Tag: Central Government

  • ನೋಂದಾಯಿತ ಪ್ರಮಾಣದ ಗೋಧಿ ರಫ್ತಿಗೆ ಕೇಂದ್ರಸರ್ಕಾರ ನಿರ್ಧಾರ

    ನೋಂದಾಯಿತ ಪ್ರಮಾಣದ ಗೋಧಿ ರಫ್ತಿಗೆ ಕೇಂದ್ರಸರ್ಕಾರ ನಿರ್ಧಾರ

    ನವದೆಹಲಿ: ಉತ್ಪಾದನೆ ಇಳಿಕೆಯಾದ ಹಿನ್ನೆಲೆಯಲ್ಲಿ ಭಾರತವು ಗೋಧಿ ರಫ್ತಿಗೆ ನಿಷೇಧ ಹೇರಿತ್ತು. ಆದರೆ ನಿಷೇಧ ಹೇರುವುದಕ್ಕೂ ಮುನ್ನವೇ ಕಸ್ಟಮ್ಸ್ ಪ್ರಾಧಿಕಾರದಲ್ಲಿ ನೋಂದಾಯಿಸಲಾದ ನಿಗದಿತ ಪ್ರಮಾಣದ ಗೋಧಿಯನ್ನು ರಫ್ತು ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

    ಮೇ 13ಕ್ಕೂ ಮುನ್ನವೇ ಕಸ್ಟಮ್ಸ್ ವ್ಯವಸ್ಥೆಗಳಲ್ಲಿ ನೋಂದಾಯಿಸಲಾಗಿದ್ದು, ಅಂತಹ ಸರಕುಗಳನ್ನು ರಫ್ತು ಮಾಡಲು ಕೇಂದ್ರ ಸರ್ಕಾರ ಅನುಮತಿಸಿದೆ ಎಂದು ವಾಣಿಜ್ಯ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. ಇದನ್ನೂ ಓದಿ: ಉಕ್ರೇನ್‌ ಯುದ್ಧ – ಭಾರತದಿಂದ ಈಜಿಪ್ಟ್‌ಗೆ ರಫ್ತು ಆಗಲಿದೆ ಗೋಧಿ

    Wheat 1

    ಜೊತೆಗೆ ಗೋಧಿ ರಫ್ತು ಮಾಡಲು ತೊಡಗಿರುವ ಮೇರಾ ಇಂಟರ್‌ನ್ಯಾಶನಲ್ ಇಂಡಿಯಾ ಪ್ರೈ.ಲಿ. ಈಜಪ್ಟ್‌ 61,500 ಮೆಟ್ರಿಕ್ ಟನ್ ಲೋಡ್ ಗೋಧಿ ರಫ್ತಿಗೆ ಅನುಮತಿ ನೀಡಿದೆ. ಅದರಲ್ಲಿ 44,340 ಮೆಟ್ರಿಕ್ ಟನ್ ಈಗಾಗಲೇ ಲೋಡ್ ಮಾಡಲಾಗಿದೆ. ಇನ್ನು 17,160 ಮೆಟ್ರಿಕ್ ಟನ್ ಮಾತ್ರ ಬಾಕಿ ಉಳಿದಿದೆ. ಕೇಂದ್ರ ಸರ್ಕಾರ ಪೂರ್ಣ ಪ್ರಮಾಣದ ಗೋಧಿಯನ್ನು ಸರಬರಾಜು ಮಾಡಲು ನಿರ್ಧರಿಸಿದೆ ಎಂದು ಹೇಳಿದೆ.

    WHEAT

    ರಫ್ತಿಗೆ ನಿಷೇಧ ಹೇರಿದ್ದು ಏಕೆ?: ಭಾರತದಲ್ಲಿ ಉಷ್ಣತೆಯಲ್ಲಿ ಏರಿಕೆ ಕಂಡಿದ್ದರಿಂದ ಗೋಧಿ ಉತ್ಪಾದನೆಗೆ ಹೊಡೆತ ಬಿದ್ದಿತ್ತು. ಇದರ ಜೊತೆಗೆ ಕಡಿಮೆ ಉತ್ಪಾದನೆ ಮತ್ತು ಜಾಗತಿಕ ಬೆಲೆಗಳು ತೀವ್ರವಾಗಿ ಹೆಚ್ಚಿರುವುದು ಸೇರಿದಂತೆ ತನ್ನದೇ ಆದ 1.4 ಶತಕೋಟಿ ಜನರ ಆಹಾರ ಭದ್ರತೆಯ ಬಗ್ಗೆ ಭಾರತ ಚಿಂತಿಸಿತ್ತು. ಇದರಿಂದಾಗಿ ರಫ್ತು ವ್ಯಾಪಾರಕ್ಕೆ ನಿಷೇಧದ ನಿರ್ಧಾರವನ್ನು ತೆಗೆದುಕೊಂಡಿತ್ತು. ಇದನ್ನೂ ಓದಿ: ರಫ್ತಿಗೆ ನಿಷೇಧ ಹೇರಿದ ಭಾರತ- ಗೋಧಿ ಬೆಲೆ ದಾಖಲೆ ಮಟ್ಟದಲ್ಲಿ ಏರಿಕೆ

    WHEAT EXPORT

    ಭಾರತದ ಈ ನಿರ್ಧಾರವನ್ನು US, ಕೆನಡಾ, EU ಮತ್ತು ಆಸ್ಟ್ರೇಲಿಯಾ ಸೇರಿದಂತೆ ಅನೇಕ ಪಾಶ್ಚಿಮಾತ್ಯ ರಾಷ್ಟ್ರಗಳು ತರಾಟೆಗೆ ತೆಗೆದುಕೊಂಡಿದೆ. ಆದರೆ ಭಾರತದಲ್ಲಿ ಗೋಧಿಯ ರಫ್ತು ನಿಷೇಧ ಮಾಡಿರುವುದಕ್ಕೆ ಚೀನಾ ಬೆಂಬಲ ನೀಡಿದೆ. ಅಭಿವೃದ್ಧಿಶೀಲ ರಾಷ್ಟ್ರಗಳನ್ನು ದೂಷಿಸುವುದು ಸರಿಯಲ್ಲ. G7 ರಾಷ್ಟ್ರಗಳು ತಮ್ಮ ರಫ್ತುಗಳನ್ನು ಹೆಚ್ಚಿಸುವ ಮೂಲಕ ಆಹಾರ ಮಾರುಕಟ್ಟೆ ಪೂರೈಕೆಯನ್ನು ಸ್ಥಿರಗೊಳಿಸಲು ಏಕೆ ಮುಂದಾಗುವುದಿಲ್ಲ ಎಂದು ಚೀನಾ ಪ್ರಶ್ನಿಸಿದೆ.

  • ತಲೆಕೂದಲು ಕಸಿಯಿಂದ ವ್ಯಕ್ತಿ ಸಾವು – ಅಕ್ರಮ ಸಲೂನ್‌ಗಳ ವಿರುದ್ಧ ತನಿಖೆಗೆ ಕೋರ್ಟ್ ಸೂಚನೆ

    ತಲೆಕೂದಲು ಕಸಿಯಿಂದ ವ್ಯಕ್ತಿ ಸಾವು – ಅಕ್ರಮ ಸಲೂನ್‌ಗಳ ವಿರುದ್ಧ ತನಿಖೆಗೆ ಕೋರ್ಟ್ ಸೂಚನೆ

    ನವದೆಹಲಿ: ರಾಷ್ಟ್ರರಾಜಧಾನಿಯಲ್ಲಿ ತರಬೇತಿಯಿಲ್ಲದೆ ತಲೆಕೂದಲು ಕಸಿ ಮತ್ತು ಸೌಂದರ್ಯಕ್ಕೆ ಸಂಬಂಧಿಸಿದ ಶಸ್ತ್ರಚಿಕಿತ್ಸೆ ನಡೆಯುತ್ತಿರುವ ಬಗ್ಗೆ ದೆಹಲಿ ಹೈಕೋರ್ಟ್ ಕಳವಳ ವ್ಯಕ್ತಪಡಿಸಿದೆ. ಈ ಬೆನ್ನಲ್ಲೇ ನಾಯಿಕೊಡೆಗಳಂತೆ ತಲೆ ಎತ್ತುತ್ತಿರುವ ಸಲೂನ್‌ಗಳ ವಿರುದ್ಧ ತನಿಖೆಗೆ ಹೈಕೋರ್ಟ್ ಸೂಚನೆ ನೀಡಿದೆ.

    Salon

    ನಗರದೆಲ್ಲೆಡೆ ಸಲೂನ್‌ಗಳು ನಾಯಿಕೊಡೆಗಳಂತೆ ಎಲೆ ಎತ್ತುತ್ತಿದ್ದು, ಸ್ವಘೋಷಿತ ತಂತ್ರಜ್ಞರು ವೈದ್ಯಕೀಯ ನೈತಿಕತೆಯನ್ನು ಬದಿಗೊತ್ತಿ, ತಲೆಕೂದಲು ಕಸಿ ಹಾಗೂ ಸೌಂದರ್ಯಕ್ಕೆ ಸಂಬಂಧಿಸಿದ ಶಸ್ತ್ರಚಿಕಿತ್ಸೆ ನಡೆಸುತ್ತಿದ್ದಾರೆ ಎಂದು ನ್ಯಾಯಮೂರ್ತಿ ಅನೂಪ್ ಕುಮಾರ್ ಮೆಂಡಿರಟ್ಟ ಪ್ರಕರಣವೊಂದರ ವಿಚಾರಣೆ ವೇಳೆ ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ಶರದ್ ಪವಾರ್ ವಿರುದ್ಧ ಅವಹೇಳನಕಾರಿ ಪೋಸ್ಟ್ – ಪೊಲೀಸ್ ಕಸ್ಟಡಿಗೆ ಮರಾಠಿ ನಟಿ

    ಕೂದಲು ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ ನಂತರ ವ್ರಣವಾಗಿ (ಗಾಯವಾಗಿ) ಮೃತಪಟ್ಟ 35 ವರ್ಷದ ಅಥರ್ ರಶೀದ್ ಸಾವಿನ ಕುರಿತು ತನಿಖೆ ನಡೆಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಲಾಯಿತು.

    haircut salon

    ಇಂತಹ ಸಲೂನ್‌ಗಳು ತಲೆ ಎತ್ತುತ್ತಿರುವ ಬಗ್ಗೆ ಪರಿಶೀಲಿಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮತ್ತು ದೆಹಲಿ ಸರ್ಕಾರ ಅಗತ್ಯ ಕ್ರಮ ತೆಗೆದುಕೊಳ್ಳಬೇಕು. ಸೌಂದರ್ಯದ ಶಸ್ತ್ರಚಿಕಿತ್ಸೆ ಹಾಗೂ ಕೂದಲು ಕಸಿ ಮಾಡಲು ವೈದ್ಯಕೀಯ ಮಾರ್ಗಸೂಚಿಗಳು ಇಲ್ಲದಿದ್ದರೆ, ಅದಕ್ಕೆ ಸೂಕ್ತ ಕ್ರಮ ರೂಪಿಸಬೇಕು ಎಂದೂ ನ್ಯಾಯಾಲಯ ಹೇಳಿದೆ. ಇದನ್ನೂ ಓದಿ: ನಾವು ಕರ್ನಾಟಕದ ಕನ್ನಡಿಗರಲ್ಲ, ಗೋವಾ ಕನ್ನಡಿಗರು: ಸಿದ್ದಣ್ಣ ಮೇಟಿ

    ಕೂದಲು ಕಸಿ ವಿಧಾನ ಅಥವಾ ಸೌಂದರ್ಯ ಕಾಪಾಡುವ ಶಸ್ತ್ರಚಿಕಿತ್ಸೆಗಳು ಅನರ್ಹ ವೃತ್ತಿಪರರಿಂದ (ಚಿಕಿತ್ಸೆ ಬಗ್ಗೆ ತಿಳಿಯದೇ ವೃತ್ತಿ ಮಾಡುವವರು) ಮಾರಕವಾಗಬಹುದು ಎನ್ನುವ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಬೇಕಿದೆ. ಇದಕ್ಕೆ ಕಟ್ಟುನಿಟ್ಟಿನ ವೈದ್ಯಕೀಯ ಮೇಲ್ವಿಚಾರಣೆಯೂ ಅಗತ್ಯವಿರುತ್ತದೆ ಎಂದು ನ್ಯಾಯಾಲಯ ಹೇಳಿದೆ.

    COURT (2)

    ಪ್ರಸ್ತುತ ರಶೀದ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಂ ವರ್ಮಾ ಎಂಬ ಆರೋಪಿಯನ್ನು ಬಂಧಿಸಲಾಗಿದೆ. ಈತ ಹರೀಶ್‌ಶರ್ಮಾ ಹಾಗೂ ಇತರರೊಂದಿಗೆ ಯುನೈಟೆಡ್ ಹೇರ್ ಸ್ಟುಡಿಯೋ ನಡೆಸುತ್ತಿದ್ದ. ಶಸ್ತ್ರಚಿಕಿತ್ಸೆಗಾಗಿ ರಶೀದ್‌ನಿಂದ 30 ಸಾವಿರ ರೂ. ಶುಲ್ಕ ಪಡೆದಿದ್ದ. ಆದರೆ ಕೂದಲು ಕಸಿಗೆ ಕ್ಲಿಯರೆನ್ಸ್ ಪ್ರಮಾಣಪತ್ರ ಹೊಂದಿರಲಿಲ್ಲ ಎಂಬುದು ವಿಚಾರಣೆ ವೇಳೆ ತಿಳಿದು ಬಂದಿದೆ. ಇದನ್ನೂ ಓದಿ: ಪ್ರಿಯಕರನ ಸಾವಿನಿಂದ ಮನನೊಂದ ಯುವತಿ ವಿಷ ಸೇವಿಸಿ ಆತ್ಮಹತ್ಯೆ 

    ಈ ಹಿನ್ನೆಲೆಯಲ್ಲಿ ಕೇಂದ್ರ, ದೆಹಲಿ ರಾಜ್ಯ ಸರ್ಕಾರ, ದೆಹಲಿ ಪೊಲೀಸ್ ಆಯುಕ್ತರು, ರಾಷ್ಟ್ರೀಯ ವೈದ್ಯಕೀಯ ಆಯೋಗ ಮತ್ತು ದೆಹಲಿ ವೈದ್ಯಕೀಯ ಮಂಡಳಿಗೆ ಸಮಸ್ಯೆ ನಿಭಾಯಿಸಲು ಮತ್ತು ಸ್ಥಿತಿಗತಿ ವರದಿ ಸಲ್ಲಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಪೀಠ ಸೂಚಿಸಿದೆ.

  • ಪಾಕಿಸ್ತಾನದತ್ತ ಬೆರಳು ತೋರಿಸದೆ ಕಾಶ್ಮೀರಿ ಪಂಡಿತರಿಗೆ ಕೇಂದ್ರ ಸಹಾಯ ಮಾಡಿ: ರಾವತ್

    ಪಾಕಿಸ್ತಾನದತ್ತ ಬೆರಳು ತೋರಿಸದೆ ಕಾಶ್ಮೀರಿ ಪಂಡಿತರಿಗೆ ಕೇಂದ್ರ ಸಹಾಯ ಮಾಡಿ: ರಾವತ್

    ಮುಂಬೈ: ಪಾಕಿಸ್ತಾನದತ್ತ ಬೆರಳು ತೋರಿಸದೆ ಕಾಶ್ಮೀರಿ ಪಂಡಿತರಿಗೆ ಏನು ಮಾಡಬಹುದು ಎಂಬುದನ್ನು ಕೇಂದ್ರ ಸರ್ಕಾರ ಯೋಚಿಸಬೇಕು ಎಂದು ಶಿವಸೇನೆ ಸಂಸದ ಸಂಜಯ್ ರಾವತ್ ತಿಳಿಸಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಶ್ಮೀರಿ ಪಂಡಿತರೊಬ್ಬರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿ ಹತ್ಯೆಗೈದಿರುವುದನ್ನು ಖಂಡಿಸಿದರು. ಜಮ್ಮು- ಕಾಶ್ಮೀರದಲ್ಲಿ ಇಂತಹ ಘಟನೆಗಳು ನಿರಂತರವಾಗಿ ನಡೆಯುತ್ತಿವೆ. ಆದರೆ ಇಲ್ಲಿಯವರೆಗೆ ಅದನ್ನು ತಡೆಗಟ್ಟಲು ಯಾವುದೇ ಕ್ರಮವನ್ನು ಕೈಗೊಂಡಿಲ್ಲ ಎಂದು ಕಿಡಿಕಾರಿದರು.

    ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಈ ಬಗ್ಗೆ ಗಂಭೀರವಾಗಿ ಯೋಚಿಸಬೇಕು. ಕಾಶ್ಮೀರಿ ಪಂಡಿತರ ಪುನರ್ವಸತಿ ಕುರಿತು ಮಾತುಕತೆ ನಡೆಯುತ್ತಿದೆ. ಆದರೆ ಕಳೆದ 7 ವರ್ಷಗಳಲ್ಲಿ ಏನಾಯಿತು. ಎಷ್ಟು ಕಾಶ್ಮೀರಿ ಪಂಡಿತರು ಕಾಶ್ಮೀರಕ್ಕೆ ಮರಳಿದ್ದಾರೆಂದು ನನಗೆ ತಿಳಿದಿಲ್ಲ.  ಕಳೆದ 7 ವರ್ಷಗಳಲ್ಲಿ ಕಾಶ್ಮೀರಿ ಪಂಡಿತರಿರು ಎಷ್ಟು ಜನರು ವಾಪಸ್ಸಾದರಾದರು ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಭಾರತದೊಂದಿಗೆ ಉತ್ತಮ ಬಾಂಧವ್ಯ ಬೆಳೆಸಲು ಬಯಸುತ್ತೇವೆ : ವಿಕ್ರಮಸಿಂಘೆ

    ಕಾಶ್ಮೀರಿ ಪಂಡಿತರ ಪುನರ್ವಸತಿ ಮತ್ತು ಭದ್ರತೆಯ ವಿಷಯದಲ್ಲಿ ಗಂಭೀರ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು. ಧ್ವನಿವರ್ಧಕಗಳು ಮತ್ತು ಹನುಮಾನ್ ಚಾಲೀಸಾ ಕುರಿತು ನಡೆಯುತ್ತಿರುವ ಗಲಾಟೆಗೆ ಬಿಜೆಪಿ ಸರ್ಕಾರವೇ ಕಾರಣ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಬಿಜೆಪಿ ವಿರುದ್ಧ ಹೋರಾಡಿ, ರಮ್ಯಾ ವಿರುದ್ಧ ಅಲ್ಲ – ಡಿಕೆಶಿ ಬೆಂಬಲಿಗರಿಗೆ ಮಹದೇವಪ್ಪ ಟಾಂಗ್

  • ದೂರು ಪರಿಹರಿಸಿ, ಇಲ್ಲವೇ ದಂಡ ಪಾವತಿಸಿ – ಒಲಾ, ಉಬರ್‌ಗಳಿಗೆ ಸರ್ಕಾರ ವಾರ್ನಿಂಗ್

    ದೂರು ಪರಿಹರಿಸಿ, ಇಲ್ಲವೇ ದಂಡ ಪಾವತಿಸಿ – ಒಲಾ, ಉಬರ್‌ಗಳಿಗೆ ಸರ್ಕಾರ ವಾರ್ನಿಂಗ್

    ನವದೆಹಲಿ: ಕ್ಯಾಬ್ ಕಂಪನಿಗಳಾದ ಓಲಾ, ಉಬರ್‌ಗಳಿಗೆ ಬೇಡಿಕೆ ಹೆಚ್ಚಿದಂತೆ ದೂರುಗಳು ಬರಲು ಪ್ರಾರಂಭಿಸಿವೆ. ಆದ್ದರಿಂದ ದೂರುಗಳನ್ನು ಪರಿಹರಿಸಿ, ಇಲ್ಲವೇ ದಂಡ ಪಾವತಿಸಬೇಕಾಗುತ್ತದೆ ಎಂದು ಎಚ್ಚರಿಕೆ ನಿಡಿರುವ ಕೇಂದ್ರ ಸರ್ಕಾರ, ನ್ಯಾಯಯುತ ಬೆಲೆ ನಿಗದಿ ಮಾಡಲು ಮುಂದಾಗಿದೆ. ಅದಕ್ಕಾಗಿ ಕ್ಯಾಬ್ ಕಂಪನಿಗಳಿಗೆ ಮಾರ್ಗಸೂಚಿ ನೀಡಲಾಗುತ್ತಿದೆ ಎಂದು ಗ್ರಾಹಕ ವ್ಯವಹಾರಗಳ ಸಚಿವಾಲಯ ಹೇಳಿದೆ.

    Uber-1-768x576

    ಈಗಾಗಲೇ ಕೇಂದ್ರ ಮತ್ತು ರಾಜ್ಯ ಸಾರಿಗೆ ಇಲಾಖೆಗಳ ಮಾರ್ಗ ಸೂಚಿಗಳು ಭಿನ್ನವಾಗಿರುತ್ತವೆ. ಮಾಹಿತಿಯ ಪ್ರಕಾರ, ಗ್ರಾಹಕ ವ್ಯವಹಾರಗಳ ಸಚಿವಾಲಯವು ನಿಗದಿತ ಗಡುವುಗಳೊಂದಿಗೆ ಗ್ರಾಹಕರ ದೂರುಗಳ ಪರಿಹಾರಕ್ಕಾಗಿ ಮಾರ್ಗಸೂಚಿಗಳನ್ನು ನಿಗದಿಪಡಿಸುವ ಸಾಧ್ಯತೆಯಿದೆ. ಗ್ರಾಹಕರ ದೂರುಗಳನ್ನು ಕಟ್ಟುನಿಟ್ಟಾಗಿ ಪರಿಹರಿಸಲು ನಾವು ಕ್ಯಾಬ್ ಕಂಪನಿಗಳನ್ನು ಕೇಳಿದ್ದೇವೆ. ಗ್ರಾಹಕರ ಕುಂದುಕೊರತೆಗಳ ಪರಿಹಾರಕ್ಕೆ ತಕ್ಷಣವೇ ಸಂಭಾವ್ಯ ಪರಿಹಾರಗಳೊಂದಿಗೆ ಬರಲು ನಾವು ಅವರಿಗೆ ಎಚ್ಚರಿಕೆ ನೀಡಿದ್ದೇವೆ ಇಲ್ಲದಿದ್ದರೆ ಸಕ್ಷಮ ಪ್ರಾಧಿಕಾರವು ಅವರ ವಿರುದ್ಧ ಶಿಕ್ಷಾರ್ಹ ಕ್ರಮವನ್ನು ತೆಗೆದುಕೊಳ್ಳುತ್ತದೆ. ಮುಖ್ಯವಾಗಿ ಡೆಸ್ಟಿನೇಶನ್ ಜೊತೆ ರದ್ದತಿ ಶುಲ್ಕದ ಪ್ರಕಾರ ದರವು ಎಷ್ಟು ನ್ಯಾಯಯುತ ಮತ್ತು ಸಮಂಜಸವಾಗಿದೆ ಎಂಬುದನ್ನು ಸರ್ಕಾರ ಪರಿಶೀಲಿಸುತ್ತಿದೆ ಎಂದು ಗ್ರಾಹಕ ವ್ಯವಹಾರಗಳ ಕಾರ್ಯದರ್ಶಿ ರೋಹಿತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

    uber cab

    ಏರುತ್ತಿರುವ ಇಂಧನ ಬೆಲೆ ಪ್ರತಿ ವಿರುದ್ಧ ಪ್ರತಿಭಟಿಸಿ ಹಲವಾರು ಆಟೋ ಮತ್ತು ಕ್ಯಾಬ್ ಚಾಲಕರು ಮುಷ್ಕರಕ್ಕೆ ಕರೆ ನೀಡಿದ್ದರಿಂದ ದೆಹಲಿಯಲ್ಲಿ ಕಳೆದ ತಿಂಗಳು ಪ್ರಯಾಣಿಕರು ತೊಂದರೆಗಳನ್ನು ಎದುರಿಸಿದರು. ಇಂಧನ ಬೆಲೆ ಏರಿಕೆ ಮತ್ತು ಕಡಿಮೆ ಕಮಿಷನ್‌ಗಳ ಸಮಸ್ಯೆಯಿಂದ ಕ್ಯಾಬ್ ಚಾಲಕರು `ನೋ ಎಸಿ’ ನೀತಿಯನ್ನು ಅಳವಡಿಸಿಕೊಂಡಿದ್ದರಿಂದ ಕ್ಯಾಬ್ ಕಂಪನಿಗಳು ಓಲಾ ಮತ್ತು ಉಬರ್ ಕೂಡ ಟೀಕೆಗೆ ಗುರಿಯಾಗಿದ್ದಾರೆ. ಪಶ್ಚಿಮ ಬಂಗಾಳ, ನವದೆಹಲಿ, ನೋಯ್ಡಾ ಮತ್ತು ತೆಲಂಗಾಣ ನಂತರ, ಬೆಂಗಳೂರಿನ ಕ್ಯಾಬ್ ಚಾಲಕರೂ ಈ ಭೀತಿಯನ್ನು ಎದುರಿಸುತ್ತಿದ್ದು ಏಪ್ರಿಲ್ ಆರಂಭದಿಂದ `ನೋ ಎಸಿ’ (ಹವಾನಿಯಂತ್ರಕ) ನೀತಿಯನ್ನು ಪ್ರಾರಂಭಿಸಿದರು. ಇದನ್ನೂ ಓದಿ: ಯುವಮೋರ್ಚಾ ಸಭೆಯಲ್ಲಿ ದ್ರಾವಿಡ್ ಭಾಗಿಯಾಗಲಿದ್ದಾರೆ: ಬಿಜೆಪಿ ಶಾಸಕ

    ಪೆಟ್ರೋಲ್ ಬೆಲೆ 100 ಗಡಿ ದಾಟಿದ ನಂತರ ಓಲಾ, ಉಬರ್ ಬಳಕೆದಾರರು ಪ್ರಯಾಣಿಕರಿಂದ ಹೆಚ್ಚುವರಿ ಶುಲ್ಕ ಕೇಳಲು ಮುಂದಾಗಿದ್ದಾರೆ. ಇದಕ್ಕಾಗಿ ಕೋವಿಡ್ ನಿಯಮಗಳನ್ನೂ ಉಲ್ಲಂಘಿಸಿದ್ದಾರೆ ಎಂದು ವರದಿಯಾಗಿದೆ.

    ಲಾಕ್‌ಡೌನ್‌ನಿಂದ ತಮ್ಮ ಊರುಗಳಿಗೆ ಹೋದ ಎಷ್ಟೋ ರೈಡರ್‌ಗಳು, ಕ್ಯಾಬ್ ಬಳಕೆದಾರರು ಮರಳಿಲ್ಲ. ಶೇ.30 ರಷ್ಟು ಮಂದಿ ಬಾಡಿಗೆ, ಇಂಧನ ಹಾಗೂ ಮಾಸಿಕ ಇಎಂಐ ಪಾವತಿಸುವುದಕ್ಕೂ ಕಷ್ಟವಾಗಿದೆ. ಅದಕ್ಕಾಗಿಯೇ ತಮ್ಮ ಕುಲ ಕಸುಬನ್ನು ಅವಲಂಬಿಸುತ್ತಿದ್ದಾರೆ. ಇನ್ನೂ ಕೆಲ ಕ್ಯಾಬ್ ಚಾಲಕರು ಇಎಂಐ ಗಳನ್ನು ಪಾವತಿಸಲು ಸಾಧ್ಯವಾಗದ ಕಾರಣ ತಮ್ಮ ಕಾರುಗಳನ್ನು ಮಾರಾಟ ಮಾಡಿದ್ದಾರೆ. ಇದನ್ನೂ ಓದಿ: ವಂಶಾಡಳಿತ ರಾಜಕಾರಣಕ್ಕೆ ಬಿಜೆಪಿಯಲ್ಲಿ ಸ್ಥಾನವಿಲ್ಲ: ಜ್ಯೋತಿರಾದಿತ್ಯ ಸಿಂಧಿಯಾ

    ಓಲಾ, ಉಬರ್ ಬುಕ್ಕಿಂಗ್ ಮಾಡಿದ 20 ನಿಮಿಷಗಳ ವರೆಗೆ ಬರುವುದೇ ಇಲ್ಲ. ಮತ್ತು ಅದನ್ನು ರದ್ದು ಮಾಡಿದಾಗ ಮುಂದಿನ ಬುಕ್ಕಿಂಗ್ ವೇಳೆ 50 ರೂ. ದಂಡ ನೀಡಬೇಕಾಗುತ್ತಿದೆ ಎಂದು ಗ್ರಾಹಕರು ದೂರಿದ್ದಾರೆ.

  • ಕೇಂದ್ರವು ಧ್ವನಿವರ್ಧಕಗಳ ಬಗ್ಗೆ ನೀತಿಯನ್ನು ತರಬೇಕು: ಮಹಾರಾಷ್ಟ್ರ ಗೃಹ ಸಚಿವ

    ಕೇಂದ್ರವು ಧ್ವನಿವರ್ಧಕಗಳ ಬಗ್ಗೆ ನೀತಿಯನ್ನು ತರಬೇಕು: ಮಹಾರಾಷ್ಟ್ರ ಗೃಹ ಸಚಿವ

    ಮುಂಬೈ: ಕೇಂದ್ರ ಸರ್ಕಾರವು ಧ್ವನಿವರ್ಧಕಗಳ ಬಳಕೆಯ ಬಗ್ಗೆ ನೀತಿಯನ್ನು ಹೊರತರಬೇಕು ಎಂದು ಮಹಾರಾಷ್ಟ್ರ ಗೃಹ ಸಚಿವ ದಿಲೀಪ್ ವಾಲ್ಸೆ-ಪಾಟೀಲ್ ಶುಕ್ರವಾರ ಆಗ್ರಹ ಮಾಡಿದರು.

    ಇತ್ತೀಚೆಗೆ ಹೆಚ್ಚು ಸುದ್ದಿಯಾಗುತ್ತಿರುವ ಧ್ವನಿವರ್ಧಕಗಳ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಸೀದಿಗಳಲ್ಲಿ ಧ್ವನಿವರ್ಧಕಗಳ ಬಳಕೆಗೆ ಸಂಬಂಧಿಸಿದಂತೆ ಗದ್ದಲದ ನಡುವೆ ಶಾಂತಿ ಕಾಪಾಡುವಲ್ಲಿ ರಾಜ್ಯ ಸರ್ಕಾರದೊಂದಿಗೆ ಸಹಕರಿಸಿದ ಹಿಂದೂ ಮತ್ತು ಮುಸ್ಲಿಂ ಸಮುದಾಯದ ಜನರಿಗೆ ಧನ್ಯವಾದಗಳನ್ನು ಅರ್ಪಿಸಿದರು. ಇದನ್ನೂ ಓದಿ: ಎನ್‍ಕೌಂಟರ್‌ನಲ್ಲಿ ಮೂರು ಭಯೋತ್ಪಾದಕರ ಪೈಕಿ ಒಬ್ಬ ಬದುಕುಳಿದ 

    loudspeakers

    ಕೇಂದ್ರವು ಇಡೀ ದೇಶಕ್ಕೆ ಧ್ವನಿವರ್ಧಕಗಳ ಮೇಲೆ ನೀತಿಯನ್ನು ತರಬೇಕು. ಆದರೆ ನಾನು ಮುಸ್ಲಿಂ ಮತ್ತು ಹಿಂದೂ ಸಮುದಾಯಗಳಿಗೆ ಧನ್ಯವಾದ ಹೇಳುತ್ತೇನೆ. ಈ ಸಮಸ್ಯೆಯನ್ನು ಎರಡು ಧರ್ಮದವರು ಶಾಂತಿಯುತವಾಗಿ ನಿಭಾಯಿಸುತ್ತಿದ್ದಾರೆ. ಅವರ ಸಹಕಾರದಿಂದಾಗಿ ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳಬಹುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.

    mosque-loudspeakers

    ಕಾಮೆಂಟ್‍ಗಳನ್ನು ಮಾಡಲು ನ್ಯಾಯಾಲಯಗಳಿಗೆ ಹಕ್ಕಿದೆ. ಆದರೆ ಯಾವುದೇ ಅಪರಾಧವನ್ನು ದಾಖಲಿಸುವಾಗ ಪೊಲೀಸರು ಎಲ್ಲವನ್ನೂ ಅಧ್ಯಯನ ಮಾಡುತ್ತಾರೆ. ಅವರು ಇನ್ನೂ ನ್ಯಾಯಾಲಯದ ತೀರ್ಪಿನ ಪ್ರತಿಯನ್ನು ಪಡೆದಿಲ್ಲ. ನಿರ್ಧಾರವನ್ನು ಅಧ್ಯಯನ ಮಾಡಿದ ನಂತರ ಈ ವಿಷಯದ ಬಗ್ಗೆ ಪ್ರತಿಕ್ರಿಯೆ ನೀಡುವುದಾಗಿ ಹೇಳಿದರು. ಇದನ್ನೂ ಓದಿ: ವಿದ್ಯುತ್ ಅವಘಡ: ಮಕ್ಕಳನ್ನು ಉಳಿಸಲು ಹೋಗಿ ತಾಯಿಯೂ ಬಲಿ – ಒಂದೇ ಮನೆಯಲ್ಲಿ 3 ಸಾವು

  • 2024 ಮೋದಿ ಒನ್ಸ್‌ಮೋರ್‌ – ಜರ್ಮನಿ ಭಾರತೀಯರಿಂದ ಘೋಷಣೆ

    2024 ಮೋದಿ ಒನ್ಸ್‌ಮೋರ್‌ – ಜರ್ಮನಿ ಭಾರತೀಯರಿಂದ ಘೋಷಣೆ

    ಬರ್ಲಿನ್: ಜರ್ಮನಿಯ ಬರ್ಲಿನ್‌ಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದ ಪ್ರಧಾನಿ ನರೇಂದ್ರಮೋದಿ ಅವರು ಜರ್ಮನಿಯ ಭಾರತೀಯರನ್ನುದ್ದೇಶಿಸಿ ಮಾತನಾಡಿದರು. ಚಾನ್ಸೆಲರ್ ಓಲಾಫ್ ಸ್ಕೋಲ್ಜ್ ಅವರ ಸಹ-ಅಧ್ಯಕ್ಷತೆಯಲ್ಲಿ ಬರ್ಲಿನ್‌ನಲ್ಲಿ ಕಾರ್ಯಕ್ರಮ ನಡೆಯಿತು.

    ಬರ್ಲಿನ್‌ನ ಮುಖ್ಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರಮೋದಿ ಭಾಷಣ ಮಾಡಲು ವೇದಿಕೆಗೆ ಬರುತ್ತಿದ್ದಂತೆ ಅಲ್ಲಿ ನೆಲೆಸಿರುವ ಭಾರತೀಯರು `2024 ಒನ್ಸ್ಮೋರ್ ಮೋದಿ’ (2024ರ ಚುನಾವಣೆಯಲ್ಲಿ ಮತ್ತೊಮ್ಮೆ ಮೋದಿ ಅಧಿಕಾರಕ್ಕೆ ಬರಬೇಕು) ಎಂದು ಜಯಘೋಷ ಕೂಗಿದರು. ಇದನ್ನೂ ಓದಿ: ಭಾರತವನ್ನು ಹಿಂದೂ ರಾಷ್ಟ್ರ ಮಾಡುತ್ತೇವೆ: ಹರಿಯಾಣ ಶಾಸಕ ಅಸೀಮ್‌ ಪ್ರತಿಜ್ಞೆ

    NARENDRA MODI (2)

    ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ನಿಮ್ಮೆಲ್ಲರನ್ನು ನೋಡಿ ತುಂಬಾ ಸಂತೋಷವಾಗುತ್ತಿದೆ. ಯುವಸಮೂಹವೇ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿರುವುದು ಇನ್ನಷ್ಟು ಖುಷಿ ನೀಡಿದೆ ಎಂದರು.

    ಈ ಹಿಂದೆ ವಿದೇಶಿಯರ ಆಳ್ವಿಕೆಯಿಂದ ದೇಶ ತನ್ನ ಸ್ವಾಭಿಮಾನವನ್ನೇ ಕಳೆದುಕೊಂಡಿತ್ತು. ಇಂದು ಅಭಿವೃದ್ಧಿಯ ಆದಿಯಲ್ಲಿ ಮುನ್ನಡೆಯುತ್ತಿದೆ. ದೇಶದ ಸಂಪನ್ಮೂಲದಲ್ಲಿ ಎಂದಿಗೂ ಕೊರತೆಯಾಗುವುದಿಲ್ಲ ಎಂದೂ ಅವರು ಹೇಳಿದರು. ಇದನ್ನೂ ಓದಿ: ಬಾಬರಿ ಧ್ವಂಸ ವೇಳೆ ಶಿವಸೇನೆ ಎಲ್ಲಿತ್ತು ಎಂದು ನಿಮ್ಮ ನಾಯಕರನ್ನು ಕೇಳಿ: ಬಿಜೆಪಿಗೆ ರಾವತ್ ತಿರುಗೇಟು

    ಮುಂದುವರಿದು, ಯಾವುದೇ ಸುಧಾರಣೆಗೆ ರಾಜಕೀಯ ಇಚ್ಛಾಶಕ್ತಿ ಬೇಕು. ಇಂದು ಭಾರತದಲ್ಲಿ ಜೀವನ ಗುಣಮಟ್ಟ, ಶಿಕ್ಷಣದ ಗುಣಮಟ್ಟ ಸೇರಿದಂತೆ ಎಲ್ಲ ಕ್ಷೇತ್ರಗಳೂ ಮುನ್ನಡೆಯುತ್ತಿವೆ. ಅಧಿಕಾರ ಶಾಹಿಯಾಗಿದ್ದ ಕಚೇರಿಗಳು ಉತ್ತಮ ಫಲಿತಾಂಶವನ್ನು ಪಡೆಯುತ್ತಿವೆ. ಸರ್ಕಾರ ತನ್ನ ಸುಧಾರಣೆಗಳ ಮೂಲಕ ದೇಶವನ್ನು ಪರಿವರ್ತಿಸುತ್ತಿದೆ ಎಂದು ತಿಳಿಸಿದರು.

    NARENDRA MODI (3)

    ಡಿಜಿಟಲ್ ಕ್ಷೇತ್ರದ ಬಗ್ಗೆ ರಾಜಕೀಯ ಇಚ್ಚಾಶಕ್ತಿಯಿದೆ. 2021ರಲ್ಲಿ ಪ್ರಪಂಚದಾದ್ಯಂತ ನಡೆದ ನೈಜ ಪಾವತಿಗಳಲ್ಲಿ ಶೇ.40 ರಷ್ಟು ಭಾರತದಲ್ಲೇ ನಡೆದಿದೆ. ಇದು ಡಿಜಿಟಲ್ ಇಂಡಿಯಾದ ಪೂರಕ ಬೆಳವಣಿಗೆ ಎಂದರು.

    ರೈತರ ಪರಿಹಾಧನ, ವಿದ್ಯಾರ್ಥಿವೇತನ ಇತರ ಸರ್ಕಾರದ ನೆರವುಗಳು ಸೇರಿದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸುಮಾರು 10 ಸಾವಿರ ಸೇವೆಗಳು ಆನ್‌ಲೈನ್‌ನಲ್ಲೇ ಲಭ್ಯವಾಗುತ್ತಿದೆ. ಹಾಗಾಗಿ ಯಾರಿಗೂ ವಂಚನೆಯಾಗುವುದಿಲ್ಲ. ಇನ್ನು ಮುಂದೆ `ನಾನು ದೆಹಲಿಯಿಂದ 1 ರೂ. ಕಳುಹಿಸಿದರೆ, ಜನರಿಗೆ 15 ಪೈಸೆ ಮಾತ್ರ ತಲುಪುತ್ತದೆ’ ಎಂದು ಯಾವ ಪ್ರಧಾನಿಯೂ ಹೇಳಬೇಕಾಗಿಲ್ಲ’ ಎಂದು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಹೇಳಿಕೆಯನ್ನು ಉಲ್ಲೇಖಿಸಿ ಮಾತನಾಡಿದರು. ಇದನ್ನೂ ಓದಿ: ಜಹಾಂಗೀರ್‌ಪುರಿ ಹಿಂಸಾಚಾರ – ಆರೋಪಿಗಳನ್ನು ಮುಗ್ದರೆಂದ ಜಮಿಯತ್ ನಿಯೋಗ

    NARENDRA MODI (3) (1)

    ಭಾರತ ಕಳೆದ 3 ದಶಕಗಳಿಂದ ರಾಜಕೀಯ ಅಸ್ಥಿರ ವಾತಾವರಣ ಕಂಡಿತ್ತು. 30 ವರ್ಷಗಳ ನಂತರ 2014 ರಲ್ಲಿ ಪೂರ್ಣ ಬಹುಮತದ ಸರ್ಕಾರ ಸ್ಥಾಪಿತವಾದ ಮೇಲೆ 2019ರಿಂದ ಸರ್ಕಾರವನ್ನು ಬಲಪಡಿಸಲಾಗಿದೆ. ನಾವಿಂದು 75ನೇ ವರ್ಷದ ಸ್ವಾತಂತ್ರ್ಯೋತ್ಸವವನ್ನು ಆಚರಿಸುತ್ತಿದ್ದೇವೆ. ಸ್ವಾತಂತ್ರ್ಯ ಸಿಕ್ಕಿದ ಬಳಿಕ ಜನಿಸಿದ ಮೊದಲ ಪ್ರಧಾನಿ ನಾನು. 100 ವರ್ಷಗಳ ಸ್ವಾತಂತ್ರ‍್ಯವನ್ನು ಆಚರಿಸುವ ಗುರಿಯತ್ತ ವೇಗವಾಗಿ ಹೆಜ್ಜೆ ಇಡುತ್ತಿದೆ ಭಾರತ ಎಂದು ಹೇಳಿದರು.

  • ನ್ಯಾಯಾಂಗಕ್ಕೆ ಉಪದೇಶ ಮಾಡಲು ಬರಬೇಡಿ: ಕೇಂದ್ರಕ್ಕೆ ಸುಪ್ರೀಂ ತರಾಟೆ

    ನ್ಯಾಯಾಂಗಕ್ಕೆ ಉಪದೇಶ ಮಾಡಲು ಬರಬೇಡಿ: ಕೇಂದ್ರಕ್ಕೆ ಸುಪ್ರೀಂ ತರಾಟೆ

    ನವದೆಹಲಿ: ತನಗೆ ವಿಧಿಸಿರುವ ಜೈಲು ಶಿಕ್ಷೆ ವಿರುದ್ಧ ಪಾತಕಿ ಅಬು ಸಲೇಂ ಸಲ್ಲಿಸಿದ್ದ ಅರ್ಜಿ ವಿಚಾರವಾಗಿ ಕೇಂದ್ರ ಗೃಹ ಸಚಿವಾಲಯ ತಳೆದಿರುವ ನಿಲುವಿಗೆ ಸುಪ್ರೀಂ ಕೋರ್ಟ್‌ ತೀಕ್ಷ್ಣ ಪದಗಳಿಂದ ತಿರುಗೇಟು ನೀಡಿದೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್‌ ನಿರ್ಧಾರ ಕೈಗೊಳ್ಳಬಹುದು ಎಂದು ಹೇಳಿರುವ ಕೇಂದ್ರದ ವಿರುದ್ಧ ಸುಪ್ರೀಂ ಹರಿಹಾಯ್ದಿದೆ. ಇದನ್ನೂ ಓದಿ: ಬುಲ್ಡೋಜರ್‌ ಕಾರ್ಯಾಚರಣೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ: ಸುಪ್ರೀಂ ಕೋರ್ಟ್

    ನ್ಯಾಯಾಂಗಕ್ಕೆ ಉಪನ್ಯಾಸ ನೀಡಬೇಡಿ. ನೀವು ನಿರ್ಧರಿಸಬೇಕಾದ ಯಾವುದೇ ಪ್ರಕರಣದ ಬಗ್ಗೆ ನಿರ್ಧಾರ ಕೈಗೊಳ್ಳಲು ನಮಗೆ ಹೇಳಿದಾಗ ನಾವು ಅದನ್ನು ದಯೆಯಿಂದ ತೆಗೆದುಕೊಳ್ಳಲಾಗುವುದಿಲ್ಲ ಎಂದು ನ್ಯಾಯಮೂರ್ತಿ ಎಸ್‌.ಕೆ.ಕೌಲ್‌ ಅವರು ಕೇಂದ್ರ ಗೃಹ ಸಚಿವಾಲಯವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಧಾರ ಕೈಗೊಳ್ಳಲು ನಮಗೆ ಹೇಳಲು ಗೃಹ ಸಚಿವಾಲಯದ ಕಾರ್ಯದರ್ಶಿ ಯಾರು ಎಂದು ನ್ಯಾಯಮೂರ್ತಿ ಖಾರವಾಗಿ ಪ್ರಶ್ನಿಸಿದ್ದಾರೆ. ಇದನ್ನೂ ಓದಿ: 30 ಲಕ್ಷದ ಚಿನ್ನವನ್ನು ಗುದನಾಳ, ವಿಗ್‌ನಲ್ಲಿ ಬಚ್ಚಿಟ್ಟುಕೊಂಡಿದ್ದ ಕಿಲಾಡಿ ಕಳ್ಳನ ಬಂಧನ

    ಗೃಹ ಸಚಿವಾಲಯದ ಅಫಿಡವಿಟ್‌ನಲ್ಲಿರುವ ‘ಸೂಕ್ತ ಸಮಯದಲ್ಲಿ ನಾವು ನಿರ್ಧಾರ ತೆಗೆದುಕೊಳ್ಳುತ್ತೇವೆ’ ಎಂಬ ಮಾತನ್ನು ನಾವು ಒಪ್ಪುವುದಿಲ್ಲ ಎಂದು ತಿಳಿಸಿದ್ದಾರೆ. ಗೃಹ ಸಚಿವಾಲಯವು ತನ್ನ ಅಫಿಡವಿಟ್‌ನಲ್ಲಿ, ಸರ್ಕಾರವು ನಿರ್ಧಾರ ತೆಗೆದುಕೊಳ್ಳಲು ಇದು ಸೂಕ್ತ ಸಮಯವಲ್ಲ. ಸುಪ್ರೀಂ ಕೋರ್ಟ್ ನಿರ್ಧರಿಸಬಹುದು ಎಂದು ಹೇಳಿದೆ.

    ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್ ಮತ್ತು ಎಂ.ಎಂ.ಸುಂದ್ರೇಶ್ ಅವರು 1993ರ ಬಾಂಬೆ ಸ್ಫೋಟ ಪ್ರಕರಣದಲ್ಲಿ ಅಪರಾಧಿಯಾಗಿರುವ ಅಬು ಸಲೇಂ ಅರ್ಜಿ ವಿಚಾರಣೆ ನಡೆಸಿದರು.

  • ರೈತ ವಿರೋಧಿ ಕೃಷಿ ಕಾಯ್ದೆ ಹಿಂಪಡೆಯಲು ಆಗ್ರಹ

    ರೈತ ವಿರೋಧಿ ಕೃಷಿ ಕಾಯ್ದೆ ಹಿಂಪಡೆಯಲು ಆಗ್ರಹ

    ರಾಯಚೂರು: ರೈತರಿಗೆ ಮಾರಕವಾದ ಕೃಷಿ ಕಾಯ್ದೆಗಳನ್ನು ರಾಜ್ಯ ಸರ್ಕಾರ ಹಿಂಪಡೆಯಬೇಕು ಅಂತ ಆಗ್ರಹಿಸಿ ರಾಯಚೂರಿನಲ್ಲಿ ಸಂಯುಕ್ತ ಹೋರಾಟ ಕರ್ನಾಟಕ ಸಮಿತಿ ಹೋರಾಟಗಾರರು ರಾಯಚೂರು ನಗರ ಶಾಸಕ ಡಾ.ಶಿವರಾಜ್ ಪಾಟೀಲ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದಾರೆ.

    ರೈತರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಶ್ವಾಸ ದ್ರೋಹ ಮಾಡಿದ ವರ್ಷಾಚರಣೆ ಅಂಗವಾಗಿ ಸಂಯುಕ್ತ ಹೋರಾಟ ಕರ್ನಾಟಕ ಸಮಿತಿಯ ಮುಖಂಡರು ಪ್ರತಿಭಟನೆ ನಡೆಸಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ರೈತ ವಿರೋಧಿ ನೀತಿಗಳ ವಿರುದ್ಧ ಘೋಷಣೆ ಕೂಗಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರ ಕಾಯ್ದೆಗಳನ್ನು ಹಿಂಪಡೆಯುವಲ್ಲಿ ದ್ವಂದ್ವ ನಿಲುವು ಪ್ರದರ್ಶಿಸುತ್ತಿವೆ ಅಂತ ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ತಪ್ಪು ಮಾಡಿದ್ದರೆ ಶಿಕ್ಷಿಸು, ಇಲ್ಲವೇ ರಕ್ಷಿಸು – ಮನೆದೇವರ ಮೊರೆಹೋದ ಈಶ್ವರಪ್ಪ

    ರೈತರ ಬೆಳೆಗಳಿಗೆ ವೈಜ್ಞಾನಿಕ ಬೆಂಬಲ ಬೆಲೆ ನೀಡಬೇಕು. ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಅಗತ್ಯ ವಸ್ತುಗಳ ಬೆಲೆ ನಿಯಂತ್ರಿಸಬೇಕು ಮತ್ತು ಕೋಮು ಭಾವನೆ ಕೆರಳಿಸುತ್ತಿರುವ ಸಂಘಟನೆಗಳ ಮೇಲೆ ಸೂಕ್ತ ಕಾನೂನು ಕ್ರಮ ಕೈ ಗೊಳ್ಳಬೇಕೆಂದು ಮುಖ್ಯಮಂತ್ರಿಗೆ ಒತ್ತಾಯಿಸಿ ಶಾಸಕ ಡಾ.ಶಿವರಾಜ್ ಪಾಟೀಲ್‍ಗೆ ಮನವಿ ಸಲ್ಲಿಸಿದರು. ಇದನ್ನೂ ಓದಿ: ಕುಂಭಾಭಿಷೇಕಕ್ಕೆ ಮಸೀದಿಯಿಂದ ಫ್ಲೆಕ್ಸ್- ಸಮಾನತೆ ಸಾರಿದ ಕಾಫಿನಾಡ ಮುಸ್ಲಿಮರು

  • ಭಾರತದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ನಿಷೇಧ?

    ಭಾರತದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ನಿಷೇಧ?

    ನವದೆಹಲಿ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ಸಂಘಟನೆಯನ್ನು ಭಾರತದಲ್ಲಿ ನಿಷೇಧಿಸಲು ಚಿಂತನೆ ನಡೆದಿದೆ. ಕೇಂದ್ರ ಗೃಹ ಇಲಾಖೆ ಈ ಬಗ್ಗೆ ತಯಾರಿ ಆರಂಭಿಸಿದ್ದು, ಮುಂದಿನ ಒಂದು ವಾರದಲ್ಲಿ ಸಂಘಟನೆ ನಿಷೇಧವಾಗುವ ಸಾಧ್ಯತೆಗಳು ದಟ್ಟವಾಗಿದೆ ಎಂದು ಮೂಲಗಳು ಹೇಳಿವೆ.

    ಹಲವು ದೂರುಗಳ ಹಿನ್ನೆಲೆ ಕೇಂದ್ರ ಗೃಹ ಇಲಾಖೆ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಈ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ. ಪಿಎಫ್‌ಐ ದೇಶದಲ್ಲಿ ಶಾಂತಿ ಕದಡುವುದು, ವೈಷಮ್ಯ ಭಿತ್ತುವುದು, ಭಯೋತ್ಪಾದನೆಗೆ ಬೆಂಬಲ ಹಾಗೂ ಕೋಮು ಪ್ರಚೋದನೆ ನೀಡುವ ಗಂಭೀರ ಆರೋಪಗಳನ್ನು ಎದುರಿಸುತ್ತಿದೆ. ಇದನ್ನೂ ಓದಿ: ಪ್ರಧಾನಿ ಭೇಟಿ ಮಾಡಿ ಸಂಭ್ರಮಿಸಿದ ಗ್ರ್ಯಾಮಿ ಅವಾರ್ಡ್ ವಿಜೇತ ರಿಕಿ ಕ್ರೇಜ್

    ಈ ಸಂಬಂಧ ಅಜಯ್ ಭಲ್ಲಾ ವರದಿ ಪಡೆಯುತ್ತಿದ್ದಾರೆ. ರಾಷ್ಟ್ರೀಯ ತನಿಖಾ ದಳದಿಂದಲೂ ಮಾಹಿತಿ ಕೋರಲಾಗಿದೆ. ಕೇರಳದಲ್ಲಿ ಭಯೋತ್ಪಾದನಾ ಚಟುವಟಿಕೆಗಳಿಗೆ ಪ್ರೇರಣೆ ಹಾಗೂ ಬೆಂಗಳೂರಿನಲ್ಲಿ ಹಲವು ಗಲಭೆಗಳ ಹಿಂದೆ ಪಿಐಎಫ್ ಪಾತ್ರ ಇರುವ ಬಗ್ಗೆ ರಾಜ್ಯ ಸರ್ಕಾರಗಳಿಂದ ಗೃಹ ಇಲಾಖೆ ಮಾಹಿತಿ ತರಿಸಿಕೊಂಡಿದೆ.

    ಈ ಎಲ್ಲ ವರದಿಗಳನ್ನು ಆಧರಿಸಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯನ್ನು ಭಾರತದಲ್ಲಿ ಬ್ಯಾನ್ ಮಾಡಲು ತಯಾರಿ ನಡೆಯುತ್ತಿದೆ. ಈವರೆಗೂ ಭಾರತದಲ್ಲಿ ಭಯೋತ್ಪಾದನೆ ಚಟುವಟಿಕೆಗಳಿಗೆ ಪ್ರೇರಣೆ ನೀಡುವ 42 ಮತ್ತು ನಿಯಮಗಳನ್ನು ಉಲ್ಲಂಘಿಸಿ ಕಾನೂನು ಸುವ್ಯವಸ್ಥಿತೆ ಹದಗೆಡಿಸುವ 11 ಸಂಘಟನೆಗಳನ್ನು ಗೃಹ ಇಲಾಖೆ ನಿಷೇಧಿಸಿದೆ‌. ಇದನ್ನೂ ಓದಿ: RSS ಆಸ್ಪತ್ರೆ ಹಿಂದೂಗಳಿಗೆ ಮಾತ್ರವೇ ಎಂಬ ರತನ್ ಟಾಟಾ ಪ್ರಶ್ನೆಗೆ ಗಡ್ಕರಿ ಉತ್ತರ ಹೀಗಿತ್ತು

  • ರಾಮನವಮಿಯಂದು ಮಾಂಸಾಹಾರ ಪೂರೈಸಿದ್ದಕ್ಕೆ ವಿದ್ಯಾರ್ಥಿಗಳ ಗಲಾಟೆ: JNUನಿಂದ ವರದಿ ಕೇಳಿದ ಕೇಂದ್ರ

    ರಾಮನವಮಿಯಂದು ಮಾಂಸಾಹಾರ ಪೂರೈಸಿದ್ದಕ್ಕೆ ವಿದ್ಯಾರ್ಥಿಗಳ ಗಲಾಟೆ: JNUನಿಂದ ವರದಿ ಕೇಳಿದ ಕೇಂದ್ರ

    ನವದೆಹಲಿ: ರಾಮನವಮಿ ಕಾರ್ಯಕ್ರಮ ಸಂದರ್ಭದಲ್ಲಿ ವಿದ್ಯಾರ್ಥಿ ಗುಂಪುಗಳ ನಡುವೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ವರದಿ ನೀಡುವಂತೆ ಜವಾಹರಲಾಲ್‌ ನೆಹರೂ ವಿಶ್ವವಿದ್ಯಾಲಯ (JNU)ಕ್ಕೆ ಕೇಂದ್ರ ಶಿಕ್ಷಣ ಸಚಿವಾಲಯ ಸೂಚನೆ ನೀಡಿದೆ.

    ರಾಮನವಮಿ ಸಂದರ್ಭದಲ್ಲಿ ವಿದ್ಯಾರ್ಥಿ ಗುಂಪುಗಳ ನಡುವಿನ ಘರ್ಷಣೆ ಮತ್ತು ಕ್ಯಾಂಪಸ್‌ನಲ್ಲಿನ ಅಶಾಂತಿಯ ಬಗ್ಗೆ ಔಪಚಾರಿಕ ವರದಿಯನ್ನು ಕೇಳಲಾಗಿದೆ ಎಂದು ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ದೆಹಲಿ ಜೆಎನ್‍ಯುನಲ್ಲಿ ಮತ್ತೆ ರಣಾಂಗಣ – ಮಾಂಸಾಹಾರ ವಿಚಾರಕ್ಕೆ ವಿದ್ಯಾರ್ಥಿಗಳ ಮಾರಾಮಾರಿ

    ರಾಮನವಮಿಯಂದು ವಿಶ್ವವಿದ್ಯಾಲಯದ ಹಾಸ್ಟೆಲ್‌ನಲ್ಲಿ ಮಾಂಸಾಹಾರ ಪೂರೈಕೆಗೆ ಸಂಬಂಧಿಸಿದಂತೆ ಎರಡು ಗುಂಪುಗಳ ವಿದ್ಯಾರ್ಥಿಗಳ ನಡುವೆ ಭಾನುವಾರ ವಿಶ್ವವಿದ್ಯಾಲಯದ ಕಾವೇರಿ ಹಾಸ್ಟೆಲ್‌ನಲ್ಲಿ ಘರ್ಷಣೆ ನಡೆದಿತ್ತು. ಹಿಂಸಾಚಾರದಲ್ಲಿ 20 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

    ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯ (ಜೆಎನ್‌ಯು) ಆಡಳಿತವು, ವಿದ್ಯಾರ್ಥಿಗಳು ಕ್ಯಾಂಪಸ್‌ನಲ್ಲಿ ಯಾವುದೇ ರೀತಿಯ ಹಿಂಸಾಚಾರದಲ್ಲಿ ತೊಡಗಿರುವುದು ಕಂಡುಬಂದರೆ ಶಿಸ್ತು ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದೆ. ಇದನ್ನೂ ಓದಿ: ರಾಮನವಮಿ ವೇಳೆ ಹಿಂಸಾಚಾರ ತಡೆಗಟ್ಟುವಲ್ಲಿ ಕರ್ನಾಟಕ ಸರ್ಕಾರ ಸೋತಿದೆ: ಓವೈಸಿ

    ಎಬಿವಿಪಿಯ ಸದಸ್ಯರ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸ್ಟೂಡೆಂಟ್‌ ಫೆಡರೇಷನ್‌ ಆಫ್‌ ಇಂಡಿಯಾ (ಎಸ್‌ಎಫ್‌ಐ), ಡೆಮಾಕ್ರಟಿಕ್‌ ಸ್ಟೂಡೆಂಟ್ಸ್‌ ಫೆಡರೇಷನ್‌ (ಡಿಎಸ್‌ಎಫ್‌) ಮತ್ತು ಆಲ್‌ ಇಂಡಿಯಾ ಸ್ಟೂಡೆಂಟ್ಸ್‌ ಅಸೋಸಿಯೇಷನ್‌ (ಎಐಎಸ್‌ಎ) ಸದಸ್ಯರು ಎಬಿವಿಪಿ ವಿರುದ್ಧ ದೂರು ನೀಡಿದ್ದಾರೆ ಎಂದು ಪೊಲೀಸ್‌ ಉಪ ಆಯುಕ್ತ ಮನೋಜ್‌ ಸಿ. ತಿಳಿಸಿದ್ದಾರೆ. ದೂರು ನೀಡುವುದಾಗಿ ಎಬಿವಿಪಿ ಸದಸ್ಯರೂ ಹೇಳಿದ್ದಾರೆ. ಆ ದೂರಿನ ಬಳಿಕ ಅಗತ್ಯ ಕಾನೂನು ಕ್ರಮ ಕೈಗೊಳ್ಳುವುದಾಗಿ ಅವರು ಹೇಳಿದ್ದಾರೆ.