Tag: CentralGovernment

  • ಮಠಕ್ಕೆ ಅನುದಾನ ಬೇಕಿದ್ರೆ ಶೇ.30 ಕಮಿಷನ್ ಕೊಡಿ ಅಂತಾರೆ ಅಧಿಕಾರಿಗಳು: ದಿಂಗಾಲೇಶ್ವರ ಸ್ವಾಮೀಜಿ

    ಮಠಕ್ಕೆ ಅನುದಾನ ಬೇಕಿದ್ರೆ ಶೇ.30 ಕಮಿಷನ್ ಕೊಡಿ ಅಂತಾರೆ ಅಧಿಕಾರಿಗಳು: ದಿಂಗಾಲೇಶ್ವರ ಸ್ವಾಮೀಜಿ

    ಬಾಗಲಕೋಟೆ: ಸದ್ಯ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಕೆ.ಎಸ್.ಈಶ್ವರಪ್ಪ ಅವರ ಪರ್ಸೆಂಟೇಜ್ ಪ್ರಕರಣ ಕಾವು ಪಡೆದುಕೊಂಡಿರುವ ಹೊತ್ತಿನಲ್ಲೇ ಶಿರಹಟ್ಟಿ ಜಗದ್ಗುರು ದಿಂಗಾಲೇಶ್ವರ ಸ್ವಾಮೀಜಿ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಗುಡುಗಿದ್ದಾರೆ.

    DINGALESWARA

    ಈ ಕುರಿತು ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿರುವ ಅವರು, ಈಚೆಗೆ ಸರ್ಕಾರದ ಯೋಜನೆಗಳು ಸಮರ್ಪಕವಾಗಿ ಕೆಲಸ ಮಾಡುವುದಿಲ್ಲ. ಅವು ಏನಾಗ್ತಿವೆ ಎಂದು ಎಲ್ಲರಿಗೂ ಗೊತ್ತಿದೆ. ಒಬ್ಬ ಸ್ವಾಮೀಜಿಗೆ ಅನುದಾನ ಬಿಡುಗಡೆ ಮಾಡಬೇಕಿದ್ರೆ 30 ಪರ್ಸೆಂಟ್ ಕಮಿಷನ್ ಕೊಡಬೇಕು. ಆಗಲೇ ಮಠಗಳಳಲ್ಲಿ ಕಟ್ಟಡ ಕೆಲಸ ಶುರುವಾಗುತ್ತದೆ. ನೀವು ಇಷ್ಟು ದುಡ್ಡು ಕಟ್ಟದಿದ್ರೆ ನಿಮ್ಮ ಕೆಲಸ ಆಗಲ್ಲ ಎಂದು ಅಧಿಕಾರಿಗಳೇ ಹೇಳುವ ಪರಿಸ್ಥಿತಿ ಬಂದಿದೆ ಅಂದರೆ, ಭ್ರಷ್ಟಾಚಾರ ಎಲ್ಲಿಗೆ ಬಂದಿದೆ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ಇಬ್ಬರು, ಮೂವರು ಸಚಿವರನ್ನು ಬಿಟ್ಟು ಎಲ್ರೂ 40% ಕಮಿಷನ್ ಪಡೆಯುತ್ತಿದ್ದಾರೆ: ಎಂ.ಬಿ ಪಾಟೀಲ್

    prahlad joshi

    ಈಗ ಕಿಡಿಗೇಡಿಗಳ ಸರ್ಕಾರವೇ ಬರುತ್ತಿದೆ. ಉತ್ತರ ಕರ್ನಾಟಕಕ್ಕಾಗಿ ಕಾಕಾಗಳು (ಖಾದಿ -ಖಾವಿ) ಒಂದಾಗಿವೆ. ಆದರೆ, ಎಂದಿಗೂ ನಮ್ಮ ಹಕ್ಕು, ಸ್ವತ್ತನ್ನು ಕಳೆದುಕೊಳ್ಳಬಾರದು, ಅನ್ನೋದು ಎಸ್.ಆರ್.ಪಾಟೀಲ್ ಅವ್ರ ತಂಡದ ಮಾತಾಗಿದೆ. ಇನ್ನೇನು ಕೃಷ್ಣಾ ಮಹದಾಯಿ, ನವಲಿ ಯೋಜನೆಗಳು ಕಾರ್ಯರೂಪಕ್ಕೆ ಬಂದ್ರೆ ನಿಮ್ಮ ಭಾಗದ ಜನರ ಬಾಳು ಹಸನಾಗುತ್ತದೆ. ಒಂದು ವೇಳೆ ನಮ್ಮ ಬೇಡಿಕೆಗಳನ್ನು ಸರ್ಕಾರ ಈಡೇರಿಸದಿದ್ದರೆ ಜನರೇ ತಕ್ಕಪಾಠ ಕಲಿಸುತ್ತಾರೆ ಎಂದು ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಹೆಣ್ಣುಮಕ್ಕಳು ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು: ಡಾ.ನಾರಾಯಣ ಗೌಡ

    SR PATIL

    ಕೆಲಸ ಮಾಡದಿದ್ರೆ ಏನ್ ಉಪಯೋಗ?: ಈ ಭಾಗದ ಮಂತ್ರಿಯೊಬ್ಬ ಸದಾ ಪ್ರಧಾನಮಂತ್ರಿ ಅವರೊಂದಿಗೆ ಇರ್ತಾನೆ. ಆದರೆ, ಕೇಂದ್ರದಿಂದ ರಾಜ್ಯಕ್ಕೆ ಏನೂ ಕೊಡುಗೆ ನೀಡ್ತಿಲ್ಲ. ಪ್ರಧಾನಿ ಹಿಂದೆ ಓಡಾಡೋದೆ ದೊಡ್ಡ ಕೆಲಸ ಅನ್ಕೊಂಡಿದ್ದಾನೆ. ನೀನು ಪಿಎಂ ಜೊತೆ ಅಡ್ಡಾಡಿದ್ರೂ, ಈ ಭಾಗಕ್ಕೆ ಏನು ಮಾಡದೇ ಇದ್ರೆ, ಪ್ರಯೋಜನ ಇಲ್ಲ ಎಂದು ಪರೋಕ್ಷವಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ವಿರುದ್ಧ ಏಕವಚನದಲ್ಲೇ ಸ್ವಾಮೀಜಿ ಲೇವಡಿ ಮಾಡಿದರು.

    ದೆಹಲಿ ಸರ್ಕಾರಕ್ಕೆ ಟಾಂಗ್: ನಮ್ಮ ಉತ್ತರ ಕರ್ನಾಟಕದವರು ಸ್ವಲ್ಪ ಜಾಗೃತರಾಗಿ ಸರ್ಕಾರಕ್ಕೆ ಬಿಸಿ ಮುಟ್ಟಿಸಬೇಕು. ಕೆಲ ಭಾಗಗಳಲ್ಲಿ ಸ್ವಾಮೀಜಿಗಳಲ್ಲೇ ಇರುವ ತಾರತಮ್ಯ ನಿಲ್ಲಬೇಕು. ಈ ಹೋರಾಟ ಇಲ್ಲಿಗೆ ನಿಲ್ಲೋದು ಬೇಡ. ಇದು ಮುಂದುವರಿಯಬೇಕು. ಎಲ್ಲಿಯ ತನಕ ಈ ಭಾಗ ಅಭಿವೃದ್ಧಿ ಆಗುವವರೆಗೆ ನಿಮ್ಮ ಹೋರಾಟ ನಿಲ್ಲಬಾರದು. ನಾವೆಲ್ಲ ನಿಮ್ಮ ಜೊತೆಗಿರುತ್ತೇವೆ ಎಂದು ಹೋರಾಟಕ್ಕೆ ಬೆಂಬಲ ಘೋಷಿಸಿದರು.

  • XE ರೂಪಾಂತರಿ ಮುಂಬೈನಲ್ಲಿ ಪತ್ತೆಯಾಗಿಲ್ಲ: ಮಹಾರಾಷ್ಟ್ರ ಸ್ಪಷ್ಟನೆ

    ಮುಂಬೈ: ಕೊರೊನಾ ಸೋಂಕಿನ ಹೊಸ ರೂಪಾಂತರಿಯಾಗಿರುವ ಎಕ್ಸ್‍ಇ ತಳಿ ಪತ್ತೆಯಾಗಿದೆ ಎಂದು ಬೃಹನ್ ಮುಂಬೈ ಮಹಾನಗರಪಾಲಿಕೆ (BMC) ವರದಿ ಮಾಡಿದ ಒಂದು ದಿನದ ಬಳಿಕ, ಎಕ್ಸ್‍ಇ ವೇರಿಯಂಟ್ ಪತ್ತೆಯಾಗಿಲ್ಲವೆಂದು ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್ ಟೋಪೆ ಸ್ಪಷ್ಟಪಡಿಸಿದ್ದಾರೆ.

    ಆರೋಗ್ಯ ಇಲಾಖೆಯ ಹೊಸ ತಳಿ ಪತ್ತೆಯಾಗಿರುವ ಬಗ್ಗೆ ಯಾವುದೇ ದೃಢೀಕರಣವನ್ನು ಸ್ವೀಕರಿಸಿಲ್ಲ. ಆದ್ದರಿಂದ ಎಕ್ಸ್‍ಇ ಪತ್ತೆಯಾಗಿರುವುದು ಕಂಡುಬಂದಿಲ್ಲ. ಮಾಹಿತಿ ಪ್ರಕಾರ ಎಕ್ಸ್‍ಇ ತಳಿಯು ಕೊರೊನಾ ರೂಪಾಂತರಿ ಓಮಿಕ್ರಾನ್‍ಗಿಂತಲೂ ಶೇ.10 ರಷ್ಟು ಹೆಚ್ಚು ಸೋಂಕನ್ನು ಹರಡುತ್ತದೆ. ಹಾಗಾಗಿ ನಾವು ಎನ್‍ಐಬಿ ಯಿಂದ ಮಹಾರಾಷ್ಟ್ರ ವರದಿ ಪಡೆದ ನಂತರ ಈ ಬಗ್ಗೆ ಮಾಹಿತಿ ನೀಡಲಾಗುವುದು ಎಂದು ರಾಜೇಶ್ ಟೋಪೆ ಹೇಳಿದ್ದಾರೆ. ಇದನ್ನೂ ಓದಿ: ಭಾರತಕ್ಕೆ ಕಾಲಿಟ್ಟ ಹೊಸ ರೂಪಾಂತರಿ ʼXEʼ – ಮುಂಬೈನಲ್ಲಿ ಮೊದಲ ಪ್ರಕರಣ ಪತ್ತೆ

    corona

    ವೈಜ್ಞಾನಿಕ ಪುರಾವೆ ಇಲ್ಲವೆಂದ ಕೇಂದ್ರ: ಮುಂಬೈನಲ್ಲಿ XE ಕೊರೊನಾ ತಳಿ ಪತ್ತೆಯಾಗಿದೆ ಎಂದು ಹೇಳಿದ್ದ ವರದಿಯನ್ನು ಕೇಂದ್ರ ಸರ್ಕಾರದ ಅಧಿಕಾರಿಗಳು ಅಲ್ಲಗಳೆದಿದ್ದಾರೆ. ಎಕ್ಸ್‍ಇ ತಳಿ ಪತ್ತೆಯಾಗಿರುವುದಕ್ಕೆ ವೈಜ್ಞಾನಿಕ ಪುರಾವೆಗಳಿಲ್ಲ ಎಂದಿದ್ದಾರೆ. ಭಾರತದ ಸಾರ್ಸ್ ಕೋವ್-2 ಜೆನೆಟಿಕ್ಸ್ ಕಾನ್ಸೊರ್ಟಿಯಮ್‍ನ (INSACOG) ಜಿನೋಮ್ ಸೀಕ್ವೆನ್ಸಿಂಗ್ ತಜ್ಞರು ವಿವರವಾಗಿ ಪರಿಶೀಲನೆ ನಡೆಸಿದ್ದು, ಮಾದರಿಯಲ್ಲಿ ಪತ್ತೆಯಾಗಿರುವ ತಳಿಯ ಜಿನೋಮ್ ರಚನೆಗಳಿಗೂ ಎಕ್ಸ್‍ಇ ತಳಿಯ ರಚನೆಗಳೂ ಹೋಲಿಕೆಯಾಗಿಲ್ಲ ಎಂದು ಅಧಿಕೃತ ಮೂಲಗಳಿಂದ ತಿಳಿದು ಬಂದಿದೆ. ಇದನ್ನೂ ಓದಿ: ಮತ್ತೆ ಶಾಕ್‌ ಕೊಟ್ಟ ಕೋವಿಡ್-‌ ಇಂಗ್ಲೆಂಡ್‌ನಲ್ಲಿ ʻXEʼ ಹೊಸ ರೂಪಾಂತರಿ ಪತ್ತೆ

    XE ವರ್ಗೀಕರಿಸುವುದು ಹೇಗೆ?: ತಳಿಯ ಗುರುತಿಸುವಿಕೆಯಲ್ಲಿ ಬಳಕೆಯಾಗಿರುವ ಸ್ವಯಂ ಚಾಲಿತ ಸಾಫ್ಟ್‍ವೇರ್ ವ್ಯವಸ್ಥೆಯಲ್ಲಿನ ಪ್ರಮಾದದಿಂದಾಗಿ ಈ ಗೊಂದಲ ಸೃಷ್ಟಿಯಾಗಿದೆ ಎಂದು ಐಎನ್‍ಎಸ್‍ಎಸಿಒಜಿ ಮೂಲಗಳು ತಿಳಿಸಿವೆ. ನಿರ್ದಿಷ್ಟ ಡೆಲ್ಟಾ ಮಾದರಿಗಳ ಜೊತೆಗೆ ಓಮಿಕ್ರಾನ್ ತಳಿ ಇದ್ದರೆ, ಸಾಫ್ಟ್‍ವೇರ್ ಅದನ್ನು XE ಎಂದು ವರ್ಗೀಕರಿಸುತ್ತಿದೆ. ಸ್ವಯಂ ಚಾಲಿತ ವಿಶ್ಲೇಷಣೆಯಲ್ಲಿ ಎದುರಾಗಿರುವ ಈ ದೋಷವನ್ನು ಪರಿಶೀಲಿಸಲು ತಜ್ಞರು ನೇರವಾಗಿ ವಿಶ್ಲೇಷಣೆ ನಡೆಸುವುದು ಅಗತ್ಯವಾಗಿದೆ’ ಎಂದು ಮೂಲಗಳು ಹೇಳಿವೆ.

    covid

    ಹಿನ್ನೆಲೆ ಏನು?: ಹಿಂದಿ ಸಿನಿಮಾ ಕ್ಷೇತ್ರದಲ್ಲಿ ವಸ್ತ್ರ ವಿನ್ಯಾಸಕಿಯಾಗಿ ಕಾರ್ಯನಿರ್ವಹಿಸುತ್ತಿರುವ 50 ವರ್ಷ ವಯಸ್ಸಿನ ಮಹಿಳೆಯಲ್ಲಿ `XE’ ತಳಿ ಸೋಂಕು ಪತ್ತೆಯಾದ ಬಗ್ಗೆ ವರದಿ ಪ್ರಕಟವಾಗಿತ್ತು. ಸೋಂಕಿನಿಂದ ಗುಣಮುಖರಾಗಿರುವ ಅವರು ಫೆಬ್ರವರಿಯಲ್ಲಿ ದಕ್ಷಿಣ ಆಫ್ರಿಕಾದಿಂದ ವಾಪಸಾಗಿದ್ದರು. ಮಹಾರಾಷ್ಟ್ರದ ಸಾರ್ವಜನಿಕ ಆರೋಗ್ಯ ಇಲಾಖೆಯ ಪ್ರಕಟಣೆಯ ಪ್ರಕಾರ, ಕಸ್ತೂರ್ಬಾ ಆಸ್ಪತ್ರೆಯ ಪ್ರಯೋಗಾಲಯದಲ್ಲಿ ಜಿನೋಮ್ ಸೀಕ್ವೆನ್ಸಿಂಗ್ ವಿಶ್ಲೇಷಣೆಗಾಗಿ ರೋಗಿಯಿಂದ ಸಂಗ್ರಹಿಸಲಾಗಿರುವ ಮಾದರಿಯನ್ನು ಕಳುಹಿಸಲಾಗಿತ್ತು. ಪ್ರಾಥಮಿಕ ವಿಶ್ಲೇಷಣೆಯಲ್ಲಿ `XE’ ತಳಿ ಇರುವುದು ಪತ್ತೆಯಾಗಿತ್ತು.