Tag: CDS

  • ಪಾಕ್‌ನ 48 ಗಂಟೆಗಳ ಪ್ಲ್ಯಾನ್‌, 8 ಗಂಟೆಗಳಲ್ಲೇ ಬುಡಮೇಲು; ಸಿಡಿಎಸ್

    ಪಾಕ್‌ನ 48 ಗಂಟೆಗಳ ಪ್ಲ್ಯಾನ್‌, 8 ಗಂಟೆಗಳಲ್ಲೇ ಬುಡಮೇಲು; ಸಿಡಿಎಸ್

    – ಟ್ರಂಪ್‌ಗೆ ಮೋದಿ ಸರೆಂಡರ್ ಎಂದ ರಾಹುಲ್

    ನವದೆಹಲಿ: 100 ಗಂಟೆಗಳ ಆಪರೇಷನ್ ಸಿಂಧೂರ (Operation Sindoor) ಕಾರ್ಯಾಚರಣೆಯಲ್ಲಿ ಪಾಕಿಸ್ತಾನದ ಫೈಟರ್ ಜೆಟ್, 2 ಅವಾಕ್, 30ಕ್ಕೂ ಹೆಚ್ಚು ಮಿಸೈಲ್ಸ್, ಒಂದು ಸಿ-130 ವಿಮಾನವನ್ನ ಭಾರತ (India) ಧ್ವಂಸಗೊಳಿಸಿದೆ ಅಂತ ತಿಳಿದುಬಂದಿದೆ.

    ಇನ್ನೂ ಭಾರತದ ನಷ್ಟಗಳ ಕುರಿತು ತಮ್ಮ ಹೇಳಿಕೆ ವಿವಾದಕ್ಕೆ ಕಾರಣವಾದ ಬೆನ್ನಲ್ಲೇ ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಅನಿಲ್ ಚೌಹಾಣ್ (CDS Anil Chauhan) ಪುಣೆ ವಿವಿಯಲ್ಲಿ ಮಾತಾಡಿದ್ದಾರೆ. ಸಶಸ್ತ್ರ ಪಡೆಗಳು ತಮ್ಮ ತಪ್ಪುಗಳನ್ನು ಗುರುತಿಸಿ ಸರಿಪಡಿಸಿಕೊಳ್ಳಲು ಸಮರ್ಥವಾಗಿರಬೇಕು. ಸೋಲುಗಳು ಮುಖ್ಯವಲ್ಲ, ಫಲಿತಾಂಶ ಮುಖ್ಯ. ನಷ್ಟಗಳ ಬಗ್ಗೆ ಮಾತನಾಡುವುದು ಸರಿಯಲ್ಲ. ಭಾರತದ ಮೇಲೆ ದಾಳಿ ಮಾಡುವ ಪಾಕಿಸ್ತಾನದ 48 ಗಂಟೆಗಳ ಪ್ಲ್ಯಾನನ್ನು ಕೇವಲ 8 ಗಂಟೆಯಲ್ಲೇ ಉಡೀಸ್ ಮಾಡಿದ್ದೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಪಾಕ್‌ಗೆ ಆಪರೇಷನ್ ಸಿಂಧೂರದ ಸೂಕ್ಷ್ಮ ಮಾಹಿತಿ ಹಂಚಿಕೆ – ಪಂಜಾಬ್ ವ್ಯಕ್ತಿ ಅರೆಸ್ಟ್

    ಭವಿಷ್ಯದ ಯುದ್ಧಗಳು ವೃತ್ತಿಪರ ಶಕ್ತಿಗಳು ಹಿನ್ನಡೆ ಅಥವಾ ನಷ್ಟಗಳಿಂದ ಪ್ರಭಾವಿತವಾಗುವುದಿಲ್ಲ. ಯುದ್ಧದಲ್ಲಿ ಹಿನ್ನಡೆಗಳಿದ್ದರು ಸಹ ನೈತಿಕತೆಯು ಉನ್ನತ ಮಟ್ಟದಲ್ಲಿ ಉಳಿಯುವುದು ಮುಖ್ಯ ಎಂದಿದ್ದಾರೆ. ಇದನ್ನೂ ಓದಿ: ನಾಲ್ಕೂ ಅಲ್ಲ, ಐದೂ ಅಲ್ಲ; ಭಾರತ ವಿಶ್ವದ 3ನೇ ಅತಿ ದೊಡ್ಡ ಆರ್ಥಿಕತೆಯೇ?- ಆರ್ಥಿಕ ತಜ್ಞರು ಹೇಳೋದೇನು?

    ಇನ್ನೂ ಕದನ ವಿರಾಮದ ಬಗ್ಗೆ ರಾಹುಲ್ ಗಾಂಧಿ ಟೀಕೆ ಮುಂದುವರಿದಿದೆ. ಟ್ರಂಪ್ ಒಂದೇ ಒಂದು ಕಾಲ್‌ಗೆ ಪ್ರಧಾನಿ ಮೋದಿ ಶರಣಾಗಿದ್ದಾರೆ ಅಂತ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ. ಅಲ್ಲಿಂದ ಟ್ರಂಪ್ ಕಾಲ್ ಮಾಡಿ ನರೇಂದರ್… ಸರೆಂಡರ್ ಅಂದ್ರು. ಇವರು `ಯೆಸ್ ಸರ್’ ಅಂತ ಶರಣಾಗಿಬಿಟ್ಟಿದ್ದಾರೆ. ಬಿಜೆಪಿ-ಆರ್‌ಎಸ್‌ಎಸ್‌ ನವರ ಮೇಲೆ ಸ್ವಲ್ಪ ಒತ್ತಡ ಹಾಕಿದರೂ ಭಯದಿಂದ ಶರಣಾಗಿಬಿಡ್ತಾರೆ. ಇವರು ಹೇಡಿಗಳು. ಆದರೆ, 1971ರಲ್ಲಿ ಇಂದಿರಾ ಗಾಂಧಿ ಈ ರೀತಿ ಮಾಡಿಲ್ಲ ಅಂತ ರಾಹುಲ್ ಗಾಂಧಿ ವಾಗ್ದಾಳಿ ಮಾಡಿದ್ದಾರೆ. ಇದನ್ನೂ ಓದಿ: ಕಾಶ್ಮೀರದಲ್ಲಿ ಪಿಒಕೆ ಮೂಲದ ಉಗ್ರನ ಭೂಮಿ ವಶ

  • ಪಾಕ್ ದಾಳಿಯಿಂದ ನಮ್ಮ ಫೈಟರ್ ಜೆಟ್‌ಗಳಿಗೂ ಹಾನಿ? – ಮೊದಲ ಬಾರಿಗೆ ಸಿಡಿಎಸ್ ಪ್ರತಿಕ್ರಿಯೆ ಏನು?

    ಪಾಕ್ ದಾಳಿಯಿಂದ ನಮ್ಮ ಫೈಟರ್ ಜೆಟ್‌ಗಳಿಗೂ ಹಾನಿ? – ಮೊದಲ ಬಾರಿಗೆ ಸಿಡಿಎಸ್ ಪ್ರತಿಕ್ರಿಯೆ ಏನು?

    ನವದೆಹಲಿ: ಆಪರೇಷನ್ ಸಿಂಧೂರದಲ್ಲಿ (Operation Sindoor) ಪಾಕಿಸ್ತಾನದ (Pakistan) ಜೊತೆಗಿನ ಸಂಘರ್ಷದಲ್ಲಿ ಭಾರತದ ಎಷ್ಟು ಜೆಟ್‌ಗಳನ್ನು ಕಳೆದುಕೊಂಡಿದ್ದೇವೆ ಅಂತ ಕಾಂಗ್ರೆಸ್ ಲೆಕ್ಕ ಕೇಳುತ್ತಿರುವ ಹೊತ್ತಲ್ಲೇ ಇದೇ ಮೊದಲ ಬಾರಿಗೆ ಭದ್ರತಾ ಪಡೆಗಳ ಮುಖ್ಯಸ್ಥ ಅನಿಲ್ ಚೌಹಾಣ್ (Anil Chauhan) ಪ್ರತಿಕ್ರಿಯೆ ನೀಡಿದ್ದಾರೆ.

    ಭಾರತೀಯ ಜೆಟ್‌ಗಳು ಧ್ವಂಸಗೊಂಡಿರುವುದನ್ನು ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ. (ಬ್ಲೂಂಬರ್ಗ್) ಟಿವಿ ಸಂದರ್ಶನವೊಂದರಲ್ಲಿ ಮಾತಾಡಿರುವ ಅನಿಲ್ ಚೌಹಾಣ್, ಪಾಕಿಸ್ತಾನವು ‘6 ಭಾರತದ ಯುದ್ಧವಿಮಾನಗಳನ್ನು ಹೊಡೆದಿದ್ದೇವೆ’ ಅಂತ ಹೇಳಿಕೊಳ್ತಿರೋದು ಖಂಡಿತವಾಗಿಯೂ ಸರಿಯಲ್ಲ. ಆದರೆ, ಎಷ್ಟು ಜೆಟ್‌ಗಳು ಪತನಗೊಂಡಿವೆ ಅನ್ನೋದನ್ನು ಹೇಳಿಲ್ಲ. ಆದರೆ, ಎಷ್ಟು ಜೆಟ್‌ಗಳು ಪತನ ಆಗಿದೆ ಎನ್ನುವ ನಂಬರ್‌ಗಳು ಮುಖ್ಯವಲ್ಲ. ಅವು ಏಕೆ ಪತನಗೊಂಡವು? ನಾವೇನು ತಪ್ಪು ಮಾಡಿದ್ದೇವೆ ಅನ್ನೋದು ಮುಖ್ಯ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನದ ಗುಂಡಿಗೆ ಫಿರಂಗಿ ಗುಂಡುಗಳಿಂದಲೇ ಉತ್ತರ – ಭಯೋತ್ಪಾದಕರಿಗೆ ಮೋದಿ ಮತ್ತೆ ವಾರ್ನಿಂಗ್‌

    ಯುದ್ಧತಂತ್ರದ ತಪ್ಪುಗಳನ್ನು ಅರ್ಥೈಸಿಕೊಂಡಿದ್ದೇವೆ. ಪತ್ತೆಹಚ್ಚಿ ಪರಿಹಾರವನ್ನೂ ಕಂಡುಕೊಂಡಿದ್ದೇವೆ. 2 ದಿನಗಳ ಬಳಿಕ ಮತ್ತೆ ನಮ್ಮ ಜೆಟ್‌ಗಳು ಲಾಂಗ್‌ರೇಂಜ್ ಟಾರ್ಗೆಟ್ ಮಾಡಿ ಹಾರಿವೆ ಎಂದಿದ್ದಾರೆ.

    ಇದೇ ವೇಳೆ, 4 ದಿನಗಳ ಸಂಘರ್ಷವು ಎಂದಿಗೂ ನ್ಯೂಕ್ಲಿಯರ್ ವಾರ್ ಹಂತಕ್ಕೆ ತಲುಪಿರಲಿಲ್ಲ ಅಂತ ಸಿಡಿಎಸ್ ಅನಿಲ್ ಚೌಹಾಣ್ ತಿಳಿಸಿದ್ದಾರೆ. ಇದನ್ನೂ ಓದಿ: ‘ಆಪರೇಷನ್‌ ಸಿಂಧೂರ’ ಬಗ್ಗೆ ಆಕ್ಷೇಪಾರ್ಹ ಪೋಸ್ಟ್‌ – ಪುಣೆ ಕಾನೂನು ವಿದ್ಯಾರ್ಥಿನಿ ಬಂಧನ

  • CDS ಬಿಪಿನ್‌ ರಾವತ್‌ ಇದ್ದ ಹೆಲಿಕಾಪ್ಟರ್‌ ಪತನಕ್ಕೆ ಮಾನವ ಲೋಪವೇ ಕಾರಣ: ವರದಿ

    CDS ಬಿಪಿನ್‌ ರಾವತ್‌ ಇದ್ದ ಹೆಲಿಕಾಪ್ಟರ್‌ ಪತನಕ್ಕೆ ಮಾನವ ಲೋಪವೇ ಕಾರಣ: ವರದಿ

    ನವದೆಹಲಿ: ಭಾರತೀಯ ಸೇನಾ ಪಡೆಗಳ ಮುಖ್ಯಸ್ಥ ಬಿಪಿನ್‌ ರಾವತ್‌ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನಕ್ಕೆ ಮಾನವ ಲೋಪವೇ (ವಿಮಾನ ಸಿಬ್ಬಂದಿ) ಕಾರಣ ಎಂದು ರಕ್ಷಣಾ ಸ್ಥಾಯಿ ಸಮಿತಿಯು ತನ್ನ ವರದಿಯಲ್ಲಿ ಉಲ್ಲೇಖಿಸಿದೆ.

    ಚೀಫ್ ಆಫ್ ಡಿಫೆನ್ಸ್ ಸ್ಟಾಫ್ ಜನರಲ್ ಬಿಪಿನ್ ರಾವತ್ ಅವರು 2021ರ ಡಿಸೆಂಬರ್ 8 ರಂದು ಪ್ರಯಾಣಿಸುತ್ತಿದ್ದ Mi-17 V5 ಹೆಲಿಕಾಪ್ಟರ್ ಪತನಗೊಂಡಿತ್ತು. ಈ ಅಪಘಾತದಲ್ಲಿ ಜನರಲ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ರಾವತ್ ಸೇರಿದಂತೆ ಒಟ್ಟು 12 ಜನರು ಸಾವನ್ನಪ್ಪಿದರು. ತಮಿಳುನಾಡಿನ ಕೂನೂರು ಬಳಿಯ ಪರ್ವತಗಳಲ್ಲಿ ಹೆಲಿಕಾಪ್ಟರ್ ಪತನಗೊಂಡಿತ್ತು.

    ಮೂರು ವರ್ಷಗಳ ನಂತರ, ನಿನ್ನೆ ಹಿಂದಿನ ದಿನ ಲೋಕಸಭೆಯಲ್ಲಿ ಮಂಡಿಸಲಾದ ರಕ್ಷಣಾ ಸ್ಥಾಯಿ ಸಮಿತಿಯ ವರದಿಯು Mi-17 ಅಪಘಾತವು ‘ಮಾನವ ದೋಷ (ಏರ್‌ಕ್ರೂ)’ ಕಾರಣದಿಂದಾಗಿ ಸಂಭವಿಸಿದೆ ಎಂದು ಹೇಳಿದೆ.

    2017 ರಿಂದ 2022 ರ ವರೆಗೆ ಭಾರತೀಯ ವಾಯು ಸೇನೆಯಲ್ಲಿ ಒಟ್ಟು 34 ಅಪಘಾತಗಳು ಸಂಭವಿಸಿವೆ ಎಂದು 18 ನೇ ಲೋಕಸಭೆಯ ಸ್ಥಾಯಿ ಸಮಿತಿ ವರದಿ ಹೇಳಿದೆ. 2021-2022 ಅವಧಿಯಲ್ಲಿ ಒಟ್ಟು ಒಂಬತ್ತು ಅಪಘಾತಗಳು ಸಂಭವಿಸಿವೆ ಎಂದು ವರದಿ ತಿಳಿಸಿದೆ.

  • ರಕ್ಷಣಾ ಪಡೆಗಳ ಮುಖ್ಯಸ್ಥ ಅನಿಲ್ ಚೌಹಾಣ್‍ಗೆ Z+ ಭದ್ರತೆ

    ರಕ್ಷಣಾ ಪಡೆಗಳ ಮುಖ್ಯಸ್ಥ ಅನಿಲ್ ಚೌಹಾಣ್‍ಗೆ Z+ ಭದ್ರತೆ

    ನವದೆಹಲಿ: ಗೃಹ ಸಚಿವಾಲಯದ ನಿರ್ದೇಶನದ ಮೇರೆಗೆ ದೆಹಲಿ ಪೊಲೀಸರು ರಕ್ಷಣಾ ಪಡೆಗಳ ಮುಖ್ಯಸ್ಥರಾಗಿರುವ (CDS) ಲೆಫ್ಟಿನೆಂಟ್ ಜನರಲ್ ಅನಿಲ್ ಚೌಹಾಣ್ (Anil Chauhan) ಅವರಿಗೆ ಝಡ್ ಪ್ಲಸ್ ಭದ್ರತೆಯನ್ನು (Z+ Security) ಒದಗಿಸಿದ್ದಾರೆ.

    ಶುಕ್ರವಾರದಂದು ಅನಿಲ್ ಚೌಹಾಣ್ ಅವರು ಭಾರತದ ನೂತನ ರಕ್ಷಣಾ ಪಡೆಗಳ ಮುಖ್ಯಸ್ಥರಾಗಿ (Chief of Defense Staff) ಅಧಿಕಾರ ವಹಿಸಿಕೊಂಡರು. ಲೆಫ್ಟಿನೆಂಟ್ ಜನರಲ್ ಅನಿಲ್ ಚೌಹಾಣ್ 2021ರ ಮೇ ತಿಂಗಳಲ್ಲಿ ಪೂರ್ವ ಕಮಾಂಡ್‍ನ ಮುಖ್ಯಸ್ಥರಾಗಿ ನಿವೃತ್ತರಾಗಿದ್ದರು. ಇದನ್ನೂ ಓದಿ: ಸ್ವಚ್ಛನಗರಿ ರ್‍ಯಾಂಕಿಂಗ್‌ ಪಟ್ಟಿಯಲ್ಲಿ ಕುಸಿದ ಬೆಂಗಳೂರು- ಬಿಗ್‌ಶೇಮ್‌ ಎಂದು ಕುಟುಕಿದ ಪೈ

    ಗೃಹ ಸಚಿವಾಲಯದ ಆದೇಶದ ಮೇರೆಗೆ ಸಿಡಿಎಸ್ ಜನರಲ್ ಅನಿಲ್ ಚೌಹಾಣ್ ಅವರಿಗೆ ಝಡ್ ಪ್ಲಸ್ ಭದ್ರತೆಯನ್ನು ಒದಗಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ರಕ್ಷಣಾ ಪಡೆಗಳ ಮುಖ್ಯಸ್ಥರಾಗಿ ಅನಿಲ್ ಚೌಹಾಣ್ ನೇಮಕ

    Live Tv
    [brid partner=56869869 player=32851 video=960834 autoplay=true]

  • ರಕ್ಷಣಾ ಪಡೆಗಳ ಮುಖ್ಯಸ್ಥರಾಗಿ ಅನಿಲ್ ಚೌಹಾಣ್ ನೇಮಕ

    ರಕ್ಷಣಾ ಪಡೆಗಳ ಮುಖ್ಯಸ್ಥರಾಗಿ ಅನಿಲ್ ಚೌಹಾಣ್ ನೇಮಕ

    ನವದೆಹಲಿ: ಹೆಲಿಕಾಪ್ಟರ್ ಅಪಘಾತದಲ್ಲಿ ಜನರಲ್ ಬಿಪಿನ್ ರಾವತ್ (General Bipin Rawat) ಹುತಾತ್ಮರಾದ 9 ತಿಂಗಳ ಬಳಿಕ ಕೇಂದ್ರ ಸರ್ಕಾರ (Central Government Of India) ಲೆಫ್ಟಿನೆಂಟ್ ಜನರಲ್ ಅನಿಲ್ ಚೌಹಾಣ್ (Anil Chauhan) (ನಿವೃತ್ತ) ಅವರನ್ನ ಭಾರತದ ರಕ್ಷಣಾ ಪಡೆಗಳ ಮುಖ್ಯಸ್ಥ (CDS)ರಾಗಿ ನೇಮಕ ಮಾಡಿದೆ.

    ಲೆಫ್ಟಿನೆಂಟ್ ಜನರಲ್ ಅನಿಲ್ ಚೌಹಾಣ್ 2021ರ ಮೇ ತಿಂಗಳಲ್ಲಿ ಪೂರ್ವ ಕಮಾಂಡ್ ಮುಖ್ಯಸ್ಥರಾಗಿ ನಿವೃತ್ತರಾಗಿದ್ದರು. ಇದನ್ನೂ ಓದಿ: 500 ರೂ. ಕೊಟ್ರೆ ಒಂದು ರಾತ್ರಿ ಜೈಲಲ್ಲಿ ಇರಲು ಅವಕಾಶ

    ತಮಿಳುನಾಡಿನ (Tamilnadu) ಕುನೂರು ಬಳಿ ವಾಯುಸೇನೆಯ MI17V5 ಹೆಲಿಕಾಪ್ಟರ್ ಪತನವಾಗಿ ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಹುತಾತ್ಮರಾದರು. ಇದರೊಂದಿಗೆ ದುರಂತದಲ್ಲಿ 13 ಜನರೂ ಹುತಾತ್ಮರಾದರು. ಇದರಲ್ಲಿ ಬಿಪಿನ್ ರಾವತ್ ಅವರ ಪತ್ನಿ ಮಧುಲಿಕಾ ರಾವತ್ ಕೂಡ ಕೊನೆಯುಸಿರೆಳೆದರು. ಸೇನಾ ಸಿಬ್ಬಂದಿಯ ಮೊದಲ ಮುಖ್ಯಸ್ಥರಾಗಿದ್ದ ಜನರಲ್ ಬಿಪಿನ್ ರಾವತ್ ದೇಶದ ರಕ್ಷಣೆಗಾಗಿ 4 ದಶಕಗಳಿಗೂ ಹೆಚ್ಚು ಕಾಲ ಸೇವೆ ಸಲ್ಲಿಸಿದ್ದರು.

    ಅವರು ಮೃತಪಟ್ಟ 9 ತಿಂಗಳ ಬಳಿಕ ರಕ್ಷಣಾ ಪಡೆಗಳ ಮುಖ್ಯಸ್ಥರಾಗಿ ಚೌಹಾಣ್ ಅವರನ್ನು ನೇಮಕ ಮಾಡಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಶೀಘ್ರವೇ ಸಿಡಿಎಸ್‌ ನೇಮಕ: ರಾಜನಾಥ್‌ ಸಿಂಗ್‌ ಮಾಹಿತಿ

    ಶೀಘ್ರವೇ ಸಿಡಿಎಸ್‌ ನೇಮಕ: ರಾಜನಾಥ್‌ ಸಿಂಗ್‌ ಮಾಹಿತಿ

    ನವದೆಹಲಿ: ಭಾರತದಲ್ಲಿ ಮುಂದಿನ ಸಿಡಿಎಸ್‌ ನೇಮಕದ ಬಗ್ಗೆ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಕೊನೆಗೂ ಮೌನ ಮುರಿದಿದ್ದಾರೆ. ಶೀಘ್ರವೇ ಸೇನಾ ಪಡೆಗಳ ಮುಖ್ಯಸ್ಥರನ್ನು (CDS) ನೇಮಕ ಮಾಡುವುದಾಗಿ ತಿಳಿಸಿದ್ದಾರೆ.

    ಕೇಂದ್ರ ಸರ್ಕಾರದ ನೂತನ ʼಅಗ್ನಿಪಥ್‌ʼ ನೇಮಕಾತಿ ಯೋಜನೆ ಘೋಷಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶೀಘ್ರವೇ ಸಿಡಿಎಸ್‌ ನೇಮಕ ಮಾಡಲಾಗುವುದು. ನೇಮಕಾತಿ ಪ್ರಕ್ರಿಯೆಯು ನಡೆಯುತ್ತಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಯುವಕರಿಗೆ ಸೇನೆಯಲ್ಲಿ ಹೊಸ ಅವಕಾಶ – ಅಗ್ನಿಪಥ್ ನೇಮಕಾತಿ ಯೋಜನೆ ಪ್ರಾರಂಭ

    2021ರ ಡಿಸೆಂಬರ್‌ನಲ್ಲಿ ಹೆಲಿಕಾಪ್ಟರ್ ಅಪಘಾತದಲ್ಲಿ ಭಾರತದ ಮೊದಲ ಸೇನಾಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಹುತಾತ್ಮರಾಗಿದ್ದರು. ಆ ಬಳಿಕ ಸಿಡಿಎಸ್‌ ಹುದ್ದೆ ತೆರವಾಗಿದೆ.

    ಈಗ ಸರ್ಕಾರವು ಸಶಸ್ತ್ರ ಪಡೆಗಳ ಸೇವಾ ನಿಯಮಗಳನ್ನು ತಿದ್ದುಪಡಿ ಮಾಡಿದೆ. ಸರ್ಕಾರದ ಅಧಿಸೂಚನೆಯ ಪ್ರಕಾರ, ಸೇವೆಯಲ್ಲಿರುವ ಅಥವಾ 62ಕ್ಕಿಂತ ಕಡಿಮೆ ವಯಸ್ಸಿನ ನಿವೃತ್ತ ಲೆಫ್ಟಿನೆಂಟ್ ಜನರಲ್, ಏರ್ ಮಾರ್ಷಲ್ ಹಾಗೂ ವೈಸ್–ಅಡ್ಮಿರಲ್ ಸಿಡಿಎಸ್ ಹುದ್ದೆಗೆ ಅರ್ಹರಾಗಿದ್ದಾರೆ. ಇದನ್ನೂ ಓದಿ: ಟಿಕೆಟ್ ಇದ್ದೂ ಪ್ರವೇಶ ನಿರಾಕರಿಸಿದ ಏರ್‌ಇಂಡಿಯಾಕ್ಕೆ 10 ಲಕ್ಷ ದಂಡ

  • ಸಿಡಿಎಸ್ ಹುದ್ದೆಗೆ ಕಾರ್ಯನಿರತ, ನಿವೃತ್ತ ಎರಡೂ ಅಧಿಕಾರಿಗಳ ಪರಿಗಣನೆ

    ಸಿಡಿಎಸ್ ಹುದ್ದೆಗೆ ಕಾರ್ಯನಿರತ, ನಿವೃತ್ತ ಎರಡೂ ಅಧಿಕಾರಿಗಳ ಪರಿಗಣನೆ

    ನವದೆಹಲಿ: ರಕ್ಷಣಾ ಸಿಬ್ಬಂದಿ ಮುಖ್ಯಸ್ಥ (ಸಿಡಿಎಸ್) ಹುದ್ದೆಗೆ ಸೇವೆ ಸಲ್ಲಿರುತ್ತಿರುವ ಹಾಗೂ ನಿವೃತ್ತ ಎರಡೂ ವರ್ಗದ ಅಧಿಕಾರಿಗಳನ್ನು ಪರಿಗಣಿಸಬಹುದು ಎಂದು ಸರ್ಕಾರಿ ಮೂಲಗಳು ತಿಳಿಸಿವೆ.

    ಭಾರತದ ಮೊದಲ ರಕ್ಷಣಾ ಸಿಬ್ಬಂದಿಯ ಮುಖ್ಯಸ್ಥರಾಗಿದ್ದ ಜನರಲ್ ಬಿಪಿನ್ ರಾವತ್ ಮರಣದ 4 ತಿಂಗಳ ಬಳಿಕ ಸರ್ಕಾರ ಸೇವೆಯಲ್ಲಿರುವ ಹಾಗೂ ನಿವೃತ್ತ ಮಿಲಿಟರಿ ಅಧಿಕಾರಿಗಳನ್ನು ಈ ಹುದ್ದೆಗೆ ಪರಿಗಣಿಸಬಹುದು ಎಂದಿದೆ. ಇದನ್ನೂ ಓದಿ: 5 ಲಕ್ಷ ಅಲ್ಲ, 40 ಲಕ್ಷ ಭಾರತೀಯರು ಕೋವಿಡ್‌ನಿಂದ ಸಾವು: ಕೇಂದ್ರಕ್ಕೆ ರಾಹುಲ್‌ ತರಾಟೆ

    ಈ ವಾರ ಮುಂದಿನ ಸೇನಾ ಮುಖ್ಯಸ್ಥರ ಕುರಿತು ಸರ್ಕಾರ ಘೋಷಣೆ ಮಾಡಲಿದೆ ಎಂದು ಸರ್ಕಾರದ ಉನ್ನತ ಮೂಲಗಳು ತಿಳಿಸಿವೆ. ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಹುದ್ದೆಗೆ ನೇಮಕಗೊಳ್ಳಲು ಸೇವೆ ಸಲ್ಲಿಸುತ್ತಿರುವ ಮತ್ತು ನಿವೃತ್ತ ಅಧಿಕಾರಿಗಳನ್ನು ಪರಿಗಣಿಸಬಹುದು. ನೇಮಕಗೊಳ್ಳುವ ಅಧಿಕಾರಿಗಳು ಲೆಫ್ಟಿನೆಂಟ್ ಜನರಲ್ ಅಥವಾ ಸೇವಾ ಮುಖ್ಯಸ್ಥರ ಸಮಾನ ಶ್ರೇಣಿಯವರು ಇರಬಹುದು ಎಂದು ಮೂಲಗಳು ಮಾಹಿತಿ ನೀಡಿದೆ. ಇದನ್ನೂ ಓದಿ: ದೆಹಲಿಯಲ್ಲಿ ಹನುಮ ಜಯಂತಿ ವೇಳೆ ಹಿಂಸಾಚಾರ – ಯುಪಿಯಲ್ಲಿ ಕಟ್ಟೆಚ್ಚರ

    ಚೀಫ್ ಆಫ್ ಡಿಫೆನ್ಸ್ ಸ್ಟಾಫ್ ಕಚೇರಿ ಮಿಲಿಟರಿ ರಚನೆ ಸುಧಾರಣೆಯಲ್ಲಿ ಅತಿ ದೊಡ್ಡ ಪಾತ್ರ ವಹಿಸುತ್ತದೆ. ಇದು ಸರ್ಕಾರ ಹಾಗೂ ರಕ್ಷಣಾ ಪಡೆಗಳ ನಡುವೆ ಸಮನ್ವಯದಿಂದ ಕೆಲಸ ಮಾಡಲು ಅನುಕೂಲವಾಗಿಸುತ್ತದೆ.

  • ಬಿಪಿನ್ ಸ್ಥಾನ ತುಂಬುವವರೆಗೆ ನರಾವಣೆ ಚೀಫ್ ಆಫ್ ಸ್ಟಾಫ್ ಅಧ್ಯಕ್ಷ

    ನವದೆಹಲಿ: ಭಾರತದ ಮೊದಲ ರಕ್ಷಣಾ ಸಿಬ್ಬಂದಿಯ ಮುಖ್ಯಸ್ಥ (ಸಿಡಿಎಸ್) ಜನರಲ್ ಬಿಪಿನ್ ರಾವತ್ ಅವರ ನಿಧನದ ನಂತರ ಹೊಸ ಸಿಡಿಎಸ್ ನೇಮಕಗೊಳ್ಳ ಬೇಕಿದೆ. ಈಗಿರುವ ಮೂರು ಸೇನಾ ಮುಖ್ಯಸ್ಥರಲ್ಲಿ ಜನರಲ್ ಎಂಎಂ ನರಾವಣೆ ಅವರು ಚೀಫ್ ಆಫ್ ಸ್ಟಾಫ್ ಕಮಿಟಿಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

    ಭಾರತೀಯ ಸೇನೆಯ ಮುಖ್ಯಸ್ಥ ಜನರಲ್ ಎಂಎಂ ನರಾವಣೆ ಅವರು ಹಿರಿಯ ಅಧಿಕಾರಿಯಾಗಿದ್ದು, ಸಿಡಿಎಸ್ ಕಚೇರಿ ಅಸ್ತಿತ್ವಕ್ಕೆ ಬರುವ ಮೊದಲು ಇದ್ದ ಸ್ಥಿತಿಯಂತೆ ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ಹೊಸ ಸಿಡಿಎಸ್ ನೇಮಕಗೊಳ್ಳುವವರೆಗೆ ಅಥವಾ ಸಿಡಿಎಸ್ ಅನುಪಸ್ಥಿತಿಯಲ್ಲಿ ಅತ್ಯಂತ ಹಿರಿಯ ಮುಖ್ಯಸ್ಥರು ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳುವುದು ಕಾರ್ಯ ವಿಧಾನದ ಹಂತವಾಗಿದೆ. ಇದನ್ನೂ ಓದಿ: ಸಿಎಂ ರ‍್ಯಾಲಿ ವೇಳೆ ನಿರುದ್ಯೋಗಿ ಶಿಕ್ಷಕರ ಮೇಲೆ ಪೊಲೀಸರ ದಬ್ಬಾಳಿಕೆ – ವೀಡಿಯೋ ವೈರಲ್

    ಡಿಸೆಂಬರ್ 8 ರಂದು ತಮಿಳುನಾಡಿನ ಕೂನೂರಿನಲ್ಲಿ ನಡೆದ ಹೆಲಿಕಾಫ್ಟರ್ ಅಪಘಾತದಲ್ಲಿ ಜನರಲ್ ಬಿಪಿನ್ ರಾವತ್, ಅವರ ಪತ್ನಿ ಮಧುಲಿಕಾ ರಾವತ್, ರಕ್ಷಣಾ ಬ್ರಿಗೇಡಿಯರ್ ಎಲ್ ಎಸ್ ಲಿಡ್ಡರ್, ಲೆಫ್ಟಿನೆಂಟ್ ಕರ್ನಲ್ ಹರ್ಜಿಂದರ್ ಸಿಂಗ್ ಮತ್ತು ಇತರ 10 ಮಂದಿ ಸಾವನ್ನಪ್ಪಿದ್ದರು. ಇದರ ಹಿನ್ನೆಲೆಯಲ್ಲಿ ಬದಲಾವಣೆಯನ್ನು ತರಲಾಗಿದೆ. ಇದನ್ನೂ ಓದಿ: ಬಿಪಿನ್ ರಾವತ್ ಬಳಿಕ ಭಾರತದ ಮುಂದಿನ CDS ಯಾರು?

    ಈ ಹಿಂದೆಯೂ ಸಿಡಿಎಸ್ ನೇಮಕಕ್ಕೂ ಮುನ್ನ ಇದೇ ವ್ಯವಸ್ಥೆ ಅನುಸರಿಸಲಾಗುತ್ತಿತ್ತು.

  • ವೀರ ಸೇನಾನಿಗಳಿಗೆ ಗಣ್ಯರ ನಮನ – ಪ್ರಧಾನಿ, ರಕ್ಷಣಾ ಸಚಿವ, ತ್ರಿದಳ ಮುಖ್ಯಸ್ಥರಿಂದ ಗೌರವಾರ್ಪಣೆ

    ವೀರ ಸೇನಾನಿಗಳಿಗೆ ಗಣ್ಯರ ನಮನ – ಪ್ರಧಾನಿ, ರಕ್ಷಣಾ ಸಚಿವ, ತ್ರಿದಳ ಮುಖ್ಯಸ್ಥರಿಂದ ಗೌರವಾರ್ಪಣೆ

    – ಹುತಾತ್ಮ ಕುಟುಂಬಸ್ಥರ ಕಣ್ಣೀರು
    – ವಿದೇಶಿ ಸೇನಾಧಿಕಾರಿಗಳು ಅಂತ್ಯಕ್ರಿಯೆಯಲ್ಲಿ ಭಾಗಿ

    ಚೆನ್ನೈ/ದೆಹಲಿ: ತಮಿಳುನಾಡಿನ ಕೂನೂರು ಬಳಿಯ ಅರಣ್ಯ ಪ್ರದೇಶದಲ್ಲಿ ಸಂಭವಿಸಿದ ಘೋರ ಹೆಲಿಕಾಪ್ಟರ್ ದುರಂತದಲ್ಲಿ ಸಿಡಿಎಸ್ ಬಿಪಿನ್ ರಾವತ್, ಪತ್ನಿ ಮಧುಲಿಕಾ ರಾವತ್ ಸೇರಿ 13 ಮಂದಿ ಸೇನಾಧಿಕಾರಿಗಳು ದುರ್ಮರಣನ್ನಪ್ಪಿದ್ರು. ನಿನ್ನೆ 13 ಮಂದಿಯ ಪಾರ್ಥಿವ ಶರೀರವನ್ನು ದೆಹಲಿಯ ಪಾಲಂ ವಾಯುನೆಲೆಗೆ ತರಲಾಯ್ತು. ಗಣ್ಯರು, ಸೇನಾ ಮುಖ್ಯಸ್ಥರು ಅಂತಿಮ ನಮನವನ್ನು ಸಲ್ಲಿಸಿದ್ರು.

    ಪ್ರಧಾನಿ ನರೇಂದ್ರ ಮೋದಿ ಪುಷ್ಪ ನಮನ ಬಳಿಕ ಗೌರವಾರ್ಪಣೆ ಮಾಡಿದ್ರು. ಬಳಿಕ ಹುತಾತ್ಮ ಸೈನಿಕರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ರು. ಪ್ರತಿಯೊಂದು ಕುಟುಂಬವನ್ನೂ ಭೇಟಿ ಮಾಡಿ ನಮೋ ಧೈರ್ಯ ತುಂಬಿದ್ರು. ಜೊತೆಗೆ ಪಾಲಂ ವಾಯುನೆಲೆಯಲ್ಲಿ 12 ಮಂದಿ ಹುತಾತ್ಮ ಸೇನಾಧಿಕಾರಿಗಳಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೂ ಗುಚ್ಛ ಇರಿಸಿ ಅಂತಿಮ ನಮನ ಸಲ್ಲಿಸಿದ್ರು. ಹುತಾತ್ಮ ಯೋಧರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ರು. ಇದನ್ನೂ ಓದಿ: ಹೆಲಿಕಾಪ್ಟರ್ ದುರಂತ ವೀಡಿಯೋ ಅಸಲಿಯತ್ತಿನ ಬಗ್ಗೆ ಸುಬ್ರಮಣಿಯನ್ ಸ್ವಾಮಿ ಪ್ರಶ್ನೆ

    ಹುತಾತ್ಮ ಸೇನಾಧಿಕಾರಿಗಳಿಗೆ ಮೂರು ಸೇನೆಯ ಮುಖ್ಯಸ್ಥರು ಅಂತಿಮ ನಮನ ಸಲ್ಲಿಸಿದ್ರು. ಸೇನಾ ಮುಖ್ಯಸ್ಥ ಜನರಲ್ ನರಾವಣೆ, ನೌಕಾದಳದ ಮುಖ್ಯಸ್ಥ ಅಡ್ಮಿರಲ್ ಆರ್. ಹರಿಕುಮಾರ್, ವಾಯು ಸೇನೆ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿ.ಆರ್ ಚೌಧರಿ ಹುತಾತ್ಮ ಸೇನಾಧಿಕಾರಿಗಳಿಗೆ ಹೂ ಗುಚ್ಛ ಇರಿಸಿ ಶ್ರದ್ದಾಂಜಲಿ ಸಲ್ಲಿಸಿದ್ರು. ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಸಹ ರಕ್ಷಣಾ ಪಡೆಗಳ ಮುಖ್ಯಸ್ಥ ಹುತಾತ್ಮ ಬಿಪಿನ್ ರಾವತ್ ಸೇರಿ 11 ಮಂದಿ ಸೇನಾಧಿಕಾರಿಗಳಿಗೆ ಅಂತಿಮ ನಮನ ಸಲ್ಲಿಸಿದ್ರು. ಹೆಲಿಕಾಪ್ಟರ್ ದುರಂತದಲ್ಲಿ ಸಾವನ್ನಪ್ಪಿದ ಸೇನಾಧಿಕಾರಿಗಳಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದ್ರು. ಇದನ್ನೂ ಓದಿ: ಬಿಪಿನ್ ರಾವತ್ ಬಳಿಕ ಭಾರತದ ಮುಂದಿನ CDS ಯಾರು?

    ಸದ್ಯ ದೆಹಲಿಯ ಧೌಲಾ ಖಾನ್‍ನ ಆಸ್ಪತ್ರೆಯಲ್ಲಿ ಹುತಾತ್ಮರ ಪಾರ್ಥಿವ ಶರೀರಗಳನ್ನು ಇರಿಸಲಾಗಿದೆ. ಮೃತ ದೇಹಗಳನ್ನು ಗುರುತಿಸುವ ಕಾರ್ಯವೂ ಸೇನೆಯಿಂದ ನಡೆದಿದೆ. ಇನ್ನು ಮೂವರ ಗುರುತು ಪತ್ತೆಯಾಗಬೇಕಿದೆ. ಕುಟುಂಬ ಸದಸ್ಯರಿಂದ ಗುರುತು ಪತ್ತೆ ಸಾಧ್ಯವಾಗದಿದ್ರೆ, ಡಿಎನ್‍ಎ ಪರೀಕ್ಷೆ ಮೂಲಕ ಕಂಡು ಹಿಡಿಯಲಾಗುತ್ತದೆ. ನಂತರ ಸೇನೆಯ ಗೌರವಗಳನ್ನು ಸಲ್ಲಿಸಿ ಕುಟುಂಬ ಸದಸ್ಯರಿಗೆ ಪಾರ್ಥಿವ ಶರೀರ ಹಸ್ತಾಂತರ ಮಾಡಲಾಗುತ್ತದೆ ಎಂದು ಸೇನೆ ತಿಳಿಸಿದೆ. ಇದನ್ನೂ ಓದಿ: ಬೀಗ ಹಾಕಿ ಕೆಲಸಕ್ಕೆ ಹೋಗಿದ್ವಿ, ಬಂದು ನೋಡುವಾಗ ಹೆಲಿಕಾಪ್ಟರ್ ಬಿದ್ದು ಮನೆಗೆ ಹಾನಿಯಾಗಿತ್ತು: ಜೈಶಂಕರ್

    ಇಂದು ಸಿಡಿಎಸ್ ರಾವತ್ ದಂಪತಿ ಮತ್ತು ಬ್ರಿಗೇಡಿಯರ್ ಲಿದ್ದರ್ ಅಂತ್ಯಕ್ರಿಯೆ ನಡೆಯಲಿದೆ. ಉಳಿದ ಹುತಾತ್ಮರ ಪಾರ್ಥಿವ ಶರೀರಗಳನ್ನು ಅವರವರ ಸ್ವಗ್ರಾಮಗಳಿಗೆ ಕಳಿಸಲಾಗುತ್ತದೆ. ನಾಳೆ ಅಥವಾ ನಾಡಿದ್ದು ಸಕಲ ಸೇನಾ ಗೌರವಗಳೊಂದಿಗೆ ಅಂತ್ಯಕ್ರಿಯೆಗಳು ನೆರವೇರಲಿವೆ. ಹಾಗಾದ್ರೆ ಇಂದು ಏನೆಲ್ಲಾ ಕಾರ್ಯಕ್ರಮಗಳು ನಡೆಯಲಿವೆ. ಸಿಡಿಎಸ್ ಅಂತ್ಯಕ್ರಿಯೆ ಎಲ್ಲಿ ನಡೆಯಲಿದೆ. ಇದನ್ನೂ ಓದಿ: ಕೊಡಗಿಗೆ ಅಮೋಘ ಕೊಡುಗೆ ನೀಡಿದ್ದ ಬಿಪಿನ್ ರಾವತ್

    ಇನ್ನು ಇಂದು ಸಕಲ ಸೇನಾ ಗೌರವಗಳೊಂದಿಗೆ ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಅಂತ್ಯ ಕ್ರಿಯೆ ನಡೆಯಲಿದೆ. ರಾವತ್ ಅಂತ್ಯಕ್ರಿಯೆಯಲ್ಲಿ ಶ್ರೀಲಂಕಾ ಸಿಡಿಎಸ್ ಖುದ್ದು ಭಾಗಿ ಆಗಲಿದ್ದಾರೆ. ಅಲ್ಲದೇ ನೇಪಾಳ, ಭೂತಾನ್ ದೇಶಗಳ ಉನ್ನತ ಅಧಿಕಾರಿಗಳು ಅಂತ್ಯಕ್ರಿಯೆಯಲ್ಲಿ ಭಾಗಿ ಆಗಲಿದ್ದಾರೆ. ಹುತಾತ್ಮ ಬಿಪಿನ್ ರಾವತ್‍ಗೆ ಅಂತಿಮ ನಮನ ಸಲ್ಲಿಸಿದ್ದಾರೆ. ಇದನ್ನೂ ಓದಿ: ಹೆಲಿಕಾಪ್ಟರ್ ದುರಂತ – ಕ್ಯಾಪ್ಟನ್ ವರುಣ್ ಸಿಂಗ್‌ಗೆ ಬೆಂಗಳೂರಿನಲ್ಲಿ ಹೆಚ್ಚಿನ ಚಿಕಿತ್ಸೆ

  • ಬಿಪಿನ್ ರಾವತ್ ಬಳಿಕ ಭಾರತದ ಮುಂದಿನ CDS ಯಾರು?

    ಬಿಪಿನ್ ರಾವತ್ ಬಳಿಕ ಭಾರತದ ಮುಂದಿನ CDS ಯಾರು?

    ನವದೆಹಲಿ: ರಾವತ್ ಆಕಸ್ಮಿಕ ಮರಣದ ಕಾರಣ ಮುಂದಿನ ಸಿಡಿಎಸ್ ಯಾರಾಗ್ತಾರೆ ಎಂಬ ಚರ್ಚೆ ನಡೆದಿದೆ. ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರಾವಣೆ ಮುಂದಿನ ತ್ರಿದಳಾಧಿಪತಿ ಆಗುವ ಸಂಭವ ಇದೆ.

    ನಿಯಮದ ಪ್ರಕಾರ ಭೂಸೇನೆ, ವಾಯುಸೇನೆ, ನೌಕಾ ಸೇನೆಯ ಮುಖ್ಯಸ್ಥರ ಪೈಕಿ ಒಬ್ಬರನ್ನು ಸೀನಿಯಾರಿಟಿ ಪ್ರಕಾರ ಈ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ. ಇತ್ತೀಚಿಗೆ ತ್ರಿದಳಗಳ ಉನ್ನತ ಹುದ್ದೆಗೇರಿದವರಲ್ಲಿ ಹಿರಿಯರಾದ ಜನರಲ್ ನರಾವಣೆಗೆ ಸಿಡಿಎಸ್ ಆಗುವ ಅವಕಾಶ ಹೆಚ್ಚಿದೆ. ಸೇನಾ ಮುಖ್ಯಸ್ಥರಾಗಿ 2019ರ ಡಿಸೆಂಬರ್ 31ರಂದು ಬಿಪಿನ್ ರಾವತ್‍ರಿಂದ ನರಾವಣೆ ಅಧಿಕಾರ ಸ್ವೀಕರಿಸಿದ್ದರು. ವಾಯುಸೇನೆಯ ಏರ್ ಚೀಫ್ ಮಾರ್ಷಲ್ ಆಗಿ ಸೆಪ್ಟೆಂಬರ್ 30ರಂದು ವಿವೇಕ್ ರಾಮ್ ಚೌಧರಿ. ನೌಕಾಪಡೆಯ ಅಡ್ಮಿರಲ್ ಆಗಿ ಹರಿಕುಮಾರ್ ಕೇವಲ 8 ದಿನಗಳ ಹಿಂದೆ ಅಧಿಕಾರ ಸ್ವೀಕರಿಸಿದ್ದರು. ಇದನ್ನೂ ಓದಿ: ಏನಿದು ಸಿಡಿಎಸ್ ಹುದ್ದೆ? ಈ ಹುದ್ದೆಯನ್ನು ಸೃಷ್ಟಿಸಿದ್ದು ಯಾಕೆ? – ಇಲ್ಲಿದೆ ಸಮಗ್ರ ವಿವರ

    ನರಾವಣೆ ಸಿಡಿಎಸ್ ಆಗಿ ಪದೋನ್ನತಿ ಹೊಂದಿದಲ್ಲಿ, ನಾರ್ತರ್ನ್ ಆರ್ಮಿ ಕಮಾಂಡರ್ ಲೆಫ್ಟಿನೆಂಟ್ ಜನೆರಲ್ ವೈಕೆ ಜೋಷಿ ಅಥವಾ ಸೇನೆಯ ಉಪ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ಚಂಡಿಪ್ರಸಾದ್ ಮೋಹಂತಿ ಸೇನಾ ಮುಖ್ಯಸ್ಥರಾಗುವ ಅವಕಾಶಗಳು ಹೆಚ್ಚಿವೆ. ಸದ್ಯ ವಾಯುಪಡೆ, ನೌಕಾಪಡೆ ಮುಖ್ಯಸ್ಥರಿಗಿಂತ ವೈಕೆ ಜೋಷಿ ಅವರೇ ಸೀನಿಯರ್ ಎಂಬುದು ವಿಶೇಷ. ಇದನ್ನೂ ಓದಿ: 2015ರಲ್ಲಿ ಹೆಲಿಕಾಪ್ಟರ್ ಪತನಗೊಂಡಾಗ ಪಾರಾಗಿದ್ದರು ಬಿಪಿನ್ ರಾವತ್

    ಸಿಡಿಎಸ್ ವಿಶೇಷತೆ ಏನು?:
    ಭೂ, ವಾಯು ಹಾಗೂ ನೌಕಾ ಪಡೆಗಳಿಗೆ ಪ್ರತ್ಯೇಕ ಮುಖ್ಯಸ್ಥರಿದ್ದಾರೆ. ರಾಷ್ಟ್ರಪತಿಗಳು ನೇತೃತ್ವ, ಆದೇಶದಂತೆ ಮೂರು ಪಡೆಗಳು ಕಾರ್ಯನಿರ್ವಹಿಸುತ್ತಿವೆ. ಕೇಂದ್ರ ಸರ್ಕಾರ ಹಾಗೂ ಮೂರು ಪಡೆಗಳ ಮಧ್ಯೆ ಸಮನ್ವಯ ತರುವ ಕೆಲಸವನ್ನು ಸಿಡಿಎಸ್ ಮಾಡುತ್ತಿದ್ದರು. ಈ ಹುದ್ದೆಗೆ ಆಯ್ಕೆ ಆಗುವವರು 4 ಸ್ಟಾರ್ ಹೊಂದಿರುವ ಮಿಲಿಟರಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಾರೆ.