Tag: Ceremony

  • ಜೂ.30ರವರೆಗೆ ಮದುವೆ ಸೇರಿ ಎಲ್ಲ ಸಭೆ, ಸಮಾರಂಭಗಳಿಗೆ ನಿರ್ಬಂಧ

    ಜೂ.30ರವರೆಗೆ ಮದುವೆ ಸೇರಿ ಎಲ್ಲ ಸಭೆ, ಸಮಾರಂಭಗಳಿಗೆ ನಿರ್ಬಂಧ

    – ಸಾಮಾಜಿಕ ಕಾರ್ಯಕ್ರಮಗಳನ್ನೂ ನಡೆಸುವಂತಿಲ್ಲ

    ಬಳ್ಳಾರಿ: ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಜೂ.30ರವರೆಗೆ ಮದುವೆ ಸೇರಿದಂತೆ ಎಲ್ಲ ಸಭೆ, ಸಮಾರಂಭ ಹಾಗೂ ಸಾಮಾಜಿಕ ಕಾರ್ಯಕ್ರಮಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿ ಪವನ್ ಕುಮಾರ್ ಮಾಲಪಾಟಿ ಆದೇಶ ಹೊರಡಿಸಿದ್ದಾರೆ.

    ರಾಜ್ಯ ಸರ್ಕಾರ ಬಳ್ಳಾರಿ ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಈಗಾಗಲೇ ವಿಧಿಸಲಾದ ನಿರ್ಬಂಧಗಳನ್ನು ಸಡಿಲಿಕರಣಗೊಳಿಸಿದ್ದು, ಜೂ.14ರ ಬೆಳಗ್ಗೆ 6ರಿಂದ 21ರ ಬೆಳಗ್ಗೆ 6ರವರೆಗೆ ಕೆಲವು ಚಟುವಟಿಕೆಗಳಿಗೆ ಅವಕಾಶ ನೀಡಲಾಗಿದೆ. ನಿಗದಿಪಡಿಸಿದ ಸಮಯದಲ್ಲಿ ಅನುಮತಿಸಲಾದ ಚಟುವಟಿಕೆಗಳಿಗೆ ಮಾತ್ರ ಅನುಮತಿ ನೀಡಿದ್ದು, ಉಳಿದಂತೆ ಸಾರ್ವಜನಿಕರ ಅನಗತ್ಯ ಓಡಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಅವರು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

    ಜೂ.14ರಿಂದ ಜೂ.21ರವರೆಗೆ ಅವಳಿ ಜಿಲ್ಲೆಗಳಲ್ಲಿ ಸಂಜೆ 7ರಿಂದ ಬೆಳಗ್ಗೆ 5ರವರೆಗೆ ರಾತ್ರಿ ಕಫ್ರ್ಯೂ ಜಾರಿಗೊಳಿಸಲಾಗಿದೆ. ಇದರ ಜೊತೆಗೆ ಜೂ.18ರ ಸಂಜೆ 7ರಿಂದ ಜೂ.21ರ ಬೆಳಗ್ಗೆ 5ರವರೆಗೆ ವಾರಾಂತ್ಯ ಕರ್ಫ್ಯೂ ಜಾರಿಯಲ್ಲಿರಲಿದೆ. ಆದೇಶ ಉಲ್ಲಂಘಿಸಿದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ ಹಾಗೂ ಐಪಿಸಿ ಸೆಕ್ಷನ್ 188 ಮತ್ತು ಅನ್ವಯವಾಗಬಹುದಾದ ಇತರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಸಿದ್ದಾರೆ.

  • ಕೊರೊನಾ ನಿಯಮ ಪಾಲಿಸದ ರ‍್ಯಾಲಿಗಳನ್ನು ನಿಷೇಧಿಸ್ತೇವೆ: ಚುನಾವಣಾ ಆಯೋಗ

    ಕೊರೊನಾ ನಿಯಮ ಪಾಲಿಸದ ರ‍್ಯಾಲಿಗಳನ್ನು ನಿಷೇಧಿಸ್ತೇವೆ: ಚುನಾವಣಾ ಆಯೋಗ

    ನವದೆಹಲಿ: ಕೊರೊನಾ ನಿಯಮ ಉಲ್ಲಂಘಿಸಿದರೆ ಸಾರ್ವಜನಿಕ ಸಭೆ, ರ‍್ಯಾಲಿಗಳನ್ನು ನಿಷೇಧಿಸುವುದಕ್ಕೆ ಹಿಂದೇಟು ಹಾಕುವುದಿಲ್ಲ ಎಂದು ರಾಜಕೀಯ ಪಕ್ಷಗಳಿಗೆ ಚುನಾವಣಾ ಆಯೋಗ ಎಚ್ಚರಿಕೆ ನೀಡಿದೆ.

    ದೇಶದೆಲ್ಲೆಡೆ ಹೆಚ್ಚಾಗುತ್ತಿರುವ ಕೊರೊನಾ ಸೋಂಕಿನ ಮಧ್ಯೆ, ಮಾಸ್ಕ್ ಇಲ್ಲದೆ, ಸಾಮಾಜಿಕ ಅಂತರ ಕಾಪಾಡದೆ ಪ್ರಮುಖ ಪ್ರಚಾರಕರು, ರಾಜಕಾರಣಿಗಳು ಚುನಾವಣಾ ರ‍್ಯಾಲಿಗಳಲ್ಲಿ ಪ್ರಚಾರ ಮಾಡುತ್ತಿರುವ ಬಗ್ಗೆ ಚುನಾವಣಾ ಆಯೋಗ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

    ಕೊರೊನಾ ನಿಯಮ ಉಲ್ಲಂಘಿಸಿ ನಡೆಯುವ ಸಾರ್ವಜನಿಕ ಸಭೆ, ರ್ಯಾಲಿಗಳನ್ನು ನಿಷೇಧಿಸುವುದಕ್ಕೆ ಹಿಂದೇಟು ಹಾಕುವುದಿಲ್ಲ, ಕೋವಿಡ್-19 ನಿಯಮ ಉಲ್ಲಂಘಿಸುವ ಅಭ್ಯರ್ಥಿಗಳು, ರಾಜಕೀಯ ನಾಯಕರು ಮತ್ತು ಪಕ್ಷಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ರಾಜಕೀಯ ನಾಯಕರು, ಅಭ್ಯರ್ಥಿಗಳು ರ‍್ಯಾಲಿಗಳಲ್ಲಿ ಭಾಗವಹಿಸುವ ಜನರನ್ನು ಅಪಾಯಕ್ಕೆ ತಳ್ಳುತ್ತಿದ್ದಾರೆ. ನಿಯಮವನ್ನು ಗಾಳಿಗೆ ತೂರಲಾಗುತ್ತಿದೆ, ಚುನಾವಣಾ ಆಯೋಗದ ನಿಯಮಗಳನ್ನು ಧಿಕ್ಕರಿಸಲಾಗುತ್ತಿದೆ. ವೇದಿಕೆಗಳಲ್ಲಿ ಇರುವಾಗ ಮಾಸ್ಕ್ ಧರಿಸುತ್ತಿಲ್ಲ ಎಂದು ಆಯೋಗ ಪತ್ರದಲ್ಲಿ ವಿವರಿಸಿದೆ.

    ನಿನ್ನೆ ಚುನಾವಣಾ ಆಯೋಗ ಮತ್ತು ಕೇಂದ್ರ ಸರ್ಕಾರಕ್ಕೆ ನೊಟೀಸ್ ನೀಡಿದ್ದ ದೆಹಲಿ ಹೈಕೋರ್ಟ್ ರಾಜಕೀಯ ರ‍್ಯಾಲಿಗಳಲ್ಲಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಬಗ್ಗೆ ಪ್ರತಿಕ್ರಿಯೆ ಕೇಳಿತ್ತು.

  • ಬೈಡನ್ ಪ್ರಮಾಣವಚನ ಕಾರ್ಯಕ್ರಮದ ನೇತೃತ್ವ ಭಾರತೀಯನ ಹೆಗಲಿಗೆ

    ಬೈಡನ್ ಪ್ರಮಾಣವಚನ ಕಾರ್ಯಕ್ರಮದ ನೇತೃತ್ವ ಭಾರತೀಯನ ಹೆಗಲಿಗೆ

    ವಾಷಿಂಗ್ಟ್​ನ್: ಅಮೆರಿಕ ಅಧ್ಯಕ್ಷ ಜೋ ಬೈಡನ್ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದ ಉದ್ಘಾಟನಾ ಸಮಿತಿಯಲ್ಲಿ ಭಾರತೀಯರಾದ ಮಜು ವರ್ಗೀಸ್ ಅವರು ಕಾರ್ಯನಿರ್ವಾಹಕ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದಾರೆ.

    ಜೋ ಬೈಡನ್ ಮತ್ತು ಕಮಲಾ ಹ್ಯಾರಿಸ್ ಅವರ ಅಧ್ಯಕ್ಷೀಯ ಪ್ರಮಾಣವಚನ ಉದ್ಘಾಟನಾ ಸಮಿತಿಯನ್ನು ಭಾರತೀಯರಾದ ಮಜು ವರ್ಗೀಸ್ ಅವರು ಕಾರ್ಯನಿರ್ವಾಹಕ ನಿರ್ದೇಶಕರಾಗಿದ್ದಾರೆ. ಅಮೆರಿಕಾದ ಇತಿಹಾಸದಲ್ಲಿ ಮೊದಲನೇ ಬಾರಿಗೆ ಭಾರತ ಮೂಲದ ಮಹಿಳೆಯೊಬ್ಬರು ಉಪಾಧ್ಯಕ್ಷ ಸ್ಥಾನಕ್ಕೆ ಏರಲು ಸಿದ್ಧತೆ ನಡೆಯುತ್ತಿದೆ. ಅಧ್ಯಕ್ಷ ಹಾಗೂ ಉಪಾಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸುವ ಕಾರ್ಯಕ್ರಮದಲ್ಲಿ ಭಾರತದ ಕಂಪು ಕಾಣಿಸಿಕೊಳ್ಳುತ್ತದೆ.

    2021ರ ಜನವರಿಯಲ್ಲಿ ನಡೆಯಲಿರುವ ಪ್ರಮಾಣ ವಚನ ಕಾರ್ಯಕ್ರಮದ ಸಂಪೂರ್ಣ ಉಸ್ತುವಾರಿಯನ್ನು ಭಾರತದ ಮೂದಲ ಮಜು ವರ್ಗೀಸ್ ವಹಿಸಿಕೊಳ್ಳಲಿದ್ದಾರೆ. ಇವರ ತಾಯಿ ಭಾರತದ ಕೇರಳದಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ತಂದೆ ನ್ಯೂಯಾರ್ಕ್‍ನಲ್ಲಿ ಕ್ಯಾಬ್ ಡ್ರೈವರ್ ಆಗಿದ್ದರು. ಈ ದಂಪತಿ ಮಗ ಮಜು ವೃತ್ತಿಯಲ್ಲಿ ವಕೀಲರಾಗಿದ್ದಾರೆ.

    ಅಧ್ಯಕ್ಷೀಯ ಚುನಾವಣಾ ಸಮಯದಲ್ಲಿ ಬೈಡೆನ್ ಮತ್ತು ಕಮಲಾ ಅವರ ಪರವಾಗಿ ಮಜು ಕೆಲಸ ಮಾಡಿದ್ದರು. ಸಾಕಷ್ಟು ಜನ ಸ್ವಯಂ ಸೇವಕರನ್ನು ಒಗ್ಗೂಡಿಸಿ, ಅವರ ಗೆಲುವಿಗೆ ಕಾರಣರಾಗಿದ್ದಾರೆ. ಇದೀಗ ಮಜು ವರ್ಗಿಸ್ ಅವರನ್ನು ಗುರುತಿಸಿರುವ ಅಧ್ಯಕ್ಷರು, ಅವರಿಗೆ ಅಧ್ಯಕ್ಷ ಉದ್ಘಾಟನಾ ಸಮಿತಿಯ ಕಾರ್ಯನಿರ್ವಾಹಕ ಮತ್ತು ನಿರ್ದೇಶಕರ ಸ್ಥಾನವನ್ನು ಕೊಟ್ಟಿದ್ದಾರೆ.

    ಮಜು ವರ್ಗೀಸ್ ಈ ಹಿಂದೆ ಬರಾಕ್ ಒಬಾಮಾ ಅವರು ಅಧ್ಯಕ್ಷರಾಗಿದ್ದಾಗ ಅವರ ವಿಶೇಷ ಸಹಾಯಕ ಮತ್ತು ಉಪನಿರ್ದೇಶಕರಾಗಿಯೂ ಕೆಲಸ ಮಾಡಿದ್ದರು. ಇದೀಗ ಅಧ್ಯಕ್ಷಿಯ ಉದ್ಘಾಟನಾ ಸಮಿತಿಯಲ್ಲಿ ಭಾರತೀಯರಾದ ಮಜು ವರ್ಗೀಸ್ ಅವರು ಕಾರ್ಯನಿರ್ವಾಹಕ ನಿರ್ದೇಶಕರಾಗಿ ಕಾಣಿಸಿಕೊಳ್ಳಲಿದ್ದಾರೆ.

  • ಕೋವಿಡ್ ಕೇರ್ ಸೆಂಟರಿನಲ್ಲಿ ಮದುವೆ ಸಮಾರಂಭ – ವಧುವಿಗೆ ಸರ್ಪ್ರೈಸ್

    ಕೋವಿಡ್ ಕೇರ್ ಸೆಂಟರಿನಲ್ಲಿ ಮದುವೆ ಸಮಾರಂಭ – ವಧುವಿಗೆ ಸರ್ಪ್ರೈಸ್

    – ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್
    – ಮದ್ವೆಗೆ ಒಂದು ಬಾಕಿ ಇರುವಾಗ ಕೊರೊನಾ ಪಾಸಿಟಿವ್

    ತಿರುವನಂತಪುರಂ: ಕೇರಳದ ಕೊಚ್ಚಿಯಲ್ಲಿರುವ ಕೋವಿಡ್ ಕೇರ್ ಸೆಂಟರಿನಲ್ಲಿ ಮದುವೆಯ ಸಮಾರಂಭವೊಂದು ನಡೆದಿದ್ದು, ಇದೀಗ ಆ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

    19 ವರ್ಷದ ಫಾಜಿಯಾಗೆ ನಿಯಾಜ್ ಜೊತೆ ಮದುವೆ ನಿಗದಿಯಾಗಿತ್ತು. ಆದರೆ ಮದುವೆಗೆ ಒಂದು ದಿನ ಬಾಕಿ ಇರುವಾಗ ಫಾಜಿಯಾ ಕೋವಿಡ್ ಟೆಸ್ಟ್ ಮಾಡಿಸಿದ್ದು, ವರದಿಯಲ್ಲಿ ಪಾಸಿಟಿವ್ ಬಂದಿದೆ. ಹೀಗಾಗಿ ಫಾಜಿಯಾಳನ್ನು ಮಟ್ಟಂಚೇರಿಯ ಟೌನ್ ಹಾಲ್‍ನಲ್ಲಿ ಸ್ಥಾಪಿಸಲಾದ ಕೋವಿಡ್ ಕೇರ್ ಕೇಂದ್ರಕ್ಕೆ ಸೇರಿಸಲಾಗಿತ್ತು. ಇದರಿಂದ ಫಾಜಿಯಾ ಬೇಸರಗೊಂಡಿದ್ದಳು. ಆಕೆಯನ್ನು ಹುರಿದುಂಬಿಸಲು ಕೋವಿಡ್ ಆರೈಕೆ ಕೇಂದ್ರದ ಇತರೆ ಸಹವಾಸಿಗಳು ಮದುವೆ ಸಮಾರಂಭವನ್ನು ಏರ್ಪಡಿಸಿದ್ದರು.

    ಜ್ವರದಿಂದ ಬಳಲುತ್ತಿದ್ದ ಕಾರಣ ವಧು ಫಾಜಿಯಾ ಕೋವಿಡ್ ಟೆಸ್ಟ್ ಮಾಡಿಸಿದ್ದಳು. ಆದರೆ ವರದಿಯಲ್ಲಿ ಕೊರೊನಾ ಪಾಸಿಟಿವ್ ಬಂದಿತ್ತು. ನಾನು ಮದುವೆಗೆ ಉಡುಪುಗಳನ್ನು ಖರೀದಿಸಲು ಮನೆಯಿಂದ ಹೊರ ಹೋಗಿದ್ದೆ. ಆದರೆ ನನಗೆ ಕೊರೊನಾ ಪಾಸಿಟಿವ್ ಬಂದಿರುವುದು ತಿಳಿಯಿತು ಎಂದು ಫಾಜಿಯಾ ಹೇಳಿದ್ದಾಳೆ. ನಂತರ ಫಾಜಿಯಾಳನ್ನು ಕೋವಿಡ್ ಕೇರ್ ಸೆಂಟರ್‌ಗೆ ಸೇರಿಸಲಾಗಿತ್ತು. ಅವಳ ಮದುವೆಯನ್ನು ಮಸೀದಿಯಲ್ಲಿ ನಿರ್ಧರಿಸಲಾಗಿದ್ದರಿಂದ ವಧುವಿನ ಉಪಸ್ಥಿತಿಯು ಕಡ್ಡಾಯವಲ್ಲದ ಕಾರಣ ಅವರ ಕುಟುಂಬವು ಯೋಜಿಸಿದಂತೆ ಮದುವೆ ಸಮಾರಂಭವನ್ನು ಮುಂದುವರಿಸಲು ನಿರ್ಧರಿಸಿತ್ತು.

    ಇತ್ತ ಘಾಜಿಯಾ ಬೇಸರಗೊಂಡಿದ್ದಳು. ಈ ಬಗ್ಗೆ ಕೋವಿಡ್ ಸೆಂಟರಿನಲ್ಲಿದ್ದ ಸಹವಾಸಿಗಳು ತಿಳಿದುಕೊಂಡು ಆಕೆಯನ್ನು ಹುರಿದುಂಬಿಸುವ ಸಲುವಾಗಿ ಸರ್ಪ್ರೈಸ್ ಆಗಿ ಮದುವೆ ಸಮಾರಂಭವನ್ನು ಏರ್ಪಡಿಸಿದ್ದರು. ಅದರಂತೆಯೇ ಘಾಜಿಯಾ ತನ್ನ ವಿವಾಹದ ಉಡುಪನ್ನು ಧರಿಸಿ ಕೋವಿಡ್ ಆರೈಕೆ ಕೇಂದ್ರದ ಮಧ್ಯದಲ್ಲಿ ಕುಳಿತಿದ್ದಳು. ಇತರೆ ಸಹವಾಸಿಗಳು ಆಕೆಯ ಸುತ್ತಲೂ ಹಾಡಿ, ನಲಿಯುತ್ತ ಅವಳನ್ನು ಹುರಿದುಂಬಿಸಿದ್ದಾರೆ. ಇದೀಗ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

    ನಮ್ಮ ಆರೈಕೆ ಕೇಂದ್ರಕ್ಕೆ ಹಸ್ತಾಂತರಿಸುವಾಗ ಮರುದಿನ ಆಕೆಯ ಮದುವೆ ಇರುವ ನಗ್ಗೆ ಗೊತ್ತಾಯಿತು. ಈ ವಿಷಯವನ್ನು ಇತರ ರೋಗಿಗಳೊಂದಿಗೆ ಹಂಚಿಕೊಂಡಾಗ ಆಕೆಗೆ ಸಮಾರಂಭ ಏರ್ಪಡಿಸುವ ಬಗ್ಗೆ ಎಲ್ಲರೂ ಸಮ್ಮತಿಸಿದರು. ವಾರ್ಡ್ ಗಳಲ್ಲಿ ರೋಗಿಗಳ ಆತ್ಮಸ್ಥೈರ್ಯ ಹೆಚ್ಚಿಸುವ ಸಲುವಾಗಿ ಮನೋರಂಜನಾ ಕಾರ್ಯಕ್ರಮಗಳಿಗೆ ಅವಕಾಶ ನೀಡಲಾಗಿದೆ. ಹೀಗಾಗಿ ಎಲ್ಲ ರೋಗಿಗಳು ಸಮಾರಂಭದಲ್ಲಿ ಭಾಗವಹಿಸಿ ಸಂಭ್ರಮಿಸಿದ್ದಾರೆ ಎಂದು ಹೆಲ್ತ್ ಇನ್‍ಸ್ಪೆಕ್ಟರ್ ಕೆ. ಸುಧೀರ್ ತಿಳಿಸಿದ್ದಾರೆ.

    ಅವಳ ಮದುವೆಯನ್ನು ಮಸೀದಿಯಲ್ಲಿ ನಿರ್ಧರಿಸಲಾಗಿದ್ದರಿಂದ ವಧುವಿನ ಉಪಸ್ಥಿತಿ ಕಡ್ಡಾಯವಲ್ಲವೆಂದು ಆಕೆಯ ಸಂಬಂಧಿಕರು ತಿಳಿಸಿದ್ದರು. ಹೀಗಾಗಿ ಕೋವಿಡ್ ಸೆಂಟರಿನಲ್ಲಿ ಮದುವೆ ಸಮಾರಂಭವನ್ನು ಏರ್ಪಡಿಸಲಾಗಿತ್ತು. ಸಮಾರಂಭದ ಕೊನೆಯಲ್ಲಿ ಎಲ್ಲರೂ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೇ ಎಲ್ಲರಿಗೂ ಬಿರಿಯಾನಿ ಮತ್ತು ಸಿಹಿತಿಂಡಿಯ ವ್ಯವಸ್ಥೆಯನ್ನು ಆರೈಕೆ ಕೇಂದ್ರದ ರೋಗಿಗಳು ಏರ್ಪಡಿಸಿದ್ದರು.

    ಈ ದಿನವನ್ನು ನಾನು ನನ್ನ ಜೀವನದಲ್ಲಿ ಎಂದಿಗೂ ಮರೆಯುವುದಿಲ್ಲ. ನಾನು ದುಖಃದಲ್ಲಿದ್ದೆ. ನನ್ನನ್ನು ಖುಷಿಪಡಿಸಲು ಇವರು ಏರ್ಪಡಿಸಿದ ಸಮಾರಂಭವನ್ನು ನಾನೆಂದು ಮರೆಯಲಾರೆ ಎಂದು ಫಾಜಿಯಾ ಹೇಳಿದ್ದಾಳೆ.

  • ಹೊರಾಂಗಣದಲ್ಲಿ ಸಭೆ, ಸಮಾರಂಭ, ಮದ್ವೆ ಇಟ್ಟುಕೊಂಡ್ರೆ ಲೈಸೆನ್ಸ್ ರದ್ದು

    ಹೊರಾಂಗಣದಲ್ಲಿ ಸಭೆ, ಸಮಾರಂಭ, ಮದ್ವೆ ಇಟ್ಟುಕೊಂಡ್ರೆ ಲೈಸೆನ್ಸ್ ರದ್ದು

    ಬೆಂಗಳೂರು: ಶಿವಾಜಿನಗರ ವಲಯದಲ್ಲಿ ಹೊರಾಂಗಣ ಕಾರ್ಯಕ್ರಮಗಳನ್ನು ನಡೆಸುವುದನ್ನು ರದ್ದುಪಡಿಸಲಾಗಿದೆ. ಬಿಬಿಎಂಪಿಯ ಆಯುಕ್ತರ ಆದೇಶದ ಮೇರೆಗೆ ಕ್ವೀನ್ಸ್ ರಸ್ತೆ, ಶಿವಾಜಿನಗರ ವಲಯದ ಆರೋಗ್ಯ ವೈದ್ಯಾಧಿಕಾರಿ ಈ ನೋಟಿಸ್ ಹೊರಡಿಸಿದ್ದಾರೆ.

    ಕೊರೊನಾ ವೈರಸ್ ಹಾಗೂ ಕಾಲರಾ ಹಿನ್ನೆಲೆಯಲ್ಲಿ ಮದುವೆ, ಸಭೆ, ಸಮಾರಂಭಗಳನ್ನು ಹೋಟೆಲ್‍ಗಳು, ಕಲ್ಯಾಣ ಮಂಟಪಗಳು, ಸ್ಟಾರ್ ಹೋಟೇಲ್‍ಗಳಲ್ಲಿ ಜನರನ್ನು ಸೇರಿಸಿ ಕಾರ್ಯಕ್ರಮ ಹಮ್ಮಿಕೊಳ್ಳಬಾರದೆಂದು ಸೂಚಿಸಿದ್ದಾರೆ.

    ಒಂದು ವೇಳೆ ಆದೇಶದ ಬಳಿಕವೂ ಜನರನ್ನು ಸೇರಿಸಿ ಕಾರ್ಯಕ್ರಮ ನಡೆಸಿದರೆ ಉದ್ಯಮ ಪರವಾನಗಿ ರದ್ದುಪಡಿಸಲಾವುದು. ಜೊತೆಗೆ ಹೋಟೆಲ್, ಕಲ್ಯಾಣ ಮಂಟಪಗಳನ್ನು ಮುಚ್ಚಲಾಗುವುದು ಎಂದು ನೋಟಿಸ್‍ನಲ್ಲಿ ತಿಳಿಸಲಾಗಿದೆ.

    ಕರ್ನಾಟಕದಲ್ಲಿ ಈಗಾಗಲೇ ಕೊರೊನಾ ಸೋಂಕಿನಿಂದ ವೃದ್ಧನೊಬ್ಬ ಮೃತಪಟ್ಟಿದ್ದಾನೆ. ಹೀಗಾಗಿ ರಾಜ್ಯಾದ್ಯಂತ ಕೊರೊನಾ ವೈರಸ್ ಹರಡದಂತೆ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಆದ್ದರಿಂದ ಮದುವೆ, ಸಭೆ, ಸಮಾರಂಭ ನಡೆಸಬಾರದು ಎಂದು ಸೂಚಿಸಲಾಗಿದೆ.

  • ಓದಿನಲ್ಲಿ ನಾನು ಸಾಮಾನ್ಯ ವಿದ್ಯಾರ್ಥಿ, ಆದ್ರೆ ಜೀವನದಲ್ಲಿ ಒಳ್ಳೆಯ ವಿದ್ಯಾರ್ಥಿ: ರಾಕಿಭಾಯ್

    ಓದಿನಲ್ಲಿ ನಾನು ಸಾಮಾನ್ಯ ವಿದ್ಯಾರ್ಥಿ, ಆದ್ರೆ ಜೀವನದಲ್ಲಿ ಒಳ್ಳೆಯ ವಿದ್ಯಾರ್ಥಿ: ರಾಕಿಭಾಯ್

    ಚೆನ್ನೈ: ಸ್ಯಾಂಡಲ್‍ವುಡ್ ರಾಕಿಂಗ್ ಸ್ಟಾರ್ ಯಶ್ ಚೆನ್ನೈನ ಸತ್ಯಭಾಮಾ ವಿಶ್ವವಿದ್ಯಾಲಯದ ಸಮಾರಂಭಕ್ಕೆ ಹೋಗಿದ್ದರು. ಅಲ್ಲಿ ಯಶ್ ತಮಿಳಿನಲ್ಲಿ ವಿದ್ಯಾರ್ಥಿಗಳನ್ನು ಮಾತನಾಡಿಸಿದ್ದಾರೆ. ತಕ್ಷಣ ವಿದ್ಯಾರ್ಥಿಗಳು ರಾಕಿಭಾಯ್ ರಾಕಿಭಾಯ್ ಎಂದು ಘೋಷಣೆ ಕೂಗಿ ಅಭಿಮಾನದ ಹೊಳೆ ಹರಿಸಿದ್ದಾರೆ. ಇದನ್ನೂ ಓದಿ: ‘ಪ್ರಧಾನ ಮಂತ್ರಿ’ಯನ್ನ ಊರಿಗೆ ಬರಮಾಡಿಕೊಂಡ ರಾಕಿ ಭಾಯ್

    ಸಮಾರಂಭದಲ್ಲಿ ಮಾತನಾಡಿದ ಯಶ್, ತಮಿಳಿನಲ್ಲಿ ಹೇಗಿದ್ದೀರಾ ಎಂದು ಕೇಳಿದ್ದಾರೆ. ಅದಕ್ಕೆ ವಿದ್ಯಾರ್ಥಿಗಳು ದಿಲ್ ಖುಷ್ ಆಗಿದ್ದಾರೆ. ಆಗ ಒಬ್ಬ ನಟನಿಗೆ ಇದಕ್ಕಿಂತ  ಬೇರೆ ಏನು ಬೇಕು ಎಂದು ಯಶ್ ತಮಿಳಿನಲ್ಲಿ ಮಾತನಾಡಿದ್ದಾರೆ.

    ನೀವು ‘ಕೆಜಿಎಫ್ ಚಾಪ್ಟರ್ 1’ ನೋಡಿ ತುಂಬಾ ಇಷ್ಟ ಪಟ್ಟಿದ್ದೀರಿ. ‘ಚಾಪ್ಟರ್ 2’ ಬೇರೆ ಲೆವೆಲ್‍ನಲ್ಲಿ ಇರುತ್ತದೆ ನೋಡಿ. ವಿದ್ಯಾರ್ಥಿಗಳು ನಿಮ್ಮ ಕನಸನ್ನು ಹಿಂಬಾಲಿಸಬೇಕು. ನಿಮಗೆ ನನ್ನ ಬಾಲ್ಯ, ಶಿಕ್ಷಣ ಗೊತ್ತಿಲ್ಲ. ನಾನು ಸಾಮಾನ್ಯ ವಿದ್ಯಾರ್ಥಿ. ಆದರೆ ಜೀವನದಲ್ಲಿ ನಾನು ಒಳ್ಳೆಯ ವಿದ್ಯಾರ್ಥಿ ಎಂದು ಹೇಳಿದರು.

    ತಮಿಳಿನ ಮಕ್ಕಳು ಯಾರನ್ನು ಸುಲಭವಾಗಿ ಒಪ್ಪಿಕೊಳ್ಳುವುದಿಲ್ಲ. ಆದರೆ ಆದ್ರೆ ಒಮ್ಮೆ ಅವರಿಗೆ ಇಷ್ಟವಾದರೆ ಅದು ಬೇರೆ ಲೆವೆಲಿನಲ್ಲಿ ಇರುತ್ತದೆ ಎಂದು ಯಾರೋ ಹೇಳಿದರು. ನಿಮ್ಮ ಸಂಸ್ಕೃತಿ, ಊಟ ತುಂಬಾ ಚೆನ್ನಾಗಿದೆ ಎಂದು ಮಾತನಾಡಿದರು.

    ಸಮಾರಂಭಕ್ಕೆ ರಾಕಿಭಾಯ್ ನೋಡಲು ಸಾವಿರಾರು ವಿದ್ಯಾರ್ಥಿಗಳು ಬಂದಿದ್ದರು. ಅದರಲ್ಲೂ ಯಶ್ ತಮಿಳಿನಲ್ಲಿ ವಿದ್ಯಾರ್ಥಿಗಳನ್ನ ಮಾತನಾಡಿಸಿದ್ದಕ್ಕೆ ವಿದ್ಯಾರ್ಥಿಗಳು ತುಂಬಾ ಸಂತಸಪಟ್ಟಿದ್ದಾರೆ.

  • ಮೋದಿ ಪ್ರಮಾಣ ವಚನದ ದಿನವೇ ಮೈತ್ರಿ ಸರ್ಕಾರ ಬೀಳಿಸಲು ಮೂಹುರ್ತ ಫಿಕ್ಸ್?

    ಮೋದಿ ಪ್ರಮಾಣ ವಚನದ ದಿನವೇ ಮೈತ್ರಿ ಸರ್ಕಾರ ಬೀಳಿಸಲು ಮೂಹುರ್ತ ಫಿಕ್ಸ್?

    ನವದೆಹಲಿ: ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಪ್ರಮಾಣ ವಚನದ ದಿನವೇ ರಾಜ್ಯದ ಮೈತ್ರಿ ಸರ್ಕಾರ ಬೀಳಿಸಲು ಮೂಹುರ್ತ ಫಿಕ್ಸ್ ಆಗಿದೆ ಎಂಬ ಮಾತುಗಳು ಬಿಜೆಪಿ ವಲಯದಲ್ಲಿ ಕೇಳಿ ಬರುತ್ತಿದೆ.

    ರಾಜ್ಯ ಬಿಜೆಪಿ ಡಬಲ್ ಧಮಾಕದ ಸಂಭ್ರಮಕ್ಕೆ ಸಜ್ಜಾಗುತ್ತಿದೆ. ಮೋದಿ ದೊಡ್ಡ ದಿಗ್ವಿಜಯದೊಂದಿದೆ ಪ್ರಮಾಣ ವಚನ ಸ್ವೀಕರಿಸುವ ಸಮಾರಂಭದ ಅತಿ ದೊಡ್ಡ ಸಂತೋಷದ ಜೊತೆಗೆ ರಾಜ್ಯ ಮೈತ್ರಿ ಸರ್ಕಾರ ಉರುಳಿಸುವ ಮೂಹರ್ತವೂ ಅಂದೇ ನಿಗದಿ ಆಗುತ್ತದೆ ಎಂಬ ಡಬಲ್ ಸಂತೋಷದ ಗಳಿಗೆಯ ನಿರೀಕ್ಷೆಯಲ್ಲಿ ರಾಜ್ಯ ಬಿಜೆಪಿ ಪಾಳಯವಿದೆ ಎನ್ನಲಾಗಿದೆ.

    ಮೋದಿ ಪ್ರಮಾಣ ವಚನ ಸ್ವೀಕರಿಸುವ ಸಮಾರಂಭದಲ್ಲಿ ಕಾಂಗ್ರೆಸ್‍ನ ಅತೃಪ್ತ ಶಾಸಕರು ಹಾಗೂ ಪಕ್ಷೇತರ ಶಾಸಕರು ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಹೀಗೆ ಬಹಿರಂಗವಾಗಿ ಸಮಾರಂಭದಲ್ಲಿ ಕಾಣಿಸಿ ಕೊಳ್ಳುವ ಮೂಲಕ ತಾವು ಬಿಜೆಪಿ ಸೇರುವ ಸಂದೇಶವನ್ನು ರವಾನಿಸಲಿದ್ದಾರೆ ಎನ್ನಲಾಗುತ್ತಿದೆ.

    ಸಮಾರಂಭಕ್ಕೆ ಕಾಂಗ್ರೆಸ್‍ನ ಅತೃಪ್ತ ಶಾಸಕರನ್ನು ಮತ್ತು ಪಕ್ಷೇತರ ಶಾಸಕರನ್ನು ಕರೆ ತರುವ ಪ್ರಯತ್ನವನ್ನು ರಾಜ್ಯ ಬಿಜೆಪಿ ನಡೆಸಿದೆ. ಇದಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕೂಡ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ ಎನ್ನಲಾಗುತ್ತಿದೆ. ರಾಜ್ಯ ಬಿಜೆಪಿ ಪಾಳಯದ ಲೆಕ್ಕದಂತೆ ಅತೃಪ್ತ ಶಾಸಕರು ಮತ್ತು ಪಕ್ಷೇತರ ಶಾಸಕರು ಮೋದಿ ಅವರ ಪ್ರಮಾಣ ವಚನ ಸಮಾರಂಭಕ್ಕೆ ಬಂದರೆ ಅವತ್ತಿನಿಂದ ರಾಜ್ಯ ಸರ್ಕಾರಕ್ಕೆ ಕೌಂಟ್ ಡೌನ್ ಶುರುವಾಗುವ ಸಾಧ್ಯತೆ ಇದೆ.

    ಕಾಂಗ್ರೆಸ್‍ನ ಪ್ರಮುಖ ಅತೃಪ್ತ ಶಾಸಕ ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ಐದು ಅತೃಪ್ತ ಶಾಸಕರು ಈಗಾಗಲೇ ಸಭೆ ನಡೆಸಿದ್ದಾರೆ ಎಂಬ ಮಾಹಿತಿ ಇದೆ. ಇವರೆಲ್ಲಾ ಒಟ್ಟಾಗಿ ಮೋದಿ ಸಮಾರಂಭಕ್ಕೆ ಬಂದರೆ ಇನ್ನುಳಿದ ಅತೃಪ್ತ ಶಾಸಕರಿಗೆ ಪಕ್ಷ ಬಿಡಲು ಧೈರ್ಯ ಬರುತ್ತೆ ಎಂಬುದು ಬಿಜೆಪಿ ಲೆಕ್ಕಾಚಾರವಾಗಿದೆ. ಅಂದರೆ ಮೋದಿ ಪ್ರಮಾಣ ವಚನ ಸ್ವೀಕಾರದ ದಿನ ರಾಜ್ಯ ಮೈತ್ರಿ ಸರ್ಕಾರ ಬೀಳಿಸಲು ಮೂಹರ್ತ ನಿಶ್ಚಯ ಎಂಬ ಮಾತು ಬಿಜೆಪಿ ಪಾಳಯದಲ್ಲಿ ದಟ್ಟವಾಗಿ ಕೇಳಿ ಬರುತ್ತಿದೆ.

  • ಕೊಡಗಿನಲ್ಲಿ ಮದ್ವೆಗೆ ತಟ್ಟಿದ ಚುನಾವಣಾ ನೀತಿಸಂಹಿತೆ!

    ಕೊಡಗಿನಲ್ಲಿ ಮದ್ವೆಗೆ ತಟ್ಟಿದ ಚುನಾವಣಾ ನೀತಿಸಂಹಿತೆ!

    ಮಡಿಕೇರಿ: ತನ್ನ ಆಚಾರ, ವಿಚಾರ, ಪದ್ಧತಿ ಪರಂಪರೆಯಿಂದ ಪ್ರಸಿದ್ಧಯಾಗಿರುವ ಕೊಡಗಿನ ಜನತೆಯ ಮದುವೆ ಸಮಾರಂಭಕ್ಕೆ ನೀತಿಸಂಹಿತೆ ತಟ್ಟಿದೆ.

    ಸದ್ಯ ವಿವಾಹವಾಗಲು ಚೈತ್ರಕಾಲವಾಗಿರುವುದರಿಂದ ಜಿಲ್ಲೆಯಲ್ಲಿ ಮದುವೆಯ ಭರಾಟೆ ಜೋರಾಗಿದೆ. ಆದರೆ ಹೀಗೆ ನಡೆಯುತ್ತಿರುವ ಮದುವೆಗಳಿಗೆ ಒಂದು ರೀತಿಯ ಸಂಕಷ್ಟ ಎದುರಾಗಿದೆ. ಕೊಡಗಿನಲ್ಲಿ ಪ್ರತಿ ಮದುವೆ ಶುಭ ಸಮಾರಂಭಗಳಿಗೆ ಮದ್ಯಪಾನ ಮಾಡುವುದು ಇಲ್ಲಿನ ಸಂಸ್ಕೃತಿಯಲ್ಲಿ ಒಂದು ಭಾಗವೇ ಆಗಿ ಹೋಗಿದೆ. ಆದರೆ ಚುನಾವಣಾ ಆಯೋಗದ ನೀತಿ ಸಂಹಿತೆ ಕೊಡಗಿನ ಜನರಿಗೆ ತಲೆನೋವಾಗಿ ಪರಿಣಮಿಸಿದೆ.

    ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ನಿರ್ದೇಶನದಂತೆ ಈಗಾಗಲೇ ಅಬಕಾರಿ ಇಲಾಖೆಯಿಂದ ಕಲ್ಯಾಣ ಮಂಟಪಗಳಿಗೆ ಲಿಖಿತ ನೋಟಿಸ್ ಜಾರಿಗೊಳಿಸಿದ್ದು, ಕಲ್ಯಾಣ ಮಂಟಪ ಅಥವಾ ಶುಭ ಸಮಾರಂಭ ಸ್ಥಳಗಳಲ್ಲಿ ಮದ್ಯ ಸೇವನೆಗೆ ಅವಕಾಶ ನೀಡದಂತೆಯೂ, ಮದ್ಯ ಸಂಗ್ರಹ ಮಾಡಿ ಇಟ್ಟುಕೊಳ್ಳದಂತೆಯೂ ನಿರ್ದೇಶಿಸಿದೆ. ಮದುವೆ ಸೇರಿದಂತೆ ಶುಭ ಸಮಾರಂಭಗಳಲ್ಲಿ ಸಾಮಾನ್ಯವಾಗಿ ಕಿಕ್ಕೇರಿಸಿಕೊಳ್ಳುತ್ತಿದ್ದ ಮಂದಿ ಈ ನಿಯಮದಿಂದ ತುಂಬಾನೇ ಬೇಸರ ಮಾಡಿಕೊಳ್ಳುವಂತಾಗಿದೆ ಎಂದು ಅಬಕಾರಿ ಉಪ ನಿರೀಕ್ಷಕ ವೀರಣ್ಣ ಹೇಳಿದ್ದಾರೆ.

    ಚುನಾವಣೆ ನೀತಿ ಸಂಹಿತೆ ನಡುವೆಯೂ ಮದ್ಯ ಬಳಕೆಗೆ ಅವಕಾಶ ಬೇಕು ಎಂದ್ರೆ ಒಂದು ದಿನಕ್ಕೆ 11,500ರೂ ಹಣ ಸಂದಾಯ ಮಾಡಿ ಪರವಾನಿಗೆ ಪಡೆಯಬೇಕು ಎಂದು ಆದೇಶ ಮಾಡಲಾಗಿದೆ. ಈ ಮೊತ್ತ ಸರ್ಕಾರಕ್ಕೆ ಜಮೆಯಾಗಲಿದ್ದು, ವಾಪಸ್ ಪಡೆಯಲು ಅವಕಾಶ ಇರುವುದಿಲ್ಲ. ಚುನಾವಣೆ ಘೋಷಣೆಗೆ ಮುನ್ನವೇ ಜಿಲ್ಲೆಯ ಅನೇಕ ಕಡೆಗಳಲ್ಲಿ ವಿವಾಹ ಸಮಾರಂಭಗಳು ನಿಶ್ಚಯ ಆಗಿವೆ.

    ಸಾಮಾನ್ಯವಾಗಿ ಮದುವೆಯ ಮುನ್ನ ದಿನವಾದ ಚಪ್ಪರ ಹಾಗೂ ಮದುವೆ ದಿನ ಮದ್ಯವನ್ನು ನೀಡುವುದು ಹಿಂದಿನಿಂದಲೂ ನಡೆದುಕೊಂಡ ಬಂದ ಸಂಪ್ರದಾಯ. ಹೀಗಾಗಿ ಸದ್ಯ 2 ದಿನಕ್ಕೆ ಪರವಾನಿಗೆ ಬೇಕು ಅಂದ್ರೆ 23 ಸಾವಿರ ಹಣವನ್ನ ಅಬಕಾರಿ ಇಲಾಖೆಗೆ ಕಟ್ಟಬೇಕಾಗುತ್ತದೆ. ಈಗಿನ ಪರಿಸ್ಥಿತಿಯಲ್ಲಿ ಮದುವೆ ಮಂಟಪಗಳ ಬಾಡಿಗೆ ಹಾಗೂ ಇತರ ಖರ್ಚು ವೆಚ್ಚಗಳನ್ನು ಭರಿಸಿ ಶುಭ ಸಮಾರಂಭಗಳನ್ನು ನೆರವೇರಿಸಲು ಸಾಮಾನ್ಯ ಕುಟುಂಬಗಳು ಬವಣೆ ಪಡುತ್ತಿರುವಾಗ, ಹೆಚ್ಚುವರಿ ಸುಮಾರು 25 ಸಾವಿರ ಹಣವನ್ನ ಪಾವತಿಸುವುದು ನಮಗೆ ಕಷ್ಟವಾಗುತ್ತಿದೆ ಎಂದು ಸ್ಥಳೀಯ ನವೀನ್ ತಿಳಿಸಿದ್ದಾರೆ.

  • ಡಿಕೆ ಶಿವಕುಮಾರ್ ಶ್ರೀ ಕೃಷ್ಣನಿದ್ದಂತೆ: ಜಯಮಾಲಾ

    ಡಿಕೆ ಶಿವಕುಮಾರ್ ಶ್ರೀ ಕೃಷ್ಣನಿದ್ದಂತೆ: ಜಯಮಾಲಾ

    ಬೆಂಗಳೂರು: ಜಲಸಂಪನ್ಮೂಲ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ.ಶಿವಕುಮಾರ್ ಸಾಕ್ಷಾತ್ ಶ್ರೀ ಕೃಷ್ಣನಂತಿದ್ದಾರೆಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಜಯಾಮಾಲ ಹೇಳಿದ್ದಾರೆ.

    ರಾಜ್ಯ ಸರ್ಕಾರ ಆಯೋಜಿಸಿದ್ದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯಾವುದೇ ಸಂಧಾನ ಬಂದರೂ, ಹಗಲು ರಾತ್ರಿ ಎನ್ನದೇ ಡಿ.ಕೆ.ಶಿವಕುಮಾರ್ ಸಿದ್ಧರಿರುತ್ತಾರೆ. ಅಲ್ಲದೇ ಖುದ್ದು ಮಧ್ಯಸ್ಥಿಕೆ ವಹಿಸುವ ಮೂಲಕ ಕಾರ್ಯ ನಿರ್ವಹಿಸುತ್ತಾರೆ. ಅಚ್ಚುಕಟ್ಟಾಗಿ ಯಾವುದೇ ಕೆಲಸವನ್ನು ಶಿಸ್ತಿನಿಂದ ನಿರ್ವಹಿಸುತ್ತಾರೆ. ಹೀಗಾಗಿ ಅವರು ಸಾಕ್ಷಾತ್ ಶ್ರೀ ಕೃಷ್ಣ ಎಂದು ವೇದಿಕೆ ಮೇಲೆ ಡಿಕೆಶಿಯವರನ್ನು ಹಾಡಿ ಹೊಗಳಿದ್ದಾರೆ.

    ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ನಗರದ ರವೀಂದ್ರ ಕಲಾ ಕ್ಷೇತ್ರದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸಮಾರಂಭ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ 63 ಸಾಧಕರಿಗೆ ರಾಜ್ಯ ಸರ್ಕಾರದ ವತಿಯಿಂದ ಗೌರವಿಸುತ್ತಿದೆ. ಸಾಧಕರಿಗೆ 24 ಗ್ರಾಂ ಚಿನ್ನದ ಪದಕ ಹಾಗೂ 1 ಲಕ್ಷ ರೂಪಾಯಿ ನಗದು ಬಹುಮಾನವನ್ನು ನೀಡಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಗೌರವಿಸಿದ್ದಾರೆ.

    ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ, ಮಹಾಪೌರರಾದ ಗಂಗಾಬಿಕೆ ಮಲ್ಲಿಕಾರ್ಜುನ್, ಸಚಿವರಾದ ಡಿಕೆ ಶಿವಕುಮಾರ್, ಜಮೀರ್ ಅಹಮ್ಮದ್ ಹಾಗೂ ವಿಧಾನಪರಿಷತ್ ಸದಸ್ಯರು ಶರವಣ ಸೇರಿದಂತೆ ಗಣ್ಯಾತಿಗಣ್ಯರು ಪಾಲ್ಗೊಂಡಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಗೆಳೆಯನ ವಿವಾಹ ಸಮಾರಂಭದಲ್ಲಿ ಕೆಎಲ್ ರಾಹುಲ್ ಸಂಭ್ರಮ

    ಗೆಳೆಯನ ವಿವಾಹ ಸಮಾರಂಭದಲ್ಲಿ ಕೆಎಲ್ ರಾಹುಲ್ ಸಂಭ್ರಮ

    ಬೆಂಗಳೂರು: ಟೀಂ ಇಂಡಿಯಾ ಆಟಗಾರ ಕನ್ನಡಿಗ ಕೆಎಲ್ ರಾಹುಲ್ ತಮ್ಮ ಬಹುದಿನಗಳ ಗೆಳೆಯ ಮಯಾಂಕ್ ಮದುವೆ ಸಮಾರಂಭದಲ್ಲಿ ಭಾಗವಹಿಸಿ ಸಂಭ್ರಮಾಚರಣೆ ನಡೆಸಿದ್ದಾರೆ.

    ಗೆಳೆಯನ ವಿವಾಹ ಸಮಾರಂಭದಲ್ಲಿ ಭಾಗವಹಿಸಿದ್ದ ರಾಹುಲ್‍ರ ಕೆಲ ಫೋಟೋಗಳನ್ನು ರಾಹುಲ್ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಫೋಸ್ಟ್ ಮಾಡಿದ್ದು, ನವ ಜೋಡಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ.

    ನಗರದಲ್ಲಿ ಸೋಮವಾರ ನಡೆದ ವಿವಾಹ ಸಮಾರಂಭದಲ್ಲಿ ಟೀಂ ಇಂಡಿಯಾ `ಎ’ ತಂಡದ ಬ್ಯಾಟ್ಸ್ ಮನ್ ಮಯಾಂಕ್ ಅಗರವಾಲ್ ತಮ್ಮ ಬಹುಕಾಲದ ಗೆಳತಿ ಆಶಿತಾ ಸೂದ್‍ರೊಂದಿಗೆ ಸಪ್ತಪದಿ ತುಳಿದರು. ಈ ಸಮಾರಂಭಕ್ಕೆ ಟೀಂ ಇಂಡಿಯಾ ಹಲವು ಕ್ರಿಕೆಟ್ ಆಟಗಾರರು ಭಾಗವಹಿಸಿ ಶುಭಕೋರಿದ್ದರು. ಕಾರ್ಯಕ್ರಮದಲ್ಲಿ ರಾಹುಲ್ ಅವರೊಂದಿಗೆ ಭಾಗವಹಿಸಿದ್ದ ಕರ್ನಾಟಕ ತಂಡದ ವೇಗದ ಬೌಲರ್ ರೋನಿಟ್ ಮೋರ್ ಸಾಥ್ ನೀಡಿದ್ದಾರೆ.

    ಪ್ರಮುಖವಾಗಿ ರಾಹುಲ್ ಅಭಿಮಾನಿಗಳು ಪೋಸ್ಟ್ ಮಾಡಿರುವ ಫೋಟೋ ಒಂದರಲ್ಲಿ ಮುಂದಿನ ವಿವಾಹ ಸರದಿ ಯಾರದ್ದು ಎಂದು ಚರ್ಚೆ ನಡೆಸುತ್ತಿದ್ದಾಗಿ ಬರೆದುಕೊಂಡಿದ್ದಾರೆ. 2018 ರ ಐಪಿಎಲ್ ಮುಕ್ತಾಯದ ಬಳಿಕ ಕೆಎಲ್ ರಾಹುಲ್ ಬಾಲಿವುಟ್ ನಟಿ ನಿಧಿ ಅಗರವಾಲ್ ಅವರೊಂದಿಗೆ ಮುಂಬೈನಲ್ಲಿ ಸುತ್ತಾಟ ನಡೆಸಿದ್ದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಕುರಿತು ಸ್ಪಷ್ಟನೆ ನೀಡಿದ್ದ ರಾಹುಲ್ ನಾವಿಬ್ಬರು ಸ್ನೇಹಿತರು. ತಮ್ಮ ಗೆಳತಿಯ ಬಗ್ಗೆ ಯಾರಿಂದಲೂ ಮುಚ್ಚಿಡುವ ಅಗತ್ಯವಿಲ್ಲ ಎಂದು ಹೇಳಿದ್ದರು.