ಬೆಂಗಳೂರು: ಅಕ್ಕನನ್ನು ಮುಂದಿಟ್ಟುಕೊಂಡು ಡಿಕೆ ಶಿವಕುಮಾರ್ ಹೊಲಸು ರಾಜಕಾರಣ ಮಾಡುತ್ತಿದ್ದಾರೆ ಎಂದು ಸಂತ್ರಸ್ತೆಯ ಸಹೋದರ ಗಂಭೀರ ಆರೋಪ ಮಾಡಿದ್ದಾರೆ.
ವಿಶೇಷ ತನಿಖಾ ತಂಡದ(ಎಸ್ಐಟಿ) ಪೊಲೀಸರ ವಿಚಾರಣೆಯ ಬಳಿಕ ಮಾಧ್ಯಮಗಳ ಜೊತೆ ಸಿಡಿ ಲೇಡಿಯ ತಂದೆ, ತಾಯಿ ಮತ್ತು ಪೋಷಕರು ಮಾತನಾಡಿದರು. ಸಹೋದರ ಮಾತನಾಡಿ, ಅಕ್ಕನನ್ನು ಮುಂದಿಟ್ಟುಕೊಂಡು ಡಿಕೆ ಶಿವಕುಮಾರ್ ಕೆಟ್ಟ ರಾಜಕಾರಣ ಮಾಡುತ್ತಿದ್ದಾರೆ. ಅಕ್ಕನಿಗೆ ಶಿವಕುಮಾರ್ ದುಡ್ಡು ಕೊಟ್ಟು ಗೋವಾಗೆ ಕಳುಹಿಸಿದ್ದಾರೆ ಎಂದು ನೇರವಾಗಿಯೇ ಗಂಭೀರ ಆರೋಪ ಮಾಡಿದರು.
ಈ ವೇಳೆ ನರೇಶ್ ಗೌಡ ಸುಳ್ಳುಗಾರ. ಅಕ್ಕನೇ ಫೋನ್ ಮಾಡಿ ಡಿಕೆಶಿ ದುಡ್ಡು ಕೊಟ್ಟಿದ್ದಾರೆ ಎಂದು ಹೇಳಿದ್ದಾಳೆ. ಗಂಡಸಾಗಿದ್ದರೆ ಕೂಡಲೇ ಅಕ್ಕನನ್ನು ಬಿಟ್ಟುಬಿಡಿ ಎಂದು ಸಿಡಿ ಗ್ಯಾಂಗ್ ಸದಸ್ಯರಿಗೆ ಹೇಳಿದರು.
ತಂದೆ ಮಾತನಾಡಿ, ಮಗಳು ವಿಡಿಯೋ ಮಾಡಿ ನಮಗೆ ರಕ್ಷಣೆ ನೀಡಬೇಕು ಎಂದು ಕೇಳಿದ್ದಾಳೆ. ಆದರೆ ನಾನು ಒಬ್ಬ ನಿವೃತ್ತ ಸೈನಿಕ. ನಮಗೆ ಯಾರ ರಕ್ಷಣೆಯ ಅಗತ್ಯವಿಲ್ಲ. ಮಗಳ ರಕ್ಷಣೆ ಹೇಗೆ ಮಾಡಬೇಕು ಎನ್ನುವುದು ಗೊತ್ತಿದೆ. ದಯವಿಟ್ಟು ನನ್ನ ಮಗಳನ್ನು ನಮಗೆ ಕೊಟ್ಟುಬಿಡಿ ಎಂದು ಮನವಿ ಮಾಡಿಕೊಂಡರು.
ಈ ವೇಳೆ ನಿಮಗೆ ಒತ್ತಡ ಇದ್ಯಾ ಎಂದು ಕೇಳಿದ್ದಕ್ಕೆ, ನಮಗೆ ಯಾರ ಒತ್ತಡ ಇಲ್ಲ. ನಾನೊಬ್ಬ ನಿವೃತ್ತ ಸೈನಿಕ. ಯಾರ ಒತ್ತಡಕ್ಕೆ ಒಳಗಾಗಿ ನಾನು ಹೇಳಿಕೆ ನೀಡುತ್ತಿಲ್ಲ ಎಂದು ತಿಳಿಸಿದರು.
ಬೆಂಗಳೂರು: ಮಾಜಿ ಸಚಿವರ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದ ಯುವತಿಯ ವೀಡಿಯೋಗಳನ್ನ ಧಾರಾವಾಹಿಗೆ ಹೋಲಿಸಿದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರ ಹೇಳಿಕೆಗೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಗೃಹ ಸಚಿವರು, ಧಾರಾವಾಹಿಯ ರೀತಿಯಲ್ಲಿಯೇ ಆಡಿಯೋ, ವೀಡಿಯೋಗಳು ಹೊರ ಬರುತ್ತಿವೆ. ಯುವತಿ ಬಿಡುಗಡೆ ಮಾಡಿರುವ ಹೇಳಿಕೆಗಳಿಗೆ ಯಾವುದೇ ಪ್ರತಿಕ್ರಿಯೆ ನೀಡಲಾರೆ. ತನಿಖೆಯನ್ನು ನಿಷ್ಠುರವಾಗಿ, ನ್ಯಾಯಸಮ್ಮತವಾಗಿ ಮಾಡುತ್ತೇವೆ. ಯಾರ ಪರ, ಯಾರ ವಿರುದ್ಧ ತನಿಖೆ ಮಾಡುವುದಿಲ್ಲ. ನಿಜವಾದ ತಪ್ಪಿತಸ್ಥರಿಗೆ ಶಿಕ್ಷೆ ಆಗುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಸಹಾಯ ಕೇಳಿ ಡಿಕೆಶಿ ಮನೆ ಹತ್ರ ಹೋಗಿದ್ದು ನಿಜ: ಸಿಡಿ ಯುವತಿಯ ಹೇಳಿಕೆ
ದಿನನಿತ್ಯವೂ ಸರಣಿ ವಿಡಿಯೋ ಆಡಿಯೋ ಬಿಡುಗಡೆಯಾಗುತ್ತಿದೆ. ಸಿಡಿ, ಆಡಿಯೋ, ವಿಡಿಯೋ ಇಟ್ಟುಕೊಂಡು ಎಸ್ಐಟಿ ಕೂಲಂಕುಷವಾಗಿ ತನಿಖೆ ಮಾಡುತ್ತದೆ. ವೈಜ್ಞಾನಿಕವಾಗಿ ಪರಿಶೀಲನೆ ಮಾಡಲಾಗುತ್ತದೆ. ಯಾವುದೇ ರೀತಿಯ ಒತ್ತಡ, ಪ್ರಭಾವ ಅಥವಾ ದಾರಿ ತಪ್ಪಿಸುವುದು ನಡೆಯುವುದಿಲ್ಲ. ಎಸ್ಐಟಿ ಕ್ರಮಬದ್ಧವಾಗಿ, ಕಾನೂನುಬದ್ಧವಾಗಿ ತನಿಖೆ ಮಾಡಲಿದೆ ಎಂದು ತಿಳಿಸಿದರು. ಇದನ್ನೂ ಓದಿ: ಸಂತ್ರಸ್ತೆಗೆ ನ್ಯಾಯ ಸಿಗಬೇಕಾದ್ರೆ ಆರೋಪಿಯ ಬಂಧಿಸಿ: ಯುವತಿ ಪರ ವಕೀಲ
ಎರಡು, ಮೂರು ಹಾಗೂ ನಾಲ್ಕನೇ ವೀಡಿಯೋದಲ್ಲಿ ಎಸ್ಐಟಿ ತನಿಖೆಯ ಬಗ್ಗೆ ಯುವತಿ ಅನುಮಾನ ವ್ಯಕ್ತಪಡಿಸಿದ್ದರು. ಇಂದು ಸಹ ಎಸ್ಐಟಿ ತನ್ನ ಪೋಷಕರಿಗೆ ಸೂಕ್ತ ರಕ್ಷಣೆ ನೀಡುತ್ತಿಲ್ಲ. ರಮೇಶ್ ಜಾರಕಿಹೊಳಿ ಅವರಿಂದ ತನಗೂ ಮತ್ತು ತಮ್ಮ ಕುಟುಂಬಕ್ಕೆ ಜೀವ ಬೆದರಿಕೆ ಇದೆ ಎಂದು ಯುವತಿ ಆರೋಪಿಸಿರುವ ವೀಡಿಯೋ ಇಂದು ಬಿಡುಗಡೆಯಾಗಿದೆ. ಇದನ್ನೂ ಓದಿ: ಯುವತಿ ನನ್ನನ್ನು ಭೇಟಿ ಮಾಡಲು ಪ್ರಯತ್ನಿಸಿರಬಹುದು : ಡಿಕೆ ಶಿವಕುಮಾರ್
ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದ್ದು, ಇಂದು ಸಿಡಿ ಲೇಡಿ ಮತ್ತೊಂದು ವೀಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಅಲ್ಲದೆ ವಕೀಲರ ಮೂಲಕ ದೂರನ್ನೂ ಸಹ ಸಲ್ಲಿಸಿದ್ದಾರೆ. ಈ ಬಗ್ಗೆ ಸಿಡಿ ಲೇಡಿ ಪರ ವಕೀಲ ಜಗದೀಶ್ ಮಹಾದೇವನ್ ಮಾತನಾಡಿದ್ದು, ಇನ್ನೆರಡು ದಿನಗಳಲ್ಲಿ ಸಿಡಿ ಲೇಡಿ ಬರುತ್ತಾರೆ ಎಂದು ತಿಳಿಸಿದ್ದಾರೆ.
ಈ ಕರಿತು ಪಬ್ಲಿಕ್ ಟಿವಿ ಜೊತೆ ಮಾತನಾಡಿರುವ ಅವರು, ಆಕೆಯ ಕುಟುಂಬಕ್ಕೆ ರಕ್ಷಣೆ ನೀಡುವ ಭರವಸೆ ನೀಡಿದರೆ ಸಾಕು ಇನ್ನೆರಡು ದಿನಗಳಲ್ಲಿ ಸಿಡಿ ಲೇಡಿ ಹೊರಗೆ ಬರುತ್ತಾರೆ. ಆದರೆ ಇಂದು ಪೊಲೀಸ್ ಆಯುಕ್ತರು ಭರವಸೆ ನೀಡಬೇಕು. ಯುವತಿ ಎರಡ್ಮೂರು ವೀಡಿಯೋಗಳನ್ನು ಬಿಡುಗಡೆ ಮಾಡಿದರೂ ಗೃಹ ಇಲಾಖೆ, ಎಸ್ಐಟಿ, ಪೊಲೀಸರು ಅವರ ಕುಟುಂಬಕ್ಕೆ ರಕ್ಷಣೆ ನೀಡಿಲ್ಲ. ಸಿಡಿ ಪ್ರಕರಣದ ಸಂಪೂರ್ಣ ವಿವರಗಳನ್ನು ಯುವತಿ ನೀಡಿದ್ದಾರೆ. ಅಲ್ಲದೆ ಎರಡು ಪುಟದ ದೂರನ್ನು ಸಹ ಕೈಯ್ಯಲ್ಲಿ ಬರೆದು ಕೊಟ್ಟಿದ್ದಾರೆ. ಇಂದು ನಮ್ಮ ವಕೀಲರ ತಂಡ ಅದನ್ನು ಕಬ್ಬನ್ ಪಾರ್ಕ್ ಪೊಲೀಸರಿಗೆ ನೀಡಲಿದೆ ಎಂದು ಅವರು ತಿಳಿಸಿದರು. ಇದನ್ನೂ ಓದಿ: ರೇಪ್ ಕೇಸ್ ಹಾಕಿದರೂ ಎದುರಿಸಲು ಸಿದ್ಧ: ರಮೇಶ್ ಜಾರಕಿಹೊಳಿ
ಎರಡು ಪುಟಗಳ ದೂರು ನೀಡಿದ್ದು, ಇದರಲ್ಲಿ ಜಾರಕಿಹೊಳಿ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಅನ್ನಿಸುತ್ತದೆ. ಭದ್ರತೆ ದೃಷ್ಟಿಯಿಂದ ಯುವತಿ ನನ್ನನ್ನು ಸಂಪರ್ಕಿಸಿ ಮಾತನಾಡಿದ್ದಾರೋ ಇಲ್ಲವೋ ಎಂಬುದನ್ನು ಹೇಳಲು ಸಾಧ್ಯವಿಲ್ಲ. ಆದರೆ ಆಕೆಯ ದೂರು ಸ್ಟ್ರಾಂಗ್ ಆಗಿದೆ. ಅತ್ಯಾಚಾರ ಕೇಸ್ ದಾಖಲಾಗುತ್ತೋ ಕಾದು ನೋಡಬೇಕಿದೆ. ಅಧಿಕಾರ ದುರ್ಬಳಕೆ ಪ್ರಕರಣವಂತೂ ದಾಖಲಾಗುತ್ತದೆ. ಯಾವ ರೀತಿಯ ಪ್ರಕರಣ ದಾಖಲಾಗುತ್ತೆ ಎಂದು ಈಗ ಹೇಳಲು ಸಾಧ್ಯವಿಲ್ಲ ಎಂದು ಜಗದೀಶ್ ವಿವರಿಸಿದರು.
ಕಿಂಗ್ ಪಿನ್, ಹನಿಟ್ರ್ಯಾಪ್, ದುಡ್ಡು ಹರಿದಾಟದ ಬಗ್ಗೆ ಪ್ರಸ್ತಾವನೆಯಾದರೆ ರಮೇಶ್ ಜಾರಕಿಹೊಳಿ ಇದಕ್ಕೆಲ್ಲ ಸ್ಪಷ್ಟನೆ ಕೊಡಲಿ. ಅಷ್ಟು ದುಡ್ಡು ಹೇಗೆ ಬಂತು ಎನ್ನುವುದರ ಬಗ್ಗೆ ಕೂಡ ಹೇಳಲಿ. ಸರ್ಕಾರ ಮಾಜಿ ಸಚಿವರ ರಕ್ಷಣೆಗೆ ನಿಂತಿದೆ ಅನ್ನೋದು ಸ್ಪಷ್ಟ ಎಂದು ಅವರು ತಿಳಿಸಿದರು.
ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಪ್ರಕರಣ ದಾಖಲಿಸಲು ಸಿ.ಡಿ.ಯಲ್ಲಿದ್ದ ಲೇಡಿ ಮುಂದಾಗಿದ್ದು, ತಮ್ಮ ಪರಿಚಿತ ವಕೀಲ ಜಗದೀಶ್ ಮೂಲಕ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿದ್ದಾರೆ. ಎರಡು ಪುಟಗಳ ದೂರಿನಲ್ಲಿ ಯುವತಿ ಈ ಪ್ರಕರಣ ಶುರುವಾಗಿದ್ದು ಹೇಗೆ, ಎಲ್ಲಿ ಏನೆಲ್ಲಾ ನಡೆಯಿತು ಎಂಬುದನ್ನು ವಿವರಿಸಿ ನನಗೆ ಹಾಗೂ ಕುಟುಂಬಸ್ಥರಿಗೆ ರಕ್ಷಣೆ ನೀಡಬೇಕು ಎಂದು ಮನವಿ ಮಾಡಿದ್ದಾರೆ.
ದೂರಿನ ಸಂಪೂರ್ಣ ವಿವರ
ಗೆ,
ಬೆಂಗಳೂರು ನಗರ ಪೊಲೀಸ್ ಆಯುಕ್ತರು ಇನ್ಫೆಂಟ್ರಿ ರಸ್ತೆ, ಬೆಂಗಳೂರು
ವಿಷಯ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಲೈಂಗಿಕ ಸಂರ್ಪ ಮಾಡಿ, ವಿಡಿಯೋ ಕರೆ ಮೂಲಕ ಅಶ್ಲೀಲ ಮಾತು, ನಗ್ನವಾಗಿ ಮಾತನಾಡಲು ಪುಸಲಾಯಿಸಿ ಕೆಲಸ ಕೊಡಿಸದೆ ವಂಚಿಸಿ ಜೀವ ಬೆದರಿಕೆ ಹಾಕಿರುವ ಬಗ್ಗೆ ದೂರು
ಮಾನ್ಯರೇ,
ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ನಾನು ಬೆಂಗಳೂರು ನಗರದಲ್ಲಿ ಉದ್ಯೋಗ ಹುಡುಕಿಕೊಂಡು ಬಂದು ನೆಲೆಸಿದ್ದು ಕಿರುಚಿತ್ರ ಮಾಡುವ ಸಲುವಾಗಿ ಸಚಿವರಾಗಿದ್ದ ರಮೇಶ್ ಜಾರಕಿಹೊಳಿ ಅವರನ್ನು ಒಮ್ಮೆ ಭೇಟಿ ಮಾಡಿದ್ದು ನಂತರ ಅವರು ನನ್ನ ಮೊಬೈಲ್ ನಂಬರ್ ಪಡೆದು ಕರೆ ಮಾಡುವುದಾಗಿ ತಿಳಿಸಿದರು. ನಂತರ ಅವರು ಕರೆ ಮಾಡಿ ನನ್ನ ಬಗ್ಗೆ ಕುಟುಂಬದ ಬಗ್ಗೆ ವಿಚಾರಿಸಿ ಸಲುಗೆ ಇಂದ ಮಾತನಾಡಲು ಆರಂಭಿಸಿದರು.
ಸಚಿವರು ನನ್ನನ್ನು ಅಷ್ಟು ಕಾಳಜಿಯಿಂದ ಮಾತನಾಡಿಸಿದ್ದು ನನಗೆ ತುಂಬಾ ಖುಷಿ ಆಗಿ ಅವರನ್ನು ಗೌರವದಿಂದ ಮಾತನಾಡಿಸಿದೆ. ಆಗಾಗ್ಗೆ ನನಗೆ ಕರೆ ಮಾಡಿ ಮಾತನಾಡಲು ಆರಂಭಿಸಿದರು. ನನಗೆ ತಮ್ಮ ಪ್ರಭಾವ ಬಳಸಿ ಸರ್ಕಾರಿ ನೌಕರಿ ಕೊಡಿಸುವುದಾಗಿ ಹೇಳಿದರು. ಆದರೆ ಸರ್ಕಾರಿ ನೌಕರಿ ಕೊಡಿಸುವ ಬದಲಾಗಿ ನೀನು ನನ್ನ ಜೊತೆ ಎಲ್ಲಾ ರೀತಿಯ ಸಹಕಾರ ನೀಡಬೇಕು ಎಂದು ಕೇಳಿದರು. ಅವರನ್ನು ಟಿವಿಗಳಲ್ಲಿ ನೋಡಿದ್ದು, ಮಂತ್ರಿ ಈ ರೀತಿ ಹೇಳಿದ ಮೇಲೆ ಕೆಲಸ ಕೊಟ್ಟೇ ಕೊಡಿಸುತ್ತಾರೆ ಎಂದು ನಂಬಿದೆ. ನನ್ನ ಬಳಿ ಕೊಡಲು ಲಕ್ಷಾಂತರ ಹಣ ಇಲ್ಲದೆ ಇರುವುದನ್ನು ಮುಂಚೆಯೇ ತಿಳಿದುಕೊಂಡು ಹಣದ ಬದಲು ಅವರ ಜೊತೆ ಸಹಕರಿಸಿ ಖುಷಿ ನೀಡಬೇಕು ಅಂತ ಕೇಳಿದ್ದರಿಂದ ನಂಬಿ ಅವರು ಕೇಳಿದಂತೆ ನಡೆದುಕೊಂಡು ಬಂದೆ. ಅವರು ದೆಹಲಿಯ ಕರ್ನಾಟಕ ಭವನದಲ್ಲಿ ಉಳಿದುಕೊಂಡಿದ್ದೇನೆ ಎಂದು ವಿಡಿಯೋ ಕರೆ ಮಾಡಿ ನನ್ನೊಂದಿಗೆ ಲೈಂಗಿಕ ವಿಚಾರಗಳನ್ನು ಮಾತನಾಡಿ ನನಗೆ ಬಟ್ಟೆ ತೆಗೆದು ನಗ್ನಳಾಗಿ ಖಾಸಗಿ ಅಂಗಾಂಗಗಳನ್ನು ತೋರಿಸುವಂತೆ ಕೇಳಿದರು. ನಾನು ಅವರು ಹೇಳಿದಂತೆಯೇ ಮಾಡಿದೆ.
ನಗ್ನವಾಗಿ ದೇಹದ ಗುಪ್ತ ಅಂಗಗಳನ್ನು ತೋರಿಸಿದೆ. ಅದಕ್ಕೆ ಅವರು ಅಶ್ಲೀಲವಾಗಿ ಮಾತನಾಡಿದರು. ಪ್ರಭಾವಿ ವ್ಯಕ್ತಿ ಆದ ಕಾರಣ ನಾನು ಅವರು ಹೇಳಿದಂತೆ ಮಾಡಿದೆ. ನಂತರ ಬೆಂಗಳೂರಿಗೆ ಬಂದು ನನ್ನ ನಿವಾಸಕ್ಕೆ ಬಾ… ಮಾತನಾಡಬೇಕು ನಿನ್ನ ಕೆಲಸದ ವಿಚಾರ ಎಂದರು. ನಾನು ಅವರು ಹೇಳಿದ ಅಪಾರ್ಟ್ಮೆಂಟಿಗೆ ಹೋದೆ. ಅವರು ನನ್ನೊಂದಿಗೆ ಅಶ್ಲೀಲವಾಗಿ ಮಾತನಾಡಿ ತಮ್ಮ ರೂಂಗೆ ಕರೆದುಕೊಂಡು ಹೋಗಿ ಬಟ್ಟೆ ತೆಗೆಸಿ ಲೈಂಗಿಕ ಕ್ರಿಯೆ ಮಾಡಿದರು, ಇದೇ ರೀತಿ 2 ಬಾರಿ ಅವರ ಅಪಾರ್ಟ್ಮೆಂಟ್ಗೆ ಕರೆಸಿ, ಲೈಂಗಿಕ ಕ್ರಿಯೆ ನಡೆಸಿ ಅಶ್ಲೀಲವಾಗಿ ಮಾತನಾಡಿರುತ್ತಾರೆ.
ನಾನು ಎದುರು ಮಾತನಾಡಲು ಹೆದರಿ ಅವರು ಕೇಳಿದಂತೆ ಮಾಡಿರುತ್ತೇನೆ. ನಂತರ ಸರ್ಕಾರಿ ನೌಕರಿ ಬಗ್ಗೆ ಕೇಳಿದಾಗ ಸ್ವಲ್ಪ ಹಣ ಬೇಕಾದರೆ ಕೇಳು. ಕೆಲಸದ ಕತೆ ಆಮೇಲೆ ನೋಡೋಣ ಎಂದು ಅವಾಯ್ಡ್ ಮಾಡುತ್ತಿದ್ದರು.
ನಾನು ಯಾವಾಗ ಅವರಿಗೆ ನನ್ನನ್ನು ಹೇಗೆ ಬೇಕೋ ಹಾಗೆ ಬಳಸಿಕೊಂಡು ಈಗ, ಯಾಕೆ ಕೆಲಸ ಕೊಡುತ್ತಿಲ್ಲ. ಎಂದು ಕೇಳಿದಾಗ ಬೈಯ್ದು ಕಳಿಸಿದರು. ಇದಾದ ನಂತರ ಅವರು ನನ್ನೊಂದಿಗೆ ಮಾತನಾಡಿದ ಮತ್ತು ಲೈಂಗಿಕ ಸಂಭೋಗ ನಡೆಸಿದ ಅಶ್ಲೀಲ ವಿಡಿಯೋ ಮಾಧ್ಯಮಗಳಲ್ಲಿ ಪ್ರಸಾರವಾಗಿದೆ. ನಾನು ಇವರ ವಿರುದ್ಧ ದೂರು ನೀಡದಂತೆ ಈ ರೀತಿ ಕುತಂತ್ರವನ್ನು ರಮೇಶ ಜಾರಕಿಹೊಳಿ ಮಾಡಿರುತ್ತಾರೆ. ಹಣವಂತರು, ಪ್ರಭಾವಿಗಳಾದ ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರಿಂದ ನನಗೂ ಮತ್ತು ನನ್ನ ಕುಟುಂಬದ ಸದಸ್ಯರಿಗೂ ಜೀವ ಬೆದರಿಕೆ ಇದೆ.
ನಾನು ದೂರು ನೀಡದಂತೆ ತಡೆಯಲು ಮತ್ತು ಅವರ ಕೈಗೆ ಸಿಕ್ಕರೆ ಕೊಂದು ಬಿಡಲು ಎಲ್ಲಾ ಪ್ರಯತ್ನ ಮಾಡುತ್ತಿದ್ದಾರೆ. ದಯಮಾಡಿ ತಾವು ನನಗೆ ಮತ್ತು ನನ್ನ ಕುಟುಂಬದ ಸದಸ್ಯರಿಗೆ ಭದ್ರತೆ ನೀಡಿ ನನ್ನನ್ನು ಲೈಂಗಿಕವಾಗಿ ಬಳಸಿಕೊಂಡು ಕೆಲಸ ಕೊಡಿಸದೇ ಮೋಸ ಮಾಡಿ ಅಶ್ಲೀಲವಾಗಿ ನಿಂದಿಸಿ ಕೊಲೆ ಮಾಡಿಸಲು ಪ್ರಯತ್ನ ಮಾಡುತ್ತಿರುವ ರಮೇಶ್ ಜಾರಕಿಹೊಳಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡುತ್ತೇನೆ. ನಾನು ನೇರವಾಗಿ ಯಾವ ಠಾಣೆಗೂ ಬಂದು ದೂರು ನೀಡದಂತೆ ಪೊಲೀಸ್ ಇಲಾಖೆಯನ್ನು ಬಳಸಿಕೊಳ್ಳುತ್ತಿದ್ದಾರೆ. ನನ್ನ ಪರವಾಗಿ ಯಾರೂ ಮಾತನಾಡದಂತೆ ತೇಜೋವಧೆ ಮಾಡ್ತಿದ್ದಾರೆ. ಹಾಗೂ ನನಗೆ ಸಹಾಯ ಮಾಡಿದವರಿಗೆ, ಮಾಡುತ್ತಿರುವವರಿಗೆ ಟಾರ್ಗೆಟ್ ಮಾಡಿ ಅವರ ಮನೆ ಮತ್ತು ಕುಟುಂಬಸ್ಥರಿಗೆ ಹಿಂಸೆ ಕೊಡುತ್ತಿರುವುದರಿಂದ ಬಹಳ ನೋವಾಗಿದೆ.
ನನಗೆ ಭದ್ರತೆ ಇಲ್ಲದ ಕಾರಣ ಕೈಯಲ್ಲಿ ಬರೆದು ಈ ದೂರನ್ನು ನನಗೆ ಪರಿಚಿತರಾದ ವಕೀಲರಾದ ಜಗದೀಶ್ ಅವರ ಮೂಲಕ ಕಳುಹಿಸುತ್ತಿದ್ದೇನೆ. ದಯವಿಟ್ಟು ನನಗೆ ಆಗುತ್ತಿರುವ ಮಾನಸಿಕ ಹಿಂಸೆ ಮತ್ತು ನನ್ನ ಕುಟುಂಬದ ಸದಸ್ಯರು ಎದುರಿಸುತ್ತಿರುವ ಒತ್ತಡ ಅವರನ್ನು ಆತ್ಮಹತ್ಯೆಗೆ ಯತ್ನಿಸುವಂತೆ ಮಾಡಿದ್ದು ತಾವು ರಮೇಶ್ ಜಾರಕಿಹೊಳಿ ಮತ್ತು ಅವರ ಕಡೆಯವರಿಂದ ನಮಗೆ ಯಾವುದೇ ಅಪಾಯವಾಗದಂತೆ ರಕ್ಷಣೆ ನೀಡಬೇಕೆಂದು ಕೈಮುಗಿದು ಪ್ರಾರ್ಥನೆ ಮಾಡುತ್ತೇನೆ.
ಬೆಂಗಳೂರು: ಇನ್ನೂ ಒಂದು ತಿಂಗಳು ಆದ ಬಳಿಕ ಆ ತಾಯಿ ಇನ್ನೇನು ಬಿಡುಗಡೆ ಮಾಡುತ್ತಾಳೋ ನೋಡೋಣ ಎಂದು ಆರೋಗ್ಯ ಸಚಿವ ಕೆ. ಸುಧಾಕರ್ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಸಿಡಿ ಲೇಡಿಯ 3ನೇ ವೀಡಿಯೋ ಹೇಳಿಕೆ ಬಿಡುಗಡೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಪ್ರಕರಣ ಆಗಿ ಎಷ್ಟು ದಿನ ಆಯ್ತು. ಒಂದು ತಿಂಗಳು ಆದ ಮೇಲೆ ಬಿಡುಗಡೆಯಾಗಿದೆ. ಇನ್ನೂ ಒಂದು ತಿಂಗಳು ಆದ ಮೇಲೆ ಆ ತಾಯಿ ಇನ್ನೇನು ಬಿಡುಗಡೆ ಮಾಡ್ತಾಳೆ ನೋಡೋಣ ಎಂದು ಹೇಳಿದ್ದಾರೆ.
ಈಗ ಎಸ್ಐಟಿ ತನಿಖೆ ನಡೆಯುತ್ತಿದೆ. ಈ ಹಂತದಲ್ಲಿ ಮಾತನಾಡೋದು ಸರಿಯಲ್ಲ. ಈ ಬಗ್ಗೆ ಮಾತಾಡಿದ್ರೆ ಹಿಂಟ್ ಬಿಟ್ಟು ಕೊಟ್ಟ ಹಾಗೆ ಆಗುತ್ತೆ. ತನಿಖೆ ಮುಗಿಯೋವರೆಗೂ ಈ ಬಗ್ಗೆ ಮಾತನಾಡದೇ ಇರೋದು ಉತ್ತಮ ಎಂದರು.
ಮಾಜಿ ಸಚಿವ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಡಿ ಲೇಡಿ ಇಂದು ತನ್ನ ಮೂರನೇ ವೀಡಿಯೋ ಹೇಳಿಕೆ ಬಿಡುಗಡೆ ಮಾಡಿ, ಕರ್ನಾಟಕದ ಜನತೆ, ತಂದೆ-ತಾಯಿಯರ ಆಶೀರ್ವಾದ, ಎಲ್ಲಾ ಪಕ್ಷದ ನಾಯಕರು ಹಾಗೂ ಎಲ್ಲಾ ಸಂಘಟನೆಯವರಿಂದ ನನಗೆ ತುಂಬಾನೇ ಬೆಂಬಲ ಸಿಗುತ್ತಿದೆ ಎಂದು ತಿಳಿಸಿದ್ದಾರೆ.
24 ದಿನದಿಂದ ನಾನು ಜೀವ ಭಯದಲ್ಲಿ ಬೆದರಿಕೆಗಳಿಂದ ಭಯ ಭಯದಲ್ಲಿ ಬದುಕ್ತಾ ಇದ್ದೇನೆ. ಆದರೆ ಇಂದು ಎಲ್ಲೋ ಕಡೆಯಿಂದ ಒಂದು ಧೈರ್ಯ ಬಂದಿದೆ. ಆ ಧೈರ್ಯ ಬಂದಿರೋದಕ್ಕೆ ಹಾಗೂ ನನ್ನನ್ನು ಎಲ್ಲರೂ ಬೆಂಬಲಿಸುತ್ತಾ ಇದ್ದೀರಾ ಅನ್ನೋ ಕಾರಣಕ್ಕೆ ಇಂದು ನಾನು ನನ್ನ ವಕೀಲರ ಮೂಲಕ ರಮೇಶ್ ಜಾರಕಿಹೊಳಿ ವಿರುದ್ಧ ದೂರು ಸಲ್ಲಿಸುತ್ತಿದ್ದೇನೆ ಎಂದು ಹೇಳಿದ್ದಾರೆ.
ಈ ಬೆನ್ನಲ್ಲೇ ಯುವತಿ ಪರ ವಕೀಲ ಜಗದೀಶ್ ಮಾತಾಡಿ, ಇಂದು ಮಧ್ಯಾಹ್ನ 2.30ಕ್ಕೆ ಪೊಲೀಸ್ ಸಮಿಷನರ್ ಅವರಿಗೆ ಯುವತಿಯ ಲಿಖಿತ ದೂರನ್ನು ನೀಡುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರು: ಮಾಜಿ ಸಚಿವರ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಧ್ಯಾಹ್ನ 2.30ಕ್ಕೆ ಪೊಲೀಸ್ ಕಮಿಷನರ್ ಗೆ ದೂರು ನೀಡುವುದಾಗಿ ಸಿಡಿ ಲೇಡಿ ಪರ ವಕೀಲ ಜಗದೀಶ್ ಹೇಳಿದ್ದಾರೆ.
ಪ್ರಕರಣ ಸಂಬಂಧ ಸಿಡಿ ಲೇಡಿ ಇಂದು ತನ್ನ ಮೂರನೇ ವೀಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಅದರಲ್ಲಿ ರಮೇಶ್ ಜಾರಕಿಹೊಳಿ ವಿರುದ್ಧ ಇಂದು ದೂರು ನೀಡುವುದಾಗಿ ತಿಳಿಸಿದ್ದಾರೆ. ಈ ಬೆನ್ನಲ್ಲೇ ವಕೀಲ ಜಗದೀಶ್ ಮಾತನಾಡಿ, ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರ ಎಸ್ಐಟಿಯನ್ನು ಸೆಟಪ್ ಮಾಡಿದೆ ಎಂದರು.
ಸಿಡಿಯಲ್ಲಿರುವ ಯುವತಿಯ ಕಾನೂನಿನ ರಕ್ಷಣೆಗೆ ನಾವು ಓಪನ್ ಅನೌನ್ಸ್ ಮೆಂಟ್ ಮಾಡಿದ್ದೀವಿ. ಆಕೆ ಕೂಡ ನನಗೆ ರಕ್ಷಣೆ ಬೇಕೆಂದು ಬಹಿರಂಗವಾಗಿಯೇ ಒಂದು ವೀಡಿಯೋ ಬಿಡುಗಡೆ ಮಾಡಿದ್ದಳು. ಇಂದು ಆಕೆಯೇ ಒಂದು ಲಿಖಿತ ದೂರು ಬರೆದು ಕಳುಹಿಸಿದ್ದಾಳೆ. ಅದನ್ನು ನಾವು ಬೆಂಗಳೂರು ಸಿಟಿ ಪೊಲೀಸ್ ಕಮಿಷನರ್ ಅವರಿಗೆ ಇಂದು ಮಧ್ಯಾಹ್ನ 2.30ಕ್ಕೆ ತಲುಪಿಸುತ್ತೇವೆ. ಅಲ್ಲದೆ ಅದರ ಮೇಲೆ ಕ್ರಮ ಜರುಗಿಸಲು ಒತ್ತಾಯಿಸುತ್ತೇವೆ ಅಂದ್ರು.
ಮುಂದೆ ಕಮಿಷನರ್ ಆಫೀಸ್ ನಲ್ಲಿ ಏನೇನು ಬೆಳವಣಿಗೆಗಗಳು ಆಗುತ್ತವೆ ಎಂಬುದನ್ನು ನಿಮಗೆ ತಿಳಿಸುತ್ತೇವೆ. ಆಕೆಯ ಪೋಷಕರಿಗೂ ರಕ್ಷಣೆ ನೀಡಬೇಕು ಎಂದು ಕೇಳಿಕೊಂಡಿದ್ದಾಳೆ. ಹೀಗಾಗಿ ಇನ್ನೆರಡು ದಿನಗಳಲ್ಲಿ ಪೊಲೀಸರು, ಎಸ್ಐಟಿ ಹಾಗೂ ಯಡಿಯೂರಪ್ಪ ಸರ್ಕಾರ ಆಕೆಗೆ ನ್ಯಾಯ ಕೊಡುತ್ತೆ ಅಂತ ಭಾವಿಸುತ್ತೇವೆ. ಅಲ್ಲದೆ ಆಕೆಗೆ ರಕ್ಷಣೆ ಕೊಟ್ಟರೆ ಆಕೆಯೇ ಪೊಲೀಸರ ಮುಂದೆ ಬಂದು ಹೇಳಿಕೆ ದಾಖಲಿಸುತ್ತಾಳೆ ಎಂದು ವಕೀಲ ಜಗದೀಶ್ ತಿಳಿಸಿದ್ದಾರೆ.
ಸಿಡಿ ಲೇಡಿ ಇಂದು ಹೇಳಿದ್ದೇನು..?
ಕರ್ನಾಟಕದ ಜನತೆ, ತಂದೆ-ತಾಯಿಯರ ಆಶೀರ್ವಾದ, ಎಲ್ಲಾ ಪಕ್ಷದ ನಾಯಕರು ಹಾಗೂ ಎಲ್ಲಾ ಸಂಘಟನೆಯವರಿಂದ ನನಗೆ ತುಂಬಾನೇ ಬೆಂಬಲ ಸಿಗುತ್ತಿದೆ. 24 ದಿನದಿಂದ ನಾನು ಜೀವ ಭಯದಲ್ಲಿ ಬೆದರಿಕೆಗಳಿಂದ ಭಯ ಭಯದಲ್ಲಿ ಬದುಕ್ತಾ ಇದ್ದೇನೆ. ಆದರೆ ಇಂದು ಎಲ್ಲೋ ಕಡೆಯಿಂದ ಒಂದು ಧೈರ್ಯ ಬಂದಿದೆ. ಆ ಧೈರ್ಯ ಬಂದಿರೋದಕ್ಕೆ ಹಾಗೂ ನನ್ನನ್ನು ಎಲ್ಲರೂ ಬೆಂಬಲಿಸುತ್ತಾ ಇದ್ದೀರಾ ಅನ್ನೋ ಕಾರಣಕ್ಕೆ ಇಂದು ನಾನು ನನ್ನ ವಕೀಲರ ಮೂಲಕ ರಮೇಶ್ ಜಾರಕಿಹೊಳಿ ವಿರುದ್ಧ ದೂರು ಸಲ್ಲಿಸುತ್ತಿದೇನೆ ಎಂದು ಸಿಡಿ ಲೇಡಿ ಹೇಳಿದ್ದಾರೆ.
ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಜ್ಞಾತ ವಾಸದಲ್ಲಿರುವ ಸಿಡಿ ಲೇಡಿ ಇದೀಗ ಇಂದು ಮತ್ತೊಂದು ವೀಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ.
ವೀಡಿಯೋದಲ್ಲಿ ಕರ್ನಾಟಕದ ಜನತೆ, ತಂದೆ-ತಾಯಿಯರ ಆಶೀರ್ವಾದ, ಎಲ್ಲಾ ಪಕ್ಷದ ನಾಯಕರು ಹಾಗೂ ಎಲ್ಲಾ ಸಂಘಟನೆಯವರಿಂದ ನನಗೆ ತುಂಬಾನೇ ಬೆಂಬಲ ಸಿಗುತ್ತಿದೆ ಎಂದು ತಿಳಿಸಿದ್ದಾರೆ.
24 ದಿನದಿಂದ ನಾನು ಜೀವ ಭಯದಲ್ಲಿ ಬೆದರಿಕೆಗಳಿಂದ ಭಯ ಭಯದಲ್ಲಿ ಬದುಕ್ತಾ ಇದ್ದೇನೆ. ಆದರೆ ಇಂದು ಎಲ್ಲೋ ಕಡೆಯಿಂದ ಒಂದು ಧೈರ್ಯ ಬಂದಿದೆ. ಆ ಧೈರ್ಯ ಬಂದಿರೋದಕ್ಕೆ ಹಾಗೂ ನನ್ನನ್ನು ಎಲ್ಲರೂ ಬೆಂಬಲಿಸುತ್ತಾ ಇದ್ದೀರಾ ಅನ್ನೋ ಕಾರಣಕ್ಕೆ ಇಂದು ನಾನು ನನ್ನ ವಕೀಲರ ಮೂಲಕ ರಮೇಶ್ ಜಾರಕಿಹೊಳಿ ವಿರುದ್ಧ ದೂರು ಸಲ್ಲಿಸುತ್ತಿದೇನೆ ಎಂದು ಸಿಡಿ ಲೇಡಿ ಹೇಳಿದ್ದಾರೆ.
ನಿನ್ನೆಯಷ್ಟೇ ವೀಡಿಯೋ ಬಿಡುಗಡೆ ಮಾಡಿರುವ ಈಕೆ, ನಮ್ಮ ಅಪ್ಪ, ಅಮ್ಮ ಸ್ವ-ಇಚ್ಛೆಯಿಂದ ದೂರು ನೀಡಿಲ್ಲ ಅನ್ನೋದು ನನಗೆ ನೂರಕ್ಕೆ ನೂರರಷ್ಟು ಗೊತ್ತು. ಮಗಳು ತಪ್ಪು ಮಾಡಿಲ್ಲ ಅನ್ನೋದು ಪೋಷಕರಿಗೆ ಗೊತ್ತಿದೆ. ನನಗೆ ಅಪ್ಪ, ಅಮ್ಮನ ಸುರಕ್ಷತೆ ಮುಖ್ಯ. ಅವರು ಸೇಫ್ ಆಗಿದ್ದರೆ ಅನ್ನೋದು ಖಾತ್ರಿಯಾದಾಗ ಎಸ್ಐಟಿ ಮುಂದೆ ಬಂದು ಹೇಳಿಕೆ ದಾಖಲಿಸುತ್ತೇನೆ ಎಂದಿದ್ದರು.
ಎಸ್ಐಟಿ ಯಾರ ಪರ?:
ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ರಮೇಶ್ ಕುಮಾರ್ ಮತ್ತು ಮಹಿಳಾ ಸಂಘಟನೆಗಳು ನಮ್ಮ ತಂದೆ-ತಾಯಿಗೆ ರಕ್ಷಣೆ ಕೊಡಬೇಕೆಂದು ಕೇಳಿಕೊಳ್ಳುತ್ತೇನೆ. ನನಗೆ ನ್ಯಾಯ ಸಿಗುತ್ತೆ ಅನ್ನೋ ನಂಬಿಕೆ ಇದೆ. ನಾನು ಮಾರ್ಚ್ 12 ರಂದು ವೀಡಿಯೋ ಹೇಳಿಕೆಯನ್ನ ಎಸ್ಐಟಿಗೆ ನೀಡಿದ್ದೆ. ಮಾರ್ಚ್ 13ರಂದು ರಮೇಶ್ ಜಾರಕಿಹೊಳಿ ಅವರು ದೂರು ದಾಖಲಿಸಿದ ಅರ್ಧ ಗಂಟೆಯಲ್ಲಿ ನನ್ನ ವೀಡಿಯೋ ಹೊರಗೆ ಬಿಡುತ್ತಾರೆ. ಎಸ್ಐಟಿ ಯಾರ ಪರ ಕೆಲಸ ಮಾಡುತ್ತಿದ್ದಾರೆ ಅನ್ನೋದು ಅರ್ಥ ಆಗ್ತಿಲ್ಲ. ಅಧಿಕಾರಿಗಳು ಯಾರನ್ನ ಸೇಫ್ ಮಾಡುತ್ತಿದ್ದಾರೆ ಅನ್ನೋದು ಗೊತ್ತಾಗುತ್ತಿಲ್ಲ ಎಂದು ಎಸ್ಐಟಿ ತನಿಖೆ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು.
ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿ ಎರಡನೇ ವೀಡಿಯೋ ಹೇಳಿಕೆ ಕುರಿತು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ. ಯುವತಿ ಯಾರದ್ದೋ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದು, ಇಂತಹ 10 ವೀಡಿಯೋ ಬರಲಿ ನಾನು ಹೆದರಲ್ಲ ಎಂದು ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
ಇಂದು ತಮ್ಮ ನಿವಾಸದ ಬಳಿ ಮಾಧ್ಯಮಗಳ ಜೊತೆ ಮಾತನಾಡಿದ ರಮೇಶ್ ಜಾರಕಿಹೊಳಿ, ಇದೊಂದು ದೊಡ್ಡ ಷಡ್ಯಂತ್ರವಾಗಿದ್ದು, ರಾಜಕೀಯವಾಗಿ ಎದುರಿಸಲು ಸಿದ್ಧನಿದ್ದೇನೆ. ನಾನು ದೂರು ನೀಡಿದ ಅರ್ಧ ಗಂಟೆ ನಂತ್ರ ವೀಡಿಯೋ ಬಂದಿರೋದು ಎಲ್ಲರಿಗೂ ಗೊತ್ತು. ಈ ರೀತಿಯ 10 ವೀಡಿಯೋಗಳು ಬಂದ್ರೂ ಎದುರಿಸುವ ಶಕ್ತಿ ನನ್ನಲಿದೆ ಎಂದರು.
ಒತ್ತಡದಲ್ಲಿ ಯುವತಿ: ಯುವತಿ ಯಾರ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾಳೆ ಎಂಬುದರ ಬಗ್ಗೆ ನಾವು ಖಾಸಗಿಯಾಗಿ ತನಿಖೆ ಮಾಡುತ್ತಿದ್ದು, ನಮ್ಮ ವಕೀಲರು ಮಾಹಿತಿ ಜೊತೆಯಲ್ಲಿ ಅಪಾರ ಪ್ರಮಾಣದ ದಾಖಲೆಗಳನ್ನ ಸಂಗ್ರಹಿಸಿದ್ದಾರೆ. ಪ್ರಕರಣ ಸಂಬಂಧ ಹೇಳಿಕೆ ನೀಡಬಾರದು ಎಂದು ವಕೀಲರು ಸೂಚನೆ ನೀಡಿದ್ದಾರೆ. ಆದ್ರೆ ಇಂದು ಸ್ಪಷ್ಟನೆ ನೀಡೋದು ಅನಿವಾರ್ಯ. ಆ ಯುವತಿ ಎಷ್ಟು ಒತ್ತಡದಲ್ಲಿದ್ದಾಳೆ ಅನ್ನೋದು ವೀಡಿಯೋದಲ್ಲಿ ಕಾಣುತ್ತಿದೆ.
ನಿರ್ದೋಷಿ ಆಗಿ ಬರುತ್ತೇನೆ: ನಾನು ಮಾತ್ರ ಯಾವುದೇ ತಪ್ಪು ಮಾಡಿಲ್ಲ. ಅವರನ್ನ ಜೈಲಿಗೆ ಕಳುಹಿಸದೇ ಬಿಡಲ್ಲ. ವೀಡಿಯೋದಲ್ಲಿ ಹೇಳುವ ಯುವತಿ ಪೊಲೀಸರ ಮುಂದೆ ಬಂದು ಹೇಳಲಿ. ಕಾಂಗ್ರೆಸ್ ನಾಯಕರ ಸಹಕಾರ ಕೇಳ್ತಾರೆ ಅಂದ್ರೆ ಇದರಲ್ಲಿರುವ ಷಡ್ಯಂತ್ರ ಅರ್ಥವಾಗಬೇಕಿದೆ. ನಾವು ಸಹ ಹಲವು ದಾಖಲೆ ಸಂಗ್ರಹಿಸಿದ್ದು, ಸದ್ಯ ನನ್ನ ಜೇಬಿನಲ್ಲಿರೋ ದಾಖಲೆ ತೋರಿಸಿದ್ರೆ ಎಲ್ಲರೂ ಶಾಕ್ ಆಗ್ತಾರೆ. ಮಹಾ ನಾಯಕನ ಬಗ್ಗೆ ಮುಂದಿನ ದಿನಗಳಲ್ಲಿ ಎಲ್ಲವೂ ಗೊತ್ತಾಗಲಿದೆ. ಆದ್ರೆ ನಾನು ಕಾನೂನು ಹೋರಾಟ ನಡೆಸಿ ನಿರ್ದೋಷಿ ಆಗಿ ಬರುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಧ್ವನಿ ಬದಲಾವಣೆ ಗಮನಿಸಿ: ಸಿಡಿ ಯುವತಿ ಮೊದಲ ಮತ್ತು ಎರಡನೇ ವೀಡಿಯೋದಲ್ಲಿ ಧ್ವನಿ ಹೇಗಿತ್ತು ಅನ್ನೋದನ್ನ ಗಮನಿಸಿ. ಸಮಯ ಬಂದಾಗ ನಾನು ನನ್ನ ಬಳಿ ಇರೋ ದಾಖಲಾತಿ ಬಿಡುಗಡೆ ಮಾಡ್ತೀನಿ. ಮೊನ್ನೆವರೆಗೂ ವಿಪಕ್ಷಗಳು ಹಾಗೂ ಸಿದ್ದರಾಮಯ್ಯ ಬಗ್ಗೆ ನನಗೆ ಅಪಾರಗೌರವ ಇತ್ತು. ರೇಪ್ ಕೇಸ್ ಹಾಕಿ ಅಂತ ಹೇಳಿದಾಗ ನನಗೂ ಒಂದು ಕ್ಷಣ ಶಾಕ್ ಆಯ್ತು. ಯಾಕೆ ಅವರು ಹಾಗೆ ಹೇಳಿದ್ರೂ ಅನ್ನೋದು ಗೊತ್ತಿಲ್ಲ. ದೇವರು ಅವರಿಗೆ ಒಳ್ಳೆಯದು ಮಾಡಲಿ ಎಂದು ಸದನದಲ್ಲಿ ಕಾಂಗ್ರೆಸ್ ಧರಣಿಗೆ ಅಸಮಾಧಾನ ಹೊರ ಹಾಕಿದರು.
ಯುವತಿ ಹೇಳಿದ್ದೇನು?: ನಮ್ಮ ಅಪ್ಪ, ಅಮ್ಮ ಸ್ವಇಚ್ಛೆಯಿಂದ ದೂರು ನೀಡಿಲ್ಲ ಅನ್ನೋದು ನನಗೆ ನೂರಕ್ಕೆ ನೂರರಷ್ಟು ಗೊತ್ತು. ಮಗಳು ತಪ್ಪು ಮಾಡಿಲ್ಲ ಅನ್ನೋದು ಪೋಷಕರಿಗೆ ಗೊತ್ತಿದೆ. ನನಗೆ ಅಪ್ಪ, ಅಮ್ಮನ ಸುರಕ್ಷತೆ ಮುಖ್ಯ. ಅವರು ಸೇಫ್ ಆಗಿದ್ದರೆ ಅನ್ನೋದು ಖಾತ್ರಿಯಾದಾಗ ಎಸ್ಐಟಿ ಮುಂದೆ ಬಂದು ಹೇಳಿಕೆ ದಾಖಲಿಸುತ್ತೇನೆ.
ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ರಮೇಶ್ ಕುಮಾರ್ ಮತ್ತು ಮಹಿಳಾ ಸಂಘಟನೆಗಳು ನಮ್ಮ ತಂದೆ-ತಾಯಿಗೆ ರಕ್ಷಣೆ ಕೊಡಬೇಕೆಂದು ಕೇಳಿಕೊಳ್ಳುತ್ತೇನೆ. ನನಗೆ ನ್ಯಾಯ ಸಿಗುತ್ತೆ ಅನ್ನೋ ನಂಬಿಕೆ ಇದೆ. ನಾನು ಮಾರ್ಚ್ 12 ರಂದು ವೀಡಿಯೋ ಹೇಳಿಕೆಯನ್ನ ಎಸ್ಐಟಿಗೆ ನೀಡಿದ್ದೆ. ಮಾರ್ಚ್ 13ರಂದು ರಮೇಶ್ ಜಾರಕಿಹೊಳಿ ಅವರು ದೂರು ದಾಖಲಿಸಿದ ಅರ್ಧ ಗಂಟೆಯಲ್ಲಿ ನನ್ನ ವೀಡಿಯೋ ಹೊರಗೆ ಬಿಡುತ್ತಾರೆ. ಎಸ್ಐಟಿ ಯಾರ ಪರ ಕೆಲಸ ಮಾಡುತ್ತಿದ್ದಾರೆ ಅನ್ನೋದು ಅರ್ಥ ಆಗ್ತಿಲ್ಲ. ಅಧಿಕಾರಿಗಳು ಯಾರನ್ನ ಸೇಫ್ ಮಾಡುತ್ತಿದ್ದಾರೆ ಅನ್ನೋದು ಗೊತ್ತಾಗುತ್ತಿಲ್ಲ ಎಂದು ಎಸ್ಐಟಿ ತನಿಖೆ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹಣದ ವಹಿವಾಟಿನ ಬಗ್ಗೆ ತನಿಖೆ ನಡೆಸಿ ಎಂದು ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳಿಗೆ ಕಾಂಗ್ರೆಸ್ ದೂರು ನೀಡಿದೆ.
ಕಾಂಗ್ರೆಸ್ ಮುಖಂಡ ಮನೋಹರ್ ಅವರು ಶಾಂತಿ ನಗರದಲ್ಲಿರುವ ಇಡಿ ಕಚೇರಿಯಲ್ಲಿ ದೂರು ನೀಡಿದ್ದಾರೆ. ದೂರಿನಲ್ಲಿ ರಾಸಲೀಲೆ ಸಿಡಿ ಪ್ರಕರಣದಲ್ಲಿ ಕೋಟ್ಯಂತರ ರೂಪಾಯಿ ಹಣದ ವಹಿವಾಟು ನಡೆದಿರೋ ಬಗ್ಗೆ ತನಿಖೆ ನಡೆಸಬೇಕು. ಅಕ್ರಮ ಹಣ ವರ್ಗಾವಣೆ ಕಾಯ್ದೆ ಅಡಿಯಲ್ಲಿ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ಒಟ್ಟಿನಲ್ಲಿ ಸಿಡಿ ಪ್ರಕರಣದ ತನಿಖೆ ಮುಂದುವರಿದಿದೆ. ಸೋಮವಾರ ಸಂಜೆ ಬೆಳಗಾವಿಯ ಗೌಪ್ಯ ಸ್ಥಳದಲ್ಲಿ ಸಿಡಿ ಲೇಡಿ ಪೋಷಕರನ್ನು ಎಸ್ಐಟಿ ವಿಚಾರಣೆಗೆ ಒಳಪಡಿಸಿದೆ. ಆದರೆ ಅವರಿಂದ ಹೆಚ್ಚಿನ ಮಾಹಿತಿಯನ್ನು ಎಸ್ಐಟಿಗೆ ಪಡೆಯಲು ಆಗಿಲ್ಲ. ಕಳೆದ ವಾರ ಬೆಳಗಾವಿಯ ಎಪಿಎಂಸಿ ಠಾಣೆಯಲ್ಲಿ ನೀಡಿದ ದೂರಿನ ಅಂಶಗಳನ್ನು ಬಿಟ್ಟು ಬೇರೇನನ್ನು ಪೋಷಕರು ಹೇಳಿಲ್ಲ. ಆದರೆ ಮಾರ್ಚ್ 5ರ ನಂತರ ಮಗಳು ನಮ್ಮ ಸಂಪರ್ಕಕ್ಕೆ ಬಂದಿಲ್ಲ. ಮಗಳು ಅಪಾಯದಲ್ಲಿದ್ದಾಳೆ. ಅವರನ್ನು ಆದಷ್ಟು ಬೇಗ ಕಾಪಾಡಿ ಎಂಬ ಮಾತನ್ನು ಮಾತ್ರ ಪೋಷಕರು ಹೇಳಿದ್ದಾರೆ ಎನ್ನಲಾಗಿದೆ.
ಇಂದು ಕೂಡ ಸಿಡಿ ಲೇಡಿ ವಿಚಾರಣೆಗೆ ಬಾರದ ಹಿನ್ನೆಲೆಯಲ್ಲಿ ಎಸ್ಐಟಿ ಐದನೇ ಬಾರಿಗೆ ನೋಟಿಸ್ ಜಾರಿ ಮಾಡಿದೆ. ವಿಚಾರಣೆಗೆ ಬನ್ನಿ ಎಂದು ಆಕೆಯ ವಾಟ್ಸಪ್ ನಂಬರ್, ಇ-ಮೇಲ್ ಖಾತೆಗೆ ನೋಟಿಸ್ ಕಳಿಸಿದ್ದಾರೆ. ಶಂಕಿತ ಸಿಡಿಕೋರರ ಸುಳಿವು ಪೊಲೀಸರಿಗೆ ಇನ್ನೂ ಕೂಡ ಸಿಕ್ಕಿಲ್ಲ. ದಿನಕ್ಕೊಂದು ಜಾಗ ಬದಲಿಸ್ತಿದ್ದಾರೆ. ಮೊನ್ನೆ ದೆಹಲಿ, ನಿನ್ನೆ ಲಖನೌನ ಪಂಚತಾರಾ ಹೋಟೆಲ್ನಲ್ಲಿ ಉಳಿದುಕೊಂಡಿದ್ರು. ಎಸ್ಐಟಿ ಸ್ಥಳಕ್ಕೆ ಹೋಗೋದ್ರೊಳಗೆ ಅವರು ಜಾಗ ಬದಲಿಸ್ತಿದ್ದಾರೆ ಎಂದು ತಿಳಿದುಬಂದಿದೆ. ಮತ್ತೊಂದ್ಕಡೆ ಸಿಡಿ ತನಿಖೆಯ ಪ್ರಗತಿಯ ಬಗ್ಗೆ ಗೃಹ ಸಚಿವರಿಗೆ ಎಸ್ಐಟಿ ಮುಖ್ಯಸ್ಥ ಸೌಮೆಂದು ಮುಖರ್ಜಿ ಮತ್ತು ಜಂಟಿ ಆಯುಕ್ತ ಸಂದೀಪ್ ಪಾಟೀಲ್ ವರದಿ ಒಪ್ಪಿಸಿದ್ದಾರೆ.
ಮೈಸೂರು: ಸದ್ಯ ಪ್ರಚಲಿತದಲ್ಲಿರುವ ವಿಚಾರವೆಂದರೆ ಮಾಜಿ ಸಚಿವರ ಸಿಡಿ ಪ್ರಕರಣ. ಇದೀಗ ಈ ಸಂಬಂಧ ಸಿನಿಮಾ ಕೂಡ ಆಗಲಿದ್ದು, ಈಗಾಗಲೇ ಟೈಟಲ್ ಕೂಡ ರಿಜಿಸ್ಟರ್ ಆಗಿದೆ.
ಹೌದು. ‘ಸಿಡಿ ಲೇಡಿ’ ಹೆಸರಿನಲ್ಲಿ ಟೈಟಲ್ ರಿಜಿಸ್ಟರ್ ಮಾಡಿಸಿರುವುದಾಗಿ ನಿರ್ಮಾಪಕ ಸಂದೇಶ್ ನಾಗರಾಜ್ ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಒಂದು ಸಿನಿಮಾ ಆಗಿ ಹೊರಹೊಮ್ಮಲಿದೆ.
ಈ ಸಂಬಂಧ ಪ್ರತಿಕ್ರಿಯಿಸಿರುವ ಸಂದೇಶ್, ಸಿಡಿ ಲೇಡಿ ಹೆಸರಿನಲ್ಲಿ ಟೈಟಲ್ ರಿಜಿಸ್ಟರ್ ಮಾಡಿಸಿದ್ದೇನೆ. ಕಥೆ ಚಿತ್ರಕಥೆ ಇನ್ನೂ ಸಿದ್ಧವಾಗಿಲ್ಲ. ಯಾವಾಗ ಸೆಟ್ಟೇರುತ್ತದೆ ಅನ್ನೋ ಬಗ್ಗೆಯೂ ನಿರ್ಧರಿಸಿಲ್ಲ. ಮುಂದೆ ಈ ಎಲ್ಲಾ ವಿಚಾರಗಳು ಫೈನಲ್ ಆಗಲಿದೆ ಎಂದು ಮಾಹಿತಿ ನೀಡಿದ್ದಾರೆ.
ನಿನ್ನೆಯಷ್ಟೇ ಸಂದೇಶ್ ಫಿಲಂಸ್ ಈ ಸಂಬಂಧ ಅರ್ಜಿ ಸಲ್ಲಿಸಿದ್ದು, ಸಿಡಿ ಲೇಡಿ ಶೀರ್ಷಿಕೆ ನೀಡಬೇಕೆಂದು ಮನವಿ ಮಾಡಿಕೊಂಡಿತ್ತು. ಯಾವುದೇ ಟೈಟಲ್ ರಿಜಿಸ್ಟರ್ ಆಗಬೇಕಾದರೆ ಫಿಲ್ಮ್ ಚೇಂಬರ್ ನಲ್ಲಿ ಸಭೆ ಕರೆದು ಪರ ವಿರೋಧ ಒಳಿತು ತೀರ್ಮಾನಿಸಿ ಒಕ್ಕೊರಲಿನ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ.
ಸಂದೇಶ್ ನಾಗರಾಜ್ ಸಿನಿಮಾ ನಿರ್ಮಾಣಗಳ ಜೊತೆಯಲ್ಲಿ ರಾಜಕಾರಣದಲ್ಲಿ ಗುರುತಿಸಿಕೊಂಡಿದ್ದಾರೆ. ಈ ಹಿಂದೆಯೂ ಇದೇ ರೀತಿಯ ಪ್ರಕರಣಗಳು ವರದಿಯಾದಾಗ ಮಾಧ್ಯಮಗಳಲ್ಲಿ ಹೆಚ್ಚು ಬಳಕೆಯಾದ ಪದಗಳನ್ನ ಶೀರ್ಷಿಕೆ ನೀಡುವಂತೆ ಹಲವರು ಅರ್ಜಿ ಸಲ್ಲಿಸಿದ್ದರು.