Tag: Central Government

  • ತಮಿಳುನಾಡಿಗೆ ಸಂಪೂರ್ಣ ಸ್ವಾಯತ್ತತೆ ನೀಡಿ – CM ನೇತೃತ್ವದಲ್ಲೇ ಕೇಂದ್ರಕ್ಕೆ ಸಂಸದ ಎ.ರಾಜಾ ಒತ್ತಾಯ

    ತಮಿಳುನಾಡಿಗೆ ಸಂಪೂರ್ಣ ಸ್ವಾಯತ್ತತೆ ನೀಡಿ – CM ನೇತೃತ್ವದಲ್ಲೇ ಕೇಂದ್ರಕ್ಕೆ ಸಂಸದ ಎ.ರಾಜಾ ಒತ್ತಾಯ

    ಚೆನ್ನೈ: ಪ್ರತ್ಯೇಕ ತಮಿಳುನಾಡು ರಾಜ್ಯಕ್ಕೆ ಸ್ವಾಯತ್ತತೆ ನೀಡುವಂತೆ ಡಿಎಂಕೆ ಸಂಸದ ಎ.ರಾಜಾ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

    DMK ಸಂಸದ ಎ.ರಾಜಾ ಅವರು ಇಲ್ಲಿನ ನಾಮಕ್ಕಲ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರ ಉಪಸ್ಥಿತಿಯಲ್ಲೇ ಈ ಬೇಡಿಕೆ ಇಟ್ಟಿದ್ದಾರೆ. ಇದನ್ನೂ ಓದಿ: ಶಿಂಧೆ ಸರ್ಕಾರ 6 ತಿಂಗಳಲ್ಲಿ ಪತನವಾಗುತ್ತೆ: ಶರದ್ ಪವಾರ್ ಭವಿಷ್ಯ

    ಸಂಸದ ಎ.ರಾಜಾ ಅವರು `ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯಗಳಿಗೆ ಸ್ವಾಯತ್ತತೆ’ ವಿಷಯ ಕುರಿತು ಮಾತನಾಡಿದ ಅವರು, ನಮಗೆ ಪ್ರತ್ಯೇಕ ರಾಜ್ಯ ಸ್ವಾಯತ್ತತೆ ಸಿಗುವವರೆಗೆ ಹೋರಾಟ ನಿಲ್ಲಿಸುವುದಿಲ್ಲ ಎಂದು ಎಚ್ಚರಿಸಿದ್ದಾರೆ. ಸದ್ಯ ಎ.ರಾಜಾ ಅವರ ಭಾಷಣದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಪರ ವಿರೋಧದ ಚರ್ಚೆ ಆರಂಭವಾಗಿದೆ. ಇದನ್ನೂ ಓದಿ: ಬಾಲಿವುಡ್ ನಿರ್ದೇಶಕರಲ್ಲಿ ಸ್ವಂತ ಯೋಚನೆ ಇಲ್ಲ: ನೀಲ್ ನಿತಿನ್ ಮುಖೇಶ್ 

    MK Stalin (1)

    ನಾವು ಪೆರಿಯಾರ್ ಅವರ ಮಾರ್ಗವನ್ನು ಅನುಸರಿಸುತ್ತಿದ್ದು, ರಾಷ್ಟ್ರೀಯ ಸಮಗ್ರತೆ ಹಾಗೂ ಪ್ರಜಾಪ್ರಭುತ್ವಕ್ಕಾಗಿ ಪ್ರತ್ಯೇಕ ತಮಿಳುನಾಡು ಕೂಗನ್ನು ಬದಿಗಿಟ್ಟಿದೆವು. ಆದರೆ ತಮಿಳುನಾಡಿನಲ್ಲಿ ಅಸ್ತಿತ್ವಕ್ಕೆ ಡಿಎಂಕೆ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಸರ್ಕಾರದ ನಡುವಿನ ತಿಕ್ಕಾಟವೇ ಪ್ರತ್ಯೇಕ ರಾಜ್ಯದ ಕೂಗಿಗೆ ಕಾರಣವಾಗಿದೆ. ಹಾಗಾಗಿ ನಮ್ಮ ಬೇಡಿಕೆಯನ್ನು ಪರಿಗಣಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹಸಚಿವ ಅಮಿತ್ ಶಾ ಅವರನ್ನು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಬೊಗಳಿದ್ದಕ್ಕೆ ನಾಯಿಗೆ ಕಬ್ಬಿಣದ ರಾಡ್‍ನಿಂದ ಹೊಡೆದ – ಬಿಡಿಸಿಕೊಳ್ಳೋಕೆ ಬಂದವರ ಮೇಲೂ ಹಲ್ಲೆ

    ಕೇಂದ್ರವು ಹೆಚ್ಚಿನ ಅಧಿಕಾರ ಅನುಭವಿಸುವುದನ್ನು ಮುಂದುವರಿಸಿದೆ. ತಮಿಳುನಾಡಿನ ಶೇ.6.5ರಷ್ಟು ಜಿಎಸ್‌ಟಿ ಪಾಲಿನಲ್ಲಿ ಕೇವಲ ಶೇ.2.2 ರಷ್ಟನ್ನು ಪಡೆಯುತ್ತಿದೆ. ಸಣ್ಣ-ಸಣ್ಣ ಸಮಸ್ಯೆಗಳಿಗೂ ರಾಜ್ಯಗಳು ಕೇಂದ್ರವನ್ನು ಅವಲಂಬಿಸಬೇಕಾದ ಪರಿಸ್ಥಿತಿ ಎದುರಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    2013 ರಲ್ಲೂ ಪ್ರತ್ಯೇಕತೆಯ ಕೂಗು ಕೇಳಿಬಂದಿತ್ತು. 2021 ಮೇ ತಿಂಗಳಿನಲ್ಲಿ ಎಂ.ಕೆ.ಸ್ಟಾಲಿನ್ ನೇತೃತ್ವದ ಡಿಎಂಕೆ ತಮಿಳು ನಾಡಿನಲ್ಲಿ ಅಧಿಕಾರವನ್ನು ಹಿಡಿಯುತ್ತಿದ್ದಂತೆ ಈ ಪ್ರತ್ಯೇಕತೆಯ ಕೂಗು ತೀವ್ರಗೊಂಡಿತ್ತು. ಸ್ಟಾಲಿನ್ ಕೇಂದ್ರ ಸರ್ಕಾರವನ್ನು ಒಕ್ಕೂಟ ಸರ್ಕಾರ ಎಂದು ಕರೆಯುವ ನಿರ್ಣಯ ಕೈಗೊಂಡಿದ್ದು, ಸ್ಟಾಲಿನ್ ತಂತ್ರಕ್ಕೆ ಬಿಜೆಪಿ ಪ್ರತಿ ತಂತ್ರವಾಗಿ ಪ್ರತ್ಯೇಕ ಕೊಂಗುನಾಡು ಬೇಡಿಕೆಯನ್ನು ಹುಟ್ಟುಹಾಕಿತ್ತು ಎಂದು ವರದಿಯಾಗಿತ್ತು.

    Live Tv
    [brid partner=56869869 player=32851 video=960834 autoplay=true]

  • ಮೋದಿ ಮೈಸೂರಿಗೆ ಬಂದಾಗಲೂ 40 ಪರ್ಸೆಂಟ್ ಕಮಿಷನ್ ಬಗ್ಗೆ ಮಾತಾಡಿಲ್ಲ: ಡಿ.ಕೆ.ಸುರೇಶ್

    ಮೋದಿ ಮೈಸೂರಿಗೆ ಬಂದಾಗಲೂ 40 ಪರ್ಸೆಂಟ್ ಕಮಿಷನ್ ಬಗ್ಗೆ ಮಾತಾಡಿಲ್ಲ: ಡಿ.ಕೆ.ಸುರೇಶ್

    ಬೆಂಗಳೂರು: ಬಿಜೆಪಿ ರಾಜ್ಯ ಸರ್ಕಾರದಲ್ಲಿ 40 ಪರ್ಸೆಂಟ್ ಕಮಿಷನ್ ವ್ಯಾಪಕವಾಗಿ ಬೆಳೆಯುತ್ತಿದೆ. ಮೋದಿ ರಾಜ್ಯಕ್ಕೆ ಬಂದಾಗಲೂ 40 ಪರ್ಸೆಂಟ್ ಕಮಿಷನ್ ಬಗ್ಗೆ ಮಾತನಾಡಿಲ್ಲ. ಅದನ್ನು ಬಿಟ್ಟು ಸರ್ಕಾರಕ್ಕೆ ಸರ್ಟಿಫಿಕೇಟ್ ಕೊಡುವ ಕೆಲಸ ಮಾಡಿದ್ದಾರೆ ಎಂದು ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಗಂಭೀರ ಆರೋಪ ಮಾಡಿದ್ದಾರೆ.

    ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನಡೆಯುತ್ತಿರುವ 40 ಪರ್ಸೆಂಟ್ ಕಮಿಷನ್ ಸರ್ಕಾರಕ್ಕೆ ರಸ್ತೆ ಕಳಪೆ ಕಾಮಗಾರಿಯೇ ತಾಜಾ ಉದಾಹರಣೆಯಾಗಿದೆ. ಆದರೂ ಮೋದಿ ಅವರು ಮೈಸೂರಿಗೆ ಬಂದಾಗ ಇದರ ಬಗ್ಗೆ ಮಾತನಾಡಿಲ್ಲ. ಸರ್ಕಾರಕ್ಕೆ ಸರ್ಟಿಫಿಕೇಟ್ ಕೊಡುವ ಕೆಲಸ ಮಾಡಿದ್ದಾರೆ ಎಂದು ದೂರಿದ್ದಾರೆ. ಇದನ್ನೂ ಓದಿ: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ತುರ್ತು ಆಕ್ಸಿಜನ್ ಜನರೇಟರ್ಸ್ ಸ್ಥಾಪನೆ

    ರಸ್ತೆ ದುರಸ್ತಿಗೆ ಸಂಬಂಧಿಸಿದಂತೆ ಕೆಂಪಣ್ಣ ಅವರ ಬಳಿ ದಾಖಲೆ ಕೇಳಲು ಗೃಹ ಇಲಾಖೆ ಬಿಟ್ಟಿದ್ದಾರೆ. ಗೃಹ ಇಲಾಖೆ ಪ್ರವೇಶ ಮಾಡಿದೆ ಅಂದ್ರೆ ಇದು ಬೆದರಿಕೆಯ ತಂತ್ರವೇ ಆಗಿದೆ. ಬಿಜೆಪಿ ಶಾಸಕರೇ ಪರ್ಸೆಂಟೇಜ್ ಬಗ್ಗೆ ಮಾತನಾಡಿದ್ದಾರೆ. ಎಲ್ಲಾ ಸಚಿವರ ಮೇಲೂ ಆರೋಪ ಇದೆ. ಪೊಲೀಸ್, ಕಂದಾಯ ಇಲಾಖೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಬಗ್ಗೆ ಒಳ ಹೊಕ್ಕಿ ನೋಡಿದ್ರೆ ಗೊತ್ತಾಗುತ್ತೆ. ಕೇಂದ್ರ ಸರ್ಕಾರ ಗೃಹ ಇಲಾಖೆ ಬದಲು ಇಡಿ, ಸಿಬಿಐ ಮೂಲಕ ತನಿಖೆ ಮಾಡಿಸಿದ್ದರೆ ಯಾರ್ಯಾರ ಬಣ್ಣ ಹೇಗೆ? ಅನ್ನೋದು ಬಯಲಾಗುತ್ತಿತ್ತು ಎಂದು ಕುಟುಕಿದ್ದಾರೆ.

    40% ಕಮಿಷನ್ ಆರೋಪದ ಬಗ್ಗೆ ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಾಧೀಶರು ಅಥವಾ ಹಾಲಿ ನ್ಯಾಯಧೀಶರ ಮೂಲಕ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಯುವತಿ ಸ್ನೇಹಿತೆಯಾದ ಮಾತ್ರಕ್ಕೆ ಲೈಂಗಿಕ ಸಂಬಂಧಕ್ಕೆ ಒಪ್ಪಿಗೆಯಿದೆ ಎಂದರ್ಥವಲ್ಲ – ಹೈಕೋರ್ಟ್

    ಇದೇ ವೇಳೆ ಬಿಬಿಎಂಪಿ ವಾರ್ಡ್ ವಿಂಗಡಣೆ ವಿಚಾರವಾಗಿ ಮಾತನಾಡಿದ ಅವರು, ಸರ್ಕಾರ ಅಮಿಬಾ ಮಾದರಿಯಲ್ಲಿ ಬಿಬಿಎಂಪಿ ವಾರ್ಡ್ ವಿಂಗಡಣೆ ಮಾಡಿದೆ. ತನಗೆ ಬೇಕಾದಂತೆ ವಾರ್ಡ್ ರಚನೆ ಮಾಡಿದೆ. ವಾರ್ಡ್ಗೆ ಚಾಣಕ್ಯ, ವೀರ ಮದಕರಿನಾಯಕರ ಹೆಸರಿಡುವ ಮೂಲಕ ಸ್ಥಳೀಯರ ಭಾವನೆ ಕೆರಳಿಸಿದ್ದಾರೆ. ಬಿಬಿಎಂಪಿ ಚುನಾವಣೆ ಮಾಡೋದಕ್ಕೂ ಸರ್ಕಾರಕ್ಕೆ ಆಸಕ್ತಿಯಿಲ್ಲ. ಆದ್ರೆ ನಮ್ಮ ಒತ್ತಾಯ ಚುನಾವಣೆ ಮಾಡಬೇಕು, ಸ್ಥಳೀಯ ನಾಯಕತ್ವ ಬೆಳೆಸಬೇಕು ಎಂದು ಆಗ್ರಹಿಸಿದ್ದಾರೆ.

    Live Tv

  • ಬಾಡಿಗೆ ತಾಯಂದಿರ ಹೆಸರಲ್ಲಿ 3 ವರ್ಷಕ್ಕೆ ವಿಮೆ ಖರೀದಿಸುವಂತೆ ಕೇಂದ್ರ ಸೂಚನೆ

    ಬಾಡಿಗೆ ತಾಯಂದಿರ ಹೆಸರಲ್ಲಿ 3 ವರ್ಷಕ್ಕೆ ವಿಮೆ ಖರೀದಿಸುವಂತೆ ಕೇಂದ್ರ ಸೂಚನೆ

    ನವದೆಹಲಿ: ಬಾಡಿಗೆ ತಾಯ್ತನದ ಮೂಲಕ ಮಕ್ಕಳನ್ನು ಹೊಂದಲು ಬಯಸುವ ದಂಪತಿ, ಮಗುವನ್ನು ಪಡೆದ ಬಾಡಿಗೆ ತಾಯಿಯ ಹೆಸರಿನಲ್ಲಿ 3 ವರ್ಷಗಳ ಅವಧಿಯ ಆರೋಗ್ಯ ವಿಮೆ ಖರೀದಿಸಬೇಕು ಎಂದು ಕೇಂದ್ರ ಸರ್ಕಾರ ಸೂಚಿಸಿದೆ.

    2021ರಲ್ಲಿ ಜಾರಿಗೆ ತರಲಾದ 1971ರ ಗರ್ಭಾವಸ್ಥೆಯ ವೈದ್ಯಕೀಯ ಮುಕ್ತಾಯ ಕಾಯ್ದೆಯ ಪ್ರಕಾರ ಬಾಡಿಗೆ ತಾಯ್ತನದ ಪ್ರಕ್ರಿಯೆಗೆ ಅನುಮತಿಸಬಹುದು. ಹಾಗಾಗಿ ಬಾಡಿಗೆ ತಾಯ್ತನ (ನಿಯಂತ್ರಣ) ಕಾಯ್ದೆಯ ನಿಯಮಗಳಿಗೆ ಸಂಬಂಧಿಸಿ ಸಚಿವಾಲಯ ಜೂನ್ 21ರಂದು ಹೊರಡಿಸಿರುವ ಅಧಿಸೂಚನೆಯಲ್ಲಿ ಈ ಅಂಶವನ್ನು ವಿವರಿಸಲಾಗಿದೆ. ಇದನ್ನೂ ಓದಿ: ಮೊದಲ ದಲಿತ, ಮುಸ್ಲಿಂ ವ್ಯಕ್ತಿಯನ್ನು ರಾಷ್ಟ್ರಪತಿ ಮಾಡಿದ್ದು ಬಿಜೆಪಿ- ಟ್ವೀಟ್ ಮಾಡಿ ಮುಜುಗರಕ್ಕೀಡಾದ ಕೋಟಾ

    ಗರ್ಭ ಧರಿಸಿದ ಅವಧಿ ಹಾಗೂ ಹೆರಿಗೆ ನಂತರ ಕಾಣಿಸಿಕೊಳ್ಳುವ ಆರೋಗ್ಯ ಸಮಸ್ಯೆಗಳ ಚಿಕಿತ್ಸೆಗೆ ತಗಲುವ ವೆಚ್ಚವನ್ನು ಈ ಪಾಲಿಸಿಯ ವಿಮಾ ಮೊತ್ತ ಸರಿದೂಗಿಸುವಂತಿರಬೇಕು ಎಂದು ಆರೋಗ್ಯ ಸಚಿವಾಲಯ ಪ್ರಕಟಣೆಯಲ್ಲಿ ಹೇಳಿದೆ. ಇದನ್ನೂ ಓದಿ: ರಾಜ್ಯದಲ್ಲಿ ಕೋವಿಡ್ ಪ್ರಕರಣ 858ಕ್ಕೆ ಏರಿಕೆ- ಓರ್ವ ಸಾವು

    ಬಾಡಿಗೆ ತಾಯಿಯಾಗಲು ಒಪ್ಪಿಕೊಂಡವರು ಗರಿಷ್ಠ 3 ಬಾರಿ ಬಾಡಿಗೆ ತಾಯ್ತನ ವಿಧಾನಕ್ಕೆ ಒಳಗಾಗಬಹುದು. ವೈದ್ಯಕೀಯ ಗರ್ಭಪಾತ ಕಾಯ್ದೆಯಡಿ, ಗರ್ಭಪಾತ ಮಾಡಿಸಿಕೊಳ್ಳಲು ಅವರಿಗೆ ಅನುಮತಿ ನೀಡಬೇಕು ಎಂದೂ ನಿಯಮದಲ್ಲಿ ಹೇಳಲಾಗಿದೆ.

    Live Tv

  • ಮುಂಗಾರು ಮಳೆ – ಜೂನ್ 25ರ ವರೆಗೆ ರೆಡ್ ಅಲರ್ಟ್ ಘೋಷಣೆ

    ಮುಂಗಾರು ಮಳೆ – ಜೂನ್ 25ರ ವರೆಗೆ ರೆಡ್ ಅಲರ್ಟ್ ಘೋಷಣೆ

    ಬೆಂಗಳೂರು: ರಾಜ್ಯದ ಕರಾವಳಿ ಭಾಗದಲ್ಲಿ ಮುಂಗಾರು ಚುರುಕಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ವರುಣದೇವ ಅಬ್ಬರಿಸುತ್ತಿದ್ದಾನೆ.

    ಕಾರವಾರದ ರೈಲ್ವೆ ನಿಲ್ದಾಣ ರಸ್ತೆ, ಹಬ್ಬುವಾಡ, ಸೋನಾರವಾಡ, ಸಾಯಿಬಾಬಾ ಮಂದಿರ ರಸ್ತೆಗಳು ಜಲಾವೃತವಾಗಿ ಜನ ಪರದಾಡಿದ್ರು. ಮನೆಗಳಿಗೆ ನೀರು ನುಗ್ಗಿದ್ದಕ್ಕೆ ಜನಜೀವನ ಅಸ್ತವ್ಯಸ್ತಗೊಂಡಿತ್ತು. ಉತ್ತರ ಕನ್ನಡ ಜಿಲ್ಲೆಯಾದ್ಯಂತ ನಾಳೆಯು ಸಹ ವರುಣನ ರೌದ್ರಾವತಾರ ಮುಂದುವರಿಯಲಿದ್ದು, ಜೂನ್ 25ರ ವರೆಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಇದರೊಂದಿಗೆ ಸ್ಥಳೀಯರು, ಪ್ರವಾಸಿಗರು ನದಿ ಹಾಗೂ ಸಮುದ್ರದಲ್ಲಿ ಇಳಿಯದಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.

    ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ, ಕೋಲಾರ ಸೇರಿದಂತೆ ದಕ್ಷಿಣ ಒಳನಾಡು ಜಿಲ್ಲೆಗಳಲ್ಲೂ ಮುಂದಿನ 48 ಗಂಟೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ. ಬೆಂಗಳೂರಿನಲ್ಲೂ ಗುಡುಗು ಸಹಿತ ಜೋರು ಮಳೆಯಾಗುವ ಸಾಧ್ಯತೆಯಿದೆ. ಇದನ್ನೂ ಓದಿ: ಇಂಥ ವ್ಯಕ್ತಿ ಅಧ್ಯಕ್ಷತೆಯಲ್ಲಿ ಪಠ್ಯಪುಸ್ತಕ ಪರಿಷ್ಕರಣೆ ಮಾಡಲು ಸರ್ಕಾರ ನಿರ್ಧರಿಸಿದ್ದೇ ತಪ್ಪು: ದೇವೇಗೌಡರ ಪತ್ರ

    ಸಾಂದರ್ಭಿಕ ಚಿತ್ರ

    ಇನ್ನು ಚಿಕ್ಕಮಗಳೂರಿನ ಕಳಸಾ ತಾಲೂಕಿನ ನೆಲ್ಲಿಬೀಡು ಗ್ರಾಮದಲ್ಲಿ ಭಾರೀ ಮಳೆಯಿಂದಾಗಿ ವಾರದ ಹಿಂದಷ್ಟೇ 30 ಲಕ್ಷ ವೆಚ್ಚದಲ್ಲಿ ನಿರ್ಮಿಸಿ ಉದ್ಘಾಟನೆಗೊಂಡಿದ್ದ ಸೇತುವೆ ಕುಸಿದುಬಿದ್ದಿದೆ. ಪಿಕಪ್ ವಾಹನ ಹೋಗುತ್ತಿದ್ದಾಗ ಕಾಂಕ್ರಿಟ್ ಗೋಡೆ ಕಳಚಿಬಿದ್ದಿದೆ. ಅದೃಷ್ಟವಶಾತ್ ವಾಹನದಲ್ಲಿದ್ದ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದನ್ನೂ ಓದಿ: ಮಹಿಳಾ ಪೊಲೀಸರಿಗೆ ಕ್ಯಾಕರಿಸಿ ಉಗಿದು ಕೈ ನಾಯಕಿ ನೆಟ್ಟಾ ಡಿಸೋಜಾ ಆಕ್ರೋಶ 

    ಅಂದ ಹಾಗೇ ಈ ಸೇತುವೆಯನ್ನು 30 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿತ್ತು. ಇತ್ತ ಈಗಿರುವ NDRF ನಿಯಮಗಳನ್ನು ಕೂಡಲೇ ತಿದ್ದುಪಡಿ ಮಾಡಿ, ಪ್ರಕೃತಿ ವಿಕೋಪದಿಂದ ಆಗಿರುವ ಹಾನಿಗೆ ಸಮರ್ಪಕ ಪರಿಹಾರ ನೀಡುವಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

    Live Tv

  • ನಿತ್ಯ 12 ಗಂಟೆ ಕೆಲಸ, ವಾರದಲ್ಲಿ 3 ದಿನ ರಜೆ – ಜುಲೈ 1ರಿಂದ ಹೊಸ ಕಾರ್ಮಿಕ ಸಂಹಿತೆ?

    ನಿತ್ಯ 12 ಗಂಟೆ ಕೆಲಸ, ವಾರದಲ್ಲಿ 3 ದಿನ ರಜೆ – ಜುಲೈ 1ರಿಂದ ಹೊಸ ಕಾರ್ಮಿಕ ಸಂಹಿತೆ?

    ನವದೆಹಲಿ: ವೇತನ, ಸಾಮಾಜಿಕ ಭದ್ರತೆ, ಕೈಗಾರಿಕಾ ಸಂಬಂಧಗಳು ಮತ್ತು ಔದ್ಯೋಗಿಕ ಸುರಕ್ಷತೆ ದೃಷ್ಟಿಯಿಂದ ಕೇಂದ್ರ ಸರ್ಕಾರವು ಹೊಸ ಕಾರ್ಮಿಕ ಸಂಹಿತೆಗಳನ್ನು ಜಾರಿಗೊಳಿಸುವ ನಿರೀಕ್ಷೆ ಇದೆ. ಮುಂದಿನ ತಿಂಗಳ ಜುಲೈ 1ರಿಂದಲೇ ಈ ಸಂಹಿತೆ ಜಾರಿಗೆ ಬರುವ ಸಾಧ್ಯತೆ ಇದೆ ಎಂದು ಸರ್ಕಾರಿ ಮೂಲಗಳು ತಿಳಿಸಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.

    ಹೊಸ ವೇತನ ಸಂಹಿತೆಯು ಉದ್ಯೋಗಿಗಳ ಕೆಲಸದ ಸಮಯ, ವೇತನ ಪುನರ್‌ರಚನೆ, ಪಿಎಫ್, ಗ್ರ್ಯಾಚುಟಿ ಕೊಡುಗೆಯಲ್ಲಿ ಬದಲಾವಣೆ ತರಲಿದೆ ಎಂದು ವರದಿಗಳು ಹೇಳುತ್ತಿವೆ. ಆದರೆ ಈ ಬಗ್ಗೆ ಕೇಂದ್ರ ಸರ್ಕಾರ ಹಾಗೂ ಕಾರ್ಮಿಕ ಸಚಿವಾಲಯ ಯಾವುದೇ ಅಧಿಕೃತ ಪ್ರಕಟಣೆ ನೀಡಿಲ್ಲ ಎಂದು ಮಾಧ್ಯಮಗಳು ವರದಿ ಮಾಡಿವೆ. ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರ 90ರ ದಶಕದಲ್ಲಿಯೇ ಅಗ್ನಿಪಥ್ ಜಾರಿಗೆ ತರಲು ಚಿಂತಿಸಿತ್ತು: ಉಮೇಶ್ ಕತ್ತಿ ಹೊಸ ಬಾಂಬ್

    ಕೈಗೆ ಕಡಿಮೆ ಸಂಬಂಳ, ಪಿಎಫ್ ಹೆಚ್ಚಳ: ಹೊಸ ಸಂಹಿತೆಗಳು ಜಾರಿಗೆ ಬಂದರೆ, ನೌಕರರ ಕೈಗೆ ಸಿಗುವ ಸಂಬಳದ ಮೊತ್ತ ಕಡಿಮೆಯಾಗಲಿದ್ದು, ಭವಿಷ್ಯ ನಿಧಿ (PF) ಖಾತೆಗೆ ಜಮೆ ಆಗುವ ಮೊತ್ತ ಹೆಚ್ಚಳವಾಗಲಿದೆ. ಎಲ್ಲ ಬಗೆಯ ಭತ್ಯೆಗಳು ನೌಕರರ ಒಟ್ಟು ವೇತನದ ಶೇ.50ರಷ್ಟನ್ನು ಮೀರುವಂತಿಲ್ಲ. ಅಂದರೆ ಒಟ್ಟು ವೇತನದಲ್ಲಿ ಶೇ.50ರಷ್ಟು ಭಾಗವು ಮೂಲ ವೇತನ ಆಗಿರಬೇಕು. ಪಿಎಫ್ ಖಾತೆಗೆ ವರ್ಗಾವಣೆ ಆಗುವ ಮೊತ್ತವನ್ನು ನೌಕರರ ಮೂಲವೇತನದ ಆಧಾರದಲ್ಲಿ ಲೆಕ್ಕ ಹಾಕಲಾಗುತ್ತದೆ. ಇದನ್ನೂ ಓದಿ: ಕ್ರೆಡಿಟ್‌, ಡೇಬಿಟ್‌ ಕಾರ್ಡ್‌ ಬಳಕೆದಾರರಿಗೆ ಜುಲೈ 1 ರಿಂದ ಸಿಗಲಿದೆ ಗುಡ್‌ನ್ಯೂಸ್‌

    12 ಗಂಟೆ ಕೆಲಸ: ಹೊಸ ಕರಡು ನಿಯಮ ಪ್ರಕಾರ, ಕೆಲಸದ ಸಮಯವನ್ನು ಕಡಿತಗೊಳಿಸಲಾಗುವುದು. ವಾರದಲ್ಲಿ ನಾಲ್ಕು ದಿನ ಕೆಲಸ ಇರಲಿದ್ದು, ನಾಲ್ಕು ದಿನವೂ 12 ಗಂಟೆಗಳು ಮಾತ್ರ ಕೆಲಸ ಇರಲಿದೆ. ಆದರೆ ಕಾರ್ಮಿಕ ಸಚಿವಾಲಯವು ವಾರದಲ್ಲಿ 48 ಗಂಟೆಗಳ ಕೆಲಸ ಅಗತ್ಯವಾಗಿ ಮಾಡಬೇಕಿದೆ ಎಂದು ಸ್ಪಷ್ಟಪಡಿಸಿದೆ.

    ರಜೆಯ ಅವಧಿಯಲ್ಲಿ ಬದಲಾವಣೆ: ಸರ್ಕಾರಿ ಇಲಾಖೆಗಳು ಈಗ 1 ವರ್ಷದಲ್ಲಿ 30 ರಜೆಗಳನ್ನು ಅನುಮತಿಸುತ್ತವೆ. ರಕ್ಷಣಾ ನೌಕರರಿಗೆ ವರ್ಷದಲ್ಲಿ 60 ರಜೆಗಳನ್ನು ಪಡೆಯುತ್ತಾರೆ. ಆದರೆ ಹೊಸ ನೀತಿಯ ಪ್ರಕಾರ ರಜೆ ಅವಧಿಯೂ ಹೆಚ್ಚಾಗಲಿದೆ. 20 ವರ್ಷಗಳ ಸೇವೆ ಸಲ್ಲಿಸಿದ ನೌಕರರು ವೇತನ ಸಹಿತ ರಜೆಯನ್ನೂ ಪಡೆದುಕೊಳ್ಳಬಹುದು ಎಂದು ಹೇಳಲಾಗಿದೆ.

    ಇಲ್ಲಿಯವರೆಗೆ 23 ರಾಜ್ಯಗಳು ಈ ಅಧಿನಿಯಮವನ್ನು ಪ್ರಕಟಿಸಿವೆ.

    Live Tv

  • ಅಗ್ನಿಪಥ್ ಆದೇಶ ನೀಡೋ ಮುನ್ನ ನಮ್ಮ ಮನವಿ ಆಲಿಸಿ- ಸುಪ್ರೀಂಗೆ ಕೇಂದ್ರದಿಂದ ಕೇವಿಯಟ್

    ಅಗ್ನಿಪಥ್ ಆದೇಶ ನೀಡೋ ಮುನ್ನ ನಮ್ಮ ಮನವಿ ಆಲಿಸಿ- ಸುಪ್ರೀಂಗೆ ಕೇಂದ್ರದಿಂದ ಕೇವಿಯಟ್

    ನವದೆಹಲಿ: ಅಗ್ನಿಪಥ್ ಸೇವಾ ನೇಮಕಾತಿ ಯೋಜನೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ಕುರಿತು ಯಾವುದೇ ನಿರ್ಧಾರ ಕೈಗೊಳ್ಳುವ ಮುನ್ನ ನ್ಯಾಯಾಲಯವು ಸರ್ಕಾರದ ಪರವಾದ ವಾದವನ್ನು ಆಲಿಸಬೇಕು ಎಂದು ಕೋರಿ ಕೇಂದ್ರವು ಸುಪ್ರೀಂ ಕೋರ್ಟ್‍ಗೆ ಕೇವಿಯಟ್ ಸಲ್ಲಿಸಿದೆ.

    ಕೇಂದ್ರದ ನೂತನ ಯೋಜನೆ ಆಗಿರುವ ಅಗ್ನಿಪಥ್ ವಿರೋಧಿಸಿ ದೇಶದ ಹಲವಾರು ಭಾಗದಲ್ಲಿ ಪ್ರತಿಭಟನೆಯ ಕಿಚ್ಚು ಹತ್ತಿದೆ. ಅನೇಕ ಸಾರ್ವಜನಿಕ ಆಸ್ತಿ ಪಾಸ್ತಿಗಳು ಇದರಿಂದ ನಾಶವಾಗಿದೆ. ಇದೀಗ ಇದನ್ನು ವಿರೋಧಿ ಅನೇಕರು ಸುಪ್ರೀಂ ಕೋರ್ಟ್‍ನ ಮಧ್ಯ ಪ್ರವೇಶವನ್ನು ಬಯಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅಗ್ನಿಪಥ್ ವಿರುದ್ಧ ಸುಪ್ರೀಂ ಕೋರ್ಟ್‍ನಲ್ಲಿ 3 ಅರ್ಜಿಗಳನ್ನು ಸಲ್ಲಿಸಲಾಗಿದೆ.

    ಇದಕ್ಕೆ ಸಂಬಂಧಿಸಿ ನಿನ್ನೆಯೂ ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸಬೇಕೆಂದು ವಕೀಲ ಹರ್ಷ ಅಜಯ್ ಸಿಂಗ್ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಈ ಸಂಬಂಧ ಅರ್ಜಿಯಲ್ಲಿ ಈ ಯೋಜನೆಯಿಂದಾಗಿ ದೇಶದ ಹಲವಾರು ಭಾಗಗಳಲ್ಲಿ ಹಿಂಸಾತ್ಮಕ ಪ್ರತಿಭಟನೆಯೂ ನಡೆದಿದೆ. ಈ ಹಿನ್ನೆಲೆಯಲ್ಲಿ ಕೋರ್ಟ್ ಅಗ್ನಿಪಥ್ ನೇಮಕಾತಿ ಯೋಜನೆಯನ್ನು ಮರುಪರಿಶೀಲಿಸಲು ಕೇಂದ್ರಕ್ಕೆ ನಿರ್ದೇಶನಗಳನ್ನು ನೀಡಬೇಕು ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಎಲ್ಲ ಮದರಸಾಗಳಲ್ಲಿ ಯೋಗ ದಿನ ಆಚರಿಸಬೇಕು: ಯುಪಿ ಸರ್ಕಾರ ಆದೇಶ

    ಇದಕ್ಕೂ ಮುನ್ನ ಈ ಯೋಜನೆಯ ವಿರುದ್ಧ ವಕೀಲರಾದ ಎಂಎಲ್ ಶರ್ಮಾ ಮತ್ತು ವಿಶಾಲ್ ತಿವಾರಿ ಅವರು ಸುಪ್ರೀಂ ಕೋರ್ಟ್‍ನಲ್ಲಿ ಎರಡು ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದರು. ಇದನ್ನೂ ಓದಿ: ರಾಜ್ಯಸಭಾ ಚುನಾವಣೆಯ ಬಳಿಕ MVA ಸರ್ಕಾರಕ್ಕೆ ಮತ್ತೆ ಶಾಕ್ – ಬಿಜೆಪಿಯ ಐವರು ಆಯ್ಕೆ

    ಎಂಎಲ್ ಶರ್ಮಾ ಸಲ್ಲಿಸಿದ ಅರ್ಜಿಯಲ್ಲಿ ಅಗ್ನಿಪಥ್ ಯೋಜನೆಯು ಸಂವಿಧಾನಾತ್ಮಕ ನಿಬಂಧನಗಳಿಗೆ ವಿರುದ್ಧವಾಗಿದೆ ಹಾಗೂ ಸರ್ಕಾರವು ಸಂಸತ್ತಿನ ಅನುಮೋದನೆಯಿಲ್ಲದೆ ಶತಮಾನಗಳಷ್ಟು ಹಳೆಯದಾದ ಸಶಸ್ತ್ರ ಪಡೆಗಳ ಆಯ್ಕೆ ಪ್ರಕ್ರಿಯೆಯನ್ನು ರದ್ದುಗೊಳಿಸಿದೆ ಎಂದು ಆರೋಪಿಸಿದ್ದಾರೆ.

    ಜೂನ್ 14ರಂದು ಕೇಂದ್ರವು ಅಗ್ನಿಪಥ್ ಯೋಜನೆಯನ್ನು ಜಾರಿಗೆ ತರುವುದಾಗಿ ಹೇಳಿತ್ತು. ಇದಾದ ಬಳಿಕ ಈ ಯೋಜನೆಯನ್ನು ವಿರೋಧಿಸಿ ದೇಶದ ಹಲವಾರು ರಾಜ್ಯಗಳಲ್ಲಿ ಪ್ರತಿಭಟನೆಗಳು ತಾರಕಕ್ಕೆ ಏರಿದೆ. 17.5 ರಿಂದ 21 ವರ್ಷದೊಳಗಿನ ಸೈನಿಕರನ್ನು 4 ವರ್ಷಗಳ ಅವಧಿಗೆ ಶಸ್ತ್ರಾಸ್ತ್ರ ಪಡೆಗಳಲ್ಲಿ ನೇಮಕ ಮಾಡಿಕೊಳ್ಳುವ ಕೇಂದ್ರದ ಯೋಜನೆಗೆ ಕಳೆದ 4 ದಿನಗಳಿಂದ ಬಿಹಾರ, ಉತ್ತರ ಪ್ರದೇಶ, ಮಧ್ಯ ಪ್ರದೇಶ, ಹರಿಯಾಣ, ತೆಲಂಗಾಣ ರಾಜ್ಯಗಳಲ್ಲಿ ಪ್ರತಿಭಟನೆ ಭುಗಿಲೆದ್ದಿದೆ. ಪ್ರತಿಭಟನೆ ಪರಿಣಾಮ ಭಾನುವಾರ 483 ರೈಲುಗಳು ರದ್ದಾಗಿತ್ತು.

    Live Tv

  • ನಿಮ್ಮ ಸೇವೆ ಮಾಡಲು ನನಗೆ ಆಶೀರ್ವಾದ ಮಾಡಿ: ಮೈಸೂರಿನಲ್ಲಿ ಮೋದಿ

    ನಿಮ್ಮ ಸೇವೆ ಮಾಡಲು ನನಗೆ ಆಶೀರ್ವಾದ ಮಾಡಿ: ಮೈಸೂರಿನಲ್ಲಿ ಮೋದಿ

    – ಮೋದಿ ಭಾಷಣದಲ್ಲಿ ಕನ್ನಡ ಪ್ರೇಮ

    ಮೈಸೂರು: ಕರ್ನಾಟಕದಲ್ಲಿರುವ ಬಡವರಿಗೆ ಸೂರು ಕಲ್ಪಿಸಿದ್ದೇವೆ, ಕುಡಿಯಲು ಶುದ್ಧ ನೀರು ಕೊಟ್ಟಿದ್ದೇವೆ. ನಿಮ್ಮ ಸೇವೆ ಮಾಡಲು ನನಗೆ ಸದಾ ಆಶೀರ್ವಾದ ಮಾಡಿ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

    ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಕೇಂದ್ರ ಸರ್ಕಾರಿ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು. ಬಳಿಕ ನಡೆದ ಸಾರ್ವಜನಿಕ ವೇದಿಕೆ ಕಾರ್ಯಕ್ರಮದಲ್ಲಿ ಸುಮಾರು 15 ನಿಮಿಷಕ್ಕೂ ಹೆಚ್ಚು ಕಾಲ ಭಾಷಣ ಮಾಡಿದ್ದಾರೆ.

    ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಕನ್ನಡದಲ್ಲೇ ಮಾತು ಪ್ರಾರಂಭಿಸಿದ ಮೋದಿ, ಮೈಸೂರು ಹಾಗೂ ಕರ್ನಾಟಕದ ಜನರಿಗೆ ನನ್ನ ಪ್ರೀತಿಯ ನಮಸ್ಕಾರಗಳು, ಫಲಾನುಭವಿಗಳ ಜೊತೆ ಸಂವಾದಕ್ಕಾಗಿ ನಾನು ಇಲ್ಲಿಗೆ ಬಂದಿದ್ದೇನೆ ಎಂದಿದ್ದಾರೆ. ಇದನ್ನೂ ಓದಿ: ಬೆಂಗಳೂರಿನ ಜನರು ಕೈ ಜೋಡಿಸಿದ್ರೆ ಏನೂ ಬೇಕಾದ್ರೂ ಮಾಡಬಹುದು: ಮೋದಿ ಮೆಚ್ಚುಗೆ

    ಮೈಸೂರು ಐತಿಹಾಸಿಕ, ಸಾಂಸ್ಕೃತಿಕ, ಪರಂಪಾರಿಕ ಊರು. ಆರ್ಥಿಕತೆ, ಸಂಸ್ಕತಿ ವಿಚಾರದಲ್ಲಿ ಕರ್ನಾಟಕ ದೇಶದಲ್ಲಿ ಬಹಳ ಮುಖ್ಯವಾದ ರಾಜ್ಯ. ಪ್ರವಾಸಿಗರ ಆಕರ್ಷಣೀಯ ಕ್ಷೇತ್ರ. ನಾಲ್ವಡಿ ಕೃಷ್ಣರಾಜ ಒಡೆಯರ್, ಸರ್ ಎಂ.ವಿಶ್ವೇಶ್ವರಯ್ಯ ಈ ಮಣ್ಣಿನ ಶ್ರೇಷ್ಠ ಗೌರವಾನ್ವಿತ ವ್ಯಕ್ತಿಗಳು ಎಂದು ಮೈಸೂರು ಪರಂಪರೆಯನ್ನು ನೆನೆದರು.

    ಕಳೆದ 75 ವರ್ಷದಲ್ಲಿ ಅನೇಕ ಸರ್ಕಾರಗಳು ದೇಶ, ರಾಜ್ಯದಲ್ಲಿ ಬಂದು ಹೋದವು. ಎಲ್ಲರೂ ಬಡವರು, ದಲಿತರು, ಮಹಿಳೆಯರ ಕಲ್ಯಾಣದ ಬಗ್ಗೆ ಮಾತನಾಡಿದ್ದರು. ಆದರೆ ಯಾರ ಕಲ್ಯಾಣವೂ ಆಗಲಿಲ್ಲ. ನಮ್ಮ ಸರ್ಕಾರ ಜನರ ಕಲ್ಯಾಣಕ್ಕಾಗಿ ಬದ್ಧವಾಗಿ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಯಡಿಯೂರಪ್ಪ ಜೊತೆ ಮಾತ್ರ ಹೆಚ್ಚು ಮಾತನಾಡಿದ ಮೋದಿ

    ಆಯುಷ್ಮಾನ್ ಭಾರತದ ಲಾಭ ಇಡೀ ದೇಶಕ್ಕೆ ತಲುಪಿದೆ. ಪಡಿತರ ವಿತರಣೆ, ಆರೋಗ್ಯ ಸಮೃದ್ಧಿ ನಿಟ್ಟಿನಲ್ಲಿ ಬಹುದೊಡ್ಡ ಸಾಧನೆ ಮಾಡಿದ್ದೇವೆ. ಬಡವರಲ್ಲಿ ಆತ್ಮವಿಶ್ವಾಸ ತುಂಬಿದ್ದೇವೆ. ರೈತರ ಕಲ್ಯಾಣಕ್ಕಾಗಿ ಮಹತ್ತರ ಪೂರ್ಣ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. 8 ವರ್ಷದ ಆಡಳಿತದಲ್ಲಿ ಸಾಮಾಜಿಕ ನ್ಯಾಯಕ್ಕೆ ಒತ್ತು ನೀಡಿದ್ದೇವೆ. ಯಾವುದೇ ಭೇದ ಭಾವ ಇಲ್ಲದೆ ಜನರ ಕಲ್ಯಾಣಕ್ಕಾಗಿ ಕೆಲಸ ಮಾಡುತ್ತಿದ್ದೇವೆ.

    ಹಿಂದಿನ ಸರ್ಕಾರಗಳು 10 ವರ್ಷಗಳಲ್ಲಿ ಕರ್ನಾಟಕದ ರೈಲ್ವೆಯ 60 ಕಿ.ಮೀ ವಿದ್ಯುದೀಕರಣ ಮಾಡಿಸಿದ್ದವು. ಆದರೆ ನಾವು ಬಂದ 8 ವರ್ಷದಲ್ಲಿ 600 ಕಿ.ಮೀ ರೈಲ್ವೆ ವಿದ್ಯುದೀಕರಣವಾಗಿದೆ.

    Live Tv

  • ಬೆಂಗಳೂರಿನ ಜನರು ಕೈ ಜೋಡಿಸಿದ್ರೆ ಏನೂ ಬೇಕಾದ್ರೂ ಮಾಡಬಹುದು: ಮೋದಿ ಮೆಚ್ಚುಗೆ

    ಬೆಂಗಳೂರಿನ ಜನರು ಕೈ ಜೋಡಿಸಿದ್ರೆ ಏನೂ ಬೇಕಾದ್ರೂ ಮಾಡಬಹುದು: ಮೋದಿ ಮೆಚ್ಚುಗೆ

    ಬೆಂಗಳೂರು: ಬೆಂಗಳೂರಿನ ಜನರು ಕೈ ಜೋಡಿಸಿದ್ರೆ ಏನೂ ಬೇಕಾದ್ರೂ ಮಾಡಬಹುದು ಎಂದು ಪ್ರಧಾನಿ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    ಬೆಂಗಳೂರಿನ ಕೊಮ್ಮಘಟ್ಟದಲ್ಲಿ ವಿವಿಧ ಯೋಜನೆಗಳ ಲೋಕಾರ್ಪಣೆ ಮತ್ತು ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬೆಂಗಳೂರು ವಿಕಾಸಗೊಂಡರೆ ಇಡೀ ಭಾರತವೇ ವಿಕಾಸಗೊಂಡಂತೆ. ಕೊರೊನಾ ಸಮಯದಲ್ಲಿ ಬೆಂಗಳೂರಿನ ಕೈ ಜೋಡಿಸಿ ನಿಯಂತ್ರಣ ಮಾಡಿದ್ದರು. ಬೆಂಗಳೂರು ಶ್ರೇಷ್ಠ ಭಾರತದ ಪ್ರತೀಕ ಎಂದು ಪ್ರಧಾನಿ ನರೇಂದ್ರ ಮೋದಿ ಹೊಗಳಿದ್ದಾರೆ. ಇದನ್ನೂ ಓದಿ: ಯಡಿಯೂರಪ್ಪ ಜೊತೆ ಮಾತ್ರ ಹೆಚ್ಚು ಮಾತನಾಡಿದ ಮೋದಿ

    ಎರಡು ದಿನ ರಾಜ್ಯ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಸುಮಾರು 15 ನಿಮಿಷಗಳ ಕಾಲ ಮಾತನಾಡಿದರು. ಕನ್ನಡದಲ್ಲೇ ಮಾತು ಪ್ರಾರಂಭಿಸಿದ ಮೋದಿ, ಕನ್ನಡಿಗರಿಗೆ ಇದು ಮಹತ್ವದ ದಿನ. ಇಂದು ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ಹಲವು ಯೋಜನೆಗಳಿಗೆ ಚಾಲನೆ ನೀಡಲಾಗಿದೆ. ನನಗಿದು ಬಹಳ ಸಂತೋಷವಾಗಿದೆ ಎಂದು ಹೇಳಿದರು

    ಟ್ರಾಫಿಕ್ ನಿಯಂತ್ರಣಕ್ಕೆ ಪಣ: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಿಸಲು ಕ್ರಮ ಕೈಗೊಳ್ಳಲಾಗಿದ್ದು, ಫ್ಲೈಓವರ್, ಮೆಟ್ರೋ ಅಂಡರ್ ಪಾಸ್ ವ್ಯವಸ್ಥೆಗಳನ್ನು ಅಭಿವೃದ್ಧಿಪಡಿಸಲಾಗುತ್ತದೆ. ಬೆಂಗಳೂರು ಅಭಿವೃದ್ಧಿ ಲಕ್ಷಾಂತರ ಜನರ ಕಸಾಗಿದ್ದು, ಇದರ ಶಕ್ತಿಯನ್ನು ಮತ್ತಷ್ಟು ವೃದ್ಧಿಸಲಾಗುತ್ತದೆ. ಡಬಲ್ ಇಂಜಿನ್ ಸರ್ಕಾರ ನುಡಿದಂತೆ ನಡೆಯುತ್ತಿದ್ದು ಬೆಂಗಳೂರು ಇನ್ನಷ್ಟು ಅಭಿವೃದ್ಧಿಯಾಗಲಿದೆ ಎಂದು ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಇಂದಿನಿಂದ 2 ದಿನ ಪ್ರಧಾನಿ ರಾಜ್ಯ ಪ್ರವಾಸ – 20 ಗಂಟೆಯಲ್ಲಿ 10 ಕಾರ್ಯಕ್ರಮಗಳಲ್ಲಿ ಮೋದಿ ಭಾಗಿ

    40 ವರ್ಷಗಳ ಯೋಜನೆಗೆ ಮುಕ್ತಿ: ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆಗಳಿಗೆ ಮುಕ್ತಿ ನೀಡುವ ಸಬ್‌ಅರ್ಬನ್ ರೈಲ್ವೆ ಯೋಜನೆ 40 ವರ್ಷಗಳಿಂದ ನೆನೆಗುದ್ದಿಗೆ ಬಿದ್ದಿತ್ತು. ಹಿಂದಿನ ಸರ್ಕಾರಗಳು ಕಡತವನ್ನು ಅಲ್ಲಿಂದಿಲ್ಲಿಗೆ ವರ್ಗಾಯಿಸುವುದರಲ್ಲೇ ಕಾಲ ಕಳೆಯುತ್ತಿದ್ದವು. ಇದೀಗ ಆ ಯೋಜನೆಗೆ ಮುಕ್ತಿಕೊಡಲಾಗುತ್ತಿದೆ. ಟ್ರಾಫಿಕ್ ಮುಕ್ತ ಮಾಡಲು ರೈಲ್ವೆ ಯೋಜನೆಗಳನ್ನು ಆಧುನೀಕರಣಗೊಳಿಸಲಾಗುತ್ತಿದೆ. ಯಶವಂತಪುರ ಕಟೋನ್ಮೆಂಟ್ ರೈಲ್ವೆ ನಿಲ್ದಾಣಗಳನ್ನು ಮೇಲ್ದರ್ಜೆಗೆ ಏರಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

    ದೇಶ ಸುರಕ್ಷಿತವಾಗಿದೆ, ನಾಗರಿಕರ ಸ್ನೇಹಿಯಾಗಿದೆ, ಸ್ವಚ್ಛವಾಗಿಯೂ ಇದೆ. ನಾನು ನನಗೆ ಕೊಟ್ಟ ಜವಾಬ್ದಾರಿ ನಿಭಾಯಿಸುತ್ತಿದ್ದೇನೆ. ಬೆಂಗಳೂರು ಅಭಿವೃದ್ಧಿಗಾಗಿಯೂ ನಿರಂತರವಾಗಿ ಶ್ರಮಿಸಿದ್ದೇನೆ.

    Live Tv

  • ಹಿಂದಿ ಭಾಷೆ ಬರುವ ಶಾಲಾ, ಕಾಲೇಜು ಮಕ್ಕಳಿಗಷ್ಟೇ ಪ್ರವಾಸ ಭಾಗ್ಯ- ಶಿಕ್ಷಣ ಇಲಾಖೆ ಆದೇಶ

    ಹಿಂದಿ ಭಾಷೆ ಬರುವ ಶಾಲಾ, ಕಾಲೇಜು ಮಕ್ಕಳಿಗಷ್ಟೇ ಪ್ರವಾಸ ಭಾಗ್ಯ- ಶಿಕ್ಷಣ ಇಲಾಖೆ ಆದೇಶ

    ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಪ್ರಯುಕ್ತ `ಒಂದು ಭಾರತ ಶ್ರೇಷ್ಟ ಭಾರತ’ ಕಾರ್ಯಕ್ರಮದ ಅಡಿಯಲ್ಲಿ ಪ್ರೌಢ ಶಾಲೆ ಮತ್ತು ಪಿಯು ವಿದ್ಯಾರ್ಥಿಗಳಿಗೆ ಹೊರ ರಾಜ್ಯಕ್ಕೆ ಪ್ರವಾಸಕ್ಕೆ ಕರೆದೊಯ್ಯುವ ಯೋಜನೆ ರೂಪಿಸಲಾಗಿದೆ.

    ಆದ್ರೆ ಶಿಕ್ಷಣ ಇಲಾಖೆ ಹಿಂದಿ ಬರುವ ವಿದ್ಯಾರ್ಥಿಗಳಿಗೆ ಮಾತ್ರ ಆದ್ಯತೆ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿರುವುದು ಮತ್ತೆ ವಿವಾದಕ್ಕೆ ಕಾರಣವಾಗಿದೆ, ಕನ್ನಡ ಪರ ಸಂಘಟನೆಗಳೂ ಇದಕ್ಕೆ ಆಕ್ರೋಶ ವ್ಯಕ್ತಪಡಿಸಿವೆ. ಕೇಂದ್ರ ಸರ್ಕಾರ ಈ ಸೂಚನೆ ವಿಧಿಸದೇ ಇದ್ರೂ ಶಿಕ್ಷಣ ಇಲಾಖೆ ಈ ನಿರ್ಧಾರಕ್ಕೆ ಮುಂದಾಗಿರುವುದು ಇದೀಗ ಎಲ್ಲೆಡೆ ಆಕ್ರೋಶಕ್ಕೆ ಕಾರಣವಾಗಿದೆ. ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆಗೆ ಸ್ಪರ್ಧಿಸಲ್ಲ ಎಂದ ಶರದ್ ಪವಾರ್ 

     

    ಈ ಸಂಬಂಧ ಶಿಕ್ಷಣ ಇಲಾಖೆಗೆ ಪತ್ರ ಬರೆದಿರುವ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಟಿ.ಎಸ್.ನಾಗಾಭರಣ, ಶಿಕ್ಷಣ ಇಲಾಖೆಯ ಹಿಂದಿ ಹೇರಿಕೆ ನೀತಿಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: 4 ದಿನ, 80 ಅಡಿ ಕೊಳವೆ ಬಾವಿಯಲ್ಲೇ ಸಿಲುಕಿದ್ದ ಹುಡುಗ – 104 ಗಂಟೆಗಳ ಕಾರ್ಯಾಚರಣೆ ಬಳಿಕ ರಕ್ಷಣೆ

    ಹಿಂದಿ ಭಾಷೆ ಬಂದವರಿಗಷ್ಟೇ ಅವಕಾಶ ಕೊಟ್ಟರೆ, ಕನ್ನಡ ವಿದ್ಯಾರ್ಥಿಗಳಿಗೆ ವಂಚಿಸಿದಂತಾಗುತ್ತದೆ. ಕರ್ನಾಟಕದಲ್ಲಿ ಕನ್ನಡ ಭಾಷೆ ಸಾರ್ವಭೌಮ ಭಾಷೆ. ಹಿಂದಿ ಭಾಷೆ ತಿಳಿಯದ ಕನ್ನಡದ ವಿದ್ಯಾರ್ಥಿಗಳಿಗೂ ಪ್ರವಾಸದ ಅವಕಾಶ ಕೊಡಬೇಕು. ಭಾಷೆಯಿಂದ ವಿದ್ಯಾರ್ಥಿಗಳ ಮನಸ್ಸಿನಲ್ಲಿ ಭೇದ ಭಾವ ಬಿತ್ತುವ ಶಿಕ್ಷಣ ಇಲಾಖೆ ಕ್ರಮ ಸರಿಯಲ್ಲ. ಕೂಡಲೇ ಆದೇಶ ಹಿಂಪಡೆಯಬೇಕೆಂದು ಒತ್ತಾಯಿಸಿದ್ದಾರೆ.

    ಇದಕ್ಕೆ ಪ್ರತಿಕ್ರಿಯಿಸಿರುವ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಇದು ಸರ್ಕಾರದ ಆದೇಶವಲ್ಲ. ರಾಜ್ಯ ಸರ್ಕಾರ ಇಂತಹ ಯಾವುದೇ ಆದೇಶ ಹೊರಡಿಸಿಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಇದನ್ನ ಯಾರಿಗೂ ಸೂಚನೆ ನೀಡಿಲ್ಲ. ಇದು ಡಿಡಿಪಿಯು ಮಾಡಿರೋ ಲೋಪ. ಸರ್ಕಾರ ಯಾವುದೇ ಇಂತಹ ಆದೇಶ ಹೊರಡಿಸಲು ಸೂಚಿಸಿಲ್ಲ. ಇಂತಹ ಹೇಳಿಕೆ ಬಿಡುಗಡೆ ಮಾಡಿರೋ ಡಿಡಿಪಿಐ ವಿರುದ್ದ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

    ಸದ್ಯ ರಾಜ್ಯದಲ್ಲಿ ಪಠ್ಯಪುಸ್ತಕ ವಿವಾದ ಈಗಷ್ಟೇ ತಣ್ಣಗಾಗುತ್ತಿದೆ. ಸಚಿವರು ಯಾವುದೇ ಲೋಪವಿದ್ದರೂ ತಿಳಿಸಿ ನಾವು ಸರಿಪಡಿಸುತ್ತೇವೆ ಎಂದ ಬಳಿಕ ವಿವಾದ ತಣ್ಣಗಾಗಿದೆ. ಈ ಬೆನ್ನಲ್ಲೇ ಮತ್ತೊಂದು ವಿವಾದ ಹುಟ್ಟಿಕೊಂಡಿರುವುದು ರಾಜ್ಯದ ಜನರ ನಿದ್ದೆಗೆಡಿಸಿದೆ.

    Live Tv

  • ಭಾರತದಲ್ಲಿ ಮತ್ತೆ ಕೊರೊನಾ ಸ್ಫೋಟ- ದೈನಂದಿನ ಪ್ರಕರಣಗಳಲ್ಲಿ 39% ಜಿಗಿತ

    ಭಾರತದಲ್ಲಿ ಮತ್ತೆ ಕೊರೊನಾ ಸ್ಫೋಟ- ದೈನಂದಿನ ಪ್ರಕರಣಗಳಲ್ಲಿ 39% ಜಿಗಿತ

    ನವದೆಹಲಿ: ದೇಶದಲ್ಲಿ ಮೂರು ತಿಂಗಳ ಬಳಿಕ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏಕಾಏಕಿ ಏರಿಕೆ ಕಂಡಿದೆ. ಕಳೆದ 24 ಗಂಟೆಯಲ್ಲಿ 7,240 ಮಂದಿಗೆ ಸೋಂಕು ತಗುಲಿದ್ದು, 8 ಮಂದಿ ಸಾವನ್ನಪ್ಪಿದ್ದಾರೆ. ಸದ್ಯ ದೇಶದಲ್ಲಿ 34,498ಕ್ಕೆ ಸಕ್ರಿಯ ಪ್ರಕರಣಗಳ ಸಂಖ್ಯೆ ಏರಿದೆ.

    ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿಗಳ ಪ್ರಕಾರ, ದೈನಂದಿನ ಪ್ರಕರಣಗಳಲ್ಲಿ 39% ಜಿಗಿತ ಕಂಡಿದ್ದು, 111 ದಿನಗಳ ಬಳಿಕ ಪಾಸಿಟಿವಿಟಿ ಪ್ರಮಾಣ 2%ಗೂ ಅಧಿಕವಾಗಿದೆ. ಇದು ನಾಲ್ಕನೇ ಅಲೆಯ ಭೀತಿಗೆ ಕಾರಣವಾಗಬಹುದು ಎಂದು ತಜ್ಞರು ಕಳವಳ ವ್ಯಕ್ತಪಡಿಸಿದ್ದಾರೆ.

    corona

    ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆಯಲ್ಲಿ ಮಹಾರಾಷ್ಟ್ರದಿಂದಲೇ ಅತಿಹೆಚ್ಚು ಪ್ರಕರಣಗಳು ವರದಿಯಾಗಿದೆ. ಮಹಾರಾಷ್ಟ್ರದಲ್ಲಿ ನಿನ್ನೆ 2,701 ಪ್ರಕರಣಗಳ ವರದಿಯಾಗಿದ್ದು, ಮುಂಬೈವೊಂದರಲ್ಲೆ 1,881 ಸೋಂಕಿತರು ಪತ್ತೆಯಾಗಿದ್ದಾರೆ. ಇದಲ್ಲದೇ ಮಹಾರಾಷ್ಟ್ರದಲ್ಲಿ B.A.5 ಉಪ ತಳಿಯ ಒಂದು ಪ್ರಕರಣ ಪತ್ತೆಯಾಗಿದೆ. ಇದನ್ನೂ ಓದಿ: ಅಕ್ರಮ ಸಂಬಂಧ ಪ್ರಶ್ನಿಸಿ ಸಬ್ ಇನ್ಸ್‌ಪೆಕ್ಟರ್ ವಿರುದ್ಧ ಪತ್ನಿಯಿಂದಲೇ ದೂರು

    ಮಹಾರಾಷ್ಟ್ರ ಹೊರತುಪಡಿಸಿದರೇ, ದೆಹಲಿ ಮತ್ತು ಕೇರಳದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ದೆಹಲಿಯಲ್ಲಿ ನಿನ್ನೆ 564 ಕೇಸ್‍ಗಳು ಪತ್ತೆಯಾಗಿದ್ದು, 22 ದಿನಗಳ ಬಳಿಕ ದಾಖಲಾದ ಅತಿ ಹೆಚ್ಚಿನ ಸಂಖ್ಯೆಯಾಗಿದೆ. ಸದ್ಯ ದೆಹಲಿಯಲ್ಲಿ ಪಾಸಿಟಿವಿಟಿ ಪ್ರಮಾಣ 2.64% ರಷ್ಟಿದೆ. ಇನ್ನೂ ಕೇರಳದಲ್ಲಿ 2271 ಪ್ರಕರಣಗಳ ವರದಿಯಾಗಿದೆ. ಇದನ್ನೂ ಓದಿ: ಜಮ್ಮುವಿನಲ್ಲಿ ಪಾಕಿಸ್ತಾನಿ ಡ್ರೋನ್ ಪತ್ತೆ

    CORONA-VIRUS.

    ತಮಿಳುನಾಡು, ಕರ್ನಾಟಕದಲ್ಲಿ ನಿತ್ಯ 500ರ ಆಸುಪಾಸಿನಲ್ಲಿ ಸೋಂಕಿತರ ಸಂಖ್ಯೆ ಪತ್ತೆಯಾಗುತ್ತಿದ್ದು, ಕ್ರಮೇಣ 1021, 2,623 ಸಕ್ರಿಯ ಪ್ರಕರಣಗಳಿದೆ. ದೇಶದಲ್ಲಿ ಹೀಗೆ ಹೆಚ್ಚುತ್ತಿರುವ ಸೋಂಕಿನ ಸಂಖ್ಯೆ ಹಿನ್ನಲೆ ಈಗಾಗಲೇ ಕೇಂದ್ರ ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಿದ್ದು, ಸೋಂಕು ಪೀಡಿತ ರಾಜ್ಯಗಳಿಗೆ ನಿಯಂತ್ರಣಕ್ಕೆ ಸೂಚಿಸಿ ಪತ್ರ ಬರೆಯಲಾಗಿದೆ. ಅಲ್ಲದೇ ಎಲ್ಲಾ ವಿಮಾನ ಮತ್ತು ವಿಮಾನ ನಿಲ್ದಾಣಗಳಲ್ಲಿ ಮಾಸ್ಕ್ ಕಡ್ಡಾಯ ಮಾಡಿದ್ದು, ಹಲವು ರಾಜ್ಯಗಳು ಮಾಸ್ಕ್ ಕಡ್ಡಾಯ ಬಳಕೆ ನಿಯಮ ವಾಪಸ್ ತರಲು ಚಿಂತಿಸುತ್ತಿವೆ.