Tag: Central Government

  • ಮೊದಲು ದೇಶ ನಂತರ ವ್ಯಾಪಾರ- ಪಾಕ್‍ಗೆ ಚಹಾ ರಫ್ತು ನಿಲ್ಲಿಸಲು ಸಿದ್ಧ ಎಂದ ಚಹಾ ರಫ್ತುದಾರರು

    ಮೊದಲು ದೇಶ ನಂತರ ವ್ಯಾಪಾರ- ಪಾಕ್‍ಗೆ ಚಹಾ ರಫ್ತು ನಿಲ್ಲಿಸಲು ಸಿದ್ಧ ಎಂದ ಚಹಾ ರಫ್ತುದಾರರು

    ನವದೆಹಲಿ: ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯಿಂದ ಯೋಧರು ಹುತಾತ್ಮರಾಗಿರುವುದಕ್ಕೆ ಸಿಡಿದೆದ್ದಿರುವ ಭಾರತ ಸರ್ಕಾರ, ಪಾಕಿಸ್ತಾನವನ್ನು ಅತ್ಯಾಪ್ತ ರಾಷ್ಟ್ರ ಸ್ಥಾನದಿಂದ ಕಿತ್ತೊಗೆದಿದೆ. ಇದರಿಂದ ಉಭಯ ರಾಷ್ಟ್ರಗಳ ನಡುವೆ ಇದ್ದ ಹಲವು ರೀತಿ ವ್ಯವಹಾರ ಸಂಬಂಧಗಳು ಮುರಿದು ಬಿದ್ದಿದ್ದು, ಪಾಕಿಸ್ತಾನಕ್ಕೆ ಚಹಾ ರಫ್ತು ನಿಲ್ಲಿಸಲು ಸಿದ್ಧ ಎಂದು ಭಾರತೀಯ ಚಹಾ ಪೂರೈಕೆದಾರರ ಒಕ್ಕೂಟ (ಐಟಿಇಎ) ಮುಖ್ಯಸ್ಥ ಅನ್ಶುಮನ್ ಕನೋರಿಯಾ ತಿಳಿಸಿದ್ದಾರೆ.

    ಭಾರತದಿಂದ ಪಾಕಿಸ್ತಾನಕ್ಕೆ ಪ್ರತಿವರ್ಷ ಸುಮಾರು 150 ಕೋಟಿ ರೂ. ಮೌಲ್ಯದ ಚಹಾವನ್ನು ರಫ್ತು ಮಾಡಲಾಗುತ್ತಿತ್ತು. ಚಹಾ ಮಂಡಳಿಯ ವರದಿ ಪ್ರಕಾರ 2018ರಲ್ಲಿ ಸುಮಾರು 154.71 ಕೋಟಿ ರೂ. ಮೌಲ್ಯದ 1.58 ಕೋಟಿ ಕೆ.ಜಿ ಚಹಾವನ್ನು ಪಾಕಿಸ್ತಾನಕ್ಕೆ ಪೂರೈಕೆ ಮಾಡಲಾಗಿತ್ತು. ಆದ್ರೆ ಪುಲ್ವಾಮ ಉಗ್ರರ ದಾಳಿಯಿಂದ ಉಭಯ ರಾಷ್ಟ್ರಗಳ ನಡುವೆ ಭಾರಿ ಬಿಕ್ಕಟ್ಟು ಸೃಷ್ಟಿಯಾಗಿದ್ದು, ಈ ವಿಚಾರದಲ್ಲಿ ಕೇಂದ್ರ ಸರ್ಕಾರದ ನಿರ್ಧಾರನ್ನು ಬೆಂಬಲಿಸುತ್ತೇವೆ ಎಂದು ಚಹಾ ಪೂರೈಕೆದಾರರ ಒಕ್ಕೂಟ ಹೇಳಿದೆ. ಅಲ್ಲದೆ ನಮಗೆ ನಷ್ಟವಾದರೂ ಸರಿ ನಾವು ಮಾತ್ರ ಪಾಕಿಸ್ತಾನಕ್ಕೆ ಚಹಾ ರಫ್ತು ಮಾಡಲ್ಲ. ದೇಶ ಮೊದಲು ನಂತರ ವ್ಯಪಾರ ಎಂದು ಕೇಂದ್ರ ಸರ್ಕಾರಕ್ಕೆ ಸಾಥ್ ನೀಡಿದ್ದಾರೆ.

    ಕೇಂದ್ರ ಸರ್ಕಾರ ಪಾಕಿಸ್ತಾನದ ಜೊತೆ ಭಾರತದ ಎಲ್ಲಾ ವ್ಯಾಪಾರಿ ಸಂಬಂಧಗಳನ್ನು ಸ್ಥಗಿತಗೊಳಿಸಿದರೆ ಚಹಾ ಪೂರೈಕೆ ಮಾಡುವುದನ್ನು ನಿಲ್ಲಿಸುತ್ತೀರಾ? ಎಂಬ ಪ್ರಶ್ನೆಗೆ ಉತ್ತರಿಸಿದ ಐಟಿಇಎ ಮುಖ್ಯಸ್ಥ ಅನ್ಶುಮನ್ ಕನೋರಿಯಾ ಖಂಡಿತ ನಿಲ್ಲಿಸುತ್ತೇವೆ. ದೇಶಕ್ಕಾಗಿ ಏನನ್ನಾದರೂ ಮಾಡಲು ನಾವು ಸಿದ್ಧರಿದ್ದೇವೆ. ಮೊದಲು ರಾಷ್ಟ್ರ ನಂತರ ವ್ಯಾಪಾರ ಎಂದು ಉತ್ತರಿಸಿದ್ದಾರೆ. ಅಷ್ಟೇ ಅಲ್ಲದೆ ಪುಲ್ವಾಮ ಉಗ್ರರ ದಾಳಿ ವಿರುದ್ಧವಾಗಿ ಕೇಂದ್ರ ಸರ್ಕಾರ ಯಾವುದೇ ನಿರ್ಧಾರವನ್ನು ತೆಗೆದುಕೊಂಡರೂ ಚಹಾ ರಫ್ತುದಾರರ ಬೆಂಬಲವಿದೆ. 1989ರಿಂದ ಭಾರತೀಯ ಸೇನೆಗೆ ಪಾಕಿಸ್ತಾನ ತೊಂದರೆ ಕೊಡುತ್ತಿದೆ ಎಂದು ಕನೋರಿಯಾ ಹೇಳಿದ್ದಾರೆ.

    ಅಲ್ಲದೇ ಉಭಯ ರಾಷ್ಟ್ರಗಳ ವ್ಯಾಪಾರ ಸಂಬಂಧ ಸ್ಥಗಿತಗೊಂಡರೆ ನಮಗೆ ನಷ್ಟವಾಗುತ್ತದೆ ಎಂಬುದರ ಕುರಿತು ಯೋಚನೆಯನ್ನೇ ಮಾಡಿಲ್ಲ. ಇಂತಹ ದುರ್ಘಟನೆಗಳು ನಡೆದಾಗ ನಮಗೆ ದೇಶ ಮೊದಲಾಗುತ್ತದೆ. ನಾವು ಕೇಂದ್ರ ಸರ್ಕಾರದ ಸೂಚನೆಗಳಿಗೆ ಕಾಯುತ್ತಿದ್ದೇವೆ. ಇದರಿಂದ ಮಾರುಕಟ್ಟೆ ಮೇಲೆ ಆಗುವ ಪರಿಣಾಮ ಸೆಕೆಂಡರಿ ಎಂದಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ದ್ವೇಷವನ್ನು ಮರೆಯಲು ಮೋದಿಯನ್ನ ಅಪ್ಪಿಕೊಂಡೆ: ರಾಹುಲ್ ಗಾಂಧಿ

    ದ್ವೇಷವನ್ನು ಮರೆಯಲು ಮೋದಿಯನ್ನ ಅಪ್ಪಿಕೊಂಡೆ: ರಾಹುಲ್ ಗಾಂಧಿ

    ಜೈಪುರ: ನನಗೆ ಪ್ರಧಾನಿ ನರೇಂದ್ರ ಮೋದಿ ಅವರ ಮೇಲಿರುವ ದ್ವೇಷವನ್ನು ಮರೆಯಲು ಸಂಸತ್ತಿನಲ್ಲಿ ನಾನು ಅವರನ್ನು ಅಪ್ಪಿಕೊಂಡಿದ್ದೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

    ಕಾಂಗ್ರೆಸ್ ಸೇವಾ ದಳದ ರಾಷ್ಟ್ರೀಯ ಸಮಾವೇಶದಲ್ಲಿ ಮಾತನಾಡಿದ ಅವರು, ಬಿಜೆಪಿಯವರು ನನ್ನನ್ನು ಹಾಗೂ ನನ್ನ ಕುಟುಂಬದವನ್ನು ಬಹಳಷ್ಟು ಬಾರಿ ನಿಂದಿಸಿದ್ದಾರೆ. ಆದರೂ ನಾನು ಮೋದಿಯವರನ್ನು ಸಂಸತ್ತಿನಲ್ಲಿ ಅಪ್ಪಿಕೊಂಡಿದ್ದೇನೆ. ಬಿಜೆಪಿಯ ದ್ವೇಷವನ್ನು ದ್ವೇಷದಿಂದಲೇ ಎದುರಿಸಲು ಆಗುವುದಿಲ್ಲ ಎನ್ನುವುದನ್ನು ನಾವು ಅರ್ಥ ಮಾಡಿಕೊಳ್ಳಬೇಕು. ಆ ದ್ವೇಷವನ್ನು ತೆಗೆದು ಹಾಕಲೆಂದೇ ನಾನು ಪ್ರಧಾನಿಯನ್ನು ಅಪ್ಪಿಕೊಂಡದ್ದು ಎಂದು ತಮ್ಮ ನಡೆಯನ್ನು ಸಮರ್ಥಿಸಿಕೊಂಡರು.

    ಲೋಕಸಭೆಯಲ್ಲಿ ರಾಹುಲ್ ಗಾಂಧಿ ತಮಗೆ ನೀಡಿದ ಅಪ್ಪುಗೆ ಹಾಗೂ ಕಣ್ಣು ಹೊಡೆದ ಪರಿಯನ್ನು ಮೋದಿ ಅವರು 2019ರ ಲೋಕಸಭೆಯ ಅಧಿವೇಶನದ ಕೊನೆಯ ದಿನ ಪ್ರಸ್ತಾಪಿಸಿ ರಾಹುಲ್ ಗಾಂಧಿ ಅವರ ಕಾಲೆಳೆದಿದ್ದರು.

    ಮೋದಿ ಸರ್ಕಾರ ಅಧಿಕಾರಕ್ಕೆ ಬರುವ ಮೊದಲು ಅಂದರೆ 2014ರ ಮೊದಲು ಭಾರತವು ನಿದ್ರಿಸುತ್ತಿದ್ದ ರಾಷ್ಟ್ರವಾಗಿತ್ತು ಎಂದು ಪ್ರಧಾನಿ ಹೇಳಿಕೆಗೆ ರಾಹುಲ್ ಗಾಂಧಿ ಪ್ರತಿಕ್ರಿಯಿಸಿ, ಮೋದಿ ಅವರು ಈ ಹೇಳಿಕೆ ನೀಡುವ ಮೂಲಕ ಇಡೀ ದೇಶದ ಜನರಿಗೆ ಅವಮಾನ ಮಾಡಿದ್ದಾರೆ. ಅವರ ಹೇಳಿಕೆ ಪಂಡಿತ್ ಜವಹರಲಾಲ್ ನೆಹರು, ಡಾ.ಅಂಬೇಡ್ಕರ್, ನಮ್ಮ ರೈತರು, ಸಣ್ಣ ಉದ್ಯಮಿಗಳು ಅವರಿಗಿಂತ ಮೊದಲು ಏನನ್ನೂ ಮಾಡಿಲ್ಲ ಎನ್ನುವ ಅರ್ಥ ಕಲ್ಪಿಸಿಕೊಡುತ್ತದೆ. ಈ ರೀತಿ ಹೇಳಿಕೆ ನೀಡಿ ಅವರು ಕಾಂಗ್ರೆಸ್ಸಿಗೆ ಅವಮಾನ ಮಾಡಿಲ್ಲ. ಬದಲಾಗಿ ಇಡೀ ದೇಶದ ಜನತೆಯನ್ನು ಅವಮಾನಿಸಿದ್ದಾರೆ ಎಂದು ಟೀಕಿಸಿದರು.

    ರಾಜಸ್ಥಾನ, ಮಧ್ಯಪ್ರದೇಶ, ಪಂಜಾಬ್, ಛತ್ತೀಸ್‍ಗಢದಲ್ಲಿರುವ ಕಾಂಗ್ರೆಸ್ ಸರ್ಕಾರಗಳು ಹಾಗೂ ಕರ್ನಾಟಕದಲ್ಲಿರುವ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರಕಾರವು ರೈತರ ಸಾಲ ಮನ್ನಾ ಮಾಡಿದ್ದರೆ, ಮೋದಿ ಅವರು ಅನಿಲ್ ಅಂಬಾನಿ, ನೀರವ್ ಮೋದಿ ಮತ್ತು ಮೆಹುಲ್ ಚೋಸ್ಕಿ ಮುಂತಾದ ಉದ್ಯಮಿಗಳ 3,50,000 ಕೋಟಿ ರೂ. ಮೊತ್ತದ ಸಾಲವನ್ನು ಮನ್ನಾ ಮಾಡಿದ್ದಾರೆ ಎಂದು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು.

    ಬಿಜೆಪಿ ಹಾಗೂ ಆರ್‍ಎಸ್‍ಎಸ್ ಅವರು ದೇಶದ ಶ್ರೀಮಂತ ಸ್ನೇಹಿತರನ್ನ ಉಳಿಸಲು ನೋಡುತ್ತಿದ್ದಾರೆ. ಆದರೆ ನಾವು ದೇಶದ ಜನಸಾಮಾನ್ಯರ ಪರವಾಗಿ ಕೆಲಸ ಮಾಡಲು ಇಚ್ಛಿಸುತ್ತೇವೆ. ಸೇವಾ ದಳ ಕಾಂಗ್ರೆಸ್ ಪಕ್ಷದ ಬೆನ್ನೆಲಬು. ಇದನ್ನು ಇನ್ನಷ್ಟು ಗಟ್ಟಿ ಮಾಡಬೇಕು. ಆಗ ಪಕ್ಷಕ್ಕೆ ಮತ್ತಷ್ಟು ಶಕ್ತಿ ದೊರೆತಂತಾಗುತ್ತದೆ ಎಂದು ರಾಹುಲ್ ಗಾಂಧಿ ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಶವ ಪೆಟ್ಟಿಗೆಗಾಗಿ ನಾನು ಕಾಯಲ್ಲ, ಅದೇ ನನಗಾಗಿ ಕಾಯುತ್ತೆ: ಮಮತಾ ಬ್ಯಾನರ್ಜಿ

    ಶವ ಪೆಟ್ಟಿಗೆಗಾಗಿ ನಾನು ಕಾಯಲ್ಲ, ಅದೇ ನನಗಾಗಿ ಕಾಯುತ್ತೆ: ಮಮತಾ ಬ್ಯಾನರ್ಜಿ

    – ಕೇಂದ್ರ ಸರ್ಕಾರದ ವಿರುದ್ಧ ಮತ್ತೆ ಗುಡುಗಿದ ದೀದಿ

    ನವದೆಹಲಿ: ಶವ ಪೆಟ್ಟಿಗೆಗಾಗಿ ನಾನು ಕಾಯುವುದಿಲ್ಲ, ಶವ ಪೆಟ್ಟಿಗೆಯೇ ನನಗಾಗಿ ಕಾಯುತ್ತದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

    ನಗರದ ಜಂತರ್‍ಮಂತರ್ ನಡೆದ ಸಮಾವೇಶದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಕೋಲ್ಕತ್ತಾದಲ್ಲಿರುವ ಕಾಳಿಘಾಟ್ ಮನೆಗೂ ಕೇಂದ್ರದ ಅಧಿಕಾರಿಗಳನ್ನು ಕಳುಹಿಸಬಹುದು. ಅವರಿಗೂ ಅಡುಗೆ ಮಾಡಿ ಬಡಿಸುತ್ತೇನೆ ಎಂದು ವ್ಯಂಗ್ಯವಾಡಿದ್ದಾರೆ. ಈ ಮೂಲಕ ಕಳೆದ ತಿಂಗಳು ಕೋಲ್ಕತ್ತಾ ನಿವಾಸದಲ್ಲಿ ಮಹಾಘಟಬಂಧನ್ ಸಮಾವೇಶದಲ್ಲಿ ಪಕ್ಷಗಳ ನಾಯಕರಿಗೆ ತಿಂಡಿ ಬಡಿಸಿದ್ದನ್ನು ಸಮರ್ಥಿಸಿಕೊಂಡರು. ಇದನ್ನು ಓದು: ಖುದ್ದಾಗಿ ತಟ್ಟೆ ಹಿಡಿದು ಮಹಾಮೈತ್ರಿ ನಾಯಕರಿಗೆ ತಿಂಡಿ ಬಡಿಸಿದ ದೀದಿ

    ಸಿಬಿಐ ಅಧಿಕಾರಿಗಳನ್ನು ನಾಳೆ ನನ್ನ ಮನೆಗೂ ಕಳುಹಿಸುತ್ತಾರೆ. ಆದರೆ ಅವರನ್ನು ಸ್ವಲ್ಪ ಸಮಯ ನಿಲ್ಲುವಂತೆ ತಿಳಿಸಿ ಮನೆಯಲ್ಲಿ ಅಡುಗೆ ಮಾಡಿ ಉಣಬಡಿಸುತ್ತೇನೆ. ಅಷ್ಟೇ ಅಲ್ಲದೆ ಅಧಿಕಾರಿಗಳಿಗೆ ಸಸ್ಯಾಹಾರ, ಮಾಂಸಾಹಾರ, ರೋಟಿ ಬೇಕಾದರೂ ಮಾಡಿಕೊಡುತ್ತೇನೆ. ನಾನು ಭಯವನ್ನು ಬಿಟ್ಟಿದ್ದೆ, ನಿಮ್ಮ ಬೆದರಿಕೆಗೆ ಹೆದರುವುದಿಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದರು. ಇದನ್ನು ಓದಿ: ಸಿಬಿಐ ವಿಚಾರಣೆಗೆ ರಾಜೀವ್ ಕುಮಾರ್ ಹಾಜರಾಗಬೇಕು: ಕೋರ್ಟ್ ಕಲಾಪ ಹೀಗಿತ್ತು

    ನಾನು ಅನೇಕ ಸರ್ಕಾರಗಳನ್ನು ನೋಡಿದ್ದೇನೆ. ಆದರೆ ಈಗ ಇರುವಂತೆ ಯಾವುದೇ ಸರ್ಕಾರ ಕಂಡಿಲ್ಲ. ಅವರು ಕೋಲ್ಕತ್ತಾ ಪೊಲೀಸ್ ಆಯುಕ್ತರ ಮನೆಗೆ ಸಿಬಿಐ ಅಧಿಕಾರಿಗಳನ್ನು ಕಳುಹಿಸಿದ್ದರು. ಇಂತಹ ಕನಿಷ್ಠ ಮಟ್ಟದ ಸರ್ಕಾರವನ್ನು ನಾನು ನೋಡಿಲ್ಲ ಎಂದು ಹೆಸರನ್ನು ಸೂಚಿಸದೇ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದರು.

    ಐಪಿಎಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರ ನಿರ್ದೇಶನ ನೀಡುತ್ತದೆ. ಜೊತೆಗೆ ಅವರ ಪದಕ (ಮೆಡಲ್‍ಗಳನ್ನು) ಹಿಂಪಡೆಯಲು ಸೂಚಿಸುತ್ತದೆ. ಈ ರೀತಿ ಹೇಳಿಕೆ ನೀಡಬಹುದೇ? ಅವರ ಹೇಳಿಕೆಯಿಂದಾಗಿ ಪಶ್ಚಿಮ ಬಂಗಾಳದ ಎಲ್ಲಾ ಅಧಿಕಾರಿಗಳು ಮೆಡಲ್‍ಗಳನ್ನು ವಾಪಸ್ ನೀಡುತ್ತಾರೆ ಎಂದು ಗುಡುಗಿದರು.  ಇದನ್ನು ಓದಿ: ಮೋದಿ ಮತ್ತೆ ಪ್ರಧಾನಿಯಾಗಲ್ಲ, ಸುಪ್ರೀಂನಿಂದ ನೈತಿಕ ಗೆಲುವು – ಮಮತಾ ಬ್ಯಾನರ್ಜಿ

    ಅವರು ತಮ್ಮ ಅಧಿಕಾರಿಗಳು, ಸಂಪುಟ ಸಚಿವರು ಹಾಗೂ ಮಾಧ್ಯಮಗಳ ಮೇಲೆ ನಿಗಾ ಇಡುತ್ತಾರೆ. ಏಕೆಂದರೆ ಅವರಿಗೆ ಯಾರೊಬ್ಬರ ಮೇಲೂ ನಂಬಿಕೆಯಿಲ್ಲ. ನನ್ನ ಹಾಗೂ ವೇದಿಕೆ ಮೇಲಿರುವ ನಾಯಕರ ಫೋನ್ ಅನ್ನು ಅವರು ಟ್ಯಾಪ್ ಮಾಡಿರುತ್ತಾರೆ ಎಂದು ಗಂಭೀರವಾಗಿ ಆರೋಪಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ನನ್ನ ಜೀವಕ್ಕೆ ಏನಾದ್ರು ಆದ್ರೆ ಮೋದಿ ಹೊಣೆ: ಅಣ್ಣಾ ಹಜಾರೆ

    ನನ್ನ ಜೀವಕ್ಕೆ ಏನಾದ್ರು ಆದ್ರೆ ಮೋದಿ ಹೊಣೆ: ಅಣ್ಣಾ ಹಜಾರೆ

    ಮುಂಬೈ: ಕಳೆದ 4 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಭ್ರಷ್ಟಾಚಾರ ವಿರೋಧಿ ಹೋರಾಟಗಾರ ಅಣ್ಣಾ ಹಜಾರೆ ಅವರು, ತನ್ನ ಜೀವಕ್ಕೆ ಎನಾದರೂ ಹೆಚ್ಚು ಕಡಿಮೆಯಾದರೇ ಅದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರೇ ನೇರ ಹೊಣೆ ಎಂದು ಕಿಡಿಕಾರಿದ್ದಾರೆ.

    ಅಣ್ಣಾ ಹಜಾರೆ ಅವರು “ಲೋಕಪಾಲ” ವನ್ನು ಕೇಂದ್ರದಲ್ಲಿ ಹಾಗೂ “ಲೋಕಾಯುಕ್ತ” ವನ್ನು ಎಲ್ಲಾ ರಾಜ್ಯಗಳಲ್ಲಿ ಜಾರಿಗೆ ತರಬೇಕು ಎಂದು ಒತ್ತಾಯಿಸಿ ಜನವರಿ 30ರಿಂದ `ಜನ್ ಆಂದೋಲನ್ ಸತ್ಯಾಗ್ರಹ’ ವನ್ನು ಮಹಾರಾಷ್ಟ್ರದ ರಾಲೇಗನ್ ಸಿದ್ಧಿ ಗ್ರಾಮದಲ್ಲಿ ನಡೆಸುತ್ತಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕೇಂದ್ರದಲ್ಲಿ ನರೇಂದ್ರ ಮೋದಿ ಸರ್ಕಾರ ಭ್ರಷ್ಟಾಚಾರ ವಿರೋಧಿ ಇಲಾಖೆಯನ್ನು ಕಾರ್ಯರೋಪಕ್ಕೆ ತರುವಲ್ಲಿ ವಿಫಲವಾಗಿದೆ ಎಂದರು.

    ಲೋಕಾಪಾಲ್ ಹಾಗೂ ಲೋಕಾಯುಕ್ತ ಕಾರ್ಯರೂಪಕ್ಕೆ ಬಂದರೆ ಮಂತ್ರಿಗಳು ಹಾಗೂ ಅಧಿಕಾರಿಗಳು ಭ್ರಷ್ಟಾಚಾರದಲ್ಲಿ ತೊಡಗಿದ್ದರೆ ಸಿಕ್ಕಿ ಹಾಕಿಕೊಳ್ಳುತ್ತಾರೆ. ಆದ್ದರಿಂದ ಲೋಕಾಪಾಲ್ ಹಾಗೂ ಲೋಕಾಯುಕ್ತವನ್ನು ಜಾರಿಗೆ ತರುತ್ತಿಲ್ಲ. ಇದರಲ್ಲಿ ಒಂದು ವೇಳೆ ಪ್ರಧಾನಿ ಭ್ರಷ್ಟಾಚಾರದಲ್ಲಿ ಶಾಮೀಲಾಗಿದ್ದರೇ ಅವರ ವಿರುದ್ಧವು ಸಾರ್ವಜನಿಕರು ಸಾಕ್ಷಿ ನೀಡಬಹುದು. ಆದರಿಂದ ಯಾವ ಪಕ್ಷವು ಈ ಮಸೂದೆಯನ್ನು ಕಾರ್ಯರೂಪಕ್ಕೆ ತರುತ್ತಿಲ್ಲ ಎಂದು ಆಕ್ರೋಶ ಹೊರಹಾಕಿದರು.

    ದೇಶದಲ್ಲಿ ಯಾವ ರಾಜಕೀಯ ಪಕ್ಷಕ್ಕೂ ಲೋಕಪಾಲ ಜಾರಿಗೆ ಬರುವುದು ಇಷ್ಟವಿಲ್ಲ. 2013ರಲ್ಲೇ ಲೋಕಪಾಲ್ ಮಸೂದೆಯನ್ನು ಅಂಗೀಕರಿಸಲಾಗಿದೆ. ಆದ್ರೆ ಎನ್‍ಡಿಎ ಸರ್ಕಾರ ಮಾತ್ರ ಅದನ್ನ ಜಾರಿಗೆ ತರುತ್ತಿಲ್ಲ, ಭ್ರಷ್ಟಾಚಾರ ಮುಕ್ತ ದೇಶವನ್ನು ಕಟ್ಟಲು ಮುಂದಾಗುತ್ತಿಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ಧ ಅಣ್ಣಾ ಹಜಾರೆ ಅವರು ಬೇಸರ ವ್ಯಕ್ತಪಡಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • 2030ರ ವೇಳೆಗೆ ಭಾರತ ಹೇಗಿರಬೇಕು – ಮೋದಿ ಸರ್ಕಾರದ ಟಾಪ್ 10 ವಿಷನ್‍ಗಳು

    2030ರ ವೇಳೆಗೆ ಭಾರತ ಹೇಗಿರಬೇಕು – ಮೋದಿ ಸರ್ಕಾರದ ಟಾಪ್ 10 ವಿಷನ್‍ಗಳು

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‍ಡಿಎ ಸರ್ಕಾರ ಅಂತಿಮ ಬಜೆಟ್ ಮಂಡನೆ ಮಾಡಿದ್ದು, ಇದರಲ್ಲಿ ಮುಂದಿನ 2030ರ ವೇಳೆಗೆ ಭಾರತ ಹೇಗಿರಬೇಕು ಹಾಗೂ ಯಾವ ಕ್ಷೇತ್ರದಲ್ಲಿ ಸ್ವಾವಲಂಬನೆ ಆಗಿರಬೇಕು ಎನ್ನುವುದರ ಬಗ್ಗೆ ತನ್ನ ವಿಷನ್ ತಿಳಿಸಿದೆ.

    1) 10 ಟ್ರಿಲಿಯನ್ ಡಾಲರ್ ಆರ್ಥಿಕತೆಯನ್ನು ರೂಪಿಸಲು ಸಾಮಾಜಿಕ ಹಾಗೂ ಭೌತಿಕ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿ ಪಡಿಸುವುದು.

    2) ಡಿಜಿಟಲ್ ಇಂಡಿಯಾ ನಿರ್ಮಾಣ ಮಾಡಿ ಹೆಚ್ಚಿನ ಉದ್ಯೋಗ ಅವಕಾಶ ಹಾಗೂ ನವೋದ್ಯಮಗಳನ್ನು ರೂಪಿಸಿ ದೇಶದ ಪ್ರತಿ ಪ್ರಜೆಯನ್ನ ತಲುಪುವ ಗುರಿ ಹೊಂದಲಾಗಿದೆ.

    3) ಪ್ರಮುಖವಾಗಿ ದೇಶವನ್ನ ಸ್ವಚ್ಛ ಹಾಗೂ ಹಸಿರು ಭಾರತವನ್ನಾಗಿ ಮಾರ್ಪಡಿಸುವುದು ಸರ್ಕಾರದ ಗುರಿಯಾಗಿದ್ದು, ಇದಕ್ಕೆ ಎಲೆಕ್ಟ್ರಿಕ್ ವಾಹನಗಳ ಬಳಕೆ ಹಾಗೂ ನವೀಕರಿಸಬಹುದಾದ ಶಕ್ತಿಗಳ ಬಳಕೆಗೆ ಪ್ರಾಮುಖ್ಯತೆ ಒತ್ತು.

    4) ಮೆಕ್ ಇನ್ ಇಂಡಿಯಾ ಯೋಜನೆ ಮೂಲಕ ನಗರದ ಆಧುನಿಕ ಕೈಗಾರಿಕಾ ತಂತ್ರಜ್ಞಾನಗಳನ್ನು ಬಳಕೆ ಮಾಡಿಕೊಂಡು ಗ್ರಾಮೀಣ ಕೈಗಾರಿಕೆಗಳನ್ನು ಹೆಚ್ಚು ಅಭಿವೃದ್ಧಿ.

    5) ಸರ್ಕಾರ ಪ್ರಮುಖ 5ನೇ ಗುರಿ ಸ್ವಚ್ಛ ನದಿಗಳನ್ನು ರೂಪಿಸುವುದಾಗಿದ್ದು, ಆ ಮೂಲಕ ದೇಶದ ಎಲ್ಲಾ ಜನತೆಗೆ ಶುದ್ಧ ಕುಡಿಯುವ ನೀರು ಲಭಿಸುವಂತೆ ಮಾಡುವುದು. ಅಲ್ಲದೇ ಮೈಕ್ರೋ ಇರಿಗೇಷನ್ ತಂತ್ರಜ್ಞಾನ ಬಳಕೆ.

    6) ಕೃಷಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿ, ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಹಾಗೂ ಸಾವಯವ ಆಹಾರ ಉತ್ಪಾದನೆಗೆ ಒತ್ತು.

    7) ಬಾಹ್ಯಾಕಾಶ ಸಂಶೋಧನೆ ಅಭಿವೃದ್ಧಿ ಪಡಿಸಿ ಭಾರತವನ್ನು ಪ್ರಪಂಚದಲ್ಲೇ ಮುಖ್ಯ ಕೇಂದ್ರವಾಗಿಸುವುದರ ಜೊತೆಗೆ 2022ರ ವೇಳೆಗೆ ಗಗನಯಾನಿಗಳನ್ನು ಬಾಹ್ಯಾಕಾಶಕ್ಕೆ ಕಳುಹಿಸುವ ಗುರಿ.

    6) ದೇಶದ ಆರ್ಥಿಕತೆಯ ಪ್ರಮುಖ ಭಾಗವಾಗಿರುವ ಕರಾವಳಿ ಪ್ರದೇಶವನ್ನು ರಕ್ಷಣೆ ಮಾಡಿ, ನೀಲಿ ಆರ್ಥಿಕತೆಗೆ ಶಕ್ತಿ ತುಂಬಲು ‘ಸಾಗರ್ ಮಲಾ’ ಯೋಜನೆಯನ್ನು ಜಾರಿ ಮಾಡುವುದು.

    9) ಆರೋಗ್ಯವಂತ ಭಾರತ ನಿರ್ಮಾಣ ಮಾಡಿ, ಎಲ್ಲರಿಗೂ ಉತ್ತಮ ಸಮಗ್ರ ಆರೋಗ್ಯ ವ್ಯವಸ್ಥೆ ನಿರ್ಮಾಣಕ್ಕೆ ಒತ್ತು

    10) ಅಂತಿಮವಾಗಿ ಕನಿಷ್ಠ ಸರ್ಕಾರದ ಆಡಳಿತ ರೂಪಿಸಿ ಗರಿಷ್ಠ ಪ್ರಮಾಣದಲ್ಲಿ ಜನ ಸ್ನೇಹಿ, ಜವಾಬ್ದಾರಿಯುತ ಆಡಳಿತವನ್ನು ನೀಡುವುದು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ರಕ್ಷಣಾ ಬಜೆಟ್ 3 ಲಕ್ಷ ಕೋಟಿ ರೂ.ಗೆ ಹೆಚ್ಚಳ, ಹೆಚ್ಚುವರಿ ನೀಡಲು ನಾವು ಸಿದ್ಧ

    ರಕ್ಷಣಾ ಬಜೆಟ್ 3 ಲಕ್ಷ ಕೋಟಿ ರೂ.ಗೆ ಹೆಚ್ಚಳ, ಹೆಚ್ಚುವರಿ ನೀಡಲು ನಾವು ಸಿದ್ಧ

    ನವದೆಹಲಿ: ದೇಶದ ಗಡಿ ರಕ್ಷಣೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡುವ ಉದ್ದೇಶದಿಂದ ಈ ಬಾರಿಯ ಕೇಂದ್ರ ಬಜೆಟ್‍ನಲ್ಲಿ ರಕ್ಷಣೆಗೆ ಹೆಚ್ಚುವರಿ ಅನುದಾನ ನೀಡುವಾಗಿ ಪಿಯೂಷ್ ಗೋಯಲ್ ತಿಳಿಸಿದ್ದು, ರಕ್ಷಣಾ ಬಜೆಟನ್ನು 3 ಲಕ್ಷ ಕೋಟಿ ರೂ.ಗಳಿಗೆ ಹೆಚ್ಚಳ ಮಾಡಿದ್ದಾರೆ.

    ಕಳೆದ ವರ್ಷದ ಬಜೆಟ್ ನಲ್ಲಿ 2,95,511 ಕೋಟಿ ರೂ. ಹಂಚಿಕೆ ಮಾಡಲಾಗಿತ್ತು. ಆದರೆ ಈ ವರ್ಷ ಅದನ್ನು ಮತ್ತಷ್ಟು ಹೆಚ್ಚಳ ಮಾಡಿದ್ದಾರೆ. ದೇಶದ ರಕ್ಷಣೆ ಮಾಡುವುದು ಸೈನಿಕರು ನಮ್ಮ ಹೆಮ್ಮೆ ಆಗಿದ್ದು, ನಾವು 3 ಲಕ್ಷ ಕೋಟಿ ರೂ.ಗಳನ್ನು ಹಂಚಿಕೆ ಮಾಡಿದ್ದೇವೆ. ಒಂದೊಮ್ಮೆ ಹೆಚ್ಚುವರಿ ಅನುದಾನ ಬೇಕಾದರೂ ನಾವು ನೀಡುತ್ತೇವೆ ಎಂದು ಗೋಯಲ್ ಸ್ಪಷ್ಟಪಡಿಸಿದ್ದಾರೆ.

    ಕಳೆದ 40 ವರ್ಷಗಳಿಂದ ಜಾರಿಯಾಗದೇ ಇದ್ದ ಒನ್ ರ್‍ಯಾಂಕ್ ಒನ್ ಪೆನ್ಷನ್ ಯೋಜನೆ ಜಾರಿ ಮಾಡಿದ್ದು, ಇದಕ್ಕಾಗಿ 35 ಸಾವಿರ ಕೋಟಿ ರೂ.ಗಳನ್ನು ವೆಚ್ಚ ಮಾಡಿದೆ ಎಂದು ಗೋಯಲ್ ತಿಳಿಸಿದರು. ಅಲ್ಲದೇ ಬಜೆಟ್ ಮಂಡನೆ ವೇಳೆ ಈ ಹಿಂದಿನ ಯುಪಿಎ ಸರ್ಕಾರದ ಅನುದಾನವನ್ನು ಪ್ರಸ್ತಾಪ ಮಾಡಿ, ಕೇವಲ 500 ಕೋಟಿ ರೂ.ಗಳನ್ನು ಯೋಜನೆಗೆ ನೀಡಿದ್ದರು ಎಂದು ತಿಳಿಸಿದ್ದಾರೆ. ಯುಪಿಎ ಬಜೆಟ್ ಮಂಡನೆ ವೇಳೆ ಕೇವಲ ಒನ್ ರ್‍ಯಾಂಕ್ ಒನ್ ಪೆನ್ಷನ್ ಯೋಜನೆ ಕುರಿತು ಭರವಸೆಯನ್ನು ಮಾತ್ರ ನೀಡಲಾಗಿತ್ತು. ಆದರೆ ನಾವು ಅದನ್ನು ಜಾರಿ ಮಾಡಿದ್ದೇವೆ ಎಂದು ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ಮಹಾರಾಷ್ಟ್ರಕ್ಕೆ 4 ಸಾವಿರ ಕೋಟಿ, ರಾಜ್ಯಕ್ಕೆ 900 ಕೋಟಿ ರೂ. ಬರ ಪರಿಹಾರ- ಕೇಂದ್ರದ ನಿರ್ಧಾರಕ್ಕೆ ಸಿಎಂ ಕಿಡಿ

    ಮಹಾರಾಷ್ಟ್ರಕ್ಕೆ 4 ಸಾವಿರ ಕೋಟಿ, ರಾಜ್ಯಕ್ಕೆ 900 ಕೋಟಿ ರೂ. ಬರ ಪರಿಹಾರ- ಕೇಂದ್ರದ ನಿರ್ಧಾರಕ್ಕೆ ಸಿಎಂ ಕಿಡಿ

    ಬೆಂಗಳೂರು: ಬರ ಪರಿಹಾರ ವಿತರಣೆಯಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಸಿಎಂ ಕುಮಾರಸ್ವಾಮಿ ಆರೋಪಿಸಿದ್ದಾರೆ.

    ನಗರದಲ್ಲಿ ಮಾತನಾಡಿದ ಅವರು, 2,500 ಕೋಟಿ ರೂ. ಪರಿಹಾರ ನೀಡುವಂತೆ ರಾಜ್ಯ ಸರ್ಕಾರದಿಂದ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿತ್ತು. ಆದರೆ ರಾಜ್ಯಕ್ಕೆ 900 ಕೋಟಿ ರೂ. ವಿತರಣೆ ಮಾಡಲಾಗಿದೆ. ನೆರೆಯ ರಾಜ್ಯ ಮಹಾರಾಷ್ಟ್ರಕ್ಕೆ 4 ಸಾವಿರ ಕೋಟಿ ರೂ. ನೀಡಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ತಾರತಮ್ಯ ನೀತಿ ಅನಿಸರಿಸಿದ್ದು, ನಮ್ಮ ರಾಜ್ಯಕ್ಕೆ ಅನ್ಯಾಯ ಮಾಡಿದೆ ಎಂದು ದೂರಿದರು.

    ಬರ ಪರಿಹಾರ ವಿತರಣೆಯಲ್ಲಿ ಕೇಂದ್ರ ಸರ್ಕಾರದ ತಾರಮ್ಯ ನೀತಿ ನನಗೆ ನೋವು ತಂದಿದೆ. ಮತ್ತೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿ, ಹೆಚ್ಚಿನ ಹಣವನ್ನು ನೀಡುವಂತೆ ಮನವಿ ಮಾಡುತ್ತೇನೆ ಎಂದರು.

    ಈ ವಿಚಾರವಾಗಿ ಕ್ಯಾಬಿನೆಟ್‍ನಲ್ಲಿ ಇಂದು ಚರ್ಚೆ ಮಾಡುತ್ತೇವೆ. ಇದು ಕೇಂದ್ರದ ತಾರತಮ್ಯ ನೀತಿ. ಮುಂದಿನ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಮಹಾರಾಷ್ಟ್ರಕ್ಕೆ ಹೆಚ್ಚು ಪರಿಹಾರ ನೀಡಲಾಗಿದೆ. ಕೇಂದ್ರದ ತೀರ್ಮಾನ ನಿರಾಸೆ ತಂದಿದೆ. ಚುನಾವಣೆ ಉದ್ದೇಶದಿಂದಲೇ ಮಹಾರಾಷ್ಟ್ರಕ್ಕೆ 4 ಸಾವಿರ ಕೋಟಿ ರೂ.ವನ್ನು ನೀಡಿ, ಕರ್ನಾಟಕದ ಜನತೆಗೆ ಕೇಂದ್ರ ಮೋಸ ಮಾಡಿದೆ ಎಂದು ಅಸಮಾಧಾನ ಹೊರಹಾಕಿದರು.

    ಒಟ್ಟು 7,214 ಕೋಟಿ ರೂ. ಬಿಡುಗಡೆ:
    7 ರಾಜ್ಯ ಹಾಗೂ ಒಂದು ಕೇಂದ್ರಾಡಳಿತ ಪ್ರದೇಶಕ್ಕೆ ಕೇಂದ್ರ ಸರ್ಕಾರ ಮಂಗಳವಾರ 7,214 ಕೋಟಿ ರೂ. ಪರಿಹಾರ ಪ್ರಕಟಿಸಿದೆ. ಕೇಂದ್ರ ಹಣಕಾಸು ಸಚಿವ ಪಿಯೂಷ್ ಗೋಯಲ್, ಕೃಷಿ ಸಚಿವ ರಾಧಾ ಮೋಹನ್ ಸಿಂಗ್ ಹಾಗೂ ವಿವಿಧ ಸಚಿವಾಲಯದ ಅಧಿಕಾರಿಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.

    ಯಾವ ರಾಜ್ಯಕ್ಕೆ ಎಷ್ಟು?
    ಮಹಾರಾಷ್ಟ್ರ 4,714 ಕೋಟಿ ರೂ., ಕರ್ನಾಟಕ 949.49 ಕೋಟಿ ರೂ., ಆಂಧ್ರ ಪ್ರದೇಶ 900 ಕೋಟಿ ರೂ., ಹಿಮಾಚಲ ಪ್ರದೇಶ 317 ಕೋಟಿ ರೂ., ಉತ್ತರ ಪ್ರದೇಶ 191 ಕೋಟಿ ರೂ., ಗುಜರಾತ್ 127 ಕೋಟಿ ರೂ., ಪುದುಚೆರಿ 13 ಕೋಟಿ ರೂ. ಪರಿಹಾರವನ್ನು ಬಿಡುಗಡೆ ಮಾಡಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ಶ್ರೀಗಳಿಗೆ ಭಾರತ ರತ್ನ ಕೊಡದಿದ್ರೆ ಪ್ರತಿಭಟನೆ ಮಾಡ್ತೀವಿ: ಬಸನಗೌಡ ಪಾಟೀಲ್ ಯತ್ನಾಳ್

    ಶ್ರೀಗಳಿಗೆ ಭಾರತ ರತ್ನ ಕೊಡದಿದ್ರೆ ಪ್ರತಿಭಟನೆ ಮಾಡ್ತೀವಿ: ಬಸನಗೌಡ ಪಾಟೀಲ್ ಯತ್ನಾಳ್

    ವಿಜಯಪುರ: ತ್ರಿವಿಧ ದಾಸೋಹಿ ಶ್ರೀ ಶಿವಕುಮಾರ ಸ್ವಾಮೀಜಿಗಳು ವಿಶ್ವದಲ್ಲೇ ಶ್ರೇಷ್ಠ ವ್ಯಕ್ತಿ. ಅವರು ಮಾಡಿರುವ ಕಾಯಕಕ್ಕೆ ಶ್ರೀಗಳಿಗೆ ಭಾರತ ರತ್ನ ನೀಡಬೇಕು ಇಲ್ಲವಾದರೆ ಪ್ರತಿಭಟನೆ ಮೂಲಕ ಅನ್ಯಾಯವನ್ನು ಸರಿಪಡಿಸಿಕೊಳ್ಳುತ್ತೇವೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ನೀಡಬೇಕು ಎಂದು ಎಲ್ಲೆಡೆಯಿಂದ ಜನರು ಆಗ್ರಹಿಸುತ್ತಿದ್ದಾರೆ. ಭಾರತ ರತ್ನ ನೀಡದಿದ್ದರೂ ಶ್ರೇಷ್ಠ ಸಂತರಾಗಿ ಎಲ್ಲೆಡೆ ಹೆಸರುವಾಸಿಯಾಗಿದ್ದಾರೆ. ಅವರ ಹೆಸರನ್ನು ಕೇಂದ್ರ ಸರ್ಕಾರ ಈ ಬಾರಿ ಭಾರತ ರತ್ನ ಪ್ರಶಸ್ತಿಗೆ ಪರಿಗಣಿಸಬೇಕಾಗಿತ್ತು. ಶ್ರೀಗಳಿಗೆ ಭಾರತ ರತ್ನ ಕೊಡಿಸುವಲ್ಲಿ ಲೋಕಸಭಾ ಹಾಗು ರಾಜ್ಯ ಸಭಾ ಸದಸ್ಯರು ಪ್ರಯತ್ನ ಮಾಡಬೇಕು. ಅನ್ಯಾಯವಾದಾಗ ಪ್ರತಿಭಟನೆ ಮೂಲಕ ಸರಿಪಡಿಸಿಕೊಳ್ಳಬೇಕು ಎಂದು ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

    ಈ ಹಿಂದೆ ಆಲಮಟ್ಟಿ ಜಲಾಶಯದ ಎತ್ತರವನ್ನು ಹೆಚ್ಚಿಸಬೇಕಾದರೆ ಆಂಧ್ರಪ್ರದೇಶದ ಸರ್ಕಾರ ವಿರೋಧ ಮಾಡಿತ್ತು. ಆಗ ವಾಜಪೇಯಿ ಪ್ರಧಾನಿಯಾಗಿದ್ದಾಗ ನಾನು ಕೇಂದ್ರ ಸಚಿವನಿದ್ದೆ. ಜಲಾಶಯದ ಎತ್ತರಕ್ಕಾಗಿ ಹೋರಾಟ ಮಾಡಿ ಯಶಸ್ವಿಯಾಗಿದ್ದೆವು. ಅದೇ ಮಾದರಿಯಲ್ಲಿ ಈಗ ಹೋರಾಡಬೇಕಿದೆ. ತ್ರಿವಿಧ ದಾಸೋಹಿಗೆ ಭಾರತ ರತ್ನ ಕೊಡಬೇಕೆಂದು ನಾನು ಪ್ರಧಾನಿಗಳಿಗೆ ಒತ್ತಾಯ ಮಾಡುತ್ತೇನೆ. ಭಾರತ ರತ್ನ ಕೊಡದಿದ್ದರೆ ಪ್ರತಿಭಟನೆ ಮಾಡಿ ನಮ್ಮ ಶಕ್ತಿ ತೋರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

    ಕಾಂಗ್ರೆಸ್ ಶಾಸಕರ ಗಲಾಟೆ ವಿಚಾರವಾಗಿ ಪ್ರತಿಕ್ರಿಯಿಸಿ, ಗಣಿ ರಾಜಕೀಯದ ಪರಿಣಾಮದಿಂದಾಗಿ ಬಿಯರ್ ಬಾಟಲಿಗಳಿಂದ ಹೊಡೆದಾಟ ಶುರುವಾಗಿದೆ. ಗಣಿ ರಾಜಕೀಯ ಕರ್ನಾಟಕಕ್ಕೆ ಶಾಪವಾಗಿ ಪರಿಣಮಿಸಿದೆ. ಬಾಟಲಿಯಿಂದ ಹೊಡೆದಾಡುವ ಅಯೋಗ್ಯರೆಲ್ಲಾ ಶಾಸಕರಾಗಿದ್ದಾರೆ ಎಂದು ಕಾಂಗ್ರೆಸ್ ಶಾಸಕರನ್ನು ಟೀಕಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಹೆರಿಗೆ ರಜೆಯ ಸಂಬಳದಲ್ಲಿ ಸಿಗಲಿದೆ ತೆರಿಗೆ ವಿನಾಯಿತಿ

    ಹೆರಿಗೆ ರಜೆಯ ಸಂಬಳದಲ್ಲಿ ಸಿಗಲಿದೆ ತೆರಿಗೆ ವಿನಾಯಿತಿ

    ನವದೆಹಲಿ: ಕೇಂದ್ರ ಸರ್ಕಾರವು ಫೆ. 1ರಂದು ಮಂಡನೆ ಮಾಡಲಿರುವ ಮಧ್ಯಂತರ ಬಜೆಟ್‍ನಲ್ಲಿ ಹೆರಿಗೆ ರಜೆಯಲ್ಲಿ ಪಡೆಯುವ ಸಂಬಳಕ್ಕೆ ತೆರಿಗೆ ವಿನಾಯಿತಿ ಘೋಷಿಸುವ ಸಾಧ್ಯತೆ ಇದೆ.

    ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಹಲವು ಜನಪರ ಯೋಜನೆಗಳನ್ನು ಘೋಷಿಸಲಿದೆ. ಮಧ್ಯಂತರ ಬಜೆಟ್‍ನಲ್ಲಿ ಹೆರಿಗೆ ರಜೆಯಲ್ಲಿ ಪಡೆಯುವ ಸಂಬಳಕ್ಕೆ ತೆರಿಗೆ ವಿನಾಯಿತಿ ನೀಡುವ ಸಾಧ್ಯತೆ ಇದ್ದು, ಈ ಮೂಲಕ ಉದ್ಯೋಗಸ್ಥ ಮಹಿಳೆಯರ ಬೆಂಬಲ ಗಳಿಸಲು ಬಿಜೆಪಿ ಮುಂದಾಗಿದೆ. ಕಾರ್ವಿಕ ಸಚಿವಾಲಯ ಸಲ್ಲಿಸಿರುವ ಈ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿ ಪರಿಶೀಲಿಸುತ್ತಿದೆ ಎಂದು ಮಧ್ಯಮವೊಂದು ವರದಿ ಪ್ರಕಟಿಸಿದೆ.

    ಹೆರಿಗೆ ಸೌಲಭ್ಯ ಕಾಯ್ದೆಯನ್ನು 2017ರಲ್ಲಿ ಸರ್ಕಾರ ತಿದ್ದುಪಡಿ ಮಾಡಿತ್ತು. ಆಗ ಉದ್ಯೋಗಸ್ಥ ಮಹಿಳೆಯರಿಗೆ ಕೊಡುವ ಸಂಬಳ ಸಹಿತ ಹೆರಿಗೆ ರಜೆಯನ್ನು 12 ವಾರದಿಂದ 26 ವಾರಕ್ಕೆ ಏರಿಸಿತ್ತು. ಈ ಹಿಂದೆ ಕಾರ್ವಿಕ ಸಚಿವಾಲಯವು ಕಡಿಮೆ ಸಂಬಳ ಪಡೆಯುವ ಮಹಿಳೆಯರಿಗೂ ಕೂಡ 26 ವಾರಗಳ ಹೆರಿಗೆ ರಜೆ ಸಿಗುವಂತೆ ಮಾಡಲು ಕೆಲವು ಕ್ರಮಗಳ ಬಗ್ಗೆ ಸರ್ಕಾರದ ಬಳಿ ಪ್ರಸ್ತಾವನೆ ಇಟ್ಟಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಐತಿಹಾಸಿಕ ನಿರ್ಧಾರ – ಸೇನಾ ಮಿಲಿಟರಿ ಪೊಲೀಸ್ ಪಡೆಯಲ್ಲಿ ಮಹಿಳೆಯರಿಗೆ ಅವಕಾಶ

    ಐತಿಹಾಸಿಕ ನಿರ್ಧಾರ – ಸೇನಾ ಮಿಲಿಟರಿ ಪೊಲೀಸ್ ಪಡೆಯಲ್ಲಿ ಮಹಿಳೆಯರಿಗೆ ಅವಕಾಶ

    ನವದೆಹಲಿ: ಮಹಿಳೆಯರಿಗೆ ಭಾರತೀಯ ಸೇನೆಯ ಮಿಲಿಟರಿ ಪೊಲೀಸ್ ಪಡೆಯಲ್ಲಿ ಕರ್ತವ್ಯ ನಿರ್ವಹಿಸಲು ರಕ್ಷಣಾ ಸಚಿವಾಲಯವು ಅನುಮತಿ ನೀಡಿವ ಮೂಲಕ ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡಿದೆ.

    ಶುಕ್ರವಾರದಂದು ರಕ್ಷಣಾ ಸಚಿವೆ ನಿರ್ಮಲಾ ಸೀತರಾಮನ್ ಈ ಐತಿಹಾಸಿಕ ನಿರ್ಧಾರವನ್ನು ಜಾರಿಗೆ ತಂದಿದ್ದಾರೆ. ಈ ಹಿಂದೆ ಮಹಿಳೆಯರನ್ನು ಕೇವಲ ಸೇನಾ ಅಧಿಕಾರಿಗಳಾಗಿ ಆಯ್ದ ಶಾಖೆಗಳಿಗೆ ಮಾತ್ರ ನೇಮಿಸಿಕೊಳ್ಳಲಾಗುತ್ತಿತ್ತು. ಆದ್ರೆ ಇನ್ಮುಂದೆ ಮಹಿಳೆಯರು ಕೂಡ ಭಾರತೀಯ ಸೇನೆಯ ಮಿಲಿಟರಿ ಪೊಲೀಸ್ ಪಡೆಯಲ್ಲಿ ಸೇವೆ ಸಲ್ಲಿಸಲು ಸರ್ಕಾರ ಅನುಮತಿ ನೀಡಿದೆ.

    ಸೇನೆಯ ಮಿಲಿಟರಿ ಪೊಲೀಸ್ ಪಡೆಯಲ್ಲಿ ಶೇ.20 ರಷ್ಟು ನೇಮಕಾತಿಯನ್ನು ಮಹಿಳೆಯರಿಗೆ ಮೀಸಲಿಡಲಾಗುವುದು ಎಂದು ರಕ್ಷಣಾ ಸಚಿವೆ ನಿರ್ಮಲಾ ಸೀತರಾಮನ್ ಟ್ವೀಟ್ ಮಾಡಿ ತಿಳಿಸಿದ್ದಾರೆ.

    ಮಹಿಳೆಯರಿಗೆ ಮಿಲಿಟರಿ ಪೊಲೀಸ್ ಪಡೆಯಲ್ಲಿ ಅವಕಾಶ ನೀಡಬೇಕೆಂದು ಭಾರತೀಯ ಸೇನೆಯ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಕೇಂದ್ರ ಸರ್ಕಾರದ ಮುಂದೆ ಪ್ರಸ್ತಾಪ ಇಟಿದ್ದರು. ಈ ಪ್ರಸ್ತಾಪದ ಗಂಭೀರತೆಯನ್ನು ಅರಿತ ಪ್ರಧಾನಿ ಮೋದಿ ಹಾಗೂ ರಕ್ಷಣಾ ಸಚಿವಾಲಯವು ಮಹಿಳೆಯರಿಗೆ ಸೇನಾ ಮಿಲಿಟರಿ ಪೊಲೀಸ್ ಪಡೆಯಲ್ಲಿ ಅವಕಾಶ ಕಲ್ಪಿಸಿಕೊಟ್ಟಿದೆ.

    ಭಾರತೀಯ ಸೇನಾ ಮಿಲಿಟರಿ ಪೊಲೀಸ್ ಪಡೆಯಲ್ಲಿ ಪುರುಷರಿಗೆ ಮಾತ್ರ ಅವಕಾಶ ಇತ್ತು. ಕೆಲವೊಂದು ಕಾರ್ಯಚರಣೆ ಮಾಡುವ ಸಮಯದಲ್ಲಿ ಮಹಿಳೆಯರು ಮುಂದೆ ನಿಲ್ಲುತ್ತಿರುತ್ತಾರೆ. ಈ ಸಮಯದಲ್ಲಿ ಇವರನ್ನು ನಿಯಂತ್ರಿಸಿ ಮುಂದೆ ಹೋಗಲು ಸೈನಿಕರಿಗೆ ಸಮಸ್ಯೆ ಆಗುತಿತ್ತು. ಈ ಎಲ್ಲ ಕಾರ್ಯಾಚರಣೆಯಲ್ಲಿ ಮಹಿಳಾ ಸೈನಿಕರಿದ್ದರೆ ಕಾರ್ಯಾಚರಣೆಗೆ ಸಹಾಯವಾಗುತ್ತದೆ. ಹೀಗಾಗಿ ಮಿಲಿಟರಿ ಪೊಲೀಸ್ ಪಡೆಯಲ್ಲಿ ಮಹಿಳೆಯರಿಗೆ ಅವಕಾಶ ನೀಡಿ ಎಂದು ಭಾರತೀಯ ಸೇನೆ ಸರ್ಕಾರಕ್ಕೆ ಪ್ರಸ್ತಾಪ ಸಲ್ಲಿಸಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv