Tag: cbi

  • ಬಿಗ್ ಬುಲೆಟಿನ್ ನಲ್ಲಿ ಕಾವ್ಯ ಶ್ರೀ ಪ್ರಕರಣದ ಬಿಗ್ ಚರ್ಚೆ – ತನಿಖೆಗೆ ಸಹಕರಿಸುವೆ ಎಂದ ಮೋಹನ್ ಆಳ್ವ

    ಬಿಗ್ ಬುಲೆಟಿನ್ ನಲ್ಲಿ ಕಾವ್ಯ ಶ್ರೀ ಪ್ರಕರಣದ ಬಿಗ್ ಚರ್ಚೆ – ತನಿಖೆಗೆ ಸಹಕರಿಸುವೆ ಎಂದ ಮೋಹನ್ ಆಳ್ವ

    ಬೆಂಗಳೂರು: ರಾಜ್ಯದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಮೂಡಬಿದಿರೆಯ ಆಳ್ವಾಸ್‍ನ 10ನೇ ತರಗತಿ ವಿದ್ಯಾರ್ಥಿನಿ ಕಾವ್ಯಶ್ರೀ ನಿಗೂಢ ಸಾವು ಪ್ರಕರಣ ದಿನಕ್ಕೊಂದು ಟ್ವಿಸ್ಟ್ ಪಡೀತಾ ಇದೆ. ವಿದ್ಯಾರ್ಥಿನಿ ಕಾವ್ಯಶ್ರೀ ನಿಗೂಢ ಸಾವಿನ ತನಿಖೆಯನ್ನು ಸೂಕ್ತ ರೀತಿಯಲ್ಲಿ ನಡೆಸಬೇಕೆಂದು ಪಿಎಫ್‍ಐ ಕಾರ್ಯಕರ್ತರು ಮೂಡಬಿದ್ರೆಯಲ್ಲಿ ಪ್ರತಿಭಟನೆ ಮಾಡಿದ್ರೆ, ಡಿವೈಎಫ್‍ಐ ಮತ್ತು ಎಸ್‍ಎಫ್‍ಐ ಕಾರ್ಯಕರ್ತರು ಮಂಗಳೂರು ಡಿಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ರು.

    ಈ ಹಿನ್ನೆಲೆಯಲ್ಲಿ ಶನಿವಾರದ ಪಬ್ಲಿಕ್ ಟಿವಿ ಬಿಗ್‍ಬುಲೆಟಿನ್‍ನಲ್ಲಿ ಈ ಕುರಿತಂತೆ ಚರ್ಚೆ ನಡೀತು. ಪಬ್ಲಿಕ್ ಟಿವಿ ಪ್ರಶ್ನೆಗಳಿಗೆ ಉತ್ತರಿಸಿದ ಶಿಕ್ಷಣ ಸಂಸ್ಥೆ ಮುಖ್ಯಸ್ಥ ಮೋಹನ್ ಆಳ್ವ, ಈ ಬಗ್ಗೆ ಸೂಕ್ತ ತನಿಖೆ ನಡೆಯಬೇಕೆಂದು ನಾನು ಕೂಡ ಆಗ್ರಹಿಸುತ್ತೇನೆ. ಅವರಿಗಷ್ಟೇ ಅಲ್ಲದೇ ನನ್ನ ಸಂಸ್ಥೆಗೂ ನ್ಯಾಯ ಬೇಕು ಅಂದ್ರು.

    ಮೋಹನ್ ಆಳ್ವ ನೀಡಿದ ಉತ್ತರಕ್ಕೆ ಕಾವ್ಯಶ್ರೀಯ ತಾಯಿ ಕೂಡ ಸಹಮತ ವ್ಯಕ್ತಪಡಿಸಿದ್ರು. ನಮಗೆ ಪ್ರವೀಣ್ ಮೇಲೆ ಡೌಟ್ ಇದೆ. ತನಿಖೆ ನಡೆಯಬೇಕು ಅಂದ್ರು. ಇದೇ ವೇಳೆ ಮಾತಾಡಿದ ವಿದ್ಯಾರ್ಥಿ ಸಂಘಟನೆ ಮುಖಂಡ ದಿನಕರ್ ಶೆಟ್ಟಿ, ದೈಹಿಕ ಶಿಕ್ಷಕ ಪ್ರವೀಣ್ ರನ್ನು ಕೆಲಸದಿಂದ ತೆಗೆದುಹಾಕುವಂತೆ ಆಗ್ರಹಿಸಿದ್ರು. ಇದಕ್ಕೆ ಉತ್ತರಿಸಿದ ಆಳ್ವ, ಮೊನ್ನೆಯೇ ಆ ಕೆಲಸ ಮಾಡಿದ್ದೇನೆ ಅಂದ್ರು.

    ಇದನ್ನೂ ಓದಿ: ಕಾವ್ಯ ನಿಗೂಢ ಸಾವು: ಆಳ್ವಾಸ್ ಸಂಸ್ಥೆ ವಿರುದ್ಧ ಭಾರೀ ಪ್ರತಿಭಟನೆ- ಹಾಸ್ಟೆಲ್‍ನ ಸಿಸಿಟಿವಿ ದೃಶ್ಯ ಬಿಡುಗಡೆ 

    https://www.youtube.com/watch?v=75vzrVm8Z6w

    https://www.youtube.com/watch?v=O1dTEqQsZ80

    ಇದನ್ನೂ ಒದಿ: ಕಾವ್ಯ ನಿಗೂಢ ಸಾವು- ಪೋಷಕರಿಗೆ ಸಂಸದ ಕಟೀಲ್ ಸಾಂತ್ವನ 

    ಇದನ್ನೂ ಓದಿ: ವಿದ್ಯಾರ್ಥಿನಿ ಕಾವ್ಯ ಪೂಜಾರಿ ಕೇಸ್: ಆಳ್ವಾಸ್ ಕಾಲೇಜು ಮುಖ್ಯಸ್ಥ ಮೋಹನ್ ಆಳ್ವ ಹೇಳಿದ್ದೇನು?

    ಇದನ್ನೂ ಓದಿ: ಮಂಗ್ಳೂರಿನ ಆಳ್ವಾಸ್ ನಲ್ಲಿ SSLC ವಿದ್ಯಾರ್ಥಿನಿ ನಿಗೂಢ ಸಾವು- ಕೊಲೆ ಎಂದು ಪೋಷಕರ ಆರೋಪ

  • ಮೃತ ಯುವತಿಯ ಹೃದಯವೇ ಕಾಣೆ- ಅರ್ಧಕ್ಕೆ ನಿಂತ ನಿಗೂಢ ಸಾವಿನ ತನಿಖೆ

    ಮೃತ ಯುವತಿಯ ಹೃದಯವೇ ಕಾಣೆ- ಅರ್ಧಕ್ಕೆ ನಿಂತ ನಿಗೂಢ ಸಾವಿನ ತನಿಖೆ

    ಮುಂಬೈ: 5 ವರ್ಷಗಳ ಹಿಂದೆ ನಡೆದ ಯುವತಿಯ ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂಧಿಸಿದ ತನಿಖೆ ಈಗ ಅರ್ಧಕ್ಕೆ ನಿಂತಿದೆ. ಕಾರಣ ಮೃತ ಯುವತಿಯ ಹೃದಯ ಕಾಣೆಯಾಗಿದೆ.

    2012ರಲ್ಲಿ ತನ್ನ 19ನೇ ಹುಟ್ಟುಹಬ್ಬದ ದಿನದಂದೇ ಯುವತಿ ಸನಮ್ ಸಾವನ್ನಪ್ಪಿದ್ದಳು. ಆಕೆಯ ಸಾವಿನ ತನಿಖೆಗೆ ಈಗ ತೊಡಕುಂಟಾಗಿದೆ. ಯಾವುದೋ ವಯಸ್ಸಾದ ಮಹಿಳೆಯ ಹೃದಯವನ್ನ ಪರೀಕ್ಷೆಗೆ ನೀಡಲಾಗಿದೆ ಎಂದು ಕೆಲವು ವಾರಗಳ ಹಿಂದೆ ಹೈದರಾಬಾದ್‍ನ ವಿಧಿ ವಿಜ್ಞಾನ ಪ್ರಯೋಗಾಲಯ ಹೇಳಿದ ಬಳಿಕವಷ್ಟೆ ಯುವತಿಯ ಹೃದಯ ಕಾಣೆಯಾಗಿರೋದು ಬಹಿರಂಗಾವಗಿದೆ. ಇದೀಗ ಕಾಡ್ತಿರೋ ಅನೇಕ ಪ್ರಶ್ನೆಗಳಿಗೆ ಸನಮ್ ಪೋಷಕರು ಉತ್ತರ ಹುಡುಕುತ್ತಿದ್ದಾರೆ.

    ಬೇಕಂತಲೇ ಬದಲಾಯಿಸಿದ್ದಾರೆ: ಸನಮ್ ತಾಯಿ ನಾಗಿನಾ ಈ ಬಗ್ಗೆ ಪತ್ರಿಕೆಯೊಂದಕ್ಕೆ ಹೇಳಿಕೆ ನೀಡಿದ್ದು, ಯಾರೋ ಬೇಕೆಂತಲೇ ತನಿಖೆಗೆ ತೊಂದರೆ ಮಾಡಲು ನನ್ನ ಮಗಳ ಹೃದಯವನ್ನ ಬದಲಾಯಿಸಿದ್ದಾರೆ. ಈ ರೀತಿ ಆಗಿರೋದು ಇದೇ ಮೊದಲೇನಲ್ಲ. ಮೊದಲ ಬಾರಿ ಪರೀಕ್ಷೆಗೆ ಯಾವುದೋ ಪುರುಷನ ಹೃದಯವನ್ನ ನೀಡಲಾಗಿದೆ ಅಂತ ಕಲಿನಾದ ವಿಧಿ ವಿಜ್ಞಾನ ಪ್ರಯೋಗಾಲಯ ಪತ್ತೆ ಮಾಡಿತ್ತು ಎಂದಿದ್ದಾರೆ. ನೇರವಾಗಿ ಅಥವಾ ಪರೋಕ್ಷವಾಗಿ ಈ ಪ್ರಕರಣಕ್ಕೆ ಸಂಬಂಧಿಸಿದ ಯಾರೋ ಪ್ರಭಾವಿ ವ್ಯಕ್ತಿಯೇ ಇದರ ಹಿಂದೆ ಇರಬಹುದು. ಒಂದು ಬಾರಿ ಆಗಿದ್ದರೆ ಏನೋ ತಪ್ಪಾಗಿ ಆಗಿರಬಹುದು ಎಂದು ಅರ್ಥಮಾಡಿಕೊಳ್ಳುತ್ತಿದ್ವಿ. ಆದ್ರೆ ಎರಡು ಬಾರಿ ಹೀಗಾಗಿದೆ. ಸನಮ್ ಹೃದಯ ಎಲ್ಲಿದೆ ಅನ್ನೋದೇ ಗೊತ್ತಿಲ್ಲ. ಹೀಗಾಗಿ ಸಿಬಿಐ ತನಿಖೆಗೆ ಅಡಚಣೆ ಉಂಟು ಮಾಡಲೆಂದು ಬೇಕಂತಲೇ ಈ ರೀತಿ ಮಾಡಲಾಗಿದೆ ಎಂದು ನಾಗಿನಾ ಹೇಳಿದ್ದಾರೆ.

    ಹೃದಯ ಸಿಗದೆ ತನಿಖೆ ಅಸಾಧ್ಯ: ಯುವತಿಯ ನಿಗೂಢ ಸಾವಿನ ಬಗ್ಗೆ ಸಿಬಿಐ ತನಿಖೆ ಮುಂದುವರೆಸಲು ಸಾಧ್ಯವಾಗುತ್ತಿಲ್ಲ. ಯಾಕಂದ್ರೆ ಕಾಣೆಯಾಗಿರೋ ಅಂಗವಾದ ಹೃದಯವೇ ಈ ಪ್ರಕರಣದಲ್ಲಿ ಬಹುಮುಖ್ಯವಾದುದು. ಯುವತಿ 2012ರಲ್ಲಿ ಸಾವನ್ನಪ್ಪಿದಾಗ ಪುಣೆಯ ಸಸ್ಸೂನ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಮಾಡಲಾಗಿತ್ತು. ರಕ್ತಕೊರತೆಯ ಹೃದಯರೋಗದ ಜೊತೆ ಮದ್ಯಪಾನದಿಂದ ಯುವತಿ ಸಾವನ್ನಪ್ಪಿರುವುದಾಗಿ ವೈದ್ಯರು ಹೇಳಿದ್ರು. ಅಲ್ಲದೆ ಯುವತಿಯ ಹೃದಯದಲ್ಲಿ ಶೇ.70ರಷ್ಟು ಬ್ಲಾಕೇಜ್ ಇದೆ ಎಂದು ಹೇಳಲಾಗಿತ್ತು. ವೀರ್ಯ ಪತ್ತೆಯಾಗಿದ್ದು, ಸಾವಿಗೂ ಮುನ್ನ ಲೈಂಗಿಕ ಸಂಪರ್ಕ ನಡೆದಿದೆ ಎಂದು ವರದಿಯಲ್ಲಿ ಹೇಳಲಾಗಿತ್ತು. ಆದ್ರೆ ಇದನ್ನ ಯುವತಿಯ ಪೋಷಕರು ನಿರಾಕರಿಸಿದ್ದರು. ವಿಧಿ ವಿಜ್ಞಾನ ಪರೀಕ್ಷೆ ಮಾಡಲಾದ ಹೃದಯ ತಮ್ಮ ಮಗಳದ್ದೇ ಎಂದು ಸಾಬೀತುಪಡಿಸಲು ಡಿಎನ್‍ಎ ಪರೀಕ್ಷೆ ನಡೆಸುವಂತೆ ಒತ್ತಾಯಿಸಿದ್ರು.

    ಹೃದಯ ಸಂಬಂಧಿ ಕಾಯಿಲೆ ಹಾಗೂ ಮದ್ಯಪಾನದಿಂದ ಸನಮ್ ಸಾವನ್ನಪ್ಪಿದ್ದಾಳೆಂಬ ವಾದವನ್ನ ಆಕೆಯ ಪೋಷಕರು ತಳ್ಳಿಹಾಕಿದ್ದಾರೆ. ಆದ್ರೆ ಆಕೆಯ ಹೃದಯವನ್ನ ಪರೀಕ್ಷೆಗೆ ಒಳಪಡಿಸದೆ ಸಾವಿಗೆ ನಿಖರವಾದ ಕಾರಣವನ್ನ ಪತ್ತೆ ಮಾಡಲು ಸಾಧ್ಯವಿಲ್ಲ. ತಜ್ಞರಿಂದ ಅಭಿಪ್ರಾಯ ಪಡೆಯಲು ಹೃದಯವನ್ನ ಮೆಡಿಕಲ್ ಬೋರ್ಡ್‍ಗೆ ಕಳಿಸಬಹುದಿತ್ತು. ಆದ್ರೆ ಈಗ ಅಂಗವೇ ಕಾಣೆಯಾಗಿರೋದ್ರಿಂದ ಈ ವಾದಕ್ಕೆ ಉತ್ತರ ಹುಡುಕಲು ಸಾಧ್ಯವಿಲ್ಲ ಎಂದು ಸಿಬಿಐ ಅಧಿಕಾರಿಯೊಬ್ಬರು ಹೇಳಿದ್ದಾರೆ.

    ಹೃದಯರೋಗವೇ ಇರಲಿಲ್ಲ: ನಮ್ಮ ಸನಮ್‍ಗೆ ಯಾವುದೇ ಹೃದಯ ಸಂಬಂಧಿ ಕಾಯಿಲೆ ಇರಲಿಲ್ಲ. ಆಕೆ ಫುಟ್‍ಬಾಲ್ ಆಟಗಾರ್ತಿಯಾಗಿದ್ದಳು. ಆಕೆ ಸಾವನ್ನಪ್ಪಿದ 12 ದಿನಗಳ ಹಿಂದೆ ಕಾಲೇಜ್ ಟೂರ್ನ್ ಮೆಂಟ್‍ನಲ್ಲಿ ಭಾಗವಹಿಸಿದ್ದಳು. ಅಲ್ಲದೆ ಘಟನೆಯ ಹಿಂದಿನ ದಿನ ಜಿಮ್‍ನಲ್ಲಿ ಕಾರ್ಡಿಯೋ ಎಕ್ಸರ್ಸೈಸ್ ಮಾಡಿದ್ದಳು. ನಾವು ಮರಣೋತ್ತರ ಪರೀಕ್ಷೆಯ ವರದಿಯನ್ನು ನಂಬಲು ಸಿದ್ಧವಿರಲಿಲ್ಲ. ಹೀಗಾಗಿ ಹೃದಯದ ಡಿಎನ್‍ಎ ಪರೀಕ್ಷೆಗೆ ಒತ್ತಾಯಿಸಿದ್ದೆವು. ಜೊತೆಗೆ ವೀರ್ಯದ ಡಿಎನ್‍ಎ ಪರೀಕ್ಷೆ ನಡೆಸುವಂತೆಯೂ ಕೇಳಿದ್ದೆವು ಎಂದು ಸನಮ್ ಪೋಷಕರು ಹೇಳಿದ್ದಾರೆ.

    2 ಬಾರಿ ಹೃದಯ ಬದಲಾವಣೆ: ಸನಮ್ ಪೋಷಕರ ಒತ್ತಾಯದ ಮೇಲೆ ಯುವತಿಯ ಮೃತದೇಹದ ಒಳಾಂಗಗಳನ್ನು ಕಲೀನಾ ಪ್ರಯೋಗಾಲಯಕ್ಕೆ ಕಳಿಸಲಾಗಿತ್ತು. ಆಗ ಹೃದಯವು ಪುರುಷನದ್ದು ಎಂದು ವೈದ್ಯರು ದೃಢಪಡಿಸಿದ್ದರು. ಕಳೆದ ವರ್ಷ ಈ ಪ್ರಕರಣ ಸಿಬಿಐಗೆ ವರ್ಗಾವಣೆಯಾಗಿತ್ತು. 2016ರ ಆಗಸ್ಟ್‍ನಲ್ಲಿ ಹಾಗೂ ಇದೇ ವರ್ಷ ಜನವರಿಯಲ್ಲಿ ಸಿಬಿಐ ಸನಮ್ ಮೃತದೇಹವನ್ನು ಹೊರತೆಗೆಸಿತ್ತು. ಮೃತದೇಹದ ಅವಶೇಷಗಳು ಯುವತಿಯದ್ದೇ ಎಂದು ಡಿಎನ್‍ಎ ಪರೀಕ್ಷೆ ವರದಿಯಲ್ಲಿ ದೃಢವಾಗಿತ್ತು. ನಂತರ ಸಿಬಿಐ ಯುವತಿಯ ಒಳಾಂಗಳನ್ನು ಪರೀಕ್ಷೆಗಾಗಿ ಹೈದರಾಬಾದ್‍ಗೆ ಕಳಿಸಿತ್ತು. ಆದ್ರೆ ಈ ಬಾರಿ ಹೃದಯವು ವಯಸ್ಸಾದ ಮಹಿಳೆಯದ್ದು ಎಂದು ಪತ್ತೆಯಾಗಿದೆ. ಆದರೂ ಉಳಿದ ಅಂಗಗಳಾದ ಕಿಡ್ನಿ, ಲಿವರ್, ಸ್ಪೀನ್…ಇತ್ಯಾದಿ ಕುಟುಂದ ಡಿಎನ್‍ಎಗೆ ಹೊಂದಿಕೆಯಾಗಿವೆ.

    ಸನಮ್ ಹೃದಯ ಕಾಣೆಯಾಗಿರೋದೇ ನಮಗೆ ದೊಡ್ಡ ಸವಾಲಾಗಿದೆ. ನಾವು ಮೃತದೇಹವನ್ನ ಹೊರತೆಗೆಸಿದೆವು. ಡಿಎನ್‍ಎ ಕೂಡ ಆಕೆಯ ಪೋಷಕರೊಂದಿಗೆ ಹೊಂದಿಕೆಯಾಗಿತ್ತು. ಹೀಗಾಗಿ ಸಮಾಧಿ ಸನಮ್‍ಳದ್ದೇ ಎಂಬುದು ಸ್ಪಷ್ಟವಾಗಿತ್ತು. ಆದ್ರೆ ಈಗ ಆಕೆಯ ಹೃದಯ ಎಲ್ಲಿ ಎಂದು ಹಿರಿಯ ಸಿಬಿಐ ಅಧಿಕಾರಿಯೊಬ್ಬರು ಪ್ರಶ್ನಿಸಿದ್ದಾರೆ.

    2012ರ ಫ್ಲ್ಯಾಶ್‍ಬ್ಯಾಕ್: ಸನಮ್ ಪುಣೆಯ ಸಿಂಬೋಸಿಸ್ ವಿಶ್ವವಿದ್ಯಾಲಯದಲ್ಲಿ ಎರಡನೇ ವರ್ಷದ ಫ್ಯಾಶನ್ ಡಿಸೈನಿಂಗ್ ಅಂಡ್ ಕಮ್ಯನಿಕೇಷನ್ ವಿದ್ಯಾರ್ಥಿನಿಯಾಗಿದ್ದಳು. 2012ರ ಅಕ್ಟೋಬರ್ 12ರಂದು ಆಕೆಯ ಹುಟ್ಟುಹಬ್ಬ. ಮನೆಯಲ್ಲಿ ಕೇಕ್ ಕತ್ತರಿಸಿದ್ದಷ್ಟೇ ಆಕೆಯ ಪೋಷಕರಿಗೆ ಇರುವ ಕೊನೆಯ ನೆನಪು. ಬಳಿಕ ಸನಮ್ ತನ್ನ ಸ್ನೇಹಿತರೊಂದಿಗೆ ಪಾರ್ಟಿಗೆ ಹೋಗಿದ್ದಳು. ಮರುದಿನ ಬೆಳಿಗ್ಗೆ ತಮ್ಮ ಮಗಳು ಆಸ್ಪತ್ರೆಯಲ್ಲಿರುವುದಾಗಿ ಸನಮ್ ಪೋಷಕರಿಗೆ ಮಾಹಿತಿ ಬಂದಿತ್ತು. ಅವರು ಆಸ್ಪತ್ರೆಗೆ ಹೋಗುವ ವೇಳೆಗೆ ಸನಮ್ ಸಾವನ್ನಪ್ಪಿದ್ದಳು. ಆಸ್ಪತ್ರೆಯಲ್ಲಿ ಆಕೆಯ ಸ್ನೇಹಿತರ್ಯಾರೂ ಇರಲಿಲ್ಲ.

    ಯಾರು ಹೊಣೆ: ಅಂದು ರಾತ್ರಿ ಸನಮ್ ಜೊತೆಗಿದ್ದ ಸ್ನೇಹಿತರನ್ನ ಸಿಬಿಐ ತಂಡ ವಿಚಾರಣೆ ಮಾಡಿದೆ. ಆದ್ರೆ ಅವರು 2012ರಲ್ಲಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ನೀಡಿದ್ದ ಹೇಳಿಕೆಗಳಲ್ಲಿ ಭಿನ್ನತೆಯಿರೋದು ಗೊತ್ತಾಗಿದೆ. ಸನಮ್ ಹೃದಯವನ್ನು ಬದಲಾವಣೆ ಮಾಡಿದವರ ವಿರುದ್ಧವೂ ಪ್ರಕರಣ ದಾಖಲಿಸಿಕೊಳ್ತೀರಾ ಎಂಬ ಪ್ರಶ್ನೆಗೆ, ನಮ್ಮ ತನಿಖೆ ಮುಂದುವರೆದಿದೆ. ಸನಮ್ ಹೃದಯವನ್ನ ಬೇಕಂತಲೇ ಬದಲಾವಣೆ ಮಾಡಲಾಗಿದ್ಯಾ ಅಥವಾ ತಪ್ಪಾಗಿ ಆಗಿದ್ಯಾ ಎಂದು ಪತ್ತೆ ಮಾಡುತ್ತಿದ್ದೇವೆ ಎಂದು ಹಿರಿಯ ಸಿಬಿಐ ಅಧಿಕಾರಿಯೊಬ್ಬರು ಹೇಳಿದ್ದಾರೆ.

    ಕೊಲೆಯೋ, ಸಹಜ ಸಾವೋ?: ಸನಮ್ ಹೃದಯ ಪತ್ತೆಯಾಗದ ಹೊರತು ಪೊಲೀಸರು ಇದನ್ನ ಕೊಲೆ ತನಿಖೆ ಎಂದು ಕೂಡ ಹೇಳಲು ಸಾಧ್ಯವಿಲ್ಲ. ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರು ಸಹಜ ಸಾವು ಎಂದು ಹೇಳಿದ್ದಾರೆ. ಆದ್ರೆ ಸನಮ್ ಹೃದಯ ಸಿಗದೆ ನಾವು ಇದು ಸುಳ್ಳು ಎಂದು ಸಾಬೀತುಪಡಿಸಲು ಸಾಧ್ಯವಿಲ್ಲ ಎಂದು ಸಿಬಿಐ ಅಧಿಕಾರಿಯೊಬ್ಬರು ಹೇಳಿದ್ದಾರೆ.

    ಉತ್ತರ ಸಿಗದ ಪ್ರಶ್ನೆಗಳು:
    > ಸನಮ್ ಸ್ನೇಹಿತರು ಆಸ್ಪತ್ರೆಯಲ್ಲಿ ಅಥವಾ ಅಂತ್ಯಸಂಸ್ಕಾರದ ವೇಳೆ ಯಾಕೆ ಇರಲಿಲ್ಲ?
    > ಸನಮ್ ಫೋನ್ ಮೆಮೊರಿ ಸಂಪೂರ್ಣವಾಗಿ ಕ್ಲೀನ್ ಮಾಡಿದ್ದು ಯಾರು?
    > ಆಕೆಯ ಫೋನ್‍ನಲ್ಲಿದ್ದ 8 ಜಿಬಿ ಮೆಮೊರಿ ಕಾರ್ಡ್ ಜಾಗದಲ್ಲಿ 2 ಜಿಬಿ ಕಾರ್ಡ್ ಬದಲಿಸಿದ್ದು ಯಾರು?
    > ಮರಣೋತ್ತರ ಪರೀಕ್ಷೆಯ ವೇಳೆ ವೈದ್ಯರು ದೇಹದ ಪ್ರಮುಖ ಅಂಗಗಳ ಫೋಟೋ ಯಾಕೆ ತೆಗೆದಿರಲಿಲ್ಲ.
    > ಅಧಿಕಾರಿಗಳು ಸನಮ್ ಹೃದಯದ ಜಾಗದಲ್ಲಿ ಪುರುಷನ ಹೃದಯ ಬದಲಾಯಿಸಿದ್ದು ಹೇಗೆ?
    > ಎರಡನೇ ಬಾರಿಯೂ ಸನಮ್ ಹೃದಯ ಬದಲಾವಣೆ ಆದದ್ದು ಹೇಗೆ?

  • ಲಾಲೂ ಪ್ರಸಾದ್ ಯಾದವ್‍ಗೆ ಸಿಬಿಐ ಶಾಕ್- 12 ಕಡೆ ದಾಳಿ

    ಲಾಲೂ ಪ್ರಸಾದ್ ಯಾದವ್‍ಗೆ ಸಿಬಿಐ ಶಾಕ್- 12 ಕಡೆ ದಾಳಿ

    ನವದೆಹಲಿ: ಆರ್‍ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್‍ಗೆ ಬೆಳ್ಳಂಬೆಳಗ್ಗೆ ಸಿಬಿಐ ಶಾಕ್ ನೀಡಿದೆ.

    2006ರಲ್ಲಿ ಲಾಲೂ ಪ್ರಸಾದ್ ಯಾದವ್ ರೈಲ್ವೆ ಮಂತ್ರಿಯಾಗಿದ್ದಾಗ ಹೋಟೆಲ್‍ಗಳಿಗೆ ನೀಡಿದ ಗುತ್ತಿಗೆಯಲ್ಲಿ ಅಕ್ರಮ ಎಸಗಿದ ಆರೋಪದ ಮೇಲೆ ಲಾಲೂ ವಿರುದ್ಧ ಸಿಬಿಐ ದೂರು ದಾಖಲಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ 5.30ರ ವೇಳೆಗೆ ಲಾಲೂ ಮನೆ ಮೇಲೆ ಸಿಬಿಐ ದಾಳಿ ನಡೆಸಿದೆ. ಅಲ್ಲದೆ ದೆಹಲಿ, ಪಾಟ್ನಾ, ಗುರಗಾಂವ್ ಸೇರಿದಂತೆ ಒಟ್ಟು 12 ಕಡೆ ದಾಳಿ ನಡೆಸಿದೆ. ಲಾಲೂ ಪತ್ನಿ ರಾಬ್ರಿದೇವಿ, ಬಿಹಾರದಲ್ಲಿ ಸಚಿವರಾಗಿರೋ ಪುತ್ರ ತೇಜಸ್ವಿ ಯಾದವ್ ಮೇಲೆ ಕೂಡ ಸಿಬಿಐ ಕೇಸ್ ದಾಖಲಿಸಿಕೊಂಡಿದೆ.

    ಪುರಿ ಮತ್ತು ರಾಂಚಿಯಲ್ಲಿ ರೈಲ್ವೆಗಾಗಿ ಎರಡು ಹೋಟೆಲ್‍ಗಳನ್ನು ನಡೆಸಲು ಹರ್ಷ್ ಕೊಚ್ಚರ್ ಎಂಬವರಿಗೆ 15 ವರ್ಷಗಳ ಗುತ್ತಿಗೆ ನೀಡಿದ್ದು, ಅದಕ್ಕೆ ಪ್ರತಿಯಾಗಿ ಲಾಲೂ ಪ್ರಸಾದ್ ಯಾದವ್ ಕುಟುಂಬ ಪಾಟ್ನಾದಲ್ಲಿ ಎರಡು ಎಕರೆ ಜಮೀನನ್ನು ಪಡೆದಿದ್ದಾರೆ ಎಂದು ಸಿಬಿಐ ಆರೋಪಿಸಿದೆ. ಮೊದಲಿಗೆ ಕೊಚ್ಚರ್ ಎರಡು ಎಕರೆ ಜಮೀನನ್ನು ಲಾಲೂ ಪ್ರಸಾದ್ ಯಾದವ್‍ರ ಪಕ್ಷದ ಸಂಸದರೊಬ್ಬರ ಪತ್ನಿಯ ಕಂಪೆನಿಗೆ ಮಾರಾಟ ಮಾಡಿದ್ದು, ಅನಂತರ ಜಮೀನು ಲಾಲು ಪತ್ನಿ ಮತ್ತು ಮಕ್ಕಳ ಹೆಸರಿಗೆ ವರ್ಗಾವಣೆಯಾಗಿದೆ ಎಂದು ವರದಿಯಾಗಿದೆ.

    ಹೋಟೆಲ್ ಗುತ್ತಿಗೆಗೆ ಸಂಬಂಧಿಸಿದಂತೆ ಐಆರ್‍ಸಿಟಿಸಿ(ಇಂಡಿಯನ್ ರೈಲ್ವೆ ಕೇಟರಿಂಗ್ ಅಂಡ್ ಟೂರಿಸಂ ಕರ್ಪೊರೇಷನ್‍ನ) ಮುಖ್ಯಸ್ಥ ಪಿಕೆ ಗೋಯಲ್ ಮೇಲೂ ಸಿಬಿಐ ಪ್ರಕರಣ ದಾಖಲಿಸಿಕೊಂಡಿದೆ.

    ಇನ್ನು ದಾಳಿ ಬಗ್ಗೆ ಆರ್‍ಜೆಡಿ ಕಾರ್ಯಕರ್ತರು ಗರಂ ಆಗಿದ್ದು, ಇದು ರಾಜಕೀಯ ಪ್ರೇರಿತ ಎಂದು ಅಪಾದಿಸಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಇದೊಂದು ಕರಾಳ ದಿನ. ನಾವು ರಾಜಕೀಯವಾಗಿ ಹಾಗೂ ಕಾನೂನಾತ್ಮಕವಾಗಿ ಹೋರಾಡುತ್ತೇವೆ ಎಂದು ಆರ್‍ಜೆಡಿ ಮುಖಂಡ ಮನೋಜ್ ಜಾ ಹೇಳಿದ್ದಾರೆ. ಈ ಮಧ್ಯೆ ಸಿಎಂ ನಿತೀಶ್ ಕುಮಾರ್ ರಾಜ್‍ಗಿರ್‍ನಲ್ಲಿ ದಿಢೀರನೆ ಹಿರಿಯ ಅಧಿಕಾರಿಗಳ ಸಭೆ ಕರೆದಿದ್ದಾರೆ.

  • ಮಸಾಜ್ ಪಾರ್ಲರ್ ಮೇಲೆ ದಾಳಿ ನಡೆಸಿದ ‘ಸಿಬಿಐ ಅಧಿಕಾರಿ’ ವಶಕ್ಕೆ!

    ಮಸಾಜ್ ಪಾರ್ಲರ್ ಮೇಲೆ ದಾಳಿ ನಡೆಸಿದ ‘ಸಿಬಿಐ ಅಧಿಕಾರಿ’ ವಶಕ್ಕೆ!

    ಬೆಂಗಳೂರು: ಸಿಬಿಐ ಹೆಸರನ್ನು ಹೇಳಿಕೊಂಡು ಮಸಾಜ್ ಪಾರ್ಲರ್ ಮೇಲೆ ದಾಳಿ ಮಾಡಿ ಯುವತಿಯರನ್ನ ಕೆಟ್ಟದಾಗಿ ನಡೆಸಿಕೊಂಡಿರುವ ಘಟನೆ ಬೆಂಗಳೂರಿನ ಬಾಣಸವಾಡಿಯಲ್ಲಿ ನಡೆದಿದೆ.

    ಶ್ರೀನಿವಾಸ್ ಮತ್ತು ಅವರ ತಂಡ ತಾವು ದೆಹಲಿಯ ನ್ಯಾಷನಲ್ ಇನ್ವೆಸ್ಟಿಗೇಷನ್ ಕ್ರೈಂ ಟೀಂ ಮತ್ತು ಸಿಬಿಐ ಅಧಿಕಾರಿಗಳು ಎಂದು ಸುಳ್ಳು ಹೇಳಿಕೊಂಡು ಶುಕ್ರವಾರ ಸಂಜೆ 5 ಗಂಟೆಗೆ ಮಸಾಜ್ ಪಾರ್ಲರ್ ಮನೆ ಮೇಲೆ ದಾಳಿ ಮಾಡಿದ್ದಾರೆ.

    ಮಸಾಜ್ ಪಾರ್ಲರ್ ಮನೆಯಲ್ಲಿ ಇದ್ದ ಆರು ಯುವತಿಯರನ್ನ ಇವರು ಕೆಟ್ಟದಾಗಿ ನಡೆಸಿಕೊಂಡಿದ್ದಾರೆ. ಇವರು ವಿಡಿಯೋ ಮಾಡೋದನ್ನ ನೋಡಿ ಯುವತಿಯರು ಮುಖ ಮುಚ್ಚಿಕೊಂಡಿದ್ದಾರೆ. ಅದಕ್ಕೆ ಸಿಟ್ಟಾದ ಇವರು ಮುಖ ತೆಗೆಯದಿದ್ದರೆ ಟಿವಿಯಲ್ಲಿ ಹಾಕಿ, ನಡುರಸ್ತೆಯಲ್ಲಿ ಮೆರವಣಿಗೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಬಲವಂತವಾಗಿ ಯುವತಿಯರು ಮುಖ ಮುಚ್ಚಿಕೊಂಡಿದ್ದರೂ ಕೈ ತೆಗೆದು ಅವರ ಮೇಲೆ ದೌರ್ಜನ್ಯ ನಡೆಸಿದ್ದಾರೆ.

    ಸಾರ್ವಜನಿಕರು ನೇರವಾಗಿ ನುಗ್ಗಿ ದಾಳಿ ನಡೆಸುವಂತಿಲ್ಲ. ಸಂಬಂಧಪಟ್ಟ ಠಾಣೆಗೆ ತಿಳಿಸಿ ನಂತರ ಪೊಲೀಸರು ದಾಳಿ ನಡೆಸಬೇಕಾಗುತ್ತದೆ. ಆದರೆ ಇಲ್ಲಿ ಇವರೇ ಕಾನೂನು ಕೈಗೆ ತೆಗೆದುಕೊಂಡು ದಾಳಿ ನಡೆಸಿದ್ದಕ್ಕೆ ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶ್ರೀನಿವಾಸ್ ಮತ್ತು ಗೌರಮ್ಮಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

    ಹಲವು ವಿಸಿಟಿಂಗ್ ಕಾರ್ಡ್: ಶ್ರೀನಿವಾಸ್ ಹಲವು ಇಲಾಖೆ ಹೆಸರಿನಲ್ಲಿ ವಿಸಿಟಿಂಗ್ ಮಾಡಿಸಿದ್ದಾನೆ. ನ್ಯಾಷನಲ್ ಇನ್ವೆಸ್ಟಿಗೇಷನ್ ಬ್ಯುರೋ, ನ್ಯಾಷನಲ್ ಮಿಡಿಯಾ ಕೌನ್ಸಿಲ್, ಸಿಟಿಜನ್ ರೈಟ್ಸ್ ಪ್ರೊಟೆಕ್ಷನ್ ಕೌನ್ಸಿಲ್ ಹೆಸರಿನ ಕಾರ್ಡ್ ಬಳಸಿ ಬೆದರಿಕೆ ಹಾಕಿದ್ದಾನೆ.

  • ನಕಲಿ ಪಾಸ್‍ಪೋರ್ಟ್ ಕೇಸ್: ಚೋಟಾ ರಾಜನ್‍ಗೆ 7ವರ್ಷ ಜೈಲು ಶಿಕ್ಷೆ

    ನಕಲಿ ಪಾಸ್‍ಪೋರ್ಟ್ ಕೇಸ್: ಚೋಟಾ ರಾಜನ್‍ಗೆ 7ವರ್ಷ ಜೈಲು ಶಿಕ್ಷೆ

    ನವದೆಹಲಿ: ನಕಲಿ ಪಾಸ್‍ಪೋರ್ಟ್  ಪ್ರಕರಣದ ಅಪರಾಧಿ ಭೂಗತ ಪಾತಕಿ 55 ವರ್ಷದ ರಾಜೇಂದ್ರ ಸಹದೇವ್ ನಿಖಲ್ಜೆ ಅಲಿಯಾಸ್ ಚೋಟಾ ರಾಜನ್‍ಗೆ ಸಿಬಿಐ ವಿಶೇಷ ಕೋರ್ಟ್ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

    ಸೋಮವಾರ ತೀರ್ಪು ನೀಡಿದ್ದ ನ್ಯಾಯಾಧೀಶ ವೀರೇಂದ್ರ ಕುಮಾರ್ ಗೋಯಲ್ ಇಂದು ರಾಜನ್ ಸೇರಿ ಒಟ್ಟು ನಾಲ್ವರು ಅಪರಾಧಿಗಳಿಗೆ 7 ವರ್ಷ ಜೈಲು ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದರು.

    ಏನಿದು ಪ್ರಕರಣ?
    3 ಮಂದಿ ಸರ್ಕಾರಿ ಅಧಿಕಾರಿಗಳ ನೆರವಿನಿಂದ ಮೋಹನ್ ಕುಮಾರ್ ಎಂಬ ಹೆಸರಿನ ನಕಲಿ ಪಾಸ್‍ಪೋರ್ಟ್ ಅನ್ನು ಹೊಂದಿದ್ದ ಆರೋಪ ಚೋಟಾ ರಾಜನ್ ಮೇಲಿತ್ತು. ಈ ಕೇಸ್ ಬಗ್ಗೆ ಸಿಬಿಐ ತಂಡ ತನಿಖೆ ನಡೆಸಿ ಚೋಟಾ ಹಾಗೂ ಮೂವರು ನಿವೃತ್ತ ಸರ್ಕಾರಿ ಅಧಿಕಾರಿಗಳ ಮೇಲೆ ಆರೋಪ ಪಟ್ಟಿ ಸಲ್ಲಿಸಿದ್ದರು. 2016ರ ಜೂನ್ 8ರಂದು ಈ ಸಂಬಂಧ ಪಾಸ್‍ಪೋರ್ಟ್ ಅಧಿಕಾರಿಗಳಾದ ಜಯಶ್ರೀ ದತ್ತಾತ್ರೇಯ ರಹಾಟೆ, ದೀಪಕ್ ನಟವರ್‍ಲಾಲ್ ಷಹಾ ಹಾಗೂ ಲಲಿತಾ ಲಕ್ಷ್ಮಣ್ ಮತ್ತು ಚೋಟಾರಾಜನ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಪಾಸ್‍ಪೋರ್ಟ್ ಕಾಯಿದೆ ಅನ್ವಯ ಮೌಲ್ಯಯುತ ಭದ್ರತಾ ದಾಖಲೆಗಳ ನಕಲು, ಕ್ರಿಮಿನಲ್ ಪ್ರಕರಣ ಹಾಗೂ ಪಿತೂರಿ ಪ್ರಕರಣವೆಂದು ಪರಿಗಣಿಸಿ ಆರೋಪಿಸಲಾಗಿತ್ತು.

    ಚೋಟಾರಾಜನ್‌ಗೆ ಮೋಹನ್‌ಕುಮಾರ್‌ ಎಂಬ ಹೆಸರಿನಲ್ಲಿ ಜಯಶ್ರೀ, ಷಹಾ ಹಾಗೂ ಲಕ್ಷ್ಮಣ್ 1998–99ರಲ್ಲಿ ಬೆಂಗಳೂರಿನಲ್ಲಿ ಪಾಸ್‍ಪೋರ್ಟ್ ನೀಡಿದ್ದಾರೆ ಎಂದು ವಿರುದ್ಧ ಸಿಬಿಐ ತನ್ನ ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖಿಸಿತ್ತು.

    ರಾಜನ್ ಬೆಂಗಳೂರಿನ ಪ್ರಾದೇಶಿಕ ಪಾಸ್‍ಪೋರ್ಟ್ ಕಚೇರಿಯಿಂದ ಮೋಹನ್ ಕುಮಾರ್ ಹೆಸರಿನಲ್ಲಿ ಪಾಸ್‍ಪೋರ್ಟ್ ಪಡೆದಿದ್ದರೆ, ಇನ್ನೊಂದು ಪಾಸ್‍ಪೋರ್ಟನ್ನು ಸಿಡ್ನಿಯ ಭಾರತೀಯ ದೂತಾವಾಸ ಕೇಂದ್ರದಿಂದ ಪಡೆದುಕೊಂಡಿದ್ದ.

    ಚೋಟಾ ರಾಜನ್ ವಿರುದ್ಧ ಮಹಾರಾಷ್ಟ್ರ, ದೆಹಲಿ, ಉತ್ತರಪ್ರದೇಶ ಹಾಗೂ ಗುಜರಾತ್ ರಾಜ್ಯಗಳು ಸೇರಿದಂತೆ ಸುಮಾರು 70 ಪ್ರಕರಣಗಳನ್ನು ಸಿಬಿಐ ದಾಖಲಿಸಿತ್ತು. ಪ್ರಸ್ತುತ ಈಗ ಚೋಟಾ ರಾಜನ್ ತಿಹಾರ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾನೆ.

    ಮಂಡ್ಯ ಪಾಸ್‍ಪೋರ್ಟ್: ಚೋಟಾ ರಾಜನ್ ತನಿಖಾ ಸಂಸ್ಥೆಗಳ ಕಣ್ತಪ್ಪಿಸುವ ಉದ್ದೇಶದಿಂದ ನಕಲಿ ಪಾಸ್‍ಪೋರ್ಟ್ ಗಳನ್ನು ಬಳಸಿ ವ್ಯವಹಾರ ನಡೆಸುತ್ತಿದ್ದ. ಇಂಡೋನೇಷಿಯಾದಲ್ಲಿ ಬಂಧನದ ವೇಳೆ ಕರ್ನಾಟಕದ ಮಂಡ್ಯ ಜಿಲ್ಲೆಯ ಹೆಸರುಳ್ಳ ನಕಲಿ ಪಾಸ್‍ಪೋರ್ಟ್ ಈತನ ಬಳಿಯಿತ್ತು. ಆಸ್ಟ್ರೇಲಿಯಾದ ಸಿಡ್ನಿಯಿಂದ ಇಂಡೋನೇಷಿಯಾಗೆ ಚೋಟಾ ರಾಜನ್ ತೆರಳುತ್ತಿರುವ ಬಗ್ಗೆ ತನಿಖಾ ಸಂಸ್ಥೆಗಳಿಗೆ ಖಚಿತ ಮಾಹಿತಿ ಸಿಕ್ಕಿತ್ತು. ಆದರೆ ಪಾಸ್ ಪೋರ್ಟ್ ಪರಿಶೀಲನೆ ವೇಳೆ ಮೋಹನ್ ಕುಮಾರ್ ಎಂಬ ಹೆಸರಿನ ವ್ಯಕ್ತಿಯನ್ನು ಬಾಲಿ ಪೊಲೀಸರು ವಶಕ್ಕೆ ಪಡೆದಿದ್ದರು. ಇದರಿಂದಾಗಿ ಆರಂಭದಲ್ಲಿ ತನಿಖಾ ಸಂಸ್ಥೆಗಳಲ್ಲಿ ಗೊಂದಲ ಹುಟ್ಟಿಸಿತ್ತು. ಅಂತಿಮವಾಗಿ 2015ರ ಅಕ್ಟೋಬರ್‍ನಲ್ಲಿ ಚೋಟಾ ರಾಜನನ್ನು ಬಾಲಿ ಪೊಲೀಸರು ಬಂಧಿಸಿದರು.

  • ಡಿವೈಎಸ್‍ಪಿ ಗಣಪತಿ ಆತ್ಮಹತ್ಯೆ ಕೇಸ್ ರೀ ಓಪನ್

    ಡಿವೈಎಸ್‍ಪಿ ಗಣಪತಿ ಆತ್ಮಹತ್ಯೆ ಕೇಸ್ ರೀ ಓಪನ್

    – ಸಿಐಡಿಯಿಂದ ಎಫ್‍ಎಸ್‍ಎಲ್ ವರದಿ ಸಲ್ಲಿಕೆ

    ಮಡಿಕೇರಿ: ಓರ್ವ ಸಚಿವರು ಹಾಗು ಇಬ್ಬರು ಅಧಿಕಾರಿಗಳು ತಮಗೆ ಮಾನಸಿಕ ಕಿರುಕುಳವಾಗುತ್ತಿದೆ ಎಂದು ಆರೋಪಿಸಿ ಹೇಳಿಕೆ ನೀಡಿ ಆತ್ಮಹತ್ಯೆ ಮಾಡಿಕೊಂಡಿದ್ದ ಡಿವೈಎಸ್ಪಿ ಎಂ.ಕೆ.ಗಣಪತಿ ಪ್ರಕರಣಕ್ಕೆ ಮತ್ತೆ ಮರುಜೀವ ಬಂದಿದೆ.

    ಸಿಐಡಿಯಿಂದ ಬಿ ರಿಪೋರ್ಟ್, ಹೈಕೋರ್ಟ್ ನಲ್ಲಿಯೂ ಖಾಸಗಿ ದೂರು ವಜಾ, ಮಡಿಕೇರಿ ಜೆಎಂಎಫ್ ಸಿ ನ್ಯಾಯಾಲಯದಲ್ಲಿ ಗಣಪತಿ ಪುತ್ರ ನೇಹಲ್ ಕೇಸ್ ಮುಂದುವರೆಸಲು ನಿರಾಸಕ್ತಿಯಿಂದ ಇನ್ನೇನು ಈ ಪ್ರಕರಣ ಮುಗಿದೇ ಹೋಯ್ತು ಎನ್ನುವಷ್ಟರಲ್ಲಿ ಮಡಿಕೇರಿ ಜೆಎಂಎಫ್ ಸಿ ಕೋರ್ಟ್ ಕುಟುಂಬ ಸದಸ್ಯರನ್ನು ದೂರುದಾರರನ್ನಾಗಿ ಪರಿಗಣಿಸುವಂತೆ ಇಂದು ಅದೇಶ ನೀಡಿದೆ.

    ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಅನ್ನಪೂರ್ಣಶ್ವರಿ ಕುಟುಂಬ ಸದಸ್ಯರನ್ನು ಈ ಪ್ರಕರಣದಲ್ಲಿ ದೂರುದಾರರನ್ನಾಗಿ ಪರಿಗಣಿಸುವಂತೆ ಇಂದು ಅದೇಶ ನೀಡಿದ್ದಾರೆ.

    ಮಾಚ್ಚಯ್ಯ (ಗಣಪತಿಯವರ ಸಹೋದರ)

    ಮೊದಲ ಜಯ: ಏಪ್ರಿಲ್ 10ರ ಒಳಗಡೆ ನಮಗೆ ಆಕ್ಷೇಪಣೆ ಸಲ್ಲಿಸಲು ಆದೇಶ ಸಿಕ್ಕಿದೆ. ವಿಶೇಷ ಏನೆಂದರೆ ಪ್ರಕರಣದ ಬಿ ರಿಪೋರ್ಟ್ ಸಲ್ಲಿಕೆಯಾದ ಬಳಿಕ ಇಂದು ಸಿಐಡಿಯವರು ವಿಧಿವಿಜ್ಞಾನ ಪ್ರಯೋಗಾಲಯದ (ಎಫ್‍ಎಸ್‍ಎಲ್) ವರದಿಯನ್ನು ಸಲ್ಲಿಸಿದ್ದಾರೆ. ಇಲ್ಲಿಯವರೆಗೆ ಸುಮ್ಮನಿದ್ದ ಇವರು ಇಂದು ವರದಿ ಸಲ್ಲಿಸಿದ್ದನ್ನು ನೋಡುವಾಗ ನಮ್ಮ ಅನುಮಾನಗಳು ಮತ್ತಷ್ಟು ಹೆಚ್ಚಾಗಿದ್ದು, ತನಿಖೆ ಹೇಗೆ ನಡೆದಿದೆ ಎನ್ನುವ ಪ್ರಶ್ನೆ ಹುಟ್ಟಿಕೊಂಡಿದೆ. ಈ ಪ್ರಕರಣದಲ್ಲಿ ನಮಗೆ ಈಗ ಮೊದಲ ಜಯ ಸಿಕ್ಕಿದೆ ಎಂದು ಗಣಪತಿ ಸಹೋದರ ಮಾಚಯ್ಯ ಮಾಧ್ಯಮಗಳಿಗೆ ತಿಳಿಸಿದ್ದಾರೆ.

    ಏನಿದು ಪ್ರಕರಣ?:
    2016 ಜುಲೈ 7 ರಂದು ಡಿವೈಎಸ್ಪಿ ಗಣಪತಿ ಮಡಿಕೇರಿಯ ಲಾಡ್ಜ್ ನಲ್ಲಿ ಆತ್ಮಹತ್ಯೆ ಶರಣಾಗುವ ಮುನ್ನ ಸ್ಥಳೀಯ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ, ಮುಂದೆ ನನಗೆ ಏನಾದ್ರೂ ಆದರೆ ಅದಕ್ಕೆ ಸಚಿವ ಕೆಜೆ ಜಾರ್ಜ್, ಪೊಲೀಸ್ ಅಧಿಕಾರಿಗಳಾದ ಅಶಿತ್ ಮೋಹನ್ ಪ್ರಸಾದ್ ಮತ್ತು ಪ್ರಣಬ್ ಮೊಹಂತಿ ಕಾರಣ ಎಂದು ನೇರವಾಗಿ ಆರೋಪಿಸಿದ್ದರು. ಈ ಸಂದರ್ಶನ ನೀಡಿದ ಬಳಿಕ ಸಂಜೆ ಮಡಿಕೇರಿ ನಗರದ ಲಾಡ್ಜ್ ನಲ್ಲಿ ನೇಣಿಗೆ ಶರಣಾಗಿದ್ದರು. ಈ ಪ್ರಕರಣದ ತನಿಖೆಯನ್ನು ನಡೆಸಿದ ಸಿಐಡಿ ಸಚಿವ ಜಾರ್ಜ್ ಮತ್ತು ಐಪಿಎಸ್ ಅಧಿಕಾರಿಗಳಿಗೆ ಬಿ ರಿಪೋರ್ಟ್ ಸಲ್ಲಿಸಿ ಕ್ಲೀನ್ ಚೀಟ್ ನೀಡಿತ್ತು.

    ಸಬೀತಾ (ಗಣಪತಿಯವರ ಸಹೋದರಿ)

    ಸುಪ್ರೀಂನಲ್ಲಿದೆ ಮತ್ತೊಂದು ಅರ್ಜಿ: ಸಿಐಡಿ ವರದಿಯಲ್ಲಿ ಸಚಿವ ಜಾರ್ಜ್ ಗೆ ಕ್ಲಿನ್ ಚಿಟ್ ನೀಡಿದ್ದನ್ನು ಪ್ರಶ್ನಿಸಿ ಸಿಬಿಐ ತನಿಖೆಗೆ ಆಗ್ರಹಿಸುವಂತೆಗಣಪತಿ ತಂದೆ ಕುಶಾಲಪ್ಪ ಈ ಹಿಂದೆ ಕರ್ನಾಟಕ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ ಈ ಅರ್ಜಿಯನ್ನು ನ್ಯಾ.ಎಸ್.ಅಬ್ದುಲ್ ನಜೀರ್ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ ವಜಾಗೊಳಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಕುಶಾಲಪ್ಪ ಸುಪ್ರೀಂ ಕೋರ್ಟ್ ಮೆಟ್ಟಿಲು ಏರಿದ್ದು, ನ್ಯಾ. ಆನಂದಕುನಾರ್ ಗೊಯೇಲ್ ಮತ್ತು ಉದಯ್ ಲಲಿತ್ ನೇತೃತ್ವದ ದ್ವಿ ಸದಸ್ಯ ಪೀಠದಲ್ಲಿ ಈ ಅರ್ಜಿಯ ವಿಚಾರಣೆ ನಡೆಯುತ್ತಿದೆ.

    ತಕರಾರು ಅರ್ಜಿ ಸಲ್ಲಿಸಿರಲಿಲ್ಲ: ಸಚಿವ ಜಾರ್ಜ್ ಅವರಿಗೆ ಸಿಐಡಿ ನೀಡಿರುವ ಬಿ ರಿಪೋರ್ಟ್ ಅನ್ನು ಗಣಪತಿ ಅವರ ಪುತ್ರ ನೇಹಾಲ್ ಒಪ್ಪಿಕೊಂಡಿದ್ದರು. ಸಿಐಡಿ ಸಲ್ಲಿಸಿದ ಬಿ ರಿಪೋರ್ಟ್ ಗೆ ಗಣಪತಿ ಪುತ್ರ ಯಾವುದೇ ತಕರಾರು ಅರ್ಜಿ ಸಲ್ಲಿಸಿರಲಿಲ್ಲ.

     

    https://www.youtube.com/watch?v=AGmp1M_0q2s

     

    https://www.youtube.com/watch?v=p2V1xEclj3g

  • ಈಗಾಗಲೇ ನಾನು ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದೇನೆ: ಲೆಹರ್ ಸಿಂಗ್

    ಈಗಾಗಲೇ ನಾನು ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದೇನೆ: ಲೆಹರ್ ಸಿಂಗ್

    ಬೆಂಗಳೂರು: ನನ್ನ ಜೀವನದಲ್ಲಿ ನನಗೆ ಡೈರಿ ಬರೆದು ಅಭ್ಯಾಸವೇ ಇಲ್ಲ, ನಾನು ಡೈರಿ ಬರೆಯಲ್ಲ, ನನ್ನ ಸಹಿ ದುರುಪಯೋಗ ಪಡಿಸಿಕೊಳ್ಳಲಾಗಿದೆ, ಡೈರಿ ಪ್ರಕರಣವನ್ನು ಸಿಬಿಐ ತನಿಖೆಗೆ ಕೊಡಿ, ನಾನು ಯಾವುದೇ ತನಿಖೆಗೆ ಸಿದ್ಧ ಅಂತಾ ವಿಧಾನಪರಿಷತ್ ಸದಸ್ಯ, ಬಿಜೆಪಿ ಸಹ ಖಜಾಂಚಿ ಲೆಹರ್ ಸಿಂಗ್ ಹೇಳಿದ್ದಾರೆ.

    ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಇದೊಂದು ದೊಡ್ಡ ಷಡ್ಯಂತ್ರವಾಗಿದ್ದು, ಲೆಹರ್ ಎಂದೇ ನಾನು ಸಹಿ ಮಾಡೋದು. ಆದ್ರೆ ಡೈರಿಯಲ್ಲಿ ಲೆಹರ್ ಸಿಂಗ್ ಅಂತಿದೆ, ಆದರೆ ಕಾಂಗ್ರೆಸ್ ಬಿಡುಗಡೆ ಮಾಡಿದ ಡೈರಿಯಲ್ಲಿ ಇದು ತಪ್ಪಾಗಿದೆ. ಈಗಾಗಲೇ ಶುಕ್ರವಾರ ಬಿಜೆಪಿಯಿಂದ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ ಎಂದು ತಿಳಿಸಿದರು.

    ಬೆಂಗಳೂರು ಪೊಲೀಸ್ ಕಮಿಷನರ್ ಗೂ ಇವತ್ತು ದೂರು ನೀಡಿದ್ದು, ಡಿಜಿಪಿಗೂ ನಾಳೆ ದೂರು ನೀಡುತ್ತೇನೆ. ಅಲ್ಲದೆ ನಕಲಿ ಡೈರಿ ಮೂಲ ಪತ್ತೆಗೆ ಗೃಹ ಸಚಿವರನ್ನು ಭೇಟಿ ಮಾಡಿ ಮನವಿ ಮಾಡಿಕೊಳ್ಳುತ್ತೇನೆ ಎಂದರು.

    ಇದು ನನ್ನ ರಾಜಕೀಯ ಜೀವನದ ಪ್ರಥಮ ಸುದ್ದಿಗೋಷ್ಠಿ, ಇಲ್ಲಿವರೆಗೆ ಸುದ್ದಿಗೋಷ್ಠಿ ಮಾಡುವ ಯಾವುದೇ ಅನಿವಾರ್ಯತೆ ಬಂದಿರಲಿಲ್ಲ. ಇದೀಗ ಅನಿವಾರ್ಯತೆ ಬಂದಿರೋದ್ರಿಂದ ಸುದ್ದಿಗೋಷ್ಠಿ ನಡೆಸುತ್ತಿದ್ದೇನೆ, ನನ್ನ ವಿರುದ್ಧ ಬಿಡುಗಡೆ ಮಾಡಿರುವ ಡೈರಿ ವಿಚಾರವನ್ನು ನಾನು ಗಂಭೀರವಾಗಿ ಪರಿಗಣಿಸಿದ್ದೇನೆ ಎಂದು ಲೆಹರ್ ಸಿಂಗ್ ಹೇಳಿದರು.

    ಆಡ್ವಾನಿಯವರಿಗೆ ಲೆಹರ್ ಸಿಂಗ್ ಪತ್ರ ಬರೆದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಅಡ್ವಾಣಿಯವರು ನನ್ನ ತಂದೆ ಸಮಾನ, 4 ವರ್ಷದ ಬಳಿಕ ದಿನೇಶ್ ಗುಂಡೂರಾವ್ ಗೆ ನಾನು ಬರೆದ ಲೆಟರ್ ನೆನಪಾಗಿದೆ. ಲೆಟರ್ ಬಗ್ಗೆ ನಾನು ಮಾತಾಡಲ್ಲ, ನಮ್ಮ ಮನೆ ವಿಚಾರ ನಾನು ಬಹಿರಂಗ ಪಡಿಸಲ್ಲ ಅಂತಾ ಉತ್ತರ ನೀಡದೇ ಲೆಹರ್ ಸಿಂಗ್ ಜಾರಿಕೊಂಡ್ರು.

    ಯಡಿಯೂರಪ್ಪ ಭ್ರಷ್ಟ ಅನ್ನೋದಾದ್ರೆ ಅವರ ನೀಡುವ ದುಡ್ಡು ನಿಮಗ್ಯಾಕೆ ಎಂದು ಪ್ರಶ್ನಿಸಿ ಅಡ್ವಾಣಿಯವರಿಗೆ ಲೆಹರ್‍ಸಿಂಗ್ ಬರೆದಿದ್ದ ಪತ್ರವನ್ನು ನಿನ್ನೆ ಕಾಂಗ್ರೆಸ್ ನಾಯಕರು ಬಿಡುಗಡೆ ಮಾಡಿದ್ರು. ಆ ಬಗ್ಗೆ ಪ್ರತಿಕ್ರಿಯಿಸಿ, ನಾನು ಹಂಗೆ ಪತ್ರ ಬರದೇ ಇಲ್ಲ ಎಂದು ಹೇಳಿದ್ರು.

  • ಡೈರಿ ಡೈನಮೈಟ್ ಸ್ಫೋಟಕ್ಕೆ ಊಹಿಸಲಸಾಧ್ಯ ಟ್ವಿಸ್ಟ್: ಗೋವಿಂದರಾಜು ಹೇಳಿಕೆಯಿಂದಲೇ ಸರ್ಕಾರಕ್ಕೆ ಕಂಟಕ!

    ಡೈರಿ ಡೈನಮೈಟ್ ಸ್ಫೋಟಕ್ಕೆ ಊಹಿಸಲಸಾಧ್ಯ ಟ್ವಿಸ್ಟ್: ಗೋವಿಂದರಾಜು ಹೇಳಿಕೆಯಿಂದಲೇ ಸರ್ಕಾರಕ್ಕೆ ಕಂಟಕ!

    ಬೆಂಗಳೂರು: ಡೈರಿ ಡೈನಮೈಟ್ ಸ್ಫೋಟಕ್ಕೆ ಊಹಿಸಲಸಾಧ್ಯ ಟ್ವಿಸ್ಟ್ ಸಿಕ್ಕಿದೆ. ಐಟಿ ವಿಚಾರಣೆ ವೇಳೆ ಗೋವಿಂದ ರಾಜು ನೀಡಿದ್ದ ಹೇಳಿಕೆಯಿಂದಲೇ ಸಿದ್ದು ಸರ್ಕಾರಕ್ಕೆ ಕಂಟಕ ಎದುರಾಗಿದೆ.

    ಆದಾಯ ತೆರಿಗೆ ಇಲಾಖೆಯ ದಾಳಿ ವೇಳೆ ಎಂಎಲ್‍ಸಿ ಗೋವಿಂದರಾಜು ನಿವಾಸದಲ್ಲಿ ಸಿಕ್ಕಿದೆ ಎನ್ನಲಾದ ಡೈರಿಯ ಒಳಗಡೆ ಇರುವ ಮಾಹಿತಿ ಗುರುವಾರ ಸ್ಫೋಟಗೊಂಡಿತ್ತು. ಈಗ ಈ ಐಟಿ ದಾಳಿಯ ತನಿಖೆ ನಿರ್ಣಾಯಕ ಹಂತ ತಲುಪಿದ್ದು, ಇನ್ನೊಂದು ತಿಂಗಳಿನಲ್ಲಿ ಗೋವಿಂದರಾಜು ಜನ್ಮ ಜಾತಕ ಸಂಪೂರ್ಣ ಬಯಲಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

    ಡೈರಿ ನನ್ನದಲ್ಲ ಸಂಚು ರೂಪಿಸಿ ನನ್ನ ಮನೆಯಲ್ಲಿ ಯಾರೋ ಇಟ್ಟು ಹೋಗಿದ್ದಾರೆ ಎಂದು ಕಳೆದ ವರ್ಷದ ಮಾರ್ಚ್ 15ರಂದು ಐಟಿ ಮುಂದೆ ಗೋವಿಂದರಾಜು ಹೇಳಿಕೆ ನೀಡಿದ್ದಾರೆ. ಹಾಗಾದ್ರೆ ಈ ಡೈರಿ ಯಾರದ್ದು? ಅಲ್ಲಿರೋ ಸಂಕೇತಾಕ್ಷರ ಯಾರದ್ದು ಎನ್ನುವ ಪ್ರಶ್ನೆ ಈಗ ಎದ್ದಿದೆ.

    ಕಳೆದ ಮಾರ್ಚ್ 13ರಂದು ಐಟಿ ವಿಚಾರಣೆ ಆರಂಭವಾಗಿದ್ದು, ಗೋವಿಂದರಾಜು ಆದಾಯದ ಪಕ್ಕಾ ಲೆಕ್ಕವನ್ನು ಐಟಿ ಅಧಿಕಾರಿಗಳು ಹಾಕುತ್ತಿದ್ದಾರೆ. ಸಕ್ರಮ ಹಾಗೂ ಅಕ್ರಮ ಮೂಲಗಳಿಂದ ಬಂದ ಆದಾಯವೆಷ್ಟು ಎನ್ನುವುದನ್ನು ಲೆಕ್ಕ ಹಾಕುತ್ತಿದ್ದಾರೆ. ಅಕ್ರಮ ಮೂಲ ಸಾಬೀತಾದರೆ ಗೋವಿಂದರಾಜುಗೆ ಅವರ ಮೇಲೆ ಜಾರಿ ನಿರ್ದೇಶನಾಲಯ ಮೂಲಕ ಅಕ್ರಮ ಹಣ ವಿನಿಯಮ ಕೇಸ್ ಬೀಳಲಿದೆ.

    ಅಕ್ರಮ ಹಣ ವಿನಿಯಮ ಕೇಸು ಬಿದ್ದರೆ ಗೋವಿಂದರಾಜು ಬಂಧನ ಖಚಿತವಾಗಿದ್ದು, ಗೋವಿಂದರಾಜು ಗ್ಯಾಂಗ್‍ಗೆ ಗಂಡಾಂತರ ಆರಂಭವಾಗಲಿದೆ. ಡೈರಿಯಲ್ಲಿ ನಮೂದಾಗಿರೋ ಶಂಕಿತ ಪ್ರಭಾವಿಗಳಾಗಿರುವ ಕೆಜೆಜಿ, ಎಂಬಿಪಿ, ಆರ್‍ಜಿ ಕಚೇರಿ, ಎಸ್‍ಜಿ ಕಚೇರಿ, ಡಿಜಿವಿಎಸ್, ಎಚ್.ಕಾಂ,ಎಚ್‍ಸಿಎಂ, ಡಿಕೆಎಸ್, ಆರ್‍ಎಲ್‍ಆರ್, ಆರ್‍ವಿಡಿ, ಕೆಂಪ್, ರಘು, ಎಸ್‍ಬಿ, ಎಂ.ವೋರ, ಎಪಿ ಎಲ್ಲರಿಗೂ ಅಪಾಯವಾಗಲಿದೆ.

    ಸಿಬಿಐ ಮೊರೆ: ಹಸ್ತಲಿಪಿಯ ತನಿಖೆ ನಡೆಸುವ ಅಧಿಕಾರ ಐಟಿ ಇಲಾಖೆಗೆ ಇಲ್ಲದ ಕಾರಣ ಬರವಣಿಗೆ ರಹಸ್ಯ ತಿಳಿಯಲು ಸಿಬಿಐ ಮೊರೆ ಹೋಗಲಿದೆ ಎಂದು ಹೇಳಲಾಗುತ್ತಿದೆ. ಸಿಬಿಐಗೆ ಮಾತ್ರ ಈ ಬಗ್ಗೆ ವಿಚಾರಣೆ ನಡೆಸುವ ಅಧಿಕಾರವಿದ್ದು, ಒಂದು ವೇಳೆ ತನಿಖೆ ಆರಂಭವಾದರೆ ಡೈರಿ ಸಿಕ್ಕಿದ ಗೋವಿಂದರಾಜು ಶಯನಗೃಹದಿಂದಲೇ ಆರಂಭವಾಗಲಿದೆ.

  • ಗಣಪತಿ ಆತ್ಮಹತ್ಯೆ ಕೇಸ್ ಸಿಬಿಐಗೆ ನೀಡಿ: 2 ವಾರ ಕಾಲ ವಿಚಾರಣೆ ಮುಂದೂಡಿದ ಸುಪ್ರೀಂ

    ಗಣಪತಿ ಆತ್ಮಹತ್ಯೆ ಕೇಸ್ ಸಿಬಿಐಗೆ ನೀಡಿ: 2 ವಾರ ಕಾಲ ವಿಚಾರಣೆ ಮುಂದೂಡಿದ ಸುಪ್ರೀಂ

    ನವದೆಹಲಿ: ಡಿವೈಎಸ್‍ಪಿ ಎಂ.ಕೆ ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ಆದೇಶಿಸುವಂತೆ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯನ್ನು ಎರಡು ವಾರ ಕಾಲ ಸುಪ್ರೀಂ ಕೋರ್ಟ್ ಮುಂದೂಡಿದಿದೆ.

    ಇಂದು ನಡೆದ ವಿಚಾರಣೆಯಲ್ಲಿ ರಾಜ್ಯ ಸರ್ಕಾರದ ಪರ ವಕೀಲರು ಸಿಐಡಿ ವರದಿಯನ್ನು ಭಾಷಾಂತರ ಮಾಡುವ ನಿಟ್ಟಿನಲ್ಲಿ ನಾಲ್ಕು ವಾರಗಳ ಕಾಲಾವಕಾಶ ನೀಡುವಂತೆ ಮನವಿ ಮಾಡಿದರು. ಜೊತೆಗೆ ಜೊತೆಗೆ ಅರ್ಜಿದಾರ ಕುಶಾಲಪ್ಪ ಪರ ವಕೀಲರು ಆರೋಗ್ಯ ಸಮಸ್ಯೆ ಹಿನ್ನಲೆಯಲ್ಲಿ ನಾಲ್ಕು ವಾರಗಳ ಸಮಯ ನೀಡುವಂತೆ ಮನವಿ ಮಾಡಿದ್ದರು.

    ವಿಚಾರಣೆ ಆಲಿಸಿದ ನ್ಯಾ. ಆನಂದಕುನಾರ್ ಗೊಯೇಲ್ ಮತ್ತು ಉದಯ್ ಲಲಿತ್ ನೇತೃತ್ವದ ದ್ವಿ ಸದಸ್ಯ ಪೀಠ ಎರಡು ವಾರಗಳ ಅವಕಾಶ ನೀಡಿ ಅರ್ಜಿ ವಿಚಾರಣೆಯನ್ನು ಮುಂದೂಡಿದೆ.

    ಏನಿದು ಪ್ರಕರಣ?
    ಡಿವೈಎಸ್ಪಿ ಎಂಕೆ. ಗಣಪತಿ ಮಡಿಕೇರಿಯ ಲಾಡ್ಜ್‍ನಲ್ಲಿ ಆತ್ಮಹತ್ಯೆ ಶರಣಾಗುವ ಮುನ್ನ ಸ್ಥಳೀಯ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ, ಮುಂದೆ ನನಗೆ ಏನಾದ್ರೂ ಆದರೆ ಅದಕ್ಕೆ ಸಚಿವ ಕೆಜೆ ಜಾರ್ಜ್, ಪೊಲೀಸ್ ಅಧಿಕಾರಿಗಳಾದ ಅಶಿತ್ ಮೋಹನ್ ಪ್ರಸಾದ್ ಮತ್ತು ಪ್ರಣಬ್ ಮೊಹಂತಿ ಕಾರಣ ಎಂದು ನೇರವಾಗಿ ಆರೋಪಿಸಿದ್ದರು. ಈ ಸಂದರ್ಶನ ನೀಡಿದ ಬಳಿಕ ಸಂಜೆ ಮಡಿಕೇರಿ ನಗರದ ಲಾಡ್ಜ್ ನಲ್ಲಿ ನೇಣಿಗೆ ಶರಣಾಗಿದ್ದರು. ಈ ಪ್ರಕರಣದ ತನಿಖೆಯನ್ನು ನಡೆಸಿದ ಸಿಐಡಿ ಸಚಿವ ಜಾರ್ಜ್‍ಗೆ ಕ್ಲೀನ್ ಚೀಟ್ ನೀಡಿತ್ತು. ಸಿಐಡಿ ವರದಿಯಲ್ಲಿ ಸಚಿವ ಜಾರ್ಜ್ ಗೆ ಕ್ಲಿನ್ ಚಿಟ್ ನೀಡಿದ್ದನ್ನು ಪ್ರಶ್ನಿಸಿ ಗಣಪತಿ ತಂದೆ ಕುಶಾಲಪ್ಪ ಸುಪ್ರೀಂ ಕೋರ್ಟ್ ನಲ್ಲಿ ಸಿಬಿಐ ತನಿಖೆಗೆ ಆದೇಶಿಸುವಂತೆ ಅರ್ಜಿ ಸಲ್ಲಿಸಿದ್ದಾರೆ.

    ನ್ಯಾ.ಎಸ್.ಅಬ್ದುಲ್ ನಜೀರ್ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ   ಈ ಹಿಂದೆ ಸಿಬಿಐ ತನಿಖೆಗೆ ಆದೇಶಿಸುವಂತೆ ಎಂ.ಕೆ. ಕುಶಾಲಪ್ಪ ಹಾಗೂ ಸಹೋದರ ಎಂ.ಕೆ.ಮಾಚಯ್ಯ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿತ್ತು.

    https://www.youtube.com/watch?v=AGmp1M_0q2s

     

    https://www.youtube.com/watch?v=p2V1xEclj3g

  • ಯೋಗೀಶ ಗೌಡ ಕೊಲೆ ಪ್ರಕರಣ: ಸಿಬಿಐಗೆ ವಹಿಸುವಂತೆ ಬಿಜೆಪಿ ಪ್ರತಿಭಟನೆ

    ಯೋಗೀಶ ಗೌಡ ಕೊಲೆ ಪ್ರಕರಣ: ಸಿಬಿಐಗೆ ವಹಿಸುವಂತೆ ಬಿಜೆಪಿ ಪ್ರತಿಭಟನೆ

    ಧಾರವಾಡ: ಕಳೆದ ಜೂನ್ 15 ರಂದು ದುಷ್ಕರ್ಮಿಗಳಿಂದ ಬರ್ಬರವಾಗಿ ಕೊಲೆಯಾದ ಧಾರವಾಡದ ಹೆಬ್ಬಳ್ಳಿ ಕ್ಷೇತ್ರದ ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೀಶ ಗೌಡನ ಕೊಲೆ ಪ್ರಕರಣದ ಸಿಬಿಐ ತನಿಖೆಗೆ ಆಗ್ರಹಿಸಿ ಧಾರವಾಡದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

    ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ ಕಾರ್ಯಕರ್ತರು, ಈ ಪ್ರಕರಣವನ್ನ ಸಿಬಿಐಗೆ ವಹಿಸಬೇಕೆಂದು ಆಗ್ರಹಿಸಿದರು.

    ಈ ವೇಳೆ ಧಾರವಾಡ ಜಿಲ್ಲಾ ಉಸ್ತವಾರಿ ಸಚಿವರೇ ಈ ಕೊಲೆಗೆ ಕಾರಣ ಎಂದು ಆರೋಪ ಮಾಡಿದ ಕೊಲೆಯಾದ ಯೋಗೀಶಗೌಡ ಪತ್ನಿ ಮಲ್ಲಮ್ಮ, ಕೊಲೆಗೆ ರಾಜಕೀಯ ದ್ವೇಷವೇ ಕಾರಣ ಎಂದು ಆರೋಪಿಸಿದರು. ಕೊಲೆಯ ಹಿಂದೆ ಜಮೀನು ವಿವಾದ ಎಂದು ಹೇಳಲಾಗುತ್ತಿದೆ. ಆದರೆ ಇದರಲ್ಲಿ ಯಾವುದೇ ಹುರುಳಿಲ್ಲ. ಈ ಕೊಲೆಹೆ ರಾಜಕೀಯ ಕಾರಣವಿದೆ ಹಾಗೂ ನಮಗೆ ಬೆದರಿಕೆ ಪತ್ರ ಬರುತ್ತಿದ್ದು, ನಮ್ಮ ಕುಟುಂಬಕ್ಕೆ ರಕ್ಷಣೆ ನೀಡಬೇಕು ಎಂದು ಸರ್ಕಾರಕ್ಕೆ ಆಗ್ರಹಿಸಿದರು. ಇನ್ನು ಪ್ರತಿಭಟನೆ ವೇಳೆ ಯೋಗೀಶ ಗೌಡ ಪತ್ನಿ ಮಲ್ಲಮ್ಮ ಅಸ್ವಸ್ಥರಾಗಿ ಕುಸಿದು ಬಿದ್ದ ಘಟನೆಯೂ ನಡೆಯಿತು.