Tag: Central Government

  • ಚಿನ್ನ ಗೆದ್ದ 16ರ ಹರೆಯದ ಶೂಟರ್ ಹಿಂದಿದೆ ಖೇಲೋ ಇಂಡಿಯಾ! ಏನಿದು ಯೋಜನೆ?

    ಚಿನ್ನ ಗೆದ್ದ 16ರ ಹರೆಯದ ಶೂಟರ್ ಹಿಂದಿದೆ ಖೇಲೋ ಇಂಡಿಯಾ! ಏನಿದು ಯೋಜನೆ?

    ನವದೆದಲಿ: ಇಂಡೋನೇಷಿಯಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಏರ್ ಪಿಸ್ತೂಲ್‍ನಲ್ಲಿ 16ನೇ ವರ್ಷದ ಸೌರಭ್ ಚೌಧರಿ ಚಿನ್ನ ಪದಕ ಜಯಿಸಿ ದೇಶದ ಜನರ ಮನ ಗೆದ್ದಿದ್ದಾರೆ.

    ಕ್ರೀಡಾಕೂಟದ ಪುರುಷರ 10 ಮೀಟರ್ ಏರ್ ಪಿಸ್ತೂಲ್ ವಿಭಾಗದಲ್ಲಿ ಸೌರಭ್ ಚೌಧರಿ ಚಿನ್ನ ಪದಕ ಗೆದಿದ್ದಾರೆ. ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಸದ್ಯ ಭಾರತ 4 ಚಿನ್ನ, 3 ಬೆಳ್ಳಿ ಮತ್ತು 4 ಕಂಚು ಗೆಲ್ಲುವ ಮೂಲಕ 6ನೇ ಸ್ಥಾನ ಗಳಿಸಿದೆ.

    ಖೇಲೋ ಇಂಡಿಯಾ ಪ್ರತಿಭೆ: ಸೌರಭ್ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಖೇಲೋ ಇಂಡಿಯಾ ಮೂಲಕ ಬೆಳಕಿಗೆ ಬಂದವರು. ಫೆಬ್ರವರಿಯಲ್ಲಿ ದೆಹಲಿಯ ಇಂದಿರಾ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಶಾಲಾ ಕ್ರೀಡಾಕೂಟದಲ್ಲಿ ಭಾಗಹಿಸಿ ಪದಕ ಗೆದ್ದಿದ್ದರು. ಬಳಿಕ ತರಬೇತಿ ಪಡೆದು ಜುಲೈನಲ್ಲಿ ಜರ್ಮನಿಯಲ್ಲಿ ನಡೆದಿದ್ದ ಕಿರಿಯರ ವಿಶ್ವಕಪ್ ನಲ್ಲಿ 243.7 ಅಂಕ ಪಡೆದು ದಾಖಲೆ ನಿರ್ಮಿಸಿ ಚಿನ್ನದ ಪದಕ ಗೆದ್ದಿದ್ದರು. ಅಲ್ಲದೆ ಅರ್ಜೆಂಟೀನಾದಲ್ಲಿ ನಡೆಯಲಿರುವ ಕಿರಿಯರ ಒಲಿಂಪಿಕ್ಸ್ ಗೂ ಆರ್ಹತೆ ಪಡೆದಿದ್ದರು. ಉತ್ತರ ಪ್ರದೇಶದ ಪ್ರತಿಭೆಯಾಗಿರುವ ಸೌರಭ್ ಕಳೆದ ಮೂರು ವರ್ಷಗಳ ಹಿಂದೆಯಷ್ಟೇ ಶೂಟಿಂಗ್ ಕ್ರೀಡೆ ಆಯ್ಕೆ ಮಾಡಿಕೊಂಡಿದ್ದರು. 2016 ರಲ್ಲಿ ತೆಹ್ರಾನ್ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತವನ್ನು ಮೊದಲ ಬಾರಿಗೆ ಪ್ರತಿನಿಧಿಸಿದ್ದರು.

    ಖೇಲೋ ಇಂಡಿಯಾ: ಗ್ರಾಮೀಣ ಹಾಗೂ ತೆರೆಮರೆಯಲ್ಲಿ ಅಡಗಿರುವ ಕ್ರೀಡಾ ಪ್ರತಿಭೆಗಳನ್ನು ಗುರುತಿಸುವ ನಿಟ್ಟಿನಲ್ಲಿ, ಕೇಂದ್ರ ಸರ್ಕಾರ ಕೈಗೊಂಡಿರುವ ಮಹತ್ವಾಕಾಂಕ್ಷಿ ಯೋಜನೆ `ಖೇಲೋ ಇಂಡಿಯಾ’. ಇದರ ಮೊದಲ ಚೊಚ್ಚಲ ಆವೃತ್ತಿ ಫೆಬ್ರವರಿಯಲ್ಲಿ 8 ದಿನಗಳ ಕಾಲ ದೆಹಲಿಯಲ್ಲಿ ನಡೆದಿತ್ತು.

    ಪ್ರತಿಭಾವಂತರ ಆಯ್ಕೆ: ಖೇಲೋ ಇಂಡಿಯಾ ಕ್ರೀಡಾಕೂಟದಲ್ಲಿ ಭಾಗವಹಿಸುವ ಆಟಗಾರರಿಗೆ ಪದಕ ಗೆಲ್ಲುವ ಅವಕಾಶವಿರುತ್ತದೆ. ಈ ಯೋಜನೆಯ ಅನ್ವಯ ಒಟ್ಟು 1 ಸಾವಿರ ಕ್ರೀಡಾಪಟುಗಳನ್ನು ಆಯ್ಕೆ ಮಾಡಿ ಅವರಿಗೆ ವಿಶ್ವದರ್ಜೆಯ ತರಬೇತಿ ಕಲ್ಪಿಸಲಾಗುತ್ತದೆ. ಕ್ರೀಡಾಕೂಟದಲ್ಲಿ 18 ಕ್ರೀಡೆಗಳಲ್ಲಿ ವಿವಿಧ ರಾಜ್ಯಗಳ ಸುಮಾರು 5 ಸಾವಿರ ಕ್ರೀಡಾಪಟುಗಳು ಭಾವಹಿಸಿದ್ದರು.

    ಸೌಲಭ್ಯ ಏನು?
    ಖೇಲೋ ಇಂಡಿಯಾ ಕ್ರೀಡಾಪಟುದಲ್ಲಿ ಆಯ್ಕೆಯಾದ ಕ್ರೀಡಾಪಟುಗಳಿಗೆ ಕೇಂದ್ರ ಸರ್ಕಾರ 8 ವರ್ಷಗಳ ಕಾಲ ವಾರ್ಷಿಕ 5 ಲಕ್ಷ ರೂ. ಆರ್ಥಿಕ ನೆರವು ನೀಡಲಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿಂಚುವ ಕ್ರೀಡಾಪಟುಗಳಿಗೆ ಹೆಚ್ಚಿನ ಆರ್ಥಿಕ ನೆರವು ನೀಡುಲಾಗುತ್ತದೆ.

    16 ಕ್ರೀಡೆಗಳು: ಶೂಟಿಂಗ್, ವೇಟ್ ಲಿಫ್ಟಿಂಗ್, ಜುಡೋ, ಕುಸ್ತಿ, ಬಾಸ್ಕೆಟ್ ಬಾಲ್, ಫುಟ್ಬಾಲ್, ಹಾಕಿ, ಕಬಡ್ಡಿ, ಖೋ-ಖೋ, ವಾಲಿಬಾಲ್, ಜಿಮ್ನಾಸ್ಟಿಕ್ಸ್, ಆರ್ಚರಿ, ಅಥ್ಲೆಟಿಕ್ಸ್, ಬ್ಯಾಡ್ಮಿಂಟನ್, ಬಾಕ್ಸಿಂಗ್, ಈಜು.

    ಫೆಬ್ರವರಿಯಲ್ಲಿ ಒಂದು ವಾರದ ಕಾಲ ನಡೆದ ಕ್ರೀಡಾಕೂಟಕ್ಕೆ ಅಂದು ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದರು. ಈ ವೇಳೆ ಕ್ರೀಡಾಕೂಟದಲ್ಲಿ ಮುಂದಿನ ವರ್ಷದಿಂದ ಮತ್ತಷ್ಟು ಕ್ರೀಡೆಗಳನ್ನು ಖೇಲೋ ಇಂಡಿಯಾ ಯೋಜನೆಯಡಿ ಸೇರ್ಪಡೆಗೊಳ್ಳಲಿದ್ದಾರೆ ಎಂದು ಘೋಷಿಸಿದ್ದರು. ಅಲ್ಲದೇ ಭವಿಷ್ಯದ ಚಾಂಪಿಯನ್ ಕ್ರೀಡಾಪಟುಗಳನ್ನು ಗುರುತಿಸುವ ಅವರಿಗೆ ಉತ್ತಮ ಬೆಂಬಲ ನೀಡುವ ಉದ್ದೇಶ ಯೋಜೆನೆಯ ಹಿಂದಿದೆ ಎಂದು ತಿಳಿಸಿದ್ದರು. ಖೇಲೋ ಇಂಡಿಯಾ ಯೋಜನೆಯೂ ಈ ಹಿಂದೆ ಜಾರಿಗೆ ಮಾಡಲಾಗಿದ್ದ ರಾಜೀವ್ ಗಾಂಧಿ ಖೇಲ್ ಅಭಿಯಾನ್, ರಾಷ್ಟ್ರೀಯ ಕ್ರೀಡಾ ಪ್ರತಿಭಾನ್ವೇಷಣೆ ಯೋಜನೆ, ನಗರ ಕ್ರೀಡಾ ಸೌಕರ್ಯ ಯೋಜನೆಗಳ ವಿಲೀನ ರೂಪ ಇದಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಆಯುಷ್ಮಾನ್ ಭಾರತ್ ಯೋಜನೆ ಸದ್ಯಕ್ಕೆ ಕರ್ನಾಟಕಕ್ಕೆ ಒಳಪಡಲ್ಲ!

    ಆಯುಷ್ಮಾನ್ ಭಾರತ್ ಯೋಜನೆ ಸದ್ಯಕ್ಕೆ ಕರ್ನಾಟಕಕ್ಕೆ ಒಳಪಡಲ್ಲ!

    ಬೆಂಗಳೂರು: ಜಗತ್ತಿನ ಅತಿ ದೊಡ್ಡ ಆರೋಗ್ಯ ರಕ್ಷಾ ಯೋಜನೆ, ದೇಶದ 50 ಕೋಟಿ ಜನರಿಗೆ ತಲುಪಲಿರುವ `ಆಯುಷ್ಮಾನ್ ಭಾರತ್’ ಯೋಜನೆ ಕರ್ನಾಟಕದ ಜನತೆಯ ಕೈತಪ್ಪಿದ್ದು, ಈಗ ಅದನ್ನು ಅಳವಡಿಸಿಕೊಳ್ಳಲು ರಾಜ್ಯಸರ್ಕಾರ ಮುಂದಾಗಿದೆ.

    ಈಗಾಗಲೇ ರಾಜ್ಯದಲ್ಲಿ ‘ಆರೋಗ್ಯ ಕರ್ನಾಟಕ’ ಯೋಜನೆ ಜಾರಿಯಲ್ಲಿದ್ದು, ಆಯುಷ್ಮಾನ್ ಭಾರತ್ ಯೋಜನೆಯೂ ಹೆಚ್ಚು ಕಡಿಮೆ ಇದೇ ರೀತಿ ಇದೆ. ಹೀಗಾಗಿ ಕೇಂದ್ರ ಸರ್ಕಾರದ ಯೋಜನೆಯ ಸಾಧಕ ಬಾಧಕಗಳನ್ನ ಅಧ್ಯಯನ ಮಾಡಲು ಸಮಯ ತೆಗೆದುಕೊಳುತ್ತೇವೆ ಎಂದು ರಾಜ್ಯ ಸರ್ಕಾರ ಪಟ್ಟು ಹಿಡಿದಿತ್ತು.

    ಈಗ ಕೇಂದ್ರ ಸರ್ಕಾರದ ಜತೆ ಒಪ್ಪಂದ ಮಾಡಿಕೊಳ್ಳಲು ರಾಜ್ಯ ಸರ್ಕಾರ ತನ್ನ ಪ್ರಕ್ರಿಯೆಯನ್ನು ಆರಂಭಿಸಿದೆ. ಎರಡು ಯೋಜನೆಗಳನ್ನು ವಿಲೀನಗೊಳಿಸಿದ ಬಳಿಕ ಶೀಘ್ರದಲ್ಲೇ ಒಪ್ಪಂದಕ್ಕೆ ಸಹಿ ಹಾಕುವ ಸಾಧ್ಯತೆ ಇದೆ. ಇನ್ನು ಈ ಬಗ್ಗೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

    ಆಯುಷ್ಮಾನ್ ಭಾರತ್ ಅಂದ್ರೆ ಏನು?
    ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2018ರ ಬಜೆಟ್‍ನಲ್ಲಿ ಆಯುಷ್ಮಾನ್ ಭಾರತ್ ಯೋಜನೆ ಪ್ರಾಸ್ತಾಪಿಸಿತ್ತು. ಈ ಯೋಜನೆಯ ಮುಖ್ಯ ಉದ್ದೇಶ ದೇಶದ ಅರ್ಧದಷ್ಟು (50 ಕೋಟಿ) ಜನರಿಗೆ ಅನುಕೂಲವಾಗುವಂಥ ‘ಆರೋಗ್ಯ ವಿಮೆ’ ಹಾಗೂ ‘ರಾಷ್ಟ್ರೀಯ ಆರೋಗ್ಯ ರಕ್ಷಣಾ ಯೋಜನೆ’ ಒಳಗೊಂಡ ‘ಆಯುಷ್ಮಾನ್ ಭಾರತ್ ಯೋಜನೆ’ ರೂಪಿಸಿದ್ದರು. ಅಮೆರಿಕದ ಒಬಾಮಾ ಕೇರ್ ಮಾದರಿಯಲ್ಲಿಯೇ ಈ ಯೋಜನೆಯನ್ನು ದೇಶದಲ್ಲಿ ಜಾರಿಗೆ ತರುವ ಉದ್ದೇಶವನ್ನು ಕೇಂದ್ರ ಸರ್ಕಾರ ಹೊಂದಿತ್ತು. ಇದು ಜಗತ್ತಿನಲ್ಲಿ ಅತ್ಯಂತ ದೊಡ್ಡ ಆರೋಗ್ಯ ಯೋಜನೆಯಾಗಿದೆ. ಇದನ್ನೂ ಓದಿ: ಏನಿದು ಆಯುಷ್ಮಾನ್ ಭಾರತ್ ಯೋಜನೆ? ಯಾರಿಗೆ ವಿಮೆ ಸಿಗುತ್ತೆ? ಯಾವೆಲ್ಲಾ ರೋಗಗಳಿಗೆ ಚಿಕಿತ್ಸೆ?

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಏನಿದು ಆಯುಷ್ಮಾನ್ ಭಾರತ್ ಯೋಜನೆ? ಯಾರಿಗೆ ವಿಮೆ ಸಿಗುತ್ತೆ? ಯಾವೆಲ್ಲಾ ರೋಗಗಳಿಗೆ ಚಿಕಿತ್ಸೆ?

    ಏನಿದು ಆಯುಷ್ಮಾನ್ ಭಾರತ್ ಯೋಜನೆ? ಯಾರಿಗೆ ವಿಮೆ ಸಿಗುತ್ತೆ? ಯಾವೆಲ್ಲಾ ರೋಗಗಳಿಗೆ ಚಿಕಿತ್ಸೆ?

    ನವದೆಹಲಿ: 72ನೇ ಸ್ವಾತಂತ್ರ್ಯೋತ್ಸವ ಅಂಗವಾಗಿ ದೇಶದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಅತಿದೊಡ್ಡ ಗಿಫ್ಟ್ ನೀಡಿದೆ. ಜಗತ್ತಿನ ಅತೀ ದೊಡ್ಡ ಆರೋಗ್ಯ ರಕ್ಷಾ ಯೋಜನೆ ‘ಆಯುಷ್ಮಾನ್ ಭಾರತ’ ಯೋಜನೆಯನ್ನು ಪ್ರಕಟಿಸಿದೆ.

    ದೆಹಲಿಯ ಕೆಂಪುಕೋಟೆ ಆವರಣದಲ್ಲಿ ಸ್ವಾತಂತ್ರೋತ್ಸವದ ಪ್ರಯುಕ್ತ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ, ದೇಶದ 50 ಕೋಟಿ ಮಂದಿಗೆ ಅನುಕೂಲವಾಗುವ ಆರೋಗ್ಯ ಯೋಜನೆಯನ್ನು ಘೋಷಿಸಿದ್ದಾರೆ.

    ಪಂಡಿತ್ ದೀನ್ ದಯಾಳು ಉಪಾಧ್ಯಾಯರ ಜನ್ಮದಿನವಾದ ಸೆಷ್ಟೆಂಬರ್ 25ರಂದು ಈ ಯೋಜನೆ ಆರಂಭವಾಗಲಿದ್ದು, ಕುಟುಂಬವೊಂದಕ್ಕೆ ವಾರ್ಷಿಕ ಐದು ಲಕ್ಷ ರೂಪಾಯಿಗಳ ಆರೋಗ್ಯ ಸೇವಾ ವೆಚ್ಚವನ್ನು ಸರ್ಕಾರ ಭರಿಸಲಿದೆ. ಮೊದಲ ಹಂತವಾಗಿ 11 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಯೋಜನೆಯನ್ನು ಜಾರಿಗೆ ತರಲಾಗುತ್ತದೆ.

    ಆದರೆ ಮೊದಲ ಹಂತದಲ್ಲಿ ಕರ್ನಾಟಕ, ಕೇರಳ, ಮಹಾರಾಷ್ಟ್ರ, ಪಂಜಾಬ್ ಹಾಗೂ ನವದೆಹಲಿ ರಾಜ್ಯಗಳು ಈ ಯೋಜನೆಗೆ ಒಳಪಡುವುದಿಲ್ಲ. ತದನಂತರ ಈ ರಾಜ್ಯಗಳು ಒಳಪಡಲಿವೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

    ಏನಿದು ಆಯುಷ್ಮಾನ್ ಭಾರತ್ ಯೋಜನೆ?
    10 ಕೋಟಿ ಕುಟುಂಬಗಳ 50 ಕೋಟಿ ಜನರಿಗೆ ಆರೋಗ್ಯ ವಿಮೆ ಸಿಗಲಿದೆ. ಕುಟುಂಬವೊಂದಕ್ಕೆ ವಾರ್ಷಿಕ 5 ಲಕ್ಷವರೆಗೆ ಆಸ್ಪತ್ರೆ ಖರ್ಚು ಭರಿಸಲಾಗುತ್ತದೆ. ಮೊದಲ ಹಂತದಲ್ಲಿ ಛತ್ತೀಸ್‍ಗಢ, ತ್ರಿಪುರ, ಅರುಣಾಚಲ ಪ್ರದೇಶ, ಆಂಧ್ರಪ್ರದೇಶ, ಮಧ್ಯಪ್ರದೇಶ, ಪಶ್ಚಿಮ ಬಂಗಾಳ, ಚಂಡೀಗಢ, ಗುಜರಾತ್ ಮತ್ತು ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ 70-80 ಜಿಲ್ಲೆಗಳಲ್ಲಿ ಜಾರಿಯಾಗಲಿದೆ. ಈ ಆರೋಗ್ಯ ಯೋಜನೆಯಲ್ಲಿ 100 ಆಸ್ಪತ್ರೆಗಳಿರುತ್ತವೆ. ಮೊದಲಿಗೆ ಶಸ್ತ್ರಚಿಕಿತ್ಸೆ ಹಾಗೂ ಇತರೆ ವೈದ್ಯಕೀಯ ಚಿಕಿತ್ಸಾ ಸೇವೆ ಸಿಗುತ್ತದೆ. ವಿಮೆ ಪಡೆದ ದಿನದಿಂದಲೇ ಎಲ್ಲಾ ಪೂರ್ವ ನಿರ್ಧಾರಿತ ಕಾಯಿಲೆಗಳಿಗೂ ಚಿಕಿತ್ಸೆ ಸಿಗಲಿದೆ.

    ಯಾರಿಗೆ ವಿಮೆ ಸೌಲಭ್ಯ ಸಿಗಲಿದೆ?
    ಯೋಜನೆಯ ಸೌಲಭ್ಯಕ್ಕಾಗಿ ಪಡಿತರ ಚೀಟಿ ಇದ್ದರೆ ಸಾಕಾಗುತ್ತದೆ. ಈ ಯೋಜನೆಗೆ ಆಧಾರ್ ಕಾರ್ಡ್ ಕಡ್ಡಾಯ ಅಲ್ಲ. ರೇಷನ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ಮತದಾರರ ಚೀಟಿ ಇದ್ದರೂ ಸಾಕಾಗುತ್ತದೆ. ಕುಟುಂಬದ ಗಾತ್ರ ಮತ್ತು ವಯಸ್ಸಿಗೆ ಯಾವುದೇ ಮಿತಿ ಹೇರಿಲ್ಲ. ಖಾಸಗಿ ಅಥವಾ ಮಾನ್ಯತೆ ಪಡೆದ ಖಾಸಗಿ ಆಸ್ಪತ್ರೆಗಳಲ್ಲಿ ನಗದುರಹಿತ ಸೇವೆ. ಫಲಾನುಭವಿಗಳಿಗೆ ಆಸ್ಪತ್ರೆಗೆ ಸಂಚರಿಸಲು ನಿಗದಿತ ಪ್ರಯಾಣ ಭತ್ಯೆಯೂ ಒಳಗೊಂಡಿದೆ.

    `ಆಯಷ್ಮಾನ್ ಭಾರತ’ ಯಾರಿಗೆ ಅನ್ವಯ..?
    * ಜಾತಿ ಗಣತಿ/ಪಡಿತರ ಚೀಟಿ ಆಧಾರದ ಮೇಲೆ ಚಿಕಿತ್ಸೆ
    * ಒಂದು ಕೊಠಡಿಯಲ್ಲಿ ವಾಸಿಸುವ ಕುಟುಂಬಗಳು
    * ಎಸ್‍ಸಿ/ಎಸ್‍ಟಿ, ಬುಡಕಟ್ಟು ಸಮುದಾಯದವರು
    * ನಿರ್ವಸಿತರು, ಕೂಲಿ ಕಾರ್ಮಿಕರು, ಜೀತ ವಿಮುಕ್ತರು
    * ರದ್ದಿ ಆಯುವವರು, ಭಿಕ್ಷುಕರು, ಪೌರಕಾರ್ಮಿಕರು
    * ಕಟ್ಟಡ ಕಾರ್ಮಿಕರು, ಮನೆ ಕೆಲಸದವರು, ಕುಸುರಿ ಕೆಲಸಗಾರರು
    * ಟೈಲರ್, ಪ್ಲಂಬರ್, ಸಾರಿಗೆ ನೌಕರರು, ರಿಕ್ಷಾವಾಲಾಗಳು
    * ಎಲೆಕ್ಟ್ರಿಷಿಯನ್, ಮೆಕಾನಿಕ್, ಹೆಲ್ಪರ್‍ಗಳು
    * ಚಿಕಿತ್ಸೆಗೆ ಆಧಾರ್ ಕಾರ್ಡ್ ಕಡ್ಡಾಯವಲ್ಲ
    * 10 ಕೋಟಿ ಕುಟುಂಬಗಳ 50 ಕೋಟಿ ಮಂದಿಗೆ ಪ್ರಯೋಜನ

    ಯಾವೆಲ್ಲಾ ರೋಗಗಳಿಗೆ ಚಿಕಿತ್ಸೆ?
    * ಧೀರ್ಘಕಾಲಿನ ರೋಗಗಳು
    * ಹೃದಯದ ಬೈಪಾಸ್ ಸರ್ಜರಿ
    * ಮಂಡಿ ಚಿಪ್ಪು ಅಳವಡಿಕೆ
    * ಆಸ್ಪತ್ರೆ ಸೇರುವ ಮೊದಲು/ನಂತರದ ವೆಚ್ಚ
    * ಕನಿಷ್ಟ 25 ಸಾವಿರ ರೂ. ಕ್ಲೈಂ
    * ಒಮ್ಮೆ ನೋಂದಣಿ ಮಾಡಿಕೊಂಡರೆ ದೇಶದ ಯಾವುದೇ ಚಿಕಿತ್ಸೆ ಪಡೆಯಬಹುದು

    ಈಗಾಗಲೇ ವೆಬ್‍ಸೈಟ್ ಆರಂಭಿಸಲಾಗಿದ್ದು ಮಾಹಿತಿಗಳು ಲಭ್ಯವಾಗಿಲ್ಲ. ಶೀಘ್ರವೇ ಈ ಯೋಜನೆಗೆ ಸಂಬಂಧಿಸಿದ ವಿವರಗಳನ್ನು ಪ್ರಕಟಿಸಲಾಗುವುದು ಬರೆಯಲಾಗಿದೆ:  www.abnhpm.gov.in/coming-soon

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಡಿಜಿ ಲಾಕರ್ ಮೂಲಕವೇ ವಾಹನದ ದಾಖಲೆಗಳನ್ನು ತೋರಿಸಿ: ಫೈಲ್ ಸೇವ್ ಮಾಡೋದು ಹೇಗೆ? 59 ಸೆಕೆಂಡಿನ ವಿಡಿಯೋ ನೋಡಿ

    ಡಿಜಿ ಲಾಕರ್ ಮೂಲಕವೇ ವಾಹನದ ದಾಖಲೆಗಳನ್ನು ತೋರಿಸಿ: ಫೈಲ್ ಸೇವ್ ಮಾಡೋದು ಹೇಗೆ? 59 ಸೆಕೆಂಡಿನ ವಿಡಿಯೋ ನೋಡಿ

    ನವದೆಹಲಿ: ವಾಹನಗಳ ದಾಖಲೆಗಳನ್ನು ಸವಾರರು ತಮ್ಮ ಡಿಜಿ ಲಾಕರ್ ಆ್ಯಪ್ ಮೂಲಕವೇ ಪೊಲೀಸರಿಗೆ ತೋರಿಸಬಹುದೆಂದು ಕೇಂದ್ರ ಸರ್ಕಾರ ಡಿಜಿ ಲಾಕರ್ ಸೇವೆಗೆ ಅಧಿಕೃತ ಆದೇಶ ನೀಡಿದೆ.

    ಕೇಂದ್ರ ಸಾರಿಗೆ ಇಲಾಖೆಯು ದಾಖಲೆಗಳನ್ನು ಡಿಜಿ ಲಾಕರ್ ನಲ್ಲಿಯೇ ಪರಿಶೀಲಿಸಬಹುದೆಂದು ಮಾನ್ಯತೆ ನೀಡಿ, ಮಹತ್ವದ ಆದೇಶವನ್ನು ಹೊರಡಿಸಿದೆ. ಇದರಿಂದಾಗಿ ವಾಹನಸವಾರರು ಇನ್ನು ಮುಂದೆ ಪೊಲೀಸರು ಹಾಗೂ ಸಾರಿಗೆ ಇಲಾಖೆ ಅಧಿಕಾರಿಗಳು ವಾಹನಗಳನ್ನು ಅಡ್ಡಹಾಕಿ ದಾಖಲೆ ಕೇಳಿದರೆ, ಸವಾರರು ತಮ್ಮ ಮೊಬೈಲ್ ನಲ್ಲಿರುವ ದಾಖಲೆ ತೋರಿಸಿ ದಂಡ ಹಾಗೂ ಕಾನೂನಿನ ಕ್ರಮದಿಂದ ಪಾರಾಗಬಹುದಾಗಿದೆ.

    ಈ ಸಂಬಂಧ ಸಾರಿಗೆ ಇಲಾಖೆ ಅಧಿಸೂಚನೆ ಹೊರಡಿಸಿದ್ದು, ಸ್ಮಾರ್ಟ್​ಕಾರ್ಡ್ ಅಥವಾ ಕಾಗದ ರೂಪದ ದಾಖಲೆಗಳಿಗೆ ಡಿಜಿಟಲ್ ದಾಖಲೆಗಳನ್ನು ಸಲ್ಲಿಸಬಹುದೆಂದು ಉಲ್ಲೇಖಿಸಲಾಗಿದೆ. ಸದ್ಯ ಇಲಾಖೆ ಡಿಜಿಲಾಕರ್ ​ಆ್ಯಪ್​ನಲ್ಲಿ ಚಾಲನಾ ಪರವಾನಗಿ, ನೋಂದಣಿ ಪತ್ರ ಮತ್ತು ವಾಯುಮಾಲಿನ್ಯ ಪ್ರಮಾಣಪತ್ರದ ಡಿಜಿಟಲ್ ಪ್ರತಿಗಳನ್ನು ಸಂಗ್ರಹಿಸಬಹುದಾಗಿದೆ.

    ಇದಲ್ಲದೇ ಕುಡಿದು, ಅಜಾಗರೂಕ ಚಾಲನೆ ಹಾಗೂ ಇನ್ನು ಮುಂತಾದ ಸಂದರ್ಭಗಳಲ್ಲಿ ಸಂಚಾರಿ ಪೊಲೀಸರು ಸವಾರರ ಮೂಲ ಚಾಲನಾ ಪತ್ರವನ್ನು ಮುಟ್ಟುಗೊಳ್ಳುವ ಅಧಿಕಾರವನ್ನು ಹೊಂದಿರುತ್ತಾರೆ. ಅಧಿಕಾರಿಗಳು ಕಾನೂನು ರೀತಿ ಡಿಎಲ್ ಮತ್ತು ಆರ್ ಸಿ ಜಪ್ತಿಮಾಡಬೇಕಾದ ಪ್ರಕರಣಗಳಲ್ಲಿ ದಾಖಲೆಯ ಮೂಲ ಪ್ರತಿ ಅಗತ್ಯವಾಗಿರಲಿದೆ.

    ಏನಿದು ಡಿಜಿ ಲಾಕರ್?
    ಕೇಂದ್ರ ಸರ್ಕಾರವು ಆನ್‍ಲೈನ್‍ಗಳಲ್ಲಿ ಡಿಜಿಟಲ್ ರೂಪದಲ್ಲಿ ದಾಖಲೆಗಳನ್ನು ಶೇಖರಣಾ ಮಾಡಿ ನಮಗೆ ಯಾವಾಗ ಬೇಕಾದರೂ ಪಡೆಯಬಹುದಾದ ನೂತನ ಡಿಜಿ ಲಾಕರ್ ವ್ಯವಸ್ಥೆಯನ್ನು ಜಾರಿಗೊಳಿಸಿತ್ತು. ಈ ಡಿಜಿ ಲಾಕರ್ ವೆಬ್‍ಸೈಟ್‍ನಲ್ಲಿ ಒಟ್ಟು 1 ಜಿಬಿವರೆಗಿನ ದಾಖಲೆಗಳನ್ನು ಶೇಖರಿಸಿಡಬಹುದಾಗಿದೆ. ಅಲ್ಲದೇ ಯಾವುದೇ ದಾಖಲೆಗಳ ಪರಿಶೀಲನೆಗೆ ಈ ಡಿಜಿ ಲಾಕರ್ ವ್ಯವಸ್ಥೆ ಬಲು ಸುಲಭವಾಗಿದೆ. ಇದರಲ್ಲಿ ಶೈಕ್ಷಣಿಕ ಪ್ರಮಾಣ ಪತ್ರ, ಅಂಕಪಟ್ಟಿ, ಗುರುತಿನ ಚೀಟಿ, ವಾಹನ ಚಾಲನಾ ಪರವಾನಿಗೆ, ವಿಮೆ ಹಾಗೂ ಮೊದಲಾದ ದಾಖಲೆಗಳನ್ನು ಇಮೇಜ್ ರೂಪದಲ್ಲಿ ಸಂಗ್ರಹಿಸಿಡಬಹುದಾಗಿದೆ.

    ಡಿಜಿ ಲಾಕರ್ ಪಡೆಯುವುದು ಹೇಗೆ?
    ಸಾರ್ವಜನಿಕರು ತಮ್ಮ ಸ್ಮಾರ್ಟ್ ಫೋನ್‍ಗಳಲ್ಲಿ ಪ್ಲೇ ಸ್ಟೋರ್ ಹಾಗೂ ಆಪಲ್ ಐಓಎಸ್ ಮುಖಾಂತರ ಡಿಜಿಲಾಕರ್ ಆ್ಯಪ್ ಅನ್ನು ಡೌನ್ ಲೋಡ್ ಮಾಡಿ, ಸೈನ್ ಅಪ್ ಆಯ್ಕೆ ಒತ್ತಬೇಕು, ನಂತರ ಹೊಸ ಯೂಸರ್ ನೇಮ್ ಮತ್ತು ಪಾಸ್ ವರ್ಡ್ ಹಾಕಿ, ಆಧಾರ್ ಸಂಖ್ಯೆ ನಮೂದಿಸಿ ನೋಂದಣಿ ಮಾಡಿಕೊಂಡು ಸುಲಭವಾಗಿ ಬಳಸಿಕೊಳ್ಳಬಹುದಾಗಿದೆ.

    ದಿನ ನಿತ್ಯ ಜೀವನದಲ್ಲಿ ಡಿಜಿ ಲಾಕರ್ ಉಪಯೋಗವೇನು?

    ಆಧಾರ್ ಮೂಲಕ ಡಿಜಿ ಲಾಕರ್ ಬಳಸುವುದು ಹೇಗೆ?

    https://youtu.be/27U4XUl-nyg

    ಡಿಜಿ ಲಾಕರ್ ನಲ್ಲಿ ದಾಖಲೆಗಳನ್ನು ಸಂಗ್ರಹಿಸುವುದು ಹೇಗೆ?

    https://youtu.be/7P17ZJdKmts

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

  • ಕಾವೇರಿ-ಗೋದಾವರಿ ಸೇರಿ ಐದು ನದಿಗಳ ಜೋಡಣೆಗೆ ಮುಂದಾದ ಕೇಂದ್ರ ಸರ್ಕಾರ!

    ಕಾವೇರಿ-ಗೋದಾವರಿ ಸೇರಿ ಐದು ನದಿಗಳ ಜೋಡಣೆಗೆ ಮುಂದಾದ ಕೇಂದ್ರ ಸರ್ಕಾರ!

    ನವದೆಹಲಿ: 2019ರ ವೇಳೆಗೆ ಐದು ನದಿಗಳ ಜೋಡಣೆಗೆ ಕೇಂದ್ರ ಸರ್ಕಾರ ಯೋಜನೆ ರೂಪಿಸಿದೆ ಎಂದು ಕೇಂದ್ರ ಜಲಸಂಪನ್ಮೂಲ ಸಚಿವರಾದ ನಿತಿತ್ ಗಡ್ಕರಿ ತಿಳಿಸಿದ್ದಾರೆ.

    ನದಿ ನೀರು ವ್ಯರ್ಥವಾಗಿ ಸಮುದ್ರ ಸೇರುವ ಬದಲು, ಅದರ ಹರಿವಿನ ಪಥವನ್ನು ಮತ್ತೊಂದು ನದಿಗೆ ಜೋಡಣೆ ಮಾಡುವ ಮೂಲಕ ನೀರಾವರಿ ಕ್ಷೇತ್ರದಲ್ಲಿ ದೊಡ್ಡ ಕ್ರಾಂತಿಯುಂಟು ಮಾಡುವ ನಿರೀಕ್ಷೆಯೊಂದಿಗೆ ಕೇಂದ್ರ ಸರ್ಕಾರ ಐದು ನದಿಗಳ ಜೋಡಣೆಗೆ ಯೋಜನೆ ರೂಪಿಸಿದೆ. ವಿಶ್ವಬ್ಯಾಂಕ್ ಮತ್ತು ಏಷ್ಯಾ ಅಭಿವೃದ್ಧಿ ಬ್ಯಾಂಕ್ ಸಾಲದ ನೆರವಿನಿಂದ ಸುಮಾರು 2 ಲಕ್ಷ ಕೋಟಿ ರೂ. ವೆಚ್ಚದಲ್ಲಿ ಈ ನದಿ ಜೋಡಣೆಯ ಬೃಹತ್ ಕಾಮಗಾರಿ ಯೋಜನೆಯು ವೇಗ ಪಡೆಯಲಿದೆ ಎಂದು ಜಲಸಂಪನ್ಮೂಲ ಸಚಿವರಾದ ನಿತಿನ್ ಗಡ್ಕರಿಯವರು ತಿಳಿಸಿದ್ದಾರೆ.

    ರಾಜ್ಯಸಭೆಯಲ್ಲಿ ಸೋಮವಾರ ನದಿ ಜೋಡಣೆ ವಿಚಾರ ಕುರಿತು ಮಾಹಿತಿ ಹಂಚಿಕೊಳ್ಳುವ ಮೂಲಕ ಪ್ರತಿಪಕ್ಷ ಸದಸ್ಯರು ನದಿ ಜೋಡಣೆ ಕುರಿತು ಎದ್ದಿದ್ದ ಪ್ರಶ್ನೆಗಳಿಗೆ ಸ್ಪಷ್ಟನೆ ನೀಡಿದ್ದಾರೆ. ಅಲ್ಲದೇ ಈ ನದಿ ಜೋಡಣೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯೆಂದು ಪರಿಗಣಿಸಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ ಎಂದು ಹೇಳಿದರು.

    ಕರ್ನಾಟಕ, ಗುಜರಾತ್, ಮಹಾರಾಷ್ಟ್ರ, ಆಂಧ್ರ ಪ್ರದೇಶ, ಉತ್ತರ ಪ್ರದೇಶ, ಮಧ್ಯಪ್ರದೇಶ ಸೇರಿದಂತೆ ಅನೇಕ ರಾಜ್ಯಗಳಿಗೆ ಮೊದಲ ಹಂತದ ಐದು ನದಿಗಳ ಜೋಡಣೆಯಿಂದ ಲಾಭವಾಗಲಿದೆ. ಗೋದಾವರಿ-ಕಾವೇರಿ, ಪಾರ್-ತಾಪಿ-ನರ್ಮದಾ, ಕ್ವೆನ್-ಬೆಟ್ವಾ, ದಮನ್‍ಗಂಗಾ-ಪಿಂಜಾಲ್, ಪಾರ್‍ಬತಿ-ಕಾಳಿಸಿಂಧ್-ಚಂಬಲ್ ನದಿ ಜೋಡಣೆ ಯೋಜನೆಗಳ ಕುರಿತು ಯೋಜನಾ ಕಾರ್ಯಸಾಧ್ಯತೆ ವರದಿ ಸಿದ್ಧಗೊಂಡಿದ್ದು ಸದ್ಯದಲ್ಲೇ ರಾಜ್ಯಗಳ ನಡುವೆ ಒಪ್ಪಂದ ಏರ್ಪಡಲಿದೆ. ಯೋಜನೆ ಸಾಕಾರಕ್ಕೆ ಕೇಂದ್ರವು ದೊಡ್ಡ ಪ್ರಮಾಣದಲ್ಲಿ ಬಂಡವಾಳ ಹೂಡುವುದರ ಜತೆಗೆ ಖಾಸಗಿ ಹೂಡಿಕೆದಾರರನ್ನೂ ಸೆಳೆಯಲಿವೆ ಎಂದು ಸಚಿವರು ಹೇಳಿದರು.

    ಅಲ್ಲದೇ ಗೋದಾವರಿ ನೀರನ್ನು ಕೃಷ್ಣ ನದಿಯ ಮೂಲಕ ಪೆನ್ನಾರ್ ನದಿಗೆ ಸಂಪರ್ಕಿಸಿ, ನಂತರ ಪೆನ್ನಾರ್ ನದಿಯಿಂದ ಕಾವೇರಿ ನದಿಗೆ ಜೋಡಣೆ ಮಾಡುವುದರಿಂದ ಕರ್ನಾಟಕ ಹಾಗೂ ತಮಿಳುನಾಡು ರಾಜ್ಯಗಳಲ್ಲಿ ನಡೆಯುತ್ತಿರುವ ನೀರಿನ ಸಮಸ್ಯೆ ನೀಗುತ್ತದೆ. ಈ ಎರಡು ರಾಜ್ಯಗಳು ಕೇವಲ 40 ಟಿಎಂಸಿ ನೀರಿಗಾಗಿ ಜಗಳ ಮಾಡುತ್ತಿದ್ದರೆ, ಸುಮಾರು 3,000 ಟಿಎಂಸಿಯಷ್ಟು ನೀರು ವ್ಯರ್ಥವಾಗಿ ಸಮುದ್ರಕ್ಕೆ ಸೇರುತ್ತದೆ. ಯೋಜನೆಯಿಂದ ಎರಡು ರಾಜ್ಯಗಳ ನಡುವಿನ ನೀರಿನ ಕಿತ್ತಾಟ ನಿವಾರಣೆಯಾಗಲಿದೆ ಎಂದು ಗಡ್ಕರಿ ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

  • ಮೋಟಾರು ವಾಹನ ಮಸೂದೆ ವಿರುದ್ಧ ಮುಷ್ಕರ- ರಾಜ್ಯಾದ್ಯಂತ ಬಂದ್‍ಗೆ ಪ್ರತಿಕ್ರಿಯೆ ಹೇಗಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ

    ಮೋಟಾರು ವಾಹನ ಮಸೂದೆ ವಿರುದ್ಧ ಮುಷ್ಕರ- ರಾಜ್ಯಾದ್ಯಂತ ಬಂದ್‍ಗೆ ಪ್ರತಿಕ್ರಿಯೆ ಹೇಗಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ

    ಬೆಂಗಳೂರು: ಮೋಟಾರು ವಾಹನ ತಿದ್ದುಪಡಿ ಮಸೂದೆ ವಿರುದ್ಧ ಸಾರಿಗೆ ಮುಷ್ಕರ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸಾರಿಗೆಗೆ ಮುಷ್ಕರದ ಬಿಸಿ ತಟ್ಟಿಲ್ಲ. ಅಲ್ಲದೇ ನಗರದಲ್ಲೂ ಬಿಎಂಟಿಸಿ, ಕೆಎಸ್‍ಆರ್ ಟಿಸಿ, ಮೆಟ್ರೋ ಟ್ರೈನ್ ಬೆಳಗ್ಗೆ ಎಂದಿನಂತೆ ಸಂಚಾರ ಶುರು ಮಾಡಿವೆ.

    ಹೊಸ ಮೋಟಾರು ಕಾಯ್ದೆ ವಿರೋಧಿಸಿ ಸಾರಿಗೆ ಬಂದ್ ಕರೆ ಹಿನ್ನಲೆಯಲ್ಲಿ ಗದಗ ನಲ್ಲಿ ಬಂದ್ ಗೆ ಮಿಶ್ರ ಪ್ರತಿಕ್ರಿಯೆ ದೊರೆತಿದ್ದು, ಬಂದ್ ಗೆ ಯಾವುದೇ ಬೆಂಬಲವಿಲ್ಲ. ಎಂದಿನಂತೆ ಸಾರಿಗೆ ಬಸ್, ಆಟೋ, ಟ್ಯಾಕ್ಸಿ, ಲಾರಿಗಳು ಕಾರ್ಯ ಸಂಚರಿಸುತ್ತಿದೆ. ಗದಗ ಜಿಲ್ಲೆನಲ್ಲಿ ಯಾವುದೇ ಸಂಘಟನೆಗಳಿಂದ ಬಂದ್ ಕರೆಗೆ ಬೆಂಬಲ ವ್ಯಕ್ತವಾಗಿಲ್ಲ. ಅಲ್ಲದೇ ಎಂದಿನಂತೆ ಶಾಲಾ-ಕಾಲೇಜು, ಸರ್ಕಾರಿ ಕಚೇರಿಗಳು ಆರಂಭವಾಗಿದೆ.

    ವಾಣಿಜ್ಯ ನಗರಿ ಹುಬ್ಬಳ್ಳಿಗೆ ಸಾರಿಗೆ ಮುಷ್ಕರ ಬಿಸಿ ತಟ್ಟಿಲ್ಲ. ಎಂದಿನಂತೆ ಸಿಟಿ ಬಸ್ ಹಾಗೂ ಸರ್ವಿಸ್ ಬಸ್‍ಗಳು ರಸ್ತೆಗಿಳಿದಿದೆ. ಆಟೋ, ಟ್ಯಾಕ್ಸಿಗಳ ಸಂಚಾರಕ್ಕೂ ಮುಷ್ಕರ ಘೋಷಣೆ ಅಡ್ಡಿಯಾಗುತ್ತಿಲ್ಲ. ದೈನಂದಿನ ಕಾರ್ಯಗಳಿಗೆ ಬಸ್ ಮೂಲಕ ಪ್ರಯಾಣಿಕರು ತೆರಳುತ್ತಿದ್ದಾರೆ. ಹುಬ್ಬಳ್ಳಿ ಕೇಂದ್ರಿಯ ಬಸ್ ನಿಲ್ದಾಣದಲ್ಲಿ ನಿತ್ಯದಂತೆ ಬಸ್ ಸಂಚಾರ ಮುಂದುವರಿದಿದೆ. ಸಾರಿಗೆ ಕಾರ್ಮಿಕರ ಮುಷ್ಕರಕ್ಕೆ ಆಟೋ, ಖಾಸಗಿ ವಾಹನ ಬಸ್ ಸಂಘಗಳ ಬೆಂಬಲ ದೊರೆಯುತ್ತಿಲ್ಲ.

    ಕೊಡಗಿನಲ್ಲಿ ಕೂಡ ಎಂದಿನಂತೆ ಬಸ್ ಸಂಚಾರ ಆರಂಭವಾಗಿದ್ದು, ಸಾರಿಗೆ ಸಂಘಟನೆಗಳು ಬಂದ್ ಗೆ ಬೆಂಬಲ ನೀಡಿಲ್ಲ. ಎಂದಿನಂತೆ ಸರ್ಕಾರಿ ಬಸ್ ಸಂಚರಿಸುತ್ತಿದ್ದು, ಪ್ರಯಾಣಿಕರಿಗೆ ಬಂದ್ ಬಿಸಿ ತಟ್ಟಿಲ್ಲ. ಖಾಸಗಿ ಬಸ್, ಆಟೋ, ಟ್ಯಾಕ್ಸಿ ವಾಹನ ಕೂಡ ಎಂದಿನಂತೆ ಸಂಚಾರ ಆರಂಭವಾಗಿದೆ. ಇನ್ನು ಬಾಗಲಕೋಟೆಯಲ್ಲೂ ಬಂದ್ ಬಿಸಿ ತಟ್ಟಿಲ್ಲ. ಜಿಲ್ಲೆಯಲ್ಲಿ ಎಂದಿನಂತೆ ಸಂಚಾರ ಶುರುವಾಗಿದೆ. ಬೆಳಗ್ಗಿನಿಂದಲೇ ಸಾರಿಗೆ ಬಸ್ ಗಳು ಸಂಚರಿಸುತ್ತಿದೆ. ಅಲ್ಲದೇ ಬಸ್ ಸಂಚಾರದಲ್ಲಿ ಯಾವುದೇ ವ್ಯತಯ ಇಲ್ಲ. ಹಾಗಾಗಿ ಸುಗಮವಾಗಿ ಆಟೋ, ಖಾಸಗಿ ವಾಹನಗಳ ಸಂಚಾರ ಆರಂಭವಾಗಿದೆ.

    ಕೊಪ್ಪಳದಲ್ಲಿ ಎಂದಿನಂತೆ ಸಾರಿಗೆ ಸಂಚಾರ ಸುಗಮವಾಗಿ ಸಾಗುತ್ತಿದೆ. ಸಾರಿಗೆ ಬಂದ್ ಗೆ ಸಾರಿಗೆ ಸಂಸ್ಥೆ ನೌಕರರು ಬೆಂಬಲ ನೀಡದ ಕಾರಣ ಬೆಳಗ್ಗಿನಿಂದಲೇ ಸಾರಿಗೆ ಬಸ್ ಗಳು ಸಂಚಾರ ನಡೆಸುತ್ತಿವೆ. ಇದರಿಂದಾಗಿ ಪ್ರಯಾಣಿಕರಿಗೆ ಯಾವುದೇ ತೊಂದರೆ ಆಗಿಲ್ಲ. ಜೊತೆಗೆ ಆಟೋ, ಖಾಸಗಿ ವಾಹನಗಳ ಸಂಚಾರ ಸಹ ಯಾಥಾಸ್ಥಿತಿಯಲ್ಲಿದ್ದು ಪ್ರಯಾಣಿಕರಿಗೆ ತೊಂದರೆಯಾಗಿಲ್ಲ. ಸಾರಿಗೆ ಬಂದ್ ಯಾವುದೇ ಸಂಘಟನೆಗಳು ಬೆಂಬಲ ನೀಡದ ಕಾರಣ ಕೊಪ್ಪಳದಲ್ಲಿ ಸಾರಿಗೆ ಸಂಚಾರ ಸುಗಮವಾಗಿದ್ದು, ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗಿಲ್ಲ.

    ಮಂಡ್ಯದಲ್ಲೂ ಬಂದ್ ಬಿಸಿ ತಟ್ಟಿಲ್ಲ. ಎಂದಿನಂತಿರುವ ಸಂಚಾರ ವ್ಯವಸ್ಥೆ ಶುರುವಾಗಿದೆ. ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಬಸ್ಸುಗಳು ಸಂಚರಿಸುತ್ತಿದ್ದು, ಬೆಳಗ್ಗಿನಿಂದಲೇ ಸಾರಿಗೆ ಬಸ್ ಗಳು ರಸ್ತೆಗಿಳಿದಿವೆ. ಬಸ್ ಸಂಚಾರದಲ್ಲಿ ಯಾವುದೇ ವ್ಯತಯ ಇಲ್ಲದ ಕಾರಣ ಸುಗಮವಾಗಿ ಆಟೋ, ಖಾಸಗಿ ವಾಹನಗಳ ಸಂಚಾರ ಸಾಗಿದೆ. ಉತ್ತರ ಕನ್ನಡ ಜಿಲ್ಲೆಯಾದ್ಯಾಂತ ಸಾರಿಗೇ ನೌಕರರು ಬಂದ್ ಗೆ ಬೆಂಬಲಿಸಿಲ್ಲ. ಸಾರಿಗೆ ಸಂಪರ್ಕ ಯಥಾ ಸ್ಥಿತಿಯಲ್ಲಿದ್ದು, ಜಿಲ್ಲೆ ಹಾಗೂ ಹೊರ ಜಿಲ್ಲೆಗೆ ಎಂದಿನಂತೆ ಸರ್ಕಾರಿ ಸಾರಿಗೆ ವಾಹನಗಳು ಸಂಚರಿಸುತ್ತಿದೆ. ಅಲ್ಲದೇ ಆಟೋ, ಟ್ಯಾಕ್ಸಿಗಳು ಕೂಡ ಎಂದಿನಂತೆ ಸಂಚಾರ ಆರಂಭಿಸಿದೆ. ಗೋವಾ- ಕಾರವಾರ ಕದಂಬ ಗೋವಾ ಸಾರಿಗೆಯೂ ಎಂದಿನಂತೆ ಸಂಚಾರ ಆರಂಭಿಸಿದೆ. ಇನ್ನೂ ಚಾಮರಾಜನಗರ, ಆನೇಕಲ್, ತುಮಕೂರು, ಕಲಬುರಗಿ, ನೆಲಮಂಗಲ, ಮೈಸೂರು, ಚಿತ್ರದುರ್ಗ, ಚಿಕ್ಕಮಗಳೂರು, ದಾವಣಗೆರೆ, ಹಾಸನದಲ್ಲೂ ಸಾರಿಗೆ ಸಂಪರ್ಕ ಯಥಾ ಸ್ಥಿತಿಯಲ್ಲಿದ್ದು, ಎಂದಿನಂತೆ ಸರ್ಕಾರಿ ವಾಹನಗಳು ಸಂಚರಿಸುತ್ತಿದೆ.

    ರಾಯಚೂರಿನಲ್ಲಿ ಕೇಂದ್ರದ ನೂತನ ಮೋಟಾರು ವಾಹನ ಕಾಯ್ದೆಗೆ ವಿರೋಧವಿದ್ದು, ಕಾರ್ಮಿಕ ಸಂಘಟನೆಗಳ ಮುಷ್ಕರ ಕರೆ ನೀಡಿದ ಹಿನ್ನೆಲೆಯಲ್ಲಿ ಸಾರಿಗೆ ವಾಹನಗಳ ಸಂಚಾರದಲ್ಲಿ ವ್ಯತ್ಯಯವಿಲ್ಲ. ಅಲ್ಲದೇ ಸಿಐಟಿಯು ಕಾರ್ಮಿಕರು ಮಾತ್ರ ಇಂದು ಕೆಲಸಕ್ಕೆ ಗೈರು ಹಾಜರಾಗಿದ್ದಾರೆ. ಎಐಟಿಯುಸಿ ಸಂಘಟನೆ ಮುಷ್ಕರ ಕ್ಕೆ ಬೆಂಬಲ ನೀಡಿಲ್ಲ. ಸದ್ಯ ಮಧ್ಯಾಹ್ನ ವೇಳೆ ಸಿಐಟಿಯು ನೇತೃತ್ವದಲ್ಲಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

  • ದೇಶದಲ್ಲಿ 24 ಲಕ್ಷ ಉದ್ಯೋಗ ಖಾಲಿ – ಯಾವ ಇಲಾಖೆಯಲ್ಲಿ ಎಷ್ಟು ಹುದ್ದೆ ಖಾಲಿ ಇದೆ? ಇಲ್ಲಿದೆ ಮಾಹಿತಿ

    ದೇಶದಲ್ಲಿ 24 ಲಕ್ಷ ಉದ್ಯೋಗ ಖಾಲಿ – ಯಾವ ಇಲಾಖೆಯಲ್ಲಿ ಎಷ್ಟು ಹುದ್ದೆ ಖಾಲಿ ಇದೆ? ಇಲ್ಲಿದೆ ಮಾಹಿತಿ

    ನವದೆಹಲಿ: ಉದ್ಯೋಗ ಸೃಷ್ಟಿ ವಿಚಾರಕ್ಕೆ ಸಂಬಂಧಿಸಿಂತೆ ದೇಶಾದ್ಯಂತ ಕುರಿತು ಭಾರೀ ಚರ್ಚೆ ಹಾಗೂ ಪ್ರತಿಭಟನೆಗಳು ನಡೆಯುತ್ತಿದ್ದು, ಇದೇ ವೇಳೆ ಕೇಂದ್ರಾಡಳಿತ ಪ್ರದೇಶ, ಕೇಂದ್ರ, ರಾಜ್ಯ ಸರ್ಕಾರದಲ್ಲಿ ಒಟ್ಟು 24 ಲಕ್ಷ ಉದ್ಯೋಗಗಳು ಖಾಲಿ ಇರುವ ವಿಚಾರ ಬೆಳಕಿಗೆ ಬಂದಿದೆ.

    ರಾಜ್ಯಸಭೆ ಹಾಗೂ ಲೋಕಸಭೆಯಲ್ಲಿ ವಿವಿಧ ದಿನಾಂಕಗಳಲ್ಲಿ ಇಲಾಖೆವಾರು ಉದ್ಯೋಗ ಸೃಷ್ಟಿ ಕುರಿತು ಕೇಳಿದ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಪ್ರಮುಖವಾಗಿ ದೇಶದಲ್ಲಿ 10 ಲಕ್ಷಕ್ಕೂ ಹೆಚ್ಚು ಶಿಕ್ಷಕರ ಹುದ್ದೆಗಳು ನೇಮಕವಾಗಬೇಕಿದೆ. ಇದರಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆ 9 ಲಕ್ಷ ಇದ್ದರೆ, ಸೆಕೆಂಡರಿ ಶಾಲೆಯ 1.1 ಲಕ್ಷ ಹುದ್ದೆ ಖಾಲಿಯಿದೆ.

    ಮಾರ್ಚ್ 27 ರಂದು ಲೋಕಸಭೆಯಲ್ಲಿ ಪೊಲೀಸ್ ಇಲಾಖೆಯಲ್ಲಿ ಖಾಲಿ ಉಳಿದಿರುವ ಹುದ್ದೆಗಳ ಕುರಿತು ಉತ್ತರಿಸಿ, ನಾಗರಿಕ ಜಿಲ್ಲಾ ಸಶಸ್ತ್ರ ಪಡೆಯಲ್ಲಿ 4.4 ಲಕ್ಷ ಹುದ್ದೆಗಳು ಖಾಲಿ ಉಳಿದಿದೆ. ಅಲ್ಲದೇ ರಾಜ್ಯ ಸಶಸ್ತ್ರ ಪೊಲೀಸ್ ಪಡೆಯಲ್ಲಿ 90,000 ಹುದ್ದೆಗಳು ಖಾಲಿ ಉಳಿದಿದೆ ಎಂದು ಪೊಲೀಸ್ ಇಲಾಖೆ ಮಾಹಿತಿ ನೀಡಿದೆ. ಈ ಹುದ್ದೆಗಳನ್ನು ಆಯಾ ರಾಜ್ಯ ಸರ್ಕಾರಗಳು ಭರ್ತಿ ಮಾಡಬೇಕಿದೆ.

    ರಾಜ್ಯ ಸಭೆಯಲ್ಲಿ ಮಾರ್ಚ್ 14 ಹಾಗೂ 19 ಮತ್ತು ಲೋಕಸಭೆಯಲ್ಲಿ ಏಪ್ರಿಲ್ 4 ರಂದು ಕೇಳಲಾದ ಪ್ರಶ್ನೆಯ ವೇಳೆ ರಕ್ಷಣಾ ಕ್ಷೇತ್ರದಲ್ಲಿ 1.2 ಲಕ್ಷ ಹುದ್ದೆಗಳು ಖಾಲಿ ಉಳಿದಿದೆ ಎಂಬ ಅಂಕಿ ಅಂಶಗಳನ್ನ ನೀಡಲಾಗಿದೆ. ದೇಶದ ಬಹುದೊಡ್ಡ ಸಂಖ್ಯೆಯಲ್ಲಿ ಉದ್ಯೋಗವಕಾಶ ನೀಡಿರುವ ರೈಲ್ವೇ ಇಲಾಖೆ ಕುರಿತು ಮಾರ್ಚ್ 16 ರಂದು ಕೇಳಿದ ಪ್ರಶ್ನೆಗೆ ಉತ್ತರಿಸಿ, ನಾನ್ ಗೆಜೆಟೆಡ್ ಹುದ್ದೆಗಳು 2.5 ಲಕ್ಷ ಹುದ್ದೆ ಖಾಲಿ ಉಳಿದಿದೆ ಎಂಬ ವರದಿ ಸಲ್ಲಿಕೆಯಾಗಿದೆ. ಇದೇ ವೇಳೆ ನೀಡಲಾದ ಮಾಹಿತಿಯಲ್ಲಿ ಫೆಬ್ರವರಿ ವೇಳೆಗೆ 89,000 ಹುದ್ದೆಗಳ ನೇಮಕಾತಿಗೆ ಆದೇಶ ನೀಡಲಾಗಿದೆ ಎಂಬ ಮಾಹಿತಿಯನ್ನು ನೀಡಲಾಗಿದೆ.

    ಪೋಸ್ಟಲ್ ಇಲಾಖೆಯಲ್ಲಿ ಮಾರ್ಚ್ 28 ರಂದು ಸದನಕ್ಕೆ ನೀಡಿರುವ ಮಾಹಿತಿ ಅನ್ವಯ 54 ಸಾವಿರ ಹುದ್ದೆಗಳು ಖಾಲಿ ಇದೆ. ಇನ್ನು ರಾಜ್ಯಸಭೆಯಲ್ಲಿ ಫೆ.6 ರಂದು ಕೇಳಿದ ಪ್ರಶ್ನೆಗೆ ಉತ್ತರವಾಗಿ ಆರೋಗ್ಯ ಇಲಾಖೆಯಲ್ಲಿ 1.5 ಲಕ್ಷ ಹುದ್ದೆ ಖಾಲಿ ಇದ್ದು, ಪ್ರಮುಖವಾಗಿ 16 ಸಾವಿರ ವೈದ್ಯರ ನೇಮಕವಾಗಬೇಕಿದೆ.

    ಯಾವ ಇಲಾಖೆಯಲ್ಲಿ ಎಷ್ಟು ಹುದ್ದೆ?
    ಶಿಕ್ಷಣ ಕ್ಷೇತ್ರ – 10.1 ಲಕ್ಷ
    ಪೊಲೀಸ್ ಇಲಾಖೆ – 5.4 ಲಕ್ಷ
    ರೈಲ್ವೇ ಇಲಾಖೆ – 2.4 ಲಕ್ಷ
    ಅಂಗನವಾಡಿ – 2.2 ಲಕ್ಷ
    ಆರೋಗ್ಯ ಇಲಾಖೆ – 1.5 ಲಕ್ಷ
    ಸಶಸ್ತ್ರ ಮೀಸಲು ಪಡೆ – 62,084
    ಪ್ಯಾರಾ ಮಿಲಿಟರಿ ಪಡೆ – 61,509
    ಪೋಸ್ಟಲ್ ಇಲಾಖೆ – 54,263
    ಏಮ್ಸ್ – 21,740
    ಉನ್ನತ ಶಿಕ್ಷಣ ಸಂಸ್ಥೆ – 12,020
    ನ್ಯಾಯಾಲಯ – 5,853

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

  • ಕರ್ನಾಟಕದಲ್ಲಿ 23, ದೇಶದಲ್ಲಿದೆ 277 ನಕಲಿ ಎಂಜಿನಿಯರಿಂಗ್ ಕಾಲೇಜುಗಳು!

    ಕರ್ನಾಟಕದಲ್ಲಿ 23, ದೇಶದಲ್ಲಿದೆ 277 ನಕಲಿ ಎಂಜಿನಿಯರಿಂಗ್ ಕಾಲೇಜುಗಳು!

    ನವದೆಹಲಿ: ದೇಶದಲ್ಲಿ ಒಟ್ಟಾರೆ 277 ನಕಲಿ ಎಂಜಿನಿಯರಿಂಗ್ ಕಾಲೇಜುಗಳು ಇರುವುದಾಗಿ ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಮಾಹಿತಿ ನೀಡಿದೆ.

    ದೇಶಾದ್ಯಂತ ಇರುವ ನಕಲಿ ಕಾಲೇಜುಗಳ ಪೈಕಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಅತಿಹೆಚ್ಚು 66 ನಕಲಿ ಕಾಲೇಜುಗಳಿವೆ. ಉಳಿದಂತೆ ತೆಲಂಗಾಣದಲ್ಲಿ 35, ಪಶ್ಚಿಮ ಬಂಗಾಳದಲ್ಲಿ 23 ಕಾಲೇಜುಗಳಿದ್ದು ಪಟ್ಟಿಯಲ್ಲಿ ಕ್ರಮವಾಗಿ 2 ಮತ್ತು 3ನೇ ಸ್ಥಾನ ಪಡೆದಿದೆ.

    ಕರ್ನಾಟಕ ನಕಲಿ ಕಾಲೇಜುಗಳ ಪಟ್ಟಿಯಲ್ಲಿ 4ನೇ ಸ್ಥಾನ ಪಡೆದಿದ್ದು, 23 ನಕಲಿ ಕಾಲೇಜುಗಳಿದೆ. ನಂತರದಲ್ಲಿ ಉತ್ತರ ಪ್ರದೇಶದ 5ನೇ ಸ್ಥಾನದಲ್ಲಿದ್ದು 22 ನಕಲಿ ಕಾಲೇಜುಗಳು ಪತ್ತೆಯಾಗಿದೆ.

    ದೇಶದಲ್ಲಿ ನಕಲಿ ಎಂಜಿನಿಯರಿಂಗ್ ಕಾಲೇಜುಗಳು ಎಷ್ಟಿವೆ ಎಂದು ಎಐಎಂಡಿಕೆ ಸಂಸದ ಪಿ ನಾಗರಾಜನ್, ಬಿಜೆಪಿಯ ಲಕ್ಷ್ಮಣ್ ಗಲುವಾ ಹಾಗೂ ರಮಾದೇವಿ ಅವರು ಪ್ರಶ್ನಿಸಿದ್ದರು. ಮೂವರ ಪ್ರಶ್ನೆಗಳಿಗೆ ಉತ್ತರಿಸಿದ ಕೇಂದ್ರ ಮಾನವ ಸಂಪನ್ಮೂಲ ಖಾತೆಯ ರಾಜ್ಯ ಸಚಿವ ಸತ್ಯಪಾಲ್ ಸಿಂಗ್ ನಕಲಿ ಕಾಲೇಜುಗಳ ವಿವರ ನೀಡಿದರು. ಅಲ್ಲದೇ ಇಂತಹ ಕಾಲೇಜುಗಳ ಮೇಲೆ ಕ್ರಮಕೈಗೊಳ್ಳುವ ಭರವಸೆಯನ್ನು ನೀಡಿದ್ದು, ರಾಜ್ಯ ಸರ್ಕಾರಗಳು ಇಂತಹ ಕಾಲೇಜುಗಳನ್ನು ಮುಚ್ಚಲು ಕ್ರಮಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

    ನಕಲಿ ಕಾಲೇಜುಗಳ ಮಾಹಿತಿಯನ್ನು ಸಾರ್ವಜನಿಕವಾಗಿ ನೋಟಿಸ್ ನೀಡುವ ಮೂಲಕ ಮಾಹಿತಿ ನೀಡಲಾಗುವುದು. ಅಲ್ಲದೇ ರಾಜ್ಯ ಸರ್ಕಾರಗಳು ಹೊಸ ಕಾಲೇಜು ಆರಂಭಿಸಲು ಹಾಗೂ ಅವುಗಳನ್ನು ಮುಚ್ಚಲು ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (ಎಐಸಿಟಿಇ) ಅನುಮತಿ ಕಡ್ಡಾಯ ಎಂದು ತಿಳಿಸಿದರು.

    ನಕಲಿ ಎಂಜಿನಿಯರಿಂಗ್ ಕಾಲೇಜುಗಳ ಪಟ್ಟಿಯನ್ನು ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ತನ್ನ ವೆಬ್‍ಸೈಟ್ ನಲ್ಲಿ ಪ್ರಕಟಿಸಿದೆ. ಅಲ್ಲದೇ ಈ ಪಟ್ಟಿಯನ್ನು ನಿರಂತರವಾಗಿ ಪರಿಶೀಲನೆ ನಡೆಸಿ ಹೊಸ ನಕಲಿ ಕಾಲೇಜು ಪತ್ತೆಯಾದರೆ ಅವುಗಳನ್ನು ಸಾರ್ವಜನಿಕವಾಗಿ ಪ್ರಕಟಗೊಳಿಸಲಿದೆ.

  • ಮಕ್ಕಳ ಮೇಲಿನ ಅತ್ಯಾಚಾರಿಗಳಿಗೆ ಗಲ್ಲು- ತಿದ್ದುಪಡಿ ಮಸೂದೆಗೆ ಲೋಕಸಭೆ ಅಸ್ತು

    ಮಕ್ಕಳ ಮೇಲಿನ ಅತ್ಯಾಚಾರಿಗಳಿಗೆ ಗಲ್ಲು- ತಿದ್ದುಪಡಿ ಮಸೂದೆಗೆ ಲೋಕಸಭೆ ಅಸ್ತು

    ನವದೆಹಲಿ: 12 ವರ್ಷಕ್ಕಿಂತ ಕಡಿಮೆ ವಯಸ್ಸಿನ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ನಡೆಸುವ ಕಾಮುಕರಿಗೆ ಗಲ್ಲು ಶಿಕ್ಷೆ ಹಾಗೂ ಪ್ರಕರಣದ ತ್ವರಿತ ವಿಚಾರಣೆ ನಡೆಸುವ ಅಂಶವಿರುವ ಕ್ರಿಮಿನಲ್ ಕಾಯ್ದೆಯ ತಿದ್ದುಪಡಿ ಮಸೂದೆ ಸೋಮವಾರ ಲೋಕಸಭೆಯಲ್ಲಿ ಪಾಸ್ ಆಗಿದೆ.

    ಜಮ್ಮು ಕಾಶ್ಮೀರ ಬಾಲಕಿ ಮೇಲಿನ ರೇಪ್ ಪ್ರಕರಣ ಸೇರಿದಂತೆ ದೇಶಾದ್ಯಂತ ಹೆಣ್ಣು ಮಕ್ಕಳ ಮೇಲೆ ನಡೆಯುತ್ತಿರುವ ಅತ್ಯಾಚಾರ ಪ್ರಕರಣಗಳ ವಿರುದ್ಧ ದೇಶಾದ್ಯಂತ ಭಾರೀ ಪ್ರತಿಭಟನೆ ನಡೆಸಲಾಗಿತ್ತು. ಅಲ್ಲದೇ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ಖಾಯಂಗೊಳಿಸುವಂತೆ ಹಲವು ಹೋರಾಟಗಾರು ಆಗ್ರಹಿಸಿದ್ದರು. ಸದ್ಯ ಈ ಹೋರಾಟಗಳಿಗೆ ಫಲ ಸಿಕ್ಕಿದೆ.

    2018 ಏಪ್ರಿಲ್ 21 ರಂದು ಕೇಂದ್ರ ಸರ್ಕಾರ ಅಪರಾಧ ಕಾನೂನು (ತಿದ್ದುಪಡಿ) ಸುಗ್ರೀವಾಜ್ಞೆ ಹೊರಡಿಸಿದಾಗ ಹಲವರು ಒಪ್ಪಿಗೆ ನೀಡಿದ್ದರೂ ಸಹ ಮತ್ತಷ್ಟು ಕಠಿಣ ಕಾನೂನು ಅಳವಡಿಸಲು ಪ್ರತಿಭಟನಾಕಾರರು ಆಗ್ರಹಿಸಿದ್ದರು. ಇದರಂತೆ ತಿದ್ದುಪಡಿ ಮಸೂದೆಯಲ್ಲಿ ಬದಲಾವಣೆ ಮಾಡಲಾಗಿದೆ.

    ಸದ್ಯ ಸದನದಲ್ಲಿ ಒಪ್ಪಿಗೆ ನೀಡಿರುವ ಮಸೂದೆಯಲ್ಲಿ 12 ವರ್ಷ ವಯಸ್ಸಿನ ಕೆಳಗಿನ ಮಕ್ಕಳ ಮೇಲೆ ಅತ್ಯಾಚಾರ ನಡೆಸಿದರೆ ಗಲ್ಲು ಶಿಕ್ಷೆ ಹಾಗೂ ಇಂತಹ ಪ್ರಕರಣಗಳ ವಿಚಾರಣೆ ವೇಗವಾಗಿ ನಡೆಯಬೇಕೆಂಬ ಅಂಶವನ್ನು ಸೇರಿಸಲಾಗಿದೆ. ಜೊತೆಗೆ 16ರ ಕೆಳಗಿನ ವಯಸ್ಸಿನ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ನಡೆಸಿದರೆ ಇದುವರೆಗೂ ವಿಧಿಸುತ್ತಿದ್ದ 10 ವರ್ಷಗಳ ಕನಿಷ್ಠ ಶಿಕ್ಷೆಯನ್ನು 20 ವರ್ಷಗಳಿಗೆ ಹೆಚ್ಚಿಸಲಾಗಿದ್ದು. ಗರಿಷ್ಠ ಪ್ರಮಾಣದ ಶಿಕ್ಷೆಯಾಗಿ ಜೀವವಾಧಿ ಶಿಕ್ಷೆ ವಿಧಿಸಬಹುದಾಗಿದೆ.

  • ಗಮನಿಸಿ, ಆಗಸ್ಟ್ 7 ರಂದು ಸಾರಿಗೆ ಮುಷ್ಕರ – ಬಿಎಂಟಿಸಿ, ಕೆಎಸ್ಆರ್‌ಟಿಸಿ ರಸ್ತೆಗೆ ಇಳಿಯಲ್ಲ

    ಗಮನಿಸಿ, ಆಗಸ್ಟ್ 7 ರಂದು ಸಾರಿಗೆ ಮುಷ್ಕರ – ಬಿಎಂಟಿಸಿ, ಕೆಎಸ್ಆರ್‌ಟಿಸಿ ರಸ್ತೆಗೆ ಇಳಿಯಲ್ಲ

    ಬೆಂಗಳೂರು: 2017ರ ಮೋಟಾರು ವಾಹನ ತಿದ್ದುಪಡಿ ಕಾಯ್ದೆಯನ್ನು ಹಿಂಪಡೆಯಲು ಆಗ್ರಹಿಸಿ ರಸ್ತೆ ಸಾರಿಗೆ ಕಾರ್ಮಿಕ ಮತ್ತು ಮಾಲೀಕರ ಸಂಘಟನೆ ದೇಶಾದ್ಯಂತ ಆಗಸ್ಟ್ 7 ರಂದು ಮುಷ್ಕರಕ್ಕೆ ಕರೆ ನೀಡಿದೆ.

    ಈ ಕುರಿತು ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ವೇದಿಕೆ ಮುಖಂಡರು, ಕೇಂದ್ರ ಸರ್ಕಾರದ ಜಾರಿಗೆ ತಂದಿರುವ 2017 ರ ಮೋಟಾರು ತಿದ್ದುಪಡಿ ಕಾಯ್ದೆಯ ವಿರುದ್ಧ ಮುಷ್ಕರ ನಡೆಸಲು ತೀರ್ಮಾನಿಸಲಾಗಿದೆ. ಈ ಹೋರಾಟದಲ್ಲಿ ನಾಲ್ಕು ಸರ್ಕಾರಿ ಸಾರಿಗೆ ನಿಗಮಗಳು ಸೇರಿದಂತೆ ಬಿಎಂಟಿಸಿ ಸಾರಿಗೆ ಸೇವೆ ಸ್ಥಗಿತಗೊಳ್ಳಲಿದೆ. ಬೆಳಗ್ಗೆ 6 ರಿಂದ ಸಂಜೆ 6ವರೆಗೂ ಮುಷ್ಕರ ನಡೆಯಲಿದೆ ಎಂದು ತಿಳಿಸಿದ್ದಾರೆ.

    ಸದ್ಯ ಆಗಸ್ಟ್ 07 ರಂದು ನಡೆಯುವ ಮುಷ್ಕರಕ್ಕೆ ಆಟೋ ಚಾಲಕರ ಸಂಘ, ಏರ್ ಪೋರ್ಟ್ ಟ್ಯಾಕ್ಸಿ ಚಾಲಕರ ಸಂಘ ಹಾಗೂ ಬಿಎಂಟಿಸಿ ಯೂನಿಯನ್ ಸಾಥ್ ನೀಡಿದೆ. ಬಂದ್ ಕುರಿತು ಹೀಗಾಗಲೇ ನೌಕರರಿಗೆ ಮಾಹಿತಿ ನೀಡಿದ್ದೇವೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರ ಫೆಡರೇಷನ್ ಅಧ್ಯಕ್ಷ ಹೆಚ್ ಡಿ ರೇವಪ್ಪ ಪಬ್ಲಿಕ್ ಟಿವಿಗೆ ಹೇಳಿಕೆದ್ದಾರೆ.

    ಮಸೂದೆಗೆ ವಿರೋಧ ಯಾಕೆ?
    ಕೇಂದ್ರ ಜಾರಿಗೆ ತಂದಿರುವ ಹೊಸ ನೀತಿ ಇಂದ ರಾಜ್ಯ ವಾಹನಗಳಿಗೆ ಪರ್ಮೀಟ್ ನೀಡುದಕ್ಕೆ ಹಾಗೂ ಸಾರಿಗೆ ನೀತಿರೂಪಣೆಯಲ್ಲಿ ರಾಜ್ಯ ಸರ್ಕಾರದ ಅಧಿಕಾರ ಮೊಟಕಾಗಲಿದೆ. ಕೇಂದ್ರ ಸರ್ಕಾರದ ಹಸ್ತಕ್ಷೇಪ ಹೆಚ್ಚಾಗಲಿದೆ. ರಾಷ್ಟ್ರೀಯ ಸಾರಿಗೆ ನೀತಿ ಅಡಿ ರಾಜ್ಯಗಳ ಒಪ್ಪಿಗೆ ಇಲ್ಲದೇ ಕೇವಲ ಅಭಿಪ್ರಾಯವಷ್ಟೇ ಪಡೆದು ಹೊಸ ನೀತಿಯನ್ನು ಕೇಂದ್ರ ಜಾರಿಗೆ ತರಬಹುದು. ಇದರಿಂದ ಸಾರಿಗೆ ಇಲಾಖೆ ಅಸ್ತಿತ್ವಕ್ಕೆ ಧಕ್ಕೆಯಾಗುತ್ತದೆ. ಅಗ್ರಿಗೇಟರ್ ಲೈಸೆನ್ಸ್ ಅನ್ನು ರಾಜ್ಯಸರ್ಕಾರ ನೀಡಬಹುದಾದರೂ ನೀಡುವ ಮಾನದಂಡವನ್ನ ಕೇಂದ್ರ ತೀರ್ಮಾನಿಸಲಿದೆ.

    ಹೊಸ ಕಾಯ್ದೆಯಿಂದ ಊಬರ್, ಓಲಾ ದಂತಹ ಖಾಸಗಿ ದೊಡ್ಡ ಸಂಸ್ಥೆಗಳ ಆರ್ಭಟ ಹೆಚ್ಚಾಗಲಿದೆ. ಡ್ರೈವಿಂಗ್ ಲೈಸೆನ್ಸ್, ವಾಹನ ನೋಂದಣಿ, ಮುಂತಾದವುಗಳನ್ನು ಕಾರ್ಪೋರೇಟ್, ಆಟೋ ಮೊಬೈಲ್ ಕಂಪನಿಗಳ ಹಿಡಿತಕ್ಕೆ ಒಪ್ಪಿಸಲಾಗುತ್ತದೆ. ಎಲ್ಲವೂ ದುಬಾರಿ ಶುಲ್ಕ ಗಳ ಸುಲಿಗೆ ಕೇಂದ್ರಗಳಾಗುತ್ತೆ. ದಂಡಗಳ ಪ್ರಮಾಣ ಭಾರೀ ಹೆಚ್ಚಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.