Tag: Central govt

  • ಕೇಂದ್ರದಿಂದ ರಾಜ್ಯಕ್ಕೆ ಸಿಗಬೇಕಾದ ನೆರವಿನ ವಿಚಾರದಲ್ಲಿ ಕೇಂದ್ರ ಸಚಿವರಿಂದ ಭರವಸೆ: ಡಿಕೆಶಿ

    ಕೇಂದ್ರದಿಂದ ರಾಜ್ಯಕ್ಕೆ ಸಿಗಬೇಕಾದ ನೆರವಿನ ವಿಚಾರದಲ್ಲಿ ಕೇಂದ್ರ ಸಚಿವರಿಂದ ಭರವಸೆ: ಡಿಕೆಶಿ

    ಬೆಂಗಳೂರು: ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಸಿಗಬೇಕಾದ ನೆರವಿನ ವಿಚಾರದಲ್ಲಿ ಕೇಂದ್ರ ಸಚಿವರು ಹಾಗೂ ಸಂಸದರು ಸಹಕಾರ ನೀಡುವ ಭರವಸೆ ನೀಡಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K Shivakumar) ಹೇಳಿದ್ದಾರೆ.

    ಬೆಂಗಳೂರಿನಲ್ಲಿ (Bengaluru) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಕ್ಕೆ ಸಿಗಬೇಕಾದ ನೆರವಿನ ವಿಚಾರದಲ್ಲಿ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಕೇಂದ್ರ ಸಚಿವರುಗಳು ಹಾಗೂ ಸಂಸದರು ಹೇಳಿದ್ದಾರೆ. ಶುಕ್ರವಾರ ಸಂಸದರು ಹಾಗೂ ಕೇಂದ್ರ ಸಚಿವರನ್ನು ಭೇಟಿ ಮಾಡಿದ್ದೇವೆ. ಎಲ್ಲರೂ ಕೂಡ ಮುಕ್ತವಾಗಿ ಮಾತಾಡಿದ್ದೇವೆ. ನಾವೆಲ್ಲರೂ ಸಹಕಾರ ನೀಡುತ್ತೇವೆ ಎಂದು ಅವರು ಭರವಸೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಯಾರಾದರೂ ಆರಾಮಾಗಿ ಇರುತ್ತಾರಾ: ದರ್ಶನ್‌ ಭೇಟಿಯ ನಂತರ ರಕ್ಷಿತಾ ಪ್ರೇಮ್‌ ಭಾವುಕ

    ಮುಖ್ಯವಾಗಿ ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಎರಡು ತಾಸು ನಮ್ಮೊಂದಿಗೆ ಚರ್ಚಿಸಿದ್ದಾರೆ. ಭದ್ರಾ ಮೇಲ್ದಂಡೆ ವಿಚಾರದಲ್ಲಿ ಇನ್ನೂ ಸ್ಪಷ್ಟ ಮಾಹಿತಿ ಬಂದಿಲ್ಲ. ಎಲ್ಲರೂ ಮಹದಾಯಿ ಹಾಗೂ ಬೇರೆ ವಿಚಾರದಲ್ಲಿ ಸಹಕರಿಸುತ್ತೇವೆ ಎಂದಿದ್ದಾರೆ. ಮಾಜಿ ಸಿಎಂಗಳಿಗೂ ಈ ಬಗ್ಗೆ ಅರಿವಿದೆ ಎಲ್ಲಾ ಸಮಸ್ಯೆ ಬಗೆ ಹರಿಸುತ್ತಾರೆ ಎಂದರು. ಇದನ್ನೂ ಓದಿ: UGCET: ದಾಖಲೆಗಳ ಆನ್‌ಲೈನ್ ಪರಿಶೀಲನೆ – ವೆಬ್‌ಸೈಟ್‌ನಲ್ಲಿ ಮಾಹಿತಿ ಪ್ರಕಟ

  • ಪ್ರಜ್ವಲ್ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದತಿಗೆ ಸಿಎಂ 2ನೇ ಪತ್ರ- ಪ್ರಧಾನಿಗೆ ಬರೆದ ಲೆಟರ್‌ನಲ್ಲಿ ಏನಿದೆ?

    ಪ್ರಜ್ವಲ್ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದತಿಗೆ ಸಿಎಂ 2ನೇ ಪತ್ರ- ಪ್ರಧಾನಿಗೆ ಬರೆದ ಲೆಟರ್‌ನಲ್ಲಿ ಏನಿದೆ?

    ಬೆಂಗಳೂರು: ಭೂಗತವಾಗಿರುವ ಸಂಸದ ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್‌ಪೋರ್ಟ್  ರದ್ದತಿಗೆ ಪ್ರಧಾನಿ ನರೇಂದ್ರ ಮೋದಿಗೆ (Narendra Modi) ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಎರಡನೇ ಪತ್ರವನ್ನು ಬರೆದಿದ್ದಾರೆ.

    ಬುಧವಾರ ಎರಡನೇ ಪತ್ರ ಬರೆದಿರುವ ಸಿಎಂ, ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್‌ಪೋರ್ಟ್ (Diplomatic Passport) ಅನ್ನು ರದ್ದುಗೊಳಿಸಬೇಕು. ಭಾರತಕ್ಕ ವಾಪಸ್ ಕರೆತರಲು ತ್ವರಿತ ಕ್ರಮವಹಿಸಬೇಕೆಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.

    ಪತ್ರದಲ್ಲೇನಿದೆ..?: ಪ್ರಜ್ವಲ್ ರೇವಣ್ಣ ಮೇಲೆ ಆರೋಪ, ಗಂಭೀರ ಘಟನೆಗಳ ಬಗ್ಗೆ ಗಮನ ಸೆಳೆಯಲು ನಾನು ಮತ್ತೊಮ್ಮೆ ನಿಮಗೆ ಬರೆಯುತ್ತೇನೆ. ಈ ಘಟನೆಗಳು ಕರ್ನಾಟಕ ರಾಜ್ಯದ ಜನರ ಆತ್ಮಸಾಕ್ಷಿಯನ್ನು ಬೆಚ್ಚಿ ಬೀಳಿಸಿದೆ. ಅಲ್ಲದೇ ರಾಷ್ಟ್ರವ್ಯಾಪಿ ಆತಂಕಕ್ಕೂ ಕಾರಣವಾಗಿವೆ. ಪ್ರಸ್ತುತ ಸಾರ್ವತ್ರಿಕ ಚುನಾವಣೆಯಲ್ಲಿ ಮರು ಚುನಾವಣೆಗೆ ಸ್ಪರ್ಧಿಸಿರುವ ಹಾಸನ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣ, ಮಾಜಿ ಪ್ರಧಾನಿ ಮೊಮ್ಮಗ ಏಪ್ರಿಲ್ 27 ರಂದು ದೇಶ ಬಿಟ್ಟು ಪರಾರಿಯಾಗಿರುವುದು ನಾಚಿಕೆಗೇಡಿನ ಸಂಗತಿ. ಇದನ್ನೂ ಓದಿ: ಪ್ರಜ್ವಲ್‌ ರೇವಣ್ಣ ಕೇಸ್‌ – ಏನಿದು ರಾಜತಾಂತ್ರಿಕ ಪಾಸ್‌ಪೋರ್ಟ್‌? ವಿದೇಶದಲ್ಲಿ ಬಂಧನ ಸಾಧ್ಯವೇ? ಏನು ಸವಲತ್ತು ಸಿಗುತ್ತೆ?

    2024 ರಲ್ಲಿ ಜರ್ಮನಿಗೆ ತನ್ನ ರಾಜತಾಂತ್ರಿಕ ಪಾಸ್‌ಪೋರ್ಟ್ ಹೊಂದಿರುವ D 1135500 ಅನ್ನು ಬಳಸಿಕೊಂಡು ದೇಶ ಬಿಟ್ಟು ಹೋಗಿದ್ದಾರೆ. ಅವರ ವಿರುದ್ಧ ಆರೋಪಗಳು ಬಂದಾಗ, ಹೇಯ ಕೃತ್ಯಗಳು ಹೊರಬಂದ ಬಳಿಕ ಮೊದಲ ಎಫ್‍ಐಆರ್ ದಾಖಲಾಗುವ ಕೆಲವೇ ಗಂಟೆಗಳ ಮೊದಲು ಪಲಾಯನ ಮಾಡಿದ್ದಾರೆ. ದೇಶದಿಂದ ಪಲಾಯನ ಮಾಡಲು ಮತ್ತು ಕ್ರಿಮಿನಲ್ ಮೊಕದ್ದಮೆಗಳಿಂದ ತಪ್ಪಿಸಿಕೊಳ್ಳಲು ತಮ್ಮ ರಾಜತಾಂತ್ರಿಕ ಸವಲತ್ತುಗಳನ್ನು ದುರುಪಯೋಗಪಡಿಸಿಕೊಂಡಿದ್ದಾರೆ. 

    ಪ್ರಕರಣದ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು ರಚಿಸುವ ಮೂಲಕ ಕರ್ನಾಟಕ ಸರ್ಕಾರವು ತ್ವರಿತ ಕ್ರಮಗಳನ್ನು ಕೈಗೊಂಡಿದೆ. ಪ್ರಜ್ವಲ್ ರೇವಣ್ಣ ಮಹಿಳೆಯರ ವಿರುದ್ಧದ ಅಪರಾಧಗಳ ಬಗ್ಗೆ ಎಸ್‍ಐಟಿ ತನಿಖೆ ನಡೆಸುತ್ತಿದೆ. ಕ್ರಿಮಿನಲ್ ಆರೋಪಗಳನ್ನು ಎದುರಿಸಲು ಆರೋಪಿ ಉಪಸ್ಥಿತಿಗೆ ಎಸ್‍ಐಟಿ ಪ್ರಯತ್ನಿಸುತ್ತಿದೆ. ಸಿಆರ್‍ಪಿಸಿ ಕಲಂ 41ಎ ಅಡಿಯಲ್ಲಿ ತನಿಖಾಧಿಕಾರಿಯಿಂದ ಲುಕ್‍ಔಟ್ ಸುತ್ತೋಲೆ ಬ್ಲೂ ಕಾರ್ನರ್ ನೋಟಿಸ್ ಜಾರಿ ಆಗಿದೆ.‌ ಇದನ್ನೂ ಓದಿ: ಪ್ರಜ್ವಲ್‌ ರೇವಣ್ಣ ರಾಜತಾಂತ್ರಿಕ ಪಾಸ್‌ಪೋರ್ಟ್‌ ಹಿಂಪಡೆಯಲು ಕೋರ್ಟ್‌ನಿಂದ ಯಾವುದೇ ಆದೇಶ ಬಂದಿಲ್ಲ: MEA

    ಎರಡು ಬಾರಿ ನೋಟಿಸ್ ಜಾರಿ ಮಾಡಿದ್ದರೂ ಆರೋಪಿ ಪ್ರಜ್ವಲ್ ರೇವಣ್ಣ (Prajwal Revanna) ಅವರು ಇಂದಿಗೂ ತಲೆಮರೆಸಿಕೊಂಡಿದ್ದಾರೆ. ಇದು ತೀವ್ರ ಕಳವಳಕಾರಿ ಸಂಗತಿ. ಪ್ರಜ್ವಲ್ ರೇವಣ್ಣ ವಿರುದ್ಧದ ಎಫ್‍ಐಆರ್‍ನಲ್ಲಿ ಅತ್ಯಾಚಾರ, ಲೈಂಗಿಕ ದೌರ್ಜನ್ಯ, ಮಹಿಳೆಯರ ವಸ್ತ್ರಾಪಹರಣ ಮತ್ತು ಬಲಿಪಶುಗಳಿಗೆ ಬೆದರಿಕೆ ಹಾಕುವ ಸಲುವಾಗಿ ಬಲವಂತವಾಗಿ ಲೈಂಗಿಕ ಕ್ರಿಯೆಗಳನ್ನು ವೀಡಿಯೊ-ಗ್ರಾಫಿಂಗ್ ಸ್ವರೂಪದ ಆರೋಪಗಳಿವೆ. ಸವಲತ್ತುಗಳ ದುರುಪಯೋಗ ಮತ್ತು ಉದ್ದೇಶಪೂರ್ವಕವಾಗಿ ಕಾನೂನು ಪ್ರಕ್ರಿಯೆಗಳಿಗೆ ಅಸಹಕಾರ ತೋರುತ್ತಿದ್ದಾರೆ. ಹಾಗಾಗಿ ಕೇಂದ್ರ ಸರ್ಕಾರದಿಂದ ಗಂಭೀರವಾದ ಕ್ರಮ ತೆಗೆದುಕೊಳ್ಳಬೇಕು.

    ಆರೋಪಿಯ ಉಪಸ್ಥಿತಿಯನ್ನು ತನಿಖೆ ಮತ್ತು ವಿಚಾರಣೆಯನ್ನು ಎದುರಿಸಲು ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಗೊಳಿಸುವುದು ಸಾಧನವಾಗಿದೆ. ಇದನ್ನ ಒತ್ತಿ ಹೇಳುವ ಅಗತ್ಯವಿಲ್ಲ. ಇದೇ ರೀತಿಯ ಕಳವಳವನ್ನು ವ್ಯಕ್ತಪಡಿಸುವ ನನ್ನ ಹಿಂದಿನ ಪತ್ರವು ಸಹ ಪರಿಸ್ಥಿತಿಯ ಗಂಭೀರತೆಯನ್ನ ಪ್ರಸ್ತಾಪಿಸಿತ್ತು. ಆದರೆ ನನಗೆ ತಿಳಿದಿರುವಂತೆ, ಕ್ರಮ ತೆಗೆದುಕೊಳ್ಳದಿರುವುದು ನಿರಾಶಾದಾಯಕವಾಗಿದೆ. ಆದ್ದರಿಂದ ಈ ವಿಷಯವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ಪಾಸ್‌ಪೋರ್ಟ್ ಕಾಯಿದೆ, 1967 ರ ಸೆಕ್ಷನ್ 10(3)(ಎಚ್) ಅಡಿಯಲ್ಲಿ ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್‌ಪೋರ್ಟ್ ಅನ್ನು ರದ್ದುಗೊಳಿಸಿ ತ್ವರಿತ ಅಗತ್ಯ ಕ್ರಮ ತೆಗೆದುಕೊಳ್ಳಿ ಎಂದು ನಾನು ಮನವಿ ಮಾಡುತ್ತೇನೆ. ಕಾನೂನು ಮತ್ತು ಸಾರ್ವಜನಿಕ ಹಿತಾಸಕ್ತಿಯಿಂದ ದೇಶಕ್ಕೆ ಸುರಕ್ಷಿತವಾಗಿ ಮರಳಬೇಕು ಎಂದು ಸಿಎಂ ತಮ್ಮ ಸುದೀರ್ಘ ಪತ್ರದಲ್ಲಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.

  • 10 ವರ್ಷಗಳಲ್ಲಿ ದೇಶದ ಚಿತ್ರಣವನ್ನೇ ಮೋದಿ ಬದಲಾಯಿಸಿದ್ರು: ಯೋಗಿ

    10 ವರ್ಷಗಳಲ್ಲಿ ದೇಶದ ಚಿತ್ರಣವನ್ನೇ ಮೋದಿ ಬದಲಾಯಿಸಿದ್ರು: ಯೋಗಿ

    ಲಕ್ನೋ: ಪ್ರಧಾನಿ ನರೇಂದ್ರ ಮೋದಿಯವರು (Narendra Modi) 10 ವರ್ಷಗಳಲ್ಲಿ ಭಾರತದ ಚಿತ್ರಣವನ್ನೇ ಬದಲಾಯಿಸಿದರು ಎಂದು ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ (Yogi Adityanath) ಹೇಳಿದ್ದಾರೆ.

    ಲಕ್ನೋದ ಬಿಜೆಪಿ (BJP) ರಾಜ್ಯ ಪ್ರಧಾನ ಕಚೇರಿಯಲ್ಲಿ ಮಾಧ್ಯಮ ಕೇಂದ್ರದ ಉದ್ಘಾಟನೆ ಸಂದರ್ಭದಲ್ಲಿ ಮತನಾಡುತ್ತಾ, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ಕೊಂಡಾಡಿದರು. ಮೋದಿ ಸರ್ಕಾರ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕು ಎಂಬ ಬಲವಾದ ಆಸೆ ಜನಸಾಮಾನ್ಯರಲ್ಲಿದೆ ಎಂದು ಅವರು ಒತ್ತಿ ಹೇಳಿದರು.

    ಕಳೆದ ದಶಕದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪರಿವರ್ತನಾಶೀಲ ಪ್ರಯತ್ನಗಳನ್ನು ಮಾಡಿದ್ದಾರೆ. ಮೋದಿ ಅವರು ದೇಶದ ಚಿತ್ರಣವನ್ನು ಗಮನಾರ್ಹವಾಗಿ ಬದಲಾಯಿಸಿದ್ದಾರೆ ಎಂದು ಶ್ಲಾಘಿಸಿದ್ದಾರೆ. ಇದನ್ನೂ ಓದಿ: ಪಿತ್ರೋಡಾ ಹೇಳಿಕೆ ಪಕ್ಷದ ಹೇಳಿಕೆಯಲ್ಲ- ಅಂತರ ಕಾಯ್ದುಕೊಂಡ ಕಾಂಗ್ರೆಸ್‌

    ಸಾಮಾನ್ಯ ಜನರಲ್ಲಿ ಮತ್ತೊಮ್ಮೆ ಮೋದಿ ಸರ್ಕಾರ ಬೇಕು ಎಂಬ ಭಾವನೆ ಇದೆ. ಪ್ರಧಾನಿಯವರು ಕಳೆದ 10 ವರ್ಷಗಳಲ್ಲಿ ದೇಶದ ಚಿತ್ರಣವನ್ನು ಬದಲಾಯಿಸಿದ್ದಾರೆ. ಅಲ್ಲದೇ ಅವರುವ ಮಡಿರುವ ಸಕಾರಾತ್ಮಕ ಪ್ರಯತ್ನಗಳು ಭಾರತದ ಜನರ ಬೆಂಬಲವನ್ನು ಗಳಿಸಿವೆ ಎಂದು ಯೋಗಿ ಹೇಳಿದರು.

  • ಬರ ಪರಿಹಾರ; ಕರ್ನಾಟಕ ಸರ್ಕಾರದಿಂದ ಸಲ್ಲಿಸಿದ್ದ ಅರ್ಜಿ ಇಂದು ಸುಪ್ರೀಂನಲ್ಲಿ ವಿಚಾರಣೆ

    ಬರ ಪರಿಹಾರ; ಕರ್ನಾಟಕ ಸರ್ಕಾರದಿಂದ ಸಲ್ಲಿಸಿದ್ದ ಅರ್ಜಿ ಇಂದು ಸುಪ್ರೀಂನಲ್ಲಿ ವಿಚಾರಣೆ

    ನವದೆಹಲಿ: ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿ (NDRF) ಅಡಿಯಲ್ಲಿ ರಾಜ್ಯಕ್ಕೆ 18,171 ಕೋಟಿ ರೂ. ಬರ ಪರಿಹಾರ ಕೋರಿ ಕರ್ನಾಟಕ ಸರ್ಕಾರ ಅರ್ಜಿ ಸಲ್ಲಿಸಿದ್ದು, ಇಂದು (ಸೋಮವಾರ) ಸುಪ್ರೀಂ ಕೋರ್ಟ್‌ನಲ್ಲಿ (Supreme Court) ವಿಚಾರಣೆ ನಡೆಯಲಿದೆ. ನ್ಯಾಯಮೂರ್ತಿ ಬಿ.ಆರ್ ಗವಾಯಿ ಅವರ ನೇತೃತ್ವದ ಪೀಠವು ಅರ್ಜಿ ವಿಚಾರಣೆ ನಡೆಸಲಿದೆ. ಇದನ್ನೂ ಓದಿ: ಬರ ಪರಿಹಾರ; ಕೇಂದ್ರ V/S ಕರ್ನಾಟಕ ಸರ್ಕಾರ – ರಾಜ್ಯ ‘ಸುಪ್ರೀಂ’ ಮೆಟ್ಟಿಲೇರಿದ್ಯಾಕೆ?

    ಬರದ ಪ್ರಮಾಣ ಎಷ್ಟಿದೆ?
    ರಾಜ್ಯವು ಕೇಂದ್ರ ಸರ್ಕಾರಕ್ಕೆ (Karnataka govt) ಸಲ್ಲಿಸಿದ ವರದಿ ಪ್ರಕಾರ, 236 ತಾಲೂಕುಗಳ ಪೈಕಿ 223 ತಾಲೂಕುಗಳು ಬರಪೀಡಿತ ಎಂದು ಘೋಷಿಸಲಾಗಿದೆ. ಬರ ಪರಿಣಾಮದಿಂದಾಗಿ 48 ಲಕ್ಷ ಹೆಕ್ಟೇರ್ ಭೂಮಿಯಲ್ಲಿ ಬೆಳೆ (ಕೃಷಿ ಹಾಗೂ ತೋಟಗಾರಿಕಾ ಬೆಳೆ) ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. 2023ರ ಅಕ್ಟೋಬರ್‌ನಲ್ಲಿ ನಷ್ಟ ಪರಿಶೀಲಿಸಲು ಅಂತರ-ಸಚಿವಾಲಯದ ಕೇಂದ್ರ ತಂಡ (ಐಎಂಸಿಟಿ) ಸಹ ರಾಜ್ಯಕ್ಕೆ ಭೇಟಿ ನೀಡಿತ್ತು. ಕಳೆದ ವರ್ಷ ಮುಂಗಾರು ಹಂಗಾಮಿನಲ್ಲಿ (ಜೂನ್) ಮಳೆಯ ಕೊರತೆ ಶೇ.56 ರಷ್ಟಿತ್ತು. ಅಂದರೆ 122 ವರ್ಷಗಳ ಬಳಿಕ ಈ ಪ್ರಮಾಣದ ಕೊರತೆ ಎದುರಾಗಿದೆ. ಜೊತೆಗೆ ಆಗಸ್ಟ್ ತಿಂಗಳಲ್ಲಿ ಶೇ.73 ಮಳೆ ಕೊರತೆ ಉಂಟಾಗಿದೆ.

    ಅಷ್ಟೇ ಅಲ್ಲ ಕಳೆದ ವರ್ಷದ ಮಾನ್ಸೂನ್ ಸಮಯದಲ್ಲಿಯೂ ಕರ್ನಾಟಕದಲ್ಲಿ ಸಾಮಾನ್ಯಕ್ಕಿಂತ 18% ಕಡಿಮೆ ಮಳೆಯಾಗಿದೆ. 2015ರ ಬಳಿಕ ಈ ಪ್ರಮಾಣದಲ್ಲಿ ಕಡಿಮೆ ಮಳೆ ಬಿದ್ದಿದೆ. ಮುಂಗಾರು ನಂತರದ ಅವಧಿಯು ಸಹ ರಾಜ್ಯಕ್ಕೆ ಹೆಚ್ಚಿನ ಮಳೆಯನ್ನು ತರಲಿಲ್ಲ ಎಂದು ರಾಜ್ಯ ಸರ್ಕಾರ ಮಾಹಿತಿ ನೀಡಿದೆ. ಇದನ್ನೂ ಓದಿ: ರಾಜ್ಯ ಸರ್ಕಾರ ಸುಳ್ಳು ಹೇಳ್ತಿದೆ, ಬರ ಪರಿಹಾರವನ್ನ ನ್ಯಾಯಾಲಯವೇ ತೀರ್ಮಾನಿಸಲಿ: ನಿರ್ಮಲಾ ಸೀತಾರಾಮನ್

    ಬರ ಪರಿಹಾರ ನೀಡುವಂತೆ ರಾಜ್ಯ ಸರ್ಕಾರದಿಂದ ಮೂರು ಬಾರಿ ಪತ್ರ ಬರೆದಿದ್ದರು, ಖುದ್ದು ಭೇಟಿ ಮಾಡಿ ಮನವಿ ಮಾಡಿದ್ದರೂ, ಕೇಂದ್ರ ಸರ್ಕಾರ ಪರಿಹಾರ ಬಿಡುಗೆ ಮಾಡುವ ಮನಸ್ಸು ಮಾಡಿಲ್ಲ. ಆದ್ದರಿಂದ ಪರಿಹಾರ ಬಿಡುಗಡೆಗೆ ಕಟ್ಟಿನಿಟ್ಟಿನ ಸೂಚನೆ ನೀಡುವಂತೆ ಕರ್ನಾಟಕ ಸರ್ಕಾರ ಅರ್ಜಿಯಲ್ಲಿ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದೆ. ಇದನ್ನೂ ಓದಿ: ಇವಿಎಂ ಜೊತೆಗೆ ವಿವಿಪ್ಯಾಟ್ ಮತ ಎಣಿಕೆಗೆ ಆಗ್ರಹ – ವಿಚಾರಣೆಗೆ ಒಪ್ಪಿದ ಸುಪ್ರೀಂ

  • ಪುಲ್ವಾಮಾ ದಾಳಿ ಬಗೆಗಿನ ಪರಮೇಶ್ವರ್ ಹೇಳಿಕೆ ದೇಶ ವಿರೋಧಿ: ಗೌರವ್ ಭಾಟಿಯಾ

    ಪುಲ್ವಾಮಾ ದಾಳಿ ಬಗೆಗಿನ ಪರಮೇಶ್ವರ್ ಹೇಳಿಕೆ ದೇಶ ವಿರೋಧಿ: ಗೌರವ್ ಭಾಟಿಯಾ

    ನವದೆಹಲಿ: ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ಪುಲ್ವಾಮಾ ದಾಳಿ (Pulwama Attack) ನಡೆದಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಅವರು ಹೇಳಿದ್ದಾರೆ‌. ಇದು ಅತ್ಯಂತ ದುಃಖಕರ, ಆತಂಕಕಾರಿ ಹಾಗೂ ದೇಶ ವಿರೋಧಿ ಹೇಳಿಕೆ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ (Gaurav Bhatia) ಆರೋಪಿಸಿದ್ದಾರೆ.

    ಜಿ. ಪರಮೇಶ್ವರ್ (G.Parameshwar) ಹೇಳಿಕೆ ಸಂಬಂಧ ದೆಹಲಿಯಲ್ಲಿ ಪ್ರತಿಕ್ರಿಯಿಸಿದ ಅವರು, ಇಂದಿನ ಕಾಂಗ್ರೆಸ್‌ನ (Congress) ಪಾತ್ರ ಭಾರತ ವಿರೋಧಿ ಎಂಬುದು ನಂಬಿಕೆಗೆ ಮೀರಿದ್ದು. ಅವರ ನಾಯಕರು ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರ ಸೂಚನೆ ಮೇರೆಗೆ ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಆರೋಪಿಸಿದರು.

    ಬಾಲಾಕೋಟ್ ವೈಮಾನಿಕ ದಾಳಿಯ ಸಂದರ್ಭದಲ್ಲೂ ಕಾಂಗ್ರೆಸ್, ಎಸ್‌ಪಿ (SP) ಮತ್ತು ಆಮ್ ಆದ್ಮಿ (AAP) ಪಕ್ಷಗಳು ಅಸಂಬದ್ಧ ಹೇಳಿಕೆಗಳನ್ನು ನೀಡಿದ್ದವು, ದಾಳಿಗೆ ಇದಕ್ಕೆ ಸಾಕ್ಷಿ ಕೇಳಿದ್ದವು. ಈಗ ಜಿ.ಪರಮೇಶ್ವರ್ ಹೇಳಿಕೆಯಲ್ಲೂ ಅದೇ ಭಾರತ ವಿರೋಧಿ ಪಾತ್ರ ಎದ್ದು ಕಾಣುತ್ತಿದೆ. ಒಂದು ವೇಳೆ ಕಾಂಗ್ರೆಸ್‌ಗೆ ಅಂತಹ ನಿಲುವು ಇದ್ದರೆ, ಕಾಂಗ್ರೆಸ್‌ನ ಈ ಕ್ರಮಗಳಿಗೆ ಭಾರತದಲ್ಲಿ ಸ್ಥಾನವಿಲ್ಲ ಎಂದು ಹೇಳಬಹುದು. ನೀವು ಭಾರತೀಯ ಸೇನೆಯಿಂದ ಪುರಾವೆ ಕೇಳುತ್ತೀರಿ, ನೀವು ಭಾರತೀಯರೇ ಅಥವಾ ಅಲ್ಲವೇ ಎಂದು ದೇಶದ ಜನರು ನಿಮ್ಮನ್ನು ಕೇಳುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಟಿಎಂಸಿ ನಾಯಕನ ಮನೆಯಲ್ಲಿ ಸ್ಫೋಟ ಪ್ರಕರಣ – ತನಿಖೆಗೆ ತೆರಳಿದ್ದ ಎನ್‍ಐಎ ಅಧಿಕಾರಿಗಳ ಕಾರಿನ ಮೇಲೆ ದಾಳಿ

  • ಬರ ಪರಿಹಾರ; ಕೇಂದ್ರ V/S ಕರ್ನಾಟಕ ಸರ್ಕಾರ – ರಾಜ್ಯ ‘ಸುಪ್ರೀಂ’ ಮೆಟ್ಟಿಲೇರಿದ್ಯಾಕೆ?

    ಬರ ಪರಿಹಾರ; ಕೇಂದ್ರ V/S ಕರ್ನಾಟಕ ಸರ್ಕಾರ – ರಾಜ್ಯ ‘ಸುಪ್ರೀಂ’ ಮೆಟ್ಟಿಲೇರಿದ್ಯಾಕೆ?

    ಲೋಕಸಭಾ ಚುನಾವಣೆ ಹೊತ್ತಲ್ಲಿ ಕೇಂದ್ರದ ವಿರುದ್ಧ ರಾಜ್ಯ ಸರ್ಕಾರ ‘ಬರ ಪರಿಹಾರ’ ಅಸ್ತ್ರ ಪ್ರಯೋಗಿಸಿದೆ. ಮುಂಗಾರು ಕೊರತೆಯಿಂದಾಗಿ ರಾಜ್ಯದಲ್ಲಿ ಬರ ಪರಿಸ್ಥಿತಿ ತಲೆದೋರಿದೆ. ನೀರಿಗೂ ಹಾಹಾಕಾರ ಶುರುವಾಗಿದೆ. ಡೋಲಾಯಮಾನ ಪರಿಸ್ಥಿತಿ ಬಗ್ಗೆ ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವರಿಕೆ ಮಾಡಿತು. ಆದರೆ ಕೇಂದ್ರದಿಂದ ಸೂಕ್ತ ಸ್ಪಂದನೆ ಸಿಗಲಿಲ್ಲ ಎಂದು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕಾನೂನು ಹೋರಾಟಕ್ಕೆ ಮುಂದಾಗಿದೆ. ಬರ ಪರಿಹಾರಕ್ಕಾಗಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ (ರಿಟ್ ಅರ್ಜಿ) ಮೊರೆ ಹೋಗಿದೆ. ಈ ಬೆಳವಣಿಗೆ ರಾಜ್ಯದ ಆಡಳಿತ ಮತ್ತು ವಿಪಕ್ಷಗಳ ನಡುವಿನ ಜಟಾಪಟಿಗೆ ಕಾರಣವಾಗಿದೆ.

    ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿ (ಎನ್‌ಡಿಆರ್‌ಎಫ್) ಅಡಿಯಲ್ಲಿ ರಾಜ್ಯಕ್ಕೆ 18,171 ಕೋಟಿ ರೂ. ಬರ ಪರಿಹಾರ ಬರಬೇಕಿದೆ. ಪರಿಹಾರವನ್ನು ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ನಿದೇರ್ಶನ ನೀಡಬೇಕು ಎಂದು ಕೋರಿ ಕರ್ನಾಟಕ ಸರ್ಕಾರವು ಸುಪ್ರೀಂ ಕೋರ್ಟ್ ಮೊರೆ ಹೋಗಿದೆ.

    ಕೇಂದ್ರಕ್ಕೆ ಕಾನೂನು ಸವಾಲು!
    ಬಿರು ಬೇಸಿಗೆಯಿಂದ ರಾಜ್ಯದಲ್ಲಿ ಒಣ ಹವೆ ಹೆಚ್ಚಾಗಿದೆ. ವಿವಿಧ ಜಿಲ್ಲೆಗಳು ಈಗಾಗಲೇ ನೀರಿನ ಕೊರತೆ ಎದುರಿಸುತ್ತಿವೆ. ಈ ಕುರಿತು ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ರಾಜ್ಯಕ್ಕೆ ಬೇರೆ ದಾರಿಯಿಲ್ಲ. ಎನ್‌ಡಿಆರ್‌ಎಫ್ ಅಡಿಯಲ್ಲಿ ಹಕ್ಕು ಪಡೆಯಲು ಸರ್ಕಾರ ಕಳೆದ 5 ತಿಂಗಳಿಂದ ಕಾಯುತ್ತಿದೆ ಎಂದು ತಿಳಿಸಿದ್ದಾರೆ. ಪರಿಹಾರಕ್ಕಾಗಿ ಕೇಂದ್ರಕ್ಕೆ ಕಾನೂನು ಸವಾಲು ಹಾಕಿರುವ ರಾಜ್ಯ ಸರ್ಕಾರವನ್ನು ವಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ತರಾಟೆಗೆ ತೆಗೆದುಕೊಂಡಿವೆ.

    ಆರ್ಥಿಕ ಕಾರಣಗಳಿಗಾಗಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಹಾಗೂ ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದ ನಡುವೆ ಜಟಾಪಟಿ ನಡೆಯುತ್ತಿದೆ. ಕಳೆದ ತಿಂಗಳು ತೆರಿಗೆ ಮತ್ತು ಇತರೆ ಅನುದಾನ ಹಂಚಿಕೆಗಳಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಆರೋಪಿಸಿ ಕೇಂದ್ರದ ವಿರುದ್ಧ ಸಿಎಂ ಮತ್ತು ಅವರ ಸಚಿವ ಸಂಪುಟ ‘ದೆಹಲಿ ಚಲೋ’ ನಡೆಸಿತ್ತು.

    ಪ್ರಸ್ತುತ ಕರ್ನಾಟಕದಲ್ಲಿ ಬರ ಮತ್ತು ನೀರಿನ ಕೊರತೆ ಪ್ರಮಾಣ ಎಷ್ಟಿದೆ?
    ರಾಜ್ಯವು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ ವರದಿ ಪ್ರಕಾರ, 236 ರ ಪೈಕಿ 223 ತಾಲೂಕುಗಳು ಬರಪೀಡಿತ ಎಂದು ಘೋಷಿಸಲಾಗಿದೆ. ಬರ ಪರಿಣಾಮದಿಂದಾಗಿ 48 ಲಕ್ಷ ಹೆಕ್ಟೇರ್ ಭೂಮಿಯಲ್ಲಿ ಬೆಳೆ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. 2023 ರ ಅಕ್ಟೋಬರ್‌ನಲ್ಲಿ ನಷ್ಟ ಪರಿಶೀಲಿಸಲು ಅಂತರ-ಸಚಿವಾಲಯದ ಕೇಂದ್ರ ತಂಡ (ಐಎಂಸಿಟಿ) ಸಹ ರಾಜ್ಯಕ್ಕೆ ಭೇಟಿ ನೀಡಿತ್ತು. ಕಳೆದ ವರ್ಷ ಮುಂಗಾರು ಹಂಗಾಮಿನಲ್ಲಿ (ಜೂನ್) ಮಳೆಯ ಕೊರತೆ ಶೇ.56 ರಷ್ಟಿತ್ತು. ಅಂದರೆ 122 ವರ್ಷಗಳ ಬಳಿಕ ಈ ಪ್ರಮಾಣದ ಕೊರತೆ ಎದುರಾಗಿದೆ. ಜೊತೆಗೆ ಆಗಸ್ಟ್ ತಿಂಗಳಲ್ಲಿ ಶೇ.73 ಮಳೆ ಕೊರತೆ ಉಂಟಾಗಿದೆ.

    ಕಳೆದ ವರ್ಷದ ಮಾನ್ಸೂನ್ ಸಮಯದಲ್ಲಿ ಕರ್ನಾಟಕದಲ್ಲಿ ಸಾಮಾನ್ಯಕ್ಕಿಂತ ಶೇ.18 ರಷ್ಟು ಕಡಿಮೆ ಮಳೆಯಾಗಿದೆ. 2015 ರ ಬಳಿಕ ಈ ಪ್ರಮಾಣದಲ್ಲಿ ಕಡಿಮೆ ಮಳೆ ಬಿದ್ದಿದೆ. ಮುಂಗಾರು ನಂತರದ ಅವಧಿಯು ಸಹ ರಾಜ್ಯಕ್ಕೆ ಹೆಚ್ಚಿನ ಮಳೆಯನ್ನು ತರಲಿಲ್ಲ.

    ಕರ್ನಾಟಕ ಎಷ್ಟು ಪರಿಹಾರ ಕೇಳಿದೆ?
    ರಾಜ್ಯವು ಬರಗಾಲದಿಂದ 35,162.05 ಕೋಟಿ ರೂ. ಬೆಳೆ ನಷ್ಟವನ್ನು ಅಂದಾಜಿಸಿದೆ. ಎನ್‌ಡಿಆರ್‌ಎಫ್ ಅಡಿಯಲ್ಲಿ ಕೇಂದ್ರದಿAದ 18,171 ಕೋಟಿ ರೂ. ಪರಿಹಾರ ಕೇಳಿದೆ. ಇದರಲ್ಲಿ ಬೆಳೆ ನಷ್ಟದ ಇನ್‌ಪುಟ್ ಸಬ್ಸಿಡಿಗೆ 4,663.12 ಕೋಟಿ ರೂ., ಜೀವನೋಪಾಯಕ್ಕೆ ತೊಂದರೆಯಾದ ಕುಟುಂಬಗಳಿಗೆ ಅನಪೇಕ್ಷಿತ ಪರಿಹಾರಕ್ಕಾಗಿ 12,577.9 ಕೋಟಿ ರೂ., ಕುಡಿಯುವ ನೀರಿನ ಕೊರತೆಯನ್ನು ಪರಿಹರಿಸಲು 566.78 ಕೋಟಿ ರೂ., ಜಾನುವಾರುಗಳ ಆರೈಕೆಗಾಗಿ 363.68 ಕೋಟಿ ರೂ. ಸೇರಿದೆ.

    ರಾಜ್ಯದ 33 ಲಕ್ಷ ರೈತರಿಗೆ ಮಧ್ಯಂತರ ಪರಿಹಾರವಾಗಿ ಪ್ರತಿ ವ್ಯಕ್ತಿಗೆ 2,000 ರೂ.ನಂತೆ ಕರ್ನಾಟಕ ಸರ್ಕಾರ ತನ್ನ ಖಜಾನೆಯಿಂದ 650 ಕೋಟಿ ರೂ. ಬಿಡುಗಡೆ ಮಾಡಿದೆ. ಜೊತೆಗೆ ಮೇವಿಗೆ 450 ಕೋಟಿ ಹಾಗೂ ಕುಡಿಯುವ ನೀರಿಗೆ 870 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ. ಪರಿಹಾರ ಕುರಿತು ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಬೆಳೆ ನಷ್ಟದ ಇನ್‌ಪುಟ್ ಸಬ್ಸಿಡಿಗಾಗಿ ಕೇಳಿರುವ 4,663 ಕೋಟಿ ರೂ. ಅನ್ನು ನಿಯಮಾನುಸಾರ ವಿಳಂಬವಿಲ್ಲದೇ ಬಿಡುಗಡೆ ಮಾಡಬೇಕಿತ್ತು. ಆದರೂ ಐದು ತಿಂಗಳು ಕಳೆದರೂ ರಾಜ್ಯಕ್ಕೆ ಯಾವುದೇ ಹಣ ಬಂದಿಲ್ಲ ಎಂದು ತಿಳಿಸಿದ್ದಾರೆ.

    ರಿಟ್ ಅರ್ಜಿ ಏನು ಹೇಳುತ್ತೆ?
    ವಿಪತ್ತು ನಿರ್ವಹಣಾ ಕಾಯ್ದೆ 2005 ರ ಅಡಿಯಲ್ಲಿ ರಾಜ್ಯಕ್ಕೆ ತನ್ನ ಬಾಧ್ಯತೆಯಾಗಿರುವ ಹಣಕಾಸಿನ ನೆರವನ್ನು ಕೇಂದ್ರವು ನೀಡಬೇಕು. ಕರ್ನಾಟಕ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಯು ಸಂವಿಧಾನದ 32ನೇ ವಿಧಿಯ ಅಡಿಯಲ್ಲಿ ಪರಿಹಾರ ಕೋರುತ್ತದೆ. ಇದು ಸಾಂವಿಧಾನಿಕ ಪರಿಹಾರಕ್ಕೆ ಸಂಬಂಧಿಸಿದೆ. ನಾಗರಿಕರು ತಮ್ಮ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸಲಾಗಿದೆ ಎಂದೆನಿಸಿದರೆ ಅವರು, ಸುಪ್ರೀಂ ಕೋರ್ಟ್ ಅನ್ನು ಸಂಪರ್ಕಿಸಬಹುದು.

    ಐಎಂಸಿಟಿ ವರದಿಯ ಮೇಲೆ ಕಾರ್ಯನಿರ್ವಹಿಸಲು ಮತ್ತು ಹಣಕಾಸಿನ ನೆರವನ್ನು ಒದಗಿಸಲು ಅಂತಿಮ ನಿರ್ಧಾರ ತೆಗೆದುಕೊಳ್ಳುವಲ್ಲಿ ವಿಳಂಬವಾಗಿದೆ. ಭಾರತದ ಸಂವಿಧಾನದ 14 ಮತ್ತು 21 ನೇ ವಿಧಿಗಳ ಅಡಿಯಲ್ಲಿ ಅದರ ನಾಗರಿಕರಿಗೆ ಖಾತರಿಪಡಿಸಿದ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಕರ್ನಾಟಕ ಸರ್ಕಾರ ವಾದಿಸಿದೆ.

    ಭಾರತದ ರಾಜ್ಯಗಳಿಗೆ ವಿಪತ್ತು ಪರಿಹಾರ ನಿಯೋಜನೆ ಹೇಗೆ?
    ರಾಜ್ಯಗಳು ರಾಜ್ಯ ವಿಪತ್ತು ಪರಿಹಾರ ನಿಧಿಗಳನ್ನು ಹೊಂದಿವೆ. ಕೇಂದ್ರವು 75% ನಿಧಿಯನ್ನು (ಹಿಮಾಲಯ ಮತ್ತು ಈಶಾನ್ಯ ರಾಜ್ಯಗಳಿಗೆ 90%) ಮತ್ತು ರಾಜ್ಯಗಳು ಉಳಿದ ಹಣವನ್ನು ನೀಡುತ್ತವೆ. ಒಟ್ಟು ಮೊತ್ತವನ್ನು ಬಜೆಟ್ ಹಂಚಿಕೆಯ ಭಾಗವಾಗಿ ನಿರ್ಧರಿಸಲಾಗುತ್ತದೆ. ಕೇಂದ್ರವು ನಿಯತಕಾಲಿಕವಾಗಿ ಬಿಡುಗಡೆ ಮಾಡುತ್ತದೆ.

    ಕೇಂದ್ರದ ನೆರವು ಅಗತ್ಯವಿದ್ದರಾ ರಾಜ್ಯ ಏನು ಮಾಡಬೇಕು?
    ರಾಜ್ಯಕ್ಕೆ ಕೇಂದ್ರದ ನೆರವು ಅಗತ್ಯವಿದ್ದರೆ, ಅದು ಕೆಲವು ಕಾರ್ಯವಿಧಾನಗಳನ್ನು ಅನುಸರಿಸಬೇಕು.
    1) ಜ್ಞಾಪಕ ಪತ್ರದಲ್ಲಿ ಹಾನಿಯ ಪ್ರಮಾಣವನ್ನು ವಿವರಿಸಬೇಕು. ನಂತರ ಅದನ್ನು ಸಲ್ಲಿಸಬೇಕು.
    2) ಇದನ್ನು ಕೇಂದ್ರವು ಒಪ್ಪಿಕೊಂಡರೆ, ಐಎಂಸಿಟಿ ಸ್ಥಳ ಪರಿಶೀಲನೆ ಕೈಗೊಂಡು ಹಾನಿಯ ಸಮೀಕ್ಷೆ ನಡೆಸುತ್ತದೆ.
    3) ರಾಷ್ಟ್ರೀಯ ಕಾರ್ಯಕಾರಿ ತಂಡವು ಐಎಂಸಿಟಿ ವರದಿಯನ್ನು ವಿಶ್ಲೇಷಿಸುತ್ತದೆ.
    4) ಅದರ ಶಿಫಾರಸುಗಳ ಆಧಾರದ ಮೇಲೆ ಉನ್ನತಮಟ್ಟದ ಸಮಿತಿಯು ತಕ್ಷಣದ ಪರಿಹಾರ ಬಿಡುಗಡೆಯನ್ನು ಅನುಮೋದಿಸುತ್ತದೆ.

    ರಾಜ್ಯ ಸರ್ಕಾರ ಸುಪ್ರೀಂ ಮೊರೆ ಹೋಗಿದ್ಯಾಕೆ?
    2023ರ ಸೆಪ್ಟೆಂಬರ್ ಮತ್ತು ನವೆಂಬರ್ ಸಂದರ್ಭದಲ್ಲಿ 3 ಜ್ಞಾಪಕ ಪತ್ರಗಳೊಂದಿಗೆ ರಾಜ್ಯ ಸರ್ಕಾರ ಕೇಂದ್ರವನ್ನು ಸಂಪರ್ಕಿಸಿತು. ಡಿ.19 ರಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಡಿ.20 ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ನಂತರವೂ ಯಾವುದೇ ಫಲ ಸಿಗಲಿಲ್ಲ. ಈಗ ಕರ್ನಾಟಕ ಸಿಎಂ ಸಿದ್ದರಾಮಯ್ಯ ಕಾನೂನು ಮಾರ್ಗ ಹಿಡಿದಿದ್ದಾರೆ. ರಾಜ್ಯಕ್ಕೆ ಒಂದು ಪೈಸೆ ಕೂಡ ಬಿಡುಗಡೆಯಾಗಿಲ್ಲ ಎಂದು ಆರೋಪಿಸಿದ್ದಾರೆ.

    ವಿಪಕ್ಷಗಳು ಏನು ಹೇಳುತ್ತಿವೆ?
    ಮುಂಬರುವ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ರಾಜಕೀಯ ಮಾಡಲು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಅಸಮಾಧಾನ ಹೊರಹಾಕಿದ್ದಾರೆ. ಬಿಜೆಪಿಯೊಂದಿಗಿನ ಮೈತ್ರಿಯ ಭಾಗವಾಗಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಕೂಡ ರಾಜ್ಯ ಸರ್ಕಾರದ ನಡೆಗೆ (ದೆಹಲಿ ಚಲೋ ಪ್ರತಿಭಟನೆ) ಟೀಕೆ ವ್ಯಕ್ತಪಡಿಸಿದ್ದಾರೆ.

  • CAA ಸ್ವಾಗತಿಸಿ ಪ್ರಧಾನಿ ಮೋದಿಗೆ ಧನ್ಯವಾದ ತಿಳಿಸಿದ ಸೀಮಾ ಹೈದರ್‌

    ನೋಯ್ಡಾ: ಕಳೆದ ವರ್ಷ ತನ್ನ ನಾಲ್ವರು ಮಕ್ಕಳೊಂದಿಗೆ ಅಕ್ರಮವಾಗಿ ಭಾರತಕ್ಕೆ ಪ್ರವೇಶಿಸಿ ಈಗ ಗ್ರೇಟರ್ ನೋಯ್ಡಾದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆ ಸೀಮಾ ಹೈದರ್ ಪೌರತ್ವ ತಿದ್ದುಪಡಿ ಕಾಯ್ದೆ (CAA)ಯನ್ನು ಸ್ವಾಗತಿಸಿದ್ದಾರೆ.

    ಹಿಂದೂ ಧರ್ಮವನ್ನು ಅಳವಡಿಸಿಕೊಂಡಿದ್ದೇನೆ ಮತ್ತು ಗ್ರೇಟರ್ ನೋಯ್ಡಾ ನಿವಾಸಿ ಸಚಿನ್ ಮೀನಾ (Sachin Meena) ಅವರನ್ನು ವಿವಾಹವಾದರು ಎಂದು ಹೇಳಿಕೊಳ್ಳುವ ಹೈದರ್, ಈ ನಿರ್ಧಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ಶ್ಲಾಘಿಸಿದರು. ಭಾರತೀಯ ಪೌರತ್ವವನ್ನು ಪಡೆಯಲು ಸಿಎಎ ಸಹಾಯ ಮಾಡುತ್ತದೆ ಎಂದು ಹೇಳಿದ್ದಾರೆ.

    ಭಾರತ ಸರ್ಕಾರವು ಇಂದು ನಮ್ಮ ದೇಶದಲ್ಲಿ ಸಿಎಎಯನ್ನು ಜಾರಿಗೆ ತಂದಿದೆ. ಈ ಕುರಿತು ನಮಗೆ ತುಂಬಾ ಸಂತೋಷವಾಗಿದೆ. ಈ ಹಿನ್ನೆಲೆಯಲ್ಲಿ ನಾನು ಕೇಂದ್ರ ಸರ್ಕಾರವನ್ನು ಅಭಿನಂದಿಸುತ್ತೇವೆ. ಪ್ರಧಾನಿ ನರೇಂದ್ರ ಮೋದಿಯವರು ಕೊಟ್ಟ ಭರವಸೆಯನ್ನು ಈಡೇರಿಸಿದ್ದಾರೆ. ಹೀಗಾಗಿ ನನ್ನ ಜೀವನದುದ್ದಕ್ಕೂ ಅವರಿಗೆ ಋಣಿಯಾಗಿರುತ್ತೇನೆ ಎಂದ ಸೀಮಾ ಮೋದಿಯವರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ. ಇದನ್ನೂ ಓದಿ: ದೇಶಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ – ಕೇಂದ್ರದಿಂದ ಅಧಿಸೂಚನೆ ಪ್ರಕಟ

    2014 ರ ಡಿಸೆಂಬರ್‌ 31 ರ ಮೊದಲು ಭಾರತಕ್ಕೆ ಬಂದ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಿಂದ ದಾಖಲೆರಹಿತ ಮುಸ್ಲಿಮೇತರ ವಲಸಿಗರಿಗೆ ಪೌರತ್ವವನ್ನು ತ್ವರಿತವಾಗಿ ಪತ್ತೆಹಚ್ಚಲು ಜಾರಿಗೆ ತಂದಿರುವ CAA ಯ ನೇರ ಫಲಾನುಭವಿ  ಸೀಮಾ  ಹೈದರ್ (Seema  Haider) ಆಗುವುದಿಲ್ಲ .

  • ಬೈಕ್ ಟ್ಯಾಕ್ಸಿಗೆ ಕೇಂದ್ರ ಅಸ್ತು- ರಾಜ್ಯ ಸರ್ಕಾರಕ್ಕೆ ಕ್ಯಾಬ್ ಅಸೋಸಿಯೇಷನ್ ಎಚ್ಚರಿಕೆ

    ಬೈಕ್ ಟ್ಯಾಕ್ಸಿಗೆ ಕೇಂದ್ರ ಅಸ್ತು- ರಾಜ್ಯ ಸರ್ಕಾರಕ್ಕೆ ಕ್ಯಾಬ್ ಅಸೋಸಿಯೇಷನ್ ಎಚ್ಚರಿಕೆ

    ಬೆಂಗಳೂರು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ವಿರುದ್ಧ ಆಟೋ ಕ್ಯಾಬ್ ಚಾಲಕರು (Auto Cab Drivers) ಸಮರ ಸಾರಿದ್ದಾರೆ. ಈ ಹೊತ್ತಿನಲ್ಲಿ ಕೆಲ ಅಗ್ರಿಗೇಟರ್ ಕಂಪನಿಗಳು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದು, ರಾಜ್ಯದಲ್ಲಿ ಬ್ಯಾನ್ ಆಗಿರುವ ಬೈಕ್ ಟ್ಯಾಕ್ಸಿಗೆ ಈಗ ಕೇಂದ್ರ (Central Govt) ಒಪ್ಪಿಗೆ ನೀಡಿದೆ.

    ವೈಟ್ ಬೋರ್ಡ್‍ನಲ್ಲಿ ಬೈಕ್ ಟ್ಯಾಕ್ಸಿ (Bike Taxi) ನಡೆಸಬಹುದು. ರಾಜ್ಯ ಸಾರಿಗೆ ಇಲಾಖೆ ಅನುಮತಿ ನೀಡಬಹುದು ಎಂದು ರಾಜ್ಯ ಸಾರಿಗೆ ಇಲಾಖೆಗೆ ಕೇಂದ್ರ ಸಾರಿಗೆ ಇಲಾಖೆ ಸಲಹೆ ನೀಡಿದೆ. ಇದು ಸದ್ಯ ಆಟೋ ಕ್ಯಾಬ್ ಚಾಲಕರ ಆಕ್ರೋಶಕ್ಕೆ ಕಾರಣವಾಗಿದೆ. ರಾಜ್ಯ ಸಾರಿಗೆ ಇಲಾಖೆ ಯಾವುದೇ ಕಾರಣಕ್ಕೂ ಅನುಮತಿ ನೀಡಬಾರದು. ಒಂದು ವೇಳೆ ಅನುಮತಿ ನೀಡಿದ್ರೆ ಉಗ್ರವಾದ ಹೋರಾಟ ಮಾಡ್ತೀವಿ ಎಂದು ಚಾಲಕರು ಎಚ್ಚರಿಕೆ ಕೊಟ್ಟಿದ್ದಾರೆ. ಇದನ್ನೂ ಓದಿ: ದೆಹಲಿಯಲ್ಲಿ ಪ್ರತಿಭಟಿಸ್ತಿರೋರು ರೈತರಲ್ಲ, ದೇಶದ್ರೋಹಿಗಳು: ಅನಂತ್‌ ಕುಮಾರ್‌ ಹೆಗಡೆ

    ರಾಜ್ಯ ಸಾರಿಗೆ ಇಲಾಖೆಯ ರೂಲ್ಸ್ ಪ್ರಕಾರ, ವೈಟ್ ಬೋರ್ಡ್ ಟು ವೀಲರ್ ಇರೋದು ಸ್ವಂತಕ್ಕೆ ಬಳಕೆಗೆ ಮಾತ್ರ. ರಾಜ್ಯ ಸಾರಿಗೆ ಇಲಾಖೆ ಕರ್ನಾಟಕದಲ್ಲಿ ವೈಟ್ ಬೋರ್ಡ್ ಹಾಕಿ ಬೈಕ್ ಟ್ಯಾಕ್ಸಿ ನಡೆಸುವುದನ್ನು ಬ್ಯಾನ್ ಮಾಡಿದೆ. ಹಿಂದಿನ ಬಿಜೆಪಿ ಸರ್ಕಾರ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗಳಲ್ಲಿ ಬೈಕ್ ಟ್ಯಾಕ್ಸಿ ನಡೆಸಬಹುದು ಎಂದು ಅನುಮತಿ ನೀಡಿತ್ತು. ಆದರೆ ಇದರಿಂದ ಆಕ್ರೋಶಗೊಂಡಿದ್ದ ರಾಜ್ಯ ಆಟೋ ಕ್ಯಾಬ್ ಚಾಲಕರು, ಕಳೆದ ವಾರ ಸಿಎಂ ಜೊತೆ ನಡೆದ ಸಭೆಯಲ್ಲಿ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗಳನ್ನು ಬ್ಯಾನ್ ಮಾಡಬೇಕು ಎಂದು ಮನವಿ ಮಾಡಿದ್ರು. ಇದಕ್ಕೆ ಮಣಿದ ಸರ್ಕಾರ ಬೈಕ್ ಟ್ಯಾಕ್ಸಿ ಬ್ಯಾನ್ ಮಾಡಲು ಸಾರಿಗೆ ಇಲಾಖೆಯಿಂದ ವರದಿಯನ್ನು ತರಿಸಿಕೊಂಡಿದ್ದಾರಂತೆ. ಈ ಹೊತ್ತಲ್ಲಿ ಕೇಂದ್ರ ಸಾರಿಗೆ ಇಲಾಖೆ ರಾಜ್ಯ ಸಾರಿಗೆ ಇಲಾಖೆಗೆ ಪತ್ರ ಕಳಿಸಿ ಕರ್ನಾಟಕ ರಾಜ್ಯ ಸಾರಿಗೆ ಇಲಾಖೆ ಕಾಂಟ್ರಾಕ್ಟ್ ಕ್ಯಾರೆಜ್ ಅಡಿಯಲ್ಲಿ ಬೈಕ್ ಟ್ಯಾಕ್ಸಿಗೆ ಅನುಮತಿ ನೀಡಬಹುದು ಎಂದಿದೆ. ಇದು ಆಟೋ ಚಾಲಕರ ಆಕ್ರೋಶಕ್ಕೆ ಕಾರಣವಾಗಿದೆ.

    ಒಟ್ಟಾರೆ ಸ್ವಂತಕ್ಕೆ ಬಳಕೆ ಮಾಡಲಿರುವ ಬೈಕ್‍ಗಳಲ್ಲಿ ಯಾವುದೇ ಸುರಕ್ಷತೆ ಇಲ್ಲದೇ ಟ್ಯಾಕ್ಸಿ ನಡೆಸುವುದು ಸರಿಯಲ್ಲ. ಆದರೆ ರಾಜ್ಯ ಸರ್ಕಾರ ಅನುಮತಿ ನೀಡುತ್ತಾ ಅಥವಾ ತನ್ನ ಹಿಂದಿನ ರೂಲ್ಸ್ ಅನ್ನೇ ಫಾಲೋ ಮಾಡುತ್ತಾ ಎಂದು ಕಾದು ನೋಡಬೇಕಿದೆ.

  • ಪರಿಶಿಷ್ಟ ಜಾತಿ ಒಳ ಮೀಸಲಾತಿ ವಿಚಾರ – ಕೇಂದ್ರಕ್ಕೆ ಶಿಫಾರಸು ಮಾಡಲು ನಿರ್ಧಾರ

    ಪರಿಶಿಷ್ಟ ಜಾತಿ ಒಳ ಮೀಸಲಾತಿ ವಿಚಾರ – ಕೇಂದ್ರಕ್ಕೆ ಶಿಫಾರಸು ಮಾಡಲು ನಿರ್ಧಾರ

    ಬೆಂಗಳೂರು: ರಾಜ್ಯದ ಪರಿಶಿಷ್ಟ ಜಾತಿ (Scheduled caste) ಸಮುದಾಯಕ್ಕೆ ಒಳ ಮೀಸಲಾತಿ ನೀಡಬೇಕು ಅದಕ್ಕೆ ಸಂವಿಧಾನದ ಆರ್ಟಿಕಲ್ 341 ತಿದ್ದುಪಡಿ ತಂದು ಖಂಡ (3) ಕ್ಕೆ ಸೇರಿಸಿ ಒಳ ಮೀಸಲಾತಿ ಘೋಷಣೆ ಮಾಡಬೇಕು ಎಂದು ಕೇಂದ್ರ ಸರ್ಕಾರಕ್ಕೆ (Central Government) ಶಿಫಾರಸು ಮಾಡಲು ಇಂದಿನ ಸಚಿವ ಸಂಪುಟ ಸಭೆಯಲ್ಲಿ (Cabinet Meeting) ತೀರ್ಮಾನ ಕೈ ಗೊಳ್ಳಲಾಗಿದೆ.

    ಹೊಸ ಜನಗಣತಿ ಪ್ರಕಾರ, ಮೀಸಲಾತಿ ಪರಿಷ್ಕರಣೆ ಮಾಡಲು ಕೆಂದ್ರಕ್ಕೆ ಶಿಫಾರಸು ಮಾಡಲು ಇಂದಿನ ಸಂಪುಟ ಸಭೆಯಲ್ಲಿ ತಿರ್ಮಾನಿಸಲಾಗಿದೆ. ಮೀಸಲಾತಿ ಪರಿಷ್ಕರಣೆ ಮಾಡಲು ಸಂವಿಧಾನ ಬದ್ಧವಾಗಿ ರಾಜ್ಯಗಳಿಗೆ ಅಧಿಕಾರ ಕೊಡಲು ಕೇಂದ್ರಕ್ಕೆ ಮನವಿ ಮಾಡಲು ಸಹಾ ಇಂದಿನ ಸಭೆಯಲ್ಲಿ ತಿರ್ಮಾನಿಸಲಾಗಿದೆ. ಆ ಮೂಲಕ ಸದಾಶಿವ ಆಯೋಗದ ವರದಿ ಅನ್ವಯ ಒಳ ಮೀಸಲಾತಿ ಜಾರಿ ಮಾಡುತ್ತೇವೆ ಎಂಬ ಭರವಸೆ ನೀಡಿದ್ದ ಕಾಂಗ್ರೆಸ್ ಈಗ ಒಳ ಮೀಸಲಾತಿ ಜಾರಿ ಹೊಣೆಯನ್ನ ಕೇಂದ್ರ ಸರ್ಕಾರದ ಹೆಗಲಿಗೆ ರವಾನಿಸಿ ಒಳ ಮೀಸಲಾತಿ ಶಿಫಾರಸು ಮಾಡಿದೆ.

    ಸಂವಿಧಾನದ ಆರ್ಟಿಕಲ್ 341 ಕ್ಕೆ ಖಂಡ (3) ನ್ನು ಸೇರಿಸದೇ ಹೋದರೆ ಒಳ ಮೀಸಲಾತಿ ನೀಡಲು ಸಾಧ್ಯವಿಲ್ಲ. ಆದ್ದರಿಂದ ರಾಜ್ಯದ ಶಿಫಾರಸ್ಸಿನಂತೆ ಈಗಿನ ಜನಸಂಖ್ಯೆಗೆ ಅನಿಗುಣವಾಗಿ ತಿದ್ದುಪಡಿ ಮಾಡಿ ಒಳ ಮೀಸಲಾತಿ ಘೋಷಣೆ ಮಾಡಬೇಕು ಎಂದು ಶಿಫಾರಸು ಮಾಡಲು ಸಚಿವ ಸಂಪುಟ ನಿರ್ಧರಿಸಿದೆ.

    ಏನಿದು ಒಳ‌ ಮೀಸಲಾತಿ ಶಿಫಾರಸು..?:
    * ಪರಿಶಿಷ್ಟ ಜಾತಿಯಲ್ಲೆ ಕೆಲವು ಸಣ್ಣಪುಟ್ಟ ಸಮುದಾಯಗಳು ಮೀಸಲಾತಿಯಿಂದ ವಂಚಿತವಾಗಿದ್ದು ಅವರಿಗೆ ಇರುವ ಮೀಸಲಾತಿಯಲ್ಲೇ ಹೆಚ್ಚು ಅವಕಾಶ ನೀಡುವ ಒಳ ಮೀಸಲಾತಿ ಜಾರಿಗೆ ಮುಂದಾಗಿರುವುದು.
    * ಎಸ್.ಎಂ.ಕೃಷ್ಣ ಅವದಿಯಲ್ಲಿ ನ್ಯಾ.ಮೂರ್ತಿ ಸದಾಶಿವ ಆಯೋಗ ರಚನೆ ಮಾಡಿ ಒಳ ಮೀಸಲಾತಿ ಹೇಗೆ ಜಾರಿ ಮಾಡಬೇಕು ಎಂಬ ವರದಿ ನೀಡಲು ಸೂಚನೆ.
    * ಹಿಂದಿನ ಸರ್ಕಾರದ ಅವಧಿಯಲ್ಲಿ ಪರಿಶಿಷ್ಟ ಜಾತಿ ಮೀಸಲು ಪ್ರಮಾಣ 15 ರಿಂದ 17 ಕ್ಕೆ ಹೆಚ್ಚಳ ಮಾಡಿ ಮೀಸಲಾತಿ ಹೆಚ್ಚಳಕ್ಕೆ ಕೇಂದ್ರಕ್ಕೆ ಶಿಫಾರಸು ಮಾಡಿದ್ದ ಬಸವರಾಜ್ ಬೊಮ್ಮಾಯಿ (Basavaraj Bommai) ಸರ್ಕಾರ.

    * ಸದಾಶಿವ ಆಯೋಗ ವರದಿ ಮುಕ್ತಾಯ ಎಂದು ತೀರ್ಮಾನಿಸಿದ್ದ ಬಸವರಾಜ ಬೊಮ್ಮಾಯಿ ಸಂಪುಟ. ಆದ್ದರಿಂದ ಒಂದು ಸರ್ಕಾರ ಆಯೋಗದ ವರದಿ ಮುಕ್ತಾಯ ಎಂದ ಮೇಲೆ ಅದೇ ವರದಿಯನ್ನು ಇನ್ನೊಂದು ಸರ್ಕಾರ ಮುಂದುವರಿಸಲು ಬರಲ್ಲ. ಆದರೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸದಾಶಿವ ಆಯೋಗದ ವರದಿ ಜಾರಿ ಮಾಡಿ ಒಳ ಮೀಸಲಾತಿ ನೀಡುವ ಭರವಸೆ ನೀಡಿದ್ದ ಕಾಂಗ್ರೆಸ್.
    * ಸದಾಶಿವ ಆಯೋಗ ವರದಿ ಮುಕ್ತಾಯ ಎಂದು ಬಸವರಾಜ್ ಬೊಮ್ಮಾಯಿ ಸಂಪುಟ ತೀರ್ಮಾನ ಮಾಡಿದ ಕಾರಣ ಇದು ಒಳ‌‌ ಮೀಸಲಾತಿಗಾಗಿ ಕೇಂದ್ರಕ್ಕೆ ರಾಜ್ಯ ಸರ್ಕಾರ ಮಾಡುವ ಪ್ರತ್ಯೇಕ ಶಿಫಾರಸ್ಸು ಆಗಲಿದೆ. ಆದ್ದರಿಂದ ಸದಾಶಿವ ಆಯೋಗದ ವರದಿಯಲ್ಲದ ರಾಜ್ಯ ಸರ್ಕಾರದಿಂದ‌ ಮಾಡಿರುವ ಹೊಸ ಶಿಫಾರಸು ಇದಾಗಲಿದೆ.
    * ಈ ಶಿಫಾರಸ್ಸಿನಲ್ಲಿ ಒಳ ಮೀಸಲಾತಿಗಾಗಿ ಸಂವಿಧಾನದ 341/3 ಕ್ಕೆ ತಿದ್ದುಪಡಿ ಮಾಡುವಂತೆ ಕೇಂದ್ರಕ್ಕೆ ಶಿಫಾರಸು ಮಾಡಲು ಸಂಪುಟ ಸಭೆ ನಿರ್ಣಯ.

  • ಜ.22ರಂದು ಕೇಂದ್ರ ಸರ್ಕಾರಿ ನೌಕರರಿಗೆ ಅರ್ಧ ದಿನ ರಜೆ

    ಜ.22ರಂದು ಕೇಂದ್ರ ಸರ್ಕಾರಿ ನೌಕರರಿಗೆ ಅರ್ಧ ದಿನ ರಜೆ

    ನವದೆಹಲಿ: ಇದೇ 22ಕ್ಕೆ ಇಡೀ ದೇಶವೇ ಕಾತುರತೆಯಿಂದ ಎದುರು ನೋಡುತ್ತಿರೋ ಐತಿಹಾಸಿಕ ಸಂಭ್ರಮಕ್ಕೆ, ಕೇಂದ್ರ ಸರ್ಕಾರ ತನ್ನ ನೌಕರರಿಗೆ ಗುಡ್ ನ್ಯೂಸ್ ನೀಡಿದೆ. ಜನವರಿ 22 ರ ಸಂಭ್ರವನ್ನ ಮನೆಯಲ್ಲೇ ಕುಳಿತು ರಾಮನ ಪ್ರಾರ್ಥನೆ ಮೂಲಕ ಕಣ್ತುಂಬಿಕೊಳ್ಳಲು ಮನವಿ ಮಾಡಿದ್ದ ಬೆನ್ನಲ್ಲೆ ಕೇಂದ್ರ ಸರ್ಕಾರ ಪ್ರಾರ್ಥನೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಅರ್ಧ ದಿನ ರಜೆ ಘೋಷಣೆ ಮಾಡಿದೆ.

    ಹೌದು. ಕೇಂದ್ರ ಸರ್ಕಾರದ ಸಿಬ್ಬಂದಿ ಸಚಿವಾಲಯ ಹೊರಡಿಸಿದ ಆದೇಶದ ಪ್ರಕಾರ, ನೌಕರರ ಭಾವನೆ ಮತ್ತು ಅವರ ಕೋರಿಕೆಗಳನ್ನು ಗಮನದಲ್ಲಿಟ್ಟುಕೊಂಡು ಜನವರಿ 22 ರಂದು ರಾಮಮಂದಿರ ಪ್ರಾಣ ಪ್ರತಿಷ್ಠಾ (Pran Prathistha Ceremony) ಸಮಾರಂಭದ ಸಂದರ್ಭದಲ್ಲಿ ಭಾರತದಾದ್ಯಂತ ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳು ಹಾಗೂ ಸಂಸ್ಥೆಗಳಿಗೆ ಮಧ್ಯಾಹ್ನ 2.30 ರವರೆಗೆ ಅರ್ಧ ದಿನ ಕ್ಲೋಸ್ ಮಾಡಲು ಕೇಂದ್ರ ಸರ್ಕಾರ ಘೋಷಿಸಿದೆ. ಇನ್ನೂ ಕೇವಲ ಕಛೇರಿಗಳಿಗಷ್ಟೇ ಅಲ್ಲದೆ ಕೇಂದ್ರದ ಶಾಲಾ- ಕಾಲೇಜುಗಳು ಮತ್ತು ಕೇಂದ್ರ ಕೈಗಾರಿಕಾ ವಲಯಗಳಿಗೂ ಅರ್ಧದಿನ ರಜೆ ಘೋಷಣೆ ಮಾಡಿದೆ. ಮಧ್ಯಾಹ್ನದವರೆಗೆ ಎಲ್ಲಾ ಕೇಂದ್ರ ದಡಿಯ ಸಂಸ್ಥೆಗಳ ನೌಕಕರು ರಜೆಯಲ್ಲಿರಲಿದ್ದು, ಮಧ್ಯಾಹ್ನ 2.30ರ ನಂತರ ಎಂದಿನಂತೆ ಕಾರ್ಯ ನಿರ್ವಹಿಸಲಿವೆ ಎಂದು ಕೇಂದ್ರ ಸರ್ಕಾರಿ (Central Govt) ಸಿಬ್ಬಂದಿ ಸಚಿವಾಲಯ ತಿಳಿಸಿದೆ.

    ಇನ್ನೂ ಇತ್ತ ಬೆಂಗಳೂರಿನಲ್ಲಿ ಜ.22 ರಂದು ಮಾಂಸದ ಅಂಗಡಿಗಳು, ಬಾರ್ ಗಳನ್ನು ಬಂದ್ ಮಾಡುವಂತೆ ಮಾಲೀಕರಲ್ಲಿ ಶ್ರೀರಾಮ ಸೇನೆ ಮನವಿ ಮಾಡಿದೆ. ಈ ಸಂಬಂಧ ಜಾಲಹಳ್ಳಿ, ದಾಸರಹಳ್ಳಿ ಭಾಗದಲ್ಲಿ ಶ್ರೀರಾಮಸೇನೆ (Srirama Sena) ಕಾರ್ಯಕರ್ತರು ಕರಪತ್ರಗಳ ಹಂಚಿ ಜಾಗೃತಿ ಮೂಡಿಸಿದ್ದಾರೆ. ಜೊತೆಗೆ, ರಾಜ್ಯಾದ್ಯಂತ ಮಾಂಸದ ಅಂಗಡಿಗಳು, ಬಾರ್ ಗಳನ್ನು ಬಂದ್ ಮಾಡಿಸುವಂತೆ ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ನಾಳೆ ಮನವಿ ಸಲ್ಲಿಸಲು ಹಿಂದೂ ಸಂಘಟನೆಗಳು ಸಿದ್ಧತೆ ನಡೆಸಿದ್ದು, ಈ ಮೂಲಕ ಸರ್ಕಾರವನ್ನ ಗಮನಸೆಳೆಯಲು ಮುಂದಾಗಿವೆ. ಇದನ್ನೂ ಓದಿ: ಬೆಂಗಳೂರು-ಅಯೋಧ್ಯೆ ಏರ್ ಇಂಡಿಯಾ ವಿಮಾನದಲ್ಲಿ ರಾಮಜಪ, ಭಜನೆ

    ಉತ್ತರಪ್ರದೇಶ, ಮಧ್ಯಪ್ರದೇಶದಲ್ಲಿ ಈ ದಿನವನ್ನು ಹಬ್ಬದಂತೆ ಆಚರಣೆ ಮಾಡಲೆಂದು ಈಗಾಗಲೇ ಆಯಾ ಜಿಲ್ಲೆಯ ಮುಖ್ಯಮಂತ್ರಿಗಳು ರಜೆಯನ್ನು ಘೋಷಣೆ ಮಾಡಿದ್ದಾರೆ. ಇತ್ತ ಗೋವಾ ಸರ್ಕಾರ, ಛತ್ತೀಸ್ ಗಢ ಸರ್ಕಾರ ಕೂಡ ಜನವರಿ 22 ರಂದು ಸರ್ಕಾರಿ ನೌಕರರು ಮತ್ತು ಶಾಲೆಗಳಿಗೆ ರಜೆ ಘೋಷಿಸಿದೆ.