Tag: CD Lady

  • ದೂರು ಕೊಟ್ಟು ಸಿಡಿ ಯುವತಿ ಪೋಷಕರು ನಾಪತ್ತೆ..!

    ದೂರು ಕೊಟ್ಟು ಸಿಡಿ ಯುವತಿ ಪೋಷಕರು ನಾಪತ್ತೆ..!

    ಬೆಳಗಾವಿ: ಮಾಜಿ ಸಚಿವರ ರಾಸಲೀಲೆ ಸಿಡಿ ಕೇಸ್ ದಿನದಿಂದ ದಿನಕ್ಕೆ ಸ್ಫೋಟಕ ತಿರುವು ಪಡೆದುಕೊಳ್ಳುತ್ತಿದ್ದು, ಇದೀಗ ನಿನ್ನೆ ತಾನೇ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದ ಸಿಡಿ ಯುವತಿ ಪೋಷಕರು ನಾಪತ್ತೆಯಾಗಿದ್ದಾರೆ.

    ಹೌದು. ಮಂಗಳವಾರ ರಾತ್ರಿ ದೂರು ಕೊಟ್ಟ ಬಳಿಕ ಪೋಷಕರು ನಾಪತ್ತೆಯಾಗಿದ್ದಾರೆ. ಇದಕ್ಕೂ ಮೊದಲು 2 ದಿನಗಳ ಹಿಂದೆಯೇ ಮನೆ ಮಾಲೀಕನಿಗೆ ಬಾಡಿಗೆ ನೀಡಿರುವ ಯುವತಿ ಪೋಷಕರು ಮನೆ ಖಾಲಿ ಮಾಡಿದ್ದಾರೆ.

    ನಿನ್ನೆ ಸಿಡಿಯಲ್ಲಿದ್ದ ಮಗಳು ಕಿಡ್ನಾಪ್ ಆಗಿದ್ದಾಳೆ ಎಂದು ಯುವತಿಯ ತಂದೆ ಬೆಳಗಾವಿಯ ಎಪಿಎಂಸಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಯುವತಿಯ ತಂದೆ, ತಾಯಿ ಮತ್ತು ಇಬ್ಬರು ಸಹೋದರರು, ಓರ್ವ ವಕೀಲರೊಂದಿಗೆ ಆಗಮಿಸಿ ನಿನ್ನೆ ದೂರು ನೀಡಿದ್ದಾರೆ. ಆದರೆ ದೂರಿನ ಪ್ರತಿಯಲ್ಲಿ ನೀಡಿದ ವಿಳಾಸದಲ್ಲಿದ್ದ ಮನೆಯಿಂದ ಎರಡು ದಿನಗಳ ಹಿಂದೆಯೇ ಯುವತಿ ತಂದೆ ತೆರಳಿದ್ದಾರೆ.

    ಯುವತಿ ಕುಟುಂಬ ಬೆಳಗಾವಿಯ ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯಲ್ಲಿ ವಾಸವಿತ್ತು. ಆದರೆ ನಿನ್ನೆ ದೂರು ನೀಡಿ ಕುಟುಂಬ ಅಜ್ಞಾತವಾಗಿದೆ. ಇತ್ತ ಪೋಷಕರ ದೂರಿನಂತೆ ಯುವತಿ ಕಿಡ್ನ್ಯಾಪ್ ಕೇಸ್ ತನಿಖೆ ನಡೆಸಲು ವಿಶೇಷ ತಂಡ ರಚನೆ ಮಾಡಲಾಗಿದೆ. ಎಪಿಎಂಸಿ ಠಾಣೆ ಸಿಪಿಐ ಜಾವೇದ್ ಮುಷಾಪುರಿ ನೇತೃತ್ವದಲ್ಲಿ ವಿಶೇಷ ತಂಡ ರಚನೆಯಾಗಿದ್ದು, ಯುವತಿ ತಂದೆ ನೀಡಿದ ದೂರಿನ ಮೇರೆಗೆ ಪೊಲೀಸರು ತನಿಖೆ ಕೈಗೊಳ್ಳಲಿದ್ದಾರೆ.

    ಸದ್ಯ ಪೊಲೀಸರು ಅಪರಿಚಿತನ ವಿರುದ್ಧ ಕೇಸ್ ದಾಖಲಿಸಿಕೊಂಡಿದ್ದು, ಯುವತಿ ಪೋಷಕರಿಗೆ ಯಾರ ಮೇಲೆ ಸಂಶಯವಿದೆ ಎಂಬ ಬಗ್ಗೆ ವಿಚಾರಣೆ ನಡೆಸಲಿದ್ದಾರೆ. ಮಾರ್ಚ್ 2ರಂದು ರಾತ್ರಿ 12 ರಿಂದ 1 ಗಂಟೆ ಮಧ್ಯೆ ಮಗಳನ್ನು ಬೆಂಗಳೂರಿನ ಹಾಸ್ಟೆಲ್‍ನಿಂದ ಕಿಡ್ನಾಪ್ ಮಾಡಿದ್ದಾರೆ. ಅಕ್ರಮ ಬಂಧನದಲ್ಲಿಟ್ಟು ಹೆದರಿಸಿ ಅಶ್ಲೀಲ ಸಿಡಿ ಮಾಡಿ ಹರಿಬಿಟ್ಟ ಆರೋಪಿಸಿ ಯುವತಿ ತಂದೆ ದೂರಿನಲ್ಲಿ ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಅಪರಿಚಿತರ ವಿರುದ್ಧ ಕೇಸ್ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

  • ರಾಸಲೀಲೆ ಪ್ರಕರಣಕ್ಕೂ ನನಗೂ ಸಂಬಂಧ ಇಲ್ಲ: ದಿನೇಶ್ ಕಲ್ಲಳ್ಳಿ

    ರಾಸಲೀಲೆ ಪ್ರಕರಣಕ್ಕೂ ನನಗೂ ಸಂಬಂಧ ಇಲ್ಲ: ದಿನೇಶ್ ಕಲ್ಲಳ್ಳಿ

    – ಎಸ್‍ಐಟಿ ವಶಕ್ಕೆ ಪಡೆದವರು ನನಗೆ ಸಿಡಿ ಕೊಟ್ಟಿಲ್ಲ

    ಬೆಂಗಳೂರು: ಮಾಜಿ ಸಚಿವರ ರಾಸಲೀಲೆ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಸಾಮಾಜಿಕ ಹೋರಾಟಗಾರ ದಿನೇಶ್ ಕಲ್ಲಹಳ್ಳಿ ಪಬ್ಲಿಕ್ ಟಿವಿಗೆ ಹೇಳಿದ್ದಾರೆ.

    ಪಬ್ಲಿಕ್ ಟಿವಿ ಜೊತೆ ಮಾತನಾಡಿರುವ ದಿನೇಶ್ ಕಲ್ಲಹಳ್ಳಿ, ನಿನ್ನೆ ವಿಚಾರಣೆ ನಡೆಸಿದವರಲ್ಲಿ ಓರ್ವ ಮಾತ್ರ ಪರಿಚಯ. ಆದ್ರೆ ಅವನು ನನಗೆ ಸಿಡಿ ತಂದು ಕೊಟ್ಟಿಲ್ಲ. ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ನೀಡಿದ ದೂರು ಹಿಂಪಡೆದುಕೊಂಡಿದ್ದೇನೆ. ಸದ್ಯಕ್ಕೆ ಪ್ರಕರಣಕ್ಕೂ ನಗಗೂ ಸಂಬಂಧ ಇಲ್ಲ. ಎಸ್‍ಐಟಿ ಈವರೆಗೆ ವಿಚಾರಣೆ ಹಾಜರಾಗುವಂತೆ ನೋಟಿಸ್ ನೀಡಿಲ್ಲ. ಒಂದು ವೇಳೆ ನೋಟಿಸ್ ನೀಡಿದ್ರೆ ವಿಚಾರಣೆಗೆ ಹಾಜರಾಗುತ್ತೇನೆ ಎಂದು ಹೇಳಿದರು.

    ಮಾಜಿ ಸಚಿವರ ರಾಸಲೀಲೆ ಪ್ರಕರಣದ ಕುರಿತು ತನಿಖೆಗೆ ಒತ್ತಾಯಿಸಿ ದಿನೇಶ್ ಕಲ್ಲಹಳ್ಳಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇತ್ತ ಅದೇ ದಿನ ಸೋಶಿಯಲ್ ಮೀಡಿಯಾದಲ್ಲಿ ಮಾಜಿ ಮಂತ್ರಿಗಳ ವೀಡಿಯೋ ವೈರಲ್ ಆಗಿತ್ತು. ಆದ್ರೆ ದಿನೇಶ್ ಕಲ್ಲಹಳ್ಳಿ ದಿಢೀರ್ ಅಂತ ತಾವು ಸಲ್ಲಿಸಿದ ದೂರು ಹಿಂಪಡೆದುಕೊಳ್ಳುವ ಮೂಲಕ ಯೂ ಟರ್ನ್ ತೆಗೆದುಕೊಂಡಿದ್ದು ಹಲವು ಅನುಮಾನಗಳಿಗೆ ಕಾರಣವಾಗಿದೆ.

    ಸೌಮೆಂದು ಮುಖರ್ಜಿ ನೇತೃತ್ವದಲ್ಲಿ ಮಧ್ಯಾಹ್ನ 2ಕ್ಕೆ ಎಸ್‍ಐಟಿ ರಚನೆ ಮಾಡಲಾಗಿತ್ತು. ಎಸ್‍ಐಟಿ ರಚನೆಯಾದ ಎರಡು ಗಂಟೆಯಲ್ಲಿ ಇಬ್ಬರು ಸಿಡಿಗೇಡಿಗಳು ವಶಕ್ಕೆ ಪಡೆಯಲಾಯ್ತು. ಬೆಂಗಳೂರಿನಲ್ಲಿ ಎರಡು ಕಡೆ ಪ್ರತ್ಯೇಕ ದಾಳಿ ನಡೆಸಿದ ಅಧಿಕಾರಿಗಳು ಇಬ್ಬರನ್ನ ವಶಕ್ಕೆ ಪಡೆದುಕೊಂಡಿದ್ದರು. ವಶಕ್ಕೆ ಪಡೆದ ಇಬ್ಬರನ್ನ ನಾಲ್ಕು ಗಂಟೆಗಳ ಕಾಲು ಆರು ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.

    ಎಸ್‍ಐಟಿ ತೀವ್ರ ವಿಚಾರಣೆಗೆ ಇಬ್ಬರು ತಮ್ಮ ಜೊತೆಯಲ್ಲಿದ್ದ ಮೂವರ ಮಾಹಿತಿಯನ್ನ ನೀಡಿದ್ದಾರೆ. ಇಬ್ಬರ ಮಾಹಿತಿ ಆಧರಿಸಿ ಮತ್ತೆ ಮೂವರಿಗೆ 3 ರಾಜ್ಯಗಳಲ್ಲಿ ಎಸ್‍ಐಟಿ ಬಲೆ ಬೀಸಿತ್ತು. ಹೈದರಾಬಾದ್, ಚೆನ್ನೈ ಮತ್ತು ಮಂಗಳೂರಲ್ಲಿ ತಲಾ ಒಬ್ಬರನ್ನ ವಶಕ್ಕೆ ಪಡೆಯಲಾಗಿದೆ. ಕೇವಲ ಆರು ಗಂಟೆಗಳಲ್ಲಿ ಐವರ ಆಪರೇಷನ್ ಮುಗಿಸಿದೆ. ಸದ್ಯ ಐವರು ಸಿಡಿಗೇಡಿಗಳ ಪೈಕಿ ನಾಲ್ವರಷ್ಟೇ ಎಸ್‍ಐಟಿ ವಶದಲ್ಲಿದ್ದು, ಒಬ್ಬರನ್ನು ವಿಚಾರಣೆ ಮಾಡಿ ಷರತ್ತಿನ ಮೇರೆಗೆ ಕಳುಹಿಸಿದ್ದಾರೆ ಎಂದು ತಿಳಿದು ಬಂದಿದೆ.