ನವದೆಹಲಿ: ಸರ್ಕಾರವನ್ನು ಟೀಕಿಸಿದ ಮಾತ್ರಕ್ಕೆ ಮಾಧ್ಯಮವನ್ನು ನಿಯಂತ್ರಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿರುವ ಸುಪ್ರೀಂ ಕೋರ್ಟ್, ಮಲಯಾಳಂ ಸುದ್ದಿ ವಾಹಿನಿಯ ಮೇಲಿನ ಕೇಂದ್ರದ ನಿರ್ಬಂಧಗಳನ್ನು ತೆಗೆದುಹಾಕಿದೆ.
ಸರ್ಕಾರದ ನೀತಿ, ಕಾರ್ಯಗಳ ವಿಚಾರವಾಗಿ ಮೀಡಿಯಾ ಒನ್ ಸುದ್ದಿ ವಾಹಿನಿ ಮಾಡಿರುವ ಟೀಕೆಗಳನ್ನು ರಾಷ್ಟ್ರವಿರೋಧಿ ಎಂದು ಅರ್ಥೈಸಲಾಗುವುದಿಲ್ಲ. ಉತ್ತಮ ಪ್ರಜಾಪ್ರಭುತ್ವಕ್ಕೆ ಸ್ವತಂತ್ರ ಪತ್ರಿಕಾ ವ್ಯವಸ್ಥೆ ಅಗತ್ಯ ಎಂದು ನ್ಯಾಯಾಲಯ ತಿಳಿಸಿದೆ.
ಭದ್ರತಾ ಅನುಮತಿಯ ಕೊರತೆಯಿಂದಾಗಿ ಚಾನೆಲ್ನ ಪ್ರಸಾರ ಪರವಾನಗಿಯನ್ನು ನವೀಕರಿಸಲು ನಿರಾಕರಿಸಿದ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ರಾಷ್ಟ್ರೀಯ ಭದ್ರತಾ ಹಕ್ಕುಗಳನ್ನು ಗಾಳಿಗೆ ತೂರಿದ್ದಕ್ಕಾಗಿ ಗೃಹ ಸಚಿವಾಲಯವನ್ನು ಸುಪ್ರೀಂ ತರಾಟೆಗೆ ತೆಗೆದುಕೊಂಡಿದೆ.
2020 ರಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆಗಳು ಮತ್ತು ಗಲಭೆಗಳ ಬಗ್ಗೆ ವ್ಯಾಪಕವಾಗಿ ವರದಿ ಮಾಡಿದ ಕೆಲವೇ ಚಾನೆಲ್ಗಳಲ್ಲಿ ಒಂದಾಗಿರುವ ಮೀಡಿಯಾ ಒನ್ನಲ್ಲಿ ಪ್ರಸಾರಕ್ಕೆ ನಿಷೇಧ ಹೇರುವ ನಿರ್ಧಾರವನ್ನು ಸಮರ್ಥಿಸಲು ಯಾವುದೇ ಪುರಾವೆಗಳಿಲ್ಲ. ಸಮರ್ಪಕ ಸಾಕ್ಷ್ಯ ಒದಗಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ. ಭಯೋತ್ಪಾದಕರ ಸಂಪರ್ಕದಲ್ಲಿದ್ದಾರೆ ಎನ್ನುವುದು, ರಾಷ್ಟ್ರೀಯ ಭದ್ರತೆಗೆ ಧಕ್ಕೆ ಎಂದು ಪ್ರತಿಪಾದಿಸುವುದು ಸರಿಯಲ್ಲ ಎಂದು ಕೋರ್ಟ್ ತಿಳಿಸಿದೆ.
ದೆಹಲಿಯಲ್ಲಿ ನಡೆದಿದ್ದ ಸಂಘರ್ಷದ ಬಗ್ಗೆ ಕೋಮು ಸಾಮರಸ್ಯ ಕೆಡಿಸುವ ವರದಿ ಮಾಡಲಾಗಿದೆ ಎಂದು ಆರೋಪಿಸಿ ಮಲಯಾಳಂ ಸುದ್ದಿ ವಾಹಿನಿಗೆ ಕೇಂದ್ರ ಸರ್ಕಾರ ನಿರ್ಬಂಧವನ್ನು ವಿಧಿಸಿತ್ತು.
ವಿಜಯಪುರ: ಬ್ರಾಹ್ಮಣ ಸಮಾಜದ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ (State Government) ಯಾವುದೇ ಯೋಜನೆ ಜಾರಿಗೆ ಮಾಡಿಲ್ಲ ಎಂದು ಅಖಿಲ ಭಾರತೀಯ ಬ್ರಾಹ್ಮಣ ಮಹಾಸಂಘದ (Brahman mahasangh) ಪ್ರಾಧಾನ ಕಾರ್ಯದರ್ಶಿ ಪವನ ಕುಲಕರ್ಣಿ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬ್ರಾಹ್ಮಣ ಸಮಾಜ ವಿವಿಧ ಕ್ಷೇತ್ರದಲ್ಲಿ ನಿಷ್ಠೆ ಹಾಗೂ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದೆ. ಆದರೂ ಸರ್ಕಾರ ಮಾತ್ರ ನಿರ್ಲಕ್ಷ್ಯ ಮಾಡುತ್ತಿದೆ ಎಂದು ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ಐದು ತಿಂಗಳ ಬಳಿಕ ದೇಶದಲ್ಲಿ ಮತ್ತೆ ಕೊರೋನಾ ಪ್ರಕರಣದಲ್ಲಿ ಏರಿಕೆ
ಈ ಸಮಾಜದಲ್ಲಿ ರಕ್ತದಾನಕ್ಕೆ (Blood Donation) ಅದರದ್ದೇ ಆದ ಮಹತ್ವವಿದೆ. ಎಲ್ಲಾ ದಾನಗಳಿಗಿಂತ ರಕ್ತದಾನ ಶ್ರೇಷ್ಠವಾದದ್ದು. ಜೀವಕ್ಕೆ ಸಂಜೀವಿನಿಯಿದ್ದಂತೆ. ಮಾನವ ದೇಹದ ಜೀವಸೆಲೆಯಾಗಿರುವ ರಕ್ತವನ್ನು ದಾನ ಮಾಡುವುದರಿಂದ ಇನ್ನೊಂದು ಜೀವ ಉಳಿಸಬಹುದು. ಕೇವಲ ರಕ್ತ ಪಡೆಯುವವರಿಗಷ್ಟೇ ಅಲ್ಲ, ರಕ್ತದಾನ ಮಾಡುವವರಿಗೂ ಇದರಿಂದ ಸಾಕಷ್ಟು ಆರೋಗ್ಯಕರ ಪ್ರಯೋಜನಗಳಿವೆ. ರಕ್ತದಾನ ಮಾಡಿದರೆ ರಕ್ತದೊತ್ತಡ, ಮಧುಮೇಹದಂತಹ ಕಾಯಿಲೆಗಳನ್ನೂ ನಿಯಂತ್ರಿಸಬಹುದು ಎಂಬುದು ನಿಮ್ಮ ಗಮನಕ್ಕಿರಲಿ.
ರಕ್ತದಾನ ಮಾಡುವುದಕ್ಕೂ ವೈದ್ಯಕೀಯ ಮಾರ್ಗಸೂಚಿಯಿರುತ್ತೆ. ಇಂತಹವರು ರಕ್ತದಾನ ಮಾಡಬೇಕು, ಮಾಡಬಾರದು ಎಂಬ ನಿಯಮವಿದೆ. ಯಾವುದೇ ದಾನ ಇನ್ನೊಬ್ಬರ ಜೀವಕ್ಕೆ ಆಸರೆಯಾಗಬೇಕೇ ಹೊರತು ಕೆಡುಕುಂಟು ಮಾಡಬಾರದು. ಹೀಗಾಗಿ ರಕ್ತದಾನ ಮಾಡುವಾಗ ವೈದ್ಯಕೀಯ ನಿಯಮ ಪಾಲಿಸುವುದು ತುಂಬಾ ಮುಖ್ಯ. ಆ ಮಾರ್ಗಸೂಚಿಯೇನು? ಅದನ್ನು ಯಾಕೆ ಪಾಲಿಸಬೇಕು? ಯಾರ್ಯಾರು ರಕ್ತದಾನ ಮಾಡಬಾರದು ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಇದನ್ನೂ ಓದಿ: PublicTV Explainer: ಆಧುನಿಕ ಭಾರತದ ಮೊದಲ ಸಾಂಕ್ರಾಮಿಕ ರೋಗ ಯಾವುದು ಗೊತ್ತಾ?
ಮಾರಕ ಕಾಯಿಲೆಗಳ ವಿಚಾರವಾಗಿ ವೈದ್ಯಕೀಯ ಕ್ಷೇತ್ರ ಎಚ್ಚರಿಕೆಯ ಹೆಜ್ಜೆಗಳನ್ನಿಡುತ್ತಿದೆ. ರಕ್ತದಾನದ ವಿಚಾರದಲ್ಲೂ ಇಂತಹ ಕ್ರಮಕೈಗೊಂಡಿರುವ ವಿಚಾರವನ್ನು ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್ (Supreme Court) ಮುಂದಿಟ್ಟಿದೆ. ಸೋಂಕು ಹರಡುವಿಕೆ ನಿಯಂತ್ರಣ, ಇತರರ ಆರೋಗ್ಯದ ದೃಷ್ಟಿಯಿಂದ ಮಹಿಳಾ ಲೈಂಗಿಕ ಕಾರ್ಯಕರ್ತೆಯರು (Women Sex Workers) ರಕ್ತದಾನ ಮಾಡಬಾರದು ಎಂಬ ಮಾರ್ಗಸೂಚಿಯಿದೆ. ಈ ಸಾಲಿಗೆ ತೃತೀಯಲಿಂಗಿಗಳು (Transgenders) ಹಾಗೂ ಸಲಿಂಗಕಾಮಿಗಳನ್ನೂ (Gay) ಸೇರಿಸಲಾಗಿದೆ. ಯಾಕೆ ಇವರು ರಕ್ತದಾನ ಮಾಡುವಂತಿಲ್ಲ ಎಂಬುದಕ್ಕೆ ವೈದ್ಯಕೀಯ ಪುರಾವೆಗಳನ್ನೂ ಕೇಂದ್ರ, ಸುಪ್ರೀಂ ಮುಂದಿಟ್ಟಿದೆ. ಇದೇನು ಹೊಸ ಮಾರ್ಗಸೂಚಿಯಲ್ಲ. 2017ರಲ್ಲೇ ಈ ಮಾರ್ಗಸೂಚಿ ಹೊರಡಿಸಲಾಗಿತ್ತು. ಹಾಗಾದರೆ, ಈಗ ಏಕೆ ಈ ಬಗ್ಗೆ ಚರ್ಚೆಯಾಗುತ್ತಿದೆ ಎಂಬುದನ್ನು ತಿಳಿಯೋಣ.
ತೃತೀಯಲಿಂಗಿಗಳು, ಸಲಿಂಗಕಾಮಿಗಳು ರಕ್ತದಾನ ಮಾಡುವಂತಿಲ್ಲ
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಸುಪ್ರೀಂ ಕೋರ್ಟ್ಗೆ ಅಫಿಡವಿಟ್ ಸಲ್ಲಿಸಿದೆ. ಅದರಲ್ಲಿ “ಲಿಂಗಪರಿವರ್ತಕರು, ಸಲಿಂಗಕಾಮಿಗಳು ಮತ್ತು ಮಹಿಳಾ ಲೈಂಗಿಕ ಕಾರ್ಯಕರ್ತರನ್ನು ಎಚ್ಐವಿ ʼಅಪಾಯಕಾರಿʼ ವರ್ಗಕ್ಕೆ ಸೇರಿಸಲಾಗಿದೆ. ಹೀಗಾಗಿ ಅವರನ್ನು ರಕ್ತದಾನಿಗಳ ವರ್ಗದಿಂದ ದೂರ ಇಡಲಾಗಿದೆ” ಎಂದು ಎಂದು ಸ್ಪಷ್ಟಪಡಿಸಿದೆ. ಇದನ್ನೂ ಓದಿ: PublicTV Explainer: ಕೋವಿಡ್ ಬೆನ್ನಲ್ಲೇ ಭೀತಿ ಹುಟ್ಟಿಸಿದ ಮೆದುಳು ತಿನ್ನುವ ಅಮೀಬಾ – ಏನು ಈ ರೋಗ?
ರಾಷ್ಟ್ರೀಯ ರಕ್ತ ವರ್ಗಾವಣೆ ಕೌನ್ಸಿಲ್ (NBTC) ಮತ್ತು ರಾಷ್ಟ್ರೀಯ ಏಡ್ಸ್ ನಿಯಂತ್ರಣ ಸಂಸ್ಥೆಯು 2017ರ ಅಕ್ಟೋಬರ್ 11 ರಂದು “ರಕ್ತದಾನಿ ಆಯ್ಕೆ ಮತ್ತು ರಕ್ತದಾನಿಗಳ ಮಾರ್ಗಸೂಚಿ” 12 ಮತ್ತು 51ನೇ ವಿಧಿ ಅಡಿಯಲ್ಲಿ ಸಲಿಂಗಕಾಮಿ ಮತ್ತು ತೃತೀಯಲಿಂಗಿಗಳು ರಕ್ತದಾನ ಮಾಡುವಂತಿಲ್ಲ ಎಂದಿದೆ. ಇದನ್ನು ವಿರೋಧಿಸಿ ತೃತೀಯಲಿಂಗಿ ಸಮುದಾಯದ ಥಂಗ್ಜಮ್ ಸಂತಾ ಸಿಂಗ್ ಎಂಬವರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಈ ಮಾರ್ಗಸೂಚಿಗೆ ತಡೆ ನೀಡಬೇಕು ಎಂದು ಕೋರಿದ್ದರು. ಅದಕ್ಕೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ.
ಯಾಕೆ ರಕ್ತದಾನ ಮಾಡುವಂತಿಲ್ಲ?
ಮಾರ್ಗಸೂಚಿಗಳ 12 ನೇ ವಿಧಿಯು “ರಕ್ತ ದಾನಿಗಳ ಆಯ್ಕೆ ಮಾನದಂಡ”ದ ಅಡಿಯಲ್ಲಿ ಬರುತ್ತದೆ. ರಕ್ತ ಕೊಡುವ ದಾನಿ ಕಾಯಿಲೆಗಳಿಂದ ಮುಕ್ತವಾಗಿರಬೇಕು. ಮುಖ್ಯವಾಗಿ HIV, ಹೆಪಟೈಟಿಸ್ ಬಿ ಸೋಂಕಿತರು ರಕ್ತದಾನ ಮಾಡುವಂತಿಲ್ಲ ಎಂದಿದೆ. ಇದರಿಂದ ರಕ್ತ ಪಡೆಯುವವರೂ ಸೋಂಕಿಗೆ ತುತ್ತಾಗುವ ಸಾಧ್ಯತೆ ಹೆಚ್ಚಿರುತ್ತದೆ. ಅಲ್ಲದೇ 15 ನೇ ವಿಧಿಯು ಸಲಿಂಗಕಾಮಿ ಮತ್ತು ತೃತೀಯಲಿಂಗಿಗಳು ಹಾಗೂ HIV ಸೋಂಕಿನ ಅಪಾಯದಲ್ಲಿರುವವರನ್ನು ರಕ್ತದಾನದಿಂದ ಶಾಶ್ವತವಾಗಿ ದೂರವಿಟ್ಟಿದೆ. ಪರ್ಮನೆಂಟ್ ಡೆಫರಲ್ ಎಂದರೆ ರಕ್ತದಾನ ಮಾಡಲು ಎಂದಿಗೂ ಅವರನ್ನು ಅನುಮತಿಸುವುದಿಲ್ಲ.
ಸುಪ್ರೀಂನಲ್ಲಿರುವ ಮನವಿ ಏನು?
ರಕ್ತದಾನ ವಿಚಾರ ಕುರಿತಂತೆ, ಮಣಿಪುರದ ಥಂಗ್ಜಮ್ ಸಂತಾ ಸಿಂಗ್ ಎಂಬುವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ್ದ ಕೋರ್ಟ್, 2021ರ ಮಾ.5ರಂದು ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿತ್ತು. 2017ರ ಮಾರ್ಗಸೂಚಿಯ ಸಿಂಧುತ್ವವನ್ನು ಅರ್ಜಿಯಲ್ಲಿ ಪ್ರಶ್ನಿಸಲಾಗಿತ್ತು. ಮಾರ್ಗಸೂಚಿಯಲ್ಲಿ ಗುರುತಿಸಲಾಗಿರುವ ಈ ವರ್ಗದ ಜನರನ್ನು ಎಚ್ಐವಿ ಮತ್ತು ಏಡ್ಸ್ನ ಸೋಂಕಿಗೆ ಒಳಗಾಗುವ ಅಪಾಯ ಹೆಚ್ಚಿರುವ ವರ್ಗಕ್ಕೆ ಸೇರಿಸಿರುವುದು ಸಂವಿಧಾನದ 14, 15 ಹಾಗೂ 21ನೇ ವಿಧಿಯ ಪ್ರಕಾರ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗುತ್ತದೆ ಎಂದು ಅರ್ಜಿದಾರರು ಪ್ರತಿಪಾದಿಸಿದ್ದರು. ಲಿಂಗ ಹಾಗೂ ಲೈಂಗಿಕತೆ ಆಧಾರದಲ್ಲಿ ತಾರತಮ್ಯ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದರು. ‘ನವತೇಜ್ ಜೋಹರ್’ ಮತ್ತು ‘ನಲ್ಸಾ’ ಪ್ರಕರಣಗಳಲ್ಲಿ ಸುಪ್ರೀಂ ಕೋರ್ಟ್ ತೀರ್ಪುಗಳನ್ನು ಈ ಮಾರ್ಗಸೂಚಿಗಳು ಉಲ್ಲಂಘಿಸುತ್ತವೆ ಎಂದು ಹೇಳಲಾಗಿತ್ತು.
ನಮ್ಮ ದೃಷ್ಟಿಯಲ್ಲಿ ಲಿಂಗ ಗುರುತಿಸುವಿಕೆ ಲೈಂಗಿಕತೆಯ ಅವಿಭಾಜ್ಯ ಅಂಗವಾಗಿದೆ. ತೃತೀಯಲಿಂಗಿಗಳನ್ನೂ ಒಳಗೊಂಡಂತೆ ಲಿಂಗ ಗುರುತಿನ ಆಧಾರದ ಮೇಲೆ ಯಾವುದೇ ನಾಗರಿಕರನ್ನು ತಾರತಮ್ಯ ಮಾಡುವುದು ಸರಿಯಲ್ಲ” ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿತ್ತು.
ರಕ್ತದಾನದಿಂದ ಇವರನ್ನು ಹೊರಗಿಡುವುದಕ್ಕೆ ಸರ್ಕಾರದ ವಾದವೇನು?
ತೃತೀಯಲಿಂಗಿಗಳು, ಪುರುಷರ ಜತೆ ಲೈಂಗಿಕ ಕ್ರಿಯೆ ನಡೆಸುವ ಪುರುಷರು (ಎಂಎಸ್ಎಂ) ಮತ್ತು ಲೈಂಗಿಕ ಕಾರ್ಯಕರ್ತೆಯರು ರಕ್ತದಾನ ಮಾಡುವುದನ್ನು ನಿರ್ಬಂಧಿಸಿರುವ 2017ರ ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್ನಲ್ಲಿ ಸಮರ್ಥಿಸಿಕೊಂಡಿದೆ. ಈ ಮಾರ್ಗಸೂಚಿಗಳು ವೈಜ್ಞಾನಿಕ ಪುರಾವೆಗಳನ್ನು ಆಧರಿಸಿದ್ದು, ತಜ್ಞರಿಂದ ಜಾಗತಿಕವಾಗಿ ಮಾನ್ಯತೆ ಪಡೆದಿವೆ ಎಂದು ತಿಳಿಸಿದೆ.
ಯುರೋಪಿಯನ್ ರಾಷ್ಟ್ರಗಳು ಲೈಂಗಿಕವಾಗಿ ಸಕ್ರಿಯವಾಗಿರುವ ಸಲಿಂಗಕಾಮಿಗಳು ರಕ್ತದಾನ ಮಾಡುವುದನ್ನು ನಿಷೇಧಿಸಿವೆ. ಯುರೋಪಿಯನ್ ಪುರುಷರು-ಪುರುಷರೊಂದಿಗೆ ಲೈಂಗಿಕತೆ ಹೊಂದಿರುವ ಬಗ್ಗೆ ಇಂಟರ್ನೆಟ್ ಸಮೀಕ್ಷೆ ಆಧರಿಸಿ ಈ ಕ್ರಮಕೈಗೊಂಡಿವೆ ಎಂದು ಕೇಂದ್ರ ಸರ್ಕಾರ ಅಫಿಡವಿಟ್ನಲ್ಲಿ ತಿಳಿಸಿದೆ. ಭಾರತದ ರಕ್ತ ವರ್ಗಾವಣೆ ವ್ಯವಸ್ಥೆಯನ್ನು ಬಲಪಡಿಸಲು ಪೂರಕವಾದ ಕ್ರಮಗಳನ್ನು ಕೈಗೊಳ್ಳಲಾಗಿದೆ. ರಕ್ತದಾನ ವ್ಯವಸ್ಥೆಯ ಮೇಲೆ ನಂಬಿಕೆ ಇರಿಸಿ, ಅದನ್ನು ಬಳಕೆ ಮಾಡುವ ಜನರಲ್ಲಿ ವಿಶ್ವಾಸ ಮೂಡಿಸುವುದು ಬಹಳ ಮುಖ್ಯ. ಜೀವವೊಂದು ಸಂಕಷ್ಟದಲ್ಲಿರುವ ಸಮಯದಲ್ಲಿ ರಕ್ತದಾನ ವ್ಯವಸ್ಥೆಯ ಹೊರತು ಜನರಿಗೆ ಬೇರೆ ಆಯ್ಕೆಗಳಿರುವುದು ಕಡಿಮೆ. ಸಂಗ್ರಹಿಸಲಾದ ರಕ್ತದ ಮಾದರಿಯು ಸುರಕ್ಷಿತ ಹಾಗೂ ಪರಿಣಾಮಕಾರಿ ಎಂಬ ಬಗ್ಗೆ ರಕ್ತದಾನ ಮಾಡುವವರು ಹಾಗೂ ರಕ್ತವನ್ನು ಪಡೆಯುವವರು ಸಂಪೂರ್ಣ ವಿಶ್ವಾಸ ಇರಿಸುವುದು ಅಗತ್ಯ ಎಂದು ಸರ್ಕಾರ ಹೇಳಿದೆ. ಇದನ್ನೂ ಓದಿ: Public TV Explainer: ಭಾರತದಲ್ಲಿ ಲ್ಯಾಬ್ನಲ್ಲೇ ತಯಾರಾಗುತ್ತಾ ವಜ್ರ? – ಕೃತಕ ವಜ್ರ ಹೇಗೆ ತಯಾರಿಸ್ತಾರೆ ಗೊತ್ತಾ?
ರಕ್ತ ವರ್ಗಾವಣೆ ವಿಚಾರದಲ್ಲಿ ಪಾಶ್ಚಾತ್ಯ ದೇಶಗಳು ನ್ಯೂಕ್ಲಿಯಿಕ್ ಆ್ಯಸಿಡ್ ಟೆಸ್ಟಿಂಗ್ (ಎನ್ಎಟಿ) ವಿಧಾನವನ್ನು ಅನುಸರಿಸುತ್ತವೆ. ಈ ವಿಧಾನದಿಂದ, ವರ್ಗಾವಣೆಯಿಂದ ಹರಡುವ ಸೋಂಕುಗಳನ್ನು (ಟಿಟಿಐ) ಗಣನೀಯವಾಗಿ ಕಡಿಮೆ ಮಾಡಬಹುದು. ಭಾರತದಲ್ಲಿ 3,866 ರಕ್ತನಿಧಿ ಕೇಂದ್ರಗಳಲ್ಲಿ ಮಾತ್ರ ಎನ್ಎಟಿ ತಂತ್ರಜ್ಞಾನ ಅಳವಡಿಸಿಕೊಳ್ಳಲಾಗಿದೆ. ಈ ತಂತ್ರಜ್ಞಾನವೂ ದುಬಾರಿ. ಇದನ್ನು ನಿರ್ವಹಿಸಲು ತರಬೇತಿ ಪಡೆದ ಸಿಬ್ಬಂದಿ ಹಾಗೂ ವಿಶೇಷ ಉಪಕರಣಗಳು, ಸರಿಯಾದ ನಿರ್ವಹಣೆ ಅತ್ಯಗತ್ಯ ಎಂದು ಕೇಂದ್ರ ತಿಳಿಸಿದೆ.
ನವದೆಹಲಿ: ಸಲಿಂಗ ವಿವಾಹಕ್ಕೆ ಕಾನೂನಿನ ಮಾನ್ಯತೆ ಕೋರಿ ಸಲಿಂಗಕಾಮಿ ದಂಪತಿ ಸುಪ್ರೀಂಕೋರ್ಟ್ಗೆ (Supreme Court) ಸಲ್ಲಿಸಿರುವ ಅರ್ಜಿಯನ್ನು ಕೇಂದ್ರ ಸರ್ಕಾರ ವಿರೋಧಿಸಿದೆ. ಸುಪ್ರೀಂಕೋರ್ಟ್ ಸೂಚನೆ ಮೇರೆಗೆ ಅಫಿಡೆವಿಟ್ ಸಲ್ಲಿಸಿರುವ ಸರ್ಕಾರ (Central Government) ಇದನ್ನು ಭಾರತೀಯ ಕುಟುಂಬ ಘಟಕದ ಪರಿಕಲ್ಪನೆಗೆ ಹೋಲಿಸಲಾಗುವುದಿಲ್ಲ ಎಂದು ಹೇಳಿದೆ.
ಸಲಿಂಗ ಸಂಬಂಧಗಳು ಕಾನೂನುಬಾಹಿರವಲ್ಲದಿದ್ದರೂ, ಭಾರತೀಯ ವ್ಯವಸ್ಥೆಯಲ್ಲಿ ಪುರುಷ ಮತ್ತು ಮಹಿಳೆಯ ನಡುವೆ ಮದುವೆ (Marriage) ವ್ಯವಸ್ಥೆ ಹೊಂದಿದೆ. ಸಲಿಂಗ ವ್ಯಕ್ತಿಗಳು ಪಾಲುದಾರರಾಗಿ ಒಟ್ಟಿಗೆ ವಾಸಿಸುವುದು ಮತ್ತು ಒಂದೇ ಲಿಂಗದ ವ್ಯಕ್ತಿಗಳು ಲೈಂಗಿಕ ಸಂಬಂಧ ಹೊಂದುವುದನ್ನು ಭಾರತೀಯ ಕುಟುಂಬ ಘಟಕದ ಪರಿಕಲ್ಪನೆ ವಿರುದ್ಧವಾಗಿದೆ ಎಂದು ಅಫಿಡೆವಿಟ್ನಲ್ಲಿ ಅಭಿಪ್ರಾಯಪಟ್ಟಿದೆ.
ಒಂದೇ ಲಿಂಗಕ್ಕೆ ಸೇರಿದ ವ್ಯಕ್ತಿಗಳ ನಡುವಿನ ಮದುವೆಯ ಗುರುತಿಸುವಿಕೆ ನೋಂದಣಿಗಿಂತ ದೂರವಿದೆ. ಮದುವೆ ತನ್ನದೆಯಾದ ಸಾರ್ವಜನಿಕ ಪ್ರಾಮುಖ್ಯತೆಯನ್ನು ಹೊಂದಿದೆ. ಇದು ವ್ಯವಸ್ಥೆಯನ್ನು ರಚಿಸುತ್ತವೆ. ಅಲ್ಲದೆ ಹಲವಾರು ಹಕ್ಕುಗಳು ಮತ್ತು ಹೊಣೆಗಾರಿಕೆಗಳನ್ನು ಹೊಂದುವ ಸಾಮಾಜಿಕ ವ್ಯವಸ್ಥೆಯಾಗಿದೆ. ಈ ಕಾರಣದಿಂದಲೇ ನೊಂದಣಿಗಿಂತ ಶಾಸ್ತ್ರೋಕ್ತವಾಗಿ ಮದುವೆ ಮಾಡಲಾಗುತ್ತದೆ.
ಸಾಮಾಜಿಕ ಸಂಬಂಧದ ನಿರ್ದಿಷ್ಟ ರೂಪವನ್ನು ಗುರುತಿಸಲು ಯಾವುದೇ ಮೂಲಭೂತ ಹಕ್ಕು ಇಲ್ಲ, ನಾಗರಿಕರು ಆರ್ಟಿಕಲ್ 19ರ ಅಡಿಯಲ್ಲಿ ಹಕ್ಕನ್ನು ಹೊಂದಿದ್ದಾರೆ ಎಂಬುದು ನಿಜವಾಗಿದ್ದರೂ, ಇಂತಹ ವ್ಯವಸ್ಥೆಗೆ ರಾಜ್ಯವು ಅಗತ್ಯವಾಗಿ ಕಾನೂನು ಮಾನ್ಯತೆ ನೀಡಬೇಕು ಎಂಬುದಿಲ್ಲ. ಅಥವಾ ಆರ್ಟಿಕಲ್ 21ರ ಅಡಿಯಲ್ಲಿ ಜೀವನ ಮತ್ತು ಸ್ವಾತಂತ್ರ್ಯದ ಹಕ್ಕು ಇಲ್ಲಿ ಸೇರಿಸಲು ಸಾಧ್ಯವಿಲ್ಲ.
ನಿಷೇಧಿತ ಸಂಬಂಧದ ಮದುವೆ ʼಮದುವೆಯ ಷರತ್ತುಗಳುʼ ಮತ್ತು ಧಾರ್ಮಿಕ ಅವಶ್ಯಕತೆಗಳ ಉಲ್ಲಂಘನೆಗೆ ಕಾರಣವಾಗುತ್ತದೆ. ಭಾರತದ ಶಾಸಕಾಂಗ ವ್ಯವಸ್ಥೆಯು ಪುರುಷ ಮತ್ತು ಮಹಿಳೆಯ ನಡುವಿನ ವಿವಾಹದ ಕಾನೂನು ಸಂಬಂಧದ ಗುರುತಿಸುವಿಕೆಗೆ ಮಾತ್ರ ಸೀಮಿತವಾಗಿದೆ. ಸಲಿಂಗ ವಿವಾಹದಲ್ಲಿ ಮೇಲಿನ ಉಲ್ಲೇಖಿಸಿದ ಮತ್ತು ಇತರ ಶಾಸನಬದ್ಧ ನಿಬಂಧನೆಗಳನ್ನು ಕಾರ್ಯಗತಗೊಳಿಸುವುದು ಅಸಾಧ್ಯ. ಇದನ್ನೂ ಓದಿ:ಮಲಗಿದ್ದ ನಾಯಿ ಮೇಲೆ ಕಾರು ಹತ್ತಿಸಿ ದರ್ಪ ಮೆರೆದ ವ್ಯಕ್ತಿ!
ತಮ್ಮ ಆಯ್ಕೆಯ ವ್ಯಕ್ತಿಯನ್ನು ಮದುವೆಯಾಗುವ ಹಕ್ಕನ್ನು LGBTQIA+ ನಾಗರಿಕರಿಗೂ ವಿಸ್ತರಿಸಬೇಕು ಎಂದು ಕೋರಿ ಸಲ್ಲಿಸಲಾದ ಅರ್ಜಿಗಳಗಳನ್ನು ಸುಪ್ರೀಂಕೋರ್ಟ್ ವಿಚಾರಣೆ ನಡೆಸುತ್ತಿದೆ. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಮತ್ತು ಜೆ.ಬಿ. ಪರ್ದಿವಾಲಾ ಅವರ ಪೀಠ ವಿಚಾರಣೆ ನಡೆಸುತ್ತಿದ್ದು, ಹೈಕೋರ್ಟ್ಗಳಲ್ಲಿ ಬಾಕಿ ಉಳಿದಿರುವ ಸಲಿಂಗ ವಿವಾಹವನ್ನು ಗುರುತಿಸುವ ಎಲ್ಲಾ ಅರ್ಜಿಗಳನ್ನು ವರ್ಗಾಯಿಸಿಕೊಂಡಿದೆ.
ಹೈದರಾಬಾದ್ ಮೂಲದ ಸಲಿಂಗಕಾಮಿಗಳಾದ ಸುಪ್ರಿಯೋ ಚಕ್ರವರ್ತಿ ಮತ್ತು ಅಭಯ್ ಡ್ಯಾಂಗ್ ಅವರು ಅರ್ಜಿ ಸಲ್ಲಿಸಿದ್ದಾರೆ. ಪುಟ್ಟಸ್ವಾಮಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ LGBTQIA+ ವ್ಯಕ್ತಿಗಳು ಸಮಾನತೆ, ಘನತೆ ಮತ್ತು ಗೌಪ್ಯತೆಯ ಹಕ್ಕನ್ನು ಇತರ ಎಲ್ಲಾ ನಾಗರಿಕರಂತೆಯೇ ಸಂವಿಧಾನವು ಖಾತರಿಪಡಿಸುತ್ತದೆ ಎಂದು ಅಭಿಪ್ರಾಯಪಟ್ಟಿದೆ ಎಂದು ವಾದಿಸಲಾಯಿತು.
ಮತ್ತೊಂದು ಸಲಿಂಗಕಾಮಿ ದಂಪತಿ ಪಾರ್ಥ್ ಫಿರೋಜ್ ಮೆಹ್ರೋತ್ರಾ ಮತ್ತು ಉದಯ್ ರಾಜ್ ಅವರು ಸಲ್ಲಿಸಿದ ಮತ್ತೊಂದು ಅರ್ಜಿಯಲ್ಲಿ ಸಲಿಂಗ ವಿವಾಹಗಳನ್ನು ಗುರುತಿಸದಿರುವುದು ಸಂವಿಧಾನದ 14 ನೇ ವಿಧಿಯ ಅಡಿಯಲ್ಲಿ ಗುಣಮಟ್ಟದ ಹಕ್ಕು ಮತ್ತು ಸಂವಿಧಾನದ 21 ನೇ ವಿಧಿ ಅಡಿಯಲ್ಲಿ ಬದುಕುವ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ವಾದಿಸಿದ್ದರು. ಇದನ್ನೂ ಓದಿ: ನನ್ನ ಪತ್ನಿಯನ್ನು ಹುಡುಕಿಕೊಡಿ- ಬೆಂಗಳೂರು ಪೊಲೀಸರಿಗೆ ಛತ್ತಿಸ್ಗಢ ವ್ಯಕ್ತಿ ದೂರು
ನವದೆಹಲಿ: ಭಾರತದಾದ್ಯಂತ ವಿದ್ಯಾರ್ಥಿನಿಯರು ಮತ್ತು ಉದ್ಯೋಗಸ್ಥ ಮಹಿಳೆಯರಿಗೆ ಮುಟ್ಟಿನ ನೋವಿನ ರಜೆಯನ್ನು (Menstrual Pain Leave) ಕೋರಿ ಸಲ್ಲಿಸಲಾದ ಮನವಿಯನ್ನು ಸುಪ್ರೀಂ ಕೋರ್ಟ್ (Supreme Court) ಶುಕ್ರವಾರ ವಿಲೇವಾರಿ ಮಾಡಿದೆ. ಅರ್ಜಿದಾರರು ಕೇಂದ್ರ ಸರ್ಕಾರದ (Central Government) ಮುಂದೆ ಪ್ರಾತಿನಿಧ್ಯವನ್ನು ನೀಡಲು ಅವಕಾಶ ನೀಡಿದೆ.
ಶೈಲೇಂದ್ರ ಮಣಿ ತ್ರಿಪಾಠಿ ಎನ್ನುವವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಸಿಜೆಐ ಡಿ.ವೈ ಚಂದ್ರಚೂಡ್ (Dhananjaya Y. Chandrachud) ನೇತೃತ್ವದ ಪೀಠ, ಪ್ರಕರಣವೂ ಸರ್ಕಾರದ ನೀತಿಗೆ ಸಂಬಂಧಿಸಿದೆ. ಅರ್ಜಿದಾರರು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದ ಮುಂದೆ ಪ್ರಾತಿನಿಧ್ಯವನ್ನು ಸಲ್ಲಿಸಬಹುದು ಎಂದು ಹೇಳಿದೆ. ಇದನ್ನೂ ಓದಿ: ಪವನ್ ಖೇರಾ ಕ್ಷಮೆಯಾಚಿಸಿದ್ದಾರೆ: ಅಸ್ಸಾಂ ಸಿಎಂ
ಸಮಾಜ, ಸರ್ಕಾರವು ಮಹಿಳೆಯರ ಮುಟ್ಟಿನ ಅವಧಿಯನ್ನು ಹೆಚ್ಚಾಗಿ ಕಡೆಗಣಿಸಿದೆ. Ivipanan, Zomato, Byju’s, Swiggy, Mathrubhumi, Magzter, Industry, ARC, FlyMyBiz ಮತ್ತು Gozoop ನಂತಹ ಕಂಪನಿಗಳು ಮುಟ್ಟಿನ ರಜೆ ನೀಡುವ ಮೂಲಕ ಮಹಿಳೆಯರಿಗೆ ಕೆಲಸ ಮಾಡಲು ಬೆಂಬಲಿಸಿವೆ. ಇದೇ ಮಾದರಿಯಲ್ಲಿ ಮುಟ್ಟಿನ ಅವಧಿಯಲ್ಲಿ ರಜೆ ನೀಡಲು ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಬೇಕು ಎಂದು ಮನವಿ ಮಾಡಲಾಗಿತ್ತು.
1992ರ ವಿಶೇಷ ನೀತಿಯ ಭಾಗವಾಗಿ ಬಿಹಾರ ಮುಟ್ಟಿನ ರಜೆ ನೀಡುತ್ತಿದೆ. ಉಳಿದ ರಾಜ್ಯಗಳಲ್ಲಿ ಮಹಿಳೆಯರಿಗೆ ಋತುಚಕ್ರದ ನೋವಿನ ರಜೆ ಅಥವಾ ಅವಧಿ ರಜೆಯನ್ನು ನಿರಾಕರಿಸುವುದು ಸಂವಿಧಾನದ 14 ನೇ ವಿಧಿಯ ಅಡಿಯಲ್ಲಿ ಅವರ ಸಮಾನತೆಯ ಹಕ್ಕಿನ ಉಲ್ಲಂಘನೆಯಾಗಿದೆ ಎಂದು ವಿಚಾರಣೆ ವೇಳೆ ವಾದಿಸಲಾಯಿತು. ಇದನ್ನೂ ಓದಿ: ಛತ್ತೀಸ್ಗಢದಲ್ಲಿ ಭೀಕರ ಅಪಘಾತ – 11 ಜನ ಸ್ಥಳದಲ್ಲೇ ಸಾವು
LIVE TV
[brid partner=56869869 player=32851 video=960834 autoplay=true]
ಬೆಂಗಳೂರು: ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾಯ್ದೆ ಮತ್ತು ಕಾನೂನುಗಳು ಜನಸಾಮಾನ್ಯರಿಗೆ ಸ್ಥಳೀಯ ಭಾಷೆಯಲ್ಲಿ ಒದಗಿಸುವ ಮೂಲಕ ಕಾನೂನಿನ ಅರಿವು ಮೂಡಿಸುವ ನಿಟ್ಟಿನಲ್ಲಿ ಸಿದ್ಧಪಡಿಸಲಾದ 42 ಕೇಂದ್ರ ಅಧಿನಿಯಮಗಳು ಹಾಗೂ 32 ರಾಜ್ಯ ಅಧಿನಿಯಮಗಳ ಕನ್ನಡ ಆವೃತ್ತಿಗಳನ್ನು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ (J.C.Madhuswamy) ಲೋಕಾರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಜೆ.ಸಿ.ಮಾಧುಸ್ವಾಮಿ, ಕಾನೂನಿನ ಮುಂದೆ ಎಲ್ಲರೂ ಸಮಾನರು. ಕಾನೂನಿನ ಅನುಷ್ಠಾನ ಮತ್ತು ಪಾಲನೆ ಮಾಡಬೇಕಾದರೇ ಅದರ ಅರಿವು ಬಹಳ ಮುಖ್ಯ. ಈ ಹಿನ್ನೆಲೆಯಲ್ಲಿ ಜನಸಾಮಾನ್ಯರಿಗೆ ಸ್ಥಳೀಯ ಭಾಷೆಯಲ್ಲಿ ಒದಗಿಸಿ ಅರ್ಥೈಸುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯದ ಅಧಿನಿಯಮಗಳನ್ನು ಕನ್ನಡಕ್ಕೆ ಭಾಷಾಂತರಗೊಳಿಸಲಾಗಿದೆ ಎಂದರು.
ಜನಸಾಮಾನ್ಯರಿಗೆ ತಮ್ಮ ಸ್ಥಳೀಯ ಭಾಷೆಗಳಲ್ಲಿ ಕಾನೂನುಗಳನ್ನು ತಿಳಿದುಕೊಳ್ಳಲು ಹಾಗೂ ನ್ಯಾಯಾಲಯಗಳಲ್ಲಿ, ನ್ಯಾಯಾಧೀಕರಣಗಳಲ್ಲಿ ಸರ್ಕಾರದ ಕಚೇರಿಗಳಲ್ಲಿ ಕನ್ನಡದ ಬಳಕೆಯನ್ನು ಸುಗಮಗೊಳಿಸಲು ಈ ಅಧಿನಿಯಮಗಳು ತುಂಬಾ ಸಹಕಾರಿಯಾಗಲಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಅಧಿನಿಯಮಗಳನ್ನು ಭಾಷಾಂತರಿಸುವ ಕೆಲಸ ವ್ಯಾಪಕವಾಗಿ ಆಗಬೇಕಿದೆ ತಿಳಿಸಿದರು. ಇದನ್ನೂ ಓದಿ: ರಾಜ್ಯದಲ್ಲಿ ಸರ್ಕಾರ ಸತ್ತುಹೋಗಿದೆ ಅನ್ನೋದಕ್ಕೆ ಅಧಿಕಾರಿಗಳ ಬೀದಿ ರಂಪ ಸಾಕ್ಷಿ – ಸುರ್ಜೆವಾಲಾ
ಕೇಂದ್ರ ಮತ್ತು ರಾಜ್ಯದ ಅಧಿನಿಯಮಗಳನ್ನು ಭಾಷಾಂತರಿಸುವುದಕ್ಕೆ ಕರ್ನಾಟಕದಲ್ಲಿ ವಿಶೇಷ ಒತ್ತು ನೀಡಲಾಗಿದ್ದು, ಕೇಂದ್ರ ಸರ್ಕಾರವೇ ಶ್ಲಾಘಿಸಿದೆ. ಜನರು ಕಾಯ್ದೆ, ಕಾನೂನುಗಳನ್ನು ಹೆಚ್ಚೆಚ್ಚು ತಿಳಿದುಕೊಂಡಲ್ಲಿ ಅವುಗಳ ಪರಿಣಾಮಕಾರಿ ಅನುಷ್ಠಾನ ಮಾಡಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಕರ್ನಾಟಕದ ನ್ಯಾಯಾಲಯಗಳಲ್ಲಿ ಕನ್ನಡದ ತೀರ್ಪುಗಳು ಹೊರಬರಲು ಹಾಗೂ ಆಡಳಿತ ವ್ಯವಹಾರಗಳಲ್ಲಿ ಮತ್ತು ಮೊಕದ್ದಮೆಗಳಿಗೆ ಸಂಬಂಧಿಸಿದ ಪ್ರಕ್ರಿಯೆಯಲ್ಲೂ ಕೂಡ ಕನ್ನಡದ ಬಳಕೆ ಸಮರ್ಪಕವಾಗಿ ಆಗಬೇಕಾಗಿದೆ ಎಂದರು. ಇದನ್ನೂ ಓದಿ: ಸೈಬರ್ ಪ್ರಕರಣ ತಡೆಯಲು ಕಠಿಣ ಕ್ರಮ: ಆರಗ ಜ್ಞಾನೇಂದ್ರ
ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳು ಹಾಗೂ ರಾಜಭಾಷಾ(ವಿಧಾಯೀ) ಆಯೋಗದ ಅಧ್ಯಕ್ಷರಾದ ಜಿ.ಶ್ರೀಧರ್ ಮಾತನಾಡಿ, ರಾಜಭಾಷಾ ಆಯೋಗವು ಇಲ್ಲಿಯವರೆಗೆ 371 ಕೇಂದ್ರ ಮತ್ತು 219 ರಾಜ್ಯ ಅಧಿನಿಯಮಗಳನ್ನು ಕನ್ನಡ ಭಾಷೆಗೆ ಭಾಷಾಂತರಿಸಿ ಪ್ರಕಟಿಸಿದೆ. ಭಾರತ ಸಂವಿಧಾನವನ್ನು ದೇಶದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಸ್ಥಳೀಯ ಭಾಷೆಯಲ್ಲಿ ಭಾಷಾಂತರಿಸಿ ಜನಸಾಮಾನ್ಯರಿಗೆ ತಲುಪಿಸಿದ ಕೀರ್ತಿ ನಮ್ಮ ಆಯೋಗಕ್ಕೆ ಸಲ್ಲುತ್ತದೆ ಎಂದು ಹೇಳಿದರು.
ದೇಶದ ಪ್ರಮುಖ ಕಾನೂನುಗಳಾದ ಭಾರತ ದಂಡ ಸಂಹಿತೆ, ದಂಡ ಪ್ರಕ್ರಿಯಾ ಸಂಹಿತೆ ಹಾಗೂ ಭಾರತ ಸಾಕ್ಷ್ಯ ಅಧಿನಿಯಮಗಳನ್ನು ಕನ್ನಡ ಭಾಷೆಗೆ ಭಾಷಾಂತರಿಸಿ ದ್ವಿಭಾಷೆಯಲ್ಲಿ ಪ್ರಕಟಿಸಲಾಗಿದೆ. ಪರಿಷ್ಕೃತ ಇಂಗ್ಲಿಷ್ ಕನ್ನಡ ಕಾನೂನು ಪದಕೋಶ ಇತ್ತೀಚೆಗೆ ಬಿಡುಗಡೆ ಮಾಡಲಾಗಿದ್ದು, ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ತರಿಸಿಕೊಂಡು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ರೀತಿಯ ಕೆಲಸ ಎಲ್ಲ ರಾಜ್ಯಗಳಲ್ಲಾಗಿದ್ದರೆ ಸ್ಥಳೀಯ ಭಾಷೆಯಲ್ಲಿ ನ್ಯಾಯಾಲಯ ತೀರ್ಪುಗಳನ್ನು ಪ್ರಕಟಿಸಲು ಸಹಾಯಕವಾಗುತ್ತದೆ ಎಂದು ಪ್ರಶಂಸೆ ವ್ಯಕ್ತಪಡಿಸಿದ್ದನ್ನು ಇದೇ ಸಂದರ್ಭದಲ್ಲಿ ತಿಳಿಸಿದರು.
ಈ ಸಂದರ್ಭದಲ್ಲಿ ಉನ್ನತ ಶಿಕ್ಷಣ ಸಚಿವ ಸಿ.ಎನ್.ಅಶ್ವತ್ ನಾರಾಯಣ, ಶಾಸಕ ದಿನಕರಶೆಟ್ಟಿ, ಭಾಷಾಂತರ ನಿರ್ದೇಶನಾಲಯದ ನಿರ್ದೇಶಕ ಎಂ.ವೆಂಕಟೇಶ, ರಾಜಭಾಷಾ(ವಿಧಾಯೀ) ಆಯೋಗದ ಸದಸ್ಯರು ಇದ್ದರು.
LIVE TV
[brid partner=56869869 player=32851 video=960834 autoplay=true]
ಬೆಂಗಳೂರು: ಶರಾವತಿ ಯೋಜನೆಯಿಂದ (Sharavati Project) ಭೂಮಿ ಕಳೆದುಕೊಂಡವರಿಗೆ ಜಮೀನು ಹಕ್ಕು ನೀಡುವ ಪ್ರಕ್ರಿಯೆ ಪ್ರಾರಂಭ ಮಾಡಲಾಗಿದೆ. ಈ ಕುರಿತು ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸುವುದಾಗಿ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ (BS Yediyurappa) ತಿಳಿಸಿದರು.
ಗೃಹ ಸಚಿವ ಆರಗ (Araga Jnanendra) ನೇತೃತ್ವದಲ್ಲಿ ಶರಾವತಿ ಸಂತ್ರಸ್ತರ ಸಮಸ್ಯೆ ಕುರಿತು ಸಭೆ ನಡೆಸಲಾಯಿತು. ಸಭೆ ಬಳಿಕ ಮಾತನಾಡಿದ ಮಾಜಿ ಸಿಎಂ ಯಡಿಯೂರಪ್ಪ, ಶರಾವತಿ ಸಂತ್ರಸ್ತರಿಗೆ ತಾವು ಉಳುಮೆ ಮಾಡುವ ಜಮೀನು ಹಕ್ಕು ನೀಡುವುದು 60 ವರ್ಷದ ಸಮಸ್ಯೆ ಆಗಿತ್ತು. ಮೊನ್ನೆ ಕೇಂದ್ರ ಅರಣ್ಯ ಸಚಿವರ ಭೇಟಿ ಮಾಡಿದ್ವಿ. ಅವರು ಎಲ್ಲಾ ಸರ್ವೆ ಮಾಡಿ ಪ್ರಪೋಸಲ್ ಕಳಿಸಿ ಎಂದಿದ್ದಾರೆ. ಹೀಗಾಗಿ ಪ್ರಸ್ತಾವನೆ ಸಿದ್ಧ ಪಡಿಸಲಾಗಿದೆ ಎಂದರು.
ಶರಾವತಿ ಯೋಜನೆಗೆ ಭೂಮಿ ಕೊಟ್ಟವರಿಗೆ ಈಗ ಭೂಮಿ ಇಲ್ಲದಂತೆ ಆಗಿದೆ. ಈಗಾಗಲೇ ಜಿಲ್ಲಾಡಳಿತ ಸರ್ವೆ ಮಾಡಿ ಪ್ರಸ್ತಾವನೆ ಸಿದ್ಧಪಡಿಸಿದೆ. ಸುಮಾರು 9 ಸಾವಿರ ಎಕರೆ ಜಮೀನು ಹಕ್ಕು ನೀಡುವುದಕ್ಕೆ ಕೇಂದ್ರಕ್ಕೆ ಪ್ರಸ್ತಾವನೆ ಕಳಿಸುತ್ತೇವೆ. ಸಂತ್ರಸ್ತರ ಸಮಸ್ಯೆ ಪರಿಹಾರ ಮಾಡೋ ಕೆಲಸ ಮಾಡುತ್ತೇವೆ ಎಂದರು. ಇದನ್ನೂ ಓದಿ: ಸಾರ್ವಜನಿಕ ಸ್ಥಳಗಳಲ್ಲಿ ಕಮಲ ಪೇಂಟಿಂಗ್ – ಸಂಸದ ತೇಜಸ್ವಿ ಸೂರ್ಯ ವಿರುದ್ಧ BBMP ಗರಂ
ನವದೆಹಲಿ: ಇಂದಿನಿಂದ ಕೇಂದ್ರ ಬಜೆಟ್ ಅಧಿವೇಶನ (Central Budget Session) ಆರಂಭವಾದ ಹಿನ್ನೆಲೆ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಜಂಟಿ ಅಧಿವೇಶನ ಉದ್ದೇಶಿಸಿ ಮೊದಲ ಬಾರಿಗೆ ಮಾತನಾಡಿದರು. ತಮ್ಮ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಎರಡು ಅವಧಿಯ ಸರ್ಕಾರದ ಸಾಧನೆಗಳನ್ನು ಶ್ಲಾಘಿಸಿದರು.
About 11 crore families have been connected with piped water supply in three years under the Jal Jeevan Mission. Poor families are getting the maximum benefit from this: President Murmu to the joint sitting of Parliament pic.twitter.com/afMopApsvV
ಜಮ್ಮು ಮತ್ತು ಕಾಶ್ಮೀರದಲ್ಲಿ 370 ನೇ ವಿಧಿಯನ್ನು ರದ್ದುಗೊಳಿಸುವುದರಿಂದ ಹಿಡಿದು ತ್ರಿವಳಿ ತಲಾಖ್ (Talaq) ರದ್ದುಗೊಳಿಸುವವರೆಗೆ, ನನ್ನ ಸರ್ಕಾರವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡಿದೆ. ನಮ್ಮ ಸರ್ಕಾರ ಭಯೋತ್ಪಾದನೆಯನ್ನು ಹತ್ತಿಕ್ಕಿದೆ, ಎಲ್ಒಸಿ ಮತ್ತು ಎಲ್ಎಸಿಯಲ್ಲಿ ಸೂಕ್ತ ಪ್ರತಿಕ್ರಿಯೆಯನ್ನು ನೀಡಿದೆ ಎಂದು ತಮ್ಮ ಭಾಷಣದಲ್ಲಿ ಹೇಳಿದರು.
My government has worked for every section of society without any discrimination. As a result of the efforts of my government in the last few years, many basic facilities have either reached 100% population or are very close to that target: President Murmu pic.twitter.com/MP6qp0R7kW
ಬಡತನದ ವಿಷಯದ ಕುರಿತು ಮಾತನಾಡಿದ ರಾಷ್ಟ್ರಪತಿ ಮುರ್ಮು, ‘ಗರೀಬೋ ಹಠಾವೋ’ ಇನ್ನು ಮುಂದೆ ಘೋಷಣೆಯಲ್ಲ, ನನ್ನ ಸರ್ಕಾರ ಬಡವರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಮತ್ತು ಅವರನ್ನು ಸಬಲೀಕರಣಗೊಳಿಸಲು ಕೆಲಸ ಮಾಡುತ್ತಿದೆ. ಸೂಪರ್ ಸ್ಪೀಡ್ ಸ್ಕಿಲ್ ವರ್ಕ್, ಹೊಸ ತಂತ್ರಜ್ಞಾನ ಬಳಸಿಕೊಂಡು ಕೆಲಸ ಮಾಡುವ ಸರ್ಕಾರ ಸಿಕ್ಕಿದೆ. ಎರಡು ಬಾರಿ ಸ್ಥಿರ ಸರ್ಕಾರ ಆಯ್ಕೆ ಮಾಡಿದ ಜನರಿಗೆ ನಾನು ಧನ್ಯವಾದ ಸಲ್ಲಿಸುತ್ತೇನೆ ಎಂದರು.
Wherever there is political instability anywhere in the world, those countries are surrounded by a massive crisis. But due to the decisions my govt took in the national interest, India is in a better position as compared to other countries: President Draupadi Murmu pic.twitter.com/UlpcZXqC2m
ಭ್ರಷ್ಟಾಚಾರವು ಪ್ರಜಾಪ್ರಭುತ್ವ ಮತ್ತು ಸಾಮಾಜಿಕ ನ್ಯಾಯದ ದೊಡ್ಡ ಶತ್ರು, ಪರಾರಿಯಾಗಿರುವ ಆರ್ಥಿಕ ಅಪರಾಧಿಗಳ ಆಸ್ತಿಯನ್ನು ವಶಪಡಿಸಿಕೊಳ್ಳಲು ನನ್ನ ಸರ್ಕಾರವು ಪ್ಯುಗಿಟಿವ್ ಆರ್ಥಿಕ ಅಪರಾಧಿಗಳ ಕಾಯಿದೆಯನ್ನು ಜಾರಿಗೆ ತಂದಿದೆ. ಬೇನಾಮಿ ಆಸ್ತಿಗಳನ್ನು ಗುರುತಿಸಿ ವಶಪಡಿಸಿಕೊಳ್ಳುತ್ತಿದೆ. ಇದನ್ನೂ ಓದಿ: ಕಾಂಗ್ರೆಸ್ ಷಡ್ಯಂತ್ರಕ್ಕೆ ರಮೇಶ್ ಜಾರಕಿಹೊಳಿ ಬಲಿಯಾಗಿದ್ದಾರೆ: ರೇಣುಕಾಚಾರ್ಯ
The benefit of a stable and decisive govt is being reaped by us against the biggest crisis in 100 years and in tackling the situation that arose after it: President Droupadi Murmu to the joint session of Parliament as #BudgetSession commences pic.twitter.com/Y9F9xVTI0j
ಈ ಮೊದಲು ಸಮಸ್ಯೆಗಳನ್ನು ಇತ್ಯರ್ಥಪಡಿಸಲು ವಿಶ್ವದ ನೆರವು ಕೇಳುತ್ತಿತ್ತು, ಈಗ ಜಾಗತಿಕ ಸಮಸ್ಯೆಗಳ ಇತ್ಯರ್ಥಕ್ಕೆ ವಿಶ್ವ ಭಾರತದತ್ತ ನೋಡುತ್ತಿದೆ. ದೇಶದಲ್ಲಿ ಮೂಲಸೌಕರ್ಯಗಳು ಹೆಚ್ಚುತ್ತಿದೆ. ಬಸವೇಶ್ವರರ ಕಾಯಕವೇ ಕೈಲಾಸ ಮಾತಿನಂತೆ ನನ್ನ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಅಭಿನಂದಿಸಿದರು.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ನನ್ನ ಯೋಗ್ಯತೆ ಮೀರಿ ನನಗೆ ಕೇಂದ್ರ ಸರ್ಕಾರ ದೊಡ್ಡ ಗೌರವ ಕೊಟ್ಟಿದೆ ಅಂತ ಪದ್ಮವಿಭೂಷಣ (Padmavibhushan) ಗೌರವಕ್ಕೆ ಪಾತ್ರರಾಗಿರೋ ಮಾಜಿ ಸಿಎಂ ಎಸ್.ಎಂ. ಕೃಷ್ಣ (SM Krishna) ಕೇಂದ್ರ ಸರ್ಕಾರಕ್ಕೆ ಧನ್ಯವಾದ ತಿಳಿಸಿದರು.
ಪದ್ಮವಿಭೂಷಣ ಪ್ರಶಸ್ತಿಗೆ ಆಯ್ಕೆಯಾಗಿರುವ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣಾ ಅವರನ್ನು ಅವರ ನಿವಾಸದಲ್ಲಿ ಮುಖ್ಯಮಂತ್ರಿ @BSBommai ಅವರು ಇಂದು ಭೇಟಿಯಾಗಿ ಅಭಿನಂದಿಸಿ, ಸನ್ಮಾನಿಸಿದರು.
ಪದ್ಮವಿಭೂಷಣ ಗೌರವಕ್ಕೆ ಪಾತ್ರರಾದ ಕೃಷ್ಣ ಅವರನ್ನು ಸಿಎಂ ಬೊಮ್ಮಾಯಿ ಅಭಿನಂದನೆ ಸಲ್ಲಿಸಿದರು. ಈ ವೇಳೆ ಮಾತಾನಾಡಿದ ಅವರು, ನನ್ನ ಯೋಗ್ಯತೆ ಮೀರಿದ ದೊಡ್ಡ ಗೌರವ ಕೇಂದ್ರ ನೀಡಿದೆ. ಪ್ರಧಾನಿ ಮೋದಿ (Narendra Modi), ಗೃಹಮಂತ್ರಿ ಅಮಿತ್ ಶಾ (AmitShah) ಅವರು ಗೌರವ ನೀಡಿದ್ದಾರೆ. ಇದು ಬಯಸದೇ ಬಂದ ಭಾಗ್ಯ. ನಾನು ಕನಸು-ಮನಸಿನಲ್ಲೂ ಇದನ್ನು ನಿರೀಕ್ಷೆ ಮಾಡಿರಲಿಲ್ಲ. ಪ್ರಧಾನಿಗಳು, ಗೃಹ ಸಚಿವರು ಗೌರವ ನೀಡಿದ್ದಾರೆ ಅವರಿಗೆ ಧನ್ಯವಾದ ಹೇಳುತ್ತೇನೆ ಅಂದರು.
ಪ್ರಧಾನಿಗಳು ಪದ್ಮ ಪ್ರಶಸ್ತಿಗೆ ಒಂದು ಚೌಕಟ್ಟು ನಿರ್ಮಾಣ ಮಾಡಿದ್ದಾರೆ. ಇದಕ್ಕೆ ನಾನು ಧನ್ಯವಾದ ಹೇಳ್ತೀನಿ. ಯಶಸ್ವಿನಿ ಯೋಜನೆ ಮತ್ತು ಬಿಸಿಯೂಟ ನನ್ನ ಹೃದಯಕ್ಕೆ ಹತ್ತಿರವಾದ ಯೋಜನೆಗಳು. ಯಶಸ್ವಿನಿಯನ್ನ ಮತ್ತಷ್ಟು ಯಶಸ್ವಿಯಾಗಿ ಮಾಡಲು ಸಿಎಂ ಮುಂದಾಗಿದ್ದಾರೆ. ಸಿಎಂಗೆ ಧನ್ಯವಾದ ಹೇಳುತ್ತೇನೆ ಎಂದರು. ಇದನ್ನೂ ಓದಿ: ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಸಾಧನೆ ಮರೆಯಲು ಸಾಧ್ಯವಿಲ್ಲ: ಕೆ.ಗೋಪಾಲಯ್ಯ
ಪದ್ಮವಿಭೂಷಣ ಪ್ರಶಸ್ತಿಗೆ ಆಯ್ಕೆಯಾದ ಸಜ್ಜನ, ಶ್ರೇಷ್ಠ ವ್ಯಕ್ತಿತ್ವದ ಹಿರಿಯ ಮುತ್ಸದ್ದಿ ರಾಜಕಾರಣಿ ಎಸ್ ಎಂ ಕೃಷ್ಣ ಅವರನ್ನು ಅಭಿನಂದಿಸಿದ ಕ್ಷಣ. pic.twitter.com/zuTXjk697t
ರಾಜ್ಯ ಸರ್ಕಾರ ನನ್ನ ಬಗ್ಗೆ ಒಳ್ಳೆಯ ರೀತಿ ನಡೆಸಿಕೊಂಡು ಬಂದಿದೆ. ಮೊದಲು ಕೆಂಪೇಗೌಡ ಪ್ರಶಸ್ತಿ (Kempegowda Award) ಈಗ ಪದ್ಮವಿಭೂಷಣ ಪ್ರಶಸ್ತಿ ಬಂತು. ಇದು ನನ್ನ ಅಲ್ಪ ಸೇವೆಗೆ ಸಿಕ್ಕ ಗೌರವ ಅಂದುಕೊಳ್ತೀನಿ. ಎಲ್ಲರಿಗೂ ನನ್ನ ನಮಸ್ಕಾರ ಮಾಡ್ತೀನಿ. ದೇಶಕ್ಕೆ ಜನರಿಗೆ ಒಳ್ಳೆಯದಾಗಲಿ ಎಂದರು.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಚುನಾವಣೆ ಹತ್ತಿರ ಬರ್ತಿದ್ದ ಹಾಗೇ ಬಿಜೆಪಿ (BJP) ಪಕ್ಷವು ಜನತೆ ಮುಂದೆ ಡಬಲ್ ಇಂಜಿನ್ ಸರ್ಕಾರಗಳ ರಿಪೋರ್ಟ್ ಕಾರ್ಡ್ ಇಡಲು ಮುಂದಾಗಿದೆ. ಇದಕ್ಕಾಗಿ ಬಿಜೆಪಿ ಪಕ್ಷದ ವತಿಯಿಂದ ಇದೇ ತಿಂಗಳ 21 ರಿಂದ 29ರ ವರೆಗೆ ವಿಜಯ ಸಂಕಲ್ಪ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.
ವಿಜಯಪುರದ ಸಿಂದಗಿಯಲ್ಲಿ ಈ ವಿಜಯ ಸಂಕಲ್ಪ ಅಭಿಯಾನ ಆಯೋಜಿಸಲಾಗಿದೆ. ಅಂದು ರಾಷ್ಟ್ರೀಯ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ (J.P.Nadda) ಅವರು ಸಿಂದಗಿಗೆ ಆಗಮಿಸಿ ವಿಜಯ ಸಂಕಲ್ಪ ಅಭಿಯಾನಕ್ಕೆ ಚಾಲನೆ ಕೊಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಬಿಜೆಪಿಯು ಡಬಲ್ ಇಂಜಿನ್ ಸರ್ಕಾರಗಳ ರಿಪೋರ್ಟ್ ಕಾರ್ಡ್ ಅನ್ನು ಬಿಡುಗಡೆ ಮಾಡಲಿದೆ. ರಿಪೋರ್ಟ್ ಕಾರ್ಡ್ ಅನ್ನು ಜನರ ಮುಂದಿಡೋ ಮೂಲಕ ಮತ ಕೇಳಲು ಬಿಜೆಪಿ ಮುಂದಾಗಿದೆ. ಈ ರಿಪೋರ್ಟ್ ಕಾರ್ಡ್ನಲ್ಲೂ ಹಿಂದುತ್ವ, ಅಭಿವೃದ್ಧಿ ಮತ್ತು ವಿವಿಧ ಸಮುದಾಯಗಳ ಸಮೀಕರಣದ ಲೆಕ್ಕಾಚಾರ ಹೆಣೆಯಲಾಗಿದೆ. ಇದನ್ನೂ ಓದಿ: ಸಿದ್ದರಾಮಯ್ಯ ಗೆದ್ರೆ ಮೋದಿ ಸೋಲುತ್ತಾರೆ: ಶಾಸಕ ಪುಟ್ಟರಂಗಶೆಟ್ಟಿ
ಕೇಂದ್ರ ಸರ್ಕಾರದ ರಿಪೋರ್ಟ್ ಕಾರ್ಡ್ ಏನು?
ಜಮ್ಮು ಕಾಶ್ಮೀರದ ಆರ್ಟಿಕಲ್ 370 ರದ್ದು, ಶ್ರೀರಾಮ ಮಂದಿರಕ್ಕೆ ಶಿಲಾನ್ಯಾಸ, ಬೇಟಿ ಪಡಾವೋ ಬೇಟಿ ಬಚಾವೋ ಕಾರ್ಯಕ್ರಮ, ಉಜ್ವಲಾ ಯೋಜನೆ, ಗ್ರಾಮಜ್ಯೋತಿ ಯೋಜನೆ, ಆಪರೇಷನ್ ಗಂಗಾ, ಭಯೋತ್ಪಾದನಾ ನಿಗ್ರಹ ಕ್ರಮಗಳು, ಆಯುಷ್ಮಾನ್ ಭಾರತ್, ಸಾಗರ ಮಾಲಾ, ಭಾರತ ಮಾಲಾ ಯೋಜನೆಗಳು, ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸೇವೆ, ಲಸಿಕಾಕರಣ, ಪೌರತ್ವ ತಿದ್ದುಪಡಿ ವಿಧೇಯಕ.
ರಾಜ್ಯ ಸರ್ಕಾರದ ರಿಪೋರ್ಟ್ ಕಾರ್ಡ್ ಏನು?
ಎಸ್ಸಿ/ಎಸ್ಟಿ ಸಮುದಾಗಳಿಗೆ ಮೀಸಲಾತಿ ಹೆಚ್ಚಳ, ಪಂಚಮಸಾಲಿ/ಒಕ್ಕಲಿಗ ಸಮುದಾಯಗಳಿಗೆ ಹೊಸ ಪ್ರವರ್ಗಗಳ ಸೃಷ್ಟಿ, ಗೋಹತ್ಯೆ ತಡೆ ಕಾಯ್ದೆ ಜಾರಿ, ಬಲವಂತದ ಮತಾಂತರ ತಡೆ ಕಾಯ್ದೆ ಜಾರಿ, ಅಂಜನಾದ್ರಿ ಬೆಟ್ಟದ ಅಭಿವೃದ್ಧಿ, ನಮ್ಮ ಕ್ಲಿನಿಕ್, ಪಶು ಚಿಕಿತ್ಸಾ ಸಂಚಾರಿ ಅಂಬುಲೆನ್ಸ್, ನೇಕಾರ ಸಮ್ಮಾನ್ ಯೋಜನೆ, ಯಶಸ್ವಿನಿ ಮರು ಆರಂಭ, ಎಸ್ಸಿ/ಎಸ್ಟಿ ಸಮುದಾಯಗಳಿಗೆ ಉಚಿತ 75 ಯೂನಿಟ್ ವಿದ್ಯುತ್, ವಿವಿಧ ಅಮೃತ ಯೋಜನೆಗಳು, ವಿದ್ಯಾನಿಧಿ ಯೋಜನೆ, ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ, ಕ್ಷೀರ ಸಮೃದ್ಧಿ, ಮನೆ ಮನೆಗೆ ಗಂಗೆ ಯೋಜನೆಗಳು, ಗ್ರಾಮ ಒನ್ ಯೋಜನೆ, ವಿವಿಧ ನೀರಾವರಿ ಯೋಜನೆಗಳು, ಉತ್ತರ ಕರ್ನಾಟಕ ಅಭಿವೃದ್ಧಿ, ಕಾಶಿ ದರ್ಶನ ರೈಲು ಸೇವೆ, ವಿವಿಧ ಪಿಂಚಣಿ, ಮಾಸಾಶನಗಳ ಹೆಚ್ಚಳ. ಇದನ್ನೂ ಓದಿ: ಮಾಜಿ ಶಾಸಕ ವೈಎಸ್ವಿ ದತ್ತಾ, ಶಾಸಕ ಹೆಚ್.ನಾಗೇಶ್ ಕಾಂಗ್ರೆಸ್ ಸೇರ್ಪಡೆ
Live Tv
[brid partner=56869869 player=32851 video=960834 autoplay=true]