ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿ ಎಫ್ಐಆರ್ ದಾಖಲಾದ ನಾಲ್ಕು ದಿನಗಳ ಬಳಿಕ ಮಾಜಿ ಮಂತ್ರಿ ರಮೇಶ್ ಜಾರಕಿಹೊಳಿಯನ್ನು ಎಸ್ಐಟಿ ವಿಚಾರಣೆಗೆ ಒಳಪಡಿಸಿತು.
ಇಂದು ಬೆಳಗ್ಗೆ 10 ಗಂಟೆಗೆ ವಿಚಾರಣೆಗೆ ಹಾಜರಾದ ರಮೇಶ್ ಜಾರಕಿಹೊಳಿಯನ್ನು ಮಧ್ಯಾಹ್ನ 2 ಗಂಟೆಯವರೆಗೂ ಎಸ್ಐಟಿ ಪ್ರಶ್ನೆಗಳ ಮೇಲೆ ಪ್ರಶ್ನೆಗಳನ್ನು ಹಾಕಿ ಉತ್ತರ ಪಡೆಯಲು ಯತ್ನಿಸಿತು. ಆದರೆ ಯಾವೊಂದು ಪ್ರಶ್ನೆಗೂ ಜಾರಕಿಹೊಳಿ ಸಮರ್ಪಕ ಉತ್ತರ ನೀಡಲಿಲ್ಲ. ನನ್ನ ವಿರುದ್ಧ ಷಡ್ಯಂತ್ರ್ಯ ನಡೀತಿದೆ, ನಾನು ದೂರು ಕೊಟ್ಟ ಎಷ್ಟೋ ದಿನಗಳ ಬಳಿಕ ಯುವತಿ ದೂರು ನೀಡಿದ್ದಾರೆ. ಸಿಡಿಯಲ್ಲಿರೋದು ಗ್ರಾಫಿಕ್ಸ್. ನನಗೂ ಯುವತಿಗೂ ಪರಿಚಯವೇ ಇಲ್ಲ ಎಂದು ವಿಚಾರಣೆ ವೇಳೆ ಜಾರಕಿಹೊಳಿ ಹೇಳಿದ್ರು ಎಂದು ತಿಳಿದುಬಂದಿದೆ.
ಕೆಲ ಪ್ರಶ್ನೆಗಳಿಗೆ ಉತ್ತರಿಸಲು ಕಾಲವಕಾಶ ಕೋರಿದ್ರು. ಇದನ್ನು ಪುರಸ್ಕರಿಸಿದ ಎಸ್ಐಟಿ, ಏಪ್ರಿಲ್ 2ರಂದು ಮತ್ತೆ ವಿಚಾರಣೆಗೆ ಬರಲು ಜಾರಕಿಗೊಳಿಗೆ ನಿರ್ದೇಶನ ನೀಡಿದೆ. ವಿಚಾರಣೆ ಬಳಿಕ ಯಾವುದೇ ಪ್ರತಿಕ್ರಿಯೆ ನೀಡದ ರಮೇಶ್ ಜಾರಕಿಹೊಳಿ ಆಡುಗೋಡಿ ಟೆಕ್ನಿಕಲ್ ಸೆಲ್ನಿಂದ ನಿರ್ಗಮಿಸಿದ್ರು.
ಬೆಂಗಳೂರು: ಸಿಡಿ ಲೇಡಿ ಕೋರ್ಟ್ಗೆ ಇವತ್ತೇ ಹಾಜರಾಗುತ್ತಾರೆ ಎನ್ನಲಾಗಿದ್ದು, ಯುವತಿಯ ಭದ್ರತೆಗಾಗಿ ಮಹಿಳಾ ಪೊಲೀಸರು ಸೇರಿ 8 ಜನರನ್ನೊಳಗೊಂಡ ಭದ್ರತಾ ತಂಡವನ್ನು ನೀಡಲು ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಮ್ಯಾಜಿಸ್ಟ್ರೇಟ್ ಕೋರ್ಟ್ಗೆ ಇಂದು ಸಿಡಿ ಲೇಡಿ ಹಾಜರಾಗುತ್ತಾರೆ ಎಂಬ ಮಾಹಿತಿ ಲಭ್ಯವಾಗಿದೆ. ಕೋರ್ಟ್ ಅನುಮತಿ ನೀಡಿದಲ್ಲಿ ಅರ್ಧ ಗಂಟೆಯಲ್ಲಿ ಯುವತಿಯನ್ನು ಕರೆ ತರುತ್ತೇವೆ ಎಂದು ಯುವತಿ ಪರ ವಕೀಲ ಜಗದೀಶ್ ಹೇಳಿದ್ದಾರೆ. ಇದರ ಬೆನ್ನಲ್ಲೇ ಇದೀಗ 8 ಜನರ ತಂಡವನ್ನು ಸಹ ಭದ್ರತೆಗಾಗಿ ನಿಯೋಜಿಸಲಾಗಿದೆ.
ನ್ಯಾಯಾಲಯ ಹೇಗೆ ಹೇಳುತ್ತದೆ ಮತ್ತು ಯಾವ ಸಮಯವನ್ನು ಸೂಚಿಸುತ್ತದೆ ಎಂದು ನೋಡಿ ಸಂತ್ರಸ್ತೆ ಯುವತಿ ಕೋರ್ಟ್ ಮುಂದೆ ಬರುತ್ತಾರೆ. ಸುಪ್ರೀಂ ಕೋರ್ಟ್ನಲ್ಲಿ ಈ ಪ್ರಕರಣವನ್ನು ಬೇರೆ ರಾಜ್ಯದಲ್ಲಿ ಕೇಸ್ ನಡೆಸಲು ಸಾಧ್ಯವಾಗುತ್ತಾ ಎಂದು ನಮ್ಮ ತಂಡ ಯೋಚಿಸುತ್ತಿದೆ ಎಂದು ವಕೀಲ ಜಗದೀಶ್ ಹೇಳಿದ್ದರು.
ಭಾನುವಾರವೇ ಮುಖ್ಯನ್ಯಾಯಾಧೀಶರಿಗೆ ಪತ್ರ ಬರೆದಿದ್ದ ಯುವತಿ, ರಮೇಶ್ ಜಾರಕಿಹೊಳಿ ಪ್ರಭಾವಿ ವ್ಯಕ್ತಿಯಾಗಿದ್ದು, ಸಾರ್ವಜನಿಕವಾಗಿ ಜೀವ ಬೆದರಿಕೆ ಹಾಕಿದ್ದಾರೆ. ಪ್ರಕರಣದಲ್ಲಿ ನನಗೆ ಮತ್ತು ನನ್ನ ಪೋಷಕರಿಗೆ ರಕ್ಷಣೆ ನೀಡಬೇಕು. ನಿಮ್ಮ ಮೇಲುಸ್ತುವಾರಿಯಲ್ಲಿ ಎಸ್ಐಟಿ ತನಿಖೆ ನಡೆಯಬೇಕು ಎಂದು ಮನವಿ ಮಾಡಿಕೊಂಡಿದ್ದರು. ಇತ್ತ ಆರೋಪಿ ರಮೇಶ್ ಜಾರಕಿಹೊಳಿ ಆಡುಗೋಡಿಯಲ್ಲಿ ಎಸ್ಐಟಿ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.
ರಾಯಚೂರು: ಸಾಕ್ಷ್ಯಗಳಿದ್ರೆ ಪೊಲೀಸರಿಗೆ ನೀಡಲಿ ಯುವತಿ ಪೋಷಕರ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಇಂದು ದಿಢೀರ್ ಮಾಧ್ಯಮಗಳ ಮುಂದೆ ಬಂದ ಯುವತಿ ಪೋಷಕರು, ಡಿಕೆ ಶಿವಕುಮಾರ್ ವಿರುದ್ಧ ಗಂಭೀರ ಆರೋಪಗಳನ್ನ ಮಾಡಿದರು.
ರಾಯಚೂರಿನ ಮುದಗಲ್ ನಲ್ಲಿ ಪೋಷಕರ ಆರೋಪಗಳ ಕುರಿತು ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್, ನನಗೂ ಸಿಡಿ ಲೇಡಿಗೂ ಸಂಬಂಧವಿಲ್ಲ. ಯಾರಬೇಕಾದರೂ ಏನು ಮಾಡಲಿ. ಒತ್ತಡದಲ್ಲಿರೋರು ಹೇಳಿಕೆಗೆ ಮತ್ತು ನನಗೂ ಸಂಬಂಧವಿಲ್ಲ. ಅವರ ಬಳಿ ದಾಖಲೆಗಳಿದ್ರೆ ಪೊಲೀಸರಿಗೆ ನೀಡಿ ತನಿಖೆ ಸಹಕರಿಸಲಿ ಎಂದು ಆರೋಪಗಳನ್ನ ತಳ್ಳಿ ಹಾಕಿದರು.
ಇಂದು ಬೆಳಗಾವಿಯಲ್ಲಿ ಮಾತನಾಡಿದ್ದ ಡಿ.ಕೆ.ಶಿವಕುಮಾರ್, ರಾಜಕೀಯದಲ್ಲಿ ಯಾವುದು ಶಾಶ್ವತವಲ್ಲ. ರಮೇಶ್ ಜಾರಕಿಹೊಳಿ ಅವರು ದಿನಕ್ಕೊಂದು ಮಾತನಾಡುತ್ತಾರೆ. ಏನ್ ಏನೋ ಮಾತನಾಡುತ್ತಾರೆ ಅವರ ಸುದ್ದಿಯನ್ನು ಬಿಟ್ಟು ಬಿಡಿ. ಎಲ್ಲರಿಗೂ ಒಳ್ಳೆಯದಾಗಲಿ. ಪಾಪ ಜಾರಕಿಹೊಳಿ ಬಗ್ಗೆ ನಾನು ಏನ್ ಮಾತನಾಡಲಿ. ಸಿಡಿ ಬಗ್ಗೆ ಮಾತಾಡಲ್ಲ ಎಲೆಕ್ಷನ್ ಮಾಡೋಣ ಎಂದು ಹೇಳಿದ್ದರು.
ಯುವತಿ ಪೋಷಕರು ಹೇಳಿದ್ದೇನು?: ಡಿ.ಕೆ.ಶಿವಕುಮಾರ್ ಅಣತಿಯಂತೆ ಆಕೆ ಕೆಲಸ ಮಾಡುತ್ತಿದ್ದಾಳೆ. ಆಕೆಯನ್ನ ರಾಜಕಾರಣದಲ್ಲಿ ದಾಳವಾಗಿ ಬಳಸಿಕೊಳ್ಳಲಾಗುತ್ತಿದೆ. ಲೀಕ್ ಆಗಿರುವ ಆಡಿಯೋ ಕ್ಲಿಪ್ ನಿಜ. ಆದ್ರೆ ಅದು ಹೇಗೆ ಹೊರ ಬಂತು ಎಂಬುವುದರ ಬಗ್ಗೆ ನಮಗೆ ಗೊತ್ತಿಲ್ಲ. ನಾವು ಸುರಕ್ಷತೆಯಲ್ಲಿದ್ದು, ಪೊಲೀಸರು ಭಧ್ರತೆ ನೀಡಿದ್ದಾರೆ. ಇದಕ್ಕೆಲ್ಲಾ ಡಿ.ಕೆ.ಶಿವಕುಮಾರ್ ನೇರ ಕಾರಣ. ಅವರು ನೀಡಿದ ಹಣದಿಂದಲೇ ಸೋದರಿ ಗೋವಾದತ್ತ ಹೋಗುತ್ತಿರೋದಾಗಿ ಹೇಳಿದ್ದಳು. ಬೇಕಾದ್ರೆ ಆಡಿಯೋ ಕ್ಲಿಪ್ ನಿಮಗೆಲ್ಲರಿಗೂ ಕೇಳಿಸುತ್ತೇನೆ ಎಂದು ಡಿ.ಕೆ.ಶಿವಕುಮಾರ್ ವಿರುದ್ಧ ಗಂಭೀರ ಆರೋಪ ಮಾಡಿದ್ದರು.
– ನಮ್ಮ ಮಗಳನ್ನ ಮುಂದಿಟ್ಟು ರಾಜಕಾರಣ – ಒತ್ತಡದಲ್ಲಿರೋ ಮಗಳಿಗೆ ಕೌನ್ಸಲಿಂಗ್ ನೀಡಬೇಕಿದೆ – ಇದಕ್ಕೆಲ್ಲಾ ಡಿಕೆಶಿ ನೇರ ಕಾರಣ: ಯುವತಿ ಸೋದರನಿಂದ ಗಂಭೀರ ಆರೋಪ
ಬೆಳಗಾವಿ: ಸಿಡಿ ಯುವತಿ ಪ್ರತ್ಯಕ್ಷ ಆಗುತ್ತಿರುವ ಬೆನ್ನಲ್ಲೇ ಸಂತ್ರಸ್ತೆಯ ಪೋಷಕರು ಇಂದು ಮಾಧ್ಯಮಗಳ ಜೊತೆ ಮಾತನಾಡಿದರು. ಮಗಳು ಒತ್ತಡದಲ್ಲಿದ್ದು, ಈ ಸಂದರ್ಭದಲ್ಲಿ ಆಕೆಯ ಹೇಳಿಕೆಗಳನ್ನ ಪರಿಗಣಿಸಬಾರದು. ಮಗಳಿಗೆ ಕೌನ್ಸಲಿಂಗ್ ಅಗತ್ಯವಿದೆ. ಕೌನ್ಸಲಿಂಗ್ ನಂತರವೇ ಆಕೆಯ ಹೇಳಿಕೆಯನ್ನ ಪೊಲೀಸರು ಮತ್ತು ನ್ಯಾಯಾಧೀಶರು ದಾಖಲಿಸಿಕೊಳ್ಳಬೇಕು ಎಂದು ಯುವತಿ ತಂದೆ ಮನವಿ ಮಾಡಿಕೊಂಡಿದ್ದಾರೆ.
ನಮ್ಮ ಮೇಲೆ ಒತ್ತಡವಿಲ್ಲ: ನಮಗೆ ಕಾನೂನು ಗೊತ್ತಿಲ್ಲ. ಆದ್ರೆ ದೇಶದ ಪ್ರಜೆಯಾಗಿ, ಮಗಳಿಗೆ ತೊಂದರೆ ಆಗಿದ್ದಕ್ಕೆ ದೂರು ಸಲ್ಲಿಸುವ ಹಕ್ಕು ನನಗಿದೆ. ನಾವು ಯಾವುದೇ ಒತ್ತಡದಲ್ಲಿಲ್ಲ. ಅವಳು ಯಾವ ಪರಿಸ್ಥಿತಿಯಲ್ಲಿದ್ದಾಳೆ ಎಂಬುವುದು ನಮಗೆ ಗೊತ್ತಾಗುತ್ತಿಲ್ಲ. ಹಾಗಾಗಿ ಮಗಳನ್ನ ನಮ್ಮ ವಶಕ್ಕೆ ನೀಡಬೇಕೆಂದು ಕೇಳಿಕೊಂಡರು. ಇದೇ ವೇಳೆ ಡಿವೈಎಸ್ಪಿ ಕಟ್ಟಮನಿ ನಮಗೆ ಒತ್ತಡ ಹಾಕಿಲ್ಲ. ಎಸ್ಐಟಿ ಮುಂದೆ ಹೇಳಿಕೆ ದಾಖಲಿಸಿ, ಅವರ ಭದ್ರತೆಯಲ್ಲಿಯೇ ಬಂದಿದ್ದೇವೆ ಎಂದು ಹೇಳಿದರು.
ಆಕೆ ನನ್ನ ಮಗಳು, ಮನೆಗೆ ಬರಲಿ: ನಮ್ಮ ಮಗಳನ್ನ ಮುಂದಿಟ್ಟು ರಾಜಕಾರಣ ಮಾಡುತ್ತಿದ್ದಾರೆ. ನಮ್ಮ ಬಳಿಯಲ್ಲಿರಲು ಇಷ್ಟವಿದ್ರೆ ನಾವು ನಿನ್ನನ್ನು ಕರೆದುಕೊಳ್ಳುತ್ತೇವೆ. ಏನೇ ಆದ್ರೂ ಆಕೆ ನನ್ನ ಮಗಳು. ಆಕೆ ಯಾವುದೇ ಹೇಳಿಕೆ ನೀಡುತ್ತಿಲ್ಲ. ಆಕೆ ಕಡೆಯಿಂದ ಒತ್ತಾಯಪೂರ್ವಕವಾಗಿ ಹೇಳಿಕೆ ನೀಡಲಾಗಿಸುತ್ತಿದೆ. ಈ ಪ್ರಕರಣದಿಂದ ನಮ್ಮ ಮನಸ್ಸಿಗೂ ನೋವಾಗಿದೆ ಎಂದು ಯುವತಿ ತಂದೆ ಭಾವುಕರಾದರು.
ಡಿಕೆಶಿ ನೇರ ಕಾರಣ: ಇದೇ ವೇಳೆ ಮಾತನಾಡಿದ ಯುವತಿ ಸೋದರ, ಡಿ.ಕೆ.ಶಿವಕುಮಾರ್ ಅಣತಿಯಂತೆ ಆಕೆ ಕೆಲಸ ಮಾಡುತ್ತಿದ್ದಾಳೆ. ಆಕೆಯನ್ನ ರಾಜಕಾರಣದಲ್ಲಿ ದಾಳವಾಗಿ ಬಳಸಿಕೊಳ್ಳಲಾಗುತ್ತಿದೆ. ಲೀಕ್ ಆಗಿರುವ ಆಡಿಯೋ ಕ್ಲಿಪ್ ನಿಜ. ಆದ್ರೆ ಅದು ಹೇಗೆ ಹೊರ ಬಂತು ಎಂಬುವುದರ ಬಗ್ಗೆ ನಮಗೆ ಗೊತ್ತಿಲ್ಲ. ನಾವು ಸುರಕ್ಷತೆಯಲ್ಲಿದ್ದು, ಪೊಲೀಸರು ಭಧ್ರತೆ ನೀಡಿದ್ದಾರೆ. ಇದಕ್ಕೆಲ್ಲಾ ಡಿ.ಕೆ.ಶಿವಕುಮಾರ್ ನೇರ ಕಾರಣ. ಅವರು ನೀಡಿದ ಹಣದಿಂದಲೇ ಸೋದರಿ ಗೋವಾದತ್ತು ಹೋಗುತ್ತಿರೋದಾಗಿ ಹೇಳಿದ್ದಳು. ಬೇಕಾದ್ರೆ ಆಡಿಯೋ ಕ್ಲಿಪ್ ನಿಮಗೆಲ್ಲರಿಗೂ ಕೇಳಿಸುತ್ತೇನೆ ಎಂದು ಡಿ.ಕೆ.ಶಿವಕುಮಾರ್ ವಿರುದ್ಧ ಗಂಭೀರ ಆರೋಪ ಮಾಡಿದರು.
ಬೆಂಗಳೂರು: ಸಿಡಿ ಪ್ರಕರಣ ಕ್ಷಣದಿಂದ ಕ್ಷಣಕ್ಕೆ ಟ್ವಿಸ್ಟ್ ಪಡೆದುಕೊಳ್ಳುತ್ತಿದ್ದು, ಸದ್ಯ ಯುವತಿ ರಕ್ಷಣೆ ಕೋರಿ ಹೈಕೋರ್ಟ್ ಮುಖ್ಯ ನ್ಯಾಯಾಧೀಶರಿಗೆ ಪತ್ರ ಬರೆದಿದ್ದಾರೆ. ಯುವತಿ ಬರೆದಿರುವ ಪತ್ರ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.
ರಮೇಶ್ ಜಾರಕಿಹೊಳಿ ಪ್ರಭಾವಿ ವ್ಯಕ್ತಿಯಾಗಿದ್ದು, ಸಾರ್ವಜನಿಕವಾಗಿ ಜೀವ ಬೆದರಿಕೆ ಹಾಕಿದ್ದಾರೆ. ಪ್ರಕರಣದಲ್ಲಿ ನನಗೆ ಮತ್ತು ನನ್ನ ಪೋಷಕರಿಗೆ ರಕ್ಷಣೆ ನೀಡಬೇಕು. ನಿಮ್ಮ ಮೇಲುಸ್ತುವಾರಿಯಲ್ಲಿ ಎಸ್ಐಟಿ ತನಿಖೆ ನಡೆಯಬೇಕು ಎಂದು ಬರೆದಿರುವ ಪತ್ರವನ್ನ ಭಾನುವಾರವೇ ಮೇಲ್ ಮೂಲಕ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರಿಗೆ ರವಾನಿಸಲಾಗಿದೆ.
ಇಂದು ಸಂತ್ರಸ್ತ ಯುವತಿ ವಿಚಾರಣೆ ಹಾಜರೋಗುದು ಬಹುತೇಕ ಫಿಕ್ಸ್ ಎನ್ನಲಾಗಿದೆ. ನ್ಯಾಯಧೀಶರ ಸಮಯ ನೋಡಿಕೊಂಡು ನ್ಯಾಯಾಲಯಕ್ಕೆ ಹಾಜರು ಪಡಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಇದಕ್ಕಾಗಿ 20ಕ್ಕೂ ಹೆಚ್ಚು ಹಿರಿಯ ವಕೀಲರ ಟೀಂ ಸಿದ್ಧತೆ ಮಾಡಿಕೊಂಡಿದೆ. ಸಂತ್ರಸ್ತ ಯುವತಿಗೆ ಆತ್ಮಸ್ಥೈರ್ಯ ತುಂಬಲು ಈ ವಕೀಲರ ತಂಡ ತಯಾರಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ರಮೇಶ್ ಜಾರಕಿಹೊಳಿ ನಿವಾಸಕ್ಕೆ ಕಬ್ಬನ್ ಪಾರ್ಕ್ ಕ್ರೈಂ ಪೊಲೀಸರು ನೋಟಿಸ್ ನೀಡಿದ್ದು, ಇಂದು ಬೆಳಗ್ಗೆ 10 ಗಂಟೆಗೆ ವಿಚಾರಣೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ. ಆಡುಗೋಡಿ ಟೆಕ್ನಿಕಲ್ ಸೆಂಟರ್ ನಲ್ಲಿ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ತಿಳಿಸಿದ್ದಾರೆ.
ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾರೀ ಬೆಳವಣಿಗೆ ನಡೆಯುತ್ತಿದ್ದು, ಸಿಡಿ ಲೇಡಿ ನಾಳೆ ವಿಚಾರಣೆಗೆ ಹಾಜರಾಗುವುದು ಬಹುತೇಕ ಖಚಿತ ಎನ್ನಲಾಗಿದೆ. ಇದರ ಮಧ್ಯೆಯೇ ಇದೀಗ ಮಾಜಿ ಸಚಿವ ರಮೇಶ್ ಜಾರಕಿಹೊಳಿಗೂ ಎಸ್ಐಟಿ ನೋಟಿಸ್ ನೀಡಿದ್ದು, ನಾಳೆ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದೆ.
ನಾಳೆ ಸಂತ್ರಸ್ತ ಯುವತಿ ವಿಚಾರಣೆ ಹಾಜರೋಗುದು ಬಹುತೇಕ ಫಿಕ್ಸ್ ಎನ್ನಲಾಗಿದೆ. ನ್ಯಾಯಧೀಶರ ಸಮಯ ನೋಡಿಕೊಂಡು ನ್ಯಾಯಾಲಕ್ಕೆ ಹಾಜರು ಪಡಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಇದಕ್ಕಾಗಿ 20ಕ್ಕೂ ಹೆಚ್ಚು ಹಿರಿಯ ವಕೀಲರ ಟೀಂ ಸಿದ್ಧತೆ ಮಾಡಿಕೊಂಡಿದೆ. ಸಂತ್ರಸ್ತ ಯುವತಿಗೆ ಆತ್ಮಸ್ಥೈರ್ಯ ತುಂಬಲು ಈ ವಕೀಲರ ತಂಡ ತಯಾರಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಇದೆಲ್ಲದರ ಮಧ್ಯೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ನಿವಾಸಕ್ಕೆ ಕಬ್ಬನ್ ಪಾರ್ಕ್ ಕ್ರೈಂ ಪೊಲೀಸರು ಆಗಮಿಸಿ ನೋಟಿಸ್ ನೀಡಿದ್ದು, ನಾಳೆ ಬೆಳಗ್ಗೆ 10 ಗಂಟೆಗೆ ವಿಚಾರಣೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ. ಆಡುಗೋಡಿ ಟೆಕ್ನಿಕಲ್ ಸೆಂಟರ್ನಲ್ಲಿ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ತಿಳಿಸಿದ್ದಾರೆ.
ನೋಟಿಸ್ ನೀಡುತ್ತಿದ್ದಂತೆ ರಮೇಶ್ ಜಾರಕಿಹೊಳಿ ಸಚಿವ ಸುಧಾಕರ್ ನಿವಾಸಕ್ಕೆ ತೆರಳಿದ್ದು, ಮನೆಯಿಂದ ಹೊರ ಬರುತ್ತಿದ್ದಂತೆ ಗರಂ ಆಗಿದ್ದಾರೆ. ಎಸ್ಐಟಿ ನೋಟಿಸ್ ನೀಡಿದ ಕುರಿತು ನಾನು ಮಾತನಾಡುವುದಿಲ್ಲ, ಏನೂ ಹೇಳುವುದಿಲ್ಲ, ನಾನು ಈಗ ಹೇಳಲು ಬರುವುದಿಲ್ಲ ಎಂದು ಹೇಳಿ ಸುಧಾಕರ್ ನಿವಾಸಕ್ಕೆ ತೆರಳಿದರು. ಬೆಳಗ್ಗೆಯಿಂದ ನಿವಾಸದಲ್ಲೇ ಇದ್ದ ರಮೇಶ್ ಜಾರಕಿಹೊಳಿ, ಈಗ ಸುಧಾಕರ್ ಮನೆಗೆ ತೆರಳಿದ್ದಾರೆ. ಇನ್ನೊಂದೆಡೆ ಜಾರಕಿಹೊಳಿ ಅವರಿಗೆ ಎಸ್ ಐಟಿಯಿಂದ ನೋಟಿಸ್ ನೀಡಿದ ಬೆನ್ನಲ್ಲೆ ಮಹೇಶ್ ಕುಮಟ್ಟಹಳ್ಳಿ ಜಾರಕಿಹೊಳಿ ಭೇಟಿಗೆ ಆಗಮಿಸಿದ್ದಾರೆ.
ಎಸ್ಐಟಿ ಅಧಿಕಾರಿಗಳು ಸಿಡಿ ಲೇಡಿ, ರಮೇಶ್ ಜಾರಕಿಹೊಳಿ ಮಾತ್ರವಲ್ಲ, ಆರೋಪಿಗಳಾದ ನರೇಶ್ ಗೌಡ ಪತ್ನಿ ಹಾಗೂ ಶ್ರವಣ್ ಸಹೋದರ ಚೇತನ್ಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ.
ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಅತ್ಯಾಚಾರ ಪ್ರಕರಣ ದಾಖಲಾದರೂ ಇತ್ತ ವಿಶೇಷ ತನಿಖಾ ತಂಡ(ಎಸ್ಐಟಿ) ಯುವತಿಗೆ ನೋಟಿಸ್ ಮೇಲೆ ನೋಟಿಸ್ ಜಾರಿ ಮಾಡುತ್ತಿದ್ದು ಇಲ್ಲಿಯವರೆಗೆ ವಿಚಾರಣೆಗೆ ಹಾಜರಾಗಿಲ್ಲ.
ಹೌದು. ಆರಂಭದಲ್ಲಿ ದಿನೇಶ್ ಕಲ್ಲಹಳ್ಳಿ ನೀಡಿದ ದೂರಿನ ಆಧಾರದಲ್ಲಿ ಯುವತಿಗೆ ನೋಟಿಸ್ ಜಾರಿ ಮಾಡಲಾಗಿತ್ತು. ಆಕೆಯ ಮನೆಯ ಬಾಗಿಲಿಗೆ ಅಂಟಿಸಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿತ್ತು. ಅಷ್ಟೇ ಅಲ್ಲದೇ ದಿನೇಶ್ ಕಲ್ಲಹಳ್ಳಿ ಮೂಲಕವೂ ನೋಟಿಸ್ ನೀಡಲಾಗಿತ್ತು. ಆದರೆ ವಿಚಾರಣೆಗೆ ಹಾಜರಾಗಿರಲಿಲ್ಲ.
ಇದಾದ ಬಳಿಕ ಆಕೆಯ ವಾಟ್ಸಪ್ ನಂಬರ್, ಇಮೇಲ್ಗೆ ನೋಟಿಸ್ ಜಾರಿ ಮಾಡಲಾಗಿತ್ತು. ಈ ಪ್ರಕ್ರಿಯೆ ನಡುವೆ ಯುವತಿ ವಿಡಿಯೋ ರಿಲೀಸ್ ಮಾಡಿ ನಾನು ಎಸ್ಐಟಿ ಮುಂದೆ ಕೆಲ ದಿನದ ಒಳಗಡೆ ಹಾಜರಾಗುತ್ತೇನೆ. ನನಗೆ ರಕ್ಷಣೆ ನೀಡಬೇಕು ಎಂದು ಕೇಳಿ ಮನವಿ ಮಾಡಿದ್ದಳು. ಈ ವಿಡಿಯೋದ ಬಳಿಕ ಮತ್ತೊಂದು ವಿಡಿಯೋ ಮಾಡಿ ನಾನು ಎಸ್ಐಟಿ ಮುಂದೆ ಹಾಜರಾಗುತ್ತೇನೆ. ನಾನು ಹೇಳಿಕೆ ನೀಡುವ ಸಂದರ್ಭದಲ್ಲಿ ನನ್ನ ತಂದೆ, ತಾಯಿ ಇರಬೇಕು. ಅನ್ಯಾಯ ಆಗಿರುವುದು ನನಗೆ. ಆದರೆ ಎಸ್ಐಟಿ ರಮೇಶ್ ಜಾರಕಿಹೊಳಿ ಪರವಾಗಿ ಕೆಲಸ ಮಾಡುವಂತೆ ಕಾಣುತ್ತಿದೆ ಎಂದು ಆರೋಪಿಸಿದ್ದಳು.
ಶುಕ್ರವಾರ ಸಿಡಿ ಲೇಡಿ ಮತ್ತು ಕುಟುಂಬಸ್ಥರ ಜೊತೆಗಿನ ಆಡಿಯೋ ಲೀಕ್ ಆಗಿತ್ತು. ಶನಿವಾರ ಸಿಡಿ ಯುವತಿಯ ಪೋಷಕರು ಸುದ್ದಿಗೋಷ್ಠಿ ನಡೆಸಿ, ನಮ್ಮ ಮಗಳನ್ನು ಮುಂದಿಟ್ಟುಕೊಂಡು ಡಿಕೆ ಶಿವಕುಮಾರ್ ಹೊಲಸು ರಾಜಕಾರಣ ಮಾಡುತ್ತಿದ್ದಾರೆ. ಮಗಳೇ ಎಲ್ಲಿದ್ದರೂ ಬಾ ಎಂದು ಮನವಿ ಮಾಡಿಕೊಂಡಿದ್ದರು.
ಪೋಷಕರು ಮಾಧ್ಯಮಗಳ ಜೊತೆ ಹೇಳಿಕೆ ನೀಡಿದ ಬೆನ್ನಲ್ಲೇ ಸಿಡಿ ಯುವತಿ ಮತ್ತೊಂದು ವಿಡಿಯೋ ಬಿಡುಗಡೆ ಮಾಡಿ, ಪೋಷಕರ ಮೇಲೆ ಬಲವಂತವಾಗಿ ಒತ್ತಡ ಹಾಕಿ ಹೇಳಿಕೆಗಳನ್ನು ನೀಡಿಸಲಾಗುತ್ತಿದೆ. ಎಸ್ಐಟಿ ಪೊಲೀಸರ ತನಿಖೆಯ ಬಗ್ಗೆ ನನಗೆ ಅನುಮಾನವಿದೆ.ಹೀಗಾಗಿ ನಾನು ನ್ಯಾಯಾಧೀಶರ ಮುಂದೆ ಹೇಳಿಕೆ ನೀಡುತ್ತೇನೆ ಎಂದು ಹೇಳಿ ವಿಡಿಯೋ ರಿಲೀಸ್ ಮಾಡಿದ್ದಳು.
ದೂರು ದಾಖಲಾದ ಬಳಿಕ ಯುವತಿ ವಿಚಾರಣೆಗೆ ಹಾಜರಾಗಬಹುದು ಎಂಬ ನಿರೀಕ್ಷೆ ಇತ್ತು. ಆದರೆ ಯುವತಿ ವಿಡಿಯೋ ಮಾಡಿ ಹೇಳಿಕೆಗಳನ್ನು ನೀಡುತ್ತಿದ್ದಾಳೆ ವಿನಾ: ವಿಚಾರಣೆಗೆ ಹಾಜರಾಗುತ್ತಿಲ್ಲ. ಹೀಗಾಗಿ ಯುವತಿಯ ಮುಂದಿನ ನಡೆ ಏನು ಎಂಬುದರ ಬಗ್ಗೆ ಕುತೂಹಲ ಮೂಡಿದೆ.
ಯುವತಿಯ ಮುಂದಿದೆ 3 ಆಯ್ಕೆಗಳಿವೆ:
1. ನೇರವಾಗಿ ನ್ಯಾಯಾಧೀಶರ ಮುಂದೆ ಹಾಜರಾಗಿ ಹೇಳಿಕೆ ನೀಡಬಹುದು
2. ತಮ್ಮ ಪರ ವಕೀಲರ ಜೊತೆಗೆ ನ್ಯಾಯಾಧೀಶರ ಮುಂದೆ ಹಾಜರಾಗಬಹುದು.
3. ಎಸ್ ಐಟಿ ಪೊಲೀಸರ ಮುಂದೆ ಹಾಜರಾಗಿ, ನಿಮಗೆ ಹೇಳಿಕೆ ನೀಡಲ್ಲ ನ್ಯಾಯಾಧೀಶರ ಬಳಿ ಕರೆದುಕೊಂಡು ಹೋಗಿ ಎಂದು ಮನವಿ ಮಾಡಬಹುದು.
ಈಗ ಕೊನೆಯದಾಗಿ ವಕೀಲ ಜಗದೀಶ್ ಮೂಲಕ ಯುವತಿಗೆ ನೋಟಿಸ್ ನೀಡಲಾಗಿದೆ. ಸದ್ಯದ ಪರಿಸ್ಥಿತಿಯಲ್ಲಿ ಯುವತಿ ಎಸ್ಐಟಿ ಪೊಲೀಸರ ಮುಂದೆ ಹಾಜರಾಗುವುದು ಅನುಮಾನ. ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಬಹುದು. ಕೋರ್ಟ್ ಆದೇಶ ನೋಡಿಕೊಂಡು ಎಸ್ಐಟಿ ಪೊಲೀಸರ ಮುಂದೆ ಹಾಜರಾಗಬೇಕೋ? ಬೇಡವೋ ಎಂಬ ಬಗ್ಗೆ ತೀರ್ಮಾನ ಕೈಗೊಳ್ಳುವ ಸಾಧ್ಯತೆಯಿದೆ.
ಬೆಂಗಳೂರು: ಪೋಷಕರ ಮೇಲೆ ಒತ್ತಡ ಹಾಕಿ ಹೇಳಿಕೆಯನ್ನು ನೀಡಲಾಗುತ್ತಿದೆ ಎಂದು ಯುವತಿ ವಿಡಿಯೋ ರಿಲೀಸ್ ಮಾಡಿದ ಬೆನ್ನಲ್ಲೇ ಸಿಡಿ ಲೇಡಿ ತನ್ನ ಸಹೋದರನ ಜೊತೆ ಮಾತನಾಡುತ್ತಿರುವ ಫೋನ್ ಕರೆಯ ಆಡಿಯೋ ರಿಲೀಸ್ ಆಗಿದೆ.
ಈ ಫೋನ್ ಕರೆಯಲ್ಲಿ ಯುವತಿ ಸಹೋದರನ ಜೊತೆ ಮಾತನಾಡುತ್ತಾ, ಊರಿಗೆ ಹೋಗಬೇಡ. ಊರಿಗೆ ಹೋದರೆ ಸಮಸ್ಯೆ ಆಗುತ್ತದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ನೀನಾದ್ರೂ ನಂಗೆ ಸಪೋರ್ಟ್ ಮಾಡು ಎಂದು ಹೇಳಿದ್ದಾಳೆ.
ಇದಕ್ಕೆ ಸಹೋದರ ಮುಂದೆ ಏನು ಮಾಡ್ತೀಯಾ ಎಂದು ಕೇಳಿದ್ದಕ್ಕೆ ನಾನು ಮತ್ತು ಆಕಾಶ್ ಗೋವಾಗೆ ಹೋಗುತ್ತೇವೆ. ಡಿಕೆ ಶಿವಕುಮಾರ್ ನಮಗೆ ರೊಕ್ಕ ಕೊಟ್ಟಿದ್ದಾರೆ ಎಂದು ತಿಳಿಸಿದ್ದಾಳೆ. ಈ ಉತ್ತರಕ್ಕೆ ಸಹೋದರ, ಇದೆಲ್ಲ ನಿಂಗೆ ಯಾಕೆ ಬೇಕು ಎಂದು ಕೇಳಿದಾಗ, ಏನು ಆಗಲ್ಲ. ಡಿಕೆ ಶಿವಕುಮಾರ್ ಅವರು ನಮಗೆ ಸಹಾಯ ಮಾಡುತ್ತಾರೆ ಎಂದು ತಿಳಿಸಿದ್ದಾರೆ. ನಾನು ಗೋವಾಗೆ ಹೋಗುವ ವಿಚಾರ ಅಪ್ಪ, ಅಮ್ಮನಿಗೆ ಯಾವುದೇ ಕಾರಣಕ್ಕೂ ತಿಳಿಸಬೇಡ ಎಂದಿದ್ದಾಳೆ.
ಈ ಸಂದರ್ಭದಲ್ಲಿ ಸಹೋದರ ಈ ಸಿಮ್ ಚೇಂಜ್ ಮಾಡು ಎಂದಾಗ, ಸಿಮ್ ಎಲ್ಲ ಚೇಂಜ್ ಮಾಡಿದ್ದೀನಿ, ಬೇಸಿಕ್ ಸೆಟ್ ಕೊಟ್ಟಿದ್ದಾರೆ. ಅದನ್ನು ಬಳಕೆ ಮಾಡುತ್ತೇನೆ. ಆಕಾಶ್ ಫೋನ್ ಅನ್ನು ಅವರಿಗೆ ಟ್ರ್ಯಾಕ್ ಮಾಡಲು ಆಗಲ್ಲ. ನಿನ್ನನ್ನು ಸಂಪರ್ಕಿಸಿದ್ದರೆ ಸಂಜಯ್ ನಗರ, ವಿಜಯನಗರದಲ್ಲಿ ಇರಬಹುದು ಅಂತ ಹೇಳು. ಆರ್ಟಿ ನಗರ ಅಂತ ಹೇಳಬೇಡ. ನಾವೆಲ್ಲ ಒಟ್ಟಾಗಿದ್ದೇವೆ. ಬಸ್ಸಿನಲ್ಲಿ ಕುಳಿತ ಬಳಿಕ ಫೋನ್ ಮಾಡ್ತೀನಿ ಎಂದು ಹೇಳಿ ಕರೆ ಕಟ್ ಮಾಡಿದ್ದಾಳೆ.
ಸಹೋದರ – ಊಟಾ ಯುವತಿ – ಆಯ್ತು ನಿಂದು ಸಹೋದರ – ಯಾವಾಗ ಬರ್ತಿಯಾ..? ಉರಿಗೆ? ಯುವತಿ – ಬರ್ತಿನಿ ಮೂರು ನಾಲ್ಕೈದು ದಿನ. ನನಗೆ ಈಗ ಎಲ್ಲಿಗೂ ಹೋಗಬೇಡ ಅಂತಾ ಹೇಳಿದ್ದಾರೆ.. ಅವರು ಹೇಳಿದಂತೆ ಮಾಡಬೇಕು ಅಂದಿದ್ದಾರೆ.
ಸಹೋದರ – ಯಾರು ಹೇಳಿದ್ದು…? ಯುವತಿ – ಡಿಕೆ ಶಿವಕುಮಾರ್ ಸಹೋದರ – ಬಹಳ ಕೆಟ್ಟದ್ದಾಗುತ್ತೆ ಇದೆಲ್ಲೆ ಯುವತಿ – ಏನು ಆಗಲ್ಲ ಹೆದರಬೇಡ.. ಪ್ಲೀಸ್ ನನ್ನ ನಂಬು. ಕಾಲಿಗೆ ಬೀಳುತ್ತೇನೆ ನೀನ್ ಒಬ್ಬನಾದ್ರು ಸಪೋರ್ಟ್ ಮಾಡು
ಸಹೋದರ – ನಿನ್ನ ಅಮೇಲೆ ಕೈಬಿಟ್ಟುಬಿಡುತ್ತಾರೆ ಅಮೇಲೆ ಅವರು ಯುವತಿ – ಬಿಡಲ್ಲ ಅವರು ಬಿಡೋ ಆಗಿದ್ರೆ ಇಲ್ಲಿ ತನಕ ಅವರು ರೊಕ್ಕೊ ನಮಗೆ ಬೇರೆ ಊರಿಗೆ ಹೋಗೋಕೆ ಹೇಳ್ತಿರಲಿಲ್ಲ.. ನಾವ್ ಗೋವಾ ಗೆ ಹೋಗ್ತಿದ್ದೇವೆ.. ಯಾರಿಗೂ ಹೇಳಬೇಡ.. ನಾನು ಆಕಾಶ್ ಇಬ್ಬರೇ, ಬೇರೆ ಯಾರಿಗೂ ಹೇಳಬೇಡ.. ಕಾಲಿಗೆ ಬೀಳುತ್ತೇನೆ ಮಮ್ಮಿಗೂ ಹೇಳಬೇಡ, ಅವ್ವನಿಗೂ ಹೇಳಬೇಡ. ಯುವತಿ – ನಾನು ಆರ್ ಟಿನಗರದಲ್ಲಿ ಇರಲ್ಲ ಯಾರಾದ್ರು ಕೇಳಿದ್ರೆ ಸಂಜಯನಗರ ಅಥವಾ ವಿಜಯನಗರದಲ್ಲಿ ಇರ್ತಾಳೆ ಅಂತೇಳು
ಸಹೋದರ – ನಿನ್ ಫೋನ್ ಸಿಮ್ ತೆಗಿ ಫೋನ್ ಸಿಮ್ ತೆಗಿ ಯುವತಿ – ಇಲ್ಲ ನನ್ ಫೋನ್ ಎಲ್ಲಾ ಕಸ್ಕೊಂಡವ್ರೆ ಅವ್ರು, ಸಿಮ್ ಕಾರ್ಡ್ ಎಲ್ಲಾ ತೆಗೆದಿದ್ದೀನಿ , ನಂಗೊಂದು ಆಕಾಶ್ ಮೊಬೈಲ್ ಟ್ರ್ಯಾಪ್ ಮಾಡೋಕೆ ಆಗಲ್ಲ ತಲೆ ಕೆಡಿಸ್ಕೊಬೇಡ ಯುವತಿ – ನಾನು ಆಕಾಶ್ ಒಂದು ಏಳೆಂಟು ಜನ ಡಿಕೆಶಿ ಮನೆ ಹತ್ರ ಬಂದಿದ್ದೀವಿ, ಡಿಕೆ ಶಿವಕುಮಾರ್ ಹತ್ರ ಅವರೆಲ್ಲಾ ಮಾತಾಡವ್ರೆ, ಚಿನ್ನಿ ಬಸ್ಸಿನಲ್ಲಿ ಕುಳಿತ ಬಳಿಕ ಕಾಲ್ ಮಾಡ್ತೀನಿ.
– ನ್ಯಾಯಾಧೀಶರ ಮುಂದೆ ಹೇಳಿಕೆ ನೀಡಲು ಸಿಎಂ ಸಹಾಯ ಮಾಡಬೇಕು – ಭದ್ರತೆ ನೀಡಿದರೆ ಅನ್ಯಾಯವನ್ನು ಎಳೆ ಎಳೆಯಾಗಿ ಬಿಚ್ಚಿಡುತ್ತೇನೆ – ಈಗ ಬಂದು ಹೇಳಿಕೆ ನೀಡಲು ಭಯವಾಗುತ್ತಿದೆ
ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಷಣಕ್ಕೊಂದು ಟ್ವಿಸ್ಟ್ ಸಿಗುತ್ತಿದ್ದು, ಪೋಷಕರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಹೇಳಿಕೆ ನೀಡಿದ್ದ ಬೆನ್ನಲ್ಲೇ ಇದೀಗ ಯುವತಿ 5ನೇ ವೀಡಿಯೋ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ಪ್ರಭಾವ ಬೀರಿ ನಮ್ಮ ತಂದೆ, ತಾಯಿಯಿಂದ ಹೇಳಿಕೆ ಕೊಡಿಸಿದ್ದಾರೆ ಎಂದು ಸಿಡಿ ಲೇಡಿ ಆರೋಪಿಸಿದ್ದಾರೆ.
ವೀಡಿಯೋ ಹೇಳಿಕೆಯಲ್ಲಿ ಮಾತನಾಡಿರುವ ಸಿಡಿ ಲೇಡಿ, ಇಂದು ಆಗಿರುವ ಬೆಳವಣಿಗೆ ಕಂಡು ನನಗೆ ಭಯವಾಗುತ್ತಿದೆ. ನಮ್ಮ ಅಪ್ಪ, ಅಮ್ಮನಿಗೆ ಏನೂ ಗೊತ್ತೇ ಇಲ್ಲ. ಅವರ ಮೇಲೆ ಪ್ರಭಾವ ಬೀರಿ, ಬೆದರಿಕೆ ಹಾಕಿ, ಅವರನ್ನು ಎಲ್ಲೋ ಇರಿಸಿ, ಇಂದು ಹೊರಗಡೆ ಕರೆದುಕೊಂಡು ಬಂದು ಅವರ ಬಾಯಿಂದ ಏನೇನೋ ಹೇಳಿಸುತ್ತಿದ್ದಾರೆ. ಈ ಕೇಸಲ್ಲಿ ಅನ್ಯಾಯವಾಗಿರುವುದು ನನಗೆ, ಅನ್ಯಾಯ ಮಾಡಿರುವುದು ಅವರು. ಆದರೆ ಅವರ ಮನೆಯವರನ್ನು ಯಾಕೆ ಕರೆದುಕೊಂಡು ಬಂದು ವಿಚಾರಣೆ ಮಾಡುತ್ತಿಲ್ಲ ಎಂದು ರಮೇಶ್ ಜಾರಕಿಹೊಳಿ ಹೆಸರು ಹೇಳದೆ ಸಿಡಿ ಲೇಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಮ್ಮ ತಂದೆ, ತಾಯಿ ಬಾಯಿಂದ ಏನೇನೋ ಹೇಳಿಸಿ, ಪ್ರಕರಣವನ್ನೇ ಬೇರೆ ರೀತಿ ತಿರುಗಿಸುತ್ತಿದ್ದಾರೆ. ಇಲ್ಲಿ ನ್ಯಾಯ ಸಿಗಬೇಕಿರುವುದು ನನಗೆ, ಮೊದಲು ನನ್ನ ಬಗ್ಗೆ ಮಾತನಾಡಬೇಕು. ಅದನ್ನು ಬಿಟ್ಟು ಬೇರೆಯವರ ಬಗ್ಗೆ ಮಾತನಾಡುತ್ತಿದ್ದಾರೆ. ಇದು ನನಗೆ ಬೇಕಿಲ್ಲ ಅವೆಲ್ಲ ಅವರ ವೈಯಕ್ತಿಕ ವಿಚಾರ. ಈಗ ನಾನು ಬಂದು ಹೇಳಿಕೆ ನೀಡಬೇಕೆಂದರೂ ನನಗೆ ಭಯವಾಗುತ್ತಿದೆ ಎಂದು ಹೇಳಿದ್ದಾರೆ.
ಪ್ರಭಾವ ಬೀರಿ ನಮ್ಮ ಅಪ್ಪ, ಅಮ್ಮನ ಕಡೆಯಿಂದಲೇ ಏನೇನೋ ಹೇಳಿಸಿ, ಪ್ರಕರಣವನ್ನೇ ಬದಲಾಯಿಸಲು ನೋಡುತ್ತಿದ್ದಾರೆ. ಹೀಗಿರುವಾಗ ನಾನು ಅಲ್ಲಿಗೆ ಬಂದು ಹೇಳಿಕೆ ನೀಡಿದರೆ ಏನಾಗುತ್ತೋ ನನಗೆ ಗೊತ್ತಾಗುತ್ತಿಲ್ಲ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ರಮೇಶ್ ಕುಮಾರ್ ಅವರ ಬಳಿ ಕೇಳಿಕೊಳ್ಳುವುದು ಇಷ್ಟೇ, ನನಗೆ ಸಹಾಯ ಮಾಡಿ. ಏನೇನು ಅನ್ಯಾಯ ಮಾಡಿದ್ದಾರೋ ಎಲ್ಲವನ್ನೂ ಎಳೆ ಎಳೆಯಾಗಿ ಎಲ್ಲರ ಮುಂದೆ ಬಿಚ್ಚಿಡುತ್ತೇನೆ ಎಂದು ತಿಳಿಸಿದ್ದಾರೆ.
ನಾನು ನ್ಯಾಯಾಧೀಶರ ಮುಂದೆಯೇ ಬಂದು ಹೇಳಿಕೆ ನೀಡುತ್ತೇನೆ. ದಯವಿಟ್ಟು ನನಗೆ ಎಲ್ಲರೂ ಸಹಾಯ ಮಾಡಿ, ಎಲ್ಲ ಮುಖಂಡರಲ್ಲೂ ನಾನು ಕೇಳಿಕೊಳ್ಳುವುದು ಇಷ್ಟೇ ಎಂದು ಸಿಡಿ ಯುವತಿ ತಮ್ಮ 5ನೇ ವೀಡಿಯೋ ಹೇಳಿಕೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಬೆಂಗಳೂರು: ನೋಟಿಸ್ ಹಿನ್ನೆಲೆಯಲ್ಲಿ ಸಿಡಿ ಲೇಡಿಯ ಕುಟುಂಬ ಸದಸ್ಯರು ಇಂದು ವಿಶೇಷ ತನಿಖಾ ತಂಡ(ಎಸ್ಐಟಿ) ಮುಂದೆ ಹಾಜರಾದರು. ಆಡುಗೋಡಿಯ ಟೆಕ್ನಿಕಲ್ ಸೆಲ್ನಲ್ಲಿ ಬೆಳಗ್ಗೆ 10ರಿಂದ ಸಂಜೆ 5:30ರವರೆಗೆ ಎಸ್ಐಟಿ ಪೊಲೀಸರು ನಿರಂತರವಾಗಿ ವಿಚಾರಣೆ ನಡೆಸಿದರು.
ಖುದ್ದು ಎಸ್ಐಟಿ ಮುಖ್ಯಸ್ಥ ಸೌಮೆಂದು ಮುಖರ್ಜಿ,ಸಂದೀಪ್ ಪಾಟೀಲ್ ಮುಂದೆ ನಿಂತು ಪೋಷಕರಿಗೆ ಧೈರ್ಯ ತುಂಬಿ, ವಿಚಾರಣೆಗೆ ಒಳಪಡಿಸಿದರು. ಯುವತಿಯ ತಂದೆ, ತಾಯಿ, ಸಹೋದರ ಹೀಗೆ ಎಲ್ಲರನ್ನು ಪ್ರತ್ಯೇಕವಾಗಿ ಕೂರಿಸಿ ಹತ್ತು ಹಲವು ಪ್ರಶ್ನೆಗಳನ್ನು ಎಸ್ಐಟಿ ಅಧಿಕಾರಿಗಳು ಕೇಳಿದ್ದಾರೆ.
ನಿಮ್ಮ ಮಗಳನ್ನು ನೀವು ಕೊನೆಯ ಬಾರಿ ಭೇಟಿಯಾಗಿದ್ದು ಯಾವಾಗ? ಎಷ್ಟು ಬಾರಿ ಕರೆ ಬಂದಿತ್ತು. ಏನು ಹೇಳಿದ್ರು? ನಿನ್ನೆ ವೈರಲ್ ಆಡಿಯೋ ನಿಮ್ಮದಾ? ಯುವತಿಯ ವ್ಯಕ್ತಿತ್ವ ಹೇಗಿತ್ತು? ಗೆಳೆಯರ ವಿವರವೇನು? ಇದರ ಬಗ್ಗೆ ನಿಮಗೆ ಮೊದಲೇ ಗೊತ್ತಿತ್ತಾ? ಯಾರಾದರೂ ನಿಮ್ಮನ್ನು ಹೆದರಿಸಿದ್ರಾ? ಹೇಗೆ ತರಹೇವಾರಿ ಪ್ರಶ್ನೆಗಳನ್ನು ಕೇಳಿ ಉತ್ತರ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.
ಪೋಷಕರು ಹೇಳಿದ್ದೇನು?
ನಮ್ಮ ಮಗಳು ಆತ್ಮಹತ್ಯೆ ಮಾಡಿಕೊಂಡರೇ ನಾವು ಉಳಿಯುವುದಿಲ್ಲ. ನಮ್ಮ ಮಗಳು ಅಂಥವಳಲ್ಲ. ಏನಿಗಿದ್ಯೋ ಗೊತ್ತಾಗಿಲ್ಲ. 2 ಬಾರಿ ಮಾತಾಡಿದ್ದು ಬಿಟ್ರೆ ನಂತರ ಸಂಪರ್ಕಿಸಿಲ್ಲ. ನಮ್ಮ ಮಗಳನ್ನು ಯಾವುದೋ ಗ್ಯಾಂಗ್ ಕಿಡ್ನಾಪ್ ಮಾಡಿದೆ. ನಮ್ಮ ಮಗಳು ಯಾರಿಂದಲೋ ಒತ್ತಡಕ್ಕೆ ಒಳಗಾಗಿದ್ದಾಳೆ.
ಆಕೆ ಹೇಳುತ್ತಿರುವ ವಿಚಾರಗಳು ಸ್ವಯಂಪ್ರೇರಿತವಾಗಿಲ್ಲ. ವೀಡಿಯೋ ನೋಡಿದರೆ ಒತ್ತಡದಲ್ಲಿ ಇರುವುದು ಗೊತ್ತಾಗುತ್ತದೆ. ಯಾರೋ ತಮಗೆ ಬೇಕಾದ ರೀತಿ ಹೇಳಿಕೆ ಕೊಡಿಸುತ್ತಿದ್ದಾರೆ. ಮಗಳು ನಮ್ಮ ಮುಂದೆ ಬಂದರೆ ಅಸಲಿ ಸತ್ಯ ಗೊತ್ತಾಗುತ್ತದೆ. ನಿನ್ನೆ ವೈರಲ್ ಆದ ವಿಡಿಯೋದಲ್ಲಿ ನಮ್ಮದೇ ಧ್ವನಿಯಿದೆ. ಅದು ಹೇಗೆ ಹೊರಗೆ ಬಂತು ಎನ್ನುವುದು ಗೊತ್ತಿಲ್ಲ.