Tag: Century Gowda

  • ನಾಗಿಣಿ 2 ಧಾರಾವಾಹಿಗೆ ಬಂದ ತಿಥಿ ಖ್ಯಾತಿಯ ಸೆಂಚ್ಯುರಿ ಗೌಡ, ಗಡ್ಡಪ್ಪ

    ನಾಗಿಣಿ 2 ಧಾರಾವಾಹಿಗೆ ಬಂದ ತಿಥಿ ಖ್ಯಾತಿಯ ಸೆಂಚ್ಯುರಿ ಗೌಡ, ಗಡ್ಡಪ್ಪ

    ತಿಥಿ ಚಿತ್ರ ಖ್ಯಾತಿಯ ಸೆಂಚ್ಯುರಿ ಗೌಡ ಮತ್ತು ಗಡ್ಡಪ್ಪ ಈಗಾಗಲೇ ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ. ಇವರದ್ದೇ ಪ್ರಧಾನ ಭೂಮಿಕೆ ಇರುವ ಹಲವು ಚಿತ್ರಗಳು ತೆರೆ ಕಂಡಿವೆ. ತಿಥಿಯ ಹೊರತಾಗಿ ಬಹುತೇಕ ಚಿತ್ರಗಳು ಇವರನ್ನು ಕಾಮಿಡಿ ಪೀಸ್ ಗಳಂತೆಯೇ ಬಳಸಿಕೊಂಡಿದ್ದರಿಂದ ಅವರಿಗೂ ಸ್ವತಃ ಬೇಸರವಾಗಿತ್ತು. ಹಾಗಾಗಿ ಚಿತ್ರರಂಗದಿಂದ ಕೆಲ ತಿಂಗಳಿಂದ ದೂರವಿದ್ದರು. ಇದನ್ನೂ ಓದಿ : ಪುನೀತ್ ಅವರ ದ್ವಿತ್ವ ಸಿನಿಮಾದ ಮೇಲೆ ಹಲವರ ಕಣ್ಣು

    ಇದೀಗ ಮತ್ತೆ ಗಡ್ಡಪ್ಪ ಹಾಗೂ ಸೆಂಚ್ಯುರಿ ಗೌಡ ಮುಖಕ್ಕೆ ಬಣ್ಣ ಹಚ್ಚಿದ್ದಾರೆ. ಆದರೆ, ಅವರು ಈ ಬಾರಿ ಸಿನಿಮಾದಲ್ಲಿ ನಟಿಸುತ್ತಿಲ್ಲ ಕಿರುತೆರೆ ಜಗತ್ತಿಗೆ ಹಾರಿ ಬಂದಿದ್ದಾರೆ. ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ನಾಗಿಣಿ 2 ಚಿತ್ರದಲ್ಲಿ ಅವರು ವಿಶೇಷ ಪಾತ್ರ ನಿರ್ವಹಿಸುತ್ತಿದ್ದಾರೆ. ಈಗಾಗಲೇ ಇವರ ನಟನೆಯ ಎಪಿಸೋಡ್ ಕೂಡ ಪ್ರಸಾರವಾಗಿದೆ. ಇದನ್ನೂ ಓದಿ : ಹರ್ಷ ಸಾವಿಗೆ ಸ್ಯಾಂಡಲ್ ವುಡ್, ಬಾಲಿವುಡ್ ಕಲಾವಿದರ ಆಕ್ರೋಶ

    ತಿಥಿ ಸಿನಿಮಾದ ಮೂಲಕ ಚಿತ್ರೋದ್ಯಮಕ್ಕೆ ಪರಿಚಯವಾದವರು ಸೆಂಚ್ಯುರಿ ಗೌಡ ಮತ್ತು ಗಡ್ಡಪ್ಪ. ಜೀವನದಲ್ಲಿ ಯಾವತ್ತೂ ನಟಿಸಿದ ಈ ಇಳಿವಯಸ್ಸಿನ ಕಲಾವಿದರು, ಮೊದಲ ಸಿನಿಮಾದಲ್ಲಿಯೇ ನೈಜವಾಗಿ ನಟಿಸುವ ಮೂಲಕ ಅಚ್ಚರಿ ಮೂಡಿಸಿದ್ದರು. ಇಡೀ ಚಿತ್ರಜಗತ್ತಿಗೆ ಪರಿಚಯವಾದರು. ಆನಂತರ ಬಂದ ಅವರ ಸಿನಿಮಾಗಳು ಪ್ರೇಕ್ಷಕರಿಗೂ ತಲುಪಲಿಲ್ಲ, ಯಶಸ್ಸೂ ಕಾಣಲಿಲ್ಲ. ಆದರೂ, ಹಲವು ಚಿತ್ರಗಳಲ್ಲಿ ನಟಿಸಿದರು. ಇದನ್ನೂ ಓದಿ : ಸ್ಮಾರಕವಾಗಲಿದೆ ಚಿತ್ರಬ್ರಹ್ಮ ಪುಟ್ಟಣ್ಣ ಕಣಗಾಲ್ ಮನೆ

    ಇದೀಗ ಕಿರುತೆರೆಗೆ ಬರುವ ಮೂಲಕ ಮತ್ತೊಂದು ಇನ್ನಿಂಗ್ಸ್ ಶುರು ಮಾಡಿದ್ದಾರೆ. ಎಷ್ಟು ಕಂತುಗಳಲ್ಲಿ ಇವರು ಇರಲಿದ್ದಾರೆ ಎನ್ನುವುದೇ ಕುತೂಹಲ.

  • `ಒಂಬತ್ತನೇ ಅದ್ಭುತ’ ಹಾಡುಗಳ ಅನಾವರಣ

    `ಒಂಬತ್ತನೇ ಅದ್ಭುತ’ ಹಾಡುಗಳ ಅನಾವರಣ

    ಬೆಂಗಳೂರು: ಕಳೆದ 13 ವರ್ಷಗಳಿಂದ ದೇವರಾಣೆ, 90, ಹುಡುಗಾಟ, ಕಂದ ಸೇರಿದಂತೆ 15ಕ್ಕೂ ಹೆಚ್ಚು ಸಿನಿಮಾಗಳಿಗೆ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿರುವ ಸಂತೋಷ್ ಕುಮಾರ್ ಬೆಟಗೇರಿ ಅವರ ನಿರ್ದೇಶನದಲ್ಲಿ ಮೂಡಿ ಬಂದಿರುವ ಚಿತ್ರ `ಒಂಬತ್ತನೇ ಅದ್ಭುತ’. ಈ ಚಿತ್ರದ ಟ್ರೈಲರ್ ಹಾಗೂ ಆಡಿಯೋ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಸಂತೋಷ್ ಕುಮಾರ್ ಅವರೇ ಈ ಚಿತ್ರದ ನಿರ್ಮಾಪಕರಾಗಿದ್ದು, ನಾಯಕನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

    ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕ ಸಂತೋಷ್ ಕುಮಾರ್ ಒಂದು ಶವವನ್ನಿಟ್ಟುಕೊಂಡು ಅದರ ಸುತ್ತ ನಡೆಯುವ ಘಟನೆಗಳನ್ನು ಕಾಮಿಡಿಯಾಗಿ ಹೇಳುವ ಪ್ರಯತ್ನ ಮಾಡಿದ್ದೇವೆ. ರೆಗ್ಯುಲರ್ ಪ್ಯಾಟರ್ನ್ ಬಿಟ್ಟು ಬೇರೆಯದೇ ಸ್ಟೈಲ್‍ನಲ್ಲಿ ನರೇಷನ್ ಮಾಡಿದ್ದೇವೆ. ನಿರ್ಮಾಣ ಕಾರ್ಯದಲ್ಲಿ ನಮ್ಮ ಸಹೋದರರ ಸಹಕಾರ ಕೂಡ ಇದೆ. ಮಂಡ್ಯದಲ್ಲಿ ನಡೆಯುವ ಕಥೆ ಇದಾಗಿದ್ದು, ಮಂಗಳೂರು, ಉತ್ತರ ಕರ್ನಾಟಕ, ಮಂಡ್ಯ ಸೇರಿ 3 ಥರದ ಭಾಷೆ ಈ ಚಿತ್ರದಲ್ಲಿದೆ ಎಂದು ಹೇಳಿದರು.

    ಈ ಚಿತ್ರದ ನಾಯಕಿಯಾಗಿ ನಯನ ಸಾಯಿ ಕಾಣಿಸಿಕೊಂಡಿದ್ದಾರೆ. ಅಲ್ಲದೆ ತಿಥಿ ಖ್ಯಾತಿಯ ಸೆಂಚುರಿಗೌಡ ಕೂಡ ಈ ಚಿತ್ರದಲ್ಲಿ ನಟಿಸಿದ್ದಾರೆ. ತನ್ನ ಪಾತ್ರದ ಕುರಿತಂತೆ ಮಾತನಾಡಿದ ನಯನ ಸಾಯಿ ನಾನು ಮೂಲತಃ ಮಾಡೆಲ್ ಮಿಸ್ ಇಂಡಿಯಾ ಸೌತ್‍ನಲ್ಲಿ ಭಾಗವಹಿಸಿದ್ದೆ. ನನ್ನ ಪ್ರೊಫೈಲ್ ನೋಡಿ ನಿರ್ದೇಶಕರು ನನಗೆ ಚಾನ್ಸ್ ಕೊಟ್ಟಿದ್ದಾರೆ. ಒಬ್ಬ ಕಾಲೇಜು ಹುಡುಗಿಯ ಪಾತ್ರ ಮಾಡಿದ್ದೇನೆ. ಚಿತ್ರದಲ್ಲಿ ಕಾಮಿಡಿ, ಸಸ್ಪೆನ್ಸ್ ಕಥೆಯಿದೆ. ಟೀಮ್ ಸಪೋರ್ಟ್‌ ತುಂಬಾ ಚೆನ್ನಾಗಿತ್ತು ಎಂದು ಹೇಳಿಕೊಂಡರು. ಚಿತ್ರಕ್ಕೆ ಸುನಿಲ್ ಕೋಶಿ ಸಂಗೀತ ಸಂಯೋಜನೆ ಮಾಡಿದ್ದಾರೆ. ರಾಘವೇಂದ್ರ ಬಿ.ಕೋಲಾರ್ ಕ್ಯಾಮರಾ ವರ್ಕ್ ಮಾಡಿದ್ದಾರೆ. ನಾಗರಾಜ್ ಆರ್ ಕುಂತೂರ್, ಗೋಪಾಲಕೃಷ್ಣ ಗೌಡ ಹಾಗೂ ಮಂಜಣ್ಣ ಬೆಟ್ಟಹಳ್ಳಿ ಈ ಚಿತ್ರದ ಸಹನಿರ್ಮಾಪಕರಾಗಿದ್ದಾರೆ.