Tag: CC Road

  • ಸಿಸಿ ರೋಡ್ ಕಮಿಷನ್ ವಿಚಾರ – ಇಬ್ಬರು ಅಧಿಕಾರಿಗಳ ಅಮಾನತು: ಪ್ರಿಯಾಂಕ್ ಖರ್ಗೆ

    ಸಿಸಿ ರೋಡ್ ಕಮಿಷನ್ ವಿಚಾರ – ಇಬ್ಬರು ಅಧಿಕಾರಿಗಳ ಅಮಾನತು: ಪ್ರಿಯಾಂಕ್ ಖರ್ಗೆ

    ಕಲಬುರಗಿ: ಸಿಸಿ ರೋಡ್ ವಿಚಾರವಾಗಿ ಪಂಚಾಯತ್ ರಾಜ್ ಇಲಾಖೆ ಅಧಿಕಾರಿಗಳು ಕಮಿಷನ್ ಪಡೆದ ಬೆನ್ನಲ್ಲೇ ಇದೀಗ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.

    ಸಿಸಿ ರೋಡ್ ವಿಚಾರವಾಗಿ ಅಧಿಕಾರಿಗಳು ಕಮೀಷನ್‌ಗೆ ಬೇಡಿಕೆಯಿಡುತ್ತಿರುವ ವಿಡಿಯೋ ವೈರಲ್ ಆಗಿದ್ದು, ನಂಗೆ 5 ಪರ್ಸೆಂಟ್ ಪಿಡಿಓಗೆ 3 ಪರ್ಸೆಂಟ್ ಎಕ್ಸಿಕ್ಯೂಟಿವ್ ಎಂಜಿನಿಯರ್‌ಗೆ 5 ಪರ್ಸೆಂಟ್ ಕಮಿಷನ್ ಕೊಡಬೇಕು ಎಂದು ಜೆಇ ಹೇಳುತ್ತಿರುವುದು ಕಂಡು ಬಂದಿದೆ. ಈ ಮೂಲಕ ಗ್ರಾಮ ಪಂಚಾಯತ್‌ನ 15ನೇ ಹಣಕಾಸಿನ ಯೋಜನೆಯಡಿಯಲ್ಲಿ 10 ಲಕ್ಷ ರೂಪಾಯಿಯ ಸಿಸಿ ರಸ್ತೆ ಮಾಡಿ, ಅದರ ಬಿಲ್ ರಿಲೀಸ್ ಗುತ್ತಿಗೆದಾರರಿಂದ ಪಂಚಾಯತ್ ರಾಜ್ ಜೆಇ 13% ಕಮಿಷನ್ ಕೇಳಿರುವುದು ಬಯಲಾಗಿದೆ.ಇದನ್ನೂ ಓದಿ: ಅಂತರಿಕ್ಷದಲ್ಲಿ ಮೊಳಕೆಯೊಡೆದ ಮೆಂತ್ಯೆ, ಹೆಸರುಕಾಳು – ಭಾರತದ ಶುಭಾಂಶು ಶುಕ್ಲಾ ಪ್ರಯೋಗ ಸಕ್ಸಸ್

    ವಿಡಿಯೋ ವೈರಲ್ ಆದ ಬೆನ್ನಲ್ಲೇ ಎಚ್ಚೆತ್ತ ಕಲಬುರಗಿ ಜಿಲ್ಲಾ ಪಂಚಾಯತ್ ಸಿಇಓ ಭಂವರ್ ಸಿಂಗ್ ಮೀನಾ ಇಬ್ಬರು ಅಧಿಕಾರಿಗಳಾದ ಜೆಇ ಶ್ರೀಪಾದ್ ಕುಲಕರ್ಣಿ ಹಾಗೂ ಗುಂಡಗುರ್ತಿ ಗ್ರಾಮ ಪಂಚಾಯತ್ ಪಿಡಿಓ ಮಂಜುಶ್ರೀಯನ್ನ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

    ಈ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದು, ಸಿಸಿ ರೋಡ್ ಕಮಿಷನ್ ವಿಚಾರವಾಗಿ ಮಾಧ್ಯಮಗಳಲ್ಲಿ ಸುದ್ದಿ ಬಂದಿತ್ತು. ಈಗಾಗಲೇ ಅವರನ್ನ ಅಮಾನತು ಮಾಡಲಾಗಿದೆ. ಜೊತೆಗೆ ತನಿಖೆಗೆ ವಹಿಸಲಾಗಿದೆ. ನಮ್ಮ ಕ್ಷೇತ್ರದಲ್ಲಿ ಹೀಗೆ ಆದ್ರೆ ನಮಗೂ ಮುಜುಗರ ಆಗುತ್ತದೆ. ಅದಕ್ಕೆ ತನಿಖೆಗೆ ಆದೇಶ ಮಾಡಲಾಗಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ಸೈಕಲ್‌ನಲ್ಲಿ ತಾಯತ ಮಾರುತ್ತಿದ್ದ ಧಾರ್ಮಿಕ ಮತಾಂತರ ಗ್ಯಾಂಗ್‌ನ ಜಮಾಲುದ್ದೀನ್‌ ಈಗ 106 ಕೋಟಿ ರೂ. ಒಡೆಯ

  • ಕಳಪೆ ಕಾಮಗಾರಿ ಆರೋಪ – ಶಾಸಕ ರಹೀಂಖಾನ್ ದಿಢೀರ್ ಭೇಟಿ

    ಕಳಪೆ ಕಾಮಗಾರಿ ಆರೋಪ – ಶಾಸಕ ರಹೀಂಖಾನ್ ದಿಢೀರ್ ಭೇಟಿ

    ಬೀದರ್: ಕಳಪೆ ಕಾಮಗಾರಿ ಆರೋಪ ಹಿನ್ನೆಲೆಯಲ್ಲಿ ಮಾಜಿ ಸಚಿವರು, ಬೀದರ್ ಉತ್ತರ ಕ್ಷೇತ್ರದ ಹಾಲಿ ಶಾಸಕರಾದ ರಹೀಂಖಾನ್ ತನ್ನ ಕ್ಷೇತ್ರದ ಸಿಸಿ ರೋಡ್ ಕಾಮಗಾರಿ ಪರಿಶೀಲನೆ ಮಾಡಿ ಗುತ್ತಿಗೆದಾರನಿಗೆ ಬಿಸಿ ಮುಟ್ಟಿಸಿದ್ದಾರೆ.

    ಇಂದು ಬೀದರ್ ನಗರದ ವಾರ್ಡ್ ನಂಬರ್ 24ಕ್ಕೆ ರಹೀಂಖಾನ್ ದಿಢೀರನೇ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ನಗರೋತ್ಥಾನ ಹಾಗೂ ಎಚ್‌ಕೆಆರ್‌ಡಿಬಿಯಿಂದ ಒಂದು ಕೋಟಿ ಅನುದಾನ ಬಿಡುಗಡೆಯಾಗಿತ್ತು. ಆದರೆ ಸಿಸಿ ರೋಡ್ ಕಳಪೆಯಿಂದ ಕೂಡಿದೆ ಎಂಬ ಆರೋಪ ಕೇಳಿ ಬಂದಿದೆ.

    ಹೀಗಾಗಿ ತಕ್ಷಣ ರಹೀಂಖಾನ್ ಭೇಟಿ ನೀಡಿ ನಿಯಮದಂತೆ ಕಾಮಗಾರಿ ಮಾಡಿ ಎಂದು ಗುತ್ತಿಗೆದಾರನಿಗೆ ಸೂಚನೆ ನೀಡಿದ್ದಾರೆ. ಬೀದರ್ ಉತ್ತರ ಕ್ಷೇತ್ರದ ಹಾಲಿ ಶಾಸಕನಾಗಿರುವ ರಹೀಂಖಾನ್ ದಿಢೀರನೇ ಭೇಟಿ ನೀಡಿ ಪರಿಶೀಲನೆ ಮಾಡಿ ಗುತ್ತಿಗೆದಾರನಿಗೆ ಬಿಸಿ ಮುಟ್ಟಿಸಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

  • ಕಳಪೆ ಕಾಮಗಾರಿ ಬಗ್ಗೆ ಪ್ರಶ್ನಿಸಿದಕ್ಕೆ ಆಪ್ ಕಾರ್ಯಕರ್ತರ ವಿರುದ್ಧ ಅನ್ಸಾರಿ ಬೆಂಬಲಿಗರ ವಾಗ್ವಾದ

    ಕಳಪೆ ಕಾಮಗಾರಿ ಬಗ್ಗೆ ಪ್ರಶ್ನಿಸಿದಕ್ಕೆ ಆಪ್ ಕಾರ್ಯಕರ್ತರ ವಿರುದ್ಧ ಅನ್ಸಾರಿ ಬೆಂಬಲಿಗರ ವಾಗ್ವಾದ

    ಕೊಪ್ಪಳ: ಕಳಪೆ ಕಾಮಗಾರಿಯ ಬಗ್ಗೆ ಪ್ರಶ್ನಿಸಿದಕ್ಕೆ ಆಪ್ ಕಾರ್ಯಕರ್ತರ ವಿರುದ್ಧ ರೊಚ್ಚಿಗೆದ್ದ ಶಾಸಕ ಇಕ್ಬಾಲ್ ಅನ್ಸಾರಿ ಬೆಂಬಲಿಗರು ವಾಗ್ವಾದ ನಡೆಸಿರೋ ಘಟನೆ ಜಿಲ್ಲೆಯ ಗಂಗಾವತಿಯಲ್ಲಿ ನಡೆದಿದೆ.

    ಕೊಪ್ಪಳದ ಗಂಗಾವತಿಯ 23ನೇ ವಾರ್ಡ್ ನಲ್ಲಿ ಸಿಸಿ ರಸ್ತೆ ಕಾಮಗಾರಿ ನಡೆದಿತ್ತು. ಆದ್ರೆ ಕಾಮಗಾರಿ ಸಂಪೂರ್ಣ ಕಳಪೆ ಮಟ್ಟದಿಂದ ಕೂಡಿದ್ದು, ಇದನ್ನು ಪ್ರಶ್ನಿಸಿದಕ್ಕೆ ಶಾಸಕ ಅನ್ಸಾರಿ ಬೆಂಬಲಿಗರು, ಇದು ನಮ್ ಏರಿಯಾ… ನಮ್ ಕೆಲಸ ಹೆಂಗಾದ್ರು ಮಾಡ್ಕೋತೀವಿ ಅಂತಾ ಹೇಳಿದ್ದಾರೆ.

    ಇದನ್ನು ವಿರೋಧಿಸಿದ ಆಪ್ ಕಾರ್ಯಕರ್ತರು ಮತ್ತು ಅನ್ಸಾರಿ ಬೆಂಬಲಿಗರ ನಡುವೆ ವಾಗ್ವಾದ ನೆಡೆದಿದೆ. ಸಿಸಿ ರಸ್ತೆಯ ಗುಣಮಟ್ಟದ ಬಗ್ಗೆ ಕೇಳುತ್ತಿದ್ದಂತೆ ಕಾಮಗಾರಿಯನ್ನು ಅರ್ಧಕ್ಕೆ ಬಿಟ್ಟು ಹೋಗಿದ್ದಾರೆ.