Tag: ceasefire

  • ಪಾಕಿಸ್ತಾನ-ಅಫ್ಘಾನಿಸ್ತಾನದ ನಡುವೆ ತಕ್ಷಣದಿಂದ ಜಾರಿಗೆ ಬರುವಂತೆ ಕದನ ವಿರಾಮಕ್ಕೆ ಒಪ್ಪಿಗೆ

    ಪಾಕಿಸ್ತಾನ-ಅಫ್ಘಾನಿಸ್ತಾನದ ನಡುವೆ ತಕ್ಷಣದಿಂದ ಜಾರಿಗೆ ಬರುವಂತೆ ಕದನ ವಿರಾಮಕ್ಕೆ ಒಪ್ಪಿಗೆ

    ಇಸ್ಲಾಮಾಬಾದ್: ಪಾಕಿಸ್ತಾನ-ಅಫ್ಘಾನಿಸ್ತಾನದ (Afghanistan-Pakistan) ನಡುವೆ ತಾರಕಕ್ಕೇರಿದ್ದ ಸಂಘರ್ಷಕ್ಕೆ ತೆರೆ ಬಿದ್ದಿದೆ. ಕತಾರ್ ಮತ್ತು ಟರ್ಕಿಯ ಮಧ್ಯಸ್ಥಿಕೆಯೊಂದಿಗೆ, ಎರಡೂ ರಾಷ್ಟ್ರಗಳು ತಕ್ಷಣದಿಂದಲೇ ಜಾರಿಗೆ ಬರುವಂತೆ ಕದನ ವಿರಾಮಕ್ಕೆ (Ceasefire) ಒಪ್ಪಿಕೊಂಡಿವೆ ಎಂದು ಕತಾರ್‌ನ ವಿದೇಶಾಂಗ ಸಚಿವಾಲಯ ಖಚಿತಪಡಿಸಿದೆ.

    ದೋಹಾದಲ್ಲಿ ಪಾಕಿಸ್ತಾನದ ನಿಯೋಗದಲ್ಲಿ ರಕ್ಷಣಾ ಸಚಿವ ಖವಾಜಾ ಆಸಿಫ್ ಮತ್ತು ಗುಪ್ತಚರ ಮುಖ್ಯಸ್ಥ ಜನರಲ್ ಅಸಿಮ್ ಮಲಿಕ್ ಇದ್ದರು. ಅಫ್ಘಾನಿಸ್ತಾನದ ಪರವಾಗಿ ರಕ್ಷಣಾ ಸಚಿವ ಮೊಹಮ್ಮದ್ ಯಾಕೂಬ್ ನೇತೃತ್ವ ವಹಿಸಿದ್ದರು ಎಂದು ತಾಲಿಬಾನ್ ತಿಳಿಸಿದೆ.

    ಈ ಹೊಸ ಒಪ್ಪಂದದ ಹೊರತಾಗಿಯೂ, ಉಭಯ ದೇಶಗಳು ಕದನ ವಿರಾಮ ಉಲ್ಲಂಘನೆಯ ಬಗ್ಗೆ ಪರಸ್ಪರ ಆರೋಪಗಳನ್ನು ಮುಂದುವರಿಸಿವೆ. ಅಫ್ಘಾನಿಸ್ತಾನದ ತಾಲಿಬಾನ್ ಸರ್ಕಾರದ ಪ್ರಧಾನಿ ಮೊಹಮ್ಮದ್ ಹಸನ್ ಅಖುಂದ್, ಅಫ್ಘಾನಿಸ್ತಾನ ಯುದ್ಧದ ಪರವಾಗಿಲ್ಲ ಮತ್ತು ಪಾಕಿಸ್ತಾನವು ಅಫ್ಘಾನಿಸ್ತಾನದ ಭೂಪ್ರದೇಶವನ್ನು ಉಲ್ಲಂಘಿಸುವ ಮೂಲಕ ಹೊಸ ದಾಳಿ ಪ್ರಾರಂಭಿಸಿದೆ ಎಂದು ಆರೋಪಿಸಿದ್ದಾರೆ.

  • ಅಫ್ಘಾನ್‌-ಪಾಕ್‌ ಮಧ್ಯೆ 48 ಗಂಟೆಗಳ ಕದನ ವಿರಾಮ ಜಾರಿ

    ಅಫ್ಘಾನ್‌-ಪಾಕ್‌ ಮಧ್ಯೆ 48 ಗಂಟೆಗಳ ಕದನ ವಿರಾಮ ಜಾರಿ

    ಕಾಬೂಲ್‌/ಇಸ್ಲಾಮಾಬಾದ್‌: ಪಾಕಿಸ್ತಾನ (Pakistan) ಮತ್ತು ಅಫ್ಘಾನಿಸ್ತಾನ (Afghanistan) ನಡುವೆ ನಡೆದ ಹಿಂಸಾಚಾರದಲ್ಲಿ ಡಜನ್‌ಗಟ್ಟಲೇ ಜನ ಸಾವನ್ನಪ್ಪಿ ಮತ್ತು ಅನೇಕರು ಗಾಯಗೊಂಡ ನಂತರ ಎರಡು ದೇಶಗಳು 48 ಗಂಟೆಗಳ ಕದನ ವಿರಾಮಕ್ಕೆ (Ceasefire) ಒಪ್ಪಿಕೊಂಡಿವೆ.

    ಭಾರತೀಯ ಕಾಲಮಾನ ಬುಧವಾರ ಸಂಜೆ 6 ಗಂಟೆಗೆ ಕದನ ವಿರಾಮ ಜಾರಿಯಾಗಿದೆ. ಅಫ್ಘಾನಿಸ್ತಾನ ಕದನ ವಿರಾಮವನ್ನು ಕೇಳಿದೆ ಎಂದು ಪಾಕಿಸ್ತಾನ ಹೇಳಿಕೊಂಡಿದೆ. ಕದನ ವಿರಾಮದ ಬಗ್ಗೆಯಾಗಲಿ ಅಥವಾ ಹೋರಾಟವನ್ನು ತಾತ್ಕಾಲಿಕವಾಗಿ ನಿಲ್ಲಿಸುವಂತೆ ಮೊದಲು ಕೇಳಿದ್ದು ಯಾರು ಮತ್ತು ಪಾಕ್ ಹೇಳಿಕೆಯ ಬಗ್ಗೆಯಾಗಲಿ ಅಫ್ಘಾನಿಸ್ತಾನ ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

    ನಮ್ಮ ನಡುವೆ ಸಂಕೀರ್ಣವಾಗಿರುವ ಸಮಸ್ಯೆಯಿದೆ. ಆದರೆ ಈ ಸಮಸ್ಯೆಗೆ ಮಾತುಕತೆಯ ಮೂಲಕ ಪರಿಹಾರವನ್ನು ಕಂಡುಹಿಡಿಯಲು ಪ್ರಾಮಾಣಿಕ ಪ್ರಯತ್ನ ನಡೆಸುತ್ತೇವೆ ಪಾಕಿಸ್ತಾನ ಹೇಳಿದೆ. ಇದನ್ನೂ ಓದಿ:  ಪಾಕ್‌ ವಿರುದ್ಧ ಸಿಡಿದೆದ್ದ ಪಿಒಕೆ – ಏನಿದು ವಿವಾದ?

    ಇಂದು ಮುಂಜಾನೆ ನಡೆಸಿದ ಮಿಲಿಟರಿ ಕಾರ್ಯಾಚರಣೆಗಳಲ್ಲಿ ಡಜನ್‌ಗಟ್ಟಲೆ ಅಫ್ಘಾನ್ ಸೈನಿಕರನ್ನು ಉಗ್ರಗಾಮಿಗಳನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನ ಹೇಳಿದೆ.

     

    ಇತ್ತೀಚಿನ ವರ್ಷಗಳಲ್ಲಿ ಎರಡು ದೇಶಗಳ ಮಧ್ಯೆ ನಡೆದ ಅತ್ಯಂತ ಭೀಕರ ಘರ್ಷಣೆ ಇದಾಗಿದೆ. ಕಾಬೂಲ್‌ ಮೇಲೆ ಪಾಕಿಸ್ತಾನ ಏರ್‌ ಸ್ಟ್ರೈಕ್‌ ಮಾಡಿದ್ದಕ್ಕೆ ಪ್ರತಿಯಾಗಿ ಅಫ್ಘಾನಿಸ್ತಾನ ಗಡಿಯಲ್ಲಿ ದಾಳಿ ನಡೆಸಿತ್ತು.

  • ಗಾಜಾ ಯುದ್ಧ ಅಂತ್ಯ | ಇಸ್ರೇಲ್‌ನ 7 ಒತ್ತೆಯಾಳುಗಳನ್ನ ಬಿಡುಗಡೆ ಮಾಡಿದ ಹಮಾಸ್

    ಗಾಜಾ ಯುದ್ಧ ಅಂತ್ಯ | ಇಸ್ರೇಲ್‌ನ 7 ಒತ್ತೆಯಾಳುಗಳನ್ನ ಬಿಡುಗಡೆ ಮಾಡಿದ ಹಮಾಸ್

    – 2 ವರ್ಷಗಳಿಂದ ಒತ್ತೆಯಾಳುಗಳಾಗಿದ್ದ 20 ಜನರ ಪೈಕಿ 7 ಮಂದಿ ರಿಲೀಸ್

    ಟೆಲ್‌ಅವಿವ್: ಗಾಜಾದಲ್ಲಿ (Gaza) ಯುದ್ಧ ಅಂತ್ಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಘೋಷಣೆ ಬೆನ್ನಲ್ಲೇ ಮೊದಲ ಹಂತವಾಗಿ ಇಸ್ರೇಲ್‌ನ (Israel) 7 ಮಂದಿ ಒತ್ತೆಯಾಳುಗಳನ್ನ ಹಮಾಸ್ (Hamas) ಬಿಡುಗಡೆ ಮಾಡಿದೆ.

    ಇಸ್ರೇಲ್-ಹಮಾಸ್ ಕದನ ವಿರಾಮದ ಭಾಗವಾಗಿ ಮೊದಲ ಹಂತದಲ್ಲಿ 7 ಒತ್ತೆಯಾಳುಗಳನ್ನು ಹಮಾಸ್ ರೆಡ್‌ಕ್ರಾಸ್‌ಗೆ ಹಸ್ತಾಂತರಿಸಿದೆ. ಆದರೆ ಅವರ ಸದ್ಯದ ಸ್ಥಿತಿಯ ಬಗ್ಗೆ ಮಾಹಿತಿ ಇಲ್ಲ. ಜೊತೆಗೆ ಇಸ್ರೇಲ್ ವಶದಲ್ಲಿರುವ 1,900ಕ್ಕೂ ಹೆಚ್ಚು ಪ್ಯಾಲೆಸ್ತೀನ್ ಕೈದಿಗಳಿಗೆ ಬದಲಾಗಿ 20 ಒತ್ತೆಯಾಳುಗಳನ್ನು ವಿನಿಮಯ ಮಾಡಿಕೊಳ್ಳಲಾಗುವುದು ಎಂದು ಹಮಾಸ್ ಹೇಳಿದೆ. ಅದರಂತೆ 20 ಮಂದಿ ಪೈಕಿ 7 ಒತ್ತೆಯಾಳುಗಳನ್ನ ಬಿಡುಗಡೆಗೊಳಿಸಲಾಗಿದೆ.ಇದನ್ನೂ ಓದಿ: Gaza War Is Over | ಗಾಜಾ ಯುದ್ಧ ಮುಗಿದಿದೆ – ಟ್ರಂಪ್‌ ಘೋಷಣೆ; ಇಸ್ರೇಲ್, ಹಮಾಸ್ ನಡ್ವೆ ಒತ್ತೆಯಾಳು-ಕೈದಿ ವಿನಿಮಯ ಶುರು

    ಹಮಾಸ್ ಬಿಡುಗಡೆಗೊಳಿಸಿರುವ ಒತ್ತೆಯಾಳುಗಳು ಸದ್ಯ ರೆಡ್‌ಕ್ರಾಸ್ ನಿಯಂತ್ರಣದಲ್ಲಿದ್ದಾರೆ ಎಂದು ಇಸ್ರೇಲ್ ಮಾಧ್ಯಮಗಳು ಬಹಿರಂಗಪಡಿಸಿದ್ದು, ಒತ್ತೆಯಾಳುಗಳ ಕುಟುಂಬಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ.

    ಗಾಜಾದಲ್ಲಿ ಯುದ್ಧ ಅಂತ್ಯಗೊಂಡು, ಮಧ್ಯಪ್ರಾಚ್ಯದಲ್ಲಿ ಈಗ ಶಾಂತಿ ನೆಲೆಸಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಹಮಾಸ್ ಒತ್ತೆಯಾಳುಗಳ ಬಿಡುಗಡೆಗೂ ಮುನ್ನ ಟ್ರಂಪ್ ಪಶ್ಚಿಮ ಏಷ್ಯಾಕ್ಕೆ ತೆರಳಿದ್ದಾರೆ. ಇದಕ್ಕೂ ಮುನ್ನ ಏರ್‌ಫೋರ್ಸ್ ಒನ್‌ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇಸ್ರೇಲ್ ಮತ್ತು ಹಮಾಸ್ ನಡುವಿನ ಸಂಘರ್ಷ ಮುಗಿದಿದೆ ಎಂದು ತಿಳಿಸಿದ್ದರು.

    ಇದೊಂದು ವಿಶೇಷ ಕಾರ್ಯಕ್ರಮ, ಸಹಜವಾಗಿ ಒಂದು ಕಡೆ ಸಂತೋಷ ಇದ್ರೆ, ಮತ್ತೊಂದು ಕಡೆ ದುಃಖ ಇದೆ. ಆದ್ರೆ ಎಲ್ಲರೂ ಅಚ್ಚರಿಯಾಗಿರುವುದು, ರೋಮಾಂಚನಗೊಂಡಿರುವುದು ಇದೇ ಮೊದಲು. ಆದ್ರೆ ಯುದ್ಧ ನಿಲ್ಲಿಸುವ ಭಾಗವಾಗಿರುವುದು ನಿಜಕ್ಕೂ ನನಗೆ ಗೌರವ. ಇನ್ಮುಂದೆ ನಾವು ಹಿಂದೆಂದೂ ಕಾಣದ ಅದ್ಭುತ ಕ್ಷಣಗಳನ್ನು ಕಳೆಯಲಿದ್ದೇವೆ ಎಂದು ಹರ್ಷ ವ್ಯಕ್ತಪಡಿಸಿದ್ದರು.

    ಈ ಯುದ್ಧ ನಿಲ್ಲಿಸಿದ್ದರಿಂದ ಯಹೂದಿಗಳು, ಮುಸ್ಲಿಮರು ಅಥವಾ ಅರಬ್ ದೇಶಗಳಾಗಿರಬಹುದು ಎಲ್ಲರೂ ಸಂತೋಷವಾಗಿದ್ದಾರೆ. ಇದರ ಬಳಿಕ ನಾವು ಈಜಿಪ್ಟ್ಗೆ ಹೋಗ್ತಿದ್ದೀವಿ. ಶಕ್ತಿಶಾಲಿ ಮತ್ತು ದೊಡ್ಡ ದೇಶಗಳ ನಾಯಕರನ್ನು ಹಾಗೂ ಅತ್ಯಂತ ಶ್ರೀಮಂತ ದೇಶಗಳನ್ನ ಭೇಟಿಯಾಗುತ್ತೇವೆ. ಅವರೆಲ್ಲರೂ ಈ ಈ ಒಪ್ಪಂದದಲ್ಲಿ ಭಾಗಿಯಾಗಿದ್ದಾರೆ ಎಂದು ತಿಳಿಸಿದ್ದರು.ಇದನ್ನೂ ಓದಿ: ಯುದ್ಧಗಳನ್ನ ಪರಿಹರಿಸೋದ್ರಲ್ಲಿ ನಾನು ನಿಪುಣ; ಭಾರತ-ಪಾಕ್‌ ಕದನ ವಿರಾಮ ಬಗ್ಗೆ ಮತ್ತೆ ಬೆನ್ನುತಟ್ಟಿಕೊಂಡ ಟ್ರಂಪ್‌

    ಯುದ್ಧ ನಿಲ್ಲಿಸೋದ್ರಲ್ಲಿ ನಾನು ನಿಪುಣ:
    ಇದಕ್ಕೂ ಮುನ್ನ, ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷ ಸೇರಿದಂತೆ ವಿಶ್ವದ ಹಲವು ಸಘರ್ಷಗಳನ್ನು ಪರಿಹರಿಸುವಲ್ಲಿ ನಾನು ಪ್ರಮುಖ ಪಾತ್ರ ವಹಿಸಿದ್ದಾಗಿ ಟ್ರಂಪ್ ಮತ್ತೊಮ್ಮೆ ತಮಗೆ ತಾವೇ ಬೆನ್ನುತಟ್ಟಿಕೊಂಡಿದ್ದಾರೆ. ಜೊತೆಗೆ ಇದನ್ನೆಲ್ಲ ನೊಬೆಲ್ ಶಾಂತಿ ಪ್ರಶಸ್ತಿಗಾಗಿ ಮಾಡಿಲ್ಲ ಎಂದು ಹೇಳಿದ್ದಾರೆ.

    ಭಾರತ ಮತ್ತು ಪಾಕಿಸ್ತಾನದ ಬಗ್ಗೆ ಯೋಚಿಸಿ. ಕೆಲ ಯುದ್ಧಗಳು 31, 32, 37 ವರ್ಷಗಳ ಕಾಲ ನಡೆದವು. ಲಕ್ಷಾಂತರ ಜನರು ಸಾವನ್ನಪ್ಪಿದ್ರು. ಆದ್ರೆ ನಾನು ಒಂದು ದಿನದ ಬಳಗಾಗಿ ಯುದ್ಧ ಪರಿಹರಿಸಿದೆ. ವ್ಯಾಪಾರ ಮತ್ತು ಸುಂಕದAತಹ ಆರ್ಥಿಕ ಕ್ರಮಗಳ ಮೂಲಕ ಸಂಘರ್ಷ ಬಗೆಹರಿಸಿದ್ದೇನೆ. ಭಾರತ ಮತ್ತು ಪಾಕಿಸ್ತಾನದ ನಡುವಿನ ಯುದ್ಧ ತಡೆಯಲು, ನಿಮ್ಮ ಬಳಿ ಪರಮಾಣು ಶಸ್ತ್ರಾಸ್ತ್ರಗಳಿವೆ ಅಂತ ನಾನು ಅವರಿಗೆ ಹೇಳಿದ್ದೆ. ನೀವಿಬ್ಬರೂ ಯುದ್ಧಕ್ಕೆ ಹೋದ್ರೆ ನಿಮ್ಮ ಮೇಲೆ 100%, 150% ಮತ್ತು 200% ಸುಂಕ ವಿಧಿಸುತ್ತೇನೆ ಅಂತ ಎಚ್ಚರಿಕೆ ಕೊಟ್ಟಿದ್ದೆ. ಸುಂಕದ ಎಚ್ಚರಿಕೆ ನೀಡಿದ 24 ಗಂಟೆಗಳಲ್ಲಿ ಯುದ್ಧ ನಿಲ್ಲಿಸಿದೆ. ಇಲ್ಲದಿದ್ದರೆ ಈ ಯುದ್ಧ ನಿಲ್ಲುತ್ತಿರಲಿಲ್ಲ ಎಂದು ಬೀಗಿದ್ದಾರೆ.

    ಪಾಕ್-ಅಫ್ಘಾನ್ ಯುದ್ಧವನ್ನೂ ನಿಲ್ಲಿಸುವೆ:
    ನಾನು ಯುದ್ಧಗಳನ್ನು ಪರಿಹರಿಸುವಲ್ಲಿ ನಿಪುಣ. ಇಸ್ರೇಲ್-ಗಾಜಾ ಕದನ ವಿರಾಮ ನಾನು ಪರಿಹರಿಸಿದ 8 ಯುದ್ಧ. ಈಗ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವೆ ಸಂಘರ್ಷ ನಡೆಯುತ್ತಿದೆ. ನಾನು ಹಿಂದಿರುಗುವಾಗ ಅದನ್ನೂ ಪರಿಹರಿಸುತ್ತೇನೆ ಎಂದು ತಮ್ಮ ಬೆನ್ನು ತಾವೇ ತಟ್ಟಿಕೊಂಡಿದ್ದಾರೆ.

    ನೊಬೆಲ್ ಶಾಂತಿ ಪ್ರಶಸ್ತಿ ಗೆಲ್ಲುವುದು ತನ್ನ ಗುರಿಯಲ್ಲ. ಆದ್ರೆ ಯುದ್ಧಗಳನ್ನು ನಿಲ್ಲಿಸುವುದು ನನಗೆ ಗೌರವ. 2025 ರಲ್ಲಿ ಇನ್ನೂ ಪ್ರಮುಖ ಕೆಲಸಗಳನ್ನು ಮಾಡಲಾಗುತ್ತದೆ. ಜೀವಗಳನ್ನು ಉಳಿಸುವ ಉದ್ದೇಶದಿಂದ ನಾನು ಈ ಕೆಲಸಗಳನ್ನು ಮಾಡಿದ್ದೇನೆ ಎಂದು ಟ್ರಂಪ್ ಹೇಳಿದ್ದಾರೆ.ಇದನ್ನೂ ಓದಿ: ಉಗ್ರರ ಒಳನುಸುಳುವಿಕೆ ತಡೆಯಲು ಬಿಎಸ್‌ಎಫ್ ಕಟ್ಟೆಚ್ಚರ; ಕಾಶ್ಮೀರ ಕಣಿವೆಯಲ್ಲಿ ಭದ್ರತೆ ಹೆಚ್ಚಳ

  • ಟ್ರಂಪ್‌ ದಿಟ್ಟತನದಿಂದ ಭಾರತದ ಜೊತೆ ಕದನ ವಿರಾಮ ಸಾಧ್ಯವಾಯ್ತು: ಹಾಡಿ ಹೊಗಳಿದ ಪಾಕ್‌ ಪ್ರಧಾನಿ

    ಟ್ರಂಪ್‌ ದಿಟ್ಟತನದಿಂದ ಭಾರತದ ಜೊತೆ ಕದನ ವಿರಾಮ ಸಾಧ್ಯವಾಯ್ತು: ಹಾಡಿ ಹೊಗಳಿದ ಪಾಕ್‌ ಪ್ರಧಾನಿ

    – ಭಯೋತ್ಪಾದನೆ ತಡೆಗೆ ಪಾಕ್‌ನಲ್ಲಿ ಸ್ಥಾಪನೆಯಾಗಲಿದೆಯಂತೆ ಸ್ಪೆಷಲ್‌ ಕಮಾಂಡ್‌
    – ಅಮೆರಿಕ-ಪಾಕ್‌ ನಡುವೆ ದ್ವಿಪಕ್ಷೀಪ ಒಪ್ಪಂದ

    ಇಸ್ಲಾಮಾಬಾದ್‌: ಪಾಕಿಸ್ತಾನದ ಪ್ರಧಾನಿ ಶೆಹಬಾಜ್‌ ಷರೀಫ್‌ (Shehbaz Sharif), ಫೀಲ್ಡ್‌ ಮಾರ್ಷಲ್‌ ಅಸೀಮ್‌ ಮುನೀರ್‌ ಶ್ವೇತಭವನದ ಓವಲ್‌ ಕಚೇರಿಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಅವರನ್ನು ಭೇಟಿಯಾಗಿದ್ದು, ಸುಮಾರು 90 ನಿಮಿಷಗಳ ಕಾಲ ವಿವಿಧ ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.

    ವಿಶ್ವಸಂಸ್ಥೆಯ (United Nations) ಸಾಮಾನ್ಯ ಸಭೆಯ 80ನೇ ಅಧಿವೇಶನದಲ್ಲಿ ಭಾಗಿಯಾಗಲು ಅಮೆರಿಕ ಪ್ರವಾಸದಲ್ಲಿರುವ ಷರೀಫ್ ಅವರಿಂದು ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಅದಕ್ಕೂ ಮುನ್ನವೇ ಸೇನಾ ಮುಖಸ್ಥರೊಟ್ಟಿಗೆ ಟ್ರಂಪ್‌ ಅವರನ್ನ ಭೇಟಿಯಾಗಿದ್ದು, ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆಂದು ತಿಳಿದುಬಂದಿದೆ. ಭದ್ರತೆ ಮತ್ತು ಆರ್ಥಿಕತೆಗೆ ಸಂಬಂಧಿಸಿದ ಅನೇಕ ಒಪ್ಪಂದಗಳಿಗೆ ಸಹಿ ಮಾಡಿದ್ದಾರೆ. ಭಯೋತ್ಪಾದನೆ ನಿಗ್ರಹ ಒಪ್ಪಂದಕ್ಕೂ ಸಹಿ ಮಾಡಲಾಗಿದ್ದು, ಪರಸ್ಪರ ಸಹಕಾರದೊಂದಿಗೆ ಮುಂದುವರಿಯಲು ಒಪ್ಪಿಕೊಂಡಿರುವುದಾಗಿ ತಿಳಿದುಬಂದಿದೆ. ಈ ಸಂದರ್ಭದಲ್ಲಿ ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್, ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಕೂಡ ಉಪಸ್ಥಿತರಿದ್ದರು ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಸುಂಕ ಸುಂಕ ಸುಂಕ; ಔಷಧಗಳ ಆಮದಿನ ಮೇಲೆ 100% ಸುಂಕ ಘೋಷಿಸಿದ ಟ್ರಂಪ್‌ – ಭಾರತಕ್ಕೇನು ಎಫೆಕ್ಟ್‌?

    ಉಭಯ ದೇಶಗಳ ಒಪ್ಪಂದಗಳು ಭದ್ರತೆ, ಆರ್ಥಿಕತೆ, ಕಾರ್ಯತಂತ್ರದ ಪಾಲುದಾರಿಕೆ, ಭಯೋತ್ಪಾದನಾ ನಿಗ್ರಹ ಹಾಗೂ ಪಾಕ್‌ನಲ್ಲಿ (Pakistan) ಖನಿಜ ಸಂಪತ್ತಿನ ಶೋಧನೆ ತೈಲ ಪರಿಶೋಧನೆಯನ್ನು ಕೇಂದ್ರೀಕರಿಸಿತ್ತು. ಜೊತೆಗೆ ಬಾಗ್ರಾಮ್‌ ವಾಯುನೆಲೆ ಹಾಗೂ ಆ ಪ್ರದೇಶದಲ್ಲಿ ಹೆಚ್ಚುತ್ತಿರುವ ಚೀನಾ ಪ್ರಭಾವದ ಕುರಿತು ಚರ್ಚೆಗಳು ನಡೆದಿವೆ ಎನ್ನಲಾಗಿದೆ. ಇದನ್ನೂ ಓದಿ: ಟ್ರಂಪ್‌ H-1B ವೀಸಾ ಟಫ್‌ ರೂಲ್ಸ್‌ ನಡುವೆಯೂ ಭಾರತೀಯರಿಗೆ ಮಣೆ ಹಾಕಿದ ಕಂಪನಿಗಳು – ಮೈಸೂರಲ್ಲಿ ಓದಿದ್ದ ವ್ಯಕ್ತಿಗೆ ಸಿಇಒ ಪಟ್ಟ

    ಪಾಕ್‌ನಲ್ಲಿ ಜಂಟಿ ಭಯೋತ್ಪಾದನಾ ನಿಗ್ರಹ ಘಟಕ ಸ್ಥಾಪನೆ
    ಪಹಲ್ಗಾಮ್‌ ಉಗ್ರರಿಗೆ ಕುಮ್ಮಕ್ಕು ನೀಡಿದ್ದ ಪಾಕಿಸ್ತಾನ ಇದೀಗ ಅಮೆರಿಕದೊಟ್ಟಿಗೆ ಭಯೋತ್ಪಾದನೆ ನಿಗ್ರಹ ಒಪ್ಪಂದ ಮಾಡಿಕೊಂಡಿದೆ. ಅದಕ್ಕಾಗಿ ಪಾಕಿಸ್ತಾನದಲ್ಲಿ ಜಂಟಿ ಭಯೋತ್ಪಾದನಾ ನಿಗ್ರಹ ಘಟಕ ಸ್ಥಾಪಿಸುವ ನಿರ್ಧಾರವನ್ನೂ ಕೈಗೊಂಡಿದೆ. ‌ಇದೇ ವೇಳೆ ಟ್ರಂಪ್‌ ಅಫ್ಘಾನ್‌ನಿಂದ ಬರುತ್ತಿರುವ ಉಗ್ರ ಬೆದರಿಕೆಗಳನ್ನು ಪರಿಹರಿಸುವುದಾಗಿ ಟ್ರಂಪ್‌ ಪಾಕ್‌ ಪ್ರಧಾನಿ, ಅಸಿಮ್‌ ಮುನೀರ್‌ಗೆ ಭರವಸೆ ನೀಡಿದ್ದಾರೆ.

    ಇನ್ನೂ ಸಭೆಯ ಬಳಿಕ ಮಾತನಾಡಿದ ಟ್ರಂಪ್‌, ಭಾರತ ಪಾಕಿಸ್ತಾನ ನಡುವಿನ ಭೀಕರ ಯುದ್ಧ ನಿಲ್ಲಿಸಿದ್ದು ನಾನೇ ಅಂತ ಬಾಯಿ ಬಡಿದುಕೊಂಡಿದ್ದಾರೆ. ಇದನ್ನೂ ಓದಿ: ಭಾರತ ನಮ್ಮ ಶಿಬಿರವನ್ನ ನಾಶಮಾಡಿದೆ – ಜೈಶ್ ಬಳಿಕ ಆಪರೇಷನ್ ಸಿಂಧೂರ ಸತ್ಯ ಒಪ್ಪಿಕೊಂಡ ಲಷ್ಕರ್ ಉಗ್ರ

    ಕದನ ವಿರಾಮ ಹೇಳಿಕೆಗೆ ಪಾಕ್ ಪ್ರಧಾನಿ ಪ್ರತಿಧ್ವನಿ
    ಟ್ರಂಪ್‌ ಭೇಟಿ ಬಳಿಕ ಮಾತನಾಡಿದ ಷರೀಫ್‌, ಕದನ ವಿರಾಮ ಉಲ್ಲೇಖಿಸಿ ಟ್ರಂಪ್‌ ಅವರನ್ನ ಶ್ಲಾಘಿಸಿದ್ದಾರೆ. ಅಧ್ಯಕ್ಷ ಟ್ರಂಪ್ ಅವರ ದಿಟ್ಟತನ ಮತ್ತು ನಿರ್ಣಾಯಕ ನಾಯಕತ್ವ ಭಾರತ-ಪಾಕಿಸ್ತಾನ ಕದನ ವಿರಾಮಕ್ಕೆ ಅನುಕೂಲ ಮಾಡಿಕೊಟ್ಟಿತು. ಅಲ್ಲದೇ ಗಾಜಾದಲ್ಲಿನ ಸಂಘರ್ಷ ಕೊನೆಗೊಳಿಸಲು ಹಾಗೂ ಮಧ್ಯಪ್ರಾಚ್ಯದಲ್ಲಿ ಶಾಂತಿ ಪುನಸ್ಥಾಪಿಸುವ ನಿರ್ಧಾರ ಕೈಗೊಂಡಿರುವುದು ಶ್ಲಾಘನೀಯ ಎಂದು ಟ್ರಂಪ್‌ ಪರ ಹಾಡಿಹೊಗಳಿದರು.

  • ಕತಾರ್‌ ಮೇಲೆ ಇಸ್ರೇಲ್‌ ಏರ್‌ಸ್ಟ್ರೈಕ್‌; ಹಮಾಸ್‌ ನಾಯಕನ ಪುತ್ರ ಸೇರಿ 6 ಮಂದಿ ಬಲಿ – ಟಾಪ್‌ ಲೀಡರ್‌ ಪಾರು

    ಕತಾರ್‌ ಮೇಲೆ ಇಸ್ರೇಲ್‌ ಏರ್‌ಸ್ಟ್ರೈಕ್‌; ಹಮಾಸ್‌ ನಾಯಕನ ಪುತ್ರ ಸೇರಿ 6 ಮಂದಿ ಬಲಿ – ಟಾಪ್‌ ಲೀಡರ್‌ ಪಾರು

    ಟೆಲ್‌ಅವಿವ್‌: ಕತಾರ್‌ ರಾಜಧಾನಿ ದೋಹಾದಲ್ಲಿ (Doha) ಇಸ್ರೇಲ್‌ ನಡೆಸಿದ ಭೀಕರ ವಾಯುದಾಳಿಯಲ್ಲಿ (Israel Air Strike) ನಮ್ಮ ನಾಯಕ ಬದುಕುಳಿದಿದ್ದಾರೆ. ಆದ್ರೆ ಹಮಾಸ್‌ ನಾಯಕ ಪುತ್ರ ಸೇರಿ ಕನಿಷ್ಠ 6 ಮಂದಿ ಸಾವನ್ನಪ್ಪಿದ್ದಾರೆ ಎಂದು ಹಮಾಸ್‌ ಬಂಡುಕೋರರ ಗುಂಪು ಅಧಿಕೃತ ಹೇಳಿಕೆ ನೀಡಿದೆ.

    ಯುದ್ಧ ನಿಲ್ಲಬೇಕು, ಗಾಜಾದಿಂದ ಸೈನ್ಯ ಹಿಂದಕ್ಕೆ ತೆಗೆದುಕೊಳ್ಳಬೇಕು ಮತ್ತು ಗಾಜಾವನ್ನು ನೋಡಿಕೊಳ್ಳಲು ಬೇರೆಯೇ ಸಮಿತಿ ರಚನೆಯಾಗಬೇಕು ಎಂದು ಟ್ರಂಪ್‌ (Donald Trump) ಎಚ್ಚರಿಕೆ ಕೊಟ್ಟಿದ್ದರು. ಆ ಬೆನ್ನಲ್ಲೇ ಹಮಾಸ್‌ ಹಿರಿಯ ನಾಯಕರ ಗುರಿಯಾಗಿಸಿಕೊಂಡು ಇಸ್ರೇಲ್‌ ಸೇನೆ ದಾಳಿ ನಡೆಸಿದೆ. ಆದ್ರೆ ಇದೊಂದು ಹೇಡಿತನದ ದಾಳಿ ಎಂದು ಆಕ್ರೋಶ ಕತಾರ್‌ ಆಕ್ರೋಶ ವ್ಯಕ್ತಪಡಿಸಿದೆ. ಕದನ ವಿರಾಮ ಮತ್ತು ಯುದ್ಧ ಕೈದಿಗಳ ಕುರಿತು ಮಾತುಕತೆ ನಡೆಯುತ್ತಿದ್ದಾಗಲೇ ಇಸ್ರೇಲ್‌ ದಾಳಿ ನಡೆಸಿರುವುದನ್ನು ಹಮಾಸ್‌ ಗುಂಪು ಖಂಡಿಸಿದೆ.

    ಇದು ಆಕ್ರಮಣಕಾರಿ ಸ್ವರೂಪದ ಅಪರಾಧ ಕೃತ್ಯ. ಒಪ್ಪಂದದ ಸಾಧ್ಯತೆಗಳನ್ನು ಹಾಳುಮಾಡುವ ಹಾಗೂ ನಿರಾಕರಿಸುವ ದೃಷ್ಟಿಕೋನವನ್ನು ತೋರಿಸುತ್ತದೆ. ಇದು ಘೋರ ಅಪರಾಧ, ಸ್ಪಷ್ಟ ಆಕ್ರಮಣ ಮಾತ್ರವಲ್ಲದೇ ಎಲ್ಲಾ ಅಂತಾರಾಷ್ಟ್ರೀಯ ನಿಯಮ ಮತ್ತು ಕಾನೂನುಗಳ ಉಲ್ಲಂಘನೆಯಾಗಿದೆ ಎಂದು ಪ್ಯಾಲೆಸ್ತೀನ್‌ ಗುಂಪು ಅಸಮಾಧಾನ ಹೊರಹಾಕಿದೆ. ಈ ದಾಳಿಯಲ್ಲಿ ಹಮಾಸ್ ನಾಯಕ ಖಲೀಲ್ ಅಲ್-ಹಯ್ಯನ ಪುತ್ರ, ಓರ್ವ ಸಹಾಯಕ ಸಿಬ್ಬಂದಿ, ಓರ್ವ ಭದ್ರತಾ ಅಧಿಕಾರಿ ಸೇರಿದಂತೆ ಕನಿಷ್ಠ 6 ಜನ ಸಾವನ್ನಪ್ಪಿದ್ದಾರೆ ಎಂದು ಗುಂಪು ದೃಢಪಡಿಸಿದೆ.

    ಏನಾಗಿತ್ತು?
    ಕತಾರ್‌ನ ರಾಜಧಾನಿ ದೋಹಾದಲ್ಲಿ ಮಂಗಳವಾರ ಇಸ್ರೇಲ್‌ ವಾಯು ದಾಳಿ ನಡೆಸಿತ್ತು. ಹಮಾಸ್‌ ಹಿರಿಯ ನಾಯಕರ ವಸತಿ ಕಟ್ಟಡವನ್ನು ಗುರಿಯಾಗಿಸಿಕೊಂಡು ಇಸ್ರೇಲ್ ರಕ್ಷಣಾ ಪಡೆ (IDF) ಮತ್ತು ಇಸ್ರೇಲ್ ಭದ್ರತಾ ಸಂಸ್ಥೆ (ISA) ವಾಯು ದಾಳಿ ನಡೆಸಿತ್ತು. ಇದನ್ನೂ ಓದಿ: ನನ್ನ ಆತ್ಮೀಯ ಸ್ನೇಹಿತ ಮೋದಿ ಜೊತೆ ಮಾತನಾಡಲು ಎದುರು ನೋಡುತ್ತಿದ್ದೇನೆ: ಟ್ರಂಪ್‌

    ಕದನ ವಿರಾಮ ಚರ್ಚೆ ವೇಳೆ ದಾಳಿ
    ವರದಿಗಳ ಪ್ರಕಾರ, ಇಸ್ರೇಲ್‌ನ ದಾಳಿಯ ವೇಳೆ ಹಮಾಸ್ ನಾಯಕರು ದೋಹಾದಲ್ಲಿ ಕದನ ವಿರಾಮದ ಬಗ್ಗೆ ಚರ್ಚಿಸುತ್ತಿದ್ದರು. ಗಾಜಾ ಪಟ್ಟಿಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಕದನ ವಿರಾಮದ ಪ್ರಸ್ತಾಪದ ಬಗ್ಗೆ ಚರ್ಚಿಸುತ್ತಿದ್ದಾಗ ದೋಹಾದಲ್ಲಿ ಹಮಾಸ್ ನಿಯೋಗದ ಮೇಲೆ ದಾಳಿ ಮಾಡಲಾಗಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ಸ್ಪೇನ್‌ನಲ್ಲಿ ಬೀಚ್‌ಗಳನ್ನು ಬಂದ್‌ ಮಾಡಿಸಿದ ನೀಲಿ ಡ್ರ್ಯಾಗನ್‌ – ಏನಿದರ ವಿಶೇಷ? 

    ಇಸ್ರೇಲ್‌ ಸೇನೆ ಹೇಳಿದ್ದೇನು?
    ಇಸ್ರೇಲ್ ಸೇನೆಯು ಎಕ್ಸ್‌ನಲ್ಲಿ ಹಮಾಸ್‌ ನಾಯಕರ ಮೇಲೆ ವಾಯು ದಾಳಿ ನಡೆಸಿದ ಬಗ್ಗೆ ಸ್ಪಷ್ಟಪಡಿಸಿತ್ತು. ಸೂಕ್ತವಾದ ಮದ್ದುಗುಂಡುಗಳನ್ನು ಬಳಸಿ, ದೋಹಾದಲ್ಲಿರುವ ನಾಗರಿಕರಿಗೆ ಹಾನಿಯಾಗದಂತೆ ವಾಯು ದಾಳಿ ಮಾಡಲಾಗಿದೆ. ಇದಕ್ಕಾಗಿ ಸಾಕಷ್ಟು ಮಾಹಿತಿ ಸಂಗ್ರಹಿಸಿದ್ದೆವು ಹಮಾಸ್ ನಾಯಕರ ವಿರುದ್ಧದ ಕಾರ್ಯಾಚರಣೆಗಳು ಮುಂದುವರಿಯುತ್ತವೆ ಎಂದು ಸೇನೆ ತಿಳಿಸಿದೆ. ಇದನ್ನೂ ಓದಿ: ನೇಪಾಳ ಧಗ ಧಗ – ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರುವಂತೆ ಸಿಎಂ ಸೂಚನೆ

  • ಇಸ್ರೇಲ್ ಜೊತೆ ಸಂಪರ್ಕದಲ್ಲಿದ್ದ 700ಕ್ಕೂ ಅಧಿಕ ಜನರನ್ನು ಬಂಧಿಸಿದ ಇರಾನ್

    ಇಸ್ರೇಲ್ ಜೊತೆ ಸಂಪರ್ಕದಲ್ಲಿದ್ದ 700ಕ್ಕೂ ಅಧಿಕ ಜನರನ್ನು ಬಂಧಿಸಿದ ಇರಾನ್

    ಟೆಹ್ರಾನ್: ಇರಾನ್-ಇಸ್ರೇಲ್ ಮಧ್ಯೆ ಯುದ್ಧವಿರಾಮ ಘೋಷಣೆಯಾದ ಬಳಿಕವೂ ಸೇಡು ಮುಂದುವರಿದಿದೆ. ಮೂವರು ಇಸ್ರೇಲ್ ಗೂಢಚಾರಿಗಳನ್ನು ಇರಾನ್ ಗಲ್ಲಿಗೇರಿಸಿದ್ದು, 700ಕ್ಕೂ ಅಧಿಕ ಜನರನ್ನು ಬಂಧಿಸಿದೆ.

    ಇಸ್ರೇಲ್ ಗೂಢಚಾರಿ ಸಂಸ್ಥೆ ಮೊಸಾದ್‌ಗಾಗಿ ಬೇಹುಗಾರಿಕೆ ಮಾಡುತ್ತಿದ್ದ ಆರೋಪದಲ್ಲಿ ಟರ್ಕಿ ಗಡಿಗೆ ಹೊಂದಿಕೊಂಡ ಉರ್ಮಿಯಾ ಭಾಗದಲ್ಲಿ ಗಲ್ಲಿಗೇರಿಸಿದೆ. ಅಲ್ಲದೆ, ಇಸ್ರೇಲ್ ಜೊತೆ ಸಂಪರ್ಕ ಹೊಂದಿದ್ದ 700ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ.ಇದನ್ನೂ ಓದಿ: ಇಸ್ರೇಲ್ ಪರ ಬೇಹುಗಾರಿಕೆ – ಮೂವರನ್ನು ಗಲ್ಲಿಗೇರಿಸಿದ ಇರಾನ್

    ಬಂಧಿಸಿದ ಬೆನ್ನಲ್ಲೇ ಇರಾನ್‌ಗೆ ಅಮೆರಿಕ ಅಧ್ಯಕ್ಷ ಟ್ರಂಪ್ ಮತ್ತೆ ಎಚ್ಚರಿಕೆ ಕೊಟ್ಟಿದ್ದು, ಇರಾನ್ ತನ್ನ ಪರಮಾಣು ಯೋಜನೆ ಪುನರ್‌ನಿರ್ಮಿಸಲು ಪ್ರಯತ್ನಿಸಿದ್ರೆ, ಅದು ಅವರಿಗೆ ಭಾರಿ ಹೊಡೆತ ನೀಡುತ್ತದೆ ಎಂದಿದ್ದಾರೆ. ಜೊತೆಗೆ ಇರಾನ್ ಮೇಲಿನ ಅಮೆರಿಕ ದಾಳಿಯನ್ನು ಹಿರೋಶೀಮಾಗೆ ಹೋಲಿಸಿದ್ದಾರೆ. ಅಲ್ಲದೇ ಖಮೇನಿ ಬದಲಾವಣೆ ಬಗ್ಗೆ ಟ್ರಂಪ್ ಯೂಟರ್ನ್ ಕೂಡ ಹೊಡೆದಿದ್ದಾರೆ.

    ಇನ್ನೂ ಅಮೆರಿಕ ದಾಳಿಯಿಂದ ಇರಾನ್ ಅಣು ಸ್ಥಾವರಗಳು ನಾಶವಾಗಿದೆ ಅಂತ ಟ್ರಂಪ್ ಹೇಳಿದ್ದರೂ ಅಮೆರಿಕ ಗುಪ್ತಚರ ಇಲಾಖೆ ಮಾತ್ರ ಸಂಪೂರ್ಣ ಯಶಸ್ವಿಯಾಗಿಲ್ಲ ಅಂದಿದೆ. ಆದರೆ, ಇರಾನ್ ವಿದೇಶಾಂಗ ಸಚಿವಾಲಯ ವಕ್ತಾರ ಇಸ್ಮೈಲ್‌ ಬಘಾಯ್ ಮಾತ್ರ ನಮ್ಮ ಅಣುಸ್ಥಾವರಗಳು ತೀವ್ರವಾಗಿ ಹಾನಿಗೊಂಡಿವೆ ಅಂದಿದ್ದಾರೆ.

    ಈ ಮಧ್ಯೆ, ಇರಾನ್ ಪರಮಾಣು ಘಟಕಗಳ ಮೇಲಿನ ದಾಳಿ ಸಂಸತ್ ಅನುಮೋದನೆ ಪಡೆದಿಲ್ಲ ಎಂದು ವಾಗ್ದಂಡನೆಗೆ ಗುರಿಯಾಗಿದ್ದ ಟ್ರಂಪ್ ಪಾರಾಗಿದ್ದಾರೆ. ಅಮೆರಿಕ ಸಂಸತ್‌ನಲ್ಲಿ 344/79 ಮತಗಳಿಂದ ವಾಗ್ದಂಡನೆ ಪ್ರಯತ್ನಕ್ಕೆ ಸೋಲಾಗಿದೆ.ಇದನ್ನೂ ಓದಿ: ಇರಾನ್‌ ಮೇಲೆ ಅಮೆರಿಕ ದಾಳಿ ಸಂಪೂರ್ಣ ಯಶಸ್ವಿಯಾಗಿಲ್ಲ – ಟ್ರಂಪ್ ಮುಜುಗರಕ್ಕೆ ಕಾರಣವಾದ ಗುಪ್ತಚರ ವರದಿ

  • ಮಧ್ಯರಾತ್ರಿ 4 ದೇಶಗಳ ಮಾತುಕತೆ – ಇಸ್ರೇಲ್‌, ಇರಾನ್‌ ಮಧ್ಯೆ ಕದನ ವಿರಾಮ ಆಗಿದ್ದು ಹೇಗೆ?

    ಮಧ್ಯರಾತ್ರಿ 4 ದೇಶಗಳ ಮಾತುಕತೆ – ಇಸ್ರೇಲ್‌, ಇರಾನ್‌ ಮಧ್ಯೆ ಕದನ ವಿರಾಮ ಆಗಿದ್ದು ಹೇಗೆ?

    ವಾಷಿಂಗ್ಟನ್‌: ಕಳೆದ 12 ದಿನಗಳಿಂದ ನಡೆಯುತ್ತಿದ್ದ ಇಸ್ರೇಲ್‌ (Israel) ಇರಾನ್‌ (Iran) ನಡುವಿನ ಯುದ್ಧ ಕೊನೆಗೂ ಅಂತ್ಯವಾಗಿದ್ದು ಎರಡು ದೇಶಗಳು ಕದನ ವಿರಾಮಕ್ಕೆ ಒಪ್ಪಿಕೊಂಡಿವೆ. ಅಮೆರಿಕ (USA) ಮತ್ತು ಕತಾರ್‌ (Qatar) ಪ್ರಯತ್ನದಿಂದ ಈ ಎರಡೂ ದೇಶಗಳು ಕದನ ವಿರಾಮಕ್ಕೆ ಒಪ್ಪಿಗೆ ನೀಡಿವೆ.

    ಜೂನ್‌ 23 ರ ರಾತ್ರಿಯಿಡಿ ನಡೆದ ವಿದ್ಯಮಾನದಲ್ಲಿ ಅಮೆರಿಕ ಇಸ್ರೇಲ್‌ ಮನವೊಲಿಸಿದರೆ ಕತಾರ್‌ ಇರಾನ್‌ ಮನವೊಲಿಸಲು ಯಶಸ್ವಿಯಾಯಿತು.

    ಕದನ ವಿರಾಮ ಹೇಗಾಯ್ತು?
    ಆರಂಭದಲ್ಲಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು (Benjamin Netanyahu) ಜೊತೆ ಮಾತನಾಡಿದರು. ಆರಂಭದಲ್ಲಿ ಕದನ ವಿರಾಮಕ್ಕೆ ಒಪ್ಪದ ಇಸ್ರೇಲ್‌ ಕೊನೆಗೆ ಇರಾನ್‌ ಮುಂದೆ ಯಾವುದೇ ದಾಳಿ ಮಾಡುವುದಿಲ್ಲ ಎಂದು ಒಪ್ಪಿಕೊಂಡರೆ ಮಾತ್ರ ಕದನ ವಿರಾಮಕ್ಕೆ ಒಪ್ಪುತ್ತೇನೆ ಎಂದು ಷರತ್ತು ವಿಧಿಸಿದರು.

    ಬಾಂಬ್‌ ದಾಳಿ ನಡೆಸಿದ್ದರಿಂದ ಇರಾನ್‌ ತನ್ನ ಮಾತನ್ನು ಕೇಳುವುದಿಲ್ಲ ಎನ್ನುವುದು ಅಮೆರಿಕ್ಕೆ ಗೊತ್ತಿತ್ತು. ಈ ಕಾರಣಕ್ಕೆ ಟ್ರಂಪ್ ಇರಾನ್‌ ಆಪ್ತ ದೇಶವಾಗಿರುವ ಕತಾರ್‌ ಸಂಪರ್ಕಿಸಿದರು. ಕತಾರ್‌ ಎಮಿರ್‌ ಜೊತೆ ಮಾತನಾಡಿ ಕದನ ವಿರಾಮಕ್ಕೆ ಇರಾನ್‌ ಮನವೊಲಿಸುವಂತೆ ಕೇಳಿಕೊಂಡರು ನಂತರ ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಕತಾರ್‌ ಪ್ರಧಾನಿ ಕಚೇರಿಯೊಂದಿಗೆ ಸಮನ್ವಯ ಸಾಧಿಸಿದರು. ಇದನ್ನೂ ಓದಿ: 12 ದಿನಗಳ ಇಸ್ರೇಲ್-ಇರಾನ್ ಸಂಘರ್ಷಕ್ಕೆ ಅಂತ್ಯ – ಮೂರು ದೇಶಗಳಿಗೆ ಸಿಕ್ಕಿದ್ದೇನು?

     

    ವ್ಯಾನ್ಸ್ ಜೊತೆಗೆ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಮತ್ತು ಯುಎಸ್ ವಿಶೇಷ ರಾಯಭಾರಿ ಸ್ಟೀವ್ ವಿಟ್ಕಾಫ್ ಕೂಡ ಇರಾನ್ ಜೊತೆ ಮಾತುಕತೆಯಲ್ಲಿ ಭಾಗಿಯಾಗಿದ್ದರು. ಕತಾರ್ ಪ್ರಧಾನಿಯೊಂದಿಗೆ ಮಾತನಾಡಿದ ನಂತರ ಇರಾನ್ ಕದನ ವಿರಾಮ ಪ್ರಸ್ತಾಪಕ್ಕೆ ಒಪ್ಪಿಕೊಂಡಿತು.

    ಅಮೆರಿಕ ಮೂರು ಪ್ರಮುಖ ಪರಮಾಣು ಕೇಂದ್ರಗಳಾದ ಫೋರ್ಡೋ, ನಟಾಂಜ್ ಮತ್ತು ಇಸ್ಫಹಾನ್ ಮೇಲೆ ಬಾಂಬ್ ದಾಳಿ ಮಾಡಿದ್ದಕ್ಕೆ ಇರಾನ್‌ ಮಧ್ಯಪ್ರಾಚ್ಯದಲ್ಲಿರುವ ಅಮೆರಿಕದ ನೆಲೆಗಳ ಮೇಲೆ ಪ್ರತಿದಾಳಿ ನಡೆಸುವ ಎಚ್ಚರಿಕೆ ನೀಡಿತ್ತು. ಅದರಂತೆ ಸೋಮವಾರ ರಾತ್ರಿ ಮಧ್ಯಪ್ರಾಚ್ಯದಲ್ಲಿರುವ ಅಮೆರಿಕದ ದೊಡ್ಡ ವಾಯುನೆಲೆಯ ಮೇಲೆ ದಾಳಿ ಮಾಡಿತ್ತು. ಆದರೆ ಈ ದಾಳಿ ನಡೆಸುವ ಮೊದಲೇ ಇರಾನ್‌ ಕತಾರ್‌ಗೆ ತಿಳಿಸಿತ್ತು. ಈ ವಿಚಾರವನ್ನು ಕತಾರ್‌ ಅಮೆರಿಕಗೆ ಹೇಳಿತ್ತು. ಮೊದಲೇ ದಾಳಿ ನಡೆಸುವ ವಿಚಾರ ತಿಳಿದ ಕಾರಣ ಅಮೆರಿಕ ಎಲ್ಲದ್ದಕ್ಕೂ ಸನ್ನದ್ದವಾಗಿತ್ತು ಮತ್ತು ಯಾವುದೇ ಸಾವು ನೋವು ಸಂಭವಿಸಿಲ್ಲ. ಇದನ್ನೂ ಓದಿ: ದೇಶ ತೊರೆಯಿರಿ ಇಲ್ವೋ ಇಂದು ಸಾಯಲು ಸಿದ್ಧವಾಗಿರಿ – ಕರೆ ಮಾಡಿ ಇರಾನ್‌ ಕಮಾಂಡರ್‌ಗಳಿಗೆ ಮೊಸಾದ್‌ ಎಚ್ಚರಿಕೆ

     

    ನಮಗೆ ಮುಂಚಿನ ಸೂಚನೆ ನೀಡಿದ್ದಕ್ಕಾಗಿ ಇರಾನ್‌ಗೆ ಧನ್ಯವಾದ ಹೇಳಲು ಬಯಸುತ್ತೇನೆ. ಇದರಿಂದ ಯಾವುದೇ ಜೀವ ಹಾನಿ ಮತ್ತು ಯಾರು  ಗಾಯಗೊಂಡಿಲ್ಲ ಎಂದು ಟ್ರಂಪ್‌ ಹೇಳಿದ್ದರು. ಒಂದು ವೇಳೆ ದಾಳಿಯಿಂದ ವಾಯುನೆಲೆಗೆ ಹಾನಿಯಾಗಿದ್ದರೆ ಅಮೆರಿಕ ಮತ್ತಷ್ಟು ದಾಳಿ ನಡೆಸುವ ಸಾಧ್ಯತೆ ಇತ್ತು. ಆದರೆ ಈ ಬಾರಿ ಶಾಂತಿ ಮಂತ್ರವನ್ನು ಜಪಿಸಿದ ಟ್ರಂಪ್‌ ಪ್ರತಿದಾಳಿ ನಡೆಸಲು ಮುಂದಾಗಲಿಲ್ಲ. ಹೀಗಾಗಿ ಕದನ ವಿರಾಮದ ಮಾತುಕತೆ ಯಶಸ್ವಿಯಾಯಿತು.

    ಇಸ್ರೇಲಿ ದಾಳಿಯಿಂದ ಸುಮಾರು 600 ಜನ ಮೃತಪಟ್ಟಿದ್ದಾರೆ ಎಂದು ಇರಾನ್‌ನ ಆರೋಗ್ಯ ಸಚಿವಾಲಯ ಹೇಳಿದೆ. ಆದರೆ ಮಾನವ ಹಕ್ಕುಗಳ ಗುಂಪು 950ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಎಂದು ಹೇಳಿದೆ. ಇಸ್ರೇಲ್ ನಗರಗಳ ಮೇಲೆ ಇರಾನ್‌ ಕ್ಷಿಪಣಿಗಳು ಬಿದ್ದ ಪರಿಣಾಮ 24 ಮಂದಿ ಮೃತಪಟ್ಟಿದ್ದಾರೆ.

  • ಭಾರತಕ್ಕೆ ಯಾವುದೇ ದೇಶದ ಮಧ್ಯಸ್ಥಿಕೆ ಅಗತ್ಯವಿಲ್ಲ: ಟ್ರಂಪ್‌ಗೆ ಮೋದಿ ಸ್ಪಷ್ಟನೆ

    ಭಾರತಕ್ಕೆ ಯಾವುದೇ ದೇಶದ ಮಧ್ಯಸ್ಥಿಕೆ ಅಗತ್ಯವಿಲ್ಲ: ಟ್ರಂಪ್‌ಗೆ ಮೋದಿ ಸ್ಪಷ್ಟನೆ

    – ಎರಡೂ ದೇಶಗಳ ಪರಸ್ಪರ ಒಪ್ಪಿಗೆ ಬಳಿಕ ಕದನ ವಿರಾಮ
    – ಕ್ವಾಡ್ ಸಭೆಯಲ್ಲಿ ಭಾಗಿಯಾಗಲು ಟ್ರಂಪ್‌ಗೆ ಆಹ್ವಾನ

    ನವದೆಹಲಿ: ಭಾರತ ಹಾಗೂ ಪಾಕಿಸ್ತಾನ ನಡುವೆ ಕದನ ವಿರಾಮ ಘೋಷಣೆ ಕುರಿತು ಎರಡೂ ದೇಶಗಳ ಪರಸ್ಪರ ಒಪ್ಪಿಗೆ ಬಳಿಕ ಕದನ ವಿರಾಮ (Ceasefire) ಘೋಷಿಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ (Donald Trump) ಪ್ರಧಾನಿ ಮೋದಿ ಸ್ಪಷ್ಟನೆ ನೀಡಿದ್ದಾರೆ.

    ಜಿ7 ಶೃಂಗಸಭೆಗೆ ಭೇಟಿ ನೀಡಿದ್ದ ವೇಳೆ ಅಮೆರಿಕಗೆ ಭೇಟಿ ನೀಡುವಂತೆ ಟ್ರಂಪ್‌ ಮೋದಿಯನ್ನು (Narendra Modi) ಆಹ್ವಾನಿಸಿದ್ದರು. ಆದರೆ ಮೊದಲೇ ವೇಳಾಪಟ್ಟಿ ನಿಗದಿಯಾಗಿದ್ದ ಹಿನ್ನೆಲೆ ಅಮೆರಿಕಗೆ ಭೇಟಿ ನೀಡಲು ಸಾಧ್ಯವಿಲ್ಲ ಎಂದು ಮೋದಿ ತಿಳಿಸಿದ್ದಾರೆ. ಬಳಿಕ ದೂರವಾಣಿ ಮೂಲಕ ಟ್ರಂಪ್‌ಗೆ ಕರೆ ಮಾಡಿದ ಮೋದಿ, ಆಪರೇಷನ್ ಸಿಂಧೂರದ (Operation Sindoor) ಬಳಿಕ ಭಾರತ ಹಾಗೂ ಪಾಕ್ ನಡುವೆ ಕದನ ವಿರಾಮ ಘೋಷಣೆ ಕುರಿತು ಭಾರತದ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ವರ್ಷಕ್ಕೆ 30 ದಿನ ಮಾತ್ರ ತೆರೆಯುವ ಕೊಟ್ಟಿಯೂರು ಶಿವ ದೇಗುಲಕ್ಕೆ ನಟ ದರ್ಶನ್ ಭೇಟಿ

    ಪಾಕ್ ಮನವಿ ಬಳಿಕ ಭಾರತ ಪರಸ್ಪರ ಹೊಂದಾಣಿಕೆಯೊಂದಿಗೆ ಕದನ ವಿರಾಮ ಘೋಷಿಸಿದೆ. ಇದರಲ್ಲಿ ಯಾವ ದೇಶದ ಮಧ್ಯಸ್ಥಿಕೆಯೂ ಇರಲಿಲ್ಲ. ಯಾವುದೇ ವ್ಯಾಪಾರ ಒಪ್ಪಂದದ ಬಗ್ಗೆಯೂ ಚರ್ಚಿಸಿಲ್ಲ. ಭಾರತವು ಇನ್ನುಮುಂದೆ ಭಯೋತ್ಪಾದನೆಯನ್ನು ಪ್ರಾಕ್ಸಿ ಯುದ್ಧವಾಗಿ ನೋಡುವುದಿಲ್ಲ, ಬದಲಿಗೆ ಯುದ್ಧವಾಗಿ ನೋಡುತ್ತದೆ. ಭಾರತದ ಆಪರೇಷನ್ ಸಿಂಧೂರ ಇನ್ನೂ ಮುಂದುವರಿಯುತ್ತದೆ ಎಂದು ಮೋದಿ ಹೇಳಿದರು. ಇದನ್ನೂ ಓದಿ: ಬೆಂಗಳೂರು | ಮರದ ಕೊಂಬೆ ಬಿದ್ದು ಆಸ್ಪತ್ರೆ ಸೇರಿದ್ದ ಯುವಕನ ಬ್ರೈನ್ ಡೆಡ್

    ಸುಮಾರು 35 ನಿಮಿಷಗಳ ಕಾಲ ಟ್ರಂಪ್ ಜೊತೆ ಪ್ರಧಾನಿ ನರೇಂದ್ರ ಮೋದಿ ದೂರವಾಣಿಯಲ್ಲಿ ಮಾತನಾಡಿದರು. ಇದೇ ವೇಳೆ ಕ್ವಾಡ್  ಸಭೆಗೆ ಭಾಗಿಯಾಗಲು ಭಾರತಕ್ಕೆ ಬರುವಂತೆ ಟ್ರಂಪ್‌ಗೆ ಮೋದಿ ಮನವಿ ಮಾಡಿದ್ದು, ಮೋದಿ ಆಹ್ವಾನವನ್ನು ಟ್ರಂಪ್ ಸ್ವೀಕರಿಸಿದ್ದಾರೆ. ಈ ಮೊದಲು ನನ್ನ ಮಧ್ಯಸ್ಥಿಕೆಯಿಂದಲೇ ಭಾರತ ಹಾಗೂ ಪಾಕಿಸ್ತಾನದ ನಡುವೆ ಕದನ ವಿರಾಮ ಘೋಷಣೆಯಾಗಿದೆ ಎಂದು ಟ್ರಂಪ್ ಹೇಳಿಕೊಂಡಿದ್ದರು. ಇದೀಗ ಟ್ರಂಪ್‌ಗೆ ಮೋದಿ ಸ್ಪಷ್ಟ ಸಂದೇಶ ರವಾನಿಸಿದ್ದಾರೆ. ಇದನ್ನೂ ಓದಿ: ಮೊಬೈಲ್‌ನಲ್ಲಿ 13,500 ಅಶ್ಲೀಲ ಚಿತ್ರ – ಫೇಕ್ ಅಕೌಂಟ್‌ನಿಂದ ಮಹಿಳೆಯರ ಮಾನಹಾನಿ ಮಾಡ್ತಿದ್ದ ಕಾಮುಕ ಅರೆಸ್ಟ್

  • ಶಾಂತಿ ಸಭೆ ಮೊಟಕು – ಬೇಷರತ್‌ ಕದನ ವಿರಾಮ ಮಾತುಕತೆ ತಿರಸ್ಕರಿಸಿದ ರಷ್ಯಾ

    ಶಾಂತಿ ಸಭೆ ಮೊಟಕು – ಬೇಷರತ್‌ ಕದನ ವಿರಾಮ ಮಾತುಕತೆ ತಿರಸ್ಕರಿಸಿದ ರಷ್ಯಾ

    ಇಸ್ತಾನ್‌ಬುಲ್‌: ಯುದ್ಧಪೀಡಿತ ರಷ್ಯಾ-ಉಕ್ರೇನ್‌ ನಡುವೆ 2022ರ ಬಳಿಕ 2ನೇ ಸುತ್ತಿನ ಶಾಂತಿ ಮಾತುಕತೆ ಸೋಮವಾರ ಟರ್ಕಿಯ ರಾಜಧಾನಿ ಇಸ್ತಾನ್‌ಬುಲ್‌ನಲ್ಲಿ ನಡೆಯಿತು. ಸಭೆಯು ನಿಗದಿತ ಸಮಯಕ್ಕಿಂತ 2 ಗಂಟೆ ತಡವಾಗಿ ಶುರುವಾದ್ರೂ ಒಂದು ಗಂಟೆಗೆ ಮಾತುಕತೆ ಮುಕ್ತಾಯಗೊಂಡಿತು. ಉಭಯ ರಾಷ್ಟ್ರಗಳ ನಾಯಕರು ಪರಸ್ಪರ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದು ಕಂಡುಬಂದಿತು.

    ಸಭೆಯ ಆರಂಭದಲ್ಲೇ ಉಕ್ರೇನ್‌ ನಡೆಸಿದ ಡ್ರೋನ್‌ ದಾಳಿ ವಿಚಾರ ಬಲವಾಗಿ ವಿರೋಧಿಸಿದ ರಷ್ಯಾ ಪ್ರತಿನಿಧಿಗಳು, ಉಕ್ರೇನ್‌ ಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಭಾನುವಾರದ ದಾಳಿಗೆ ತಿರುಗೇಟು ನೀಡುವ ಶಕ್ತಿ ನಮಗೂ ಇದೆ ಎಂದು ಪ್ರತಿಪಾದಿಸಿದರು. ಇದನ್ನೂ ಓದಿ: ನಾವು ಭಿಕ್ಷೆ ಪಾತ್ರೆ ಹಿಡಿದು ಬರುತ್ತೇವೆಂದು ಚೀನಾದಂಥ ಮಿತ್ರರಾಷ್ಟ್ರಗಳು ನಿರೀಕ್ಷಸಲ್ಲ: ಪಾಕ್‌ ಪ್ರಧಾನಿ

    ರಷ್ಯಾ ಮೇಲೆ ಉಕ್ರೇನ್ ನಡೆಸಿದ ಭೀಕರ ಡ್ರೋನ್ ದಾಳಿಯೇ ಎಲ್ಲದಕ್ಕೂ ಕಾರಣ. ರಷ್ಯಾ ಪ್ರತಿನಿಧಿಗಳು ಉಕ್ರೇನ್‌ನ ಈ ದಾಳಿಯನ್ನು ಬಲವಾಗಿ ವಿರೋಧಿಸಿ, ಷರತ್ತುರಹಿತ ಕದನ ವಿರಾಮ ಮಾತುಕತೆಯನ್ನ ತಿರಸ್ಕರಿಸಿದರು. ʻಆಪರೇಷನ್ ಸ್ಪೈಡರ್ಸ್ ವೆಬ್ʼ ಎಂದು ಹೆಸರಿಸಲಾದ ಈ ರಹಸ್ಯ ಕಾರ್ಯಾಚರಣೆಯಲ್ಲಿ, ಉಕ್ರೇನ್ ಒಂದೂವರೆ ವರ್ಷದಿಂದ ಯೋಜನೆ ರೂಪಿಸಿತ್ತು. ಹೀಗಾಗಿ ಇಸ್ತಾನ್‌ಬುಲ್‌ನಲ್ಲಿ ನಡೆದ ಉಕ್ರೇನ್‌ನೊಂದಿಗಿನ ಶಾಂತಿ ಮಾತುಕತೆಯ ಸಮಯದಲ್ಲಿ ರಷ್ಯಾ ಬೇಷರತ್‌ ಕದನ ವಿರಾಮಕ್ಕೆ ಒಪ್ಪಿಕೊಳ್ಳಲು ನಿರಾಕರಿಸಿದೆ ಎಂದು ಕೈವ್ ಸಂಧಾನಕಾರರು ತಿಳಿಸಿದ್ದಾರೆ.

    ಸೇನಾ ದಾಳಿಯ ವಿಚಾರವಾಗಿ ಉಭಯ ದೇಶಗಳ ಪ್ರತಿನಿಧಿಗಳ ನಡುವಿನ ವಾಗ್ವಾದದಿಂದ ಸಭೆ ಅಪೂರ್ಣಗೊಂಡಿತು. ‘ಕದನ ವಿರಾಮ ಸಂಬಂಧ ಉಭಯ ದೇಶದ ಪ್ರತಿನಿಧಿಗಳ ನಡುವೆ ಮಾತುಕತೆ ನಡೆದಿದೆ. ಸಂಘರ್ಷ ಪರಿಸ್ಥಿತಿಯ ಬಗ್ಗೆ ಮೌಲ್ಯಮಾಪನ ಮಾಡಲಾಗಿದೆ. ಯುದ್ಧ ಕೈದಿಗಳ ಹಸ್ತಾಂತರದ ಬಗ್ಗೆಯೂ ಚರ್ಚಿಸಲಾಗಿದೆ. ಆದರೆ, ಸಂಘರ್ಷ ಕೊನೆಗೊಳಿಸುವ ವಿಷಯವಾಗಿ ಅಂತಿಮ ನಿರ್ಧಾರಕ್ಕೆ ಬಂದಿಲ್ಲ ಎಂದು ಟರ್ಕಿ ವಿದೇಶಾಂಗ ಸಚಿವ ಹಕನ್‌ ಫಿಡಾನ್‌ ತಿಳಿಸಿದ್ದಾರೆ. ಇದನ್ನೂ ಓದಿ: America | ‘ಫ್ರೀ ಪ್ಯಾಲೆಸ್ತೀನ್’ ಎಂದು ಕೂಗುತ್ತಾ ಜನರತ್ತ ಪೆಟ್ರೋಲ್ ಬಾಂಬ್ ಎಸೆದ ದುಷ್ಕರ್ಮಿ – 6 ಮಂದಿಗೆ ಗಾಯ

    ಚರ್ಚೆ ವೇಳೆ ರಷ್ಯಾ ಪ್ರತಿನಿಧಿ ಮೆಡಿನ್ಸ್ಕಿ ಅವರು, ಯುದ್ಧದಲ್ಲಿ ಕೊಲಲ್ಪಟ್ಟ 6,000 ಉಕ್ರೇನಿಯನ್ ಸೈನಿಕರ ಶವಗಳನ್ನ ಹಿಂದಿರುಗಿಸುವುದಾಗಿ ತಿಳಿಸಿದರು. ಹಾಗಾಗಿ 2-3 ದಿನಗಳ ಸೀಮಿತ ಕದನ ವಿರಾಮ ಪ್ರಸ್ತಾಪಿಸಲಾಗಿದೆ. ಇದು ಸೈನಿಕರ ಮೃತದೇಹಗಳನ್ನು ಹಸ್ತಾಂತರಿಸುವ ಉದ್ದೇಶ ಮಾತ್ರ ಹೊಂದಿದೆ ಎಂದು ತಿಳಿಸಿದರು.

    ಪರಸ್ಪರ 1,000 ಯುದ್ಧ ಕೈದಿಗಳ ವಿನಿಮಯ ಒಪ್ಪಂದ
    ಉಕ್ರೇನ್‌ ಮತ್ತು ರಷ್ಯಾ ನಡುವೆ ತಲಾ 1,000 ಯುದ್ಧ ಕೈದಿಗಳ ವಿನಿಮಯದ ಕುರಿತು ರಷ್ಯಾ ಮತ್ತು ಉಕ್ರೇನ್ ಒಪ್ಪಂದಕ್ಕೆ ಬಂದಿವೆ. ಮುಂದುವರಿದು… ಯುದ್ಧ ಕೈದಿಗಳ ವಿನಿಮಯಕ್ಕಾಗಿ ಶಾಶ್ವತ ಸಮಿತಿ ರಚನೆಯ ಕುರಿತು ಒಪ್ಪಂದಕ್ಕೆ ಬರಲಾಗಿದೆ. ಇದರಿಂದ ಭವಿಷ್ಯದಲ್ಲಿ ಯುದ್ಧ ಕೈದಿಗಳ ಪ್ರಕ್ರಿಯೆಯನ್ನು ತ್ವರಿತವಾಗಿ ಮತ್ತು ಸರಾಗವಾಗಿ ಪೂರ್ಣಗೊಳಿಸಬಹುದು ಎಂದು ರಷ್ಯಾ ಪ್ರತಿನಿಧಿ ತಿಳಿಸಿದ್ರು.

    ಅಲ್ಲದೇ, ಕ್ರೈಮಿಯಾ, ಡಾನ್‌ಬಾಸ್, ಖೆರ್ಸನ್ ಮತ್ತು ಜಪೊರೊಝೈಗಳನ್ನು ರಷ್ಯಾದ ಪ್ರದೇಶವೆಂದು ಅಂತಾರಾಷ್ಟ್ರೀಯವಾಗಿ ಗುರುತಿಸಬೇಕೆಂದು ಒತ್ತಾಯಿಸಿ ರಷ್ಯಾ ಉಕ್ರೇನ್‌ಗೆ ಶಾಂತಿ ಜ್ಞಾಪಕ ಪತ್ರವನ್ನ ಪ್ರಸ್ತಾಪಿಸಿದೆ ಎಂದು ತಿಳಿದುಬಂದಿದೆ. ಈ ನಡುವೆ ಎರಡೂ ದೇಶಗಳು ಹೊಸ ಕೈದಿಗಳ ವಿನಿಮಯಕ್ಕಾಗಿ ಒಪ್ಪಿಕೊಂಡಿರುವುದಾಗಿ ಹೇಳಿದರು. ಇದನ್ನೂ ಓದಿ: ರಷ್ಯಾ ವಾಯುನೆಲೆ ಮೇಲೆ ಉಕ್ರೇನ್ ಡ್ರೋನ್ ದಾಳಿ – ಅದ್ಭುತ ಕಾರ್ಯಾಚರಣೆ ಎಂದು ಶ್ಲಾಘಿಸಿದ ಝೆಲೆನ್ಸ್ಕಿ

  • ಗಾಜಾದಲ್ಲಿ ಕದನವಿರಾಮ ಘೋಷಿಸಲು ಅಮೆರಿಕ ಪ್ರಸ್ತಾವನೆಗೆ ಹಮಾಸ್ ಒಪ್ಪಿಗೆ

    ಗಾಜಾದಲ್ಲಿ ಕದನವಿರಾಮ ಘೋಷಿಸಲು ಅಮೆರಿಕ ಪ್ರಸ್ತಾವನೆಗೆ ಹಮಾಸ್ ಒಪ್ಪಿಗೆ

    ವಾಷಿಂಗ್ಟನ್: ಗಾಜಾದಲ್ಲಿ (Gaza) ಕದನ ವಿರಾಮ ಘೋಷಿಸುವಂತೆ ಕೋರಿ ಅಮೆರಿಕದ ವಿಶೇಷ ರಾಯಭಾರಿ ಸ್ಟೀವ್ ವಿಟ್ಕಾಫ್ (Steve Witkoff) ಮಂಡಿಸಿದ ಪ್ರಸ್ತಾವನೆಗೆ ಹಮಾಸ್ (Hamas) ಒಪ್ಪಿಕೊಂಡಿದೆ ಎಂದು ಪ್ಯಾಲೆಸ್ತೀನ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ವರದಿಗಳ ಪ್ರಕಾರ, ಈ ಪ್ರಸ್ತಾವನೆಯನ್ನು ಮಧ್ಯವರ್ತಿಗಳ ಮೂಲಕ ಹಮಾಸ್‌ಗೆ ರವಾನಿಸಲಾಗಿದೆ. ಪ್ರಸ್ತಾವನೆಯಲ್ಲಿ 70 ದಿನಗಳ ಕದನ ವಿರಾಮಕ್ಕೆ ಪ್ರತಿಯಾಗಿ ಹತ್ತು ಇಸ್ರೇಲಿ ಒತ್ತೆಯಾಳುಗಳನ್ನು ಬಿಡುಗಡೆ ಮಾಡಬೇಕೆಂದು ತಿಳಿಸಿರುವುದಾಗಿ ಅಧಿಕಾರಿ ಹೇಳಿದ್ದಾರೆ. ಇದನ್ನೂ ಓದಿ: ಸರಣಿ ಮನೆಗಳ್ಳತನ ಮಾಡ್ತಿದ್ದ ಖದೀಮ ಅಂದರ್ – 6 ಲಕ್ಷ ಮೌಲ್ಯದ ಚಿನ್ನ ವಶಕ್ಕೆ

    ಮಾತ್ರವಲ್ಲದೇ ಇಸ್ರೇಲ್‌ನಿಂದ ಬಂಧನದಲ್ಲಿರುವ ಹಲವಾರು ಪ್ಯಾಲೆಸ್ಟೀನಿಯನ್ ಕೈದಿಗಳನ್ನ ಬಿಡುಗಡೆ ಮಾಡುವುದನ್ನು ಸಹ ಈ ಪ್ರಸ್ತಾವನೆ ಒಳಗೊಂಡಿದೆ. ಇದರಲ್ಲಿ ನೂರಾರು ಜನರು ದೀರ್ಘ ಶಿಕ್ಷೆ ಅನುಭವಿಸುತ್ತಿದ್ದಾರೆ. ಸದ್ಯ ಈ ಪ್ರಸ್ತಾವನೆಗೆ ಇಸ್ರೇಲ್‌ನಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಇದನ್ನೂ ಓದಿ: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶಾಲಾ-ಕಾಲೇಜುಗಳಿಗೆ 2 ದಿನ ರಜೆ ಘೋಷಣೆ