Tag: Central Government

  • ರಾಜ್ಯಕ್ಕೆ ಕಡಿಮೆ ದರದಲ್ಲಿ ಅಕ್ಕಿ ಕೊಡಲು ಕೇಂದ್ರ ಸರ್ಕಾರ ಸಿದ್ಧ – ಜೋಶಿ

    ರಾಜ್ಯಕ್ಕೆ ಕಡಿಮೆ ದರದಲ್ಲಿ ಅಕ್ಕಿ ಕೊಡಲು ಕೇಂದ್ರ ಸರ್ಕಾರ ಸಿದ್ಧ – ಜೋಶಿ

    – ಸಿದ್ದರಾಮಯ್ಯಗೆ ಬಡವರ ಬಗ್ಗೆ ಕಾಳಜಿ ಇದ್ರೆ ಅಕ್ಕಿ ಖರೀದಿಸಲಿ ಎಂದ ಸಚಿವ

    ಹುಬ್ಬಳ್ಳಿ: 10 ಕೆಜಿ ಅಕ್ಕಿ (Rice) ರಾಜ್ಯ ಸರ್ಕಾರ‌‌ ನೀಡುತ್ತಿಲ್ಲ. ದರ ಕಡಿಮೆ ಮಾಡಿ ಅಕ್ಕಿ ನೀಡಲು ಕೇಂದ್ರ ಸರ್ಕಾರ ಸಿದ್ಧವಿದೆ. ಆದ್ರೆ ರಾಜ್ಯ ಸರ್ಕಾರದಿಂದ ಯಾವುದೇ ಆರ್ಡರ್ ಬಂದಿಲ್ಲ. ಎಫ್‌ಸಿಐದಲ್ಲಿ ಅಕ್ಕಿ ಲಭ್ಯವಿದೆ, ರಾಜ್ಯ ಸರ್ಕಾರ ಬೇಕಾದ್ರೆ ಕಡಿಮೆ ದರದಲ್ಲಿ ಅಕ್ಕಿ ಕೊಂಡುಕೊಳ್ಳಬಹದು ಅಂತ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಹೇಳಿದ್ದಾರೆ.

    ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಕಡಿಮೆ ದರದಲ್ಲಿ ಅಕ್ಕಿ ನೀಡಿದ್ರೆ ರಾಜ್ಯ ಸರ್ಕಾರಕ್ಕೆ ನೂರಾರು ಕೋಟಿ ಹಣ ಉಳಿಯುತ್ತದೆ. ಸಿಎಂ ಸಿದ್ದರಾಮಯ್ಯ ಅವರಿಗೆ ಬಡವರ ಬಗ್ಗೆ ಕಾಳಜಿ ಇದ್ರೆ ನಮ್ಮಿಂದ ಕಡಿಮೆ ದರದಲ್ಲಿ ಅಕ್ಕಿ ತೆಗೆದುಕೊಳ್ಳಬಹದು. ಈ ಹಿಂದೆ ರಾಜ್ಯ ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಎರಡು ಬಾರಿ ಅಕ್ಕಿಗಾಗಿ ಕೇಂದ್ರ ಬಳಿ ಮನವಿ ಮಾಡಿದ್ದಾರೆ. ಹೀಗಾಗಿ ಕಡಿಮೆ ದರದಲ್ಲಿ ಅಕ್ಕಿ ಕೊಡಲು ಕೇಂದ್ರ ಮುಂದಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಮಹಾ ಕುಂಭಮೇಳದಲ್ಲಿ ಅಗ್ನಿ ಅವಘಡ – 18 ಟೆಂಟ್‌ಗಳು ಭಸ್ಮ, ಪರಿಸ್ಥಿತಿ ಅವಲೋಕಿಸಿದ ಮೋದಿ

    ಇನ್ನೂ ಸ್ವಾಮಿತ್ವ ಯೋಜನೆ ಕುರಿತು ಮಾತನಾಡಿದ ಸಚಿವರು, ಇದು 100% ಭಾರತ ಸರ್ಕಾರದ ಯೋಜನೆ. ಆದರೆ ಈ ಯೋಜನೆಗೆ ರಾಜ್ಯ ಸರ್ಕಾರದ ಮತ್ತು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರು ಚಾಲನೆ ಕೊಟ್ಟಿದ್ದಾರೆ. ಇದು ಪ್ರಧಾನಿಗಳ ಬಹು ಆಕಾಂಕ್ಷೆಯ ಯೋಜನೆ. ಆರಂಭದಲ್ಲಿ ರಾಜ್ಯದಲ್ಲಿ 30,715 ಹಳ್ಳಿಗಳ ಸರ್ವೆ ಕಾರ್ಯ ಈ ಯೋಜನೆಯಡಿ ಗುರಿ ಹೊಂದಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಕುಮಾರಸ್ವಾಮಿ ರಾಜ್ಯದ ಹಿತ ನೋಡಿ‌ ಮಾತನಾಡಲಿ – ಸಚಿವ ಎಂ.ಬಿ ಪಾಟೀಲ್

    ಕೇಂದ್ರ ಸರ್ಕಾರದಿಂದ 560 ಕೋಟಿ ರೂ. ಬಿಡುಗಡೆ ಮಾಡಿದ್ದೇವೆ. ದೇಶದಲ್ಲಿ 3 ಲಕ್ಷ ಹಳ್ಳಿಗಳ ಸರ್ವೆ ಕಾರ್ಯ ನಡೆದಿದೆ. ಗ್ರಾಮೀಣ ಭಾಗದಲ್ಲಿ ವ್ಯಾಜ್ಯ, ಗಡಿ ಸಮಸ್ಯೆ, ಕಡಿಮೆ ಆಗಿದೆ. ಆದರೆ ನಿನ್ನೆ ಉದ್ಘಾಟನೆ ಮಾಡಿದ ಆಹ್ವಾನ ಪತ್ರದಲ್ಲಿ ಪ್ರಧಾನಿ ಮಂತ್ರಿ ಫೋಟೋ ಇಲ್ಲ. ಇದು ಕರ್ನಾಟಕ ಸರ್ಕಾರದ ಚಿಲ್ಲರೆತನ. ಈ ಚಿಲ್ಲರೆ ರಾಜಕೀಯ ಬಿಡಬೇಕು. ಈ ಯೋಜನೆಗೆ ಡ್ರೋನ್ ಸರ್ವೆ ಮಾಡಿಸಿತ್ತಿರೋದು ಕೇಂದ್ರ ಸರ್ಕಾರ, ಹಣ ನೀಡುತ್ತಿರುವುದು ಕೇಂದ್ರ ಸರ್ಕಾರ, ಇದನ್ನ ಮರೆಮಾಚಿ ರಾಜ್ಯ ಸರ್ಕಾರ ಚಿಲ್ಲರೆ ತನ ತೋರಿಸಿದೆ ಅಂತ ಜೋಶಿ ವಾಗ್ದಾಳಿ ನಡೆಸಿದರು.

  • ಕೇಂದ್ರ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌ – 8ನೇ ವೇತನ ಆಯೋಗ ರಚನೆಗೆ ಸಂಪುಟ ಅನುಮೋದನೆ

    ಕೇಂದ್ರ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌ – 8ನೇ ವೇತನ ಆಯೋಗ ರಚನೆಗೆ ಸಂಪುಟ ಅನುಮೋದನೆ

    ನವದೆಹಲಿ: ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ಸಿಕ್ಕಿದೆ. ನೌಕರರ ವೇತನ ಮತ್ತು ಪಿಂಚಣಿದಾರರ ಭತ್ಯೆಗಳನ್ನು ಪರಿಷ್ಕರಿಸಲು 8 ನೇ ವೇತನ ಆಯೋಗವನ್ನು (8th Pay Commission) ರಚಿಸಲು ಕೇಂದ್ರ ಸಚಿವ ಸಂಪುಟ ಗುರುವಾರ ಅನುಮೋದನೆ ನೀಡಿದೆ.

    ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ 8 ನೇ ವೇತನ ಆಯೋಗವನ್ನು ರಚಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ತಿಳಿಸಿದ್ದಾರೆ.

    ಆಯೋಗಕ್ಕೆ ಶೀಘ್ರದಲ್ಲೇ ಅಧ್ಯಕ್ಷರು ಮತ್ತು ಇಬ್ಬರು ಸದಸ್ಯರನ್ನು ನೇಮಕ ಮಾಡಲಾಗುವುದು ಎಂದು ಸಚಿವರು ಮಾಹಿತಿ ನೀಡಿದ್ದಾರೆ.

    ಕೇಂದ್ರ ಸರ್ಕಾರವು ಪ್ರತಿ 10 ವರ್ಷಕ್ಕೊಮ್ಮೆ ತನ್ನ ಉದ್ಯೋಗಿಗಳ ವೇತನವನ್ನು ಪರಿಷ್ಕರಿಸಲು ವೇತನ ಆಯೋಗವನ್ನು ರಚಿಸುತ್ತದೆ. ವೇತನ ಪರಿಷ್ಕರಿಸುವುದರ ಜೊತೆಗೆ, ಪ್ರತಿ ವೇತನ ಆಯೋಗವು ಒಂದು ಉಲ್ಲೇಖ ಅವಧಿಯನ್ನು (ToR) ಹೊಂದಿದೆ. ವೇತನ ಆಯೋಗಗಳು ಪಿಂಚಣಿ ಪಾವತಿಗಳನ್ನು ಸಹ ನಿರ್ಧರಿಸುತ್ತವೆ.

    7ನೇ ವೇತನ ಆಯೋಗವನ್ನು 2016 ರಲ್ಲಿ ರಚಿಸಲಾಗಿತ್ತು. ಅದರ ಅವಧಿ 2026 ರಲ್ಲಿ ಕೊನೆಗೊಳ್ಳಲಿದೆ.

  • ಬಾಣಂತಿಯರ ಸಾವು ಪ್ರಕರಣ – ಕ್ರಮ ಕೈಗೊಳ್ಳಲು ಕೇಂದ್ರಕ್ಕೆ ಪತ್ರ ಬರೆದ ಸಂಸದ ಸುಧಾಕರ್‌

    ಬಾಣಂತಿಯರ ಸಾವು ಪ್ರಕರಣ – ಕ್ರಮ ಕೈಗೊಳ್ಳಲು ಕೇಂದ್ರಕ್ಕೆ ಪತ್ರ ಬರೆದ ಸಂಸದ ಸುಧಾಕರ್‌

    – ಸಾವಿಗೆ ಕಾರಣ ಪತ್ತೆ ಮಾಡಿ, ಪರಿಹಾರ ಸೂಚಿಸುವಂತೆ ಮನವಿ

    ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಹೆಚ್ಚುತ್ತಿರುವ ಬಾಣಂತಿಯರ ಸಾವಿಗೆ (Maternal Death) ನ್ಯಾಯ ಕೊಡಿಸಲು, ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಬೇಕು ಹಾಗೂ ಕೇಂದ್ರ ಸರ್ಕಾರದಿಂದ ಸಂಶೋಧನಾ ತಂಡವನ್ನು ಕಳುಹಿಸಿ ಪರಿಶೀಲಿಸಬೇಕೆಂದು ಸಂಸದ ಡಾ.ಕೆ ಸುಧಾಕರ್‌ (K Sudhakar) ಅವರು ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ (JP Nadda) ಅವರಿಗೆ ಮನವಿ ಮಾಡಿದ್ದಾರೆ.

    ಈ ಕುರಿತು ಅವರು ಸಚಿವರಿಗೆ ಪತ್ರ ಬರೆದಿರುವ ಸುಧಾಕರ್‌, ಕಳೆದ ಕೆಲವು ತಿಂಗಳಿಂದ ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಬಾಣಂತಿಯರು ಮೃತಪಡುವ ಘಟನೆ ವರದಿಯಾಗುತ್ತಿದೆ. 2024ರ ನವೆಂಬರ್‌ವರೆಗೆ 348 ತಾಯಂದಿರು ಮೃತಪಟ್ಟಿದ್ದಾರೆ. ಆಗಸ್ಟ್‌ನಿಂದ ನವೆಂಬರ್‌ವರೆಗೆ ಕೇವಲ 4 ತಿಂಗಳಲ್ಲಿ 217 ಪ್ರಕರಣ ವರದಿಯಾಗಿದೆ. ಈ 217 ಪ್ರಕರಣಗಳಲ್ಲಿ 179 ಪ್ರಕರಣಗಳು ಸರ್ಕಾರಿ ಆಸ್ಪತ್ರೆಗಳಿಗೆ ಸಂಬಂಧಿಸಿದ್ದಾಗಿದೆ. ಹೆಚ್ಚಿನವು ಪಿಪಿಎಚ್‌ ಹಾಗೂ ಎಎಫ್‌ಇ, ಅನೀಮಿಯ ಹಾಗೂ ನಿರ್ವಹಣೆಯಲ್ಲಿ ಲೋಪಕ್ಕೆ ಸಂಬಂಧಿಸಿದೆ. ಆಂಟಿಬಯೋಟಿಕ್‌ ಕೊರತೆ, ತರಬೇತಿ ಹೊಂದಿರುವ ಸಿಬ್ಬಂದಿ ಕೊರತೆ ಮೊದಲಾದವು ಕೂಡ ಇದಕ್ಕೆ ಕಾರಣ ಎಂದು ಅವರು ಪತ್ರದಲ್ಲಿ ವಿವರಿಸಿದ್ದಾರೆ. ಇದನ್ನೂ ಓದಿ: ಕೇಂದ್ರ ಬಜೆಟ್; ಆರ್ಥಿಕ ಸುಧಾರಣೆಗೆ ಐದು ವಲಯಗಳಲ್ಲಿ ಬದಲಾವಣೆ ನಿರೀಕ್ಷೆ

    ಇದರಲ್ಲಿ ಲಿಂಜರ್ಸ್‌ ಲ್ಯಾಕ್ಟೇಟ್‌ ದ್ರಾವಣದಲ್ಲಿ ದೋಷ ಕೂಡ ಕಾರಣ ಎನ್ನಲಾಗುತ್ತಿದೆ. ಈ ಕುರಿತು ಸಮಗ್ರವಾದ ಪರಿಶೀಲನೆ ನಡೆಯುವ ಅಗತ್ಯವಿದೆ. ಮೊದಲಿಗೆ, ತಾಯಂದಿರ ಮರಣಕ್ಕೆ ಕಾರಣ ಪತ್ತೆ ಮಾಡಲು ತುರ್ತಾಗಿ ಕಾರ್ಯಯೋಜನೆ ರೂಪಿಸಬೇಕಿದೆ. ಜೊತೆಗೆ ಕೇಂದ್ರ ಸರ್ಕಾರದಿಂದ ಸಂಶೋಧನಾ ತಂಡವನ್ನು ಕಳುಹಿಸಿ, ಕಾರಣ ಪತ್ತೆ ಜೊತೆಗೆ, ಪರಿಹಾರ ಶಿಫಾರಸು ಮಾಡಬೇಕಿದೆ. ಗರ್ಭಿಣಿಯರ ಆರೈಕೆ ಹಾಗೂ ಹೆರಿಗೆ ಸಮಯದಲ್ಲಿ ಉತ್ತಮ ಸೇವೆ ನೀಡಲು ಸರ್ಕಾರಿ ಆಸ್ಪತ್ರೆ ಸಿಬ್ಬಂದಿಗೆ ಸೂಕ್ತ ತರಬೇತಿ ನೀಡಬೇಕಿದೆ. ಕಬ್ಬಿಣಾಂಶದ ಆಹಾರ ಸೇವನೆ, ತುರ್ತು ಆರೈಕೆ, ಪ್ರತಿ ದಿನ ಆರೋಗ್ಯ ತಪಾಸಣೆ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಗರ್ಭಿಣಿಯರಿಗೆ ಮಾಹಿತಿ ನೀಡಿ ಅರಿವು ಮೂಡಿಸಬೇಕು ಎಂದು ಅವರು ಪತ್ರದಲ್ಲಿ ಕೋರಿದ್ದಾರೆ. ಇದನ್ನೂ ಓದಿ: ಕ್ಯಾಲಿಫೋರ್ನಿಯಾದಲ್ಲಿ ಕಟ್ಟಡಕ್ಕೆ ಡಿಕ್ಕಿಯಾಗಿ ವಿಮಾನ ಪತನ; 2 ಸಾವು

    ದೇಶದ ಭವಿಷ್ಯದ ದೃಷ್ಟಿಯಿಂದ ನವಜಾತ ಶಿಶು ಹಾಗೂ ತಾಯಂದಿರ ಜೀವ ಕಾಪಾಡುವುದು ಬಹಳ ಅಗತ್ಯ. ಆದ್ದರಿಂದ ತಾವು ಈ ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಳ್ಳುವ ಮೂಲಕ ಕರ್ನಾಟಕದಲ್ಲಿ ಹಾಗೂ ಭಾರತದ ಯಾವುದೇ ಭಾಗದಲ್ಲಿ ತಾಯಂದಿರು ಮೃತಪಡದಂತೆ ಎಚ್ಚರ ವಹಿಸಲು ಸಾಧ್ಯವಾಗುತ್ತದೆ. ಈ ಎಲ್ಲ ಕಾರ್ಯಗಳಿಗೆ ನಾನು ಸಂಪೂರ್ಣ ಸಹಕಾರ ಹಾಗೂ ಬೆಂಬಲ ನೀಡುತ್ತೇನೆ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: BBK 11: 2ನೇ ಮಗುವಿನ ಬಗ್ಗೆ ಮಾತನಾಡಿದ ಧನರಾಜ್‌- ನಾಚಿ ನೀರಾದ ಪತ್ನಿ

  • ಅದಾನಿಯನ್ನು ಬಂಧಿಸಬೇಕು, ಸಂಸತ್ತಿನಲ್ಲಿ ಹೋರಾಡುತ್ತೇವೆ: ಮಲ್ಲಿಕಾರ್ಜುನ ಖರ್ಗೆ

    ಅದಾನಿಯನ್ನು ಬಂಧಿಸಬೇಕು, ಸಂಸತ್ತಿನಲ್ಲಿ ಹೋರಾಡುತ್ತೇವೆ: ಮಲ್ಲಿಕಾರ್ಜುನ ಖರ್ಗೆ

    ನವದೆಹಲಿ: ಕೇಂದ್ರ ಸರ್ಕಾರ ಅದಾನಿಗೆ ಸಂಪೂರ್ಣ ಬೆಂಬಲ ಮಾಡುತ್ತಿದೆ ಎಂದು ಎಐಸಿಸಿ (AICC) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಆರೋಪಿಸಿದ್ದಾರೆ.

    ಅದಾನಿ ವಿರುದ್ಧ ಯುಎಸ್ ಕೋರ್ಟ್‌ನಿಂದ ವಾರೆಂಟ್ ಜಾರಿ ವಿಚಾರವಾಗಿ ಮಾತನಾಡಿದ ಅವರು, ಗೌತಮ್ ಅದಾನಿಯನ್ನು (Gautham Adani) ಕೂಡಲೇ ಕೇಂದ್ರ ಸರ್ಕಾರ ಬಂಧನ ಮಾಡಬೇಕು. ಆದರೆ ಕೇಂದ್ರ ಸರ್ಕಾರ, ಪ್ರಧಾನಿ ಮೋದಿ, ಅಮಿತ್ ಶಾ ಅದಾನಿಯನ್ನ ರಕ್ಷಣೆ ಮಾಡುತ್ತಿದ್ದಾರೆ. ಈ ವಿಚಾರವನ್ನ ನಾವು ಸಂಸತ್ ಅಧಿವೇಶನದಲ್ಲಿ ಚರ್ಚೆ ಮಾಡುತ್ತೇವೆ. ಅದಾನಿ ಕಾನೂನು ಬಾಹಿರ ಕೆಲಸ ಮಾಡುತ್ತಿದ್ದಾರೆ. ಭ್ರಷ್ಟಾಚಾರ ಕೇಸ್‌ಲ್ಲಿ ಭಾಗಿಯಾಗಿದ್ದಾರೆ ಎಂದು ಅನೇಕ ವರ್ಷಗಳಿಂದ ಹೇಳುತ್ತಿದ್ದೇವೆ. ಇಷ್ಟೆಲ್ಲಾ ಇದ್ದರೂ ಮೋದಿ ಸ್ವಲ್ವವೂ ಬಗ್ಗೆ ಮಾತನಾಡಲ್ಲ. ಅಮಿತ್ ಶಾ ಕಡೆ ಇಡಿ ಇದೆ. ಸಿಬಿಐ ಇದೆ. ಯಾಕೆ ತನಿಖೆ ಮಾಡುತ್ತಿಲ್ಲ ಎಂದು ಗುಡುಗಿದರು.ಇದನ್ನೂ ಓದಿ: IND vs Aus Test| ವಿವಾದಾತ್ಮಕ ತೀರ್ಪಿಗೆ ರಾಹುಲ್‌ ಔಟ್‌

    ಹಿಂಡೆನ್‌ಬರ್ಗ್ ಸಂಶೋಧನಾ ವರದಿ ಪ್ರಕಟಿಸಿದಾಗ ಇದೆಲ್ಲ ಸುಳ್ಳು ಅಂದರು. ಈಗ ವಿದೇಶದಲ್ಲಿ ಅಕ್ರಮದ ಬಗ್ಗೆ ಚರ್ಚೆ ಆಗುತ್ತಿದೆ. ನಮ್ಮ ದೇಶದ ಆಸ್ತಿಯನ್ನ ಅದಾನಿಗೆ ಕೊಡುತ್ತಿದ್ದಾರೆ. ಏರ್ಪೋರ್ಟ್, ಪೋರ್ಟ್, ಜಮೀನು ಸೇರಿ ಎಲ್ಲಾ ಅದಾನಿಗೆ ಕೊಡುತ್ತಿದ್ದಾರೆ. ಅವನು ನ್ಯಾಯವಾಗಿ ಮಾಡಿಕೊಂಡರೆ ಪರವಾಗಿಲ್ಲ. ಒಬ್ಬನಿಗೆ ಶ್ರೀಮಂತ ಮಾಡಲು ಹೀಗೆ ಅಕ್ರಮ ಮಾಡುತ್ತಿದ್ದಾರೆ. ಇದಕ್ಕಾಗಿ ಅದಾನಿ ಕೇಂದ್ರ ಸರ್ಕಾರಕ್ಕೆ, ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ. ನಾವು ಯಾವತ್ತು ಟಾಟಾ, ಬಿರ್ಲಾ ಹೆಸರು ಹೇಳಿಲ್ಲ. ದಿಢೀರ್ ಕೋಟ್ಯಧಿಪತಿ ಆಗಬೇಕು, ಮಿಲಿಯನೇರ್, ಬಿಲಿಯನೇರ್ ಆಗಲು ಹೊರಟಿದ್ದಾರೆ. ಅಕ್ರಮದ ಬಗ್ಗೆ ತನಿಖೆ ಆಗಬೇಕು. ಅದಾನಿ ಬಂಧನ ಮಾಡಬೇಕು ಎಂದು ಆಗ್ರಹಿಸುತ್ತೇವೆ ಎಂದರು.

    ಚುನಾವಣಾ ಫಲಿತಾಂಶ ವಿಚಾರವಾಗಿ ಮಾತನಾಡಿದ ಅವರು, ಮಹಾರಾಷ್ಟ್ರ, ಜಾರ್ಖಂಡ್ ಎರಡು ರಾಜ್ಯಗಳಲ್ಲಿ ಇಂಡಿಯಾ ಕೂಟ ಗೆಲ್ಲಲಿದೆ ಎರಡು ರಾಜ್ಯದಲ್ಲಿಯೂ ನಮಗೆ ನಿರೀಕ್ಷೆ ಇದೆ. ನಾವು ಉತ್ತಮವಾಗಿ ಕೆಲಸ ಮಾಡಿದ್ದೇವೆ. ನಾಳೆ ಫಲಿತಾಂಶದಲ್ಲಿ ನೋಡೋಣ. ಈಗ ನಾವು ಏನೇ ಹೇಳಿದರೂ ಅದೆಲ್ಲಾ ಊಹಾಪೋಹಗಳು ಆಗುತ್ತವೆ. ನಾನು ಅನೇಕ ಕಡೆ ಸಭೆ ಮಾಡಿದ್ದೇವೆ ಹಾಗೂ ಉತ್ತಮ ಕೆಲಸ ಮಾಡಿದ್ದೇವೆ. ಎರಡು ರಾಜ್ಯದಲ್ಲಿ ನಾವು ಗೆಲ್ಲುತ್ತೇವೆ ಎಂದು ಭರವಸೆ ಇಟ್ಟುಕೊಂಡಿದ್ದೇವೆ. ಕರ್ನಾಟಕದ್ದು ನಿಮಗೆಲ್ಲ ಗೊತ್ತಿದೆ ಬಿಡಿ ಎಂದು ಹೇಳಿದರು.ಇದನ್ನೂ ಓದಿ: BBK 11: ಕೊನೆಗೂ ಅನಾವರಣ ಆಯ್ತು ಶೋಭಾ ಶೆಟ್ಟಿ ಅಸಲಿ ಮುಖ

  • ದೆಹಲಿಯಲ್ಲಿ ವಿಷವಾಗುತ್ತಿದೆ ಉಸಿರಾಡುವ ಗಾಳಿ – 1,500ರ ಗಡಿ ದಾಟಿದ AQI

    ದೆಹಲಿಯಲ್ಲಿ ವಿಷವಾಗುತ್ತಿದೆ ಉಸಿರಾಡುವ ಗಾಳಿ – 1,500ರ ಗಡಿ ದಾಟಿದ AQI

    – ವಿಮಾನಗಳು, ರೈಲು ಪ್ರಯಾಣದಲ್ಲಿ ಅಸ್ತವ್ಯಸ್ತ

    ನವದೆಹಲಿ: ಪಂಜಾಬ್, ಹರಿಯಾಣ, ಮಧ್ಯಪ್ರದೇಶ, ಉತ್ತರ ಪ್ರದೇಶ ಮತ್ತು ರಾಜಸ್ಥಾನದಾದ್ಯಂತ ಹುಲ್ಲು ಸುಡುವಿಕೆಯಿಂದೆ ದೆಹಲಿಯಲ್ಲಿ ಉಂಟಾದ ವಾಯು ಮಾಲಿನ್ಯ (Delhi Air Pollution) ಅಪಾಯದ ಮಟ್ಟ ಮೀರಿದೆ. ಸತತ 6ನೇ ದಿನವೂ ವಾಯುಮಾಲಿನ್ಯ ಮುಂದುವರಿದಿದ್ದು ಉಸಿರಾಡುವ ಗಾಳಿ ವಿಷವಾಗುತ್ತಿದೆ. ಸೋಮವಾರ ದೆಹಲಿಯ ವಿವಿಧ ಪ್ರದೇಶಗಳಲ್ಲಿ ಗಾಳಿಯ ಗುಣಮಟ್ಟ ಸೂಚ್ಯಂಕ (AQI) 1,500ರ ಗಡಿ ದಾಟಿದೆ.

    ಸೋಮವಾರ ಬೆಳಗ್ಗೆ ದೆಹಲಿಯ ಮುಂಡ್ಕಾದಲ್ಲಿ ಎಕ್ಯೂಐ 1591 ಎಕ್ಯೂಐ, ದ್ವಾರಕ-8ನೇ ಸೆಕ್ಟಾರ್‌ನಲ್ಲಿ ಎಕ್ಯೂಐ 1,497 ಹಾಗೂ ರೋಹಿಣಿ ಸೆಕ್ಟಾರ್‌ನಲ್ಲಿ 1,427 ಎಕ್ಯೂಐ ದಾಖಲಾಗಿದೆ. ಗೋಚರತೆ ಪ್ರಮಾಣ ಇನ್ನಿಲ್ಲದಂತೆ ಕುಸಿದಿದೆ. ರಸ್ತೆ, ರೈಲು, ವೈಮಾನಿಕ ಸೇವೆಗಳಲ್ಲಿ ತೀವ್ರ ವ್ಯತ್ಯಯವಾಗಿದೆ. ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಮತ್ತೊಂದೆಡೆ ಹೆಚ್ಚಿದ ವಾಯು ಮಾಲಿನ್ಯದಿಂದ ದೆಹಲಿ ಜನರಲ್ಲಿ ಉಸಿರಾಟ ಸಮಸ್ಯೆ ತೀವ್ರವಾಗಿದೆ. ಇದನ್ನೂ ಓದಿ: ದೆಹಲಿ ಮಾಲಿನ್ಯಕ್ಕೆ ಕೇಂದ್ರ ಸರ್ಕಾರವೇ ಹೊಣೆ – ರಾಜಕೀಯ ಬಿಟ್ಟು ಕ್ರಮ ತೆಗೆದುಕೊಳ್ಳಲಿ: ಅತಿಶಿ

    ಆಸ್ಪತ್ರೆಗಳಲ್ಲಿ ರೋಗಿಗಳ ಸಂಖ್ಯೆ ಹೆಚ್ಚಿದೆ. ಅಪಾಯದ ಮಟ್ಟ ಮೀರಿದ ಮಾಲಿನ್ಯ ನಿಯಂತ್ರಣಕ್ಕೆ ಗ್ರೇಡೆಡ್ ರೆಸ್ಪಾನ್ಸ್ ಆಕ್ಷನ್ ಪ್ಲಾನ್‌ನ 4ನೇ ಹಂತವನ್ನು ದೆಹಲಿ ಸರ್ಕಾರ ಜಾರಿ ಮಾಡಿದೆ. ಮಾಲಿನ್ಯ ವಿಚಾರವಾಗಿ ಆಳುವ ಸರ್ಕಾರವನ್ನು ಸುಪ್ರೀಂ ಕೋರ್ಟ್ (Supreme Court) ತರಾಟೆಗೆ ತೆಗೆದುಕೊಂಡಿದೆ. ಇದನ್ನೂ ಓದಿ: `ಏಕ್ ಹೈ ತೊ ಸೇಫ್ ಹೈ’ ಪ್ರಧಾನಿ ಘೋಷಣೆಗೆ ಟೀಕೆ – ಮೋದಿ, ಅದಾನಿ ಫೋಟೋ ತೋರಿಸಿ ರಾಗಾ ವ್ಯಂಗ್ಯ

    ನಾವು ಹೇಳೋವರೆಗೂ ಜಿಆರ್‌ಎಪಿ-4 ನಿಯಮ ಸಡಿಲಿಸಬಾರದು. ಎಕ್ಯೂಐ 400ಕ್ಕಿಂತ ಕಡಿಮೆಯಾದ್ರೂ ಈ ನಿಯಮ ಸಡಿಲಿಸಬಾರದು ಎಂದು ಸೂಚಿಸಿದೆ. ಆದರೆ, ವಾಯುಮಾಲಿನ್ಯ ವಿಚಾರವಾಗಿ ರಾಜಕೀಯ ನಡೆದಿದೆ. ವಾಯು ಮಾಲಿನ್ಯ ತೀವ್ರ ಸ್ವರೂಪ ಪಡೆಯೋವರೆಗೂ ಕೇಂದ್ರ ಅಚೇತನವಾಗಿತ್ತು.

    ಯಾವುದೇ ಮುಂಜಾಗ್ರತೆ ವಹಿಸಲಿಲ್ಲ. ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಹುಲ್ಲು ಸುಡುತ್ತಿರುವುದೇ ದೆಹಲಿ ಮಾಲಿನ್ಯಕ್ಕೆ ಕಾರಣ ಎಂದು ಸಿಎಂ ಅತಿಶಿ ದೂರಿದ್ದಾರೆ. ಇದನ್ನೂ ಓದಿ: ಮಣಿಪುರ ಗಲಭೆ: ಅಮಿತ್ ಶಾ ನೇತೃತ್ವದಲ್ಲಿ ಹೈವೋಲ್ಟೇಜ್‌ ಸಭೆ – 50 ಕೇಂದ್ರೀಯ ಭದ್ರತಾ ಪಡೆ ನಿಯೋಜನೆ

  • ದೆಹಲಿ ಮಾಲಿನ್ಯಕ್ಕೆ ಕೇಂದ್ರ ಸರ್ಕಾರವೇ ಹೊಣೆ – ರಾಜಕೀಯ ಬಿಟ್ಟು ಕ್ರಮ ತೆಗೆದುಕೊಳ್ಳಲಿ: ಅತಿಶಿ

    ದೆಹಲಿ ಮಾಲಿನ್ಯಕ್ಕೆ ಕೇಂದ್ರ ಸರ್ಕಾರವೇ ಹೊಣೆ – ರಾಜಕೀಯ ಬಿಟ್ಟು ಕ್ರಮ ತೆಗೆದುಕೊಳ್ಳಲಿ: ಅತಿಶಿ

    ನವದೆಹಲಿ: ಪಂಜಾಬ್, ಹರಿಯಾಣ, ಮಧ್ಯಪ್ರದೇಶ, ಉತ್ತರ ಪ್ರದೇಶ ಮತ್ತು ರಾಜಸ್ಥಾನದಾದ್ಯಂತ ಹುಲ್ಲು ಸುಡುವಿಕೆ ವ್ಯಾಪಕವಾಗಿದೆ ಇದರ ವಿರುದ್ಧ ಕೇಂದ್ರ ಸರ್ಕಾರ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಹೀಗಾಗಿ ದೆಹಲಿಯಲ್ಲಿ ವಾಯು ಮಾಲಿನ್ಯದ (Delhi Air Pollution) ಪ್ರಮಾಣ ತೀವ್ರವಾಗಿ ಏರುತ್ತಿದೆ ಎಂದು ದೆಹಲಿ ಮುಖ್ಯಮಂತ್ರಿ ಅತಿಶಿ (Atishi) ಆರೋಪಿಸಿದ್ದಾರೆ.

    ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹುಲ್ಲು ಸುಡುವ ಬಿಕ್ಕಟ್ಟಿಗೆ ರಾಷ್ಟ್ರವ್ಯಾಪಿ ಪರಿಹಾರ ಕಂಡುಕೊಳ್ಳುವುದು ಕೇಂದ್ರ ಸರ್ಕಾರದ (Central Government) ಜವಾಬ್ದಾರಿಯಾಗಿದೆ. ಆದರೆ ಈ ವಿಚಾರದಲ್ಲಿ ಕೇಂದ್ರ ಸರ್ಕಾರ ಮತ್ತು ಬಿಜೆಪಿ ನಿಷ್ಕ್ರಿಯವಾಗಿದೆ. ಪಂಜಾಬ್‌ನಲ್ಲಿ ಹುಲ್ಲು ಸುಡುವುದು ನಿಯಂತ್ರಿಸಬಹುದಾದರೆ ಉಳಿದ ರಾಜ್ಯಗಳಲ್ಲಿ ಯಾಕೆ ಸಾಧ್ಯವಿಲ್ಲ? ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಬ್ರೆಜಿಲ್‌ನಲ್ಲಿ ವೇದಘೋಷಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿಗೆ ಭವ್ಯ ಸ್ವಾಗತ

    ಜನರು ಉಸಿರಾಡಲು ಕಷ್ಟಪಡುತ್ತಿದ್ದಾರೆ. ಕಳೆದ ರಾತ್ರಿ, ನನಗೆ ಹಲವಾರು ಕರೆಗಳು ಬಂದವು. ಕೆಲವರು ವಯಸ್ಸಾದ ಕುಟುಂಬ ಸದಸ್ಯರನ್ನು ಆಸ್ಪತ್ರೆಗಳಿಗೆ ಧಾವಿಸುತ್ತಿದ್ದಾರೆ, ಇತರರು ತಮ್ಮ ಮಕ್ಕಳಿಗೆ ಸ್ಟೀರಾಯ್ಡ್‌ಗಳನ್ನು ಹುಡುಕುತ್ತಿದ್ದಾರೆ. ಉತ್ತರ ಭಾರತವು ಇಂದು ಆರೋಗ್ಯ ತುರ್ತು ಪರಿಸ್ಥಿತಿ (Health Emergency) ಎದುರಿಸುತ್ತಿದೆ, ಪ್ರದೇಶದಾದ್ಯಂತ ನಗರಗಳು ‘ತೀವ್ರ’ ಮತ್ತು ‘ಅತ್ಯಂತ ಕಳಪೆ’ AQI ಮಟ್ಟವನ್ನು ದಾಖಲಿಸುತ್ತಿವೆ ಎಂದರು. ಇದನ್ನೂ ಓದಿ: ಅಧಿಕಾರ ದಾಹಕ್ಕಾಗಿ ಏನು ಮಾಡಲು ಹಿಂಜರಿಯದವರು ಅಂದ್ರೆ ಅದು ಬಿಜೆಪಿಯವರು: ಈಶ್ವರ್ ಖಂಡ್ರೆ

    ಹುಲ್ಲು ಸುಡುವಿಕೆ ಉತ್ತರ ಪ್ರದೇಶದಲ್ಲಿ 60% ನಷ್ಟು ಹೆಚ್ಚಳವಾಗಿದೆ, ಆದರೆ ಮಧ್ಯಪ್ರದೇಶವು ಪ್ರಸ್ತುತ ಅತಿ ಹೆಚ್ಚು ಹುಲ್ಲು ಸುಡುತ್ತಿದೆ ಅಲ್ಲಿ ಪ್ರತಿದಿನ 700ಕ್ಕೂ ಹೆಚ್ಚು ಘಟನೆಗಳು ವರದಿಯಾಗುತ್ತವೆ. ಕಳೆದ 6-7 ವರ್ಷಗಳಿಂದ, ದೇಶಾದ್ಯಂತ ಹುಲ್ಲು ಸುಡುವ ಘಟನೆಗಳು ಹೆಚ್ಚಾಗುತ್ತಿವೆ, ಪಂಜಾಬ್ ಹುಲ್ಲು ಸುಡುವಿಕೆ 80% ಕಡಿತವನ್ನು ಸಾಧಿಸಬಹುದಾದರೆ, ಇತರ ರಾಜ್ಯಗಳು ಏಕೆ ಸಾಧ್ಯವಿಲ್ಲ? ಉತ್ತರ ಭಾರತದಾದ್ಯಂತ ನಗರಗಳಲ್ಲಿನ ಆಸ್ಪತ್ರೆಗಳು ತುಂಬಿ ತುಳುಕುತ್ತಿವೆ. ಕೇಂದ್ರ ಸರ್ಕಾರ ರಾಜಕೀಯ ಮಾಡುವುದನ್ನು ಬಿಟ್ಟು ನಿರ್ಣಾಯಕ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

    ಮಾಲಿನ್ಯವು ರಾಜ್ಯದ ಗಡಿಗಳನ್ನು ಅಥವಾ ರಾಜಕೀಯ ಸಂಬಂಧಗಳನ್ನು ಗುರುತಿಸುವುದಿಲ್ಲ ಎಂಬುದನ್ನು ಬಿಜೆಪಿ ಮತ್ತು ಕೇಂದ್ರ ಸರ್ಕಾರ ಅರ್ಥಮಾಡಿಕೊಳ್ಳಬೇಕು, ಮಾಸ್ಕ್ ಹಂಚುವ ರಾಜಕೀಯ ಮಾಡುವುದು ಬಿಟ್ಟು ಮಾಲಿನ್ಯ ನಿಯಂತ್ರಣಕ್ಕೆ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ದೇವೇಗೌಡ, ಕುಮಾರಸ್ವಾಮಿ ಯಾವತ್ತು ಕರ್ನಾಟಕಕ್ಕೆ ಅನ್ಯಾಯ ಆಗಿದೆ ಅಂತ ಮಾತಾಡಿಲ್ಲ- ಸಿಎಂ

  • ರಾತ್ರೋ ರಾತ್ರಿ ಬದಲಾಗ್ತಿದ್ಯಾ ಎಪಿಎಲ್, ಬಿಪಿಎಲ್ ಕಾರ್ಡ್? – ಅರ್ಹರಿಗೆ ಮಾತ್ರ ಸಿಗತ್ತೆ ಅಂತ ಸಿಎಂ ಸ್ಪಷ್ಟನೆ

    ರಾತ್ರೋ ರಾತ್ರಿ ಬದಲಾಗ್ತಿದ್ಯಾ ಎಪಿಎಲ್, ಬಿಪಿಎಲ್ ಕಾರ್ಡ್? – ಅರ್ಹರಿಗೆ ಮಾತ್ರ ಸಿಗತ್ತೆ ಅಂತ ಸಿಎಂ ಸ್ಪಷ್ಟನೆ

    ಬೆಂಗಳೂರು: ರಾಜ್ಯದಲ್ಲಿ ಎಪಿಎಲ್-ಬಿಪಿಎಲ್ ಪಡಿತರ ಕಾರ್ಡ್ (APL – BPL Ration Card) ವಿವಾದ ಜೋರಾಗ್ತಿದೆ. ರಾತ್ರೋ ರಾತ್ರಿ ಸಾವಿರಾರು ರೇಷನ್ ಕಾರ್ಡ್‌ಗಳನ್ನ ಬಿಪಿಎಲ್‌ನಿಂದ ಎಪಿಎಲ್‌ಗೆ ಬದಲಾವಣೆ ಮಾಡಲಾಗ್ತಿದೆ ಎಂಬ ಆರೋಪ ಕೇಳಿಬಂದಿದೆ.

    ಕೆಲವರಂತೂ ರೇಷನ್ ತೆಗೆದುಕೊಳ್ಳಲು ನ್ಯಾಯ ಬೆಲೆ ಅಂಗಡಿಗೆ ಹೋದಾಗ ತಮ್ಮ ಕಾರ್ಡ್‌ಗಳು ಬದಲಾಗಿರೋದು ಬೆಳಕಿಗೆ ಬಂದಿದೆ. ಇದರಿಂದಾಗಿ, ರಾಜ್ಯದ ರೇಷನ್ ಕಾರ್ಡ್‌ದಾರರಲ್ಲಿ ಆತಂಕ ಹೆಚ್ಚಾಗಿದೆ. ಇದರ ನಡುವೆ ಕಾರ್ಡ್‌ಗಳನ್ನು ರದ್ದು ಮಾಡಲಾಗ್ತಿದೆ ಅಂತ ಸರ್ಕಾರದ ವಿರುದ್ಧ ವಿಪಕ್ಷ ನಾಯಕರು ಮುಗಿಬಿದ್ದಿದ್ದಾರೆ. ಇದನ್ನೂ ಓದಿ: ಸರ್ಕಾರಿ ನೌಕರರ ಬಿಪಿಎಲ್‌ ಕಾರ್ಡ್‌ ರದ್ದು – ಕಲಬುರಗಿಯಲ್ಲಿ ಹೆಚ್ಚು, ಉಡುಪಿಯಲ್ಲಿ ಅತಿ ಕಡಿಮೆ

    ಕೇಂದ್ರ ಸರ್ಕಾರ (Central Government) 5 ಕೆಜಿ ಧಾನ್ಯ ಕೊಡ್ತಿದ್ದರೂ ರಾಜ್ಯ ಸರ್ಕಾರ ಕಾರ್ಡ್ ಕಡಿತ ಮಾಡ್ತಿದೆ. ರಾಜ್ಯ ಸರ್ಕಾರ ದಿವಾಳಿ ಆಗ್ತಿದೆ ಅಂತ ಕೇಂದ್ರ ಸಚಿವ ಜೋಶಿ ಟೀಕಿಸಿದ್ದಾರೆ. ಕುಮಾರಸ್ವಾಮಿ (HD Kumaraswamy) ಮಾತಾಡಿ, ಗ್ಯಾರಂಟಿ ಸ್ಕೀಮ್‌ನಿಂದ ಸರ್ಕಾರಕ್ಕೆ ಏನೂ ಹೊರೆ ಇಲ್ಲ. ತೆರಿಗೆ ಹೆಚ್ಚಿಗೆ ಮಾಡಿ ಸಂಗ್ರಹ ಮಾಡಿರುವ ಹಣ ಏನಾಯ್ತು..? ಅಂತ ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಬಾಲನಟ ರೋಹಿತ್‌ ಆರೋಗ್ಯ ಸ್ಥಿರ – ದವಡೆಗೆ ಶಸ್ತ್ರಚಿಕಿತ್ಸೆ, ಪ್ಲೇಟ್‌ ಅಳವಡಿಕೆ

    ವಿಪಕ್ಷ ನಾಯಕ ಅಶೋಕ್ ಕೂಡ, ಕಾರ್ಡ್ ರದ್ದು ಮಾಡ್ತಿರೋ ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರಂಟಿ ಅಂತ ವ್ಯಂಗ್ಯವಾಡಿದ್ದಾರೆ. ಬಿಜೆಪಿಗರ ಈ ಟೀಕೆ-ಟಿಪ್ಪಣಿ, ವಾಗ್ದಾಳಿಗೆ ಸಿಎಂ ಸಿದ್ದರಾಮಯ್ಯ (Siddaramaiah) ತಿರುಗೇಟು ಕೊಟ್ಟಿದ್ದಾರೆ. ಎಪಿಎಲ್ ರದ್ದು ಮಾಡಿಲ್ಲ. ಅನರ್ಹರನ್ನು ತೆಗೆದು ಹಾಕ್ತೇವೆ. ಟ್ಯಾಕ್ಸ್ ಕಟ್ಟೋವ್ರು, ಸರ್ಕಾರಿ ನೌಕರರಿಗೆ ಬಿಪಿಎಲ್ ಇದ್ದರೆ ಎಪಿಎಲ್ ಮಾಡ್ತೇವೆ. ಗೃಹಲಕ್ಷ್ಮಿ ಯೋಜನೆಗೆ ಬೇರೆಯದ್ದೇ ಮಾನದಂಡಗಳಿವೆ ಅಂತ ಸಿಎಂ ಸಿದ್ದರಾಮಯ್ಯ ಸ್ಪಷ್ಟ ಪಡಿಸಿದ್ದಾರೆ. ಇದನ್ನೂ ಓದಿ: ಸಾಹಿತ್ಯ ಸಮ್ಮೇಳನಕ್ಕೂ ಮುನ್ನವೇ ವಿವಾದ; ಟಿಪ್ಪು ಕುರಿತ ವಿಚಾರ ಸಂಕಿರಣಕ್ಕೆ ಪ್ರಗತಿಪರ ಒತ್ತಾಯ

    ಅಧಿಕಾರಿಗಳ ಯಡವಟ್ಟು:
    ಎಪಿಎಲ್-ಬಿಪಿಎಲ್ ಕಾರ್ಡ್ ಪರಿಷ್ಕರಣೆಯಲ್ಲಿ ಆಹಾರ ಇಲಾಖೆ ಅಧಿಕಾರಿಗಳ ಎಡವಟ್ಟು ಮಾಡಿದ್ದಾರೆ. ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್‌ನ ಜೈಮಾರುತಿ ನಗರದ ಬಡ ಕುಟುಂಬದ ಬಿಪಿಎಲ್ ಕಾರ್ಡನ್ನು ಎಪಿಎಲ್‌ಗೆ ಬದಲಾಯಿಸಿದ್ದಾರೆ. ಇವರು ಐಟಿ ಪಾವತಿದಾರರು ಅಂತ ಆಹಾರ ನಿರೀಕ್ಷಕರು ನಮೂದಿಸಿದ್ದಾರೆ. ಆದರೆ, ರೇಷನ್ ತೆಗೆದುಕೊಳ್ಳಲು ಹೋದಾಗ ತಮ್ಮ ಬಿಪಿಎಲ್ ಕಾರ್ಡ್ ಎಪಿಎಲ್ ಆಗಿರೋದು ಬೆಳಕಿಗೆ ಬಂದಿದೆ. 2 ತಿಂಗಳಿಂದ ಅಕ್ಕಿಯಿಲ್ಲದೆ ಈ ಬಡಕುಟುಂಬ ಪರದಾಡ್ತಿದೆ.

    ಜೊತೆಗೆ, ಆರೋಗ್ಯ ಸೇವೆ, ಭಾಗ್ಯಲಕ್ಷ್ಮಿ ಬಾಂಡ್ ಸೇವೆ ಕೂಡ ಸಿಗ್ತಿಲ್ಲ. ಈ ಮಧ್ಯೆ, ಹಾಸನ ಜಿಲ್ಲೆಯಲ್ಲಿ ವಿವಿಧ ಕಾರಣಗಳಿಂದ 2,925 ಬಿಪಿಎಲ್ ರೇಷನ್ ಕಾರ್ಡ್‌ಗಳನ್ನ ಎಪಿಎಲ್ ಕಾರ್ಡ್‌ಗಳಾಗಿ ಬದಲಾವಣೆ ಮಾಡಲಾಗಿದೆ ಎಂದು ಸಂಬಂಧಪಟ್ಟ ಅಧಿಕಾರಿಗಳಿಂದ ತಿಳಿದುಬಂದಿದೆ.

  • ಕೃಷಿ ತ್ಯಾಜ್ಯಕ್ಕೆ ಬೆಂಕಿ: ದಂಡ ದುಪ್ಪಟ್ಟುಗೊಳಿಸಿ ಕೇಂದ್ರ ಸರ್ಕಾರ ಆದೇಶ

    ಕೃಷಿ ತ್ಯಾಜ್ಯಕ್ಕೆ ಬೆಂಕಿ: ದಂಡ ದುಪ್ಪಟ್ಟುಗೊಳಿಸಿ ಕೇಂದ್ರ ಸರ್ಕಾರ ಆದೇಶ

    – 5 ಎಕರೆಗಿಂತ ಜಾಸ್ತಿ ಇದ್ದರೆ 30,000 ರೂ. ದಂಡ

    ನವದೆಹಲಿ: ದೆಹಲಿ ಮತ್ತು ಅಕ್ಕಪಕ್ಕದ ಪ್ರದೇಶಗಳಲ್ಲಿ ಗಾಳಿಯ ಗುಣಮಟ್ಟ ಕುಸಿಯುತ್ತಿರುವ ಹಿನ್ನೆಲೆ ಕೃಷಿ ತ್ಯಾಜ್ಯಕ್ಕೆ ಬೆಂಕಿ (Stubble Burning) ಹಚ್ಚುವ ಕೃಷಿಕರಿಗೆ ಕೇಂದ್ರ ಸರ್ಕಾರ (Central Government) ಬಿಸಿ ಮುಟ್ಟಿಸುವ ಕೆಲಸ ಮಾಡಿದೆ. ಕೃಷಿ ತ್ಯಾಜ್ಯಕ್ಕೆ ಬೆಂಕಿ ಹಚ್ಚುವವರಿಗೆ ವಿಧಿಸಲಾಗುತ್ತಿದ್ದ ದಂಡದ ಪ್ರಮಾಣವನ್ನು ದುಪ್ಪಟ್ಟು ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

    ದೆಹಲಿಯ ಎನ್‌ಸಿಆ‌ರ್ (Delhi NCR) ಹಾಗೂ ಅಕ್ಕಪಕ್ಕದ ಪ್ರದೇಶಗಳಲ್ಲಿ ಗಾಳಿಯ ಗುಣಮಟ್ಟ ಕುಸಿಯುತ್ತಿರುವ ಸಂಬಂಧ ಸುಪ್ರೀಂ ಕೋರ್ಟ್ ಚಾಟಿ ಬೀಸಿದ ಬೆನ್ನಲ್ಲೇ, ನಿಯಮಗಳಿಗೆ ಸರ್ಕಾರ ತಿದ್ದುಪಡಿ ತಂದಿದೆ. ಇದನ್ನೂ ಓದಿ: ಮೋದಿ ಸರ್ಕಾರದಿಂದ ರಾಜ್ಯಗಳಿಗೆ ಆಗುತ್ತಿರುವ ಆರ್ಥಿಕ ಅನ್ಯಾಯ ನಿಲ್ಲಬೇಕು: ಎಲ್.ಹನುಮಂತಯ್ಯ

    ದಂಡದ ಪ್ರಮಾಣ ಎಷ್ಟು?
    ಹೊಸ ನಿಯಮಗಳ ಪ್ರಕಾರ, ಎರಡು ಎಕರೆಗಿಂತ ಕಡಿಮೆ ಜಮೀನು ಹೊಂದಿರುವ ರೈತರು 5,000 ರೂ., 2 ಎಕರೆಗಿಂತ ಹೆಚ್ಚು ಮತ್ತು 5 ಎಕರೆಗಿಂತ ಕಡಿಮೆ ಜಮೀನು ಹೊಂದಿರುವ ರೈತರು 10,000 ರೂ. ಹಾಗೂ 10 ಎಕರೆಗಿಂತಲೂ ಅಧಿಕ ಜಮೀನು ಹೊಂದಿರುವವರು 30,000 ರೂ. ಪರಿಸರ ಪರಿಹಾರ ಪಾವತಿಸಬೇಕಾಗುತ್ತದೆ.

    ಗಾಳಿಯ ಗುಣಮಟ್ಟ ಸೂಚ್ಯಂಕವು (ಎಕ್ಯೂಐ) ದೆಹಲಿಯ ಆನಂದ್ ವಿಹಾರ, ಅಶೋಕ ವಿಹಾರ, ಬವಾನ, ಜಹಾಂಗಿರ್‌ಪುರಿ, ಮುಂಡ್ಯಾ, ರೋಹಿಣಿ, ಸೋನಿಯಾ ವಿಹಾ. ವಿವೇಕ್ ವಿಹಾರ, ವಾಝಿಪುರದಲ್ಲಿ ನವೆಂಬರ್ 7ರ ಬೆಳಿಗ್ಗೆ 9ರ ಹೊತ್ತಿಗೆ 367ಕ್ಕೆ ಕುಸಿದಿದೆ. ಇದನ್ನೂ ಓದಿ: ರೋಹಿಣಿ ಸಿಂಧೂರಿ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ್ದ ಡಿ.ರೂಪಾಗೆ ಹಿನ್ನಡೆ

    ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿ (CPCB) ಪ್ರಕಾರ, ಎಕ್ಯೂಐ ಮಟ್ಟವು ಶೂನ್ಯದಿಂದ 50 ರಷ್ಟಿದ್ದರೆ ಉತ್ತಮ, 51 ರಿಂದ 100 ರಷ್ಟಿದ್ದರೆ ಸಮಾಧಾನಕರ, 101 ರಿಂದ 200 ರಷ್ಟಿದ್ದರೆ ಸಾಧಾರಣ, 201 ರಿಂದ 300 ರಷ್ಟಿದ್ದರೆ ಕಳಪೆ ಹಾಗೂ 301 ರಿಂದ 400 ರಷ್ಟಿದ್ದರೆ ಅತ್ಯಂತ ಕಳಪೆ, 401 ರಿಂದ 450ರಷ್ಟು ಕಂಡು ಬಂದರೆ ತೀವ್ರ ಕಳಪೆ ಹಾಗೂ 450ಕ್ಕಿಂತ ಹೆಚ್ಚಾದರೆ ಅತ್ಯಂತ ಅಪಾಯಕಾರಿ ಎಂದು ವರ್ಗೀಕರಿಸಲಾಗುತ್ತದೆ.

    ದೆಹಲಿಯಲ್ಲಿ ಸತತವಾಗಿ ವಾಯುಮಾಲಿನ್ಯ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಿರ್ವಹಣೆ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಚಾಟಿ ಬೀಸಿತ್ತು. ಹೀಗಾಗಿ ಕೇಂದ್ರ ಸರ್ಕಾರ ದಂಡದ ಪ್ರಮಾಣ ದುಪ್ಪಟ್ಟು ಮಾಡಿ ಆದೇಶ ಹೊರಡಿಸಿದೆ. ಇದನ್ನೂ ಓದಿ: 370ನೇ ವಿಧಿ ಜಾರಿ ನಿರ್ಣಯ ಬೆಂಬಲಿಸಿ ಬ್ಯಾನರ್ ಪ್ರದರ್ಶನ- ಜಮ್ಮು ಕಾಶ್ಮೀರ ವಿಧಾನಸಭೆಯಲ್ಲಿ ತಾರಕಕ್ಕೇರಿದ ಗದ್ದಲ 

  • ಪರಿಸರ ಸಂರಕ್ಷಣಾ ಕಾಯ್ದೆ ಹಲ್ಲಿಲ್ಲದ ಹಾವು, ಇದು ರಾಜಕೀಯವಲ್ಲದೆ ಮತ್ತೇನು ಅಲ್ಲ: ಸುಪ್ರೀಂ ತರಾಟೆ

    ಪರಿಸರ ಸಂರಕ್ಷಣಾ ಕಾಯ್ದೆ ಹಲ್ಲಿಲ್ಲದ ಹಾವು, ಇದು ರಾಜಕೀಯವಲ್ಲದೆ ಮತ್ತೇನು ಅಲ್ಲ: ಸುಪ್ರೀಂ ತರಾಟೆ

    – ದೆಹಲಿ ಮಾಲಿನ್ಯ ಹಿನ್ನೆಲೆ ಕೇಂದ್ರ, ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಚಾಟಿ

    ನವದೆಹಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿನ (Delhi) ವಾಯು ಮಾಲಿನ್ಯದ ಬಗ್ಗೆ ಸುಪ್ರೀಂ ಕೋರ್ಟ್ (Supreme Court) ಕಳವಳ ವ್ಯಕ್ತಪಡಿಸಿದೆ. ಪರಿಣಾಮಕಾರಿಯಲ್ಲದ ಪರಿಸರ ಸಂರಕ್ಷಣಾ ಕಾಯಿದೆ (Environmental Protection Act) ಜಾರಿ ಮಾಡಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದೆ. ಇದೇ ವೇಳೆ ವಾಯು ಮಾಲಿನ್ಯಕ್ಕೆ ಕಾರಣವಾಗುತ್ತಿರುವ ನೆರೆ ರಾಜ್ಯಗಳನ್ನು ತರಾಟೆಗೆ ತೆಗೆದುಕೊಂಡಿದೆ.

    ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ, ಮಾಲಿನ್ಯ ನಿಯಂತ್ರಣಕ್ಕೆ ಯಾವುದೇ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ. ಪರಿಸರ ಸಂರಕ್ಷಣಾ ಕಾಯಿದೆ ಹಲ್ಲಿಲ್ಲದ ಹಾವಿನಂತಾಗಿದೆ. ಕಾಯಿದೆಯಲ್ಲಿ ತಪ್ಪಿತಸ್ಥರನ್ನು ಶಿಕ್ಷೆಯಿಂದ ಮುಕ್ತಗೊಳಿಸಿ, ದಂಡದ ಮೂಲಕ ಅದನ್ನು ಬದಲಾಯಿಸಿದ್ದೀರಿ. ಇಂತಹ ನಿಯಮಗಳಿಂದ ಮಾಲಿನ್ಯ ನಿಯಂತ್ರಣ ಹೇಗೆ ಸಾಧ್ಯ? ಎಂದು ಪ್ರಶ್ನಿಸಿದೆ.ಇದನ್ನೂ ಓದಿ: ಕರ್ನಾಟಕ ಫ್ರಾಡ್‌ಗಳ ಸಂತೆಯಾಗಲು ಸಿದ್ದರಾಮಯ್ಯ ಕಾರಣ – ಹೆಚ್‌. ವಿಶ್ವನಾಥ್‌ ಲೇವಡಿ

    ಪಂಜಾಬ್ ಮತ್ತು ಹರಿಯಾಣದ ಕಾರ್ಯದರ್ಶಿ ಮತ್ತು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅವರಿಗೆ ಶೋಕಾಸ್ ನೋಟಿಸ್ ನೀಡಿದ ಕೋರ್ಟ್, ಹುಲ್ಲು ಸುಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳದಕ್ಕೆ ಆಕ್ಷೇಪ ವ್ಯಕ್ತಪಡಿಸಿತು. ಸರ್ಕಾರಗಳು ಹಾಗೂ ಕೇಂದ್ರ ಪರಿಸರವನ್ನು ರಕ್ಷಿಸಲು ಗಂಭೀರವಾಗಿ ಸಿದ್ಧರಿದ್ದರೆ, ಸೆಕ್ಷನ್ 15ನ್ನು ತಿದ್ದುಪಡಿ ಮಾಡುವ ಮೊದಲು ಎಲ್ಲವನ್ನೂ ಸರಿಪಡಿಸಲಾಗುತ್ತಿತ್ತು. ಇದೆಲ್ಲವೂ ರಾಜಕೀಯ ಬೇರೇನೂ ಅಲ್ಲ ಎಂದು ಹೇಳಿದೆ.

    ಟ್ರ್ಯಾಕ್ಟರ್‌ ಮತ್ತು ರೈತರಿಗೆ ಡೀಸೆಲ್ ಹಣಕ್ಕಾಗಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದು ಪಂಜಾಬ್‌ನ ಅಡ್ವೊಕೇಟ್ ಜನರಲ್‌ಗೆ ಸುಳ್ಳು ಹೇಳಿಕೆಯನ್ನು ನೀಡಿತ್ತು. ಅದನ್ನು ಯಾಕೆ ನೀಡಿದ್ದೀರಿ ಎಂದು ನೀವು ಉತ್ತರಿಸಬೇಕು. ಇಲ್ಲಿಯವರೆಗೂ ಒಂದೇ ಒಂದು ಪ್ರಾಸಿಕ್ಯೂಷನ್ ಮಾಡಿಲ್ಲ, ಆದರೆ ಕೋರ್ಟ್‌ಗೆ ತಪ್ಪು ಮಾಹಿತಿ ನೀಡಲಾಗುತ್ತಿದೆ. ನಾವು ನಿಮ್ಮನ್ನು ಬಿಡುವುದಿಲ್ಲ ಎಂದು ತರಾಟೆಗೆ ತೆಗೆದುಕೊಂಡಿತು.

    ಇದಕ್ಕೆ ಪಂಜಾಬ್ ಪರ ವಾದ ಮಂಡಿಸಿದ ವಕೀಲ ಅಭಿಷೇಕ್ ಸಿಂಘ್ವಿ, ನಾವು ಮುಂದಿನ ದಿನಗಳಲ್ಲಿ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದರು.

    ಕೇಂದ್ರ ಸರ್ಕಾರ ಪರ ವಾದ ಮಂಡಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯ ಭಾಟಿ, ಮುಂದಿನ 10 ದಿನಗಳಲ್ಲಿ ಪರಿಸರ ಸಂರಕ್ಷಣಾ ನಿಯಮಗಳನ್ನು ಬದಲಿಸಿ, ಅಂತಿಮಗೊಳಿಸಲಾಗುವುದು ಮತ್ತು ಕಾಯಿದೆಯನ್ನು ಸಂಪೂರ್ಣವಾಗಿ ಕಾರ್ಯಗತಗೊಳಿಸಲಾಗುವುದು ಎಂದು ನ್ಯಾಯಾಲಯಕ್ಕೆ ಭರವಸೆ ನೀಡಿದರು.ಇದನ್ನೂ ಓದಿ: ಪ್ರಿಯಾಂಕಾ ಗಾಂಧಿ ಬಹುಮತದಿಂದ ಜಯಗಳಿಸುವುದು ನಿಶ್ಚಿತ: ಸಿದ್ದರಾಮಯ್ಯ

  • ಅಗತ್ಯ ಪೌಷ್ಟಿಕ ಆಹಾರ ವಿತರಣೆಗೆ ಮಿಲೆಟ್ಸ್ ಖರೀದಿ ಹೆಚ್ಚಳ – ಪ್ರಹ್ಲಾದ್ ಜೋಶಿ

    ಅಗತ್ಯ ಪೌಷ್ಟಿಕ ಆಹಾರ ವಿತರಣೆಗೆ ಮಿಲೆಟ್ಸ್ ಖರೀದಿ ಹೆಚ್ಚಳ – ಪ್ರಹ್ಲಾದ್ ಜೋಶಿ

    -2023-24ರ ಮುಂಗಾರು ಋತುವಿನಲ್ಲಿ 12.49 ಎಲ್‌ಎಂಟಿ ಮಿಲೆಟ್ಸ್ ಖರೀದಿ

    ನವದೆಹಲಿ: ದೇಶವಾಸಿಗಳಿಗೆ ಅಗತ್ಯ ಪೌಷ್ಟಿಕ ಆಹಾರ ವಿತರಣೆಗಾಗಿ ಕೇಂದ್ರ ಸರ್ಕಾರ ಮಿಲೆಟ್ಸ್ (Millets) ಖರೀದಿಯನ್ನು ಹೆಚ್ಚಿಸಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್ ಜೋಶಿ (Prahlad Joshi) ಹೇಳಿದ್ದಾರೆ.

    ಪ್ರಧಾನಿ ನರೇಂದ್ರ ಮೋದಿ (PM Narendra Modi) ನೇತೃತ್ವದ ಕೇಂದ್ರ ಸರ್ಕಾರ (Central Government) ಮೂರನೇ ಅವಧಿ ಆಡಳಿತದಲ್ಲಿ ಹಿಂದೆಂದಿಗಿಂತ ಅಧಿಕ ಮಿಲೆಟ್ಸ್ ಖರೀದಿ ಮಾಡುತ್ತಿದೆ ಎಂದಿದ್ದಾರೆ.ಇದನ್ನೂ ಓದಿ: ರಾಯಚೂರು | ಆಸ್ಪತ್ರೆಯಲ್ಲಿ ಲಕ್ಷಾಂತರ ರೂ. ಮೌಲ್ಯದ ಯಂತ್ರೋಪಕರಣ ಕಳ್ಳತನ

    12.49 ಲಕ್ಷ ಮೆಟ್ರಿಕ್ ಟನ್ ಖರೀದಿ:
    2023-24ರ ಮುಂಗಾರು ಮಾರುಕಟ್ಟೆ ಋತುವಿನಲ್ಲಿ ಕೇಂದ್ರ ಸರ್ಕಾರ 12.49 ಲಕ್ಷ ಮೆಟ್ರಿಕ್ ಟನ್ ಮಿಲೆಟ್ಸ್ ಖರೀದಿ ಮಾಡಿದೆ ಎಂದು ತಿಳಿಸಿದ್ದಾರೆ.

     

    ಹಿಂದಿನ ವರ್ಷಕ್ಕೆ ಹೋಲಿಸಿದರೆ ಶೇ.170ರಷ್ಟು ಮಿಲೆಟ್ಸ್ ಖರೀದಿ ಹೆಚ್ಚಳ ಕಂಡಿರುವುದು ಗಮನಾರ್ಹ ಸಂಗತಿಯಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ (NDA) ಸರ್ಕಾರ ಮೂರನೇ ಅವಧಿಯ ಮೊದಲ 100 ದಿನಗಳಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆ ಮತ್ತು ಇತರ ಕಲ್ಯಾಣ ಯೋಜನೆಗಳ ಫಲಾನುಭವಿಗಳಲ್ಲಿ ಪೌಷ್ಟಿಕಾಂಶಕ್ಕೆ ಮಹತ್ವ ನೀಡಿದೆ. ಈ ನಿಟ್ಟಿನಲ್ಲಿ ಸರ್ಕಾರ ಅನೇಕ ಕ್ರಮಗಳನ್ನು ಕೈಗೊಂಡಿದ್ದು, ಮಿಲೆಟ್ಸ್ ಖರೀದಿಯಲ್ಲಿನ ಹೆಚ್ಚಳ ಪ್ರಮುಖವಾಗಿದೆ ಎಂದರು.ಇದನ್ನೂ ಓದಿ: ನಿರಂತರ ಮಳೆಯಿಂದ ಹೆಚ್ಚಿದ ಒಳಹರಿವು – ತುಮಕೂರಿನ ಮಾರ್ಕೋನಹಳ್ಳಿ ಜಲಾಶಯ ಭರ್ತಿ