Tag: central minister

  • ಆದಾಯ ತೆರಿಗೆ ಇಲಾಖೆಯ ಕಟ್ಟಡ ಕಾಮಗಾರಿಗೆ ನಿರ್ಮಲಾ ಸೀತಾರಾಮನ್ ಶಂಕು ಸ್ಥಾಪನೆ

    ಆದಾಯ ತೆರಿಗೆ ಇಲಾಖೆಯ ಕಟ್ಟಡ ಕಾಮಗಾರಿಗೆ ನಿರ್ಮಲಾ ಸೀತಾರಾಮನ್ ಶಂಕು ಸ್ಥಾಪನೆ

    ಬೆಂಗಳೂರು: ಕೇಂದ್ರ ಹಣಕಾಸು ಮತ್ತು ಸಾಂಸ್ಥಿಕ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಬೆಂಗಳೂರು ಇನ್ ಫ್ಯಾಂಟ್ರೀ ರಸ್ತೆಯಲ್ಲಿ ಆದಾಯ ತೆರಿಗೆ ಇಲಾಖೆಯ ಕಚೇರಿ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಅದೇ ಸ್ಥಳದಲ್ಲಿ ಶಿಲಾನ್ಯಾಸದ ಫಲಕವನ್ನು ಸಚಿವರು ಅನಾವರಣ ಮಾಡಿದರು. ಬೆಂಗಳೂರು ಕೇಂದ್ರ ಲೋಕಸಭಾಕ್ಷೇತ್ರದ ಮಾನ್ಯ ಸಂಸತ್ ಸದಸ್ಯ ಪಿ.ಸಿ. ಮೋಹನ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

    ಇಲ್ಲಿ ನಿರ್ಮಾಣವಾಗಲಿರುವ ಆದಾಯ ತೆರಿಗೆ ಇಲಾಖೆಯ ಕಚೇರಿ ಕಟ್ಟಡವು ನೆಲಮಹಡಿ ಮತ್ತು 18 ಮಹಡಿಗಳನ್ನು ಮತ್ತು ನೆಲಮಾಳಿಗೆಯಲ್ಲಿ ವಾಹನ ನಿಲುಗಡೆಯ ಸೌಲಭ್ಯ ಒಳಗೊಂಡಿರುತ್ತದೆ. ಕಟ್ಟಡವು ಗರಿಷ್ಠ ನೈಸರ್ಗಿಕ ಬೆಳಕನ್ನು ಬಳಸಿಕೊಳ್ಳುತ್ತದೆ ಮತ್ತು ಗೃಹ ಶ್ರೇಯಾಂಕ Iಗಿ ಅನುಗುಣವಾಗಿರುತ್ತದೆ. ಈ ಕಟ್ಟಡವು ವಿದ್ಯುತ್ ಉತ್ಪಾದನೆಗೆ ಸೌರ ಫಲಕಗಳನ್ನು ಒಳಗೊಂಡಿರುತ್ತದೆ ಮತ್ತು ಮಳೆ ನೀರು ಕೊಯ್ಲು ವ್ಯವಸ್ಥೆಯಿಂದ ವಿನ್ಯಾಸಿತವಾಗಿದೆ. ಇದನ್ನೂ ಓದಿ: ನಿಗದಿತ ಅವಧಿಯ ಒಳಗೆ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣವಾಗುತ್ತೆ: ಸಿ.ಸಿ.ಪಾಟೀಲ್ 

    ಎರಡು ಕೊಳಾಯಿ ವ್ಯವಸ್ಥೆಯೊಂದಿಗೆ ಮರುಬಳಕೆಯ ನೀರನ್ನು ಕೈತೋಟಕ್ಕೆ ಬಳಸಲಾಗುತ್ತದೆ. ಮ್ಯಾಗ್ನೆಟಿಕ್ ಫಿಲ್ಟರ್ ಸಹಿತವಾದ ಕೇಂದ್ರೀಕೃತ ವಾಯು ಸ್ವಚ್ಛತೆ ವ್ಯವಸ್ಥೆ, ಮತ್ತು ಯುವಿ- ಕಿರಣ ಕ್ರಿಮಿನಾಶಕವನ್ನು ಒಳಗೊಂಡಿದೆ. ಕಟ್ಟಡವನ್ನು ಸಿಪಿಡಬ್ಲ್ಯುಡಿಯ ಬೆಂಗಳೂರು ಯೋಜನಾ ವೃತ್ತ ನಿರ್ಮಿಸುತ್ತದೆ. ಈ ಸುಸಜ್ಜಿತ ಕಟ್ಟಡದಲ್ಲಿ ಸಾರ್ವಜನಿಕರ ಕುಂದುಕೊರತೆಯನ್ನು ಆದ್ಯತೆಯ ಮೇಲೆ ನಿವಾರಿಸಲು ಪ್ರತ್ಯೇಕವಾದ ಸಾರ್ವಜನಿಕ ಸಂಪರ್ಕ ಕಚೇರಿ ಮತ್ತು ತೆರಿಗೆ ಪಾವತಿದಾರರಿಗೆ ಸರದಿಗಾಗಿ ಕಾದು ಕುಳಿತುಕೊಳ್ಳುವ ಆವರಣವೂ ಇರುತ್ತದೆ. ಇದನ್ನೂ ಓದಿ:ಸಮಾಜ ಸಂಘಟನೆ ಗಣೇಶ ಹಬ್ಬದ ಪ್ರತೀಕ, ಪರಿಸರ ಸ್ನೇಹಿ ಗಣೇಶ ಹಬ್ಬ ಅಚರಿಸಿ: ಮಾಳವಿಕಾ ಅವಿನಾಶ್

    ಇದು ಯಾವುದೇ ತೊಡಕು ರಹಿತ ತೆರಿಗೆದಾರರ ಸೇವೆಗಳನ್ನು ಒದಗಿಸಲು ಆದಾಯಕರ ಸೇವಾ ಕೇಂದ್ರವನ್ನು ಹೊಂದಿರುತ್ತದೆ. ಕೇಂದ್ರ ಸ್ಥಾನದಲ್ಲಿರುವ ಈ ಕಚೇರಿ ಕಟ್ಟಡವು ತೆರಿಗೆದಾರ ಸ್ನೇಹಿಯಾಗಿದೆ. ಕಟ್ಟಡದ ವಿನ್ಯಾಸ ಮತ್ತು ಜಾಗದ ಹಂಚಿಕೆಯು ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಅನುಕೂಲಕರವಾದ ಕಾರ್ಯ ವಾತಾವರಣವನ್ನು ಒದಗಿಸುತ್ತದೆ.

  • ದಾಖಲೆ ಆಹಾರ ಉತ್ಪಾದನೆ, ರಫ್ತಿನಲ್ಲೂ ದೇಶದ ಸಾಧನೆ: ಶೋಭಾ ಕರಂದ್ಲಾಜೆ

    ದಾಖಲೆ ಆಹಾರ ಉತ್ಪಾದನೆ, ರಫ್ತಿನಲ್ಲೂ ದೇಶದ ಸಾಧನೆ: ಶೋಭಾ ಕರಂದ್ಲಾಜೆ

    ಬೆಂಗಳೂರು: ಹಿಂದೆ ಕಾಂಗ್ರೆಸ್ ಆಡಳಿತವಿದ್ದಾಗ ಅಕ್ಕಿ, ಗೋಧಿಗಾಗಿ ಬೇರೆ ದೇಶದತ್ತ ನೋಡುತ್ತಿದ್ದ ಭಾರತವು ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬಿ ಆಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಶ್ರಮ ಮತ್ತು ದೂರದೃಷ್ಟಿಯ ಯೋಜನೆಗಳ ಫಲ ಇದಾಗಿದೆ. ಈ ಬಾರಿ 305 ಮಿಲಿಯ ಮೆಟ್ರಿಕ್ ಟನ್ ಆಹಾರ ಉತ್ಪಾದನೆ ಮತ್ತು 326 ಮಿಲಿಯ ಮೆಟ್ರಿಕ್ ಟನ್ ತೋಟಗಾರಿಕಾ ಬೆಳೆ ಉತ್ಪಾದನೆ ಆಗಿದ್ದು, ಈ ವಿಚಾರದಲ್ಲಿ ದಾಖಲೆ ಉತ್ಪಾದನೆ ಸಾಧ್ಯವಾಗಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ತಿಳಿಸಿದರು.

    ಮಲ್ಲೇಶ್ವರದ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆಹಾರ ರಫ್ತು ವಿಚಾರದಲ್ಲೂ ವಿಶೇಷ ಸಾಧನೆ ಮಾಡಲು ನಾವು ಮುಂದಾಗಿದ್ದೇವೆ. ಆಹಾರ ಪದಾರ್ಥ ರಫ್ತಿನಲ್ಲೂ ನಾವೀಗ 9ನೇ ಸ್ಥಾನದಲ್ಲಿದ್ದೇವೆ ಎಂದು ತಿಳಿಸಿದರು.

    ಕಾಂಗ್ರೆಸ್ ಆಡಳಿತದಲ್ಲಿ ಕೃಷಿ ಮೂಲದಿಂದ ಜಿಡಿಪಿಗೆ ಕೇವಲ ಶೇ.13ರಿಂದ ಶೇ.14 ದಷ್ಟು ಕೊಡುಗೆ ಲಭಿಸುತ್ತಿತ್ತು. ಏಳು ವರ್ಷಗಳ ಬಿಜೆಪಿ ಆಡಳಿತದ ಬಳಿಕ ಅದು ಶೇ.20.22ಕ್ಕೆ ಏರಿದೆ. ಈ ರೀತಿ ಕೃಷಿ ಇಲಾಖೆ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮುಂದಾಗಿದೆ ಎಂದರು.

    ಪ್ರಧಾನಮಂತ್ರಿಯವರು ಕಿಸಾನ್ ಸಮ್ಮಾನ್ ಯೋಜನೆಯಡಿ ಇಲ್ಲಿನವರೆಗೆ 21 ಕೋಟಿ ರೈತರಿಗೆ 1,57,000 ಕೋಟಿ ರೂಪಾಯಿ ಬ್ಯಾಂಕ್ ಖಾತೆಗಳಿಗೆ ನೇರ ಸೌಲಭ್ಯ ವರ್ಗಾವಣೆ (ಡಿಬಿಟಿ) ಮೂಲಕ ನೀಡಿದ್ದಾರೆ. ಫಸಲ್ ಬಿಮಾ ಯೋಜನೆಯನ್ನೂ ಸರಳಗೊಳಿಸಲಾಗಿದೆ. ಯಾವುದೇ ಸಮಸ್ಯೆಗಳಿಲ್ಲದೆ ಖಾತೆಗೆ ಪರಿಹಾರಧನ ಬರುವಂತಾಗಿದೆ. ಇದೊಂದು ಕ್ರಾಂತಿಕಾರಿ ಬದಲಾವಣೆ ಎಂದರು.

    ನೈಸರ್ಗಿಕ ಕೃಷಿಗೆ ಆದ್ಯತೆ ಮತ್ತು ಪ್ರೋತ್ಸಾಹ ಕೊಡಲಾಗುತ್ತಿದೆ. ಹನಿ ನೀರಾವರಿಯಲ್ಲಿ ರಾಜ್ಯವು ದೇಶದಲ್ಲಿ ನಂಬರ್ ವನ್ ಆಗಿದೆ. ತೆಂಗು ರಫ್ತಿನ ಮೇಲೆ ಇದ್ದ ನಿಷೇಧವನ್ನು ರದ್ದುಪಡಿಸಲಾಗಿದೆ. ಮುಂದಿನ ದಿನಗಳಲ್ಲಿ ತೆಂಗಿನ ಸಂಸ್ಕರಿತ ಮೌಲ್ಯವರ್ಧಿತ ಉತ್ಪನ್ನಗಳ ರಫ್ತು ಸಾಧ್ಯವಾಗಲಿದೆ ಎಂದು ವಿವರಿಸಿದರು.

    ಟ್ರ್ಯಾಕ್ಟರ್, ಟಿಲ್ಲರ್, ಕೃಷಿ ಪರಿಕರಗಳಿಗೆ ಸಬ್ಸಿಡಿ ನೀಡಲಾಗುತ್ತಿದೆ. ಸಬ್ಸಿಡಿ ವಿಚಾರದಲ್ಲಿ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಲು ಈ ಉತ್ಪನ್ನಗಳ ಗರಿಷ್ಠ ಮಾರಾಟ ದರವನ್ನು (ಎಂಆರ್ಪಿ) ಆನ್‍ಲೈನ್‍ನಲ್ಲಿ ಪ್ರಕಟಿಸಲು ಕೇಂದ್ರ ಸರ್ಕಾರ ಸೂಚಿಸಿದೆ. ಡೀಲರ್ ಅಂಗಡಿಯಲ್ಲೂ ಅದನ್ನು ದೊಡ್ಡದಾಗಿ ಪ್ರಕಟಿಸಬೇಕು. ಕೃಷಿ ಇಲಾಖೆಗಳಲ್ಲೂ ಈ ಕುರಿತ ಮಾಹಿತಿ ಸಿಗುವಂತಾಗಬೇಕೆಂದು ಕೇಂದ್ರ ಸರ್ಕಾರ ತಿಳಿಸಿದೆ ಎಂದರು.

    ಹೆಚ್ಚು ಸವಾಲು ಇರುವ ಜನರಿಗೆ ಅತ್ಯಂತ ಹತ್ತಿರವಾದ ಇಲಾಖೆ ಎಂದೇ ಕೃಷಿಯನ್ನು ಗುರುತಿಸಲಾಗಿದೆ. ಇಡೀ ದೇಶದಲ್ಲಿ ಕೆಲಸ ಮಾಡಲು ಅವಕಾಶ ಇದೆ. ದೇಶದ ಶೇ.70 ಜನರು ರೈತಾಪಿ ಕೆಲಸ ಮಾಡುತ್ತಾರೆ. ಕೃಷಿಕರಲ್ಲಿ ಶೇ.80 ಜನರು ಕಡಿಮೆ ಜಮೀನು ಹೊಂದಿ ಸಣ್ಣ ಮತ್ತು ಮಧ್ಯಮ ವರ್ಗಕ್ಕೆ ಸೇರಿದ್ದಾರೆ. ಕೃಷಿ ಲಾಭದಾಯಕವಲ್ಲ ಎಂದು ರೈತರು ಭೂಮಿಯಲ್ಲಿ ಕೃಷಿ ಮಾಡುತ್ತಿಲ್ಲ. ನಗರದ ಕೆಲಸಕ್ಕಾಗಿ ವಲಸೆ ಹೆಚ್ಚುತ್ತಿದೆ. ಸಣ್ಣ ಮತ್ತು ಮಧ್ಯಮ ರೈತರನ್ನು ಒಗ್ಗೂಡಿಸಿ ಕೃಷಿಯನ್ನು ಲಾಭದಾಯಕ ಕ್ಷೇತ್ರವನ್ನಾಗಿ ಮಾಡಲು ನರೇಂದ್ರ ಮೋದಿ ಅವರ ಸರಕಾರ ಗರಿಷ್ಠ ಪ್ರಯತ್ನ ಮಾಡುತ್ತಿದೆ ಎಂದರು.

    2013-14ರಲ್ಲಿ ಯುಪಿಎ ಸರ್ಕಾರವು ಬಜೆಟ್‍ನಲ್ಲಿ ಸುಮಾರು 21,350 ಕೋಟಿಯನ್ನು ಕೃಷಿ ಕ್ಷೇತ್ರಕ್ಕೆ ನೀಡಿ ಆ ಕ್ಷೇತ್ರವನ್ನು ಕಡೆಗಣಿಸಿತ್ತು. ಆದರೆ ಕಳೆದ ಆರೇಳು ವರ್ಷಗಳಲ್ಲಿ ಕೃಷಿ ಬಜೆಟ್ ಶೇ 460ರಷ್ಟು ಹೆಚ್ಚಾಗಿ 2020-21ರಲ್ಲಿ 1.31 ಲಕ್ಷ ಕೋಟಿ ಆಗಿದೆ ಎಂದರು.

    ದೇಶದಲ್ಲಿ 10 ಸಾವಿರ ಕೃಷಿ ಉತ್ಪಾದಕರ ಘಟಕಗಳನ್ನು (ಎಫ್‍ಪಿಒ) ಆರಂಭಿಸುವ ಗುರಿಯನ್ನು ನಮ್ಮ ಜನಪರ ಪ್ರಧಾನಿ ನರೇಂದ್ರ ಮೋದಿಯವರು ನೀಡಿದ್ದಾರೆ. ಪ್ರತಿ ಎಫ್‍ಪಿಒಗೆ 25 ಬೇರೆ ಬೇರೆ ಉತ್ಪನ್ನ ಉತ್ಪಾದಿಸಲು ಅನುಮತಿ ಮತ್ತು ಸಾಲ ಸೌಕರ್ಯ ಸಿಗಲಿದೆ. ಇದಲ್ಲದೆ ಕೃಷಿ ಮೂಲಸೌಕರ್ಯ ಹೆಚ್ಚಳಕ್ಕೆ 1 ಲಕ್ಷ ಕೋಟಿಯ ಹೆಚ್ಚುವರಿ ಹಣವನ್ನು ನೀಡಲಾಗಿದೆ. ಖಾದ್ಯ ತೈಲ ಕ್ಷೇತ್ರದಲ್ಲಿ ಸ್ವಾವಲಂಬಿತನ ಸಾಧನೆಗೆ ಒತ್ತು ಕೊಡಲಾಗುತ್ತಿದೆ. ಒಣ ಭೂಮಿಯಲ್ಲಿ ಸಿರಿ ಧಾನ್ಯ ಬೆಳೆಯಲು ಉತ್ತೇಜನ ನೀಡಲಾಗುವುದು. ಕೃಷಿಕರ ಆದಾಯವನ್ನು ದ್ವಿಗುಣಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದು ತಿಳಿಸಿದರು.

    ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಸಿದ್ದರಾಜು, ಎಸ್.ಸಿ. ಮೋರ್ಚಾ ರಾಜ್ಯ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ, ವಿಧಾನಪರಿಷತ್ ಸದಸ್ಯರು ಮತ್ತು ಮಹಿಳಾ ಮೋರ್ಚಾ ಮಾಜಿ ಅಧ್ಯಕ್ಷರೂ ಆದ ಭಾರತಿ ಶೆಟ್ಟಿ, ರಾಜ್ಯ ಮಾಧ್ಯಮ ಸಂಚಾಲಕರಾದ ಕರುಣಾಕರ ಖಾಸಲೆ ಅವರು ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ಕು. ಶೋಭಾ ಕರಂದ್ಲಾಜೆ ಅವರು ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು.

  • ಅದು ನಾಡಬಂದೂಕು ಅಲ್ಲ – ಬೆಂಬಲಿಗರ ನಡೆ ಸಮರ್ಥಿಸಿಕೊಂಡ ಸಚಿವ ಭಗವಂತ ಖೂಬಾ

    ಅದು ನಾಡಬಂದೂಕು ಅಲ್ಲ – ಬೆಂಬಲಿಗರ ನಡೆ ಸಮರ್ಥಿಸಿಕೊಂಡ ಸಚಿವ ಭಗವಂತ ಖೂಬಾ

    ಯಾದಗಿರಿ: ನಾಡಬಂದೂಕು ಸಿಡಿಸಿ ಸ್ವಾಗತ ಕೋರಿಲ್ಲ ಎಂದು ಹೇಳುವ ಮೂಲಕ ಕೇಂದ್ರ ಸಚಿವ ಭಗವಂತ ಖೂಬಾ ಅವರು ತಮ್ಮ ಬೆಂಬಲಿಗರ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.

    ಈ ಬಗ್ಗೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಅದನ್ನು ನೋಡಿಲ್ಲ. ಅಲ್ಲಿ ನಾಡ ಬಂದೂಕು ಇರಲಿಲ್ಲ. ಈ ಭಾಗದಲ್ಲಿ ಹಳೆಯ ವ್ಯವಸ್ಥೆ ಇದೆ. ಇತಿಹಾಸ ತೆಗೆದು ಒಂದು ಸಲ ನೋಡಿ. ಪಟಾಕಿ ಪುಡಿ ಹಾಕಿ ಶಬ್ದ ಮಾಡಿದ್ದಾರೆ ಅಷ್ಟೇ ಎಂದು ಹೇಳಿದ್ದಾರೆ.

    ಗುಂಡು ಹಾರಿಸಿಲ್ಲ ಅದನ್ನು ತಿರುಚಬೇಡಿ. ಗುಂಡು ಹಾರಿಸಿದ್ದರೆ ಖುದ್ದು ನಾವೇ ಕರೆಸಿ ಮಾತನಾಡ್ತೀದ್ದೀವಿ. ತಪ್ಪು ಮಾಡಿದ್ರೆ ಸರ್ಕಾರ ಅವರ ಮೇಲೆ ಕ್ರಮ ತೆಗೆದುಕೊಳ್ಳುತ್ತೆ. ಅದೊಂದು ವಾಡಿಕೆ ಇದೆ. ದೇವರ ದಯೆಯಿಂದ ಯಾವುದೇ ಅವಘಡ ಆಗಿಲ್ಲ. ಇದು ಸತ್ಯಕ್ಕೆ ದೂರವಾದದ್ದು, ಅದು ನಾಡಬಂದೂಕು ಅಲ್ಲ ಎಂದು ಮತ್ತೆ ಮತ್ತೆ ಹೇಳಿದರು. ಇದನ್ನೂ ಓದಿ: ತಾಲಿಬಾನಿಗಳಿಗಿಂತ ಭಾರತದಲ್ಲಿರೋ ಅವರ ಬೆಂಬಲಿಗರು ಬಹಳ ಡೇಂಜರ್: ಸೂಲಿಬೆಲೆ

    ಏನಿದು ಘಟನೆ..?
    ಯಾದಗಿರಿ ತಾಲೂಕಿನ ಯರಗೋಳ ಗ್ರಾಮದಲ್ಲಿ ನಡೆಯುತ್ತಿದ್ದ ಜನಾರ್ಶೀವಾದ ಕಾರ್ಯಕ್ರಮಕ್ಕೆ ಖೂಬಾ ಆಗಮಿಸಿದ್ದರು. ಈ ವೇಳೆ ಅವರ ಸ್ವಾಗತಕ್ಕೆ ಜನ ನಾಡಬಂದೂಕು ಸಿಡಿಸಿ ಭರ್ಜರಿಯಾಗಿ ಸ್ವಾಗತ ಮಾಡಿದ್ದು ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಯರಗೋಳ ಗ್ರಾಮದಲ್ಲಿ ಜನ ಕೇಂದ್ರ ಸಚಿವ ಭಗವಂತ ಖೂಬಾ ಆಗಮನ ಮಾಡುತ್ತಿದ್ದಂತೆ ನಾಡಬಂದೂಕು ಕೈಯಲ್ಲಿ ಹಿಡಿದುಕೊಂಡು ಪುಷ್ಪವನ್ನು ಅರ್ಪಿಸಿ ಭರ್ಜರಿ ಸ್ವಾಗತ ಮಾಡಿದ್ದಾರೆ.

  • ಅಫ್ಘಾನಿಸ್ತಾನ ಭಯೋತ್ಪಾದಕರ ಕೈಗೆ ಹೋಗುವುದು ಒಳ್ಳೆಯದಲ್ಲ: ಶೋಭಾ ಕರಂದ್ಲಾಜೆ

    ಅಫ್ಘಾನಿಸ್ತಾನ ಭಯೋತ್ಪಾದಕರ ಕೈಗೆ ಹೋಗುವುದು ಒಳ್ಳೆಯದಲ್ಲ: ಶೋಭಾ ಕರಂದ್ಲಾಜೆ

    ಚಾಮರಾಜನಗರ: ಅಫ್ಘಾನಿಸ್ತಾನ ಭಯೋತ್ಪಾದಕರ ಕೈಗೆ ಹೋಗುವುದು ಒಳ್ಳೆಯದಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

    ತಾಲಿಬಾನಿಗಳ ವಶಕ್ಕೆ ಅಫ್ಘಾನಿಸ್ತಾನ ವಿಚಾರಕ್ಕೆ ಸಂಬಂಧಿಸಿದಂತೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೊಂದು ಆತಂಕಕಾರಿ ಬೆಳವಣಿಗೆ. ನಾಗರೀಕ ಸರ್ಕಾರ ಧೂಳಿಪಟ ಮಾಡಿ ಭಯೋತ್ಪಾದಕರ ಕೈಗೆ ದೇಶ ಹೋಗುತ್ತೆ ಅಂದರೆ ವಿಶ್ವಕ್ಕೆ ಒಳ್ಳೆಯದಲ್ಲ. ಭಾರತದ ನಿಲುವೇನು ಅನ್ನೋದ್ನ ವಿದೇಶಾಂಗ ಸಚಿವರು ಸ್ಪಷ್ಟಪಡಿಸುತ್ತಾರೆ ಎಂದು ತಿಳಿಸಿದರು.

    2023 ಅನ್ನು ಸಿರಿ ಧಾನ್ಯಗಳ ವರ್ಷವೆಂದು ಆಚರಿಸಲು ನಿರ್ಧಾರ ಮಾಡಲಾಗಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಸಿರಿ ಧಾನ್ಯಗಳ ವರ್ಷಾಚರಣೆಗೆ ಸಂಯುಕ್ತ ರಾಷ್ಟ್ರಗಳು ಒಪ್ಪಿಕೊಂಡಿವೆ. ಕೃಷಿ ಮೂಲ ಸೌಕರ್ಯಕ್ಕೆ ಒಂದು ಲಕ್ಷ ಕೋಟಿ ರೂಪಾಯಿ ಮೀಸಲಿಡಲಾಗಿದೆ. 10 ಸಾವಿರ ರೈತ ಉತ್ಪಾದಕ ಘಟಕಗಳನ್ನ ತೆರೆಯಲು ಉದ್ದೇಶಿಸಲಾಗಿದೆ. ರೈತರ ಆದಾಯ ದ್ವಿಗುಣಗೊಳಿಸುವುದೇ ಕೇಂದ್ರ ಸರ್ಕಾರದ ಗುರಿಯಾಗಿದೆ. ದೇಶದಲ್ಲಿ ಶೇ 70 ರಷ್ಟು ರೈತರಿದ್ದಾರೆ. ರೈತರಿಗೆ ಧೈರ್ಯ ಮತ್ತು ಬಲ ತುಂಬಲು ರೈತರ ಮನೆಗಳಿಗೆ ತೆರಳುತ್ತಿದ್ದೇನೆ ಎಂದರು. ಇದನ್ನೂ ಓದಿ: ನಾಲ್ಕು ಕಾರ್, ಒಂದು ಹೆಲಿಕಾಪ್ಟರ್ ನಲ್ಲಿ ನಗದು ಹೊತ್ತೊಯ್ದ ಅಶ್ರಫ್ ಘನಿ

    ಬಿಜೆಪಿ ಮತ್ತು ಕಾಂಗ್ರೆಸ್ ರಾಜ್ಯದಲ್ಲಿ ನಶಿಸಿ ಹೋಗುತ್ತಿದೆ ಎಂಬ ಎಚ್.ಡಿ.ಕೆ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವೆ, ಮೊದಲು ಅವರೆಲ್ಲಿದ್ದಾರೆ ಎಂಬುದನ್ನ ನೋಡಿಕೊಳ್ಳಲಿ ಎಂದು ತಿರುಗೇಟು ಕೊಟ್ಟರು. ಟೀಕೆಗಳಿಗೆ ನಾವು ಉತ್ತರ ಕೊಡಲ್ಲ, ಜನರು ಉತ್ತರ ಕೊಡುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.  ಇದನ್ನೂ ಓದಿ: ತಾಲಿಬಾನಿಗಳಿಗೆ ಹೆದರಿ 1 ವಿಮಾನದಲ್ಲಿ ಪ್ರಯಾಣಿಸಲು ಮುಗಿಬಿದ್ದ ನೂರಾರು ಜನ

  • ಕೇಂದ್ರದ ಮಾಜಿ ಸಚಿವ ಬಾಬಾಗೌಡ ಪಾಟೀಲ ಕೊರೊನಾಗೆ ಬಲಿ

    ಕೇಂದ್ರದ ಮಾಜಿ ಸಚಿವ ಬಾಬಾಗೌಡ ಪಾಟೀಲ ಕೊರೊನಾಗೆ ಬಲಿ

    ಬೆಳಗಾವಿ: ಕೇಂದ್ರದ ಮಾಜಿ ಸಚಿವ ಬಾಬಾಗೌಡ ಪಾಟೀಲ (78) ಕೊರೊನಾ ವೈರಸ್ ಗೆ ಬಲಿಯಾಗಿದ್ದಾರೆ.

    ಬಾಬಾಗೌಡ ಬೆಳಗಾವಿ ತಾಲೂಕಿನ ಚಿಕ್ಕಹಿರೇಬಾಗೇವಾಡಿ ಗ್ರಾಮದ ನಿವಾಸಿ ಯಾಗಿದ್ದು, ವಾರದ ಹಿಂದೆ ಬಾಬಾಗೌಡ ಪಾಟೀಲ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಹೀಗಾಗಿ ಅವರು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೇ ಇಂದು ಬೆಳಗ್ಗೆ 8 ಗಂಟೆ ಸುಮಾರಿಗೆ ಪಾಟೀಲರು ವಿಧಿವಶರಾಗಿದ್ದಾರೆ.

    1989 ರಲ್ಲಿ ಬೆಳಗಾವಿ ಗ್ರಾಮೀಣ, ಕಿತ್ತೂರು ಕ್ಷೇತ್ರದಿಂದ ಸ್ಪರ್ಧಿಸಿ ಎರಡೂ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದರು. ರೈತ ಸಂಘದ ಅಭ್ಯರ್ಥಿ ಆಗಿ ವಿಧಾನಸಭೆ ಪ್ರವೇಶಿಸಿದ್ದ ಬಾಬಾಗೌಡ, 1998ರಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಗಿ ಗೆಲುವು ಕಂಡಿದ್ದರು.

    ಕೇಂದ್ರ ಗ್ರಾಮೀಣ ಅಭಿವೃದ್ಧಿ ಇಲಾಖೆಯ ಸಚಿವರಾಗಿದ್ದ ಬಾಬಾಗೌಡ, ದೇಶದಲ್ಲಿ ಗ್ರಾಮಸಡಕ್ ಯೋಜನೆ ಜಾರಿಗೊಳಿಸಿದ್ದ ಕೀರ್ತಿಗಳಿಸಿದ್ದರು. ನಂತರ ರಾಜಕೀಯ ಏಳು, ಬೀಳು ಅನುಭವಿಸುತ್ತಿದ್ದ ಅವರು, ರಾಜ್ಯದಲ್ಲಿ ರೈತ ಹೋರಾಟಗಳಲ್ಲಿ ಮೂಂಚೂಣಿಯಲ್ಲಿದ್ದರು.

  • ಸಂಸದರ ಆದರ್ಶ ಗ್ರಾಮದ ಮಕ್ಕಳಿಗೆ ಶಾಲೆ ಕಟ್ಟಡನೇ ಇಲ್ಲ!

    ಸಂಸದರ ಆದರ್ಶ ಗ್ರಾಮದ ಮಕ್ಕಳಿಗೆ ಶಾಲೆ ಕಟ್ಟಡನೇ ಇಲ್ಲ!

    ಧಾರವಾಡ: ಸಂಸದರ ಆದರ್ಶ ಗ್ರಾಮಗಳು ಈಗಲೂ ಮೊದಲಿನಂತೆಯೇ ಇವೆ. ಅದಕ್ಕೆ ಕಾರಣ ಆ ಗ್ರಾಮ ದತ್ತು ಪಡೆದ ಸಂಸದರು ಅಭಿವೃದ್ಧಿ ಪಡಿಸದೇ ಇರುವುದು.

    ಹೌದು. ಧಾರವಾಡ ಜಿಲ್ಲೆಯ ಸಂಸದರ ಗ್ರಾಮದ ಸ್ಥಿತಿ ಅದೇ ರೀತಿಯಾಗಿದೆ. ಕ್ಷೇತ್ರದ ಸಂಸದ ಪ್ರಹ್ಲಾದ್ ಜೋಶಿ ಹಾರೋಬೆಳವಡಿ ಹಾಗೂ ಕಬ್ಬೇನೂರ ಗ್ರಾಮಗಳನ್ನ ದತ್ತು ಪಡೆದಿದ್ದರು. ಕಬ್ಬೇನೂರ ಗ್ರಾಮದಲ್ಲಿ ಶಾಲೆ ಕಟ್ಟಡಕ್ಕೆ ಅಡಿಪಾಯ ಕೂಡ ಹಾಕಲಾಗಿತ್ತು. ಈ ಕಟ್ಟಡ ನಿರ್ಮಾಣ ಆಗಬಹುದು ಎಂದು ಎಲ್ಲರೂ ನೋಡುತ್ತಿದ್ದರೆ, ಅದು ಆಗಲೇ ಇಲ್ಲ.

    ಈಗ ಇರುವ ಹಳೆ ಶಾಲೆ ಕಟ್ಟಡ ಕೂಡ ಬಿಳುತ್ತಿದೆ. ಸರ್ಕಾರ ಶಾಲೆ ಆರಂಭಕ್ಕೆ ಏನಾದರೂ ಅನುಮತಿ ನೀಡಿದ್ರೆ ಮಕ್ಕಳಿಗೆ ಕುಳಿತುಕೊಳ್ಳಲು ಕಟ್ಟಡನೇ ಇಲ್ಲದಂತಾಗುತ್ತೆ. ಈ ಬಗ್ಗೆ ಸಂಸದರಿಗೆ ಕೇಳಿದ್ರೆ ಕೊರೊನಾ ಹಿನ್ನೆಲೆ ಸಿಎಸ್ ಆರ್ ಫಂಡ್ ಬಂದಿಲ್ಲ ಎನ್ನುತ್ತಾರೆ.

    ಗ್ರಾಮಸ್ಥರು ಹೊಸ ಕಟ್ಟಡದ ಅಡಿಪಾಯ ಹಾಕಿದ್ದಕ್ಕೆ ಹಳೆ ಕಟ್ಟಡದ ದುರಸ್ತಿ ಕೂಡ ಆಗ್ತಿಲ್ಲ. ಹೀಗಾಗಿ ಸಂಸದರು ಈಗ ಕೇಂದ್ರ ಸಚಿವರು ಇದ್ದಾರೆ, ವಿಶೇಷ ಅನುದಾನದಲ್ಲಿ ಶಾಲೆ ಕಟ್ಟಡ ನಿರ್ಮಾಣ ಮಾಡಲಿ ಎಂದು ಆಗ್ರಹಿಸಿದ್ದಾರೆ.

  • ಕೇಂದ್ರ ಸಚಿವ ರಾಮ್‍ವಿಲಾಸ್ ಪಾಸ್ವಾನ್ ಆಸ್ಪತ್ರೆಗೆ ದಾಖಲು

    ಕೇಂದ್ರ ಸಚಿವ ರಾಮ್‍ವಿಲಾಸ್ ಪಾಸ್ವಾನ್ ಆಸ್ಪತ್ರೆಗೆ ದಾಖಲು

    ನವದೆಹಲಿ: ಕೇಂದ್ರ ಸಚಿವ ರಾಮ್‍ವಿಲಾಸ್ ಪಾಸ್ವಾನ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

    ಸಚಿವರು ಶ್ವಾಸಕೋಶ ಸಮಸ್ಯೆ ಹಾಗೂ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದು, ಫೋರ್ಟಿಸ್ ಎಸ್ಕೋರ್ಟ್ಸ್ ಹಾರ್ಟ್ ಇನ್ಸ್ ಸ್ಟಿಟ್ಯೂಟ್ ಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿ ಸುಧಾರಿಸಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

    ಪಾಸ್ವಾನ್ ಅವರಿಗೆ ಈ ಮೊದಲೇ ಹೃದಯ ಸಮಸ್ಯೆ ಕಾಣಿಸಿಕೊಂಡಿದ್ದು, 2017ರಲ್ಲಿ ಲಂಡನ್ ನಲ್ಲಿ ಹೃದಯದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಸಚಿವರು ಹಲವು ಕಾಯಿಲೆಗಳಿಂದ ಬಳಲುತ್ತಿದ್ದು, ಈ ಹಿನ್ನೆಲೆಯಲ್ಲಿ ಅತ್ಯಂತ ಸೂಕ್ಷ್ಮವಾಗಿ ಗಮನಿಸಿ, ಚಿಕಿತ್ಸೆಗಳನ್ನು ನೀಡಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.

  • ಕಾಂಗ್ರೆಸ್ ದೇಶದ ರಿಜೆಕ್ಟೆಡ್ ಗೂಡ್ಸ್: ಸದಾನಂದ ಗೌಡ ವ್ಯಂಗ್ಯ

    ಕಾಂಗ್ರೆಸ್ ದೇಶದ ರಿಜೆಕ್ಟೆಡ್ ಗೂಡ್ಸ್: ಸದಾನಂದ ಗೌಡ ವ್ಯಂಗ್ಯ

    – ‘ಕೈ’ ನಾಯಕರಿಂದ ಜನರ ನಡುವೆ ಸಿಎಎ ಗೊಂದಲ ಸೃಷ್ಟಿ

    ಉಡುಪಿ: ಕಾಂಗ್ರೆಸ್ ದೇಶದ ರಿಜೆಕ್ಟೆಡ್ ಗೂಡ್ಸ್. ವಿಪಕ್ಷ ಸ್ಥಾನಮಾನ ಪಡೆಯುವ ತಾಕತ್ ಇಲ್ಲದ ಪಕ್ಷ ಅದು. ರಾಜ್ಯಸಭೆಯಲ್ಲಿ ಸಂಖ್ಯಾಬಲ ಇಲ್ಲದಿದ್ದರೂ ಪೌರತ್ವ ತಿದ್ದುಪಡೆ ಕಾಯ್ದೆ ಪಾಸ್ ಆಗಿದೆ ಎಂದು ಕೇಂದ್ರ ರಸಗೊಬ್ಬರ ಸಚಿವ ಸದಾನಂದ ಗೌಡ ವ್ಯಂಗ್ಯವಾಡಿದ್ದಾರೆ.

    ಉಡುಪಿ ಶ್ರೀಕೃಷ್ಣಮಠಕ್ಕೆ ಭೇಟಿ ನೀಡಿದ ಕೇಂದ್ರ ಸಚಿವರು ನವಗ್ರಹ ಕಿಂಡಿ ಮೂಲಕ ಕೃಷ್ಣದರ್ಶನ ಪಡೆದರು. ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್‍ಗೆ ದೇಶದಲ್ಲಿ ಕೆಲಸ ಇಲ್ಲ. ಜನರ ನಡುವೆ ಗೊಂದಲ ಸೃಷ್ಟಿ ಮಾಡುವುನ್ನೇ ಉದ್ಯೋಗ ಮಾಡಿಕೊಂಡಿದೆ ಎಂದು ವಾಗ್ದಾಳಿ ನಡೆಸಿದರು.

    ಆಳವಾದ ಅಧ್ಯಯನ ಮಾಡದಿದ್ದರೆ ಸಿಎಎ ವಿಚಾರದಲ್ಲಿ ಗೊಂದಲ ಆಗುತ್ತದೆ. ದೇಶದ 130 ಕೋಟಿ ಜನಕ್ಕೆ ಕಾಯ್ದೆಯಿಂದ ತೊಂದರೆ ಆಗಲ್ಲ. ಕಾಂಗ್ರೆಸ್‍ಗೆ ಐದೂವರೆ ವರ್ಷ ವಿರೋಧಿಸಲು ಏನೂ ಸಿಗದೆ ಜನರ ನಡುವೆ ಗೊಂದಲ ತಂದಿಡುತ್ತಿದೆ. ರಾಜ್ಯಸಭೆಯಲ್ಲಿ ಸಂಖ್ಯಾಬಲ 99 ಇದ್ದರೂ 123 ಜನರ ಬೆಂಬಲ ಸಿಕ್ಕಿದೆ. ಲೋಕಸಭೆಯಲ್ಲಿ ಸಿಎಎಗೆ ಬಿಲ್ ಪಾಸಾಗಿದೆ ಎಂದು ಹೇಳಿದರು.

    ಪಿಣರಾಯಿ ರಾಜೀನಾಮೆ ಕೊಡಲಿ:
    ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸಿಎಎ ವಿಚಾರದಲ್ಲಿ ಸಣ್ಣತನ ಪ್ರದರ್ಶನ ಮಾಡಿದ್ದಾರೆ. ಅವರು ಸಿಎಂ ಆಗಿ ಮುಂದುವರಿಯಲು ಅರ್ಹರಲ್ಲ. ಕೇರಳದಲ್ಲಿ 3,000 ಜನ ವ್ಯಾಪಾರಿ, ಉದ್ಯೋಗಿಗಳ ಜೊತೆ ಸಿಎಎ ವಿಚಾರವಾಗಿ ಮಾತಡಿದ್ದೇನೆ. ಎಲ್ಲರಿಗೂ ಮನವರಿಕೆಯಾಗಿದೆ. ಸಿಎಂ ಪಿಣರಾಯಿ ಅವರಿಗೂ ಪ್ರತಿಕ್ರಿಯೆ ಕೊಟ್ಟು ಬಂದಿದ್ದೇನೆ ಎಂದರು.

    ರಾಜ್ಯ ಕಾಂಗ್ರೆಸ್ ಏಳು ಹೋಳಾಗಿದೆ:
    ರಾಜ್ಯ ಕಾಂಗ್ರೆಸ್ ಪಾರ್ಟಿ ಒಡೆದು ಹೋಗುತ್ತಿದೆ. ಧರ್ಮಾಧಾರಿತವಾಗಿ ಬಿಜೆಪಿ ದೇಶ ಒಡೆಯುತ್ತಿಲ್ಲ. ರಾಜ್ಯ ಕಾಂಗ್ರೆಸ್ ಏಳು ತಂಡಗಳಾಗಿ ಒಡೆದುಹೋಗಿದೆ. ದಿನೇಶ್ ಗುಂಡುರಾವ್, ಮಾಜಿ ಸಿಎಂ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ಈಶ್ವರ್ ಖಂಡ್ರೆ, ಮಾಜಿ ಸಚಿವ ಡಿಕೆ ಶಿವಕುಮಾರ್, ಮಾಜಿ ಡಿಸಿಎಂ ಜಿ.ಪರಮೇಶ್ವರ್, ಎಂ.ಬಿ.ಪಾಟೀಲ್ ಅವರು ದೆಹಲಿ ಪ್ರವಾಸ ಮಾಡುತ್ತಾರೆ. ವಾರಕ್ಕೊಬ್ಬ ತಂಡ ತೆಗೆದುಕೊಂಡು ದೆಹಲಿಯಲ್ಲಿ ಇರುತ್ತಾರೆ ಎಂದು ಹೇಳಿದರು.

  • ಎಫ್.ಎಂ ಕೇಂದ್ರ ಸ್ಥಾಪಿಸುವಂತೆ ಕೇಂದ್ರ ಸಚಿವರಿಗೆ ಬಿ.ವೈ ರಾಘವೇಂದ್ರ ಮನವಿ

    ಎಫ್.ಎಂ ಕೇಂದ್ರ ಸ್ಥಾಪಿಸುವಂತೆ ಕೇಂದ್ರ ಸಚಿವರಿಗೆ ಬಿ.ವೈ ರಾಘವೇಂದ್ರ ಮನವಿ

    ಶಿವಮೊಗ್ಗ: ಜಿಲ್ಲೆಯ ಜನರ ಆಶೋತ್ತರಗಳಿಗೆ ಪೂರಕವಾಗಿ ಸ್ಪಂದಿಸಲು ಬಹುದಿನಗಳಿಂದ ಜಿಲ್ಲೆಯ ಜನರ ಕನಸಾಗಿರುವ ಎಫ್.ಎಂ ರೇಡಿಯೋ ಕೇಂದ್ರವನ್ನು ಶಿವಮೊಗ್ಗದಲ್ಲಿ ಸ್ಥಾಪಿಸುವಂತೆ ಸಂಸದ ಬಿ.ವೈ ರಾಘವೇಂದ್ರ ಅವರು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವ್ಡೇಕರ್ ಅವರನ್ನು ನವದೆಹಲಿಯಲ್ಲಿ ಭೇಟಿ ಮಾಡಿ ಮನವಿ ಮಾಡಿದರು.

    ಈ ಹಿಂದೆ ಶಿವಮೊಗ್ಗದಲ್ಲಿ ಎಫ್.ಎಂ ರೇಡಿಯೋ ಕೇಂದ್ರವನ್ನು ಆರಂಭಿಸುವಂತೆ ಹಾಗೂ ಭದ್ರಾವತಿಯಲ್ಲಿ ಈಗಿರುವ ರೇಡಿಯೋ ಕೇಂದ್ರಕ್ಕೆ ತರಂಗಾತರಗಳನ್ನು ಹೆಚ್ಚಿಸಿ ಮೇಲ್ದರ್ಜೆಗೇರಿಸುವಂತೆ ಕೇಂದ್ರ ಸಚಿವರಿಗೆ ಮನವಿ ಮಾಡಿಕೊಳ್ಳಲಾಗಿತ್ತು. ಆದರೆ ನಿರೀಕ್ಷೆಯಂತೆ ಯೋಜನೆ ಅನುಷ್ಠಾನಗೊಳ್ಳದ ಹಿನ್ನೆಲೆಯಲ್ಲಿ ಸಂಸದ ಬಿ.ವೈ ರಾಘವೇಂದ್ರರವರು ಮತ್ತೊಮ್ಮೆ ಕೇಂದ್ರ ಸಚಿವರನ್ನು ಭೇಟಿ ಮಾಡಿ ಎಫ್.ಎಂ ರೇಡಿಯೋ ಕೇಂದ್ರ ಆರಂಭಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದು, ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ಅವರು ಸಕಾರಾತ್ಮಕವಾಗಿ ಸ್ಪಂದಿಸಿರುವುದಾಗಿ ಸಂಸದರು ತಿಳಿಸಿದ್ದಾರೆ.

    ಶಿವಮೊಗ್ಗ ಲೋಕಸಭಾ ಕ್ಷೇತ್ರದ ಹಾಗೂ ಶಿವಮೊಗ್ಗ ಜಿಲ್ಲೆಯ ಕೇಂದ್ರ ಸ್ಥಳವಾಗಿರುವ ಶಿವಮೊಗ್ಗದಲ್ಲಿ ಒಂದು ಎಫ್.ಎಂ ಕೇಂದ್ರ ಇರುವುದಿಲ್ಲ. ಭದ್ರಾವತಿ ಆಕಾಶವಾಣಿ ಕೇಂದ್ರವು ಕಳೆದ 50 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದು, ಕಡಿಮೆ ಶಕ್ತಿಯ ಟ್ರಾನ್ಸ್ ಮೀಟರ್ ನಿಂದಾಗಿ ಉತ್ತಮವಾದ ಕಾರ್ಯಕ್ರಮಗಳನ್ನು ಆಯೋಜಿಸಿದರು ಕೂಡ ಕೆಲವೇ ಕಿ.ಮಿ.ಗಳ ದೂರದಲ್ಲಿರುವ ಜಿಲ್ಲಾ ಕೇಂದ್ರಕ್ಕೂ ತಲುಪದಿರುವ ಬಗ್ಗೆ ಸಂಸದರು ಸಚಿವರ ಗಮನಕ್ಕೆ ತಂದಿದ್ದಾರೆ.

    ಶಿವಮೊಗ್ಗದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕಡಿಮೆ ಶಕ್ತಿಯ ದೂರದರ್ಶನ ಕೇಂದ್ರದಲ್ಲಿ ಹೆಚ್ಚಿನ ಸ್ಥಳಾವಕಾಶವಿರುವ ನಿಟ್ಟಿನಲ್ಲಿ ಹೆಚ್ಚಿನ ಶಕ್ತಿಯ ಟ್ರಾನ್ಸ್ ಮೀಟರ್ ಉನ್ನತೀಕರಿಸಿ ಇಲ್ಲಿರುವ ಸ್ಥಳವಕಾಶ ಹಾಗೂ ಸ್ಥಳೀಯ ಕಲಾವಿದರಿಗೆ ಉತ್ತಮ ಅವಕಾಶಗಳು ದೊರೆಯುವ ಹಿನ್ನೆಲೆಯಲ್ಲಿ ಈಗಿರುವ ಟ್ರಾನ್ಸ್ ಮೀಟರ್ 10ಕೆ.ವಿ.ಗೆ ಹೆಚ್ಚಿಸಿ, ಎಫ್.ಎಂ ಕೇಂದ್ರವನ್ನು ಮಂಜೂರು ಮಾಡಿದ್ದಲ್ಲಿ, ಮಲೆನಾಡಿನ ಹೆಚ್ಚಿನ ಸಂಖ್ಯೆಯ ಶಾಸ್ತ್ರೀಯ ಹಾಗೂ ಜನಪದ ಕಲಾವಿದರಿಗೆ ಅನುಕೂಲವಾಗಲಿದೆ ಎಂದು ಸಂಸದರು ಮನವಿಯಲ್ಲಿ ತಿಳಿಸಿದ್ದಾರೆ.

    ಆಕಾಶವಾಣಿ ಕೇಂದ್ರವು ಶಿವಮೊಗ್ಗದಿಂದ 20ಕಿ.ಮೀ. ದೂರದಲ್ಲಿರುವ ಭದ್ರಾವತಿಯಲ್ಲಿದ್ದರೂ, ಅದೂ ನಗರ ವ್ಯಾಪ್ತಿ ಪ್ರದೇಶದಿಂದ 5 ಕಿ.ಮೀ. ದೂರದಲ್ಲಿದೆ. ಶಿವಮೊಗ್ಗ ಜಿಲ್ಲಾದ್ಯಂತ ವಿವಿಧ ಭಾಗಗಳಿಂದ ಇಲ್ಲಿಗೆ ಜನರು ಬರಲು ತೊಂದರೆಯಾಗುತ್ತಿದೆ. ಅದೂ ಅಲ್ಲದೆ ಈ ಕೇಂದ್ರಕ್ಕೆ ನಿರ್ವಹಣಾಧಿಕಾರಿಗಳು ಇಲ್ಲದ ಪ್ರಯುಕ್ತ ಕಲಾವಿದರಿಗೆ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಅವಕಾಶ ದೊರೆಯದಂತಾಗಿದೆ. ಹೀಗಾಗಿ ಕೂಡಲೇ ಒಬ್ಬರು ಜಿಲ್ಲಾ ಮಟ್ಟದ ಅಧಿಕಾರಿಯನ್ನು ನಿಯೋಜಿಸುವಂತೆಯೂ ಕೇಂದ್ರ ಸಚಿವರಲ್ಲಿ ಮನವಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರೈಲ್ವೆ ಸಚಿವರಿಗೆ ಸಂಸದ ಬಿ.ವೈ ರಾಘವೇಂದ್ರ ಮನವಿ

    ನಗರದಲ್ಲಿ ಯಾವುದೇ ರೀತಿಯ ರೇಡಿಯೋ ಚಾನೆಲ್‍ಗಳು ಇಲ್ಲದಿರುವ ಪ್ರಯುಕ್ತ, ಎಫ್.ಎಂ ಕೇಂದ್ರ ಪ್ರಾರಂಭವಾದಲ್ಲಿ ಇದೊಂದು ಅತ್ಯುತ್ತಮ ರೇಡಿಯೋ ಕೇಂದ್ರ ಆಗುವುದರಲ್ಲಿ ಯಾವುದೇ ಸಂದೇಹವಿಲ್ಲ. ಸರ್ಕಾರಿ ಎಫ್.ಎಂ ಕೇಂದ್ರ ಸ್ಥಾಪನೆಯಾದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನಪರ ಕಾರ್ಯಕ್ರಮಗಳು ಮತ್ತು ಅವುಗಳ ಉಪಯುಕ್ತತೆ ಬಗ್ಗೆ ಜನರಲ್ಲಿ ಜಾಗೃತಿಯನ್ನುಂಟು ಮಾಡುವಲ್ಲಿ ಸಹಕಾರಿಯಾಗಲಿದೆ ಎಂದು ಸಂಸದರು ತಿಳಿಸಿದ್ದಾರೆ.

  • ಯಾದಗಿರಿಗೆ ಮೆಡಿಕಲ್ ಕಾಲೇಜು ಮಂಜೂರು

    ಯಾದಗಿರಿಗೆ ಮೆಡಿಕಲ್ ಕಾಲೇಜು ಮಂಜೂರು

    ಯಾದಗಿರಿ: ಜಿಲ್ಲೆಯ ಜನರ ಬಹು ದಿನ ಕನಸು ಕೊನೆಗೂ ನನಸಾಗಿದೆ. ಹೈದರಾಬಾದ್ ಕರ್ನಾಟಕ ಭಾಗದ ಹಿಂದುಳಿದ ಪ್ರದೇಶ ಎನ್ನಲಾಗುತ್ತಿದ್ದ ಯಾದಗಿರಿ ಜಿಲ್ಲೆಗೆ ಅಗತ್ಯವಿದ್ದ ಮೆಡಿಕಲ್ ಕಾಲೇಜು ಮಂಜೂರು ಮಾಡಲಾಗಿದೆ.

    ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಕೇಂದ್ರ ಸರ್ಕಾರದಿಂದ ಅಧಿಕೃತ ಘೋಷಣೆ ಮಾಡಿದ್ದಾರೆ.ಸಂಸದ ರಾಜಾ ಅಮರೇಶ್ ನಾಯಕ್ ಅವರಿಗೆ ಪತ್ರ ಬರೆದಿರುವ ಕೇಂದ್ರ ಸಚಿವರು, ನಿಮ್ಮ ನಾಯಕತ್ವದಲ್ಲಿ ಕಾರ್ಯ ಆರಂಭಿಸಿ ಎಂದು ಸೂಚನೆ ನೀಡಿದ್ದಾರೆ.

    ಗ್ರಾಮ ವಾಸ್ತವ್ಯ ಸಮಯದಲ್ಲಿ ಅಂದಿನ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮೆಡಿಕಲ್ ಕಾಲೇಜು ಮಂಜೂರಾತಿಗೆ ತಡೆ ನೀಡಿದ್ದರು. ಇದರಿಂದ ಜಿಲ್ಲೆಯಲ್ಲಿ ತೀವ್ರ ವಿರೋಧ ವ್ಯಕ್ತವಾಗಿ ಯಾದಗಿರಿ ಬಂದ್ ಸಹ ಮಾಡಲಾಗಿತ್ತು. ಈ ವೇಳೆ ಬಿ.ಎಸ್.ಯಡಿಯೂರಪ್ಪ ಅವರು ನಾನು ಮುಖ್ಯಮಂತ್ರಿಯಾದರೆ ಮೆಡಿಕಲ್ ಕಾಲೇಜು ಮಂಜೂರು ಮಾಡುತ್ತೇನೆ ಎಂದು ಬಿಜೆಪಿ ನಾಯಕರು ಹಾಗೂ ಜಿಲ್ಲೆಯ ಜನರಿಗೆ ಮಾತು ಕೊಟ್ಟಿದ್ದರು. ಸಿಎಂ ಯಡಿಯೂರಪ್ಪ ಅವರು ಕೊಟ್ಟ ಮಾತಿನಂತೆ ನಡೆದುಕೊಂಡಿದ್ದು ಜಿಲ್ಲೆಯ ಜನರಿಗೆ ಖುಷಿ ತಂದಿದೆ.

    ರಾಜ್ಯ ಸಂಪುಟ ಸಭೆಯ ಬಳಿಕ ಇಂದು ಮಾಧ್ಯಮಗಳ ಜೊತೆಗೆ ಮಾತನಾಡಿದ ಕಾನೂನು ಹಾಗೂ ಸಂಸದೀಯ ವ್ಯವಹಾರ ಸಚಿವ ಮಾಧುಸ್ವಾಮಿ ಅವರು, ಚಿಕ್ಕಬಳ್ಳಾಪುರ ವೈದ್ಯಕೀಯ ಕಾಲೇಜು ನಿರ್ಮಾಣಕ್ಕೆ 525 ಕೋಟಿ ರೂ. ಪರಿಷ್ಕೃತ ಅಂದಾಜಿಗೆ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.