Tag: central home ministry

  • ಕೊಡಗಿನ ಮಳೆ ಹಾನಿ ಪ್ರದೇಶಗಳಿಗೆ ಹಿರಿಯ ಅಧಿಕಾರಿಗಳ ತಂಡ ಭೇಟಿ

    ಕೊಡಗಿನ ಮಳೆ ಹಾನಿ ಪ್ರದೇಶಗಳಿಗೆ ಹಿರಿಯ ಅಧಿಕಾರಿಗಳ ತಂಡ ಭೇಟಿ

    ಮಡಿಕೇರಿ: ಆಗಸ್ಟ್ ತಿಂಗಳಲ್ಲಿ ಕೊಡಗಿನಲ್ಲಿ ಸಂಭವಿಸಿದ ಭೀಕರ ಭೂಕುಸಿತ ಮತ್ತು ಪ್ರವಾಹದಿಂದ ಆಗಿರುವ ನಷ್ಟ ಮತ್ತು ಪರಿಹಾರಕ್ಕೆ ಸಂಬಂಧಿಸಿದಂತೆ ಅಧ್ಯಯನ ನಡೆಸಲು ಕೇಂದ್ರ ಗೃಹ ಸಚಿವಾಲಯ ಮತ್ತು ಹಣಕಾಸು ಸಚಿವಾಲಯದ ಹಿರಿಯ ಅಧಿಕಾರಿಗಳ ನೇತೃತ್ವದ ತಂಡ ಇಂದು ಕೊಡಗಿಗೆ ಭೇಟಿ ನೀಡಿದೆ.

    ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕೂಡಿಗೆ ಸೈನಿಕ ಶಾಲೆಗೆ ಆಗಮಿಸಿರುವ ತಂಡ ಕೊಡಗು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಮತ್ತು ವಿವಿಧ ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಿದೆ. ಅಲ್ಲದೆ ಭೂಕುಸಿತ ಮತ್ತು ಪ್ರವಾಹದ ಸಾಕ್ಷ್ಯ ಚಿತ್ರಗಳನ್ನು ವೀಕ್ಷಿಸಿದೆ.

    ಮಾಹಿತಿ ಪಡೆದುಕೊಂಡ ಕೇಂದ್ರ ತಂಡವು ನಂತರ ಪ್ರಮುಖವಾಗಿವ ಭೂಕುಸಿತವಾಗಿರುವ ಮಡಿಕೇರಿ ಸಮೀಪದ ಬೊಟ್ಲಪ್ಪ ಪೈಸಾರಿ, ಬಾಗಮಂಡಲ ಸಮೀಪದ ಚೇರಂಗಾಲ ಮತ್ತು ತಲಕಾವೇರಿ ಸಮೀಪ ಬ್ರಹ್ಮಗಿರಿ ಸಾಲಿನ (ಗಜಗಿರಿ ಬೆಟ್ಟ) ಪ್ರದೇಶಗಳಿಗೆ ಭೇಟಿ ನೀಡಲಿದೆ. ಈ ಸಂದರ್ಭ ಪ್ರವಾಹ ಮತ್ತು ಭೂಕುಸಿತದಿಂದ ಆಗಿರುವ ನಷ್ಟದ ಬಗ್ಗೆ ಸ್ಥಳೀಯರಿಂದಲೂ ಮಾಹಿತಿ ಸಂಗ್ರಹಿಸಲಿದೆ.

  • ಎಟಿಎಂಗೆ ಹಣ ತುಂಬಲು ಸಮಯ ನಿಗದಿ- ಗೃಹ ಸಚಿವಾಲಯದಿಂದ ಆದೇಶ

    ಎಟಿಎಂಗೆ ಹಣ ತುಂಬಲು ಸಮಯ ನಿಗದಿ- ಗೃಹ ಸಚಿವಾಲಯದಿಂದ ಆದೇಶ

    ನವದೆಹಲಿ: ನಗರ ಪ್ರದೇಶದ ಎಟಿಎಂ ರಾತ್ರಿ 9 ಗಂಟೆ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಸಂಜೆ 6ರ ನಂತರ ಹಣ ಹಾಕುವಂತಿಯಲ್ಲ ಎಂದು ಕೇಂದ್ರ ಗೃಹ ಸಚಿವಾಲಯ ಹೊಸ ಆದೇಶಕ್ಕೆ ಮುಂದಾಗಿದೆ.

    ಹೊಸ ಆದೇಶವನ್ನು ಫೆಬ್ರವರಿ 8, 2019ರಿಂದ ದೇಶದಲ್ಲಿ ಜಾರಿಗೆ ತರಲಾಗುತ್ತದೆ. ಭದ್ರತೆ ಉದ್ದೇಶದಿಂದ ಇಂತಹ ನಿರ್ಧಾರ ಕೈಗೊಳ್ಳಲಾಗುತ್ತದೆ. ಎಂದು ಗೃಹ ಸಚಿವಾಲಯ ತಿಳಿಸಿದೆ.

    ದೇಶದಾದ್ಯಂತ ಎಟಿಎಂಗಳಿಗೆ ಹಣ ಭರ್ತಿ ಮಾಡುವ ಖಾಸಗಿ ಏಜೆನ್ಸಿಗಳು ನಿತ್ಯವೂ ಸುಮಾರು 8 ಸಾವಿರ ವಾಹನಗಳನ್ನು ಬಳಕೆ ಮಾಡಿಕೊಳ್ಳುತ್ತಿವೆ. ಇವು ಬ್ಯಾಂಕ್ ಪರವಾಗಿ ಒಂದು ದಿನದಲ್ಲಿ ಒಟ್ಟು 15 ಸಾವಿರ ಕೋಟಿ ರೂ. ಹಣವನ್ನು ಎಟಿಎಂಗಳಿಗೆ ಭರ್ತಿ ಮಾಡುತ್ತವೆ.

    ಏಕೆ ಈ ಆದೇಶ?
    ಎಟಿಎಂಗಳಿಗೆ ಹಣ ಭರ್ತಿ ಮಾಡಲು ಹೋಗುವ ವಾಹನಗಳ ಮೇಲೆ ದಾಳಿ, ಎಟಿಎಂ ವಂಚನೆ ಪ್ರಕರಣಗಳು ಹೆಚ್ಚುತ್ತಿವೆ. ಅಷ್ಟೇ ಅಲ್ಲದೆ ಕೆಲವೊಮ್ಮೆ ಎಟಿಎಂಗೆ ಭರ್ತಿ ಆಗಬೇಕಾಗಿದ್ದ ಹಣವನ್ನು ಖಾಸಗಿ ಏಜೆನ್ಸಿಗಳು ತಮ್ಮ ಬಳಿಯೆ ಇಟ್ಟುಕೊಳ್ಳುತ್ತಿವೆ. ಇದನ್ನು ತಡೆಯುವ ಉದ್ದೇಶದಿಂದ ಈ ಹೊಸ ಕಾರ್ಯಾಚರಣಾ ನಿಯಮಗಳನ್ನು ತರಲಾಗಿದೆ ಎಂದು ಗೃಹ ಸಚಿವಾಲಯ ತಿಳಿಸಿದೆ.

    ಆದೇಶದಲ್ಲಿ ಏನಿದೆ?
    ನಗರ ಪ್ರದೇಶದ ರಾತ್ರಿ 9 ಗಂಟೆ, ಗ್ರಾಮೀಣ ಪ್ರದೇಶದಲ್ಲಿ ಸಂಜೆ 6 ಗಂಟೆ ಹಾಗೂ ನಕ್ಸಲ್ ಪೀಡಿತ ಎಟಿಎಂ ಗಳಿಗೆ ಸಂಜೆ 4 ಗಂಟೆಯ ಒಳಗಾಗಿಯೇ ಹಣ ಭರ್ತಿ ಮಾಡಬೇಕು. ಜೊತೆಗೆ ಹಣ ಸಾಗಿಸುವ ವಾಹನದಲ್ಲಿ ಇಬ್ಬರು ಸಶಸ್ತ್ರ ಗಾರ್ಡ್‍ಗಳು ಕಡ್ಡಾಯವಾಗಿ ಇರಬೇಕು.

    ಎಟಿಎಂಗಳಿಗೆ ಹಣ ಭರ್ತಿ ಮಾಡಲು ಹೊರಟ ವಾಹನದಲ್ಲಿ ಚಾಲಕ, ಇಬ್ಬರು ಸಶಸ್ತ್ರ ಭದ್ರತಾ ಸಿಬ್ಬಂದಿ ಹಾಗೂ ಇಬ್ಬರು ಎಟಿಎಂ ಅಧಿಕಾರಿಗಳು ಇರಬೇಕು. ಒಬ್ಬ ಭದ್ರತಾ ಸಿಬ್ಬಂದಿ ಚಾಲಕನ ಪಕ್ಕದಲ್ಲಿ, ಮತ್ತೊಬ್ಬರು ಹಣ ಇರುವ ಜಾಗದಲ್ಲಿ ಕುಳಿತುಕೊಳ್ಳಬೇಕು. ಅಷ್ಟೇ ಅಲ್ಲದೆ ವಾಹನಕ್ಕೆ ಜಿಪಿಎಸ್ ಅಳವಡಿಸಿರುವ ವಾಹನವನ್ನು ಕಡ್ಡಾಯವಾಗಿ ಬಳಕೆ ಮಾಡಬೇಕೆಂದು ತಿಳಿಸಲಾಗಿದೆ.

    ಎಟಿಎಂಗೆ ಹಣ ಭರ್ತಿ ಮಾಡುವ ವಾಹನದಲ್ಲಿ 5 ಕೋಟಿ ರೂ.ಗಿಂತ ಹೆಚ್ಚು ಹಣವನ್ನು ಸಾಗಿಸುವಂತಿಲ್ಲ. ಖಾಸಗಿ ಭದ್ರತಾ ಏಜೆನ್ಸಿಗಳು ವ್ಯಕ್ತಿಯ ವಿಳಾಸ, ಮೂಲ ದಾಖಲೆ, ಆಧಾರ್ ಕಾರ್ಡ್ ಸೇರಿದಂತೆ ವಿವಿಧ ಮಾಹಿತಿ ಇಲ್ಲದೆ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳುವಂತಿಲ್ಲ ಎಂದು ಹೊಸ ಆದೇಶದಲ್ಲಿ ಸೇರಿಸಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv