ಮೈಸೂರಿನಲ್ಲಿ ನಾಳೆ ಸಿಸಿಎಲ್ ಕ್ರಿಕೆಟ್ ಮ್ಯಾಚ್ ನಡೆಯಲಿದೆ. ಈ ಹಿನ್ನೆಲೆ ಸಿಸಿಎಲ್ ಟೀಮ್ ಜೊತೆ ಸುದೀಪ್ ಚಾಮುಂಡೇಶ್ವರಿ ದೇವಸ್ಥಾನಕ್ಕೆ (Chamundeshwari Temple) ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಅಂದಹಾಗೆ, ‘ಮ್ಯಾಕ್ಸ್’ ಚಿತ್ರದ ಸಕ್ಸಸ್ ಮತ್ತು ‘ಬಿಗ್ ಬಾಸ್ ಕನ್ನಡ 11’ರ ಶೋ ಮುಕ್ತಾಯದ ಬಳಿಕ ಸುದೀಪ್ ಅವರು ಸಿಸಿಎಲ್ನಲ್ಲಿ ತೊಡಗಿಸಿಕೊಂಡಿದ್ದಾರೆ. ಇದಾದ ಬಳಿಕ ಅನೂಪ್ ಭಂಡಾರಿ ಜೊತೆ ಅವರು ಸಿನಿಮಾ ಮಾಡಲಿದ್ದಾರೆ.
ಸ್ಯಾಂಡಲ್ವುಡ್ (Sandalwood) ಸ್ಟಾರ್ಸ್ ಶೂಟಿಂಗ್ಗೆ ಬ್ರೇಕ್ ಹಾಕಿ ಕೈಯಲ್ಲಿ ಬ್ಯಾಟ್ ಹಿಡಿದು ಕ್ರಿಕೆಟ್ ಮೈದಾನಕ್ಕೆ ಇಳಿಯೋ ಸಮಯ ಮತ್ತೆ ಬಂದಿದೆ. ಸಿಸಿಎಲ್ 11ನೇ ಸೀಸನ್ಗೆ ದಿನಗಣನೆ ಶುರುವಾಗಿದ್ದು, ಇದೇ ಫೆ.8ರಿಂದ ಸಿಸಿಎಲ್ 11ನೇ ಸೀಸನ್ ಶುರುವಾಗುತ್ತಿದೆ. ಹಾಗಾಗಿ ಈ ಕಾರ್ಯಕ್ರಮ ಉದ್ಘಾಟಿಸಲು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ಗೆ (D.K. Shivakumar) ಸುದೀಪ್ (Sudeep) ಆಹ್ವಾನ ನೀಡಿದ್ದಾರೆ.
ಬೆಂಗಳೂರಿನಲ್ಲಿ ಇದೇ ಫೆ.8ರಿಂದ ಸಿಸಿಎಲ್ ಆರಂಭ ಆಗಲಿದೆ. ಇದರ ಉದ್ಘಾಟನೆಗೆ ಡಿಕೆಶಿ ಅವರಿಗೆ ಸುದೀಪ್ ಆಹ್ವಾನ ನೀಡಿದ್ದಾರೆ. ಹೀಗಾಗಿ, ಅವರು ಡಿಕೆಶಿ ನಿವಾಸಕ್ಕೆ ಭೇಟಿ ಕೊಟ್ಟಿದ್ದಾರೆ. ಈ ವೇಳೆ ಸುದೀಪ್ಗೆ ಡೈರೆಕ್ಟರ್ ಅನೂಪ್ ಭಂಡಾರಿ ಸಾಥ್ ನೀಡಿದ್ದಾರೆ. ಫೆ.8ರಂದು ಕರ್ನಾಟಕ ಬುಲ್ಡೋಜರ್ ತಂಡದವರು ಹೈದರಾಬಾದ್ ವಿರುದ್ಧ ಮೊದಲ ಪಂದ್ಯ ಆಡಲಿದ್ದಾರೆ.
ಅಂದಹಾಗೆ, ಇತ್ತೀಚೆಗೆ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ಬುಲ್ಡೋಜರ್ಸ್ ತಂಡದ ನಾಯಕ ಸುದೀಪ್ ಮಾತನಾಡಿ, ಸಿಸಿಎಲ್ ನಡೆಸುವುದೇ ಬಹಳ ಕಷ್ಟ. ನಾಲ್ಕು ಟೀಂ ಒಟ್ಟಿಗೆ ಶುರುವಾದ ಜರ್ನಿ ಇದು. ಇದೇ ಚಿನ್ನಸ್ವಾಮಿ ಮೈದಾನದಲ್ಲಿ ಮುಂಬೈ ಮೇಲೆ ಮೊದಲ ಮ್ಯಾಚ್ ಆಡಿದ್ದೇವು. ಅದ್ಭುತ ವಾತಾವರಣ ಆ ದಿನ ಇತ್ತು. ನಾವೆಲ್ಲಾ ಚಿಕ್ಕ ಚಿಕ್ಕ ಗ್ರೌಂಡ್ನಲ್ಲಿ ಆಟವಾಡುತ್ತಿದ್ದರು. ಅವತ್ತಿಗೆ ಗ್ರೌಂಡ್ ಫುಲ್ ಆಗುತ್ತದೆ. ಇಷ್ಟು ಜನಗಳ ಮಧ್ಯೆ ಆಡುವುದು. ಭಯ ಎಂದರೇನು ಅನ್ನುವುದು ಅವತ್ತು ಗೊತ್ತಾಯ್ತು. ನಮಗೆ ಅದು ಕೊಟ್ಟ ಅದ್ಭುತ ಗಿಫ್ಟ್. ಚಿತ್ರರಂಗದ ಬೇರೆ ಬೇರೆ ಭಾಷೆಗಳ ಜೊತೆ ನಮಗೆ ಒಡನಾಟ ಇರಲಿಲ್ಲ. ಸೇತುವೆ ಇರಲಿಲ್ಲ. ಆದರೆ ಸಿಸಿಎಲ್ನಿಂದ ಸಂಪರ್ಕವಾಯಿತು ಎಂದು ಮಾತನಾಡಿದ್ದರು.
ಈ ಬಾರಿ ಒಟ್ಟು 7 ತಂಡಗಳು ಕ್ರಿಕೆಟ್ ಆಡಲಿದೆ. ಕರ್ನಾಟಕ ಬುಲ್ಡೋಜರ್ಸ್, ಚೆನ್ನೈ ರೈನೋಸ್, ಬೆಂಗಾಲ್ ಟೈಗರ್ಸ್, ಪಂಜಾಬ್ ಡಿ ಶೇರ್, ಮುಂಬೈ ಹೀರೋಸ್, ಭೋಜ್ಪುರಿ ದಬಾಂಗ್ಸ್, ತೆಲುಗು ವಾರಿಯರ್ಸ್ ಸೇರಿದಂತೆ 7 ತಂಡಗಳು ಈ ಪಂದ್ಯಾವಳಿಯಲ್ಲಿ ಭಾಗವಹಿಸಲಿವೆ.
ಸೆಲೆಬ್ರಿಟಿ ಕ್ರಿಕೆಟ್ ಲೀಗ್ನ ಐಕಾನಿಕ್ 10 ನೇ ಸೀಸನ್ ಮಾರ್ಚ್ 17 ರಂದು ಕರ್ನಾಟಕ ಬುಲ್ಡೋಜರ್ಸ್ (Karnataka Bulldozers) ವಿರುದ್ಧ ಉಗುರು ಕಚ್ಚುವ ಫೈನಲ್ನಲ್ಲಿ ಬೆಂಗಾಲ್ ಟೈಗರ್ಸ್ (Bengal Tigers) ಜಯಗಳಿಸುವ ಮೂಲಕ ಭವ್ಯವಾದ ಅಂತಿಮ ಪಂದ್ಯದೊಂದಿಗೆ ಕೊನೆಗೊಂಡಿತು. ಅಂತಿಮ ಪಂದ್ಯವು ಇಡೀ ಋತುವಿನಂತೆಯೇ ಕಟ್-ಥ್ರೋಟ್ ಯುದ್ಧವೆಂದು ಸಾಬೀತಾಯಿತು ಮತ್ತು ಬೆಂಗಾಲ್ ಟೈಗರ್ಸ್ ಕೇವಲ 13 ರನ್ಗಳ ಅಂತರದಿಂದ ಗೆದ್ದಿತು. ಸೆಲೆಬ್ರಿಟಿ ಕ್ರಿಕೆಟ್ ಲೀಗ್ನ ಉತ್ಸಾಹವು ಈ ಋತುವಿನಲ್ಲಿ ಉತ್ತುಂಗದಲ್ಲಿದೆ, ಪಂದ್ಯಗಳನ್ನು ಲೈವ್ ಆಗಿ ಪ್ರಸಾರ ಮಾಡಲಾಗುತ್ತದೆ JioCinema. ಈ ಐಕಾನಿಕ್ ಋತುವಿನಲ್ಲಿ ಅಭಿಮಾನಿಗಳು ವಿಸ್ಮಯದಿಂದ ಹಂಚಿಕೊಂಡಿದ್ದಾರೆ ಮತ್ತು ಮರುಹಂಚಿಕೊಳ್ಳುತ್ತಿರುವ ನಟರ ಸೀದಾ ವೀಡಿಯೋಗಳು ವೈರಲ್ ಆಗುವುದರೊಂದಿಗೆ ಅದ್ಭುತವಾದ ಮನರಂಜನೆಗೆ ಸಾಕ್ಷಿಯಾಯಿತು. ಸಲ್ಮಾನ್ ಖಾನ್ ಅವರ ತಾಯಿಯೊಂದಿಗೆ ಹೃದಯಸ್ಪರ್ಶಿ ಸಂವಾದದಿಂದ ಹಿಡಿದು ಸ್ಟೇಡಿಯಂನಲ್ಲಿ ಜೆನಿಲಿಯಾ ಡಿಸೋಜಾ ಅವರ ವೈರಲ್ ವೀಡಿಯೊದವರೆಗೆ, ಈ ಸೀಸನ್ ನಿಜವಾಗಿಯೂ ಭಾವನೆಗಳ ರೋಲರ್ ಕೋಸ್ಟರ್ ಆಗಿದೆ. ಸ್ಟ್ಯಾಂಡ್ಗಳು ಸಹ ತಮ್ಮ ನೆಚ್ಚಿನ ತಂಡಗಳನ್ನು ಬೆಂಬಲಿಸುವ ಭಾರತೀಯ ಮನರಂಜನಾ ಉದ್ಯಮದ ದೊಡ್ಡ ತಾರೆಗಳಿಂದ ಹರಿಯುವ ಹಾಜರಾತಿಯನ್ನು ಕಂಡವು. ನಾಲ್ಕು ರೋಮಾಂಚನಕಾರಿ ವಾರಾಂತ್ಯಗಳನ್ನು ವ್ಯಾಪಿಸಿದೆ ಮತ್ತು 20 ರೋಮಾಂಚಕ ಪಂದ್ಯಗಳನ್ನು ಒಳಗೊಂಡಿತ್ತು, CCL ಯಶಸ್ವಿಯಾಗಿ ವೈವಿಧ್ಯಮಯ ಪ್ರೇಕ್ಷಕರ ಗಮನವನ್ನು ಸೆಳೆಯಿತು, ಕೇವಲ ಕ್ರಿಕೆಟ್ ಉತ್ಸಾಹಿಗಳನ್ನು ಮೀರಿಸಿತ್ತು.
ಪಂದ್ಯದ ನಂತರದ ಸಮಾರಂಭದಲ್ಲಿ, ಕಿಚ್ಚ ಸುದೀಪ್ ಹಂಚಿಕೊಂಡಿದ್ದಾರೆ, “ಇದು ಅದ್ಭುತವಾದ ಅಂತಿಮ ಪಂದ್ಯ ಎಂದು ನಾನು ಭಾವಿಸುತ್ತೇನೆ. ಫಿನಾಲೆ ಎಂದರೆ ಹೀಗೇ ಇರಬೇಕು. ಸೋತ ನಂತರ ನಾನು ಅಸಮಾಧಾನಗೊಳ್ಳದಿರುವುದು ಇದೇ ಮೊದಲು. ನನ್ನ ತಂಡಕ್ಕೆ ಅವರ ಪಾತ್ರವನ್ನು ತೋರಿಸಲು ನಾನು ಹೇಳುತ್ತೇನೆ ಮತ್ತು ಅವರು 2 ನೇ ಇನ್ನಿಂಗ್ಸ್ನಲ್ಲಿ ಅವರು ಆಡಿದ ರೀತಿ, ಅವರು ಬುಲ್ಡೋಜರ್ಗಳು ಎಂದು ತೋರಿಸಿದರು. ಹುಲಿಗಳು ಕೆಲಸ ಮಾಡಿದ್ದನ್ನು ನಾವು ನೋಡಬಹುದು. ಇದು ಅದ್ಭುತ ತಂಡ ಎಂದು ನಾನು ಭಾವಿಸುತ್ತೇನೆ. ಹೊರಗೆ ಕುಳಿತಿದ್ದ ಹೆಂಗಸರು ಅಪಾಯಕಾರಿ ಅಭಿವ್ಯಕ್ತಿಗಳನ್ನು ನೀಡಿದರು ಮತ್ತು ನಾನು ಉದ್ವಿಗ್ನಗೊಂಡೆ. ಉತ್ತಮ ಪ್ರದರ್ಶನವನ್ನು ನೀಡಿದ್ದಕ್ಕಾಗಿ ಸಿಬ್ಬಂದಿ ಮತ್ತು ಸಿಬ್ಬಂದಿಗೆ ದೊಡ್ಡ ಧನ್ಯವಾದಗಳು.” ಆರ್ಸಿಬಿ ಡಬ್ಲ್ಯುಪಿಎಲ್ ಗೆದ್ದಿರುವ ಬಗ್ಗೆ ಅವರು ಹಂಚಿಕೊಂಡಿದ್ದಾರೆ, “ಆರ್ಸಿಬಿ ಮಹಿಳಾ ತಂಡ ಗೆದ್ದಿದೆ. ಈ ಸಲ ಕಪ್ ನಮ್ದೆ ಮತ್ತು ಹುಡುಗರು ಈಗ ಒತ್ತಡದಲ್ಲಿದ್ದಾರೆ. ಅವರಿಗೆ ದೊಡ್ಡ ಅಭಿನಂದನೆಗಳು. ”
ವಿಜೇತ ನಾಯಕ ಜಿಸ್ಶು ಸೇನ್ಗುಪ್ತಾ ಹಂಚಿಕೊಂಡಿದ್ದಾರೆ, “ಈ ಇಡೀ ತಂಡಕ್ಕೆ ಮತ್ತು ಅವರ ಕುಟುಂಬ ಮತ್ತು ಸ್ನೇಹಿತರಿಗೆ ನಾನು ಪ್ರತಿ ಕ್ಷಣಕ್ಕೂ ಋಣಿಯಾಗಿದ್ದೇನೆ. 9 ವರ್ಷಗಳಲ್ಲಿ ನಾವು ಕೆಳಗಿನಿಂದ ಚಾಂಪಿಯನ್ ಆಗಿದ್ದೇವೆ ಅಥವಾ ಕೆಳಗಿನಿಂದ 2 ನೇ ಸ್ಥಾನ ಪಡೆದಿದ್ದೇವೆ. ಯುವಕರು ನಿಜವಾಗಿಯೂ ಚೆನ್ನಾಗಿ ಮಾಡಿದ್ದಾರೆ. ನಾವು ಕಷ್ಟಪಟ್ಟು ಕೆಲಸ ಮಾಡಿದ್ದೇವೆ ಮತ್ತು ಆದ್ದರಿಂದ ನಾವು ಚಾಂಪಿಯನ್ ಆಗಿದ್ದೇವೆ. ನನಗೆ ಹೇಳಲು ಪದಗಳಿಲ್ಲ, ನಾನು ತುಂಬಾ ಭಾವುಕನಾಗಿದ್ದೇನೆ. ಪಂದ್ಯದ ನಂತರದ ಸಮಾರಂಭದಲ್ಲಿ ಉಪಸ್ಥಿತರಿದ್ದ ಈ ಚಲನಚಿತ್ರ ನಿರ್ಮಾಪಕ ಬೋನಿ ಕಪೂರ್ ಅವರಿಗೆ, “ಹುಲಿಗಳು ತಮ್ಮ ಪಂಜರದಿಂದ ಹೊರಬಂದಿವೆ ಮತ್ತು ಆದ್ದರಿಂದ ನೀವು ಗೆದ್ದಿದ್ದೀರಿ!”
ಕ್ರೀಡಾ ಮನೋಭಾವ ಮತ್ತು ಚುರುಕುತನದ ಸಂಪೂರ್ಣ ಪ್ರದರ್ಶನದೊಂದಿಗೆ, ಈ ಋತುವಿನಲ್ಲಿ, JioCinema ನಲ್ಲಿ ಸ್ಟ್ರೀಮ್ ಮಾಡಲಾಗುತ್ತಿರುವುದು ಸೆಲೆಬ್ರಿಟಿ ಕ್ರಿಕೆಟ್ ಲೀಗ್ನ ಅತ್ಯಂತ ಹಿಟ್ ಸೀಸನ್ಗಳಲ್ಲಿ ಒಂದಾಗಿದೆ. ಮೂರು ವಾರಗಳ ಮುಖಾಮುಖಿ ಮತ್ತು ಕೆಲವು ಉಗುರು ಕಚ್ಚುವಿಕೆಯ ಪಂದ್ಯಗಳ ನಂತರ, ಕರ್ನಾಟಕ ಬುಲ್ಡೋಜರ್ಸ್, ಬೆಂಗಾಲ್ ಟೈಗರ್ಸ್, ಮುಂಬೈ ಹೀರೋಸ್ ಮತ್ತು ಚೆನ್ನೈ ರೈನೋಸ್ ಕ್ವಾಲಿಫೈಯರ್ಗೆ ಮುನ್ನಡೆದವು.
ಅಂತಿಮ ಪಂದ್ಯದ ಉನ್ನತ ಗೌರವಗಳು
ಅತ್ಯುತ್ತಮ ಬ್ಯಾಟ್ಸ್ಮನ್ – ರಾಹುಲ್ ಮಜುಂದಾರ್ (ಬೆಂಗಾಲ್ ಟೈಗರ್ಸ್)
ಅತ್ಯುತ್ತಮ ಬೌಲರ್ – ಚಂದನ್ (ಕರ್ನಾಟಕ ಬುಲ್ಡೋಜರ್ಸ್)
ಪಂದ್ಯ ಶ್ರೇಷ್ಠ – ಜಮ್ಮಿ ಬ್ಯಾನರ್ಜಿ (ಬೆಂಗಾಲ್ ಟೈಗರ್ಸ್)
ಸರಣಿಯ ಉನ್ನತ ಗೌರವಗಳು
ಅತ್ಯುತ್ತಮ ಬ್ಯಾಟ್ಸ್ಮನ್ಗಳು – ಜೆಜಮ್ಮಿ ಬ್ಯಾನರ್ಜಿ (ಬೆಂಗಾಲ್ ಟೈಗರ್ಸ್)
ಸೆಲೆಬ್ರಿಟಿ ಕ್ರಿಕೆಟ್ ಲೀಗ್ಗೆ (CCL) ದಿನಗಣನೆ ಶುರುವಾಗಿದೆ. ಇದೇ ತಿಂಗಳ 23ರಿಂದ ತಾರೆಯರು ಕೈಯಲ್ಲಿ ಬ್ಯಾಟ್ ಹಿಡಿದು ಕ್ರಿಕೆಟ್ ಅಖಾಡಕ್ಕಿಳಿಯುತ್ತಿದ್ದಾರೆ. ಸ್ಯಾಂಡಲ್ವುಡ್ ಟು ಬಾಲಿವುಡ್ ತನಕ ಎಲ್ಲಾ ಇಂಡಸ್ಟ್ರಿಯ ಸ್ಟಾರ್ಗಳು ಸೆಲೆಬ್ರಿಟಿ ಕ್ರಿಕೆಟ್ ಲೀಗ್ 10 ಸೀಸನ್ನಲ್ಲಿ ಪಾಲ್ಗೊಳ್ಳಲಿದ್ದಾರೆ. ಇತ್ತೀಚೆಗೆ ದುಬೈನಲ್ಲಿ ಅದ್ಧೂರಿಯಾಗಿ ಸಿಸಿಎಲ್ಗೆ ಚಾಲನೆ ಕೊಡಲಾಗಿತ್ತು. ಇದೀಗ ತಂಡಗಳು ಕ್ರಿಕೆಟ್ ಅಭ್ಯಾಸಕ್ಕಿಳಿದಿದ್ದಾರೆ. ಅದರಂತೆ ಕರ್ನಾಟಕ ಬುಲ್ಡೋಜರ್ಸ್ (Karnataka Bulldozers) ತಂಡ ಅಭ್ಯಾಸಕ್ಕೂ ಮುನ್ನ ಮಾಧ್ಯಮಕ್ಕೆ ಒಂದಿಷ್ಟು ಮಾಹಿತಿ ಹಂಚಿಕೊಂಡಿದೆ. ಇತ್ತೀಚೆಗಷ್ಟೇ ಖಾಸಗಿ ಹೋಟೆಲ್ನಲ್ಲಿ ನಡೆದ ಸೆಲೆಬ್ರಿಟಿ ಕ್ರಿಕೆಟ್ ಲೀಗ್ನ ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ಬುಲ್ಡೋಜರ್ಸ್ ತಂಡದ ಮಾಲೀಕ ಅಶೋಕ್ ಖೇಣಿ, ಸಿಸಿಎಲ್ ಸಂಸ್ಥಾಪಕ ವಿಷ್ಣು ಇಂದೋರಿ ಹಾಗೂ ಕ್ಯಾಪ್ಟನ್ ಪ್ರದೀಪ್ ಸೇರಿದಂತೆ ಇತತರು ಭಾಗಿಯಾಗಿದ್ದರು. ಅನಾರೋಗ್ಯದ ಕಾರಣದಿಂದ ಕಿಚ್ಚ ಸುದೀಪ್ ಅವರು ಭಾಗಿಯಾಗಲಿರಲಿಲ್ಲ. ಇದೇ ಸಂದರ್ಭದಲ್ಲಿ ಸಿಸಿಎಲ್ ಜರ್ನಿ ವಿಡಿಯೋ ಬಿಡುಗಡೆ ಮಾಡಲಾಯಿತು.
ಬಳಿಕ ಮಾತನಾಡಿದ ಕರ್ನಾಟಕ ಬುಲ್ಡೋಜರ್ಸ್ ಕ್ಯಾಪ್ಟನ್ ಪ್ರದೀಪ್, 12 ವರ್ಷದ ಸಿಸಿಎಲ್ ಜರ್ನಿ ನೋಡಿದ್ಮೇಲೆ. ತುಂಬಾ ಎಮೋಷನಲ್ ಮೂಮೆಂಟ್ ತರ ಇದೆ. ವರ್ಷಕ್ಕೆ 2 ತಿಂಗಳು ಇಟ್ಟುಕೊಂಡರೇ 24 ತಿಂಗಳಾಯ್ತು. ಅಂದರೆ 2 ವರ್ಷದ ಜೀವನವನ್ನು ಸಿಸಿಎಲ್ಗೆ ಕೊಟ್ಟಿದ್ದೇವೆ. ಅಷ್ಟು ವರ್ಷದ ಎಫರ್ಟ್ ಇವತ್ತು ಬುರ್ಜ್ ಖಾಲೀಫ ಮೇಲೆ ಬರುತ್ತಿದೆ. ಸಿಸಿಎಲ್ ಬಿಗ್ಗರ್ ಅಂಡ್ ಬೆಟ್ಟರ್ ಆಗುತ್ತಿದೆ. ಇವಿಷ್ಟಕ್ಕೂ ನಾನು ವಿಷ್ಣು ಸರ್ಗೆ ಧನ್ಯವಾದ ಹೇಳುತ್ತೇನೆ. ಕರ್ನಾಟಕ ಬುಲ್ಡೋಸರ್ಸ್ ಶುರು ಆಗುವುದೇ ‘ಕ’ ಅಕ್ಷರದಿಂದ ಅಂದ್ರೆ ಸುದೀಪಣ್ಣ ಅವರನ್ನು ಬಿಟ್ಟು ಮಾತನಾಡಲು ಸಾಧ್ಯವಿಲ್ಲ. ಅವರಿಗೆ ಹುಷಾರಿಲ್ಲ. ಹೀಗಾಗಿ ಅವರು ಬರಲು ಆಗಲಿಲ್ಲ ಎಂದರು. ಇದನ್ನೂ ಓದಿ:ಅಸಲಿಗೆ ‘ಕಾಟೇರ’ ಟೈಟಲ್ ಕೊಟ್ಟಿದ್ದು ಯಾರು? ನಿರ್ದೇಶಕ ಮಹೇಶ್ ಸ್ಪಷ್ಟನೆ
ಕರ್ನಾಟಕ ಬುಲ್ಡೋಜರ್ಸ್ ತಂಡದ ಮಾಲೀಕ ಅಶೋಕ್ ಖೇಣಿ ಮಾತನಾಡಿ, 10 ವರ್ಷದ ಹಿಂದೆ ಕನ್ನಡ ಸಿನಿಮಾ ಇಂಡಸ್ಟ್ರಿ ಚಿಕ್ಕ ಇಂಡಸ್ಟ್ರಿಯಾಗಿತ್ತು. ಚಿತ್ರರಂಗದ ಒಟ್ಟಾರೆ ಗಳಿಕೆ 50 ಕೋಟಿಯಾಗಿತ್ತು. ಇದು 10 ವರ್ಷದ ಹಿಂದಿನ ಕಥೆ. ಕೆಜಿಎಫ್ ಬಂದ್ಮೇಲೆ ಚಿತ್ರರಂಗ ತುಂಬಾ ಬದಲಾಗಿದೆ. ದರ್ಶನ್ ಸಿನಿಮಾಗೆ ಬಂದು 25 ವರ್ಷವಾಯ್ತು. ಅವರಿಗೆ 47 ವಯಸ್ಸು ಇಂದಿಗೂ. ಹೀರೋ ಆಗಿಯೂ ನಟಿಸ್ತಿದ್ದಾರೆ. ವರ್ಷಕ್ಕೆ 2 ಸಿನಿಮಾ ಮಾಡ್ತಿದ್ದಾರೆ. ನನ್ನ ಅದೃಷ್ಟ ಸಿಸಿಎಲ್ನಲ್ಲಿ ಇಂತಹ ತಂಡ ಪಡೆದಿರುವುದು. ಸುದೀಪ್ ಅವರಿಗೆ ಕ್ರಿಕೆಟ್ ಅಂದ್ರೆ ಹುಚ್ಚು. ಕ್ರಿಕೆಟ್ ಅನ್ನು ಪ್ರೀತಿಸ್ತಾರೆ. ಒಮ್ಮೆ ಸಿಸಿಎಲ್ನಲ್ಲಿ ಪೆಟ್ಟು ಮಾಡಿಕೊಂಡಿದ್ದರು. ಆದ್ರೆ ಅದನ್ನು ಲೆಕ್ಕಿಸದೇ ಮತ್ತೆ ಆಟವಾಡಿದ್ದರು. ಕ್ರಿಕೆಟ್ ಸಿನಿಮಾ ಚಿತ್ರರಂಗದ ಭಾಗ. ಅದೇ ರೀತಿ ಸಿನಿಮಾ ಕ್ರಿಕೆಟ್ನ ಒಂದು ಭಾಗ ಎಂದರು.
ಸಿಸಿಎಲ್ ಸಂಸ್ಥಾಪಕ ಹಾಗೂ ವ್ಯವಸ್ಥಾಪಕ ನಿರ್ದೇಶಕರು ಆಗಿರುವ ವಿಷ್ಣುವರ್ಧನ್ ಇಂದೂರಿ ಮಾತನಾಡಿ, ಸಿಸಿಎಲ್ನ ಆಳ ಏನೆಂಬುವುದು ಮೊದಲೇ ಗೊತ್ತಿದ್ದರೆ ಖಂಡಿತ ಇದಕ್ಕೆ ಕೈ ಹಾಕುತ್ತಿರಲಿಲ್ಲ. ಇದನ್ನು ಈ ಮಟ್ಟಕ್ಕೆ ತರಬೇಕಾದರೆ ಬಹಳ ಕಷ್ಟಪಟ್ಟಿದ್ದೇವೆ. ನೋವು ಅನುಭವಿಸಿದ್ದೇವೆ. ಅನೇಕ ಬಾರಿ ನಿಲ್ಲಿಸುವ ಯೋಚನೆಯೂ ಬಂದಿದೆ. ಆದರೆ ಅಶೋಕ್ ಸರ್, ಸುದೀಪ್ ಸರ್ ಸಪೋರ್ಟ್ ಹಾಗೂ ಆಟದ ಮೇಲಿ ಪ್ರೀತಿ ಇದನ್ನು ಇಲ್ಲಿವರೆಗೆ ತರಲು ಸಾಧ್ಯವಾಯಿತು. ಈ ಬಾರಿ ಸಿಸಿಎಲ್ ದೊಡ್ಡ ಮಟ್ಟದಲ್ಲಿ ನಡೆಯುತ್ತಿದೆ ಎಂದರು.
ಸಿಸಿಎಲ್ 10ನೇ ಸೀಸನ್ ಫೆಬ್ರವರಿ 23 ರಿಂದ ಶುರುವಾಗಿ ಮಾರ್ಚ್ 17 ರವರೆಗೆ ನಡೆಯಲ್ಲಿದೆ. ಭಾರತದ ಎಂಟು ಚಲನಚಿತ್ರೋದ್ಯಮಗಳ ಸೂಪರ್ ಸ್ಟಾರ್ಗಳನ್ನು ಒಳಗೊಂಡಿರುವ ಒಟ್ಟು 8 ತಂಡಗಳು ಯುಎಇ ಸೇರಿದಂತೆ ಭಾರತದ ಐದು ಸ್ಥಳಗಳಲ್ಲಿ 24 ದಿನಗಳ ಕಾಲ ಕ್ರಿಕೆಟ್ ಅಂಗಳದಲ್ಲಿ ಪ್ರಶಸ್ತಿಗಾಗಿ ಕಾದಾಡಲಿವೆ. ಯುಎಇಯ ಶಾರ್ಜಾದಲ್ಲಿ ಲೀಗ್ನ 3 ಪಂದ್ಯಗಳು ನಡೆಯಲ್ಲಿದ್ದು, ಆ ನಂತರ ಲೀಗ್ ಭಾರತಕ್ಕೆ ಕಾಲಿಡಲಿದೆ. ಭಾರತದ ಐದು ನಗರಗಳಾದ ಹೈದರಾಬಾದ್, ಬೆಂಗಳೂರು, ಚಂಡೀಗಢ, ತಿರುವನಂತಪುರ ಮತ್ತು ವೈಜಾಗ್ನಲ್ಲಿ ಉಳಿದ ಪಂದ್ಯಗಳು ನಡೆಯಲಿದೆ. ವಾರಾಂತ್ಯದಲ್ಲಿ ಅಂದರೆ ಶನಿವಾರ ಹಾಗೂ ಭಾನುವಾರ ಡಬಲ್ ಹೆಡರ್ ಪಂದ್ಯಗಳಿರಲಿವೆ. ಅಂದರೆ ದಿನಕ್ಕೆ ಎರಡು ಪಂದ್ಯಗಳು ನಡೆಯಲಿದೆ. ಉದ್ಘಾಟನಾ ಪಂದ್ಯದಲ್ಲಿ ಮುಂಬೈ ಹೀರೋಸ್ ಮತ್ತು ಕೇರಳ ಸ್ಟ್ರೈಕರ್ಸ್ ತಂಡಗಳು ಮುಖಾಮುಖಿಯಾಗಲಿವೆ. ಕರ್ನಾಟಕ ಬುಲ್ಡೋಜರ್ಸ್ ಮೊದಲ ಪಂದ್ಯಾವಳಿ ಇದೇ 25ರಂದು ನಡೆಯುತ್ತಿದ್ದು, ಮುಂಬೈ ಹೀರೋಸ್ ಎದುರು ಸೆಣಸಾಡಲಿದೆ.
ಮುಂಬೈ ಹೀರೋಸ್ ತಂಡಕ್ಕೆ ನಟ ಸಲ್ಮಾನ್ ಖಾನ್ ಬ್ರ್ಯಾಂಡ್ ಅಂಬಾಸಿಡರ್ ಆಗಿದ್ದು, ರಿತೇಶ್ ದೇಶಮುಖ್ ಕ್ಯಾಪ್ಟನ್ ಆಗಿದ್ದಾರೆ. ಸೋಹೈಲ್ ಖಾನ್ ಅವರು ಈ ತಂಡದ ಮಾಲೀಕ. ‘ತೆಲುಗು ವಾರಿಯರ್ಸ್’ ಟೀಮ್ಗೆ ವೆಂಕಟೇಶ್ ಅವರು ಬ್ರ್ಯಾಂಡ್ ಅಂಬಾಸಿಡರ್. ಆ ತಂಡಕ್ಕೆ ಅಖಿಲ್ ಅಕ್ಕಿನೇನಿ ನಾಯಕನಾಗಿದ್ದಾರೆ. ‘ಕರ್ನಾಟಕ ಬುಲ್ಡೋಜರ್ಸ್’ ಟೀಮ್ಗೆ ಪ್ರದೀಪ್ ಕ್ಯಾಪ್ಟನ್ ಆಗಿದ್ದಾರೆ. ಮೋಹನ್ ಲಾಲ್ ಸಹ-ಮಾಲೀಕರಾಗಿರುವ ‘ಕೇರಳ ಸ್ಟ್ರೈಕರ್ಸ್’ ತಂಡವನ್ನು ಕ್ಯಾಪ್ಟನ್ ಇಂದ್ರಜಿತ್ ಮುನ್ನಡೆಸಲಿದ್ದಾರೆ. ‘ಭೋಜಪುರಿ ದಬಾಂಗ್ಸ್’ ತಂಡಕ್ಕೆ ಮನೋಜ್ ತಿವಾರಿ ನಾಯಕ. ಸೋನು ಸೂದ್ ಅವರು ‘ಪಂಜಾಬ್ ದಿ ಶೇರ್’ ತಂಡಕ್ಕೆ ನಾಯಕರಾಗಿದ್ದಾರೆ. ಬೋನಿ ಕಪೂರ್ ಒಡೆತನದ ‘ಬೆಂಗಾಲ್ ಟೈಗರ್ಸ್’ ಟೀಮ್ಗೆ ಜಿಸ್ಸು ಕ್ಯಾಪ್ಟನ್ ಆಗಿದ್ದಾರೆ.
ಭಾರತದ ಜನಪ್ರಿಯ ಒಟಿಟಿ ವೇದಿಕೆಯಾಗಿರುವ ಜಿಯೊಸಿನಿಮಾ, ಸೆಲೆಬ್ರಿಟಿ ಕ್ರಿಕೆಟ್ ಲೀಗ್ (CCL) ಜೊತೆಗೆ ಸಹಭಾಗಿತ್ವವನ್ನು ಘೋಷಿಸಿದೆ. ಇದರ ಭಾಗವಾಗಿ, ಸೆಲೆಬ್ರಿಟಿ ಕ್ರಿಕೆಟ್ ಲೀಗ್ನ ಹತ್ತನೇ ಸೀಸನ್ ಅನ್ನು ಜಿಯೊಸಿನಿಮಾ ಎಕ್ಸ್ ಕ್ಲ್ಯೂಸಿವ್ ಆಗಿ ನೇರಪ್ರಸಾರ ಮಾಡಲಿದೆ. ಕ್ರೀಡೆ ಮತ್ತು ಮನರಂಜನೆಗಳನ್ನು ಒಂದುಗೂಡಿಸಿ ಭಾರತದಲ್ಲಿ ರೂಪಿಸಿರುವ ಏಕಮಾತ್ರ ಪ್ರಯತ್ನ ಸೆಲೆಬ್ರಿಟಿ ಕ್ರಿಕೆಟ್ ಲೀಗ್ ಇದಾಗಿದೆ. ನಾಲ್ಕು ವಾರಾಂತ್ಯಗಳಲ್ಲಿ ನಡೆಯಲಿರುವ ಸಿಸಿಎಲ್ 10ನೇ ಸೀಸನ್ನಲ್ಲಿ ಒಟ್ಟೂ 20 ರೋಚಕ ಪಂದ್ಯಗಳು ನಡೆಯಲಿವೆ. ಕ್ರಿಕೆಟ್ ಅಭಿಮಾನಿಗಳಷ್ಟೇ ಅಲ್ಲದೆ, ಸಿನಿಮಾ ಪ್ರೇಮಿಗಳೂ ಕುತೂಹಲದಿಂದ ವೀಕ್ಷಿಸುವ ಈ ಕ್ರಿಕೆಟ್ ಲೀಗ್ ಅನ್ನು ವ್ಯಾಪಕವಾದ ಪ್ರೇಕ್ಷಕವರ್ಗಕ್ಕೆ ನೇರವಾಗಿ ತಲುಪಿಸಲು ಜಿಯೊಸಿನಿಮಾ ಮುಂದಾಗಿದೆ. ಇದೇ ಫೆಬ್ರುವರಿ 23ರಿಂದ ಎಕ್ಸ್ ಕ್ಲ್ಯೂಸೀವ್ ಆಗಿ ಜಿಯೊ ಸಿನಿಮಾದಲ್ಲಿ ಸಿಸಿಎಲ್ ಪಂದ್ಯಗಳು ನೇರಪ್ರಸಾರವಾಗಲಿವೆ.
ಸೆಲೆಬ್ರಿಟಿ ಕ್ರಿಕೆಟ್ ಲೀಗ್ ಪ್ರಾರಂಭವಾಗಿದ್ದು 2011ರಲ್ಲಿ. ನಂತರದ ದಿನಗಳಲ್ಲಿ ಜನಪ್ರಿಯತೆಯನ್ನು ಹೆಚ್ಚಿಸಿಕೊಳ್ಳುತ್ತಲೇ ಬಂದಿರುವ ಸಿಸಿಎಲ್, ಇಂದು ಭಾರತದಲ್ಲಿ ಅತ್ಯಂತ ಹೆಚ್ಚು ಜನ ವೀಕ್ಷಕರನ್ನು ಹೊಂದಿರುವ ಕ್ರೀಡಾ-ಮನರಂಜನೆಯ ಇವೆಂಟ್ ಆಗಿ ಹೊರಹೊಮ್ಮಿದೆ. ಟೀವಿ ಮತ್ತು ಡಿಜಿಟಲ್ ಮಾಧ್ಯಮದ ಮೂಲಕ ಪ್ರಸಾರವಾಗಿದ್ದ ಕಳೆದ ವರ್ಷದ ಸಿಸಿಎಲ್ ಅನ್ನು, ದೇಶದಾದ್ಯಂತ 250 ಮಿಲಿಯನ್ಗೂ ಅಧಿಕ ಜನರು ವೀಕ್ಷಿಸಿದ್ದರು.
ಯಾವ್ಯಾವ ತಂಡಗಳು?
ಭಾರತದ ಎಂಟು ಮುಖ್ಯ ಚಿತ್ರರಂಗವನ್ನು ಪ್ರತಿನಿಧಿಸುವ ತಂಡಗಳು ಈ ಬಾರಿಯ ಸಿಸಿಎಲ್ನಲ್ಲಿ (Cricket) ಭಾಗವಹಿಸುತ್ತಿವೆ. ಹಿಂದಿ, ಕನ್ನಡ, ತಮಿಳು, ತೆಲುಗು, ಮಲಯಾಳಂ, ಭೋಜಪುರಿ ಮತ್ತು ಪಂಜಾಬ್ ತಂಡಗಳು ಸೆಲೆಬ್ರಿಟಿ ಕ್ರಿಕೆಟ್ ಲೀಗ್ನಲ್ಲಿ ಭಾಗವಹಿಸುತ್ತಿವೆ. ಸಿಸಿಎಲ್ ಸೀಸನ್ 10ನಲ್ಲಿ ಬೇರೆ ಬೇರೆ ಚಿತ್ರರಂಗಗಳ ಇನ್ನೂರಕ್ಕೂ ಅಧಿಕ ಜನಪ್ರಿಯ ತಾರೆಗಳು, ಗಣ್ಯರು ಜೊತೆಯಾಗಿ, ಪ್ರೇಕ್ಷಕರಿಗೆ ಊಹಿಸಲಸಾಧ್ಯ ಮನರಂಜನೆಯ ರಸದೂಟವನ್ನು ಉಣಿಸಲಿದ್ದಾರೆ.
ಯಾವ ತಂಡಕ್ಕೆ ಯಾರು ನಾಯಕರು?
ಸೆಲೆಬ್ರಿಟಿ ಕ್ರಿಕೆಟ್ ಲೀಗ್ನ ಮುಂಬೈ ಹೀರೋಸ್ ತಂಡಕ್ಕೆ ಸಲ್ಮಾನ್ ಖಾನ್ (Salman Khan) ಬ್ರಾಂಡ್ ಅಂಬಾಸಿಡರ್ ಆಗಿದ್ದಾರೆ. ರಿತೇಶ್ ದೇಶಮುಖ್ ಈ ತಂಡದ ನಾಯಕ. ಸೋಹೈಲ್ ಖಾನ್, ಮುಂಬೈ ಹೀರೊಸ್ ತಂಡದ ಮಾಲೀಕರಾಗಿದ್ದಾರೆ. ‘ತೆಲುಗು ವಾರಿಯರ್ಸ್’ ತಂಡಕ್ಕೆ ವೆಂಕಟೇಶ್ ಬ್ರಾಂಡ್ ಅಂಬಾಸಿಡರ್ ಆಗಿದ್ದಾರೆ. ಅಖಿಲ್ ಅಕ್ಕಿನೇನಿ ‘ತೆಲುಗು ವಾರಿಯರ್ಸ್’ ತಂಡದ ನಾಯಕ. ‘ಕರ್ನಾಟಕ ಬುಲ್ಡೋಜರ್ಸ್’ ತಂಡಕ್ಕೆ ಕಿಚ್ಚ ಸುದೀಪ್ (Sudeep) ನಾಯಕನಾಗಿದ್ದಾರೆ. ಬಿಗ್ಬಾಸ್ ಕನ್ನಡ ಸೀಸನ್ 10 ಅನ್ನು ಈಗಷ್ಟೇ ಮುಗಿಸಿರುವ ಸುದೀಪ್, ಮತ್ತೊಮ್ಮೆ ಸಿಸಿಎಲ್ 10 ಮೂಲಕ ಜಿಯೊಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಮೋಹನ್ಲಾಲ್ ಸಹಮಾಲೀಕರಾಗಿರುವ ‘ಕೇರಳ ಸ್ಟ್ರೈಕರ್ಸ್’ ತಂಡಕ್ಕೆ ಇಂದ್ರಜಿತ್ ನಾಯಕರಾಗಿದ್ದಾರೆ. ‘ಭೋಜಪುರಿ ದಬಾಂಗ್ಸ್’ ತಂಡಕ್ಕೆ ಮನೋಜ್ ತಿವಾರಿ ನಾಯಕರಾಗಿದ್ದಾರೆ. ‘ಪಂಜಾಬ್ ದೆ ಶೇರ್’ ತಂಡಕ್ಕೆ ಸೋನು ಸೂದ್ ನಾಯಕರಾಗಿದ್ದಾರೆ. ಬೋನಿ ಕಪೂರ್ ಮಾಲೀಕರಾಗಿರುವ ‘ಬೆಂಗಾಲ್ ಟೈಗರ್ಸ್’ ತಂಡಕ್ಕೆ ಜಿಸ್ಸು ಸೆನ್ಗುಪ್ತ ನಾಯಕರಾಗಿದ್ದಾರೆ.
ಸಿಸಿಎಲ್ ಜೊತೆಗಿನ ಸಹಭಾಗಿತ್ವದ ಬಗ್ಗೆ ಪ್ರತಿಕ್ರಿಯಿಸಿರುವ ಜಿಯೊಸಿನಿಮಾದ ಬ್ಯುಸಿನೆಸ್ ಹೆಡ್ ಫರ್ಜಾದ್ ಪಾಲಿಯಾ, ‘ಜಿಯೊಸಿನಿಮಾ ವೇದಿಕೆಗೆ ಎಲ್ಲೆಡೆಯಿಂದ ಅದ್ಭುತವಾದ ಮೆಚ್ಚುಗೆ ದೊರಕುತ್ತಿದ್ದು, ಕ್ರಿಡೆ ಮತ್ತು ಮನರಂಜನೆಗೆ ಬೇರೆಲ್ಲೂ ಸಿಗದ ಅದ್ಭುತ ಪ್ರತಿಕ್ರಿಯೆ ಜಿಯೊಸಿನಿಮಾಗೆ ದೊರಕುತ್ತಿದೆ. ನಮಗೆ ಸಿಗುತ್ತಿರುವ ಅಪ್ರತಿಮವಾದ ವ್ಯೂವರ್ಷಿಪ್ ಅದಕ್ಕೆ ಪುರಾವೆಯಾಗಿದೆ. ಸೆಲೆಬ್ರಿಟಿ ಕ್ರಿಕೆಟ್ ಲೀಗ್ ಎಂಬುದು ಕ್ರಿಡೆ ಮತ್ತು ಮನರಂಜನೆ ಎರಡೂ ಜಗತ್ತುಗಳನ್ನು ಒಂದೆಡೆ ಸೇರಿಸುತ್ತಿದ್ದು, ಇಂಡಿಯಾವನ್ನು ರಂಜಿಸುವ ಉದ್ದೆಶದಿಂದ ಸಿಸಿಎಲ್ ಜೊತೆಗೆ ಕೈಜೋಡಿಸುತ್ತಿರುವುದು ನಮಗೆ ಅತ್ಯಂತ ಸಂತೋಷದ ಸಂಗತಿಯಾಗಿದೆ’ ಎಂದು ಹೇಳಿದ್ದಾರೆ.
ಸೆಲೆಬ್ರಿಟಿ ಕ್ರಿಕೆಟ್ ಲೀಗ್ನ (ಸಿಸಿಎಲ್) ಸಂಸ್ಥಾಪಕರಾದ ವಿಷ್ಣು ಇಂದುರಿ ಕೂಡ ಈ ಸಹಭಾಗಿತ್ವದ ಬಗ್ಗೆ ಉತ್ಸಾಹದ ಮಾತುಗಳಾಡಿದ್ದಾರೆ. ‘ಸೆಲೆಬ್ರಿಟಿ ಕ್ರಿಕೆಟ್ ಲೀಗ್, ಸಂಸ್ಕೃತಿಕ ಹೆಗ್ಗುರುತಾಗಿ ಹೊರಹೊಮ್ಮುತ್ತಿದೆ. ಇದರ ಹತ್ತನೇ ಸೀಸನ್ ಅನ್ನು ಇನ್ನಷ್ಟು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಜಿಯೊಸಿನಿಮಾ ಜೊತೆಗೆ ಕೈಜೋಡಿಸಿರುವುದು ನಿಜಕ್ಕೂ ನಮಗೆ ಸಂತೋಷದ ಸಂಗತಿ. ಕ್ರೀಡೆ ಮತ್ತು ಮನರಂಜನೆಯ ಈ ಸಂಯೋಜನೆಯ ಸಿಸಿಎಲ್ ಮೂಲಕ ದೇಶದಾದ್ಯಂತ ಅಭಿಮಾನಿಗಳ ಮನಸೂರೆಗೊಳ್ಳಲು ನಾವು ಕಾಯುತ್ತಿದ್ದೇವೆ’ ಎಂದು ಅವರು ಹೇಳಿದ್ದಾರೆ. ಕ್ರೀಡೆ ಮತ್ತು ಮನರಂಜನೆಯ ಅಪರೂಪದ ಸಂಯೋಜನೆಯಾಗಿರುವ ಸೆಲೆಬ್ರಿಟಿ ಕ್ರಿಕೆಟ್ ಲೀಗ್ನ (ಸಿಸಿಎಲ್) 10ನೇ ಸೀಸನ್ ಅನ್ನು ಫೆಬ್ರುವರಿ 23ರಿಂದ ಜಿಯೊಸಿನಿಮಾದಲ್ಲಿ ವೀಕ್ಷಿಸಿ.
ಕಿಚ್ಚ ಸುದೀಪ್ (Sudeep) ನೇತೃತ್ವದ ಕರ್ನಾಟಕ ಬುಲ್ಡೋಜರ್ ಟೀಮ್ ಇಂದು ತೆಲುಗು ವಾರಿಯರ್ಸ್ (Telugu Warriors) ವಿರುದ್ಧ ಸಿಸಿಎಲ್ (CCL) ಪಂದ್ಯದಲ್ಲಿ ಸೆಣಸಲಿದೆ. ಇಂದು ಬೆಂಗಳೂರಿನಲ್ಲಿ ನಡೆಯಲಿರುವ ಸಿಸಿಎಲ್ ಪಂದ್ಯಾವಳಿಯಲ್ಲಿ 2023ನೇ ಸಾಲಿನ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆಯುವ ಪ್ರಯತ್ನಕ್ಕಾಗಿ ತೆಲುಗು ವಾರಿಯರ್ಸ್ ಮತ್ತು ಕರ್ನಾಟಕ ಬುಲ್ಡೋಜರ್ಸ್ (Karnataka Bulldozers) ಕ್ರಮವಾಗಿ ಪಂದ್ಯಗಳನ್ನು ಆಡಲಿವೆ. ಜೈಪುರದಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಿರುವ ತಂಡಗಳು ಬೆಂಗಳೂರಿನಲ್ಲಿ ಇಂದು ಪಂದ್ಯಗಳನ್ನು ಆಯೋಜನೆ ಮಾಡಲಾಗಿದೆ. ಒಟ್ಟು ನಾಲ್ಕು ಪಂದ್ಯಗಳು ನಡೆಯಲಿವೆ.
ರಾಯಪುರ ಮತ್ತು ಜೈಪುರದಲ್ಲಿ ಎರಡು ದಿನಗಳ ಕಾಲ ಸಿಸಿಎಲ್ ಪಂದ್ಯಗಳು ನಡೆದಿವೆ. ಕ್ರಿಕೆಟ್ ಅಭಿಮಾನಿಗಳನ್ನು ಮತ್ತು ಸಿನಿಮಾ ಪ್ರೇಕ್ಷಕರನ್ನು ಸೆಳೆದ ಈ ಪಂದ್ಯಗಳು ಅದೇ ರೋಚಕತೆಯನ್ನು ಬೆಂಗಳೂರಿನಲ್ಲಿ ಮುಂದುವರೆಸಲಿವೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಪಂದ್ಯಾವಳಿಯು ಪಂಜಾಬ್ ಮತ್ತು ತೆಲುಗು ವಾರಿಯರ್ಸ್ ನಂತರ ಚೆನ್ನೈ ರೈನೋಸ್ ಮತ್ತು ಕರ್ನಾಟಕ ಬುಲ್ಡೋಜರ್ಸ್ ನಡುವೆ ಪಂದ್ಯಗಳು ಏರ್ಪಡಲಿವೆ. ಇದನ್ನೂ ಓದಿ: ಹೃತಿಕ್ ರೋಷನ್- ಸಬಾ ಆಜಾದ್ ಮದುವೆ ನಿಜಾನಾ? ರಾಕೇಶ್ ರೋಷನ್ ಸ್ಪಷ್ಟನೆ
ಇಂದು ಮಧ್ಯಾಹ್ನ 2.30 ರಿಂದ ಸಂಜೆ 6.30ರವರೆಗೆ ಪಂಜಾಬ್ ಡಿ ಶೇರ್ ಮತ್ತು ತೆಲುಗು ವಾರಿಯರ್ಸ್ ನಡುವೆ ಪಂದ್ಯವಿದ್ದರೆ, ಸಂಜೆ 7 ಗಂಟೆಯಿಂದ ರಾತ್ರಿ 11ರವರೆಗೆ ಚೆನ್ನೈ ರೈನೋಸ್ ಮತ್ತು ಕರ್ನಾಟಕ ಬುಲ್ಡೋಜರ್ಸ್ ನಡುವೆ ಪಂದ್ಯವಿದೆ. ಈ ಪಂದ್ಯದಲ್ಲಿ ಕಿಚ್ಚ ಸುದೀಪ್, ಪ್ರದೀಪ್, ಆರ್ಯ, ಅಖಿಲ್ ಅಕ್ಕಿನೇನಿ, ಸೋನು ಸೂದ್ ಸೇರಿದಂತೆ ಕನ್ನಡ, ತಮಿಳು, ತೆಲುಗು ಮತ್ತು ಪಂಜಾಬಿ ಚಿತ್ರರಂಗದ ಹಲವು ಕಲಾವಿದರು ಭಾಗಿಯಾಗಲಿದ್ದಾರೆ.
ನಾಳೆ ಬೆಂಗಳೂರಿನಲ್ಲಿ ನಡೆಯಲಿರುವ ಸಿಸಿಎಲ್ (CCL) ಪಂದ್ಯಾವಳಿಯಲ್ಲಿ 2023ನೇ ಸಾಲಿನ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆಯುವ ಪ್ರಯತ್ನಕ್ಕಾಗಿ ತೆಲುಗು ವಾರಿಯರ್ಸ್ (Telugu Warriors) ಮತ್ತು ಕರ್ನಾಟಕ ಬುಲ್ಡೋಜರ್ಸ್ (Karnataka Bulldozers) ಕ್ರಮವಾಗಿ ಪಂದ್ಯಗಳನ್ನು ಆಡಲಿವೆ. ಜೈಪುರದಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಿರುವ ತಂಡಗಳು ಬೆಂಗಳೂರಿನಲ್ಲಿ ಮಾರ್ಚ್ 4 ರಂದು ಪಂದ್ಯಗಳನ್ನು ಆಯೋಜನೆ ಮಾಡಲಾಗಿದೆ. ಒಟ್ಟು ನಾಲ್ಕು ಪಂದ್ಯಗಳು ನಡೆಯಲಿವೆ.
ರಾಯಪುರ ಮತ್ತು ಜೈಪುರದಲ್ಲಿ ಎರಡು ದಿನಗಳ ಕಾಲ ಸಿಸಿಎಲ್ ಪಂದ್ಯಗಳು ನಡೆದಿವೆ. ಕ್ರಿಕೆಟ್ ಅಭಿಮಾನಿಗಳನ್ನು ಮತ್ತು ಸಿನಿಮಾ ಪ್ರೇಕ್ಷಕರನ್ನು ಸೆಳೆದ ಈ ಪಂದ್ಯಗಳು ಅದೇ ರೋಚಕತೆಯನ್ನು ಬೆಂಗಳೂರಿನಲ್ಲಿ ಮುಂದುವರೆಸಲಿವೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಪಂದ್ಯಾವಳಿಯು ಪಂಜಾಬ್ ಮತ್ತು ತೆಲುಗು ವಾರಿಯರ್ಸ್ ನಂತರ ಚೆನ್ನೈ ರೈನೋಸ್ (Chennai Rhinos) ಮತ್ತು ಕರ್ನಾಟಕ ಬುಲ್ಡೋಜರ್ಸ್ ನಡುವೆ ಪಂದ್ಯಗಳು ಏರ್ಪಡಲಿವೆ. ಇದನ್ನೂ ಓದಿ: ರಶ್ಮಿಕಾ ಬಳಿಕ ಮತ್ತೊಬ್ಬ ಕನ್ನಡತಿ ಜೊತೆ ವಿಜಯ್ ದೇವರಕೊಂಡ ರೊಮ್ಯಾನ್ಸ್
ಮಾರ್ಚ್ 4 ರಂದು ಮಧ್ಯಾಹ್ನ 2.30 ರಿಂದ ಸಂಜೆ 6.30ರವರೆಗೆ ಪಂಜಾಬ್ ಡಿ ಶೇರ್ (Punjab D Sher) ಮತ್ತು ತೆಲುಗು ವಾರಿಯರ್ಸ್ ನಡುವೆ ಪಂದ್ಯವಿದ್ದರೆ, ಸಂಜೆ 7 ಗಂಟೆಯಿಂದ ರಾತ್ರಿ 11ರವರೆಗೆ ಚೆನ್ನೈ ರೈನೋಸ್ ಮತ್ತು ಕರ್ನಾಟಕ ಬುಲ್ಡೋಜರ್ಸ್ ನಡುವೆ ಪಂದ್ಯವಿದೆ. ಈ ಪಂದ್ಯದಲ್ಲಿ ಕಿಚ್ಚ ಸುದೀಪ್ (Sudeep), ಪ್ರದೀಪ್, ಆರ್ಯ, ಅಖಿಲ್ ಅಕ್ಕಿನೇನಿ, ಸೋನು ಸೂದ್ ಸೇರಿದಂತೆ ಕನ್ನಡ, ತಮಿಳು, ತೆಲುಗು ಮತ್ತು ಪಂಜಾಬಿ ಚಿತ್ರರಂಗದ ಹಲವು ಕಲಾವಿದರು ಭಾಗಿಯಾಗಲಿದ್ದಾರೆ.
ಇಂದಿನಿಂದ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಸಿಲೆಬ್ರಿಟಿ ಕ್ರಿಕೆಟ್ ಲೀಗ್ (CCL) ಪಂದ್ಯವನ್ನು ವೀಕ್ಷಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraja Bommai) ಸಂಜೆ ಆಗಮಿಸಿದರು. ಇಂದು ಅಧಿವೇಶನದ ಕೊನೆಯ ದಿನವಾಗಿದ್ದರೂ, ಅಧಿವೇಶನ ಮುಗಿಸಿಕೊಂಡು ಅವರು ಕ್ರೀಡಾಂಗಣದಲ್ಲಿ ಹಾಜರಿದ್ದರು. ಜೊತೆಗೆ ಆರೋಗ್ಯ ಸಚಿವ ಕೆ.ಸುಧಾಕರ್ ಅವರನ್ನೂ ಕರೆತಂದಿದ್ದರು.
ಮುಖ್ಯಮಂತ್ರಿಗಳು ಆರು ತಂಡಗಳ ಸದಸ್ಯರನ್ನು ಪರಿಚಯಿಸಿಕೊಂಡು, ಕೆಲಹೊತ್ತು ಕ್ರಿಕೆಟ್ (Cricket) ವೀಕ್ಷಿಸಿದರು. ನಂತರ ಅಲ್ಲಿಂದ ತೆರಳಿದರು. ಈ ಸಂದರ್ಭದಲ್ಲಿ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ನಟ ರವಿಚಂದ್ರನ್, ಲಹರಿ ವೇಲು, ಕ್ರಿಕೆಟ್ ತಂಡಗಳ ಸದಸ್ಯರು ಹಾಜರಿದ್ದರು. ಇಂದು ಮತ್ತು ನಾಳೆ ಎರಡು ದಿನಗಳ ಕಾಲ ಈ ಪಂದ್ಯ ನಡೆಯಲಿದೆ. ಕನ್ನಡ ಸಿನಿಮಾ ರಂಗದ ಗಣ್ಯರ ಜೊತೆ ಅಂತಾರಾಷ್ಟ್ರೀಯ ಕ್ರಿಕೆಟ್ ಆಟಗಾರರು ಕೂಡ ಈ ಪಂದ್ಯದಲ್ಲಿ ಭಾಗಿಯಾಗಿದ್ದಾರೆ. ಇದನ್ನೂ ಓದಿ: ಹೊಂಬಾಳೆ ಫಿಲ್ಮ್ ಯುವ ಚಿತ್ರಕ್ಕೆ ರುಕ್ಮಿಣಿ ವಸಂತ್ ನಾಯಕಿನಾ? ಸ್ಪಷ್ಟನೆ ನೀಡಿದ ನಟಿ
ಇಂದು ಒಟ್ಟು ಮೂರು ಪಂದ್ಯಗಳು ಆಯೋಜನೆಯಾಗಿದ್ದು, ಮೊದಲ ಪಂದ್ಯವಾಗಿ ಕಿಚ್ಚ ಸುದೀಪ್ ನೇತೃತ್ವದ ತಂಡದೊಂದಿಗೆ ಡಾಲಿ ಧನಂಜಯ್ ಟೀಮ್ ಸೆಣಸಲಿದೆ. ನಂತರ ಶಿವರಾಜ್ ಕುಮಾರ್ ಮತ್ತು ಸುದೀಪ್ ನೇತೃತ್ವದ ತಂಡಗಳು ಎದುರಾಗಲಿವೆ. ಮೂರನೇ ಪಂದ್ಯವಾಗಿ ಗಣೇಶ್ ಮತ್ತು ಧ್ರುವ ಸರ್ಜಾ ಟೀಮ್ ಮೈದಾನಕ್ಕೆ ಇಳಿಯಲಿವೆ.
LIVE TV
[brid partner=56869869 player=32851 video=960834 autoplay=true]
ರಾಂಚಿ: ನಿರುದ್ಯೋಗದಿಂದ ಬೇಸತ್ತಿದ್ದ ಮಗ, ಅನುಕಂಪದ ಆಧಾರದ ಮೇಲೆ ಕೆಲಸ ಪಡೆಯಲು ತನ್ನ 55 ವರ್ಷದ ತಂದೆಯನ್ನೇ ಕೊಲೆ ಮಾಡಿರುವ ಆಘಾತಕಾರಿ ಘಟನೆ ಜಾರ್ಖಂಡ್ನ ರಾಮ್ಘರ್ ಜಿಲ್ಲೆಯಲ್ಲಿ ನಡೆದಿದೆ.
ಸೆಂಟ್ರಲ್ ಕೋಲ್ ಫೀಲ್ಡ್ಸ್ ಲಿಮಿಟೆಡ್(ಸಿಸಿಎಲ್)ನಲ್ಲಿ ಕೆಲಸ ಮಾಡುತ್ತಿದ್ದ 55 ವರ್ಷದ ತಂದೆ ಕೃಷ್ಣ ರಾಮ್ ಅವರನ್ನು ಮಗ ಕೊಲೆ ಮಾಡಿದ್ದಾನೆ. ಪಬ್ಲಿಕ್ ಸೆಕ್ಟರ್ ಅಂಡರ್ಟೇಕಿಂಗ್(ಪಿಎಸ್ಯು) ಕಂಪನಿಯಲ್ಲಿ ಕೆಲಸ ಪಡೆಯುವ ಸಲುವಾಗಿ ತನ್ನ ತಂದೆಯ ಗಂಟಲನ್ನು ಕೊಯ್ದು ಮಗನೇ ಹತ್ಯೆ ಮಾಡಿದ್ದಾನೆ.
ಮೃತ ಕೃಷ್ಣ ರಾಮ್ ಮುಖ್ಯ ಭದ್ರತಾ ಸಿಬ್ಬಂದಿಯಾಗಿದ್ದು, ರಾಮ್ಘರ್ ಜಿಲ್ಲೆಯ ಬಾರ್ಕಕಾನಾದ ಸಿಸಿಎಲ್ನ ಕೇಂದ್ರ ಕಾರ್ಯಾಗಾರದಲ್ಲಿ ಕೆಲಸ ಮಾಡುತ್ತಿದ್ದರು. ಗುರುವಾರ ಹರಿತವಾದ ಆಯುಧದಿಂದ ತಂದೆಯ ಗಂಟಲನ್ನು ಸೀಳಿ ಮಗ ಕೊಲೆ ಮಾಡಿದ್ದಾನೆ ಎಂದು ವರದಿಯಾಗಿದೆ.
ಉಪ ವಿಭಾಗೀಯ ಪೊಲೀಸ್ ಅಧಿಕಾರಿ(ಎಸ್ಡಿಪಿಒ) ಪ್ರಕಾಶ್ ಚಂದ್ರ ಮಹತೋ ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನಿಡಿದ್ದು, ರಾಮ್ ಅವರ 35 ವರ್ಷದ ಮಗ ಬಾರ್ಕಕಾನಾ ಕ್ವಾಟ್ರಸ್ನಲ್ಲಿ ಬುಧವಾರ ರಾತ್ರಿ ಕತ್ತು ಸೀಳಿ ತಂದೆಯನ್ನು ಹತ್ಯೆ ಮಾಡಿದ್ದಾನೆ. ಘಟನಾ ಸ್ಥಳದಿಂದ ಸಂತ್ರಸ್ತನ ಮೊಬೈಲ್ ಫೋನ್ ಹಾಗೂ ಸಣ್ಣ ಚಾಕುವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ವಿಚಾರಣೆ ವೇಳೆ ರಾಮ್ ಅವರ ಹಿರಿಯ ಮಗ ತಪ್ಪೊಪ್ಪಿಕೊಂಡಿದ್ದು, ತಂದೆ ಸತ್ತ ಬಳಿಕ ಅನುಕಂಪದ ಆಧಾರ ಮೇರೆಗೆ ಸಿಸಿಎಲ್ನಲ್ಲಿ ಕೆಲಸ ಪಡೆಯಲು ತಂದೆಯನ್ನು ಕೊಲೆ ಮಾಡಿರುವುದಾಗಿ ಹೇಳಿದ್ದಾನೆ. ಸಿಸಿಎಲ್ನ ನಿಬಂಧನೆ ಪ್ರಕಾರ, ನೌಕರ ತನ್ನ ಸೇವಾ ಅವಧಿಯಲ್ಲಿ ಸಾವನ್ನಪ್ಪಿದರೆ ಕನೂನು ಪ್ರಕಾರ ಅವಲಂಬಿತರಿಗೆ ಕೆಲಸ ನೀಡಲಾಗುತ್ತದೆ ಎಂದು ಪೊಲೀಸರು ವಿವರಿಸಿದ್ದಾರೆ.
ಬೆಂಗಳೂರು: ನಟ, ಸಿಸಿಎಲ್ ಆಟಗಾರ ಧೃವ ಶರ್ಮಾ ಸಾವು ಆತ್ಮಹತ್ಯೆ ಎಂದು ತಿಳಿದುಬಂದಿದೆ.
ಸಾಲಬಾಧೆಯಿಂದ ಧ್ರುವ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಂದೆ ಸುರೇಶ್ ಶರ್ಮಾರಿಂದಲೇ ರಾಜನಕುಂಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಧ್ರುವ ಅವರು ಶನಿವಾರ ರಾತ್ರಿ 9 ಗಂಟೆಗೆ ವಿಷ ಕುಡಿದು ಬಂದು ಮನೆಯಲ್ಲಿ ಪ್ರಜ್ಞೆ ಇಲ್ಲದೆ ಬಿದ್ದಿದ್ದರು. ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿಂದ ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ಮೂರ್ಛೆ ರೋಗ ಅಂತಾ ದಾಖಲಿಸಲಾಗಿತ್ತು. ಆದ್ರೆ ಮಧ್ಯರಾತ್ರಿ 01:30ಕ್ಕೆ ಧ್ರುವ ಕೊನೆಯುಸಿರೆಳೆದಿದ್ದಾರೆ.
ಬೆಳಿಗ್ಗೆ ಮೂರು ಗಂಟೆಗೆ ನಟ ಸುದೀಪ್, ಪ್ರದೀಪ್, ನಂದ ಕಿಶೊರ್ ಆಸ್ಪತ್ರೆಗೆ ಭೇಟಿ ನೀಡಿದ್ರು. ಧ್ರುವ ಅವರು ಪತ್ನಿ, 5 ವರ್ಷದ ಮಗಳು ಹಾಗೂ 2 ವರ್ಷದ ಮಗನನ್ನ ಅಗಲಿದ್ದಾರೆ.
ಮರಣೋತ್ತರ ಪರೀಕ್ಷೆ ನಂತರ ಪಾರ್ಥೀವ ಶರೀರ ದೊಡ್ಡಬಳ್ಳಾಪುರ ರಸ್ತೆಯ ರಾಜಾನುಕುಂಟೆ ಬಳಿ ಇರೋ ಪ್ರಿಸ್ಟೀಜ್ ವಿಲ್ಲಾಗೆ ರವಾನೆ ಆಗಲಿದೆ. ಇಂದು ಬೆಳಗ್ಗೆ 7:30ಕ್ಕೆ ಮರಣೋತ್ತರ ಪರೀಕ್ಷೆಗಾಗಿ ಧ್ರುವ ಶರ್ಮಾ ಪಾರ್ಥಿವ ಶರೀರ ಎಂಎಸ್ ರಾಮಯ್ಯ ಆಸ್ಪತ್ರೆಗೆ ರವಾನೆಯಾಗಲಿದೆ.
ಧ್ರುವ ಅವರಿಗೆ ವಿದ್ಯಾರಣ್ಯಪುರದಲ್ಲಿ ನಾಯಿಗೆ ಆಹಾರ ತಯಾರು ಮಾಡೋ ಫ್ಯಾಕ್ಟರಿ ಇದ್ದು, ಅದು ನಷ್ಟದಲ್ಲಿ ನಡೆಯುತ್ತಾ ಇತ್ತು ಎನ್ನಲಾಗಿದೆ.
ಧ್ರುವ ಒಪ್ಪಿಕೊಂಡ ಸಿನಿಮಾವೊಂದರ ಶೂಟಿಂಗ್ ಕಂಪ್ಲೀಟ್ ಮಾಡಿದ್ದರು. ಸಿನಿಮಾದಲ್ಲಿ ಧ್ರುವ ಮೂಗನ ಪಾತ್ರದಲ್ಲಿ ಅಭಿನಯಿಸಿದ್ದು, ಮುಂದಿನ ತಿಂಗಳು ಆಡಿಯೋ ಲಾಂಚ್ ಮಾಡಲು ಚಿತ್ರತಂಡ ಪ್ಲಾನ್ ಮಾಡಿತ್ತು.
ಧ್ರುವ ಅವರಿಗೆ 35 ವರ್ಷ ವಯಸ್ಸಾಗಿತ್ತು. ಇವರು ಸಿಸಿಎಲ್ನಲ್ಲಿ ಕರ್ನಾಟಕ ಬುಲ್ಡೋಜರ್ಸ್ನಲ್ಲಿ ಉಪ ನಾಯಕರಾಗಿದ್ದರು. ಸ್ನೇಹಾಂಜಲಿ, ನೀನಂದ್ರೆ ನನಗಿಷ್ಟ, ತಿಪ್ಪಾಜಿ ಸರ್ಕಲ್ ಸಿನಿಮಾದಲ್ಲಿ ನಟಿಸಿದ್ದರು.
ಉದ್ಯಮಿ, ನಟರೂ ಆಗಿರುವ ಸತೀಶ್ ಶರ್ಮಾ ಅವರ ಪುತ್ರರಾಗಿರುವ ಧ್ರುವ ಶರ್ಮಾ 2005ರಲ್ಲಿ ವಿಶ್ವ ಕಿವುಡರ ಕ್ರಿಕೆಟ್ನಲ್ಲಿ ಭಾರತ ತಂಡದಲ್ಲಿ ಆಡಿದ್ದರು. ವಾಕ್-ಶ್ರವಣ ದೋಷದಿಂದಾಗಿ ಬಾಲ್ಯದಿಂದಲೇ ಸಾಕಷ್ಟು ಅವಮಾನ ಎದುರಿಸಿದ್ದ ಧ್ರುವ ಶರ್ಮಾ ಆ ಎಲ್ಲ ನಿಂದನೆಗಳನ್ನು ಮೆಟ್ಟಿ ನಿಂತಿದ್ದರು.
ಕಾಲೇಜು ದಿನಗಳಲ್ಲಿ ಪ್ರಾಧ್ಯಾಪಕರ ಪಾಠ ಕೇಳ್ತಿಲ್ಲ ಅನ್ನೋ ಕಾರಣ ಕೊಟ್ಟು ಕಾಲೇಜಿನಿಂದಲೇ ಹೊರಹಾಕಿದ್ದರು. ಸ್ಯಾಂಡಲ್ವುಡ್ನ ಅಮ್ಮ ಪಾರ್ವತಮ್ಮ ರಾಜ್ಕುಮಾರ್ ಕೂಡ ಧ್ರುವ ಅವರ ಪ್ರತಿಭೆಗೆ ಮಾರು ಹೋಗಿದ್ದರು. ಕೇವಲ ನಟ ಮಾತ್ರವಲ್ಲದೇ ಧ್ರುವ ಒಳ್ಳೆಯ ಸ್ಟಂಟ್ ಕೂಡಾ ಮಾಡುತ್ತಿದ್ದರು.