ಬೆಂಗಳೂರು: ಮಾಜಿ ಸಚಿವರ ರಾಸಲೀಲೆ ಪ್ರಕರಣಕ್ಕೆ ಸಂಧಿಸಿದಂತೆ ಸಂತ್ರಸ್ತ ಯುವತಿ ಪರ ವಕೀಲರ ಆಪ್ತ ಲಾಯರ್ ನನ್ನು ಬಾರ್ ಕೌನ್ಸಿಲ್ ನಿಂದ ಅಮಾನತು ಮಾಡಲಾಗಿದೆ.
ಸಂತ್ರಸ್ತ ಯುವತಿ ಪರ ವಕೀಲ ಜಗದೀಶ್ ಆಪ್ತ ಮಂಜುನಾಥ್ ಅವರೇ ಅಮಾನತಾದ ವಕೀಲ. ಬಾರ್ ಕೌನ್ಸಿಲ್ ವಿರುದ್ಧ ಮಂಜುನಾಥ್ ಆರೋಪ ಮಾಡಿರುವ ಹಿನ್ನೆಲೆಯಲ್ಲಿ ಇದೀಗ ಅವರನ್ನು ವಜಾ ಮಾಡಲಾಗಿದೆ.
ಬಾರ್ ಕೌನ್ಸಿಲ್ ಫೆಲ್ಫೇರ್ ಸ್ಟ್ಯಾಂಪ್ ಬಗ್ಗೆ ಮಂಜುನಾಥ್ ಆರೋಪ ಮಾಡಿದ್ದರು. ಹೀಗಾಗಿ ಮಂಜುನಾಥ್ ವಿರುದ್ಧ ವಿಚಾರಣೆಗೆ ತೀರ್ಮಾನ ಮಾಡಲಾಗಿದ್ದು, ವಿಚಾರಣೆ ಮುಗಿಯುವವರೆಗೆ ವಕಾಲತ್ತು ವಹಿಸುವಂತಿಲ್ಲ. ಹೀಗಂತ ಕರ್ನಾಟಕ ರಾಜ್ಯ ಬಾರ್ ಕೌನ್ಸಿಲ್ನಿಂದ ಮಂಜುನಾಥ್ ಅವರಿಗೆ ನೋಟಿಸ್ ನೀಡಿದೆ.
ಸಿಡಿ ಯುವತಿ ಪರ ವಕೀಲ ಜಗದೀಶ್ ಹಾಗೂ ಮಂಜುನಾಥ್ ಬಾರ್ ಕೌನ್ಸಿಲ್ಗೆ ಸವಾಲೆಸೆದಿದ್ದರು. ತಾಕತ್ತಿದ್ದರೆ ಕ್ರಮಕೈಗೊಳ್ಳಿ ಎಂದು ಚಾಲೆಂಜ್ ಹಾಕಿದ್ದರು. ಜಗದೀಶ್ ದೆಹಲಿ ಬಾರ್ ಕೌನ್ಸಿಲ್ನಲ್ಲಿ ನೋಂದಣಿ ಹಿನ್ನೆಲೆಯಲ್ಲಿ ಜಗದೀಶ್ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎನ್ನಲಾಗಿದೆ.
ಬೆಂಗಳೂರು: ಮನೆಯವರ ಒತ್ತಡದಿಂದ ಆಕಾಶ್ ನನ್ನನ್ನು ಅರ್ಧದಲ್ಲಿಯೇ ಬಿಟ್ಟು ಹೋದ. ನಾನು, ಆಕಾಶ್ ಈಗ ಬೇರೆ ಬೇರೆಯಾಗಿದ್ದೀವಿ. ಈಗ ನನ್ನ ಹಾಗೂ ಆಕಾಶ್ ನಡುವೆ ಏನೂ ಇಲ್ಲ ಎಂದು ಸಿಡಿ ಯುವತಿ ಹೇಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ನಾಲ್ಕನೇ ದಿನವಾದ ಇಂದು ಕೂಡ ಯುವತಿಯನ್ನು ಎಸ್ಐಟಿ ವಿಚಾರಣೆಗೆ ಒಳಪಡಿಸಿತು. ಆರ್.ಟಿ.ನಗರ ಕೇಸ್ ಸಂಬಂಧ ವಿಚಾರಣೆಯ ವೇಳೆ ಯುವತಿ ಸಾಕಷ್ಟು ವಿಚಾರಗಳನ್ನು ಬಯಲು ಮಾಡಿದರು. ಯಾರಾದರೂ ನಿಮ್ಮನ್ನು ಕಿಡ್ನಾಪ್ ಮಾಡಿದ್ರಾ..?, ಇಷ್ಟು ದಿನ ಯಾಕೆ ನೀವು ಎಲ್ಲಿಯೂ ಕಾಣಿಸಿಕೊಂಡಿರಲಿಲ್ಲ. ಕೇವಲ ವಿಡಿಯೋ ಮಾತ್ರ ರೆಕಾರ್ಡ್ ಮಾಡಿ ಬಿಡುಗಡೆ ಮಾಡ್ತಿದ್ರಿ. ರೆಕಾರ್ಡ್ ಮಾಡ್ತಾ ಇದ್ದಿದ್ದು ಯಾರು…? ನಿಮಗೆ ಯಾರಾದ್ರೂ ಆಶ್ರಯ ಕೊಟ್ಟಿದ್ರಾ..?, ದೆಹಲಿಯಿಂದ ಬಂದಿರೋದಾಗಿ ಮಾಹಿತಿ ಇದೆ, ದೆಹಲಿಗೆ ಯಾಕೆ ಹೋಗಿದ್ದು…?, ಸಿಡಿ ಬಿಡುಗಡೆ ಬಳಿಕ ಎಲ್ಲೆಲ್ಲಿ ಸುತ್ತಾಡಿದ್ರಿ, ನಿಮ್ಮ ಜೊತೆಯಲ್ಲಿ ಇದ್ದವರು ಯಾರು ಅಂತೆಲ್ಲ ಎಸ್ಐಟಿ ಪ್ರಶ್ನಿಸಿದೆ. ಈ ವೇಳೆ ಉತ್ತರಿಸಿದ ಯುವತಿ, ನನ್ನನ್ನು ಯಾರು ಕಿಡ್ನಾಪ್ ಮಾಡಿಲ್ಲ, ನಾನಾಗಿಯೇ ಹೋಗಿದ್ದು. ಸಿಡಿ ಬಿಡುಗಡೆಯಿಂದ ಮನಸ್ಸಿಗೆ ತುಂಬಾನೇ ನೋವಾಯ್ತು ಆದ ಕಾರಣಕ್ಕೆ ಯಾರ ಕಣ್ಣಿಗೂ ಬಿದ್ದಿಲ್ಲ. ನನ್ನ ಮೇಲೆಯೇ ಆರೋಪ ಬಂದ ಕಾರಣಕ್ಕೆ ನಾನು ವೀಡಿಯೋ ಹೇಳಿಕೆ ಮಾಡಬೇಕಾಯ್ತು ಎಂದು ಹೇಳಿಕೊಂಡಿದ್ದಾರೆ.
ನನ್ನ ವೀಡಿಯೋ ಹೊರಗೆ ಬಂದ ಬಳಿಕ ನನಗೆ ತುಂಬಾನೇ ಭಯ ಕೂಡ ಆಗಿತ್ತು. ಆ ಹಿನ್ನೆಲೆಯಲ್ಲಿ ನಾನು ಆಕಾಶ್ ಹೊರಗೆ ಹೋಗಿದ್ವಿ. ಆದರೆ ಆಕಾಶ್ ಮನೆಯವರ ಒತ್ತಡದಿಂದ ನನ್ನನ್ನ ಅರ್ಧದಲ್ಲಿಯೇ ಬಿಟ್ಟು ಹೋದ. ನಾನು, ಆಕಾಶ್ ಈಗ ಬೇರೆ ಬೇರೆಯಾಗಿದ್ದೀವಿ. ಈಗ ನನ್ನ-ಆಕಾಶ್ ನಡುವೆ ಏನೂ ಇಲ್ಲ. ಕಷ್ಟದಲ್ಲಿ ಅವನು ಸಹಾಯ ಮಾಡಲಿಲ್ಲ. ನನ್ನ ಉಳಿದ ಸ್ನೇಹಿತರು ನಮಗೆ ಸಹಾಯ ಮಾಡಿದ್ರು. ಜೀವ ಭಯದಿಂದ ಹೊರಗೆ ಉಳಿದುಕೊಂಡಿದ್ದೆ. ಅದನ್ನು ಹೊರತುಪಡಿಸಿ ನಾನು ಎಲ್ಲೂ ನಾಪತ್ತೆ ಆಗಿಲ್ಲ ಎಂದಿದ್ದಾರೆ.
ನನ್ನ ಅಪ್ಪ-ಅಮ್ಮ ನನ್ನ ವಿರುದ್ದವೇ ಹೇಳಿಕೆ ನೋಡಿ ಬೇಸರ ಆಗಿದೆ. ನಾನು ಈ ಪ್ರಕರಣ ಮುಗಿಯೋ ತನಕ ಅವರನ್ನು ಭೇಟಿ ಮಾಡೋದಿಲ್ಲ. ನನಗೆ ಅನ್ಯಾಯ ಮಾಡಿದವರ ಪರವಾಗಿ ಮಾತನಾಡಿದ್ದು, ನನಗೆ ಹಿಂಸೆ ಆಗಿದೆ. ಪ್ರಕರಣ ಮುಗಿದ ಬಳಿಕ ಅಷ್ಟೇ ನಾನು ನನ್ನ ಅಪ್ಪ-ಅಮ್ಮನ ಭೇಟಿ ಮಾಡ್ತೀನಿ ಎಂದು ಸಂತ್ರಸ್ತೆ ಹೇಳಿದ್ದಾರೆ. ವಿಚಾರಣೆಯ ಬಳಿಕ ಯುವತಿಯನ್ನು ಎಸ್ಐಟಿ ಅಧಿಕಾರಿಗಳು ಅಜ್ಞಾತ ಸ್ಥಳಕ್ಕೆ ಕರೆದುಕೊಂಡು ಹೋಗಿದ್ದಾರೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.
ಬೆಂಗಳೂರು: ಸಿಡಿ ಯುವತಿಯ ವಿಚಾರದಲ್ಲಿ ಕೆಸರೆರಾಚಾಟ ಮುಂದುವರೆದಿದೆ. ಇಷ್ಟಕ್ಕೆಲ್ಲಾ ಡಿಕೆಶಿ ಕಾರಣವಾಗಿದ್ದು, ಸದ್ಯದಲ್ಲೇ ಇನ್ನಷ್ಟು ಆಡಿಯೋ ದಾಖಲೆಗಳನ್ನು ಬಿಡುಗಡೆ ಮಾಡಲಾಗುವುದು ಅಂತ ಯುವತಿ ಸಹೋದರ ಮತ್ತೊಮ್ಮೆ ಎಚ್ಚರಿಕೆ ನೀಡಿದ್ದಾರೆ.
ನಮ್ಮ ಅಕ್ಕನನ್ನು ಈಗಲೂ ಡಿಕೆಶಿಯೇ ಹಿಡಿದಿಟ್ಟುಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ. ತಮ್ಮ ಮೇಲೆ ಮತ್ತೆ ಆರೋಪ ಮಾಡ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ನನಗೂ ಇದಕ್ಕೂ ಸಂಬಂಧವಿಲ್ಲ. ಕೆಲವರಿಗೆ ನನ್ನ ಹೆಸರು ಹೇಳದಿದ್ರೆ ಮಾರ್ಕೆಟ್ ಇಲ್ಲ.. ಅದಕ್ಕೆ ಮಾತಾಡ್ತಿದ್ದಾರೆ ಎಂದು ಟೀಕಿಸಿದ್ದಾರೆ. ಆದರೆ ಇದು ಕಾಂಗ್ರೆಸ್ ಷಡ್ಯಂತ್ರವಾಗಿದ್ದು, ಇದ್ರಲ್ಲಿ ಡಿಕೆಶಿ ಪಾತ್ರ ಇದೆ ಎಂದು ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಆರೋಪಿಸಿದ್ದಾರೆ. ರಮೇಶ್ ಜಾರಕಿಹೊಳಿ ಬಂಧನ ಆಗದ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಈ ವಿಚಾರದಲ್ಲಿ ಕಾಂಗ್ರೆಸ್-ಬಿಜೆಪಿ ಮಧ್ಯೆ ಎಂದಿನಂತೆ ಟ್ವೀಟ್ ವಾರ್ ಮುಂದುವರೆದಿದೆ. ರೇಪಿಸ್ಟ್ ಜನತಾ ಪಾರ್ಟಿಯ ಹೊಸ ನೀತಿಯ ಪ್ರಕಾರ ಸಂತ್ರಸ್ತೆಯ ಸಹಾಯಕ್ಕೆ ನಿಲ್ಲುವವರು ತಪ್ಪಿತಸ್ಥರು. ಆರೋಪಿಯ ರಕ್ಷಣೆಗೆ ನಿಲ್ಲುವ ಬಿಜೆಪಿಗರು ಸುಭಗರು.. ರೇಪಿಸ್ಟ್ ರಮೇಶ್ ಎಲ್ಲಿದ್ದಿಯಪ್ಪಾ…? ಎಂದು ಹ್ಯಾಷ್ ಟ್ಯಾಗ್ ಬಳಸಿ ಕಾಂಗ್ರೆಸ್ ಟ್ವೀಟ್ ಮಾಡಿದೆ.
ದಲಿತ ಶಾಸಕ ಅಖಂಡ ಅವರು ಎಷ್ಟು ನೆರವು ಬೇಡಿದರೂ @INCKarnataka ಪಕ್ಷ ಅವರ ನೆರವಿಗೆ ಧಾವಿಸಲಿಲ್ಲ.
ಸಿಡಿ ಪ್ರಕರಣವನ್ನು ರಾಜಕೀಯ ಲಾಭಕ್ಕಾಗಿ ಕೆಪಿಸಿಸಿ ಸಂಪೂರ್ಣವಾಗಿ ಬಳಸಿಕೊಳ್ಳುತ್ತಿದೆ.
ಹಣಕಾಸಿನ ನೆರವು, ಕಾನೂನು ಸಲಹೆ, ವಾಹನದ ವ್ಯವಸ್ಥೆ ಎಲ್ಲವೂ ಕೆಪಿಸಿಸಿ ಕಚೇರಿಯಿಂದಲೇ ಆಗುತ್ತಿರುವುದರ ಹಿಂದಿನ ಉದ್ದೇಶವೇನು?#DKShiMustResign
ಈ ಬಗ್ಗೆ ಬಿಜೆಪಿ ಪ್ರತಿಕ್ರಿಯಿಸಿ, ದಲಿತ ಶಾಸಕ ಅಖಂಡ ಅವರು ಎಷ್ಟು ನೆರವು ಬೇಡಿದರೂ ಕಾಂಗ್ರೆಸ್ ಪಕ್ಷ ಅವರ ನೆರವಿಗೆ ಧಾವಿಸಲಿಲ್ಲ. ಸಿಡಿ ಪ್ರಕರಣವನ್ನು ರಾಜಕೀಯ ಲಾಭಕ್ಕಾಗಿ ಕಾಂಗ್ರೆಸ್ ಬಳಸಿಕೊಳ್ತಿದೆ. ಹಣಕಾಸಿನ ನೆರವು, ಕಾನೂನು ಸಲಹೆ, ವಾಹನ ವ್ಯವಸ್ಥೆ ಎಲ್ಲವೂ ಕೆಪಿಸಿಸಿ ಕಚೇರಿಯಿಂದಲೇ ಆಗ್ತಿದೆ. ಇದರ ಹಿಂದಿನ ಉದ್ದೇಶವೇನು ಎಂದು ಪ್ರಶ್ನಿಸಿ ಡಿಕೆಶಿಮಸ್ಟ್ ರಿಸೈನ್ ಎಂದು ಹ್ಯಾಷ್ ಟ್ಯಾಗ್ ಬಳಸಿದೆ.
ಇನ್ನೊಂದು ಟ್ವೀಟ್ ಮಾಡಿ, ಕೆಪಿಸಿಸಿ ಅಧ್ಯಕ್ಷ ಡಿಕೆಶಿಯವರೇ, ಸಂತ್ರಸ್ತೆ ನೇರವಾಗಿ ನಿಮ್ಮ ಹೇಳಿದ್ದಾರೆ. ಸಂತ್ರಸ್ತೆಯ ಪೋಷಕರೂ ನಿಮ್ಮ ಮೇಲೆ ಬೊಟ್ಟು ಮಾಡಿದ್ದಾರೆ. ಈಗ ನಿಮ್ಮದೇ ಪಕ್ಷದ ಲಖನ್ ನಿಮ್ಮ ರಾಜೀನಾಮೆ ಕೇಳುತ್ತಿದ್ದಾರೆ. ನೀವು ಮಾಡಿರುವ ಷಡ್ಯಂತ್ರ್ಯಕ್ಕೆ ಇದಕ್ಕಿಂತ ದೊಡ್ಡ ಪುರಾವೆ ಬೇಕೆ ಎಂದು ಬಿಜೆಪಿ ಪ್ರಶ್ನಿಸಿದೆ.
ಕೋಲಾರ: ಸಿಡಿಲೇಡಿ ವಿಚಾರಕ್ಕೆ ಸಂಭಂದಿಸಿದಂತೆ ಸತ್ಯಾಂಶ ಇನ್ನೂ ಹೊರಗಡೆ ಬಂದಿಲ್ಲ, ಸತ್ಯಾಂಶ ಹೊರಬಂದರೆ ನನಗಿಂತ ಮೊದಲು ಮಾಧ್ಯಮದವರಿಗೇ ತಿಳಿಯುತ್ತದೆ ಎಂದು ಕ್ರೀಡಾ ಸಚಿವ ನಾರಾಯಣಗೌಡ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಡಿಲೇಡಿ ವಿಚಾರಕ್ಕೆ ಸಂಬಂಧಿಸಿದಂತೆ ಒಂದೆರಡು ದಿನದಲ್ಲಿ ಸತ್ಯಾಂಶ ತಿಳಿಯುತ್ತದೆ. ಆ ಯುವತಿ ಕಾಲಾವಕಾಶಬೇಕು, ಮೆಡಿಕಲ್ ಟೆಸ್ಟ್ ಅಗಬೇಕು ಎಂದು ಹೇಳುತ್ತಿದ್ದಾಳೆ. ಹೀಗಾಗಿ ಮೆಡಿಕಲ್ ಟೆಸ್ಟ್ ಆದ ನಂತರ ಸಂತ್ಯಾಂಶ ಗೊತ್ತಾಗುತ್ತದೆ. ಈ ವಿಚಾರದಲ್ಲಿ ಯಾರೂ ದೊಡ್ಡವರಲ್ಲ, ಯಾರೂ ದೊಡ್ಡವರು ಎನ್ನುವ ಪ್ರಶ್ನೆ ಇಲ್ಲ, ಯಾರೂ ಯಾರಿಗೂ ಹೆದುರುವುದಿಲ್ಲ ಎಂದರು.
ಸಿಡಿಲೇಡಿ ಪ್ರಕರಣದಲ್ಲಿ ಕಾಂಗ್ರೇಸ್ ಮಹಾನಾಯಕನ ಹೆಸರು ಜೊತೆ ಬಿಜೆಪಿ ಯುವನಾಯಕನ ಹೆಸರು ಕೇಳಿ ಬರುತ್ತಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಅದೆಲ್ಲಾ ಸುಳ್ಳು ಎಂದರು.
ರಾಜ್ಯದಲ್ಲಿ ನಡೆಯುತ್ತಿರುವ ಲೋಕಸಭಾ ಮತ್ತು ವಿಧಾನಸಭಾ ಉಪ ಚುನಾವಣೆಯಲ್ಲಿ ಮೂರಕ್ಕೆ ಮೂರು ಸ್ಥಾನಗಳಲ್ಲಿ ಬಿಜೆಪಿ ಗೆಲ್ಲುತ್ತದೆ. ಸಿಡಿ ಕೇಸ್ ಬೆಳಗಾವಿ ಸೇರಿದಂತೆ ಯಾವುದೇ ಉಪ ಚುನಾವಣೆ ಮೇಲೆ ಪರಿಣಾಮ ಬೀರುವುದಿಲ್ಲ ಎಂದರು.
– ಯುವತಿಗೆ ಕೊರೊನಾ ನೆಗೆಟಿವ್ – ಧ್ವನಿ ಪರೀಕ್ಷೆ ವೇಳೆ ಯುವತಿ ಹೇಳಿದ್ದೇನು..?
ಬೆಂಗಳೂರು: ಸಿಡಿ ರಾಡಿ ಎಪಿಸೋಡ್ ಮುಂದುವರಿದಿದೆ. ಸಿಡಿ ಯುವತಿಗೆ ಇಂದು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲಾಯಿತು.
ಮುಕ್ತ ಅನ್ನೋ ಮೆಡಿಕಲ್ ಟೀಂ 3 ಗಂಟೆಗಳ ಕಾಲ ತಪಾಸಣೆ ನಡೆಸ್ತು. ಅತ್ಯಾಚಾರ, ಹಲ್ಲೆ, ದೇಹದ ಪರಿಶೀಲನೆ, ಮಾಸಿಕ ಖಿನ್ನತೆ ಸೇರಿದಂತೆ ಬೇರೆ ಖಾಯಿಲೆ ಬಗ್ಗೆ ಪರಿಶೀಲನೆ ಮಾಡಲಾಯಿತು. ಈ ಮುಕ್ತ ತಂಡದಲ್ಲಿ ಸ್ತ್ರೀ ರೋಗ ತಜೆ, ತುರ್ತ ಚಿಕಿತ್ಸಾ ವಿಭಾಗ ವೈದ್ಯರು, ಮಾನಸಿಕ ರೋಗ ತಜ್ಞರು ಮತ್ತು ಮೆಡಿಸನ್ ವಿಭಾಗದ ವೈದ್ಯರು, ದಾದಿಯರು ಇದ್ದರು.
ಕೌನ್ಸಿಂಗ್ ಮಾಡುವುದಕ್ಕೂ ಯುವತಿಯಿಂದ 3 ಫಾರಂಗಳಿಗೆ ಸಹಿ ಮಾಡಿಕೊಳ್ಳಲಾಯ್ತು. ಕೊರೊನಾ ಆಂಟಿಜೆನ್ ಟೆಸ್ಟ್ನಲ್ಲಿ ಯುವತಿಗೆ ನೆಗೆಟಿವ್ ಬಂದಿದೆ. ಯುವತಿಗೆ ಆಸ್ಪತ್ರೆ ಒಳಗೆ ಟೆಸ್ಟ್ ನಡೀತಿದ್ರೆ.. ಆಸ್ಪತ್ರೆ ಹೊರಗಡೆ ಭಾರೀ ಪೊಲೀಸ್ ಭದ್ರತೆ ಒದಗಿಸಲಾಗಿತ್ತು. ಟೆಸ್ಟ್ ಬಳಿಕ ಆಕೆಯನ್ನು ಸ್ಥಳ ಮಹಜರಿಗೆ ಕರೆದುಕೊಂಡು ಹೋಗ್ತಾರಾ ಅನ್ನೋ ಚರ್ಚೆ ಎದ್ದಿತ್ತು. ಆದರೆ ಪೊಲೀಸರು ನೇರವಾಗಿ ಆಡುಗೋಡಿಯ ಟೆಕ್ನಿಕಲ್ ಸೆಲ್ಗೆ ಕರೆದುಕೊಂಡು ಹೋಗಲಾಯಿತು.
ಈ ವೇಳೆ ಧ್ವನಿ ಪರೀಕ್ಷೆಗೆ ಒಳಪಡಿಲಾಯಿತು. ಆಗ ಕೂಡ ಸಂತ್ರಸ್ತೆ ನನಗೆ ನಂಬಿಕೆ ದ್ರೋಹವಾಯ್ತು ಅಂದಿದ್ದಾರೆ. ನಾಳೆ ಸ್ಥಳ ಮಹಜರು ನಡೆಸುವ ಬಗ್ಗೆ ಎಸ್ಐಟಿ ನೊಟೀಸ್ ಕೊಟ್ಟಿದೆ. ಈ ಮಧ್ಯೆ, ಸಂತ್ರಸ್ತೆ ಪರ ವಕೀಲ ಜಗದೀಶ್ ಮಾತನಾಡಿ, ಮೆಡಿಕಲ್ ಟೆಸ್ಟ್ ಆಗಿದೆ. ಈಗ ವಾಯ್ಸ್ ಟೆಸ್ಟ್ ಆಗಲಿದೆ. ಇದು ಕಬ್ಬನ್ ಪಾರ್ಕ್ ಠಾಣೆಯ ಪ್ರಕರಣ ಸಂಬಂಧ ಮಾತ್ರ ಆಗ್ತಿದೆ. ಬೇರೆ ಪ್ರಕರಣಗಳ ತನಿಖೆ ಬಗ್ಗೆ ಮಾಹಿತಿ ಇಲ್ಲ ಅಂದ್ರು. ಅಲ್ಲದೆ ಸದಾಶಿವನಗರ ಕೇಸಲ್ಲಿ ದೂರುದಾರ ನಮ್ಮ ಸಂತ್ರಸ್ತೆ ಹೆಸರು ದಾಖಲಿಸಿಲ್ಲ ಅಂದ್ರು.
ಚಿಕ್ಕಬಳ್ಳಾಪುರ: ಸಿಡಿ ಲೇಡಿಗೆ ಮೆಂಟಲ್ ಮೆಡಿಕಲ್ ಟೆಸ್ಟ್ ಆಗಬೇಕು ಎಂದು ಸಚಿವ ನಾರಾಯಾಣಗೌಡ ಹೇಳಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಗೆ ಆಗಮಿಸಿದ್ದ ಸಚಿವರು ಅಧಿಕಾರಿಗಳ ಸಭೆ ನಡೆಸಿ ಮಾಧ್ಯಮಗಳೊಂದಿಗೆ ಮಾತನಾಡಿದರು. ನ್ಯಾಯಾಧೀಶರ ಮುಂದೆ ಹಾಜರಾದ ಸಿಡಿ ಲೇಡಿ ಹೇಳಿಕೆ ಏನು ಅನ್ನೋದು ಯಾರಿಗೂ ಗೊತ್ತಿಲ್ಲ. ಹೆಣ್ಣು ಮಗಳ ಹೇಳಿಕೆ ಹೊರಗೆ ಬಂದಿಲ್ಲ. ಆ ಹೆಣ್ಣು ಮಗಳು ಕನ್ಫ್ಯೂಸ್ ನಲ್ಲಿದ್ದಾಳೆ. ಒಂದೊಂದು ದಿನ ಒಂದೊಂದು ತರ ಹೇಳಿಕೆ ಕೊಡ್ತಿದ್ದಾಳೆ. ಹಾಗಾಗಿ ಆಕೆಗೆ ಕೂಲ್ ಅಗಿ ಮೆಂಟಲ್ ಚೆಕ್ ಅಪ್ ಮಾಡಿಸಬೇಕಿದೆ ಎಂದು ಹೇಳಿದ್ದಾರೆ.
ಮೆಡಿಕಲ್ ಚೆಕ್ ಅಪ್ ಅದ ಮೇಲೆ ಸತ್ಯಾಂಶ ಗೊತ್ತಾಗಲಿದೆ. ಈಗಾಗಲೇ ಎಫ್ಐಆರ್ ದಾಖಲಾಗಿದ್ರೂ ನಾಳೆ ಹೇಳಿಕೆ ಬದಲಾಗಬಹುದು. ಆಕೆ ಮೊದಲು ಮೆಂಟಲಿ ಫಿಟ್ ಇದ್ದಾಳಾ ಇಲ್ವಾ ಅನ್ನೋದು ಸಹ ಮುಖ್ಯ ತಾನೆ ಅಂತ ಹೇಳಿದರು.
ಇದಕ್ಕೂ ಮುನ್ನ ಮಾತನಾಡಿದ್ದ ಸಚಿವರು, ಸಿ.ಡಿ ವಿಚಾರದಲ್ಲಿ ಯಾರ್ಯಾರು ಏನೇನು ಮಾಡಿದ್ದಾರೋ ಅದರಷ್ಟೇ ಊಟ ಮಾಡ್ತಾರೆ. ಉಪಚುನಾವಣೆ ಮೇಲೆ ಸಿಡಿ ಪ್ರಕರಣದ ಪ್ರಭಾವ ಬೀರೋಲ್ಲ. ಎಲ್ಲ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದರು.
ಇದೇ ವೇಳೆ ಆರು ಜನ ಸಚಿವರ ಕೋರ್ಟ್ ಮೆಟ್ಟೇಲೇರಿ ತಂದ ತಡೆಯಾಜ್ಞೆ ಇಂದಿಗೆ ಅಂತ್ಯ ಹಿನ್ನೆಲೆ ಅದಕ್ಕೆ ಪ್ರತಿಕ್ರಿಯಸಿ, ಅದರ ಬಗ್ಗೆ ನಮಗೇನು ತೊಂದರೆ ಇಲ್ಲ. ರಸ್ತೆಯಲ್ಲಿ ನಡೆದುಕೊಂಡು ಹೋಗ್ತಿದ್ದರೆ ಚರಂಡಿ ಗಲೀಜು ಬೀಳುತ್ತೆ ಅಂತ ಹೈಕೋರ್ಟಿಗೆ ಹೋಗಿದ್ವಿ. ಈಗಲೂ ಸತ್ಯಾಂಶ ಇದ್ರೆ ನಮ್ಮ ಸಿಡಿನೂ ಬಿಡುಗಡೆ ಮಾಡಲಿ ಎಂದು ಸವಾಲೆಸೆದರು.
ರಮೇಶ್ ಜಾರಕಿಹೊಳಿ ಅವಿತುಕೊಂಡಿಲ್ಲ. ಕೆಲಸ ಕಾರ್ಯಕ್ಕೆ ಅಂತ ಮಹಾರಾಷ್ಟ್ರಕ್ಕೆ ಹೋಗಿ ಬರ್ತಾರೆ. ಅವರಿಗೆ ಬಂಧನದ ಭೀತಿ ಇಲ್ಲ, ಅವಿತುಕೊಳ್ಳುವ ಪ್ರಶ್ನೆ ಯೇ ಇಲ್ಲ ಎಂದರು.
ಬೆಂಗಳೂರು: ಅಜ್ಞಾತ ಸ್ಥಳದಲ್ಲಿದ್ದುಕೊಂಡು ವಿಡಿಯೋ ಹೇಳಿಕೆ ಬಿಡುಗಡೆ ಮಾಡುತ್ತಿದ್ದ ಸಿಡಿ ಲೇಡಿ ಮಂಗಳವಾರ ಕಾಂಗ್ರೆಸ್ ಯುವ ಮುಖಂಡ ಮೊಹಮ್ಮದ್ ನಲಪಾಡ್ ಸ್ನೇಹಿತರೊಬ್ಬರು ರಕ್ಷಣೆ ನೀಡಿದ್ದಾರೆ.
ನಲಪಾಡ್ ಪ್ರಕರಣದಲ್ಲಿ ಆರೋಪಿಯಾಗಿರುವ ನಫಿ ಮಾಲೀಕತ್ವದ ಕಾರಿನಲ್ಲಿ ಸಿಡಿ ಲೇಡಿ ಸಂಚರಿಸಿದ್ದಾರೆ. ಆಡುಗೋಡಿಯ ಟೆಕ್ನಿಕಲ್ ಕೇಂದ್ರದಿಂದ ರಾತ್ರಿ ಅಜ್ಞಾತ ಸ್ಥಳಕ್ಕೆ ಸಿಡಿ ಲೇಡಿ ಸಂಚರಿಸಿದ್ದರು. ಈ ವೇಳೆ ನಫಿ ಮಾಲೀಕತ್ವದ ಟೊಯೊಟಾ ಫಾರ್ಚೂನರ್ ಕಾರಿನಲ್ಲಿ ತೆರಳಿದ್ದಾರೆ. ಕೆಎ 04 ಎಂಯು 9232 ಸಂಖ್ಯೆಯ ಫಾರ್ಚೂನರ್ ಕಾರು ನಫಿ ಮೊಹಮ್ಮದ್ ನಾಸೀರ್ ಹೆಸರಿನಲ್ಲಿದೆ. 2018ರ ಜೂನ್ 12 ರಂದು ಈ ಕಾರು ನೋಂದಣಿಯಾಗಿದೆ.
ಈಗಾಗಲೇ ಈ ಪ್ರಕರಣದಲ್ಲಿ ಕಾಂಗ್ರೆಸ್ ಕೈವಾಡವಿದೆ ಎಂದು ಬಿಜೆಪಿ ಆರೋಪಿಸುತ್ತಿದ್ದು, ಈಗ ಮತ್ತೊಂದು ಅಸ್ತ್ರ ಸಿಕ್ಕಂತಾಗಿದೆ. ನಿನ್ನೆ ಟ್ವೀಟ್ ಮಾಡಿದ್ದ ಬಿಜೆಪಿ ಕರ್ನಾಟಕ ಸಿಡಿ ಪ್ರಕರಣ ಕೆಪಿಸಿಸಿ ಪ್ರಾಯೋಜಿತ ಎಂದು ಸಾಬೀತಾಗುತ್ತಿದೆ. ಕೆಪಿಸಿಸಿ ಕಾನೂನು ಘಟಕದ ಪ್ರಧಾನ ಕಾರ್ಯದರ್ಶಿ ಸೂರ್ಯ ಮುಕುಂದರಾಜ್ ಅವರು ಯುವತಿ ಹೇಳಿಕೆ ದಾಖಲು ಮಾಡುವ ಸಂದರ್ಭದಲ್ಲಿ ಹಾಜರಿದ್ದು ಸಹಾಯ ಮಾಡುತ್ತಾರೆ ಎಂದರೆ ಏನರ್ಥ?ಕೆಪಿಸಿಸಿ ಕಚೇರಿಯಿಂದಲೇ ಈ ಪ್ರಕರಣ ನಿರ್ವಹಣೆಯಾಗುತ್ತಿದೆ ಎಂಬುದು ನಿಜವೇ ಎಂದು ಪ್ರಶ್ನಿಸಿತ್ತು.
ಇನ್ನೊಂದು ಟ್ವೀಟ್ ನಲ್ಲಿ ಮಹಾನಾಯಕ, ಮಹಾನಾಯಕಿ, ಮಾಸ್ಟರ್ ಮೈಂಡ್, ಕೆಪಿಸಿಸಿ ಕಾನೂನು ಘಟಕದ ಸದಸ್ಯ. ಜಾಯಿನ್ ದ ಡಾಟ್ಸ್. ಕರ್ನಾಟಕ ಕಾಂಗ್ರೆಸ್ ಪಕ್ಷದ ಪ್ರಾಯೋಜಿತವೇ ಎಂದು ಪ್ರಶ್ನಿಸಿತ್ತು.
ಬಿಜೆಪಿಯ ಆರೋಪಕ್ಕೆ ತಿರುಗೇಟು ನೀಡಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಮಸ್ಯೆ ಕೇಳಿಕೊಂಡು ಬಂದವರಿಗೆ ನೆರವಾಗುವುದರಲ್ಲಿ ಯಾವುದೇ ತಪ್ಪಿಲ್ಲ. ಅವರು ವಿಡಿಯೋ ಮಾಡಿ ಕಷ್ಟವನ್ನು ತೋಡಿಕೊಂಡಿದ್ದರು ಎಂದು ಹೇಳಿದ್ದರು.
– ಸಂತ್ರಸ್ತೆ ಬಂದು ಹೇಳಿಕೆ ದಾಖಲಿಸಿದ್ರೂ ಆರೋಪಿ ಬಂಧನ ಆಗಿಲ್ಲ
ಬೆಂಗಳೂರು: ಮಾಜಿ ಸಚಿವರ ರಾಸಲೀಲೆ ಪ್ರಕರಣದ ಸಂತ್ರಸ್ತೆ ನ್ಯಾಯಾಧೀಶರ ಮುಂದೆ ಹಾಜರಾಗಿ ತಮ್ಮ ಹೇಳಿಕೆಯನ್ನ ದಾಖಲಿಸಿದರು. ನ್ಯಾಯಾಧೀಶರ ಮುಂದೆ ಹೇಳಿಕೆ ದಾಖಲಾದ ಬಳಿಕ ಯುವತಿಯನ್ನ ಧ್ವನಿ ಪರೀಕ್ಷೆಗಾಗಿ ಆಡುಗೋಡಿಯ ಟೆಕ್ನಿಕಲ್ ಸೆಲ್ ಗೆ ಕರೆ ತರಲಾಗಿದೆ. ಈ ವೇಳೆ ಮಾತನಾಡಿದ ಯುವತಿ ಪರ ವಕೀಲ ಜಗದೀಶ್, ಸಂತ್ರಸ್ತೆಯನ್ನ ಎಸ್ಐಟಿಯ ವಶಕ್ಕೆ ನೀಡಿಲ್ಲ. ಧ್ವನಿ ಪರೀಕ್ಷೆ ಬಳಿಕ ನಾಳೆ ಮತ್ತೆ ವಿಚಾರಣೆಗೆ ಕರೆತರಲಾಗುವುದು ಎಂದು ತಿಳಿಸಿದರು.
ಎಸ್ಐಟಿ ಅಧಿಕಾರಿಗಳು ಸೆಕ್ಷನ್ 161 ಪ್ರಕಾರ ಧ್ವನಿ ಪರೀಕ್ಷೆ ಮಾಡಬೇಕೆಂದಾಗ ನಾವೇ ಕಕ್ಷಿದಾರರನ್ನ ಕರೆ ತಂದಿದ್ದೇವೆ. ಪರೀಕ್ಷೆ ಬಳಿಕ ನಮ್ಮ ಜೊತೆಯಲ್ಲಿ ಕರೆದುಕೊಂಡು ಹೋಗಲಾಗುತ್ತದೆ. ನಾವು ಆಕೆಗೆ ನೀಡಿದ ಮಾತನ್ನ ಪೂರ್ಣಗೊಳಿಸಿದ್ದೇವೆ. ಪ್ರಕರಣ ದಾಖಲಾಗಿದ್ದು ಸುಳ್ಳು ಅಂದವರಿಗೆ ಸತ್ಯ ಏನು ಅನ್ನೋದು ಅರ್ಥವಾಗಿದೆ. ಯುವತಿ ಬಂದಾಯ್ತು, ಹೇಳಿಕೆ ದಾಖಲಾಯ್ತು. ಹಾಗಾಗಿ ಸರ್ಕಾರ ಮತ್ತು ಪೊಲೀಸರು ಈ ಕೂಡಲೇ ಆರೋಪಿಯನ್ನ ಬಂಧಿಸಬೇಕೆಂದು ಜಗದೀಶ್ ಆಗ್ರಹಿಸಿದರು.
ಅತ್ಯಾಚಾರ ಪ್ರಕರಣದ ಆರೋಪಿ ಬೆಂಗಳೂರು, ಬೆಳಗಾವಿ ಅಂತ ಓಡಾಡುತ್ತಿರೋದು ಮಾಧ್ಯಮಗಳಲ್ಲಿ ವರದಿಯಾಗಿದೆ. ಈಗ ಆರೋಪಿಯನ್ನ ಬಂಧಿಸಬೇಕಾಗಿದೆ. ಇನ್ನು ಪೊಲೀಸರು ಯುವತಿಗೆ ಸೂಕ್ತ ಭದ್ರತೆ ನೀಡುವದಾಗಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಪೊಲೀಸರು ಯುವತಿಗೆ ನಿರ್ಭೀತಿಯ ವಾತಾವರಣ ನಿರ್ಮಿಸಿದ್ದಾರೆ. ಇಂದು ಯುವತಿಯ ವಿಚಾರಣೆಗೆ ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದರು.
ಸಂತ್ರಸ್ತೆಯನ್ನ ಯಾರೂ ಅಪಹರಿಸಿಲ್ಲ. ಯುವತಿ ವಯಸ್ಕಳಾಗಿದ್ದು, ಪೋಷಕರ ಸಹಾಯವಿಲ್ಲದೇ ತನ್ನ ನಿರ್ಧಾರವನ್ನ ತೆಗೆದುಕೊಳ್ಳುವ ತಿಳುವಳಿಕೆ ಇದೆ. ನ್ಯಾಯಾಲಯ ಸಹ ಯುವತಿಯ ಹೇಳಿಕೆಯನ್ನ ಒಪ್ಪಿಕೊಳ್ಳುತ್ತೇವೆ. ಮೊದಲು ಅತ್ಯಾಚಾರದ ಪ್ರಕರಣ ತನಿಖೆ ನಡೆಯಲಿ. ನಂತ್ರ ಯುವತಿ ಪೋಷಕರು ದಾಖಲಿಸಿದ ದೂರಿನ ತನಿಖೆ ನಡೆಯಲಿ ಎಂದರು.
ಬೆಂಗಳೂರು: ಹೇಳಿಕೆ ನೀಡಲು ಅನುಮತಿ ನೀಡಿದ ಹಿನ್ನೆಲೆಯಲ್ಲಿ ಮಾಜಿ ಸಚಿವರ ಸಿಡಿ ಪ್ರಕರಣದ ಸಂತ್ರಸ್ತ ಯುವತಿ ಬೆಂಗಳೂರಿನ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರಾಗಿದ್ದಾರೆ. ವಸಂತ ನಗರದ ಗುರುನಾನಕ್ ಭವನದಲ್ಲಿ ವಿಚಾರಣೆ ನಡೆಯುತ್ತಿದ್ದು, ಯುವತಿಯ ಹೇಳಿಕೆಯನ್ನು ಪಡೆಯುತ್ತಿದ್ದಾರೆ.
ಇಂದು ಬೆಳಗ್ಗೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ್ದ ಯುವತಿ ಪರ ವಕೀಲ ಜಗದೀಶ್, ಆರೋಪಿಯನ್ನು ಎಸ್ಐಟಿ ಅವರು ಬಂಧಿಸಿದರೆ ಈ ಪ್ರಕರಣದ ಕುರಿತಾಗಿ ಸರಿಯಾದ ತನಿಖೆ ನಡೆಯುತ್ತದೆ. ಕೋರ್ಟ್ನ ವಾತಾವರಣವನ್ನು ನೋಡಿಕೊಂಡು ಯುವತಿ ಕೋರ್ಟಿಗೆ ಬರುತ್ತಾರೆ. ಯುವತಿ ರಕ್ಷಣೆ ಹೇಗೆ ಮುಖ್ಯವೋ ಹಾಗೇ ಯುವತಿಯ ಹೇಳಿಕೆಯೂ ಅಷ್ಟೇ ಮುಖ್ಯವಾಗುತ್ತದೆ. ನಮ್ಮ ಕಡೆಯಿಂದ ಎಲ್ಲಾ ರೀತಿ ಪ್ರಯತ್ನಗಳನ್ನು ಮಾಡುತ್ತಿದ್ದೇವೆ. ನ್ಯಾಯಾಲಯ ಹೇಗೆ ಹೇಳುತ್ತದೆ ಮತ್ತು ಯಾವ ಸಮಯವನ್ನು ಸೂಚಿಸುತ್ತದೆ ಎಂದು ನೋಡಿ ಸಂತ್ರಸ್ತೆ ಯುವತಿ ಕೋರ್ಟ್ ಮುಂದೆ ಬರುತ್ತಾರೆ ಎಂದಿದ್ದರು.
ಪೋಷಕರು ಮಾಧ್ಯಮಗಳ ಜೊತೆ ಹೇಳಿಕೆ ನೀಡಿದ ಬೆನ್ನಲ್ಲೇ ಸಿಡಿ ಯುವತಿ ಮತ್ತೊಂದು ವಿಡಿಯೋ ಬಿಡುಗಡೆ ಮಾಡಿ, ಪೋಷಕರ ಮೇಲೆ ಬಲವಂತವಾಗಿ ಒತ್ತಡ ಹಾಕಿ ಹೇಳಿಕೆಗಳನ್ನು ನೀಡಿಸಲಾಗುತ್ತಿದೆ. ಎಸ್ಐಟಿ ಪೊಲೀಸರ ತನಿಖೆಯ ಬಗ್ಗೆ ನನಗೆ ಅನುಮಾನವಿದೆ. ಹೀಗಾಗಿ ನಾನು ನ್ಯಾಯಾಧೀಶರ ಮುಂದೆ ಹೇಳಿಕೆ ನೀಡುತ್ತೇನೆ ಎಂದು ಹೇಳಿ ವಿಡಿಯೋ ರಿಲೀಸ್ ಮಾಡಿದ್ದರು.
ಭಾನುವಾರವೇ ಮುಖ್ಯನ್ಯಾಯಾಧೀಶರಿಗೆ ಪತ್ರ ಬರೆದಿದ್ದ ಯುವತಿ, ರಮೇಶ್ ಜಾರಕಿಹೊಳಿ ಪ್ರಭಾವಿ ವ್ಯಕ್ತಿಯಾಗಿದ್ದು, ಸಾರ್ವಜನಿಕವಾಗಿ ಜೀವ ಬೆದರಿಕೆ ಹಾಕಿದ್ದಾರೆ. ಪ್ರಕರಣದಲ್ಲಿ ನನಗೆ ಮತ್ತು ನನ್ನ ಪೋಷಕರಿಗೆ ರಕ್ಷಣೆ ನೀಡಬೇಕು. ನಿಮ್ಮ ಮೇಲುಸ್ತುವಾರಿಯಲ್ಲಿ ಎಸ್ಐಟಿ ತನಿಖೆ ನಡೆಯಬೇಕು ಎಂದು ಮನವಿ ಮಾಡಿಕೊಂಡಿದ್ದರು. ಇತ್ತ ಆರೋಪಿ ರಮೇಶ್ ಜಾರಕಿಹೊಳಿ ಆಡುಗೋಡಿಯಲ್ಲಿ ಎಸ್ಐಟಿ ಮುಂದೆ ವಿಚಾರಣೆಗೆ ಹಾಜರಾಗಿದ್ದರು.
ಬೆಂಗಳೂರು: ಮಾಜಿ ಸಚಿವರ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಜ್ಞಾತ ವಾಸದಲ್ಲಿರುವ ಯುವತಿಗೆ ಪೊಲೀಸರು 8ನೇ ಬಾರಿ ನೋಟಿಸ್ ನೀಡಿದ್ದಾರೆ.
ಇಂದು ಸಿಡಿ ಲೇಡಿ ಕೋರ್ಟ್ ಮುಂದೆ ಹಾಜರಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಸಿಟಿ ಸಿವಿಲ್ ಕೋರ್ಟಿಗೆ ಭಾರೀ ಪೊಲೀಸ್ ಭದ್ರತೆ ಒದಗಿಸಲಾಗಿತ್ತು. ಆದರೆ ಸಂಜೆ ಹೊತ್ತಿಗೆ ಇಂದು ಕೋರ್ಟ್ ಮುಂದೆ ಯುವತಿ ಹಾಜರಾಗುವುದಿಲ್ಲ ಎನ್ನುವುದು ಖಚಿತವಾಯ್ತು.
ವಕೀಲ ಜಗದೀಶ್ ನೇತೃತ್ವದ ತಂಡವೊಂದು, ನ್ಯಾಯಾಧೀಶರ ಮುಂದೆ ಸಿಆರ್ಪಿಸಿ ಸೆಕ್ಷನ್ 164ರ ಅಡಿ ಯುವತಿ ಹೇಳಿಕೆ ದಾಖಲಿಸಲು ಅವಕಾಶ ಕೋರಿ ಡೆಪ್ಯೂಟಿ ರಿಜಿಸ್ಟ್ರಾರ್ಗೆ ಅರ್ಜಿ ಸಲ್ಲಿಸಿತು. ವಕೀಲರು ಸಲ್ಲಿಸಿದ ಅರ್ಜಿ ಮತ್ತು ಪ್ರಕರಣದ ಪೂರ್ವಪರದ ಬಗ್ಗೆ ಮಾಹಿತಿ ಪಡೆದುಕೊಂಡರು.
ಸಂಜೆ 4 ಗಂಟೆ ನಂತರ, ಯುವತಿಯನ್ನು ಹಾಜರುಪಡಿಸಲು ಡೆಪ್ಯೂಟಿ ರಿಜಿಸ್ಟ್ರಾರ್ ಅನುಮತಿ ನೀಡಿದ್ರು. ಆದ್ರೆ ಅಷ್ಟೊತ್ತಿಗೆ ಕೋರ್ಟ್ ಕಲಾಪ ಮುಗಿಯುವ ಸಮಯ ಬಂದಿದ್ದ ಕಾರಣ, ನಾಳೆ ಬೆಳಗ್ಗೆ ಯುವತಿಯನ್ನು ಕೋರ್ಟ್ ಮುಂದೆ ಹಾಜರುಪಡಿಸುವ ಚಿಂತನೆ ನಡೆಸಿದ್ದೇವೆ ಎಂದು ವಕೀಲ ಜಗದೀಶ್ ತಿಳಿಸಿದ್ರು.
ಇದಕ್ಕೂ ಮುನ್ನ ಎಸ್ಐಟಿಯ ತನಿಖಾ ವೈಖರಿ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸಿಡಿ ಯುವತಿ, ರಕ್ಷಣೆ ಕೋರಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಪತ್ರ ಬರೆದಿದ್ರು. ನನಗೆ ಸರ್ಕಾರ ಮತ್ತು ಜಾರಕಿಹೊಳಿಯಿಂದ ಜೀವಕ್ಕೆ ಬೆದರಿಕೆ ಇದೆ. ಎಸ್ಐಟಿ ಮೇಲೆ ನಂಬಿಕೆ ಇಲ್ಲ. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ನಿಗಾದಲ್ಲಿ ಎಸ್ಐಟಿ ತನಿಖೆ ನಡೆಸಬೇಕು ಎಂದು ಈ ಪತ್ರದ ಮೂಲಕ ಮನವಿ ಮಾಡಿಕೊಂಡರು.