Tag: Censorship

  • ಸಿನಿಮಾ ಪೈರಸಿ ಮಾಡಿದರೆ 3 ವರ್ಷ ಜೈಲೂಟ ಫಿಕ್ಸ್: ಸಚಿವ ಠಾಕೂರ್

    ಸಿನಿಮಾ ಪೈರಸಿ ಮಾಡಿದರೆ 3 ವರ್ಷ ಜೈಲೂಟ ಫಿಕ್ಸ್: ಸಚಿವ ಠಾಕೂರ್

    ಲವಾರು ವರ್ಷಗಳಿಂದ ಪೈರಸಿ (Piracy) ಹಾವಳಿಗೆ ಚಿತ್ರೋದ್ಯಮ ನಲುಗಿ ಹೋಗಿತ್ತು. ಪೈರಸಿಯನ್ನು ತಡೆಯುವ ನಿಟ್ಟಿನಲ್ಲಿ ಕಠಿಣ ಕ್ರಮಕ್ಕೆ ಮುಂದಾಗಬೇಕು ಎಂದು ಸರಕಾರಗಳನ್ನು ಚಿತ್ರೋದ್ಯಮ ಒತ್ತಾಯಿಸುತ್ತಲೇ ಬಂದಿತ್ತು. ಇದೀಗ ಪೈರಸಿ ಕಡಿವಾಣಕ್ಕೆ ಕೇಂದ್ರ ಸರಕಾರ ಮುಂದಾಗಿದೆ. ಭಾರೀ ಮೊತ್ತದ ದಂಡದ ಜೊತೆಗೆ ಜೈಲು ಶಿಕ್ಷೆಯನ್ನೂ ವಿಧಿಸುವಂತಹ ಬಿಲ್ ಅನ್ನೂ ಪಾಸು ಮಾಡಿದೆ.

    ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ (Anurag Thakur) ಲೋಕಸಭೆಯಲ್ಲಿ ‘ಸಿನಿಮಾಟೋಗ್ರಫಿ ಬಿಲ್ 2023 (Cinematography Bill 2023) ಅನ್ನು ಮಂಡಿಸುವ ವೇಳೆ ಪೈರಸಿ ಮಾಡುವವರಿಗೆ ಇನ್ಮುಂದೆ ಕೋಟಿಗಟ್ಟಲೆ ದಂಡ ಹಾಕಲು ನಿರ್ಧರಿಸಿರುವ ಕುರಿತು ವಿವರಣೆ ನೀಡಿದರು. ಯಾವುದೇ ಸಿನಿಮಾವನ್ನು ಪೈರಸಿ ಮಾಡಿದರೆ, ಸಿನಿಮಾಗೆ ಆದ ಖರ್ಚಿನ ಶೇಕಡಾ 5ರಷ್ಟು ದಂಡ ಹಾಕಲಾಗುವುದು ಎಂದಿದ್ದಾರೆ.

     

    ‘ಚಿತ್ರರಂಗದ ಹಲವು ವರ್ಷಗಳ ಬೇಡಿಕೆಯನ್ನು ಈಡೇರಿಸುತ್ತಿದ್ದೇವೆ. ಸಿನಿಮಾ ಪೈರಸಿ ಮಾಡಿದರೆ ಭಾರೀ ಮೊತ್ತದ ದಂಡದ ಜೊತೆಗೆ ಮೂರು ವರ್ಷಗಳ ಜೈಲು ಶಿಕ್ಷೆ ಕೂಡ ವಿಧಿಸಲಾಗುವುದು. ಅಲ್ಲದೇ, ಪೈರಸಿ ಮಾಡುವ ವೆಬ್ ಸೈಟ್ ಗಳನ್ನು ಬ್ಲಾಕ್ ಮಾಡಲಾಗುವುದು. ಅಲ್ಲದೇ ಸೆನ್ಸಾರ್ (Censorship)ಪತ್ರದಲ್ಲೂ ಕೆಲವು ಬದಲಾವಣೆಗಳನ್ನು ಮಾಡಲಾಗುತ್ತಿದೆ’ ಎಂದರು ಅನುರಾಗ್ ಠಾಕೂರ್.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಾಳೆ ‘ದಿ ಕೇರಳ ಸ್ಟೋರಿ’ ರಿಲೀಸ್ : ತಮಿಳುನಾಡು ಗುಪ್ತಚರ ಇಲಾಖೆ ಹೇಳಿದ್ದೇನು?

    ನಾಳೆ ‘ದಿ ಕೇರಳ ಸ್ಟೋರಿ’ ರಿಲೀಸ್ : ತಮಿಳುನಾಡು ಗುಪ್ತಚರ ಇಲಾಖೆ ಹೇಳಿದ್ದೇನು?

    ನಾಳೆ ದೇಶದಾದ್ಯಂತ ‘ದಿ ಕೇರಳ ಸ್ಟೋರಿ’ (The Kerala Story) ಸಿನಿಮಾ ರಿಲೀಸ್ ಆಗುತ್ತಿದೆ. ಭಾರೀ ಪ್ರತಿಭಟನೆಯ ಮಧ್ಯಯೂ ಮಲಯಾಳಂ, ತಮಿಳು, ತೆಲುಗು ಹಾಗೂ ಹಿಂದಿ ಭಾಷೆಯಲ್ಲಿ ಸಿನಿಮಾ ರಿಲೀಸ್ ಆಗುತ್ತಿದೆ. ಕೇರಳದಲ್ಲಿ ಕಾಂಗ್ರೆಸ್ ಸೇರಿದಂತೆ ಹಲವು ಸಂಘಟನೆಗಳು ಸಿನಿಮಾ ಪ್ರದರ್ಶನಕ್ಕೆ ತಡೆ ನೀಡಬೇಕು ಎಂದು ಹೋರಾಟಕ್ಕಿಳಿದಿವೆ. ಈ ಎಲ್ಲ ಘಟನೆಗಳ ಬೆನ್ನಲ್ಲೇ ತಮಿಳುನಾಡು (Tamil Nadu) ಸರಕಾರಕ್ಕೆ ಗುಪ್ತಚರ ಇಲಾಖೆ (Intelligence) ಮಾಹಿತಿ ನೀಡಿದೆ ಎಂದು ವರದಿಯಾಗಿದೆ.

    ನಾಳೆ ತಮಿಳುನಾಡಿನಾದ್ಯಂತ ಚಿತ್ರವು ತೆರೆ ಕಾಣುವುದರಿಂದ ಕೇರಳದ ಮಾದರಿಯಲ್ಲೇ ತಮಿಳುನಾಡಿನಲ್ಲೂ ಪ್ರತಿಭಟನೆ ನಡೆಯಬಹುದು. ಹಾಗಾಗಿ ಅಲರ್ಟ್ ಆಗಿ ಇರುವಂತೆ ಸೂಚಿಸಲಾಗಿದೆಯಂತೆ. ಭಾರೀ ಪ್ರತಿಭಟನೆ ಮಾಡುವ ಸೂಚನೆಗಳು ಕೂಡ ಸಿಕ್ಕಿವೆ ಎಂದು ವರದಿ ನೀಡಿದೆಯಂತೆ. ಇದನ್ನೂ ಓದಿ:ಪವಿತ್ರಾ ಲೋಕೇಶ್- ನರೇಶ್ ‘ಮತ್ತೆ ಮದುವೆ’ ಡೇಟ್ ಫಿಕ್ಸ್

    ಈಗಾಗಲೇ ವಿವಾದಕ್ಕೆ(, Controversy) ಕಾರಣವಾಗುವಂತಹ ಮತ್ತು ಆಕ್ಷೇಪಕ್ಕೆ ಗುರಿಯಾಗಿರುವ ಹಲವು ದೃಶ್ಯಗಳಿಗೆ ಸೆನ್ಸಾರ್ ಮಂಡಳಿಯು ಕತ್ತರಿ ಹಾಕಿದೆ. ಬರೋಬ್ಬರಿ 10 ದೃಶ್ಯಗಳಿಗೆ ಕತ್ತರಿ ಹಾಕುವ ಮೂಲಕ ಚಿತ್ರತಂಡಕ್ಕೆ ಶಾಕ್ ನೀಡಿದೆ. ಅಲ್ಲದೇ ಚಿತ್ರಕ್ಕೆ ‘ಎ’ ಪ್ರಮಾಣ ಪತ್ರವನ್ನು ನೀಡಿದೆ. ಮಾಜಿ ಸಿಎಂ ಒಬ್ಬರ ಸಂದರ್ಶನ, ಕೆಲ ಸಂಭಾಷಣೆಗಳು ಹಾಗೂ ಕಮ್ಯುನಿಸ್ಟ್ ಪಕ್ಷದವರ ಬಗ್ಗೆ ಆಡಿದ ಮಾತುಗಳಿಗೆ ಸೆನ್ಸಾರ್ ಮಂಡಳಿಯು ಕತ್ತರಿ ಹಾಕಿದೆ.

    ಕಳೆದ ಎರಡು ವಾರಗಳಿಂದ ‘ದಿ ಕೇರಳ ಸ್ಟೋರಿ’ ಸಿನಿಮಾದ ಬಗ್ಗೆ ಸಾಕಷ್ಟು ಪರ ವಿರೋಧದ ಮಾತು ಕೇಳಿ ಬರುತ್ತಿದೆ. ಈ ಸಿನಿಮಾದಲ್ಲಿರುವುದು ಸತ್ಯ ಎಂದು ಚಿತ್ರತಂಡ ಹೇಳಿಕೊಂಡರೆ, ಅದು ಕಪೋಕಲ್ಪಿತ ಕಥೆ ಎಂದು ಹಲವರು ವಾದಿಸುತ್ತಿದ್ದಾರೆ. ಈ ಸಿನಿಮಾ ಪ್ರದರ್ಶನಕ್ಕೆ ತಡೆಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲು ಕೂಡ ಏರಲಾಗಿತ್ತು. ಆದರೆ, ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಳ್ಳಲು ಸುಪ್ರೀಂ ನಿರಾಕರಿಸಿತ್ತು. ಹೈಕೋರ್ಟ್ ಗೆ ಹೋಗಲು ಸೂಚನೆ ನೀಡಿತ್ತು. ಇಷ್ಟೆಲ್ಲ ಬೆಳವಣಿಗೆ ಮಧ್ಯಯೇ ಮತ್ತೊಂದು ಸವಾಲು ಘೋಷಣೆ ಆಗಿದೆ.

    ಈ ಸಿನಿಮಾದಲ್ಲಿಯ ಮಾಹಿತಿಯು ನಿಜ ಅಂತ ಸಾಬೀತು ಪಡಿಸಿದರೆ ಒಂದು ಕೋಟಿ ರೂಪಾಯಿ ಬಹುಮಾನ ಕೊಡುವುದಾಗಿ ಮುಸ್ಲಿಂ ಯೂತ್ ಲೀಗ್ ಕೇರಳ ರಾಜ್ಯ ಕಮಿಟಿಯು ಘೋಷಿಸಿದೆ. ಸಿನಿಮಾದಲ್ಲಿ ಸುಳ್ಳುಗಳ ಸರಮಾಲೆಯೇ ಇದೆ. ಅವರು ಹೇಳುತ್ತಿರುವುದು ನಿಜ ಎಂದು ಸಾಬೀತು ಪಡಿಸಲಿ ಎಂದು ಹೇಳಿಕೆ ನೀಡಿದೆ.

  • ಸಿನಿಮಾ ಪೈರಸಿ ತಡೆ ಮಸೂದೆಗೆ ಒಪ್ಪಿಗೆ: ಬದಲಾವಣೆ ಏನು?

    ಸಿನಿಮಾ ಪೈರಸಿ ತಡೆ ಮಸೂದೆಗೆ ಒಪ್ಪಿಗೆ: ಬದಲಾವಣೆ ಏನು?

    ಸಿನಿಮಾಟೋಗ್ರಾಫ್ (ತಿದ್ದುಪಡಿ) ಮಸೂದೆ 2023ಕ್ಕೆ (Cinematograph Bill) ಕೇಂದ್ರ ಸಚಿವ ಸಂಪುಟ ಬುಧವಾರ ಒಪ್ಪಿಗೆ ನೀಡಿದೆ. ಇದರಿಂದಾಗಿ ಸಿನಿಮಾಗಳ ಪೈರಸಿ (Piracy) ತಡೆಗಟ್ಟುವಲ್ಲಿ ಈ ಮಸೂದೆ ರಕ್ಷಾಕವಚವಾಗಿ ನಿಲ್ಲಲಿದೆ. ಈ ಕುರಿತು ಮಾತನಾಡಿದ ಕೇಂದ್ರ ಸಚಿವ ಅನುರಾಗ್ ಠಾಕೂರ್ (Anurag Thakur), ‘ಇಂಟರ್ ನೆಟ್ ನಲ್ಲಿ ಸಿನಿಮಾ ಪೈರಸಿ ಪಸರಿಸುವುದನ್ನು ಈ ಮಸೂದೆ ಕಟ್ಟುನಿಟ್ಟಾಗಿ ತಡೆಗಟ್ಟುತ್ತದೆ’ ಎಂದಿದ್ದಾರೆ.

    ಅಷ್ಟೇ ಅಲ್ಲದೇ ಸೆನ್ಸಾರ್ (Censorship) ಮಂಡಳಿಯು ಕೊಡುವ ಚಲನಚಿತ್ರ ಪ್ರಮಾಣಪತ್ರದಲ್ಲೂ ಬದಲಾವಣೆ ಆಗಲಿದೆ. ಈಗಾಗಲೇ ಯಾವ ವಯಸ್ಸಿನವರು ಎಂತಹ ಸಿನಿಮಾ ನೋಡಬಹುದು ಎನ್ನುವುದಕ್ಕೆ ಯುಎ, ಯು, ಎ, ಸಿ ಪ್ರಮಾಣಪತ್ರವನ್ನು ಕೊಡಲಾಗುತ್ತಿದೆ. ಈ ಪ್ರಮಾಣ ಪತ್ರದಲ್ಲಿ ಬದಲಾವಣೆ ಆಗಲಿದೆ ಎನ್ನುತ್ತದೆ ಮಸೂದೆ. ಇದನ್ನೂ ಓದಿ:ಲಿಫ್ಟ್‌ನಲ್ಲಿ ಪತಿ ನಿಕ್ ಜೋನಸ್ ಜೊತೆ ಪ್ರಿಯಾಂಕಾ ಚೋಪ್ರಾ ರೊಮ್ಯಾನ್ಸ್

    ಈ ಮಸೂದೆಯನ್ನು ಮುಂದಿನ ಸಂಸತ್ ಕಲಾಪದ ವೇಳೆ ಮಂಡಿಸಲು ಸಿದ್ಧತೆ ಮಾಡಿಕೊಂಡಿದ್ದು, ಯಾವುದೇ ವಿವಾದಗಳು ಇಲ್ಲದೇ ಈ ಮಸೂದೆ ಪಾಸಾಗಲಿದೆ ಎನ್ನುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ ಅನುರಾಗ್ ಠಾಕೂರ್. ವಯಸ್ಸಿನ ಆಧಾರದ ಮೇಲೆ ಸಿನಿಮಾಗಳನ್ನು ವಿಂಗಡಿಸಿ ಎನ್ನುವ ಬೇಡಿಕೆ ತಮ್ಮುಂದೆ ಇದ್ದ ಕಾರಣಕ್ಕಾಗಿ ಮಸೂದೆ ತರಲಾಗಿದೆ ಎಂದಿದ್ದಾರೆ.