Tag: CBSE

  • ಪುಸ್ತಕಗಳನ್ನು ಹೊರಲು ಮಕ್ಕಳು ವೇಟ್ ಲಿಫ್ಟರ್ ಗಳು, ತುಂಬಿದ ಕಂಟೈನರ್ ಗಳಲ್ಲ: ಹೈಕೋರ್ಟ್

    ಪುಸ್ತಕಗಳನ್ನು ಹೊರಲು ಮಕ್ಕಳು ವೇಟ್ ಲಿಫ್ಟರ್ ಗಳು, ತುಂಬಿದ ಕಂಟೈನರ್ ಗಳಲ್ಲ: ಹೈಕೋರ್ಟ್

    ಚೆನ್ನೈ: ಪಠ್ಯ ಪುಸ್ತಕಗಳನ್ನು ಹೊರಲು ಮಕ್ಕಳು ವೇಟ್ ಲಿಫ್ಟರ್ ಗಳಾಗಲಿ, ತುಂಬಿದ ಕಂಟೈನರ್ ಗಳಾಗಲಿ ಅಲ್ಲ ಎಂದು ಹೇಳುವ ಮೂಲಕ ಮದ್ರಾಸ್ ಹೈ ಕೋರ್ಟ್ ಖಾಸಗಿ ಮತ್ತು ಸರ್ಕಾರಿ ಶಾಲೆಗಳಿಗೆ ಚಾಟಿ ಬೀಸಿದೆ.

    ಮಕ್ಕಳ ಕೈ ಚೀಲದ ಹೊರೆಯನ್ನು ಕಡಿಮೆ ಮಾಡುವಂತೆ ಹಾಗೂ 1 ಮತ್ತು 2 ನೇ ತರಗತಿ ಮಕ್ಕಳಿಗೆ ಹೋಮ್ ವರ್ಕ್ ಕೊಡದಂತೆ ರಾಜ್ಯ ಸರ್ಕಾರಗಳಿಗೆ ಆದೇಶ ನೀಡಿ ಎಂದು ಕೇಂದ್ರ ಸರ್ಕಾರಕ್ಕೆ ತನ್ನ ಮಧ್ಯಂತರ ತೀರ್ಪಿನಲ್ಲಿ ಸೂಚಿಸಿದೆ.

    ತೆಲಂಗಾಣ ಮತ್ತು ಮಹಾರಾಷ್ಟ್ರ ಸರ್ಕಾರಗಳ ಆದೇಶಗಳನ್ನು ಉಲ್ಲೇಖ ಮಾಡುತ್ತಾ ನ್ಯಾಯಮೂರ್ತಿ ಕಿರುಬಾಕರನ್ ಕೈ ಚೀಲದ ತೂಕ ಮಕ್ಕಳ ತೂಕದ 10% ಮೀರಿರಬಾರದು. ಈ ಸಂಬಂಧ “ಮಕ್ಕಳ ಶಾಲಾ ಬ್ಯಾಗ್ ನೀತಿ” ಗೆ ಸಂಬಂಧಿಸಿದಂತೆ ಮಾನದಂಡಗಳನ್ನು ರೂಪಿಸುವಂತೆ ರಾಜ್ಯಗಳಿಗೆ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿದ್ದಾರೆ.

    ವಕೀಲ ಎಂ ಪುರುಷೋತ್ತಮನ್ ಅವರು ಎನ್‍ಸಿಇಆರ್ ಟಿ ಸಿದ್ಧಪಡಿಸಿದ ಪಠ್ಯ ಮತ್ತು ಎನ್‍ಸಿಇಆರ್ ಟಿ ಮುದ್ರಿಸಿದ ಪುಸ್ತಕಗಳನ್ನು ಮಾತ್ರ ಖರೀದಿಸುವಂತೆ ಸಿಬಿಎಸ್‍ಇ ಶಾಲೆಗಳಿಗೆ ನಿರ್ದೇಶನ ನೀಡುವಂತೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಕೋರ್ಟ್ ಈ ಆದೇಶ ನೀಡಿದೆ.

    ಎನ್‍ಸಿಇಆರ್ ಟಿ ಪಠ್ಯ ಕ್ರಮ ಮತ್ತು ಬುಕ್ ಗಳನ್ನು ಕಡ್ಡಾಯ ಗೊಳಿಸುವಂತೆ ಕೇಂದ್ರಿಯ ಶಿಕ್ಷಣ ಮಂಡಳಿ (ಸಿಬಿಎಸ್‍ಇ) ಹಾಗೂ ಖಾಸಗಿ ಶಾಲೆಗಳ ಒಕ್ಕೂಟಕ್ಕೆ ಕೋರ್ಟ್ ಸೂಚಿಸಿದೆ.

    1 ಮತ್ತು 2 ನೇ ತರಗತಿಗೆ ಭಾಷೆ ಮತ್ತು ಗಣಿತ ವಿಷಯಗಳು ಮಾತ್ರ ಇರಬೇಕು. ತರಗತಿ 3 ರಿಂದ 5 ನೇ ತರಗತಿ ವರೆಗೆ ಪರಿಸರ ಅಧ್ಯಯನ ಮತ್ತು ಗಣಿತ ವಿಷಯಗಳನ್ನು ಎನ್‍ಸಿಇಆರ್ ಟಿ ಪಠ್ಯ ಕ್ರಮದ ಪ್ರಕಾರ ಬೋಧಿಸಬೇಕು. ಎನ್‍ಸಿಇಆರ್ ಟಿ ಪಠ್ಯ ಕ್ರಮದ ಪ್ರಕಾರ 1 ಮತ್ತು 2 ನೇ ತರಗತಿ ಮಕ್ಕಳಿಗೆ ಹೋಮ್ ವರ್ಕ್ ಕೊಡುವ ಹಾಗೆ ಇಲ್ಲ ಎಂದು ನ್ಯಾಯಮೂರ್ತಿಗಳು ಆದೇಶದಲ್ಲಿ ತಿಳಿಸಿದ್ದಾರೆ.

    ವೈದ್ಯರು ಹೇಳುವಂತೆ 5 ರಿಂದ 6 ವರ್ಷದ ಮಕ್ಕಳಿಗೆ ಕನಿಷ್ಠ 11 ಗಂಟೆ ನಿದ್ದೆ ಬೇಕು. ಬೆಳಗ್ಗೆ ಶಾಲೆಗೆ ಮುಂಚೆ ಹೋಗಿದ್ದರೆ ಬೇಗ ಮಲಗಬೇಕು. ಹೋಮ್ ವರ್ಕ್ ಮಕ್ಕಳ ನಿದ್ದೆಯ ಸಮಯವನ್ನು ತೆಗೆದುಕೊಳ್ಳುತ್ತಿದೆ ಎಂದು ತನ್ನ ಆದೇಶದಲ್ಲಿ ವೈದ್ಯಕೀಯ ತಜ್ಞರ ಹೇಳಿಕೆಗಳನ್ನು ಜಡ್ಜ್ ಉಲ್ಲೇಖಿಸಿದರು.

    1 ನೇ ತರಗತಿ ಪಠ್ಯ ಕ್ರಮದಲ್ಲಿ ವ್ಯಾಕರಣ ಮತ್ತು ಕಂಪ್ಯೂಟರ್ ಸೈನ್ಸ್ ವಿಷಯಗಳು ಇರುವುದು ಆಶ್ಚರ್ಯ ಮತ್ತು ಅತಂಕ ತರಿಸುವಂತದ್ದು. 5 ವರ್ಷದ ಮಗು ಹೇಗೆ ಈ ವಿಷಯಗಳನ್ನು ಗ್ರಹಿಸಬಹುದು ಎಂದು ಪ್ರಶ್ನೆ ಮಾಡಿದ್ದಾರೆ. ಸಿಬಿಎಸ್‍ಇ ಶಾಲೆಗಳು ಅಪ್ರಸ್ತುತ ವಿಷಯಗಳನ್ನು ಬೋಧಿಸಿ ಮಕ್ಕಳನ್ನು ಒತ್ತಡದಲ್ಲಿ ಸಿಲುಕಿಸುತ್ತಿದೆ ಎಂದು ಅಭಿಪ್ರಾಯಪಟ್ಟು ಖಾಸಗಿ ಮತ್ತು ಸರ್ಕಾರಿ ಶಾಲೆಗಳಿಗೆ ಚಾಟಿ ಬೀಸಿದರು.

     

  • ನಿರೀಕ್ಷಿತ ಅಂಕ ಬರದ್ದಕ್ಕೆ ಮನನೊಂದು ವಿದ್ಯಾರ್ಥಿಗಳಿಬ್ಬರು ನೇಣಿಗೆ ಶರಣು!

    ನಿರೀಕ್ಷಿತ ಅಂಕ ಬರದ್ದಕ್ಕೆ ಮನನೊಂದು ವಿದ್ಯಾರ್ಥಿಗಳಿಬ್ಬರು ನೇಣಿಗೆ ಶರಣು!

    ನವದೆಹಲಿ: ಮಂಗಳವಾರ ಸಿಬಿಎಸ್‍ಇ 10ನೇ ತರಗತಿಯ ಫಲಿತಾಂಶ ಪ್ರಕಟಗೊಂಡಿದ್ದು, ನಿರೀಕ್ಷಿತ ಅಂಕಗಳು ಬಾರದಿದ್ದಕ್ಕೆ ಇಬ್ಬರು ವಿದ್ಯಾರ್ಥಿಗಳು ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ದೆಹಲಿಯ ಕಾರ್ಕೋಳ ಮತ್ತು ವಸಂತ್ ಕುಂಜ್ ಎಂಬಲ್ಲಿ ನಡೆದಿದೆ.

    ರೋಹಿತ್ ಕುಮಾರ್ ಮೀನ ಮತ್ತು ಪ್ರಗ್ಯಾ ಪಾಂಡೆ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿಗಳು. ರೋಹಿತ್ ದ್ವಾರಕ್ ನಗರದ ಎಂ.ಆರ್ ವಿವೇಕಾನಂದ ಮಾಡೆಲ್ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದನು. ಪರೀಕ್ಷೆಯಲ್ಲಿ ನಿರೀಕ್ಷಿತ ಅಂಕ ಬಾರದ ಹಿನ್ನೆಲೆಯಲ್ಲ ಮಧ್ಯಾಹ್ನ ಸುಮಾರು 3.45ಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಪೋಷಕರು ರೋಹಿತ್‍ನನ್ನು ಆಸ್ಪತ್ರೆಗೆ ಕರೆದೊಯ್ಯುವ ಪ್ರಯತ್ನ ಮಾಡಿದ್ದರಾದ್ರೂ ಮಾರ್ಗಮಧ್ಯೆ ಆತ ಸಾವನ್ನಪ್ಪಿದ್ದಾನೆ.

    ಇತ್ತ ಪ್ರಗ್ಯಾ ಪಾಂಡೆ ವಿದ್ಯಾರ್ಥಿನಿಯು ನೈಋತ್ಯ ದೆಹಲಿಯ ರೆಯಾನ್ ಅಂತಾರಾಷ್ಟ್ರೀಯ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಫಲಿತಾಂಶ ಶೇ 70 ರಷ್ಟು ಬಂದಿದ್ದರೂ, ತಾನು ನಿರೀಕ್ಷಿಸಿದಷ್ಟು ಅಂಕ ಬರಲಿಲ್ಲವೆಂದು ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾಳೆ.

    ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪರೀಕ್ಷೆಯಲ್ಲಿ ಉತ್ತಮ ಅಂಕ ಬಾರದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಸಿಕ್ಕಿಲ್ಲ ಅಂತಾ ಪೊಲೀಸರು ಸ್ಪಷ್ಟಪಡಿಸಿದ್ದಾರೆ.

  • ಸಿಬಿಎಸ್‍ಇ 12 ನೇ ತರಗತಿ ಫಲಿತಾಂಶ ಪ್ರಕಟ-ವಿದ್ಯಾರ್ಥಿನಿಯರೇ ಮೇಲುಗೈ

    ಸಿಬಿಎಸ್‍ಇ 12 ನೇ ತರಗತಿ ಫಲಿತಾಂಶ ಪ್ರಕಟ-ವಿದ್ಯಾರ್ಥಿನಿಯರೇ ಮೇಲುಗೈ

    ನವದೆಹಲಿ: ಕೇಂದ್ರಿಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‍ಇ) 12ನೇ ತರಗತಿಯ ಫಲಿತಾಂಶವನ್ನು ವೆಬ್ ಸೈಟ್ ಗಳಲ್ಲಿ ಪ್ರಕಟ ಮಾಡಿದೆ.

    ಈ ಶೈಕ್ಷಣಿಕ ವರ್ಷದಲ್ಲಿ ಶೇ.83.01 ವಿದ್ಯಾರ್ಥಿಗಳು ತೇರ್ಗಡೆಗೊಂಡಿದ್ದಾರೆ. ಕಳೆದ ವರ್ಷಕ್ಕಿಂತ ಶೇ.0.99 ಪ್ರಮಾಣ ಹೆಚ್ಚಿದೆ. ವಲಯಾವಾರು ವಿಭಾಗದಲ್ಲಿ ತ್ರಿವೆಂಡ್ರಮ್ ಶೇ.97.32, ಚೆನ್ನೈ ಶೇ.93.8 ಮತ್ತು ದೆಹಲಿ ಶೇ.89 ಸಾಧನೆ ಮಾಡಿದೆ. ಹುಡುಗಿಯರಲ್ಲಿ ಶೇ.88.31 ಹಾಗೂ ಹುಡುಗರಲ್ಲಿ ಶೇ.78.99 ಮಂದಿ ತೇರ್ಗಡೆಗೊಂಡಿದ್ದಾರೆ.

    500 ಅಂಕಕ್ಕೆ 499 ಅಂಕ ಪಡೆಯುವುದರ ಮೂಲಕ ನೋಯ್ಡಾದ ಮೇಘನಾ ಶ್ರೀವಾಸ್ತವ ಟಾಪರ್ ಆಗಿದ್ದಾರೆ. ಘಜಿಯಾಬಾದ್ ಎಸ್.ಎ.ಜೆ. ಶಾಲೆಯ ಅನುಶ್ಕ ಚಂದ್ರ 498 ಅಂಕ ಪಡೆಯುವುದರ ಮೂಲಕ ಎರಡನೇ ಸ್ಥಾನವನ್ನು ಪಡೆದಿದ್ದಾರೆ. 497 ಅಂಕಗಳನ್ನು ಪಡೆಯುವುದರ ಮೂಲಕ ಮೂರನೇ ಸ್ಥಾನವನ್ನು 7 ವಿದ್ಯಾರ್ಥಿಗಳು ಹಂಚಿಕೊಂಡಿದ್ದಾರೆ. ಜೈಪುರ, ಲುಧಿಯಾನಾ, ಹರಿದ್ವಾರ, ನೋಯ್ಡಾ, ಮೀರತ್ ನಗರಗಳಿಂದ ತಲಾ ಒಬ್ಬ ವಿದ್ಯಾರ್ಥಿ, ಘಜಿಯಾಬಾದ್ ನಿಂದ ಇಬ್ಬರು ವಿದ್ಯಾರ್ಥಿಗಳು ಮೂರನೇ ಸ್ಥಾನ ಹಂಚಿಕೊಂಡಿದ್ದಾರೆ.

    15,674 ವಿದ್ಯಾರ್ಥಿಗಳು ವಿದೇಶದಲ್ಲಿ ಪರೀಕ್ಷೆಯನ್ನು ಬರೆದಿದ್ದರು. 14,881 ವಿದ್ಯಾರ್ಥಿಗಳು ತೇರ್ಗಡೆಗೊಂಡಿದ್ದಾರೆ. ಇದನ್ನೂ ಓದಿ:ಸಿಬಿಎಸ್‍ಇ 12 ನೇ ತರಗತಿಯ ಫಲಿತಾಂಶ ಶನಿವಾರ ಪ್ರಕಟ

  • ಸಿಬಿಎಸ್‍ಇ 12 ನೇ ತರಗತಿಯ ಫಲಿತಾಂಶ ಶನಿವಾರ ಪ್ರಕಟ

    ಸಿಬಿಎಸ್‍ಇ 12 ನೇ ತರಗತಿಯ ಫಲಿತಾಂಶ ಶನಿವಾರ ಪ್ರಕಟ

    ನವದೆಹಲಿ: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‍ಇ) 12 ನೇ ತರಗತಿಯ ಪರೀಕ್ಷಾ ಫಲಿತಾಂಶವನ್ನು ನಾಳೆ ಪ್ರಕಟ ಮಾಡಲಿದೆ.

    2017-18 ನೇ ಶೈಕ್ಷಣಿಕ ವರ್ಷದ ಸಿಬಿಎಸ್ ಇ 12 ನೇ ತರಗತಿಯ ಫಲಿತಾಂಶ ನಾಳೆ ಪ್ರಕಟವಾಗಲಿದೆ ಎಂದು ಕೇಂದ್ರ ಶಾಲಾ ಶಿಕ್ಷಣ ಕಾರ್ಯದರ್ಶಿ ಅನಿಲ್ ಸ್ವರೂಪ್ ಟ್ವಿಟರ್ ನಲ್ಲಿ ಹೇಳಿದ್ದಾರೆ.

    ಫಲಿತಾಂಶವನ್ನು ಸಮಚಿತ್ತದಿಂದ ಸ್ವೀಕಾರ ಮಾಡಿ. ಈ ಫಲಿತಾಂಶವೇ ಜಗತ್ತಿನ ಕೊನೆಯಲ್ಲ. ಚೆನ್ನಾಗಿ ಪರೀಕ್ಷೆ ಬರೆದಿದ್ದಲ್ಲಿ ಆತ್ಮ ವಿಶ್ವಾಸದಿಂದಿರಿ. ಫಲಿತಾಂಶದಲ್ಲಿ ಏರುಪೇರಾದರೂ ಮುಂದಿನ ಭವಿಷ್ಯಕ್ಕೆ ಮಾರ್ಗದರ್ಶನ ದೊರೆಯುತ್ತದೆ ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ್ದಾರೆ.

    ಸುಮಾರು 11,86,306 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದಾರೆ. ಭಾರತದ 4,138 ಕೇಂದ್ರಗಳಲ್ಲಿ, ವಿದೇಶದ 71 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು.

     cbse.examresults.net, cbseresults.nic.in, results.gov.in  ವೆಬ್ ಸೈಟ್ ಗಳಲ್ಲಿ ಫಲಿತಾಂಶ ನೋಡಬಹುದಾಗಿದೆ.

  • ಸಿಬಿಎಸ್‍ಇ 12ನೇ ತರಗತಿ ಫಲಿತಾಂಶ ಪ್ರಕಟ

    ಸಿಬಿಎಸ್‍ಇ 12ನೇ ತರಗತಿ ಫಲಿತಾಂಶ ಪ್ರಕಟ

    ಬೆಂಗಳೂರು: ಸಿಬಿಎಸ್‍ಇ 12ನೇ ತರಗತಿ ಫಲಿತಾಂಶ ಇಂದು ಪ್ರಕಟಗೊಂಡಿದೆ.

    ಸಿಬಿಎಸ್ ಇ ಯು 12ನೇ ತರಗತಿ ಪರೀಕ್ಷೆಯನ್ನು ಮಾರ್ಚ್ 9ರಿಂದ ಏಪ್ರಿಲ್ 29ರವರಗೆ ನಡೆಸಲಾಗಿತ್ತು. ಸಿಬಿಎಸ್‍ಇಯ ಎಲ್ಲಾ 10 ಕೇಂದ್ರಗಳಲ್ಲಿ ಏಕಕಾಲದಲ್ಲಿ ಫಲಿತಾಂಶ ಪ್ರಕಟಗೊಂಡಿದೆ.

    ವಿದ್ಯಾಥಿಗಳು ತಮ್ಮ ಫಲಿತಾಂಶವನ್ನು ಈ ವೆಬ್‍ಸೈಟ್‍ಗಳನ್ನು ನೋಡಿ ಪಡೆದುಕೊಳ್ಳಬಹುದು.

    cbse.nic.in, cbseresults.nic.in, www.results.nic.in
    http://www.results.nic.in,
    www.cbseresults.nic.in
    http://www.cbseresults.nic.in/,
    www.cbse.nic.in
    http://www.cbse.nic.in.

  • ಶಾಲೆಗಳಲ್ಲಿ ಸಮವಸ್ತ್ರ, ಪುಸ್ತಕಗಳ ಮಾರಾಟ ಮಾಡದಂತೆ ಸಿಬಿಎಸ್‍ಇ ಸೂಚನೆ

    ಶಾಲೆಗಳಲ್ಲಿ ಸಮವಸ್ತ್ರ, ಪುಸ್ತಕಗಳ ಮಾರಾಟ ಮಾಡದಂತೆ ಸಿಬಿಎಸ್‍ಇ ಸೂಚನೆ

    ನವದೆಹಲಿ: ಶಾಲೆಗಳಲ್ಲಿ ಸಮವಸ್ತ್ರ, ಪುಸ್ತಕ ಹಾಗೂ ಇನ್ನಿತರ ಅಧ್ಯಯನ ಸಲಕರಣೆಗಳನ್ನ ಮಾರಾಟ ಮಾಡಬಾರದು ಎಂದು ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಷನ್(ಸಿಬಿಎಸ್‍ಇ) ಎಚ್ಚರಿಕೆ ನೀಡಿದೆ.

    ಈ ಬಗ್ಗೆ ಸುತ್ತೋಲೆ ಹೊರಡಿಸಲಾಗಿದ್ದು, ಸಿಬಿಎಸ್‍ಇ ಅಡಿ ಬರುವ ಶಾಲೆಗಳಲ್ಲಿ ಪುಸ್ತಕ, ಸಮವಸ್ತ್ರ, ಶೂ, ಬ್ಯಾಗ್ ಹಾಗೂ ಅಧ್ಯಯನ ಸಲಕರಣೆಗಳನ್ನ ಮಾರಾಟ ಮಾಡಿದರೆ ನಿಮಯಗಳ ಉಲ್ಲಂಘನೆ ಮಾಡಿದಂತೆ ಎಂದು ಹೇಳಿದೆ.

    ಶಾಲೆಗಳು ಸಮವಸ್ತ್ರ, ಪುಸ್ತಕಗಳ ಮಾರಾಟ ಮಾಡುವ ಮೂಲಕ ವಾಣಿಜ್ಯ ಚಟುವಟಿಕೆಯಲ್ಲಿ ತೊಡಗಿವೆ ಎಂದು ಪೋಷಕರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ¸ಸಿಬಿಎಸ್‍ಇ ಈ ಸೂಚನೆ ನೀಡಿದೆ.

    ಸಿಬಿಎಸ್‍ಇ ನಿಯಮಗಳ ಪ್ರಕಾರ ಶಾಲೆಗಳು ಕಾರ್ಯ ನಿರ್ವಹಿಸುವುದು ಸಮುದಾಯದ ಸೇವೆಗಾಗಿಯೇ ಹೊರತು ವಾಣಿಜ್ಯ ಉದ್ದೇಶ್ಕಕಾಗಿ ಅಲ್ಲ. ಶೈಕ್ಷಣಿಕ ಸಂಸ್ಥೆಗಳು ವಾಣಿಜ್ಯ ಸಂಸ್ಥೆಗಳಲ್ಲ. ಗುಣಮಟ್ಟದ ಶಿಕ್ಷಣ ನೀಡುವುದು ಅವುಗಳ ಪ್ರಮುಖ ಉದ್ದೇಶ ಎಂದು ಸುತ್ತೋಲೆಯಲ್ಲಿ ಹೇಳಿದೆ.

    ಅಲ್ಲದೆ ಎನ್‍ಸಿಇಆರ್‍ಟಿಯಿಂದ ಪ್ರಕಟವಾದ ಪಠ್ಯಪುಸ್ತಕಗಳನ್ನೇ ಬಳಸುವಂತೆ ನೀಡಲಾಗಿದ್ದ ನಿರ್ದೇಶನವನ್ನು ಸಿಬಿಎಸ್‍ಇ ಮತ್ತೊಮ್ಮೆ ಪುನರುಚ್ಛರಿಸಿದೆ.

  • ಮುಂದಿನ ವರ್ಷದಿಂದ ಸಿಬಿಎಸ್‍ಇ 10ನೇ ತರಗತಿ ವಿದ್ಯಾರ್ಥಿಗಳಿಗೆ ಹೆಚ್ಚಿನ ಹೊರೆ- 6 ಪೇಪರ್ ಕಡ್ಡಾಯ

    ಮುಂದಿನ ವರ್ಷದಿಂದ ಸಿಬಿಎಸ್‍ಇ 10ನೇ ತರಗತಿ ವಿದ್ಯಾರ್ಥಿಗಳಿಗೆ ಹೆಚ್ಚಿನ ಹೊರೆ- 6 ಪೇಪರ್ ಕಡ್ಡಾಯ

    ನವದೆಹಲಿ: ಸಿಬಿಎಸ್‍ಇ 10ನೇ ತರಗತಿ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದಿಂದ ಹೆಚ್ಚಿನ ಹೊರೆಯಾಗಲಿದೆ. 10ನೇ ತರಗತಿ ವಿದ್ಯಾರ್ಥಿಗಳು ಐದು ವಿಷಯಗಳ ಬದಲು ಕಡ್ಡಾಯವಾಗಿ 6 ವಿಷಯಗಳನ್ನು ಅಭ್ಯಾಸ ಮಾಡಬೇಕಾಗಿದೆ.

    ಸಿಬಿಎಸ್‍ಇನಲ್ಲಿ ಸದ್ಯ ಎರಡು ಭಾಷಾ ವಿಷಯಗಳು, ಸಾಮಾಜ ವಿಜ್ಞಾನ, ಗಣಿತ ಹಾಗೂ ವಿಜ್ಞಾನ ವಿಷಯಗಳಿವೆ. ಆದ್ರೆ 2017-18ನೇ ಶೈಕ್ಷಣಿಕ ವರ್ಷದಿಂದ ವೃತ್ತಿಪರ ವಿಷಯ ಕೂಡ ಸೇರ್ಪಡೆಯಾಗ್ತಿದೆ.

    ನ್ಯಾಷನಲ್ ಸ್ಕಿಲ್ ಕ್ವಾಲಿಫಿಕೇಷನ್ ಫ್ರೇಮ್‍ವರ್ಕ್(ಎನ್‍ಎಸ್‍ಕ್ಯೂಎಫ್) ಅಡಿ ಸಿಬಿಎಸ್‍ಇ ವೃತ್ತಿಪರ ವಿಷಯವನ್ನ ಕಡ್ಡಾಯಗೊಳಿಸಿದೆ. ವಿದ್ಯಾರ್ಥಿಯು ವಿಜ್ಞಾನ, ಗಣಿತ ಅಥವಾ ಸಮಾಜ ವಿಜ್ಞಾನ ಈ ಮೂರರಲ್ಲಿ ಯಾವುದೇ ಒಂದು ವಿಷಯದಲ್ಲಿ ಅನುತ್ತೀರ್ಣವಾದ್ರೆ ಆಗ ಅದನ್ನು 6ನೇ ವಿಷಯದೊಂದಿಗೆ ಬದಲಾಯಿಸಲ್ಪಡುತ್ತದೆ. ಅದರಂತೆ ಫಲಿತಾಂಶವನ್ನು ಲೆಕ್ಕ ಹಾಕಲಾಗುತ್ತದೆ ಎಂದು ಸಿಬಿಎಸ್‍ಇ ಸುತ್ತೋಲೆಯಲ್ಲಿ ಹೇಳಿದೆ. ಒಂದು ವೇಳೆ ವಿದ್ಯಾರ್ಥಿಯು ಅನುತ್ತೀರ್ಣವಾದ ವಿಷಯದ ಪರೀಕ್ಷೆಯನ್ನು ಮತ್ತೊಮ್ಮೆ ಬರೆಯಲು ಇಚ್ಛಿಸಿದ್ರೆ ವಿಭಾಗೀಯ ಪರೀಕ್ಷೆಯಲ್ಲಿ ಬರೆಯಬಹುದು ಎಂದು ಹೇಳಲಾಗಿದೆ.

    6ನೇ ಪತ್ರಿಕೆಗೆ 13 ವಿಷಯಗಳ ಆಯ್ಕೆಯನ್ನು ವಿದ್ಯಾರ್ಥಿಗಳಿಗೆ ನೀಡಲಾಗಿದೆ. ಡೈನಮಿಕ್ ರೀಟೇಲಿಂಗ್, ಇನ್ಫರ್ಮೇಷನ್ ಟೆಕ್ನಾಲಜಿ, ಸೆಕ್ಯೂರಿಟಿ, ಆಟೋಮೊಬೈಲ್, ಬ್ಯೂಟಿ ಅಂಡ್ ವೆಲ್‍ನೆಸ್, ಬ್ಯಾಂಕಿಂಗ್ ಮತ್ತು ಇನ್ಶೂರೆನ್ಸ್ ಹೀಗೆ ನೀಡಲಾಗಿರುವ 13 ವಿಷಯಗಳಲ್ಲಿ ಒಂದನ್ನು ವಿದ್ಯಾರ್ಥಿಗಳು ಆಯ್ಕೆ ಮಾಡಿಕೊಳ್ಳಬೇಕಿದೆ.

    ಪರೀಕ್ಷೆಯ ಗರಿಷ್ಠ ಅಂಕ 100, ಅದರಲ್ಲಿ 50 ಅಂಕ ಬೋರ್ಡ್ ಪರೀಕ್ಷೆ ಹಾಗು ಇನ್ನುಳಿದ 50 ಅಂಕ ಆಂತರಿಕ ಮೌಲ್ಯಮಾಪನವಾಗಿ ವಿಂಗಡಿಸಲಾಗಿದೆ. ಇದರಲ್ಲಿ ವಿದ್ಯಾರ್ಥಿಯು ಉತ್ತೀರ್ಣವಾಗಲು ಬೋರ್ಡ್ ಪರೀಕ್ಷೆ ಹಾಗೂ ಆಂತರಿಕ ಮೌಲ್ಯಮಾಪನ ಎರಡರಲ್ಲೂ ಶೇ. 33ರಷ್ಟು ಅಂಕ ಪಡೆಯಬೇಕಿದೆ.