Tag: CEC

  • 130 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಅಂತಿಮ – ಮುಸ್ಲಿಮರಿಗೆ ಕಡಿಮೆ ಟಿಕೆಟ್ ಸಾಧ್ಯತೆ

    130 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಅಂತಿಮ – ಮುಸ್ಲಿಮರಿಗೆ ಕಡಿಮೆ ಟಿಕೆಟ್ ಸಾಧ್ಯತೆ

    ನವದೆಹಲಿ: ಕಾಂಗ್ರೆಸ್‌ನ ಕೇಂದ್ರ ಚುನಾವಣಾ ಸಮಿತಿ (CEC) ಶುಕ್ರವಾರ (ಮಾ.17) ಸಭೆ ಸೇರಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಹುತೇಕ ಫೈನಲ್ ಮಾಡಿದೆ.

    ಮೂರು ಗಂಟೆಗಳ ಕಾಲ ಸಭೆ ನಡೆಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ರಾಜ್ಯ ನಾಯಕರ ಸಮ್ಮುಖದಲ್ಲಿ ಸ್ಕ್ರೀನಿಂಗ್ ಕಮಿಟಿ ಕಳಿಸಿದ ಹೆಸರುಗಳನ್ನು ಪರಿಶೀಲಿಸಿದರು. ಗೆಲ್ಲುವ ಅಭ್ಯರ್ಥಿಗಳ್ಯಾರು? ಎಂಬುದನ್ನು ಸರ್ವೇ ಸೇರಿ ಹಲವು ಮೂಲಗಳ ಮೂಲಕ ಕ್ರಾಸ್‌ಚೆಕ್ ಮಾಡಿದರು. ಇದನ್ನೂ ಓದಿ: ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ

    ಕೆಲ ಕ್ಷೇತ್ರಗಳಿಗೆ ಸಂಬಂಧಿಸಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ತಮ್ಮ ಬೆಂಬಲಿಗರ ಪರವಾಗಿ ಬ್ಯಾಟ್ ಮಾಡಿದರು ಎನ್ನಲಾಗಿದೆ. ಅಂತಿಮವಾಗಿ 130 ಅಭ್ಯರ್ಥಿಗಳ ಪಟ್ಟಿ ರೆಡಿಯಾಗಿದೆ. ನಾಲ್ವರು ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಿಸಲಾಗಿದೆ. ಸಿಎಂ ಬೊಮ್ಮಾಯಿ ವಿರುದ್ಧ ಶಿಗ್ಗಾಂವಿಯಲ್ಲಿ ಮಾಜಿ ಮಂತ್ರಿ ವಿನಯ್ ಕುಲಕರ್ಣಿ ಕಣಕ್ಕಿಳಿಯೋ ಸಾಧ್ಯತೆ ಹೆಚ್ಚಾಗಿದೆ.

    ಈ ಬಾರಿ ಮುಸ್ಲಿಮರಿಗೆ ಕಡಿಮೆ ಟಿಕೆಟ್ ನೀಡೋ ಬಗ್ಗೆ ಚರ್ಚೆ ನಡೆದಿದೆ. ಕಳೆದ ಬಾರಿ 17, ಈ ಬಾರಿ 12ಕ್ಕೆ ಇಳಿಸಿ ಎಂದು ಕೆಲವರು ಸಲಹೆ ನೀಡಿದ್ದಾರೆ. ಆದರೆ ಇನ್ನೂ ಕೆಲವರು ಈ ಪ್ರಸ್ತಾವವನ್ನು ವಿರೋಧ ಮಾಡಿದ್ದಾರೆ ಎನ್ನಲಾಗುತ್ತಿದೆ. ಕೆಲವು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಫೈನಲ್ ಆಗಬೇಕಿದ್ದು, ಹಗ್ಗಜಗ್ಗಾಟಗಳು ನಡೀತಿದೆ. ಇದನ್ನೂ ಓದಿ: ಸಾರಿಗೆ ನೌಕರರ ವೇತನ ಶೇ.15ರಷ್ಟು ಹೆಚ್ಚಿಸಿ ಸರ್ಕಾರ ಆದೇಶ

    ಸಿಇಸಿ ಸಭೆ ಬಳಿಕ ರಾಜ್ಯ ನಾಯಕರ ಜೊತೆ ಖರ್ಗೆ ಇನ್ನೊಂದು ಸುತ್ತಿನ ಸಭೆ ನಡೆಸಿದ್ದಾರೆ. ಮೂಲಗಳ ಪ್ರಕಾರ ರಾಹುಲ್ ರಾಜ್ಯಕ್ಕೆ ಬಂದು ಹೋದ ಮಾರನೇ ದಿನ ಅಂದರೆ ಯುಗಾದಿ ಹಬ್ಬದ ಪರ್ವದಿನದಂದು ಕಾಂಗ್ರೆಸ್ ಫಸ್ಟ್ ಲಿಸ್ಟ್ ರಿಲೀಸ್ ಆಗಲಿದೆ.

    ಸಭೆ ಆರಂಭಕ್ಕೂ ಮುನ್ನ ಡಿಕೆ ಶಿವಕುಮಾರ್, ಸಿದ್ದರಾಮಯ್ಯ, ಎಂಬಿ ಪಾಟೀಲ್, ಜಿ. ಪರಮೇಶ್ವರ್ ಬಳಿ ಆಕಾಂಕ್ಷಿಗಳು ಲಾಬಿ ಮಾಡಿದ್ದು ಕಂಡುಬಂತು.

  • ರಾಹುಲ್ ಗಾಂಧಿ ಮತ್ತೆ ಎಐಸಿಸಿ ಅಧ್ಯಕ್ಷರಾಗಬೇಕು- CWC ಸಭೆಯಲ್ಲಿ ಒತ್ತಡ

    ರಾಹುಲ್ ಗಾಂಧಿ ಮತ್ತೆ ಎಐಸಿಸಿ ಅಧ್ಯಕ್ಷರಾಗಬೇಕು- CWC ಸಭೆಯಲ್ಲಿ ಒತ್ತಡ

    ನವದೆಹಲಿ: ಪಂಚರಾಜ್ಯ ಚುನಾವಣೆಯಲ್ಲಿ ಸೋಲುಂಡಿರುವ ಕಾಂಗ್ರೆಸ್ (Congress) ಹಲವು ಬದಲಾವಣೆಗೆ ಮುಂದಾಗಿದೆ. ದೆಹಲಿಯಲ್ಲಿ ಇಂದು ಉನ್ನತ ಮಟ್ಟದ ಸಭೆ ನಡೆಸಿತ್ತು.

    ಸೋನಿಯಾ ಗಾಂಧಿ(Sonia Gandhi), ರಾಹುಲ್ ಗಾಂಧಿ (Rahul Gandhi), ಪ್ರಿಯಾಂಕಾ ಗಾಂಧಿ (Priyanka Gandhi) ರಾಜೀನಾಮೆ ನೀಡ್ತಾರೆ ಅಂತ ಸುದ್ದಿಯಾಗಿತ್ತು. ಆದರೆ ಇದನ್ನು ಪ್ರಧಾನ ಕಾರ್ಯದರ್ಶಿ ಸುರ್ಜೇವಾಲಾ (Randeep Surjewala) ತಿರಸ್ಕರಿಸಿದರು.

    ಇಂದಿನ ಕಾಂಗ್ರೆಸ್ ವರ್ಕಿಂಗ್ ಕಮಿಟಿ(CWC) ಸಭೆಯಲ್ಲಿ (ಅಖಿಲ ಭಾರತ ಕಾಂಗ್ರೆಸ್ ಸಮಿತಿ(AICC) ಅಧ್ಯಕ್ಷರಾಗಿ ರಾಹುಲ್ ಗಾಂಧಿ ಮತ್ತೆ ಅಧ್ಯಕ್ಷರಾಗಬೇಕು ಅನ್ನೋ ಒತ್ತಾಯ ಕೇಳಿಬಂದಿದೆ. ಇದನ್ನೂ ಓದಿ: ನಿಮ್ಮನ್ನ ಚಾಮುಂಡೇಶ್ವರಿ ಕ್ಷೇತ್ರದ ಜನರೇ ತಿರಸ್ಕಾರ ಮಾಡಿದ್ದಾರೆ: ಸಿದ್ದು ಕಾಲೆಳೆದ ಬಿಜೆಪಿ

    ಸೆಪ್ಟೆಂಬರ್ ಗೆ ನಡೆಯಲಿರುವ ಆಂತರಿಕ ಚುನಾವಣೆಗೂ ಮೊದಲೇ ರಾಹುಲ್ ಗಾಂಧಿ ಜವಬ್ದಾರಿ ವಹಿಸಿಕೊಳ್ಳಬೇಕು. ಪ್ರಧಾನಿ ಮೋದಿ ರಾಹುಲ್ ಗಾಂಧಿಯನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ಪ್ರತಿ ಭಾಷಣದಲ್ಲೂ ರಾಹುಲ್ ಟಾರ್ಗೆಟ್ ಆಗಿದ್ದಾರೆ ಅಂದ್ರೆ ರಾಹುಲ್ ಗಾಂಧಿ ಪ್ರಬಲ ಸ್ಪರ್ಧಿ ಎಂದು ಅವರಿಗೆ ತಿಳಿದಿದೆ ಎಂದು ಸಿಎಂ ಅಶೋಕ್ ಗೆಹ್ಲೋಟ್ (Ashok Gehlot) ಹೇಳಿದ್ದಾರೆ.

    ದೆಹಲಿಯ ಕಾಂಗ್ರೆಸ್ ನಾಯಕರನ್ನು ಒಳಗೊಂಡ ಗುಂಪು, ಯುವ ಕಾಂಗ್ರೆಸ್ ಮುಖ್ಯಸ್ಥ ಬಿ.ವಿ ಶ್ರೀನಿವಾಸ್ ಸೇರಿ ಹಲವರು ರಾಹುಲ್ ಗಾಂಧಿಯೇ ಅಧ್ಯಕ್ಷರಾಗಬೇಕು ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಸಸಿದರು. ಇದನ್ನೂ ಓದಿ: ನಾನು ಸಂಪುಟ ಸೇರ್ಪಡೆಯಾಗುವುದು ಕೇವಲ ಉಹಾಪೋಹ, ನನಗೆ ಯಾವುದೇ ಆಸೆಯಿಲ್ಲ: ಬಿ.ವೈ.ವಿಜಯೇಂದ್ರ

    ಈ ನಡುವೆ ಜಿ23 ನಾಯಕರು ಮುಕುಲ್ ವಾಸ್ನಿಕ್ ಗೆ ಅಧ್ಯಕ್ಷ ಸ್ಥಾನ ನೀಡಬೇಕು ಎಂದು ಈ ನಡುವೆ ಒತ್ತಾಯಿಸಿದ್ದಾರೆ. ಉತ್ತರಾಖಂಡ್ ಗೆಲುವಿಗೆ ಕಾರಣರಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಗೆ ಹುಬ್ಬಳ್ಳಿಯಲ್ಲಿ ಅದ್ಧೂರಿ ಸ್ವಾಗತ ಸಿಕ್ತು. ಈ ವೇಳೆ ಮಾತಾನಾಡಿದ ಜೋಶಿ, ಡಿಕೆಶಿ ಗೋವಾಕ್ಕೆ ಹೋಗಿರೋ ಬಗ್ಗೆ ವ್ಯಂಗ್ಯವಾಡಿದ್ರು. ತೋಳ್ಬಲ ಹಾಗೂ ಗೂಂಡಾಗಿರಿ ಮಾಡಲು ಡಿಕೆಶಿ ಗೋವಾಗೆ ಹೋಗಿದ್ರಾ..? ಕಾಂಗ್ರೆಸ್ ನಡೆ ಕೂಸು ಹುಟ್ಟುವ ಮೊದಲೇ ಕುಲಾವಿ ಹೊಲಿಸಿದಂತೆ ವ್ಯಂಗ್ಯವಾಡಿದ್ರು.