Tag: Certificate

  • ‘ಓ ಮೈ ಗಾಡ್’ ವಯಸ್ಕರ ಚಿತ್ರ: ಅಕ್ಷಯ್ ಕುಮಾರ್ ಸಿನಿಮಾಗೆ ‘ಎ’ ಸರ್ಟಿಫಿಕೇಟ್

    ‘ಓ ಮೈ ಗಾಡ್’ ವಯಸ್ಕರ ಚಿತ್ರ: ಅಕ್ಷಯ್ ಕುಮಾರ್ ಸಿನಿಮಾಗೆ ‘ಎ’ ಸರ್ಟಿಫಿಕೇಟ್

    ಬಾಲಿವುಡ್ (Bollywood) ಹೆಸರಾಂತ ನಟ ಅಕ್ಷಯ್ ಕುಮಾರ್ (Akshay Kumar) ನಟನೆಯ ‘ಓ ಮೈ ಗಾಡ್ 2’ (Oh My God 2)  ಸಿನಿಮಾ ವಿವಾದಿತ ಅಂಶಗಳು ಇರುವ ಕಾರಣದಿಂದಾಗಿ ಕೇಂದ್ರ ಚಲನಚಿತ್ರ ಪ್ರಮಾಣೀಕೃತ ಮಂಡಳಿ (ಸಿ.ಬಿ.ಎಫ್.ಸಿ) ಸೆನ್ಸಾರ್ ಪತ್ರವನ್ನು (Censor) ಕೊಡಲು ನಿರಾಕರಿಸಿತ್ತು (Denial). ಜೊತೆಗೆ ಈ ಸಿನಿಮಾವನ್ನು ಪರಿಶೀಲನಾ ಸಮಿತಿಗೆ ಕಳುಹಿಸಿ ಕೊಡಲಾಗಿತ್ತು. ಪರಿಶೀಲನಾ ಸಮಿತಿಯು ಕೊನೆಗೂ ಚಿತ್ರಕ್ಕೆ ಪ್ರಮಾಣ ಪತ್ರ ದಯಪಾಲಿಸಿದೆ.

    ಸಿಬಿಎಫ್ಸಿ ಸಿನಿಮಾದ ಒಟ್ಟು 20 ಕಡೆ ದೃಶ್ಯಗಳನ್ನು ಕತ್ತರಿಸಲು ತಿಳಿಸಲಾಗಿತ್ತು. ಕೆಲವು ಕಡೆ ಮಾತುಗಳನ್ನು ಮ್ಯೂಟ್ ಮಾಡಲು ಹೇಳಲಾಗಿತ್ತು. ಇಷ್ಟೆಲ್ಲ ಮಾಡಿದರೂ ಚಿತ್ರಕ್ಕೆ ವಯಸ್ಕರು ನೋಡಬಹುದಾದ ಸಿನಿಮಾ ಎಂದು ‘ಎ’ ಸರ್ಟಿಫಿಕೇಟ್ ನೀಡಲಾಗಿತ್ತು. ಇದೀಗ ಒಂದಷ್ಟು ಬದಲಾವಣೆಯನ್ನು ಮಾಡಿಕೊಳ್ಳಲು ಹೇಳುವ ಮೂಲಕ ಪರಿಶೀಲನಾ ಸಮಿತಿಯೂ ‘ಎ’ ಪ್ರಮಾಣ ಪತ್ರ ನೀಡಿದೆ. ಹಾಗಾಗಿ 18 ವರ್ಷ ತುಂಬಿದವರು ಮಾತ್ರ ಈ ಸಿನಿಮಾ ನೋಡಬಹುದಾಗಿದೆ.

    ಅಕ್ಷಯ್ ಕುಮಾರ್ ಈ ಸಿನಿಮಾದಲ್ಲಿ ಶಿವನ ಪಾತ್ರ ಮಾಡಿದ್ದಾರೆ. ಈ ಪಾತ್ರದ ಮೂಲಕ ಲೈಂಗಿಕ ಶಿಕ್ಷಣವನ್ನು ಹೇಳಲು ಹೊರಟಿದ್ದಾರೆ ಎಂದು ಹೇಳಲಾಗುತ್ತಿದೆ. ಹಾಗಾಗಿಯೇ ಸೆನ್ಸಾರ್ ಪತ್ರವನ್ನು ನೀಡಲು ನಿರಾಕರಿಸಿತ್ತು. ಲೈಂಗಿಕ ಶಿಕ್ಷಣದ ಕುರಿತಾಗಿ ಕಥಾ ಹಂದರ ಹೊಂದಿರುವ ಈ ಸಿನಿಮಾದಲ್ಲಿ ಇಂತಹ ವಿಷಯವನ್ನು ಶಿವನ ಮೂಲಕ ಹೇಳಲು ಹೊರಟಿರುವುದು ಸೆನ್ಸಾರ್ ಮಂಡಳಿಯನ್ನು ಇಕ್ಕಟ್ಟಿಗೆ ಸಿಲುಕಿಸಿತ್ತು.

    ಹತ್ತು ವರ್ಷಗಳ ಹಿಂದೆ ರಿಲೀಸ್ ಆಗಿದ್ದ ಓ ಮೈ ಗಾಡ್ ಸಿನಿಮಾದಲ್ಲಿ ಅಕ್ಷಯ್ ಕುಮಾರ್ ಅವರು ಕೃಷ್ಣನಾಗಿ (Krishna) ಕಾಣಿಸಿಕೊಂಡಿದ್ದರು. ಈ ಬಾರಿ ಅವರು ಶಿವನ (Shiva) ಅವತಾರವೆತ್ತಿದ್ದಾರೆ. ಈ ಹಿಂದೆ ಸಿನಿಮಾದ ಮೋಷನ್ ಪೋಸ್ಟರ್ ಬಿಡುಗಡೆಯಾಗಿತ್ತು. ಅದನ್ನು ಅಕ್ಷಯ್ ಅಭಿಮಾನಿಗಳು ಅಪಾರವಾಗಿ ಮೆಚ್ಚಿದ್ದರು.

     

    ಹೇಳಿ ಕೇಳಿ ಇದೊಂದು ಕಾಮಿಡಿ ಸಿನಿಮಾ. ಶಿವನ ರೂಪದಲ್ಲಿ ಬಂದಿರುವ ಅಕ್ಷಯ್, ಯಾವೆಲ್ಲ ಲೀಲೆಗಳನ್ನು ಪರದೆಯ ಮೇಲೆ ಆಡುತ್ತಾರೋ ಕಾದು ನೋಡಬೇಕು. ಟೀಸರ್ ನಲ್ಲಿಯೂ ಹಲವು ಕಾಮಿಡಿ ಅಂಶಗಳು ಇದ್ದು, ಇಡೀ ಸಿನಿಮಾ ಹಾಸ್ಯದ ರಸದೌತಣವನ್ನು ನೀಡುವುದು ಪಕ್ಕಾ ಅನ್ನುವಂತಿದೆ ರಿಲೀಸ್ ಆದ ಟೀಸರ್.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸೆನ್ಸಾರ್ ಸುಳಿಯಲ್ಲಿ ಅಕ್ಷಯ್ ನಟನೆಯ ‘ಓ ಮೈ ಗಾಡ್ 2’ ವಿಲವಿಲ

    ಸೆನ್ಸಾರ್ ಸುಳಿಯಲ್ಲಿ ಅಕ್ಷಯ್ ನಟನೆಯ ‘ಓ ಮೈ ಗಾಡ್ 2’ ವಿಲವಿಲ

    ಬಾಲಿವುಡ್ ಹೆಸರಾಂತ ನಟ ಅಕ್ಷಯ್ ಕುಮಾರ್ ನಟನೆಯ ‘ಓ ಮೈ ಗಾಡ್ 2’ ಸಿನಿಮಾಗೆ ಈವರೆಗೂ ಸೆನ್ಸಾರ್ ಮಂಡಳಿಯು ಪ್ರಮಾಣ ಪತ್ರ ನೀಡಿಲ್ಲ. ಹೀಗಾಗಿ ಸಹಜವಾಗಿಯೇ ಚಿತ್ರತಂಡಕ್ಕೆ ಆತಂಕ ಎದುರಾಗಿದೆ. ಆಗಸ್ಟ್ 11 ರಂದು ‘ಓ ಮೈಗಾಡ್ 2’ ಸಿನಿಮಾ ರಿಲೀಸ್ ಮಾಡುವುದಾಗಿ ಚಿತ್ರತಂಡ ಘೋಷಣೆ ಮಾಡಿತ್ತು. ಆದರೆ, ಈ ಚಿತ್ರಕ್ಕೆ ಕೇಂದ್ರ ಚಲನಚಿತ್ರ ಪ್ರಮಾಣೀಕೃತ ಮಂಡಳಿ (ಸಿ.ಬಿ.ಎಫ್.ಸಿ) ಸೆನ್ಸಾರ್ ಪತ್ರವನ್ನು (Censor) ಕೊಡಲು ನಿರಾಕರಿಸಿದೆ (Denial). ಜೊತೆಗೆ ಈ ಸಿನಿಮಾವನ್ನು ಪರಿಶೀಲನಾ ಸಮಿತಿಗೆ ಕಳುಹಿಸಿ ಕೊಡಲಾಗಿದೆ. ಹಾಗಾಗಿ ಚಿತ್ರ ಬಹುಶಃ ತಡವಾಗಬಹುದು ಎನ್ನುವುದು ಬಿಟೌನ್ ಮಾತು.

    ಅಕ್ಷಯ್ ಕುಮಾರ್ ಈ ಸಿನಿಮಾದಲ್ಲಿ ಶಿವನ ಪಾತ್ರ ಮಾಡಿದ್ದಾರೆ. ಈ ಪಾತ್ರದ ಮೂಲಕ ಲೈಂಗಿಕ ಶಿಕ್ಷಣವನ್ನು ಹೇಳಲು ಹೊರಟಿದ್ದಾರೆ ಎಂದು ಹೇಳಲಾಗುತ್ತಿದೆ. ಹಾಗಾಗಿಯೇ ಸೆನ್ಸಾರ್ ಪತ್ರವನ್ನು ನೀಡಲು ನಿರಾಕರಿಸಲಾಗಿದೆಯಂತೆ. ಲೈಂಗಿಕ ಶಿಕ್ಷಣದ ಕುರಿತಾಗಿ ಕಥಾ ಹಂದರ ಹೊಂದಿರುವ ಈ ಸಿನಿಮಾದಲ್ಲಿ ಇಂತಹ ವಿಷಯವನ್ನು ಶಿವನ ಮೂಲಕ ಹೇಳಲು ಹೊರಟಿರುವುದು ಸೆನ್ಸಾರ್ ಮಂಡಳಿಯನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಆದರೆ, ಈ ಹಿಂದೆ ರಿಲೀಸ್ ಆಗಿರುವ ಟೀಸರ್ ಗೆ ಸೆನ್ಸಾರ್ ಪತ್ರ ಸಿಕ್ಕಿದೆ.

     ‘ಓ ಮೈ ಗಾಡ್ 2’ (Oh My God 2) ಸಿನಿಮಾದ ಟೀಸರ್ ಮೊನ್ನೆಯಷ್ಟೇ ರಿಲೀಸ್ ಆಗಿದೆ. ಸಿನಿಮಾದಲ್ಲಿನ ಅಕ್ಷಯ್ (Akshay Kumar) ಅವತಾರಕ್ಕೆ ಅಭಿಮಾನಿಗಳು ಜೈ ಹೋ ಎಂದಿದ್ದಾರೆ. 2012ರಲ್ಲಿ ಈ ಸಿನಿಮಾದ ಮೊದಲ ಭಾಗ ಬಿಡುಗಡೆಯಾಗಿತ್ತು. ಇದೀಗ ಪಾರ್ಟ್ 2 ಸಿದ್ಧವಾಗಿದ್ದು ಅಕ್ಷಯ್ ಪಾತ್ರ ಕೂಡ ಬದಲಾಗಿದೆ. ಹತ್ತು ವರ್ಷಗಳ ಹಿಂದೆ ರಿಲೀಸ್ ಆಗಿದ್ದ ಓ ಮೈ ಗಾಡ್ ಸಿನಿಮಾದಲ್ಲಿ ಅಕ್ಷಯ್ ಕುಮಾರ್ ಅವರು ಕೃಷ್ಣನಾಗಿ (Krishna) ಕಾಣಿಸಿಕೊಂಡಿದ್ದರು. ಈ ಬಾರಿ ಅವರು ಶಿವನ (Shiva) ಅವತಾರವೆತ್ತಿದ್ದಾರೆ. ಮೊನ್ನೆಯಷ್ಟೇ ಈ ಸಿನಿಮಾದ ಮೋಷನ್ ಪೋಸ್ಟರ್ ಬಿಡುಗಡೆಯಾಗಿತ್ತು. ಅದನ್ನು ಅಕ್ಷಯ್ ಅಭಿಮಾನಿಗಳು ಅಪಾರವಾಗಿ ಮೆಚ್ಚಿದ್ದರು. ಈಗಿನ ಟೀಸರ್ ಅನ್ನು ಅಷ್ಟೇ ಮೆಚ್ಚಿಕೊಂಡಿದ್ದಾರೆ. ಇದನ್ನೂ ಓದಿ:‘BAD’ ಸಿನಿಮಾದಲ್ಲಿ ಪ್ರೀತಿಯ ಪ್ರತಿನಿಧಿಯಾದ ಅಪೂರ್ವ ಭಾರದ್ವಾಜ್

    ಹೇಳಿ ಕೇಳಿ ಇದೊಂದು ಕಾಮಿಡಿ ಸಿನಿಮಾ. ಶಿವನ ರೂಪದಲ್ಲಿ ಬಂದಿರುವ ಅಕ್ಷಯ್, ಯಾವೆಲ್ಲ ಲೀಲೆಗಳನ್ನು ಪರದೆಯ ಮೇಲೆ ಆಡುತ್ತಾರೋ ಕಾದು ನೋಡಬೇಕು. ಟೀಸರ್ ನಲ್ಲಿಯೂ ಹಲವು ಕಾಮಿಡಿ ಅಂಶಗಳು ಇದ್ದು, ಇಡೀ ಸಿನಿಮಾ ಹಾಸ್ಯದ ರಸದೌತಣವನ್ನು ನೀಡುವುದು ಪಕ್ಕಾ ಅನ್ನುವಂತಿದೆ ರಿಲೀಸ್ ಆದ ಟೀಸರ್.

     

    ಟೀಸರ್ ನೋಡಿ ಕೆಲವರು ಧಾರ್ಮಿಕ ನಂಬಿಕೆಗಳಿಗೆ ಧಕ್ಕೆ ಆಗದಂತೆ ಎಚ್ಚವಹಿಸಿ ಎಂದು ಸಲಹೆ ನೀಡಿದರೆ, ಧಾರ್ಮಿಕ ಭಾವನೆಗಳಿಗೆ ಧಕ್ಕೆ ಬಂದರೆ ಬೈಕಾಟ್ ಮಾಡುವುದಾಗಿಯೂ ಕೆಲವರು ಕಾಮೆಂಟ್ ಮಾಡಿದ್ದಾರೆ. ಅಂದಹಾಗೆ ಅಕ್ಷಯ್ ಕುಮಾರ್ ಜೊತೆ ಈ ಸಿನಿಮಾದಲ್ಲಿ ಯಾಮಿ ಗೌತಮ್, ಪಂಕಜ್ ತ್ರಿಪಾಠಿ ಸೇರಿದಂತೆ ಹಲವರು ತಾರಾಗಣದಲ್ಲಿ ಇದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ದುಡ್ಡು ಕೊಟ್ರೆ ಟ್ರೈನಿಂಗ್‌ ಇಲ್ಲದೇ ಸಿಗುತ್ತೆ ಬ್ಯೂಟಿಪಾರ್ಲರ್ ಸರ್ಟಿಫಿಕೇಟ್..!

    ದುಡ್ಡು ಕೊಟ್ರೆ ಟ್ರೈನಿಂಗ್‌ ಇಲ್ಲದೇ ಸಿಗುತ್ತೆ ಬ್ಯೂಟಿಪಾರ್ಲರ್ ಸರ್ಟಿಫಿಕೇಟ್..!

    ಬೆಂಗಳೂರು: ಬ್ಯೂಟಿ ಪಾರ್ಲರ್‌ಗೆ ಹೆಣ್ಣುಮಕ್ಕಳು ಹೋಗೋದು ಕಾಮನ್. ಕೆಲವರಂತೂ ತಿಂಗಳಿಗೆ ಒಂದು ಬಾರಿಯಾದ್ರೂ ಹೋಗೇ ಹೋಗ್ತಾರೆ. ಆದರೆ ಈಗ ಶಾಕಿಂಗ್ ವಿಷಯ ಬಯಲಾಗಿದೆ.

    ಬ್ಯೂಟಿಷಿಯನ್ಸ್ ಗಳು ನೋಂದಾಯಿತ ಬ್ಯೂಟಿಪಾರ್ಲರ್ ನಲ್ಲಿ ವರ್ಷಗಟ್ಟಲೇ ಟ್ರೈನಿಂಗ್‌ ಮಾಡಿ ಪ್ರಾಕ್ಟಿಕಲ್ ತರಬೇತಿಯನ್ನೂ ಪಡೆದುಕೊಂಡು ಅದಾದ ಬಳಿಕ ಅವರಿಗೆ ಸರ್ಟಿಫಿಕೇಟ್ ನೀಡಲಾಗುತ್ತದೆ. ಆದರೀಗ ನೋಂದಾಯಿತ ಪಾರ್ಲರ್ ಅಸೋಸಿಯೇಷನ್ ಹೆಸರಿನಲ್ಲಿಯೇ 10 ಸಾವಿರ ದುಡ್ಡು ಕೊಟ್ರೇ ಯಾರಿಗೆ ಬೇಕಾದ್ರೂ, ಎಷ್ಟು ಬೇಕಾದ್ರೂ ಪಟಾಫಟ್ ಅಂತಾ ಟ್ರೈನಿಂಗ್‌ ಕೇಳದೇ ಸರ್ಟಿಫಿಕೇಟ್ ಕೊಡುವ ಏಜೆಂಟರು ಹುಟ್ಟುಕೊಂಡಿದ್ದಾರೆ ಎನ್ನುವ ಸ್ಫೋಟಕ ಮಾಹಿತಿ ಬಯಲಾಗಿದೆ. ಇದನ್ನೂ ಓದಿ: ಹನುಮನ ಜನ್ಮಸ್ಥಳಕ್ಕಾಗಿ ನಿಲ್ಲದ ರಾಜ್ಯಗಳ ಕ್ಯಾತೆ – ಹನುಮಂತ ಹುಟ್ಟಿದ್ದು ಗೋವಾದಲ್ಲಿ ಎಂದ ಶ್ರೀನಿವಾಸ್ ಖಲಾಪ್

    ಸ್ವತಃ ಈ ಆರೋಪ ಮಾಡ್ತಾ ಇರೋದು ಕರ್ನಾಟಕ ಬ್ಯೂಟಿ ಪಾರ್ಲರ್ ಅಸೋಸಿಯೇಷನ್. ಇವರದ್ದೇ ಸಂಸ್ಥೆಯ ಹೆಸರು ಬಳಸಿಕೊಂಡು ಸರ್ಟಿಫಿಕೇಟ್ ಮಾಡಿ ಕೆಲ ಏಜೆಂಟ್‌ರು ಮಾರಾಟ ಮಾಡುತ್ತಾ ಇದ್ದಾರೆ ಎಂದು ಸಂಘಟನೆ ಆರೋಪಿಸಿದೆ. ಈ ಸಂಬಂಧ ಮಾತನಾಡಿರುವ ಆಡಿಯೋ ಸಹ ಲೀಕ್ ಆಗಿದೆ. ಇದನ್ನೂ ಓದಿ: ಗೋ ಶಾಲೆಯಲ್ಲಿ ಒಂದು ತಿಂಗಳ ಕಾಲ ಸೇವೆ – ಷರತ್ತು ವಿಧಿಸಿ ಆರೋಪಿಗೆ ಜಾಮೀನು

    ಈ ರೀತಿ ಬೇಕಾಬಿಟ್ಟಿ ದುಡ್ಡಿಗೆ ಸರ್ಟಿಫಿಕೇಟ್ ಮಾರಾಟ ಮಾಡೋದ್ರಿಂದ ಸೈಡ್‌ಎಫೆಕ್ಟ್ ಉಂಟಾಗುತ್ತದೆ. ಸಾಮಾನ್ಯವಾಗಿ ಆಯಾಯ ಚರ್ಮಕ್ಕೆ ಹೊಂದುವ ಪ್ರಾಡೆಕ್ಟ್ ಬಳಕೆ ಮಾಡಬೇಕು. ಕೆಲವು ಬಿಪಿ ಶುಗರ್ ಸಮಸ್ಯೆ ಇರೋರಿಗೆ ಕೆಲ ಪ್ರಾಡೆಕ್ಟ್ ಅಲರ್ಜಿ ಇರುತ್ತೆ. ಇದೆಲ್ಲವನ್ನು ತರಬೇತಿ ಪಡೆದುಕೊಂಡವರಿಗೆ ಅಷ್ಟೇ ಅರ್ಥವಾಗುತ್ತದೆ. ಆದರೆ ಹೀಗೆ ಟ್ರೈನಿಂಗ್‌ ಇಲ್ಲದೇ ಸರ್ಟಿಫಿಕೇಟ್ ಕೊಡುವ ದಂಧೆಯಿಂದ ನಿಜವಾಗಿಯೂ ತರಬೇತಿ ಪಡೆದವರಿಗೆ ಸಮಸ್ಯೆಯಾಗಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.

    ಆಡಿಯೋ ನಲ್ಲಿ ಏನಿದೆ?

    • ಏಜೆಂಟ್ – ಅದು ಮಾಡಿಸಿರೋದು ಏಜೆಂಟ್
      ಅನಿತಾ – ಯಾರು?
    • ಏಜೆಂಟ್ – ಅದಕ್ಕೆ ಒಬ್ರು ಏಜೆಂಟ್ ರ‍್ತಾರೆ ಅವ್ರು ಮಾಡಿಸೋದು
      ಅನಿತಾ – ಹೋ ಅದಕ್ಕೆ ಏಜೆಂಟ್ ಬೇರೆ ರ‍್ತಾರಾ?
    • ಅನಿತಾ – ನಮ್ಗೆ ಬೇಕು ಅಂದ್ರೆ?
      ಏಜೆಂಟ್ – ಅದನ್ನು ಹತ್ತುಸಾವಿರ ಕೊಟ್ಟುಮಾಡಿಸಿರೋದು
    • ಏಜೆಂಟ್ – ನಿಮ್ಗೆ ಬೇಕಾದ್ರೇ ಹೇಳಿ ಮಾಡಿಸಿಕೊಡ್ತೀನಿ ನಾನು
      ಅನಿತಾ – ಹಂಗಾದ್ರೇ ಬೇಕು 2 ಸರ್ಟಿಫಿಕೇಟ್
    • ಏಜೆಂಟ್ – 2 ಯಾಕೆ 10 ಕೊಡ್ತೀನಿ ಬೇಕಾದ್ರೇ

  • ಇನ್ಮುಂದೆ ಗ್ರಾಮ ಪಂಚಾಯ್ತಿಯಲ್ಲೇ ಸಿಗಲಿದೆ ಮದುವೆ ಸರ್ಟಿಫಿಕೇಟ್: ಸರ್ಕಾರ ಆದೇಶ

    ಇನ್ಮುಂದೆ ಗ್ರಾಮ ಪಂಚಾಯ್ತಿಯಲ್ಲೇ ಸಿಗಲಿದೆ ಮದುವೆ ಸರ್ಟಿಫಿಕೇಟ್: ಸರ್ಕಾರ ಆದೇಶ

    ಬೆಂಗಳೂರು: ಇನ್ನು ಮುಂದೆ ಗ್ರಾಮ ಪಂಚಾಯ್ತಿಯಲ್ಲೇ ಮದುವೆ ಸರ್ಟಿಫಿಕೇಟ್ ಸಿಗಲಿದೆ. ಈ ಸಂಬಂಧ ಇಂದು ಸರ್ಕಾರ ಅಧಿಕೃತ ಆದೇಶವೊಂದನ್ನು ಹೊರಡಿಸಿದೆ.

    ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಡಿಯಲ್ಲಿ ಸರ್ಕಾರ ವಿವಾಹ ನೊಂದಣಿ ಅಧಿಕಾರವನ್ನು ಪಿಡಿಓಗಳಿಗೆ ಸರ್ಕಾರ ನೀಡಿದೆ. ಹೀಗಾಗಿ ಗ್ರಾಮ ಪಂಚಾಯ್ತಿ ಮಟ್ಟದಲ್ಲಿ ಇನ್ನು ಮುಂದೆ ಮದುವೆ ನೋಂದಣಿಗೆ ಅವಕಾಶ ನೀಡಲಾಗುತ್ತಿದೆ. ಇದನ್ನೂ ಓದಿ: ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಸಿಎಂ ಇಬ್ರಾಹಿಂ ಅಧಿಕಾರ ಸ್ವೀಕಾರ

    ಇಷ್ಟು ದಿ ಸಬ್ ರಿಜಿಸ್ಟರ್ ಆಫೀಸ್ ನಲ್ಲಿ ಮದುವೆ ನೋಂದಣಿಗೆ ಅವಕಾಶ ಇತ್ತು. ಮದುವೆ ನಡೆದ ಸ್ಥಳ ಅಥವಾ ಪತಿ-ಪತ್ನಿಯರು ವಾಸಿಸುವ ಸ್ಥಳದ ಅಧಿಕಾರ ವ್ಯಾಪ್ತಿ ಹೊಂದಿರುವ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ನೋಂದಣಿ ಮಾಡಿಸಬೇಕಿತ್ತು. ಅದಕ್ಕೆ ಅಗತ್ಯವಾದ ಅರ್ಜಿ ನಮೂನೆ ಅದೇ ಕಚೇರಿಯಲ್ಲಿ ದೊರೆಯುತ್ತಿತ್ತು. ಇಲ್ಲವೇ ಅದನ್ನು ಇಂಟರ್ನೆಟ್ ನಿಂದ ಡೌನ್ ಲೋಡ್ ಮಾಡಿಕೊಳ್ಳಬಹುದಾಗಿತ್ತು.

    ಈ ಅರ್ಜಿಯನ್ನು ಎಚ್ಚರಿಕೆಯಿಂದ ತುಂಬಿ ನಂತರ ಮೂವರು ಸಾಕ್ಷಿಗಳು (ಸ್ನೇಹಿತರು, ಬಂಧುಗಳು) ಸಹಿ ಮಾಡಬೇಕಿತ್ತು. ಈ ಅರ್ಜಿಗೆ ವಧು-ವರ ಕೂಡ ಅಹಿ ಮಾಡಿ, ನಂತರ ಅದಕ್ಕೆ ಮೊಹರು ಹಾಕಿ ರಿಜಿಸ್ಟ್ರಾರ್ ಸಹಿ ಮಾಡುತ್ತಿದ್ದರು. ಆದರೆ ಇನ್ಮುಂದೆ ಗ್ರಾಮ ಪಂಚಾಯತಿ ಪಿಡಿಓಗೆ ಮದುವೆ ನೋಂದಣಿ ಅಧಿಕಾರವನ್ನು ಸರ್ಕಾರ ಕೊಟ್ಟಿದೆ.

  • ಬಿಡಿಸಿ ಸೀಟ್ ಗೆದ್ದು, ಸರ್ಟಿಫಿಕೇಟ್ ಸ್ವೀಕರಿಸಿಲು ಮಂಟಪ ಬಿಟ್ಟು ಹೋದ ವಧು

    ಬಿಡಿಸಿ ಸೀಟ್ ಗೆದ್ದು, ಸರ್ಟಿಫಿಕೇಟ್ ಸ್ವೀಕರಿಸಿಲು ಮಂಟಪ ಬಿಟ್ಟು ಹೋದ ವಧು

    ಲಕ್ನೋ: ಉತ್ತರ ಪ್ರದೇಶದಲ್ಲಿ ನಡೆದ ಪಂಚಾಯತ್ ಚುನಾವಣೆಯಲ್ಲಿ ಬ್ಲಾಕ್ ಡೆವಲಪ್‍ಮೆಂಟ್ ಕೌನ್ಸಿಲ್ ಸ್ಥಾನವನ್ನು ಗೆದ್ದಿರುವ ವಿಚಾರ ತಿಳಿದ ವಧು, ಮದುವೆ ಸಮಾರಂಭವನ್ನು ಅರ್ಧದಲ್ಲಿಯೇ ಬಿಟ್ಟು, ಮತ ಎಣಿಕೆ ಕೇಂದ್ರಕ್ಕೆ ಧಾವಿಸಿ ತನ್ನ ವಿಜೇತ ಪ್ರಮಾಣಪತ್ರವನ್ನು ಸ್ವೀಕರಿಸಿದ್ದಾರೆ.

    ಈ ಘಟನೆ ಭಾನುವಾರ ನಡೆದಿದ್ದು, ಪೂನಂ ಶರ್ಮಾ(28) ಎಂಬವರು ಹೂವಿನ ಹಾರವನ್ನು ವರನೊಂದಿಗೆ ವಿನಿಮಯ ಮಾಡಿಕೊಳ್ಳುತ್ತಿದ್ದ ವೇಳೆ ಈ ಸಿಹಿ ಸುದ್ದಿ ತಿಳಿದುಬಂದಿದೆ. ವಿಶೇಷವೆಂದರೆ ಪೂನಂ ಅವರ ವಿವಾಹವನ್ನು ಮೇ 2ರಂದು ನಿಗದಿ ಪಡಿಸಲಾಗಿತ್ತು ಮತ್ತು ಪಂಚಾಯತ್ ಚುನಾಣೆಯ ಎಣಿಕೆಯನ್ನೂ ಕೂಡ ಮೇ 2 ರಂದೇ ನಿಗದಿ ಪಡಿಸಲಾಗಿತ್ತು.

    ಪೂನಂ ಶರ್ಮಾ ಮದುವೆ ಮಂಟಪದಿಂದ 20 ಕಿ.ಮೀ ದೂರದಲ್ಲಿರುವ ಎಣಿಕೆ ಕೇಂದ್ರಕ್ಕೆ ಭಾನುವಾರ ರಾತ್ರಿ 9.30ಕ್ಕೆ ತಲುಪಿ ಪ್ರಮಾಣಪತ್ರವನ್ನು ಸ್ವೀಕರಿಸಿದರು. ಈ ವೇಳೆ ಅವರು ವಧುವಿನ ಉಡುಪು ಗುಲಾಬಿ ಬಣ್ಣದ ಮಾಸ್ಕ್ ಧರಿಸಿರುವುದನ್ನು ಕಂಡು ಅಲ್ಲಿದ್ದವರು ಕಂಡು ಬೆರಗಾದರು. ಅಲ್ಲದೆ ಪ್ರಮಾಣ ಪತ್ರವನ್ನು ಅಧಿಕಾರಿಗಳಿಂದ ಸ್ವೀಕರಿಸುತ್ತಿರುವ ಫೋಟೋವನ್ನು ಸೆರೆ ಹಿಡಿಯಲಾಗಿದೆ. ಸದ್ಯ ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

    ನಾನು ಈಗ ಬಿಡಿಸಿ ಸದಸ್ಯೆಯಾಗಿರುವುದು ನನ್ನ ಮದುವೆಗೆ ಸಿಕ್ಕ ಅತ್ಯುತ್ತಮ ಉಡುಗೊರೆಯಾಗಿದೆ. ಈ ಕ್ಷಣವನ್ನು ನಾನು ಎಂದಿಗೂ ಮರೆಯಲು ಸಾಧ್ಯವಿಲ್ಲ. ವರ್ಮಾಲಾ ಮೊದಲು ನಾನು 31 ಮತಗಳಿಂದ ಚುನಾವಣೆಯಲ್ಲಿ ಗೆದ್ದಿದ್ದೇನೆ. ನನ್ನ ಸೋದರ ಅಳಿಯಂದಿರು ನನಗೆ ಪ್ರಮಾಣಪತ್ರವನ್ನು ಸ್ವೀಕರಿಸಲು ಮದುವೆ ಮಂಟಪದಿಂದ ಹೊರಗಡೆ ಹೋಗಲು ಅವಕಾಶ ಮಾಡಿಕೊಟ್ಟರು. ನನ್ನ ಗೆಲುವಿನಿಂದ ಹಳ್ಳಿಯವರೆಲ್ಲ ಸಂತಸದಿಂದ ಇದ್ದಾರೆ ಎಂದು ಹೇಳಿದರು.

    ನಂತರ ಗೆದ್ದ ಬ್ಯಾಡ್ಜ್‌ನೊಂದಿಗೆ ಎಣಿಕೆ ಕೇಂದ್ರದಿಂದ ಪೂನಂ ಶರ್ಮಾ ಮಂಟಪಕ್ಕೆ ಹಿಂದಿರುಗಿದರು. ನಂತರ ಉಳಿದ ಮದುವೆಯ ಶಾಸ್ತ್ರಗಳನ್ನು ಮುಂದುವರೆಸಲಾಯಿತು.

  • ಬೆಂಗಳೂರಲ್ಲಿ ದಂಡ ದಂಡ – ಪೊಲೀಸ್ , ಮಾರ್ಷಲ್ ಆಯ್ತು ಈಗ ಆರ್‌ಟಿಒ ಸರದಿ

    ಬೆಂಗಳೂರಲ್ಲಿ ದಂಡ ದಂಡ – ಪೊಲೀಸ್ , ಮಾರ್ಷಲ್ ಆಯ್ತು ಈಗ ಆರ್‌ಟಿಒ ಸರದಿ

    ಬೆಂಗಳೂರು: ಇಲ್ಲಿಯವರೆಗೆ ಸಂಚಾರ ನಿಯಮ ಉಲ್ಲಂಘನೆ ಮಾಡಿದರೆ ಟ್ರಾಫಿಕ್‌ ಪೊಲೀಸರು ದಂಡ ಹಾಕುತ್ತಿದ್ದರು. ಇದಾದ ಬಳಿಕ ಕೊರೊನಾ ಅವಧಿಯಲ್ಲಿ ಮಾಸ್ಕ್‌ ಹಾಕದಿದ್ದರೆ ನಗರದಲ್ಲಿ ಮಾರ್ಷಲ್‌ಗಳು 250 ರೂ. ದಂಡ ಹಾಕುತ್ತಿದ್ದಾರೆ. ಈಗ ರಸ್ತೆ ಮತ್ತು ಸಾರಿಗೆ ಇಲಾಖೆ(ಆರ್‌ಟಿಒ) ಅಧಿಕಾರಿಗಳು ವಾಹನಗಳನ್ನು ಅಡ್ಡಗಟ್ಟಿ ದಂಡ ಹಾಕುತ್ತಿದ್ದಾರೆ.

    ನಂಬರ್ ಪ್ಲೇಟ್ ,  ಅಂತರ್‌ ರಾಜ್ಯ ತೆರಿಗೆ,  ಲಗೇಜ್ ಸರಿಯಾಗಿಲ್ಲ, ಫಿಟ್ ನೆಸ್ ಸರ್ಟಿಫಿಕೇಟ್ ಇಲ್ಲದವರಿಗೆ ದಂಡ ಹಾಕಲಾಗುತ್ತಿದೆ.  ಅಷ್ಟೇ ಅಲ್ಲದೇ  ಪದೇ ರೂಲ್ಸ್ ಬ್ರೇಕ್ ಮಾಡಿದ್ದರೆ ಅವರ ಡಿಎಲ್ ಸಹ‌ ರದ್ದಾಗಲಿದೆ.

    ಹೆಲ್ಮೆಟ್ ಧರಿಸದ ಸವಾರರ ಚಾಲನಾ ಪರವಾನಗಿಯನ್ನು (ಡಿಎಲ್‌) ಮೂರು ತಿಂಗಳು ಅಮಾನತು ಮಾಡುವ ಸರ್ಕಾರದ ಅದೇಶ ಹೊರಬಿದ್ದ ಬೆನ್ನಲ್ಲೇ ವಿಶೇಷ ಕಾರ್ಯಾಚರಣೆಯನ್ನು ಸಾರಿಗೆ ಇಲಾಖೆ ಅಧಿಕಾರಿಗಳು ಆರಂಭಿಸಿದ್ದಾರೆ.

    ಟಿನ್ ಫ್ಯಾಕ್ಟರಿ ಸಮೀಪ, ಗೊರಗುಂಟೆಪಾಳ್ಯ, ಫೋರಂ ಮಾಲ್‌, ಸುಮನಹಳ್ಳಿ ಜಂಕ್ಷನ್, ಕನಕಪುರ ರಸ್ತೆ, ಮೈಸೂರು ರಸ್ತೆ, ಬನ್ನೇರುಘಟ್ಟ ರಸ್ತೆ, ಡೈರಿ ವೃತ್ತ, ಭಟ್ಟರಹಳ್ಳಿ, ಚಂದಾಪುರ ಸರ್ಕಲ್, ದೇವನಹಳ್ಳಿ ಸೇರಿ 21 ‍ಪ್ರಮುಖ ಜಂಕ್ಷನ್‌ಗಳನ್ನು ಅಧಿಕಾರಿಗಳು ಗುರುತಿಸಿದ್ದಾರೆ.

    ಸಾರಿಗೆ ಇಲಾಖೆಯ ನಗರ ವಿಭಾಗದ ಜಂಟಿ ಆಯುಕ್ತ ಕೆ.ಟಿ. ಹಾಲಸ್ವಾಮಿ ಪ್ರತಿಕ್ರಿಯಿಸಿ, ವಾಹನಗಳನ್ನು ತಡೆದು ತಪಾಸಣೆ  ಮಾಡಲು ಸಾರಿಗೆ ಇಲಾಖೆಗೆ ಮೊದಲೇ ಅಧಿಕಾರ ಇತ್ತು. ದ್ವಿಚಕ್ರ ವಾಹನ ಸವಾರರ ಪ್ರಾಣ ರಕ್ಷಣೆ ಮಾಡುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮತ್ತು ಸರ್ಕಾರದ ಆದೇಶದಂತೆ ಸದ್ಯ ವಿಶೇಷ ಕಾರ್ಯಾಚರಣೆ ನಡೆಸಲಾಗುತ್ತಿದೆ. ಈ ಕಾರ್ಯಾಚರಣೆಗೆ ವಿಶೇಷ ತಂಡ ರಚಿಸಲಾಗಿದೆ ಎಂದು ತಿಳಿಸಿದ್ದಾರೆ.

  • ಪೊಲೀಸರ ಸೀಲನ್ನೇ ನಕಲಿ ಮಾಡಿ ಸರ್ಟಿಫಿಕೇಟ್ – ಖತರ್ನಾಕ್ ಗ್ಯಾಂಗ್ ಅಂದರ್

    ಪೊಲೀಸರ ಸೀಲನ್ನೇ ನಕಲಿ ಮಾಡಿ ಸರ್ಟಿಫಿಕೇಟ್ – ಖತರ್ನಾಕ್ ಗ್ಯಾಂಗ್ ಅಂದರ್

    – 5 ರಿಂದ 10 ಸಾವಿರಕ್ಕೆ ಒಂದು ಪ್ರಮಾಣ ಪತ್ರ

    ಹಾಸನ: ರಾಜ್ಯದ ಬಹುತೇಕ ಪೊಲೀಸ್ ಠಾಣೆಗಳ ನಕಲಿ ಪೊಲೀಸ್ ಸೀಲು ಬಳಸಿ ಪ್ರಮಾಣಪತ್ರ ಮಾಡಿಕೊಡುತ್ತಿದ್ದ ಆರೋಪದ ಮೇಲೆ ಹಾಸನ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.

    ಹಾಸನ ತಾಲೂಕಿನ ಶೆಟ್ಟಿಹಳ್ಳಿ ಗ್ರಾಮದ ಪರಮೇಶ್, ಮಹೇಶ, ಶ್ರೀಕಾಂತ್, ಪಾಂಡುರಂಗ ಮತ್ತು ಮಾದಪ್ಪ ಎಂಬ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಖಾಸಗಿ ಕಂಪನಿಗಳಲ್ಲಿ ಹುದ್ದೆಗೆ ಸೇರಲು ಸ್ಥಳೀಯ ಪೊಲೀಸ್ ಠಾಣೆಯ ಪ್ರಮಾಣಪತ್ರ ಬೇಕಾಗಿರುತ್ತದೆ. ಇದನ್ನೇ ಬಂಡವಾಳ ಮಾಡಿಕೊಂಡ ಪರಮೇಶ್, ಅಭ್ಯರ್ಥಿಗಳಿಂದ ಹಣ ಪಡೆದು ನಕಲಿ ಪೊಲೀಸ್ ಪ್ರಮಾಣಪತ್ರ ತಯಾರಿಸಿ ಕೊಡುತ್ತಿದ್ದ ಎನ್ನಲಾಗಿದೆ.

    ಒಂದು ಪ್ರಮಾಣಪತ್ರಕ್ಕೆ 5 ರಿಂದ 10 ಸಾವಿರ ಹಣ ಪಡೆದು ನಗರದ ಎಲ್ಲಾ ಪೊಲೀಸ್ ಠಾಣೆಯ ನಕಲಿ ಸೀಲ್ ಮಾಡಿಸಿಕೊಂಡು ಪ್ರಮಾಣಪತ್ರ ನೀಡುತ್ತಿದ್ದರು. ಇದಲ್ಲದೇ ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳ ನಕಲಿ ಸೀಲನ್ನು ಬಳಸಿ ನಕಲಿ ಸಹಿ ಮಾಡಿಕೊಡುತ್ತಿದ್ದರು. ಇದೊಂದು ದೊಡ್ಡ ಜಾಲವೇ ಇದ್ದು, ತಡವಾಗಿ ಬೆಳಕಿಗೆ ಬಂದಿದೆ. ಸದ್ಯ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

    ಈ ಜಾಲದಲ್ಲಿ ಮತ್ತಷ್ಟು ಮಂದಿ ಭಾಗಿಯಾಗಿರುವ ಶಂಕೆ ಮೇರೆಗೆ ನಾಲ್ವರನ್ನು ವಿಚಾರಣೆ ಮಾಡುತ್ತಿದ್ದಾರೆ. ಘಟನೆ ಸಂಬಂಧ ಹಾಸನ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ವಿಮಾನ ಪ್ರಯಾಣಕ್ಕೆ ವೈದ್ಯರ ಪ್ರಮಾಣಪತ್ರ, ಮಾಸ್ಕ್, ಗ್ಲೌಸ್ ಕಡ್ಡಾಯ?

    ವಿಮಾನ ಪ್ರಯಾಣಕ್ಕೆ ವೈದ್ಯರ ಪ್ರಮಾಣಪತ್ರ, ಮಾಸ್ಕ್, ಗ್ಲೌಸ್ ಕಡ್ಡಾಯ?

    ನವದೆಹಲಿ: ಮುಂದಿನ ಕೆಲ ತಿಂಗಳುಗಳ ಕಾಲ ವಿಮಾನ ಪ್ರಯಾಣಕ್ಕೆ ವೈದ್ಯರ ಸರ್ಟಿಫಿಕೇಟ್ ಕಡ್ಡಾಯವಾಗುವ ಸಾಧ್ಯತೆಗಳು ಕಂಡು ಬಂದಿದೆ. ಡಾಕ್ಟರ್ ಪ್ರಮಾಣ ಪತ್ರದ ಜೊತೆಗೆ ಪ್ರಯಾಣದ ವೇಳೆ ಗ್ಲೌಸ್, ಮಾಸ್ಕ್ ಕಡ್ಡಾಯ ಮಾಡುವ ಚಿಂತನೆ ಕೇಂದ್ರ ಸರ್ಕಾರದ ಮಟ್ಟದಲ್ಲಿ ನಡೆದಿದೆ.

    ಲಾಕ್‍ಡೌನ್ ಅವಧಿ ಅಂತ್ಯವಾಗಲು ಐದು ದಿನಗಳು ಬಾಕಿ ಉಳಿದುಕೊಂಡಿದೆ. ಈ ನಡುವೆ ದೇಶಿಯ ಮತ್ತು ಅಂತರಾಷ್ಟ್ರೀಯ ವಿಮಾನ ಹಾರಾಟ ಪುನಾರಂಭಗೊಳಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ಇದಕ್ಕಾಗಿ ನಿಯಮಗಳನ್ನು ಸಿದ್ಧಪಡಿಸಲಾಗುತ್ತಿದೆ.

    ನಿಯಮಗಳ ಸಿದ್ಧಪಡಿಸುವ ನಿಟ್ಟಿನಲ್ಲಿ ವೈದ್ಯರು, ವಿಮಾನ ಕಂಪನಿಗಳ ಸಿಇಒಗಳು, ಕೇಂದ್ರ ಸರ್ಕಾರದ ಅಧಿಕಾರಿಗಳಿರುವ ಸಮ್ಮುಖದಲ್ಲಿ ತಾಂತ್ರಿಕ ಸಮಿತಿಯೊಂದನ್ನು ರಚನೆ ಮಾಡಲಾಗಿದ್ದು, ಇಲ್ಲಿ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ.

    ಮಾಹಿತಿಗಳ ಪ್ರಕಾರ. ವಿಮಾನಗಳ ಹಾರಾಟಕ್ಕೆ ಅವಕಾಶ ನೀಡಿದ ಮೇಲೆ ಕನಿಷ್ಠ ಮೂರು ತಿಂಗಳು ಕಾಲ ವೈದ್ಯರ ಪ್ರಮಾಣಪತ್ರ, ಮಾಸ್ಕ್, ಗ್ಲೌಸ್, ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಯಮಗಳ ಬಗ್ಗೆ ಚರ್ಚೆ ನಡೆಯುತ್ತಿದೆ. ಬಹುತೇಕ ದೇಶಿಯ ಮತ್ತು ಅಂತಾರಾಷ್ಟ್ರೀಯ ಪ್ರಯಾಣಕ್ಕೆ ಈ ನಿಯಮಗಳು ಅನ್ವಯವಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

  • ತಹಶೀಲ್ದಾರ್ ಸೇರಿ ನಾಲ್ಕು ಅಧಿಕಾರಿಗಳ ವಿರುದ್ಧ ಅಟ್ರಾಸಿಟಿ ಕೇಸ್

    ತಹಶೀಲ್ದಾರ್ ಸೇರಿ ನಾಲ್ಕು ಅಧಿಕಾರಿಗಳ ವಿರುದ್ಧ ಅಟ್ರಾಸಿಟಿ ಕೇಸ್

    ಗದಗ: ಜಾತಿ ಪ್ರಮಾಣಪತ್ರ ವಿಚಾರಕ್ಕೆ ಸಂಬಂಧಿಸಿದಂತೆ ತಹಶೀಲ್ದಾರ್ ಸೇರಿದಂತೆ ಕಂದಾಯ ಇಲಾಖೆಯ ನಾಲ್ಕು ಜನ ಅಧಿಕಾರಿಗಳ ವಿರುದ್ಧ ಅಟ್ರಾಸಿಟಿ (ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ವಿರುದ್ಧದ ದೌರ್ಜನ್ಯ ತಡೆ) ಕಾಯ್ದೆಯ ಅಡಿ ಕೇಸ್ ದಾಖಲಾಗಿರುವ ಘಟನೆ ಲಕ್ಷ್ಮೇಶ್ವರದಲ್ಲಿ ನಡೆದಿದೆ.

    ತಹಶೀಲ್ದಾರ್ ಬ್ರಮರಾಂಭ ಗುಬ್ಬಿಶೆಟ್ಟಿ, ಕಂದಾಯ ಅಧಿಕಾರಿ ಎಸ್.ಎಸ್ ಪಾಟೀಲ್, ಗ್ರಾಮ ಲೆಕ್ಕಾಧಿಕಾರಿಗಳಾದ ಪ್ರವೀಣ್ ಭರಣಿ ಮತ್ತು ಹವಳದ ಎಂಬವರ ವಿರುದ್ಧ ಕೇಸ್ ದಾಖಲಾಗಿದೆ. ತಾಲೂಕಿನ ಬಾಲೆಹೊಸೂರ ಗ್ರಾಮದ ಗಂಟಿಚೋರ್ ಸಮುದಾಯದ ನಾಲ್ವರು ಈ ಜಾತಿ ನಿಂದನೆ ಕೇಸ್ ದಾಖಲಿಸಿದ್ದಾರೆ.

    ಗಂಟಿಚೋರ್ ಸಮುದಾಯವರಿಗೆ ಎಸ್‍ಸಿ ಜಾತಿ ಪ್ರಮಾಣಪತ್ರ ನೀಡುವಂತೆ ಕೇಳಿದ್ದಾರೆ. ಆದರೆ ಗಂಟಿಚೊರ್ ಸಮುದಾಯ ಪರಿಶಿಷ್ಟ ಜಾತಿಗೆ ಒಳಪಡಲ್ಲ, ಪ್ರವರ್ಗ-1 ರ ವ್ಯಾಪ್ತಿಗೆ ಬರುತ್ತದೆ ಎಂಬ ವಾದ-ಪ್ರತಿವಾದಗಳು ಅನೇಕ ವರ್ಷಗಳಿಂದ ಕೇಳಿಬರುತ್ತಿದೆ. ಈ ಹಿನ್ನೆಲೆಯಲ್ಲಿ ಬಾಲೆಹೊಸೂರು ಗ್ರಾಮದ ಅನಂತಕುಮಾರ್ ಕಟ್ಟಿಮನಿ ಸೇರಿದಂತೆ ಅಧಿಕಾರಿಗಳ ವಿರುದ್ಧ ಜಾತಿ ನಿಂದನೆ ಕೇಸ್ ದಾಖಲಾಗಿದೆ. ಕರ್ತವ್ಯಕ್ಕೆ ಅಡ್ಡಿ ಮಾಡಿದ್ದಾರೆ ಎಂದು ತಹಶೀಲ್ದಾರರು ಸಹ ಕೌಂಟರ್ ಕೇಸ್ ಮಾಡಿದ್ದಾರೆ.

    ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಎರಡು ಕಡೆಯಿಂದ ಪ್ರಕರಣ ದಾಖಲಾಗಿದೆ. ಕರ್ತವ್ಯ ಸ್ಥಗಿತಗೊಳಿಸಿ ಡಿಸಿ ಕಚೇರಿ ಎದುರು ಕಂದಾಯ ಹಾಗೂ ಗ್ರಾಮಲೆಕ್ಕಾಧಿಕಾರಿಗಳು ಪ್ರತಿಭಟನೆ ಮಾಡಿ ನಂತರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಎರಡು ಪ್ರಕರಣ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಡಿಸಿ ಎಂ.ಜಿ ಹಿರೇಮಠ ಭರವಸೆ ನೀಡಿದ್ದಾರೆ.

  • ದಾಖಲೆ ಪತ್ರ ದೃಢೀಕರಿಸಲು 50 ರೂಪಾಯಿಗೆ ಕೈಯೊಡ್ಡುವ ವೈದ್ಯಾಧಿಕಾರಿ!

    ದಾಖಲೆ ಪತ್ರ ದೃಢೀಕರಿಸಲು 50 ರೂಪಾಯಿಗೆ ಕೈಯೊಡ್ಡುವ ವೈದ್ಯಾಧಿಕಾರಿ!

    ತುಮಕೂರು: ದಾಖಲೆ ಪತ್ರ ದೃಢೀಕರಣ ಮಾಡಲು ಜಿಲ್ಲೆಯಲ್ಲಿ ವೈದ್ಯಾಧಿಕಾರಿಯೊಬ್ಬರು 50 ರೂಪಾಯಿಗೆ ಕೈವೊಡ್ಡಿದ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ.

    ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಶೆಟ್ಟಿಕೆರೆ ಸ್ಥಾನಿಕ ವೈದ್ಯಾಧೀಕಾರಿ ಡಾ.ರಾಧಿಕಾ ಅವರ ಲಂಚಾವತಾರದ ವಿಡಿಯೋ ವೈರಲ್ ಆಗಿದೆ. ಕೆಲವು ದಿನಗಳ ಹಿಂದೆ ವೃದ್ಧರೊಬ್ಬರ ವಯಸ್ಸಿನ ಪತ್ರದ ದೃಢೀಕರಣಕ್ಕಾಗಿ ಡಾ.ರಾಧಿಕಾ ಬಳಿ ಬಂದಿದ್ದರು. ಈ ವೇಳೆ ದೃಢೀಕರಣ ಪತ್ರಕ್ಕೆ ಸಹಿ ಹಾಕಲು ವೈದ್ಯೆ 50 ರೂ. ಲಂಚ ಕೇಳಿದ್ದಾರೆ. ಆಗ ವೃದ್ಧರ ಜೊತೆ ಬಂದ ವ್ಯಕ್ತಿ ವೈದ್ಯರಿಗೆ 500 ರೂ. ಮುಖಬೆಲೆಯ ನೋಟ್ ನೀಡಿದ್ದಾರೆ. ಆದ್ರೆ ವೈದ್ಯೆ ಕೇವಲ 50. ರೂ. ಪಡೆದು, ಉಳಿದ 450 ರೂ. ವಾಪಸ್ ಕೊಟ್ಟಿದ್ದಾರೆ.

    ಅಲ್ಲದೆ ದೃಢೀಕರಣ ಪತ್ರಕ್ಕೆ ಸಹಿ ಹಾಕಿದ್ದಕ್ಕೆ “ನಿನ್ನ ಬಾಯಲ್ಲಿ ಒಂದು ಮಾತು ಬರುತ್ತಿಲ್ಲವಲ್ಲಾ ಸೈನ್ ಹಾಕಿದಕ್ಕೆ ಹಣ ಕೊಡಬೇಕು ಅಂತ” ಎಂದು ಕೇಳಿ ವೈದ್ಯೆ ಹಣ ಪಡೆದಿದ್ದಾರೆ. ಈ ದೃಶ್ಯವನ್ನು ಸ್ಥಳದಲ್ಲಿದ್ದವರು ತಮ್ಮ ಮೊಬೈಲ್‍ನಲ್ಲಿ ಸೆರೆ ಹಿಡಿದಿದ್ದು, ಸಾಮಾಜಿಕ ಜಾಲತಾಣಗಲಲ್ಲಿ ಹರಿಬಿಟ್ಟಿದ್ದಾರೆ. ಈ ಮೂಲಕ ವೈದ್ಯೆಯ ಅಸಲಿಯತ್ತು ಬಟಾಬಯಲಾಗಿದೆ.