Tag: Celebrity Cricket League

  • ಸಿಸಿಎಲ್‌ಗೆ ಕಿಕ್ ಸ್ಟಾರ್ಟ್- ದುಬೈನಲ್ಲಿ ಪ್ರೋಮೋ ರಿಲೀಸ್

    ಸಿಸಿಎಲ್‌ಗೆ ಕಿಕ್ ಸ್ಟಾರ್ಟ್- ದುಬೈನಲ್ಲಿ ಪ್ರೋಮೋ ರಿಲೀಸ್

    ಭಾರತ ಚಿತ್ರರಂಗದ ದಿಗ್ಗಜರನ್ನು ಒಂದೇ ವೇದಿಕೆಯಲ್ಲಿ ಕಣ್ತುಂಬಿಕೊಳ್ಳುವ ಸುವರ್ಣಾವಕಾಶ ಅಭಿಮಾನಿಗಳಿಗೆ ಮತ್ತೊಮ್ಮೆ ಒದಗಿ ಬಂದಿದೆ. 10ನೇ ಆವೃತ್ತಿಯ ಸೆಲೆಬ್ರಿಟಿ ಕ್ರಿಕೆಟ್ ಲೀಗ್‌ಗೆ (Celebrity Cricket League 2024) ದಿನಗಣನೆ ಆರಂಭವಾಗಿದ್ದು, ದೇಶದ ಸ್ಟಾರ್ ನಟರು ಇದೇ ಫೆಬ್ರವರಿ 23 ರಿಂದ ಕೈಯಲ್ಲಿ ಬ್ಯಾಟ್ ಹಿಡಿದು ಕ್ರಿಕೆಟ್ ಅಖಾಡಕ್ಕಿಳಿಯಲು ಸಜ್ಜಾಗಿದ್ದಾರೆ. ಅದರ ಭಾಗವಾಗಿ ಫೆ.2ರಂದು ದುಬೈನಲ್ಲಿ ಪ್ರೋಮೋ ಬಿಡುಗಡೆ ಮಾಡುವ ಮೂಲಕ ಸಿಸಿಎಲ್‌ಗೆ ಚಾಲನೆ ನೀಡಲಾಗಿದೆ.

    ಬುರ್ಜ್ ಖಲೀಫಾದಲ್ಲಿ (Burj Khalifa) ಕಟ್ಟಡದ ಮೇಲೆ ಸಿಸಿಎಲ್ ಪ್ರೋಮೋ ಝಲಕ್ ಪ್ರದರ್ಶಿಸಲಾಯಿತು. ಈ ದೃಶ್ಯವನ್ನು ಕಣ್ತುಂಬಿಕೊಂಡ ಸ್ಟಾರ್ಟ್ ರೋಮಾಂಚನಗೊಂಡರು. ಪ್ರೋಮೋ ಬಿಡುಗಡೆ ಕಾರ್ಯಕ್ರಮದಲ್ಲಿ ಸ್ಯಾಂಡಲ್‌ವುಡ್‌ನಿಂದ ಕಿಚ್ಚ ಸುದೀಪ್, ಹಿಂದಿಯಿಂದ ಸೊಹೈಲ್ ಖಾನ್, ತಮಿಳು ಚಿತ್ರರಂಗದಿಂದ ಆರ್ಯ ಮತ್ತು ಜೀವಾ, ತೆಲುಗಿನಿಂದ ತಮನ್ ಮತ್ತು ಸುಧೀರ್ ಬಾಬು, ಬಂಗಾಳಿಯಿಂದ ಜಿಸ್ಸು ಸೇನ್‌ಗುಪ್ತಾ, ಪಂಜಾಬಿಯಿಂದ ಬುನ್ನು ಧಿಲ್ಲೋನ್ ಮತ್ತು ಸೋನು ಸೂದ್, ಮಲಯಾಳಂನಿಂದ ಇಂದ್ರಜಿತ್ ಸುಕುಮಾರನ್ ಮತ್ತು ಉನ್ನಿ ಮುಕುಂದನ್ ಸೇರಿದಂತೆ ಸಿಸಿಎಲ್‌ನ ಎಲ್ಲಾ 8 ತಂಡಗಳ ನಾಯಕರು ಹಾಗೂ ಸೂಪರ್ ಸ್ಟಾರ್ಸ್ ಭಾಗಿಯಾಗಿದ್ದರು.

    ಸಿಸಿಎಲ್ ಸಂಸ್ಥಾಪಕ ಹಾಗೂ ವ್ಯವಸ್ಥಾಪಕ ನಿರ್ದೇಶಕರು ಆಗಿರುವ ವಿಷ್ಣು ವರ್ಧನ್ ಇಂದೂರಿ ಮಾತನಾಡಿ, ಸಿಸಿಎಲ್ ಮನರಂಜನಾತ್ಮಕ ಕ್ರೀಡೆಯಾಗಿದ್ದು, ಎಲ್ಲಾ ಸ್ಟಾರ್ ಅವರ ಬ್ಯುಸಿ ಶೆಡ್ಯುಲ್ಡ್ ನಡುವೆ ಕ್ರಿಕೆಟ್‌ನಲ್ಲಿ ಭಾಗಿಯಾಗಿಯಾಗುತ್ತಾರೆ ಎಂದರು.

    ಕಿಚ್ಚ ಸುದೀಪ್ ಮಾತಾನಾಡಿ, ನಾನು ಈ ಹಿಂದೆ ಸಿನಿಮಾಗಾಗಿ ಬುರ್ಜ್ ಖಲೀಫ್‌ದಲ್ಲಿದ್ದೆ. ಆದರೆ ಈಗ ಕ್ರಿಕೆಟ್‌ಗಾಗಿ ಇಲ್ಲಿರುವುದು ವಿಶೇಷ ಹಾಗೂ ಮರೆಯಲಾಗದ ಸಂಗತಿ ಎಂದರು.

    ಫೆಬ್ರವರಿ 23 ರಿಂದ ಆರಂಭವಾಗುವ ಸಿಸಿಎಲ್ 10ನೇ ಸೀಸನ್ ಮಾರ್ಚ್ 17 ರವರೆಗೆ ನಡೆಯಲ್ಲಿದೆ. ಲೀಗ್ ಸುತ್ತು ಮಾರ್ಚ್ 10 ರವರೆಗೆ ನಡೆಯಲಿದ್ದು, ಈ ಸುತ್ತಿನಲ್ಲಿ 16 ಪಂದ್ಯಗಳು ನಡೆಯಲಿವೆ. ಆ ಬಳಿಕ ಪ್ಲೇಆಫ್ ಸುತ್ತು ಆರಂಭವಾಗಲಿದೆ. ಟೂರ್ನಿಯ ಮೊದಲ ಪಂದ್ಯ ಯುನೈಟೆಡ್ ಅರಬ್ ಎಮಿರೇಟ್ನ್ಸ್ ಶಾರ್ಜಾದಲ್ಲಿ ನಡೆಯಲ್ಲಿದ್ದು, ಉದ್ಘಾಟನಾ ಪಂದ್ಯದಲ್ಲಿ ಮುಂಬೈ ಹೀರೋಸ್ ಮತ್ತು ಕೇರಳ ಸ್ಟ್ರೈಕರ್ಸ್ ತಂಡಗಳು ಮುಖಾಮುಖಿಯಾಗಲಿವೆ.

    ಸೆಲೆಬ್ರಿಟಿ ಕ್ರಿಕೆಟ್ ಲೀಗ್‌ನ 10ನೇ ಸೀಸನ್ ಅನ್ನು ಜಿಯೋ ಒಟಿಟಿಯಲ್ಲಿ ಆಗಿ ನೇರಪ್ರಸಾರ ಮಾಡಲಿದೆ. ಕ್ರೀಡೆ ಮತ್ತು ಮನರಂಜನೆಗಳನ್ನು ಒಂದುಗೂಡಿಸಿ ಭಾರತದಲ್ಲಿ ರೂಪಿಸಿರುವ ಏಕಮಾತ್ರ ಪ್ರಯತ್ನ ಸೆಲೆಬ್ರಿಟಿ ಕ್ರಿಕೆಟ್ ಲೀಗ್ ಇದಾಗಿದೆ. ಇದನ್ನೂ ಓದಿ:ಜಪಾನ್‌ಗೆ ಹಾರಲಿದೆ ‘ಪುಷ್ಪ 2’ ಟೀಮ್

    ಭಾರತದ ಎಂಟು ಚಲನಚಿತ್ರೋದ್ಯಮಗಳ ಸೂಪಸ್ಟಾರ್‌ಗಳನ್ನು ಒಳಗೊಂಡಿರುವ ಒಟ್ಟು ಎಂಟು ತಂಡಗಳು ಯುಎಇ ಸೇರಿದಂತೆ ಭಾರತದ ಐದು ಸ್ಥಳಗಳಲ್ಲಿ 24 ದಿನಗಳ ಕಾಲ ಕ್ರಿಕೆಟ್ ಅಂಗಳದಲ್ಲಿ ಪ್ರಶಸ್ತಿಗಾಗಿ ಕಾದಾಡಲಿವೆ. ಮೇಲೆ ಹೇಳಿದಂತೆ ಯುಎಇಯ ಶಾರ್ಜಾದಲ್ಲಿ ಲೀಗ್‌ನ ಮೂರು ಪಂದ್ಯಗಳು ನಡೆಯಲ್ಲಿದ್ದು, ಆ ನಂತರ ಲೀಗ್ ಭಾರತಕ್ಕೆ ಕಾಲಿಡಲಿದೆ. ಭಾರತದ ಐದು ನಗರಗಳಾದ ಹೈದರಾಬಾದ್, ಬೆಂಗಳೂರು, ಚಂಡೀಗಢ, ತಿರುವನಂತಪುರ ಮತ್ತು ವೈಜಾಗ್‌ನಲ್ಲಿ ಉಳಿದ ಪಂದ್ಯಗಳು ನಡೆಯಲ್ಲಿವೆ. ವಾರಾಂತ್ಯದಲ್ಲಿ ಅಂದರೆ ಶನಿವಾರ ಹಾಗೂ ಭಾನುವಾರ ಡಬಲ್ ಹೆಡರ್ ಪಂದ್ಯಗಳಿರಲಿವೆ. ಅಂದರೆ ದಿನಕ್ಕೆ ಎರಡು ಪಂದ್ಯಗಳು ನಡೆಯಲ್ಲಿವೆ.

    ತಂಡಗಳು ಯಾವುವು?
    • ಮುಂಬೈ ಹೀರೋಸ್
    • ಕೇರಳ ಸ್ಟ್ರೈಕರ್ಸ್
    • ತೆಲುಗು ವಾರಿಯರ್ಸ್
    • ಭೋಜ್ಪುರಿ ದಬಾಂಗ್ಸ್
    • ಕರ್ನಾಟಕ ಬುಲ್ಡೋಜರ್ಸ್
    • ಬೆಂಗಾಲ್ ಟೈಗರ್ಸ್
    • ಚೆನ್ನೈ ರೈನೋಸ್
    • ಪಂಜಾಬ್ ದಿ ಶೇರ್

    ‘ಮುಂಬೈ ಹೀರೋಸ್’ ತಂಡಕ್ಕೆ ನಟ ಸಲ್ಮಾನ್ ಖಾನ್ ಬ್ರ‍್ಯಾಂಡ್ ಅಂಬಾಸಿಡರ್ ಆಗಿದ್ದು, ರಿತೇಶ್ ದೇಶಮುಖ್ ಕ್ಯಾಪ್ಟನ್ ಆಗಿದ್ದಾರೆ. ಸೋಹೈಲ್ ಖಾನ್ ಅವರು ಈ ತಂಡದ ಮಾಲೀಕ. ‘ತೆಲುಗು ವಾರಿಯರ್ಸ್’ ಟೀಮ್‌ಗೆ ವೆಂಕಟೇಶ್ ಅವರು ಬ್ರ‍್ಯಾಂಡ್ ಅಂಬಾಸಿಡರ್. ಆ ತಂಡಕ್ಕೆ ಅಖಿಲ್ ಅಕ್ಕಿನೇನಿ ನಾಯಕನಾಗಿದ್ದಾರೆ. ‘ಕರ್ನಾಟಕ ಬುಲ್ಡೋಜರ್ಸ್’ ಟೀಮ್‌ಗೆ ಕಿಚ್ಚ ಸುದೀಪ್ ಕ್ಯಾಪ್ಟನ್ ಆಗಿದ್ದಾರೆ. ಮೋಹನ್‌ಲಾಲ್ ಸಹ-ಮಾಲೀಕರಾಗಿರುವ ‘ಕೇರಳ ಸ್ಟ್ರೈಕರ್ಸ್’ ತಂಡವನ್ನು ಕ್ಯಾಪ್ಟನ್ ಇಂದ್ರಜಿತ್ ಮುನ್ನಡೆಸಲಿದ್ದಾರೆ. ‘ಭೋಜಪುರಿ ದಬಾಂಗ್ಸ್’ ಟೀಮ್‌ಗೆ ಮನೋಜ್ ತಿವಾರಿ ನಾಯಕ. ಸೋನು ಸೂದ್ ಅವರು ‘ಪಂಜಾಬ್ ದೆ ಶೇರ್’ ತಂಡಕ್ಕೆ ನಾಯಕರಾಗಿದ್ದಾರೆ. ಬೋನಿ ಕಪೂರ್ ಒಡೆತನದ ‘ಬೆಂಗಾಲ್ ಟೈಗರ್ಸ್’ ಟೀಮ್‌ಗೆ ಜಿಸ್ಸು ಸೇನ್ಗುಪ್ತ ಕ್ಯಾಪ್ಟನ್ ಆಗಿದ್ದಾರೆ.

  • KCC 2023: ನಿನ್ನೆ ಪಂದ್ಯದಲ್ಲಿ ಸೋತವರು ಯಾರು? ಗೆದ್ದವರು ಯಾರು?

    KCC 2023: ನಿನ್ನೆ ಪಂದ್ಯದಲ್ಲಿ ಸೋತವರು ಯಾರು? ಗೆದ್ದವರು ಯಾರು?

    ನಿನ್ನೆಯಿಂದ ಬೆಂಗಳೂರಿನಲ್ಲಿ ಸೆಲೆಬ್ರಿಟಿ ಕ್ರಿಕೆಟ್ ಲೀಗ್ (Celebrity Cricket League) ಪಂದ್ಯ ಪ್ರಾರಂಭವಾಗಿದ್ದು, ಮೊದಲ ದಿನ ಮೂರು ಪಂದ್ಯಗಳನ್ನು ಆಯೋಜಿಸಲಾಗಿತ್ತು. ಸಿಎಂ ಬಸವರಾಜ ಬೊಮ್ಮಾಯಿ ಕ್ರಿಕೆಟ್ ಲೀಗ್ ಅನ್ನು ಉದ್ಘಾಟಿಸಿದ ನಂತರ ಮೊದಲ ದಿನದ ಪಂದ್ಯಗಳು ಆರಂಭವಾದವು. ಒಟ್ಟು ಮೂರು ಪಂದ್ಯಗಳನ್ನು ಮೊದಲ ದಿನಕ್ಕಾಗಿ ಆಯೋಜನೆ ಮಾಡಲಾಗಿತ್ತು. ಇವುಗಳಲ್ಲಿ ಮೊದಲ ಪಂದ್ಯವಾಗಿ ನಟ ಧನಂಜಯ (Dhananjay) ಅವರ ಗಂಗಾ ವಾರಿಯರ್ಸ್ ಹಾಗೂ ಸುದೀಪ್ (Sudeep) ನೇತೃತ್ವದ ಹೊಯ್ಸಳ ಈಗಲ್ಸ್ ಮುಖಾಮುಖಿಯಾದವು.

    ಮೊದಲ ಪಂದ್ಯದಲ್ಲಿ ಗಂಗಾ ವಾರಿಯಸ್ ವಿರುದ್ಧ ಗೆಲ್ಲುವಲ್ಲಿ ಹೊಯ್ಸಳ ಈಗಲ್ಸ್ ವಿಫಲವಾಯಿತು. ಗಂಗಾ ವಾರಿಯರ್ಸ್ ನ ಕರಣ್ ಆರ್ಯನ್ 54 ರನ್ ಗಳನ್ನು ಬಾರಿಸಿ ವಿಜಯಕ್ಕೆ ಕಾರಣರಾದರು. ಹತ್ತು ಓವರ್ ಗಳಲ್ಲಿ ಗಂಗಾ ವಾರಿಯರ್ಸ್ 4 ವಿಕೆಟ್ ನಷ್ಟಕ್ಕೆ 114 ರನ್ ಗಳನ್ನು ಕಲೆಹಾಕಿತ್ತು. ಆದರೆ, ಹೊಯ್ಸಳ ಈಗಲ್ಸ್ ಗುರಿ ತಲುಪುವಲ್ಲಿ ವಿಫಲವಾಗಿ ಸೋಲು ಒಪ್ಪಿಕೊಳ್ಳಬೇಕಾಯಿತು. ಇದನ್ನೂ ಓದಿ: ಹೊಂಬಾಳೆ ಫಿಲ್ಮ್ ಯುವ ಚಿತ್ರಕ್ಕೆ ರುಕ್ಮಿಣಿ ವಸಂತ್ ನಾಯಕಿನಾ? ಸ್ಪಷ್ಟನೆ ನೀಡಿದ ನಟಿ

    ಎರಡನೇ ಪಂದ್ಯವಾಗಿ ಶಿವರಾಜ್ ಕುಮಾರ್ ನೇತೃತ್ವದ ಒಡೆಯರ್ ಚಾರ್ಜಸ್ ಹಾಗೂ ಸುದೀಪ್ ಅವರ ಹೊಯ್ಸಳ್ ಈಗಲ್ಸ್ ನಡುವೆ ನಡೆಯಿತು. ಈ ಪಂದ್ಯದಲ್ಲಿ ಟಾಸ್ ಗೆದ್ದದ್ದು ಒಡೆಯರ್ ಚಾರ್ಜಸ್. ಹತ್ತು ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 105 ರನ್ ಗಳನ್ನು ಕಲೆಹಾಕಿ, ಹೊಯ್ಸಳ ಈಗಲ್ಸ್ ತಂಡಕ್ಕೆ 106 ರನ್ ಗಳ ಗುರಿ ನೀಡಿತು. ಹೊಯ್ಸಳ ಈಗಲ್ಸ್ ತಂಡದ ಕ್ರಿಸ್ ಗೇಲ್ 23 ಎಸೆತಗಳಲ್ಲಿ 59 ರನ್ ಗಳನ್ನು ಕಲೆ ಹಾಕುವ ಮೂಲಕ ಗೆಲುವಿಗೆ ಸುಲಭ ಹಾದಿ ಹಾಕಿಕೊಟ್ಟರು. ಪರಿಣಾಮ ಶಿವಣ್ಣ ತಂಡವು ಸೋಲನುಭವಿಸಬೇಕಾಯಿತು.

    ಅಂತಿಮ ಪಂದ್ಯವು ಧ್ರುವ ಸರ್ಜಾ ನೇತೃತ್ವದ ರಾಷ್ಟ್ರಕೂಟ ಫ್ಯಾಂಥರ್ಸ್ ಹಾಗೂ ಗಣೇಶ್ ನಾಯಕತ್ವದ ಕದಂಬ ಲಯನ್ಸ್ ನಡುವೆ ನಡೆಯಿತು. ಕದಂಬ ಲಯನ್ಸ್ ತಂಡ 10 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ ಕಲೆ ಹಾಕಿದ್ದು 111 ರನ್ ಗಳನ್ನು. ಎದುರಾಳಿ ರಾಷ್ಟ್ರಕೂಟ ಫ್ಯಾಂಥರ್ಸ್ ಈ ಗುರಿಯನ್ನು ಮುಟ್ಟಲು ಸಾಧ್ಯವಾಗದೇ ಇರುವ ಕಾರಣದಿಂದಾಗಿ ಕದಂಬ ಲಯನ್ಸ್ ಸುಲಭವಾಗಿ ಗೆಲುವು ಸಾಧಿಸಿತು. ಇಂದು ಎರಡನೇ ದಿನ ಪಂದ್ಯಗಳು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿವೆ.