸೂರ್‌ಗೆ ಜಮೀರ್ ಮನವಿ

    ಬೆಂಗಳೂರು: ಐಎಂಎ ವಂಚನೆ ಹಗರಣದ ಬಗ್ಗೆ ಶಾಸಕ ರೋಷನ್ ಬೇಗ್ ಅವರು ಪತ್ರಿಕಾ ಗೋಷ್ಠಿ ನಡೆಸಿದ ಬೆನ್ನಲ್ಲೇ ಸಚಿವ ಜಮೀರ್ ಅಹಮದ್ ಅವರು ಕೂಡ ಪತ್ರಿಕಾಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದ್ದಾರೆ. ತಾನು ಸಂಸ್ಥೆಯೊಂದಿಗೆ ಯಾವುದೇ ಬೇನಾಮಿ ಹಣದ ವ್ಯವಹಾರ ನಡೆಸಿಲ್ಲ. ಎಲ್ಲವೂ ದಾಖಲೆ ಇಟ್ಟುಕೊಂಡೆ ವ್ಯವಹಾರ ನಡೆಸಿದ್ದಾಗಿ ಸಚಿವ ಜಮೀರ್ ಅಹಮದ್ ಸ್ಪಷ್ಟನೆ ನೀಡಿದ್ದಾರೆ.

    ನಾನು ಐಎಂಎ ಸಂಸ್ಥೆಯಿಂದ ಯಾವುದೇ ಸಾಲವನ್ನು ಪಡೆದುಕೊಂಡಿಲ್ಲ. ನನ್ನ ಆಸ್ತಿಯನ್ನ ಸಂಸ್ಥೆಗೆ ಸಂಪೂರ್ಣವಾಗಿ ಮಾರಾಟ ಮಾಡಿದ್ದೇನೆ. ಈ ಮಾರಾಟದ ವಿಚಾರವಾಗಿ ನಾನು ಸಂಸ್ಥೆಯಿಂದ 5 ಕೋಟಿ ರೂ. ಮುಂಗಡ ಹಣ ಪಡೆದಿದ್ದೇನೆ. 9 ಕೋಟಿ 38 ಲಕ್ಷ ರೂ.ಗೆ ಮಾರಾಟ ಮಾಡಿದ್ದೇನೆ. ಇದರ ತೆರಿಗೆಯನ್ನು ಕೂಡ ಸರ್ಕಾರಕ್ಕೆ ನಾನು ಪಾವತಿ ಮಾಡಿದ್ದು, ಯಾವುದೇ ರೀತಿಯಲ್ಲಿ ವಂಚನೆ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು. ಅಲ್ಲದೇ ಬಡ ಜನರು ಸಂಸ್ಥೆಯಲ್ಲಿ ಹಣ ಹೂಡಿಕೆ ಮಾಡಿದ್ದು, ಕೈಮುಗಿಯುತ್ತೇನೆ ಬಂದು ಜನರ ಸಾಲ ತೀರಿಸಪ್ಪ ಎಂದು ಮನವಿ ಮಾಡಿದರು.

    ಇಲ್ಲಿ ಯಾರೂ ಹರಿಶ್ಚಂದ್ರರು ಇಲ್ಲ, ಯಾವುದೇ ರೀತಿ ತಪ್ಪು ಮಾಡಿದ್ದರೆ ಅದನ್ನು ಒಪ್ಪಿಕೊಳ್ಳಬೇಕು. ಆದರೆ ನನ್ನ ವಿಚಾರದಲ್ಲಿ ಮಾಧ್ಯಮಗಳಲ್ಲಿ ತಪ್ಪು ಮಾಹಿತಿ ಪ್ರಸಾರ ಆಗಿದ್ದು, ಈ ಬಗ್ಗೆ ಸ್ಪಷ್ಟನೆ ನೀಡುತ್ತಿದ್ದೇನೆ. ನಾನು ರಿಚ್ಮಂಡ್ ಟೌನ್ ನಲ್ಲಿ ನನ್ನ ಆಸ್ತಿಯನ್ನು ಮಾರಾಟ ಮಾಡಿದ್ದೇನೆ. ಈ ಕುರಿತು ಸೇಲ್ ಮಾಹಿತಿ ನನ್ನ ಬಳಿ ಇದೆ. ಮನ್ಸೂರ್ ಬಳಿ ಯಾವುದೇ ಹಣ ಸಾಲ ಪಡೆದಿಲ್ಲ, ನನ್ನ ಆಸ್ತಿಯನ್ನೇ ಮಾರಾಟ ಮಾಡಿದ್ದೇನೆ. ಎಲ್ಲವೂ ಪಾರದರ್ಶಕ ವ್ಯವಹಾರ ಮಾಡಿದ್ದೇನೆ ಎಂದರು.

    ರಾಜಕೀಯ ನಿವೃತ್ತಿ:
    ಸದ್ಯ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡ(ಎಸ್‍ಐಟಿ) ನಡೆಸುತ್ತಿದ್ದು, ತನಿಖೆಯನ್ನ ಸಿಬಿಐಗೆ ನೀಡಲು ಸಿಎಂ ಕುಮಾರಸ್ವಾಮಿ ಅವರು ಅಂತಿಮ ತೀರ್ಮಾನ ಮಾಡುತ್ತಾರೆ. ಸದ್ಯ ಎಸ್‍ಐಟಿ ತನಿಖೆಗೆ ನಾನು ಸಂಪೂರ್ಣ ಸಹಕಾರ ನೀಡುತ್ತೇನೆ. ನಮ್ಮ ಪಕ್ಷದ ನಾಯಕರಾದ ರೋಷನ್ ಬೇಗ್ ಅವರ ಹೆಸರು ಕೇಳಿ ಬಂದಿರುವರಿಂದ ಆ ಕುರಿತು ತನಿಖೆ ಆಗುತ್ತದೆ. ನನ್ನ ಬಗ್ಗೆಯೂ ತನಿಖೆ ನಡೆಲಿದೆ. ನಾವು ತನಿಖೆಗೆ ಸಹಕಾರ ನೀಡುತ್ತೇವೆ. ಯಾವುದೇ ಆರೋಪ ಸತ್ಯಾಂಶ ತನಿಖೆಯ ಬಳಿಕಷ್ಟೇ ತೀರ್ಮಾನ ಮಾಡಲು ಸಾಧ್ಯ ಎಂದರು.

    ಇದೇ ವೇಳೆ ಕಳೆದ ತಿಂಗಳ 26ನೇ ರಂದು ಮನ್ಸೂರ್ ಅವರನ್ನ ಭೇಟಿ ಮಾಡಿ ಮಾತನಾಡಿಸಿದ್ದೆ ಎಂದ ಅವರು, ಹೂಡಿಕೆ ಹಣ ಜನರಿಗೆ ಹಿಂದಿರುಗಿಸುವ ಬಗ್ಗೆ ಚರ್ಚೆ ನಡೆಸಿದ್ದೆ. ಆದರೆ ಆ ವೇಳೆ ಹಬ್ಬದ ಬಳಿಕ ಹಣ ಮರುಪಾವತಿ ಮಾಡುತ್ತೇನೆ ಎಂದು ಹೇಳಿದ್ದರು. ಆದರೆ ಆ ವೇಳೆಗೆ ವಂಚನೆ ಬಗ್ಗೆ ಯಾವುದೇ ಮುನ್ಸೂಚನೆ ಇರಲಿಲ್ಲ. ಅಲ್ಲದೇ ಅವರು ಹೀಗೆ ಓಡಿ ಹೋಗುತ್ತಾರೆ ಎಂದು ತಿಳಿದಿರಲಿಲ್ಲ. ಅದೇ ದಿನ ಸಿಸಿಬಿ ಅಲೋಕ್ ಕುಮಾರ್ ಅವರು ಚರ್ಚೆ ನಡೆಸಿದ್ದರು ಎಂಬ ಮಾಹಿತಿ ಇದೆ. ನಾನು ಮನ್ಸೂರ್ ನಿಂದ ಸಾಲ ಪಡೆದಿರುವುದು ಸಾಬೀತು ಮಾಡಿದರೆ ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ ಎಂದರು.

    ಬೇಗ್ ನಮ್ಮ ನಾಯಕರು:
    ಜನರು ಹಣ ಕಟ್ಟಿ ಸಂಕಷ್ಟ ಎದುರಿಸುತ್ತಿದ್ದಾರೆ. ಆದ್ದರಿಂದ ಬಡವರ ಹಣ ಹಿಂದಿರುಗುವಂತೆ ಆತನಿಗೆ ಕೈ ಮುಗಿದು ಕೇಳಿ ಕೊಳ್ಳುತ್ತಿದ್ದೇನೆ ಎಂದು ಮಾಧ್ಯಮದ ಎದುರೇ ಕೈ ಮುಗಿದರು. ಅಲ್ಲದೇ ಮನ್ಸೂರ್ ಗೆ ಆಸ್ತಿ ಮಾರಾಟ ಮಾಡಿದ್ದಕ್ಕೆ ಪಶ್ಚಾತ್ತಾಪ ಇದೆ. ಅಲ್ಲದೇ ರೋಷನ್ ಬೇಗ್ ಹಾಗೂ ನನ್ನ ನಡುವೆ ಯಾವುದೇ ಅಸಮಾಧಾನ ಇಲ್ಲ. ನಾವು ಆತ್ಮೀಯರಿದ್ದೇವೆ ಎಂದು ತಿಳಿಸಿದರು.

  • ಹಣ ಕಳೆದುಕೊಂಡವರಿಗಾಗಿ ನನ್ನ ಹೃದಯ ಬಡಿದುಕೊಳ್ಳುತ್ತಿದೆ: ಶಾಸಕ ಬೇಗ್

    ಹಣ ಕಳೆದುಕೊಂಡವರಿಗಾಗಿ ನನ್ನ ಹೃದಯ ಬಡಿದುಕೊಳ್ಳುತ್ತಿದೆ: ಶಾಸಕ ಬೇಗ್

    – ಐಎಂಎ ಸಿಬಿಐ ತನಿಖೆಗೆ ನೀಡಲು ಆಗ್ರಹ

    ನವದೆಹಲಿ: ಐಎಂಎ ಪ್ರಕರಣದಲ್ಲಿ ಬಿಡುಗಡೆ ಆಗಿರುವ ಆಡಿಯೋದಲ್ಲಿ ನನ್ನ ಹೆಸರನ್ನು ಪ್ರಸ್ತಾಪ ಮಾಡಲಾಗಿದ್ದು, ಈ ಬಗ್ಗೆ ತನಿಖೆ ನಡೆಸಲು ಸಿಬಿಐಗೆ ನೀಡಲು ನಾನು ಸಿಎಂ ಕುಮಾರಸ್ವಾಮಿ ಅವರು ಒತ್ತಾಯ ಮಾಡುತ್ತೇನೆ. ಕೇವಲ ಐಎಂಎ ಅಲ್ಲದೇ ಕ್ಯಾಪಿಟಲ್, ಅಲಾ, ಅಜ್ಮೇರಾ, ಅಂಬಿಡೆಂಟ್ ಸೇರಿದಂತೆ ಇತರೇ ಸಂಸ್ಥೆಗಳ ಮೇಲೂ ತನಿಖೆ ನಡೆಯಬೇಕಿದೆ ಎಂದು ಶಾಸಕ ರೋಷನ್ ಬೇಗ್ ಆಗ್ರಹಿಸಿದ್ದಾರೆ.

    ಪ್ರೆಸ್‍ಕ್ಲಬ್‍ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಯಾವನೋ ಒಬ್ಬ ಫ್ರಾಡ್ ನನ್ನ ಹೆಸರು ಹೇಳಿದ ತಕ್ಷಣ ಆರೋಪ ಆಗುತ್ತದೆ ಅಷ್ಟೇ. ಆರೋಪ ಮಾಡಿ ಜನರಿಗೆ ಮೋಸ ಮಾಡಿ ಪರಾರಿಯಾಗಿರುವ ಆತನ ಬಗ್ಗೆ ಸಂಪೂರ್ಣ ತನಿಖೆ ನಡೆಸುವುದು ಅಗತ್ಯ. ಆತನನ್ನು ಕೂಡಲೇ ಪತ್ತೆ ಮಾಡಿ ತನಿಖೆ ನಡೆಸಬೇಕಿದೆ. ಹಗರಣ ಮಾಡಿದಾತ 400 ಕೋಟಿ ರೂ. ಆರೋಪ ಮಾಡಿ ಓಡಿ ಹೋದರೆ ಎಷ್ಟು ಸಮಂಜಸ. ಅಲ್ಲದೇ ಇಡೀ ಪ್ರಕರಣವನ್ನು ಸಿಬಿಐಗೆ ವಹಿಸಿದರೆ ಹೆಚ್ಚಿನ ಅಧಿಕಾರ ಇರುವುದಿಂದ ತನಿಖೆ ಸಂಪೂರ್ಣವಾಗಿ ವೇಗವಾಗಿ ನಡೆಯುತ್ತದೆ ಎಂದು ಹೇಳಿದರು.

    ನನಗೆ ಐಎಂಎ ಸಂಸ್ಥೆಯೊಂದಿಗೆ ಯಾವುದೇ ಸಂಪರ್ಕ ಇಲ್ಲ. ನನ್ನ ಕ್ಷೇತ್ರದಲ್ಲಿ ನಾನು ಓದಿದ ಶಾಲೆಯನ್ನ ಅಭಿವೃದ್ಧಿ ಪಡಿಸಲು ಮುಂದಾದ ವೇಳೆ ಈ ಸಂಸ್ಥೆ ಅಭಿವೃದ್ಧಿ ಪಡಿಸಲು ಮುಂದಾಗಿತ್ತು. ಸರ್ಕಾರಿ ಶಾಲೆಯನ್ನು ಅಭಿವೃದ್ಧಿ ಪಡಿಸಲು ಸಹಕಾರ ನೀಡಿದೆ ಅಷ್ಟೇ. ಈ ಕಾರ್ಯಕ್ಕೆ ಸಿಎಂ ಕುಮಾರಸ್ವಾಮಿ ಅವರು ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಇದು ಎಲ್ಲರಿಗೂ ತಿಳಿದಿದೆ ಎಂದು ಸ್ಪಷ್ಟಪಡಿಸಿದರು.

    ಸದ್ಯ ಹಗರಣದಲ್ಲಿ ಮೋಸ ಹೋಗಿ ಪರದಾಡುತ್ತಿರುವವರ ಹಣ ಅವರಿಗೆ ಕೊಡಿಸುವ ಕಾರ್ಯ ಮೊದಲು ಆಗಬೇಕು. ಪ್ರಕರಣ ಸತ್ಯಾಂಶ ಹೊರ ಬರಬೇಕು ಎಂದರೆ ಆತ ನಾಪತ್ತೆಯಾಗುವ ಮುನ್ನ 48 ಗಂಟೆಗಳ ಅವಧಿಯಲ್ಲಿ ಯಾರಿಗೆ ಕಡೆ ಮಾಡಿದ್ದ. ಆತನ ಮೊಬೈಲ್ ವಾಟ್ಸಾಪ್ ಗೆ ಯಾವ ಸಂದೇಶಗಳು ಬಂದಿತ್ತು. ಅಲ್ಲದೇ ಯಾರೊಂದಿಗೆ ಆತ ಸಂಪರ್ಕದಲ್ಲಿ ಇದ್ದ ಎಂಬುದರ ಮಾಹಿತಿ ತನಿಖೆ ವೇಳೆ ಸಿಗಲಿದೆ. ನಾನು ಪ್ರಕರಣ ವಿಚಾರಣೆ ಸಂಬಂಧ ಎಸ್‍ಐಟಿಗೆ ಸಂಪೂರ್ಣ ಸಹಕಾರ ನೀಡುತ್ತೇನೆ. ನನ್ನ ಹೃದಯ ಮೋಸ ಹೋದವರ ಪರ ಬಡಿದುಕೊಳ್ಳುತ್ತಿದೆ ಎಂದರು.

    ಬೆಳಗಾವಿಯಲ್ಲಿಯೂ ಇಂತಹದ್ದೆ ಪ್ರಕರಣ ನಡೆದಿತ್ತು, ಇದರಲ್ಲಿ ಕೆಲ ಮಂದಿ ನಾಪತ್ತೆಯಾಗಿದ್ದರೆ ಕೆಲವರು ಜಾಮೀನು ಪಡೆದು ಹೊರಗಿದ್ದರೆ. ಯಾವುದೇ ಪ್ರಕರಣವಾದರೂ ಹಣ ಕಳೆದುಕೊಂಡ ಜನರಿಗೆ ಅದಷ್ಟು ಬೇಗ ಹಣ ವಾಪಸ್ ಮಾಡಬೇಕು. ವಂಚನೆ ಮಾಡಿರುವ ವ್ಯಕ್ತಿಯ ಬ್ಯಾಂಕ್ ಖಾತೆ ಜಪ್ತಿ ಮಾಡಬೇಕಿದೆ. ನಾನು ಯಾವಾಗ ರಾಜ್ಯ ಕಾಂಗ್ರೆಸ್ ನಾಯಕರ ವಿರುದ್ಧ ಮಾತನಾಡಿದ್ದೆನೋ ಆಗಲೇ ನನ್ನ ಮೇಲೆ ಆರೋಪ ಬಂದಿದೆ. ನಾನು ನನ್ನ ಕುಟುಂಬದ ಯಾವುದೇ ಸದಸ್ಯರು ಸಂಸ್ಥೆಯೊಂದಿಗೆ ವ್ಯವಹಾರ ನಡೆಸಿಲ್ಲ ಎಂದು ತಿಳಿಸಿದರು.

  • ಲಾಲೂಗೆ ಜೈಲೇ ಗತಿ – ಜಾಮೀನು ಅರ್ಜಿ ತಿರಸ್ಕರಿಸಿದ ಸುಪ್ರೀಂ

    ಲಾಲೂಗೆ ಜೈಲೇ ಗತಿ – ಜಾಮೀನು ಅರ್ಜಿ ತಿರಸ್ಕರಿಸಿದ ಸುಪ್ರೀಂ

    ನವದೆಹಲಿ: ಬಿಹಾರ ಮಾಜಿ ಸಿಎಂ ಲಾಲೂ ಪ್ರಸಾದ್ ಯಾದವ್ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ.

    ಬಹುಕೋಟಿ ಮೇವು ಹಗರಣದಲ್ಲಿ ಜೈಲು ಪಾಲಾಗಿರುವ ಲಾಲು ಪ್ರಸಾದ್ ಯಾದವ್ ಅವರ ಜಾಮೀನಿಗೆ ಸಿಬಿಐ ಆಕ್ಷಪಣೆ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ನ್ಯಾಯಪೀಠ ಲಾಲೂಗೆ ಜಾಮೀನು ನೀಡಲು ನಿರಾಕರಿಸಿದೆ.

    ಮೇವು ಹಗರಣದಲ್ಲಿ ಭಾಗಿಯಾಗಿದ್ದ ಆರ್ ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾಧವ್‍ರಿಗೆ 25 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಲಾಗಿದೆ. ಈ ಸಂಬಂಧ ಸುಪ್ರೀಂಕೋರ್ಟ್ ಗೆ ಲಾಲೂ ಪ್ರಸಾದ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.

    ಲಾಲೂ ಪರ ಹಾಜರಾಗಿದ್ದ ಹಿರಿಯ ವಕೀಲ ಕಪಿಲ್ ಸಿಬಲ್, ಯಾಕೆ ಬಿಡುಗಡೆ ಮಾಡುತ್ತಿಲ್ಲ. ಜಾಮೀನು ಮಂಜೂರು ಮಾಡಿದರೆ ಏನು ಸಮಸ್ಯೆಯಾಗುತ್ತದೆ? ಈ ಪ್ರಕರಣ ಜಾಮೀನು ಸಿಗುವ ಕೇಸ್ ಆಗಿದೆ ಎಂದು ನ್ಯಾಯಾಧೀಶರ ಮುಂದೆ ಮನವಿ ಮಾಡಿದರು.

    ಆಕ್ಷೇಪಣೆ ಯಾಕೆ?
    ಅನಾರೋಗ್ಯದ ಹಿನ್ನೆಲೆಯಲ್ಲಿ ಲಾಲೂ ಪ್ರಸಾದ್ ಅವರಿಗೆ ಜಾಮೀನು ನೀಡಿದರೆ ಅವರು ಲೋಕಸಭಾ ಚುನಾವಣೆಯ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ಚುನಾವಣೆ ಪ್ರಚಾರದಲ್ಲಿ ಭಾಗಿಯಾಗಲು ಅನಾರೋಗ್ಯ ನೆಪ ಮಾಡಿಕೊಂಡು ಜಾಮೀನು ಕೋರುತ್ತಿದ್ದಾರೆ ಎಂದು ಸಿಬಿಐ ವಾದಿಸಿತ್ತು. ಈ ಹಿಂದೆ ಲಾಲೂ ಪ್ರಸಾದ್ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ರಾಂಚಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾಗ ಹಲವು ರಾಜಕೀಯ ವ್ಯಕ್ತಿಗಳು ಭೇಟಿ ಮಾಡಿದ್ದರು. ಹೀಗಾಗಿ ಅವರಿಗೆ ಜಾಮೀನು ಮಂಜೂರು ಮಾಡಬಾರದು ಎಂದು ಸಿಬಿಐ ಆಕ್ಷೇಪಣೆ ಸಲ್ಲಿಸಿತ್ತು.

    ಏನಿದು ಪ್ರಕರಣ?
    20 ವರ್ಷಗಳ ಹಿಂದೆ ಬಿಹಾರದಲ್ಲಿ ಪಶುಗಳಿಗೆ ಮೇವು ಹಾಗೂ ಔಷಧಿ ಪೂರೈಸುವುದಾಗಿ ಚಾಯ್ಬಾಸ ಜಿಲ್ಲೆಯ ಸರ್ಕಾರಿ ಖಜಾನೆಯಿಂದ ಹಣವನ್ನು ಬಿಡುಗಡೆ ಮಾಡಲಾಗಿತ್ತು. ಜಾನುವಾರುಗಳಿಗೆ ಮೇವು ಹಾಗೂ ಔಷಧ ಒದಗಿಸುವ ನೆಪದಲ್ಲಿ ಅಧಿಕಾರಿಗಳು, ರಾಜಕಾರಣಿಗಳು ಸರ್ಕಾರದ ಹಣವನ್ನು ಲೂಟಿ ಮಾಡಿದ್ದರು. 900 ಕೋಟಿ ರೂ. ಮೊತ್ತದ ಮೇವು ಹಗರಣ ಸಂಬಂಧ ಒಟ್ಟು 53 ಪ್ರಕರಣಗಳು ದಾಖಲಾಗಿದ್ದವು. ಅದರಲ್ಲಿ 44 ಪ್ರಕರಣಗಳ ತೀರ್ಪು ಈಗಾಗಲೇ ಹೊರಬಿದ್ದಿದೆ. ಲಾಲು ಪ್ರಸಾದ್ ಯಾದವ್ ವಿರುದ್ಧ ಆರು ಪ್ರಕರಣಗಳು ದಾಖಲಾಗಿವೆ. 4 ಪ್ರಕರಣದಲ್ಲಿ ಲಾಲೂ ದೋಷಿಯಾಗಿದ್ದು, ಒಟ್ಟು 25 ವರ್ಷ ಕಾಲ ಲಾಲೂ ಪ್ರಸಾದ್ ಯಾದವ್ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ.

  • ಲಂಚ ಪಡೆಯೋವಾಗ ಸಿಬಿಐ ಅಧಿಕಾರಿಗಳ ಬಲೆಗೆ ಬಿದ್ದ ಐಟಿ ಅಧಿಕಾರಿ

    ಲಂಚ ಪಡೆಯೋವಾಗ ಸಿಬಿಐ ಅಧಿಕಾರಿಗಳ ಬಲೆಗೆ ಬಿದ್ದ ಐಟಿ ಅಧಿಕಾರಿ

    ಬೆಂಗಳೂರು: ಗುತ್ತಿಗೆದಾರರಿಂದ ಹಣ ಸ್ವೀಕರಿಸುವಾಗ ಆದಾಯ ತೆರಿಗೆ ಇಲಾಖೆಯ ಅಧಿಕಾರಿಯೊಬ್ಬರು ಸಿಬಿಐ ಅಧಿಕಾರಿಗಳ ಬಲೆಗೆ ಬಿದ್ದಿರುವ ಘಟನೆ ನಗರದ ಜಯನಗರ ಸ್ಟಾರ್ ಬಕ್ಸ್ ಕಾಫಿಯಲ್ಲಿ ನಡೆದಿದೆ.

    ಆದಾಯ ತೆರಿಗೆ ಇಲಾಖೆ ಅಧಿಕಾರಿ ನಾಗೇಶ್ ಸಿಬಿಐ ಬಲೆಗೆ ಬಿದ್ದ ಅಧಿಕಾರಿಯಾಗಿದ್ದು, ಗುತ್ತಿಗೆದಾರರಿಂದ 40 ಲಕ್ಷ ರೂ. ಹಣ ಬೇಡಿಕೆ ಇಟ್ಟು 14 ಲಕ್ಷ ರೂ. ಸ್ವೀಕರಿಸುವಾಗ ಬಲೆಗೆ ಬಿದಿದ್ದಾರೆ.

    ಏನಿದು ಪ್ರಕರಣ: ಗುತ್ತಿಗೆದಾರ ಶ್ರೀನಿವಾಸ್ ಎಂಬುವರ ಮನೆ ಮೇಲೆ ಮಾರ್ಚ್ 6 ರಂದು ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ಅವರ ಮನೆಯಲ್ಲಿ ಯಾವುದೇ ದಾಖಲೆ ಸಿಕ್ಕಿರಲಿಲ್ಲ ಎನ್ನಲಾಗಿದೆ. ಆದರೆ ಮನೆಯಲ್ಲಿ ಸಿಕ್ಕ 40 ಲಕ್ಷ ರೂ. ಚೆಕ್ ಒಂದರ ವಿಚಾರಣೆ ನೆಪದಲ್ಲಿ ಅವರನ್ನು ಐಟಿ ಕಚೇರಿ ಆಗಮಿಸಲು ತಿಳಿಸಿದ್ದರು. ಆ ಬಳಿಕ ಕೇಸ್ ಖುಲಾಸೆ ಗೊಳಿಸಲು 40 ಲಕ್ಷಕ್ಕೆ ಬೇಡಿಕೆ ಇಟ್ಟು 14 ಲಕ್ಷ ರೂ. ಪಡೆಯಲು ಕಾಫಿ ಕೆಫೆಗೆ ಆಗಮಿಸಿದ್ದರು.

    ಐಟಿ ಅಧಿಕಾರಿ ಹಣಕ್ಕೆ ಬೇಡಿಕೆ ಇಟ್ಟ ಕುರಿತು ಗುತ್ತಿಗೆ ದಾರ ಶ್ರೀನಿವಾಸ್ ಸ್ನೇಹಿತನ ಸಲಹೆ ಮೇರೆಗೆ ಸಿಬಿಐ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಈ ಮಾಹಿತಿ ಅನ್ವಯ ಸ್ಥಳಕ್ಕೆ ಬಂದ ಸಿಬಿಐ ಅಧಿಕಾರಿಗಳು ಹಣ ಪಡೆಯುವ ವೇಳೆಯೇ ನಾಗೇಶ್ ರನ್ನು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಇಂದು ಸಂಜೆ ಘಟನೆ ನಡೆದಿದ್ದು, ನಾಗೇಶ್‍ರನ್ನ ಹೆಚ್ಚಿನ ವಿಚಾರಣೆ ನಡೆಸಿದ್ದಾರೆ. ಸಿಬಿಐ ಪೊಲೀಸರ ಮಾಹಿತಿ ಅನ್ವಯ ಮತ್ತೊಬ್ಬ ಐಟಿ ಅಧಿಕಾರಿ ಕೂಡ ಸ್ಥಳಕ್ಕೆ ಆಗಮಿಸಬೇಕಾಗಿತ್ತು. ಆದರೆ ಅಂತಿಮ ಕ್ಷಣದಲ್ಲಿ ಆತ ಬಂದಿಲ್ಲ ಎನ್ನಲಾಗಿದೆ. ಈ ಬಗ್ಗೆಯೂ ಸಿಬಿಐ ಅಧಿಕಾರಿಗಳು ಹೆಚ್ಚಿನ ವಿಚಾರಣೆ ನಡೆಸಿದ್ದಾರೆ.

  • ಸಿಬಿಐ ನಾಗೇಶ್ವರ್ ರಾವ್‍ಗೆ 1 ಲಕ್ಷ ರೂ. ದಂಡ – ಕೋರ್ಟ್ ಮೂಲೆಯಲ್ಲಿ ಕೂರುವ ಶಿಕ್ಷೆ

    ಸಿಬಿಐ ನಾಗೇಶ್ವರ್ ರಾವ್‍ಗೆ 1 ಲಕ್ಷ ರೂ. ದಂಡ – ಕೋರ್ಟ್ ಮೂಲೆಯಲ್ಲಿ ಕೂರುವ ಶಿಕ್ಷೆ

    ನವದೆಹಲಿ: ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಸಿಬಿಐ ಹಿರಿಯ ಅಧಿಕಾರಿಯಾಗಿರುವ ಎಂ ನಾಗೇಶ್ವರ್ ರಾವ್ ಅವರಿಗೆ ಸುಪ್ರೀಂ ಕೋರ್ಟ್ ಒಂದು ಲಕ್ಷ ರೂ. ದಂಡ ವಿಧಿಸಿ ಕೋರ್ಟ್ ಮೂಲೆಯಲ್ಲಿ ಕೂರುವ ಶಿಕ್ಷೆಯನ್ನು ನೀಡಿದೆ.

    ಬಿಹಾರ ವಸತಿ ನಿಲಯದಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ವಿಚಾರಣೆ ನಡೆಸುತ್ತಿದ್ದ ಅಧಿಕಾರಿಯನ್ನು ವರ್ಗಾವಣೆ ಮಾಡಿದ್ದ ಎಂ ನಾಗೇಶ್ವರ್ ಅವರ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಾಗಿತ್ತು. ಇದರ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ನೇತೃತ್ವದ ಪೀಠ ಪ್ರಕರಣದಲ್ಲಿ ನಾಗೇಶ್ವರ್ ರಾವ್ ಮತ್ತು ಹೆಚ್ಚುವರಿ ಕಾನೂನು ಸಲಹೆಗಾರ ಭಾಸುರಾಮ್ ತಪ್ಪಿಸ್ಥರು ಎಂದು ತೀರ್ಪು ನೀಡಿದೆ.

    ವಿಚಾರಣೆಯ ವೇಳೆ ಎಂ ನಾಗೇಶ್ವರ್ ರಾವ್ ಅವರ ಕ್ಷಮೆಯನ್ನು ತಿರಸ್ಕರಿಸಿದ ನ್ಯಾಯಮೂರ್ತಿಗಳು, 30 ದಿನಗಳ ಕಾಲ ಜೈಲು ಶಿಕ್ಷೆ ನೀಡುವ ಬಗ್ಗೆ ಎಚ್ಚರಿಕೆ ನೀಡಿದ್ದರು. ಆದರೆ ನಾಗೇಶ್ವರ್ ರಾವ್ ಸೋಮವಾರವೇ ಬೇಷರತ್ ಕ್ಷಮೆ ಕೇಳಿದ ಪರಿಣಾಮ ಕೋರ್ಟ್ ಹಾಲಿನಲ್ಲಿ ಕುಳಿತುಕೊಳ್ಳುವ ಶಿಕ್ಷೆ ವಿಧಿಸಿದ್ದಾರೆ.

    ಸಿಬಿಐ ಹಂಗಾಮಿ ನಿರ್ದೇಶಕರಾಗಿದ್ದ ವೇಳೆ ನಾಗೇಶ್ವರ್ ರಾವ್ ಅವರು, ಸುಪ್ರೀಂ ಆದೇಶವಿದ್ದರೂ ಕೂಡ ಬಿಹಾರದ ವಸತಿ ನಿಲಯದಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ವಿಚಾರಣೆ ನಡೆಸುತ್ತಿದ್ದ ಸಿಬಿಐ ಮಾಜಿ ಜಂಟಿ ನಿರ್ದೇಶಕ ಎಕೆ ಶರ್ಮಾರನ್ನು ಜನವರಿ 18 ರಂದು ವರ್ಗಾವಣೆ ಮಾಡಿದ್ದರು. ಇದು ನ್ಯಾಯಾಂಗ ನಿಂದನೆ ಎಂದು ಸುಪ್ರೀಂ ಪರಿಗಣಿಸಿತ್ತು. ವಿಚಾರಣೆಯ ವೇಳೆ ಕೋರ್ಟ್ ಬಿಹಾರ ವಸತಿ ನಿಲಯದಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ತನಿಖೆ ನಡೆಸುತ್ತಿರುವ ಯಾವೊಬ್ಬ ಅಧಿಕಾರಿಯನ್ನು ತನ್ನ ಗಮನಕ್ಕೆ ಬಾರದೇ ವರ್ಗಾವಣೆ ಮಾಡುವಂತಿಲ್ಲ ಎಂದು ಕೋರ್ಟ್ ಸಿಬಿಐಗೆ ಸೂಚಿಸಿದೆ.

    ಈ ಪ್ರಕರಣದಲ್ಲಿ ಉದ್ದೇಶ ಪೂರ್ವಕವಾಗಿ ತಪ್ಪು ಮಾಡಿಲ್ಲ. ಕೆಲಸ ಒತ್ತಡದಿಂದ ಹಾಗು ನಿರ್ಧಾರದ ಪ್ರಕ್ರಿಯೆಯಲ್ಲಿನ ಲೋಪದಿಂದ ಘಟನೆ ನಡೆದಿದೆ ಎಂದು ಸ್ಪಷ್ಟನೆ ನೀಡಿದ್ದರು. ಅಲ್ಲದೇ ತಮ್ಮ ಆದೇಶದಲ್ಲಿ ಸುಪ್ರೀಂ ಕೋರ್ಟ್ ನಿರ್ದೇಶನ ಉಲ್ಲಂಘಿಸುವ ಉದ್ದೇಶ ಇರಲಿಲ್ಲ ಸಿಬಿಐ ಪರವಾಗಿ ಅಟಾರ್ನಿ ಜನರಲ್ ಕೆಕೆ ವೇಣುಗೋಪಾಲ್ ವಾದಿಸಿದ್ದರು.

    ಸಿಬಿಐ ನಿರ್ದೇಶಕರಾಗಿದ್ದ ಅಲೋಕ್ ವರ್ಮಾ ಮತ್ತು ವಿಶೇಷ ನಿರ್ದೇಶಕರಾಗಿದ್ದ ರಾಕೇಶ್ ಅಸ್ಥಾನಾ ಅವರ ನಡುವಿನ ಕಿತ್ತಾಟದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇಬ್ಬರನ್ನು ಸೆವೆಯಿಂದ ಮುಕ್ತಿಗೊಳಿಸಿ ಎಂ ನಾಗೇಶ್ವರ್ ಅವರನ್ನು ಹಂಗಾಮಿ ನಿರ್ದೇಶಕರನ್ನಾಗಿ ನೇಮಿಸಿತ್ತು. ಈ ಸಂದರ್ಭದಲ್ಲಿ ಹಲವು ಅಧಿಕಾರಿಗಳನ್ನು ನಾಗೇಶ್ವರ್ ರಾವ್ ಹಲವು ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಧರಣಿ ನಡೆಸಿ ಪ್ರಜಾಪ್ರಭುತ್ವಕ್ಕೆ ಅವಮಾನ- ದೀದಿಗೆ ಯೋಗಿ ಟಾಂಗ್

    ಧರಣಿ ನಡೆಸಿ ಪ್ರಜಾಪ್ರಭುತ್ವಕ್ಕೆ ಅವಮಾನ- ದೀದಿಗೆ ಯೋಗಿ ಟಾಂಗ್

    – ಟಿಎಂಸಿಯಿಂದ ಭ್ರಷ್ಟ ಅಧಿಕಾರಿಗಳ ರಕ್ಷಣೆ

    ಕೋಲ್ಕತ್ತಾ: ಸಿಎಂ ಸ್ಥಾನದಲ್ಲಿದ್ದು ಧರಣಿ ನಡೆಸುವುದಕ್ಕಿಂತ ಮತ್ತೊಂದು ಅವಮಾನ ಪ್ರಜಾಪ್ರಭುತ್ವದಲ್ಲಿಲ್ಲ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕಿಡಿಕಾರಿದ್ದಾರೆ.

    ಹೆಲಿಕಾಪ್ಟರ್ ಲ್ಯಾಂಡಿಂಗ್‍ಗೆ ಪಶ್ಚಿಮ ಬಂಗಾಳ ಸರ್ಕಾರ ಅನುಮತಿ ನೀಡದ ಹಿನ್ನೆಲೆಯಲ್ಲಿ ಯೋಗಿ ಆದಿತ್ಯನಾಥ್ ಅವರು ಇಂದು ರಸ್ತೆ ಮಾರ್ಗವಾಗಿ ರ‍್ಯಾಲಿ ನಡೆಯುತ್ತಿದ್ದ ಪುರುಲಿಯಾ ತಲುಪಿದರು. ಅಲ್ಲಿಂದ ಬಂಕುರಾ ಬೃಹತ್ ಸಮಾವೇಶಕ್ಕೂ ರಸ್ತೆ ಮಾರ್ಗವಾಗಿಯೇ ತೆರಳಿದರು. ಈ ಎರಡು ಸಮಾವೇಶದಲ್ಲಿಯೂ ಯೋಗಿ ಆದಿತ್ಯನಾಥ್, ಮಮತಾ ಬ್ಯಾನರ್ಜಿ ಅವರ ವಿರುದ್ಧ ಅಸಮಾಧಾನ ಹೊರಹಾಕಿದರು.

    ಮಮತಾ ಬ್ಯಾನರ್ಜಿ ಅಧಿಕಾರ ದುರ್ಬಳಕೆ ಮಾಡಿಕೊಂಡು ಭ್ರಷ್ಟ ಅಧಿಕಾರಿಯನ್ನು ರಕ್ಷಿಸುತ್ತಿದ್ದಾರೆ. ಧರಣಿ ನಡೆಸಿ ಕೋಲ್ಕತ್ತಾ ಪೊಲೀಸ್ ಆಯುಕ್ತ ರಾಜೀವ್ ಕುಮಾರ್ ಅವರನ್ನು ಪಾರು ಮಾಡಲು ಮಮತಾ ಬ್ಯಾನರ್ಜಿ ಯತ್ನಿಸುತ್ತಿದ್ದಾರೆ. ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸರ್ಕಾರವು ಭ್ರಷ್ಟಾಚಾರಕ್ಕೆ ಬೆಂಬಲ ನೀಡುತ್ತಿದೆ. ಭ್ರಷ್ಟಾಚಾರಕ್ಕೆ ಬೆಂಬಲ ನೀಡುವ ಸರ್ಕಾರವನ್ನು ಹೊಡೆದು ಹಾಕಲು ಬಿಜೆಪಿಗೆ ಬೆಂಬಲ ನೀಡಿ ಎಂದು ಸಮಾವೇಶದಲ್ಲಿ ಸೇರಿದ್ದ ಜನರಿಗೆ ಯೋಗಿ ಆದಿತ್ಯನಾಥ್ ಕೇಳಿಕೊಂಡರು.

    ಸಿಬಿಐ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡಿದ್ದು ಈ ಹಿಂದಿನ ಕಾಂಗ್ರೆಸ್ ಸರ್ಕಾರವೇ ಹೊರತು, ಬಿಜೆಪಿಯಲ್ಲ. ಸಿಬಿಐ ವಿಚಾರಣೆಗೆ ಸಹಕರಿಸಬೇಕು ಅಂತ ಸುಪ್ರೀಂಕೋರ್ಟ್ ರಾಜೀವ್ ಕುಮಾರ್ ಅವರಿಗೆ ಆದೇಶ ನೀಡಿದೆ. ಹೀಗಾಗಿ ಪಶ್ಚಿಮ ಬಂಗಾಳ ಬಿಟ್ಟು ಅಸ್ಸಾಂನಲ್ಲಿ ವಿಚಾರಣೆಗೆ ರಾಜೀವ್ ಕುಮಾರ್ ಒಪ್ಪಿಕೊಂಡಿದ್ದಾರೆ ಎಂದು ಲೇವಡಿ ಮಾಡಿದರು.

    ಉತ್ತರ ಬಂಗಾಳದ ಬಲೂರ್ಘಾಟ್‍ನಲ್ಲಿ ಫೆಬ್ರವರಿ 3ರಂದು ನಡೆಯುತ್ತಿದ್ದ ರ‍್ಯಾಲಿಯಲ್ಲಿ ಭಾಗವಹಿಸಲು ಯೋಗಿ ಆದಿತ್ಯನಾಥ್ ಅವರು ಹೆಲಿಕಾಪ್ಟರ್ ನಲ್ಲಿ ತೆರಳಲು ಮುಂದಾಗಿದ್ದರು. ಆದರೆ ಯಾವುದೇ ನಿರ್ದಿಷ್ಟ ಕಾರಣ ತಿಳಿಸದೇ ಹೆಲಿಕಾಪ್ಟರ್ ಲ್ಯಾಂಡಿಂಗ್ ಅನುಮತಿಯನ್ನು ಪಶ್ಚಿಮ ಬಂಗಾಳದ ಸರ್ಕಾರ ನಿರಾಕರಿಸಿತ್ತು. ಇದರಿಂದಾಗಿ ಇಂದು ನಡೆದ ಬೃಹತ್ ಸಮಾವೇಶಕ್ಕೆ ಯೋಗಿ ಆದಿತ್ಯನಾಥ್ ಅವರು ರಸ್ತೆ ಮಾರ್ಗವಾಗಿಯೇ ತಲುಪಬೇಕಾಯಿತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸಿಬಿಐ ವಿಚಾರಣೆಗೆ ರಾಜೀವ್ ಕುಮಾರ್ ಹಾಜರಾಗಬೇಕು: ಕೋರ್ಟ್ ಕಲಾಪ ಹೀಗಿತ್ತು

    ಸಿಬಿಐ ವಿಚಾರಣೆಗೆ ರಾಜೀವ್ ಕುಮಾರ್ ಹಾಜರಾಗಬೇಕು: ಕೋರ್ಟ್ ಕಲಾಪ ಹೀಗಿತ್ತು

    ನವದೆಹಲಿ: ಶಾರದಾ ಚಿಟ್ ಫಂಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ವಿಚಾರಣೆಗೆ ಕೋಲ್ಕತ್ತಾ ಪೊಲೀಸ್ ಆಯುಕ್ತ ರಾಜೀವ್ ಕುಮಾರ್ ಹಾಜರಾಗಬೇಕು ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ.

    ಸಿಬಿಐ ಸಲ್ಲಿಸಿದ್ದ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ ಅರ್ಜಿ ವಿಚಾರಣೆ ವೇಳೆ ರಾಜೀವ್ ಕುಮಾರ್ ಅವರು ವಿಚಾರಣೆಗೆ ಹಾಜರಾಗಬೇಕು, ಆದರೆ ಅವರನ್ನು ಬಂಧಿಸುವಂತಿಲ್ಲ ಎಂದು ಮುಖ್ಯ ನ್ಯಾ. ರಂಜನ್ ಗೊಗೋಯ್, ದೀಪಕ್ ಗುಪ್ತಾ, ಸಂಜೀವ್ ಖನ್ನಾ ಅವರಿದ್ದ ತ್ರಿಸದಸ್ಯ ಪೀಠ ಆದೇಶಿಸಿತು.

    ಸಿಬಿಐ ಪರವಾಗಿ ಅಟಾರ್ನಿ ಜನರಲ್ ಕೆಕೆ ವೇಣುಗೋಪಾಲ್, ಸಾಲಿಸಿಟರ್ ಜನರಲ್ ತುಷರ್ ಮೆಹ್ತಾ ಹಾಜರಾಗಿದ್ದರೆ, ಪಶ್ಚಿಮ ಬಂಗಾಳ ಸರ್ಕಾರದ ಪರವಾಗಿ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಹಾಜರಾಗಿದ್ದರು.

    ಕೆಕೆ ವೇಣುಗೋಪಾಲ್ ಅವರು ಆರಂಭದಲ್ಲಿ, ರಾಜೀವ್ ಕುಮಾರ್ ಶಾರದಾ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದ ವಿಶೇಷ ತನಿಖಾ ತಂಡದ ಮುಖ್ಯಸ್ಥರಾಗಿದ್ದಾರೆ. ಸುಪ್ರೀಂ ಕೋರ್ಟ್ ಈ ಪ್ರಕರಣವನ್ನು ಸಿಬಿಐಗೆ ವಹಿಸಿದ ಬಳಿಕ ಸಲ್ಲಿಕೆಯಾದ ದಾಖಲೆಗಳು ತಿರುಚಲ್ಪಟ್ಟಿದೆ. ಯಾಕೆ ತಿರುಚಲ್ಪಟ್ಟಿದೆ ಎಂದು ಕೇಳಿದ್ದಕ್ಕೆ ಇದೂವರೆಗೆ ವಿಚಾರಣೆಗೆ ರಾಜೀವ್ ಕುಮಾರ್ ಹಾಜರಾಗಿಲ್ಲ. ಫೋನ್ ಕಾಲ್‍ಗಳ ಮಾಹಿತಿ ಡಿಲೀಟ್ ಆಗಿದೆ. ಯಾರ ಯಾರಿಗೆ ಕಾಲ್ ಮಾಡಿದ್ದಾರೆ ಅವುಗಳು ಡಿಲೀಟ್ ಆಗಿದೆ. ಪ್ರಕರಣದ ಆರೋಪಿಯಾಗಿರುವ ಸುದಿಪ್ಟೋ ಸೆನ್ ಫೋನ್ ಮರಳಿ ನೀಡಲಾಗಿದೆ ಎಂದು ತಿಳಿಸಿದರು.

    ವಿಚಾರಣೆಗೆ ಬಂದಿದ್ದ ಸಿಬಿಐ ಅಧಿಕಾರಿಗಳನ್ನು ಬಸ್ಸಿನಲ್ಲಿ ತುಂಬಿಸಲಾಗಿದೆ. ಠಾಣೆಗಳಲ್ಲಿ ಹಲವು ಗಂಟೆಗಳ ಕಾಲ ಅಧಿಕಾರಿಗಳನ್ನು ಪೊಲೀಸರು ವಶದಲ್ಲಿ ಇಟ್ಟಿದ್ದಾರೆ. ಸಿಬಿಐ ಜಂಟಿ ನಿರ್ದೇಶಕರ ಮನೆಗೆ ಮುತ್ತಿಗೆ ಹಾಕಲಾಗಿತ್ತು. ಪಶ್ಚಿಮ ಬಂಗಾಳ ಪೊಲೀಸರ ಹಿಂದೆ ಯಾರಿದ್ದಾರೆ? ಯಾರ ಆದೇಶದ ಹಿನ್ನೆಲೆಯಲ್ಲಿ ಈ ಕೆಲಸಗಳು ನಡೆದಿದೆ ಎಂದು ಪ್ರಶ್ನಿಸಿದರು. ಈ ಪ್ರಕರಣದ ವಿಚಾರಣೆ ನಡೆಸುವಂತೆ ಸಿಬಿಐಗೆ ನೀಡಿದ್ದೇ ಸುಪ್ರೀಂ ಕೋರ್ಟ್. ಹೀಗಾಗಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ ಪಡಿಸಿ ಪೊಲೀಸರು ನ್ಯಾಯಾಂಗ ನಿಂದನೆ ಮಾಡಿದ್ದಾರೆ ಎಂದು ವಾದಿಸಿದರು.

    ಪಶ್ಚಿಮ ಬಂಗಾಳ ಸರ್ಕಾರದ ಪರವಾಗಿ ಹಾಜರಾಗಿದ್ದ ಅಭಿಷೇಕ್ ಮನು ಸಿಂಘ್ವಿ, ಇದು ಉದ್ದೇಶಪೂರ್ವಕವಾಗಿ ನಡೆದ ದಾಳಿಯಾಗಿದೆ. ಪೊಲೀಸರು ಯಾವುದೇ ಸಿಬಿಐ ಅಧಿಕಾರಿಗಳನ್ನು ಬಂಧಿಸಿಲ್ಲ ಮತ್ತು ವಶಕ್ಕೆ ಪಡೆದಿಲ್ಲ, ರಾಜೀವ್ ಕುಮಾರ್ ಅವರು ಹಲವು ಬಾರಿ ತಟಸ್ಥ ಸ್ಥಳದಲ್ಲಿ ವಿಚಾರಣೆಗೆ ಹಾಜರಾಗುತ್ತೇನೆ ಎಂದು ಸಿಬಿಐಗೆ ಪತ್ರ ಬರೆದಿದ್ದಾರೆ. ರಾಜೀವ್ ಕುಮಾರ್ ವಿರುದ್ಧ ಐಪಿಸಿ ಸೆಕ್ಷನ್ 201(ಪುರಾವೆ ನಾಶ) ಅಡಿಯಲ್ಲಿ ಯಾವುದೇ ಎಫ್‍ಐಆರ್ ದಾಖಲಾಗಿಲ್ಲ. ಎಫ್‍ಐಆರ್ ದಾಖಲಾಗದೇ ಬಂಧನ ಮಾಡುವುದು ಎಷ್ಟು ಸರಿ? 5 ವರ್ಷದ ವಿಚಾರಣೆ ನಡೆಯುತ್ತಿದ್ದು ಈಗ ತುರ್ತಾಗಿ ಬಂಧನ ಮಾಡುತ್ತಿರುವುದು ಯಾಕೆ ಎಂದು ಪ್ರಶ್ನಿಸಿದರು.

    ಈ ವೇಳೆ ಮಧ್ಯಪ್ರವೇಶಿಸಿದ ಮುಖ್ಯ ನ್ಯಾಯಮೂರ್ತಿಗಳು, ನೀವು ಬಹಳ ವಿಚಾರಗಳನ್ನು ಊಹೆ ಮಾಡುತ್ತೀರಿ. ಇದು ನಿಮ್ಮ ಸಮಸ್ಯೆ, ಸಿಬಿಐ ತನಿಖೆಗೆ ರಾಜೀವ್ ಕುಮಾರ್ ಸಹಕರಿಸಬೇಕು ಎಂದು ಸಿಂಘ್ವಿಗೆ ಹೇಳಿದರು.

    ಎರಡು ಕಡೆಯ ವಾದವನ್ನು ಅಲಿಸಿದ ಕೋರ್ಟ್ ರಾಜೀವ್ ಕುಮಾರ್ ಅವರನ್ನು ಬಂಧಿಸುವಂತಿಲ್ಲ. ರಾಜೀವ್ ಕುಮಾರ್ ಅವರು ಮೇಘಾಲಯದ ಶಿಲ್ಲಾಂಗ್‍ ನ ತಟಸ್ಥ ಸ್ಥಳದಲ್ಲಿ ವಿಚಾರಣೆಗೆ ಹಾಜರಾಗಬೇಕು ಎಂದು ಆದೇಶಿಸಿ ಮುಂದಿನ ವಿಚಾರಣೆಯನ್ನು ಫೆ.20ಕ್ಕೆ ಮುಂದೂಡಿತು. ಈ ವೇಳೆ ನ್ಯಾಯಾಂಗ ನಿಂದನೆ ಕುರಿತ ಅರ್ಜಿಗೆ ಸಂಬಂಧ ಪಟ್ಟಂತೆ ಸಿಬಿಐ ಆರೋಪಗಳಿಗೆ ಫೆ.18ರ ಒಳಗಡೆ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಪೊಲೀಸ್ ಮಹಾ ನಿರ್ದೇಶಕರಿಗೆ ಮತ್ತು ಕೋಲ್ಕತ್ತಾ ಪೊಲೀಸ್ ಆಯುಕ್ತರಿಗೆ ನೋಟಿಸ್ ಜಾರಿ ಮಾಡಿ ಉತ್ತರ ನೀಡುವಂತೆ ಸೂಚಿಸಿತು.

    ವಿಚಾರಣೆ ಫೆ.7ಕ್ಕೆ: ಸಿಬಿಐ ಬಂಧನಕ್ಕೆ ತಡೆ ಕೋರಿ ರಾಜೀವ್ ಕುಮಾರ್ ಪಶ್ಚಿಮ ಬಂಗಾಳ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ಇಂದು ನಡೆಯಿತು. ಈ ವೇಳೆ ಈ ಪ್ರಕರಣ ಈಗಾಗಲೇ ಸುಪ್ರೀಂ ಕೋರ್ಟ್ ನಲ್ಲಿದೆ ಎಂದು ಹೇಳಿ ಕೋರ್ಟ್ ಮುಂದಿನ ವಿಚಾರಣೆಯನ್ನು ಫೆ.7ಕ್ಕೆ ಮುಂದೂಡಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮಮತಾ ಪರ ಬ್ಯಾಟಿಂಗ್ ಮಾಡಿದ ರಾಹುಲ್ ನಿಲುವಿಗೆ ಬಂಗಾಳ ಕಾಂಗ್ರೆಸ್ ವಿರೋಧ

    ಮಮತಾ ಪರ ಬ್ಯಾಟಿಂಗ್ ಮಾಡಿದ ರಾಹುಲ್ ನಿಲುವಿಗೆ ಬಂಗಾಳ ಕಾಂಗ್ರೆಸ್ ವಿರೋಧ

    ಕೋಲ್ಕತ್ತಾ: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮಮತಾ ಬ್ಯಾನರ್ಜಿ ಪರ ಬ್ಯಾಟಿಂಗ್ ಮಾಡಿದರೆ ಪಶ್ಚಿಮ ಬಂಗಾಳದ ಕಾಂಗ್ರೆಸ್ ನಾಯಕರು ಟಿಎಂಸಿ ಸರ್ಕಾರದ ವಿರುದ್ಧವೇ ವಾಗ್ದಾಳಿ ನಡೆಸಿದೆ.

    ತಪ್ಪಿತಸ್ಥರಲ್ಲದಿದ್ದರೆ ಕೋಲ್ಕತ್ತಾ ಪೊಲೀಸ್ ಆಯುಕ್ತರಾದ ರಾಜೀವ್‍ಕುಮಾರ್ ಅವರು ಸಿಬಿಐ ವಿಚಾರಣೆ ಎದುರಿಸಲು ಹಿಂದೆ ಸರಿಯುತ್ತಿರುವುದು ಏಕೆ ಎಂದು ಎಂದು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸೊಮೇಂದ್ರ ನಾಥ್ ಮಿತ್ರಾ ಪ್ರಶ್ನಿಸಿದ್ದಾರೆ.

    ಫ್ಯಾಸಿಸ್ಟ್ ಧೋರಣೆಯ ಟಿಎಂಸಿ ಸರ್ಕಾರವನ್ನು ಕಿತ್ತು ಹಾಕಲು ಪಶ್ಚಿಮ ಬಂಗಾಳದಲ್ಲಿ ಎಲ್ಲ ವಿರೋಧ ಪಕ್ಷಗಳು ಒಂದಾಗಿವೆ. ಬಿಜೆಪಿ ಮತ್ತು ಟಿಎಂಸಿ ವಿರುದ್ಧದ ನಮ್ಮ ಹೋರಾಟ ನಿರಂತರವಾಗಿರುತ್ತದೆ ಸೊಮೇನ್ ಮಿತ್ರಾ ಹೇಳಿದ್ದಾರೆ.

    ಮಮತಾ ಬ್ಯಾನರ್ಜಿ ವಿಚಾರದಲ್ಲಿ ಕೇಂದ್ರ ನಾಯಕರು ಒಂದು ನಿರ್ಧಾರ ತೆಗೆದುಕೊಂಡರೆ ರಾಜ್ಯ ನಾಯಕರು ವ್ಯತಿರಿಕ್ತ ನಿರ್ಧಾರ ತಳೆದಿರುವುದು ಇದು ತಿಂಗಳಲ್ಲಿ ಎರಡನೇ ಬಾರಿ. ಜ.19ರಂದು ಕೋಲ್ಕತ್ತಾದಲ್ಲಿ ಮಮತಾ ಬ್ಯಾನರ್ಜಿ ಆಯೋಜಿಸಿದ್ದ ಪ್ರತಿಪಕ್ಷಗಳ ಸಮಾವೇಶದಲ್ಲಿ ರಾಹುಲ್ ಗಾಂಧಿ ಅವರ ಪ್ರತಿನಿಧಿಯಾಗಿ ಮಲ್ಲಿಕಾರ್ಜುನ ಖರ್ಗೆ ಪಾಲ್ಗೊಂಡಿದ್ದರು. ಆದರೆ ಈ ಕಾರ್ಯಕ್ರಮಕ್ಕೆ ರಾಜ್ಯ ಕಾಂಗ್ರೆಸ್ ನಾಯಕರು ಗೈರಾಗಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ಸಿಬಿಐ Vs ಮಮತಾ: ಮಂಗಳವಾರಕ್ಕೆ ಅರ್ಜಿ ಮುಂದೂಡಿಕೆ: ಸುಪ್ರೀಂನಲ್ಲಿ ಇಂದು ಏನಾಯ್ತು?

    ಸಿಬಿಐ Vs ಮಮತಾ: ಮಂಗಳವಾರಕ್ಕೆ ಅರ್ಜಿ ಮುಂದೂಡಿಕೆ: ಸುಪ್ರೀಂನಲ್ಲಿ ಇಂದು ಏನಾಯ್ತು?

    ನವದೆಹಲಿ: ಕೋಲ್ಕತ್ತಾ ಪೊಲೀಸ್ ಆಯುಕ್ತ ರಾಜೀವ್ ಕುಮಾರ್ ಬಂಧನಕ್ಕೆ ಸಂಬಂಧಿಸಿದಂತೆ ಸಿಬಿಐ ಸಲ್ಲಿಸಿರುವ ತುರ್ತು ಮಧ್ಯಂತರ ಅರ್ಜಿ ವಿಚಾರಣೆಯನ್ನು ಮಂಗಳವಾರ ಸುಪ್ರೀಂ ಕೋರ್ಟ್ ನಡೆಸಲಿದೆ.

    ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ರಾಜೀವ್ ಕುಮಾರ್ ಆರ್‌ಟಿಜಿಎಸ್‌ ಮೂಲಕ ನಡೆಸಿರುವ ವ್ಯವಹಾರದ ಸಾಕ್ಷ್ಯವನ್ನು ನಾಶ ಮಾಡಲು ಮುಂದಾಗಿದ್ದಾರೆ ಸಿಬಿಐ ಆರೋಪಿಸಿದೆ.

    ಅರ್ಜಿಯ ವಿಚಾರಣೆ ವೇಳೆ ಮುಖ್ಯ ನ್ಯಾಯಾಧೀಶ ರಂಜನ್ ಗೊಗೊಯ್, ಆರೋಪಗಳಿಗೆ ಸಾಕ್ಷ್ಯವನ್ನು ನೀಡಿ. ನಿಮ್ಮ ಆರೋಪದ ಪ್ರಕಾರವೇ ರಾಜೀವ್ ಕುಮಾರ್ ಸಾಕ್ಷ್ಯವನ್ನು ನಾಶ ಮಾಡುತ್ತಿದ್ದಾರೆ ಎಂದಾದರೆ ಈ ಪ್ರಕರಣವನ್ನು ನಾವು ಗಂಭೀರವಾಗಿ ಸ್ವೀಕರಿಸುತ್ತೇವೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

     

    ಸಿಬಿಐ ಪರವಾಗಿ ಸಾಲಿಸಿಟರ್ ಜನರಲ್ ತುಷರ್ ಮೆಹ್ತಾ ಹಾಜರಾಗಿ, ನಮ್ಮ ಅಧಿಕಾರಿಗಳನ್ನು ಪಶ್ಚಿಮ ಬಂಗಾಳದ ಪೊಲೀಸರು ಅಕ್ರಮವಾಗಿ ಒತ್ತೆಯಾಳುಗಳನ್ನಾಗಿ ಮಾಡಿಕೊಂಡಿದ್ದಾರೆ. ವಿಚಾರಣೆಗೆ ಹಾಜರಾಗುವಂತೆ ಸಾಕಷ್ಟು ಬಾರಿ ಸಮನ್ಸ್ ಜಾರಿ ಮಾಡಿದರೂ ಹಾಜರಾಗುತ್ತಿಲ್ಲ. ಹೀಗಾಗಿ ಕೋಲ್ಕತ್ತಾ ಪೊಲೀಸ್ ಆಯುಕ್ತರು ಕೂಡಲೇ ಶರಣಾಗಬೇಕು ಎಂದು ವಾದಿಸಿದರು.

    ಪಶ್ಚಿಮ ಬಂಗಾಳ ಸರ್ಕಾರದ ಪರವಾಗಿ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಹಾಜರಾಗಿ ರಾಜೀವ್ ಕುಮಾರ್ ಈ ಪ್ರಕರಣದಲ್ಲಿ ಸಾಕ್ಷಿಯಾಗಿದ್ದಾರೆ ಹೊರತು ಆರೋಪಿಯಲ್ಲ ಎಂದು ತಿಳಿಸಿದರು. ಈ ವೇಳೆ ನಾಳಿನ ವಿಚಾರಣೆಯಲ್ಲಿ ತಮ್ಮ ವಾದಕ್ಕೆ ಪೂರಕ ಮಾಹಿತಿಯನ್ನು ನೀಡುವಂತೆ ಕೋರ್ಟ್ ಸಿಂಘ್ವಿಗೆ ಸೂಚಿಸಿತು.

    ಕಳೆದ ಎರಡು ವರ್ಷಗಳಿಂದ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮನ್ಸ್ ಜಾರಿ ಮಾಡುತ್ತಿದ್ದರೂ ರಾಜೀವ್ ಕುಮಾರ್ ವಿಚಾರಣೆ ಹಾಜರಾಗುತ್ತಿಲ್ಲ. ಅಷ್ಟೇ ಅಲ್ಲದೇ ಚುನಾವಣೆಗೆ ಸಂಬಂಧಿಸಿದಂತೆ ನಡೆದ ಸಭೆಗಳಿಗೂ ಅವರು ಹಾಜರಾಗಿಲ್ಲ ಎಂದು ಸಿಬಿಐ ಆರೋಪಿಸಿದೆ.

    ಭಾನುವಾರ ಏನಾಯ್ತು?
    ಭಾನುವಾರ ಸಂಜೆ 6.30ರ ವೇಳೆಗೆ ಕೋಲ್ಕತ್ತಾ ಪೊಲೀಸ್ ಆಯುಕ್ತ ರಾಜೀವ್ ಕುಮಾರ್ ನಿವಾಸಕ್ಕೆ 40ಕ್ಕೂ ಹೆಚ್ಚು ಸಿಬಿಐ ಅಧಿಕಾರಿಗಳ ತಂಡ ಆಗಮಿಸಿದೆ. ಈ ತಂಡ ಮನೆ ಪ್ರವೇಶಿಸಲು ಅವಕಾಶ ನೀಡಲಿಲ್ಲ. ಸುದ್ದಿ ತಿಳಿಯುತ್ತಲೇ ಪಶ್ಚಿಮ ಬಂಗಾಳ ಪೊಲೀಸ್ ಮಹಾನಿರ್ದೇಶಕ ಸೇರಿದಂತೆ ಹಿರಿಯ ಅಧಿಕಾರಿಗಳು ಧಾವಿಸಿದರು. ಈ ವೇಳೆ ಸಿಬಿಐ ಅಧಿಕಾರಿಗಳು ಮತ್ತು ಕೋಲ್ಕತ್ತಾ ಪೊಲೀಸರ ನಡುವೆ ಮಾತಿನ ಚಕಮಕಿ, ತಳ್ಳಾಟವೂ ನಡೆಯಿತು. ಅಂತಿಮವಾಗಿ 40 ಮಂದಿ ಅಧಿಕಾರಿಗಳ ಪೈಕಿ 15 ಮಂದಿಯನ್ನು ಜೀಪ್‍ನಲ್ಲಿ ಕುಳ್ಳಿರಿಸಿಕೊಂಡು ಹೋದರು.

    ಸಿಬಿಐ ಅಧಿಕಾರಿಗಳು ಬಂದ ವಿಚಾರ ತಿಳಿಯುತ್ತಲೇ ಕೋಪಗೊಂಡ ಮಮತಾ ಬ್ಯಾನರ್ಜಿ ರಾಜೀವ್ ಕುಮಾರ್ ನಿವಾಸಕ್ಕೆ ಆಗಮಿಸಿ ಸುದ್ದಿಗೋಷ್ಠಿ ನಡೆಸಿದರು. ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಪಶ್ಚಿಮ ಬಂಗಾಳದಲ್ಲಿ ದಂಗೆಗೆ ಕಾರಣವಾಗುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಮಮತಾ ಬ್ಯಾನರ್ಜಿ ಪ್ರತಿಭಟನೆಯ ವೇಳೆ ಪೊಲೀಸ್ ಆಯುಕ್ತ ರಾಜೀವ್ ಕುಮಾರ್ ಧರಣಿ ಸ್ಥಳದಲ್ಲಿಯೇ ಕುಳಿತಿದ್ದರು.

    ಸಿಬಿಐ ಹೋಗಿದ್ದು ಯಾಕೆ?
    ಬಂಗಾಳ ಶಾರದಾ ಮತ್ತು ರೋಸ್ ವ್ಯಾಲಿ ಹಗರಣದ ತನಿಖೆಗೆ ವಿಶೇಷ ಪೊಲೀಸ್ ತಂಡ ರಚನೆಯಾಗಿದ್ದು, ಈ ತಂಡದ ನೇತೃತ್ವವನ್ನು ರಾಜೀವ್ ಕುಮಾರ್ ವಹಿಸಿದ್ದರು. ತನಿಖೆ ವಿಳಂಬವಾಗಿದ್ದ ಕಾರಣ ಸಿಬಿಐ ರಾಜೀವ್ ಕುಮಾರ್ ಮೇಲೆಯೇ ಶಂಕೆ ವ್ಯಕ್ತಪಡಿಸಿತ್ತು. ವಿಚಾರಣೆಗೆ ಹಾಜರಾಗುವಂತೆ ಸಿಬಿಐ ರಾಜೀವ್ ಕುಮಾರ್ ಅವರಿಗೆ ಸಮನ್ಸ್ ಜಾರಿ ಮಾಡಿತ್ತು. ಸಮನ್ಸ್ ಗೆ ಹಾಜರಾಗದ ಹಿನ್ನೆಲೆಯಲ್ಲಿ ಸಿಬಿಐ ರಾಜೀವ್ ಕುಮಾರ್ ಅವರನ್ನು ಬಂಧಿಸಲು ಭಾನುವಾರ ಅವರ ನಿವಾಸಕ್ಕೆ ತೆರಳಿತ್ತು.

    ಸಿಬಿಐ ಹೇಳೋದು ಏನು?
    ಸುಪ್ರೀಂ ಆದೇಶದ ಹಿನ್ನೆಲೆಯಲ್ಲಿ ಚಿಟ್‍ಫಂಡ್ ಹಗರಣದ ತನಿಖೆ ನಡೆದಿದೆ. ಈ ತನಿಖೆಗೆ ಯಾರ ಅನುಮತಿಯೂ ಬೇಕಿಲ್ಲ. ಸ್ಥಳೀಯ ಪೊಲೀಸರು ತನಿಖೆಗೆ ಸಹಕಾರ ನೀಡಬೇಕು. ಆದರೆ ನಮ್ಮ ಮನವಿಯನ್ನು ಪೊಲೀಸರು ನಿರಾಕರಿಸಿದ ಹಿನ್ನೆಲೆಯಲ್ಲಿ ಸಿಆರ್‌ಪಿಎಫ್‌  ಪಡೆಗಳನ್ನು ಭದ್ರತೆಗೆ ಕರೆಸಿಕೊಂಡಿದ್ದೇವೆ ಎಂದು ಸಿಬಿಐ ನಿರ್ದೇಶಕ ನಾಗೇಶ್ವರ ರಾವ್ ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv