Tag: CCB police

  • 3.5 ಕೋಟಿ ರೂ. ಮೌಲ್ಯದ ರಕ್ತ ಚಂದನ ಕಳ್ಳ ಸಾಗಣೆ: 13 ಮಂದಿ ಅರೆಸ್ಟ್

    3.5 ಕೋಟಿ ರೂ. ಮೌಲ್ಯದ ರಕ್ತ ಚಂದನ ಕಳ್ಳ ಸಾಗಣೆ: 13 ಮಂದಿ ಅರೆಸ್ಟ್

    – 10 ವರ್ಷಗಳ ಬಳಿಕ ಬಲೆಗೆ ಬಿದ್ದ ಕಿಂಗ್‍ಫಿನ್

    ಬೆಂಗಳೂರು: 3.5 ಕೋಟಿ ರೂ. ಮೌಲ್ಯದ ರಕ್ತ ಚಂದನ ಕಳ್ಳ ಸಾಗಣೆ ಮಾಡುತ್ತಿದ್ದ 13 ಜನರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

    ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ನಗರ ಪೊಲೀಸ್ ಆಯುಕ್ತ ಟಿ. ಸುನೀಲ್ ಕುಮಾರ್, ರಕ್ತ ಚಂದನ ಕಳ್ಳ ಸಾಗಣೆಯ ಕಿಂಗ್ ಫಿನ್ ರಶೀದ್ ಕಳೆದ ಹತ್ತು ವರ್ಷಗಳಿಂದ ತಪ್ಪಿಸಿಕೊಂಡು ಓಡಾಡುತ್ತಿದ್ದ. ಆದರೆ ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದಾನೆ. ಆರೋಪಿಗಳನ್ನು ಬಂಧಿಸಲು ಕಳೆದ ಎರಡು ತಿಂಗಳಿಂದ ಕಾರ್ಯಚರಣೆ ನಡೆಸಲಾಗಿದ್ದು, ಯಶಸ್ವಿಯಾಗಿದ್ದೇವೆ ಎಂದು ತಿಳಿಸಿದರು.

    ಬಂಧಿತರು ಅಂತರ್ ರಾಜ್ಯ ಕಳ್ಳರಾಗಿದ್ದಾರೆ. ರಶೀದ್ ಅಂಡ್ ಟೀಂ ರಕ್ತ ಚಂದನವನ್ನು ಚೆನ್ನೈ ಹಾಗೂ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದರು. ಈ ಜಾಲವನ್ನು ಪತ್ತೆ ಹಚ್ಚಿ, ಆರೋಪಿಗಳನ್ನು ಬಂಧಿಸಿದ್ದೇವೆ. ಆರೋಪಿಗಳಿಂದ 3.5 ಕೋಟಿ ರೂ. ಮೌಲ್ಯದ 4 ಸಾವಿರ ಕೆಜಿ ರಕ್ತಚಂದನ ವಶಕ್ಕೆ ಪಡೆಯಲಾಗಿದೆ ಎಂದು ಮಾಹಿತಿ ನೀಡಿದರು.

    ಸಿಸಿಬಿ ಪೊಲೀಸ್ ಸಿಬ್ಬಂದಿ ಯಶಸ್ವಿಯಾಗಿ ಕಾರ್ಯಾಚಣೆ ನಡೆಸಿದ್ದಾರೆ. ಹೀಗಾಗಿ ಅವರಿಗೆ 2 ಲಕ್ಷ ರೂ. ಬಹುಮಾನ ಘೋಷಣೆ ಮಾಡಲಾಗಿದೆ ಎಂದು ತಿಳಿಸಿದರು.

    ಇದೇ ವೇಳೆ ಮಾತನಾಡಿದ ಸಿಸಿಬಿ ಪೊಲೀಸ್ ಹೆಚ್ಚುವರಿ ಆಯುಕ್ತ ಅಲೋಕ್ ಕುಮಾರ್ ಅವರು, ರಶೀದ್ ಮೇಲೆ ವಿವಿಧ ಪ್ರಕರಣ ದಾಖಲಾಗಿವೆ. ರಶೀದ್ ಮುಂಬೈ, ಚೆನ್ನೈಗೆ ಅಕ್ರಮವಾಗಿ ರಕ್ತ ಚಂದನ ಸಾಗಿಸುತ್ತಿದ್ದ. ಈ ತಂಡದ ಮತ್ತೊಬ್ಬ ಪ್ರಮುಖ ಆರೋಪಿ ಜುಬೇರ್ ಮೂಲತಃ ಕಟ್ಟಿಗೇನ ಹಳ್ಳಿಯ ನಿವಾಸಿಯಾಗಿದ್ದು, ಎಚ್‍ಎಎಲ್‍ನಲ್ಲಿ ವಾಸಿಸುತ್ತಿದ್ದಾನೆ. ಹುಸ್ಕೂರ್ ಗೇಟ್ ಬಳಿ ಎರಡು ಗೋದಾಮು ನಿರ್ಮಾಣ ಮಾಡಿದ್ದು, ಅಲ್ಲಿ ಅಕ್ರಮವಾಗಿ ರಕ್ತ ಚಂದನವನ್ನು ಸಂಗ್ರಹಿಸುತ್ತಿದ್ದ ಎಂದು ಮಾಹಿತಿ ನೀಡಿದರು.

    ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಹಾಗೂ ನೆರೆಯ ರಾಜ್ಯದಲ್ಲಿ ಪರಿಶೀಲನೆ ನಡೆಸಲಾಗುತ್ತಿತ್ತು. ಇದರಿಂದಾಗಿ ಆರೋಪಿಗಳು ರಕ್ತ ಚಂದನ ಸಾಗಣೆ ಮಾಡುವುದನ್ನು ನಿಲ್ಲಿಸಿದ್ದರು. ಈ ಮೂಲಕ ಬೇರೆ ಬೇರೆ ಜಾಗ, ಗೋದಾಮುಗಳಲ್ಲಿ ಭಾರೀ ಪ್ರಮಾಣದ ರಕ್ತ ಚಂದನ ಸಿಕ್ಕಿದೆ ಎಂದು ತಿಳಿಸಿದರು.

    ಆರೋಪಿಗಳು ಈಗಾಗಲೇ ಚೆನ್ನೈ, ಮುಂಬೈ ಹಾಗೂ ಆಂಧ್ರಪ್ರದೇಶಕ್ಕೆ ಸ್ವಲ್ಪ ಪ್ರಮಾಣದ ರಕ್ತ ಚಂದನವನ್ನು ಸಾಗಿಸಿದ್ದಾರೆ. ಹೀಗಾಗಿ ಅಲ್ಲಿನ ಅಧಿಕಾರಿಗಳ ಜೊತೆಗೆ ಸಂಪರ್ಕ ಸಾಧಿಸಿ, ಅದನ್ನು ಮರಳಿ ತರಲಾಗುತ್ತದೆ ಎಂದರು.

  • ಲೋಕಸಮರದ ಹೊತ್ತಲ್ಲೇ 8 ಮಂದಿ ಸಿಸಿಬಿ ವಶಕ್ಕೆ

    ಲೋಕಸಮರದ ಹೊತ್ತಲ್ಲೇ 8 ಮಂದಿ ಸಿಸಿಬಿ ವಶಕ್ಕೆ

    ಬೆಂಗಳೂರು: ಲೋಕಸಭಾ ಚುನಾವಣೆಯ ಹೊತ್ತಲ್ಲಿಯೇ ಸಿಲಿಕಾನ್ ಸಿಟಿಯಲ್ಲಿ 8 ಮಂದಿಯನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಈ ಬಗ್ಗೆ ಪಬ್ಲಿಕ್ ಟಿವಿಗೆ ಸ್ಪಷ್ಟನೆ ನೀಡಿರುವ ಡಿಸಿಪಿ ಗಿರೀಶ್, 8 ಮಂದಿಯನ್ನು ವಶಕ್ಕೆ ಪಡೆದಿರುವುದು ನಿಜ. ಆದ್ರೆ ಇವರು ಶಂಕಿತ ಉಗ್ರರಲ್ಲ. ಈ ಸಂಬಂಧ ಇಂದು ಸಂಜೆ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡುವುದಾಗಿ ತಿಳಿಸಿದ್ದಾರೆ.

    ಶಕೀಲ್ ಮತ್ತು ಇಮ್ರಾನ್ ಸೇರಿದಂತೆ ಎಂಟು ಮಂದಿಯನ್ನು ಸಿಸಿಬಿ ಪೊಲೀಸರು ಭಾನುವಾರ ರಾತ್ರಿ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಅಲ್ಲದೆ ಅವರಿಂದ ಹತ್ತಕ್ಕೂ ಹೆಚ್ಚು ರಿವಾಲ್ವಾರ್ ಗಳನ್ನು ವಶಪಡಿಕೊಳ್ಳಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ವಶಕ್ಕೆ ಪಡೆದವರಲ್ಲಿ ಮುಂಬೈ ಮೂಲದ ಇಬ್ಬರಿದ್ದು, ಸದ್ಯಕ್ಕೆ ಸಿಸಿಬಿ ಪೊಲೀಸರು ವಶಕ್ಕೆ ಪಡೆದ 8 ಮಂದಿಯನ್ನು ವಿಚಾರಣೆ ಮಾಡುತ್ತಿದ್ದಾರೆ.

  • ಪೊಲೀಸ್ ಪ್ರಶ್ನೆ ಪತ್ರಿಕೆ ಲೀಕ್ ಪ್ರಕರಣಕ್ಕೆ ಟ್ವಿಸ್ಟ್ – ಸಿಎಂ ಗೃಹ ಕಚೇರಿಗಿದೆ ನಂಟು!

    ಪೊಲೀಸ್ ಪ್ರಶ್ನೆ ಪತ್ರಿಕೆ ಲೀಕ್ ಪ್ರಕರಣಕ್ಕೆ ಟ್ವಿಸ್ಟ್ – ಸಿಎಂ ಗೃಹ ಕಚೇರಿಗಿದೆ ನಂಟು!

    ಬೆಂಗಳೂರು: ಪೊಲೀಸ್ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಕುಮಾರಸ್ವಾಮಿ ಕಚೇರಿಗೂ ಪೊಲೀಸ್ ಪ್ರಶ್ನೆ ಪತ್ರಿಕೆ ಲೀಕ್ ಗೂ ನಂಟು ಹೊಂದಿದ್ದು, ಸಿಎಂ ಗೃಹ ಕಚೇರಿ ಸಿಬ್ಬಂದಿಯೇ ಈಗ ಪೊಲೀಸರ ಅತಿಥಿಯಾಗಿದ್ದಾನೆ.

    ಸಿಎಂ ಗೃಹಕಚೇರಿಯ ಸಿಬ್ಬಂದಿ ಗೋವಿಂದರಾಜರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ವಿಜಯನಗರದ ಪಟ್ಟೆಗಾರಪಾಳ್ಯದ ಮನೆಯಲ್ಲಿ ಸಿಸಿಬಿ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದು, ಈತ ಮೂಲತಃ ರೈಲ್ವೆ ಇಲಾಖೆಯಲ್ಲಿ ನೌಕರನಾಗಿ ಕೆಲಸ ಮಾಡುತ್ತಿದ್ದನು.

    ಈಗ ನಿಯೋಜನೆ ಮೇಲೆ ಸಿಎಂ ಗೃಹಕಚೇರಿಯಲ್ಲಿ ಗೋವಿಂದರಾಜು ಸಿಬ್ಬಂದಿಯಾಗಿದ್ದಾನೆ. ಪ್ರಶ್ನೆ ಪತ್ರಿಕೆ ಸೋರಿಕೆಯ ಮೂಲ ರೂವಾರಿ ಈ ಗೋವಿಂದರಾಜು ಆಗಿದ್ದು, ಅನುಮಾನದ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಕಸ್ಟಡಿಗೆ ಪಡೆದುಕೊಂಡು ವಿಚಾರಣೆ ಮಾಡಿದ್ದಾರೆ.

    ಪೊಲೀಸ್ ಪ್ರಶ್ನೆ ಪತ್ರಿಕೆ ಲೀಕ್ ಪ್ರಕರಣದಲ್ಲಿ ಯಾವುದೇ ಸಚಿವರ ಲಿಂಕ್ ಇಲ್ಲ ಎಂದು ಪೊಲೀಸರು ಕೂಡ ಕೈಬಿಟ್ಟಿದ್ದರು. ಆದರೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲ್ಕತ್ತಾದಲ್ಲಿ ಚೈತನ್ಯ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆಗ ಆತ ಸಿಎಂ ಗೃಹ ಕಚೇರಿಯಲ್ಲಿ ಕೆಲಸ ಮಾಡುವ ಗೋವಿಂದರಾಜು ಬಗ್ಗೆ ಹೇಳಿದ್ದಾನೆ. ಗೋವಿಂದರಾಜು ಪೇಪರ್ ಲೀಕ್ ಆಗುವ ಒಂದು ತಿಂಗಳು ಹಿಂದೆ ಬಂದು ಕೆಲಸಕ್ಕೆ ಸೇರಿದ್ದನು. ಈತನಿಗೆ ಸುಮಾರು 3 ಲಕ್ಷ ಹಣವನ್ನು ಕೊಟ್ಟರೆ ಕಿಂಗ್‍ಪಿನ್ ಶಿವಕುಮಾರ್ ನನ್ನು ಭೇಟಿ ಮಾಡಿಸಿ ಪ್ರಶ್ನೆ ಪತ್ರಿಕೆ ಕೊಟ್ಟು ಪರೀಕ್ಷೆ ಬರೆಸುತ್ತಿದ್ದನು. ಇದೇ ರೀತಿ ಸುಮಾರು 20ಕ್ಕೂ ಹೆಚ್ಚು ಅಭ್ಯರ್ಥಿಗಳನ್ನು ಕಳುಹಿಸಿಕೊಟ್ಟಿದ್ದನು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

    ಈ ಹಿನ್ನೆಲೆಯಲ್ಲಿ ಗೋವಿಂದರಾಜುಗೂ ಆರೋಪಿ ಚೈತನ್ಯ ಮತ್ತು ಶಿವಕುಮಾರ್ ಜೊತೆ ಯಾವ ರೀತಿ ಸಂಪರ್ಕ ಇದೆ. ಬೇರೆ ಯಾವ ಪ್ರಕರಣದಲ್ಲಿ ಭಾಗಿಯಾಗಿದ್ದಾನೆ ಎಂದು ವಿಚಾರಣೆ ಮಾಡಲು ಪೊಲೀಸರು ಏಳು ದಿನ ವಶಕ್ಕೆ ಪಡೆದುಕೊಂಡಿದ್ದಾರೆ.

    ನಡೆದಿದ್ದೇನು?
    ನವೆಂಬರ್ 25ರಂದು ನಡೆಯಬೇಕಿದ್ದ ಪೊಲೀಸ್ ಪೇದೆ ಹುದ್ದೆಯ ಲಿಖಿತ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿತ್ತು. ಹೀಗಾಗಿ ಪರೀಕ್ಷೆಯನ್ನು ಅನಿರ್ಧಿಷ್ಟಾವಧಿಗೆ ಮುಂದೂಡಲಾಗಿತ್ತು. ಪ್ರಶ್ನೆ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಭಾರೀ ಜಾಲವನ್ನು ಪತ್ತೆ ಹಚ್ಚಿ ಕಿಂಗ್ ಪಿನ್ ಸೇರಿದಂತೆ 115 ಮಂದಿಯನ್ನು ಬಂಧಿಸಿದ್ದರು.

    ಕೊಡಗು ಜಿಲ್ಲೆಯ ಸೋಮವಾರಪೇಟೆಯ ವಿದ್ಯಾಮಂದಿರ ಕೊಠಡಿಯೊಂದರಲ್ಲಿ ರಾಜ್ಯದ ವಿವಿಧೆಡೆಯಿಂದ ಪರೀಕ್ಷಾರ್ಥಿಗಳನ್ನು ಕರೆಸಿಕೊಂಡು ಪ್ರಶ್ನೆ ಪತ್ರಿಕೆ ವಿತರಿಸಲು ಸಿದ್ಧತೆ ನಡೆಸಲಾಗಿತ್ತು. ನೇರವಾಗಿ ಪರೀಕ್ಷಾ ಕೇಂದ್ರಕ್ಕೆ ತೆರಳುವ ವ್ಯವಸ್ಥೆಯನ್ನೂ ಮಾಡಲಾಗಿತ್ತು. ಆದರೆ ಈ ಮೊದಲೇ ಖಚಿತ ಮಾಹಿತಿಯ ಮೇರೆಗೆ ಸಿಸಿಬಿ ಅಧಿಕಾರಿಗಳಾದ ಬಿ.ಆರ್.ವೇಣುಗೋಪಾಲ್, ಬಿ.ಬಾಲರಾಜು ನೇತೃತ್ವದ ಎರಡು ತಂಡಗಳು ದಾಳಿ ನಡೆಸಿದ್ದವು. ದಾಳಿ ವೇಳೆ ಕಿಂಗ್‍ಪಿನ್ ಶಿವಕುಮಾರ್ ನನ್ನು ಪ್ರಶ್ನೆ ಪತ್ರಿಕೆಗಳ ಸಹಿತ ಬಂಧಿಸಿದ್ದರು.

  • 2ನೇ ಹೆಂಡ್ತಿ ಮನೆ ಟಾಯ್ಲೆಟ್‍ನಲ್ಲಿ ಅಡಗಿದ್ದ ಪ್ರಭಾಕರ್ ರೆಡ್ಡಿ ಅರೆಸ್ಟ್

    2ನೇ ಹೆಂಡ್ತಿ ಮನೆ ಟಾಯ್ಲೆಟ್‍ನಲ್ಲಿ ಅಡಗಿದ್ದ ಪ್ರಭಾಕರ್ ರೆಡ್ಡಿ ಅರೆಸ್ಟ್

    ಬೆಂಗಳೂರು: ನಕಲಿ ದಾಖಲೆ ಸೃಷ್ಟಿಸಿ ಭೂಮಿ ಮಾರಾಟ, ಭೂ ಕಬಳಿಕೆ, ಜೀವ ಬೆದರಿಕೆ, ವಂಚನೆ ಕೇಸ್‍ನಲ್ಲಿ ಬೆಂಗಳೂರಿನ ಜೆಡಿಎಸ್ ಮುಖಂಡ ಪ್ರಭಾಕರ್ ರೆಡ್ಡಿಯನ್ನ ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

    ಪೊಲೀಸರ ದಾಳಿ ವೇಳೆ ರೆಡ್ಡಿ ರಾಜರಾಜೇಶ್ವರಿ ನಗರದಲ್ಲಿರುವ ತನ್ನ 2ನೇ ಹೆಂಡ್ತಿ ಮನೆ ಟಾಯ್ಲೆಟ್‍ನಲ್ಲಿ ಅಡಗಿದ್ದ. ಪೊಲೀಸರು ಬಂಧನಕ್ಕೆ ಬಂದಾಗ 2ನೇ ಪತ್ನಿ ಬಾಗಿಲು ತೆರೆಯದೇ ಸತಾಯಿಸಿದ್ರು. ಗುರುವಾರ ನಡೆದ ದಾಳಿ ವೇಳೆ 300 ಕೋಟಿ ರೂಪಾಯಿ ಮೊತ್ತದ ಆಸ್ತಿಪಾಸ್ತಿಯ ದಾಖಲೆಯನ್ನ ವಶಪಡಿಸಿಕೊಳ್ಳಲಾಗಿದೆ.

    ಕಂಡಕಂಡವರ ಖಾಸಗಿ, ಸರ್ಕಾರಿ ಸೈಟನ್ನು ತನ್ನದೆಂದು ಹೇಳಿ ಮಾರಾಟ ಮಾಡ್ತಿದ್ದ ರೆಡ್ಡಿ ಹಲವಾರು ಮಂದಿಗೆ ಕೋಟಿಗಟ್ಟಲೇ ರೂಪಾಯಿ ವಂಚಿಸಿದ್ದರು. ಬೇಗೂರು ಬಳಿ ಮೂಲ ಮಾಲೀಕರಿಗೆ ಗೊತ್ತೇ ಇಲ್ಲದಂತೆ 7 ಸೈಟ್‍ ಗಳನ್ನು ಮಾರಿದ್ದರು. ಆದ್ರೆ ಮೋಸ ಬಯಲಾದ ಬಳಿಕ ಸೈಟ್ ಖರೀದಿಸಿದ್ದ ಉದ್ಯಮಿ ಹಣ ನೀಡುವಂತೆ ಒತ್ತಾಯಿಸಿದ್ದರು.

    ಈ ವೇಳೆ ಹಣ ಕೊಡಲ್ಲ, ಕೊಲೆ ಮಾಡ್ತೀನಿ ಎಂದು ರೆಡ್ಡಿ ಅವಾಜ್ ಹಾಕಿದ್ದರು. `ಶ್ರೀಸಾಯಿ ರಿಯಲ್ ಎಸ್ಟೇಟ್’ ಕಂಪನಿ ನಡೆಸ್ತಿರುವ ರೆಡ್ಡಿ ಜೆಡಿಎಸ್‍ನಿಂದ ಲೋಕಸಭೆ ಮತ್ತು ಅಸೆಂಬ್ಲಿ ಎಲೆಕ್ಷನ್‍ಗೂ ನಿಂತು ಸೋತಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಫರೀದ್ ಬಿಚ್ಚಿಟ್ಟ ಸತ್ಯ ಕೇಳಿ ಸಿಸಿಬಿ ಅಧಿಕಾರಿಗಳು ಶಾಕ್!

    ಫರೀದ್ ಬಿಚ್ಚಿಟ್ಟ ಸತ್ಯ ಕೇಳಿ ಸಿಸಿಬಿ ಅಧಿಕಾರಿಗಳು ಶಾಕ್!

    ಬೆಂಗಳೂರು: ಮಾಜಿ ಸಚಿವ ಗಣಿಧಣಿ ಅಂಬಿಡೆಂಟ್ ಕಂಪೆನಿ ಜೊತೆ 20 ಕೋಟಿ ಡೀಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ವಿಸ್ಟ್ ಮೇಲೆ ಟ್ವಿಸ್ಟ್ ಸಿಗುತ್ತಿದ್ದು, ಈಗ ರೆಡ್ಡಿ ಡೀಲ್ ಕೇಸ್ ಹೊಸ ತಿರುವು ಪಡೆದುಕೊಂಡಿದೆ.

    ರೆಡ್ಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂಬಿಡೆಂಟ್ ಕಂಪೆನಿ ಮಾಲೀಕ ಫರೀದ್ ಬಿಚ್ಚಿಟ್ಟ ಸತ್ಯ ಕೇಳಿ ಸಿಸಿಬಿ ಅಧಿಕಾರಿಗಳು ಕಕ್ಕಾಬಿಕ್ಕಿಯಾಗಿದ್ದು, ಹೆಸರು ಕೇಳಿದಾಕ್ಷಣ ಸಿಸಿಬಿ ಅಧಿಕಾರಿಗಳು ಶಾಕ್ ಆಗಿದ್ದಾರೆ. ಅಂಬಿಡೆಂಟ್ ಮಾಲೀಕ ಫರೀದ್ ಬಿಚ್ಚಿಟ್ಟ ಸತ್ಯದಿಂದ ಮೈತ್ರಿ ಸರ್ಕಾರದ ‘ಪ್ರಭಾವಿ’ ಸಚಿವರಿಗೂ ಈಗ ಕಂಟಕ ಶುರುವಾಗಿದ್ದು, ಕಾಂಗ್ರೆಸ್ಸಿನ ಪ್ರಭಾವಿ ಸಚಿವರಿಗೂ ಫರೀದ್ ಜೊತೆ ನಂಟು ಇದೆ ಎಂದು ಮಾಹಿತಿ ಲಭ್ಯವಾಗಿದೆ.

    ವಿಚಾರಣೆ ವೇಳೆ ಫರೀದ್ ಪ್ರಭಾವಿ ಸಚಿವರ ಹೆಸರನ್ನೂ ಬಾಯ್ಬಿಟ್ಟದ್ದಾನೆ. ಸಿಸಿಬಿಯಿಂದ ಪ್ರಭಾವಿ ಸಚಿವರ ವಿಚಾರಣೆ ಸಾಧ್ಯತೆ ಇದ್ದು, ವಿಚಾರಣೆಗೆ ಹಾಜರಾದರೆ ಪ್ರಭಾವಿ ಸಚಿವರ ತಲೆದಂಡ ಸಾಧ್ಯತೆ ಇದೆ. ಫರೀದ್ ಬಿಚ್ಚಿಟ್ಟ ಸಚಿವರು ಮುಖ್ಯಮಂತ್ರಿ ಕುಮಾರಸ್ವಾಮಿಗೂ ಅತ್ಯಾಪ್ತರಾಗಿದ್ದು, ಒಂದು ಕಾಲದಲ್ಲಿ ಆಪ್ತೇಷ್ಠರಲ್ಲಿ ಇವರು ಕೂಡ ಒಬ್ಬರಾಗಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಕುಮಾರಸ್ವಾಮಿ ಜೊತೆಗಿನ ನಂಟು ಅಷ್ಟಕಷ್ಟೇ ಎಂಬ ಮಾತುಗಳು ಕೇಳಿ ಬರುತ್ತಿದೆ.

    ಫರೀದ್ ಎಲ್ಲೆಲ್ಲಿ ಹಣ ವರ್ಗಾವಣೆ ಮಾಡಿದ್ದೇನೆ. ಮತ್ತೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿಸಿಕೊಳ್ಳಲು ಯಾರು ಯಾರು ಸಹಾಯ ಮಾಡಿದ್ದಾರೆ ಎಂದು ಸಿಸಿಬಿ ಮುಂದೆ ಹೇಳಿದ್ದಾರೆ. ಈ ನಡುವೆ ಅವರಿಗೆ ಪ್ರಭಾವಿ ಸಚಿವರಿಗೂ ಅಂಬಿಡೆಂಟ್‍ನಿಂದ ಹಣ ಹೋಗಿದೆ. ಅವರು ತಪ್ಪಿಸಿಕೊಳ್ಳಲು ಸಹಾಯ ಮಾಡಿದ್ದಾರೆ ಎಂದು ಸಾಕ್ಷಿ ಸಮೇತ ಅವರ ಹೆಸರನ್ನು ಹೇಳಿದ್ದಾರೆ.

    ಫರೀದ್ ಬಾಯ್ಬಿಟ್ಟ ಸತ್ಯ ಕೇಳಿ ಸಿಸಿಬಿ ಅಧಿಕಾರಿಗಳು ಈಗ ಸಚಿವರಿಗೆ ನೋಟಿಸ್ ಜಾರಿ ಮಾಡುವ ಸಾಧ್ಯತೆ ಇದೆ. ಆದರೆ ಸಿಸಿಬಿ ಪೊಲೀಸರು ಮಾತ್ರ ಫರೀದ್ ಹೇಳಿದ ಸಚಿವರ ಹೆಸರನ್ನು ಬಹಿರಂಗಪಡಿಸಲಿಲ್ಲ. ಫರೀದ್ ಹೇಳಿದ ಹೇಳಿಕೆಯಿಂದ ಮಾತ್ರ ಸಚಿವರಿಗೆ ನೋಟಿಸ್ ಜಾರಿ ಮಾಡುವ ಸಾಧ್ಯತೆ ಕಡಿಮೆ ಇದ್ದು, ಸಾಕ್ಷಿಗಳನ್ನು ಪರಿಶೀಲನೆ ಮಾಡಿ ಬಳಿಕ ಅವರನ್ನು ವಿಚಾರಣೆಗೆ ಕರೆಸುವ ಸಾಧ್ಯತೆ ಇದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ರೆಡ್ಡಿ ಐಶಾರಾಮಿ ಬಂಗಲೆಗೆ ಸಿಸಿಬಿ ಫಿದಾ – ಬಳ್ಳಾರಿ ನಿವಾಸದ ಮಹಡಿಯಲ್ಲಿ ಅಧಿಕಾರಿಗಳ ಸೆಲ್ಫಿ

    ರೆಡ್ಡಿ ಐಶಾರಾಮಿ ಬಂಗಲೆಗೆ ಸಿಸಿಬಿ ಫಿದಾ – ಬಳ್ಳಾರಿ ನಿವಾಸದ ಮಹಡಿಯಲ್ಲಿ ಅಧಿಕಾರಿಗಳ ಸೆಲ್ಫಿ

    ಬಳ್ಳಾರಿ: ಡೀಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಜನಾರ್ದನ ರೆಡ್ಡಿ ಬಳ್ಳಾರಿಯ ಅಹಂಬಾವಿ ನಿವಾಸದ ಮನೆಯ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿ ನಡೆಸಿ ಪರಿಶೀಲನೆ ನಡೆಸುವ ವೇಳೆ ಅಧಿಕಾರಿಗಳು ಸೆಲ್ಫಿ ಕ್ಲಿಕಿಸಿಕೊಂಡಿದ್ದಾರೆ.

    ಸಿಸಿಬಿ ಅಧಿಕಾರಿಗಳಿಗೆ ಸೆಲ್ಫಿ ಹುಚ್ಚು ಹೆಚ್ಚಾಗಿದ್ದು, ಬಳ್ಳಾರಿಯ ಜನಾರ್ದನ ರೆಡ್ಡಿ ಮನೆ ಪರಿಶೀಲನೆ ವೇಳೆ ಸಿಸಿಬಿ ಅಧಿಕಾರಿಗಳು ಸೆಲ್ಫಿ ಕ್ಲಿಕಿಸಿಕೊಂಡಿದ್ದಾರೆ. ಸಿಸಿಬಿ ಪೊಲಿಸರು ಪರಿಶೀಲನೆಗಿಂತ ಹೆಚ್ಚಾಗಿ ಸೆಲ್ಪಿ ತಗೆಸಿಕೊಂಡಿದ್ದಾರೆ.

    ಇಂದು ಬೆಳಂಬೆಳಗ್ಗೆ ರೆಡ್ಡಿ ನಿವಾಸಕ್ಕೆ ಎರಡು ವಾಹನಗಳಲ್ಲಿ ಆಗಮಿಸಿದ ಸಿಸಿಬಿ ಪೊಲೀಸರು ಪರಿಶೀಲನೆ ಆರಂಭ ಮಾಡಿದ್ದಾರೆ. ಒಟ್ಟು 8 ಮಂದಿ ಅಧಿಕಾರಿಗಳ ತಂಡ ಈ ಕಾರ್ಯದಲ್ಲಿ ತೊಡಗಿದೆ. ಇತ್ತ ಜರ್ನಾದನ ರೆಡ್ಡಿ ಮನೆ ಮೇಲೆ ದಾಳಿ ನಡೆಯುತ್ತಿರುವ ಸುದ್ದಿ ತಿಳಿಯುತ್ತಿದಂತೆ ಶಾಸಕ ಶ್ರೀರಾಮುಲು ಅವರು ರೆಡ್ಡಿ ಮನೆ ಬಳಿ ದೌಡಾಯಿಸಿದ್ದು, ಆಪ್ತ ಸ್ನೇಹಿತನ ನೆರವಿಗೆ ಧಾವಿಸಿದ್ದಾರೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಬೆಂಗಳೂರಿನ ಪರಿಜಾತ ಅಪಾರ್ಟ್ ಮೆಂಟ್ ಮೇಲೂ ದಾಳಿ ನಡೆಸಿ ಪರಿಶೀಲನೆ ಕೈಗೊಳ್ಳಲಾಗಿತ್ತು. ಈ ವೇಳೆ ದಾಳಿ ಬಗ್ಗೆ ಮಾಹಿತಿ ನೀಡಿದ ಪೊಲೀಸ್ ಅಧಿಕಾರಿಗಳು ಮನೆಯಲ್ಲಿ ಕೆಲ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ. ಆದರೆ ಮನೆಯ ಒಳ ಆವರಣದಲ್ಲಿ ಯಾವುದೇ ಸಿಸಿಟಿವಿ ಇಲ್ಲ. ವಶಕ್ಕೆ ಪಡೆದಿರುವ ದಾಖಲೆ ಬಗ್ಗೆ ಹೆಚ್ಚಿನ ಮಾಹಿತಿ ನೀಡಲಾಗುದಿಲ್ಲ. ತನಿಖೆ ಬಳಿಕ ಹೆಚ್ಚಿನ ಮಾಹಿತಿ ಲಭ್ಯವಾಗುತ್ತದೆ ಎಂದು ತಿಳಿಸಿದ್ದರು. ಈ ದಾಳಿಯ ವೇಳೆ ಪರಿಜಾತ ಅಪಾರ್ಟ್ ಮೆಂಟ್ ಹೊರ ಆವರಣದಲ್ಲಿ ಸೆಕ್ಯೂರಿಟಿಗಾಗಿ ಅಳವಡಿಸಲಾಗಿದ್ದ ಸಿಸಿಟಿವಿ ಡಿವಿಆರ್ ಮಾತ್ರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ರೆಡ್ಡಿ ಮೇಲಿನ ಆರೋಪಕ್ಕೆ ಬುಧವಾರ ಪ್ರತಿಕ್ರಿಯೆ ನೀಡಿದ ಬಿಜೆಪಿ ಶಾಸಕ ಶ್ರೀರಾಮುಲು, ನಾನು ಮಾಧ್ಯಮಗಳಲ್ಲಿ ಈ ಪ್ರಕರಣ ಕುರಿತು ನೋಡಿದ್ದೇನೆ. ಕಾನೂನು ಅದರ ಕೆಲಸ ಮಾಡುತ್ತೆ. ಕಾನೂನಿಗಿಂತ ದೊಡ್ಡವರು ಯಾರು ಇಲ್ಲ ಎಂದು ಪ್ರತಿಕ್ರಿಯೆ ನೀಡಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ರೆಡ್ಡಿ ಬಳ್ಳಾರಿ ಅಹಂಬಾವಿ ನಿವಾಸದ ಮೇಲೆ ಸಿಸಿಬಿ ಪೊಲೀಸ್ ದಾಳಿ

    ರೆಡ್ಡಿ ಬಳ್ಳಾರಿ ಅಹಂಬಾವಿ ನಿವಾಸದ ಮೇಲೆ ಸಿಸಿಬಿ ಪೊಲೀಸ್ ದಾಳಿ

    ಬಳ್ಳಾರಿ: ಡೀಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಜನಾರ್ದನ ರೆಡ್ಡಿ ಬಳ್ಳಾರಿ ನಿವಾಸದ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದು, ನಗರದ ಅಹಂಬಾವಿ ನಿವಾಸದ ಮನೆಯಲ್ಲಿ ಪರಿಶೀಲನೆ ನಡೆಸಿದ್ದಾರೆ.

    ಇಂದು ಬೆಳಂಬೆಳಗ್ಗೆ ರೆಡ್ಡಿ ನಿವಾಸಕ್ಕೆ ಎರಡು ವಾಹನಗಳಲ್ಲಿ ಆಗಮಿಸಿದ ಸಿಸಿಬಿ ಪೊಲೀಸರು ಪರಿಶೀಲನೆ ಆರಂಭ ಮಾಡಿದ್ದಾರೆ. ಒಟ್ಟು 8 ಮಂದಿ ಅಧಿಕಾರಿಗಳ ತಂಡ ಈ ಕಾರ್ಯದಲ್ಲಿ ತೊಡಗಿದೆ. ಇತ್ತ ಜರ್ನಾದನ ರೆಡ್ಡಿ ಮನೆ ಮೇಲೆ ದಾಳಿ ನಡೆಯುತ್ತಿರುವ ಸುದ್ದಿ ತಿಳಿಯುತ್ತಿದಂತೆ ಶಾಸಕ ಶ್ರೀರಾಮುಲು ಅವರು ರೆಡ್ಡಿ ಮನೆ ಬಳಿ ದೌಡಾಯಿಸಿದ್ದು, ಆಪ್ತ ಸ್ನೇಹಿತನ ನೆರವಿಗೆ ಧಾವಿಸಿದ್ದಾರೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಬೆಂಗಳೂರಿನ ಪರಿಜಾತ ಅಪಾರ್ಟ್ ಮೆಂಟ್ ಮೇಲೂ ದಾಳಿ ನಡೆಸಿ ಪರಿಶೀಲನೆ ಕೈಗೊಳ್ಳಲಾಗಿತ್ತು. ಈ ವೇಳೆ ದಾಳಿ ಬಗ್ಗೆ ಮಾಹಿತಿ ನೀಡಿದ ಪೊಲೀಸ್ ಅಧಿಕಾರಿಗಳು ಮನೆಯಲ್ಲಿ ಕೆಲ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ. ಆದರೆ ಮನೆಯ ಒಳ ಆವರಣದಲ್ಲಿ ಯಾವುದೇ ಸಿಸಿಟಿವಿ ಇಲ್ಲ. ವಶಕ್ಕೆ ಪಡೆದಿರುವ ದಾಖಲೆ ಬಗ್ಗೆ ಹೆಚ್ಚಿನ ಮಾಹಿತಿ ನೀಡಲಾಗುದಿಲ್ಲ. ತನಿಖೆ ಬಳಿಕ ಹೆಚ್ಚಿನ ಮಾಹಿತಿ ಲಭ್ಯವಾಗುತ್ತದೆ ಎಂದು ತಿಳಿಸಿದ್ದರು. ಈ ದಾಳಿಯ ವೇಳೆ ಪರಿಜಾತ ಅಪಾರ್ಟ್ ಮೆಂಟ್ ಹೊರ ಆವರಣದಲ್ಲಿ ಸೆಕ್ಯೂರಿಟಿಗಾಗಿ ಅಳವಡಿಸಲಾಗಿದ್ದ ಸಿಸಿಟಿವಿ ಡಿವಿಆರ್ ಮಾತ್ರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ರೆಡ್ಡಿ ಮೇಲಿನ ಆರೋಪಕ್ಕೆ ಬುಧವಾರ ಪ್ರತಿಕ್ರಿಯೆ ನೀಡಿದ ಬಿಜೆಪಿ ಶಾಸಕ ಶ್ರೀರಾಮುಲು, ನಾನು ಮಾಧ್ಯಮಗಳಲ್ಲಿ ಈ ಪ್ರಕರಣ ಕುರಿತು ನೋಡಿದ್ದೇನೆ. ಕಾನೂನು ಅದರ ಕೆಲಸ ಮಾಡುತ್ತೆ. ಕಾನೂನಿಗಿಂತ ದೊಡ್ಡವರು ಯಾರು ಇಲ್ಲ ಎಂದು ಪ್ರತಿಕ್ರಿಯೆ ನೀಡಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕಪಾಲಿ ಮೋಹನ್ ಮನೆ ಮೇಲೆ ಸಿಸಿಬಿ ದಾಳಿ-20 ಲೀಟರ್ ವಿದೇಶಿ ಮದ್ಯ ವಶ

    ಕಪಾಲಿ ಮೋಹನ್ ಮನೆ ಮೇಲೆ ಸಿಸಿಬಿ ದಾಳಿ-20 ಲೀಟರ್ ವಿದೇಶಿ ಮದ್ಯ ವಶ

    ಬೆಂಗಳೂರು: ನಗರದ ಮಹಾಲಕ್ಷ್ಮಿ ಲೇಔಟ್‍ನ ಇಸ್ಪೀಟ್ ಅಡ್ಡೆ ಮೇಲೆ ಶನಿವಾರ ರಾತ್ರಿ ದಾಳಿ ನಡೆಸಿದ್ದ ಸಿಸಿಬಿ ಪೊಲೀಸರು ಇಂದು ಗ್ಯಾಂಬ್ಲಿಂಗ್ ರೂವಾರಿ, ಮೀಟರ್ ಬಡ್ಡಿ ಆರೋಪ ಇರುವ ಕಪಾಲಿ ಮೋಹನ್ ಅವರ ಮನೆ ಮೇಲೆ ದಾಳಿ ನಡೆಸಿ ಅಕ್ರಮವಾಗಿ ಸಂಗ್ರಹಿಸಿದ್ದ ವಿದೇಶಿ ಮದ್ಯವನ್ನು ವಶಕ್ಕೆ ಪಡೆದಿದ್ದಾರೆ.

    ಸ್ಯಾಂಡಲ್‍ವುಡ್‍ನಲ್ಲಿ ಹಲವು ಚಿತ್ರಗಳಿಗೆ ಫೈನಾನ್ಸ್ ಮಾಡುತ್ತಿದ್ದ ಕಪಾಲಿ ಮೋಹನ್, ಶೀಘ್ರ ಹಣ ಸಂಪಾದನೆಗೆ ಅಕ್ರಮದ ದಾರಿ ಹಿಡಿದಿದ್ದರು ಎಂಬ ಆರೋಪದ ಮೇಲೆ ಸದಾಶಿವನಗರದ ಮನೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದರು. ಆದರೆ ಈ ವೇಳೆ ಕಪಾಲಿ ಮೋಹನ್ ಮನೆಯಲ್ಲಿ ಇರಲಿಲ್ಲ ಎಂಬ ಮಾಹಿತಿ ಲಭಿಸಿದ್ದು, ಮನೆಯಲ್ಲಿ ದುಬಾರಿ ಬೆಲೆಯ ವಿದೇಶಿ ಮದ್ಯದ ಬಾಟೆಲ್‍ಗಳು ಪತ್ತೆಯಾಗಿವೆ. ಸುಮಾರು 20 ಲೀಟರ್ ನಷ್ಟಿದ್ದ ಅಕ್ರಮ ವಿದೇಶಿ ಮದ್ಯವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಅಂದಹಾಗೇ ಸದ್ಯ ಜಾರಿ ಇರುವ ನಿಯಮದ ಪ್ರಕಾರ 9 ಲೀಟರ್‍ಗಿಂತ ಹೆಚ್ಚಿನ ಪ್ರಮಾಣದಲ್ಲಿ ವಿದೇಶಿ ಮದ್ಯ ಸಂಗ್ರಹ ಮಾಡಿದ್ದರೆ ಅದು ಅಪರಾಧವಾಗುತ್ತದೆ. ಇದರೊಂದಿಗೆ ನಗರದ ಪ್ಯಾಲೇಸ್ ಗುಟ್ಟಹಳ್ಳಿಯ ಬಾಲಾಜಿ ಫೈನಾನ್ಸ್ ಮೇಲೆಯೂ ಸಿಸಿಬಿ ದಾಳಿ ನಡೆಸಿ ಹಲವು ದಾಖಲೆ ವಶಕ್ಕೆ ಪಡೆದಿರುವುದಾಗಿ ಉತ್ತರ ವಿಭಾಗ ಅಬಕಾರಿ ಡಿಸಿ ಕೆಎಸ್ ಮುರಳಿ ತಿಳಿಸಿದ್ದಾರೆ. ಬಾಲಾಜಿ ಫೈನಾನ್ಸ್ ಕಪಾಲಿ ಮೋಹನ್ ಒಡೆತನದಲ್ಲಿ ಸಂಸ್ಥೆಯಾಗಿದೆ.

    ಉಳಿದಂತೆ ಶನಿವಾರ ನಡೆಸಿದ ಸಿಸಿಬಿ ದಾಳಿಗೆ ಸಂಬಂಧಿಸಿದಂತೆ ಆರ್ ಜಿ ಹೋಟೆಲ್ ಬಿಲ್ಡಿಂಗ್ ಮಾಲೀಕನ ಮೇಲೆ ಸಹ ದೂರು ದಾಖಲು ಮಾಡಲಾಗಿದೆ ಎಂದು ಸಿಸಿಬಿ ಡಿಸಿಪಿ ಗಿರೀಶ್ ಹೇಳಿಕೆ ನೀಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಬೆಂಗ್ಳೂರಿನ ಅತಿದೊಡ್ಡ ಜೂಜು ಅಡ್ಡೆಯ ಮೇಲೆ ಸಿಸಿಬಿ ರೇಡ್ – ಸ್ಯಾಂಡಲ್‍ವುಡ್ ಫೈನಾನ್ಶಿಯರ್  ಸಂಕಷ್ಟ

    ಬೆಂಗ್ಳೂರಿನ ಅತಿದೊಡ್ಡ ಜೂಜು ಅಡ್ಡೆಯ ಮೇಲೆ ಸಿಸಿಬಿ ರೇಡ್ – ಸ್ಯಾಂಡಲ್‍ವುಡ್ ಫೈನಾನ್ಶಿಯರ್ ಸಂಕಷ್ಟ

    ಬೆಂಗಳೂರು: ನಗರದಲ್ಲಿ ಸಿಸಿಬಿ ಪೊಲೀಸರ ದಾಳಿ ಎರಡನೇ ದಿನವೂ ಮುಂದುವರಿದಿದ್ದು, ಜೂಜು ಅಡ್ಡೆಯ ಮೇಲೆ ಸಿಸಿಬಿ ದಾಳಿ ಮಾಡಿದ್ದಾರೆ.

    ಶುಕ್ರವಾರ ಅಕ್ರಮ ಹುಕ್ಕಾ ಬಾರ್ ಗಳ ಮೇಲೆ ನಡೆಸಿದ ಪೊಲೀಸ್ರು ಶನಿವಾರ ರಾತ್ರಿ ಯಶವಂತಪುರದಲ್ಲಿರುವ ಪತ್ರಿಷ್ಠಿತ ಆರ್ ಜೆ  ಹೋಟೆಲಿನಲ್ಲಿ ನಡೆಯುತ್ತಿದ್ದ ಜೂಜಾಟದ ಅಡ್ಡೆ ಮೇಲೆ ಸಿಸಿಬಿ ಗಿರೀಶ್ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ. ದಾಳಿ ವೇಳೆ 9 ಲಕ್ಷ ನಗದು ಮದ್ಯ ಬಾಟಲ್, ನಕಲಿ ಐಡಿಗಳು, 3.5 ಕೋಟಿ ಮೌಲ್ಯದ ಗ್ಯಾಮ್ ಬ್ಲಿಂಗ್ ಟೋಕನ್ ಗಳ ವಶಕ್ಕೆ ಪಡೆದುಕೊಂಡಿದ್ದಾರೆ.

    ದಾಳಿ ವೇಳೆ ಹೊರ ರಾಜ್ಯ ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಿಂದ ಜೂಜಾಟ ಆಡುವರನ್ನು ವಿಮಾನದ ಮೂಲಕ ಕರೆತರಲಾಗುತ್ತಿತ್ತು ಎನ್ನಲಾಗಿದೆ. ವಿಮಾನಯಾನಕ್ಕೆ ಶುಲ್ಕವನ್ನು ಆಯೋಜಕರೇ ಪಾವತಿ ಮಾಡಿರುವುದು ದಾಳಿ ವೇಳೆ ಪತ್ತೆಯಾಗಿದೆ. ಆರ್ ಜೆ ಹೋಟೆಲಿನಲ್ಲಿ ಜೂಜಾಟ ಆಯೋಜನೆ ಮಾಡಿರುವುದು ಕನ್ನಡ ಚಿತ್ರಗಳಿಗೆ ಫೈನಾನ್ಸ್ ಮಾಡುತ್ತಿದ್ದ ಫೈನಾನ್ಶಿಯರ್ ಕಪಾಲಿ ಮೋಹನ್ ಎಂದು ತಿಳಿದು ಬಂದಿದೆ.

    ದಾಳಿ ಬಳಿಕ ಕಪಾಲಿ ಮೋಹನ್ ನಾಪತ್ತೆಯಾಗಿದ್ದಾರೆ. ಬೆಂಗಳೂರಿನಲ್ಲಿ ಸುಮಾರು 50 ಬಾರ್ ಗಳನ್ನ ಕಪಾಲಿ ಮೋಹನ್ ಹೊಂದಿದ್ದಾರೆ. ಸಿಸಿಬಿ ದಾಳಿಯಲ್ಲಿ ಇದೇ ಮೊದಲ ಬಾರಿಗೆ ಈ ರೀತಿ ಆಯೋಜಕರೇ ಜೂಜಾಟ ಆಡುವರನ್ನು ವಿಮಾನದ ಮೂಲಕ ನಗರಕ್ಕೆ ಕರೆತಂದು ಜೂಜಾಟ ಆಡಿಸುತ್ತೀರುವುದು ಪತ್ತೆ ಮಾಡಿದ್ದಾರೆ.

    ಸೂಸೈಟಿ ಆಕ್ಟ್ ಪ್ರಕಾರ ನೋಂದಣಿಯಾಗಿರಬೇಕು. ಆದರೆ ಲೈಸನ್ಸ್ ನ ಅವಧಿ ಮುಗಿದು ಎರಡು ವರ್ಷ ಆಗಿದೆ. ಆದರೂ ರಿನಿವಲ್ ಮಾಡಿಕೊಂಡಿಲ್ಲ. ಜೂಜಾಟ ಆಡಲು ಬಂದಿರುವರಿಗೆ ಸ್ಥಳದಲ್ಲೇ ಯಾವ ರೀತಿ ಐಡಿ ಕಾರ್ಡ್ ಗಳನ್ನು ತಯಾರು ಮಾಡಿಕೊಡುತ್ತಿರುವುದು ಪತ್ತೆಯಾಗಿದೆ. ಸದ್ಯ ಮಹಾಲಕ್ಷ್ಮಿ ಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, 47 ಜನರನ್ನು ಬಂಧಿಸಿ ತನಿಖೆ ಮುಂದುವರೆಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಅಧಿಕಾರಿಗಳ ಮನೆ ಆಯ್ತು, ಈಗ ದಂಧೆಕೋರರ ಮನೆಯಲ್ಲೂ ಕೋಟಿ ಕೋಟಿ ಹಣ!

    ಅಧಿಕಾರಿಗಳ ಮನೆ ಆಯ್ತು, ಈಗ ದಂಧೆಕೋರರ ಮನೆಯಲ್ಲೂ ಕೋಟಿ ಕೋಟಿ ಹಣ!

    ಬೆಂಗಳೂರು: ಅಧಿಕಾರಿಗಳ ಮನೆಯಲ್ಲಿ ಮಾತ್ರ ಕೋಟಿ ಹಣ ಸಿಕ್ಕಿಲ್ಲ ದಂಧೆಕೋರರ ಮನೆಯಲ್ಲೂ ಕೋಟಿ ಕೋಟಿ ಹಣ ಸಿಕ್ಕಿದೆ. ನಗರದಲ್ಲಿ ಮೀಟರ್ ಬಡ್ಡಿ ದಂಧೆಕೋರರ ಮನೆ ಮೇಲೆ ಸಿಸಿಬಿ ತಂಡ ದಾಳಿ ಮಾಡಿ ಅಪಾರ ಪ್ರಮಾಣದ ಹಣವನ್ನು ವಶಪಡಿಸಿಕೊಂಡಿದ್ದಾರೆ.

    ಮೀಟರ್ ಓಡಿದಂತೆಲ್ಲಾ ಹಣ ವಸೂಲಿ ಮಾಡುತ್ತಿದ್ದ ದಂಧೆಕೋರರಿಗೆ ಖಾಕಿ ಬಿಸಿ ಮುಟ್ಟಿಸಿದ್ದು, ವಿಜಯನಗರ, ಕಾಮಾಕ್ಷಿಪಾಳ್ಯ ಜಯನಗರ ಸೇರಿದಂತೆ 14 ಕಡೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಮೀಟರ್ ಬಡ್ಡಿ ದಂಧೆ ಮಾಡುತ್ತಿದ್ದ 9 ಜನರ ಮನೆ ಮೇಲೆ ಸಿಸಿಬಿ ದಾಳಿ ಮಾಡಿದ್ದು, ಮೈಕೋ ಲೇಔಟ್ ಭಾಸ್ಕರ್, ಸುಬ್ರಹ್ಮಣ್ಯ, ಬಾತ್ ರೂಮ್ ವೇಲು ಮತ್ತು ಮಾರ್ಕೆಟ್ ಪೊಲೀಸ್ ಠಾಣೆಯ ರೌಡಿಶೀಟರ್ ಮನೆ ಮೇಲೂ ದಾಳಿ ಮಾಡಲಾಗಿದೆ.

    ಮೈಕೋ ಲೇಔಟ್ ಭಾಸ್ಕರ್, ಸುಬ್ರಹ್ಮಣ್ಯ ಎಂಬವರು ಮನೆಯಲ್ಲಿ ತಲಾ ಮೂವತ್ತು ಲಕ್ಷ ವಶಕ್ಕೆ ಪಡೆಯಲಾಗಿದೆ. ಇವರು ತಿಂಗಳಿಗೆ ತಲಾ 10ರಿಂದ 15 ಪರ್ಸೆಂಟ್ ಬಡ್ಡಿ ತೆಗೆದುಕೊಳ್ಳುತ್ತಿದ್ದರು. ಸಿಸಿಬಿ ಪೊಲೀಸರು ಸುಮಾರು 14 ತಂಡಗಳಾಗಿ ಬೆಳಗ್ಗೆ ಐದು ಗಂಟೆಯಿಂದ ದಾಳಿ ಮಾಡಿದ್ದಾರೆ. ದಾಳಿ ವೇಳೆ 69 ಲಕ್ಷ ನಗದು, 258 ಚೇಕ್ ಗಳು, 52 ಆನ್ ಡಿಮ್ಯಾಂಡ್ ನೋಟ್ ಗಳು, 11 ನಿವೇಶನ ದಾಖಲಾತಿಗಳು, 25 ಇ ಸ್ಟಾಂಪ್, 13 ಬಾಂಡ್ ಪೇಪರ್ ಗಳು ಮತ್ತು ಐದಕ್ಕೂ ಹೆಚ್ಚು ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

    ಬೆಂಗಳೂರಿನ ನಗರದಾದ್ಯಂತ ಸಿಸಿಬಿ ಪೊಲೀಸರು ದಾಳಿ ನಡೆಸುತ್ತಿದ್ದು, ಮೀಟರ್ ಬಡ್ಡಿದಂಧೆಕೋರರ ಮನೆ ಮೇಲೆ ದಾಳಿ ಮಾಡಿದ್ದಾರೆ. ಈ ವೇಳೆ 69 ಲಕ್ಷ ರೂ. ನಗದು ಹಣ ಸಿಕ್ಕಿದೆ. ಇನ್ನು ಕಾರ್ಯಾಚರಣೆ ನಡೆಯುತ್ತಿದೆ. ಯಾರ ಬಳಿ, ಎಷ್ಟು? ಹಣ ಸಿಕ್ಕಿದೆ ಎಂದು ಪತ್ರಿಕಾಗೋಷ್ಠಿ ನಡೆಸಿ ಸಂಪೂರ್ಣ ಮಾಹಿತಿ ನೀಡುವುದಾಗಿ ಪೊಲೀಸರು ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://www.youtube.com/watch?v=qzACrYbpmVI