Tag: CET Exam

  • ಸಿಇಟಿ ಬಳಿಕ ಕಾಲೇಜು ಅಡ್ಮಿಷನ್‌ಗೂ QR ಕೋಡ್ ಕಣ್ಗಾವಲು

    ಸಿಇಟಿ ಬಳಿಕ ಕಾಲೇಜು ಅಡ್ಮಿಷನ್‌ಗೂ QR ಕೋಡ್ ಕಣ್ಗಾವಲು

    – ಸೀಟ್ ಬ್ಲಾಕ್ ದಂಧೆ ತಡೆಗೆ ಕೆಇಎಯಿಂದ ಹದ್ದಿನ ಕಣ್ಣು

    ಬೆಂಗಳೂರು: ಇತ್ತೀಚಿಗೆ ನಡೆದ ಸಿಇಟಿ ಪರೀಕ್ಷೆಯಲ್ಲಿ (CET Exam) ಕ್ಯೂಆರ್ ಕೋಡ್ (QR Code) ಕಣ್ಗಾವಲಿನ ಮೂಲಕ ಕೆಇಎ (KEA) ಹದ್ದಿನ ಕಣ್ಣು ಇಟ್ಟಿತ್ತು. ಇದೀಗ ಅದನ್ನೇ ಮುಂದುವರಿಸಿಕೊಂಡು, ಕಾಲೇಜು ಅಡ್ಮಿಷನ್ ಪ್ರಕ್ರಿಯೆಯಲ್ಲಿಯೂ ಕ್ಯೂಆರ್ ಕೋಡ್ ಬಳಸಲು ಮುಂದಾಗಿದೆ.

    ಕರ್ನಾಟಕ ಪರೀಕ್ಷಾ ಪ್ರಾಧಿಕಾರ (Karnataka Examination Authority) ಇದೀಗ ಮೊದಲ ಬಾರಿಗೆ ಡಿಜಿಟಲ್ ರೂಪದಲ್ಲಿ ಅಡ್ಮಿಷನ್ ಪ್ರಕ್ರಿಯೆ ನಡೆಸಲು ಮುಂದಾಗಿದೆ. ಸೀಟ್ ಬ್ಲಾಕ್ ದಂಧೆ ತಡೆಯೋದಕ್ಕೆ ಕೆಇಎ ಹೊಸ ತಂತ್ರಜ್ಞಾನ ಅಳವಡಿಸಿಕೊಳ್ಳುತ್ತಿದೆ. ಇದಕ್ಕೂ ಮುನ್ನ ಏ.15,16 ಹಾಗೂ 17ರಂದು ನಡೆದ ಸಿಇಟಿ ಪರೀಕ್ಷೆಯಲ್ಲಿ ಕೆಇಎ ಕ್ಯೂಆರ್ ಕೋಡ್ ತಂತ್ರಜ್ಞಾನ ಬಳಸಿ, ಯಶಸ್ವಿಯಾಗಿತ್ತು.ಇದನ್ನೂ ಓದಿ: ವಿವಾದ ಜೋರಾಗುತ್ತಿದ್ದಂತೆ ಕಾಂಗ್ರೆಸ್‌ ಗಾಯಬ್ ಪೋಸ್ಟರ್‌ ಡಿಲೀಟ್‌ – ಇಲ್ಲಿದೆ ಇನ್‌ಸೈಡ್‌ ಸ್ಟೋರಿ

    ಹಂಚಿಕೆಯಾಗುವ ವೃತ್ತಿಪರ ಕೋರ್ಸ್‌ಗಳಲ್ಲಿ ಒಂದೇ ಒಂದು ಸೀಟು ಅಕ್ರಮ ಆಗದಂತೆ ನೋಡಿಕೊಳ್ಳಲು ಕೆಇಎ ಈ ಮಾಸ್ಟರ್ ಪ್ಲ್ಯಾನ್ ಮಾಡಿದೆ.

    ಕಾಲೇಜ್ ಅಡ್ಮಿಷನ್‌ಗೆ ಕ್ಯೂಆರ್ ಕೋಡ್ ಹೇಗೆ ಬಳಸಲಾಗುತ್ತೆ?
    > ಕೆಇಎಯಿಂದ ಹಂಚಿಕೆ ಆಗುವ ಪ್ರತಿ ಸೀಟುಗಳನ್ನ ಮಾನಿಟರ್ ಮಾಡಲಾಗುತ್ತದೆ.
    > ಕೆಇಎಯಿಂದ ವಿದ್ಯಾರ್ಥಿಗೆ ಸೀಟ್ ಅಲಾಟ್ ಆದ ಮೇಲೆ ಅದಕ್ಕೆ ದಾಖಲಾತಿಯನ್ನು ಕೆಇಎ ಕೊಡುತ್ತದೆ.
    > ದಾಖಲಾತಿ ಪ್ರತಿ ತೆಗೆದುಕೊಂಡ ವಿದ್ಯಾರ್ಥಿ, ಹಂಚಿಕೆ ಆಗಿರುವ ಕಾಲೇಜಿಗೆ ಹೋಗಿ ಅಡ್ಮಿಷನ್ ಮಾಡಿಕೊಳ್ಳಬೇಕು.
    > ಅಡ್ಮಿಷನ್ ಸಮಯದಲ್ಲಿ ಕಾಲೇಜಿಗೆ ಕೆಇಎ ಒಂದು ಆ್ಯಪ್ ಕೊಟ್ಟಿರುತ್ತದೆ. ಆ ಆ್ಯಪ್‌ನಿಂದ ವಿದ್ಯಾರ್ಥಿಯನ್ನು ಕ್ಯೂಆರ್ ಕೋಡ್ ಮೂಲಕ ಸ್ಕ್ಯಾನ್ ಮಾಡಲಾಗುತ್ತದೆ.
    > ಸ್ಕ್ಯಾನ್ ಮಾಡಿದ ಕೂಡಲೇ ವಿದ್ಯಾರ್ಥಿಯ ಸಂಪೂರ್ಣ ಮಾಹಿತಿ ಕೆಇಎಗೆ ತಲುಪುತ್ತದೆ.
    > ಸೀಟು ಹಂಚಿಕೆ ಆಗಿದ್ದು ನಿಜವಾದ ವಿದ್ಯಾರ್ಥಿನಾ? ಪರೀಕ್ಷೆ ಬರೆದಿದ್ದು ಅದೇ ವಿದ್ಯಾರ್ಥಿನಾ? ದಾಖಲಾತಿ ಆಗುತ್ತಿರುವುದು ಅದೇ ವಿದ್ಯಾರ್ಥಿನಾ ಎಂದು ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದ ಕೂಡಲೇ ದೃಢವಾಗಲಿದೆ.
    > ಈ ಮೂಲಕ ಅಕ್ರಮ ತಡೆಗೆ ಕೆಇಎ ಪ್ಲ್ಯಾನ್ ಮಾಡಿದೆ.ಇದನ್ನೂ ಓದಿ: ಚಿತ್ರದುರ್ಗದಲ್ಲಿ ಬಿಸಿಲಿನ ತಾಪ ಹೆಚ್ಚಳ – ಕೆರೆಯಲ್ಲಿ ಕೋತಿಗಳ ನೀರಾಟ

  • ಸಿಇಟಿ ವೇಳೆ ಜನಿವಾರ ತೆಗೆಸಿದ ಘಟನೆಗೆ ಮಂತ್ರಾಲಯ ಶ್ರೀ ಖಂಡನೆ – ಮತ್ತೆ ಮರುಕಳಿಸದಂತೆ ಸರ್ಕಾರಕ್ಕೆ ಎಚ್ಚರಿಕೆ

    ಸಿಇಟಿ ವೇಳೆ ಜನಿವಾರ ತೆಗೆಸಿದ ಘಟನೆಗೆ ಮಂತ್ರಾಲಯ ಶ್ರೀ ಖಂಡನೆ – ಮತ್ತೆ ಮರುಕಳಿಸದಂತೆ ಸರ್ಕಾರಕ್ಕೆ ಎಚ್ಚರಿಕೆ

    ರಾಯಚೂರು: ಶಿವಮೊಗ್ಗ, ಬೀದರ್‌ನಲ್ಲಿ ಸಿಇಟಿ ಪರೀಕ್ಷೆ (CET Exam) ವೇಳೆ ವಿದ್ಯಾರ್ಥಿಗಳ ಜನಿವಾರ ತೆಗೆಸಿದ್ದನ್ನು ಅಕ್ಷರಶಃ ನಾವು ತೀವ್ರವಾಗಿ ಖಂಡಿಸುತ್ತೇವೆ ಎಂದು ಮಂತ್ರಾಲಯ (Mantralaya)  ಗುರುರಾಘವೇಂದ್ರ ಸ್ವಾಮಿ ಮಠದ (Guru Raghavendra Swamy Mutt) ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿ (Subudhendra Theertha Swami) ಹೇಳಿದರು.

    ಮಂತ್ರಾಲಯದಲ್ಲಿ ಮಾತನಾಡಿದ ಅವರು, ಅವರವರ ಧರ್ಮವನ್ನು ಆಚರಿಸಲು ಸಂವಿಧಾನದಲ್ಲಿ ಅವಕಾಶ ಹಾಗೂ ಅಧಿಕಾರವಿದೆ. ಸಂವಿಧಾನದ ಬಗ್ಗೆ ಒಂದೆಡೆ ಮಾತನಾಡುವುದು, ಇನ್ನೊಂದೆಡೆ ಸ್ವಾತಂತ್ರ‍್ಯವನ್ನು ಹರಣ ಮಾಡುವಂತಹ ದ್ವಂದ್ವ ನಿಲುವು ಅತ್ಯಂತ ಖಂಡನೀಯ. ಕೇವಲ ವಿಪ್ರ ಸಮಾಜ ಮಾತ್ರವಲ್ಲ, ಯಾವುದೇ ಸಮುದಾಯದ ವಿಚಾರ ಬಂದಾಗ ಈ ರೀತಿಯಾದ ಧರ್ಮ-ವಿರೋಧಿ ಚಟುವಟಿಕೆಗಳು ಅತ್ಯಂತ ಅಸಹ್ಯ, ಹೇಯವಾಗಿರುವಂತವು. ನಾವೆಲ್ಲರೂ ಒಕ್ಕೊರಲಿನಿಂದ ವಿರೋಧಿಸುತ್ತೇವೆ ಹಾಗೂ ಖಂಡಿಸುತ್ತೇವೆ. ಇದರ ವಿರುದ್ಧ ಪ್ರತಿಭಟಿಸುತ್ತೇವೆ ಎಂದರು.ಇದನ್ನೂ ಓದಿ: ಧಾರವಾಡದಲ್ಲಿಯೂ ಜನಿವಾರ ಜಟಾಪಟಿ – ಹುರಕಡ್ಲಿ ಕಾಲೇಜಿನಲ್ಲಿ ಜನಿವಾರ ಕತ್ತರಿಸಿ ಸಿಇಟಿ ಬರೆಸಿದ ಸಿಬ್ಬಂದಿ

    ಈ ರೀತಿ ಪುನರಾವರ್ತನೆಯಾಗದಂತೆ ಸರ್ಕಾರ ಎಚ್ಚರ ವಹಿಸಬೇಕು. ವಿದ್ಯಾರ್ಥಿಯ ಭವಿಷ್ಯ ಹಾಳಾಗಿದೆ, ಧರ್ಮಕ್ಕೆ ಚ್ಯುತಿ ಬಂದಿದೆ. ಎಲ್ಲಿಯೋ ಯಾರೋ ಶಾಸಕರು, ಮಂತ್ರಿಗಳು ತಪ್ಪಾಯಿತು ಎಂದು ಕೇಳುವುದು, ಸರಿಪಡಿಸುತ್ತೇವೆ ಎನ್ನುವುದು. ಕೇವಲ ಕಣ್ಣೀರು ಒರೆಸುವ ಮಾತು. ಹೀಗೆ ಮುಂದುವರೆದರೆ ಜಾತ್ಯತೀತವಾಗಿ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು. ಸರ್ವಧರ್ಮಗಳ ಶಾಂತಿ ಹೂದೋಟವಾದ ಕರ್ನಾಟಕ ರಾಜ್ಯದಲ್ಲಿ ಧರ್ಮವಿರೋಧಿ ನೀತಿ ನಡೆಯುತ್ತಿದೆ ಎಂದರೆ ಇನ್ನೂ ಎಲ್ಲಿ ಮೊರೆ ಹೋಗಬೇಕು ಎಂದು ಪ್ರಶ್ನಿಸಿದರು.

    ಬೇರೆ ಯಾವ ಸಮುದಾಯಕ್ಕೆ ಇಲ್ಲದಿರುವುದು ವಿಪ್ರ ಸಮುದಾಯಕ್ಕೆ ಮಾತ್ರ ಯಾಕೆ? ಇದನ್ನ ತೀವ್ರವಾಗಿ ಖಂಡಿಸುತ್ತೇವೆ, ಅನ್ಯಾಯ ಸರಿಪಡಿಸಬೇಕು. ಮುಂದೆ ನಡೆಯದಂತೆ ನೋಡಿಕೊಳ್ಳಬೇಕು ಎಂದು ರಾಜ್ಯ ಸರ್ಕಾರ ಹಾಗೂ ಮುಖ್ಯಮಂತ್ರಿಗಳಿಗೆ ಎಚ್ಚರಿಕೆ ನೀಡಿದರು.ಇದನ್ನೂ ಓದಿ: PUBLiC TV Impact | ಜನಿವಾರ ಹಾಕಿದ್ದಕ್ಕೆ ಸಿಇಟಿಗೆ ನೋ ಎಂಟ್ರಿ – ಫ್ರೀ ಎಂಜಿನಿಯರಿಂಗ್ ಸೀಟ್ ಆಫರ್ ಕೊಟ್ಟ ಈಶ್ವರ್ ಖಂಡ್ರೆ

  • PUBLiC TV Impact | ಜನಿವಾರ ಹಾಕಿದ್ದಕ್ಕೆ ಸಿಇಟಿಗೆ ನೋ ಎಂಟ್ರಿ – ಫ್ರೀ ಎಂಜಿನಿಯರಿಂಗ್ ಸೀಟ್ ಆಫರ್ ಕೊಟ್ಟ ಈಶ್ವರ್ ಖಂಡ್ರೆ

    PUBLiC TV Impact | ಜನಿವಾರ ಹಾಕಿದ್ದಕ್ಕೆ ಸಿಇಟಿಗೆ ನೋ ಎಂಟ್ರಿ – ಫ್ರೀ ಎಂಜಿನಿಯರಿಂಗ್ ಸೀಟ್ ಆಫರ್ ಕೊಟ್ಟ ಈಶ್ವರ್ ಖಂಡ್ರೆ

    ಬೀದರ್: ಜನಿವಾರ ಹಾಕಿದ್ದಕ್ಕೆ ಸಿಇಟಿ ಪರೀಕ್ಷೆಗೆ (CET Exam) ಅವಕಾಶ ನೀಡದ ಪ್ರಕರಣಕ್ಕೆ ಸಂಬಂಧಿಸಿದಂತೆ ಪರೀಕ್ಷಾ ವಂಚಿತನಾದ ವಿದ್ಯಾರ್ಥಿಗೆ ಉಚಿತ ಎಂಜಿನಿಯರಿಂಗ್ ಸೀಟ್ (Engineering Seat) ಕೊಡಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ (Eshwar Khandre) ಭರವಸೆ ನೀಡಿದ್ದಾರೆ.

    ಏ,17ರಂದು ಜಿಲ್ಲೆಯ ಸುಚ್ಚಿವೃತ್ ಎಂಬ ವಿದ್ಯಾರ್ಥಿ ಸಿಇಟಿ ಪರೀಕ್ಷೆ ಬರೆಯಲು dಹೋಗಿದ್ದಾಗ ಜನಿವಾರ ತೆಗೆಯದಿದ್ದರೆ ಪರೀಕ್ಷೆ ಅವಕಾಶವಿಲ್ಲ ಎಂದು ಒರಟಾಗಿ ನಡೆದುಕೊಂಡಿದ್ದ ಘಟನೆ ನಡೆದಿತ್ತು. ಈ ಕುರಿತು `ಪಬ್ಲಿಕ್ ಟಿವಿ’ (PUBLiC TV) ನಿರಂತರವಾಗಿ ಸುದ್ದಿಯನ್ನು ಬಿತ್ತರಿಸಿತ್ತು. ಈಗಾಗಲೇ ವಿದ್ಯಾರ್ಥಿಯ ಜೊತೆ ದುರ್ವರ್ತನೆ ತೋರಿದ ಪ್ರಾಂಶುಪಾಲ ಮತ್ತು ಸಿಬ್ಬಂದಿಯನ್ನು ಕಾಲೇಜು ಆಡಳಿತ ಮಂಡಳಿ ಅಮಾನತು ಮಾಡಿದೆ.ಇದನ್ನೂ ಓದಿ: ಧಾರವಾಡದಲ್ಲಿಯೂ ಜನಿವಾರ ಜಟಾಪಟಿ – ಹುರಕಡ್ಲಿ ಕಾಲೇಜಿನಲ್ಲಿ ಜನಿವಾರ ಕತ್ತರಿಸಿ ಸಿಇಟಿ ಬರೆಸಿದ ಸಿಬ್ಬಂದಿ

    ಸುದ್ದಿ ಬಿತ್ತರಿಸುವ ಮೂಲಕ ಸರ್ಕಾರ ಹಾಗೂ ಅಧಿಕಾರಿಗಳ ಗಮನ ಸೆಳೆದಿದ್ದು, ಇದೀಗ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ವಿದ್ಯಾರ್ಥಿಯ ನಿವಾಸಕ್ಕೆ ಭೇಟಿ ನೀಡಿ, ಎಂಜಿನಿಯರಿಂಗ್ ಕಾಲೇಜಿನಲ್ಲಿ ಉಚಿತ ಸೀಟು ಕೊಡಿಸುವುದಾಗಿ ಆಫರ್ ನೀಡಿದ್ದಾರೆ. ಭವಿಷ್ಯದ ಬಗ್ಗೆ ಮಾನಸಿಕವಾಗಿ ನೊಂದಿದ್ದ ವಿದ್ಯಾರ್ಥಿ ಸುಚ್ಚಿವೃತ್ ಹಾಗೂ ಆತನ ಪೋಷಕರ ಮುಖದಲ್ಲಿ ಮಂದಹಾಸ ಮೂಡಿದೆ. ನಮಗೆ ನ್ಯಾಯಸಿಗುವಂತೆ ಮಾಡಿದ `ಪಬ್ಲಿಕ್ ಟಿವಿ’ ಹಾಗೂ ಹೆಚ್.ಆರ್ ರಂಗನಾಥ ಸರ್ ಅವರಿಗೆ ವಿದ್ಯಾರ್ಥಿ ಸೇರಿ ಪೋಷಕರು ಧನ್ಯವಾದಗಳನ್ನು ತಿಳಿಸಿದ್ದಾರೆ.

    ಏನಿದು ಪ್ರಕರಣ?
    ಏ,17ರಂದು ಬೀದರ್‌ನ ಸಾಯಿ ಸ್ಪೂರ್ತಿ ಕಾಲೇಜಿನಲ್ಲಿ ಸುಚ್ಚಿವೃತ್ ಎಂಬ ವಿದ್ಯಾರ್ಥಿ ಸಿಇಟಿ ಪರೀಕ್ಷೆ ಬರೆಯಲು ಹೋಗಿದ್ದಾಗ ಜನಿವಾರ ತೆಗೆಯದಿದ್ದರೆ ಪರೀಕ್ಷೆ ಅವಕಾಶವಿಲ್ಲ ಎಂದು ಒರಟಾಗಿ ನಡೆದುಕೊಂಡಿದ್ದ ಘಟನೆ ನಡೆದಿತ್ತು. ಸಿಬ್ಬಂದಿಗಳಿಗೆ ಇದೆಂಥಾ ನ್ಯಾಯ ಸರ್ ಎಂದಿದ್ದಕ್ಕೆ, ಒಳಗಡೆ ನೀನು ನೇಣು ಹಾಕಿಕೊಂಡರೆ ಏನು ಮಾಡೋದು? ಎಂದು ಉಡಾಫೆಯಾಗಿ ಮಾತನಾಡಿದ್ದರು. ಎರಡು ಎಕ್ಸಾಂಗೆ ಅವಕಾಶ ನೀಡಿ, ಗಣಿತ ಪರೀಕ್ಷೆಯಲ್ಲಿ ಮಾತ್ರ ಜನಿವಾರ ತೆಗೆದು ಒಳಗಡೆ ಬಾ ಎಂದಿದ್ದು ಅನ್ಯಾಯ ಎಂದು ವಿದ್ಯಾರ್ಥಿ ಅಳಲು ತೋಡಿಕೊಂಡಿದ್ದ, ನಾನು ತೆಗೆಯೋದಕ್ಕೆ ಆಗಲ್ಲ ಅಂದಿದ್ದಕ್ಕೆ, ಹಾಗಾದ್ರೆ ನಾವು ಒಳಗೆ ಬಿಡಲ್ಲ ಎಂದಿದ್ದರು. ನೀನು ಒಳಗಡೆ ಹೋಗಿ ಸೂಸೈಡ್ ಮಾಡಿಕೊಂಡರೆ ಹೇಗೆ? ಎಂದು ವಾಪಸ್ ಕಳಿಸಿದ್ದರು.ಇದನ್ನೂ ಓದಿ: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ವಿಮಾನಕ್ಕೆ ಟಿಟಿ ಡಿಕ್ಕಿ; ಹೈಮಾಸ್ಟ್ ದೀಪದ ಬೃಹತ್ ಕಂಬಕ್ಕೆ ಕಾರು ಡಿಕ್ಕಿ

  • ಧಾರವಾಡದಲ್ಲಿಯೂ ಜನಿವಾರ ಜಟಾಪಟಿ – ಹುರಕಡ್ಲಿ ಕಾಲೇಜಿನಲ್ಲಿ ಜನಿವಾರ ಕತ್ತರಿಸಿ ಸಿಇಟಿ ಬರೆಸಿದ ಸಿಬ್ಬಂದಿ

    ಧಾರವಾಡದಲ್ಲಿಯೂ ಜನಿವಾರ ಜಟಾಪಟಿ – ಹುರಕಡ್ಲಿ ಕಾಲೇಜಿನಲ್ಲಿ ಜನಿವಾರ ಕತ್ತರಿಸಿ ಸಿಇಟಿ ಬರೆಸಿದ ಸಿಬ್ಬಂದಿ

    ಧಾರವಾಡ: ಶಿವಮೊಗ್ಗ, ಬೀದರ್ ಬಳಿಕ ಇದೀಗ ಧಾರವಾಡದಲ್ಲಿಯೂ (Dharwad) ಜನಿವಾರ ಕತ್ತರಿಸಿ ಸಿಇಟಿ ಪರೀಕ್ಷೆಗೆ ಅವಕಾಶ ಕೊಟ್ಟಿರುವ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ಧಾರವಾಡ ಜಿಲ್ಲೆಯ ಹುರಕಡ್ಲಿ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಈ ಘಟನೆ ನಡೆದಿದೆ.

    ಧಾರವಾಡ ನಗರದ ಜೆಎಸ್‌ಎಸ್ (JSS) ಕಾಲೇಜಿನ ವಿದ್ಯಾರ್ಥಿ ನಂದನ್ ಏರಿ ಸಿಇಟಿ ಪರೀಕ್ಷೆ (CET Exam) ಬರೆಯಲು ಹೋಗಿದ್ದ. ವಿದ್ಯಾರ್ಥಿಗಳ ತಪಾಸಣೆ ಮಾಡುವಾಗ ಪರೀಕ್ಷಾ ಕೇಂದ್ರದ ಸಿಬ್ಬಂದಿಯೊಬ್ಬರು ನಂದನ್ ಎಂಬ ಅಭ್ಯರ್ಥಿ ಹಾಕಿಕೊಂಡಿದ್ದ ಜನಿವಾರವನ್ನು ಗಮನಿಸಿದ್ದರು. ಆಗ ಜನಿವಾರ ಹಾಕಿಕೊಂಡು ಪರೀಕ್ಷಾ ಕೇಂದ್ರದೊಳಗೆ ಹೋಗುವಂತಿಲ್ಲ ಎಂದು ತಡೆದಿದ್ದರು. ಅದಕ್ಕೆ ವಿದ್ಯಾರ್ಥಿ ನಾನು ಬ್ಯಾಗಿನೊಳಗೆ ಇಟ್ಟುಕೊಳ್ಳುತ್ತೇನೆ ಎಂದು ಹೇಳಿದ್ದ. ಆದರೆ ಅದಕ್ಕೂ ಅವಕಾಶ ನೀಡದೇ ಅದಕ್ಕೆ ಸಮಯವಿಲ್ಲ ಎಂದು ಜನಿವಾರವನ್ನು ಕತ್ತರಿಸಿದ್ದರು. ಅದನ್ನು ಹಾಗೇ ಬ್ಯಾಗ್‌ನಲ್ಲಿಟ್ಟುಕೊಂಡಿದ್ದ ನಂದನ್ ಗಾಬರಿಗೊಳಗಾಗಿದ್ದ. ಇದನ್ನೂ ಓದಿ: PUBLiC TV ವಿದ್ಯಾಪೀಠ | ವಿದ್ಯಾರ್ಥಿಗಳಿಗೆ ಸ್ಪಾಟ್‌ನಲ್ಲೇ ಸಿಗಲಿದೆ ಸರ್ಪ್ರೈಸ್‌ ಗಿಫ್ಟ್‌ – ತಪ್ಪದೇ ಬನ್ನಿ…

    ಮಾಧ್ಯಮಗಳಲ್ಲಿ ಕಳೆದೆರಡು ದಿನಗಳಿಂದ ಬರುತ್ತಿದ್ದ ಶಿವಮೊಗ್ಗ, ಬೀದರ್ ಜನಿವಾರದ ಸುದ್ದಿಗಳನ್ನು ಗಮನಿಸಿದ್ದ ಹುಡುಗ ತನಗಾಗಿದ್ದರ ಕುರಿತು ತನ್ನ ತಂದೆಗೆ ತಿಳಿಸಿದ್ದಾನೆ. ಇದನ್ನು ತಿಳಿದ ತಂದೆ ಆಕ್ರೋಶಗೊಂಡಿದ್ದು, ಇದೇ ಕಾರಣದಿಂದ ಮಗನಿಗೆ ಸರಿಯಾಗಿ ಪರೀಕ್ಷೆ ಬರೆಯಲು ಆಗಿಲ್ಲ ಎಂದು ಕಿಡಿಕಾರಿದ್ದಾರೆ.

    ಈ ಕುರಿತು ನಂದನ್ ತಂದೆ ವಿವೇಕ ಮಾತನಾಡಿ, ಪರೀಕ್ಷೆಗೆ ಹೋದಾಗ ಪೊಲೀಸರು ಆತನನ್ನು ಹಿಡಿದುಕೊಂಡು ಜನಿವಾರ ತೆಗೆದರೆ ಮಾತ್ರ ಒಳಗೆ ಬಿಡುತ್ತೇನೆ ಎಂದಿದ್ದಾರೆ. ಇದು ಬ್ರಾಹ್ಮಣ ಸಮಾಜಕ್ಕೆ ಮಾಡಿದ ಅಪಮಾನ. ನಾವು ಜನಿವಾರ ತೆಗೆಯುವುದು ಸತ್ತಾಗ ಮಾತ್ರ, ಇನ್ಯಾವುದೇ ಸಮಯದಲ್ಲಿಯೂ ನಾವು ತೆಗೆಯಲ್ಲ. ಕೆಲವರು ರುದ್ರಾಕ್ಷಿ, ಕಾಶಿ ದಾರ ತೆಗೆದಿದ್ದಾರೆ. ಈ ರೀತಿ ನಮ್ಮ ಮೇಲೆ ನಡೆದಿದ್ದು ದೊಡ್ಡ ಘಟನೆ. ಮಾರನೇ ದಿನ ಆತ ನಮಗೆ ಹೇಳಿದ್ದಾನೆ. ನಾವು ನಮ್ಮ ಸಮಾಜದ ಜನರಿಗೆ ಹೇಳಿದ್ದೇನೆ. ಇದಕ್ಕೆ ನಾವು ಪ್ರತಿಭಟನೆ ಮಾಡುತ್ತೇವೆ. ಇದು ನನ್ನ ಮಗನ ಮೇಲೆ ಪರಿಣಾಮ ಬೀರಿದೆ. ಆತ ಪರೀಕ್ಷೆ ಕೂಡಾ ಸರಿಯಾಗಿ ಬರೆದಿಲ್ಲ, ಮಾನಸಿಕವಾಗಿ ಆತ ಕುಗ್ಗಿದ್ದಾನೆ. ಅಭ್ಯಾಸ ಬಿಟ್ಟು ಬೇರೆ ಕಡೆ ಆತನ ಮನಸ್ಸು ಡೈವರ್ಟ್ ಆಗದಿರಲಿ ಎಂದು ನಾವು ಇದನ್ನು ಹೊರಗೆ ಹಾಕಿಲ್ಲ. ಈಗ ಹೇಳುತ್ತಿದ್ದೇವೆ ಎಂದು ಅಸಮಾಧಾನ ಹೊರಹಾಕಿದ್ದಾರೆ.ಇದನ್ನೂ ಓದಿ: ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಡಿಕೆಶಿ ಭೇಟಿ – ಧರ್ಮಾಧಿಕಾರಿಗಳ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿಸಿಎಂ

  • ಜನಿವಾರ ಹಾಕಿದ್ದಕ್ಕೆ ಸಿಇಟಿ ಪರೀಕ್ಷೆಗೆ ನೋ ಎಂಟ್ರಿ – ಬೀದರ್ ವಿದ್ಯಾರ್ಥಿಗೆ ನ್ಯಾಯ ಕೊಡಿಸಲು ಕೆಇಎ ಸಿದ್ಧತೆ

    ಜನಿವಾರ ಹಾಕಿದ್ದಕ್ಕೆ ಸಿಇಟಿ ಪರೀಕ್ಷೆಗೆ ನೋ ಎಂಟ್ರಿ – ಬೀದರ್ ವಿದ್ಯಾರ್ಥಿಗೆ ನ್ಯಾಯ ಕೊಡಿಸಲು ಕೆಇಎ ಸಿದ್ಧತೆ

    ಬೆಂಗಳೂರು: ಜನಿವಾರ ಹಾಕಿದ್ದಕ್ಕೆ ಸಿಇಟಿ ಪರೀಕ್ಷೆಗೆ (CET Exam) ಕೂರಿಸದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೀದರ್ ವಿದ್ಯಾರ್ಥಿಗೆ (Bidar Student) ನ್ಯಾಯ ಕೊಡಿಸಲು ಕೆಇಎ (KEA) ಸಿದ್ಧತೆ ನಡೆಸಿದೆ.

    ಇಂದು ಅಥವಾ ಭಾನುವಾರದೊಳಗೆ ಕೆಇಎನಿಂದ ಈ ಕುರಿತು ನಿರ್ಧಾರ ಸಾಧ್ಯತೆಯಿದೆ. ಈಗಾಗಲೇ ಡಿಸಿಯಿಂದ ಕೆಇಎ ವರದಿ ಕೇಳಿದೆ. ಡಿಸಿ ವರದಿ ಕೊಟ್ಟ ಬಳಿಕ ವಿದ್ಯಾರ್ಥಿಗೆ ಅನ್ಯಾಯ ಆಗದಂತೆ ಕ್ರಮ ಕೈಗೊಳ್ಳುವ ನಿರ್ಧಾರವನ್ನು ಕೆಇಎ ಮಾಡಿದೆ. ಗಣಿತ ವಿಷಯಕ್ಕೆ ವಿಶೇಷ ಪ್ರಕರಣದಡಿ ಅಂಕ ಕೊಡುವ ಸಾಧ್ಯತೆಯಿದ್ದು, ಸರ್ಕಾರದಿಂದ ಗ್ರೀನ್ ಸಿಗ್ನಲ್ ಕೊಟ್ಟರೆ ಕೆಇಎ ವಿದ್ಯಾರ್ಥಿಗೆ ರ‍್ಯಾಂಕ್ ನೀಡಲಿದೆ. ಇದನ್ನೂ ಓದಿ: ದೆಹಲಿಯಲ್ಲಿ ಕಟ್ಟಡ ಕುಸಿತ – 9 ತಿಂಗಳ ಮಗು ಸೇರಿ ನಾಲ್ವರು ಸಾವು

    ರ‍್ಯಾಂಕ್ ಕೊಡೋದು ಹೇಗೆ?
    *ಬೀದರ್ ಪ್ರಕರಣ ವಿಶೇಷ ಪ್ರಕರಣ ಎಂದು ಪರಿಗಣನೆ.
    *ಒಬ್ಬ ವಿದ್ಯಾರ್ಥಿಗೆ ಮರು ಪರೀಕ್ಷೆ ಮಾಡೋದು ದೊಡ್ಡ ರಿಸ್ಕ್.
    *ವಿದ್ಯಾರ್ಥಿಗೆ ಅನ್ಯಾಯ ಆಗದಂತೆ ಕ್ರಮ ತೆಗೆದುಕೊಳ್ಳಲು ಕೆಇಎ ನಿರ್ಧಾರ.
    *ಗಣಿತ ಪರೀಕ್ಷೆ ಬರೆಯದೇ ಇರುವುದರಿಂದ ಎಂಜಿನಿಯರಿಂಗ್ ಸೀಟು ಸಿಗಲ್ಲ.
    *ಹೀಗಾಗಿ ಗಣಿತ ವಿಷಯಕ್ಕೆ ಅಂಕ ಕೊಟ್ಟು ರ‍್ಯಾಂಕ್ ಕೊಡುವ ಸಾಧ್ಯತೆ.
    ರ‍್ಯಾಂಕ್‌ಗೂ ಮುನ್ನ ಪಿಯುಸಿಯಲ್ಲಿನ ಗಣಿತ ವಿಷಯ ಅಂಕ ಪರಿಶೀಲನೆ.
    *ಪಿಯುಸಿ ಎಕ್ಸಾಂ ಜೊತೆಗೆ ಸಿಇಟಿ ಎಕ್ಸಾಂನ 3 ವಿಷಯಗಳ ಅಂಕವನ್ನು ಪರಿಗಣನೆ.
    *ಪಿಯುಸಿ ಮತ್ತು ಸಿಇಟಿ ಅಂಕ ಪರಿಶೀಲಿಸಿ ಗಣಿತ ವಿಷಯಕ್ಕೆ ಅವರೇಜ್ ಅಂಕ ನೀಡಲಾಗುವುದು.

  • ಜನಿವಾರದಿಂದ ನೇಣು ಹಾಕೊಂಡ್ರೆ ಏನ್ ಮಾಡೋದು – ವಿದ್ಯಾರ್ಥಿಗೆ ಉಡಾಫೆಯಾಗಿ ಪ್ರಶ್ನಿಸಿದ್ದ ಕಾಲೇಜು ಸಿಬ್ಬಂದಿ

    ಜನಿವಾರದಿಂದ ನೇಣು ಹಾಕೊಂಡ್ರೆ ಏನ್ ಮಾಡೋದು – ವಿದ್ಯಾರ್ಥಿಗೆ ಉಡಾಫೆಯಾಗಿ ಪ್ರಶ್ನಿಸಿದ್ದ ಕಾಲೇಜು ಸಿಬ್ಬಂದಿ

    ಬೀದರ್: ಜನಿವಾರ ಹಾಕಿದ್ದಕ್ಕೆ ಸಿಇಟಿ ಪರೀಕ್ಷೆ ಬರೆಯಲು ಅವಕಾಶ ಕೊಡದ ಕಾಲೇಜು ಸಿಬ್ಬಂದಿ, ನೀನು ಜನಿವಾರದಿಂದ ನೇಣು ಹಾಕಿಕೊಂಡರೆ ಏನು ಮಾಡೋದು ಎಂದು ವಿದ್ಯಾರ್ಥಿಗೆ ಉಡಾಫೆಯಾಗಿ ಪ್ರಶ್ನಿಸಿದ್ದಾರೆ.

    ಗುರುವಾರ ಬೀದರ್‌ನ (Bidar) ಸಾಯಿ ಸ್ಪೂರ್ತಿ ಕಾಲೇಜಿನಲ್ಲಿ ಸುಚ್ಚಿವೃತ್ ಎಂಬ ವಿದ್ಯಾರ್ಥಿ ಸಿಇಟಿ ಪರೀಕ್ಷೆ ಬರೆಯಲು ಹೋಗಿದ್ದಾಗ ಈ ಅಮಾನವೀಯ ಘಟನೆ ನಡೆದಿದೆ. ಜನಿವಾರ ಹಾಕಿದ್ದಕ್ಕೆ ಸಿಇಟಿ (CET) ಪರೀಕ್ಷೆ ಬರೆಯಲು ಅವಕಾಶ ಕೊಡದೇ ಕಾಲೇಜು ಸಿಬ್ಬಂದಿಗಳು ಒರಟಾಗಿ ನಡೆದುಕೊಂಡಿದ್ದಾರೆ.ಇದನ್ನೂ ಓದಿ: ಮಂಗಳೂರು, ಬೆಂಗಳೂರಲ್ಲಿ ಅದ್ದೂರಿ ಪಸ್ಕ ಹಬ್ಬ ಆಚರಣೆ – ಮಂಜೂಷ ಪೆಟ್ಟಿಗೆ ಸ್ಥಾಪನೆ

    ಎಂಜಿನಿಯರಿಂಗ್ ಮಾಡಬೇಕೆಂದು ಕನಸು ಕಂಡಿದ್ದ ವಿದ್ಯಾರ್ಥಿಯ ಕನಸು ನುಚ್ಚು ನೂರಾಗಿದೆ. ಸಿಬ್ಬಂದಿಗಳಿಗೆ ಇದೆಂಥಾ ನ್ಯಾಯ ಸರ್ ಎಂದಿದ್ದಕ್ಕೆ, ಒಳಗಡೆ ನೀನು ನೇಣು ಹಾಕಿಕೊಂಡರೆ ಏನು ಮಾಡೋದು? ಎಂದು ಉಡಾಫೆಯಾಗಿ ಮಾತನಾಡಿದ್ದಾರೆ. ಎರಡು ಎಕ್ಸಾಂಗೆ ಅವಕಾಶ ನೀಡಿ, ಗಣಿತ ಪರೀಕ್ಷೆಯಲ್ಲಿ ಮಾತ್ರ ಜನಿವಾರ ತೆಗೆದು ಒಳಗಡೆ ಬಾ ಎಂದಿದ್ದು ಅನ್ಯಾಯ ಎಂದು ವಿದ್ಯಾರ್ಥಿ ಅಳಲು ತೋಡಿಕೊಂಡಿದ್ದಾನೆ.

    ನಾನು ತೆಗೆಯೋದಕ್ಕೆ ಆಗಲ್ಲ ಅಂದಿದ್ದಕ್ಕೆ, ಹಾಗಾದ್ರೆ ನಾವು ಒಳಗೆ ಬಿಡಲ್ಲ ಎಂದು ಹೇಳಿದರು. ನೀನು ಒಳಗಡೆ ಹೋಗಿ ಸೂಸೈಡ್ ಮಾಡಿಕೊಂಡರೆ ಹೇಗೆ? ಎಂದು ವಾಪಸ್ ಕಳಿಸಿದ್ದಾರೆ. ನನ್ನ ಒಂದು ವರ್ಷದ ಜೀವನ ಹಾಳಾಗಿದ್ದು, ಇದರಿಂದ ನನಗೆ ಹಾಗೂ ನನ್ನ ಪೋಷಕರಿಗೆ ದುಃಖವಾಗಿದೆ. ನಮಗೆ ನ್ಯಾಯಬೇಕು ಎಂದು ವಿದ್ಯಾರ್ಥಿ ಹಾಗೂ ಪೋಷಕರು ಬೇಸರ ವ್ಯಕ್ತಪಡಿಸಿದರು.ಇದನ್ನೂ ಓದಿ: ಹುಟ್ಟುಹಬ್ಬದ ಸಂಭ್ರಮದಲ್ಲಿ ‘ಮೆಜೆಸ್ಟಿಕ್ 2’ ನಾಯಕಿ ಸಂಹಿತಾ ವಿನ್ಯಾ

  • ಜನಿವಾರ ಕತ್ತರಿಸಿ ಪರೀಕ್ಷೆ ಬರೆಸಿದ ಪ್ರಕರಣ; ಬ್ರಾಹ್ಮಣ ಸಮುದಾಯದ ಆಕ್ರೋಶದಲ್ಲಿ ತಪ್ಪಿಲ್ಲ: ಎಂ.ಸಿ ಸುಧಾಕರ್

    ಜನಿವಾರ ಕತ್ತರಿಸಿ ಪರೀಕ್ಷೆ ಬರೆಸಿದ ಪ್ರಕರಣ; ಬ್ರಾಹ್ಮಣ ಸಮುದಾಯದ ಆಕ್ರೋಶದಲ್ಲಿ ತಪ್ಪಿಲ್ಲ: ಎಂ.ಸಿ ಸುಧಾಕರ್

    – ಅಮಾನವೀಯವಾಗಿ ನಡೆದುಕೊಂಡವರ ವಿರುದ್ಧ ಕ್ರಮದ ಎಚ್ಚರಿಕೆ

    ಬೆಂಗಳೂರು: ಜನಿವಾರ ಹಾಕಿದ್ದಕ್ಕೆ ಸಿಇಟಿ ಪರೀಕ್ಷೆಗೆ (CET Exam) ಅವಕಾಶ ಕೊಡದೇ ಇರುವುದಕ್ಕೆ ಬ್ರಾಹ್ಮಣ ಸಮುದಾಯ (Brahmin community) ಆಕ್ರೋಶ ಮಾಡುವುದರಲ್ಲಿ ತಪ್ಪಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ ಸುಧಾಕರ್ (M C Sudhakar) ಹೇಳಿದ್ದಾರೆ.

    ಈ ವಿಚಾರವಾಗಿ ಬೆಂಗಳೂರಿನಲ್ಲಿ (Bengaluru) ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗ (Shivamogga) ಮತ್ತು ಬೀದರ್‌ನಲ್ಲಿ (Bidar) ಈ ರೀತಿ ಘಟನೆ ಆಗಿದೆ ಎಂದು ಬೆಳಗ್ಗೆ ನಮ್ಮ ಸ್ನೇಹಿತರು ಹೇಳಿದರು. ಇದರಲ್ಲಿ ಸ್ಥಳೀಯ ಜಿಲ್ಲಾಧಿಕಾರಿಗಳಿಗೆ ಜವಾಬ್ದಾರಿ ಇರುತ್ತದೆ. ಕೆಇಎಯಿಂದ ಜನಿವಾರ ತೆಗೆಸಿ ಬರೆಸುವಂತಹ ನಿಯಮ ಇಲ್ಲ ಎಂದರು. ಇದನ್ನೂ ಓದಿ: ಜನಿವಾರ ಹಾಕಿದ್ದಕ್ಕೆ CET ಪರೀಕ್ಷೆಗೆ ಅವಕಾಶ ಕೊಡದ ಸಿಬ್ಬಂದಿ; ಬ್ರಾಹ್ಮಣ ಸಂಘಟನೆಗಳಿಂದ ಆಕ್ರೋಶ

    ಶಿವಮೊಗ್ಗ ಎಡಿಸಿ ಜನಿವಾರ ತೆಗೆಸಿ ಪರೀಕ್ಷೆ ಬರೆಸಿಲ್ಲ ಎಂದು ಹೇಳುತ್ತಿದ್ದಾರೆ. ನಾನು ಸತ್ಯಾಸತ್ಯತೆ ತಿಳಿಯುತ್ತೇನೆ. ಈ ರೀತಿ ಸೂಚನೆ ಕೊಡಲು ನಾವು ಅವಿವೇಕಿಗಳಲ್ಲ. ಆ ರೀತಿ ಜನಿವಾರ ತೆಗೆಸಿದ್ದರೆ ಖಂಡಿತಾ ಕ್ರಮ ತೆಗೆದುಕೊಳ್ಳುತ್ತೇನೆ. ಇದರ ವರದಿಯನ್ನು ನಾನು ತರಿಸಿಕೊಳ್ಳುತ್ತೇನೆ. ಇದನ್ನು ನಾವು ಒಪ್ಪುವುದಿಲ್ಲ. ಈ ರೀತಿ ಮಾಡಿರುವುದು ಸರಿ ಎಂದು ಹೇಳುವಂತಹ ಕೀಳುಮಟ್ಟದಲ್ಲಿ ನಾವು ಇಲ್ಲ. ತೊಂದರೆಗೆ ಒಳಗಾಗಿರುವ ವಿದ್ಯಾರ್ಥಿಗಳು ಇಂತಹ ಸೆಂಟರ್, ಇಂತಹ ಅಧಿಕಾರಿ ಎಂದು ಹೇಳಲಿ ಎಂದು ಹೇಳಿದರು. ಇದನ್ನೂ ಓದಿ: ಜನಿವಾರದಲ್ಲಿ ಬ್ಲೂಟೂತ್ ಹಾಕ್ಕೊಂಡು ಎಕ್ಸಾಂ ಬರೆಯೋಕೆ ಆಗುತ್ತಾ? – ಚಕ್ರವರ್ತಿ ಸೂಲಿಬೆಲೆ

    ಈ ವಿಚಾರವಾಗಿ ಬ್ರಾಹ್ಮಣ ಸಮುದಾಯ ಆಕ್ರೋಶ ಮಾಡುವುದರಲ್ಲಿ ತಪ್ಪಿಲ್ಲ. ಯಾವುದೇ ಧರ್ಮದ ನಂಬಿಕೆಗೆ ಧಕ್ಕೆ ಬರುವ ರೀತಿ ನಡೆದುಕೊಳ್ಳಬಾರದು. ಈ ರೀತಿ ಆಗಿಲ್ಲ ಎಂದು ಶಿವಮೊಗ್ಗ ಎಡಿಸಿ ಹೇಳುತ್ತಿದ್ದಾರೆ. ನಾನು ತನಿಖೆ ಮಾಡಿಸುತ್ತೇನೆ. ನಿನ್ನೆ ಅಥವಾ ಮೊನ್ನೆ ಇಂತಹ ಘಟನೆ ಆಗಿದೆಯಾ ಎಂದು ಗೊತ್ತಿಲ್ಲ. ಅಮಾನವೀಯವಾಗಿ ನಡೆದುಕೊಂಡಿದ್ದರೆ ಅವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇನೆ. ಅಧಿಕಾರಿಗಳು ಆಗಿಲ್ಲ ಎನ್ನುತ್ತಿದ್ದಾರೆ. ವಿದ್ಯಾರ್ಥಿಗಳು ಆಗಿದೆ ಅಂತಾ ಇದ್ದಾರೆ. ಇಂತಹ ಸೆಂಟರ್‌ನಲ್ಲಿ ನಡೆದಿದೆ ಎಂದು ಗೊತ್ತಾದರೆ ಖಂಡಿತಾ ತನಿಖೆ ಮಾಡಿಸುತ್ತೇನೆ ಎಂದು ಭರವಸೆ ನೀಡಿದರು.

    ಏನಿದು ಘಟನೆ?
    ಸಿಇಟಿ ಪರೀಕ್ಷೆಗಾಗಿ (CET Exam) ಕಾಲೇಜಿನ ಒಳಭಾಗಕ್ಕೆ ತೆರಳುವ ಸಮಯದಲ್ಲಿ ಸಿಇಟಿ ಸಿಬ್ಬಂದಿ ಬ್ರಾಹ್ಮಣ ವಿದ್ಯಾರ್ಥಿಗಳು ಕೈಯಲ್ಲಿ ಕಟ್ಟಿಕೊಂಡಿದ್ದ ಕಾಕಿದಾರ ಮತ್ತು ಗಾಯತ್ರಿ ದೀಕ್ಷೆ ಪಡೆದ ಜನಿವಾರವನ್ನು ತೆಗೆಸಿ ಹಾಕಿರುವುದು ಮಕ್ಕಳ ಪೋಷಕರಿಂದ ತಿಳಿದು ಬಂದಿದೆ. ಈ ಕೇಂದ್ರದಲ್ಲಿ ಈ ರೀತಿ ಗಾಯತ್ರಿ ಮಂತ್ರ ದೀಕ್ಷೆ ಪಡೆದು ಅಕ್ಕ ಸಾಕ್ಷರದ ಪರಮ ಸಂಕಲ್ಪ ಮಾಡಿದ್ದ ವಿದ್ಯಾರ್ಥಿಗಳ ಜನಿವಾರವನ್ನು ಬಿಚ್ಚಿಸಿದ ಅವಮಾನಕಾರಿ ಘಟನೆ ಅಧಿಕಾರಿಗಳು ಮಾಡಿದ್ದು ಖಂಡನೀಯ ಎಂದು ಬ್ರಾಹ್ಮಣ ಸಮುದಾಯ ತೀವ್ರ ಆಕ್ರೋಶ ಹೊರಹಾಕಿದೆ.

    ವರ್ಷಪೂರ್ತಿ ಕಷ್ಟ ಪಟ್ಟು ಅಧ್ಯಯನ ಮಾಡಿ ಒಳ್ಳೆ ಭವಿಷ್ಯಕ್ಕಾಗಿ ಸಿದ್ಧತೆ ಮಾಡಿಕೊಂಡು ಬಂದಿದ್ದ ವಿದ್ಯಾರ್ಥಿಗಳ ಜನಿವಾರ ಬಿಚ್ಛಿಸುವ ಅಧಿಕಾರಿಗಳ ಕೃತ್ಯ ಬ್ರಾಹ್ಮಣ ಮತ್ತು ಹಿಂದೂ ವಿರೋಧಿಯಾಗಿದೆ. ಅಖಿಲ ಕನರ್ನಾಟಕ ಬ್ರಾಹ್ಮಣ ಮಹಾ ಸಭಾ ಮತ್ತು ಶಿವಮೊಗ್ಗ ಜಿಲ್ಲೆಯ ವಿಶ್ವ ಸಂಘಟನೆಗೆ ಒಕ್ಕೂಟವು ಈ ಘಟನೆಯನ್ನು ತೀವ್ರವಾಗಿ ಖಂಡಿಸುತ್ತದೆ.

    ಜಿಲ್ಲಾಧಿಕಾರಿಗಳು ತಕ್ಷಣ ತನಿಖೆ ನಡೆಸಿ ಹಿಂದೂ ಪರಂಪರೆಯ ಸಂಸ್ಕಾರವಾದ ಗಾಯತ್ರಿ ಮಂತ್ರ ದೀಕ್ಷೆಯ ಪ್ರಾಮುಖ್ಯತೆ. ಘನತೆ ಗೌರವ ಗೊತ್ತಿಲ್ಲದ ಧರ್ಮ ವಿರೋದಿ ಕೃತ್ಯ ಎಸಗಿರುವ ಹೀನ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಲು ನಿರ್ದೇಶನ ನೀಡಬೇಕೆಂದು ವಿನಂತಿಸಿದೆ.

  • ಜನಿವಾರದಲ್ಲಿ ಬ್ಲೂಟೂತ್ ಹಾಕ್ಕೊಂಡು ಎಕ್ಸಾಂ ಬರೆಯೋಕೆ ಆಗುತ್ತಾ? – ಚಕ್ರವರ್ತಿ ಸೂಲಿಬೆಲೆ

    ಜನಿವಾರದಲ್ಲಿ ಬ್ಲೂಟೂತ್ ಹಾಕ್ಕೊಂಡು ಎಕ್ಸಾಂ ಬರೆಯೋಕೆ ಆಗುತ್ತಾ? – ಚಕ್ರವರ್ತಿ ಸೂಲಿಬೆಲೆ

    ಬೆಂಗಳೂರು: ಜನಿವಾರ (Janivara) ಹಾಕಿದ್ದಕ್ಕೆ ಸಿಇಟಿ ಪರೀಕ್ಷೆಗೆ ಅವಕಾಶ ಕೊಡದ ಪ್ರಕರಣ ಈಗ ರಾಜ್ಯಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ನಡುವೆ ಹಿಂದೂಪರ ಚಿಂತಕ ಚಕ್ರವರ್ತಿ ಸೂಲಿಬೆಲೆ (Chakravarthy sulibele) ಈ ವಿಚಾರ ಕುರಿತು ʻಪಬ್ಲಿಕ್‌ ಟಿವಿʼಗೆ ಪ್ರತಿಕ್ರಿಯೆ ನೀಡಿದ್ದಾರೆ.

    ಅಂಬೇಡ್ಕರ್ ಅವರೇ ನಾನು ಬ್ರಾಹ್ಮಣರ (Brahmins) ವಿರೋಧಿಯಲ್ಲ ಅಂತ ಹೇಳ್ತಿದ್ರು. ಆದ್ರೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಬಂದ ನಂತರ ಈ ರೀತಿಯ ಪ್ರಕರಣಗಳು ಹೆಚ್ಚಾಗುತ್ತಿವೆ. ಇದು ತುಂಬಾ ಶಾಕಿಂಗ್ ವಿಚಾರ. ಒಂದು ಸಮುದಾಯವನ್ನ ಇನ್ನೊಂದು ಸಮುದಾಯದ ವಿರುದ್ಧ ಎತ್ತಿಕಟ್ಟುವ ಕೆಲಸ ಮಾಡುತ್ತಿದ್ದಾರೆ. ಉದ್ಧ ತೋಳಿನ ಶರ್ಟ್ ತೆಗೆಸ್ತಾರೆ, ಜನಿವಾರದಲ್ಲಿ ಬ್ಲೂಟೂತ್ ಹಾಕ್ಕೊಂಡು ಬರೋಕೆ ಆಗುತ್ತಾ? ಅಂತ ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ: ಜನಿವಾರ ಹಾಕಿದ್ದಕ್ಕೆ CET ಪರೀಕ್ಷೆಗೆ ಅವಕಾಶ ಕೊಡದ ಸಿಬ್ಬಂದಿ; ಬ್ರಾಹ್ಮಣ ಸಂಘಟನೆಗಳಿಂದ ಆಕ್ರೋಶ.

    CET 3

    ಹಿಜಬ್, ಬುರ್ಖಾಗೆ ಅನುಮತಿ ಕೊಡ್ತೀರ, ಇವೇಲ್ಲ ಇರಬಹುದು ಅದ್ರೆ ಜನಿವಾರ ಬೇಡ್ವಾ..? ಜಾತಿ ಜಾತಿಗಳ ನಡುವೆ ವಿಷ ಬೀತ್ತ ಬಿತ್ತಿವ ಕೆಲಸ ಇದು. ಜನಿವಾರ ಕಟ್ ಮಾಡಿದ ಮಾತ್ರಕ್ಕೆ ಹಿಂದುತ್ವ ಅಲುಗಾಡಿಸಲು ಆಗಲ್ಲ. ಜಾತಿಗಣತಿಯನ್ನ ಮರೆಮಾಚಲು ಈ ಘಟನೆ ತಂದಂತಿದೆ. ಕೂಡಲೇ ಈ ವಿಚಾರಕ್ಕೆ ಸಂಬಂಧಪಟ್ಟಂತೆ ಕ್ರಮ ಆಗಬೇಕು. ಮನಸ್ಸು ಮನಸ್ಸುಗಳ ಬಗ್ಗೆ ವಿಷಬೀಜ ಬಿತ್ತುವ ಕೆಲಸ ಆಗ್ತಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ವರದಕ್ಷಿಣೆ ಹಣ ತರುವಂತೆ ಪತಿ ಮನೆಯವ್ರಿಂದ ಕಿರುಕುಳ ಆರೋಪ – ಮಹಿಳೆ ಆತ್ಮಹತ್ಯೆ

    ಏನಿದು ಘಟನೆ?
    ಸಿಇಟಿ ಪರೀಕ್ಷೆಗಾಗಿ (CET Exam) ಕಾಲೇಜಿನ ಒಳಭಾಗಕ್ಕೆ ತೆರಳುವ ಸಮಯದಲ್ಲಿ ಸಿಇಟಿ ಸಿಬ್ಬಂದಿ ಬ್ರಾಹ್ಮಣ ವಿದ್ಯಾರ್ಥಿಗಳು ಕೈಯಲ್ಲಿ ಕಟ್ಟಿಕೊಂಡಿದ್ದ ಕಾಕಿದಾರ ಮತ್ತು ಗಾಯತ್ರಿ ದೀಕ್ಷೆ ಪಡೆದ ಜನಿವಾರವನ್ನು ತೆಗೆಸಿ ಹಾಕಿರುವುದು ಮಕ್ಕಳ ಪೋಷಕರಿಂದ ತಿಳಿದು ಬಂದಿದೆ. ಈ ಕೇಂದ್ರದಲ್ಲಿ ಈ ರೀತಿ ಗಾಯತ್ರಿ ಮಂತ್ರ ದೀಕ್ಷೆ ಪಡೆದು ಅಕ್ಕ ಸಾಕ್ಷರದ ಪರಮ ಸಂಕಲ್ಪ ಮಾಡಿದ್ದ ವಿದ್ಯಾರ್ಥಿಗಳ ಜನಿವಾರವನ್ನು ಬಿಚ್ಚಿಸಿದ ಅವಮಾನಕಾರಿ ಘಟನೆ ಅಧಿಕಾರಿಗಳು ಮಾಡಿದ್ದು ಖಂಡನೀಯ ಎಂದು ಬ್ರಾಹ್ಮಣ ಸಮುದಾಯ ತೀವ್ರ ಆಕ್ರೋಶ ಹೊರಹಾಕಿದೆ.

    ವರ್ಷಪೂರ್ತಿ ಕಷ್ಟ ಪಟ್ಟು ಅಧ್ಯಯನ ಮಾಡಿ ಒಳ್ಳೆ ಭವಿಷ್ಯಕ್ಕಾಗಿ ಸಿದ್ಧತೆ ಮಾಡಿಕೊಂಡು ಬಂದಿದ್ದ ವಿದ್ಯಾರ್ಥಿಗಳ ಜನಿವಾರ ಬಿಚ್ಛಿಸುವ ಅಧಿಕಾರಿಗಳ ಕೃತ್ಯ ಬ್ರಾಹ್ಮಣ ಮತ್ತು ಹಿಂದೂ ವಿರೋಧಿಯಾಗಿದೆ. ಅಖಿಲ ಕನರ್ನಾಟಕ ಬ್ರಾಹ್ಮಣ ಮಹಾ ಸಭಾ ಮತ್ತು ಶಿವಮೊಗ್ಗ ಜಿಲ್ಲೆಯ ವಿಶ್ವ ಸಂಘಟನೆಗೆ ಒಕ್ಕೂಟವು ಈ ಘಟನೆಯನ್ನು ತೀವ್ರವಾಗಿ ಖಂಡಿಸುತ್ತದೆ.

    ಜಿಲ್ಲಾಧಿಕಾರಿಗಳು ತಕ್ಷಣ ತನಿಖೆ ನಡೆಸಿ ಹಿಂದೂ ಪರಂಪರೆಯ ಸಂಸ್ಕಾರವಾದ ಗಾಯತ್ರಿ ಮಂತ್ರ ದೀಕ್ಷೆಯ ಪ್ರಾಮುಖ್ಯತೆ. ಘನತೆ ಗೌರವ ಗೊತ್ತಿಲ್ಲದ ಧರ್ಮ ವಿರೋದಿ ಕೃತ್ಯ ಎಸಗಿರುವ ಹೀನ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಲು ನಿರ್ದೇಶನ ನೀಡಬೇಕೆಂದು ವಿನಂತಿಸಿದೆ. ಇದನ್ನೂ ಓದಿ: ವಕ್ಫ್‌ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿಂದು ಬೃಹತ್‌ ಪ್ರತಿಭಟನೆ – ಉಲೇಮಾ ಸಮಿತಿ ಕರೆ

  • ಜನಿವಾರ ಹಾಕಿದ್ದಕ್ಕೆ CET ಪರೀಕ್ಷೆಗೆ ಅವಕಾಶ ಕೊಡದ ಸಿಬ್ಬಂದಿ; ಬ್ರಾಹ್ಮಣ ಸಂಘಟನೆಗಳಿಂದ ಆಕ್ರೋಶ

    ಜನಿವಾರ ಹಾಕಿದ್ದಕ್ಕೆ CET ಪರೀಕ್ಷೆಗೆ ಅವಕಾಶ ಕೊಡದ ಸಿಬ್ಬಂದಿ; ಬ್ರಾಹ್ಮಣ ಸಂಘಟನೆಗಳಿಂದ ಆಕ್ರೋಶ

    ಶಿವಮೊಗ್ಗ/ಬೀದರ್‌: ಸಿಇಟಿ ಪರೀಕ್ಷೆ ವೇಳೇ ಅಮಾನವೀಯ ಘಟನೆ ನಡೆದಿದೆ. ಜನಿವಾರ (Janivara) ಹಾಕಿದ್ದಕ್ಕೆ ಸಿಬ್ಬಂದಿ ಪರೀಕ್ಷೆಗೆ ಅವಕಾಶ ಕೊಡದೇ ಇರುವ ಘಟನೆ ಶಿವಮೊಗ್ಗ (Shivamogga) ಮತ್ತು ಬೀದರ್‌ ಜಿಲ್ಲೆಗಳಲ್ಲಿ ನಡೆದಿದೆ.

    ಪರೀಕ್ಷಾ ಸಿಬ್ಬಂದಿ ವರ್ತನೆಗೆ ಬ್ರಾಹ್ಮಣ ಸಂಘಟನೆಗಳು (Brahmin Organisation) ತೀವ್ರ ಆಕ್ರೋಶ ಹೊರಹಾಕಿವೆ. ಈ ಬಗ್ಗೆ ವರದಿ ಪಡೆಯೋದಾಗಿ ಕೆಇಎ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ: ವಕ್ಫ್ ತಿದ್ದುಪಡಿ ಕಾಯ್ದೆ ಜಾರಿ – ಮೋದಿಯನ್ನು ಭೇಟಿಯಾಗಿ ಧನ್ಯವಾದ ಹೇಳಿದ ಮುಸ್ಲಿಮರು

    ಏನಿದು ಘಟನೆ?
    ಸಿಇಟಿ ಪರೀಕ್ಷೆಗಾಗಿ (CET Exam) ಕಾಲೇಜಿನ ಒಳಭಾಗಕ್ಕೆ ತೆರಳುವ ಸಮಯದಲ್ಲಿ ಸಿಇಟಿ ಸಿಬ್ಬಂದಿ ಬ್ರಾಹ್ಮಣ ವಿದ್ಯಾರ್ಥಿಗಳು ಕೈಯಲ್ಲಿ ಕಟ್ಟಿಕೊಂಡಿದ್ದ ಕಾಕಿದಾರ ಮತ್ತು ಗಾಯತ್ರಿ ದೀಕ್ಷೆ ಪಡೆದ ಜನಿವಾರವನ್ನು ತೆಗೆಸಿ ಹಾಕಿರುವುದು ಮಕ್ಕಳ ಪೋಷಕರಿಂದ ತಿಳಿದು ಬಂದಿದೆ. ಈ ಕೇಂದ್ರದಲ್ಲಿ ಈ ರೀತಿ ಗಾಯತ್ರಿ ಮಂತ್ರ ದೀಕ್ಷೆ ಪಡೆದು ಅಕ್ಕ ಸಾಕ್ಷರದ ಪರಮ ಸಂಕಲ್ಪ ಮಾಡಿದ್ದ ವಿದ್ಯಾರ್ಥಿಗಳ ಜನಿವಾರವನ್ನು ಬಿಚ್ಚಿಸಿದ ಅವಮಾನಕಾರಿ ಘಟನೆ ಅಧಿಕಾರಿಗಳು ಮಾಡಿದ್ದು ಖಂಡನೀಯ ಎಂದು ಬ್ರಾಹ್ಮಣ ಸಮುದಾಯ ತೀವ್ರ ಆಕ್ರೋಶ ಹೊರಹಾಕಿದೆ. ಇದನ್ನೂ ಓದಿ: Mangaluru| ಅರೆಪ್ರಜ್ಞಾವಸ್ಥೆ ಸ್ಥಿತಿಯಲ್ಲಿ ಹೊರರಾಜ್ಯದ ಯುವತಿ ಪತ್ತೆ – ಗ್ಯಾಂಗ್ ರೇಪ್ ಯತ್ನ ಶಂಕೆ, ಮೂವರು ಅರೆಸ್ಟ್

    ವರ್ಷಪೂರ್ತಿ ಕಷ್ಟ ಪಟ್ಟು ಅಧ್ಯಯನ ಮಾಡಿ ಒಳ್ಳೆ ಭವಿಷ್ಯಕ್ಕಾಗಿ ಸಿದ್ಧತೆ ಮಾಡಿಕೊಂಡು ಬಂದಿದ್ದ ವಿದ್ಯಾರ್ಥಿಗಳ ಜನಿವಾರ ಬಿಚ್ಛಿಸುವ ಅಧಿಕಾರಿಗಳ ಕೃತ್ಯ ಬ್ರಾಹ್ಮಣ ಮತ್ತು ಹಿಂದೂ ವಿರೋಧಿಯಾಗಿದೆ. ಅಖಿಲ ಕನರ್ನಾಟಕ ಬ್ರಾಹ್ಮಣ ಮಹಾ ಸಭಾ ಮತ್ತು ಶಿವಮೊಗ್ಗ ಜಿಲ್ಲೆಯ ವಿಶ್ವ ಸಂಘಟನೆಗೆ ಒಕ್ಕೂಟವು ಈ ಘಟನೆಯನ್ನು ತೀವ್ರವಾಗಿ ಖಂಡಿಸುತ್ತದೆ. ಇದನ್ನೂ ಓದಿ: ವಕ್ಫ್‌ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿಂದು ಬೃಹತ್‌ ಪ್ರತಿಭಟನೆ – ಉಲೇಮಾ ಸಮಿತಿ ಕರೆ

    ಜಿಲ್ಲಾಧಿಕಾರಿಗಳು ತಕ್ಷಣ ತನಿಖೆ ನಡೆಸಿ ಹಿಂದೂ ಪರಂಪರೆಯ ಸಂಸ್ಕಾರವಾದ ಗಾಯತ್ರಿ ಮಂತ್ರ ದೀಕ್ಷೆಯ ಪ್ರಾಮುಖ್ಯತೆ. ಘನತೆ ಗೌರವ ಗೊತ್ತಿಲ್ಲದ ಧರ್ಮ ವಿರೋದಿ ಕೃತ್ಯ ಎಸಗಿರುವ ಹೀನ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಲು ನಿರ್ದೇಶನ ನೀಡಬೇಕೆಂದು ತಮ್ಮಣ್ಣ ಏನಂತಿಸುತ್ತೇವೆ. ಇದನ್ನೂ ಓದಿ: ವರದಕ್ಷಿಣೆ ಹಣ ತರುವಂತೆ ಪತಿ ಮನೆಯವ್ರಿಂದ ಕಿರುಕುಳ ಆರೋಪ – ಮಹಿಳೆ ಆತ್ಮಹತ್ಯೆ

  • ಟಾಯ್ಲೆಟ್‌ಗೆ ಹೋಗಿದ್ದವಳು ಕೊನೆ ಕ್ಷಣದಲ್ಲಿ ಹಾಜರ್ – ಸಿಇಟಿಯಲ್ಲಿ ನಕಲಿ ವಿದ್ಯಾರ್ಥಿ, ತನಿಖೆಗೆ ಆದೇಶ

    ಟಾಯ್ಲೆಟ್‌ಗೆ ಹೋಗಿದ್ದವಳು ಕೊನೆ ಕ್ಷಣದಲ್ಲಿ ಹಾಜರ್ – ಸಿಇಟಿಯಲ್ಲಿ ನಕಲಿ ವಿದ್ಯಾರ್ಥಿ, ತನಿಖೆಗೆ ಆದೇಶ

    ಬೆಂಗಳೂರು: ಕೊನೆ ಕ್ಷಣದಲ್ಲಿ ಬಂದು ಸಿಇಟಿ ಪರೀಕ್ಷೆ (CET Exam) ಬರೆಯಲು ಪ್ರಯತ್ನಿಸಿದ ಅಭ್ಯರ್ಥಿಯೊಬ್ಬರು ನಕಲಿ ಎಂಬುದನ್ನು ಕ್ಯೂಆರ್ ಕೋಡ್ (QR Code) ಆಧಾರಿತ ಮುಖ ಚಹರೆ ಪತ್ತೆಹಚ್ಚುವ ಆಪ್ ಗುರುತಿಸಿದ್ದು, ಈ ಕುರಿತು ತನಿಖೆಗೆ ಆದೇಶಿಸಲಾಗಿದೆ.

    ಮಲ್ಲೇಶ್ವರಂನ (Malleshwaram) 7ನೇ ಅಡ್ಡರಸ್ತೆಯ ಸಿಲ್ವರ್ ವ್ಯಾಲಿ ಪಬ್ಲಿಕ್ ಪಿಯು ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಈ ಘಟನೆ ನಡೆದಿದೆ. ತುಬಾ ಫಾತೀಮಾ ಜಮೀಲ್ ಎಂಬಾಕೆ ಇಂದು ಬೆಳಗ್ಗೆ ಗಣಿತ ವಿಷಯದ ಪರೀಕ್ಷೆ ಬರೆಯಲು ಬಂದು, ನೇರವಾಗಿ ಶೌಚಗೃಹಕ್ಕೆ ಹೋಗಿ ಗಂಟೆಯಾದರೂ ಹೊರ ಬಂದಿರಲಿಲ್ಲ. ಇದನ್ನೂ ಓದಿ: ಸಿಇಟಿ ಎಕ್ಸಾಂ QR ಕೋಡ್ ಸ್ಕ್ಯಾನ್ ಯಶಸ್ವಿ – ಹೆಚ್.ಪ್ರಸನ್ನ

    ಇನ್ನೇನು ಪರೀಕ್ಷೆ ಆರಂಭವಾಗಬೇಕು ಎನ್ನುವಷ್ಟರಲ್ಲಿ ಹೊರಬಂದು ಕ್ಯೂಆರ್ ಕೋಡ್ ಇರುವ ಪ್ರವೇಶ ಪತ್ರ ತೋರಿಸಿ, ಒಳ ಹೋಗಲು ಪ್ರಯತ್ನಿಸಿದರು. ಆ ಸಂದರ್ಭದಲ್ಲಿ ಮುಖ ಚಹರೆ ಪತ್ತೆ ಆಪ್ ಮೂಲಕ ಅವರ ಭಾವಚಿತ್ರ ತೆಗೆದಾಗ ಅವರು ನಕಲಿ ಎಂಬುದು ಗೊತ್ತಾಗಿದೆ. ಇದನ್ನೂ ಓದಿ: Waqf Act| ಹಿಂದೂಗಳು ಸಲ್ಲಿಸಿದಾಗ ಹೈಕೋರ್ಟ್‌ಗೆ ಹೋಗಿ ಎಂದಿತ್ತು – ಸುಪ್ರೀಂ ವಿಚಾರಣೆಗೆ ಮಾನದಂಡ ಏನು?- ವಕೀಲ ವಿಷ್ಣು ಶಂಕರ್‌ ಜೈನ್‌

    ತಕ್ಷಣ ಈ ವಿಷಯವನ್ನು ಪ್ರಾಂಶುಪಾಲರ ಗಮನಕ್ಕೆ ತರಬೇಕೆನ್ನುವಷ್ಟರಲ್ಲಿ ಅಲ್ಲಿಂದ ಅವರು ಕಾಲ್ಕಿತ್ತಿದ್ದಾಳೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ (H Prasanna) ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದರು.

    ಇವರು ಟಬು ನಾಝ್ ಎಂಬ ನೈಜ ಅಭ್ಯರ್ಥಿಯ ಪ್ರವೇಶ ಪತ್ರಕ್ಕೆ ತನ್ನ ಚಿತ್ರ ಅಂಟಿಸಿಕೊಂಡಿದ್ದಳು. ಅಲ್ಲದೆ, ಪರೀಕ್ಷಾ ದಿನಾಂಕಗಳನ್ನೂ ತಪ್ಪಾಗಿ ನಮೂದಿಸಿದ್ದಳು ಎಂಬುದು ಗೊತ್ತಾಗಿದೆ. ಈ ಬಗ್ಗೆ ವೀಡಿಯೋ ದೃಶ್ಯ ಸಮೇತ ವರದಿ ನೀಡಲು ಕಾಲೇಜಿನ ಪ್ರಾಂಶುಪಾಲರಿಗೆ ಸೂಚಿಸಲಾಗಿದೆ. ನಂತರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅವರು ವಿವರಿಸಿದರು. ಇದನ್ನೂ ಓದಿ: ವಕ್ಫ್ ಮಂಡಳಿಗೆ ಸದಸ್ಯರ ನೇಮಕ ಮಾಡುವಂತಿಲ್ಲ, ಆಸ್ತಿಗಳ ವಿಚಾರದಲ್ಲೂ ಯಥಾಸ್ಥಿತಿ ಕಾಪಾಡಿ: ಸುಪ್ರೀಂ

    ನಕಲಿ ಅಭ್ಯರ್ಥಿಗಳ ಪತ್ತೆ ಸಲುವಾಗಿ ಕೆಇಎ ಆರಂಭಿಸಿರುವ ಈ ಹೊಸ ವ್ಯವಸ್ಥೆ ನಿಜಕ್ಕೂ ಅನುಕೂಲಕರವಾಗಿದ್ದು, ಎರಡನೇ ದಿನ ಕೂಡ ಸಂಪೂರ್ಣವಾಗಿ ಇದರ ಮೂಲಕವೇ ತಪಾಸಣೆ ಮಾಡಲಾಗಿದೆ. ಎಲ್ಲಿಯೂ ಯಾವ ರೀತಿಯ ತಾಂತ್ರಿಕ ದೋಷಗಳು ಕಂಡುಬಂದಿಲ್ಲ ಎಂದು ತಿಳಿಸಿದರು.

    ಮಲ್ಲೇಶ್ವರಂನ 18ನೇ ಅಡ್ಡರಸ್ತೆಯ ಸರ್ಕಾರಿ ಪಿಯು ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಮತ್ತು ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ಅವರು ಗುರುವಾರ ಭೇಟಿ ನೀಡಿ ಖುದ್ದು ಅಭ್ಯರ್ಥಿಗಳನ್ನು ಕ್ಯೂಆರ್ ಕೋಡ್ ಆಧಾರಿತ ಮುಖ ಚಹರೆ ಪತ್ತೆ ಆಪ್ ಮೂಲಕ ತಪಾಸಣೆ ಮಾಡಿದರು. ಇದನ್ನೂ ಓದಿ: ಜಾತಿಗಣತಿ ‘ಪಬ್ಲಿಕ್ ಟಿವಿ’ ರಿಯಾಲಿಟಿ ಚೆಕ್ – ಮನೆ ಮನೆಗೆ ಹೋಗಿ ಸರ್ವೆ ಮಾಡಿದ್ರಾ?- ಜನರು ಹೇಳಿದ್ದೇನು?

    ಕೆಇಎ (Karnataka Examination Authority) ಅಭಿವೃದ್ಧಿಪಡಿಸಿರುವ ಹಾಗೂ ಇದೇ ಮೊದಲ ಬಾರಿಗೆ ಜಾರಿಗೆ ತಂದಿರುವ ಈ ವ್ಯವಸ್ಥೆಯ ಕಾರ್ಯನಿರ್ವಹಣೆ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದರು. ಸ್ವತಃ ಇಬ್ಬರೂ ಅಧಿಕಾರಿಗಳು, ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ವಿದ್ಯಾರ್ಥಿಗಳ ಭಾವಚಿತ್ರ ತೆಗೆದು ನೈಜತೆ ಪರಿಶೀಲಿಸಿದರು.ಸ